ಒಟ್ಟು 14849 ಕಡೆಗಳಲ್ಲಿ , 135 ದಾಸರು , 6533 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುತ್ತು ಬಂತಿದೆ ದಿವ್ಯ ಮುತ್ತು ಕೊಳ್ಳಿರೋ ಪ ಮುತ್ತು ಬಂದಿಹುದೀಗ ನೀವೇತ್ತಿಕೊಳ್ಳಿರೆಲ್ಲ ಬಂದು ಉತ್ತಮ ವ್ಯಾಘ್ರಾದ್ರಿ ಪುರುಷೋತ್ತಮನೆಂಬುವ ದಿವ್ಯ 1 ಲೆಕ್ಕವಿಲ್ಲದ ಹಣವಿತ್ತರು ಸಿಕ್ಕದ ದುರ್ಲಭ ಮುತ್ತು ರೊಕ್ಕವಿಲ್ಲದೆ ಭಕ್ತರಿಗೆ ಪುಕ್ಕಟೆಯಲಿ ಸಿಕ್ಕುವಂಥ 2 ಧನವಂತರಿಗೆ ದೊರಕುವದಲ್ಲ ಜನರ ಕೈಗೆ ಸಿಕ್ಕುವದ್ಲ ಮನದಲ್ಲಿ ಧ್ಯಾನಮಳ್ಪ ಮುನಿಗಳ ಸ್ವಾಧೀನವಾದ 3 ಕ್ಷೀರಪಾರಾವಾರದಲ್ಲಿ ತೋರಿ ಮೆರೆವ ಮುತ್ತು ಶ್ರೀರಮಾ ಮನೋಹರನುದಾರ ವರದ ವಿಠಲನೆಂಬ 4
--------------
ವೆಂಕಟವರದಾರ್ಯರು
ಮುತ್ತು ಬಂದಿದೆ-ದಿವ್ಯ ಮತ್ತು ಕೊಳ್ಳಿರೋ ಪ ಮುತ್ತು ಬಂದಿಹುದೀಗನೀವೆತ್ತಿರೊಳ್ಳಿರೆಲ್ಲಬಂದು ಉತ್ತಮವ್ಯಾಘ್ರಾದ್ರಿಪುರುಷೋತ್ತಮನೆಂಬುವ ದಿವ್ಯ 1 ಲೆಕ್ಕವಿಲ್ಲದ ಹಣವಿತ್ತರು ಸಿಕ್ಕದದುರ್ಲಭ ಮುತ್ತು ರೊಕ್ಕವಿಲ್ಲದೆ ಭಕ್ತರಿಗೆ ಪುಕ್ಕಟೆಯಲಿ ಸಿಕ್ಕುವಂಥ 2 ಧನವಂತಗೆ ದೊರಕುವುದಲ್ಲ ಜನರ ಕೈಗೆ ಸಿಕ್ಕುವದಲ್ಲ ಮನದಲ್ಲಿ ಧ್ಯಾನಮಾಳ್ವಮುನಿಗಳ ಸ್ವಾಧೀನವಾದ 3 ಕ್ಷೀರಪಾರಾವಾರದಲ್ಲಿ-ತೋರಿ ಮೆರೆವ ಮುತ್ತು ಶ್ರೀರಮಾಮನೋಹರನುದಾರ ವರದ ವಿಠಲನೆಂಬ 4
--------------
ಸರಗೂರು ವೆಂಕಟವರದಾರ್ಯರು
ಮುತ್ತೂರೇಶ ಶ್ರೀ ಮರ್ಕಟಾ ತುಲಸÀದಲಾಯತಾಕ್ಷ ಶ್ರೀರಾಮದೂತಾ ಪ ಎತ್ತ ಚಲಿಸದಂತೆನ್ನ ಮನವ ತವ ಪಾದ ಸರೋಜದೊಳಿಟ್ಟು ಪತ್ತು ತಲೆಯನರಿಯಡಿದಾವರೆಯನು ನಿತ್ಯ ಭಜಿಸುವಂದದಿ ಮಾಡಯ್ಯ 1 ಆಂಜನೇಯಾ ಭೀಕರ ರೂಪಾ ದಾನವ ಘಾತಕರಾ ಸತಿ ಮೇದಿನಿ ಸುತೆಯಳ ಮಂಜುಮಾಡಿ ಖಲ ರಾವಣನೊಯ್ಯಲು ಅಂಜದಿರೆಂದವನಿಪ- ನಿಗಭಯವಿತ್ತು ಮಂಜುಂ ಕಾರ್ಯವ ನೆರೆದಪೆನೆಂದೀ 2 ಭಾರತೀಯ ಪವÀನತನಯ ಘನತರ ಕಾರ್ಯಕರ್ತಾ ಶ್ರೀರಾಮದೂತಾ ಘೋರತರದ ಅಪರಾರ್ಣವನು ಹಾರಿ ದಾಂಟಿ ಲಘು ದಶಮುಖಪುರವನು ವೀರರಾಘವನಂಘ್ರಿಗೆ ಎರಗಿದಿ ನೀ 3 ದಾನವನಾಶಾ ಜಾನಕೀತ್ರಾತ ದಶರಥಸುತ ಭಜಕಾ ಆನಂದತೀರ್ಥ ದಾನವ ಕೋಟಿಯ ನಡೆದು ಜವದಿ ನೀ ಮೌನಿ ಹರಿಗೆ ಸಹಾಯಾಗ್ರಣಿಯಾಗಿ ಹೀನ ರಕ್ಕಸ ದಶ- ಶಿರವನರಿಸಿ ನೀ ನರಸಿಂಹವಿಠಲನ ದಾಸನೆನಿಸಿದೀ 4
--------------
ನರಸಿಂಹವಿಠಲರು
ಮುದದಿ ನಂಬಿದೆನೊ ಹಯವದನನೆ ಪ. ಭಕ್ತರನ್ನು ಭವಸಮುದ್ರದಿಂದ ನೂಕೊಇತ್ತ ಒಂದು ತಿಳಿಯಧ್ಹಾಗೆ ಹೀಗೆ ಇರುವರೊ 1 ಮಾಯಪಾಶದೊಶಕೆ ಕೊಟ್ಟ ಮಾಯಕಾರನ ತೋಯಜಾಕ್ಷ ನಾನಿದಕುಪಾಯ ಕಾಣೆನೊ2 ಸತ್ಯಸಂಧÀನೆಂಬೊ ಬಿರುದು ಎತ್ತಹೋಯಿತೊ ಹಸ್ತಿವರದನೆಂಬೋ ಕೀರ್ತಿ ಸುತ್ತಮೆರೆಸಿತೊ 3 ಗೂಢತನದಿ ಗುಡಿಯ ಮಾಡದಲ್ಲಿ ಇರುವರೆನಾಡಜನರು ನಿನ್ನ ಆಡಿಕೊಳದೆ ಬಿಡುವರೆ4 ಸಿರಿಹಯವದನ ಶೈನ (ಎನ್ನ?) ಗುರು ಶಿರೋಮಣಿಧರೆಯೊಳರಸಿದೆನೊ ನಿನಗೆ ಸರಿಯು ನಾ ಕಾಣೆ 5
--------------
ವಾದಿರಾಜ
ಮುದವ ಬೀರುವುದೊ | ಬದರಿಯ ನಿಲಯನೇ ಪ ಮುದವ ಬೀರುವುದು | ಬದರಿಯ ನಿಲಯ ಶ್ರೀವಿಧಿ ವಿಬುಧಾದ್ಯರ | ಮುದಕೆ ಕಾರಣನೇ ಅ.ಪ. ಪಾದ ಉರ | ಮಂದೀರದಲಿ ಧರಸುಂದರಾಂಗನೆ | ಗೋವಿಂದ 1 ಇಂದ್ರ ನಿನ್ನಯ ತಪ | ಕುಂದೀಸೆ ಅಪ್ಸರವೃಂದಾ ಕಳುಹೆ | ಗೋವಿಂದ ||ಚೆಂದಾದುಡಿಗೆ ಉಟ್ಟ | ಅಂದಾಭರಣ ತೊಟ್ಟಮಂದಾಗಮನೆರೆಲ್ಲ | ಗೋವಿಂದ || ಅಂದಿಗೆ ಕಾಲ್ಗೆಜ್ಜೆ ದಂಧಣಿರೆನ್ನ ಕುಣಿದುನೊಂದು ಶ್ರಮಗಳಿಂದ | ಗೋವಿಂದ ||ಕಂದರ್ಪ ಪಿತ ತನ್ನ | ಸುಂದರೂರುವಿನಿಂದಸುಂದರಿಯನ್ನೆ ಕೊಟ್ಟ | ಗೋವಿಂದ 2 ಮಂದಗಮನೆರೆಲ್ಲ | ಸುಂದರಿಯನ್ನೆ ಕೊಂಡುಇಂದ್ರಂಗೆ ಇತ್ತರು | ಗೋವಿಂದ ||ಎಂದೆಂದು ಕಾಣದ | ಸುಂದರಾಕೃತಿ ಕಂಡು ಕಂದೀತು ಇಂದ್ರ ಮುಖ | ಗೋವಿಂದ ||ವೃಂದಾರಕೇಂದ್ರನು | ಅಂದು ಪರಾಶರಜಗೊಂದಿಸಿ ಕ್ಷಮೆಯನು | ಬೇಡಿದ ||ಇಂದ್ರಾವರಜ ಗುರು | ಗೋವಿಂದ ವಿಠಲನದ್ವಂದ್ವ ಪಾದಂಗಳ್ಗೆ | ಶರಣೆಂದ 3
--------------
ಗುರುಗೋವಿಂದವಿಠಲರು
ಮುದ್ದು ಬಾಲಕ ತವನಿದ್ದೆ ಬಂದಿದೆ ಕಣ್ಣುಎದ್ದು ಮುಚ್ಚುತಲಿಹುದು ಪದ್ಮ ಪತ್ರಾಕ್ಷ ಪ ಬಾರೋ ಮಲಗು ಎನ್ನ ಏರುಪೊಟ್ಟೆಯ ಮೇಲೆಸಾರಸಾಕ್ಷನೆ ಚುಕ್ಕಭೂರಿ ತಟ್ಟುವೆನು 1 ಕರಗಳ ಹೆಗಲಲ್ಲಿ ಚರಣಗಳನೆ ಚಾಚುಸರಳ ಮಲಗೋ ಪಾದಾಭರಣ ಒತ್ತುವುದುಕಂಠಾಭರಣ ಒತ್ತುವುದು 2 ಕೇಶ ಬರುವುದೆನ್ನ ಆಶದೊಳಗೆಇಂದಿರೇಶ ಟೊಪ್ಪಿಗೆ ಕಟ್ಟು ಕೂಸು ಮಸ್ತಕದಿ 3
--------------
ಇಂದಿರೇಶರು
ಮುದ್ದು ಮುಖದ ಲಕುಮಿ ಎನಗೆ ಶುದ್ಧ ಜ್ಞಾನವÀ ನೀಡೆ ಪ. ಬಿದ್ದಿಹೆ ನಿನ್ನ ಪದದಲಿ ನಿರುತ ಮದ್ಬಿಂಬನ ತೋರೆ ಅ.ಪ. ಹರಿಸರ್ವೋತ್ತಮ ಸುರರಕ್ಷಕನೆಂಬ ಖರೆಯ ಜ್ಞಾನವ ನೀಡೆ ಕರಕರೆಗೊಳಿಸದೆ ದುರ್ವಿಷಯದಲೆನ್ನ ಹರಿಯ ಧ್ಯಾನವನೀಡೆ 1 ನಗೆಮೊಗ ಚಲುವೆ ಖಗವಾಹನ ಪ್ರಿಯೆ ಜಗದೊಡೆಯನ ತೋರೆ ನಿತ್ಯ ಬಗೆ ಬಗೆ ಲೀಲೆಯ ಸುಗುಣವಂತೆ ತಿಳಿಸೆ 2 ಸೃಷ್ಟಿಕರ್ತಗೆ ಪಟ್ಟದ ನಾರಿಯೆ ದೃಷ್ಟ ಇಂದ್ರಿಯವಳಿಯೆ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲ ಸತಿಯೆ 3
--------------
ಅಂಬಾಬಾಯಿ
ಮುದ್ದು ಮೋಹನ ಗುರುಗಳಂಘ್ರಿ | ಶ್ರದ್ಧಾ ಭಕುತೀಲಿಬುದ್ಧಿ ಪೂರ್ವಕ ಭಜಿಪ ಜನರ | ನ್ನುದ್ಧರೀಸುವಾ ಪ ಕರ್ಮ ನಿಷ್ಠಾತೃಸುಮ್ಮನಸ ವಿಜಯಗುರವ | ನಮ್ಮಿತುತಿಸುವ 1 ತೀರ್ಥಕ್ಷೇತ್ರ ಚರಿಸೂತ | ಮೂರ್ತಿದರ್ಶನಾಸಾರ್ಥಕವ ಮಾಡಿಕೊಂಡ | ತೀರ್ಥಪಾವನಾ |ಕಾರ್ತಸ್ವರೇತ್ಯಾದಿವಿತ್ತ | ಪಾರ್ಥಿವಸಮಾಶಾಸ್ತ್ರ ಪ್ರಾಕೃತಾದಿ ತಿಳಿಪ | ಹರಿ ಸರ್ವೋತ್ತಮ 2 ಶ್ರೀ ವರರಿಂದುಪದಿಷ್ಟ | ವಿಠಲ ಪ್ರತಿಷ್ಟಓ ವಿಸಾಧೀಸಲು ಹರಿಯೊಳ್ | ಪ್ರಾಯೋಪವಿಷ್ಟ |ಭಾವಿ ಬ್ರಹ್ಮನಲ್ಲಿ ಗುರು ಗೋವಿಂದ ವಿಠಲನಭಾವ ಅಷ್ಟ ಕುಸುಮದಿ | ಸೇವಿಸೀದನ 3
--------------
ಗುರುಗೋವಿಂದವಿಠಲರು
ಮುದ್ದು ಮೋಹನ ದಾಸ | ತಿದ್ದಿಯನ್ನಯ ದೋಷಉದ್ಧರಿಸೊ ಬುಧತೋಷ | ನಮಿಪೆ ನಿನ್ನನಿಶಾ ಪ ದಾಸ ದೀಕ್ಷೆಯ ವಹಿಸಿ | ಕ್ಲೇಶಗಳ ಬಹುದಹಿಸಿದೇಶ ದೇಶವ ಚರಿಸಿ | ಹರಿ ಪ್ರತಿಮೆಗಳ ಭಜಿಸಿ | ಮೀಸಲೆನಿಸಿದ ಮತವ | ವ್ಯಾಸರಿಗೆ ಸಮ್ಮತವದಾಸರಾಯರ ಮಾತ | ಬೀರಿರುವ ಖ್ಯಾತಾ1 ಕರಿಗಿರಿಯ ದುರ್ಗದಲಿ | ವರ ರಥೋತ್ಸವ ಸಮಯನರಸಿಪುರ ಶೇಷಪ್ಪ | ವರ ಕುವರ ನಾಗಾಖ್ಯಗೆಕರುಣಿಸುತ ಲಂಕಿತವ | ಪರಿಸರನ ಮತರಸವಒರೆದು ಸಲಹಿದೆ ಗುರುವೆ | ನೀ ಪರಮ ಗುರುವೇ 2 ಸುಜನ | ಆರ್ತರುದ್ಧರಣಾ 3 ತಂಬ್ರೂಹಿ ಎನುವಂಥ | ತಂಬೂರಿ ನೀ ಕೊಡುತತುಂಬಿ ದ್ವ್ಯೊಭವದಿಂದ | ಪೊರೆದೆ ಮುದದಿಂದಾ |ಉಂಬುಡುವುದೂ ಹರಿಗೆ | ಕೊಂಬ ಸರ್ವವ ಹರಿಗೆಎಂಬ ಜ್ಞಾನವನಿತ್ತು | ಸಂಭ್ರಮವ ಬಿತ್ತೂ 4 ಅಮಿತ ಗುಣ ಪೂರ್ಣಾ |ಸಿರಿಪತಿ ಶ್ರೀಗುರೂ | ಗೋವಿಂದ ವಿಠ್ಠಲನಉರುತರದಿ ಭಜಿಪಂಥ | ಕರುಣಿಸೆಲೊ ಪಂಥ 5
--------------
ಗುರುಗೋವಿಂದವಿಠಲರು
ಮುದ್ದು ಮೋಹನ ದಾಸರೇ ನಿಮ್ಮ | ಶುದ್ಧ ಪಾದವ ನಂಬಿದೇತಿದ್ದಿಯೆನ್ನಯನಾದ್ಯ ವಿದ್ಯೆಯ | ಬುದ್ಧಿ ನಿಲಿಸಿರಿ ಹರಿಯಲೀ ಪ ನಡುಮನೆ ದ್ವಿಜನೆಂಬನಾ | ವಡ್ಡಲೊಳು ಉದಿಸೀದನಾ |ಆಡ್ಯಮತವನುಕರಿಸಿದಾ | ದೊಡ್ಡ ಬಳ್ಳಾಪುರದಲೀ1 ವಿಕೃತಿ ಸಂವತ್ಸರದಲೀ | ಪ್ರಕೃತ ಜನ್ಮವ ಪಡೆದನಾಸುಕೃತ ಪೊಗಳುವ ಜನರ ದು | ಷ್ಕøತವ ನೀ ಪರಿಹರಿಸುವೀ 2 ಚಿಪ್ಪಗಿರಿ ಸುಕ್ಷೇತ್ರದೀ | ಗೊಪ್ಪ ಶ್ರೀ ಅಂಕಿತವನೂ ಅಪ್ಪ ಶ್ರೀ ವರರಿಂದಲೀ | ವಪ್ಪಿ ನೀ ಕೈಗೊಂಡೆಯೋ 3 ಮೂರೊಂದು ಸಲ ಶ್ರೀಕಾಶಿಗೇ | ಭೂರಿಸಲ ಶ್ರೀ ಉಡುಪಿಗೇಸಾರಿ ವೆಂಕಟ ಪತಿಯನೂ | ಬಾರಿ ಬಾರಿಗೆ ನೋಡಿದೇ4 ದಾಸ ಪೀಳಿಗೆ ಬೆಳೆಸಲೂ | ಶೇಷನಾಮಕ ದಿವಿಜಗೇಭಾಸಿಸುವ ಅಂಕಿತವನಿತ್ತೂ | ಪೋಷಿಸಿದೆ ಸದ್ವೈಷ್ಣವತತ್ವ 5 ಸುಜನ ಜನ ಸಂಸೇವಿಸೆ | ವಿಜಯ ವಿಠಲನ ಸ್ಥಾಪಿಸೇಭಜನೆ ಗೈಯುತ ಮೆರೆದೆಯೊ | ನಿಜಪುರದಿ ನೀ ನಿಲ್ಲುತಾ 6 ಸಿರಿಯಧರಿಸಿ ಮೆರೆಯುವ ಗುರು | ಗೋವಿಂದ ವಿಠಲನ ಭಜಿಸುವಾಪರಮ ಗುರುಗಳೆ ನಿಮ್ಮ ಚರಣವ | ಪರಿಪರೀಯಲಿ ಪೂಜಿಪೆ 7
--------------
ಗುರುಗೋವಿಂದವಿಠಲರು
ಮುದ್ದು ಮೋಹನ ರಾಯಾ | ಸುಜನರಉದ್ಧರಿಸಿದ್ಯೊ ಜೀಯಾ | ಪ ಶ್ರದ್ಧಾಳುತನದಲಿ | ಬದ್ಧ ದೀಕ್ಷಿತನೆಮಧ್ವಮತವು ಎನೆ | ದುಗ್ಧಾಬ್ದಿ ಚಂದಿರ ಅ.ಪ. ಚಿಪ್ಪಗಿರಿ ಸುಕ್ಷೇತ್ರಾ | ದೊಳಗೆಅಪ್ಪ ಶ್ರೀ ವರರಿಂದಾ |ಗೊಪ್ಪ ಸದುಪ ದೇಶ | ಅಪ್ಪುತದಾಸನೆನೆಪ್ಪು ಕೊಡುತ ತಿ | ಮ್ಮಪ್ಪನೊಳಗೆಮನ 1 ತೀರ್ಥಕ್ಷೇತ್ರ ಚರಿಸೆ | ದೇಹವುಸಾರ್ಥಕಾಯಿತು ಎನಿಸೀ |ಯಾತ್ರೆ ಮಾಡಿದೆ ಸ | ತ್ಪಾತ್ರರ ಸೇರುತಗಾತ್ರ ಗೈಸಿದೆ ಪಾವಿ | ತ್ರ್ಯ ಬಾಹ್ಯಾಂತರ 2 ಗುರುಗೋವಿಂದ ವಿಠಲನೇ | ಪರತತ್ವಸರ್ವೋತ್ತಮನವನೇ |ಒರೆಯುತ ಸುಜನರ | ಪರಿಪಾಲಿಸಿದಿಯೊವರಬಳ್ಳಾಪುರದಲಿ | ವಿಠಲನ ಸನಿಯ 3
--------------
ಗುರುಗೋವಿಂದವಿಠಲರು
ಮುದ್ದು ಮೋಹನದಾಸರೆ | ಎನ್ನನು ಬೇಗ ಉದ್ಧರಿಸಿರಿ ಪ್ರೀತರೆ ಪ. ಬಿದ್ದಿಹೆ ದುರ್ವಿಷಯಾಂಧ ಕೂಪದೊಳೀಗ ಶುದ್ಧ ಜ್ಞಾನವನಿತ್ತು ಪದ್ಮನಾಭನ ತೋರಿ ಅ.ಪ. ಪರಮಯತಿಚರ್ಯರೆ | ಈ ಜಗದೊಳು ವರ ಭಕ್ತಿವೆಗ್ಗಳರೆ ತರಳತನದಲಿ ಪಾದಚಾರಿಗಳಾಗಿ ಧರೆಯ ಕ್ಷೇತ್ರವನೆಲ್ಲ ಚರಿಸಿರ್ಪ ವಶಗೈದು ಹರಿಯ ಮೆಚ್ಚಿಸಿ ದಾಸಭಾವದಿ ಪರಿಪರಿಯ ಅಂಕಿತದಿ ಶಿಷ್ಯರ ಪರಮ ಸಂಭ್ರಮಗೊಳಿಸಿ ಮೆರೆಯುತ ಸಿರಿವರನ ಪದಸಾರಿದಂಥ 1 ಶೀಲವಂತರೆ ನಿಮ್ಮನು | ಕೊಂಡಾಡೆ ಈ ಸ್ಥೂಲಮತಿಗೆ ಸಾಧ್ಯವೆ ಕಾಲಕಾಲದಿ ಹರಿಲೀಲೆಯ ಪಾಡುತ ನೀಲವರ್ಣನ ಹೃದಯಾಲಯದಿ ಕಂಡು ಮೂಲರೂಪಿಯ ಪಾದಕಮಲದಿ ಲೋಲುಪಡುತಲಿ ಓಲ್ಯಾಡಿದ ಬಹು ಶೀಲಗುಣಗಣಪಾಲರೆ ಎನ್ನ ಪಾಲಿಸಿರಿ ಸಿರಿಲೋಲನ ತೋರಿ 2 ಸಂದೇಹವಿನ್ಯಾತಕೆ | ಮಂತ್ರದ ಮನೆ ಮಂದಿರದೊಳಗಿರೆ ಬಂದಿರಿ ದಾಸತ್ವದಿಂದ ಧರೆಯೊಳು ನಂದಕಂದನ ಲೀಲೆ ಅಂದ ಪಾಡುತಲಿ ಅಂದು ಗ್ರಂಥಗಳನೋದಿ ಪದವನು ಒಂದು ರಚಿಸಿ ಸಾಲದೆ ಮು- ಕುಂದನಾ ಗುಣವೃಂದ ಪೊಗಳಲು ಚಂದದಿಂದ ವಸುಂಧರೆಯೊಳು 3 ವರತತ್ವ ಅಂಶದಲಿ | ಶ್ರೀ ಗುರುವಿಗೆ ತಾರಕರೆನಿಸಿದಿರಿ ಸಾರಿರೆ ನಿಮ್ಮ ಪದ ಸ್ವಪ್ನದೊಳು ತೋರಿ ತೀರುಥವನೆ ಕೊಟ್ಟು ಸುಮ್ಮನಿರಲು ಗುರು ಸಾರಿ ಬಂದು ಬದಿಯಲಿ ನಿಂದು ಭೂರಿ ಕರುಣವ ಮಾಡಬೇಕೆಂದು ತೋರಿ ಪೇಳಲು ಹರಿ ನಿರ್ಮಾಲ್ಯ ಅಪಾರ ಕರುಣದಿ ಕೊಟ್ಟು ಪೊರೆದಿರಿ 4 ಸ್ತುತಿಸಲಳವೆ ನಿಮ್ಮನು | ಈ ಜಡಮತಿ ಕೃತಕವಲ್ಲವು ಇದಿನ್ನು ಅತಿಪ್ರೇಮ ಗುರುಗಳ ಹಿತದಿಂದ ನುಡಿದುದು ಚ್ಯುತದೂರ ಗೋಪಾಲಕೃಷ್ಣವಿಠ್ಠಲನ ಸತತ ಸ್ತುತಿಸುವ ಮತಿಯ ಪಾಲಿಸಿ ಪಥವ ತೋರಿರಿ ಕರ್ಮಜರೆ ಬೇಗ ಸತತ ಶ್ರೀ ಗುರು ವ್ರತವ ಪಾಲಿಪ ಮತಿಯ ದೃಢದಲಿ ಹಿತದಿ ಕರುಣಿಸಿ 5
--------------
ಅಂಬಾಬಾಯಿ
ಮುದ್ದು ಮೋಹನರಾಯಾ | ಅಸ್ಮದ್ಗುರೋರ್ಗುರುಶುದ್ಧ ಜನ ಸಂಪ್ರೀಯ | ನಿಮಗೊಂದಿಸುವೆ ಭವಬಂಧ ಪರಿಹರಿಸಯ್ಯಾ | ಬುಧರಿಂದಗೇಯಾ ಪ ಪಂಕಜ ಮೋದ ಪಾದ ನಂಬಿದೆ ಅ.ಪ. ದೇವಮುನಿನುತ ಪೀಠಾ | ವರ ಚಿಪ್ಪಿಗಿರಿಯಲಿ ದಿವ್ಯ ಭವಹರ ಮಂತ್ರಾ | ಅಂಕಿತ ಸುತಾರಕಪ್ರವರ ಪೊಂದಿದೆ ಪೋತ | ಜಪಿಸುತ್ತ ಮನದೀಶರ್ವವಂದ್ಯ ವಿಧಾತಾ | ಪಾದಾಬ್ಜ ಭಕುತಾ ||ಶ್ರೀ ವರರ ಕರಕಮಲಜಾತನೆ ಭುವಿಯ ಸತ್ತೀರ್ಥಗಳ ಚರಿಸುತ ಪಾವಮಾನಿ ಮತಾಬ್ಧಿಜಾತರ | ಪಾವನವ ಮಾಡ್ಯವನಿಯಲಿಮೆರೆದೆ 1 ಭೃಂಗ ಮುದ್ದು ಮೋಹನಾರ್ಯ ಗುರುರೂಪದೇಶವ ವಿಹಿತ ಮಾರ್ಗದಿಗೈದು ತಂದೆ ಮುದ್ದು ಮೋಹನಾಭಿಧನೆಂದು ಕರೆದೆಯೊ 2 ಗುರುವಿನಾಣತಿಯನ್ನಾ | ಪೊಂದುತಲಿಸ್ವಪ್ನದಿಸಿರಿವಿಜಯ ವಿಠಲನ್ನಾ | ನಿಜಪುರದಿ ನಿಲಿಸಿನಿರುತ ಅರ್ಚನೆಯನ್ನಾ | ಸ್ಥಿರಪಡಿಸಿ ಮುನ್ನಅರಿತು ಮನದಲಿ ನಿನ್ನ | ಉತ್ಕ್ರಮಣವನ್ನಾ ||ಶೌರಿ ದಾಮೋದರನ ಮಾಸದಿ | ವರದತುರ್ದಶಿ ಅಸಿತಪಕ್ಷದಿಸಿರಿ ಗುರೂ ಗೋವಿಂದ ವಿಠಲನ | ಚರಣ ಸರಸಿಜ ಸೇರಿ ಮೆರೆದೆ 3
--------------
ಗುರುಗೋವಿಂದವಿಠಲರು
ಮುದ್ದು ಮೋಹನರೇಯ | ಅಸ್ಮದ್ಗುರೋರ್ಗುರುಮುದ್ದು ಮೋಹನ ಪ್ರೀಯ | ಲೋಕೈಕ ವಂದ್ಯನೆಮಧ್ವಮುನಿ ಸಂಪ್ರೀಯ | ಕಾಯಯ್ಯ ಜೀಯ ಪ ಉದರ ವಾಸಿತ ಸೃಜ್ಯ ಜೀವರ | ಸದಯದಿಂದಲಿ ಸೃಜಿಸಲೋಸುಗಮುದದಿ ಬಯಸುತ ಶ್ರೀಧರ ಹರಿ | ವದಗಿ ಚತುರ ವ್ಯೂಹ ರಚಿಸಿದ ಅ.ಪ. ಮಾಧವಗೆ ಪ್ರಿಯೆ ಅಂಭ್ರಣೀ | ಪ್ರಲಯಾಬ್ದಿ ಶಯನನಆದರದಿ ತ್ರಯಕಭಿಮಾನಿ | ತುತ್ತಿಸಲು ಜಗವನುಮೋದದಲಿ ಸೃಜಿಸುವ ಹವಣೀ | ಶ್ರೀಹರಿಯು ತಾನುಗೈದು ರೂಪ ಸುಧಾರಣೀ | ವಾಸುದೇವಭಿಧಾನಿ ||ಆದಿ ಸೃಷ್ಟಿಯ ಮಾಡಲೋಸುಗ | ಆದಿ ಮಾಯಾತ್ಮಿಕೆಯು ಲಕ್ಷ್ಮಿಯಮೋದದಿಂದಲಿ ಕೂಡುತಲೆ ತಾ | ಸಾಧಿಸಿದ ತಾರತಮ್ಯ ಸೃಷ್ಟಿಯ 1 ಕೃತಿ ಕೃತಿ ಶ್ರದ್ಧೆಯರಾಗ ಸೃಜಿಸಿದ 2 ಸೂತ್ರ ಶ್ರದ್ಧೆಯರಿಂದ | ಕಾಲಮಾನಿಯ ನಂದಗರುಡನ್ನ ಸೃಜಿಸುತ ನಂದ | ಬೆರೆದು ಶಾಂತಿಯಲಿಂದ ||ಧೀರ ಗುರು ಗೋವಿಂದ ವಿಠಲನು | ಶೂರ ಅನಿರುದ್ದಾಭಿಧಾನದಿನಾರ ವಾಣಿ ಬ್ರಹ್ಮರಿಂದಲಿ | ಮೂರು ವಂದರ ವ್ಯೂಹ ರಚಿಸಿದ 3
--------------
ಗುರುಗೋವಿಂದವಿಠಲರು
ಮುದ್ದು ಸುರಿಯುತಾನೆ ನೋಡಿ ಕೃಷ್ಣ ಪ ಮುದ್ದು ಸುರಿಯುತಾನೆ ಸಿದ್ಧ ಜನರ ವಂದ್ಯ ಮಧ್ವವಲ್ಲಭ ಕೃಷ್ಣ ಹೃದ್ವನಜದಲಿ ಬಲ್ ಅ.ಪ ತ್ರಿವಂಗಿ ಭಾವದಿ ಶ್ರೀ ವೇಣುಪಿಡಿದು ತಾ ಸಾವೇರಿ ಮೊದಲಾದ ರಾಗವ ಪಾಡುತ1 ಬಲದ ಪಾದದಿ ಚೆಲುವ ಎಡದ ಪಾದವನಿಟ್ಟು ನಳಿನಮುಖಿ ರುಕ್ಮಿಣಿ ಬಲ ಸತ್ಯಭಾಮೇರಿಂದ 2 ಧ್ವಜ ವಜ್ರಾಂಕುಶ ಚಕ್ರ ಕಂಜಚಿನ್ಹೆಗಳಿಂದ ತೇಜ ಮುಕುಟ ಶಿರಶ್ಚಕ್ರ ಶೋಭಿತಮುಖ 3 ಶ್ರೀ ಪಾದರಾಯರಿಗೆ ಸ್ವಪ್ನಲಬ್ಧನಾಗಿ ಶ್ರೀ ಪದ್ಮಭವಂದ್ಯ ಪ್ರತ್ಯಕ್ಷ ವ್ಯಾಸಮುನಿಗೆ 4 ಶ್ರೀ ನರಹರಿಯು ತಾ ನೆನೆಯುವರಿಗೆ ಭವ ಕಾನನದ ಭಯದ ಮನ ಶಂಕಿಸದಿರೆಂದು5
--------------
ಪ್ರದ್ಯುಮ್ನತೀರ್ಥರು