ಒಟ್ಟು 8803 ಕಡೆಗಳಲ್ಲಿ , 129 ದಾಸರು , 4024 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಜ ರಾಜ ಮಹಾರಾಜ ಶ್ರೀಧವಾಗೋವಿಂದರಾಜ ಅಚರಾಚರ ಸಬೀಜಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಯುಗದಿಮತ್ಸ್ಯಕೂರ್ಮ- |ನಾದಿವರಾಹನರಸಿಂಹ- |ನಾದಿಹಿರಣ್ಯಕಶ್ಯಪನ |ಛೇದ ಮಾಡಿ ರಕ್ತ ಕುಡಿದಿ1ದ್ವಿತೀಯಯುಗದಿ ವಾಮನದ್ವಿತೀಯಉದರದಲಿ ಬಂದು | ಮಥಿಸಿ ಬಲಿಯ ಕ್ರೋಧದಿಂದ |ಸುತಳಕ್ಕೊತ್ತಿ ಬಿಟ್ಟೆಯಾ2ಪರಶುರಾಮ ರೇಣುಕಿಯ |ವರಸುಪುತ್ರನಾಗಿಜನಿಸಿ | ವೀರಸದಿಂದ ಕ್ಷತ್ರಿ (ಯರ)ನಿರಸ ಮಾಡಿ ಬಿಟ್ಟಿ3ರಾಮಚಂದ್ರ ದಾಶರಥಿಯ |ಶ್ಯಾಮನೀಲಮೇಘವರ್ಣ |ಸ್ತೋಮರಾವಣನ ಉದ್ದಾಮನವರ ವಂಶ ತರಿದಿ4ದ್ವಿತೀಯದ್ವಾಪರದಲ್ಲಿ | ಮಥಿಸಿ ಕಂಸ ಪೂತನೆಯ |ಕಾತರ ಮಾಡಿ ಕೌರವನು |ಪಥಕೆ ಹೊಂದಿಸಿ ಬಿಟ್ಟ ಕೃಷ್ಣ5ಕಲಿಯುಗ ಬರಲು ಬೌದ್ಧನಾಗಿ |ಛಲ ದ್ವೇಷಖಲಜನರ ಕಲಹ ಹೆಚ್ಚಲಾಗುತಿರೆ |ಕಲ್ಕಿ ಹಯಗ್ರೀವನಾದಾ6ಮೂರು ತಾಪದಿಂದ ಬೆಂದ |ಘೋರದುರಿತಭವದಮೂಲ ಬೇರ ಕಿತ್ತಿ ಬಿಸುಟಿದ ಶ್ರೀಶಪಾಲ ಶಂಕರೇಶ7
--------------
ಜಕ್ಕಪ್ಪಯ್ಯನವರು
ರಾಮ ನಾಮಾಮೃತವ ಕೊಂಬವರೆಲ್ಲ |ಪ್ರೇಮದಿಂದಚ್ಯುತ ಪೇಟೆಗೆ ಬನ್ನಿರೆ ಪಒಮ್ಮನವೆರಸಿ ಬನ್ನಿ |ನಿಮ್ಮ ಮನಕೆ ಬಂದಂತಳೆದು ಕೊಳ್ಳಿ ||ರಾಮಟಿಂಕೆಯ ಸಲಿಸಿ ಶ್ರೀ ಕೃಷ್ಣನೆಂಬ |ಧರ್ಮದ ಸಂತೆ ನೆರೆದಿದೆ ಬನ್ನಿ 1ಉಂಟು ನಾಲ್ಕು ಕುದುರೆಗಳು |ಎಂಟಾನೆಯ ಬಿರುಬಲೆಯಲ್ಲಿ ಕಟ್ಟಬಹುದು ||ಸಾಲವರ್ಣದ ಪಟ್ಟಿಯು ಏಳಿರೆ |ಏಳುಲೋಕವು ಬಲ್ಲದು 2ಬೆಲೆಯಿಲ್ಲದ ಮುತ್ತುಂಟು |ಏಳೇಳ್ಪುಟಿಯ ಹೊಳೆವಪರಂಜಿಯ ಚಿನ್ನವುಂಟು ||ಥಳಥಳಿಸುವ ನೀಲಿಯ ಕೊಂಬುವರೆಲ್ಲ |ನಳಿನನಾಭನ ಸನ್ನಿಧಿಗೆ ಬನ್ನಿ 3ಎರಡು ಕಾಶಿಯಲಳೆವ ಕೊಳಗವು |ಪಿರಿದುದೊಂದು ಕಿರಿದೊಂದು ಉಂಟಲ್ಲಿಗೆ ||ಗರಳವವೊರಿಸಲು ರತ್ನವು |ಮರುತಾಶ್ರಯನ ಸನ್ನಿಧಿಗೆ 4ಆರಂಗಡಿಯ ಸುಟ್ಟು |ಸೂರೆಮಾಡಿ ಏಳು ಎಂಟು ಹಟ್ಟಕೊರವನೊ...ದುದು ||ಸಾರಿಸಿ ನವವಿಧ ಶುಚಿಯ ಹೇಳಿದ |ಸರ್ವಾತ್ಮಗೆ ಸೌದೆಯ 5ಸುಂಕಿಗರೈವರಿಗೆ ಹರುಷದಿಂದ |ಪಂಕಜನಾಭನ ಚೀಲ ತೋರಿ ||ಶಂಕೆಯಿಲ್ಲದೆ ನಡೆವ ಅವರನೆಲ್ಲ |ವಂಚಿಸಿ ಎದೆಯ ಟೊಣೆದು ಹೋಗುವಾ 6
--------------
ಪುರಂದರದಾಸರು
ರಾಮ ರಾಮ ರಾಮ ರಾಮ ರಾಮವೆನ್ನಿರೊ |ರಾಮ ರಾಮವೆಂಬ ನಾಮ ಮನದಿ ನೆನೆಯಿರೊ ಪ.ಇಂದ್ರಿಯಂಗಳೆಲ್ಲ ಕೂಡಿ ಬಂದು ತನ್ನ ಮುಸುಕಿದಾಗ |ಸಿಂಧುಸುತಾಪತಿಯ ಧ್ಯಾನ ಅಂದಿಗೆ ಒದಗಲೀಯದು1ಭರದಿ ಯಮನ ಭಟರು ಬಂದು ಹೊರಡು ಎಂದು ಮುಟ್ಟಲು |ಕೊರಳಿಗಾತ್ಮ ಸೇರಿದಾಗ ಹರಿಯ ಧ್ಯಾನ ದೊರೆಯದಯ್ಯ 2ಕಾಸಶ್ವಾಸದಲ್ಲಿ ಸಿಲುಕಿ ದೋಷ ಬಲಿದು ಪೋಗುವಾಗ |ವಾಸುದೇವನೆಂಬ ನಾಮ ವದನದಲ್ಲಿ ಒದಗದಯ್ಯ 3ಶೃಂಗಾರವಾದ ದೇಹ ತಂಗಿಬಿಟ್ಟು ಪೋಗುವಾಗ |ಕಂಗಳಿಗಾತ್ಮಾ ಸೇರಿದಾಗ ರಂಗನ ಧ್ಯಾನ ದೊರಕದಯ್ಯ 4ಕಷ್ಟಜನ್ಮದಲ್ಲಿ ಬಂದು ದುಷ್ಟಕರ್ಮಗಳನು ಮಾಡಿ |ಬಿಟ್ಟು ಹೋಗುವಾಗ ಪುರಂದರವಿಠಲನ ನೆನೆಮನವೆ 5
--------------
ಪುರಂದರದಾಸರು
ರಾಮ ರಾಮ ರಾಮ ಸೀತಾ ರಾಮ ಎನ್ನಿರೋ ಪ.ಇಂದ್ರಿಯಂಗಳೆಲ್ಲ ಕೂಡಿಬಂದು ತನುವ ಮುಸುಕಲುಸಿಂಧು ಸುತೆಯ ಪತಿಯಧ್ಯಾನಎಂದಿಗಲ್ಲಿ ದೊರೆಯದೊ 1ಭರದಿ ಯಮನ ಭಟರಾಗಲೆಹೊರಡು ಎಂದು ಮೆಟ್ಟಿ ತುಳಿಯೆಕೊರಳಿಗಾತ್ಮ ಸೇರಿದಾಗಹರಿಯ ಧ್ಯಾನ ದೊರೆಯದೊ 2ದೋಷಕ್ಲೇಶ - ದುಃಖವೆಂಬಶ್ಲೇಷ್ಮದಲ್ಲಿ ಸಿಕ್ಕಿ ಇರಲುವಾಸುದೇವ ಕೃಷ್ಣನೆಂಬುದಾಸಮಯಕ್ಕೆ ದೊರೆಯದೊ 3ಸಿಂಗಾರವಾದ ದೇಹವೆಲ್ಲಅಂಗವಳಿದು ಮುರಿದು ಬೀಳೆ ||ಅಂಗಳಿಗಾತ್ಮ ಸೇರಿದಾಗರಂಗನ ಧ್ಯಾನವು ದೊರೆಯದೊ 4ಕೆಟ್ಟ ಕೆಟ್ಟರಲ್ಲೊ ಬರಿದೆಕಟ್ಟ ಕಡೆಯಲ್ಲಿಕಾಯಬಿಟ್ಟು ಹೋಗುವಾಗಪುರಂದರವಿಠಲ ಧ್ಯಾನ ದೊರೆಯದೊ 5
--------------
ಪುರಂದರದಾಸರು
ರಾಮ ರಾಮಾಯೆಂದು ಮಾರುತಿಯು ನಡೆದು |ಸೋಮವದನೆ ಜಾನಕಿಯನು ಹುಡುಕಾ ಪಹರಿಯಿಂದ ಗುರುತು ಪಡೆದು ತನ್ನ ಶಿಖದಲಿ |ಧರಿಸಿಕೊಂಡತಿಶಯ ಭಕುತಿಯಲಿ ||ತೆರಳಿ ಮುಂದು ಮುಂದಕೆ ಕಡಲ ಸಮೀಪದಿ ವಾ- |ನರಾಧೀಶ ಮಾಡಿದ ವಾಸವನೂ1ರವಿಜನ ಭಯದಿಂದ ಕಪಿಗಳೆ- |ಲ್ಲವು ಎದೆಯನೊಡೆದು ನಗದೊಳು ಕುಳಿತಿರಲು ||ಪವನಜನು ಬಂದು ವಿಚಾರವ ಮಾಡಲು ಸಾಗ- |ರವ ದಾಟಲೊಬ್ಬಗೊಶವಲ್ಲವೆಂದರೆಲ್ಲರಲ್ಲಿ 2ನಮ್ಮನು ರಕ್ಷಿಸೋ ಕುಲಮಣಿಯೆ ವಾಸುದೇವನ |ಮೊಮ್ಮಗನೆ ಎಂದು ಕಪಿಗಳು ಯಾಚಿಸೆ ||ಗಮ್ಮನೆ ಹಾರಿ ರಕ್ಕಸಿ ಹೊಟ್ಟೆಯ ಹೊಕ್ಕು ದಾಟಿ ಮತ್ತೇ |ಒಮ್ಮೆ ಒಬ್ಬಳನ್ನು ಸೀಳಿ ಪುರಪ್ರವೇಶ ಮಾಡಿದ3ಗಿಡಗಿಡ ಚರಿಸುತ ಸ್ಥಳ ಸ್ಥಳದಲಿ ಬಲು |ಹುಡುಕುತ ಮೂಜಗ ಪೂಜಿತನ ||ಮಡದಿಯಾಕೃತಿಯನು ಕಾಣಲಾಕ್ಷಣದೊಳು |ತಡೆದನಲ್ಲಿಯೇ ಪದಗಳ ಮುಂದಕ್ಕಿಡದಲೇ4ಋಷಿಗಳಂದದಿ ಪ್ರಾಣೇಶ ವಿಠಲನೆನುತಿರೆ |ಶಶಿಮುಖಿಯಳು ಆಂಜನೇಯ ಪದ |ಬಿಸಜಾಂಘ್ರಿಗಳಿಗೆರಗಿ ಜಯ ಜಯವೆಂದು |ಉಸಿರಿದ ರಘುಪತಿಯ ಸುದ್ದಿ ವಿಸ್ತರದಲಿ 5
--------------
ಪ್ರಾಣೇಶದಾಸರು
ರಾಮಕೃಷ್ಣರು ಮನೆಗೆ ಬಂದರು ಬಾಗಿಲ ತೆರೆಯಿರೊ |ಕಾಮಧೇನು ಬಂದಂತಾಯಿತು ಸುಖವ ಸುರಿಯಿರೊ ಪಮಕರಕುಂಡಲನೀಲಮುತ್ತಿನ ಚೌಕಳಿ ಇಡುತಲಿ |ಸುಕುಮಾರ ಸುಂದರವಾದ ಉಡುಗೆಯುಡತಲಿ ||ಮುಖದಕಮಲಮುಗುಳನಗೆಯ ಸುಖವ ಕೊಡುತಲಿ |ಕಂಕಣ ಹಾರ ತೋಳಬಂದಿ ತೊಡಿಗೆ ತೊಡುತಲಿ 1ಚೆಂಡು-ಬೊಗರಿ-ಚಿಣ್ಣಿಕೋಲು-ಗಜುಗವಾಡುತ |ದುಂಡುಮಲ್ಲಿಗೆತುಂಬಿಕೊಳಲನೂದಿ ಪಾಡುತ ||ಮಿಂಡೆವೆಂಗಳ ಮುದ್ದು ಮೊಗದ ಸೊಗವ ನೋಡುತ |ಭಂಡುಮಾಡಿ ಭಾಮೆಯರೊಡನೆ ಸರಸವಾಡುತ 2ಪೊಕ್ಕುಳಲ್ಲಿ ಅಜನ ಪಡೆದ ದೇವದೇವನು |ಚಿಕ್ಕ ಉಂಗುಟದಿ ಗಂಗೆಯ ಪಡೆದನಾತನು ||ಮಕ್ಕಳ ಮಾಣಿಕ್ಯ ಪುರಂದರವಿಠಲ ರಾಯನು |ಭಕ್ತ ಜನರಿಗೊಲಿದ ನೀನು ಮುಕ್ತಿದಾತನು 3
--------------
ಪುರಂದರದಾಸರು
ರೂಹ ಹೇಳುವೆ ಕೃಷ್ಣನ ಕೃಪೆಯಲ್ಲಿನವೀನ ಜನನ ಮೃತ್ಯು ಭಯವೆಲ್ಲಿ ಪ.ಕುಶತಲ್ಪ ತಂತ್ರಸಾರಾರ್ಚನೆಯೆತ್ತಖಳಪ್ರಸರದ ಗೊಂದಣದಾರಿಯೆತ್ತಹೊಸಮಲ್ಲಿಗೆಯ ಹಾರ ಸುರಭ್ಯೆತ್ತ ಮಲಕಶ್ಮಲರತ ಗ್ರಾಮಸೂಕರೆತ್ತ 1ಚಕ್ರಪಾಣಿ ಒಲುಮೆ ವಿರತರಿಗುಂಟುಕರ್ತವಿಕ್ರಮವಾದಶೀಲಗೆ ಮತ್ತ್ಯೆಲ್ಲುಂಟುತಕ್ರಭಿನ್ನ್ವಾದರೆ ಹಾಲ ಹೋಲಲಿಲ್ಲ ಭಕ್ತಿವಕ್ರನೆಂದೆಂದಿಗೆ ಭಾಗವತನಲ್ಲ 2ಡಂಬರ ಶ್ರದ್ಧೆಗೆಹರಿಮೆಚ್ಚಲಿಲ್ಲ ಸಲೆಡೊಂಬ ರಾಷ್ಟ್ರ ತಿರುಗೆ ಭೂ ಪ್ರದಕ್ಷಿಣೆಯಲ್ಲಅಂಬುಜಾಕ್ಷನನ್ನು ನಂಬದವ ಕ್ಷುಲ್ಲ ಗತಅಂಬಕನ ನೋಟ ಬದಿಯ ಧನದಲಿಲ್ಲ 3ಇಂದಿರೇಶಮಹಿಮೆ ಮತಿಮಂದಗೇನು ದೀಪಹೊಂದಟ್ಟೆ ಭೋಜನಸುಖ ಶ್ವಾನಗೇನುಎಂದೂ ಸಾಧುಸಂಗಸೌಖ್ಯ ಕುಹಕಗಿಲ್ಲ ಕೆಚ್ಚಲೊಂದಿದ ಉಣ್ಣೆಗೆ ಕ್ಷೀರಸ್ವಾದವಿಲ್ಲ 4ಪೂರ್ವಕೃತಪುಣ್ಯ ಒದಗದೆಂದಿಗಿಲ್ಲ ಯತಿಸರ್ವಜÕರಾಯನ ಮತ ಸುಲಭವಲ್ಲಉರ್ವಿಯೊಳು ಸಮೀರಮತಸ್ಥರಕಾವತಂದೆಸರ್ವೇಶ ಪ್ರಸನ್ನವೆಂಕಟಾಧಿದೇವ 5
--------------
ಪ್ರಸನ್ನವೆಂಕಟದಾಸರು
ಲಕ್ಷ್ಮೀದೇವಿನೀನನ್ನ ಹೇಳಬಾರದೇನೆ ತಾಯಿನಿನನ್ನವಾನರವಂದಿತ ಶ್ರೀನಿವಾಸಗೆ ಬುದ್ಧಿ ಪಶ್ರೀನಿಧಿಪರನೆಂದು ನಂಬಿ ಬಂದ ಬಡಪ್ರಾಣಿಯ ಪೊರೆಯಂದು ಜಾನಕಿ ದೇವಿಯೇ 1ಮೊರೆ ಹೊಕ್ಕವರಕರಪಿಡಿವನೆಂಬೊ ಘನಾಬರದು ಉಳಿಸಿಕೊ ಎಂದ್ಹರುಷದಿ ಸಿರಿದೇವಿ 2ಉರಗಶಾಯಿ ಶಿರಿಗೋವಿಂದ ವಿಠಲ ತುರುಗಗ್ರೀವನರಹರಿಗೆ ತ್ವರಿತದಲ್ಲಿ 3
--------------
ಸಿರಿಗೋವಿಂದವಿಠಲ
ಲಾಲಿಪಂಪಾಂಬಿಕೆಲಾಲಿಭ್ರಮರಾಂಬಿಕೆಲಾಲಿಬಗಳಾಂಬಿಕೆಲಾಲಿಲಾಲಿಎಂದು ಪಾಡಿರಿ ಸಾಧು ಸಜ್ಜನರೆಲ್ಲದೇವಿ ತಾನೇ ಎಂದುಲಾಲಿಪಅದ್ವಯಾಗಮ ದ್ಯುತಿಗೋಚರ ಅನಾದಿಅಚಲಾನಂದವೇಲಾಲಿಶುದ್ಧ ಸಮ್ಯಕ್ ಜ್ಯೋತಿರ್ಮಯ ಸ್ವರೂಪಸುಚರಿತ್ರ ನಿಶ್ಚಲಲಾಲಿಚಿದ್ಬಯಲಿನೊಳು ಹೃದಯ ತೊಟ್ಟಿಲೊಳುಭಾವಹಾಸಿಗೆಯಲ್ಲಿ ಪವಡಿಸಿಹೆಲಾಲಿಸಿದ್ಧರಿ ಮಲಗಿನ್ನು ಜೋಗುಳ ಪಾಡುವೆಶ್ರೀ ಮಹಾಲಕ್ಷ್ಮಿಯೇಲಾಲಿ1ನಿತ್ಯನಿರ್ಗುಣ ನಿಷ್ಕಲಂಕ ನಿರ್ವಿಕಲ್ಪನಿಜನಿತ್ಯ ನಿರ್ಮಳೆಲಾಲಿಸತ್ಯ ವಸ್ತುವೆ ಸನಾಥ ವಿಶೋತ್ಪತ್ತಿಸರ್ವಪರಬ್ರಹ್ಮರೂಪಲಾಲಿಪ್ರತ್ಯಗಾತ್ಮಳೆ ಪೂರ್ಣಪರಮ ಪರತರವಂದ್ಯೆಪಾವನ ಚಾರಿತ್ರೆಲಾಲಿಕರ್ತೃನೀ ಅನಂತ ಬ್ರಹ್ಮಾಂಡಾದಿಗಳಿಗೆಕರುಣಾ ಸಮುದ್ರವೇಲಾಲಿ2ಪೃಥ್ವಿಅಪ್ಪುತೇಜವಾಯುರಾಕಾಶಕ್ಕೆಪೃಥಕಾಗಿ ಹೊಳೆದಿಹಳೆಲಾಲಿಸತ್ವರಜತಮಸು ಮೂರರೊಳಗೆ ನೀಸಾಕ್ಷಿರೂಪದಲಿರುವೆಲಾಲಿವೇದ ವೇದಾಂಗಗಳ ವಾಗ್ರೂಪಿನಲ್ಲಿನೆಲೆಸಿ ರಂಜಿಪಳೆಲಾಲಿತತ್ವವಿಂಶತಿ ಪಂಚಶರೀರಗಳೊಳಗೆ ನೀತೊಳ ತೊಳಗಿ ಬೆಳಗುತಿಹೆಲಾಲಿ3ಜಾಗೃತ ಸ್ವಪ್ನ ಸುಷುಪ್ತಿ ಮೂರವಸ್ಥೆಜನಿತದಿ ಕಾಣಿಸಿಲಾಲಿಪ್ರಾಜÕತೈಜಸವಿಶ್ವಮೂರು ಮೂರುತಿಯಾಗಿಪರಿಣಮಿಸಿ ತೋರುವೆಲಾಲಿಶೀಘ್ರದಲಿ ಸದ್ಭಾವ ಸಚ್ಛಿಷ್ಯರಾದರ್ಗೆಸ್ವಾನಂದ ಸುಖವೀವೆಲಾಲಿರೌದ್ರದಲಿ ಭುಗುಭುಗು ಭುಗಿಲೆಂಬ ಕಳೆಗಳುಅತ್ಯುಗ್ರದಿ ಝಂಗಿಸುವೆಲಾಲಿ4ವಿದ್ಯಾವಿದ್ಯವ ತೋರಿ ದೃಶ್ಯಾದೃಶ್ಯಕೆ ಮೀರಿಅದೃಶ್ಯರೂಪ ಶ್ರೀ ಲಕ್ಷ್ಮೀಲಾಲಿಸಿದ್ಧಿಗಳೆಂಬುವ ಛೇದಿಪ ಹರಿಹರಸರಸಿಜೋದ್ಭವ ಮಾತೆಲಾಲಿಸಿದ್ಧ ಪರ್ವತವಾಸ ಸಾಹಸ್ರದಳ ಮಧ್ಯೆಶ್ರೀ ಬಗಳಾಮುಖಿಲಾಲಿಸದ್ಗುರು ಚಿದಾನಂದಅವಧೂತಬಗಳಾಂಬ ಸಗುಣನಿರ್ಗುಣಮೂರ್ತಿಲಾಲಿ5
--------------
ಚಿದಾನಂದ ಅವಧೂತರು
ಲಾಲಿಮುಕುಂದಲಾಲಿಗೋವಿಂದಲಾಲಿಮಯ್ಯಲಾಲಿಲಾಲಿಮೂರೈದಲಿಪ್ಪೆಲ್ಲಾಲಯರ ಪ್ರಭುಲಾಲಿಮಯ್ಯಲಾಲಿಪ.ಜಗ ಜಗುಳಿಸಿ ವಟಪತ್ರದಿ ಮಲಗಿದೆಲಾಲಿಮಯ್ಯಲಾಲಿಮಗುವಾಗಿ ವ್ರಜದೊಳು ತೊಟ್ಟಿಲೊಳೊಪ್ಪಿದೆಲಾಲಿ ಮಯ್ಯಲಾಲಿ1ಸ್ವಗತ ಭೇದ ವಜ್ರ್ಯ ಪರಮಾತ್ಮ ಪರಬ್ರಹ್ಮಜಗದ ಜೀವರ ಬಿಂಬಮೂರ್ತಿಅನಂತನೆಪಯೋನಿಧಿವಾಸ ಪರೇಶ ಪರಿಪೂರ್ಣಶ್ರೀಯರಸ ವೈಕುಂಠವಲ್ಲಭ ಕೃಷ್ಣಯ್ಯಸುರರ ಪುಣ್ಯದವಲ್ಲಿಫಲಿಸಲಿಲ್ಲುದಯಾದೆಧರೆಯ ಪಾವನ ಮಾಡೆ ಪಾಂಡವರಕಾಯಬಂದೆಅಜಮಿಳ ಗಜರಾಜ ಧ್ರುವ ಅಂಬರೀಷಪಾಲಸುಜನಪ್ರಹ್ಲಾದನ ಸಲಹಿದ ನರಹರಿಅಸಮ ಬಾಲಕನಾದೆ ಅವ್ಯಾಕೃತಾಂಗನೆವಿಷಮ ವಿದೂರಾಗಣಿತ ಸುಗುಣಾರ್ಣವಸ್ಮøತಿಗಿರಿಧರೆಶಿಶು ಮೃಗಚೇಲಧರ ಭಾರ್ಗವಕ್ರತುಕೃಷ್ಣೆಭವಧರ್ಮಪಾಲ ಪ್ರಸನ್ವೆಂಕಟೇಶ
--------------
ಪ್ರಸನ್ನವೆಂಕಟದಾಸರು
ಲಿಂಗವ ಕಟ್ಟುವ ವಿವರವ ಹೇಳುವೆತಲೆವಾಗಿ ಕೇಳಲೆ ಹುಚ್ಚು ಬಡ್ಡಿಲಿಂಗ ಕಟ್ಟಿದೆಯಾದರೆ ಚಿದಾನಂದಲಿಂಗವಾಗುವೆ ಹುಚ್ಚು ಬಡ್ಡಿಪಹೊಟ್ಟೆಯೊಳಗಿರೆ ತಾಯಿಗೆ ಲಿಂಗವಕಟ್ಟುವೆಯೋ ಹುಚ್ಚು ಬಡ್ಡಿಮುಟ್ಟುಮಿಂದಿರೆ ಬಿಂದು ಬೀಳುವಾಗ ಲಿಂಗವಕಟ್ಟಿದೆಯಾ ಹುಚು ಬಡ್ಡಿಕಟ್ಟುವೆ ಯಾರಿಗೆ ಕಟ್ಟಿಕೊಂಬವನಾರುಇಷ್ಟು ಅರಿಯೆ ಹುಚ್ಚು ಬಡ್ಡಿಕಟ್ಟಿದೆಯಾದರೆ ಅಂಗವೆ ನೀನಾಗುನಿಜಲಿಂಗನಹೆ ಹುಚ್ಚು ಬಡ್ಡಿ1ಲಿಂಗ ಹೋಯಿತು ಎಂದು ಪ್ರಾಣವ ಕೊಡುವೆಯೋಲಿಂಗ ಹೋಯಿತೆ ಹುಚ್ಚು ಬಡ್ಡಿಲಿಂಗವು ಹೋದರೆ ನೀನು ಉಳಿವುದೆಂತುಲಿಂಗವು ನೀ ಹುಚ್ಚು ಬಡ್ಡಿಲಿಂಗವ ನೀನೆರಡಾಗಿ ಲಿಂಗವ ಕಟ್ಟಿಹೆಲಿಂಗಾಗಿಯೇ ಹುಚ್ಚು ಬಡ್ಡಿಅಂಗ ಸಜ್ಜೆಯು ಆಗಿ ಲಿಂಗವೇ ನೀನಿರೆಲಿಂಗ ಕಟ್ಟಿದೆ ಹುಚ್ಚು ಬಡ್ಡಿ2ಲಿಂಗವನೆ ಕಟ್ಟಿನಿದ್ರೆಯ ಮಾಡಲುಲಿಂಗವೆಲ್ಲಿತ್ತೋ ಹುಚ್ಚು ಬಡ್ಡಿಲಿಂಗವ ನೀನೀಗ ಲಿಂಗೆಂದು ಪೂಜಿಸನೀನಾರೋ ಎಲೆ ಹುಚ್ಚುಬಡ್ಡಿಲಿಂಗ ಚಿದಾನಂದ ಸದ್ಗುರುವನು ಹೊಂದುಲಿಂಗವ ತಿಳಿವೆ ಹುಚ್ಚು ಬಡ್ಡಿಲಿಂಗವ ತಿಳಿದ ಬಳಿಕ ಲಿಂಗಅಂಗವು ಅಂಗ ಲಿಂಗವು ಹುಚ್ಚು ಬಡ್ಡಿ3
--------------
ಚಿದಾನಂದ ಅವಧೂತರು
ಲೊಳಲೊಟ್ಟೆ - ಬದುಕು - ಲೊಳಲೊಟ್ಟೆ ಪ.ಆನೆ ಕುದುರೆ ಮಂದಿ ಲೊಳಲೊಟ್ಟೆ - ಬಲು |ಸೈನ್ಯ ಭಂಡಾರವು ಲೊಳಲೊಟ್ಟೆ ||ಮಾನನಿಯರ ಸಂಗ ಲೊಳಲೊಟ್ಟೆ - ಮಹಾ |ಮಾನ್ಯ - ವಿಜಯರೆಲ್ಲ ಲೊಳಲೊಟ್ಟೆ 1ಮುತ್ತು - ಮಾಣಿಕ - ಚಿನ್ನ ಲೊಳಲೊಟ್ಟೆ - ಬಲು |ಛತ್ರ - ಚಾಮರಗಳು ಲೊಳಲೊಟ್ಟೆ ||ಸುತ್ತಗಳು ಕೋಟೆಯು ಲೊಳಲೊಟ್ಟೆ - ಅಲ್ಲಿ |ಸುತ್ತುವ ಜನವೆಲ್ಲ ಲೊಳಲೊಟ್ಟೆ 2ನೆಂಟರು - ಇಷ್ಟರು ಲೊಳಲೊಟ್ಟೆ - ದೊಡ್ಡ |ಕಂಟಕಾನಾಹೊದು ಲೊಳಲೊಟ್ಟೆ ||ಉಂಟಾದ ಗುಣನಿಧಿ ಪುರಂದರವಿಠಲನ |ಬಂಟನಾಗದವ ಲೊಳಲೊಟ್ಟೆ 3
--------------
ಪುರಂದರದಾಸರು
ವಂದಿಸಿ ನೋಡುವ ಬಾರೆ ಇಂದುಮುಖಿಯಳೆ ರಾಘ-ಬಹುಜನುಮಗಳಲ್ಲಿ ಅಹಿಶಾಯಿ ಇವರಿಂದನರಹರಿರೂಪ ತಾನಾಗಿ ಪರಿಪರಿಯಲಿ ಬಂದಂಥವ್ಯಾಸರೂಪನಾಗಿ ಇಲ್ಲಿ ವಾಸವಾಗಿ ಬಂದಬಂದಅನಿರುದ್ಧಾದಿ ನಾಲ್ಕುಮೂರ್ತಿಘನವಾಗಿ ತಾವಿದ್ದು ಪ್ರತಿದಿನಆ
--------------
ಗೋಪಾಲದಾಸರು
ವಂದಿಸಿದರ ಕಾವೆ ವರವನೀವೆ ಅಹಿಪವೀಂದ್ರಭವಸುರರಗುರುಮಧ್ವಮುನಿರಾಯಪ.ಒಂದೊಂದುಶ್ರುತಿಸ್ಮøತಿಗೆ ಬಹ್ವಾರ್ಥಗಳ ಪೇಳದೆಒಂದೆರಡು ತತ್ವವಿಸ್ತರವ ಪೇಳಿದೆಒಂದು ಮೂರವತಾರದಲ್ಲಿ ಹರಿಯನೆ ಒಲಿಸಿಒಂದು ನಾಲ್ಕರ ಭೇದ ನಿಜರಿಗರುಹಿದೆಯ 1ಒಂದೈದು ರಿಪುವರ್ಗ ನಿಗ್ರ್ರಹವ ಮಾಡಿಸಿದೆಒಂದಾರು ತ್ರಿಗುಣಿಸಿದ ಮತವ ಮುರಿದೆಒಂದೇಳು ಮದವ ಕಾಲಲಿ ಮೆಟ್ಟಿ ಹರಿಪುರಕೆಒಂದೆಂಟು ಭಕುತಿಪಥ ತೋರ್ದೆ ವೈಷ್ಣವರಿಗೆ 2ಒಂದು ಒಂಬತ್ತು ಹರಿಯವತಾರ ಕಥೆ ರಚಿಸಿಒಂದು ಹತ್ತೇಂದ್ರಿಯದ ಗೆಲವ ಕಳಿಸಿಒಂದು ಹನ್ನೊಂದು ಸ್ತೋತ್ರದಿ ಕೃಷ್ಣನ ಮೆಚ್ಚಿಸಿದೆಒಂದು ಹನ್ನೆರಡು ತತ್ವದಾಗ 3ಒಂದು ಹದಿಮೂರು ಭುವನಗಳಲ್ಲಿ ನೀ ವ್ಯಾಪ್ತಒಂದು ಹದಿನಾಲ್ಕು ದ್ವಿಗುಣಿಸಿದ ಮ್ಯಾಲೇಳೊಂದಿದ ಸದ್ಗ್ರಂಥಗಳ ನಿರ್ಮಿಸಿ ಬುಧರಿಗಿತ್ತೆಒಂದು ಹದಿನೈದು ಗುಣದ ಲಕ್ಷಣಾಂಗ 4ಒಂದು ಹದಿನಾರೆಂಟು ತತ್ವ ಸಿದ್ಧಾಂತದಲಿಒಂದು ಹದಿನೇಳು ಪರ್ವಮೋಹಕ ಬಿಡಿಸಿದೆಒಂದು ಮನದಿಂದ ಶಿರಿ ಪ್ರಸನ್ನವೆಂಕಟ ಕೃಷ್ಣನಒಂದೊಂದು ಗುಣಕೆ ಅನಂತ ವ್ಯಾಖ್ಯಾನ 5
--------------
ಪ್ರಸನ್ನವೆಂಕಟದಾಸರು
ವನಜನಾಭನ ಧಾಳಿ ಘನವಾಯಿತಿಂದಿಲಿಂದಮನೆಯೊಳು ನಿಲ್ಲಲಾರೆವಮ್ಮ ಪಚಿನ್ನನ ಸುದ್ದಿನಿತ್ಯಹೇಳುವರು ಹತ್ತರಗೂಡಾ |ಹನ್ನೊಂದೆನ್ನ ಬೇಡವಮ್ಮ ||ಅನ್ಯಾಯದ ಮಾತುಹುಸಿಹುಟ್ಟಿಸಿಯಾಡಿದರೆ ನಮ್ಮ |ಸಣ್ಣವರಾಣೆ ಗೋಪೆಮ್ಮ 1ಪೋರರಾಟಿಕೆಯಾದರೆ ಜನನೋಡೆ ನಿರ್ಭಯದಿ |ಕ್ಷೀರವ ಕುಡಿಯಬೇಕಮ್ಮ ||ಆರೂ ಮನೆಯೊಳಿಲ್ಲದ ಸಮಯದಲ್ಲಿ ಪಾಲು |ಸೋರೆ ಕದ್ದೊಯ್ಯುತಿದ್ದನಮ್ಮ2ಚಿಕ್ಕವರನ್ನು ರಂಬಿಸಿ ಸಕ್ಕರೆ ಕೊಟ್ಟು ಕದ್ದು |ರೊಕ್ಕವ ತನ್ನಿರೆಂಬುವನಮ್ಮ ||ಮಕ್ಕಳಾಟಿಕೆ ಆದರಾಯಿತೆ ನಿನ್ನ ಕಂದ |ರೊಕ್ಕವನೇನು ಮಾಡ್ಯಾನಮ್ಮ 3ಏಕಾಂತ ಮನೆಯೊಳು ಸರು ಹೊತ್ತಿನಲ್ಲಿ ಬಂದು |ಶ್ರೀಕಾಂತನಡಗಿದ್ದನಮ್ಮ ||ಹೇ ಕಾಂತೆ ನಿನ್ನ ಸಲಿಗಿಲ್ಲದೆಂತು ಬಂದನೆಂದು |ಆ ಕಾಂತ ಸಂಗ ಬಿಟ್ಟನಮ್ಮ 4ನೀರೊಳು ನೆರಳೆಂದು ತಿಳಿಯದ ಮಗುವಿಗೆ |ಪೋರನೆಳೆದು ತಾಯಂಬೊನಮ್ಮ ||ಹಾರುತಿರಲು ಸ್ವಾಮಿಯ ದಯೆಯಿಂದ ಕಂಡು ಒಬ್ಬ |ನಾರಿ ಕರಕೊಂಡು ಬಂದಳಮ್ಮ 5ತರಳರಿಗೆಲ್ಲ ಇದರಂತೆ ಹತ್ತಿರೆಂದು ಹೇಳಿ |ಹರಿವಂದು ಹತ್ತಿಕೊಂಬೊನಮ್ಮ ||ಕರುಗಳೆಲ್ಲವು ಹೀಗೆ ಹತವಾಗಿ ಪೋಪವು |ತುರುಗಳ ಗಡಹವಮ್ಮ6ಬಾಲನ ಮನೆಯೊಳಗಿರ ಹೇಳಿ ಉದಕವ |ವಾಲಯಕೆ ತರಹೋದೆನಮ್ಮ ||ಮೂಲೇಶ ಹುಡುಗನ ಕೈಯಕಟ್ಟಿಮನೆಯೆಲ್ಲ |ಹಾಳು ಮಾಡಿಯೇನೋ ತಂದನಮ್ಮ 7ಹುಡುಗರ ಅಂಬೆಯಾಗಿಯೇರಿಸಿಕೊಂಡಾಡಿಸಿ |ಕೆಡಹಿ ಕೈಕಾಲು ಮುರಿದನಮ್ಮ ||ಬಡವರೆಂದರೆ ಪುನಃ ಬಿಡದಲೆ ತಾ ಹತ್ತಿ |ನಡುವ ನೋಯಿಸೀಹ ನೋಡಮ್ಮ 8ಬಾಲೆ ಅದೇನು ಕಾರಣವೋ ತಿಳಿಯದು ನಮ್ಮ |ಮೂಲೆಯಲಡಗಿದ್ದನಮ್ಮ ||ಛೀ ಲಕುಮೀಶ ನಡೆಯೆಂದೆ ಕೈ ಸಂಧಿಸದಾಕಳ |ಮೊಲೆ ಉಂಡಿದ್ದನಮ್ಮ 9ಗಂಡಅತ್ತೆಯ ಮನೆಘೋಗಿ ನಡುವ ಹೆಣ್ಣಾ |ಪುಂಡ ಬಂದಪ್ಪಿಕೊಂಡನಮ್ಮ ||ಕಂಡು ನಾನಿದು ತರವೇನೆಲೆ ರಂಗಾಯೆನ್ನಲು |ಭಂಡು ಮಾಡಿದನು ನೋಡಮ್ಮ 10ಭ್ರಷ್ಟ ಮಾತಲ್ಲವೆ ಬಾಣಂತಿ ಮಂಚದಡಿ ಕೆಂಡ- |ವಿಟ್ಟರೆ ಕಾಸಿಕೊಂಡನಮ್ಮ ||ಥಟ್ಟನೆ ಕಂಡಂಜಿ ಪ್ರಾಣಾಂತಿಕ ಆಯಿತು ಪ್ರಾಣೇಶ |ವಿಠಲನಿಂಥವ ಕಾಣಿರಮ್ಮ 11
--------------
ಪ್ರಾಣೇಶದಾಸರು