ಒಟ್ಟು 36191 ಕಡೆಗಳಲ್ಲಿ , 138 ದಾಸರು , 9678 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನನೆ ನಂಬಿದೆ ನೀರಜನಯನ ನಿನ್ನ್ಹೊರತು ಎನಗನ್ಯ ಗತಿಯಿಲ್ಲ ಹರಿಯೆ ಪ ನಿನ್ನ ಪಾದವೆ ಎನಗೆ ಮಾತಾಪಿತೃಯೆಂಬೆ ನಿನ್ನ ಪಾದವೆ ಎನಗೆ ಬಂಧುಬಳಗವೆಂಬೆ ನಿನ್ನ ಪಾದವೆ ಎನಗೆ ಸಕಲಸಂಪದವೆಂಬೆ ನಿನ್ನ ಪಾದವೆ ಎನಗೆ ನಿಖಿಲಬಲವೆಂಬೆ 1 ನಿನ್ನ ಕರುಣವೆ ಎನಗೆ ಭವತರಿವ ಶಸ್ತ್ರೆಂಬೆ ನಿನ್ನ ಕರುಣವೆ ಎನಗೆ ಸ್ಥಿರಸುಖವುಯೆಂಬೆ ನಿನ್ನ ಕರುಣವೆ ಎನಗೆ ರಕ್ಷಿಸುವ ದೊರೆಯೆಂಬೆ ನಿನ್ನ ಕರುಣವೆ ಎನಗೆ ಪರಮ ತೃಪ್ತ್ಯೆಂಬೆ 2 ನಿನ್ನ ನಾಮವೆ ಎನಗೆ ಅಮೃತವೆಂಬೆ ನಿನ್ನ ನಾಮವೆ ಎನ್ನ ಭವರೋಗಕ್ಕ್ವೈದ್ಯೆಂಬೆ ನಿನ್ನನಾಮ ಸ್ಥಿರಕೊಟ್ಟು ಪ್ರೇಮದಿಂ ಸಲಹು ಶ್ರೀರಾಮ ನೀನೆ ಎನಗೆ ಪರದೈವಯೆಂಬೆ 3
--------------
ರಾಮದಾಸರು
ನಿನ್ನನೆ ನಮೊ ಎಂಬೆವ ಇಂದಿರಾ ದೇವಿನಿನ್ನನೆ ನಮೊ ಎಂಬೆವ ಬಿನ್ನಹ ಲಾಲಿಸುಪನ್ನಗ ಶಯನನ ಘನ್ನ ಪಟ್ಟದ ರಾಣಿ ಪ. ಇಂದಿರೆ ನಿನ್ನ ಕಾಲಿಗೆ ವಂದಿಸಿ ಜಾಲಗಾರುತಿಯರ ಸೋಲಿಸಬೇಕೆಂದು 1 ಇಂದಿರೆ ನಿನ್ನ ಹೆಜ್ಜೆ ಹೆಜ್ಜೆಗೆ ನಮಿಸಿಅರ್ಜುನನ ಮಡದಿಯರ ಲಜ್ಜೆಗೈಸೆವೆಂದು2 ನಿತ್ಯ ಮುಕ್ತಳೆ, ನಿನ್ನ ಅತ್ಯಂತ ಬಲಗೊಂಬೆ ಉನ್ಮತ್ತೆಯರ ಗರವು ಒತ್ತಿಬಂದೆವೆಂದು 3 ವ್ಯಾಲಾಶಯನನ ರಾಣಿ ಬಹಳೆವಂದಿಸಿಗೈಯ್ಯಾಳಿಯರ ಮುಯ್ಯಾ ನಿವಾಳಿಸಬೇಕೆಂದು 4 ಪ್ರಾಣೇಶ ನರಸಿಯ ಕಾಣುತ ವಂದಿಸಿಜಾಣಿಯರ ಮನೆಗ್ಹೋಗಿ ಆಣಿ ಬಿಡಿಸೇವೆಂದು5 ಜರದ ಕುಪ್ಪುಸಸೀರೆ ಸರಿಗೆ ದೋರೆಯನಿಟ್ಟುಕರಗಳ ಮುಗಿದೆವ ವರಗಳ ಪಾಲಿಸು6 ಥೋರ ಮುತ್ತಿನ ದಿವ್ಯಹಾರ ಭಾರವನಿಟ್ಟುನಾರಿಯರ ಗೆಲಿಸುವ ಭಾರವ ರಾಮೇಶಗೆ ವಹಿಸೆಂದು7
--------------
ಗಲಗಲಿಅವ್ವನವರು
ನಿನ್ನನೆ ನೀ ಕಾಣಣ್ಣನಿನ್ನ ಕಾಣುವುದರಿಯಣ್ಣನಿನ್ನಯ ದೇಹದೊಳಣ್ಣನಿನಗೆ ಹೇಳುವೆನಣ್ಣ ಪ ಕಣ್ಣನೆ ಮುಚ್ಚಣ್ಣ ಕಪ್ಪನು ಲಕ್ಷಿಸೋ ಅಣ್ಣಹೊನ್ನು ಕಳೆಗಳಣ್ಣ ಹುಟ್ಟುವುದು ಮುಂದಣ 1 ಕಪ್ಪದು ಅಡಗಲಿ ಅಣ್ಣ ಕಪ್ಪಿನ ಸ್ಥಳ ಹಿಡಿಯಣ್ಣಕುಪ್ಪಳಿಸುವುದು ಬೆಳಗಣ್ಣ ಕಾಡು ಕಿಚ್ಚಿನಂತಣ್ಣ 2 ದೃಷ್ಟಿಯಲಿ ದ್ರಷ್ಟಿವಣ್ಣ ದೃಷ್ಟಿಯ ನೆಲೆಯಾಗಲಣ್ಣಶಿಷ್ಟ ಚಿದಾನಂದನಣ್ಣ ಸಾಕ್ಷಾತ್ ನೀನಹೆಯಣ್ಣ3
--------------
ಚಿದಾನಂದ ಅವಧೂತರು
ನಿನ್ನನೇನು ಮರೆಹೊಕ್ಕೆನು ಪ ನಿನ್ನನೇ ನಾ ಬೇಡ್ವೆನುಅ.ಪ ದುರಿತ ಶರಧಿ ನಿತ್ಯಾನಂದನೆ 1 ಕೃತ್ತಿಕೆಯೊಳುದಿಸಿದನೆ ಪರಮ ಪ-ವಿತ್ರನೇ ಸುರವಂದ್ಯನೆ ಉತ್ತಮೋತ್ತಮ ದೇವಸೇನೆಯ ಚಿತ್ತಹಾರಿಯೆ ಶರಜನೇ 2 ಮಾರ ತ್ರೈಜಗದೊಡೆಯನೆ | ಘೋರ ಶಾಪದಿ ಗಾರುಗೆಟ್ಟಿಹ ನಾರಿರನ್ನೆಯ ಕಾಯ್ದನೆ 3 ಮುಷ್ಟಿಕಾರಿಯ ಮಿತ್ರನೆ ಪರ- ಮೇಷ್ಟಿ ವಂದ್ಯನೆ ಪೂಜ್ಯನೆ | ದುಷ್ಟ ಪದ್ಮನ ಕುಟ್ಟಿ ಸುರಪತಿ ಇಷ್ಟವನು ಕರುಣಿಸಿದನೆ 4 ಭಾವಜಾರಿಯ ಪುತ್ರನೆ ಸದಾ ಭಾವಜನ ಪ್ರತಿರೂಪನೆ | ಭಾವ ಭಕ್ತಿಯೊಳ್ ಭಜಿಪ ದಾಸರ ಕಾವ ಪಾವಂಜೇಶನೆ 5
--------------
ಬೆಳ್ಳೆ ದಾಸಪ್ಪಯ್ಯ
ನಿನ್ನನ್ನೆ ನಂಬಿದೆನೊ ಪನ್ನಂಗಶಾಯಿ ಎನ್ನ ನೀ ಕಾಯಬೇಕೊ ಪ ದೀನದಯಾಳು ದೇವ ನೀನೆ ಕಾಯದೆ ಬಿಟ್ಟ ರಿನ್ನಾರು ಕಾಯ್ವರು ಎನ್ನನೀ ಜಗದೊಳುಅ.ಪ ಉನ್ನತ ಹೃದಯನೆ ಮುನ್ನ ನಾ ಮಾಡಿದ ಗನ್ನಗತಕತನವನ್ನು ದಯದಿ ಕ್ಷಮಿಸು ಇನ್ನೀಭವದಿ ಎನಗೆ ನಿನ್ನಯ ಸನ್ನುತಿ ಯನ್ನು ಪಾಲಿಸಿ ಸತತ ಬನ್ನಬಡಿಸದೆ ಕಾಯೊ 1 ಶರಣಾಗತರಕ್ಷಣಾನಾಥಜನಬಂಧುವೇ ಕರುಣದಿ ನಿಮ್ಮಂಥ ದೇವರನುಕಾಣೆ ದುರಿತದೂರನೆ ಎನ್ನ ದುರಿತದುರ್ಗಣವನ್ನು ಪರಿಹರಿಸಿ ಸಲಹಯ್ಯ ಶರಣುಜನರ ಪ್ರೀಯ 2 ಕೈಯ ಪಿಡಿದು ಪೊರೆಯೊ ಬಿಡದೆನಮ್ಮಯ್ಯ ಜಗ ದಯ್ಯ ಶ್ರೀರಾಮ ವಿಜಯವಿಠಲರಾಯ ಕೈಯ ಮುಗಿದು ಮರೆಹೊಕ್ಕು ಬೇಡುವೆಯ್ಯ ಜೀಯ ದಯದಿ ಕಾಯೊ ಪಂಢರಿರಾಯ 3
--------------
ರಾಮದಾಸರು
ನಿನ್ನಪಾದ ದೊರಕುವುದು ಎಂತೆನಗೆ ರಂಗ ಗನ್ನಗತಕ ನಾನು ಪುಣ್ಯದ್ಹಾದ್ಯರಿಯೆ ಪ ಕಳ್ಳನಾಗಿ ಜೀವಿಸಿದೆ ಸುಳ್ಳನಾಡಿ ನಾ ದಣಿದೆ ತಳ್ಳಿಕೋರತನದನ್ಯರ್ಹಾಳು ಮಾಡಿದೆನೊ ಖುಲ್ಲತನದಿಂ ಪರರ ನಲ್ಲೆಯರೋಳ್ಮನಸಿಟ್ಟು ಕ್ಷುಲ್ಲಕನಾದೆ ನಾನೆಲ್ಲಿ ನೋಡಲವ 1 ಅನ್ನಕೊಟ್ಟವರಿಗೆ ಅನ್ಯಾಯಯೋಚಿಸಿದೆ ಬನ್ನ ಬಡಿಸಿದೆನಯ್ಯ ನನ್ನನಂಬಿದವರ ಎನ್ನ ಪಡೆದವರನ್ನು ಮನ್ನಿಸಿನೋಡಿಲ್ಲ ನಿನ್ನ ಧ್ಯಾನದ ಖೂನವನ್ನರಿಯೆ ದೇವ 2 ಗುರುಹಿರಿಯರನು ಜರಿದೆ ಪರಿಪರಿಯಲಿ ನಾನು ಪರರಿಗೊಂದಿಕ್ಕಿ ನಾನುಂಡಿರುವೆನೊಂದು ಧರೆಯೊಳೆಣೆಯಿಲ್ಲದ ದುರಿತವನು ಗಳಿಸಿರುವೆ ಕರುಣಾಳು ಶ್ರೀರಾಮ ನೀನೆ ಪೊರಿಬೇಕೊ 3
--------------
ರಾಮದಾಸರು
ನಿನ್ನಯ ನಾಮಾಪನ್ನರಿಗೆಲ್ಲಾ ಪ್ರೇಮ ಪ ಪನ್ನಗ ಶಯನ ಪಾವನ ಚರಿತಅ.ಪ ಮಾಧವ ಭವ ಪಾಶ ವಿಮೋಚನ 1 ಕರಿಧೃವ ಬಲಿರುಕ್ಮಾಂಗದ ಪ್ರಹ್ಲಾದ ದ್ರೌಪದಿ ವರಚಂದ್ರಹಾಸಾದಿ ಭಕ್ತರÀನೆಲ್ಲ ಪಾಲಿಸಿತು 2 ಪರಮಾತ್ಮ ಹರಿಕೃಷ್ಣ ಧರಣಿಧರ ಮುಕುಂದ ವರೇಣ್ಯ ಶ್ರೀಗುರುರಾಮವಿಠಲ 3
--------------
ಗುರುರಾಮವಿಠಲ
ನಿನ್ನವ ನಾನು ಎನ್ನಯ್ಯ ನೀನು ನಿನ್ನಿಂದೆನಾನಾ ಎಂದೆಂಬೆ ನಾನು ಧ್ರುವ ನಿನ್ನೊಳು ದಾವ ನಾನು ಎನ್ನೊಳಗಿಹೆ ನೀನು ನಿನ್ನಿಂದೆ ಜೀವಿಸುವನಾಗಿಹೆನು 1 ನನ್ನವಿಡಿದು ನಾನು ಎನ್ನ ಬಾಹ್ಯಾಂತ್ರ ನೀನು ಸೂತ್ರ ನೀನು 2 ಎನ್ನ ಪ್ರೇರಕ ನೀನು ನಿನ್ನ ಪ್ರೀತ್ಯರ್ಥ ನಾನು ನಿನ್ನಿಂದಾದೆ ಪವಿತ್ರ ಪಾತ್ರ ನಾನು 3 ನೀನೆ ಸ್ವಯಂ ಭಾನು ನಿನ್ನಿಂದುದಯ ನಾನು ನಿನ್ನಿಂದಾದ ಮಹಿಗೆ ಪತಿಯೇ ನೀನು 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನವಗುಣ ಜರಿದು ಎನ್ನ ಮನವೇ | ನಿನ್ನವಗುಣ ಜರಿದೆನ್ನ ಮನವೇ | ಶಿರಿ | ಪನ್ನಗಾದ್ರೀಶನಾ ಕೂಡೋ ಸುಖ ಸೂರ್ಯಾಡೋ ಪ ಕೆಲವು ಪುಣ್ಯವನೇ ಮಾಡಿ | ನರದೇಹದಲ್ಲಿ | ಇಳಿಯೊಳಾಗ್ರದಲಿ ಮೂಡಿ | ಹಲವು ಹಂಬಲಿಂದ ಗೆಳೆಯರೈವರ ಛಂದಾ | ಬೆಳೆಸಿ ಸದ್ಗುಣ ಬಿಡುವರೇ ಅಂಧರಾಗುವರೇ 1 ಮರಹು ಮನೆಯನೆ ಸೇರಿ | ಮಂದತನದೀ | ಅರಿವ ಪಂಥದಲಿ ಜಾರಿ | ಅನುದಿನ | ಕೊರವನಾ ಕೋಡಗದಂತೆ ಕುಣಿದುಚಿತೆ 2 ಒಂದೇ ನಿಷ್ಟೆಯಾ ವಿಡಿದು | ಸದ್ಭಾವದಿಂದಾ | ದುಂದುಗಾವೃತ್ತಿ ಕಳೆದು | ತಂದೆ ಮಹಿಪತಿದಯಾ ನಂದ ಪಡೆದು | ನಿನ್ನಾ ಬಂದ ಸಾರ್ಥಕದಿ ಬಾಳು ಮುನ್ನಿನ ಕೇಳು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನವನು ನಾನಯ್ಯ ಅನ್ಯರವನಲ್ಲಾನಿನ್ನ ಕರುಳಿನ ಬಳ್ಳಿ 'ುಡಿಯು ಮ'ಪತಿರಾಯ ಪನಿನ್ನ ಪೌತ್ರನ ಮಗಳ ಬಳ್ಳಿಯೊಳು ಜನಿಸಿ ನಾನಿನ್ನ ಮ'ಮೆಯ ಗುರುತ ಅರಿಯಲಿಲ್ಲಾಸಣ್ಣವನು ನಾನೀಗ ತಪ್ಪು ಒಪ್ಪಿದ ಮೇಲೆಇನ್ನು ದಯಮಾಡು ಮುತ್ತಜ್ಜ - ಅಜ್ಜರ ಅಜ್ಜ 1ನಿನ್ನ ಕರುಳಿನ ಬಳ್ಳಿ ಎಲ್ಲಿ ಹುಟ್ಟಿದರೇನುಮೂಲದಿಂದಲ್ಲವೇ 'ುಡಿಗೆ ಆಹಾರಮೂಲ'ುಡಿಗಳ ಮರೆತು ಆಹಾರ ಕೊಡದಿರಲು'ುಡಿಯು ಬಾಡುವದಿಲ್ಲವೇನೊ ತಾತಯ್ಯ 2ನಿನ್ನವನು ನಾನೆಂದು ಒಪ್ಪಿಸಿದ ಗುರುರಾಯಇನ್ನು ಸಲಹುವ ಭಾರ ನಿನ್ನದಯ್ಯಾನಿನ್ನ ಘನತೆಗೆ ಕೂಂದು ತರದಂತೆ ಕಾಪಾಡುಘನ್ನ ಭೂಪತಿ 'ಠ್ಠಲನ ತೋರು ದಯಮಾಡು 3
--------------
ಭೂಪತಿ ವಿಠಲರು
ನಿನ್ನವನೆನಿಸಿದಾ ಮಾನವನಿಂಗೆ ಇನ್ನು ಭವಭಯ ಉಂಟೇ ಭಕುತ ವತ್ಸಲ ಕೃಷ್ಣಾ ಪ ಶ್ರವಣ ದರಹು ಇಲ್ಲಾ ನವವಿಧ ಭಜನಿಲ್ಲಾ ಕವಿತದನುಡಿಯ ಚಾತುಯ್ರ್ಯವಿಲ್ಲಾ ತವಚರಣವನಂಬಿ ಅವನಿಯೋಳಗನಿಶಿ ದಿವಸದಿ ಅಚ್ಯುತಾನಂತ ಗೋವಿಂದ ಯನುತಲಿ 1 ಘನ್ನ ವಿರಕ್ತಿಯಿಲ್ಲಾ ಮನ್ನಣೆಯ ತಪವಿಲ್ಲಾ ಉನ್ನತ ದ ವ್ಯತಶೀಲ ಕರ್ಮವಿಲ್ಲಾ ಅನ್ಯದೈವ ಕೆರಗದೆ ನಿನ್ನ ನಾಮ ನಿನ್ನ ಮುದ್ರೆ ನಿನ್ನವರಪರಿಚಾರ ತನದಲ್ಲಿ ರಮಿಸುತಾ 2 ಮರೆದೊಮ್ಮೆನೆನೆದರೆ ಸರಿವದಘರಾಶಿ ಅರಿದೊಮ್ಮೆನೆನೆಯಲು ಗತಿಸಂಪದಾ ದೊರೆವುದೆನುತಶೃತಿ ನಿರುತ ಸಾರುತಲಿದೆ ಗುರುಮಹಿಪತಿ ಪ್ರಭು ಎನ್ನನುದ್ದರಿಸುದೈಯ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನವರ ಧರ್ಮ ವಿಹಿತವಾಗುವುದು ಮ ತ್ತನ್ಯರಾಚರಿಸಿದ ಧರ್ಮ ಅಧರ್ಮ ಪ ಕಡಲ ಮಥನದಲಿ ಕಪರ್ದಿ ಕಾಳಕೂಟ ಕುಡಿಯಲು ಕಂಠಭೂಷಣವಾಯಿತು ಒಡನೆ ರಾಹು ಕೇತು ಸುಧೆಯ ಪಾನದಿಂದ ಮಡಿದರೆಂದು ಮೂರ್ಲೋಕವೇ ಅರಿಯೆ 1 ಬಲಿನಿನ್ನ ಮುಕುಟ ಕದ್ದೊಯ್ಯ ಪಾತಾಳಕೆ ಸಲೆ ಭಕ್ತನೆಂದು ಬಾಗಿಲ ಕಾಯ್ದೆ ಇಳೆಯೊಳು ಸುರರಿಗೆ ಗೋ ಭೂ ಹಿರಣ್ಯವಿತ್ತಾ ಖಳ ಜರಾಸಂಧನ ಕೊಲಿಸಿದೆ ಹೋಗಿ 2 ಪತಿವ್ರತ ಧರ್ಮದಿ ಮೃತರಾದ ತ್ರಿಪುರರ ಸತಿಯರು ಶಿವನಿಂದ ಹತರಾದರು ಸತಿ ಉಡುಪ ಪತಿಯಿಂದಲಿ ನಿತ್ಯ ಸೇವೆಯೊಳಿರುವಳು 3 ಮೇದಿನಿಯೊಳು ಪ್ರಾಣಿ ಹಿಂಸಕನೆನಿಸಿದಾ ವ್ಯಾಧನ ಯಮಿಕುಲೇಶನ ಮಾಡಿದೆ ವೇದೋಕ್ತ ಕರ್ಮವಾಚರಿಸಿದ ಜಿನನೊಳ್ ಪ್ರಾದುರ್ಭೂತನಾಗಿ ಕೆಡಹಿದೆ ತಮಕೆ 4 ಪರಾಶರನು ಸತ್ಯವತಿಯ ಸಂಬಂಧಿಸೆ ಶ್ರೀರಮಣ ನೀನವತರಿಸಿದಲ್ಲಿ ಭವ ಸರೋಜ ಕನ್ನಿಕೆಯಸಾರಲು ಬಿಡುವ ಜಗನ್ನಾಥ ವಿಠಲ 5
--------------
ಜಗನ್ನಾಥದಾಸರು
ನಿನ್ನವರ ಸಂಗ ಎಂತಹದಯ್ಯಾ ಅನಂತ ಜನ್ಮದ ಪಾಪ ಪುಂಜರ ನಾನು ಪ ಬಾರೆ ಸುಜನರ ಮನಕೆ ತಾರೆ ಗಂಗೋದಕವ ಸೇರೆ ನಿನ್ನಡಿಗಳಲಿ ಸಾರೆ ಉತ್ತಮರ ಕೀರ್ತಿ ಬೀರೆ ನಿನ್ನಯ ಮಹಿಮೆ ಕೋರೆ ನಿರ್ಮಳ ದಾರಿಯಾ ನೀರೆಯರ ಶಶಿಬಿಂಬ ಮೋರೆ ಬಣ್ಣಕೆ ಮೆಚ್ಚಿ ಕಾರ್ಯ ಕಾರಣ ಜರಿದು ಭಾರಿ ತಿರುಗವನಿಗೆ1 ಏಕಾದಶಿ ದಿನ ಬೇಕೆಂದು ಮನವಿಟ್ಟು ಪಾಕನ್ನ ಮಾಡಿಸುವನೊ ನೇಕಪರಿ ಮಾಡಿಸುವನೊ ಪೋಕತನದಲ್ಲಿ ವಿವೇಕ ರÀಹಿತನಾಗಿ ಗೋಕುಲವ ಹಳಿದು ಕೋ ವಾರೆವಿದ್ದವನಿಗೆ2 ಪರರ ವಡವೆಯ ನೋಡಿ ಧರಿಸಲಾರದೆ ಮನ ಮರಗಿ ನಿಷ್ಠುರನಾಡಿ ಇರಳು ಹಗಲೂತ್ತ- ಮರ ಬೈದು ಪಾಪಕ್ಕೆ ಗುರಿಯಾಗಿ ನಸುನಗುತ ಪಿರಿದು ದುರ್ವಿಷಯದೊಳು ಹೊರಳಿ ಹಕ್ಕಲನಾಗಿ ಮರಳಿ ಜನಗಳಲ್ಲಿ ಜನಮವಾಗುವನಿಗೆ 3 ಅತಿಥಿ ಅಭ್ಯಾಗತರ ಕಂಡು ಸ್ಮರಿಸದೆ ಮತಿಹೀನವಾಗಿ ಭ- ಕುತಿ ಲೇಸ ತಾ ತಾ ಕೊಂಬೆನಯ್ಯಾ ಆರನಾರನಾದರು ಕರಿಯೆ ಚತುರೋಕ್ತಿಯಲಿ ನೆನೆಸಿ ಪ್ರತಿ ಯಾರು ನಿನಗೆಂದು ಗರ್ವದಲ್ಲಿದ್ದವನಿಗೆ 4 ಆದಿಯಲಿ ಬಂದದ್ದು ಅಂತ್ಯದಲಿ ಪೋಗುವ ಹಾದಿಯನು ತಿಳಿತಿಳಿದು ಕ್ರೋಧವನು ಬಿಡದೆ ಕಾದುವೆನು ಹಲ್ಲು ಕಡಿದು ಸಾಧುಗಳ ನೋಡದಲೆ ವೇದಾರ್ಥಗಳ ಓದಿ ಶೋಧಿಸಿ ಕೇಳಿ ವಾದವನು ಮಾಡಿ ಸಂಪಾದಿಸುವ ದುರ್ಧರನಿಗೆ5 ದುರ್ಧನಕೆ ಕೈಕೊಡುವೆ | ಮೊದಲೆ ಕನಸಿನೊಳಗಾದರೂ ಗುಣಿಸುವೆ ಪರರ ಹಿಂಸೆಯನು ಬಿಡೆ ಕ್ಷಣವಾದರು ತನುವಿನ ಕ್ಲೇಶದಲಿ ದಿನವ ಹಾಕಿದೆ ವ್ಯರ್ಥ ದಣಿದಣಿದು ಈ ಪರಿಯನು ಮಾಡಿದವನಿಗೆ 6 ಹುಟ್ಟಿದಾರಭ್ಯವಾಗಿ ಶಿಷ್ಟಾಚಾರವ ತೊರೆದು ಕೆಟ್ಟ ಬಾಳಿದೆ ಧರಣೀಲೀ ಸುಟ್ಟ ಸಂಸಾರದೊಳು ಸಟಿಯಾಡಿ ಗುಟ್ಟಗುಂದಿದೆ ವಿಜಯವಿಠ್ಠಲ ನಿನ್ನ ನೆರೆ ಮರೆದು ಕೆಟ್ಟು ನರಕಕ್ಕೆ ಮನಮುಟ್ಟಿ ಬೀಳುವವನಿಗೆ 7
--------------
ವಿಜಯದಾಸ
ನಿನ್ನವಳ ಬಗೆಯ ಪೇಳುವೆನು ಕೇಳೋಮನ್ನಿಸೋ ಮಾನಿನೀಮಣಿಯನು ಕೃಪಾಳೋ ಪ ಕನ್ನಡಿಯ ನೋಡಿದಳೋ ಕರುಳ ನೇವರಿಸಿದಳೋಚಿನ್ನದುಂಗುರವ ಬೆರಳೊಳಗಿಟ್ಟಳೋಕಣ್ಣಕಪ್ಪಿಟ್ಟು ತಿಲಕವ ತಿದ್ದಿಕೊಂಡಳೋರನ್ನದೊಡವುಗಳ ಸಖಿಯರಿಗೆ ಕರದಿತ್ತಳೋ 1 ಜಾತಿಮುತ್ತಿನ ಸರವ ಹಾಕಿಕೊಂಡಳೋ ಕೊರಳ್ಗೆಜಾತಿಮಲ್ಲಿಗೆಯ ಮಾಲೆಯ ಮುಡಿದಳೋಪ್ರೀತಿಯಿಂ ಸಾಕಿದ ಗಿಣಿಯ ತರಿಸಿ ನೋಡಿದಳೋನೂತನದ ಚಂಗಾವಿ ಸೀರೆಯನೆ ನೆರಿದುಟ್ಟಳೋ 2 ಚಿತ್ತಾರದ ಪಟದಲ್ಲಿ ನಿನ್ನ ರೂಪನೆ ಬರೆದುಅರ್ತಿಯಿಂ ಕೈಮುಗಿದು ನೋಡುತಿಹಳೋಹೊತ್ತುಗಳೆವುದಕೆ ಹರಣಲ್ಲಿ ಬಂದುನೆರದುಳುಹೊಚಿತ್ತಜನಮದಭಂಗ ಕೆಳದಿ ರಾಮೇಶಲಿಂಗ 3
--------------
ಕೆಳದಿ ವೆಂಕಣ್ಣ ಕವಿ
ನಿನ್ನಾಜ್ಞದವನೊ ನಾನೆನ್ನನೊಪ್ಪಿಸದೆಬಿನ್ನಹ ಚಿತ್ತೈಸಿ ಎನ್ನ ಪಾಲಿಸೊ ಕೃಷ್ಣ ಪ ಏಳು ಸುತ್ತಿನಕೋಟೆ ಯಮನಾಳು ಮುತ್ತಿಕೊಂಡುಪಾಳು ಮಾಡೇವೆಂದು ಪೇಳುತಿರಲುಆಳು ಸಾಮಗ್ರಿಯ ಅಪಾರ ಬಲಮಾಡಿಕೋಳುಹೋಗದ ಮುನ್ನ ಕೋಟೆ ರಕ್ಷಿಸಬೇಕು 1 ಆರು ಮೂರರ ಬಾಧೆ ಆರು ಎಂಟರ ಬಾಧೆಕ್ರೂರರೈವರ ಬಾಧೆ ಹೋರುತಲಿದಕೋಆರಿಂದ ನಿರ್ವಾಹವಾಗದು ಇವರನುಮೇರೆಲಿಡುವನೊಬ್ಬ ಧೀರನ್ನ ಬಲಮಾಡೊ2 ಲಕ್ಷ ಎಂಭತ್ತು ನಾಲ್ಕು ಜೀವರಾಶಿಗಳೊಳುಸೂಕ್ಷ್ಮದ ಕೋಟೆಂದುಪೇಕ್ಷಿಸದೆಪಕ್ಷಿವಾಹನ ನೀನು ಪ್ರತ್ಯಕ್ಷ ನಿಂತರೆಅಕ್ಷಯ ಬಲವೆನಗೆ ರಕ್ಷಿಸೊ ಸಿರಿಕೃಷ್ಣ 3
--------------
ವ್ಯಾಸರಾಯರು