ಒಟ್ಟು 8803 ಕಡೆಗಳಲ್ಲಿ , 129 ದಾಸರು , 4024 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮದ್ದು ಮಾಡಲರಿಯಾ ಮುದ್ದು ರಮಾದೇವೀ ಪ.ಮುದ್ದು ಕೃಷ್ಣನಲ್ಲಿ ಮನ ಸಿದ್ಧವಾಗಿ ನಿಲ್ಲುವಂತೆ ಅಪವಚನಗಳೆಲ್ಲ ವಾಸುದೇವನ ಕಥೆಯೆಂದುರಚನೆ ಮಾಡುವರಲ್ಲಿರಕ್ತಿನಿಲ್ಲುವ ಹಾಗೆ1ಸಂತೆ ನೆರಹಿಸತಿ ಸುತರು ತನ್ನವರೆಂಬಭ್ರಾಂತಿ ಬಿಟ್ಟು ನಿಶ್ಚಿಂತನಾಗುವ ಹಾಗೆ 2ಎನ್ನೊಡೆಯಸಿರಿ ಪುರಂದರವಿಠಲನಸನ್ಮತಿಯಿಂದೆ ಹಾಡಿ ಪಾಡುವ ಹಾಗೆ 3
--------------
ಪುರಂದರದಾಸರು
ಮಧ್ಯರಾತ್ರಿಯೊಳೀಗ ನಾ ನಿದ್ದೆಯೊಳಿರೆ ಬಾಗಿಲು |ಸದ್ದು ಮಾಡಿ ವೊತ್ತಿದವರಾರೈ | ಬಾಳ್ವರಿಗಿದುಬುದ್ಧೆ ಹೆಣ್ಣೋ ಗಂಡೋ ಪೇಳಿರೈ ಪಮೇದಿನಿಯೊಳು ಪ್ರಸಿದ್ಧವಾದ ತುಂಗಮಹಿಮ ಶ್ರೀ |ಮಾಧವಬಂದಿಹೆ ಕೇಳೆಲೆ | ಆದರೊಳ್ಳಿತುಮದನನೊಳಾಡಲಿ ಹೋಗೆ 1ಹೇ ಸಖಿ ವಿಚಾರ ಮಾಡೆ ವಸಂತನಲ್ಲವೆ | ಸರ್ವದೇಶ ಬಲ್ಲದು ನಾಚಕ್ರಿಯೆ | ಇಲ್ಲಿ ಬೇಕಿಲ್ಲಆ ಸಂತಿಯೊಳಿಟ್ಟು ಮಾರೊದೈ 2ಉತ್ತಮಗಂಬುವದಲ್ಲೆ ವೈತ್ತಿಕೆ ತುಳಿವನೆಂದುಧರೆ|ಹೊತ್ತವ ಕೇಳೆಲೆ ಸುಂದರಿ | ಒಳ್ಳೆದು ನಿನ್ನಹುತ್ತಿನೊಳು ವಾಸ ಮಾಡೊದೈ3ಸರ್ಪನಲ್ಲವೆ ಅಖಂಡಲ ದರ್ಪ ತಗ್ಗಿಸಿದವ ಸ- |ಮರ್ಪಕವಾಯಿತೇನೆ ಮನಕೆ | ಮರದ ಗೂಡೊಳುತೆಪ್ಪನೆ ಸೇರುವುದೇ ಬಹು ಲೇಸೈ 4ಸೂರಿಗಳೆಲ್ಲರು ಯನ್ನ ಕೀರುತಿ ಬಲ್ಲರುಹುದಲ್ಲ |ನಾರೀಮಣಿಹರಿಬಂಧಿನಿ ಕೇಳೆ | ಮನಗಳಲ್ಲಿ ವಿ-ಹಾರ ಮಾಡುವುದೇ ಲೇಸೈ 5ತರುಗಳಲ್ಲಿಹೊದಕ್ಕೆ ವಾನರನಲ್ಲೆ ಜನನಾದಿ ದೋಷ |ವಿರಹಿತ ನಾರಾಯಣ ಬಂಧಿನೆ | ಈ ನಾಮಕ್ಕಿನ್ನು-ತ್ತರವೇನು ಇದ್ದರೆ ಪೇಳೆ ಗುಣಧೀ 6ನಾನರಿತೆನೀಗ ದೇವ ಪ್ರಾಣೇಶ ವಿಠಲನೆಂಬೊದು |ಏನಾಡಿದಾಪದ್ಧವನು ಕ್ಷಮಿಸೈ | ತನುವೆ ನಿನ್ನದುಮಾನದಿಂದೆನ್ನನು ರಕ್ಷಿಸೈ 7
--------------
ಪ್ರಾಣೇಶದಾಸರು
ಮಧ್ವಮುನಿಮನಮಂದಿರನಿವಾಸ ಸಿರಿಕೃಷ್ಣಶುದ್ಧರಿಗೆ ಸದ್ಗತಿ ಮಿಶ್ರರಿಗೆ ಮಧ್ಯವುಸತ್ವರಿಗೆ ನವವಿಧ ಭಕುತಿಯನೆ ತೋರಿಸಿಒಬ್ಬರ ಕರ್ಮದಲಿ ಒಬ್ಬರು ರತರಾಗೆದೇಹ ಸಂರಕ್ಷಣೆಯಲ್ಲಿ ಇನ್ನುದುಷ್ಟಜೀವ ದುಷ್ಟಶಾಸ್ತ್ರ ದುಷ್ಟಕರ್ಮಗಳಿನ್ನುಈ ವಿಧದಲಿನಿತ್ಯಪೊರೆದು ಎನ್ನ ಮರೆದೆ
--------------
ಗೋಪಾಲದಾಸರು
ಮಧ್ವಮುನಿಯೆ -ಗುರು- ಮಧ್ವಮುನಿಯೆಪಮಧ್ವಮುನಿ ನಮ್ಮೆಲ್ಲರ | ಉದ್ಧರಿಸುವ ಕಾಣಿರೊ ಅ.ಪಅಂದು ಹನುಮಂತನಾಗಿ | ಬಂದ ರಾಮಪದಾರ-ವಿಂದದಿ ನೆರೆದು ತುಂಬಿಯಂದದಿ ಶೋಭಿಸಿದ 1ಏಣಾಂಕವಂಶದಿ ಪುಟ್ಟಿ | ಕ್ಷೋಣಿಪಾಲಕ ಶಿರೋಮಾಣಿಕ್ಯವಾಗಿ ಹರಿಗೆ | ಪ್ರಾಣನೆಂದೆನಿಸಿಕೊಂಬ 2ಕಟ್ಟಕಡೆಯಲ್ಲಿ ಯೋಗ | ದಿಟ್ಟನಾಗಿಪುರಂದರ|ವಿಠಲಗಾವಾಸವಾದ | ಪೆಟ್ಟಿಗೆಯೊಲೊಪ್ಪುವಂಥ 3
--------------
ಪುರಂದರದಾಸರು
ಮನವೆ ಚಂಚಲ ಮತಿಯ ಬಿಡು - ನಮ್ಮ |ವನಜನಾಭನ ಪಾದಭಜನೆಯಮಾಡುಪ.ಬಡಮನುಜಗೆ ಬಾಯಬಿಡುವ ದೈನ್ಯದಲವನ |ಅಡಿಗಳಿಗೆರಗಲು ಕೊಡುವನೇನೊ ||ಕಡಲಶಯನ ಜಗದೊಡೆಯನ ನೆನೆಯಕ್ಕೆ - |ಪಿಡಿದು ತಾ ಸಲಹುವ ಬಿಡದಲೆಅನುಗಾಲ1ಬಲ್ಲಿದ ಭಕುತರ ಬಲ್ಲವ ಬಹುಸಿರಿ |ಯುಳ್ಳ ಕರುಣಿ ಲಕ್ಷ್ಮೀನಲ್ಲನಿರೆ ||ಕ್ಷುಲ್ಲಕರನು ಕಾಯಸಲ್ಲದೆಂದೆಂದಿಗುನಿಲ್ಲು ಹರಿಯ ಪಾದದಲ್ಲಿ ತಲ್ಲಣಿಸದೆ 2ಮುಗಿಲು ಮೇಲದೆಗಡೆ ಅಗಣಿತವಾದಾಪ - |ತ್ತುಗಳು ಬಂದಡರಲು ನಗುತಲಿರು ||ಜಗದಧೀಶನ ಮಹಿಮೆಗೆ ನಮೋ ನಮೋ ಎಂದು |ಪೊಗಳುತ ಬಾಳು ನೀ ಅಘಗಳ ಗಣಿಸದೆ 3ಆವಾವ ಕಾಲಕೆ ದೇವನಿಚ್ಛೆಯಿಂದ |ಆವಾವುದು ಬರೆ ನಿಜಸುಖವೆನ್ನು ||ಶ್ರೀವರ ಅನಾದಿಜೀವರ ಕ್ಲಪ್ತದಂತೆ |ಈವನು ನಿಜಸ್ವಭಾವ ಬಿಡದೆನಿತ್ಯ4ಕೇಶವಾಚ್ಯುತ ಶ್ರೀನಿವಾಸ ಮುರಾರೇ |ದೋಷರಹಿತ ದೀನ ಪೋಷಕನೆನ್ನು ||ಮೋಸಗೊಳಿಪ ಭವಪಾಶವ ಖಂಡಿಪ |ಶ್ರೀಶ ಪುರಂದರವಿಠಲನು ಜಗಕಿರೆ 5
--------------
ಪುರಂದರದಾಸರು
ಮನುಜ ಶರೀರವಿದೇನು ಸುಖ - ಇದನೆನೆದರೆ ಘೋರವಿದೇನು ಸುಖ ? ಪ.ಜನನ - ಮರಣ ಮಲಕೂಪದಲ್ಲಿದ್ದುಅನುಭವಿಸುವುದು ಇದೇನು ಸುಖ ?ತನುವಿದ್ದಾಗಲೇ ಹೃದಯದ ಶೌಚದಸ್ತನಗಳನುಂಬುವುದೇನು ಸುಖ ? 1ದಿನವು ಹಸಿವುತೃಷೆಘನ ರೋಗಂಗಳಅನುಭವಿಸುವುದು ಇದೇನು ಸುಖನೆನೆಯಲುನಿತ್ಯ ನೀರ್ಗುಳ್ಳೆಯಂತಿಪ್ಪತನುಮಲಭಾಂಡವಿದೇನು ಸುಖ ? 2ಪರಿಪರಿ ವಿಧದಲಿ ಪಾಪವ ಗಳಿಸುತನರಕಕೆ ಬೀಳುವುದೇನು ಸುಖ ?ಪುರಂದರವಿಠಲನ ಮನದಿ ನೆನೆದು ಸದ್ಧರುಮದೊಳ್ ನಡೆದರೆ ಆಗ ಸುಖ 3
--------------
ಪುರಂದರದಾಸರು
ಮನೆಯೊಳಗಾಡೊ ಗೋವಿಂದ-ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ಪನೊಸಲಿಗೆ ತಿಲಕವನಿಡುವೆ-ಅಚ್ಚ-|ಹೊಸಬೆಣೆಯಿಕ್ಕಿ ಕಜ್ಜಾಯವ ಕೊಡುವೆ ||ಹಸನಾಧಾಭರಣಗಳಿಡುವೆ-ಚಿಕ್ಕ-|ಹಸುಳೆ ನಿನ್ನನು ನೋಡಿ ಸಂತೋಷಪಡುವೆ 1ಅಣ್ಣಯ್ಯ ಬಲರಾಮಸಹಿತ-ನೀ-|ನಿನ್ನೆಲ್ಲಿಯಾದರೂ ಆಡುವುದು ವಿಹಿತ ||ಹೆಣ್ಣುಗಳೇಕೋ ಸಂಗಾತ-ರಂಗ |ಬಿನ್ನಪಪರಿಪಾಲಿಸೊ ಜಗನ್ನಾಥ2ಜಾರನೆನಿಸಿಕೊಳಲೇಕೆ-ರಂಗ-|ಚೋರನೆನಿಸಿಕೊಂಬ ದೂರು ನಿನಗೇಕೆ ||ವಾರಿಜಾಕ್ಷಿಯರ ಕೂಡಲೇಕೆ-ನಮ್ಮ-|ಪುರಂದರವಿಠಲರಾಯ ಎಚ್ಚರಿಕೆ 3
--------------
ಪುರಂದರದಾಸರು
ಮರತೆ ನೀ ಕಂಡ್ಯ ಮನವೇ ಎಚ್ಚರವುಗುರುವರನ ನೆನೆಯೋ ನೀನುಅರಿತು ಸರ್ವಸರ್ವರಲ್ಲಿ ಆತ ತಾನಿಹನೆಂದುಹಿಂದು ನೆಲೆಗೊಳಿಸು ಬೇಗಪಅಣುಮಹತ್ತಾದನೆಂದುಅನಂತ ಗುಣಗಣನೆಯಾದನೆಂದುಎಣಿಸೆ ಏಕ ದೇವಾದವನಕುಣಿಕುಣಿದು ನೆನೆದು ಆಡುವಾಡು1ಆವಾವಸ್ಥೆಯ ತೋರ್ಪಅವನೆಲ್ಲ ತೀವಿಹನು ಪೂರ್ಣನಾಗಿದೇವದೇವಾದವನ ಧೈರ್ಯದಿಂ ಹೃದಯದಲಿಸಾವಧಾನದಲಿ ನಿಲಿಸು ಬಲಿಸು2ನಿರುಪಮ ನಿರಾಶಾಪರ ನಾನಿಶ್ಚಿಂತ ನಿರುತ ನಿರ್ಲೇಪನಾಪರಮಪಾವನಮೂರ್ತಿಪದ್ಮಾವತಿ ಶತಕೋಟಿವರಚಿದಾನಂದ ಗುರುವಾ ಸ್ಥಿರವಾ3
--------------
ಚಿದಾನಂದ ಅವಧೂತರು
ಮರವನು ನುಂಗುವ ಪಕ್ಷಿ ಮನೆಯೊಳಗೆ ಬಂದಿದೆ ಪ.ಒಂಟಿ ಕೊಂಬಿನ ಪಕ್ಷಿ ಒಳಗೆ ಕರುಳಿಲ್ಲಗಂಟಲು ಮೂರುಂಟು ಮೂಗು ಇಲ್ಲಕುಂಟು ಮನುಜನಂತೆ ಕುಳಿತಿಹುದು ಮನೆಯೊಳಗೆಎಂಟು ಹತ್ತರ ಭಕ್ಷ ಭಕ್ಷಿಸುವುದು 1ನಡುವೆ ತಲಿಯೆಂಬುವದು ನಡು ನೆತ್ತಿಯಲಿ ಬಾಯಿಕಡು ಸ್ವರಗಳಿಂದ ಗಾನ ಮಾಡ್ವದುಅಡವಿಯಲಿ ಹುಟ್ಟುವುದು ಅಂಗವೆರಡಾಗುವುದುಬಡತನ ಬಂದರೆ ಬಹಳ ರಕ್ಷಿಪುದು 2ಕಂಜ ವದನೆಯರ ಕರದಲ್ಲಿ ನಲಿದಾಡುವುದುಎಂಜಲನುಣಿಸುವುದು ಮೂರ್ಜಗಕೆರಂಜಿಪಶಿಖಾಮಣಿ ಸಿಂಹಾಸನದ ಮೇಲಿಪ್ಪಸಂಜೀವ ಪಿತ ಪುರಂದರವಿಠಲನೇ ಬಲ್ಲ * 3
--------------
ಪುರಂದರದಾಸರು
ಮರವೆ ಎಂಬುದು ಎಲ್ಲಿಹುದೋ ಯೋಗಿಗೆಮರವೆ ಎಂಬುದು ಎಲ್ಲಿಹುದೋಅರಿತು ಸರ್ವವ ಸರ್ವದಲಿ ಆತ್ಮ ತಾನಾಗಿರ್ದುನಿರುತ ಕಾಲದಿ ಮುಕ್ತಗೆ ಅವಗೆಪನಿರ್ವಿಕಲ್ಪಸಮಾಧಿನಿತ್ಯನಿತ್ಯಳವಟ್ಟುದುರ್ವಿಘ್ನಗಳೆಜರಿದುಗರ್ವದೂರವಾಗಿ ಗಾಢ ತೂರ್ಯದೊಳಿದ್ದುನಿರ್ವಹಿಸಿ ನಿಜಸುಖವನುಪರ್ವಿಪಸರಿಸಿ ತನಗೆ ಪ್ರತಿಗಾಣುತಿರುತಿಪ್ಪಸರ್ವಸಾಕ್ಷಿ ತಾನಾದವಗೆ1ನಾದದೊಳು ಕಿವಿಯಿಟ್ಟು ನಾಸ್ತಿಮನವಸಿಮಾಡಿಬೋಧೆ ಬಲಿದಾ ಲಹರಿಯಹಾದಿಯಂತುಟೋ ಅಂತು ಹರಿದಾಡುತಲಿ ತಾಭೇದಾ ಭೇದಗಳನುಳಿದುಸಾಧು ಸಂಗವ ಕೂಡಿ ಸಂತುಷ್ಟನಾಗಿಪ್ಪನಾದ ಮೂರುತಿಯಾಗೆ2ಪರಮಸಾರವ ತಿಳಿದು ಪರಿಪೂರ್ಣನಾಗಿರುತವರಚಿದಾನಂದ ಗುರುವೆಚರಣಸ್ಮರಣೆಯ ಮನದಿ ಚಲಿಸದಂತಾವಾಗಹಿಡಿದು ನಾಲಗೆಯೊಳಿರಿಸಿಗುರುವೆ ಗುರುವೆ ಎಂದು ತಾನಾಗಿರ್ದುನಿರತಿಶಯದ ಪರಮಗೆ3
--------------
ಚಿದಾನಂದ ಅವಧೂತರು
ಮರುಳು ಮಾಡಿಕೊಂಡೆಯಲ್ಲೇ - ಮಾಯಾದೇವಿಯೆ ಪಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಪ್ಪಂತೆ ಅ.ಪಜಾÕನಿಗಳುನಿತ್ಯಅನ್ನ-ಪಾನದಿಗಳನ್ನು ಬಿಟ್ಟು |ನಾನಾವಿಧ ತಪವಿದ್ದರು-ಧ್ಯಾನಕೆ ಸಿಲುಕದವನ 1ಸರ್ವಸಂಗವ ಬಿಟ್ಟು ಸಂ-ನ್ಯಾಸಿಯಾದ ಕಾಲಕು |ಸರ್ವದಾ ತನ್ನೆದೆಯ ಮೇಲೆ ಬಿಡದೆ ನಿನ್ನ ಧರಿಸಿಪ್ಪಂತೆ 2ಪ್ರಳಯಕಾಲದಲ್ಲಿ ಆಲ-ದೆಲೆಯ ಮೆಲೆ ಮಲಗಿದ್ದಾಗ |ಹಲವು ಆಭರಣಂಗಳು-ಜಲವು ಆಗಿ ಜಾಣತನದಿ 3ರಂಗನು ಭುಲೋಕದಿ-ಭುಜಂಗ ಗಿರಿಯೊಳಾಲ ಮೇಲು |ಮಂಗಪತಿಯಾಗಿ ನಿನ್ನ-ಅಂಗೀಕರಿಸುವಂತೆ 4ಮಕ್ಕಳ ಪಡೆದರೆ ನಿನ್ನ-ಚೊಕ್ಕತನವು ಪೋಪುದೆಂದು |ಪೊಕ್ಕುಳೊಳು ಮಕ್ಕಳ ಪಡೆದು-ಕಕ್ಕುಲಾತಿ ಪಡುವಂತೆ 5ಎಡಕೆ ಭೂಮಿ ಬಲಕೆ ಶ್ರೀಯು-ಎದುರಿನಲ್ಲಿ ದುರ್ಗಾದೇವಿ |ತೊಡೆಯ ಮೇಲೆ ಲಕುಮಿಯಾಗಿ- ಬಿಡದೆ ಮುದ್ದಾಡುವಂತೆ 6ಎಂದೆಂದಿಗೂ ಮರೆಯೆ ನಿನ್ನಾ-ನಂದದಿ ಜನರಿಗೆಲ್ಲ |ತಂದು ತೋರೇ ಸ್ವಾಧೀನ ಪು-ರಂದರವಿಠಲ ಹರಿಯ 7
--------------
ಪುರಂದರದಾಸರು
ಮರೆತೆಯೇನೋ ರಂಗ-ಮಂಗಳಾಂಗ ಪಕೋಲು ಕೈಯಲಿ ಕೊಳಲು, ಜೋಲುಗಂಬಳಿ ಹೆಗಲ |ಮೇಲೆ ಕಲ್ಲಿಯ ಚೀಲ ಕಂಕುಳಲಿ ||ಕಾಲಿಗೆ ಕಡಗವು ಕಾಯುತ ಹಸು ಹಿಂಡ |ಬಾಲಕರ ಮೇಳದಿ ಇದ್ದೆಯೊ ರಂಗ 1ಕಲ್ಲುಮಣಿ ಕವಡಿ ಚೆನ್ನೆ ಗುಳ್ಳೆಗುಂಜಿ ಒಡವೆ |ಎಲ್ಲವು ನಿನ್ನ ಸರ್ವಾಂಗದಲಿ ||ಅಲ್ಲಲ್ಲಿಗಳವಟ್ಟು ನವಿಲುಗರಿಯ ದಂಡೆ |ಗೊಲ್ಲ ಮಕ್ಕಳ ಕೂಡೆ ಸಲ್ಲಾಪವಾಡುತೆ 2ಸಿರಿದೇವಿ ಬಂದು ಸೇರಿದ ಬಳಿಕ ಲೋಕದೊಳಗೆ |ಸಿರಿಯರಸನೆಂಬುವರು ||ವರಮುಖ್ಯ ಪ್ರಾಣವಂದಿತ ಉಡುಪಿಯ |ಸಿರಿಪುರಂದರವಿಠಲ ಶ್ರೀ ಕೃಷ್ಣ* 3
--------------
ಪುರಂದರದಾಸರು
ಮರೆಯದಿರು ಮರೆಯದಿರು ಗುರುರಾಯನ |ಲೋಕ ಪರಿಪಾಲಿಸುವಗುರುಸಾರ್ವಭೌಮನ್ನಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮೇಶ್ವರನು ತಾನೆಪರಮಪ್ರೇಮದಿಂದಗುರುರೂಪವನುಧರಿಸಿ ಧರೆಗೆ ಬಂದು, ತ್ವರದಿಂದ ಮಾನವರ ಮರವೆಯನುಪರಿಹರಿಸಿ | ಸ್ಥಿರ ಮುಕ್ತಿ ಸುಖವಿತ್ತು ಪೊರೆವ ಗುರುವರನ1ಕರುಣದಿಂ ಜನರ ರಕ್ಷಿಸುವ ಸದ್ಗುರುವರನ | ಶರಣು ಪೊಕ್ಕರೆಕೃಪಾ ಸುಧೆಗರೆವನ | ನಿರುತದಲಿ ಭಕುತರಿಗೆ |ನಿರತಿಶಯಸೌಖ್ಯವನು ಸರಿದಂತೆ ವರವಿತ್ತು | ಮೆರೆವ ದೇಶಿಕನ2ಕುವರ ಬಾರೆಂದಭಯಕರವಶಿರದಲ್ಲಿರಿಸಿ |ನೆರೆಸುಬೋಧೆಯಗೈದು ನರಭಾವ ಕಳೆದು |ಮರಣ ಭಯ ಹರಸಿ | ಬಹು ಹರುಷದಿಂದಿರುಎಂದ ಚಿರ ಸಿಂಧುಗಿಯವಾಸ |ಗುರುಶಂಕರನಪಾದ3
--------------
ಜಕ್ಕಪ್ಪಯ್ಯನವರು
ಮರೆಯದಿರೆಲೆ ಮನವಿಲ್ಲಿ - ಯಮಪುರಿಗೆ ಒಯ್ದು ಬಾಧಿಸುತಿಹರಲ್ಲಿ ಪ.ಪರನಾರಿಯರ ಸಂಗವಿಲ್ಲಿ - ಉಕ್ಕುಎರೆದ ಸತಿಯರ ತಕ್ಕೈಸುವರಿಲ್ಲಿಗುರು - ಹಿರಿಯರ ನಿಂದೆಯಿಲ್ಲಿ - ಬಾಯೊಳೆರದು ಸೀಸವ ಕಾಸಿ ಹೊಯಿಸುವರಿಲ್ಲಿ 1ಉಂಡ ಮನೆಯ ಕೊಂಬುದಿಲ್ಲಿ - ಎದೆಗುಂಡಿಗೆಯನು ಸೀಳಿ ಕೊಲುತಿಹರಲ್ಲಿಗಂಡನ ದಣಿಸುವುದಿಲ್ಲಿ - ಯಮಕುಂಡದೊಳಗೆ ಹಾಕಿ ಕುದಿಸುವರಲ್ಲಿ 2ಚಾಡಿಯ ಹೇಳುಸುದಿಲ್ಲಿ - ನುಡಿದಾಡುವ ನಾಲಿಗೆ ಕೇಳುವರಲ್ಲಿಬೇಡಿದರಿಗೆ ಧರ್ಮವಿಲ್ಲಿ - ಇದನೀಡದಿರಲು ಒದ್ದು ನೂಕುವರಲ್ಲಿ 3ಪುಸಿ - ಠಕ್ಕು - ಠವುಳಿಗಳಲ್ಲಿ -ಕಟ್ಟಿಎಸೆದು ಕೊಲ್ಲುವರೊ ನಿನ್ನವರು ಕೇಳಿಲ್ಲಿಅಶನಪ್ರಭದಿಗಳಲ್ಲಿ - ಮಾಡೆಬಿಸಿಯ ಕೆಂಡವ ತಂದು ತಿನಿಸುವರಲ್ಲಿ 4ಸಿರಿಮದದೊಳಗಿಹುದಿಲ್ಲಿ - ಸೊಕ್ಕಮುರಿದು ಹಲ್ಲುಗಳ ಕಳಚುವರಲ್ಲಿಪುರಂದರವಿಠಲನ ಇಲ್ಲಿ - ನೆನೆಯಸ್ಥಿರವಾದ ಮುಕುತಿ ಪಡಕೊಂಬುವರಲ್ಲಿ 5
--------------
ಪುರಂದರದಾಸರು
ಮಲವು ತೊಳೆಯಬಲ್ಲುದೆಮನವ ತೊಳೆಯದನಕ ಪಹಲುವು ನೀರಿನೊಳಗೆ ಪೊಕ್ಕುಹಲುಬಿದರಿನ್ನೇನು ಫಲ? ಅಪಬೋಗಫಲವನುಂಡು ವಿಷಯ ಭೋಗದಿಂದ ಮತ್ತರಾಗಿಭೋಗಬೇಡಿ ಜನರು ಜೀವಕಾಗಿ ಮುನಿವರುಯೋಗಿಯಂತೆ ಜನರ ಮೆಚ್ಚುಗಾಗಿ ಹೋಗಿ ಉದಯದಲ್ಲಿಕಾಗೆಯಂತೆ ಮುಳುಗಿದರೆ ಅಮೋಘ ಫಲವು ಬಾಹೊದೆ? 1ಪರರ ಕೇಡಬಯಸಿಗುರು - ಹಿರಿಯರನ್ನು ನಿಂದಿಸುತಪರಮ ಸೌಖ್ಯದಿಂದ ಪರಸ್ತ್ರೀಯರನ್ನ ಆಳುತಪರಮಯೋಗನಿಷ್ಟೆಯೆಂದು ಧರೆಯ ಮೇಲೆ ಡಂಭತೋರಿಹರಿವ ನದಿಯ ತೀರದಲ್ಲಿ ಪರಿಯು ಬಕ ಧ್ಯಾನದಂಥ 2ತಂದೆ - ತಾಯಿ ತಿರುತಿನ್ನಲು ಒಂದು ದಿವಸ ಕೇಳಲಿಲ್ಲಮಂದಗಮನೆಯರೊಡನೆ ಆನಂದದಿಂದ ನಲಿಯುತತಂದೆಯ ಹೆಸರಿನಿಂದ ನೂರು ಮಂದಿಗುಣಿಸಿ ಹರುಷದಿಂದತಂದೆ ತೃಪ್ತನಾದನೆಂಬ ಮಂದಮತಿಯ ಜನರುಗಳ 3ಕಾಸವೀಸಕ್ಕಾಗಿ ಹರಿಯದಾಸನೆಂದು ತಿರುಗಿ ತಿರುಗಿದೇಶದಿಂದ ದೇಶಕಿಳಿದು ಕಾಶಿಯಾತ್ರೆ ಮಾಡಲುಆಶಾಪಾಶ ಬಿಡದ ಮನದ ಕೂಸಿನಂತೆ ಕಾಡುತಿಪ್ಪವೇಶಧಾರಿಗಳಿಗೆ ಆ ಕಾಶಿಯ ಫಲ ಬಾಹೊದೆ? 4ಏನು ಮಾಡಲೇನು ಫಲ - ಏನು ನೋಡಲೇನು ಫಲಜ್ಞಾನವಿಲ್ಲದಚ್ಯುತನ ಧ್ಯಾನವಿಲ್ಲದವರಿಗೆಮೌನ ನೇಮ ನಿಷ್ಠೆ ಪರಾಧೀನವೆಂಬುದ ತಿಳಿದುಕೊಂಡುದೀನನಾಥ ಪುರಂದರವಿಠಲನ ನಿಲುಕಲೊಲ್ಲದೆ 5
--------------
ಪುರಂದರದಾಸರು