ಒಟ್ಟು 442 ಕಡೆಗಳಲ್ಲಿ , 74 ದಾಸರು , 400 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸು ಗಣನಾಥ ನೀ ಎನ್ನ ಮೇಲೆ ಕೃಪೆಯ ನಿರತ ಪಸ್ಥೂಲ ಶರೀರ ವಿಶಾಲ ಲೋಚನ ಸುರಜಾಲ ವಂದಿತಜಾಲವಂದಿತ ಗುಣಶೀಲ ಸಜ್ಜನಪಾಲ ಅ.ಪಮೂಷಿಕವಾಹನನೆ ವಿಘ್ನೇಶ್ವರ ಪಾಶಾಂಕುಶಧರನೆಈಶ ನಂದನ ನಿನ್ನ ದಾಸನೆನಿಸೊ ಎನ್ನಆಸೆಯ ಸಲಿಸು ವಿಘ್ನೇಶ ವಿನಾಯಕ 1ಕಾಮಿತಫಲಪ್ರದನೇ ವಿನಾಯಕ ಸ್ವಾಮಿ ಶನೇಶ್ವರನೆಸಾಮಜವದನನೇ ಶ್ಯಾಮಲವರ್ಣನೇಕಾಮವರ್ಜಿತ ಗುಣಸ್ತೋಮ ವಂದಿತನೇ 2ಗಿರಿಜೆಯ ವರಸುತನೇ ಲಂಬೋದರ ಉರಗನ ಸುತ್ತಿಹನೇಕರದಿ ಮೋದಕಹಸ್ತವರಏಕದಂತನೆಶರಣು ನಿನಗೆ ಗೋವಿಂದನ ಸಖನೆ 3
--------------
ಗೋವಿಂದದಾಸ
ಪ್ರಸನ್ನ ಶ್ರೀ ರಾಜರಾಜೇಶ್ವರ ಸ್ತೋತ್ರ ಹಾಗೂ ಶ್ರೀ ಕಪಿಲ43ರಾಜರಾಜೇಶ್ವರನೇ ರಾಜೀವವದನ ಶ್ರೀರಾಜರಾಜೇಶ್ವರಿ ಪತೇ ಶರಣು ಮಾಂಪಾಹಿರಾಜೀವಪಿತ ನೀನು ಕನ್ಯೆಯರಿಗೆವರಪ್ರಜಾಸಂಪತ್ ಉದ್ಯೋಗ ಈವಿ ಭಜಕರಿಗೆ ಪವೇಧಕಾಯಜಸ್ವಾಯಂಭುವ ಮನು ಶತರೂಪಾಈ ದಂಪತಿಗೆರಡು ಗಂಡುಗಳು ಪ್ರಿಯವ್ರತಉತ್ಥಾನಪಾದ ಮೂರು ಹೆಣ್ಣು ಮಕ್ಕಳುಅಕೂತಿ ದೇವಹೂತಿ ಪ್ರಸೂತಿ ಎಂಬುವರು 1ಶ್ರೀಪತಿಯೇ ನಿನ್ನ ಕಾರುಣ್ಯ ಬಲದಿಂದಸುಪುಣ್ಯ ಶ್ಲೋಕ ಆದಿಮನು ತನ್ನರೂಪಗುಣಶ್ರೇಷ್ಠ ಕನ್ಯೆಯರಿಗೆ ತಕ್ಕಾನು-ರೂಪವರರುಗಳಿಗೆ ಮದುವೆ ಮಾಡಿಸಿದನು2ಪುತ್ರಿಕಾ ನಿಯಮದಿ ಆಕೂತಿ ದೇವಿಯನುಸುತಪೋಧನ ಪ್ರಜೇಶ್ವರ ರುಚಿಗೆ ಕೊಟ್ಟನಿರ್ದೋಷ ಕಲ್ಯಾಣ ಗುಣಗಣಾರ್ಣವ ನೀನುಪ್ರಾದುರ್ಭವಿಸಿದಿ ಯಜÕಶ್ರೀಯು ದಕ್ಷಿಣಾದೇವಿಯು 3ಕರ್ದಮ ಪ್ರಜೇಶ್ವರರ ಭಕ್ತಿ ತಪಸ್ ಏನೆಂಬೆಶ್ರೀದ ನಿನ್ನಯ ಭಕ್ತ ವಾತ್ಸಲ್ಯಕ್ಕೆಣೆಯುಂಟೆಪದ್ಮಜನು ಕರ್ದಮಗೆ ಪ್ರಜಾಃಸ್ರುಜ ಎನ್ನಲುಭಕ್ತಿಯಿಂ ತಪಗೈಯೇ ಪ್ರತ್ಯಕ್ಷನಾದಿ 4ಸುಪುಷ್ಕರಾಕ್ಷ ನೀಸೂರ್ಯತೇಜಃಪುಂಜಪ್ರಪನ್ನರ್ಗೆ ಬೀರುವ ಕಾರುಣ್ಯನೋಟವಿಪುಲಾಬ್ಜವದನಸುಂದರಸುಳಿಗೊರಳುಸುಭ್ರಾಜಕುಂಡಲಕಿರೀಟದಹೊಳಪು5ಉರುಕಾಂತಿಯಿಂ ಜ್ವಲಿಪಅರಿಶಂಖ ಗದೆಯಶುಭ್ರೋತ್ಪಲ ಪುಷ್ಪ ಕರಗಳ ಹಿಡಿದಿಹಿವಿರಾಜಿಸುವ ಕೌಸ್ತುಭಶಿತ ಪದ್ಮೋತ್ಪಲಸ್ರಜಶ್ರೀರಮಣ ನಿನ್ನ ಶ್ರೀವತ್ಸ ಸೌಂದರ್ಯ ಏನೆಂಬೆ 6ದ್ವಿಷÉೂೀಡಶ ಶುಭಲಕ್ಷಣ ಸುಲಕ್ಷಿತಪುಷ್ಪಭವ ವರವಾಯು ಸಂಸೇವ್ಯ ಶ್ರೀಶಶೇಷಾಹಿ ಭೂಷಣಾದ್ಯಮರಸನ್ನುತನೀನುಪಕ್ಷಿಸೋಪರಿ ಅಂಬರದಿ ನಿಂತಿ 7ಉತ್ತಮಶ್ಲೋಕ ನಿನ್ನ ಕರ್ದಮ ಹರುಷದಿನೋಡಿಕ್ಷಿತಿಯಲ್ಲಿ ಬಿದ್ದು ಸನ್ನಮಿಸಿ ಸ್ತುತಿಸೇಮಾಧವನೇ ನೀನು ಹೇಳಿದಿ ಸ್ವಾಯಂಭುವನುಶತರೂಪಾ ದೇವಹೂತಿ ಸಹ ಬರುವನೆಂದು 8ಆ ಮನು ದಂಪತಿಯು ಮತ್ತು ದೇವಹೂತಿಯುಧರ್ಮನಿಷ್ಠರೂ ಸದ್ಗುಣಾದಿ ಶ್ರೇಷ್ಠರೆಂದಿರಮಣೀಯ ಆಕೆಯ ಕರ್ದಮರು ಪರಸ್ಪರ ಅರ್ಹರೆಂದಿಹೆಣ್ಣುಮಕ್ಕಳೊಂಬತ್ತು ಸ್ವಯಂ ನೀ ಅವತರಿಪಿ ಎಂದಿ 9ಸತಿಸುತಾ ಸಹ ಸ್ವಾಯಂಭುವ ಬರಲು ಮುನಿಯುಆದರದಿ ಸ್ವಾಗತ ನೀಡಿ ರಾಜನಲಿ ಯುಕ್ತಸದ್ಭೋಧ ರೂಪದಲಿ ಮಾತನಾಡೆ ಮನವುಬಂದ ಕಾರ್ಯ ಹೇಳಿದನು ವಿನಯ ಗಾಂಭೀರ್ಯದಿ 10ದುಹಿತ್ರು ಸ್ನೇಹ ಪರಿಕ್ಲಿಷ್ಟ ಮನದಿಂದ ದೀನನಾ ಹೇಳುವುದು ಕೃಪೆಯಿಂದ ಕೇಳಿರಿ ತಮ್ಮಬಹುಶೀಲಗುಣವಯಸ್ ರೂಪಾದಿಗಳಮಹರ್ಷಿ ನಾರದರು ಹೇಳಿ ಕೇಳಿಹಳು ದೇವಹೂತಿ 11ಸರ್ವಾತ್ಮನಾ ತಮಗೆಅನುರೂಪಗೃಹಿಣಿ ಅಗುವಳುಅವಳನ್ನ ದಯದಿಂದ ವಧುವಾಗಿ ಸ್ವೀಕರಿಸಿವಿವಾಹ ವಿಧಿಪೂರ್ವಕ ಮಾಡಿಕೊಳ್ಳಿರಿ ಎಂದುಈ ವಿಧದಿ ರಾಜ ಕೋರಲು ಮುನಿಯು ಒಪ್ಪಿದನು 12ಸಾಧು ಮಾತುಗಳಾಡಿ ಹಸನ್ಮುಖವ ತೋರಿಸಿಕರ್ದಮರು ಅರವಿಂದನಾಭನ್ನ ಸ್ಮರಿಸುತ್ತಶಾಂತವಾಗಿ ಸುಮ್ಮನೇ ಕುಳಿತರು ಆಗ ಮನುವಿಧಿಪೂರ್ವಬ್ರಾಹ್ಮಿವಿವಾಹಕ್ಕೆ ಏರ್ಪಾಡು ಮಾಡಿದನು 13ಶ್ರೀವರನೇ ನಿನ್ನಾನುಗ್ರಹ ಬಲದಿಂದಲೇದಿವ್ಯಾಭರಣ ಉಡುಗೊರೆ ವೈಭವದಿಂದದೇವಹೂತಿ ಕರ್ದಮರ ವಿವಾಹ ಮಾಡಿ ಕೃತಕೃತ್ಯಸ್ವಾಯಂಭುವ ಬರ್ಹಿಷ್ಮತಿ ಸೇರಿದನು 14ಕರ್ದಮರು ದೇವಹೂತಿಯು ಗೃಹಸ್ಥತನ ಚರಿಸಿದನುಪತಿಇಂಗಿತವರಿತು ಪಾರ್ವತಿ ಶಿವನಿಗೆಎಂತಹ ಸೇವೆ ಮಾಳ್ಪಳೋ ಅದರಂತೆ ಪ್ರೀತಿಯಿಂದಪತಿಸೇವೆ ಮಾಡುತ್ತಿಹಳು ದೇವಹೂತಿ ಸಾಧ್ವಿ 15ಯೋಗಾತಿಶಯ ಸಾಮಥ್ರ್ಯದಿ ಕರ್ದಮರುಕಾಮಗ ವಿಮಾನ ನಿರ್ಮಿಸಿ ದಾಂಪತ್ಯಸುಖ ವಿಹಾರವ ಮಾಡಿ ಹೇ ಸ್ವಾಮಿ ನಿನ್ನ ಕೃಪದಿಮಕ್ಕಳು ಸ್ತ್ರೀ ಪ್ರಜಾ ಒಂಭತ್ತು ಹುಟ್ಟಿದವು 16ಶ್ರೀಕರ ನಾರಾಯಣ ನೀ ಕಪಿಲಾವತಾರಆ ಕರ್ದಮರು ದೇವಹೂತಿ ಮಗನೆನಿಸಿಉತ್ಕøಷ್ಟ ಸಾಧು ಸಾಂಖ್ಯ ತತ್ವೋಪದೇಶವಅ ಕುಟಿಲ ಮಾತೆಗೆ ಬೋಧಿಸಿದ್ದು ಪ್ರಸಿದ್ಧ 17ಕರ್ದಮರ ಒಂಭತ್ತು ಕನ್ಯೆಯರು ಕಲಾ, ಅನಸೂಯ,ಶ್ರಧ್ಧಾ, ಹರ್ವಿಭೂ, ಗತಿ, ಕ್ರಿಯಾ, ಊರ್ಜಾ,ಶಾಂತಿಖ್ಯಾತಿಸಾಧ್ವಿಗಳಿವರು ಮರೀಚತ್ರಿ, ಅಂಗೀರ, ಪುಲಸ್ತ್ಯ ಪುಲಹಕ್ರತುವಶಿಷ್ಟಾ ಭೃಗುಗಳಿಗೆ ಮದುವೆ- ಆದರೀ ಕ್ರಮದಿ18ಐಶ್ವರ್ಯವಂತ ಸ್ವಾಯಂಭುವ ಮನು ತನ್ನ ಮಗಳುಪ್ರಸೂತಿಯನು ಬ್ರಹ್ಮಪತ್ರ ದಕ್ಷನಿಗೆ ಕೊಟ್ಟು ಆಕೆಪ್ರಸವಿಸಿದಳು ಷೋಡಶಾಮಲಲೋಚನೆ ಪುತ್ರಿಯರಸುಶೀಲ ಸಾಧ್ವಿಯರು ಮದುವೆ ಅದರು ಸುಲಭದಿ 19ಶ್ರಧ್ಧಾ, ಮೈತ್ರಿ, ದಯಾ, ಶಾಂತಿ, ತುಷ್ಟಿ, ಪುಷ್ಟಿ, ಕ್ರಿಯಾಉನ್ನತಿ, ಬುದ್ಧಿ, ಮೇಧಾ, ತಿತಿಕ್ಷಾ, ಹ್ರೀಮೂರ್ತಿಹದಿಮೂರು ಈ ಕನ್ಯೆಯರು ಮದುವೆ ಆದರು ಧರ್ಮಗೆಸಾಧ್ವಿ ಸ್ವಾಹಾಪತಿ ಅಗ್ನಿಪಿತೃಗಳ ಪತ್ನಿ ಅದಳು ಸ್ವಧಾ 20ಶ್ರೀ ರಮಾಪತಿ ನಿನ್ನ ಕಾರುಣ್ಯ ಏನೆಂಬೆಪಿತೃದೇವರೊಳ್ ಅಂತರ್ಗತನಾಗಿ ನೀನೇಪಿತೃದೇವರ್ಗಳನ್ನ ಪುತ್ರ ಸಂತಾನ ಬೇಕೆಂದುನರರು ಬೇಡಿಕೊಂಡರೆ ಭಕ್ತಿ ಮೆಚ್ಚಿ ಫಲವೀವಿ 21ಸತಿದೇವಿ ಭವನ ಪತ್ನಿಯಾದಳು ವಿಹಿತದಿಪತಿಭಕ್ತಿ ಪತಿಸೇವಾ ಸದಾರತಳು ಭವಾನಿಹದಿನಾರು ಕನ್ಯೇಯರ ದಕ್ಷನುಹರಿನಿನ್ನದಯದಿಮದುವೆ ಮಾಡಿ ಕೊಟ್ಟನು ಹಾಗೂ ಪುನರವತಾರದಲ್ಲೂ 22ಧನಹೀನರಿಗೂ ನೀನು ಉದಾರ ಕಾರುಣ್ಯದಿಧನಒದಗಿಸಿ ಮದುವೆ ಮಾಡಿಸುವಿಯೋಮುನಿವರ್ಯ ರುಚಿಕರಿಗೆ ವರುಣನ ದ್ವಾರ ನೀಕನ್ಯಾಶುಲ್ಕ ಒದಗಿಸಿ ವಿವಾಹ ಮಾಡಿಸಿದಿ 23ಪಶುಪತ್ನಿ ಸಂತಾನ ಯಜÕ, ಧನ ವಿವಾಹೋತ್ಸವಯಶಸ್ ತೇಜೋಬಲ ವೀರ್ಯ ಪ್ರಜಾಸೃಷ್ಟಿ ಅಧಿಕಾರಐಶ್ವರ್ಯ ಇಂತಹುದು ದಕ್ಷಗೆ ಬಹು ಕೊಟ್ಟು --ಅವನೋಳ್ ಇದ್ದುಯಶ ಎಂದು ಕರೆಸಿಕೊಂಬ ಶ್ರೀರಮಣ ಶ್ರೀಕರ --ನಮೋ ನಮೋ ನಿನಗೆ 24ನಂದಿನೀಧರ ಶಿವನೊಳ್ ಅಂತರ್ಯಾಮಿಯಾಗಿರುತಪುಂಸ್ತ್ರೀ ಪ್ರಜಾಸೃಷ್ಟಿ ಮುಂಜಿ ಮದುವೆ ಮಕ್ಕಳು ಮೊಮ್ಮಕ್ಕಳುಇಂಥಾ ಸಂತಾನ ಮತ್ತು ಆಯುಷ್ಯ ಸುಖವೀವಿ ಪ್ರಜಾತಿಹಿಅಮೃತಂ ಆನಂದ ಎಂದು ಕರೆಸಿಕÉೂಂಬ ನಿನಗೆ ಶರಣು 25ಮನು ಸ್ವಾಯಂಭುವ ದಕ್ಷ ಮರುತ ದೇವತೆಗಳೊಳ್ಶ್ರೀನಿಧಿಯೇ ನೀನಿದ್ದು ಪ್ರಜೋತ್ಪತ್ಯಾದಿಗಳನ್ನು ಈವಿಈ ನುಡಿಗಳ ಪಠಣ ಫಲ ಮೋಕ್ಷಹೇತು- ಸಜ್ಞಾನ ಲಾಭವುಇನ್ನೂ ಅವಾಂತರ ಫಲ ವಿವಾಹ ಸಂತಾನಆಯುರಾರೋಗ್ಯ ಉದ್ಯೋಗಪ್ರಾಪ್ತಿ26ಮಂದಜಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸಒಂದು ಪುತ್ರ ಬೇಕೆನ್ನೆ ಮೂವರನ್ನು ನೀ ಕೊಟ್ಟೆಅಂದು ನೀನೇ ತೋರ್ದಿ ಮಗನಾಗಿ ಮನುವಿಗೆಒಂದೇಮನದಿ ಇದು ಪಠಿಸೆ ನೀ ಒಲಿವೆ 27-ಇತಿ ಶ್ರೀ ರಾಜೇಶ್ವರ ಸ್ತೋತ್ರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀಕೂರ್ಮ5ಪ್ರಥಮ ಅಧ್ಯಾಯಶ್ರೀಕೂರ್ಮಪ್ರಾದುರ್ಭಾವಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ತನು ಕೂರ್ಮರೂಪಪಾಲಾಬ್ಧಿಜಾಪತಿಅನಘಅಜಿತ ಧನ್ವಂತರಿಲೀಲಾ ಮೋಹಿನಿಅನಘಶರಣು ಮಾಂಪಾಹಿಪವೇದಾದಿ ಸಚ್ಛಾಶ್ರ(ಪ್ರ)ಮೇಯ ವೇದವತೀಶಪದುಮಜಾಂಡವ ಪಡೆದ ಜಗದೇಕಭರ್ತಾಅದ್ವಿತೀಯನು ಸ್ವಾಮಿ ಸಮರಧಿಕರಿಲ್ಲದವವೇಧಮುಕ್ಕಣ್ಣಾದಿ ಸುರಸೇವ್ಯಪಾಹಿ1ಸತ್ಯ ಜ್ಞÕನಾನಂತ ಭೂಮಾದಿ ಗುಣನಿಧಿಯೇಸತ್ಯಸೃಷ್ಟಿ ಮಾಳ್ಪಿ ಸತ್ಯನಾಮಾಪ್ರತ್ಯಕ್ಷ ಪ್ರಮಾಣ ಸಿದ್ಧವು ಈ ಜಗತ್ತುತತ್ಸøಷ್ಟಿ ಪಾಲನಾದಿಗಳೆಲ್ಲ ಸತ್ಯ 2ಸೃಷ್ಟಿ ಪ್ರವಾಹವು ಅನಾದಿಯೂ ನಿತ್ಯವೂಘಟಾದಿ ಕಾರ್ಯಗಳ ಉಪಾದಾನ ಕಾರಣಮೂಲ ಜಡಪ್ರಕೃತಿಯೂ ಅನಾದಿಯೂ ನಿತ್ಯವೂಸೃಷ್ಟ್ಯಾದಿಕರ್ತಾ ನಿನ್ನಾಧೀನವು ಎಲ್ಲಾ 3ಕಾರ್ಯಕಾರಣಾತ್ಮಕ ಜಗತ್ತು ಸರ್ವಕ್ಕೂತೋಯಜಾಕ್ಷನೇ ನೀನು ನಿಮಿತ್ತ ಕಾರಣನುನಿಯಾಮಕನು ನೀನೇವೇ ಚಿದಚಿತ್ ಅಖಿಳಕ್ಕೂಅನ್ಯರಿಗೆ ಸ್ವಾತಂತ್ರ್ಯ ಸಾಮಥ್ರ್ಯವಿಲ್ಲ 4ವಿಧಿಶಿವಾದಿ ಸರ್ವ ಸುರಾಸುರರುಗಳಿಗೆಸತ್ತಾಪ್ರತೀತಿ ಪ್ರವೃತ್ತಿಪ್ರದ ಹರಿಯೇಭೂತಭವ್ಯ ಭವತ್ಪ್ರಭುವು ವಿಷ್ಣು ನೀನೇವೇಚೇತನಾ ಚೇತನಾಧಾರ ಸರ್ವತ್ರ 5ದೂರ್ವಾಸರ ಶಾಪ ನಿಮಿತ್ತದಿ ಸ್ವರ್ಗದಐಶ್ವರ್ಯವು ಕ್ಷಿಣವು ಆಗಿ ಬಹುವಿಧದಿದೇವಶತೃಗಳ ಬಲ ಉನ್ನಾಹವಾಗಲುದೇವರಾಜನು ಬ್ರಹ್ಮನಲ್ಲಿ ಪೋದ 6ವಾಸವವರುಣಾದಿ ಸುರರ ಮೊರೆಕೇಳಿಬಿಸಜಸಂಭವ ಶಿವ ಶಕ್ರಾದಿಗಳ ಕೂಡಿಶ್ರೀಶನೇ ರಕ್ಷಕನು ಎಂದು ನಿನ್ನಲ್ಲಿ ಬಂದುಸಂಸ್ತುತಿಸಿದನುಪರಮಪೂರುಷ ನಿನ್ನನ್ನ7ಅವ್ಯಯನೇ ಸತ್ಯನೇ ಅನಂತನೇ ಅನಘನೇಶ್ರೀವರನೇ ಪೂರ್ಣೈಶ್ವರ್ಯ ಮಹಾಪುರುಷದೇವವರೇಣ್ಯ ನಿನ್ನಲ್ಲಿ ಸ್ತುತಿ ಬ್ರಹ್ಮಸುವಿನಯದಿ ಮಾಡಿದ ವೇದಾರ್ಥಸಾರ 8ಸಹಸ್ರಾರ್ಕೋದಯ ದ್ಯುತಿ ಸುಂದರರೂಪಮಹಾರ್ಹ ಭಗವಂತಹರಿಈಶ್ವರನೇ ನೀನುಬ್ರಹ್ಮಾದಿಗಳ ಸ್ತುತಿಗೆ ಪ್ರಸನ್ನನು ಆಗಿಮಹಾನುಭಾವ ನೀ ಒಲಿದಿ ಕೃಪೆಯಿಂದ 9ಪದುಮನಾಭನೇನಿರ್ವಾಣಸುಖಾರ್ಣವನೇಪದುಮಭವ ಸನ್ನಮಿಸಿ ಪೇಳಿದ್ದಕೇಳಿಸಿಂಧುವಮಥನಮಾಡಲಿಕೆ ಬೇಕು ಎಂದಿಅದರ ಬಗ್ಗೆ ಉಪಾಯವ ಅರುಹಿದಿ ವಿಭುವೇ 10ಕ್ಷೀರಾಬ್ಧಿಯಲಿ ವೀರು ತೃಣ ಲತೌಷಧಿ ಇಟ್ಟುಗಿರಿಶ್ರೇಷ್ಠ ಮಂದರವ ಕಡೆಗೋಲು ಮಾಡಿವರಸರ್ಪ ವಾಸುಕಿಯ ಹಗ್ಗ ಮಾಡಿ ಮಥಿಸಿಅಮೃತೋತ್ಪಾದನ ಯತ್ನಿಪುದು ಎಂದಿ 11ದೈತ್ಯ ದಾನವರೆಲ್ಲ ಶತೃಗಳು ಆದರೂಸಂಧಿಯ ಅವರೊಡೆ ಮಾಡಿ ಕೂಡಿಮಂದರವ ಸಿಂಧುವಲಿ ತಂದಿಟ್ಟು ಮಥಿಸುವುದುಸುಧೆಯ ಉತ್ಪಾದನಕೆ ಉಪಾಯ ಇದು ಎಂದಿ 12ದೈತ್ಯರ ಸಹಕಾರ ಬಗೆ ಯುಕ್ತಿಗಳ ಪೇಳಿಭೀತಿ ಪಡಬೇಡ ವಿಷ ಉಕ್ಕಿ ಬರುವಾಗಅದಿತಜರಿಗೇವೇ ಫಲ ಲಭಿಸುವುದು ಎಂದುದಿತಿಜರಿಗೆಕ್ಲೇಶಭವಿಸುವುದು ಎಂದಿ13ಪುರುಷೋತ್ತಮ ಜಗತಃಪತಿ ಅಜಿತನಾಮಾಸುರರಿಗೆ ಬೋಧಿಸಿದ ರೀತಿ ಅನುಸರಿಸಿಶಕ್ರಾದಿಗಳು ವೈರೋಚನಾದಿಗಳೊಡೆತ್ವರಿತ ಯತ್ನಿಸಿದರು ಕಡಲ ಮಥನಕ್ಕೆ 14ದೂರದಲ್ಲಿ ಇದ್ದ ಆ ಅತಿಭಾರ ಗಿರಿಯನ್ನಸುರರುದಾನವರೆತ್ತಿ ಸಮುದ್ರ ತಟಕೆತರಲು ಬಹು ಯತ್ನಿಸಿದರು ವ್ಯರ್ಥದಿಗಿರಿಯ ಭೂ ಮೇಲೆತ್ತೆ ಅಸಮರ್ಥರು 15ಮೇರುಗಿರಿ ಬದಿ ಇದ್ದ ಮಂದರಾಚಲವುರುದ್ರ ರುದ್ರವರ ಬಲಯುತವು ಎತ್ತಲು ಅಶಕ್ಯಸುರದಾನವರು ಬೆರಗಾಗೇ ಒಂದೇ ಕರದಿಂಗಿರಿಯ ನೀ ಎತ್ತಿ ಗರುಡನ ಮೇಲೆ ಇಟ್ಟಿ 16ಗರುಡನಿಂದ ತಮ್ಮ ಮೇಲೆ ಇರಿಸೆ ಪರಿಕ್ಷಾರ್ಥಭಾರತಾಳದೇ ಸುರಾಸುರರು ಹತರಾಗೇಕಾರುಣ್ಯ ನೋಟದಿ ಬದುಕಿಸಿದಿ ಮೃತರನ್ನತೀವ್ರ ಗಾಯಗಳನ್ನ ಸೌಖ್ಯ ಮಾಡಿದಿಯೋ 17ಲೀಲೆಯಿಂದಲಿ ಪುನಃ ಒಂದೇ ಹಸ್ತದಿ ಗಿರಿಯಮೇಲೆತ್ತಿ ಗರುಡನ ಹೆಗಲಲಿಟ್ಟು ಕುಳಿತುಪಾಲಸಾಗರದಲ್ಲಿ ಸ್ಥಾಪಿಸಿ ಮಥನಕ್ಕೆವ್ಯಾಳನ ಹಗ್ಗದಂದದಿ ಸುತ್ತಿಸಿದಿಯೋ 18ಪುಚ್ಛಭಾಗವು ಅಮಂಗಳವು ಬೇಡವೆಂದುಅಸುರರ ವಾದಾ ಮುಖಭಾಗ ಹಿಡಿಯೇವಾಸುಕಿಯ ಪುಚ್ಛಾಂಗ ದೇವತೆಗಳು ಹಿಡಿದುಶ್ರೀಶ ನೀ ಸಹಕರಿಸೆ ಮಥನವ ಮಾಡಿದರು 19ಪರಮಯತ್ನದಿ ಅಮೃತಾರ್ಥ ಪಯೋನಿಧಿಯಗಿರಿಯಿಂದ ಮಂಥನ ಸುರಾಸುರರು ಮಾಡೆಪರಮಗುರುತರಅದ್ರಿಆಧಾರವಿಲ್ಲದೆಸರಿದು ಮುಳುಗಿ ಬೇಗ ಕೆಳಗಡೆ ಹೋಯಿತು 20ಶೈಲವು ಮುಳುಗಲು ಸುಧಾಕಾಂಕ್ಷಿಗಳ ಮನವ್ಯಾಕುಲದಿ ಮುಖಕಾಂತಿ ಮ್ಲೌನವು ಆಯಿತುಎಲ್ಲಾ ಶ್ರಮವು ವ್ಯರ್ಥ ಎಂದು ಬೆರಗಾಗಿರೆಬಲು ಕೃಪೆಯಲಿ ನೀನು ಒದಗಿದಿ ಆಗ 21ಅದ್ಭುತ್ ಮಹತ್ ಕಚ್ಛಪ ರೂಪದಲಿ ನೀಅಬ್ಧಿಯಲಿ ಬೇಗನೇ ಬಂದು ಮೇಲೆಎಬ್ಬಿಸಿದಿ ಆ ಮಂದರಾಚಲಗಿರಿಯಸುಬಲ ಪೂರುಷ ನಮೋ ಚಿನ್ಮೋದಗಾತ್ರ 22ಚನ್ಮೋದಮಯ ಮಹಾಕೂರ್ಮರೂಪನೇ ನಿನ್ನಅಮಿತ ಸುಬಲ ಲಕ್ಷ ಯೋಜನ ವಿಸ್ತಾರಸುಮಹಾ ದ್ವೀಪದಂದಿರುವ ಪೃಷ್ಠದ ಮೇಲೆಆ ಮಹಾದ್ರಿಯ ಹೊತ್ತಿ ಪುನರ್ ಮಥಿಸಲೊದಗಿದಿ 23ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧೀಶಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀಪ್ರಸನ್ನ ಶ್ರೀನಿವಾಸಧನ್ವಂತರೀ ಶರಣು ಅಜಿತ ಸ್ತ್ರೀಕೂರ್ಮ24-ಇತಿ ಪ್ರಥಮಾಧ್ಯಾಯ ಸಂಪೂರ್ಣಂ-ದ್ವಿತೀಯ ಅಧ್ಯಾಯನೀಲಕಂಠವೃತ್ತಾಂತಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಸಿರಿವರಹರಿಕೂರ್ಮನ ಪೃಷ್ಠೋಪರಿನಿಂತಗಿರಿಯಿಂದ ಅಸುರರುಸುರರುಪುನರ್ಮಥಿಸೆಗಿರ್ಗಿರಿ ಗಿರಿ ಗಿರಿ ಎಂದು ಭ್ರಮಿಸಿತು ಗಿರಿಯುಪರಿಮಳ ಪೂ ಸುರಿಸಿದರು ಬ್ರಹ್ಮಾದಿಗಳು 1ವಾಸುಕಿತಾಳದೇ ಬುಸು ಬುಸು ಎಂದು ಮೇಲ್ಶ್ವಾಸದಿ ವಿಷಜ್ವಾಲೆ ಹೊರಗೆ ಬಿಡಲುಅಸುರಬಲಿಇಲ್ವಾದಿಗಳು ಬಿಸಿ ಸಹಿಸದೇಘಾಸಿಹೊಂದಿದರುದಾವಾಗ್ನಿಪೀಡಿತರ ಪÉೂೀಲ್2ದಿತಿಜರು ಅದಿತಿಜರು ಎಷ್ಟೇ ಯತ್ನಿಸಿದರೂಸುಧಾ ಇನ್ನೂ ಪುಟ್ಟದೇ ಇರುವುದ ಕಂಡುದಂತ ಶೂಕವ ಆಗ ಸ್ವಯಂ ನೀನೇ ಹಿಡಿದುಮಥನಮಾಡಿದಿ ಸ್ವಾಮಿ ಕಾರುಣ್ಯದಿಂದ3ಪೀತಾಂಬರಿ ಸುಖ ಚಿನ್ಮಾತ್ರ ಚಾರ್ವಾಂಗಸದಾ ನಮೋ ಶರಣಾದೆ ಲೋಹಿತಾಕ್ಷದಿತಿಜಾ ಅದಿತಿಜಾರೊಡೆ ನೀನು ಸಹಮಥಿಸಲುಲತಾ ಓಷಧಿ ಕಲುಕಿ ಉಕ್ಕಿತುಸಿಂಧು4ಹಾಹಾ ಭಯಂಕರವು ಇದೇನು ಲೋಕಗಳದಹಿಸುವಂದದಿ ಫೇಣ ಉಕ್ಕಿ ಬರುತಿದೆಯುಮಹಾ ವೀರ್ಯತರ ಹಾಲಾಹಲವೆಂಬ ವಿಷ ಇದುಮಹೀಭರ್ತಾ ಮಹಾದೇವ ಮಹಾದ್ರಿದೃತ್ಪಾಹಿ5ಅಸಮ ಸ್ವಾತಂತ್ರ್ಯ ನಿಜಶಕ್ತಿ ಪರಿಪೂರ್ಣವಿಶ್ವರಕ್ಷಕ ನೀ ವಿಷಭಯ ನಿವಾರಿಸೆಸ್ವಸಮರ್ಥನಾದರೂ ಭೃತ್ಯರ ಕೀರ್ತಿಯಪ್ರಸರಿಸೆ ಒದಗಿದಿ ಮಹಾದೇವ ಶಾಸ್ತ 6ಮಹತ್ ಎಂಬ ಬ್ರಹ್ಮನ ಸ್ವಾಮಿ ಆದುದರಿಂದಮಹಾದೇವ ಎಂಬುವ ನಾಮ ನಿನ್ನದೇವೇಮಹಾದೇವ ಶಿವ ಈಶ ರುದ್ರಾದಿ ಶಬ್ದಗಳುಮಹಾಮುಖ್ಯ ವೃತ್ತಿಯಲಿ ನಿನಗೇವೇ ವಾಚಕವು 7ಭಸ್ಮಧರ ದೇವನಿಗೆ ಮಹಾದೇವ ಎಂಬುವನಾಮ ಔಪಚಾರಿಕದಲ್ಲೇವೇ ರೂಢಬ್ರಹ್ಮನಾಮನು ನೀನೇ ಬ್ರಹ್ಮಾಂತರ್ಯಾಮಿಯುಬ್ರಹ್ಮನೊಳು ಇದ್ದು ನೀ ಭುವನಂಗಳ ಪಡೆವಿ 8ರುದ್ರ ನಾಮನು ನೀನೇ ರುದ್ರಾಂತರ್ಯಾಮಿಯುರುದ್ರನೊಳು ಇದ್ದು ನೀ ಸಂಹಾರವ ಮಾಡುವಿತತ್‍ತತ್ರಸ್ಥಿತೋ ವಿಷ್ಣುಃ ತತ್‍ಚ್ಛಕ್ತಿ ಪ್ರಬೋಧÀಯನ್ರುದ್ರನಿಂ ವಿಷಪಾನ ನಿನ್ನ ನಿಯಮನವೇ 9ಶಕ್ರಾದಿ ಸರ್ವರಿಗೂಗುರುಆಶ್ರಯನು ಶಂಕರನುಶಂಕರನಿಗೆ ಆಶ್ರಯನು ಗುರುಮುಖ್ಯವಾಯುಮುಖ್ಯವಾಯುಗಾಶ್ರಯ ಶ್ರೀಕಾಂತ ನೀನುಶ್ರೀಕಾಂತ ನೀನೇವೇ ಸರ್ವಾಶ್ರಯ ಅನೀಶ 10ಯಾವ ಮಹಾದೇವನೊಲಿಯದೇ ವಾಯು ಒಲಿಯಆ ವಾಯು ಒಲಿಯದೇಹರಿತಾನೂ ಒಲಿಯಆ ವಾಯು ಹರಿಒಲಿಯದಿರೆ ಬೇರೆ ಗತಿಇಲ್ಲಆ ವಾಯು ಹರಿಧಾಮ ಮಹಾದೇವ ಸ್ತುತ್ಯ 11ಸರ್ವಾಂತರ್ಯಾಮಿ ಯಾವನಲಿ ಪ್ರಸನ್ನನು ಆಗಿಯಾವನ ಮೂಲಕ ಶಕ್ರಾದಿಗಳ ಕಷ್ಟತೀವ್ರದಿ ಪೋಗುವುದೋ ಆ ಮಹಾದೇವನ ಸ್ತುತಿಸಿದರುಸುರರುಶಿವಾಂತರ್ಯಾಮಿ ಶ್ರೀಹರಿ ಮಹಿಮೆಗಳ ಕೂಡಿ 12ಕರತಲೀಕೃತ್ಯಹಾಲಾಹಲವಿಷವಶಕ್ರಾದಿ ಜನರಲ್ಲಿ ಕೃಪೆ ಮಾಡಿ ಉಂಡುಕರುಣಾಳು ಮಹಾದೇವ ಭೂತದಯಾಪರನು ಈಹರಿಭಕ್ತಾಗ್ರಣಿ ಶಿವ ಉಮೇಶನಿಗೆ ಶರಣು 13ಹರಿಬ್ರಹ್ಮ ಪಾರ್ವತಿ ಪ್ರಜೇಶ್ವರರುಹರನ ಈ ಮಹತ್ಸೇವೆ ಬಹು ಶ್ಲಾಘಿಸಿದರುಕರದಿಂದ ಕೆಳಗೆ ಪ್ರಸ್ಕನ್ನ ಗರವಾದ್ದುಸರೀಸೃಪ ವೃಶ್ಚಿಕಾದಿಗಳೊಳು ಸೇರಿತು 14ಗರವು ಭೂಷಣವಾಯಿತು ವೈರಾಗ್ಯಾಧಿಪ ಶಿವಗೆಸುಪ್ರಸಿದ್ಧನು ಆದ ನೀಲಕಂಠನೆಂದುಧೀರ ಕರುಣಾಂಬುನಿಧಿ ನಂಜುಂಡೇಶ್ವರನು ಈಗಿರಿಜೇಶನಿಗೆ ನಾ ನಮಿಪೆ ಶರಣೆಂದು 15ಈ ಕೃಪಾಕರ ನೀಲಕಂಠ ಕರತಲೀಕೃತ್ಯಆ ಕಾಲಕೂಟವಿಷ ಉಂಡ ಮಹತ್ಕಾರ್ಯಸಂಕೀರ್ತಿ ಪೇಳಿರುವುದು ಶ್ರೀ ಭಾಗವತದಿಬಾಕಿ ಬಹು ಮಹೋಲ್ಪಣ ವಿಷ ವಿಷಯ ಶೃತಿ ವೇದ್ಯ 16ಉರಗಭೂಷಣ ವಿಪ ಉರಗಪರುಗಳಿಗಿಂತನೂರುಗುಣ ಎಂಬುದಕೆ ಅತ್ಯಧಿಕ ಬಲಿಯುವರಮುಖ್ಯ ಪ್ರಾಣ ಜಗತ್ ಪ್ರಾಣಗೆ ಸಮರಿಲ್ಲನೀರಜಜಾಂಡದಿ ಎಲ್ಲೂ ಶರಣೆಂಬೆ ಇವಗೆ 17ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ18-ಇತಿ ದ್ವಿತೀಯಾಧ್ಯಾಯಂ ಸಂಪೂರ್ಣಂ -ತೃತೀಯ ಅಧ್ಯಾಯಶ್ರೀ ಇಂದಿರಾ ಆವಿರ್ಭಾವಸಾರಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಗರಪಾನವ ವೃಷಾಂಕನು ಮಾಡೆ ಇಂದ್ರಾದಿಸುರರುದಾನವರು ಪುನರ್‍ಮಥನವ ಚರಿಸೆಕ್ಷೀರಸಾಗರದಿಂದ ಉತ್ಪನ್ನವಾದವುಪರಿಪರಿ ವಸ್ತುಗಳ್ ಒಂದರ ಮೇಲೊಂದು 1ಯಜÉೂÕೀಪಯೋಗಿಗಳಪ್ರದ ಕಾಮಧೇನುಉಚ್ಛೈಶ್ರವನಾಮ ಸುಲಕ್ಷಣ ಅಶ್ವಸಚ್ಛಕ್ತಿ ಶ್ರೇಷ್ಠತರ ಐರಾವತನಾಮಗಜೇಂದ್ರ ನಾಲ್ಕು ಚಂದದಂತ ಭೂಷಿತವು 2ಸರಸಿಜೋದ್ಭವಸೇವ್ಯಶ್ರೀಶವರಾಹಹರಿನಿನ್ನ ವಕ್ಷ ಸಂಬಂಧದಿ ಹೊಳೆವಸುಶ್ರೇಷ್ಠ ಕೌಸ್ತುಭರತ್ನ ಎಂಬುವಂತಹಸುಭ್ರಾಜಮಣಿ ಬಂತು ಆ ಸಿಂಧುವಿನಿಂದ 3ಸುರಲೋಕ ವಿಭೂಷಣವು ಸರ್ವವಾಂಛಿತ ಪ್ರದವುಪಾರಿಜಾತವು ಉದ್ಭವವಾಯಿತು ತರುವಾಯಸ್ಫುರದ್ರೂಪ ರಮಣೀಯ ಸುಂದರಾಂಗಿಗಳುಹಾರವಸನಭೂಷಿತ ಅಪ್ಸರಸರು 4ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್‍ವಿದಿಕ್ಕುಗಳ ರಂಜಿಸುವರೂಪ -ದಿಂದ ಆವಿರ್ಭವಿಸಿದಳು ಸಾಕ್ಷಾತ್ ಶ್ರೀಇಂದಿರೆಅಲೌಕಿಕ ಸೌಂದರ್ಯಪೂರ್ಣೆ5ಸರ್ವದಾ ಸರ್ವವಿಧದಿ ನಿನ್ನ ಸೇವಿಸಿ ನುತಿಪಸರ್ವಜಗಜ್ಜನನಿಯೇಸಿಂಧುಕನ್ಯಾದೇವ ದೇವೋತ್ತಮ ರಾಜರಾಜೇಶ್ವರ ನಿನಗೆದೇವ ಶ್ರೀ ರಾಜರಾಜೇಶ್ವರಿನಿತ್ಯನಿಜಸತಿಯು6ಇಂದ್ರಾದಿ ದೇವತೆಗಳು ಮುನಿಜನರುಇಂದಿರೆಯನ್ನು ವಿಧಿಯುಕ್ತ ಪೂಜಿಸಿದರುಸಿಂಧುರಾಜನು ವರುಣ ಏನು ಧನ್ಯನೋ ಜಗನ್ -ಮಾತೆ ನಿರ್ದೋಷೆ ರಮಾ ಮಗಳಾಗಿ ತೋರಿಹಳು 7ಅಲೌಕಿಕ ಮುತ್ತು ನವರತ್ನದ ಮುಕುಟಒಳ್ಳೇ ಪರಿಮಳ ಹೂವು ಮುಡಿದ ತುರುಬುಪಾಲದಲಿ ಶ್ರೇಷ್ಠತಮ ಕಸ್ತೂರಿತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬಟ್ಟು 8ಅಂಬುಜಾಕ್ಷಗಳು ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯಪ್ರದ ಕೃಪಾನೋಟಕಂಬುಕಂಠದಿ ಮಂಗಳಸೂತ್ರ ಕರಯುಗದಿಅಂಬುಜಾವರಕೊಡುವ ಅಭಯಹಸ್ತಗಳು9ಕಂದರದಿ ಎಂದೂ ಬಾಡದಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟಿವಸ್ತ್ರ ರಾಜಿಸುವಂತಹ ಸ್ವರ್ಣಹಾರಗಳುಕಾಂತಿಯುಕ್ ಭಂಗಾರ ಸರ್ವಾಭರಣಗಳು 10ಆನಂದಮಯಅಜಿತನಾಮಾ ನಿನ್ನನು ಮನ-ಮಂದಿರದಿ ಪೂಜಿಸುತ ಇಂದಿರಾದೇವಿಬಂದು ಸಭೆಯಲಿ ಸಾಲು ಸಾಲಾಗಿ ಕುಳಿತಿದ್ದವೃಂದಾರಕರನ್ನ ಮಂದಹಾಸದಿ ನೋಡಿದಳು 11ಒಬ್ಬೊಬ್ಬ ದೇವತೆಯಲೂ ಗುಣವಿದ್ದರೂಅಬ್ಬಬ್ಬ ಏನೆಂಬೆ ದೋಷಗಳೂ ಉಂಟುಅದ್ಭುತ ಗುಣನಿಧಿನಿರ್ದೋಷಸರ್ವೇಶ-ಅಂಬುಜನಾಭ ನೀನೇವೇ ಎಂದು ನಮಿಸಿದಳು 12ಕ್ಷರರಿಗೂ ಅಕ್ಷರರಿಗೂ ಎಂದೆಂದೂ ಆಶ್ರಯನುಪುರುಷೋತ್ತಮಹರಿವಿಷ್ಣು ಸ್ವತಂತ್ರಸರಿ ಅಧಿಕರು ಇಲ್ಲದ ಅನಘನು ಸರ್ವಗುಣಪರಿಪೂರ್ಣನಿಗೇವೇ ಅರ್ಪಿಸಿದಳು ಮಾಲೆ 13ಉತ್ತಮ ಸುತೀರ್ಥಗಳಿಂದ ಅಘ್ರ್ಯ ಚಮನಪಾದ್ಯಾದಿ ಅರ್ಚನೆ ವಿಧಿಯುಕ್ತವಾಗಿಸುತಪೂನಿಧಿ ವಸಿಷ್ಠಾದೀಯರು ವೇದೋಕ್ತಮಂತ್ರ ಪಠಿಸೆ ವರುಣ ಹರಿಯ ಪೂಜಿಸಿದ 14ಆನಂದಪೂರ್ಣಅಜನಿತ್ಯಮುಕ್ತೆ ಮಗಳುಇಂದಿರೆಯಆನಂದಮಯಹರಿನಿನಗೆಸಿಂಧುಧಾರೆ ಎರೆದು ಮದುವೆ ಮಾಡಿಕೊಟ್ಟಆನಂದ ನಿತ್ಯದಂಪತಿ ರಮಾ ಮಾಧವರು 15ಪೀತಾಂಬರ ದಿವ್ಯ ಆಭರಣ ಪೊಳೆಯುತ್ತಮೋದಮಯ ನೀ ಸಿಂಧುಜಾ ಸಹ ದಿವ್ಯರತ್ನ ಖಚಿತ ಮಂಟಪದಲಿ ಕುಳಿತರೆಮುದದಿ ವರ್ಷಿಸಿದರು ಪೂಮಳೆಸುರರು16ಸಂಭ್ರಮದಿ ಮಂಗಳವಾದ್ಯ ಸುಧ್ವನಿಗಳುತುಂಬಿತುಅಂಬರಅಂಬುಧಿಎಲ್ಲೂಗಂಭೀರ ಸುಸ್ವರ ವೇದಘೋಷಗಳುತುಂಬರ ನಾರದಾದಿಗಳ ಗಾಯನವು 17ದೇವಗಾಯಕರುಗಳ ದಿವ್ಯ ಕೀರ್ತನೆಗಳುದೇವನರ್ತಕ ನರ್ತಕಿಯರ ನರ್ತನವುದೇವತೆಗಳ ಆಭರಣಾದಿ ಕಾಣಿಕೆಗಳದೇವಿ ರಮೆಗೂ ನಿನಗೂ ಅರ್ಪಿಸಿದರು ಮುದದಿಂ 18ವನಜಭವ ರುದ್ರಾದಿಗಳು ಮುನಿವೃಂದವುಸನ್ನುತಿಸುತ ಸರ್ವ ಕೀರ್ತನವನ್ನುಆನಂದ ಭಕ್ತಿಯಂ ಶ್ರೀ ಲಕ್ಷ್ಮೀಯನ್ನು ನೋಡಿಧನ್ಯರಾದರು ನಮೋ ವಿಷ್ಣುಗೆ ಶ್ರೀರಮೆಗೆ 19ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ20- ಇತಿ ತೃತೀಯ ಅಧ್ಯಾಯ ಪೂರ್ಣಂ -ಚತುರ್ಥ ಅಧ್ಯಾಯಶ್ರೀ ಧನ್ವಂತರಿ ಹಾಗೂ ಮೋಹಿನಿವೃತ್ತಾಂತಸಾರಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪವಿಸ್ತಾರವಾಗಿ ಫೇಣವು ವ್ಯಾಪಿಸಿರುವಆ ಸಮುದ್ರದಿಂದ ವಾರುಣಿಯು ಬರಲಾಗಅಸುರರನು ತಮಗೇವೆ ಬೇಕೆಂದು ಕೊಂಡರುಈಶ ನೀ ಅವರಿಗೆ ಅನುಮತಿ ಕೊಡಲು 1ಸುಧೆಗಾಗಿ ಸಿಂಧುವ ಮತ್ತೂ ಮಥನಮಾಡೆಉದಿಸಿದನುಪರಮಅದ್ಭುತ ಪುರುಷನುಸುಂದರ ವಿಗ್ರಹ ಕಂಬುಗ್ರೀವ ಅರುಣೇಕ್ಷಣಅಂದ ಸುದೀರ್ಘ ಪೀವರದೋರ್ದಂಡ 2ಸಗ್ನಧರ ಶ್ಯಾಮಲಸ್ತರುಣ ಸರ್ವಾಭರಣ -ದಿಂದ ಒಪ್ಪುವ ರತ್ನಖಚಿತ ಕುಂಡಲವುಪೀತವಾಸ ಮಹಾಸ್ಕಂಧ ಸುಶುಭಾಂಗನುಸ್ನಿಗ್ದ ಕುಂಚಿತ ಕೇಶ ಸಿಂಹ ವಿಕ್ರಮನು 3ಅನುಪಮಾದ್ಭುತ ಈ ಮಹಾಪುರುಷ ಸಾಕ್ಷಾತ್ವಿಷ್ಣು ನೀನೇವೆ ಮತ್ತೊಂದವತಾರಆನಂದ ಚಿನ್ಮಾತ್ರ ಹಸ್ತದಲಿ ಹಿಡಿದಿರುವಿಪೂರ್ಣವಾಗಿ ಅಮೃತ ತುಂಬಿರುವ ಕಳಸ 4ಆಯುರ್ವೇದ ಮಹಾಭಿಷಕ್ ಶ್ರೀ ಧನ್ವಂತರಿ ನೀನುಕೈಯಲ್ಲಿ ಪಿಡಿದ ಪಿಯೂಷ ಕುಂಭವನುದೈತ್ಯರು ನೋಡಿ ಬಹು ಇಚ್ಛೈಸಿ ಅಪಹರಿಸೆಶ್ರೀಯಃಪತಿಯೇಸುರರುನಿನ್ನಲ್ಲಿ ಮೊರೆಇಟ್ಟರು5ದೇವತಾವೃಂದವಿಷ್ಣಮನಸ್ಸಿಂದಲಿದೇವವರೇಣ್ಯಹರಿನಿನ್ನ ಶರಣು ಹೋಗಲುಯಾವ ಮನಖೇದವೂ ಬೇಡ ಅನುಕೂಲವನೇಮಾಡುವಿ ಎಂದು ನೀ ಅಭಯವನ್ನಿತ್ತಿ 6ಅಮೃತಕಲಶವು ಎಂದು ನೆನೆದು ಆ ಅಸುರರುನಾಮುಂಚಿ(ಚೆ) ನಾಮುಂಚಿ (ಚೆ) ನೀ ಮುಂಚಿ (ಚೆ) ಅಲಲ್ತಮ್ಮೊಳಗೆ ಈ ರೀತಿ ಪರಸ್ಪರ ಕಾದಾಡೇನೀ ಮೋಹಿನಿ ರೂಪದಲಿ ತೋರಿ ನಿಂತಿ 7ಪರಮಅದ್ಭುತ ಅನಿರ್ದೇಶ್ಯ ಸ್ತ್ರೀರೂಪವಧರಿಸಿ ನಿಂತಿಯೋ ಆ ಅಸುರರ ಮುಂದೆಅರಳಿದಮಲ್ಲಿಗೆ ಮುಡಿದ ಕುಂತಳವುವರಾನನ ಕರ್ಣಕುಂಡಲಕಪೋಲ8ಸುಗ್ರೀವ ಕಂಠಾಭರಣ ಸುಭುಜಾಂಗದಸ್ಫುರತ್ ನವ ಯೌವನಗಾತ್ರ ಸೌಂದರ್ಯಉರದಿ ಪೊಳೆಯುವ ನವರತ್ನಪದಕಗಳುಭಾರಿ ಪೀತಾಂಬರವುದಿವ್ಯಒಡ್ಯಾಣ9ಸರ್ವಅವಯವಗಳು ಅನುಪಮ ಸುಂದರವುಸರ್ವಾಭರಣ ವಿಭೂಷಿತ ಸೊಬಗುಸರ್ವಾಕರ್ಷಕ ಮಂದಗತಿ ನೋಟವುಸರ್ವ ಆ ದೈತ್ಯರೊಳು ಕಾಮ ಪುಟ್ಟಿಸಿತು 10ಅಮರರೊಳು ದೈತ್ಯರೊಳು ಗಂಧರ್ವ ನರರೊಳುಈ ಮಹಾ ಸೌಂದರ್ಯರೂಪ ಕಂಡಿಲ್ಲಸುಮೋಹಿತ ದೈತ್ಯರು ಸುಧಾ ವಿಷಯದಲಿತಮಗೂ ಸುರರಿಗೂ ನ್ಯಾಯಮಾಡೆ ಕೋರಿದರು 11ಮಾಯಾಯೋಷಿದ್ವಪುಷಅಮೃತ ವಿನಿಯೋಗನ್ಯಾಯವೋ ಸರಿಯೋ ಸರಿಯಲ್ಲವೋನೀ ಹ್ಯಾಗಾದರೂ ಮಾಡಲಿಕೆ ಒಪ್ಪಿದರುಮಾಯಾಮೋಹವೃತ ಆ ದೈತ್ಯಜನರು12ಉಪವಾಸ ಸ್ನಾನ ಹೋಮಾದಿಗಳು ಆಗಿದೀಪಾವಳಿಗಳ ಹಚ್ಚಿಟ್ಟು ಮುದದಿತಪ್ಪದೇಮುಕ್ತಆಚರಣೆ ತರುವಾಯಸುಪವಿತ್ರ ಸುಧೆಗೆ ಕಾದರು ಸುರಾಸುರರು 13ಸುಧೆಗೆ ಕಾದಿರುವ ಸುರಾಸುರರ ನೋಡಿಸುಧಾ ಕಲಶ ನಿಜವಾದ್ದನ್ನ ಹಿಡಿದಿಮಂದಗಜ ಗತಿಯಲ್ಲಿ ಶೃಂಗಾರ ಸುರಿಸುತ್ತಬಂದಳು ಮೋಹಿನಿ ಚಂದ ನವಯುವತಿ 14ಅಸುರರು ಅರಿಯರು ಯೋಷಿದ್ ವಪುಹರಿಯೇವೇಆ ಸ್ಫುರದ್ರೂಪಿಣಿ ಮೋಹಿನಿ ಎಂತಅಸುರರು ಲೋಲುಪಮರು ಸುಧಾ ಅನರ್ಹರು ಎಂದುಶ್ರೀಶ ನೀ ನಿಶ್ಚಯಿಸಿದಿ ದೇವ ದೇವ 15ದೇವತೆಗಳ ಪಂಕ್ತಿ ಒಂದು ಸಾಲು ಮತ್ತುದೇವಶತೃಗಳ ಪಂಕ್ತಿ ಮತ್ತೊಂದು ಸಾಲುದೇವತೆಗಳಿಗೇವೇ ನೀ ಸುಧ ಉಣಿಸಿದಿದೇವಶತೃಗಳಿಗೆ ಸುಧಾ ಉಣಿಸಲಿಲ್ಲ 16ಕೂರ್ಮರೂಪದಲಿ ನೀ ಮಂದರಾಗಿರಿ ಪೊತ್ತುಅಮರರ ಸಹಿತಸಿಂಧುಮಥಿಸಿದಿ ಅಜಿತಅಮೃತ ಕಲಶವ ತಂದಿ ಶ್ರೀಶ ಧನ್ವಂತರಿಸುಮನಸಸುಧಾಪ್ರದ ಮೋಹಿನಿರೂಪ17ಹರಿಪಾದಾಶ್ರಿತರಾಗಿರುವ ಸುರರಿಗೆ ಅಮೃತಹರಿಪರಾನ್ಮುಖ ದ್ವೇಷಿ ದೈತ್ಯರಿಗೆ ಇಲ್ಲಸುರಾಸುರಗಣಕೆ ಸಮ ಕರ್ಮೋಪಕರಣಗಳುಆದರೂ ಯೋಗ್ಯತೆಯಿಂದ ಫಲ ಬೇರೆ ಬೇರೆ 18ಜ್ಞಾನಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ19- ಇತಿ ಚತುರ್ಥ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಬಂದದೆಲ್ಲವೊ ಬರಲಿ - ಗೋ -ವಿಂದನ ದಯೆ ನಮಗಿರಲಿ ಪಮಂದರಧರ ಗೋವಿಂದ ಮುಕುಂದನಸಂದರುಶನ ನಮಗೊಂದೇ ಸಾಲದೆ ? ಅ.ಪಆರು ಅರಿಯದಿರಲೆನ್ನ - ಮುರಾರಿಯು ವರದ ಪ್ರಸನ್ನತೋರುವ ದುರಿತದ ಬೆನ್ನ -ಭವಹಾರಿ ಕೃಪಾಂಬುಧಿ ಚೆನ್ನ ||ಶ್ರೀರಮಣನ ಶ್ರೀಚರಣ ಸೇವಕರಿಗೆಘೋರಯಮನು ಶರಣಾಗತನಲ್ಲವೆ ? 1ಅರಗಿನ ಮನೆಯೊಳಗಂದು ಪಾಂಡುವರನು ಕೊಲಬೇಕೆಂದುದುರುಳ ಕುರುಪ ಕಪಟದಲಿ ಹಾಕಿರುತಿರೆ ಆ ಕ್ಷಣದಲಿ ||ಹರಿಕೃಪೆಯವರಲ್ಲಿದ್ದ ಕಾರಣದುರಿತವೆಲ್ಲ ಬಯಲಾದುದಲ್ಲವೆ ? 2ಸಿಂಗನ ಪೆಗಲೇರಿದಗೆ - ಕರಿಭಂಗವೇಕೆ ಮತ್ತವಗೆ |ರಂಗನ ದಯವುಳ್ಳವಗೆ - ಭವಭಂಗದ ಭೀತಿಯ ಹಂಗೆ ||ವiಂಗಳ ಮಹಿಮ ಶ್ರೀಪುರಂದರ ವಿಠಲನಹಿಂಗದ ದಯೆವೊಂದಿದ್ದರೆ ಸಾಲದೆ ? 3
--------------
ಪುರಂದರದಾಸರು
ಬಂದೆವಯ್ಯ ಶ್ರೀಕೃಷ್ಣಮೂರ್ತಿ ನಿನ್ನ ಸುಂದರಚರಣಾರವಿಂದ ನೋಡುವುದಕ್ಕೆ ಬಂದೆ ಪಮಂದರೋದ್ಧರ ಅರವಿಂದ ನೇತ್ರಗೆ ನಮ್ಮೊ-ಳಿಂದು ಕೃಪೆಯ ತೋರಿ ಸಲಹೋ ಸಚ್ಚಿದಾನಂದ ಅ.ಪಭಾವಸಂವತ್ಸರ ಪೌಷ ಬಹುಳಮವಾಸೆಮಹಾ ದೃಢದಿ ಸಮುದ್ರವ ಸ್ನಾನಗೈದುಆ ವಡಭಾಂಡೇಶ್ವರದಿಂದ ಬಲರಾಮದೇವರ ಕಂಡು ನಾವೆರಗಿ ಕೈಮುಗಿದೀಗ ಬಂದೆ 1ಮಧ್ವಸರೋವರವೆಂಬ ತೀರ್ಥದಿ ಮಿಂದುಶ್ರದ್ಧೆ ಭಕ್ತಿಯೊಳ್ ನಿನ್ನ ಕಂಡು ಬಲಬಂದುಬದ್ಧಾಂಜಲಿಯ ನೀಡಿ ಸ್ಮರಿಸಿ ವಂದನೆಗೈದುಉದ್ಧರಿಸೆಂದು ವರವ ಬೇಡುವದನೀಗ ಬಂದೆ 2ಅಷ್ಟಾವಧಾನ ಸೇವೆಯೊಳು ನಿನ್ನನುಯತಿಶ್ರೇಷ್ಠರು ಪೂಜಿಸಿ ವರವ ನೀಡಿ ಕೊಟ್ಟಮಂತ್ರಾಕ್ಷತೆ ತೀರ್ಥ ಪ್ರಸಾದವ ಪಡೆದುನಮ್ಮಯ ಭವಕಷ್ಟ ನೀಗುವುದಕ್ಕೆ ಬಂದೆ 3
--------------
ಗೋವಿಂದದಾಸ
ಬಹಳ ಸಂತೋಷಿ ಭಕ್ತರು ಬಹಳ ಸಂತೋಷಿಬಹಳ ಸಂತೋಷಿ ಬಗಳ ಬಹಳ ಸಂತೋಷಿಪಕಾಂತಿಯೆಂಬ ಸತಿಯು ದೊರಕಲಿ ಬಹಳ ಸಂತೋಷಿಕಾಂತಿ ಎಂಬ ಕುಲಕುಡಿಬೆಳೆಯಲಿ ಬಹಳ ಸಂತೋಷಿ1ಕ್ಷಮೆಯು ಎಂಬ ಕ್ಷೇಮವು ಬೆಳೆಯಲಿ ಬಹಳ ಸಂತೋಷಿದಮೆಯು ಎಂಬ ದನಕರು ಹೆಚ್ಚಲಿ ಬಹಳ ಸಂತೋಷಿ2ಆತ್ಮ ಸಂತೋಷದಾ ಅಂಗಡಿ ನಡೆಯಲಿ ಬಹಳ ಸಂತೋಷಿಸ್ವಾತ್ಮಾನುಸುಖ ಸಾಮ್ರಾಜ್ಯ ದೊರೆಯಲಿ ಬಹಳ ಸಂತೋಷಿ3ಭೂತ ದಯೆಯ ಅಂಗಿಯ ತೊಡಿರಿ ಬಹಳ ಸಂತೋಷಿಖ್ಯಾತಿ ಎಂಬ ಕುಪ್ಪಸ ಹಾಕಿರಿ ಬಹಳ ಸಂತೋಷಿ4ಸೂಸಲಿ ಚಿದಾನಂದ ಕೃಪೆಯಿಂದಿಗೆ ಬಹಳ ಸಂತೋಷಿವಾಸವಮಾಡಲಿ ನಮ್ಮಲ್ಲಿ ಬಗಳೆ ಬಹಳ ಸಂತೋಷಿ5
--------------
ಚಿದಾನಂದ ಅವಧೂತರು
ಬಾರೊಭಾವಜನಯ್ಯಭಾನುಸಾಸಿರ ಮೈಯದೂರ ಮಾಡದಲೆನ್ನ ದುರಿತವಿದಾರಿ ಪ.ಕಡೆ ಮೊದಲಿಲ್ಲದ ಕೆಡಕು ಯೋನಿಗೆ ಬಿದ್ದುಕಡಲಶಾಯಿ ನೀಯೆಂದು ಒಡಲ್ಹೊಕ್ಕೆನಿಂದು 1ಕ್ಷಣಲವ ಮಾಳ್ಪಘಕೆಣಿಕೆ ಇಲ್ಲೆಲೆ ದೇವಘನಕೃಪೆಯಲಿ ನನ್ನ ಮನಮನೆಗಾಗಿ2ಮುನ್ನೆ ನಿನ್ನಯ ಮೊರೆಯ ಅನುಕರಿಸಿದವರಮನ್ನಿಸಿ ಪೊರೆದ ಪ್ರಸನ್ನವೆಂಕಟದಾತ3
--------------
ಪ್ರಸನ್ನವೆಂಕಟದಾಸರು
ಬಾರೋ ವೆಂಕಟಗಿರಿನಾಥ| ದಯ-ದೋರೈ ಭಕುತರ ಪ್ರೀತ ಪ.ಮಾರಪಿತ ಗುಣಹಾರ ಮಂದರ-ಧಾರ ದೈತ್ಯಸಂಹಾರ ಸುಜನೋದ್ಧಾರ ಮಮಹೃದಯಾರವಿಂದಕೆಬಾರೋ ಕೃಪೆದೋರೋ ವೆಂಕಟ ಅ.ಪ.ವೃಷಭಾಸುರನೊಳು ಕಾದಿ ಸಾ-ಹಸವ ಮೆರೆಸಿದ ವಿನೋದಿವಶಗೈದು ದೈತ್ಯನ ಶಿರವ ಕತ್ತ-ರಿಸುತಲಿ ನೀನಿತ್ತೆ ವರವವಸುಧೆಯೊಳಗಿಹ ಸುಜನರನು ಮ-ನ್ನಿಸುತಲಿಷ್ಟವನಿತ್ತು ಕರುಣಾ-ರಸದಿ ಸಲಹುವ ಬಿಸಜನಾಭ ಶ್ರೀ-ವೃಷಭಾಚಲವೊಡೆಯ ವೆಂಕಟ 1ಅಂಜನೆಯೆಂಬಳ ತಪಕೆ ಭಕ್ತ-ಸಂಜೀವನೆಂಬ ಶಪಥಕೆರಂಜಿಪ ಪದವಿತ್ತೆ ಮುದದಿ ಖಿಲ-ಭಂಜನಮೂರ್ತಿ ಕರುಣದಿ|ಮಂಜುಳಾಂಗ ಶ್ರೀರಂಗ ಸುರವರಕಂಜಭವವಿನುತಾದಿ ಮಾಯಾ-ರಂಜಿತಾಂಘ್ರಿ ಸರೋರುಹದ್ವಯಅಂಜನಾಚಲವೊಡೆಯ ವೆಂಕಟ 2ಶೇಷನ ಮೊರೆಯ ತಾಕೇಳಿಬಲುತೋಷವ ಮನಸಿನೊಳ್ತಾಳಿದೋಷರಹಿತನೆಂದೆನಿಸಿ ಕರು-ಣಾಶರಧಿಯ ತಾನೆ ಧರಿಸಿಶ್ರೀಶಹರಿಸರ್ವೇಶ ನತಜನ-ಪೋಷ ದುರ್ಜನನಾಶ ರವಿಶತ-ಭಾಸ ಕೌಸ್ತುಭಭೂಷವರಶ್ರೀ-ಶೇಷಾಚಲವಾಸ ವೆಂಕಟ 3ಮಾಧವವಿಪ್ರ ವಿರಹದಿ ಭ್ರಷ್ಟಹೊಲತಿಗಳನು ಸೇರ್ದ ಮುದದಿಸಾದರದಲಿ ನಿನ್ನ ಬಳಿಗೆ ಬರೆನೀ ದಯಾನಿಧಿ ಕಂಡು ಅವಗೆಶೋಧಿಸುತ ಪಾಪಗಳೆಲ್ಲವಛೇದಿ ಬಿಸುಡುತನಿಂದುವೆಂಕಟ-ಭೂಧರದ ನೆಲೆಯಾದ ನಾದವಿ-ಭೇದಬಿಂದು ಕಲಾದಿಮೂರುತಿ 4ಧನಪತಿಯೊಳು ತಾನು ಸಾಲಕೊಂಡಘನಕೀರ್ತಿಯಿಂದ ಶ್ರೀಲೋಲವನಿತೆ ಪದ್ಮಾವತಿಪ್ರೀತ ಭಕ್ತ-ಜನಸುರಧೇನು ಶ್ರೀನಾಥವನಧಿಶಯನ ಮುರಾರಿಹರಿಚಿ-ಧ್ವನಿನಿಭಾಂಗ ಸುಶೀಲ ಕೋಮಲವನಜನಾಭನೀಯೆನ್ನ ಕೃಪೆಯೊಳ-ಗನುದಿನದಿ ಕಾಯೊ ಕೃಪಾಕರ 5ಛಪ್ಪನ್ನೈವತ್ತಾರು ದೇಶದಿಂದಕಪ್ಪವಗೊಂಬ ಸರ್ವೇಶಅಪ್ಪ ಹೋಳಿಗೆಯನ್ನುಮಾರಿಹಣ-ಒಪ್ಪಿಸಿಕೊಂಬ ಉದಾರಿಸರ್ಪಶಯನ ಕಂದರ್ಪಪಿತ ಭಜಿ-ಸಿರ್ಪವರ ಸಲಹಿರ್ಪ ಕುಜನರದರ್ಪಹರಿಸುತ ಕಪ್ಪಕಾಣಿಕೆಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6ಚಾರುಚರಣತೀರ್ಥವೀಂಟಿ ನಿನ್ನೊ-ಳ್ಸಾರಿ ಬರುವ ಪುಣ್ಯಕೋಟಿಸೇರಿದೆ ಕೊಡು ಮನೋರಥವ ಲಕ್ಷ್ಮೀ-ನಾರಾಯಣನೆನ್ನೊಳ್ದಯವತೋರುನಿರತಸಮೀರಭವ ವರ-ದಾರವಿಂದದಳಾಕ್ಷ ತಿರುಪತಿವೀರ ವೆಂಕಟರಮಣ ಮದ್ಬಹು-ಭಾರನಿನ್ನದು ಪಾಲಿಸೆನ್ನನು7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬೇಡುವೆ ವರಗಳ | ಜೋಡಿಸಿ ಕರಗಳ |ನೀಡು | ಕೃಪೆಯೊಳ ಮಾಡದೆ ಮುನಿಸುಗಳ ||ಗೋಪಾಲ||ಬೇಡನು ಮರಗಳ ನೋಡುತ ತಪಗಳ ಮಾಡಲು ವರಗಳ |ನೀಡಿದೆ ಕರುಣದೊಳ್ ||ಶ್ರೀ ಲೋಲ|| 1ಜಪವನು ಮಾಡಲಾರೆ | ತಪವನು ಮಾಡಲಾರೆ |ಉಪವಾಸ ಮಾಡಲಾರೆ ||ಶಪಥವ ಮಾಡಲಾರೆನು || ನಿನ್ನೊಳು ನಾನೂ ||ದ್ರುಪಜೆಯುಟ್ಟ ಸೀರೆ | ಕುಪಿತಾತ್ಮ ಸೆಳೆವರೆ |ಉಪಕರಿಸಿದನ್ಯಾರೆ || ನಿಪುಣ ನೀ ದಯವ ತೋರೆ ||ಮುರಾರೆ 2ಹುಲುನರಜನ್ಮವೆತ್ತೀ | ಹುಲುಗಾವಲೊಳು ಸುತ್ತೀ |ಹುಲು ಗೋವರ್ಧನವೆತ್ತಿ | ಹುಲುಗೈದೆ ಸುರಶಕ್ತೀ ||ಗೊಲ್ಲರೊಳ್ ಅರ್ಥೀ || ಕಲುಷವ ಬಿಡಿಸುತ್ತಿ |ಫಲ್ಗುಣಸಾರಥಿ| ಸಲಹೆನ್ನ ಮನದರ್ಥಿ |ಚೆಲುವ ಗೋವಿಂದ ಮೂರುತಿ | ದಾಸರೊಳ್ ಪ್ರೀತಿ 3
--------------
ಗೋವಿಂದದಾಸ
ಭಂಡನಾದೆನು ನಾನು ಸಂಸಾರದಿ |ಕಂಡು ಕಾಣದ ಹಾಗೆ ಇರಬಹುದೆ ನರಹರಿಯೆ ಪಕಂಡ ಕಲ್ಲುಗಳಿಂಗೆ ಕೈಮುಗಿದು ಸಾಕಾದೆ |ದಿಂಢೆಗಾರರ ಮನೆಗೆ ಬಲು ತಿರುಗಿದೆ ||ಶುಂಡಾಲನಂತೆನ್ನ ಮತಿ ಮಂದವಾಯಿತೈ |ಪುಂಡರೀಕಾಕ್ಷನೀ ಕರುಣಿಸೈ ಬೇಗ1ನಾನಾವ್ರತಂಗಳನು ನಾ ಮಾಡಿ ಬಳಲಿದೆನು |ಏನಾದರೂ ಎನಗೆ ಫಲವಿಲ್ಲವು ||ಆ ನಾಡು ಈ ನಾಡು ಸುತ್ತಿ ನಾ ಮರುಳಾದೆ |ನೀನಾದರೂ ಕೃಪೆಯನಿಡು ಬೇಗ ಹರಿಯೇ 2ಬುದ್ಧಿಹೀನರ ಮಾತಕೇಳಿನಾ ಮರುಳಾದೆ |ಶುದ್ಧಿ ಇಲ್ಲದೆ ಮನವು ಕೆಟ್ಟು ಹೋಯ್ತು ||ಮಧ್ವನುತಸಿರಿಪುರಂದರವಿಠಲ ತತ್ವದ |ಸಿದ್ಧಿಯನು ದಯೆಗೆಯ್ದು ಉಳುಹು ನೀ ಎನ್ನ 3
--------------
ಪುರಂದರದಾಸರು
ಮಂಗಲಂತ್ರಿಪುರಸುಂದರಿ ಬನ ಶಂಕರಿಗೆ |ಮಂಗಲಂ ಸನ್ನಿಧಿಯ ಕೌಮಾರಿಗೆ |ಮಂಗಲಂ ಭ್ರಮರಾಂಬದೇವಿ ಚೌಡೇಶ್ವರಿಗೆ |ಮಂಗಲಂ ಶ್ರೀ ಲಕ್ಷ್ಮೀ ಮಹಾ ಮಾಯಿಗೆ | ಮಂಗಲಂ ಜಯಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಕಮಲದಳ ನಯನಿಗೆ ಕಮಠಾವಲೋಚನೆಗೆ ವಿಮಳವರವೀವ ಚೂಡಿದರಕೊರಳಿಗೆ |ದ್ಯುಮಣಿಶಶಿಕಿರಣದ ಶ್ರವಣ ಭೂಷಣಿಗೆ ಭ್ರಮರಾರಿ ನಾಸಿಕದಮಣಿಮೌಕ್ತಿಗೆ ಮಂಗಲಂ ಜಯಶುಭಮಂಗಲಂ1ಓಂಕಾರ ವದನಿಗೆ ವೇದಾಂತ ರದನಿಗೆ |ಪಂಕವಿರಹಿತದ ಚಿದ್ರಸ ಜಿವ್ಹೆಗೆ |ಅಂಕದಲಿ ಬ್ರಹ್ಮಪೀಯೂಷರಸ ಸುರಿವ ರುಣದಂಕುರಿಪಪವಳಮಣಿರುಚಿಯ ಧರಿಗೆ ಮಂಗಳ2ಕನಕಕಲಶ ತೋಳಿಗೆ ಕಲಶ ಕುಚಯುಗಳಿಗೆ |ಚಿನಕ ಪೂರ್ವಣ್ಯ ಕಂಚುಕದ ರುಚಿಗೆ ಸನಕಾದಿಗಳತಲೆಯ ಮೇಲಿಡುವ ಹಸ್ತಯುಗ ವನಜೆಶ್ರೀದೇವಿಯಂಗುಲಿಯ ನಖಕೆ ಮಂಗಳ3ಹಸ್ತದಾಭರಣಿಗೆ ಕೊರಳ ಭೂಷಣಿಗೆನಿಜನಿತ್ಯಮಂಗಳಿಗೆಹಾಟಕವರ್ಣಿಗೆ |ರತ್ನ ಬೈತಲಿಗೆ ವಜ್ರಾಣಿ ಪಾರಂಗಣಿಗೆ ನಿಜ |ಮುತ್ತಿನ ಬೊಟ್ಟು ಕುಂಕುಮದ ಫಣಿಗೆ ಮಂಗಳ4ಮರಗು ಮಲ್ಲಿಗೆ ಮುಡಿಗೆ ದುಂಡ ದಂಡಿಯತಲೆಗೆ ಕೊರಳ ಹಾರವ ತುದಿಯ ಕಾಲಿಂದಿಗೆ |ಪರಿಕ್ರಮದ ತಾಂಬೂಲವದನನಸು ನಗೆ ಮೊಗದಪರಿಮಳದ ಘನಸಾರತನುಲೇಪಿಗೆ | ಮಂಗಳ5ಪರಬ್ರಹ್ಮರೂಪಿಗೆ ಪರಾತ್‍ಪರ ಶಂಕರಿಗೆ ನಿರುಪಮಾನಂದಶ್ರೀ ಮಹಾಲಕ್ಷ್ಮಿಗೆ | ಶಿರಸ ಪೂಜೆಯ ಅರಳು ಮಲ್ಲಿಗೆಯುಕೃಪೆಯಿಂದಜರಿದುಉದರಿದವು ಗಿರಿದ್ವಾರದಲ್ಲಿ ||ಮಂಗಳ6
--------------
ಜಕ್ಕಪ್ಪಯ್ಯನವರು
ಮಂಗಲಾ ಸ್ವಸಿದ್ದ ಸಿದ್ಧಗೆ ಮಂಗಲಾ ಸ್ವಶುದ್ಧ ಶುದ್ಧಗೆ |ಮಂಗಲಾ ಸ್ವಬುದ್ಧ ಬುದ್ಧಗೆ ಸದ್ಗುರೇಂದ್ರನಿಗೆಜಯ ಮಂಗಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಮಧ್ಯಾವಸಾನವಿಲ್ಲದೆ ನಾದ ಬಿಂದು ಕಳಾ ವಿಹೀನಗೆ |ವೇದ ವೇದಾಂತದ ವಿಚಾರವ ತಿಳಿದ ನಿಶ್ಚಲಗೆ |ಸಾಧು ಸಂತ ಮಹಾನುಭವಿಗಳು ಸಾಧಿಸುವವರಬೋಧ ಬೋಧಗೆ | ವಾದ ಮನಬುದ್ಧ್ಯಾದಿ ಉದಯಾದಿಕವ ಲಕ್ಷಿಪಗೆ1ವಿಶ್ವತೋ ಮುಖ ವಿಶ್ವನೇತ್ರನು ವಿಶ್ವಪಾಣಿಪಾದಶೀರಿಷ | ವಿಶ್ವದೊಳಹೊರಗೇಕ |ಮಯನಾ ಸೂತ್ರನು ಮಣಿಯಂತೆ | ವಿಶ್ವವನ್ನುದ್ಧರಿಸ-ಲೋಸುಗ ವಿಶ್ವದೊಳಗವತರಿಸಿ ಸಾಕ್ಷಾದೀಶ್ವರನುಕಲಿಯುಗದಿ ವಿಶ್ವಾಮಿತ್ರ ಗೋತ್ರದೊಳು2ಪರಮಪುರುಷನು ಸ್ವಪ್ರಕಾಶನು ನರಾಕೃತಿಗೆತಾ ಬಂದು ಶಿಂಧಾಪುರದಿ ಗುರುನಾಥನು-ದರದಿ ಕರಣಿಕನ್ವಯದಿ | ಸರಸ ಲೀಲಾ ನಟನೆನಟಿಸುತ ತೆರಳಿ ಭ್ರಮರಾಪುರಕೆ ಸದ್ಗುರುವರಕೃಪೆಯತಾ ಪಡೆದು ಜಗದೊಳು ಖ್ಯಾತಿ ಪಡೆದಂಗೆ3ಅಂತು ಇಂತೆನಬಾರದಾ ನಿಶ್ಚಿಂತ ರೂಪನು ಬಳಿಕ | ಸಂತಮಹಾಂತನು ಸ್ತುತಿಸಲಾತ್ಮ ಸುಬೋಧ ಬೋಧಿಯಲಿ ||ಅಂತರಂಗದ ಭ್ರಮೆಯನಳಿದೇಕಾಂತ ಭಾವಿಕ ಭಕ್ತರಿಗೆ ವಿ-ಶ್ರಾಂತವಾದ ಸ್ವ-ಪದದೊಳುದ್ಧರಿಸಿದಾತಂಗೆ4ಸ್ಪರ್ಶ ದರ್ಶನದಿಂದೆ ಝಗ ಝಗ ಧರಿಸುತಲಿ ನಾನಾ ವಿ-ಚಿತ್ರಾಚರಣವನು ಚರಿಸುತ್ತ ಸದ್ಗುರು ರಾಯ ಕಡೆಯಲ್ಲಿ,ಪರಮಹಂಸಾಶ್ರಮವ ಕೈಕೊಂಡಿನಿತುಕೆಲಕಾಲದಲಿ ಶಿಂಧಾಪುರದಿಸ್ವ-ಸ್ಥಾನ ದೊಳು ಸಹಜಸಮಾಧಿಸ್ಥಳದಲ್ಲಿ5ಶಾಲಿವಾಹನ ಶಕೆಯ ಶತಕತಿ ಮೇಲೆ ಐವತ್ತಾಗೆ ಮೂರನು |ಕಾಲು ದಕ್ಷಿಣ ಅಯನ ಸಂವತ್ಸರ ವಿರೋಧಿಕೃತು |ಕಾಳ ದ್ವಿತಿಯಾಮಾಸ ಆಶ್ವೀನ ಮೇಲೆ ಶಿವ ಬುಧವಾರಕರ್ಣವಿಶಾಲಿ ಗರ್ಜಾ ಭರಣೆ ಪ್ರಥಮಪ್ರಹರಸಮಯದೊಳು6ಆ ಸುದಿನದೊಳಗಾ ಮಹಾ ಸಂತೋಷ ಕಾಲದಿಸುರರುಪೂಮಳೆ ಸೂಸುತಿರೆ ಬ್ರಹ್ಮಾದಿಕರು ಸ್ವಸುಖದಿನಲಿದಾಡಿ |ಏಸುಕಾಲದಸುಕೃತಫಲವಿದು ವಸ್ತುಕಣ್ಣಲಿ ಕಂಡೆವೈ ಉಲ್ಲಾಸವೆನುತ ಸಮಸ್ತ ಸುರಜಯ ಘೋಷ ಮಾಡುತಲಿ7ನಿಜ ಪರಂಧಾಮಕ್ಕೆ ಸದ್ಗುರು ಬಿಜಯಮಾಡಿದನೆಂಬ ಮಹಾಶಯ | ಸುಜನರೆಲ್ಲರುಬಲ್ಲರಿದನು ಲೋಕಕಿದು ಸತ್ಯ || ತ್ರಿಜಗವೇಪುಸಿಯೆಂಬ ಮಹಾತ್ಮಗೆ ತ್ಯಜನವೆಲ್ಲಿ ಉದಾರ ಮಹಿಮಗೆ |ನಿಜವು ಜಲ ದೊರೆತಿಲ್ಲ ತೋರಲು ಕರಗಲೆರಡಹುದೇ8ನಿರಾಕಾರಾಕಾರ ವ್ಯಕ್ತಿಗೆಚರಣಒಂದೆ ಭೇದ ಮಿಥ್ಯೆಯು |ಚರಣಯುಗಕೆರಡುಂಟೆ ಈಪರಿಶರೀರ ಶರಣಂಗೆ ||ಹಿರಿದ ಕಿರಿದ ದರದರ ಹಂಗನು ಹರಿದು ಬಿಸುಟುವಶ್ರೀ ಮಹಾಶಂಕರಾನಂದ ಸರಸ್ವತೀ ಯತಿವರ್ಯ ಗುರುವರಗೆಜಯ ಜಯ ಮಂಗಲಾ ಜಯ ಜಯ ಮಂಗಲಾ9
--------------
ಜಕ್ಕಪ್ಪಯ್ಯನವರು
ಮರೆಯದಿರು ಶ್ರೀ ಹರಿಯನು ಪ.ಮರೆಯದಿರು ಶ್ರೀ ಹರಿಯ ಮರಣಾತುರದಿ ಮಗನಕರೆದವಗೆ ಸಾಯುಜ್ಯವಿತ್ತ ನಾರಾಯಣನಸ್ಮರಣೆಯನು ಮಾಡುವರಚರಣ ಸೇವಕರಿಂಗೆಪರಮಪದವೀವ ಹರಿಯಅಪದೇವಕಿಯ ಬಂಧುವನು ಪರಿದವನ ಪೂತನಿಯಜೀವರಸವೀಂಟಿದನ ಮಾವನನು ಮಡುಹಿದನಪಾವನ ತರಂಗಿಣಿಯ ಪದನಖದಿ ಪಡೆದವನಗೋವರ್ಧನೋದ್ಧಾರನ ||ದಾವಾನಲನ ಪಿಡಿದು ನುಂಗಿದನ ಲೀಲೆಯಲಿಗೋವತ್ಸ ಗೋಪಾಲ ರೂಪವನು ತಾಳ್ದವನದೇವಮುನಿ ಮುಖ್ಯ ಸುರರಾರಾಧಿಸುವನ ಶ್ರೀ ಪಾದವನುಭಜಿಸು ಮನವೆ 1ಕಂಜಸಂಭವಪಿತನ ಕರುಣಾಪಯೋನಿಧಿಯಕುಂಜರನ ನುಡಿಕೇಳಿ ಒದಗಿದನ ರಣದೊಳು ಧ-ನಂಜಯನ ಜೀವವಂ ಕೃಪೆಯಿಂದ ಕಾಯ್ದವನಆಂಜನೇಯನ ನಾಳ್ದನ ||ರಂಜಿಸುವ ಕೌಸ್ತುಭವಿಭೂಷಣನ ಜಲಧಿಯಲಿನಂಜಿನೊಡೆಯನ ಮೇಲೆ ಮಲಗಿದನ ತಮದೊಳಗೆ ಪ -ರಂಜ್ಯೋತಿಮಯನಾಗಿ ಬೆಳಗುವನಶ್ರೀ ಚರಣಕಂಜವಂ ಭಜಿಸು ಮನವೆ 2ವಾರಿಧಿಯೊಳಾಡಿದನ ವರಗಿರಿಯ ತಾಳಿದನಧಾರಿಣಿಯ ತಂದವನ ದೈತ್ಯನನು ಕೊಂದವನಮೂರಡಿಯಲಳೆದವನ ಮೊನೆಗೊಡಲಿ ಪಿಡಿದವನ ನೀರಧಿಯಬಂಧಿಸಿದನ||ದ್ವಾರಕೆಯನಾಳ್ದವನ ತ್ರಿಪುರಗಳ ಜಗುಳ್ದವನಚಾರುಹಯವೇರಿದನ ಸಕಲ ಸುಜನರ ಪೊರೆವಧೀರ ಪುರಂದರವಿಠಲನ ಚರಣಕಮಲವನುನಂಬಿ ನೀ ಭಜಿಸು ಮನವೇ 3
--------------
ಪುರಂದರದಾಸರು
ಯಾಕಿಂತು ಬಳಲುವೆಯೊ |ಈ ಕಷ್ಟಗಳಲೀಗ |ಲೋಕ ಮಾತೆಯ ಭಜಿಸಿ |ಸುಖಿಯಾಗು ಮನವೆ |ಸಾಕು ಸುಡು ಸಂಸಾರ |ಬಿಡು ಮನವೆ ಅಹಂಕಾರ |ಇಂದ್ರಿಗಳಿಗುಪಚಾರಗೈದು ಬಂದೆ1ನೋಡುದೇವಿಯಚರಣ|ಮಾಡುದೇವಿಯ ಪೂಜೆ |ಓಡು ದೇವಿಯ ಸ್ಥಳಕೆ |ನೀಡು ದೇವಿಗೆ ಫಲ ಪುಷ್ಪ ನೈವೇದ್ಯ |ಹಾಡು ದೇವಿಯ ಚರಿತೆ ||ಆಡು ದೇವಿಯ ಮುಂದೆ |ಬೇಡು ದೇವಿಯೊಳ್ ಮುಕ್ತಿ |ಕೂಡು ದೇವಿಯ ಭಕ್ತ ಜನರ ತಂಡಾ2ಕೇಳು ದೇವಿಯ ಕಥೆಯ |ಪೇಳು ದೇವಿಯೊಳ್ ಸ್ಥಿತಿಯ |ಗೋಳು ದೇವಿಗೆ ತಿಳಿಸಿ |ಬೀಳು ದೇವಿಯ ಪಾದದ್ವಯಗಳಲ್ಲಿ ||ಬಾಳು ದೇವಿಯ ಕೃಪೆಯೊಳ್ |ತಾಳು ದೇವಿಯ ವ್ರತವ |ನಾಳೆ ದೇವಿಯ ಸೇರಿ | ಆಳುದೇವಿಯು ಕೊಟ್ಟ ಸೌಭಾಗ್ಯಪದವಿ3ದೇವಿ ಪದ ತೀರ್ಥಕುಡಿ|ದೇವಿ ಪ್ರಸಾದಪಡಿ|ದೇವಿ ಚರಣವನು ಹಿಡಿ |ದೇವಿ ಮೂರ್ತಿಗೆ ಪ್ರದಕ್ಷಿಣೆಯ ಮಾಡಿ ||ದೇವಿ ನಿರ್ಮಾಲ್ಯ ಮುಡಿ |ದೇವಿ ಗಂಧ ಮೈಗೆ ಬಡಿ |ದೇವಿ ಸೇವೆಮಾಡು|ದೇವಿ ನೆವೇದ್ಯ ಉಣಲಿಷ್ಟಪಡು ನೀನು4ಮನೆಯು ನಿನ್ನದು ದೇವಿ |ಧನವು ನಿನ್ನದು ದೇವಿ |ತನಯನಿನ್ನವ ದೇವಿ |ತನುಮನವು ನಿನ್ನದೆಂದರ್ಪಿಸಲು ದೇವಿ ||ದಿನ ದಿನವು ದೇವಿ ನಿನ್ನ |ಘನದಿಮನ್ನಿಸುವಳೈ | ಅನುಮಾನ ಬೇಡ |ಗೋವಿಂದದಾಸನ ಒಡತೀ|ಶ್ರೀ ಲಕ್ಷ್ಮೀದೇವಿ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ರಕ್ಷಿಸೋ ಲೋಕನಾಯಕನೆ-ನೀ ಎನ್ನ-ರಕ್ಷಿಸೋ ಲೋಕನಾಯಕನೇ ಪಎಷ್ಟೆಷ್ಟು ಜನ್ಮ ಕಳೆದೆನೋ ಇನ್ನೆಷ್ಟೆಷ್ಟು ಜನ್ಮ ಪಡೆವೆನೋ ||ಕಷ್ಟವ ಪಡಲಾರೆ ಕೃಷ್ಣ ಕೃಪೆಯನಿಟ್ಟುಇಷ್ಟವ ಪಾಲಿಸು ಇಭರಾಜವರದನೆ 1ಬಾಲತನದಿ ಬಹು ಬೆಂದೆನೋ ನಾನಾಲೀಲೆಯಿಂದಲಿಕಾಲಕಳೆದೆನೋ ||ಲೋಲಲೋಚನ ಎನ್ನ ಮೊರೆಯ ಕೇಳುತ ಬೇಗಜಾಲವ ಮಾಡದೆ ಪಾಲಿಸೈ ನರಹರಿ 2ಮುದುಕನಾಗಿ ಚಿಂತೆಪಡುವೆನೋ ನಾಕದಡು ದುಃಖವ ಪಡಲಾರೆನೋ ||ಸದರವಲ್ಲವು ಶ್ರೀಪುರಂದರವಿಠಲಮುದದಿಂದ ರಕ್ಷಿಸೊ ಖಗರಾಜಗಮನ 3
--------------
ಪುರಂದರದಾಸರು