ಒಟ್ಟು 9833 ಕಡೆಗಳಲ್ಲಿ , 131 ದಾಸರು , 5664 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕನೀತಿ ಇಳೆಯೊಳಗೆ ದೇಹತಾಳಿ ಬಂದೆಲ್ಲಾ ತಮ್ಮಾ ಗಳಸಿ ಮನೆ ಹೆಂಡಿರು ಮಕ್ಕಳಿಟ್ಟಿಲ್ಲಾ ಬಲಿಸಿ ಹಣ ಹೊನ್ನು ಹೂಳಿಟ್ಟಿಲ್ಲಾ ತಮ್ಮಾ ಒಲಿದು ಉಂಡಿ ವಿಷಯ ಸುಖವಾ ಪೇಳಲ್ಲಾ 1 ತೆರಪೀರಾದೆ ಜನಿಸಿದಾವು ಸುತ್ತಲು ಪರಿಪರಿಯ ಸುಖದುಃಖ ಪಗಲಿರುಳು ತಮ್ಮಾ ಇರದೆಯೊದಗಿ ದಣಿಸಿದಾವು ನಿನ್ನ ಮರುಳೆ 2 ಯಮನವರು ಬರುವದು ಮರೆತೇಯ ತಮ್ಮಾ ರಮಣೀ ಮೋಹಾ ಕೇಳಿರು ನೀನರಿಯಾ ಅಮಿತ ಧನ ಬಳಗ ಇನ್ನೆಲ್ಲಯ್ಯಾ ತಮ್ಮಾ ನಮೋ ನರಸಿಂಹವಿಠಲ ಎನ್ನಯ್ಯ 3
--------------
ನರಸಿಂಹವಿಠಲರು
ಲೋಕನೀತಿ ಎಲ್ಲಿಗೇತಕೆ ಪೋಗಿ ತಲ್ಲಣಿಸುವೆಯೊ ಮನವೆ ಇಲ್ಲೆ ಶ್ರೀಹರಿಯಿಲ್ಲವೆ ಪ ಬಲ್ಲವರ ಹೃದಯಗುಹೆಯಲ್ಲಿ ಪ್ರಕಟಿಸುತ ಜನ ತುಂಬಿ ಸೂಸುತಲಿರುವ ಅ.ಪ ಕಾಶಿ ರಾಮೇಶ್ವರ ಬದರಿ ತಿರುಪತಿಯೆಂದು ಘಾಸಿಗÉೂಳ್ಳುವೆ ಏತಕೋ ವಾಸನೆಯ ನೀಗದವನಾಶೆಪಾಶಗಳಿಂದ ಬೇಸತ್ತು ಚರಿಸಲೇಕೋ ಈಶನಾವಾಸವೀಜಗವೆಲ್ಲವಿಲ್ಲಿಲ್ಲ ವಲ್ಲಿರುವನೆಂಬುದೇಕೋ ಶ್ರೀಶ ಶ್ರೀಹರಿಯ ನೀನಿರುವಲ್ಲೆ ಶೋಧಿಸುವ ಆಸೆಯುದಯಿಸಲಿಲ್ಲವೇಕೋ 1 ಅಣುಮಹತುಗಳಲ್ಲಿ ತೃಣಜೀವಕೋಟಿಯಲಿ ಗುಣ ಮಹಿಮನರಿಯ ಬಯಸೋ ಎಣಿಸಲಾಗದನಂತಗುಣನ ಪ್ರಾಣಿ ಸಮೂಹ ಗಣಗಳೊಳು ಕಾಣಬಯಸೋ ಅಣುವಿಗಣುವೆನಿಸಿ ಮಹತಿಗೆ ಮಹತ್ತಹನ ಕಣ್ದಣಿಯೆ ಕಾಣುತ ಭಾವಿಸೊ ಗುಣನಿಧಿಯು ನಿನ್ನ ಶ್ರದ್ಧಾಭಕ್ತಿಗಳಿಗೊಲಿದು ಕ್ಷಣದಿ ಕಾಣಿಸುವನಿದನರಿತು ನೀ ಚರಿಸೋ 2 ವ್ರತನಿಯಮಗಳ ಕಾಮ್ಯ ಫಲದಾಸೆಯಿಂ ಮಾಡೆ ಫಲವೇನು ವ್ಯರ್ಥಶ್ರಮವೋ ಸತತ ನಿನ್ನಯ ವ್ಯಾಪ್ತ ಮಹಿಮೆಯರಿಯದೆ ಪೂಜೆ ಮಾಡಿದರು ವ್ಯರ್ಥಶ್ರಮವೋ ಮತಿವಿಕಳ ಕೋಪ ತಾಪದ ದಾಸನವ ಮಾಳ್ಪ ದಾನವದು ವ್ಯರ್ಥಶ್ರಮವೋ ಅಕಳಂಕಮಹಿಮ ರಘುರಾಮವಿಠ್ಠಲನೆಂದು ನಂಬಿ ನಡೆವುದೆ ಸಾರ್ಥಕವೋ 3
--------------
ರಘುರಾಮವಿಠಲದಾಸರು
ಲೋಕನೀತಿ ಮನವೇ ನೀ ಭಜಿಸು| ರಾಮನಾಮವನು ಘನ ಮುಕ್ತಿಸಾಧನೆ | ಪಾದನಾಮವನು ಪ ಅಂದದ ನಾಮ| ಚಂದದ ನಾಮ|| ವಂದಿಸೆ ಮನಕಾ| ನಂದದ ನಾಮ 1 ಕೋಮಲ ನಾಮ| ನಿರ್ಮಲ ನಾಮ| ಕಾಮಿತವೀವ ಸು| ಪ್ರೇಮದ ನಾಮ 2 ಪಾವನ ನಾಮ| ಶ್ರೀವರ ನಾಮ|| ಪವನಸಂಜಾತನು ಸ್ಮರಿಸುವ | ನಾಮ 3 ಅಗಣಿತ ಮಹಿಮ|| ಜಗದಭಿರಾಮನ | ಘನಗುಣ ನಾಮ 4 ಭಕ್ತಾದಿ ಜನರು| ಭಜಿಸುವ ನಾಮ| ಮುಕ್ತಿಸಾಧನವಾದ| ಭಕ್ತಿಯ ನಾಮ 5
--------------
ವೆಂಕಟ್‍ರಾವ್
ಲೋಕನೀತಿ ಮಾನವ ಭ್ರಾಂತಿಸುಖವ ಪ. ನಂಬಲಾಗದು ಮಣ್ಣಬೊಂಬೆಯಂದದ ದೇಹ ಡಂಭ ಮೋಹಗಳಿಂದ ಮದಿಸುತ ಹಂಬಲಕ್ಕೀಡಾಗುವಂತಿದ ಅ.ಪ. ನೀರಮೇಲಣಗುಳ್ಳೆ ತೋರಿಹಾರುವ ಬಗೆ ಮಾರನಾಟಿದೊಳಾಡುತ ನಲಿಯುತಲಿಕೆ ಸಾರಿಬರೆ ತನಗಪಮೃತ್ಯುಕಾಲವು ಮೀರಿದುಬ್ಬುಸವಾಂತು ಮಿಡುಹುತ ಬೋರಿಡುತ ಬೊಬ್ಬರಿಸಿ ತರಳರ ಸಾರಿಕೂಗುವ ಕಾಯಧಿರವನು 1 ನಾನು ನನ್ನದಿದೆಂದಭಿಮಾನದಿಂ ಮತಿಗೆಟ್ಟು ಜ್ಞಾನವಿಲ್ಲದೆ ಭುವಿಯೊಳ್ ದೀನನಾಗಿ ನಾನಾಪರಿಯಿಂ ಸೊರಗಿ ನರಳುತಿಹ ನೀ ನಿಜವೆಂದು ನಂಬದೆ ಜ್ಞಾನ ಲಾಭದಿ ಮನುಜನೆನ್ನಿಸೆ 2 ಕಾಮಕ್ರೋಧವ ಬಿಟ್ಟು ರಾಮನೊಳ್ ಮನವಿಟ್ಟು ತಾಮಸಬುದ್ಧಿಯನೀಡಾಡುತೆ ಮತ್ತೆ ಶಮದಮಾದಿಗಳನಭ್ಯಸಿಸುತೆ ಕ್ಷಮೆಯನಾಶ್ರಯಿಸುತೆ ಸುಖದುಃಖದೊಳ್ ಕಮಲನಯನ ಶೇಷಾದ್ರಿನಾಥನ | ವಿಮಲ ಪದದೊಳೈಕ್ಯನಾಗಲು ಅಮಭಕ್ತಿಯೆ ಮುಖ್ಯ ಸಾಧನ ನಮಗೆ ಈ ಭ್ರಾಂತಿ ಸಲ್ಲದು 3
--------------
ನಂಜನಗೂಡು ತಿರುಮಲಾಂಬಾ
ಲೋಕನೀತಿ (ಆ) ಇರುವುದೆಲ್ಲ ಮನೆಯೊಳಗಿದ್ದರೆ ಆಡಿಗೆಗೆ ಯಾತಕ್ಕೆ ತಡವಾಗೋದು | ಪ ತರಬೇಕೇಂದು ನೂರು ತಡವೆ ನಾ ನುಡಿದರು ಅರಿಯದವರ ಪರಿತಿರುಗುತ್ತಲಿರುವದು ಅ.ಪ ಮನೆ ಮನೆಯಲಿವಂದು ಮಾನಾರ್ಧಮಾನಗಳು ಮೆಣಸಿನಪುಡಿ ಉಪ್ಪು ಅಕ್ಕಿ ಸಾಲ ದಿನ ದಿನ ಮಧ್ಯಾಹ್ನ ತಿರುಗಿದ ಮೇಲೆ ಮನೆಗೆ ಬಂದು ಹಸಿವೆನುತ ಪೇಳುವದು 1 ಎಣ್ಣೆವಗ್ಗರಣೆಯಲ್ಲದೆ ಕಾಣೆನಭಿಗಾರ ಮುನ್ನೆ ಪಿತ್ಥ ಹೆಚ್ಚಿ ತಲೆ ನೋಯ್ವುದು ನಿನ್ನೆಮೊನ್ನೆ ಹೇಳಿದುದಕೆ ಹೊಡೆಸಿಕೊಂಡೆ ದೊಣ್ಣೆಪೆಟ್ಟಿನಿಂದ ಬೆನ್ನು ಬಾತಿರುವದು 2 ವರುಷಕ್ಕಾಗುವ ಮಟ್ಟಿಗೆಲ್ಲಾ ಪದಾರ್ಥ ಶೇ- ಖರವ ಮಾಡುವುದು ಈ ಮನೆಯೊಳಿಲ್ಲಾ ಹಿರಿಯರಿಂದ ಬಂದ ಸಂಪ್ರದಾಯವಿದೇನೊ ಇಂಥಾಮನೆಯ ಸೇರಿ ಈ ಸುಖ ಪಡುವೆ 3 ಮದುವೆಯಲ್ಲಿದ್ದದ್ದು ಪ್ರಸ್ತದೊಳಗೆಯಿಲ್ಲ ಬದಲು ಸೀರೆಯು ನಾನುಟ್ಟರಿಯೆ ವಿಧಿಲಿಖಿತವು ತಪ್ಪುವುದೆಯೆಂದಿಗಾದರು ವದರಿ ಕೊಂಡರೆಯೇನು ಇದರೊಳು ಫಲವುಂಟು 4 ಜ್ಞಾನ ಶೂನ್ಯರು ಮನೆಯೊಳಿಹರೆಲ್ಲರು ಈ ನರಜನ್ಮವು ಇಷ್ಟಕ್ಕೆಸಾಕೆಂದು ಧೇನಿಸಿ ಗುರುರಾಮವಿಠಲನ ಬೇಡುವೆ 5
--------------
ಗುರುರಾಮವಿಠಲ
ಲೋಕನೀತಿಯ ಪದಗಳು ಕೇಶವನ ದಾಸರಿಗೆ ಘಾಸಿಯುಂಟೆ ವಾಸವನ ವಜ್ರಕೆ ಗಿರಿನಿಕರದಂಜಿPಯೆ ಪ ಇದ್ದಲಿಯನು ಗೊರಲಿ ಮೆದ್ದು ಜೀವಿಪದುಂಟೆ ಮದ್ದಾನೆಗಳಿ ಗಲ್ಪ ನರಿಯ ಭಯವೇ ಅಬ್ದಗಳು ಮರುತನೊಳು ಯುದ್ಧ ಬಯಸುವದುಂಟೆ ಸಿದ್ಧರಿಗೆ ಭವಪಾಶ ಪದ್ಧತಿಯು ಉಂಟೆ 1 ಗುರುಕೃಪೆಯ ಪಡೆದವಗೆ ಪರಸೌಖ್ಯ ತಪ್ಪದೇ ಹರಿಯ ಸ್ಮರಿಸುವ ನರಗೆ ನರಕ ಭಯವೇ ಉರಗ ನಭಚರನೆದುರಲ್ಲಿಪ್ಪದೆ ನರಚಂಡಕರಕರ ಕಂಡು ಅರುಳುವುದೆ ಕುರುಕುಮುದಾ 2 ಮೇರುವಿಗೆ ಛಳಿ ಭಯವೇ ವಾರಿಧಿಗೆ ಮಳಿ ಭಯವೇ ಮಾರನ್ನ ಗೆದ್ದವಗೆ ನಾರಿ ಭಯವೇ ತಾರಕಾ ಪ್ರೀಯ ಶಿರಿಗೋವಿಂದವಿಠಲಗೆ ಸೇರಿರುವ ಶೂರರಿಗೆ ಆವ ಭಯವೈಯ್ಯಾ 3
--------------
ಅಸ್ಕಿಹಾಳ ಗೋವಿಂದ
ಲೋಕನೀತಿಯ ಪದಗಳು ಚರಣಕಮಲ ಭಜಿಸೋ ಗೋಪಾಲಕೃಷ್ಣನ ಪ ತರುಣಿಯರ ಮನವನು ಮರುಳುಗೊಳಿಸಿದ ಪರಮ ಸುಂದರನ ಧರಿಯೊಳಗೆ ಭಾಸ್ಕರಪುರ ಸುಮಂದಿರನೆಂದು ಕರೆಸುವನ ಕರಿರಾಜವರದನ ಅ.ಪ ಕ್ಷೋಣೆ ಗೀರ್ವಾಣರಿಂದಲಿ ಪೂಜೆಗೊಂಬುವನಾ ಮಾನಸದಿ ತನ್ನನು ಧೇನಿಪರ ಸುರಧೇನು ಎನಿಸುವನಾ ಗಾನವನು ಕೇಳುವ ಧೇನು ವತ್ಸಗಳಿಂದ ಶೋಭಿತನಾ ವೇಣುಗೋಪಾಲನ 1 ವಂದನೆಯ ಮಾಳ್ಪರ ಬಂಧ ಬಿಡಿಶ್ಯಾನಂದ ನೀಡುವನಾ ಮಂದರದಿ ಗಣಪತಿ ಗಂಧವಾಹನರಿಂದ ವಂದಿತನಾ ಮಂದಜಾಸನ ಮುಖ್ಯ ಸುರಗಣದಿಂದ ಸೇವಿತನಾ ಸಿಂದೂರವರದನ 2 ಕೃಷ್ಣಾ ಅಷ್ಟಮಿಯ ಉತ್ಸವ ಮಾಳ್ಪ ಭಕುತರನಾ ಸೃಷ್ಟೀಶನಿವನೆಂದರಿಂದ ಮಹಿಮೆಯ ಪಾಡಿಪೊಗಳುವನಾ ಕಷ್ಟವನು ಪರಿಹರಿಸ್ಯವರ ಸಕಲಾಭೀಷ್ಠಗರಿಯುವನಾ ಪರಮೇಷ್ಠಿ ಜನಕನ 3 ಗರಿಯೆ ಗೋಗಳನಾ ಗಿರಿಯ ಧರಿಸಿದನಾ ಇದ ಕೃಷ್ಣನ್ನ ಪೂಜಿಸಲು ಒಲಿದನ 4 ಶರಣಾಗತ ಜನರ ಪೊರೆಯಲು ಬಂದುನಿಂತಿಹನಾ ಕಾ ರ್ಪರ ಕ್ಷೇತ್ರದಿ ಮೆರಿವ ತರುಪಿಪ್ಪಲ ಸುಮಂದಿರನ ಸುರವಿನುತ ಸಿರಿನರಹರಿಯ ರೂಪಾತ್ಮಕನು ಎನಿಸುವನು ತುರುಪಾಲ ಕೃಷ್ಣನ 5
--------------
ಕಾರ್ಪರ ನರಹರಿದಾಸರು
ಲೋಕನೀತಿಯ ಹಾಡುಗಳು ಶ್ರೀನಾಥನ ನಾಮಾಮೃತ ರುಚಿಯೆಲ್ಲ ಪರಮ ಭಕುತಗಲ್ಲದೆ ಪ ಹೀನ ಮನುಜರು ಕೇಳಿ ಹಿರ್ರನೆ ಹಿಗ್ಗಿ ಆನಂದಪಡಬಲ್ಲರೆ ಅ.ಪ. ಕ್ಷೀರ ವಾರಿಯ ಕೂಟ ಮರಾಳ ತಿಳಿವಂತೆನೀರು ಕೋಳಿಯು ಬಲ್ಲುದೆಸಾರಮೇಯನ ಬಾಲ ನಳಿಗೆಯೊಳಿಟ್ಟರೆನೇರವಾಗಬಲ್ಲದೆದಾರು ಪ್ರತಿಮೆಗೆ ಸೀರೆಯನುಡಿಸಲುನಾರಿಯಾಗಬಲ್ಲುದೆಭಾರತಿಪತಿ ಪಾದವರಿಯದ ಮನುಜನುನಾರಾಯಣನ ಬಲ್ಲನೆ1 ಉದರಕ್ಕೆ ಗ್ರಾಸವ ನಡೆಸದ ಮನುಜನುಮದುವೆ ಮಾಡಲು ಬಲ್ಲನೆಸದನಕ್ಕೆ ಜನ ಬರೆ ಕದನವ ತೆಗೆವವಬುಧರು ಎಂಬುದ ಬಲ್ಲನೆವಿಧಿಯಂತೆ ಮಸೆದು ಮತ್ಸರಿಸುವವ ನಮಗೆಹದುಳ ಹಾರೈಸುವನೆಮದವೆಗ್ಗಳಿಸಿ ಮೆರೆವ ಮನುಜ ಹರಿಪದಗಳರ್ಚಿಸಬಲ್ಲನೆ 2 ಕನ್ನಡಿಯೊಳು ರೂಪು ಹೊಳೆದಂತೆ ಹಂಚಿನೊಳ್‍ಇನ್ನು ಕಾಣಿಸಬಲ್ಲುದೆಕಣ್ಣಿಲ್ಲದವನಿಗೆ ಚಿನ್ನವ ತೋರಲುಬಣ್ಣ ಹೇಳಲು ಬಲ್ಲನೆಹೆಣ್ಣಿನ ಮೇಲಿನ ವ್ಯಾಮೋಹ ಬಿಡದವಸಂನ್ಯಾಸಿಯಾಗುವನೆಅನ್ಯ ದೈವಂಗಳ ಭಜಿಸುವ ನರಗೆ ಮೋ-ಹನ್ನ ವಿಠ್ಠಲ ಒಲಿವನೇ 3
--------------
ಮೋಹನದಾಸರು
ಲೋಕಮಾತೆಯೆ ದಯಮಾಡೆ ತಾಯೆ ಪರಿ ಪೂಜಿಪೆ ಶ್ರೀಪತಿಯ ಸತಿಯೆ ಪುಲ್ಲನಾಭನ ಕೂಡಿ ಮೆಲ್ಲಡಿ ಇಡುತಲಿ ಉಲ್ಲಾಸದಿಂದಲಿ ಬಂದು ಕಾಯೆ ತಾಯೆ 1 ನಿತ್ಯ ಮಂಗಳನಾಗೆ ಅಚ್ಚುತನರಾಣಿ ನಿಚ್ಚದಿ ಭಕ್ತಿ ಜ್ಞಾನವಿತ್ತು ಕಾಯೆ ತಾಯೆ 2 ವಕ್ಷಸ್ಥಳದಲಿ ನಿಂತೂ ಕಾಯೆ ತಾಯೆ ಪಕ್ಷಿವಾಹನ ರುಕ್ಮಿಣೀಶ ವಿಠಲನ ರಾಣಿ 3
--------------
ಗುಂಡಮ್ಮ
ಲೋಭಿಯು ಬೇಡಲು ಲಾಭವೇನಿರುವುದು ನಾಭಿಯು ಒಣಗುವುದು ಪ ಲೋಭಿಗೆ ಧನದಿಂದ ಶೋಭೆಯುಂಟೆ ಮನ ಕ್ಷೋಭೆಯಲ್ಲದೆ ಸತತ | ತನ್ನಯ ಮನಕ್ಷೋಭೆಯಲ್ಲದೆ ಸತತ ಅ.ಪ ನೂರು ಛಿದ್ರಗಳಲ್ಲಿ ತೋರುತಿದ್ದರು ದೇಹ ಕೋರನು ನವವಸನ | ಏನೆಂದು ಕೋರನು ನವವಸನ ಮೂರು ಕಾಸಿಗೆರಡು ಮಾರುತಿದ್ದರು ಅದ ದೂರದಿ ತ್ಯಜಿಸುವನು | ನೂತÀನವಸ್ತ್ರ ದೂರದಿ ತ್ಯಜಿಸುವನು 1 ಬಂಧು ಜನರು ತನ್ನ ಮಂದಿರಕ್ಕಿಳಿಯಲು ನೊಂದುಕೊಳ್ಳುವ ಮನದಿ | ತತ್ತಳಿಸುತ ನೊಂದುಕೊಳ್ಳುವ ಮನದಿ ತೊಂದರೆಗಳ ಪೊಂದಿಹೆನೆನ್ನುತ ಮುಂದಕೆ ಸಾಗಿಸುವ | ಬಂದವರನು ಮುಂದಕೆ ಸಾಗಿಸುವ 2 ಮುಗ್ಗಿದ ಧವಸವು ಅಗ್ಗÀದಿ ಮಾರಲು ಹಿಗ್ಗುತ ಕೊಳ್ಳುವನು | ಸೊಗಸಿನಲಿ ಹಿಗ್ಗುವನು ಒಗ್ಗಿಹುದೆನ್ನುತ ನುಗ್ಗಿಸಿ ಉದರದಿ ಸಗ್ಗದೆ ನಡೆಯುವನು | ಪರನುಡಿಗೆ ಸಗ್ಗದೆ ನಡೆಯುವನು 3 ಹಣದಲಿ ಲೋಭಕೆ ಕೊನೆ ಮೊದಲಿಲ್ಲದೆ ಒಣಗಿಸುವನು ತನುವ | ಕಾರ್ಪಣ್ಯದಿ ಒಣಗಿಸುವನು ತನುವ ಗೆಣೆಯನಿವನು ನಾಲ್ಕಾಣೆಯ ಕಂಡರೆ ಕುಣಿಯುವನು ಮನದಲ್ಲಿ | ಎಣೆಯಿಲ್ಲದೆ ಕುಣಿಯುವ ಮನದಲ್ಲಿ4 ಕಿಕ್ಕಿರಿದರು ಧನ ಕಕ್ಕುಲತೆಯೊಳ್ ತನ್ನ ಮಕ್ಕಳ ಸಲಹುವನು | ರಕ್ಕಸನಿವ ಮಕ್ಕಳ ಸಲಹುವನು ಮಿಕ್ಕ ಧನವ ಬಲು ಅಕ್ಕರೆಯಿಂದ ಎವೆ ಯಿಕ್ಕದೆ ನೋಡುವನು | ನೇತ್ರದಿ ಎವೆಯುಕ್ಕದೆ ನೋಡುವನು 5 ನುಡಿದರೆ ಸವಿಮಾತ ಒಡವೆ ವಸನಗಳಿ ಗ್ಹಿಡಿವಳೆಂದರಿಯುತಲಿ | ಸಡಗರದಿ ಹಿಡಿವಳೆಂದರಿಯುತಲಿ ಕರವ ಪಿಡಿವ ತನ್ನ ಮಡದಿಯ ಕಂಡರೆ ಸಿಡಿಮಿಡಿಗÀುಟ್ಟುವನು | ನಿರ್ಘೃಣನಿವ ಸಿಡಿಸಿಡಿ ಗುಟ್ಟುವನು 6 ರಾಯರೆ ನಿಮ್ಮ ಸಹಾಯ ಹೊರತು ಕಾಣೆನೆನಲು ಕಾಯುವ ಧಣಿ ನಾರಾಯಣನೆನುತಲಿ ನುಡಿಯುವನು 7 ಈ ಧನವೆ ದೊಡ್ಡ ಸಾಧನವೆನ್ನುವ ಮೇಧಾವಿಯು ಇವನು | ಓದಲರಿಯದ ಮೇಧಾವಿಯು ಇವನು ಪಾದ ಕಮಲದಲಿ ಆದರವರಿಯನಿವ | ಎಂದೆಂದಿಗು ಆದರವರಿಯನಿವ 8 ಘನತೆಯು ಬೇಡವು ಜನತೆಯು ಬೇಡವು ಧನವಿದ್ದರೆ ಸಾಕು | ಈ ನರನಿಗೆ ಧನವಿದ್ದರೆ ಸಾಕು ಮನುಜ ಮುಟ್ಟದ ಗುಬ್ಬಿಯನನುಕರಿಸುತ ಜೀ ವನವನು ಕಳೆಯುವನು | ಕ್ಲೇಶದಿ ಜೀವನವನು ಕಳೆಯುವನು9 ಗಳಿಸಿದವನ ಧನ ಬಳಸಿದವನಿಗೆಂಬ ಮುಳುಗಿ ಮುಳುಗುತಿರುವ | ಕ್ಲೇಶಗಳಲಿ ಮುಳುಗು ಮುಳುಗುತ್ತಿರುವ 10 ಭುಜಗಶಯನ ಹರಿ ಸುಜನರು ತನ್ನನು ಅಜನೆಂದು ಕರೆಯುತಿರೆ | ಸೃಷ್ಟೀಶನ ಅಜನೆಂದು ಕರೆಯುತಿರೆ ತ್ಯಜಿಸದೆ ಹೆಸರನು ಅಜಗಳ ಸ್ತನದಂತೆ ಸೃಜಿಸಿದನೀ ಜನರ | ಪ್ರಸನ್ನ ಹರಿ ಸೃಜಿಸಿದನೀ ಜನರ 11
--------------
ವಿದ್ಯಾಪ್ರಸನ್ನತೀರ್ಥರು
ಲೋಲನೇಳುವದಕಿನ್ನ ಮುನ್ನ ಪ ತಾಳಮೇಳದವರೆಲ್ಲಿ ಬಂದು ದ್ವಾರ ದೊಳು ಸೇರಿ ಪಾಡುತಿಹರೊ ನಿಂದು 1 ಸುರರು ಸಭೆ ಯಲಿ ಬಂದಾಗಲೆ ಓಲೈಸುತಲಿಹರು 2 ತಡಮಾಡಬೇಡಯ್ಯ ನೀನು ನಿನ್ನ ಒಡೆಯನೆದ್ದು ನಿನ್ನನು ಕೂಗ್ಯಾನೊ 3 ಕಪಿಯಾಗಿ ನೀ ಪುಟ್ಟಬೇಕಂತೆ ತಾನು ವಿಪಿನವಾಸಕಾಗಿ ತೆರಳುವನಂತೆ 4 ಶರಧಿಯ ನೀ ದಾಟಬೇಕಂತೆ ಅಲ್ಲಿ ಸಿರಿಗೆ ಮುದ್ರೆಯ ನೀನೀಯಬೇಕಂತೆ 5 ದುರುಳನ ಪುರವ ನೀನುರುಹಬೇಕಂತೆ ಅವನ ಪರಿವಾರವೆಲ್ಲವ ನೀ ತರಿಯಬೇಕಂತೆ 6 ಕುಂತೀಲಿ ನೀ ಪುಟ್ಟಬೇಕಂತೆ ತಾನು ಕಂತುವಿಗೆ ಪಿತನಾಗುವನಂತೆ 7 ಮಗಧ ಮುಖ್ಯರ ನೀ ಸೀಳಬೇಕಂತೆ ದೇವ ಜಗಕೆ ಮಂಗಳವ ನೀ ಮಾಡಬೇಕಂತೆ 8 ದುರುಳ ದುಶ್ಶಾಸನನ ಇರಿಯಬೇಕಂತೆ ಅವನ ಕರುಳ ನಿನ್ನರಸಿಗೆ ಮುಡಿಸಬೇಕಂತೆ 9 ಮುದ್ದು ಭಾರತಿಯ ನೀ ಬಿಡಬೇಕಂತೆ ನೀನು ಹೊದ್ದು ಕಾವಿಬಟ್ಟೆ ಯತಿಯಾಗಬೇಕಂತೆ 10 ಅದ್ವೈತ ಮತವನು ನೀ ಖಂಡ್ರಿಸಬೇಕಂತೆ ಗುರು ಮಧ್ವಮುನಿಯೆಂದು ನೀ ಮೆರೆಯಬೇಕಂತೆ 11 ಬದರಿಕಾಶ್ರಮಕೆ ಪೋಗಬೇಕಂತೆ ಅಲ್ಲಿ ಬಾದರಾಯಣನಾಗಿ ತಾನಿರ್ಪನಂತೆ 12 ಹಿಂಗದೆ ಶ್ರೀಶನ ನೀ ನುತಿಸಬೇಕಂತೆ ಸಿರಿ ರಂಗೇಶವಿಠಲ ನಿನಗೊಲಿದಿಹನಂತೆ 13
--------------
ರಂಗೇಶವಿಠಲದಾಸರು
ಲೌಕಿಕ ಸಂದರ್ಭದ ಹಾಡು ಯಾತಕೆ ಹೋದೆವು ದುರುಳನ ಮನೆಗೆ ಪಾತಕಿ ಇವನು ಛೇ ಛೇ ಛೇ ಪ ಏಳು ಬಿಲ್ಲಿಯ ಕೊಡಲಿಕ್ಕೆ ಬಂದ ಖೂಳನಿವನು ಈ ಮನೆಯೊಳಗೆ ತಾಳಲಾರದೆ ಬೀಸಾಟಿ ಬಂದೆನು ಶ್ರೀಲತಾಂಗಿಯ ರಮಣ ಗೋವಿಂದಾ 1 ಗುಂಡಪ್ಪನು ಯಾಗುಂಡಪ್ಪನು ರುಬು ಗುಂಡಪ್ಪನು ನಾನಿವನರಿಯೆ ಮಂಡರಂತೆ ದಿನಗಳಿವುತಲಿ ನಮ ಕಂಡು ಮಾನ್ಯ ಮಾಡದೆ ಹೋದನು 2 ಹರಿಸರ್ವೋತ್ತಮನೆಂದು ಝಾಂUಟಿ ಬಾರಿಪ ದಾಸರು ನಾವ್ ಹೌದು ವರ ಕದರುಂಡಲುಗೀಶನ ಒಡೆಯ ನಮ್ಮ ಪಾಂ- ಡುರಂಗನ ದಾಸನೆಂದು ತಿಳಿಯದಲೆ 3
--------------
ಕದರುಂಡಲಗೀಶರು
ವಂಚನೆಲ್ಲಿಹುದಯ್ಯ ವೈಕುಂಠಪತಿ ಗೊಂಚನೆಲ್ಲಿಹದಯ್ಯ ಪ ವಂಚನೆಲ್ಲಿಹ್ಯದು ವಿರಂಚಿತಾತನಿಗೆ ಕಿಂಚಿತ್ತು ಧ್ಯಾನಕ್ಕಾಗೊಂಚನಿಲ್ಲದೆ ಬಂದ ಅ.ಪ ಚರಣದಾಸರೆಂದು ಪಾಂಡವರ ತುರಗಕಾಯ್ದ ನಿಂದು ನರಗೆ ಬೆಂಬಲನಾಗಿ ತಿರುಗಿದ ಧುರದಲಿ ಜರ ಮರೆಯಾಗದೆ ಪರಮಕರುಣಾಕರ 1 ಜಾಗುಮಾಡುತಲಿವ ಭಕ್ತರ ಯೋಗಕ್ಷೇಮ ತಿಳಿವ ನೀಗದಂಥ ಮಹಾಭೋಗಭಾಗ್ಯವಿತ್ತು ಬಾಗಿಲ ಕಾಯ್ದನು ಸಾಗರನಿಲಯ 2 ಜಾರನೆನಿಸಿಕೊಂಡ ಒಲಿದು ಚೋರನೆನಿಸಿಕೊಂಡ ತೋರಿದವರ ಮನಸಾರ ವರವಿತ್ತು ಭೂ ಭಾರವಿಳುಹಿದ ನಮ್ಮ ಧೀರ ಶ್ರೀಗುರುರಾಮ 3
--------------
ರಾಮದಾಸರು
ವಂದನೆ ಮಾಡಿರೈ ವ್ಯಾಸ ಮುನೀಂದ್ರರ ಪಾಡಿರೈ ಪ ವಂದಿಸುವರ ಭವಬಂಧವ ಬಿಡಿಸಿ ಆ ನಂದವ ಕೊಡುವ ಕರ್ಮಂದಿವರೇಣ್ಯರ ಅ.ಪ ಸದ್ಗುಣ ಸಾಂದ್ರಾ ಚಂದ್ರಿಕಾದಿ ಪ್ರಬಂಧತ್ರಯ ನಿರ್ಮಿಸಿದಾ ಮತವರ್ಧಿಸಿದಾ ಸತಿ ಮೆಚ್ಚಿಸಿದಾ ಹಿಂದಕೆ ಹರಿಯನು ಸ್ತಂಭದಿ ತೋರಿದ ಕಂದ ಪ್ರಹ್ಲಾದರೆ ಬಂದಿಹರೆನ್ನುತ 1 ಕೃಷ್ಣರಾಯನಿಗೆ ದುಷ್ಟಯೋಗ ಪರಿಹರಿಸಿ ರಾಜ್ಯವಹಿಸಿ ಯ- ಥೇಷ್ಟ ದಾನಫಲಕೊಟ್ಟು ನೃಪನನುಗ್ರಹಿಸಿ ರಾಜ್ಯದೊಳಿರಿಸಿ ಶ್ರೇಷ್ಠವಾದ ಸಿಂಹಾಸನದಲಿ ಕುಳ್ಳಿರಿಸಿ ಆಜ್ಞೆಯ ತಿಳಿಸಿ ಎಷ್ಟು ಮಹಿಮರೆಂದರಿತು ಇವರ ಮನ ಮುಟ್ಟಿ ಭಜಿಪರಿಗ ಭೀಷ್ಟೆಯಗರಿವರ 2 ಸೂರ್ಯಯತಿ ಕುಲ- ವರ್ಯ ಗುರುಮಧ್ವಮ ತದಿಸದ್ವೈಷ್ಣವ ಕುಮುದಕೆ ಭಾರ್ಯಾ ಪಾವನ ಚರ್ಯ ಪರಮಮಹಿಮ ಬ್ರಹ್ಮಣ್ಯ- ತೀರ್ಥರಿಗೆ ತನಯಾ ಕವಿಜನಗೇಯಾ ಶರಣರ ಪೊರಿಯುವ ಶಿರಿಕಾರ್ಪರನರಹರಿಯ ನೊಲಿಸಿರುವ ಪರಮ ಮಹಾತ್ಮರ3
--------------
ಕಾರ್ಪರ ನರಹರಿದಾಸರು
ವಂದನೆಯ ಮಾಡುವೆ ಶ್ರೀಗುರುವಿಗೆ- ವಂದನೆಯ ಮಾಡುವೆÀ ಪ ವಂದನೆ ಮಾಡುವೆನಿಂದು ಯದುಶೈಲದೋಳ್ ಚಂದದೊಳಿರುತಿಹ ತಂದೆ ನಾರಾಯಣಗೆ ಅ.ಪ ಹರುಷದಿಂದಲಿ ಇನ್ನು ಹರಸಿ ಸಜ್ಜನರಿಗೆ ವರಗಳ ಕೊಡುತಿಹ ವರಲಕ್ಷ್ಮಿ ತಾಯಿಗೆ 1 ಹಿರಿದಾದ ದೈತ್ಯನ ಸೀಳಿ ಸಂತೋಷದಿ ಮೊರೆಹೊಕ್ಕ ಕಂದನ ಪೊರೆದ ನರಸಿಂಹಗೆ 2 ಪಾವನತರಮಾದ ದೇವಸಮೂಹವ ಕಾವ ಕೃಪಾನಿಧಿ ಕಲ್ಯಾಣಮ್ಮಗೆ 3 ವಿಸ್ಫುರಿತದಲ್ಲಿರ್ಪ ವೈರ್ಮುಡಿ ತಿರುಮಣ್ಣು ಸರ್ಪಶಯನಗರ್ಪಿಸಿದಂತ ಗರುಡಗೆ 4 ಶ್ರೀಲೋಲನಡಿಗಳ ಲೀಲಾಮೃತಗಳ ಶೀಲರಾಗಿ ಕುಡಿದ ಶ್ರೇಷ್ಠ ಆಳ್ವಾರ್ರಿಗೆ 5 ವರದವಿಠಲನ ಒಲಿದು ತಾ ಬಂದಿನ್ನು ಗಿರಿಯೊಳು ನೆಲೆಸಿದ ವರ ಗುರುಪೀಠಕೆ 6 ಪಂಕಜಾಕ್ಷನಪಾದಪಂಕಜ ನಂಬಿಹ ವೆಂಕಟಪುರದೊಳಗಿರುವ ವೈಷ್ಣವರಿಗೆ 7 ವಿಷ್ಣುವಿನಂಶದಿ ಪುಟ್ಟಿ ಸಂತೋಷದಿ ಸೃಷ್ಟಿಯನಾಳ್ವ ಶ್ರೀ ಕೃಷ್ಣಭೂಪಾಲಗೆ8 ಮರೆಯದೆ ಭಕ್ತರ ಕರುಣದಿಂದಲಿ ಕಾಯ್ವ ವರಮಹದೇವನ ಪುರದಶ್ರೀರಂಗಗೆ 9
--------------
ರಂಗದಾಸರು