ಒಟ್ಟು 446 ಕಡೆಗಳಲ್ಲಿ , 74 ದಾಸರು , 416 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂಮಕರಕುಂಡಲಮಂಡಿತಾದವಗೆಪ.ಮಂಗಳಂ ಮಾರಪಿತ ಮಾರಮಣಗೆಮಂಗಳಂ ಮಿತ್ರಕೋಟಿ ಮಹಾಕಾಶಗೆಮಂಗಳಂ ಪನ್ನಗಾಚಲನಿಲಯಗೆ ಜಯಮಂಗಳಂ ಮತ್ತೆ ಶುಭಮಂಗಳಂ ಅ.ಪ.ಕಣ್ಣನೋಟದಿ ಚೆಲುವ ಕಮಠರೂಪಾದವಗೆಹೆಣ್ಣ ನೆಗಪಿದ ಹಿರಣ್ಯಕ ಮರ್ದಗೆಚಿನ್ನವಟು ಭಾಗ್ರ್ವಾಂಧಚರಹರ ಗೋವ್ರಜಚರಗೆಕನ್ನೆಯರ ವ್ರತಗೇಡಿ ಕಲಿಮಥÀನಗೆ 1ನೀರಚರನಗಧರಕನಕನೇತ್ರನೊರಸಿದಗೆಕ್ರೂರವದನಾಂಕಿತ ಕುಬುಜ ವಿಪ್ರಗೆವೀರಕುನೃಪಾರಿ ರಘುವಿಜಯಸಖನಾದವಗೆಚಾರುಮೋಹನಚಟುಲಹಯರೂಢಗೆ2ಆಗಮೋದ್ಧರ ಕಚ್ಛಪಅವನಿಧರಹರಿಮೊಗಗೆತ್ಯಾಗ ಬೇಡಿದ ತಾಯಿ ತಲೆಗಡಿದಗೆಯಾಗಪಾಲಹಿಮರ್ದ ಯೋಗೇಶಜೋದ್ಧರಗೆನಾಗಾದ್ರಿ ಪ್ರಸನ್ವೆಂಕಟನಾಥಗೆ 3
--------------
ಪ್ರಸನ್ನವೆಂಕಟದಾಸರು
ಮಂಜುಳ ವೇಣುಗಾನವ ಮಾಡಿ ಮೋಹಿಪ ಜಗವಕಂಜಜನಯ್ಯ ಮುರಾರಿ ಕಾಮಿನಿಯರಿಗುಪಕಾರಿ ಪ.ಯಮುನೆಯ ಪುಲಿನದಿ ಯದುಕುಲ ಚಂದ್ರ ಹೊಂದೆರಮಣೀರ್ವಕ್ಷ ಮಧ್ಯದಿ ರಾಜಿಸುತ ಕುಲಾಂಬುಧಿ 1ಪೂರ್ಣ ಪೀಯೂಷಕರನು ಪೂರ್ವಾಚಲಕೆ ಸಾರ್ದನುಪೂರ್ಣಾನಂದ ಮುಕುಂದ ಪವನ ಸಂಚಾರದಿಂದ 2ಕುಂದನೀಲೋತ್ಪಲ ಜಾಜಿಕಮಲಮಲ್ಲಿಗೆ ಜುಜಿ( ?)ಮಂದಾರಪುನ್ನಾಗಭುಜಮೂಲದಿ ಗೋಪಾಲರಾಜ3ಕುಸುಮಾಕರಕುಂಜದಿ ಕುಶಲಕ್ರೀಡಿತನಾದಿಸುಸಪ್ತ ಸ್ವರದಿಂದ ಸುಖದಾನಂದ ಮುಕುಂದ 4ಕತ್ತಲೆವಿರಿ ಸಂಪಿಗೆಕಮಲಮೊಲ್ಲೆ ಮಲ್ಲಿಗೆಸುತ್ತಿದ ಎಳೆಪಲ್ಲವ ಮಾರನಂತಹ ಚೆಲುವ 5ಮುತ್ತಿನ ಚೊಲ್ಲೆಯಲ್ಲಿಯ ಮುಂಗುರುಳಲ್ಲಿ ವಲಯಕಸ್ತೂರಿ ತಿಲಕ ಒಪ್ಪೆ ಕವಿದಡರ್ವದ್ವೀರೇಫೆ 6ಕಡೆಗಣ್ಣಿನ ನೋಟದಿ ಕುಡಿಹುಬ್ಬಿನ ಮಾಟದಿಮಡದೇರ್ಗೆ ಮಾರಶರ ಮೂಡಿಸುತತಿ ಸುಂದರ 7ಮುಗುಳುನಗೆಮೊಗದ ಮಣಿಕುಂಡಲ ಕರ್ಣದಯುಗ ಕರ್ಣಾಕರ್ಣಿಕರಾಯತ ನಟ ನರಾಕಾರ 8ವನಮಾಲೆವೈಜಯಂತಿಶ್ರೀವತ್ಸಕೌಸ್ತುಭಕಾಂತಿಮಿನುಗುವಾಮೋದ ಗಂಧಮುಡಿ ತೋರೋ ಶ್ರೀ ಗೋವಿಂದ 9ಹಾರಕೇಯೂರ ಕಂಕಣ ಹೊಳೆವ ಮಧ್ಯಒಡ್ಯಾಣಚಾರುಪೀತಾಂಬರೋತ್ತರಿ ಚೀರದಿಂದೆಸೆವಹರಿ10ವಾಮಬಾಹುವಿಲೊಪ್ಪುವ ವೇಣುವಿನ ಘನರವಬ್ರಹ್ಮ ಗಂಧರ್ವರ ಗಾನ ಬಗೆಗೆ ಮೀರುವ ದೇವ 11ಸುಲಲಿತಂದುಗೆ ಗೆಜ್ಜೆ ಸಂದ್ರೇಖೆ ಶೋಭಿತಹೆಜ್ಜೆಕೆಲದ ಗೋಪಾಂಗನೇರ ಕಾಮಧೇನು ಸಾರೋತ್ತರ 12ಧರೆಗೆರಗಿದ ಜಡೆ ಸಲೆ ಕಾಳಿಂದಿ ಮೇಲಾಡೆ ಸಕಳ ಪಕ್ಷಿಮೃಗವು ಸಂಚರಿಸದೆ ನಿಂದವು 13ಜಡಂಗಳು ಚೇತರಿಸೆ ಜನದ ಚೇಷ್ಟೆ ಥಂಬಿಸೆಕಡುರಸತುಂಬಿತುಳುಕಲಜಭವಾಂಡೊಲಿಯಲು14ವೃಕ್ಷಗಳ ಶೃಂಗಾರಿಯ ವತ್ಸಗಳಾವದೊರೆಯಈಕ್ಷಿಸಿ ತೃಣ ಮೆಲ್ಲದೆಯಿದ್ದವು ಗೀತಕೇಳುತ 15ನೀರಸ ತರುಫಲಾಗೆ ನಿತ್ಯಪ್ರಜÕತೆಗೆನೀರದಗೆ ಸ್ವರಗೈಯೆ ನಿಗಮನಯ್ಯ ಮರೆಯ 16ಮಂಗಳಮೇಘಘರ್ಜನೆ ಮಾಡಿದವು ಮೆಲ್ಲಮೆಲ್ಲನೆರಂಗನ ಮೇಲಮೃತ ಧಾರೆಯವಿತ್ತವರ್ಥಿಯಿಂದ 17ನಂದವ್ರಜದ ವನವು ನಂದನ ಚೈತ್ಯಾಧಿಕವುನಂದಸೂನುವಿನ ಗೀತ ನಾದ ವೇದಾನಂತಾನಂತ 18ಕಮಲಜ ಭವೇಂದ್ರಾದಿಕರು ಭ್ರಾಂತಿಯನೈದಿದರುಅಮರಜನ ನಾರೇರು ಅಂಗಜವಶವಾದರು 19ಗೋಷ್ಠದ ಗೊಲ್ಲ ಗೋಪೇರ ಗೋವರ್ಧನ ಗೋಪಾಲರದೃಷ್ಟಕೆ ಸುರಮುನಿ ಗಂಧರ್ವರು ಪೊಗಳಿದರಾಗ 20ಸುರಭ್ಯಾಗಾರದಿ ಕೃಷ್ಣ ಸಂಚರಿಸಲು ಸರ್ವೇಷ್ಠಪೂರಣವಪ್ಪಿತುಧರೆಪರಮಮಂಗಳ ಸಾರಿ21ಸುರರುಸುಖ ಸಂಭೃತ ಶರಧಿಯೊಳೋಲಾಡುತಸಿರಿಮಂಗಳವ ಹೇಳಿ ಸುರಿದರರಳ ಮಳೆ22ಪ್ರಸನ್ನತರ ಚರಿತ ಪ್ರಸನ್ನಾವ್ಯಾಕೃತಗಾತ್ರಪ್ರಸನ್ನಪೂರ್ಣ ಪ್ರಜೆÕೀಷ್ಠ ಪ್ರಸನ್ನವೆಂಕಟಕೃಷ್ಣ 23
--------------
ಪ್ರಸನ್ನವೆಂಕಟದಾಸರು
ಮಂದಗಮನೆ, ಇವನಾರೆ ಪೇಳಮ್ಮ |ಮಂದರಧರಗೋವಿಂದ ಕಾಣಮ್ಮಪಕೆಂದಳಿದನಖಶಶಿಬಿಂಬ ಪಾದಪದ್ಮ |ಅಂದುಗೆಯಿಟ್ಟವನಾರು ಪೇಳಮ್ಮ ||ಅಂದು ಕಾಳಿಂಗನ ಪೆಡೆಯ ತುಳಿದ ದಿಟ್ಟ |ನಂದನ ಕಂದ ಮುಕುಂದ ಕಾಣಮ್ಮ 1ಉಡುಗೆ ಪೀತಾಂಬರ ನಡುವೀಣೆ ಉಡುದಾರ |ಕಡಗ-ಕಂಕಣವಿಟ್ಟವನಾರಮ್ಮ ||ಮಡದಿ ಕೇಳ್ ಸಕಲಲೋಕಂಗಳ ಕುಕ್ಷಿಯೊಳ್ |ಒಡನೆ ತೋರಿದ ಜಗದೊಡೆಯ ಕಾಣಮ್ಮ 2ನೀರದನೀಲದಂತೆಸೆವ ವಕ್ಷದಿ ಕೇ-|ಯೂರ-ಹಾರಗಳನಿಟ್ಟವನಾರಮ್ಮ ||ನೀರೆ ಕೇಳು ನಿರ್ಜರರಾದವರಿಗೆ |ಪ್ರೇರಿಸಿ ಫಲವಿತ್ತು ದಾರಿ ಕಾಣಮ್ಮ 3ಶಂಖ ಚಕ್ರವ, ಗದೆ-ಪದ್ಮ ಕೈಯೊಳಗಿಟ್ಟ-|ಲಂಕೃತನಹನೀತನಾರಮ್ಮ ||ಪಂಕಜಮುಖಿಶ್ರೀಭೂದೇವಿಯರರಸನು |ಶಂಕೆಇಲ್ಲದೆ ಗೋಪೀತನಯ ಕಾಣಮ್ಮ4ಕಂಬುಕಂಧರಕರ್ಣಾಲಂಬಿತಕುಂಡಲ|ಅಂಬುಜಮುಖದವನಾರೆ ಪೇಳಮ್ಮ ||ರಂಭೆ ಕೇಳೀತ ಪುರಂದರವಿಠಲ |ನಂಬಿದ ಭಕ್ತಕುಟುಂಬಿ ಕೇಳಮ್ಮ 5
--------------
ಪುರಂದರದಾಸರು
ಮನುಜ ತಪ್ಪೆ ಮಂಡೆಯ ಬೋಳುಶುನಕತಪ್ಪೆ ಕುಂಡೆಯ ಬೋಳುತೃಣದಾಸೆಗೆ ಕುರಿಯ ಸರ್ವಾಂಗ ಬೋಳ ಕಂಡೆನಯ್ಯ 1ತನುಬೋಳಾದ ಬೋಳೆಲ್ಲ ತಮ್ಮ ಗೋಳು ಕಾಣಿರೊಮನದೊಳು ದುರಾಶೆಂಬ ಹೀನಕ್ಲೇಶಗಳ್ಹೆಚ್ಚುತಿರಲು 2ಅನಾಥಬಂಧು ಹಯವದನ ನಿನ್ನಧ್ಯಾನ ಚಿಮ್ಮಟದೊ [ಳೆನ್ನ] ಕೂದಲಕಿತ್ತುಮುಕ್ತಿಬೋಳನ ಮಾಡೊ 3
--------------
ವಾದಿರಾಜ
ಮರುಳಾಟವ್ಯಾಕೆ ಮನುಜಗೆ ಮರುಳಾಟವ್ಯಾಕೆಹರಿಭಕ್ತನಲ್ಲದವಗೆ ಹಲವಂಗವ್ಯಾಕೆ ಪ.ಮೃತ್ತಿಕಾಶೌಚವಿಲ್ಲದೆ ಮತ್ತೆ ಸ್ನಾನ ಜಪವ್ಯಾಕೆಹತ್ತು ಕಟ್ಟದವಗೆ ಅಗ್ನಿಹೋತ್ರವ್ಯಾತಕೆತೊತ್ತುಬಡಕಗೆ ಬಹು ತತ್ವವಿಚಾರವ್ಯಾಕೆಕರ್ತಕೃಷ್ಣನ್ನೊಪ್ಪದ ವಿದ್ವತ್ತವ್ಯಾತಕೆ1ಹಸಿವೆತೃಷೆತಾಳದವಗೆಹುಸಿವೈರಾಗ್ಯವ್ಯಾತಕೆವಿಷಮ ಚಿತ್ತಗೆ ಪರರ ಕುಶಲ ಬಯಕ್ಯಾಕೆದಶ ಜಪ ಮಾಡಲಾರ ಮುಸುಕಿನ ಡಂಬವ್ಯಾಕೆಕುಶಶಾಯಿಗರ್ಪಿಸದ ಅಶನವ್ಯಾತಕೆ 2ಮೂಲಮಂತ್ರವರಿಯದ ಮೇಲೆ ದೇವಾರ್ಚನೆ ಯಾಕೆಸಾಲಿಗ್ರಾಮವಿಲ್ಲದ ತೀರ್ಥವ್ಯಾತಕೆಸೂಳೆಗಾರಗೆ ತುಳಸಿಮಾಲೆ ಶೃಂಗಾರವ್ಯಾಕೆಮೇಲೆ ಮೇಲೆ ಹರಿಯೆನ್ನದ ನಾಲಿಗ್ಯಾತಕೆ 3ಊಧ್ರ್ವಪುಂಡ್ರಿಲ್ಲದಾಸ್ಯ ತಿದ್ದಿನೋಡಬೇಕ್ಯಾಕೆಶುದ್ಧ ಸಾತ್ವಿಕವಲ್ಲದ ಬುದ್ಧಿ ಯಾತಕೆಕದ್ದು ಹೊಟ್ಟೆ ಹೊರೆವವಗೆ ಸಿದ್ಧ ಶೀಲವೃತ್ತಿಯಾತಕೆಮಧ್ವ ಮತವÀ ಬಿಟ್ಟಿತರ ಪದ್ಧತ್ಯಾತಕೆ 4ಕಂಡ ನಾರೇರಿಚ್ಛೈಸುವ ಲೆಂಡಗೆ ಪುರಾಣವ್ಯಾಕೆಭಂಡು ಮಾತಿನ ಕವಿತ್ವ ಪಾಂಡಿತ್ಯಾತಕೆಕುಂಡಲಿಪ್ರಸನ್ವೆಂಕಟ ಮಂಡಲೇಶನ ಶ್ರೀಪಾದಪುಂಡರೀಕಬಿಟ್ಟವನ ವಿತಂಡವ್ಯಾತಕೆ5
--------------
ಪ್ರಸನ್ನವೆಂಕಟದಾಸರು
ಮರೆಯದಿರೆಲೆ ಮನವಿಲ್ಲಿ - ಯಮಪುರಿಗೆ ಒಯ್ದು ಬಾಧಿಸುತಿಹರಲ್ಲಿ ಪ.ಪರನಾರಿಯರ ಸಂಗವಿಲ್ಲಿ - ಉಕ್ಕುಎರೆದ ಸತಿಯರ ತಕ್ಕೈಸುವರಿಲ್ಲಿಗುರು - ಹಿರಿಯರ ನಿಂದೆಯಿಲ್ಲಿ - ಬಾಯೊಳೆರದು ಸೀಸವ ಕಾಸಿ ಹೊಯಿಸುವರಿಲ್ಲಿ 1ಉಂಡ ಮನೆಯ ಕೊಂಬುದಿಲ್ಲಿ - ಎದೆಗುಂಡಿಗೆಯನು ಸೀಳಿ ಕೊಲುತಿಹರಲ್ಲಿಗಂಡನ ದಣಿಸುವುದಿಲ್ಲಿ - ಯಮಕುಂಡದೊಳಗೆ ಹಾಕಿ ಕುದಿಸುವರಲ್ಲಿ 2ಚಾಡಿಯ ಹೇಳುಸುದಿಲ್ಲಿ - ನುಡಿದಾಡುವ ನಾಲಿಗೆ ಕೇಳುವರಲ್ಲಿಬೇಡಿದರಿಗೆ ಧರ್ಮವಿಲ್ಲಿ - ಇದನೀಡದಿರಲು ಒದ್ದು ನೂಕುವರಲ್ಲಿ 3ಪುಸಿ - ಠಕ್ಕು - ಠವುಳಿಗಳಲ್ಲಿ -ಕಟ್ಟಿಎಸೆದು ಕೊಲ್ಲುವರೊ ನಿನ್ನವರು ಕೇಳಿಲ್ಲಿಅಶನಪ್ರಭದಿಗಳಲ್ಲಿ - ಮಾಡೆಬಿಸಿಯ ಕೆಂಡವ ತಂದು ತಿನಿಸುವರಲ್ಲಿ 4ಸಿರಿಮದದೊಳಗಿಹುದಿಲ್ಲಿ - ಸೊಕ್ಕಮುರಿದು ಹಲ್ಲುಗಳ ಕಳಚುವರಲ್ಲಿಪುರಂದರವಿಠಲನ ಇಲ್ಲಿ - ನೆನೆಯಸ್ಥಿರವಾದ ಮುಕುತಿ ಪಡಕೊಂಬುವರಲ್ಲಿ 5
--------------
ಪುರಂದರದಾಸರು
ಮಾಮಝ ಭಾಪುರೆ ಭಳಿರೆ ಹನುಮಂತರಾಮಪದ ಸೇವಿಪ ವೀರ ಹನುಮಂತ ಪಹುಟ್ಟುತಲೆ ಹೊನ್ನ ಕಚ್ಚುಟವ ಕುಂಡಲವೆರಸಿನಿಷ್ಠೆಯಲಿ ರಘುಪತಿಯ ಪಾದವನೆ ಕಂಡು ||ದಿಟ್ಟಿ ಹರಿದಾಡಿ ಮನಮುಟ್ಟಿ ಪೂಜಿಸಲಜನಪಟ್ಟಕನುವಾದ ಸಿರಿವಂತ ಹನುಮಂತ 1ಅಂಬರಕೆ ಪುಟನೆಗೆದು ಅಂಬುಧಿಯನೆರೆದಾಟಿಕುಂಭಿನಿಯ ಮಗಳಿಗುಂಗುರವನಿತ್ತು |ಬೆಂಬಿಡದೆ ಲಂಕೆಯನು ಸಂಭ್ರಮದಿ ಸಖಗಿತ್ತೆಗಂಭೀರ ವೀರಾಧಿವೀರ ಹನುಮಂತ 2ಅತಿದುರಳ ರಕ್ಕಸನು ರಥದ ಮೇಲಿರಲು ರಘು-ಪತಿಯು ಪದಚರಿಯಾಗಿ ನಿಂತಿರಲು ನೋಡಿ ||ಪೃಥವಿ- ಗಗನಕೆ ಬೆಳೆದು ರಥವಾದೆ ಒಡೆಯನಿಗೆಅತಿ ಭಯಂಕರ ಸತ್ತ್ವವಂತ ಹನುಮಂತ 3ಒಡೆಯ ಉಣಕರೆಯಲಂದಡಿಗಡಿಗೆ ಕೈಮುಗಿದುದೃಢಭಕ್ತಿಯಿಂದ ಮೌನದಿ ಕುಳಿತು ||ಎಡಿಯಕೊಂಡೆದ್ದೋಡಿ ಗಗನದಿ ಸುರರಿಗೆಕೊಡುತ ಸವಿದುಂಡ ಗುಣವಂತ ಹನುಮಂತ 4ಪ್ರಥಮದಲಿ ಹನುಮಂತ ದ್ವಿತೀಯದಲಿ ಕಲಿಭೀಮತೃತೀಯದಲಿಗುರುಮಧ್ವಮುನಿಯೆನಿಸೀ ||ಪ್ರತಿಯಿಲ್ಲದಲೆ ಮೆರೆದೆಪುರಂದರವಿಠಲನಸುತ್ತ ನಿನಗಾರು ಸರಿ -ವಿಜಯಹನುಮಂತ5
--------------
ಪುರಂದರದಾಸರು
ಮುರಹರನಗಧರನೀನೆಗತಿಧರಣಿ ಲಕ್ಷ್ಮೀಕಾಂತ ನೀನೆಗತಿಪಶಕಟ ಮರ್ದನ ಶರಣಾಗತ ವತ್ಸಲಮಕರಕುಂಡಲಧರ ನೀನೆಗತಿ||ಅಕಳಂಕ ಚರಿತನೆ ಆದಿನಾರಾಯಣರುಕುಮಿಣಿಪತಿ ಕೃಷ್ಣ ನೀನೆಗತಿ1ಮನೆಮನೆಗಳ ಪೊಕ್ಕು ಕೆನೆ ಹಾಲು ಬೆಣ್ಣೆಯದಿನ ದಿನ ಮೆದ್ದಹರಿನೀನೆಗತಿ||ಅನುದಿನಭಕುತರ ಬಿಡದೆ ಕಾಯುವಘನಮಹಿಮನೆ ಕೃಷ್ಣ ನೀನೆಗತಿ2ಪನ್ನಗಶಯನ ಸುಪರ್ಣಗಮನನೇಪೂರ್ಣ ಚರಿತಹರಿನೀನೆಗತಿ||ಹೊನ್ನ ಹೊಳೆಯಲಿಹಪುರಂದರವಿಠಲಚೆನ್ನ ಲಕ್ಷ್ಮೀಕಾಂತ ನೀನೆಗತಿ3
--------------
ಪುರಂದರದಾಸರು
ಯೋಗಿಬಂದ ಕಣೇ ಚಿದಾನಂದಯೋಗಿಬಂದ ಕಣೇಪೋಗಿ ಮಾಗಿಯು ವಸಂತ ಬಂದಂತೆತಾನಾಗಿ ಭಕುತ ಜನ ಹೃದಯದಾಗರಕೆಪಶಾಂತಕುಂಡಲಗಳನು ತೂಗುತಸ್ವಾಂತನಿರ್ಮಳ ಕೌಪವಸಂತಸದಲಿ ಬಗಿದಳವಡಿಸಿಯ ವಿ-ಶ್ರಾಂತ ಸುಭಸಿತವ ಪೂಸಿ ರಂಜಿಸುತಿಪ್ಪ1ನಿಷ್ಕಲ ಹೃದಯದಲಿ ಒಲೆಯುತಿಪ್ಪಪುಷ್ಕಲ ಜಪಮಾಲೆಯ ಮುಸುಕಿ ನಿಂದಲಿಮಹಾಪ್ರಳಯಂಗಳೆಣಿಸುತ್ತಪುಷ್ಕರಶತಕೋಟಿ ತೇಜನಾಚಿಸುತಿಪ್ಪಇಹಪರ ಪಾದುಕೆ ಮಾಡಿ ಮೆಟ್ಟುತಅಹಿಧರ ಬೆಳಗುತಲಿ ವಿಹಿತದಿಂದಲಿಬ್ರಹ್ಮಗಾನವ ಮಾಡಲು ವಿಷ್ಣುವಹಿಸೆ ಅಮೃತ ಕಳಶದ ಕಳೆಯಸೆಯಲು3ವಿವೇಕ ಧೈರ್ಯರೆಂಬ ಚಡಿಕಾರರುತಾನೆ ಮುಂಗಡೆಯಲಿರ್ದುಸಾವಧಾನದಿ ಪಥವಬಿಡಿಸು ತಿರಲು ಸರ್ವದೇವೆಂದು ಪೊಗಳಿದವಿಜಯಭಟ್ಟಾದೀಶಇಂತು ವೈಭವದಿಂದ ಚಿದಾನಂದನಿಂತ ನಿಜಸ್ಥಿರವಾ ಸಂತಸದಲ್ಲಿ ಕಂಡು ಸರ್ವವ ಮರೆತು ನಾನಂತು ಇಂತೆನಲೇನ ಆತ ತಾನಾಗಿರ್ದ5
--------------
ಚಿದಾನಂದ ಅವಧೂತರು
ರಾಮಕೃಷ್ಣರು ಮನೆಗೆ ಬಂದರು ಬಾಗಿಲ ತೆರೆಯಿರೊ |ಕಾಮಧೇನು ಬಂದಂತಾಯಿತು ಸುಖವ ಸುರಿಯಿರೊ ಪಮಕರಕುಂಡಲನೀಲಮುತ್ತಿನ ಚೌಕಳಿ ಇಡುತಲಿ |ಸುಕುಮಾರ ಸುಂದರವಾದ ಉಡುಗೆಯುಡತಲಿ ||ಮುಖದಕಮಲಮುಗುಳನಗೆಯ ಸುಖವ ಕೊಡುತಲಿ |ಕಂಕಣ ಹಾರ ತೋಳಬಂದಿ ತೊಡಿಗೆ ತೊಡುತಲಿ 1ಚೆಂಡು-ಬೊಗರಿ-ಚಿಣ್ಣಿಕೋಲು-ಗಜುಗವಾಡುತ |ದುಂಡುಮಲ್ಲಿಗೆತುಂಬಿಕೊಳಲನೂದಿ ಪಾಡುತ ||ಮಿಂಡೆವೆಂಗಳ ಮುದ್ದು ಮೊಗದ ಸೊಗವ ನೋಡುತ |ಭಂಡುಮಾಡಿ ಭಾಮೆಯರೊಡನೆ ಸರಸವಾಡುತ 2ಪೊಕ್ಕುಳಲ್ಲಿ ಅಜನ ಪಡೆದ ದೇವದೇವನು |ಚಿಕ್ಕ ಉಂಗುಟದಿ ಗಂಗೆಯ ಪಡೆದನಾತನು ||ಮಕ್ಕಳ ಮಾಣಿಕ್ಯ ಪುರಂದರವಿಠಲ ರಾಯನು |ಭಕ್ತ ಜನರಿಗೊಲಿದ ನೀನು ಮುಕ್ತಿದಾತನು 3
--------------
ಪುರಂದರದಾಸರು
ರಾಮನ ನೋಡಿರೈ ರಘುಕುಲಸೋಮನ ಪಾಡಿರೈ ಪ.ಜೀಮೂತಶ್ಯಾಮಲಕಾಯ ಜನಕಜಾಮಾತಸೀತಾಕಾಂತಅ.ಪ.ಕೋಟಿದಿವಾಕರನಿಭ ಮಕುಟದ ಮಸ್ತಕದ ಮುದ್ದಿನ ಮುಖದನೀಟಹ ಪಣೆಯಲಿಮೃಗಮದಪುಂಡ್ರತಿಲಕದ ನೀಲಾಳಕದಮಾಟಕ ಮದನನ ಬಿಲ್ಲ ಹಳಿವ ಹುಬ್ಬುಗಳ ಇತ್ತಂಡಗಳನೋಟದಿ ದಯಾರಸ ಸೂಸುವ ಕಮಲದಳಗಳ ಸಮನಯನಗಳ 1ಎಸೆವ ಸುನಾಸಿಕ ಜ್ವಲಿತಕುಂಡಲಸ್ಮಿತವದನ ಶಶಿಸಮರದನಹೊಸ ತುಲಸಿಯ ಮಂಜರಿ ವನಮಾಲಾಧರನ ಸತ್ಕಂಧರನಮಿಸುನಿಯವೈಜಯಂತಿತ್ರಿಸರವು ದಿವ್ಯಪದಕಗಳ ಝಳ ಝಳಪುಗಳಲಸತ್ ಶ್ರೀವತ್ಸ ವಕ್ಷದಿ ಕುಂಕುಮ ಚಂದನದ ಗುಣಗಣಘನದ 2ಮರಕತಸ್ತಂಭಗಳಿಗೆ ಪೋಲ್ವೆಡೆಬಾಹುಗಳ ಅಂಗದಯುಗಳಕರವಲಯಾಂಗುಲಿಮುದ್ರಿಕೆ ಧೃತಕೋದಂಡ ದಂಡಕದಂಡಸಿರಿಜಠರತ್ರಿವಳಿಗಂಭೀರನಾಭ ನಿರ್ಜರನಾಭವರಪಿಂಗಳ ಕೌಶೇಯಾಂಬರಕಟಿಸೂತ್ರಶ್ರೀ ಬ್ರಹ್ಮಸೂತ್ರ3ಬಟ್ಟದೊಡೆಜಾನುಘಟ್ಟಿದಂತೋಪಮ ಜಂಘ ಸಂವೃತ ಜಂಘಾಕುಟಿಲ ನೀ ರಾಕ್ಷಸದಲ್ಲಣ ಪೆಂಡೆಯದ ಚೆಲುವಾ ಜನಜನಿಗೊಲಿವಕಠಿಣತರ ಪದತಳದೆಡೆ ಧ್ವಜಾಂಕುಶಾಂಬುಜ ಹೃತ್ಕಲುಷಾನಿಟಿಲನಯನ ವಿಧಿಸುರ ಋಷಿವಂದಿತಚರಣನೂಪುರಾಭರಣ4ಸುಖಮುನಿ ಮುಖ್ಯಮುನಿ ಪೂಜಿತ ವಿಗ್ರಹ ವಾರಾಪಾರವಿಹಾರನಿಖಿಲ ಗುಣಾರ್ಣವ ನಿತ್ಯದಯಾರ್ಣವ ರಾಜ ರಾಜಾಧಿರಾಜಸಕಲ ಸಂಯಮಿಕುಲಮೌಳಿರತುನ ಸತ್ಯಪೂರ್ಣ
--------------
ಪ್ರಸನ್ನವೆಂಕಟದಾಸರು
ಲಿಂಗದೇಹವೆಂಬ ಪವಳಿ ಶೃಂಗರಿಸಿಅಂಗವ ನಿನಗೆ ಕಾಣಿಕೆಯ ನೀಡುವೆ ||ಮಂಗಳಮೂರುತಿಅಂಗನೆಸಹಿತ- ಭುಜಂಗಶಯನ ಎನ್ನ ಕಂಗಳುತ್ವವವೀಯೋ 2ಕಡಗ ಕಿರುಗೆಜ್ಜೆ ಪೆಂಡೆಗಳಿಂದಲೊಪ್ಪುವಉಡುಗೆ ಪೀತಾಂಬರತರಳಕೌಸ್ತುಭ||ಪಿಡಿದ ಶಂಖ ಚಕ್ರ ಕರ್ಣಕುಂಡಲದಿಂದಕಡಲಶಯನ ಎನ್ನ ಹೃದಯದೊಳಗೆ ನಿಲ್ಲೊ 3ಒಡೆಯ ನೀನೆನಗೆ ಅನಾದಿ ಕಾಲದಿಂದಬಡವನು ನಾನಿನ್ನ ದಾಸನಯ್ಯ ||ಕಡುಕರುಣದಿಂದ ದಾಸತ್ವ ನೀಡು ಗ-ರುಡಗಮನನೆ ವೆಂಕಟೇಶ ಎನ್ನ ಮನಕೆ 4ಬರಿಮನೆಯಲ್ಲವು ಪರಿವಾರವು ಉಂಟುಪರಮಪುರುಷ ನಿನ್ನ ರೂಪಗಳುಂಟು ||ಸಿರಿದೇವಿ ಸಹಿತದಿಪುರಂದರವಿಠಲನೆಕರುಣದಿಂದಲಿ ಮನ್ಮಂದಿರದೊಳಗೆ 5
--------------
ಪುರಂದರದಾಸರು
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ವೀರ ಬಂದ ವೀರ ಬಂದಘೋರಹಮ್ಮುಎಂಬ ದಕ್ಷನತೋರ ಶಿರವರಿಯಲೋಸುಗಪಭಯನಿವಾರಣವೆಂಬ ಕಾಸೆಯನೆ ಹೊಯ್ದಜಯಶೇಖರನೆಂಬ ವೀರ ಕಂಕಣಕಟ್ಟಿನಿಯತ ಸಾಹಸವೆಂಬ ರತ್ನ ಮುಕುಟವಿಟ್ಟುಸ್ವಯಂ ಸೋಹಂ ಎಂಬ ಕುಂಡಲವ ತೂಗುತ1ಆಡಲೇನದ ಶುದ್ಧವೆಂಬ ಭಸಿತವಿಟ್ಟುರೂಢಿಯ ಸತ್ಪವೆಂದೆಂಬ ಹಲಗೆಯಾಂತುಇಡಾಪಿಂಗಳವೆಂಬ ಪಾವುಗೆಗಳ ಮೆಟ್ಟಿಗಾಢ ಧೈರ್ಯವೆಂಬ ಖಡುಗ ಝಳಪಿಸುತ2ಒಂದೊಂದೆ ಹೆಜ್ಜೆಯನಂದು ಪಾಲಿಸುತಾಗಹಿಂದೆಡಬಲ ನೋಡದೆ ಮುಂದು ನಿಟ್ಟಿಸಿಛಂದಛಂದದಲಾಗುವಣಿ ಲಗುವಿನಿಂದಬಂದನು ಬಹು ಶೂರಧೀರ ಮಹಾವೀರ3ದಾರಿ ಊರುಗಳನೆ ಧೂಳಿಗೋಂಟೆಯ ಮಾಡಿಆರಾಧರೇನು ಶಿಕ್ಷಿಸುವೆನೆಂದೆನುತಭೇರಿಕರಡಿ ಸಮ್ಮೇಳಗಳೊಡಗೂಡಿಕಾರಣವಹ ಯಜÕಮಂಟಪದೆಡೆಗಾಗಿ4ಸುಷುಮ್ನವೆಂದೆಂಬ ಬಾಗಿಲ ಮುರಿಯುತ ಆಸಮಯದಿ ಬಂದ ಅಸುರರ ಕೊಲ್ಲುತಭೇಸರಿಸುವ ದೊರೆ ದೊರೆಗಳನಿರಿಯುತದ್ವೇಷರೆನಿಪ ಷಡುರಥಿಕರ ಕಟ್ಟುತ5ಅಷ್ಟಸಿದ್ಧಿಗಳೆಂಬ ದಿಕ್ಪಾಲಕರ ನಟ್ಟಿಭ್ರಷ್ಟ ಮೋಹವದೆಂಬ ಯಮನ ಹಲ್ಮುರಿದೆತ್ತಿನಷ್ಟಮನವೆಂಬ ಬೃಗುವಿನ ಮೀಸೆಯ ಕಿತ್ತುಶಿಷ್ಟಶಿಷ್ಟರನು ಎಲ್ಲರ ಕೆಡೆಮೆಟ್ಟಿ6ಹಮ್ಮುತಾನಾಗಿರುತಹಉನ್ಮತ್ತದಕ್ಷನ ಶಿರವನು ತರಿಯುತಲಾಗಗಮ್ಮನೆ ತ್ರಿಕೂಟ ಯಜÕಕುಂಡದೊಳುಸುಮ್ಮನಾಹುತಿಯಿಟ್ಟು ಸುಲಭದಲಿ ನಲಿಯುತ7ಪಾಪರೂಪನಾದ ಜೀವದಕ್ಷನನುಈ ಪರಿಯಲಿ ಕೊಂದು ನಾಟ್ಯವಾಡಲುಭಾಪುರೇ ಎಂದು ಸಾಧು ಪ್ರಮಥರು ಹೊಗಳಲುತಾಪಹರನಾಗಿ ಶಾಂತಿಯ ಹೊಂದುತ8ನಿರುಪಮನಿತ್ಯನಿರಾಳನೆ ತಾನಾಗಿಪರಮೇಶಪರವಸ್ತುಪರತರವೆಯಾಗಿಭರಿತ ಚೇತನ ಪ್ರತ್ಯಗಾತ್ಮನೆ ತಾನಾಗಿನಿರುತ ನಿತ್ಯಾನಂದ ಚಿದಾನಂದಯೋಗಿ9
--------------
ಚಿದಾನಂದ ಅವಧೂತರು
ವೃಂದಾವನದೊಳಾಡುವನಾರೆ - ಗೋಪ-|ಚಂದಿರವದನೆ ನೋಡುವ ಬಾರೆ ಪಅರುಣಪಲ್ಲವಪಾದಯುಗಳನೆ ದಿವ್ಯ-|ಮರುಕತ ಮಂಜುಳಾಭರಣನೆ ||ಸಿರಿವರ ಯದುಕುಲ ಸೋಮನೆ ಇಂಥ-|ಪರಿಪೂರ್ಣ ಕಾಮ ನಿಸ್ಸೀಮನೆ 1ಹಾರ-ಹೀರ ಗುಣಧಾರನೆ - ದಿವ್ಯ |ಸಾರಶರೀರ ಶೃಂಗಾರನೆ ||ಆರಿಗಾದರು ಮನೋದೂರನೆ ತನ್ನ-|ಸೇರಿದವರ ಮಾತ ವಿೂರನೆ 2ಮಕರಕುಂಡಲಕಾಂತಿ ಭರಿತನೆ - ದಿವ್ಯ |ಆಕಳಂಕರೂಪ ಲಾವಣ್ಯನೆ ||ಸಕಲರೊಳಗೆ ದೇವನೀತನೆ - ನಮ್ಮ |ಮುಕುತೀಶಪುರಂದರವಿಠಲನೆ3
--------------
ಪುರಂದರದಾಸರು