ಒಟ್ಟು 8857 ಕಡೆಗಳಲ್ಲಿ , 132 ದಾಸರು , 5049 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸಸುಗುಣೈಕನಿಧೆ ಶ್ರೀ ಮಾನಸಹಂಸ ದಯಾಜಲಧೇ ಪ ಕಾಯ ಮಾಪಮಧುರಾಲಾಪ ತೋಯಜಾಕ್ಷ ಪೃಥುಳಾಯತಪಕ್ಷ ನಿ ಧಾಯ ಹೃದಿಧ್ಯಾಯಾಮಿ ಹರೆ 1 ವಿಗ್ರಹಮಖಿಳಶುಭಗ್ರಹಣಂ ಮದ ನುಗ್ರಹಾರ್ಥಮದಿತಿಷ್ಠವಿಭೋ ಉಗ್ರಮುಖ ವಿಬುಧಾಗ್ರ್ಯಪೂಜಿತ ಸ ಮಗ್ರ ಸಮರ್ಯಾಂ ಸ್ವೀಕುರುಭೋ 2 ದಾದ್ಯ ಕಲ್ಪಿತಂ ಭವದರ್ಥಂ ಸದ್ಯಂಬುನಿಮೇಜ್ಯ ಸುಖೋಷ್ಣಮಿದಂ3 ಕಸ್ತೂರಿತಿಲಕಂ ಸುಮುಖೋ ಕೌಸ್ತುಭರತ್ನಮಜಸ್ತುತಮಂಡನ ಮಸ್ತುತನೌಗುಣ ಭೂಷಣತೇ 4 ಮಂದಾರಕಾ ಮಾಲ್ಯಾಕಲಿತಂ ಗದ ಬಂಧುರ ಸುಗಂಧಿ ತುಳಸಿಕಾ ಬೃಂದಮಲಂಕುರು ಸನ್ನಿಹಿತಂ 5 ಗಂಧರ್ವಾಮರ ವಂದಿತ ಮಲಯಾ ಗಂಧಲೇಪನಮಾಕಲಯಾ ಗಂಧವಾಹನುತ ಗಂದವತೀ ಗುಣ ಬಂಧುರ ದೂಪಂ ಜಿಘ್ರಹರೇ 6 ತಾಪಸ ಮಾನಸ ದೀಪಹರೇ ರೂಪಾಲೋಕಯ ಶ್ರೀನೃಹರೇ 7 ಮಂತ್ರಪೂತಮುಖ ಯಾತ್ರಾಧಾರ ಸು ಮಂತ್ರಪುಷ್ಪಂ ಸ್ವೀಕುರುಹೇ 8 ಛತ್ರಮಿದಂ ಭುವನತ್ರಯನಾಥಸ ವಿ ಚಿತ್ರದಂತ ಚಾಮರಯುಗಳಂ ಯಾತ್ರ ಭೋಗಾ ಮದಿರಾಜಕಳಂ 9 ಮಧುಮಧುರಿಮ ಪಾಯಸಮತಿಹೃದ್ಯಂ ಮಧುನಾಸ್ವೀಕುರು ನೈವೇದ್ಯಂ 10 ಬಿಂಬಾಧರಮಿಂದುಬಿಂಬವದನ ಶಿಶಿ ರಾಂಬುಪಿಬಾಮಲಘನಸಾರಂ ತಂಬಹುಮನ್ವಸ ಕರ್ಪೂರಂ 11 ಕಾರ ನಿಭೃತ ಪರಿವಾರ ವಿಭೋ ನೀರಾಜನಮತಿತಾರಾಯಿತ ಕ ರ್ಪೂರಾರ್ತಿಕಮಂಗೀಕುರು ಭೋ 12 ಪಕ್ಷ ಪ್ರದಕ್ಷಿಣಮನುವಾರಂ ಪಕ್ಷಿಗಮನನಿಜವಕ್ಷೋಧೃತಶುಭ ಲಕ್ಷಕರೋಮನಮಸ್ಕಾರಂ13 ಸಾಗರತನಯಾಯಾಗವಿಹಿತ ಭೂ ಭಾಗಧೇಯನೀಳಾಸಹಿತಂ ಭೋಗಿಶಯನಮನುರಾಗ ಪರಿಷ್ಕøತ ಮಾಗಮಗೋಚರ ಕುರುಲಸಿತಂ14 ಆರಾಧನಮಪಜಾಯತಮುಪ ಚಾರಮಿಷೇಣ ಮಯಾಚರಿತಂ ಕಾರುಣ್ಯೇನ ಕ್ಷಮಸ್ಸೇದಂ 15 ಹರಿಣಾರ್ಯದ್ರಿ ನಿಕೇತನ ತೇ ಚರಣಾರಾಧನ ಕರಣಾಂಚಿತಮಿತಿ ವರದವಿಠಲಗೀತಂ ನುತೇ 16
--------------
ವೆಂಕಟವರದಾರ್ಯರು
ಶ್ರೀನಿವಾಸಾಷ್ಟಕ ಪಾಹಿಮಾಮರೇಂದ್ರ ವಂದಿತ ಪಾಹಿಮಾಮ ಜರಾವೃತಪಾಹಿಮಾಮಿಭರಾಜ ಪೂಜಿತ ಪಾಹಿ ಪಾಂಡವ ಕಾಮಿತ ಪ ಶ್ರೀನಿವಾಸ ಸರೋಜ ಶೋಭಿತ ಪಾಣಿ ಕಾಂಚನ ಕಂಕಣಜ್ಞಾನ ವೀರ್ಯ ಬಲ ಪ್ರಮೋದ ಮುಖೋರು ಸದ್ಗುಣ ಕಾರಣವೇಣುನಾದ ವಿಮೋಹ ಗೋಕುಲ ಕಾಮಿನೀ ಸುಖ ಸಾಧನಸಾನುರಾಗ ಕಟಾಕ್ಷ ಸುಸ್ಮಿತ ಭಾನು ಕೋಟಿ ಸಮಾನನ 1 ವಕ್ತ್ರ ಸುಮಂದಹಾಸ ವಿಮೋಹನಮಂದರೋದ್ಧರ ಮಾಧವಾವರ ವೃಂದಪಾಲನ ಭಾವನಇಂದ್ರ ಮುಖ್ಯ ಸುರೇಂದ್ರ ಶತ್ರು ಬಲೀಂದ್ರ ದಾನವ ಬೋಧನಸಿಂಧು ಸಂಭವ ಸುಂದರಾಮೃತ ಭೋಜನಾಮರ ಮೋದನ 2 ಕಂಸಕಾಲ ಜರಾಸುತಾದ್ಯ ಸುರಾಂಶ ಸಂಘ ನಿಷೂದನಸಂಶಿತವೃತ ಕಾಮಿನೀ ವರ ಹಿಂಸಿತಾಸುರ ಕಾಮನಹಂಸನಾಶ ಭವಾಂಶ ತೋಷ ಸುಧಾಂಶು ಬಿಂಬ ನಿಕೇತನಕಂಸಚಾಪ ವಿನಾಶನಾಮರ ಸಂಶಯಾಂಕುರ ಮೋಚನ 3 ಕೂರ್ಮ ವರಾಹ ವಾಮನ ವತ್ಸ ಭಾಷಿತ ಪಾಲನಕತ್ಸಿತಾವನಿಪಾಲನ ಶತೃದಚ್ಚುತಾತ್ಮ ಸುಬೋಧನವತ್ಸವಾಟ ಚರೋರು ರಾಕ್ಷಸ ಭತ್ರ್ಸನಾಮೃತ ಸಾಧನಸ್ವೇಚ್ಛಯಾತ್ತ ಸಮಸ್ತ ವಿಗ್ರಹ ಮತ್ ಶರೀರ ಸುಖಾಸನ 4 ಪಂಕಜ ಚಾರು ಸೂನು ದಯಾಕರ 5 ಮಂದಹಾಸ ಮುಖೇಂದು ಮಂಡಲ ಸುಂದರಾಮೃತ ಭಾಷಣನಂದ ಚಿದ್ಭನ ವೃಂದ ಭೂಷಣ ನಂದಗೋಪ ಸುನಂದನಸಿಂಧುತೀರ ವಿಹಾರ ಗೋಕುಲ ಕಾಮಿನಿ ಸುಂದರೀಕರ ಪೂಜನನಂದ ಚಿದ್ಭನ ದೇವ ಭಾಸ್ಕರ ನಂದಿನೀ ರತಿ ಸಾಧನ 6 ಸಾರಥಿ ವೃಷ್ಣಿವಂಶ ಸಮುಜ್ವಲಪ್ರೇಷ್ಠ ಸಂಸದಿ ಸೇವಿತಾಮರ ಸರ್ವದಿವೌಕ ಸಾಮುರು ಮುಷ್ಟಿಕಾದ್ಯ ಸುರಾನಳಮುಷ್ಟಿಧಾನ್ಯದ ಕಷ್ಟ ನಾಶನ ವೃಷ್ಣಿವರ್ಯ ಮಹಾಬಲ ತುಷ್ಟದಾಶ್ರಿತ ಸತ್ಫಲವಿಷ್ಣುರೂಪಮಮೇಷ್ಟ ದೋಹವಶಿಷ್ಠ ಸೇವಿತ ವಿಠ್ಠಲ 7 ವಕ್ತ್ರ ನಿಷೇವಣಬಂಧನಂ ಪರಿಹೃತ್ಯ ಮಾಮವ ಸುಂದರಾಂಬರ ಭೂಷಣ 8
--------------
ಇಂದಿರೇಶರು
ಶ್ರೀಪತಿಯ ನೈವೇದ್ಯ ಕೊಡುವದು ಧೂಪದಾಂತರ ಭೂಮಿಶೋಧನ ಆಪದಿಂ ಮಂಡಲವ ಮಾಡುತ ರಂಗವಲಿ ಹಾಕಿ ಸೂಪ ಅನ್ನವು ಅಗ್ನಿಕೋಣದಿ ಆ ಪರಮ ಅನ್ನವನು ಈಶಾ ನ್ಯಾಪೆಯಾಲೇಹಗಳ ನೈರುತದಲಿ ಇಟ್ಟು ತಥಾ 1 ವಾಯುದಿಶದಲಿ ಉಪಸುಭೋಜ್ಯವು ವಾಯಸಾನ್ನದ ಮಧ್ಯ ಘೃತಸಂ ಸ್ತೂಯಮಾನ ನಿವೇದನವು ಈ ಕ್ರಮದಿ ಹೀಂಗಿಟ್ಟು ಬಾಯಿಯಿಂದಲಿ ದ್ವಾದಶ ಸ್ತುತಿ ಗಾಯನದಿ ನುಡಿಯುತಲಿ ಈ ಕಡೆ ಆಯಾ ಅಭಿಮಾನಿಗಳು ದೇವತೆಗಳನು ಚಿಂತಿಸುತ 2 ಓದನಕ ಅಭಿಮಾನಿ ಶಶಿಪರ ಮೋದನಕ ಅಭಿಮಾನಿ ಭಾರತಿ ಆದಿವಾಕರ ಭಕ್ಷ ಕ್ಷೀರಾಬ್ಧೀಜೆ ಸರ್ಪಿಯಲಿ ಸ್ವಾದುಕ್ಷೀರಕ ವಾಣಿ ಮಂಡಿಗಿ ಲೀ ದ್ರುಹಿಣನವನೀತ ಪವನಾ ದಾದಧಿಗೆ ಶಶಿವರುಣ ಸೂಪಕೆ ಗರುಡ ಅಭಿಮಾನಿ 3 ಶಾಕದಲಿ ಶೇಷಾಮ್ಲ ಗಿರಿಜಾ ನೇಕನಾಮ್ಲದಿ ರುದ್ರಸಿತದಲಿ ಪಾಕಶಾಸನ ಶೇಷುಪಸ್ಕರದಲ್ಲಿ ವಾಕ್ಪತಿಯೂ ಈ ಕಟು ಪದಾರ್ಥದಲಿ ಯಮ ಬಾ ಹ್ಲೀಕ ತಂತುಭದಲ್ಲಿ ಮನ್ಮಥ ನೇಕ ವ್ಯಂಜನ ತೈಲ ಪಕ್ವದಿ ಸೌಮ್ಯನಾಮಕನೂ 4 ಕೂಷುಮಾಂಡದ ಸಂಡಿಗಿಲಿ ಕುಲ ಮಾಷದಲಿ ದಕ್ಷ ಪ್ರಜಾಪತಿ ಮಾಷ ಭಕ್ಷದಿ ಬ್ರಹ್ಮಪುತ್ರನು ಲವಣದಲಿ ನಿಋತಿ ಈ ಸುಫಲ ಷಡ್ರಸದಿ ಪ್ರಾಣ ವಿ ಶೇಷ ತಾಂಬೂಲದಲಿ ಗಂಗಾ ಆ ಸುಕರ್ಮಕೆ ಪುಷ್ಕರನು ಅಭಿಮಾನಿ ದೇವತೆಯೂ 5 ಸಕಲ ಭಕ್ಷ್ಯಗಳಲ್ಲಿ ಉದಕದಿ ವಿಶ್ವ ಮೂರುತಿ ಮುಖದಲೀ ನುಡಿ ಅಂತಿಲೀ ಶ್ರೀ ಕೃಷ್ಣ ಮೂರುತಿಯ ನಖ ಚತು ಪದಾರ್ಥದಲಿ ಆ ಸ ಮ್ಯಕು ಚತುರವಿಂಶತಿ ಅಭಿಮಾ ನಿಕರ ಚಿಂತಿಸಿ ಸರ್ಪಿ ಸಹ ಶ್ರೀ ತುಳಸಿಯನು ಹಾಕಿ6 ಕ್ಷೀರ ದÀಧಿ ಕರ್ಪೂರ ಸಾಕ ರ್ಜೀರ ಪನಸ ಕಪಿಥ್ಥ ಪಣ್ಕದ ಳೀರಸಾಲ ದ್ರಾಕ್ಷ ತಾಂಬೂಲದಲಿ ಚಿಂತನೆಯೂ ಪೂರ ಶಂಖದಿ ಉದಕ ಓಂ ನಮೊ ನಾರೆಯಣಾ ಅಪ್ಟಾಕ್ಷರವು ತನ ಮೋರೆ ಮುಚ್ಚಿ ಶತಾಷ್ಟವರ್ತಿಲಿ ಮಂತರಿಸಿ ತೆರೆದೂ7 ಸೌರಭೀ ಮಂತ್ರದಲಿ ಪ್ರೇಕ್ಷಿಸಿ ಮೂರೆರಡು ಮೊದಲಾಗಿ ಶಂಖವು ಅಂತಿಮಾಡಿ ತಥಾ ಪೂರ್ವ ಆಪೋಶನವು ಹೇಳಿ ಅ ಪೂರ್ವ ನೈವೇದ್ಯವು ಸಮರ್ಪಿಸಿ ಸಾರ್ವಭೌಮಗ ಉತ್ತರಾಪೋಶನವು ಹೇಳಿ ತಥಾ 8 ಪೂಗ ಅರ್ಪಿಸಿದಂತರದಿ ಅತಿ ಬ್ಯಾಗದಲಿ ಲಕ್ಷ್ಯಾದಿ ನೈವೇ ದ್ಯಾಗ ಅರ್ಪಿಸಿ ತಾರತಮ್ಯದಿ ಉಳಿದ ದೇವರಿಗೆ ಸಾಗಿಸೀ ಶ್ರೀ ಹರಿಯ ಸಂಪುಟ ದಾಗ ನಿಲ್ಲಿಸಿ ವೈಶ್ವದೇವವು ಸಾಗಿಸೀ ಶ್ರೀ ವಿಜಯವಿಠಲನ ಧೇನಿಸುತ ಮುದದಿ9
--------------
ವಿಜಯದಾಸ
ಶ್ರೀಪತಿಯೆ ನಿನ್ನ ಒಲುಮೆಯೊಂದಿರಲಿಕ್ಕೆತಾಪಗಳಾವೆನಗೆ ಮಾಡುವವೊ ಪ ಪಾಪಿಯಂತೆದೆನ್ನ ಕೈಯನು ಬಿಡಬೇಡಗೋಪಾಲನೆ ಎಲ್ಲಕ್ಕೂ ಕರ್ತೃ ನೀನಲ್ಲವೆ ಅ.ಪ. ಭಾರ ಹೊತ್ತವನೆಂಬಅಂಶವನರಿಯದೆ ವ್ಯರ್ಥ ಬಳಲಿದೆನೊ 1 ಅಪಶಕುನಗಳು ಆ ವಿಘ್ನಗಳೆಲ್ಲವೂವಿಪರೀತ ಕಾಲವು ಉಪದ್ರವಂಗಳುಕೃಪೆಯಿಂದ ಪರಿಣಾಮಗೊಳ್ಳವೆಂದೆಂದಿಗೂಕೃಪೆಯ ಮಾಡಯ್ಯ ನೀ ಭಕ್ತವತ್ಸಲನೆ 2 ಯೋಚಿಸುವವ ನಾನು ಯೋಜಿಸುವ ನೀನುತೋಚದು ಗತಿಯೆಂದು ಚಿಂತಿಸುತಿರಲುಸೂಚನೆಗೊಡದೆ ಪರಿಹರಿಸಿ ಪೊರೆಯುವಿನಿಗಮಗೋಚರ ನಿನ್ನ ಕಾರುಣ್ಯವನರಿಯನೋ 3 ಅಂಬುಜಾಕ್ಷನೆ ನಿನ್ನ ನಂಬಿದ ಜನರನುಬೆಂಬಿಡದೆ ಕಾಯುವ ನೀ ಕೃಪಾಳೋತುಂಬ ಒಲುಮೆಯನೀಯೊ ನಿತ್ಯದಿ ಭಕ್ತಕು ಟುಂಬಿಯೆ ಗದುಗಿನ ವೀರನಾರಾಯಣ 4
--------------
ವೀರನಾರಾಯಣ
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು
ಶ್ರೀಪರಿಕಲ್ ನರಸಿಂಹ ಸ್ತೋತ್ರ ನರಸಿಂಹ ಪರಿಕಲ್ ನರಸಿಂಹ | ಗೌರೀಶಾದ್ಯಮರರಿಗೀಶ | ಆಹ | ಅಮಿತ ಪೌರುಷ ಸ್ವಜನತೇಷ್ಟಪ್ರದನೆ ನಮೋ ಅಮಲೂರು ಗುಣಗಣಾರ್ಣವ ಜಯ ಜಯತು ಪ ಸರ್ವೋರು ನಿಜ ಶಕ್ತಿಮಂತ | ಸದಾ ಸರ್ವತ್ರವ್ಯಾಪ್ತ ಅನಂತ | ಜಗತ್ ಸೃಷ್ಟ್ಯಾದಿಗಳಿಗೇ ನೀ ಕರ್ತ | ವಿಷ್ಣು ಸರ್ವತೋಮುಖ ಮೃತ್ಯುಹಂತ || ಆಹ || ಶ್ರೋತವ್ಯಮಂತವ್ಯ ಧ್ಯಾತವ್ಯವಿಭು ನೀನು ವ್ಯಕ್ತನಾದಿಯೋ ಸ್ತಂಭದಲಿ ಭೃತ್ಯಗೋಲಿದು 1 ಮೂಲಾಧಾರಾರಭ್ಯಲೂಧ್ರ್ವ | ವಾಗಿ ತಲೆಯ ಪರ್ಯಂತದಿ ನಿಲುವ | ಬಲು ಸುಲಲಿತಸ್ತಂಭದಂತಿರುವ | ನಾಡಿ ಯಲ್ಲಿ ಉರದೇಶದಿ ಪೊಳೆವ ||ಆಹ|| ಜ್ಯೋತಿರ್ಮಯನೆ ಪಾಪತಿಮಿರಾರ್ಕ ನೀ ಎನ್ನ ಪ್ರತಿಕ್ಷಣ ಪಾಲಿಸೋ ಶ್ರೀಲಕ್ಷ್ಮೀರಮಣ 2 ವಿಧಿ ಭವೇಂದ್ರಾದಿಗಳಿಂದ | ಪ್ರಹ ಲ್ಲಾದ ಶ್ರೀವ್ಯಾಸಮುನೀಂದ್ರ | ಮಂತ್ರಾ ಸದ್ಮಸ್ಥ ಶ್ರೀ ರಾಘವೇಂದ್ರ | ದಾಸ ವೃಂದ ಸುಜನರುಗಳಿಂದ ||ಆಹ || ಸೇವಿತ ಪೂಜಿತ ಸ್ತುತ್ಯ ಸಂಭಾವಿತ ||ಪಾಲಿಸೋ.......... 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಭೂತರಾಜರು (ಭಾವೀರುದ್ರರು) ಅಲಘು ಮಹಿಮ ಭಾವೀ | ತ್ರಿನಯನಾಮಲಿನ ಮನವ ಕಳೆಯೋ ಪ ಅಲಘು ಮಹಿಮ ಭಾವೀ ಮರುತಜಲಜ ಪಾದಕ್ಕಳಿಯೆ ಮುಖ್ಯ ಅ.ಪ. ಅಧರ ಕುಸುಮ ಬಂಧೂಕ ಭಾಸ 1 ಚಾಪ ಶರವು ಕರದಿಅದುಭುತಾತ್ಮ ನಾರಾಯಣನವಿಧಿತ ಮಹಿಮನಾಗಿ ನಮಿಪ 2 ಕರ್ಣ ಭೂತ ಮುಖ್ಯಗಣಗಳಿಂದ ಕೂಡಿ ಭೂತಗಣಧೀಶನಾಗಿ ನಾರಾಯಣನ ನಾಮ ಧರಿಸಿ ಮೆರೆವ 3 ಕರ ತ್ರಿಶೂಲಿಮಣಿವೆ ಹರಿಯ ಭಕ್ತ ಮೌಳಿ4 ಸ್ವಾಪ ಮುನ್ನ ಮುಂದೆ ಕುಳಿತುಉಪಾಂಸ್ವನೇಕ ಉಚ್ಚರೀಸಿಗೋಪತಿ ಗುರು ಗೋವಿಂದ ವಿಠಲಸುಪಾದ ಭಜಿಸೆ ಪೋದೆತ್ವರ್ಯ 5
--------------
ಗುರುಗೋವಿಂದವಿಠಲರು
ಶ್ರೀಮತೇ ಶ್ರೀ ಭಾಷ್ಯಕರಾಯನೇ [ಮಾಮವ] ದೇವಾ ಕರುಣಿಸು ಮಹರಾಯನೇ ಪ ಮಂತ್ರ ರಹಸ್ಯದಿ ಜ್ಞಾನ ತ್ರಯಂಗಳ ನಿಂತು ನೀ ಕೃಪೆ ಮಾಡಿದೇ ಅ.ಪ [ವರ]ತತ್ವದುಯ್ಯಾಲನಾಡಿದೆ ಭರಗೈದು ಬಂದಿಲ್ಲಿ ಪರತತ್ವವನು ಗೂಡಿದೇ 1 ಸಿರಿಮಾತೇ [ಮೂಲಕ] ಹರಿಯಾಜ್ಞೆಯನುಗೊಂಡು ಪರಮಭಕ್ತರಿಗೆಲ್ಲಾ ಪ್ರತ್ಯಕ್ಷವಾದಂಥಾ ಪರಮಪದವಿ ಮಾಡಿದೇ 2 ಯದುಶೈಲವಾಸದೊಳಧಮರಾದವರಿಗೆ ಸುಧೆಯ ಸುರಿದು ತೋರಿದೆ ಸದುಪಾಯದಿಂ ಬಂದು ಸರ್ವಸ್ವತಂತ್ರದೊ ಳಿದು ನೋಡೆನುತ ಸಾರಿದೆ 3 ಪರಕಾಲಗುರು ಸರ್ವತಿರುಮಳಿಶಯ್ಯಾಳ್ವಾರೆಂ ಬೆರುಮಾನರಡಿಯಾದೆನೈ ಗುರುಕುಲದೊಳಗೆನ್ನ ಕರೆದಿತ್ತ ಹರಿನಾಮ ನುಡಿಯದೆ ನಾ ಹೋದೆನೈ 4 ಅದ್ವೈತ ಕುಲವನ್ನು ಪರಿಶೋಧಿಸಿ ಬಿಟ್ಟು ಶ್ರೀ ಮದ್ರಾಮಾನುಜಾಚಾರ್ಯನೇ ಮದ್ಗುರುವಾದ ಶ್ರೀತುಲಶೀರಾಮದಾಸ [ರೈ ದಾಸಕುಲತೂರ್ಯರೈ] 4
--------------
ಚನ್ನಪಟ್ಟಣದ ಅಹೋಬಲದಾಸರು
ಶ್ರೀಮತ್ ತಂದೆವರದಗೋಪಾಲದಾಸ ರಾಯಾವೃಂದದಿಂದಲಿ ನಿಮಗೊಂದಿಸುವೆನೋ ಜೀಯಾ ಪ. ಇಂದಿನವರೆಗೆ ನಾನಿಂದ್ಯ ಜನರೊಳು ಕೂಡಿನಿಂದ್ಯ ಮಾಡುತ ಪರರ ಡಂಭತನದಲಿ ಮೆರೆದೆನೊಕಂದನಾ ಕುಂದುಗಳ ಒಂದನೆಣಿಸದೆ ಗುರುವೇಮಂದಜನ ರಾಶಿಯೊಳು ಬೆಂದುಹೋಗುವುದನು ಕಂಡುಅಂದದಲಿ ನೀ ಹಿಡಿದೆಳೆತಂದೂ 1 ಮುಂದೆ ಪೇಳುವೆ ಕೇಳೋಚಂದ್ರಮೌಳಿಯೆ ನಿನ್ನ ಪ್ರೀತಿಪಾತ್ರನಾದಸುಂದರಾಂಗನ ಮುಖದೀ ನೀನಿಂದು ಅಘವೃಂದಗಳ ಹೊಡೆದೋಡಿಸೀಮಿಂಚಿನಿಂದಕ್ಷ ರ, ಯ, ಮ ಎಂಬಕ್ಷರಗಳ ಕಲ್ಪಿಸಿಎಂದಿಗೂ ಮರೆಯದಂಥ ತಂದೆವರದವಿಠಲನೆಂಬಅಂಕಿತದಿಂದ ಬಂಧನವ ಮಾಡಿ ಭಾವ ಸಂವತ್ಸರಫಾಲ್ಗುಣ ಶುದ್ಧ ತ್ರಯೋದಶಿಚಂದ್ರವಾರ ಅರುಣೋದಯ ಕಾಲದೀಕಡೆಕೋಳ ಶ್ರೀ ವೆಂಕಟೇಶನ ಸನ್ನಿಧಾನದಿಅನುಗ್ರಹಿಸಿದೆಯೋ ಮಹಾರಾಯಾಮಂದಮತಿ ನಾ ನಿಮ್ಮ ಮಹಿಮೆಯನು ಪೇಳಲೆನ್ನಳವೆತವಪಾದಾರವಿಂದದಿ ಅನವರದ ಜ್ಞಾನ ಭಕುತಿವೈರಾಗ್ಯವನಿತ್ತು ರಕ್ಷಿಸಬೇಕೋತಂದೆವರದವಿಠಲದೂತಾ ಮನೋ ನಿಯಾಮಕ ದೊರೆಯೇ
--------------
ಸಿರಿಗುರುತಂದೆವರದವಿಠಲರು
ಶ್ರೀಮತ್ಕಾಂಚನ ಕೋಟಿರನ್ನತನಯಾ | ಕ್ಷೀರಾಂಬುನಿಧಿ ಮಧ್ಯದಿ | ನೇಮದಿಂ ನಿಜಧಾಮದಲ್ಲಿ ರಮೆಯಾ | ಒಡಗೂಡಿ ಸುರಸಿದ್ಧದೀ | ಸಾಮಗಾಯನ ಪ್ರಿಯನಾಗಿನಿರುತಾ | ಪಾಲಿಪ ಲೋಕಂಗಳಂ | ಮಾಧವ ದಯಾನಿಧೇ ವಧುವರಾ | ಕುರ್ಯಾತ್ಸದಾ ಮಂಗಳಂ | 1 ಭಾನುಕೋಟಿಯ ತೇಜದಿಂ ಬೆಳಗುವಾ | ಮುಕಟವು ಮಸ್ತಕದಿ | ಶ್ರೀ ನೀಲಾಳಕ ಭಾಲಮಧ್ಯಮೆರೆವಾ | ಕೇಶರ ಪೌಂಡ್ರಕದಿ | ಸೂನಾಸಿಕದಿ ವಾರಜಾಕ್ಷಅಧರಿಂ | ದೊಪ್ಪುವ ಕರ್ಣಂಗಳಂ | ತಾನೀಕುಂಡಲ ಭೂಷಣಾ ವಧುವರಾ | ಕುರ್ಯಾತ್ಸದಾ ಮಂಗಳಂ 2 ಶ್ರೀ ಲಕ್ಷ್ಮೀ ನಿಜಶಾರದಾಗಿರಿಸುತೇ | ಭಾರತೀ - ಶಚಿ- ಭಾಮಿನೀ | ಕಾಲಿಂದೀವರ ನರ್ಮದಾ ಸರಸ್ವತೀ | ಗಂಗಾ ತ್ರಿಪಥಗಾಮಿನೀ | ಪಾಲಿಸುವ ಗೋದಾವರೀ ಭೀಮರಥೀ | ಶ್ರೀ ಕೃಷ್ಣ ವೇಣಿಂಗಳಂ | ಮೇಲೆ ಕಾವೇರಿತುಂಗೆ ತಾವಧುವರಾ | ಕುರ್ಯಾತ್ಸದಾ ಮಂಗಳಂ 3 ವಾರಿಜಾಸನ ವಾಯು ಶಂಕರಗುರು | ತ್ವಂಹೇಂದ್ರ ವಸಿಷ್ಠನು | ಭಾರದ್ವಾಜ ಪರಾಶರಾತ್ರಿ ಭೃಗು ಕ- ಶ್ಯಪ ಕೌಶಿಕ ಶ್ರೇಷ್ಠನು | ಕಾರುಣೀ ಜಮದಗ್ನಿ ರಾಮ ಮರಿಚೀ | ವ್ಯಾಸಾದಿ ಋಷಿ ಪುಂಗಳಂ | ನಾರದಾದಿ ಮುನೀಂದ್ರರೀ ವಧುವರಾ | ಕುರ್ಯಾತ್ಸದಾ ಮಂಗಳಂ 4 ಇಂದ್ರೋವಹ್ನಿ ಪಿತೃಪತಿ - ನಿಋಋತಿ | ಮಕರೇಶ ಪ್ರಭಂಜನಾ | ಸಾಂದ್ರೈಶ್ವರ್ಯ ಕುಬೇರ ಈಶದಿಕ್ಪಾ ಲಾದಿತ್ಯಶಶಿರಂಜನಾ | ಚಂದ್ರಾತ್ಮಜನುಭೌಮದೇವಗುರುತಾ | ಕವಿಮಂದ ಗ್ರಹಂಗಳಂ | ಸಾಂದ್ರಾಗೀಹ ಸಮಸ್ತಗಿರೀ ವಧುವರಾ | ಕುರ್ಯಾತ್ಸದಾ ಮಂಗಳಂ 5 ಶ್ರೀ ಮತ್ಸ್ಯಾಕೃತಿ ಕೂರ್ಮನಾಗಿ ವರಹಾ | ನರಸಿಂಹನೆಂದೆ ನಿಸಿದಾ | ವಾಮನಾಭೃಗುವರ್ಯರಾಮರಘುಪಾ | ಯದುವಂಶದಲಿ ಜನಿಸಿದಾ | ತಾ ಮತ್ತೇ ನಿಜ ಬೌದ್ಧಕಲ್ಕಿ ಎನಿಸೀ | ತಾಳ್ದಾವತಾರಂಗಳಂ | ಶ್ರೀ ಮನೋಹರ ದೇವಕೀ ವಧುವರಾ | ಕುರ್ಯಾತ್ಸದಾ ಮಂಗಳಂ 6 ಕಾಶೀ ಕಂಚಿ ಅವಂತಿಕಾ ವರಪುರೀ | ದ್ವಾರಾವತೀ ಮಥುರಾ | ದೋಷನಾಶಿಕ ಪುಣ್ಯಕ್ಷೇತ್ರ ಬದರೀ | ಶೇಷಾದ್ರಿವರ ಸೇತುಬಧ ತುಹಿನಾ | ರಜತಾದ್ರಿ ಸೈಲಂಗಳಂ | ಈ ಸಪ್ತಾಂಬುಧೀ ಸರ್ವದೀ ವಧುವರಾ | ಕುರ್ಯಾತ್ಸದಾ ಮಂಗಳಂ 7 ದಶರಥಾತ್ಮಜನಾದ ರಾಮಜಗದೀ | ಜನಕಾತ್ಮಜಾ ಸೀತೆಯಾ | ಕುಶಲದೀ ನರಲೀಲೆಯಿಂದ ಮೆರೆವಾ ವೈಭವ ಸಂಗsತಿಯಾ ಉಸರೀದಾ ಗುರುಮಹಿಪತಿಸುತ ಕ- ನ್ನಡ ಭಾಡೆ ಶ್ಲೋಕಂಗಳಂ | ವಸುಧೆಯಲಿ ಸ್ಮರಿಸುವವರಿಂಗೆ ಕೊಡುವಾ | ರಘುನಾಥ ಜಯಮಂಗಳಂ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ ಚರಿತಂ ಕಾಮಿತ ಪ್ರದವಹುದು ಶೃಣ್ವತಾಂ ಸತತಂ ಪ ಈ ಮಹಿಯೊಳವತರಿಸಿ ಭೂಮಿಜಾಸಹಿತ ಶ್ರೀ ರಾಮನಂಘ್ರಿದ್ವಯವ ಪೂಜಿಸುತಲಿ ನಿರ್ಜರ ಜನಸ್ತೋಮ ವಂದಿತರಾಗಿ ವ್ಯೋಮ ಕೇಶಾಂಶರೆಂದೆನಿಸಿ ಮೆರೆವಂಥ 1 ಮೋದತೀರ್ಥರ ಮತ ಮಹೋದಧಿಗೆ ಪೂರ್ಣಹಿಮ ದೀದಿತಿಯರೆಂದೆನಿಸಿ ದಿಗ್ವಲಯದಿ ಭೇದ ಬೋಧಕ ಸೂತ್ರವಾದದಿಂದಲಿ ಮಹಾ ವಾದಿ ವಿದ್ಯಾರಣ್ಯ ಯತಿವರನ ಜಯಿಸಿದ 2 ವಿಟ್ಠಲನ ಪದಪದುಮ ಷಟ್ಟದರೆಂದೆನಿಸಿ ಸ್ವಪ್ನಸೂಚಿತ ಚಂದ್ರಭಾಗತಟದಿ ಶ್ರೇಷ್ಠ ಕುದುರೆಯನೇರಿ ನದಿಯ ಜಲಕುಡಿದವರ ಇಷ್ಟರೆನ್ನುತ ಕರೆದು ಕೊಟ್ಟರಾಶ್ರಮವ 3 ಸೃಷ್ಟಿಯೊಳು ಮಧ್ವಮತ ಪುಷ್ಠಿಗೈಸುವರೆಂಬ ದೃಷ್ಟಿಯಿಂದಿವರಿಗೆ ಸುಮುಹೂರ್ತದಿ ಪಟ್ಟಗಟ್ಟಿದರು ಜಯತೀರ್ಥ ನಾಮವನಿಡುತ ಕೊಟ್ಟರಾಜ್ಞೆಯನು ದಿಗ್ವಿಜಯ ಮಾಡಿರಿ ಎಂದು 4 ದೇಶದೇಶದಿ ಬರುವ ಭೂಸುರೋತ್ತಮರ ಅಭಿ ಲಾಷೆಗಳನೆಲ್ಲ ಪೂರೈಸಿ ಪೊರೆವ ಶ್ರೀಶಕಾರ್ಪರ ಕ್ಷೇತ್ರವಾಸ ಅಶ್ವತ್ಥನರ ಕೇಸರಿಯ ನೊಲಿಸಿದ ಯತೀಶರಿವರೆಂದು 5
--------------
ಕಾರ್ಪರ ನರಹರಿದಾಸರು
ಶ್ರೀಮದನಂತನೀತಾ ಶ್ರೀಮದನಂತನೀತಾ | ಸೀಮರಹಿತಾ ಮಹಿಮನೀತಾ | ನಾಮ ನೆನೆಯೆ ಒಲಿದು ನಿಷ್ಕಾಮ ಫಲವ ನೀವಾನೀತ ಶ್ರೀಮದಾನಂತನೀತನು ಪ ಆದಿದೈವನೀತಾ ಜೀವಾದಿಗಳಿಗಭಯದಾನೀತಾ | ಶ್ರೀಧರಣಿ ದುರ್ಗಾರಮಣನಾದಾತನೊದಾನೀತಾ | ವೇದಪಾಲಕನೀತಾ ಸನಕಾದಿಗಳಿಗೆ ಪ್ರೀತಾನೀತಾ | ನಿತ್ಯ ಸಾಧುಗಳ ಕಾಯಿದನೀತಾ1 ಗಜವರದನೀತಾ ಗಂಗಜನ ಮನೋಭೀಷ್ಟನೀತಾ | ಗಜ ರಜಕ ಬಿಲ್ಲು ಮಲ್ಲರ ವ್ರಜನನಾಳಿದ ದಿಟ್ಟಿನೀತಾ | ತ್ರಿಜಗ ವಂದಿತಾನೀತಾ ಅಂಗಜನ ಪೆತ್ತ ಪ್ರೇಮನೀತಾ | ಪಂಕಜ ಬಾಂಧವನ ಭಾಸನೀತಾ2 ಕಪಟನಾಟಕನೀತಾ ಕರಡಿ ಕಪಿಗಳನಾಳಿದನೀತಾ | ಕಪಿಲಮುನಿಯಾಗಿ ತಾಯಿಗೆ ಉಪದೇಶವ ಪೇಳಿದನೀತಾ | ದ್ರುಪದಸುತೆಯ ಕಾಯದನೀತಾ ಸ್ವಪ್ನ ಸುಷುಪ್ತಿ ಜಾಗ್ರದಾವಸ್ಥೆಗೆ ಗುಪುತವ್ಯಾಪಕ ಗುಣನೀತಾ3 ಪರಮ ಪುರುಷನೀತಾ ದಶಶಿರನ ಕುಲವನಳಿದನೀತಾ | ಗಿರಿಯಲಿ ಧರಿಸಿ ಲೋಕವ ಪೊರೆವ ವಿಶ್ವಾಧಾರನೀತಾ | ಹರನ ವೈರಿಯ ಕೊಂದನೀತಾ | ನಿರುಪಮ ಮೂರುತಿನೀತಾ | ಸುರರಿಗೆ ಉಣಿಸಿದನೀತಾ | ತರಳ ಲೀಲೆಯ ತೋರಿದನೀತಾ4 ನಿತ್ಯ ಜಪತಪಾದಿಗೆ ನೇಮಪ್ರಕಾರ ಚೇಷ್ಟಕನೀತಾ | ಸಾಮ ಲೋಲ ವಿಜಯವಿಠ್ಠಲ ತಾಮರಸನಾಭನೀತಾ 5
--------------
ವಿಜಯದಾಸ
ಶ್ರೀಮಧ್ವ ಚಿತ್ತಮಂದಿರನೆ ನಿನ್ನಯ ಚರಣತಾಮರಸ ನೆರೆ ನಂಬಿದೆ ಪ ಕಾಮ ಕ್ರೋಧಗಳನ್ನು ಕಡಿದು ನಿನ್ನಯ ದಿವ್ಯನಾಮಾಮೃತವನುಣಿಸೋ ಸ್ವಾಮಿ ಅ.ಪ. ಪರ ನಾರಿಯರಮೋರೆ ಬಣ್ಣವನೆ ನೋಡಿಆರು ಇಲ್ಲದ ವೇಳೆ ಕಣ್ಣು ಸನ್ನೆಯಲವಳಕೋರಿದ್ದು ಇತ್ತು ಕೂಡಿವಾರಿಜನಾಭ ನಿನ್ನಾರಾಧನೆಯ ಮರೆದುಧಾರುಣಿಗೆ ಭಾರಾಗಿ ಅಶನ ಶತ್ರುವಾದೆ 1 ಉಪರಾಗ ಮೊದಲಾದ ದಶಮಿ ದ್ವಾದಶಿ ದಿನದಿಉಪೇಕ್ಷೆಯನು ಮಾಡಿ ಜರಿದೆ |ಉಪಕಾರವೆಂದು ನಿಜವೃತ್ತಿ ಪೇಳಿದರೆನಗೆಅಪಕಾರವೆಂದು ತಿಳಿದು |ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆತಪವೃದ್ಧರನ್ನು ಜರಿದೆ |ಸ್ವಪನದೊಳಗಾದರೂ ವೈರಾಗ್ಯ ಬಯಸದಲೆಕಪಟ ಮನುಜರೊಳಗಾಡಿ ನಿನ್ನ ಮರೆದೆನೊ ಸ್ವಾಮಿ 2 ಭೂಸುರರು ಚಂಡಾಲ ಜಾತಿಯನ್ನದೆ ಬಲುಹೇಸಿಕಿಲ್ಲದಲೆ ತಿರಿದೆ | ಆಶಾಪಾಶಕೆ ಸಿಲುಕಿ ಕಂಡಕಂಡಲಿ ತಿಂದುದೋಷರಾಶಿಯನು ತರುವೆ |ಆ ಸತೀ ಸುತರ ಸಲಹುವೆನೆಂದು ಪರಿಪರಿವೇಷವನು ಧರಿಸಿ ಮೆರೆವೆ |ವಾಸುಕೀ ಶಯನ ವಸುದೇವ ತನಯನೆ ನಿನ್ನದಾಸನೆನಿಸದಲೆ ಅಪಹಾಸ ಮಾನವನಾದೆ 3 ಹರಿದಾಸರಲ್ಲಿ ಒಂದರಘಳಿಗೆ ಕುಳಿತರೆಶಿರವ್ಯಾಧಿಯೆಂದ್ಹೇಳುವೆ |ದುರುಳ ದುರ್ವಾರ್ತೆಗಳ ಪೇಳಲು ಹಸಿತೃಷೆಯಮರೆದು ಆಲಿಸಿ ಕೇಳುವೆ |ತರುಣಿ ತರಳರು ಎನ್ನ ಪರಿಪರಿ ಬೈದರೆಪರಮ ಹರುಷವ ತಾಳುವೆ |ಗುರು ಹಿರಿಯರೊಂದುತ್ತರವನಾಡಲು ಕೇಳಿಧರಿಸಲಾರದಲೆ ಮತ್ಸರಿಸುವೆನೊ ಅವರೊಳಗೆ 4 ನಾ ಮಾಡಿದಪರಾಧಗಳನೆಣಿಸಿ ಬರೆವುದಕೆಭೂ ಮಂಡಲವೆ ನೆರೆ ಸಾಲದೊ | ಸೀಮೆಯೊಳಗುಳ್ಳ ದುರ್ಮತಿಯೆಲ್ಲ ಕೂಡಲುಈ ಮತಿಗೆ ಆದು ಪೋಲದೋಹೋಮ ಜಪತಪವು ಇನ್ನೆಷ್ಟು ಮಾಡಲು ಪಾಪಸ್ತೋಮ ಎಂದಿಗು ವಾಲದೊ |ಸಾಮಜ ವರದ ಮೋಹನ್ನ ವಿಠ್ಠಲ ನಿನ್ನ |ನಾಮವೊಂದಲ್ಲದೆ ಪ್ರಾಯಶ್ಚಿತ್ತವ ಕಾಣೆ5
--------------
ಮೋಹನದಾಸರು
ಶ್ರೀಮಹಾಲಕ್ಷಮಿತಾಯೇ | ಶ್ರೀ ಮಹಾಮಾಯೆ | ಹೇಮಾಯಾ ಕರುಣಾಬ್ದಿಯೇ | ಕಾಮಿತ ಫಲನೀಯೇ | ಸಾಮಜಗಮನಿಯೇ | ಹೇಮಾಯಾ ಕೋಟಿ ಸಮಕಾಯೇ | ಶುಭಚರಿಯ | ಬಹುಪರಿಯೇ | ಹರಿಪ್ರೀಯೇ | ಅರಿಯೇ ಪ ಶರಧಿಸುತವನೇ | ಸರಸಿಜಸದನೆ | ಸುರಚಿರದವರಾನೆ | ಕರಿಸರ್ಪವೇಣೆ | ದುರಿತಾದೌಘಪಹರಣೆ | ಕರುಣದಾಗಾರೆ ಶರಣೆ | ನೆರೆನಿನ್ನನಂಬಿದೆನೆ ಮಾತೆ | ಅದ್ಭುತೆ | ರವಿನಮಿತೆ | ಪ್ರಖ್ಯಾತೆ | ದಾತೆ 1 ಹೊಳೆವ ಸೌಂದರ್ಯ ಸಲಹೆ | ಸಲೆಕುಲದೈವೆ | ಸುಜನ ಸೇವೆ | ಮಲಿನರ ಭಾವೆ | ಹಲವು ಮಾತೇನು ಫಲವೇ | ಬಲುನಾಹಂಬಲಿಸುವೆ | ಒಲಿದು ಕರುಣಿಸು ಭಾಗ್ಯವಂತೆ | ಗುಣವಂತೆ | ಬಹುಶಾಂತೆ | ದಯವಂತೆ ಕಾಂತೆ 2 ಕರವೀರ ಪುರಧೀಶೆ | ಶರಣರುಲ್ಹಾಸೆ | ಸುರಮುನಿಜನತೋಷೆ | ಶಿರಸ್ವಪ್ರಕಾಶೆ | ಪರತರ ಸುವಿಲಾಸೆ | ಗುರುಕೃಷ್ಣಸುತನೀಶೆ | ವರಕೊಲ್ಹಾಸುರನ ವಿನಾಸ | ಜಗದೀಶೆ | ಮೃದುಭಾಷೆ | ಅವಿನಾಶೆ | ಈಶೆ 3 ಅಂಕಿತ-ಗುರುಕೃಷ್ಣಸುತ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀಮಾನಿನೀವರ ನಂದಕುಮಾರ ಪ. ರಾಜರಾಜೇಶ್ವರ ರಾಜ್ಯಾಭಿಷೇಕವ ಮೂಜಗವರಿಯೇ ಸುರರಾಜನಿಂ ಕೈಗೊಂಡ 1 ಅಂದೆ ತಿಳಿದೆನು ಸಿಂಧುಶಯನ ನೀನು ಇಂದಿರೆಯೇ ಭೀಷ್ಮಕನಂದನೆಯೆ ತಾನು 2 ದೇವಾದಿದೇವ ವಸುದೇವನಂದನ ವಾಸುದೇವ ದೇವಕೀಸುತ ಭಾವಜತಾತ 3 ನರಲೀಲಾ ವೈಭವ ಧರೆಗೆಲ್ಲಾ ತೋರುವ ಮಾಧವ 4
--------------
ನಂಜನಗೂಡು ತಿರುಮಲಾಂಬಾ