ಒಟ್ಟು 7584 ಕಡೆಗಳಲ್ಲಿ , 131 ದಾಸರು , 4531 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇರಲೇ ಬಾರದು - ಇಂಥಲ್ಲಿಇರಬಾರದಿಂದ ......... ವರೆ ಭಯಂಕರದುರುಳ ಜನ ಸಹವಾಸದಲ್ಲಿ ದುಷ್ಟಮೃಗವಿದ್ದಡವಿಯಲ್ಲಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಉರಗಗಳು ಸೇರಿಕೊಂಡ ಸದನಗಳಲ್ಲಿಕರುಬರಿದ್ದ ಊರಗಳಲಿ ಕಲಹ ಹೆಚ್ಚಿದ ರಾಜ್ಯದಲ್ಲಿಪರಹಿಂಸೆಯ ಮಾಡಲಂಜದ ಪಾಪಿಗಳಿದ್ದಲ್ಲಿ 1ಅವಿವೇಕದ ಪ್ರಭುಸೇವೆಯಲ್ಲಿ ಆತ್ಮಸೌಖ್ಯವಿಲ್ಲದಲ್ಲಿಲವಶೇಶವು ಸದ್ವಿದ್ಯಾ ಮಾತ್ರ ಲಾಭವಿಲ್ಲದಲ್ಲಿನವಯೌವನಭರಿತ ನಾರಿ ತಾನೊಬ್ಬಳಿದ್ದಲ್ಲಿಅವನಿಯೊಳಗರ್ಥಪ್ರಾಪ್ತಿಇಲ್ಲದಂಥಲ್ಲಿ2ಮಾನವಲ್ಲದ ಸಭೆಯಲ್ಲಿ ಮಾತ ಕದಿವ ನ್ಯಾಯದಲ್ಲಿನೂನ್ಯಪೂರ್ಣ ಎನ್ನವವನ ಉಟ್ಟಕಾಲದಲ್ಲಿಶ್ರೀನಾಥ ಶ್ರೀ ಪುರಂದರವಿಠಲ ರೂಪಗಳುಅನಂತಾನಂತವೆಂದು ಅರಿಯದ ಅದ್ವೆಷ್ಣವರಲ್ಲಿ 3
--------------
ಪುರಂದರದಾಸರು
ಇಲ್ಲದಿಲ್ಲಾಗಿ | ಇಲ್ಲದ್ದೆಲ್ಲ ತಾನಾಗಿ |ತೋರುವದಾಶ್ಚರ್ಯ | ಆಶ್ಚರ್ಯ ||ಸಂಶಯಪಾರಮಾಡಯ್ಯ ||ಶಿಷ್ಯನ ಪ್ರಶ್ನವ ತಿಳಿದು | ಸದ್ಗುರು ಹರ್ಷದಿಪೇಳಿದನೊಲಿದು1xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಸತ್ಯ ಸ್ವರೂಪಾಶ್ರಯಿಸಿ ಅಸತ್ಯವು ಸತ್ಯಂತೆನಿಸಿ ||ಸತ್ಯಕಿರಣವಿಡಿದು ಮೃಗಜಲವಸತ್ಯವೆ ಆಗಿಹುದು ||ದಿಟ ರಜ್ಜುವು ಶಿಂಪಿರುತ || ಆಶ್ರಯಿ ದಿಟವೆನಿಸುವದಹಿ ರಜತಾ|| ಆಶ್ರಯದಾರೋಪೆಂದು | ತೋರುವದು ಸರೂಪದಧ್ಯಾತೆಂ(ನೆಂ)ದೂ || ಅಧ್ಯಾರೋಪಾಪವಾದಾ |ಶಂಕರ ತಾನಿವು ಪುಸಿಯಂದೊರೆದಾ5
--------------
ಜಕ್ಕಪ್ಪಯ್ಯನವರು
ಇಲ್ಲೇ ವೈಕುಂಠ ಕಾಣಿರೊ -ಸಿರಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಲ್ಲಭನಂಘ್ರಿಯ ನೆರೆನಂಬಿದವರಿಗೆ ಪ.ನುಡಿಯೆರಡಾಗದೆ ಕಡುಕೋಪ ಮಾಡದೆ |ಬಡತನ ಬಂದರು ಲೆಕ್ಕಿಸದೆ ||ಬೆಡಗು ಹೆಣ್ಣುಗಳ ಕಡೆಗಣ್ಣೊಳು ನೋಡದೆ |ಧೃಡಚಿತ್ತದಲಿ ಶ್ರೀ ಹರಿಯ ನಂಬಿದವರಿಗೆ 1ಪಕ್ಷಪಾತವಿಲ್ಲದನ್ನದಾನಂಗಳನು - |ಪೇಕ್ಷೆಯ ಮಾಡದೆ ಗುರುಹಿರಿಯರನು |ಮೋಕ್ಷವ ಬಯಸುತ ಅನ್ಯಾಯವಳಿಯುತ |ಲಕ್ಷ್ಮೀನಾರಾಯಣನ ಬಿಡದೆ ಧೇನಿಪರಿಗೆ 2ಪರಹಿತವನು ಮಾಡಿ ಕೆರೆಬಾವಿಗಳ |ಅರವಟಿಗೆಯ ಸಾಲಮರವ ಹಾಕಿ ||ಸಿರಿಪುರದರಸು ಶ್ರೀ ಪುರಂದರವಿಠಲನ |ಸ್ಥಿರಚಿತ್ತದಲಿ ಬಿಡದೆ ಸ್ಮರಿಸುತಲಿ ಹರಿಗೆ 3
--------------
ಪುರಂದರದಾಸರು
ಇವ ಬಲು ಕಳ್ಳ ನಮ್ಮಮಾಧವಬಲು ಸುಳ್ಳನವನವÀ ಗುಣಗಳ ಹಿಡಿಸಿದನ್ಹಳ್ಳ ಪ.ನಿತ್ಯತೃಪ್ತನೆಂಬೊ ಸ್ತುತ್ಯಾರ್ಥ ನಿನ್ನ ಬಿಟ್ಟುಎತ್ತ ಹೋದವಯ್ಯ ನಮಗ್ಹೇಳೊ ಯದುಪತಿಎತ್ತ ಹೋದವಯ್ಯ ನಮಗ್ಹೇಳೊ ಯದುಪತಿತುತ್ತನ್ನ ನಿನಗೆ ಫನವೇನೊ ಯದುಪತಿ 1ಮುನ್ನಶಬರಿ ಎಂಜಲಪನ್ನಿಪಾವನ್ನೊ ನಿನಗೆಅನಸ್ತಾವೆಂಬೊ ಶೃತಿಗಳು ಯದುಪತಿಅನಸ್ತಾವೆಂಬೊ ಶೃತಿಗಳು ಹೊಗಳುತ ನಿನ್ನಲ್ಲೆಹ್ಯಾಂಗ ಇರಬೇಕೊ ಯದುಪತಿ 2ಪಟ್ಟದ ರಾಣಿ ಲಕುಮಿ ಎಷ್ಟು ಗುಣವಂತಳಲ್ಲೊಅಷ್ಟು ಭಾವದಲೆ ಚಲುವಳೊ ಯದುಪತಿಅಷ್ಟು ಭಾವದಲೆ ಚಲುವಳೊಕುಬ್ಜಿಯಂಥಸೊಟ್ಟ ಹೆಣ್ಣಿಗ್ಯಾಕೆ ಮನಸೋತೆÀ್ಯೂ ಯದುಪತಿ 3ಎಷ್ಟು ಸೃಷ್ಟಿಯ ಮಾಡಿಪುಟ್ಟ ಲವಕುಶರ ಪಡೆದಿಸೃಷ್ಟಿ ಮಾಡಿದ್ದು ಮರೆತೆನೊ ಯದುಪತಿಸೃಷ್ಟಿ ಮಾಡಿದ್ದು ಮರೆತೆನೊ ನಾಭಿಯಲ್ಲಿಪುಟ್ಟಿದ ಬೊಮ್ಮನಗುತಾನೊ ಯದುಪತಿ 4ರುದ್ರನ ಭಜನೆ ಮಾಡಿ ಪ್ರದ್ಯುಮ್ನನ ಪಡೆದಿವಿದ್ವಜ್ಜನರೆಲ್ಲ ನಗುತಾರೊ ಯದುಪತಿವಿದ್ವಜ್ಜನರೆಲ್ಲ ನಗುತಾರೊ ಶ್ರೀಧ ಶ್ರೀಧವಿದ್ಯವನೆÀಲ್ಲ ಮರೆತೇನೋ ಯದುಪತಿ 5ಸ್ವರಮಣನೀನೆಂಬೊ ಸ್ವರ ಗೈವ ಶೃತಿಗಳುಹರಿದಾವೇನೊ ಜಲದೊಳುಹರಿದಾವೇನೊ ಜಲದೊಳು ಗೊಲ್ಲತಿಯರ ಬೆರೆದಕಾರಣವ ನಮಗೆ ಹೇಳೊ ಯದುಪತಿ 6ಧೀರ ಗಂಭೀರನೆಂದು ಸಾರುವ ಶೃತಿಗಳುಹಾರಿದವೇನೊ ಮುಗಿಲಿಗೆಹಾರಿದವೇನೊ ಮುಗಿಲಿಗೆ ರಮಿಯರಸುಪೋರತನವೆಂದು ನಗತಾರೊ ಯದುಪತಿ 7
--------------
ಗಲಗಲಿಅವ್ವನವರು
ಇಷ್ಟುಪಾಪವನು ಮಾಡಿದುದೆ ಸಾಕೊ |ಸೃಷ್ಟಿಗೀಶನೆ ಎನ್ನನುದ್ಧರಿಸಬೇಕೊ ಪಒಡಲಕಿಚ್ಚಿಗೆ ಪರರ ಕಡು ನೋಯಿಸಿದೆ ಕೃಷ್ಣ |ಕೊಡದೆ ಅನ್ಯರ ಋಣವನಪಹರಿಸಿದೆ |ಮಡದಿಯ ನುಡಿಕೇಳಿಒಡಹುಟ್ಟಿದವರೊಡನೆ |ಹಡೆದ ತಾಯಿಯ ಕೂಡಹಗೆಮಾಡಿದೆ1ಸ್ನಾನಸಂಧ್ಯಾನಜಪ ಮಾಡದಲೆ ಮೈಗೆಟ್ಟೆ |ಜ್ಞಾನಮಾರ್ಗವನಂತು ಮೊದಲೆ ಬಿಟ್ಟೆ ||ಏನ ಹೇಳಲಿ ಪರರ ಮಾನಿನಿಗೆ ಮನಸಿಟ್ಟೆ |ಶ್ವಾನ- ಸೂಕರನಂತೆ ಹೊರೆದೆ ಹೊಟ್ಟೆ2ವ್ರತ ನೇಮ ಉಪವಾಸ ಒಂದು ದಿನ ಮಾಡಲಿಲ್ಲ |ಅತಿಥಿಗಳಿಗನ್ನವನು ನೀಡಲಿಲ್ಲ |ಶೃತಿ ಶಾಸ್ತ್ರ ಪುರಾಣ ಕಥೆಗಳನು ಕೇಳಲಿಲ್ಲ |ವೃಥವಾಗಿ ಬಹುಕಾಲ ಕಳೆದನಲ್ಲ 3ಶುದ್ಧ ವೈಷ್ಣವ ಕುಲದಿ ಉದ್ಭವಿಸಿದೆನೋ ನಾನು |ಮಧ್ವ ಮತಸಿದ್ದಾಂತ ಪದ್ಧತಿಗಳ ||ಬುದ್ಧಿಪೂರ್ವಕ ತಿಳಿದು ಪದ್ಮನಾಭನು ದಿನದಿ |ಕದ್ದುಂಡು ಕಾಯವನು ವೃದ್ಧಿಮಾಡಿದನಯ್ಯ 4ತಂದೆ - ತಾಯ್ಗಳ ಸೇವೆ ಒಂದು ದಿನ ಮಾಡಲಿಲ್ಲ |ಮಂದಭಾಗ್ಯದಬವಣೆತಪ್ಪಲಿಲ್ಲ ||ಹಿಂದೆ ಮಾಡಿದ ದೋಷ ಬಂದುಳಿಯದರುಹಿದೆನು |ತಂದೆ ಪುರಂದರವಿಠಲ ಮುಂದೆನ್ನ ಕಾಯೊ 5
--------------
ಪುರಂದರದಾಸರು
ಈ ಕಾರಣ ಹರಿನಾಮವ ನೆನೆಯಲಿಬೇಕಾಲಸ್ಯವಿಲ್ಲದಲೆಭೀಕರ ಯಮಭಟರಂತ್ಯದಿ ಕವಿಯಲಿನೂಕುವುದೀ ಅಸ್ತ್ತ್ರದಲಿ ಪ.ಷೋಡಶ ಉಪಚಾರದ ಪೂಜಾವಿಧಿಮಾಡುವ ಪಕ್ವಗೆ ಸಾಧ್ಯ ತಾಮಾಡೇನೆಂದರಗಾಧಮಾತಾಡಿದರೇನದಸಾಧ್ಯರೂಢಿಲಿ ಶ್ರೀಹರಿಗುಣ ಸಂಕೀರ್ತನೆಪಾಡಿದರತಿ ಆಹ್ಲಾದ 1ಸುಜ್ಞಾನಿಗಳ್ಹರಿ ಮೆಚ್ಚಿಸಿದರೆ ಅನಭಿಜÕರಿಗೆಲ್ಲಿಯ ಜ್ಞಾನಭವಸುಗ್ಗಿಯೊಳೆಲ್ಲಿ ಧ್ಯಾನ ವೈರಾಗ್ಯದ ನಡೆಯು ಕಠಿಣ ಅನಘ್ರ್ಯದ ಭೋಜನ ದೊರೆತಿದೆ ಹರಿನಾಮಂಗಳೆ ಅಮೃತದ ಪಾನ 2ಈ ಜನುಮವು ಜಗುಳುವ ಮುನ್ನಖಗರಾಜಗಮನ ರಂಗನ್ನ ಸರ್ವದಾ ಜಪಿಸುವನೆ ಧನ್ಯ ಸುಖಬೀಜವಿದೆನ್ನಿತ್ರಿಜಗತ್ಪತಿ ಪ್ರಸನ್ವೆಂಕಟರಾಯನಸೋಜಿಗನಾಮಂಗಳಣ್ಣ3
--------------
ಪ್ರಸನ್ನವೆಂಕಟದಾಸರು
ಈ ದುರ್ಮಾರ್ಗಗಳನ್ನು ಪೀಡಿಸಬೇಡೈ |ಮಾಧವನೆ ಇಂದಲ್ಲ ಜನುಮ ಜನುಮದಲೀ ಪಮಾತಾ ಪಿತರರ ಆಜೆÕ ಮೀರಿ ನಡೆಯಿಸಬೇಡ |ಜಾತಿ ಧರ್ಮವ ಬಿಟ್ಟನೆನಿಸಬೇಡ ||ಈತುಚ್ಛವಿಷಯದಾಪೇಕ್ಷೆ ಮಾಡಿಸಬೇಡ |ಭೂತೇಶನೇ ಪರಮಾತ್ಮನೆನಿಸಬೇಡ 1ಹರಿದಿನದಲಿ ಬಿಂದುಉದಕಕುಡಿಯಿಸಬೇಡ |ಪರದ್ರವ್ಯದಲೀಷ್ಟ ಕೊಡಲು ಬೇಡ ||ನಿರುತ ಪರರಾ ನಿಂದಾವನ್ನು ಮಾಡಿಸಬೇಡ |ನರರ ಸೇವಿಸಿ ಬದುಕಿಸಲಿಬೇಡ 2ಸಣ್ಣ ಮಾನವರ ಸಂಗತಿಯ ಕೊಡಲಿಬೇಡ |ಅನ್ಯ ಶಾಸ್ತ್ರಗಳ ಕೇಳಿಸಲು ಬೇಡ ||ನಿನ್ನ ದಾಸಾನಾಮತವ ಬಿಟ್ಟು ಇರಿಸಬೇಡ |ಯನ್ನದೀ ಶರೀರಾದಿಯೆನಿಸಬೇಡ 3ಉತ್ತಮರ ಪೂಜೆಗೆಜಾಗುಮಾಡಿಸಬೇಡ |ವಿತ್ತವ ಸಜ್ಜನರಿಗೆ ಕೊಡಿಸಬೇಡ ||ನಿತ್ಯಸತ್ಕಥಾ ಶ್ರವಣವಿಲ್ಲದಲ್ಲಿಡಬೇಡ |ಸತ್ಯೇಶ ಯನ್ನ ಮಾತು ಮರೆಯಬೇಡ 4ಪ್ರಾಣೇಶ ವಿಠ್ಠಲ ನಿನ್ನನಲ್ಲದೆ ಎಂದೆಂದು |ಹೀನ ದೇವತೆಗಳಿಗೆ ಮಣಿಸಬೇಡ ||ಮಾನುಷ್ಯೋತ್ತಮಾದಿ ಬ್ರಹ್ಮಾಂತ ದಿವಿಜರಲ್ಲಿ |ನ್ಯೂನಭಕುತಿಯನ್ನು ಕೊಡಲಿಬೇಡ 5
--------------
ಪ್ರಾಣೇಶದಾಸರು
ಈ ವಸುಧೆಯೊಳೆಲ್ಲರಿಗಿಂತ ಕೃಷ್ಣನು ಆವುದರಿಂದಧಿಕಾ ಪವಾರಿಧಿಮನೆಯಲ್ಲೆ ಈಗಿನರಸರಿಗೆ |ನೀರೊಳಗೇಸೊಂದು ಊರಿಲ್ಲವೇ ||ಶಾಙ್ರ್ಗ ಧನುವಾದರೇನು ದುರ್ಲಭವಲ್ಲ |ಧಾರಿಣಿಯೊಳು ಮನೆ ಮನೆಯಲ್ಲಿ ಕಾರ್ಮುಖವು 1ಲೇಸೇನು ಕೌಸ್ತುಭವೊಂದೆಯೇ ಮಣಿಗಳು |ಏಸೊಂದಿಲ್ಲದೆ ಭಾಗ್ಯವಂತರಲ್ಲಿ ||ಶೇಷನ ಹಾಸಿಗೆ ಹಾವಾಡಿಸಿ ಹೊಟ್ಟೆ |ಪೋಷಿಸಿಕೊಳ್ಳರೆ ಗಾರುಡಿಗರೆಲ್ಲ 2ಪೀತಾಂಬರಂತು ಎಲ್ಲರಿಗಿಹದು ದೊಡ್ಡ |ಮಾತಲ್ಲ ವನಮಾಲೆವೈಜಯಂತಿ||ಖ್ಯಾತಿಗೆ ಶಂಖಚಕ್ರವು ಹೇಳಿಕೊಳ್ಳಲು |ಜಾತಿಕಾರಗಿಲ್ಲೇ ಬಡಿವಾರವೇತಕೆ3ಶ್ರೀವತ್ಸ ಶ್ರೀವತ್ಸವೆಂಬರು ಮಂದೆಲ್ಲ |ಆವ ಹುಣ್ಣಿನ ಕಲೆಯಾಗಿಹದೋ ||ಆವಾನಿ ಹಯರಥ ಮುದಿಹದ್ದುಯೇರುವ |ಕೋವಿದರೆಲ್ಲೇನು ನೋಡಿ ವಂದಿಸುವರೋ 4ವೈಕುಂಠ ಮೊದಲಾದ ಮೂರೇ ಊರವನಿಗೆ |ಲೋಕದೊಳರಸರಿಗೇಸೋ ವೂರು ||ಶ್ರೀಕಾಂತ ಪ್ರಾಣೇಶ ವಿಠಲನ ಸಂಗ |ಬೇಕೆಂದು ಬಯಸುವರೆಲ್ಲರೂ ತಿಳಿಯದೆ 5
--------------
ಪ್ರಾಣೇಶದಾಸರು
ಈ ಸಮಯಕಲ್ಲದಿನ್ನೆಲ್ಲಿ ಕಾಯೊದೋಷರಹಿತ ವಸುದೇವ ನೀ ಕಾಯೊ ಕೃಷ್ಣ ಪನಿನ್ನಂಘ್ರಿಯನು ಭಜಿಸಿದವರ ಬಾಳ್ವೆಯ ಕಾಯೊ |ಎನ್ನಸತಿಸುತರು ನಿನ್ನವರೆ ಕಾಯೊ ||ನೀನಲ್ಲದನ್ಯರನು ಕಾಣೆ ಕವಳಿಯ ಕಾಯೊ |ಮುನ್ನ ಸ್ಥಿರವಾಗಿ ನೀನೆಂಬೆ ಕಾಯೊ 1ಪರವೆಣ್ಣುಗಳಿಗೆ ಎನ್ನ ಮನಸು ಕಾತರಿ ಕಾಯೊ |ದುರಿತದುಷ್ಕರ್ಮ ಮುಂಚಿಲ್ಲ ಕಾಯೊ ||ಕರೆಕರೆಯ ಸಂಸಾರಕಷ್ಟು ಕಡಲಿಯ ಕಾಯೊ |ದುರಿತಭವಶರಧಿಗೆ ತಾರೆ ಕಾಯೊ2ತ್ರಿವಿಧಪಾಪಂಗಳಿಗೆ ಪದವು ಉದ್ದಿನ ಕಾಯೊ|ಭವಸಾಗರದೊಳೀಸೆಂಬೆ ಕಾಯೊ ||ದಿವಿಜೇಂದ್ರ ಕೃಷ್ಣ ಕೈಪಿಡಿದು ಒಲಿದು ಕಾಯೊ |ನವ ಮುಕ್ತಿಪುರಂದರವಿಠಲ ನೀ ಬಿಡದೆ ಕಾಯೊ3
--------------
ಪುರಂದರದಾಸರು
ಈಗಾಗೋ ಇನ್ನಾವಾಗೋ ಮತ್ತೀಗಾತ್ರ ಅಸ್ಥಿರವಣ್ಣಹೇಗಾದರು ಹೊಗಳಾಡಲಿ ಬೇಕುನಾಗಾರಿಗಮನನ್ನ ಪ.ಮನಹರಿದತ್ತಲೆ ಹರಿಹರಿದಾಡಿದಿನ ಹೋದವು ವೃಥಾ ನೋಡಿ ದುರ್ಧನದಾಸೆಲಿ ಬಾಡಿ ದುರ್ಜನರಾರಾಧನೆ ಮಾಡಿ ಈತನು ಚಪಲತೆ ಹೋಗಾಡದೆ ಶ್ರೀಹರಿಗುಣಕುಣಿದು ಕೊಂಡಾಡಿ1ತುಂಬಿದಸಿರಿಬಿಡಿಸಿ ಸೆರೆ ಒಯಿವರು ವಿಲಂಬಿಲ್ಲದೆ ಜವನವರು ಕೃಪೆಯೆಂಬುದ ಅರಿಯರು ಅವರುಹಲವ್ಹಂಬಲಿಸಿದರೊದೆವರು ಸುಡುನಂಬಲಿಬಾರದು ಸಂತೆಯವರಅಂಬುಜನಾಭನ ಸಾರು 2ಸಕಳಾಗಮ ವೇದೋಕ್ತಿ ವಿಚಾರಕೆಮುಖವೆನಿಸುವುದಾಚಾರ ಆಸುಖವೇ ಧರ್ಮದಸಾರಈಅಖಿಳಕೆ ಪ್ರಭು ಯದುವೀರಭಕ್ತವತ್ಸಲ ಪ್ರಸನ್ವೆಂಕಟರಾಯನಸಖ್ಯವಿಡಿದರೆ ಭವದೂರ 3
--------------
ಪ್ರಸನ್ನವೆಂಕಟದಾಸರು
ಈಸಬೇಕು ಇದ್ದು ಜಯಿಸಬೇಕುಹೇಸಿಕೆಸಂಸಾರದಲ್ಲಿ ಲೇಶ ಆಶೆ ಇಡದ ಹಾಗೆಪ.ತಾಮರಸ ಜಲದಂತೆ ಪ್ರೇಮವಿಟ್ಟು ಭವದೊಳುಸ್ವಾಮಿರಾಮನೆನುತ ಪಾಡಿ ಕಾಮಿತವ ಕೈಕೊಂಬರೆಲ್ಲ 1ಗೇರು ಹಣ್ಣಿನಲ್ಲಿ ಬೀಜ ಸೇರಿದಂತೆ ಸಂಸಾರದಿಮೀರಿ ಆಶೆ ಮಾಡದ ಹಾಗೆ ಧೀರ ಕೃಷ್ಣನ ನೆನೆಯುವರೆಲ್ಲ 2ಮಾಂಸದಾಶೆಗೆ ಮತ್ಸ್ಯವು ಸಿಲುಕಿ ಹಿಂಸೆ ಪಟ್ಟಪರಿಯೊಳುಮೋಸ ಹೋಗದೆ ಪುರಂದರವಿಠಲ ಜಗದೀಶನೆನುತ ಕೊಂಡಾಡುವರೆಲ್ಲ 3
--------------
ಪುರಂದರದಾಸರು
ಉದರವೈರಾಗ್ಯವಿದು - ನಮ್ಮ - |ಪದುಮನಾಭನಲ್ಲಿ ಲೇಶಭಕುತಿ ಇಲ್ಲ ಪ.ಉದಯಕಾಲದಲೆದ್ದು ಗಡಗಡ ನಡುಗುತ |ನದಿಯಲಿ ಮಿಂದೆನೆಂದು ಹಿಗ್ಗುತಲಿ ||ಮದ ಮತ್ಸರ ಕ್ರೋಧ ಒಳಗೆ ತುಂಬಿಟ್ಟುಕೊಂಡು |ಬದಿಯಲಿದ್ದವರಿಗಾಶ್ಚರ್ಯದೋರುವುದು 1ಕರದಲಿ ಜಪಮಣಿ ಬಾಯಲಿ ಮಂತ್ರವು |ಅರಿವೆಯ ಮುಸುಕನು ಮೋರೆಗೆ ಹಾರೆ ||ಪರಸತಿಯರರೂಪ ಮನದಲಿ ಗುಣಿಸುತ |ಪರಮವೈರಾಗ್ಯಶಾಲಿಯೆನಿಸುವುದು 2ಕಂಚುಗಾರನಾ ಬಿಡಾರದಿಂದಲಿ |ಕಂಚು ಹಿತ್ತಾಳೆಯ ಪ್ರತಿಮೆಯ ನೆರಹಿ ||ಮಿಂಚಬೇಕೆಂದು ಬಹುಜ್ಯೋತಿಗಳನೆಹಚ್ಚಿವಂಚಕತನದಲಿ ಪೂಜೆಯ ಮಾಳ್ಪುದು 3ಬೂಟಕತನದಲಿ ಬಹಳ ಭಕುತಿ ಮಾಡಿ |ಸಾಟಿಯಿಲ್ಲವು - ಎನಗೆಂದೆನಿಸಿ ||ನಾಟಕ ಸ್ತ್ರೀಯಂತೆ ಬಯಲಡಂಬವ ತೋರಿ |ಊಟಕೆ ಸಾಧನೆ ಮಾಡಿಕೊಂಬುದಿದು 4ನಾನು ಎಂಬುದ ಬಿಟ್ಟು ಜ್ಞಾನಿಗಳೊಡನಾಡಿ |ಏನಾದುದುಹರಿ ಪ್ರೇರಣೆಯೆಂದು |ಶ್ರೀ ನಿಧಿ ಪುರಂದರವಿಠಲರಾಯನನು |ಕಾಣದೆ ಮಾಡಿದ ಕಾರ್ಯಗಳೆಲ್ಲ 5
--------------
ಪುರಂದರದಾಸರು
ಉದರವೈರಾಗ್ಯವಿದು - ನಮ್ಮ - |ಪದುಮನಾಭನಲ್ಲಿ ಲೇಶಭಕುತಿ ಇಲ್ಲ ಪ.ಉದಯಕಾಲದಲೆದ್ದು ಗಡಗಡ ನಡುಗುತ |ನದಿಯಲಿ ಮಿಂದೆನೆಂದು ಹಿಗ್ಗುತಲಿ ||ಮದ ಮತ್ಸರ ಕ್ರೋಧ ಒಳಗೆ ತುಂಬಿಟ್ಟುಕೊಂಡು |ಬದಿಯಲಿದ್ದವರಿಗಾಶ್ಚರ್ಯದೋರುವುದು 1ಕರದಲಿ ಜಪಮಣಿ ಬಾಯಲಿ ಮಂತ್ರವು |ಅರಿವೆಯ ಮುಸುಕನು ಮೋರೆಗೆ ಹಾರೆ ||ಪರಸತಿಯರರೂಪ ಮನದಲಿ ಗುಣಿಸುತ |ಪರಮವೈರಾಗ್ಯಶಾಲಿಯೆನಿಸುವುದು 2ಕಂಚುಗಾರನಾ ಬಿಡಾರದಿಂದಲಿ |ಕಂಚು ಹಿತ್ತಾಳೆಯ ಪ್ರತಿಮೆಯ ನೆರಹಿ ||ಮಿಂಚಬೇಕೆಂದು ಬಹುಜ್ಯೋತಿಗಳನೆಹಚ್ಚಿವಂಚಕತನದಲಿ ಪೂಜೆಯ ಮಾಳ್ಪುದು 3ಬೂಟಕತನದಲಿ ಬಹಳ ಭಕುತಿ ಮಾಡಿ |ಸಾಟಿಯಿಲ್ಲವು - ಎನಗೆಂದೆನಿಸಿ ||ನಾಟಕ ಸ್ತ್ರೀಯಂತೆ ಬಯಲಡಂಬವ ತೋರಿ |ಊಟಕೆ ಸಾಧನೆ ಮಾಡಿಕೊಂಬುದಿದು 4ನಾನು ಎಂಬುದ ಬಿಟ್ಟು ಜ್ಞಾನಿಗಳೊಡನಾಡಿ |ಏನಾದುದುಹರಿ ಪ್ರೇರಣೆಯೆಂದು |ಶ್ರೀ ನಿಧಿ ಪುರಂದರವಿಠಲರಾಯನನು |ಕಾಣದೆ ಮಾಡಿದ ಕಾರ್ಯಗಳೆಲ್ಲ 5
--------------
ಪುರಂದರದಾಸರು
ಉಪಕಾರ ಮರೆವುದುಚಿತವಲ್ಲೋ |ತಪನಾಪ್ತಾಕ್ಷನೆ ನಮ್ಮ ಹಿರಿಯರಂದು ಮಾಡಿದಾ ಪಹರಿಯೆ ನಿನ್ನವರಿಗಮೃತವ ನೀಡುವೆನೆಂದು |ಭರದಿಂದ ಮಥÀನ ಮಾಡಿಸಿದೆ ಕಡಲ ||ಗರಳವುದ್ಭವಿಸಲು ದಿವಿಜರಂಜಲು ಆಗ |ತ್ವರದಿಂದದರಭಯ ಪರಿಹರಿಸಿದರಾರೊ 1ಆರಣ್ಯದೊಳು ನೀನಿರಲು ನಿನ್ನೊಲ್ಲಭಿಯ |ಆ ರಾವಣನೊಯ್ಯಲು ಕಪಿಗಳೆಲ್ಲ ||ಹಾರಲಾರೆವೊ ಸಮೂದ್ರಾ ಎನ್ನಲು ಬೇಗ |ಭಾರತೀ ರಮಣನೇ ಪೋಗಿ ವಾರ್ತೆಯ ತಂದ 2ಶರಧಿಕಟ್ಟುವುದಕ್ಕೆ ರೋಮ ರೋಮದಿ ಗುಡ್ಡ |ಧರಿಸಿ ತಂದನು ನೊಂದೆನೆನ್ನದಲೆ |ಹರಿಜಿತು ಶರದಿಂದ ಬಿಗಿಯೆ ಪ್ಲವಗರೆಲ್ಲಾ |ಧರಣಿ ಹೊಂದಲು ಸಂಜೀವನ ತಂದು ಉಳುಹಿದ 3ವಸುದೇವಜನಾಗಿ ನೀಂ ಜರಿಜನ ಭಯದಿಂದ |ವಸುಧೆಯೊಳಗೆ ನಿಲ್ಲಲಾರದಿದ್ದೆ ||ಶಶಿಕುಲದಲ್ಲಿವಾತಜನಿಸಿ ಅವನ ಕೊಂದು |ಕುಸುಮನಾಭನೆ ನಿನ್ನ ಭಯ ಬಿಡಿಸಿದನಲ್ಲೋ 4ಮಣಿಮಂತಜಗದೊಳು ನಿನ್ನ ಮಹಿಮೆಯನ್ನು |ಮುಣುಗಿಸಿದನು ತ್ವರಿತ ನಮ್ಮ ಗುರುವು ||ಘನಶಾಸ್ತ್ರಂಗಳ ರಚಿಸಿ ದುರ್ಮತವ ಸೋಲಿಸಿ |ಮನಸಿಜಪಿತನೇ ಪರನೆಂದು ಮೆರೆಸಿದ5ಇಷ್ಟು ಸೇವೆಯ ಮಾಡಿ ಮೆಚ್ಚಿಸಿದನು ಗೇಣು |ಬಟ್ಟೆಬೇಡಿದನೇನೋ ಆತ ನಿನ್ನ ||ಬಿಟ್ಟದ್ದಾನಾದಿತು ನಮ್ಮ ವಂಶಕರಿಗೆ |ಕೊಟ್ಟು ರಕ್ಷಿಸುವನು ಸ್ವಾಮಿ ಒಳ್ಳೆವನೆಂದು 6ಈಸು ಪರಿಯಿಂದ ನಮ್ಮ ಭಾರತೀಕಾಂತ |ತಾ ಸೋತಿರಲು ನಿನಗೆ ನಮ್ಮನೀಗ ||ಘಾಸಿಮಾಡದೆ ಸಲಹುವದುಚಿತವೋ ಶ್ರೀ ಪ್ರಾ- |ಣೇಶ ವಿಠ್ಠಲರೇಯ ಅಪಕೀರ್ತಿ ಕೊಳಬೇಡ7
--------------
ಪ್ರಾಣೇಶದಾಸರು
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು