ಒಟ್ಟು 8857 ಕಡೆಗಳಲ್ಲಿ , 132 ದಾಸರು , 5049 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀರುಕ್ಮಿಣೀರಮಣ ತಾನುಡಿಸಿದಂತೆ ನಾಂ ಧಾರುಣಿಪ ಜನಮೇಜಯಂಗೆ ಮುನಿ ಪೇಳಿಸಿದ ಹದಿನೆಂಟುಪದ್ಯಗಳೊಳಾಲಿಸುವುದು ದನುಜದಿವಿಜರೀ ಭುವಿಯೊಳವತಿರಿಸಿದರುಸುಯೋ ಧನಪಾಂಡುತನಯರಂ ಸೈರಿಸದೆಭೇದಮಂ ಕಟ್ಟಿಸಿಯರಗಿನಮನೆಯೊಳವರನಿಡಲು | ವನಜಲೋಚನನ ಕೃಪೆಯಿಮದದಂದಾಟಿಕಾ ನನದಲಿ ಹಿಡಿಂಬಬಕರಂ ಮುರಿದುದೃಪದರಾ ಪುತ್ರರಪಡೆದರಾದಿಪರ್ವದಲ್ಲಿ 1 ರಾಜಸೂಯಾಭಿಧಾನದ ಯಾಗಕಾರಣದೊ ಳಾಜರಾಸಂಧಾದಿಗಳ ಕೊಲಿಸಿನೃಪಧರ್ಮ ಜೂಜಿನಲಿಸೋಲಿಸಲು ಪಂಚಪಾಂಡವರಂ ಸ ರೋಜಾಕ್ಷಿ ದ್ರೌಪದಿಯ ಭಂಗಪಡಿಸಲ್ಕೆಪಂ- ಸಭಾಪರ್ವದಲಿ 2 ಅಡವಿಯೊಳು ವಾಸವಾಗಿರಲು ಪಾಂಡುಸುತರ್ಗೆ ಪೊಡವಿ ಸುರರರುಹಿಸಲ್ ಸತ್ಕಥೆಗಳಾಲಿಸುತ ಘೋಷಯೊಳಹಿತನ ಬಿಡಿಸಿದಂ ಗಂಧರ್ವಪತಿಯಿಂದ ಪಾರ್ಥನೀ ರಡಿಸಿ ನಾಲ್ವರುಮೂರ್ಛೆಪೊಂದಲ್ಕೆಯಕ್ಷಂಗೆ ಅರಣ್ಯಪರ್ವದೊಳಗೆ 3 ಬಂದುಮಾತ್ಸ್ಯಾಲಯದಲಜ್ಞಾತವಾಸದೊಳ ಗಂದುಪಾಂಡವರಿರಲ್ ಕೀಚಕಾಧಮನು ಸೈ- ಭೀಮಗಂಧರ್ವ ವ್ಯಾಜದಿಂದ ಕೊಂದವಾರ್ತೆಯ ಕುರುಪಕೇಳಿ ಸೇನೆಸಹಿತ ಪಾರ್ಥಗೆ ವಿರಾಟಪರ್ವದಲ್ಲಿ 4 ದೇವಕೃಷ್ಣಸಂಧಿಗೆ ತರಲ್ ಕುರುಪದು ರ್ಭಾವದೊಳಗಿರಲದಂ ತಿಳಿದುವಿದುರನ ಮನೆಯೊ ಕೌರವಸಭೆಗೆಪೋಗಿ ಈವುದೈದೂರುಗಳ ಪಾಂಡವರಿಗೆನೆ ಭೇದ ಭಾವದಿ ಸುಯೋಧನಂಸೂಜ್ಯಾಗ್ರಭೂಮಿಯಂ ತಾ ನೀವುದಿಲ್ಲವೆನೆ ಯುದ್ಧನಿಶ್ಚಯಗೈದನುದ್ಯೋಗಪರ್ವದಲಿ 5 ಕುರುಪತಿಯು ಗಂಗಾಸುತಗೆ ಪಟ್ಟಗಟ್ಟಿದಂ ಎರೆಡುಬಲಮಂ ಸೇರಿಯಿರಲರ್ಜುನಂ ತನ್ನ ವರಕೊಲ್ವದೆಂತೆನಲ್ ಹರಿವಿಶ್ವರೂಪಮಂ ತೋರಿತತ್ವವತಿಳಿಸಲು ತರುವಾಯ ಹತ್ತುದಿನಕಾದುತಿರಲಾಗಭೀ ಷ್ಮರಿಗೆಷಂಡನನೆವದಿ ಶಸ್ತ್ರಸಂನ್ಯಾಸ ವಾ ಭೀಷ್ಮಪರ್ವದಿಕಥೆಯಿದು 6 ಗುರುಗಳಿಗೆ ಪಟ್ಟಾಭಿಷೇಕವಾಯಿತುದ್ರೋಣ ದೊರೆಯಹಿಡಿತಹೆನೆಂದು ತಪ್ಪೆಸಂಶಪ್ತಕರ ನರನೊಡನೆ ಕಾದಿದರು ಪಾರ್ಥಸುತಪೊಕ್ಕುಪದ್ಮವ್ಯೂಹ- -ದೊಳುಮಡಿಯಲು ನರಪ್ರತಿಜ್ಞೆಯಗೈದು ಸೈಂಧವನ ವಧಿಸಿದನ ಸುರ ಘಟೋತ್ಕಚ ರಾತ್ರಿಯುದ್ಧದೋಳ್ ಸಂದನಾ ದಿನದಲಿದ್ರೋಣಪರ್ವದೊಳಗೆ 7 ಕುರುಸೈನ್ಯಬತ್ತಿರುವ ಶರಧಿಯೋಲಾಯ್ತು ದಿನ ಕರಸುತಗೆ ಪಟ್ಟವಂಗಟ್ಟಿ ದುರ್ಯೋಧನಂ ಹರನುತ್ರಿಪುರವ ಗೆದ್ದಕಥೆಯವಿಸ್ತರಿಸಿ ಸಾರಥಿಯ ಮಾಡಲು ಶಲ್ಯನ ನರನವಿಕ್ರಮಪೊಗಳಿ ಕರ್ಣನಬಲವನುಧಿ ಕ್ಕರಿಸೆಮಾದ್ರೇಶ್ವರಂ ಕರ್ಣನತಿ ಖಾತಿಯಿಂ ದೆರಡುದಿನ ಕಾದಿಯರ್ಜುನನಿಂದ ಮಡಿದ ಸೂತಜ ಕರ್ಣಪರ್ವದಲಿ 8 ಸೂತಜನಮರಣದಲಿ ಶಲ್ಯಗಾಯಿತು ಪಟ್ಟ ಶಕುನಿಯಂಸಹದೇವಸಂಹರಿಸಲು ಪಾತಕಿ ಸುಯೋದನಂ ಕೊಳನಪೊಕ್ಕಿರಲು ಯಮ ಜಾತಾದಿಗಳು ಪೋಗಿ ನುಡಿಸಲ್ಕೆಜಲ ಪೊರಟು ಕುರುಪನು ಶಲ್ಯಪರ್ವದೊಳಗೆ 9 ಗುರುಜಂಗೆ ಬೆಸಸಿದಂ ಕುರುರಾಯ ಪಾಂಡವರ ಶಿರವತಹುದೆನುತಲಶ್ವತ್ಥಾಮಪಾಳಯದಿ ಜೀವಬಿಡಲು ನರಭೀಮಸೇನರಾವಾರ್ತೆಯಂ ಕೇಳುತಲೆ ತರುಬಿ ಹಿಡಿದೆಳೆ ತಂದು ದ್ರೌಣಿಯಂ ಶಿಕ್ಷಿಸಲ್ ಸುಪ್ತಪರ್ವದಲಿ 10 ರಣದಿ ಮಡಿದಿರುವ ನೃಪರರಸಿಯರ್ ಅಂಧಭೂ ಪನು ಸತಿಯುಸಹಿತಲೈತರುತಿರಲ್ ಕಳನೊಳಗೆ ತಮ್ಮಪತಿಗಳನಪ್ಪಲು ಪೆಣಗಳೊಟ್ಟೈಸಿ ಸಂಸ್ಕಾರಕ್ರಿಯೆಗಳವಿದು ರನುಗೈದನನ್ನೆಗಂ ಧೃತರಾಷ್ಟ್ರನರಸಿ ಕೃ ಸ್ತ್ರೀಪರ್ವದಲಿ 11 ತನಗೆ ಕರ್ಣಸಹೋದರನೆಂಬ ವಾರ್ತೆಯಮ ಜನು ಕೇಳಿ ಶೋಕದಿವಿರಕ್ತಿಯಿಂದಿರೆ ಸಕಲ ಘನಬಂಧುವಧೆ ಮಹಾದೋಷವೆಂತೆಂದು ಭೀ ಷ್ಮನ ಕೇಳಲರುಹಿದಂ ರಾಜನೀತಿಯ ಧರ್ಮ ವನು ಕಷ್ಟಕಾಳಧರ್ಮವ ಮೋಕ್ಷಧರ್ಮವೆಂಬಿದುಶಾಂತಿಪರ್ವದಲಿ 12 ಅತಿಶಯ ದಾನಧರ್ಮದ ಲಕ್ಷಣಗಳಂ ನಿ ಯತಮಾದ ವರ್ಣಾಶ್ರಮಾಚಾರಕ್ರಮದಸಂ ತತಿಗಳಂ ಶಿವವಿಷ್ಣುಗಳಮಹಿಮೆ ಬ್ರಹ್ಮಸಾಕ್ಷಾತ್ಕಾರಸದ್ಬೋಧೆಯ ಕಥೆಗಳರುಹಿಸಿ ನದೀಸುತಧರ್ಮಜನ ಮನೋ ಪತಿ ಕೃಷ್ಣನಂ ಧ್ಯಾನಿಸುತ ಮುಕ್ತನಾದನಿದು- -ಮಾನುಶಾಸನ ಪರ್ವದಿ 13 ಗುರುಸುತನ ಬ್ರಹ್ಮಾಸ್ತ್ರಮಂಚಕ್ರದಿಂದಸಂ ಹರಿಸಿ ಕೃಷ್ಣಂಕಾಯ್ದನುತ್ತರೆಯಗರ್ಭಮಂ ನೇಮದಿಂದ ಪರಿಪರಿಸುವಸ್ತುಗಳನೆಲ್ಲ ತಂದುಯೈ ವರು ಮಹಾಸಂತಸದಿಹರಿ ಸಹಾಯದಿ ಮಾಡಿ ಸಂಪೂಜಿಸಿದರಶ್ವಮೇಧಕಪರ್ವದಿ 14 ಅಂಧಭೂಪತಿ ಕೌರವಸ್ತ್ರೀಯರುಂ ಕುಂತಿ ಗಾಂಧಾರಿ ಸಹಿತಬರೆ ತೆರಳಿದಂತಪಗೈಯ್ಯೆ ಮುವ್ವರುಪವಾಸದೊಳಿರೆ ಬಂದುದಾಕಾಳ್ಗಿಚ್ಚಿನೋಲ್ ಮಹಾಜ್ವಾಲೆಯೋಳ್ ಪೊಂದಿದರ್ ವಿದುರಧರಾತ್ಮಜನಕೂಡಿದಂ ಬಂದುಯಮಜನುಪುರದಿ ಶ್ರಾದ್ಧಗಳಮಾಡ್ದನಾಶ್ರಮ- -ವಾಸಪರ್ವದೊಳಗೆ 15 ವರುಷಗಳು ಷಟತ್ರೀಂತಿಯು ರಾಜ್ಯವಾಳುತಿರೆ ಬರುಬರುತಲುತ್ಪಾತಗಳುಪುಟ್ಟಿದವು ಯಾದ ಮಡಿದರೆಂಬವಾರ್ತೆಯನು ಕೇಳಿ ನರನು ನಡೆತಂದು ಶೋಕದೊಳುಳಿದವರನುತಾ ಕರದೊಯಿದು ವಜ್ರಾಖ್ಯನಂ ಯಿಂದ್ರಪ್ರಸ್ಥದೋಳ್ ಮುಸಲಪರ್ವದಕಥೆಯಿದು 16 ನರನಮೊಮ್ಮಗೆ ಪಟ್ಟವಂಗಟ್ಟಿಯೈವರುಂ ತೆರಳಿದರ್ಪಾಂಡವರ್ ಸತಿಸಹಿತಬರುತ ಹಿಮ ನಕುಲನುಂ ಸುರಪಸುತನು ವರಭೀಮಸೇನನುಂ ಬಿದ್ದರಾನೃಪತಿಯೋ ರ್ವರನುಕಾಣದೆಯೊಬ್ಬನೇಪೋಗುತಿರೆ ಕಷ್ಟ ಪ್ರಸ್ಥಾನಪರ್ವದೊಳಗೆ 17 ಮ್ಮಂದಿರೆಲ್ಲೆನಲವಂ ಸುರನದಿಯತೋರಲ್ಕೆ ತನ್ನವರೆಲ್ಲರ ನೋಡುತ ಪೊಂದಿದಂ ಯಮನೊಡನೆ ಪವನನೋಳ್ ಭೀಮನರ ನಿಂದನಂ ಯಮಳರಶ್ವಿನಿಯರೊಳ್ಕಲಿಮುಖ್ಯ ಸಂದೋಹದೋಳ್ ಸುಯೋಧನ ಪ್ರಮುಖರೊಂದಿದರ್ ಸ್ವರ್ಗಾರೋಹಣಪರ್ವದಿ 18 ಈಮಹಭಾರತ ಶತಸಹಸ್ರಗ್ರಂಥವನು ಹಾ ಮುನಿ ಪರಾಶರಾತ್ಮಜಪೇಳ್ದನದುವೆ ಗುರು ಸಂಕ್ಷೇಪಭಾರತವನು ಪ್ರೇಮದಿಂದಾಲಿಸುವ ಸಜ್ಜನರಿಗನುದಿನಂ ಕಾಮಿತಾರ್ಥವನಿಹಪರಂಗಳೊಳ್ಸುಖವಗುರು ರಾಮವಿಠ್ಠಲಕೊಡುವಭಾಗ್ಯವಲ್ಲೀನಗರ- -ನಿಲಯನರಹರಿಕರುಣದಿ 19
--------------
ಗುರುರಾಮವಿಠಲ
ಶ್ರೀಲಕ್ಷ್ಮೀನಾರಾಯಣ ಸ್ತುತಿ ಗುಣಪೂರ್ಣಾಚ್ಯುತೋ ವಿಷ್ಣುಃ ಅಪ್ರಾಕೃತರೂಪವಾನ್ ಅನ್ನದಾತಾ, ಧನದಾತಾ ಆಯುಷಾÀ್ಯರೋಗ್ಯದೋ ಹರಿಃ ಚಕ್ಷುದಾತಾ ಜ್ಞಾನದಾತಾ ದೇಹಿ ತ್ವಮಿ ಭಕ್ತಿ ಸದಾ ಮದಾದರ್ಭಿಹಿಃ ಸರ್ವತ್ರ ತ್ವಮೇವ ಜ್ವಲತಿ ಸದಾ ತ್ವತ್ಕøಪಯಾ ಏವ ಪಶ್ಯಾಮಿ ಭೋ ವಾಮನ ಭಾಮನಾ ಮದ್‍ಹೃಸ್ಥ ಹರಿಣಾವೇ ಕ್ರಿಯಾದರ್ಶನ ಚಿಂತನಂ ವಾಯು ಯಜ್ಞಸ್ಯ ಪಾದಸ್ತೇಃ ಮನ್ಮನತಿಚ್ಛಾಮೀಚ ವಾಯುಯಜೇ ಸದಾತೀಕ್ಷು ಯಜ್ಞನಾಮಾ ಶ್ರೀಯಃ ಪತಿಃ ಶ್ರೀ ಲಕ್ಷ್ಮೀನಾರಾಯಣಾಭ್ಯಾಂ ಸದಾ ವಂದೇ ಮಮಸ್ವಾಮಿಃ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಲೋಲನಲ್ಲೆ ಭಾಮೆ ಅವಲೋಲನಲ್ಲೆ ಭಾಮೆ ಪ ಲೋಲನೊ ಬಾಲನೊ ಗೋಪಾಲನೊ ನಾನರಿಯೆ ಅ.ಪ. ಇಂದು ತಮನ ಕೊಂದು ವೇದವ ತಂದವನಲ್ಲೆ ಭಾಮೆ ಅವತಂದವನಲ್ಲೆ ಭಾಮೆ ತಂದವನೊ ಬಂದವನೊ ಅದರಂದವನು ನಾನರಿಯೆ 1 ಅರ್ಥಿಯಿಂದಲಿ ಗಿರಿಯ ಬೆನ್ನಿಲಿ ಪೊತ್ತವನಲ್ಲೆ ಭಾಮೆ ಅವ ಪೊತ್ತನಲ್ಲೆ ಭಾಮೆ ಪೊತ್ತವನೊ ತೆತ್ತವನೊ ಅದರರ್ಥವನು ನಾನರಿಯೆ 2 ವರಾಹ ಸ್ವಾಮಿಯಲ್ಲೆ ಭಾಮೆ ಅವ ಸ್ವಾಮಿಯಲ್ಲೆ ಭಾಮೆ ಸ್ವಾಮಿಯೊ ಪ್ರೇಮಿಯೊ ಬಹು ಕಾಮಿಯೊ ನಾನರಿಯೆ3 ತರಳ ಪ್ರಹ್ಲಾದನಿಗೊಲಿದ ನರಹರಿಯಲ್ಲೆ ಭಾಮೆ ಅವ ನರಹರಿಯಲ್ಲೆ ಭಾಮೆ ನರಹರಿಯೊ ಸಿರಿದೊರೆಯೊ ಆ ಉರವಣಿಗೆಯ ನಾನರಿಯೆ4 ನೆಲನ ಈರಡಿ ಮಾಡಿ ಅಳೆದ ಚೆಲುವನಲ್ಲೆ ಭಾಮೆ ಅವ ಚೆಲುವನಲ್ಲೆ ಭಾಮೆ ಚೆಲುವನೊ ಮಲೆವನೊ ಅಂಡಲೆವನೊ ನಾನರಿಯೆ 5 ಕೊಡಲಿ ಮಸೆದು ರಾಯರನೆಲ್ಲ ಕೆಡಹಿದನಲ್ಲೆ ಭಾಮೆ ಅವ ಕೆಡಹಿದನಲ್ಲೆ ಭಾಮೆ ಕೆಡಹಿದನೊ ಮಡುಹಿದನೊ ಆ ತೊಡರವನು ನಾನರಿಯೆ 6 ಸೀತಾ ಚೋರನ ಕೊಂದ ರಘುನಾಥನಲ್ಲೆ ಭಾಮೆ ಅವ ನಾಥನಲ್ಲೆ ಭಾಮೆ ನಾಥನೊ ಖ್ಯಾತನೊ ಆ ಮಾತನು ನಾನರಿಯೇ 7 ಮಾವನ ಕೊಲಲು ಮಧುರೆಗೆ ಪೋದ ದೇವನಲ್ಲೆ ಭಾಮೆ ಅವ ದೇವನಲ್ಲೆ ಭಾಮೆ ದೇವನೊ ಭಾವನೋ ಗೋ ಕಾವನೊ ನಾನರಿಯೆ8 ತ್ರಿಪುರಾಂಗನೆಯರ ವ್ರತವನಳಿದ ಚಪಳನಲ್ಲೆ ಭಾಮೆ ಅವ ಚಪಳನಲ್ಲೆ ಭಾಮೆ ಚಪಳನೊ ವಿಪುಳನೊ ಆ ವಿಪರೀತವ ನಾನರಿಯೆ 9 ಓಜೆಯಿಂದ ತೇಜಿಯನೇರಿದ ರಾಜನಲ್ಲೆ ಭಾಮೆ ಅವ ರಾಜನಲ್ಲೆ ಭಾಮೆ ರಾಜನೊ ಭೋಜನೊ ಆ ಸೋಜಿಗವ ನಾನರಿಯೆ 10 ಸೃಷ್ಟಿಗೆ ಕರ್ತನು ವಿಜಯವಿಠ್ಠಲನಲ್ಲೆ ಭಾಮೆ ಅವ ವಿಠ್ಠಲನಲ್ಲೆ ಭಾಮೆ ವಿಠ್ಠಲನಾದರೆ ಇಷ್ಟೊಂದ್ಯಾತಕೆ ದಟ್ಟಡಿಗಳಿಗೊಂದಿಸುವೆ 11
--------------
ವಿಜಯದಾಸ
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ಶ್ರೀವತ್ಸಾಂಕಿತ ಗರುಡ ತುರಂಗ ಕಾವೇರಿ ಜಲ ಪರಿವೃತ ರಂಗ ಪ. ದೇವೋತ್ತಮ ನುತ ಧರಿತ ರಥಾಂಗ ಪಾವನ ಚರಣ ಕೃಪಾಂಗ ಶುಭಾಂಗ ಅ.ಪ. ದೇವಕೀನಂದನ ಜಲದ ನೀಲಾಂಗ ಭಾವಜಪಿತ ದಯಾಜಲಧಿ ತರಂಗ ಶ್ರೀವನಮಾಲಾ ರಿಪುಮದ ಭಂಗ ಲಾವಣ್ಯಾಂಬರ ಕರುಣಾಪಾಂಗ 1 ರಾವಣ ಕುಲ ಸಂಹಾರಕ ರಂಗ ಶ್ರೀವಿಭೀಷಣ ಪೂಜಿತ ರಂಗ ಸನ್ನುತ ರಂಗ ಶ್ರೀವಸುಧಾನ್ವಿತ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀವಧು ನಯನಾಬ್ಜ ವಿಲೋಚನಾ ದಾವನಾಗಿಹ ಪಂಕಜಲೋಚನಾ ದೇವನಂಘ್ರಿಯ ಚರಿತದ ಸೂಚನಾ ಪಾತಕ ಮೋಚನಾ 1 ಮತಿ ಮಂತಾಂಭುನಿಧಿ ದ್ವಿಜರಾಜ ದಿತಿ ಸುತಾಹಿ ಕುಲದ್ವಿಜರಾಜಾ ಸುತ ಮುನಿಹೃದಯಾಬ್ಜದಿನೇಶಾ ಸತತ ದುಷ್ಕøತ ತರುರದನೇಶಾ2 ಆವನೀಭುವ ನತ್ರಯವ ಪಾಲಕಾ ದೇವಕೀತಪದಲಾದನು ಬಾಲಕಾ ದೇವನಾಡಿದ ಮನಿಲಿಯ ಶೋದಾ ಭಾವಿಸಲ್ಕವಗ ಗತಿ ಶ್ರೀಯಶೋದಾ3 ಪರಮ ಸುಂದರ ನಂದ ಕುಮಾರಾ ಅರಿತು ಬಂದನುಗರ್ಭದಿ ಮಾರಾ ಧರಿಯೊಳಾವನ ಮನಿ ಕಾಪುರದ್ವಾಶಕಾ ಸ್ಮರಸಲೀ ಜಗದ ಪಾವಿದಾರಕಾ4 ಮಾನವ ತಂದಿಯಾ ಸುಗಮದಿಂದರಿದ ಬಂಧನ ತಂದಿಯಾ ಮಗನ ಕಾಯಿದಾ ಶಿಕ್ಷಿಸಿ ತಂದಿಯಾ ಮಗನ ಶಿಕ್ಷಿಸಿ ಕಾಯಿದಾತಂದಿಯಾ5 ವನಧಿ ವಂಧಿಸಿ ತೇಲಿಸಿ ಪರ್ವತಾ ಜನಪದಾಟಿಸಿ ವಾನರ ಪರ್ವತಾ ಘನಮಹಿಮನು ಜಾನಕಿ ಕಾಂತಾ ನೆನಹುತಿಹನು ಸಹಶಿವಕಾಂತಾ 6 ಸೇವಿಗಂಡೊಲಿದು ರಾಘವ ತಮ್ಮನಾ ರೇವತೀರಮಣಗೆಂಬನುತಮ್ಮನಾ ಜೀವಗಾಯಿದಾ ಭೀಮನತಮ್ಮನಾ ಪಾವನಂಘ್ರಿಯ ನೆನಿಸತತಂಮನಾ7 ಕುದಿಪುತಿರ್ಪುದು ಮಡು ಪವನಾಶನಾ ವಿದಿತೆ ಘಾಳಿಗೆ ಜೀವನ ನಾಶನಾ ಅದರೊಳಗಡಲು ತಾಜಗ ಜೀವನಾ ಸುಧಿಯ ರೂಪವ ಆಯಿತು ಜೀವನಾ8 ಜಲದಲೀ ನೆನಿಯಲು ಮದವಾರಣಾ ವಲಿದು ಮಾಡಿದ ಬಂಧ ನಿವಾರಣಾ ಸತಿಸ್ವರೂಪದ ನೀಡಿದ ಮುಕ್ತಿಯಾ ನಲಿದು ಮಾಡಲಿ ಶ್ರೀ ಹರಿ ಭಕ್ತಿಯಾ9 ದಾವ ತೇಲಿಸಿದ ನಚ್ಚಿಲಿ ಗೋಕುಲಾ ದೇವ ಕಾವನು ನೋಡಿರಿ ಗೋಕುಲಾ ಜೀವಜಾಲದ ಬೇಡಿ ಪ ಗೋಕುಲಾ ತಾವಿಹರಿಸುತಿಹನು ಗೋಕುಲಾ 10 ಸ್ಮರಿಸಿ ಗೋಕುಲಲ್ಯಾಕಳ ಕಾವನಾ ಧರೆಯೊಳೊಪ್ಪುವ ಕಾಟಿಯ ಕಾವಳಾ ಚರಣ ಗೋಚರ ಮುನಿಮನ ಕಾವನಾ ಶರಣ ಹೋಗದು ಸಕಲಿ ಕಾವನಾ11 ಅವನಂಘಿಯ ಸೇರೆ ವನೌಕಸಾ ಜೀವರಾದರು ಸಾಮದಿವೌಕಸಾ ಭಾವಿಸಲ್ಕಾರಿಯದಾದಳು ಶ್ರೀರಮಾ ದೇವನಾಸ್ತುತಿಸಿ ಬಣ್ಣಿಪ ರಾರಮಾ12 ಮುನಿ ಬಂದನೆಂದು ಸ್ಮರಿಸಲು ಕೃಷ್ಣಾ ಮನಸ್ನೇ ಹದಿಂದೋಡಿ ಬಂದನು ಕೃಷ್ಣ ಅನೇಕ ಪದಾರ್ಥದಿಂ ದುಣಿಸುತಾ ಘನಾನಂದ ನೀಡಿದ ಪಾರ್ಥನ ಸೂತಾ13 ಸುರಗಂಗಿಯ ಪಡದ ದಾವನ ಚರಣ ಅರಿಮರ್ದನಾಗಿಹ ದಾಪಾಣಿ ಚರಣಾ ಸರಿಜಾರ ನಖದಾ ತೇಜಕ್ಕ ತರಣೀ ಇಂದಿರೆ ತರುಣಿ14 ಚರಣಧ್ಯಾಯಿಪದಾವನು ಮಾಧವಾ ಸುರನರೋರಗ ಪೂಜಿ ಮಾಧವಾ ಧರಿಯೊಳಾದನು ಬಾಲಕ ನಂದನಾ ಚರಿತ ಪಾಡಿದ ಮಹಿಪತಿ ನಂದನಾ15
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀವಧೂ ಮನೋಹರಾ ನಮೋ ನಮೋ ಪ. ದೇವದೇವ ದೇವರೇ ವಸುದೇವನಂದನ ಭಾವಾತೀತ ವಿಧಿಭವಾರ್ಚಿತ ಅ.ಪ. ವಾಸವಾರ್ಚಿತಾಂಘ್ರಿಯುಗ ನಮೋ ನಮೋ ಶ್ರೀಸಮೇತ ಭೂಸಹಿತ ನೀಳಾಸಮನ್ವಿತ ಶೇಷಾದ್ರೀಶ ಜಯಲೀಲಾಮಾನುಷ 1 ರಾಜೇಂದ್ರಪುರೀನಾಥ ನಮೋ ನಮೋ ರಾಜರಾಜ ದ್ವಿರಾಜತೇಜ, ರಾಮಚಂದ್ರ ಭೂಪತಿ ಜಯರಾಜೇಂದ್ರ ರಾಜರಾಜ ಪೂಜಿತ 2
--------------
ನಂಜನಗೂಡು ತಿರುಮಲಾಂಬಾ
ಶ್ರೀವರ ಕೀರ್ತಿಯಂ ಅರ್ಥಿಯಿಂದಾಲಿಸೈ ಚಿತ್ತಶುದ್ಧಿಯಿಂ ಪ ಭಾವಿಸಿವಾರ್ತೆಯ ವ್ಯಾಸ ವಾಲ್ಮೀಕಿಯು [ಆವರ]ಶುಕ ಮನುಶ್ರೇಷ್ಠರೆಲ್ಲ ನಿತ್ಯಪಠಿಪರೋ ಅ.ಪ ಘೋರಾರಣ್ಯದಿ ತಿರುಗುತ್ತ ಶೌರ್ಯದಿ ಗೋಗ್ರಹಣವನು ಸಾಧಿಸುತಲಿ ಮೀರಿ ಸಂಧಿಕೇಳದ ದುರ್ಯೋಧನರ ಹತಗೈದ 1 ರಾಮನು ಕಾಡೊಳು ಮೃಗವನು ಮರ್ದಿಸಿ ಭೂಮಿಜೆಯಂ ತರೆ ರವಿಜನಿಂ ಆ ಮಹಾಸಾಗರವನು ಬಂಧಿಸಿ ಲಂಕಾ ಪ್ರೇಮಿಯನ್ನು ಕೊಂದು ಬಂದ ರಾಮಚರಿತಮಂ2 ದೇವಕಿಸುತ ಗೋಪೀಗೃಹವರ್ಧನ ಗೋವರ್ಧನಗಿರಿಯೆತ್ತಿದ ಮಾವಕಂಸಾದಿ ದುರ್ದೈತ್ಯರ ಖಂಡಿಸಿ ಸೇವಿಸುವ ಸಿಂಧುಗಳ ಸಲಹುವ ಜಾಜೀಶನು 3
--------------
ಶಾಮಶರ್ಮರು
ಶ್ರೀವರ ಶ್ರೀಕರ ಶುಭಕರನೇ ಪಾವನ ಸಂಪದನೇ ವರದನೇ ಪ ಕಾವನು ಈವನು ಜೀವನು ನೀನೆ ದೈವವು ನೀನೆ ನವನಿಧಿಯು ನೀನೆ ಆವನು ಇನ್ನಾರನೂ ಅರಿಯೆನೆ 1 ತಂದೆಯು ತಾಯಿಯು ಮಾವನು ಭಾವನು [ಎಂದಿಗೆ ಇರುವನ ಪ್ರಿಯನು ಸಹಾಯನು ತಂದೆ ಮಾಂಗಿರಿನಿಲಯನೆ ಅಪ್ರಮೇಯನು ಜೀಯನು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀವರ ಸುಖಕರ ಸುಂದರ ಶ್ಯಾಮ ಶಿವಸುತ ಶುಭನಾಮ ಮಂಗಳ ಗುಣಧಾಮ ಪ. ಪಾರಾವಾರತನಯಾರಾಮಾ ಮುರಮದಹರಣ ಸರೋಜಪತ್ರಾಯತೇಕ್ಷಣ ಮಂಗಳ ಗುಣಧಾಮ 1 [ಶ್ರೀಕರ] ಪರಂಧಾಮ ಮಂಗಳಗುಣಧಾಮ 2 ವಿಶ್ವಾಧೀಶ ಸುಗುಣಾವೇಶ ಭಾಸ್ಕರಕೋಟಿವಿಭಾಸ ಶೇಷಾದ್ರೀಶ ಶಶಿಸುಹಾಸ ಚಿದ್ವಿಲಾಸ ಮಂಗಳಗುಣಧಾಮ3
--------------
ನಂಜನಗೂಡು ತಿರುಮಲಾಂಬಾ
ಶ್ರೀವರ ಹರಿ ವಿಠಲ | ಕಾಪಾಡೋ ಇವಳಾ ಪ ಭಾವುಕರ ಪಾಲ ನೆಂ | ದೇವೆ ಶ್ರುತಿ ಸಿದ್ಧ ಅ.ಪ. ಹರಿಸೇವೆ ಕೈಕಂರ್ಯ | ನಿರತಳಾಗಿ ಹಳೀಕೆಹರಿಗುರು ದಾಸ್ಯದಲಿ | ದೀಕ್ಷೆಕಾಂಕ್ಷಿಪಳೋ |ಹರಿಯ ತೈಜಸರೂಪಿ | ವರಮಾರ್ಗ ತೋರ್ಪಪರಿಹರಿಯ ನಿನ್ನಂಕಿತವ | ಇತ್ತಿಹೆನೊ ದೇವಾ 1 ಸಾರತಮ ಹರಿಯ ಜಗ | ನಿಸ್ಸಾರವೆಂದು ಸಂ |ಸಾರ ಶರಧಿಯ ಹಾಯೋ | ವಾರಿಜ ಸುನಾಭಾ |ಆರು ಮಾರ್ಭಕುತಿಗಳ | ವೈರಾಗ್ಯ ಸುಜ್ಞಾನಧೀರ ನೀ ಕರುಣಿಸುತ | ಕಡೆ ಹಾಯ್ಸೊ ಇವಳಾ 2 ಮೋದ ತೀರ್ಥರ ಮತದಿ | ಸಾಧನ ಸುಮಾರ್ಗದಲಿಹಾದಿ ಕ್ರಮಿಸುತ್ತಿಹಳೂ | ವೇದಾಂತ ವೇದ್ಯಾಹೇ ದಯಾ ಪೂರ್ಣಹರಿ | ಸ್ವಾಧ್ವಿಗೆ ತವನಾಮಸುಧೆಯನೆ ಉಣಿಸೊ ಸ | ರ್ಪಾರ್ದಿಗೇ ಓಡೆಯ 3 ಶಮದ ಮಾದಿಯನಿತ್ತು | ಭ್ರಮಮಾರ ಪರಿಹರಿಸೊಅಮಿತ ಮಹಿಮೋಪೇತ | ಸುಮನಸಾರಾಧ್ಯಕರ್ಮನಿಷ್ಕಾಮನದಿ | ರಮೆಯರಸಗರ್ಪಿಸುವಸುಮನೊಭಾವದಲಿ | ಕ್ರಮಿಪ ತೆರಮಾಡೋ 4 ನಿತ್ಯ ನಿಗಮಾತೀತ | ದೈತ್ಯ ಜನ ಸಂಹರ್ತಭೃತ್ಯಳಿಗೆ ಮೈದೋರಿ | ಹೃತ್ಕøಕ್ಷಿಯೊಳಗೇಪ್ರತ್ಯಕ್ಷನಾಗೆಂಬ | ಪ್ರಾರ್ಥನೆಯ ಸಲಿಸೋಹರಿಕರ್ತೃ ಕರ್ಮಾಖ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀವರದ ವಿಠಲರ ಹಾಡು ದೋಷರಾಶಿಯ ಕಳೆದು ಪಾಲಿಸುವದು |ಶ್ರೀಶ ಪ್ರಾಣೇಶ ದಾಸಾರ್ಯನೇ ಒಲಿದು ಪ ಭಾರ ನಿನ್ನದುಯೆಂದೆ 1 ದಾಸಕುಲರತ್ನ ಗುರು ಪ್ರಾಣೇಶದಾಸರಲಿ |ವಾಸುದೇವನ ಸ್ಥಿರದಾಸ್ಯ ಪಡೆದು ||ಶ್ರೀಶ ಪ್ರಾಣೇಶ ವಿಠಲನ ಕುಣಿಸಿದ ಧೀರ |ಆಶಪಾಶವ ಬಿಡಿಸು ಎಂದು ನಾ ಬಂದೆ 2 ನಂದ ವತ್ಸರದ ಭಾದ್ರಪದ ಮಾಸದಲ್ಲಿ |ಚಂದ್ರಪಕ್ಷವು ಅಷ್ಟಮಿ ತಿಥಿ ಭೌಮ್ಯದಿನದಿ ||ಮುಂದ ಕಾಲದಿ ನರಹರಿಯ ಧೇನಿಸಿ ನಲಿದು |ಇಂದಿರಾಧವ ವರದ ವಿಠಲನೂರಿಗೆ ನಡೆದೆ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀವರನೆ ದಯ ಮಾಡೋ ನಿನ್ನ | ಸೇವಕ ಸೇವಕನ ನೋಡೋ ಪ ಭವ ಕೂಪಾಕಿ ದಾಟಿಪ | ಮೋಚಕೇಚ್ಛೆಯ ನೀ ಮಾಡಿಸೊ1 ಹೆತ್ತ ತಾಯಿಗೆ ತೊತ್ತು ಭಾರವೇ | ಪೆತ್ತು ಈ ಜಗವನ್ನೆಲ್ಲ ಪೊತ್ತುಕರ್ತನೆಂದೆನಿಸಿದವಗೆ ನಿನ್ನ | ಭೃತ್ಯನ ಪಾಲಿಪ ಕೃತ್ಯ ನಿನದಲ್ಲೇ 2 ಪರಿ ಭವ | ನೋವ ಕಳೆವುದೆಂದು ಬಿನ್ನವಿಪೆ 3
--------------
ಗುರುಗೋವಿಂದವಿಠಲರು
ಶ್ರೀವರನೆ ಬಾ ಮುಕುಂದ ಮಾಧವ ಕಾವರನ್ಯರು ಇಲ್ಲ ಗೋವಿಂದ ಕೇಶವ ಪ ವೇದವಿದಿತ ಹರಿ ಸಾದರ ಮುರವೈರಿ ಮೇದಿನೀಪತಿ ಕೋದಂಡ ಸುವಿಹಾರಿ1 ನೋಡಿ ನಿನ್ನಯ ಚರಣ ಹಾಡಿ ನಿನ್ನಯ ಸುಗುಣ ಬೇಡಿ ನಿನ್ನಯ ಕರುಣ ಪಾಡುವೆನೋ ಶರಣ 2 ಮಂಗಳ ಸುವಿಲಾಸ ಶೃಂಗಾರ ಭಾನುಭಾಸ ಮಾಂಗಿರಿವರವಾಸ ರಂಗೇಶ ಶ್ರೀನಿವಾಸ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀವಾಣಿ ಕಲ್ಯಾಣಿ ಬ್ರಹ್ಮಾಣಿ ಗೀರ್ವಾಣಿ ಕೈವಲ್ಯಮಾರ್ಗ ಪ್ರದರ್ಶಿನೀ ಕವಿಜೀವಿನೀ ಮಜ್ಜನನೀ ಪ. ಕಾಮಿನೀ ಗುಣಭರಣೀ ಕಮನೀಯ ಸುಶ್ರೋಣಿ ರಾಮಾಣೀಯಕ ಪಲ್ಲವಪಾಣಿ ಕೋಮಲ ಶುಕವಾಣಿ 1 ಮಂಗಳಂ ವಿಧಿರಮಣೀ ಜಯ ಮಂಗಳಂ ಘನಕರುಣಿ ಸಂಗೀತ ಶಾಸ್ತ್ರ ವಿಲಾಸಿನೀ ಪರಿಪಾಹಿಮಾಂ ಜನನೀ 2 ಭುವನೈಕ ಮೋಹಿನಿ ತರುಣಿ ಭಾಷಾಭಿಮಾನಿನಿ ರಮಣಿ ಶೇಷಶೈಲವಾಸ ಕೀರ್ತನಾಮೋದದಾಯಿನಿ ಜನನಿ 3
--------------
ನಂಜನಗೂಡು ತಿರುಮಲಾಂಬಾ