ಒಟ್ಟು 9833 ಕಡೆಗಳಲ್ಲಿ , 131 ದಾಸರು , 5664 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಯುದೇವರು ಶಾಂತ ಜನರಿಗೀಶಾ ರವಿಕುಲ ಕಾಂತನ ನಿಜದಾಸ ಪ ಭ್ರಾಂತಿ ಬಿಡಿಸಿ ನಿಶ್ಚಿಂತ ಮನದಿ ವೇ- ದಾಂತವೇದ್ಯನಲಿ ಸಂತಸ ಕೊಡುವನ ಅ.ಪ. ಕಡಲ ದಾಟಿ ಬಂದೂ ಒಡೆಯನ ಮಡದಿಗುಂಗುರ ತಂದೂ ಸಡಗರದಲಿ ತುಡುಗ ದೈತ್ಯವ ಕೊಂದು ಅಡಿಯಿಡೆ ಲಂಕೆ ಸುಟ್ಟು ಸುಡುಭುಗಿ ಮಾಡಿದೆ 1 ಏಕಚಕ್ರದಲ್ಲೀ ಬಕಗೆಂ- ದ್ಹಾಕಿದ ಗ್ರಾಸದಲೀ ಶಾಖಡಿಸಲಬಿಡದೇಕತುತ್ತು ಮಾಡಿ ಭೀಕರ ದೈತ್ಯನವಲೋಕಿಸದ್ಹೊಡದೆಲೋ 2 ವಾಯು ಹನುಮ ಭೀಮ ಮಧ್ವಾ ಕಾಯೋ ಪೂರ್ಣಕಾಮಾ ಸಾಯ ಬಡಿದೀ ನೀ ಮಾಯಿಗಳೆಲ್ಲರ ರಾಯ ಶ್ರೀನಿಧಿವಿಠಲಾಯಗೆ ತಿಳಿಸಿದೆ ಎಲೆಲೋ 3
--------------
ಶ್ರೀನಿಧಿವಿಠಲರು
ವಾಯುದೇವರು - ಹನುಮಂತ ಎಂಥ ವೈರಾಗ್ಯ ಹನುಮಂತ ಎಂಥ ಸೌಭಾಗ್ಯ ಗುಣವಂತ ಪ ಸಂತತ ರಾಘವನಂಘ್ರಿ ಕಮಲದಲಿ ಅಂತರಂಗ ಭಕುತಿಯ ಬೇಡಿದೆಯೊ ಅ.ಪ ಆವರಿಹರು ನಿನ್ಹೊರತು ರಾಘವರ ಭಾವವರಿತು ಪ್ರತಿ ಕ್ಷಣಗಳಲಿ ಸೇವೆ ಸಲಿಸಿ ದಯ ಪಡೆಯಲು ಭೋಗವ ದಾವದನುಭವಿಸೆ ದುರ್ಲಭವು ಜೀವೋತ್ತಮನದ ಬಯಸದೆ ಏಕೋ ಭಾವದಿ ಪದಸೇವೆಯ ಕೇಳಿದ ವೀರ 1 ಜ್ಞಾನಪರಾಕ್ರಮ ಧ್ಯೆರ್ಯವೀರ್ಯಕಧಿ ಷ್ಠಾನ ಪವನಸುತ ಜಗತ್ರಾಣ ನೀನಲ್ಲದೆ ಖಗಮೃಗ ಸುರನರರುಗ ಳೇನು ಚಲಿಸಬಲ್ಲರೊ ಹನುಮ ಪ್ರಾಣಭಾವಿ ಚತುರಾನನ ಭುವಿಯೊಳ ಗೇನು ರುಚಿಯೊ ಕಲ್ಯಾಣಚರಿತ ನಿನಗೆ 2 ಕಪಿ ರೂಪದಿ ದಶಕಂಧರನ ಮಹಾ ಅಪರಾಧಕ್ಕೆ ಶಿಕ್ಷೆಯನಿತ್ತೆ ನೃಪರೂಪದಿ ದುರ್ಯೋಧನನಸುವನು ಅಪಹರಿಸಿದೆಯೋ ಬಲ ಭೀಮ ವಿಪುಲ ಪ್ರಮತಿ ವರವೈಷ್ಣವ ತತ್ವಗ ಳುಪದೇಶಿಸಿದ ಪ್ರಸನ್ನ ಯತಿವರೇಣ್ಯ3
--------------
ವಿದ್ಯಾಪ್ರಸನ್ನತೀರ್ಥರು
ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ ವಾರಿಸನಳಿಯನನುಓರಂತೆ ನೀ ಪೋಗಿ ಕರೆತಾರೆನ್ನಯ ಪ್ರಾಣಾಧಾರ ಕೇಶವ ಮೂರ್ತಿಯ ಪ ನಗ ವೈರಿಯಣುಗನಣ್ಣನಯ್ಯನಾಪ್ತಗೆ ಮಿಗೆ ಹುಟ್ಟಿದನ ತಮ್ಮನಸೊಗಸು ವಸ್ತ್ರಕೆ ಸೋತನ ಸುರಪುತ್ರನ ವಾಜಿಯನಿವ ವೈರಿಯ ಪಗೆಯಜಗದೊಳಗೆ ಹಾಟಿದೊಳೇರಾಟದ ವನವ... ನವನಿಂದ ನಗೆತೋರಿನಾವುನಿನಗೆಅಗಣಿತಾಭರಣವೀವೆನು ಅಂಗಜಾಗ್ನಿಯ ತಗಹ ಬಿಡಿಸೆ ತರುಣಿ 1 ಮಿಹಿರ ನಂದನನ ತಂದೆಯ ಪಗೆಯವನ ಮಾವನ ಹಿತನ ಮನೆವೆಸರಮಹಿ ವನ ಕೃತಿಗೊಡೆಯನ ಬಂಟನನುಜನ ಸಹಿಸಿ ತಮ್ಮನ ಮಿತ್ರನ ಕುಹಕದಿ ಶಾಪವಡೆದಳು ಪ್ರಸ್ತರವಾಗಿ ಗಗನ ಮಧ್ಯದೊಳಿರಲು...ಸಿ ಶಾಪವ ದನುಜ... ಕ್ಷಿತಿಯೊಳು ವಿವರಿಸುವವನ ಕರೆತಾರೆ 2 ಸುರಭೇದ ಪ್ರಥಮ ದಾಸಿಯ ಪೆಸರನ ವಾಜಿಯರಸನ ನಖವೈರಿಯಮರೆಯ ಮಾರ್ಗದಿ ಗಮಿಸುವನಾಪ್ತನ ತಾಯ ಧರಿಸಿದಾತನ ಮಿತ್ರನಪೊರೆಯ ದೆಸೆಯ ದಿಕ್ಕರಿಯ ಕೋಪದಿ ಸೀಳ್ದನರಸಿಯಣ್ಣನನೀಕ್ಷಣಕರೆತಂದೆನಗೆ ಕೂಡಿಸು ಕಾಗಿನೆಲೆಯಾದಿಕೇಶವನ 3
--------------
ಕನಕದಾಸ
ವಾರಿಜಗಣ ನಿಲಯೇ ಕಮನೀಯೆ ತಾಯೇ ಕಾಯೇ ನರಹರಿ ಜಾಯೇ ಪ ಸಾರಸಭವಮುಖ ಸುರ ಮಹನೀಯೆ ಚಾರುವದನೆ ಜಾಂಬೂನದ ಛಾಯೆ ಅ.ಪ ನಿನ್ನ ಕಟಾಕ್ಷ ಮಹಾಸುರಧೇನು ನಿನ್ನ ಮನವು ಚಿಂತಾಮಣಿಯು ನಿನ್ನಯ ಕರಗಳು ಸುರತರುವೆನಗೆ ಇಂದಿರೆ 1 ಹೃನ್ಮಂದಿರದಲಿ ಜ್ಞಾನವನು ಮನ್ಮಂದಿರದಲಿ ಭಾಗ್ಯವನು ಅಮ್ಮ ಬೆಳಸೆ ಕಮಲೆ ಸುವಿಮಲೆ ಇಂದಿರೆ 2 ಈಶನಂಘ್ರಿಯಲಿ ಭಕ್ತಿಯನು ಹರಿ ದಾಸದಾಸ್ಯದಲಿ ಶಕ್ತಿಯನು ಮೋಸಕೆ ಸಿಗದ ವಿರಕ್ತಿಯನು ಕರುಣದಲಿ ನೀಡೆ ಪ್ರಸನ್ನೆ3
--------------
ವಿದ್ಯಾಪ್ರಸನ್ನತೀರ್ಥರು
ವಾರಿಜನಯನಗೆ ಜಯ ಮಂಗಳ ಶುಭ ಮಂಗಳಾ ಪ ನೀರಧಿಶಯನಗೆ ಜಯ ಮಂಗಳ ಶುಭ ಮಂಗಳಂ ಅ.ಪ ಭವ ಭಯ ಹರನಿಗೆ ಪವನಜನಮಿತಗೆ ಭುವನಸುಂದರನಿಗೆ ಜಯಮಂಗಳಂ ಕುವಲಯಶ್ಯಾಮಗೆ ನವಮಣಿಮಾಲಗೆ ದಿವಿಜಸಂಸೇವ್ಯಗೆ ಶುಭಮಂಗಳಂ1 ಕರುಣಾಜಲಧಿಗೆ ಶರಣರ ಪೊರೆವಗೆ ನರಹರಿರೂಪಗೆ ಜಯ ಮಂಗಳಂ ಪುರುಷೋತ್ತಮನಿಗೆ ದುರಿತಸಂಹಾರಗೆ ಶುಭ ಮಂಗಳಂ 2 ಗಂಗೆಯ ಜನಕಗೆ ಮಂಗಳರೂಪಗೆ ಸಂಗರಧೀರಗೆ ಶುಭಮಂಗಳಂ ತುಂಗವಿಕ್ರಮನಿಗೆ ಇಂಗಿತವರಿವಗೆ ಮಾಂಗಿರಿಯರಸಗೆ ಜಯ ಮಂಗಳಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಾರಿಜಾಕ್ಷನೆ ನಿನ್ನ ಚಾರುಚರಣದ ಸ್ಮರಣೆ ಬಾರಿ ಬಾರಿಗೆ ಮಾಳ್ಪ ಭಾಗ್ಯವೀಯೊ ಸಾರಸಾಕ್ಷನೆ ಸಂಸಾರ ದು:ಖದಿ ಎನ್ನ ಸೇರದಂದದಿ ಮಾಡೋ ಸರ್ವವಂದಿತ ಕೃಷ್ಣ 1 ಅಂಬುಜಾಕ್ಷನೆ ನಿನ್ನ ನಂಬಿದೆನೊ ಈ ಭವದ ಬಂಧ ತಪ್ಪಿಸಿ ಕಾಯೊ ಇಂದಿರೇಶ ಹಿಂದು ಮುಂದ್ಯಾರಿಲ್ಲವೆಂದು ನಂಬಿದೆ ನಿನ್ನ ಛಂದದಿಂದ ಸಲಹೊ ಮಹೇಂದ್ರತೀರ ನಿವಾಸ 2 ಸುಂದರಾಂಗನೆ ದೇವ ವಂದಿಸುವೆ ತವಪಾದ ಧ್ವಂದ್ವ ಭಜಕರ ಸಂಗ ಬಂದುನೀಡೈ ಇಂದಿರಾರಮಣನೆ ನಂದಗೋಪನ ಕುವರ ಬಂದು ಭಕುತರ ಪೊರೆವ ಆನಂದ ಮೂರುತಿ ಕೃಷ್ಣ3 ಶರಣಜನರನು ಪೊರೆಯೆ ತ್ವರಿತದಲಿ ಬಂದು ಈ ಗಿರಿಯ ಮಧ್ಯದಿನಿಂದೆ ಮಧುಸೂದನ ಶರಣುಶರಣೆಂದು ನಿನ್ನಡಿಗೆರಗುವ ಜನರ ದುರಿತವೆಲ್ಲವ ಕಳೆದು ಪೊರೆವ ದಯಾನಿಧಿ ಕೃಷ್ಣ4 ಕನಕಗರ್ಭನ ಪಿತನೆ ಕಡುಲೋಭವನೆ ಬಿಟ್ಟು ದೃಢವಾದ ಅಭಯವನು ದಯಪಾಲಿಸೊ ಪೊಡವಿಗೊಡೆಯನೆ ದೇವ ಕಮಲನಾಭವಿಠ್ಠಲ ಬಿಡದೆ ನಿನ್ನನು ಭಜಿಪ ಧೃಢ ಮನವ ನೀಡೈ5
--------------
ನಿಡಗುರುಕಿ ಜೀವೂಬಾಯಿ
ವಾರಿಧಿ ನಿಚ್ಚನೆ ಪ ನೀರೊಳು ಪೊಕ್ಕಹನೇ ರಂಗೈಯ್ಯ ಭಾರವ ಪೊತ್ತಿಹನೇ ಪೋರಾಚೆÉಗೆ ಇದು ದಾರ ಕಲಿಸಿದರೆನೆ ನೀರಜಭವರು ನಿರ್ಜರರು ನಗುತಿಹರು 1 ಕಂದ ಮೂಲವ ಗೆಲುವಾ ರಂಗೈಯ್ಯ ಬಂದ ಕಂಭವ ನೋಡಿದಾ ಕಂದ ಇಂಥ ಬುದ್ಧಿ ಎಂದು ಕಲಿತಿಯೇನೇ ಮೇದಿನಿ ಪ್ರಲ್ಹಾದ ನಗುತಿಹರು 2 ತಿರುಕನಂತೆ ಬೇಡುವಾ ರಂಗೈಯ್ಯ ಕರದಿ ಕೊಡಲಿವಿಡಿವಾ ಹರಕುತನವು ತಂದೆ ಯಾಕೋ ನಿನಗೆ ಎನೆ ಸುರಗಂಗೆ ವರ ಜಮದಗ್ನಿ ನಗುತಿಹರು 3 ಜಟವ ಬೆಳೆಸಿ ಕಟ್ಟಿಹಾ ರಂಗಯ್ಯ ಹಟದಿ ಮಾತುಳನಳ್ದೀಹಾ ಹಟಮಾರಿತನ ನಿನಗ್ಯಾರು ಕಲಿಸಿದರೆನೆ ದಿಟ ಪವಮಾನಾರ್ಜುನರು ನಗುತಿಹರು 4 ಅರಿವೆ ತಾನುಡಲು ವಲ್ಲ ರಂಗೈಯ್ಯ ತುರಗವೇರಲು ಬಲ್ಲಾ ನರಸಿಂಹವಿಠ್ಠಲ ಸರಿಯಲ್ಲವಿದು ಎನೆ ಸುರರು ಗಹಗಹಿಸಿ ನಗುತಿಹರು 5
--------------
ನರಸಿಂಹವಿಠಲರು
ವಾಸನ್ಹಿಂಗದವನ ಬಲುಮಡಿ ಮೀಸಲ್ಯಾಕೆ ಆಸೆಬಿಡದವನ ಹರಿದಾಸತ್ವವ್ಯಾಕೆ ಪ ಚಿತ್ತಶುದ್ಧಯಿಲ್ಲದವನ ತತ್ವ ಉಪದೇಶವ್ಯಾಕೆ ಕುತ್ತಿಗೆಯ ಕೊಯ್ವವನ ಭಕ್ತಿಭಾವ್ಯಾಕೆ ಹೆತ್ತವರ ಬಯ್ವವನ ಸತ್ಯರೊಡನಾಟವ್ಯಾಕೆ ಉತ್ತಮರ ಹಳಿವವನ ನಿತ್ಯನೇಮವ್ಯಾಕೆ 1 ಭೇದಕಡಿಯದವನ ಪರಸಾಧನೆಯು ಯಾತಕ್ಕೆ ವಾದಬಿಡದವನ ಸುವೇದ ಓದ್ಯಾಕೆ ಕ್ರೋಧದೊಳುರುಳುವನ ಸಾಧುತ್ವ ಯಾತಕ್ಕೆ ಜಾದುಗಾರನ ಸುಬೋಧವದು ಯಾಕೆ 2 ನಾನೆಂಬುದಳಿಯವ ಜ್ಞಾನಭೋದ್ಯಾಮೃತವ್ಯಾಕೆ ಹೀನಗುಣ ಬಿಡದವನ ಮೌನತ್ವವ್ಯಾಕೆ ದೀನರನು ಬಾಧಿಪರ ದಾನಧರ್ಮವು ಯಾಕೆ ನಾನಾ ಬಯಕ್ಯುಳ್ಳವನ ಧ್ಯಾನವು ಯಾಕೆ 3 ಕುಟಿಲತ್ವ ಸುಡದವನ ಜಟೆ ಕೌಪೀನ್ಯಾತಕೆ ಸಟೆಬೊಗಳಿ ಬದುಕುವನ ಪಟ್ಟೆನಾಮವ್ಯಾಕೆ ದಿಟವರಿಯದಧಮನ ನಿಟಿಲದಲಿ ಭಸಿತ್ಯಾಕೆ ದಿಟ್ಟೆಯರಿಗೆ ಸೋಲುವನ ಹಠಯೋಗವ್ಯಾಕೆ 4 ಯತಿಗಳನು ನಿಂದಿಪನ ಸ್ಮøತಿಶಾಸ್ತ್ರ ಯಾತಕ್ಕೆ ಸತಿಗಳುಕಿ ನಡೆಯುವನ ಅತಿಜಾಣ್ಮೆ ಯಾಕೆ ಸತತ ಖಲು ಕುಹಕನಲಿ ಅತಿಸ್ನೇಹ ಯಾತಕೆ ಕ್ಷಿತಿಯೊಳ್ ಶ್ರೀರಾಮನ ನುತಿಸದವನ್ಯಾಕೆ 5
--------------
ರಾಮದಾಸರು
ವಾಸವ ಪ್ರಿಯಾ ಪ ವ್ರಜ ನಾನಾ ಬಗೆಯಲಿ || ಭಜನೆ ಮಾಡುತ ಬಲು | ನಿಜಮನದಲಿ ನೋಡೇ 1 ಛತ್ರ ಚಾಮರ ಜನರು | ಸ್ತೋತ್ರ ಸಂಗೀತನಾದ ಧಾತ್ರಿ ತುಂಬಿರಲು ಸ | ರ್ವತ್ರ ವ್ಯಾಪಕ ದೇವಾ 2 ಗಂಧರ್ವಗಣನಲು | ವಿಂದ ಪಡಲು ಭೇರಿ || ದುಂದುಭಿವಾದ್ಯ ಆ | ನಂದ ನುಡಿವುತಿರೆ 3 ಇಕ್ಕಿದ ವರಕಲ್ಪ | ದಿಕ್ಕು ಬೆಳಗುತಿರೆ | ಬೊಕ್ಕ ದೈವವೆ ಶುದ್ಧ | ಭಕ್ತರ ಒಡಗೂಡಿ 4 ಇಷ್ಟ ಮೂರುತಿ ಮನೋ | ಭೀಷ್ಟ ಪಾಲಿಪ ವಿಜಯ || ವಿಠ್ಠಲ ವೆಂಕಟೇಶ | ಬೆಟ್ಟದೊಡೆಯೆಂದು 5
--------------
ವಿಜಯದಾಸ
ವಾಸವನುತಾಬ್ಜ ಪಾದಾ | ಪ್ರಮ | ಥೇಶ ಭಕ್ತ ವರದಾ ಪ ಮೀಸಲಹುದು ಶೇಷ ಪದಾ | ಈಶ ಎನ್ನ ಪೊರೆಯೊ ಸದಾ ಅ.ಪ. ದುರಿತ ಸಾರಥಿ ಅಜ | ಮೇರುವೆ ಧ್ವಜ | ಧಾರುಣಿ ಧರ ಥೋರಾ ಧನು |ಶ್ರೀ ಹರಿ ಶರ | ಮೂರೂರುಗಳ್ | ದಾರಿತ ಹರ 1 ವ್ಯೋಮಕೇಶ | ಪ್ರಮಥ ಪೋಷ | ಭೀಮ ನಾ5 | ಮಶಣವಾಸಸ್ವಾಮಿ ತೀರ್ಥ ವಾಸ ದಾಸ | ಕಾಮಿತಾರ್ಥ ಸಲಿಸೊ ಈಶ ||ಭೂಮಿಜೆ ಪತಿನಾಮಮೃತ ಪ್ರೇಮದಸವಿ ನೆ5ುವು ತವಭೌಮನ ಹರ | ಭುಮ5 ಹರಿ | ನಾಮ ಸ್ಕøತಿ ನೇಮವಕೊಡು || ಮೋದ | ಕರುಣಿಸೂವುದು ಭಕ್ತವರದ |ನರಮೃಗ ಹರಿ | ಚರಣಾಬ್ಜವ | ನಿರಂತರ | ಸ್ಮರಿಸುತ್ತಿಹಗೌರೀವರ | ಚರಣಂಗಳಿ | ಗೆರಗುವೆನು | ಪಾಲಿಸು ಹರ 3
--------------
ಗುರುಗೋವಿಂದವಿಠಲರು
ವಾಸುದೇವ ಪ ವಾಸುದೇವ ಅ.ಪ ವಾಸುದೇವ 1 ವಾಸುದೇವ 2 ಮುರಹರ ಶರಣು ಹೊಕ್ಕೆನೊ ಕಾಯೊ ಶ್ರೀಕೃಷ್ಣ ವಾಸುದೇವಶರಣೆಂಬ ಜನರಿಗೆ ಕರುಣಿಪ ಶ್ರೀಕೃಷ್ಣ ವಾಸುದೇವ3 ವಾಸುದೇವ 4 ಶೇಷಶಯನ ನೀ ಪೋಷಿಸೊ ಶ್ರೀಕೃಷ್ಣ ವಾಸುದೇವಭಾಸುರಾಂಗನೆ ಭಕ್ತವತ್ಸಲ ಶ್ರೀಕೃಷ್ಣ ವಾಸುದೇವ5
--------------
ವ್ಯಾಸರಾಯರು
ವಾಸುದೇವ ನಿನ್ನ ದಾಸನಾಗಲು ಬಲು ಆಸೆಯ ಪೊಂದಿ ಸಂತೋಷದಲಿರುವೆನೊ ಪ ಈ ಸಂಸಾರದ ಮೋಸಕೆ ಸಿಲುಕೆ ನಾ ಶ್ರೀಶನ ಚರಣವ ಲೇಶ ಭಜಿಸಲಿಲ್ಲ ಪಾಶಕೆ ಸಿಲುಕದ ಸುಜನರುಗಳ ಸಹ ವಾಸವಿತ್ತು ಅವಕಾಶವ ನೀಡೊ ಅ.ಪ ಸಾರುತಲಿರುವ ಸಮೀರ ಸಮಯಗಳ ಸಾರವನರಿಯದೆ ದೂರಿದೆ ನಿನ್ನನು ಯಾರ ಕರುಣವೊ ತೋರಿತು ಮನದಲಿ ಘೋರತರದ ಅಪರಾಧಗಳೆಲ್ಲವು ಭೂರಿ ದಯದಿ ನಿನ್ನ ಚಾರು ಚರಣದಲಿ ಸೇರಿಸೊ ಮನವ 1 ಪರಿಪರಿ ವಿಧದ ಕುಶಾಸ್ತ್ರಗಳೋದಲು ಬರಿಗಾಳಿಯ ಗುದ್ದಿ ಮುರಿದವು ಕರಗಳು ಸಿರಿರಮಣನೆ ನಿನ್ನ ಪರಿಚಾರಕನೆಂಬೊ ಅರಿವಿನಿಂದಲೆ ಪರತರ ಸುಖವೆಂದು ಪರಿಪರಿಯರುಹುವ ಗುರು ಮಧ್ವರಾಯರ ವರಶಾಸ್ತ್ರಗಳಿಗೆ ಸರಿಯುಂಟೆ ಜಗದೆ 2 ಅನ್ಯಸೇವೆಗಳಲ್ಲಿ ಅನ್ಯಾಯದಿ ಕಾಲ ಮುನ್ನ ಕಳೆದುದನು ಮನ್ನಿಸೆಲೋ ಹರಿ ನಿನ್ನ ಸೇವೆಯ ಸುಖವನ್ನು ಅರಿತೆನೊ ಎನ್ನ ಮನಕೆ ಬಲವನ್ನು ಕರುಣಿಸುತ ಇನ್ನಾದರು ಚ್ಯುತಿಯನ್ನು ಪೊಂದಿಸದೆ ನಿನ್ನ ದಾಸನಲಿ ಪ್ರಸನ್ನನಾಗೆಲೊ 3
--------------
ವಿದ್ಯಾಪ್ರಸನ್ನತೀರ್ಥರು
ವಾಸುದೇವ ನಿನ್ನ ಮರ್ಮಕರ್ಮಂಗಳದೇಶದೇಶದಲ್ಲಿ ಪ್ರಕಟಿಸಲೊ ಪ ಬೇಸರದೆ ಎನ್ನ ಹೃದಯಕಮಲದಲ್ಲಿ ವಾಸವಾಗಿ ಸುಮ್ಮನಿದ್ದೀಯೊ ಅ.ಪ. ತರಳತನದಲಿದ್ದು ದುರುಳನಾಗಿ ಬಂದುಒರಳಿಗೆ ಕಟ್ಟಿಸಿಕೊಂಡುದನುತುರುವ ಕಾಯಲಿ ಹೋಗಿ ಕಲ್ಲಿಯೋಗರವನುಗೊಲ್ಲರ ಕೂಡೆ ನೀ ಉಂಡುದನುನೆರೆಮನೆ ಹೊರಮನೆಗಳ ಪೊಕ್ಕು ಬೆಣ್ಣೆಯಅರಿಯದಂತೆ ಕದ್ದು ಮೆದ್ದುದನುಕೇಳಿಸಿದೆಯಾದರೆ ಒದರುವೆ ಎಲೊ ನರ -ಹರಿ ಎನ್ನ ಬಾಯಿಗೆ ಬಂದುದನು 1 ಕಟ್ಟಿ ಕರೆವ ಏಳುದಿನದ ಮಳೆಗೆ ಪೋಗಿಬೆಟ್ಟವ ಪೊತ್ತದ್ದು ಹೇಳಲೊಅಟ್ಟಿಸಿಕೊಳ್ಳುತ ಯಾಗಶಾಲೆಗೆ ಪೋಗಿಹೊಟ್ಟೆಯ ಹೊರೆದದ್ದು ಹೇಳಲೊದುಷ್ಟ ಹಾವಿನ ಹೆಡೆಯನು ತುಳಿದಾಡಿದದುಷ್ಟತನವನು ಹೇಳಲೊನೆಟ್ಟುನೆ ಅಂಬರಕೆತ್ತಿದನ ಹೊಯ್ದುಹಿಟ್ಟುಕಟ್ಟಿಟ್ಟುದ ಹೇಳಲೊ 2 ಪಿಡಿಯವಲಿಗೆ ಮೆಚ್ಚಿ ಸಂಪದವನು ಕೊಟ್ಟಬೆಡಗತನವನಿಲ್ಲಿ ಹೇಳಲೊಹಿಡಿಯ ಬಂದ ಕಾಲಯವನಿಗಂಜಿ ಕಲ್ಲಪಡೆಯ ಹೊದ್ದುದ ಹೇಳಲೊಮಡಿದ ಮಗನ ಗುರುವಿಗೆ ಕೊಡಬೇಕೆಂಬಸಡಗರತನವಿಲ್ಲಿ ಹೇಳೆಲೊಮಡದಿ ಮಾತಿಗೆ ಪೋಗಿ ನೀ ಪಾರಿಜಾತವತಡೆಯದೆ ತಂದದ್ದು ಹೇಳಲೊ 3 ಮೌನಗೌರಿಯ ನೋಡ ಬಂದ ಹೆಂಗಳನ್ನೆಲ್ಲಮಾನವ ಕೊಂಡದ್ದು ಹೇಳಲೊತಾನಾಗಿ ಮೊಲೆಯನೂಡಿಸ ಬಂದವಳನ್ನುಪ್ರಾಣವ ಕೊಂಡದ್ದು ಹೇಳಲೊಕಾನನದೊಳು ತುರುವಿಂಡುಗಳನು ಕಾಯ್ದಹೀನತನವನಿಲ್ಲಿ ಹೇಳಲೊಮಾನಿನಿಯರ ಮನೆಗಳ ಪೊಕ್ಕು ಬೆಣ್ಣೆಯಹಾನಿಯ ಮಾಡಿದ್ದು ಹೇಳಲೊ 4 ಧರಣಿಮಗನ ಕೊಂದು ತರುಣಿಯರನುದುರುಳತನವನಿಲ್ಲಿ ಹೇಳಲೊಜರೆಯ ಮಗನಿಗಂಜಿ ಪುರವ ಬಿಟ್ಟು ಹೋಗಿಶರಧಿಯ ಪೊಕ್ಕದ್ದು ಹೇಳಲೊಧರೆಯೊಳಧಿಕ ಶ್ರೀರಂಗಪಟ್ಟಣದಲ್ಲಿಸ್ಥಿರವಾಗಿ ನಿಂತದ್ದು ಹೇಳಲೊಶರಣಾಗತರ ಕಾವ ರಂಗವಿಠಲನ್ನಪರಮ ದಯಾಳೆಂದು ಹೇಳಲೊ 5
--------------
ಶ್ರೀಪಾದರಾಜರು
ವಾಸುದೇವನ ಪುರಕೆ ತೆರಳಿದಾರು |ಶ್ರೀಶನಾ ಪ್ರಿಯ ಗುರು ಪ್ರಾಣೇಶ ದಾಸಾರ್ಯ ಪ ಮೂರ್ತಿ ಧ್ಯಾನಮಾಡೀ ತತ್ವ |ಮಾನಿಗಳೊಳೊಂಮ್ಮಿಂದೊಮ್ಮೆ ಆನಂದದಿಂದಲೀ 1 ಹರಿಯೆ ಸರ್ವೋತ್ತಮಾ ತದ್ರಾಣಿ ಶಿರಿಬೊಮ್ಮ |ಮರುತ ದೇವರೆ ಗುರುವು, ತಾರತಮ್ಯ ||ವರಪಂಚಭೇದ ಜ್ಞಾನವನರಿತು ಮನದಿ ಹರಿ |ಪುರದೊಳಿಹ ಪರಮ ಭಕ್ತರ ಕಾಣಬೇಕೆನುತ 2 ಮೋಕ್ಷರೌದ್ರೀ ಅಬ್ಧಮಾಘದರ್ಶಾ ಪೂರ್ವಭಾದ್ಧರಾ |ನಕ್ಷತ್ರ ಸೋಮವಾರದಿದ್ದವ ದ್ವಿತಿಯ ಯಾಮದೀ |ಲಕ್ಷಿ ಇಟ್ಟೂ ಲಯದ ಚಿಂತನೆಯ ಗೈಯುತಲಿ |ಪಕ್ಷಿವಾಹನ ಶ್ರೀಶಪ್ರಾಣೇಶ ವಿಠಲೆನುತ 3
--------------
ಶ್ರೀಶಪ್ರಾಣೇಶವಿಠಲರು
ವಾಹನ ನರಜನ ಪ್ರೇಮಾ | ಹರಿ ಸಾರ್ವಭೌಮ ಪ ಯೋಗಿ ಮಧ್ವಮತದಾಗಮ ವಂದಿತಭಾಗವತಾಗ್ರಣಿ ಶ್ರೀಗುರುಗಳ ಕೈ ಅ.ಪ. ಪ್ರಳಯ ಕಾಲದಲಿ ಹರಿ ನೀನಂದು | ಶ್ರೀ ಭೂ ದುರ್ಗಾತ್ಮಕಜಲದಾಲದೆಲೆಯಲಿ ತೊಟ್ಟಿಲಲಂದೂ | ಕತ್ತಲೆಯೊಳಗಂದೂಎಲ್ಲಾ ಜೀವರ ಪೊಕ್ಕಳ ಎಡಬಲ ತಂದೂ | ದೀನ ಜನರ ಬಂಧೂ ||ಥಳಥಳ ಪೊಳೆಯುವ ಮಣಿಯ ತೊಟ್ಟಿಲೊಳುಲಲನೆ ಸಹಿತ ಎಡಬಲ ವೈಭೋಗದಿ 1 ಗೋಕುಲದೊಳೊ ಗೋಪಿಯರಿಂದ ತೂಗಿಸಿಕೊಂಡುಸಾಕಾಗಲಿಲ್ಲೇ ಎಲೊ ಮುಕುಂದ | ಕೌಸಲ್ಯಾದೇವಿಯುಬೇಕೆಂದು ಮುದ್ದಿಸಿ ಮೋಹದಲಿಂದಾ | ಆದ ಕಾರಣದಿಂದಾ ||ಏಕ ಮನಸಿನಲಿ ಈ ಪರಮುನಿಪಗೆಬೇಕೆಂದೊಲಿದು ಪರಾಕನು ಕೊಳ್ಳುತ 2 ಮೋದ | ಸತ್ಯಬೋಧಾರ್ಯರ ||ಮತಿಗೆ ನೀ ಮರುಳಾದೆ ಮಧುಸೂದನನೆ ಪತಿತ ಪಾವನನೆ ವ್ಯಾಸ ವಿಠಲ ನೀನೇ 3
--------------
ವ್ಯಾಸವಿಠ್ಠಲರು