ಒಟ್ಟು 772 ಕಡೆಗಳಲ್ಲಿ , 87 ದಾಸರು , 693 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳ ಮುದ್ದು ಕೃಷ್ಣನಿಗೆ ಜಯ ಮದನ ಜನಕ ಬಾಲ ಹರಿಗೆ ಪ. ಕಡಗೋಲ ನೇಣು ಪಿಡಿದಗೆ ಪಾಲ್ ಗಡಿಗೆ ಒಡೆದು ಇಲ್ಲಿ ಓಡಿ ಬಂದವಗೆ ಕಡಲ ತಡಿಯಲಿ ನಿಂತವಗೆ ಅಷ್ಟ ಮಡದಿಯರರಸನೆಂತೆಂಬ ಪುರುಷಗೆ 1 ಯತಿವರರಿಂದರ್ಚಿತಗೆ ಬಹು ಜತನದಿ ಭಕ್ತವರ್ಗಗಳ ಕಾಯ್ವನಿಗೆ ಯತಿ ಮಧ್ವರಾಯಗೊಲಿದಗೆ ನಿತ್ಯ ಚ್ಯುತ ದೂರವಾದ ಸರ್ವೇಶನೆಂಬುವಗೆ 2 ಗರುಡನ್ನ ಎಡದಿ ನಿಲಿಸಿದಗೆ ಬಲದಿ ಮರುತನ್ನ ನಿಲಿಸಿ ಕೊಂಡ್ಹರುಷಪಡುವನಿಗೆ ಕಿರಿದ್ವಾರದಿ ಮಧ್ವ ಉಳ್ಳವಗೆ ನಮ್ಮ ಸಿರಿಪತಿ ಗೋಪಾಲಕೃಷ್ಣವಿಠ್ಠಲಗೆ 3
--------------
ಅಂಬಾಬಾಯಿ
ಮಂಗಳಂ ಶ್ರೀರಂಗಗ ಮಂಗಳಂ ಇಂಗಿತ ಭಕ್ತರ ಅಂಗಸಂಗಾದವಗ ಪ ಸಿರಿತಳಕ ಮಂಗಳ ಕಾಲಿಯ ವರದನಾ ವರನಖಮಂಗಳ ಗಂಗೆ ಪಡಿದನಾ ಚರಣ ಕಮಂಗಳ ಅಹಿಲ್ಯ ಉದ್ಧಾರಗ ನೆರೆಜಂಘಗೆ ಮಂಗಳೆ ಶೊದಾನಂದನಾ 1 ತೊಡೆಗಳಿಗೆ ಮಂಗಳ ಗರುಡ ವಾಹನನಾ ನಡುವಿಗೆ ಮಂಗಳ ಧೃವ ಗೊಲಿದನ ಒಡಲ ಕಮಂಗಳ ಜಗವಳ ಕೊಂಬನಾ ಧೃಡ ನಾಭಿಗೆ ಮಂಗಳ ಬ್ರಹ್ಮ ಪಿತನಾ 2 ಉರ ಸಕ ಮಂಗಳ ಉಪಮನ್ಯು ಪ್ರೀಯನಾ ಸಿರಿವಕ್ಷಕ ಮಂಗಳ ಭೃಗು ರಕ್ಷನಾ ಕರಗಳಿಗೆ ಮಂಗಳ ಕರಿರಾಜ ವರದನಾ ಕೊರಳಿಗೆ ಮಂಗಳ ತುಳಸಿ ಧರನಾ 3 ಇದು ಶೃತಿಗೆ ಮಂಗಳ ಹನುಮನೇ ಕಾಂತನಾ ವದನಕ ಮಂಗಳ ವಿದುರ ಗೊಲಿದನಾ ಅದೇ ಫ್ರಾಣಕೆ ಮಂಗಳ ಪ್ರಲ್ಹಾದ ವತ್ಸಲನಾ ಮದನ ಮೋಹನನಾ 4 ಸಿರಸಕ ಮಂಗಳ ಫಣಿರಾಜಶಯನನಾ ದೊರೆತನಕ ಮಂಗಳ ಶ್ರೀ ಭೂರಮಣನಾ ಗುರುತನಕ ಮಂಗಳ ಉದ್ಬವತಾರಕನಾ ಕರುಣಿಗೆ ಮಂಗಳಾರ್ಜುನ ಬೋಧನಾ 5 ಪ್ರಭುಗೆ ಮಂಗಳ ಬಲಿ ವಿಭೀಷಣರ ಸ್ಥಾಪನಾ ಅಭಯಕ ಮಂಗಳಾಜಮೀಳ ಪಾಲನಾ ಅಭಿಮಾನಿಗೆ ಮಂಗಳಾ ಪಾಂಚಾಲಿಕಾಯಿದನಾ ಪ್ರಭೆಗೆ ಮಂಗಳಾ ರವಿ ಸೋಮಾತ್ಮಕನಾ 6 ಸಿರಿನಾಮಕ ಮಂಗಳ ನಾರದ ಪ್ರೀಯನಾ ಕ ಮಂಗಲ ಶಿವ ವಂದ್ಯನಾ ಗುರುವರ ಮಹಿಪತಿ ನಂದನಸಾರಥಿ ಬಿರದಿಗೆ ಮಂಗಳಾಂಬರೀಷ ನೊಡಿಯನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳವೆನ್ನಿ ಮುಖದಲೆ ಜಯಾಮಂಗಳಾರತಿಗಳ ಎತ್ತಿ ಕರದಲೇ ಪ ಮಂಗಳ ಶ್ರೀನಿವಾಸನಿಗೆ ಜಯಮಂಗಳ ತದ್ವಕ್ಷವಾಸಿ ಲಕ್ಷುಮಿಗೆಮಂಗಳ ಸರಸಿಜ ತನುಜಗೆ ಜಯಮಂಗಳ ಮೂರವತಾರ ಮೂರುತಿಗೆ 1 ಮಂಗಳ ವಾಣಿ ಭಾರತಿಗೆ ಜಯಮಂಗಳ ಗರುಡಹ ಪಾರ್ವತೀಶ್ವರಗೆಮಂಗಳ ಷಣ್ಮಾಹೇಶರಿಗೆ ಜಯ 2 ಮಂಗಳ ನಾರದ ಮುನಿಗೆ ಜಯಮಂಗಳ ರಾಘವೇಂದ್ರಾಯ ಯತಿಗೆಮಂಗಳ ದಾಸಮಂಡಳಿಗೆ ಜಯಮಂಗಳ ಇಂದಿರೇಶನ ಭಜಕರಿಗೆ 3
--------------
ಇಂದಿರೇಶರು
ಮಂಗಳಾರತಿಯು ನಮ್ಮ ಲಿಂಗವಿನುತಗೇ ನಮ್ಮ ಪ ಅಂಗನೆಯರೆಲ್ಲ ಕೂಡಿ ಅಚ್ಯುತಾಯೈ ನಮಃ ಎನ್ನಿ ಅ.ಪ ವೇದಕಾದಿಪ್ರಣವವೆಂದು ಬೋಧಿಸಿದನುಶಿವನುಉಮೆಗೆ ನಾದಬಿಂದುಕಳೆಯಗೂಡಿನ ನಾರಾಯಣನಿಗೆ ಮಂಗಳಂ 1 ಸುರರೂ ನರರೂ ಮುಖ್ಯಮಾದಾ ಗರುಡ ವಿಶ್ವಕ್ಸೇನರೆಲ್ಲ ಪರಮತತ್ವಮಹುದಿದೆಂದು ಯಿರುವೋತದ್ವಿಪಾದಗಳಿಗೆ2 ನಿರ್ವಿಕಲ್ಪ ನಿಶ್ಚಲಾತ್ಮ ಸರ್ವಲೋಕಸಾಕ್ಷಿಭೂತ ಗರ್ವಕಲನುಯೆಂಬೊ ನಾಮ ಉರ್ವಿಯೊಳಗೆ ವಹಿಸಿರುವಗೆ 3 ತತ್ವಗುರುವು ತುಲಶಿರಾಮ ಚಿತ್ಸುಖಾಂಶ ಶಿವಪ್ರಿಯನಿಗೆ 4
--------------
ಚನ್ನಪಟ್ಟಣದ ಅಹೋಬಲದಾಸರು
ಮಣಿ ಗರಿಗಾಮಿನಿ ಸುಖವಾಣಿ ಪ ಮರುಗು ನಾಗ ಸುರಗೆ ಜಾಜಿ ಸರಸ ಸೂಮಾಲೆ ಧರಿಸಿ ವರಶೃಂಗಾರಳಾಗುತಲಿ 1 ಅಗರು ಗಂಧ ಚಂದನವನು ಗಜ ಜೌವ್ವನವನು ಮಿಗೆ ಶ್ರೀ ಲೇಪಳಾಗುತಲಿ 2 ಶಾಮಸುಂದರನಂಘ್ರಿ ಕಮಲ ಭಾಮಿನಿನೀನು ಮನದಿ ಸ್ಮರಿಸೆ ಕೋಮಲಾಂಗಿ ಶಶಿವದನೆ 3
--------------
ಶಾಮಸುಂದರ ವಿಠಲ
ಮಧ್ವಮುನಿಯೆ ನಿನಗೆ ಎದ್ದು ಕರಗಳ ಮುಗಿವೆ | ಬುದ್ಧಿ ಪಾಲಿಸಿ ಎನ್ನ ಉದ್ಧರಿಸೊ ಗುರುವೇ ಪ ದುರುಳ ಪಾಮರ ಸಂಕರನೆಂಬುವನು | ದುರಾಚಾರಗಳು ಧರಿಯೊಳಗೆ ಕುಭಾಷ್ಯಗಳ ವ್ಯಾಪಿಸೀ | ಇರಲು ಉತ್ತಮ ಸಂಪ್ರದಾಯದಲ್ಲಿಪ್ಪ | ವರರು ಇರದಂತಾಗೆ ಸುಜನರು ಕೂಗೆ 1 ಮಲ್ಲ ಮಾಯಿಗಳ ಹಲ್ಲು ಮುರಿದ ಅಪ್ರತಿಮಲ್ಲ | ಇಳಿಯೊಳಗೆ ಶುದ್ದ ಭಾಷ್ಯ ರಚಿಸಿ ಲೇಸಾ | ಕಿಲಕಿಲನೆ ನಗುತ ಮೊಗ ಕಳೆವೇರುತಾ ವೇಗ | ನಳಿನನಾಭನ ಚರಣ ಮನದಲಿಟ್ಟ ಪರಣಾ 2 ಇಪ್ಪತ್ತು ಒಂದು ದುರ್ಮತದ ವರ ಕುವಾಕು | ಸರ್ಪನನ್ ಗರುಡ ಶೀಳಿದಂತೆ ಕೇಳಿ | ಇಪ್ಪ ಬಲು ಅಜ್ಞಾನ ಓಡಿಸಿ ಸುಜ್ಞಾನ | ತಪ್ಪದಲೆಗರದು ಸಂತರನೆಲ್ಲ ಪೊರೆದು 3 ಮಿಥ್ಯ | ಪಂಚವಿರಹಿತ ಹರಿ ಪರನೆಂದು ಸಾರೀ | ಚಂಚಲವ ಪರಿಹರಿಸಿ ಮರುತ ಮತ ಉದ್ಧರಿಸಿ | ಕಾಯ ಸುಖ ತೀರ್ಥರಾಯಾ4 ಸುರರಾದಿಗಳ ಮಣಿಯ ಆರಾರು ನಿನಗೆಣೆಯೇ | ಅರಸಿದರೆ ಕಾಣೆ ಹರಿ ಪದಗಳಾ ಆಣೆ | ಶಿರಿ ವಿಜಯವಿಠ್ಠಲನ್ನ ಭಜಿಸುವ ಯತಿರನ್ನ | ಶರಣಪಾಲಕ ಪೂರ್ಣಪ್ರಜ್ಞ ಗುಣಪೂರ್ಣ 5
--------------
ವಿಜಯದಾಸ
ಮಧ್ವಾಂತರ್ಗತ ಶ್ರೀನಿವಾಸಾ | ಕಾಯೊಸಿದ್ಧ ಮೂರುತಿ ವೆಂಕಟೇಶಾ ಪ ಇದ್ಧರೆಯೊಳು ನಿನ್ನ | ಹೊದ್ದಿದವರ ಪಾಪಬದ್ಧವಾಗದು ಅನ್ಯೋಪದ್ರವೆ ಮೊದಲಿಲ್ಲ ಅ.ಪ. ಭವ ಪರ ಕರ ಮೂರ್ತಿ ಪರಾಕು ಭವ ಸುಖನೇಕ ಪರಿಯಲಿ | ಬೇಕು ಪಾಲಿಸು ಏಕ ಭಕುತಿಯ 1 ಧರೆಗೆ ವೈಕುಂಠದ ಪರಿಯೇ | ತೋರಿಮರೆವಿ ಮಹಾತ್ಮ ಶ್ರೀಹರಿಯೇ ||ಸರಿ ನಿನಗಿದು ಹೊಸ ಪರಿಯೇ | ಭಾಗ್ಯಮರಿಯಾದ ಮರಿತಿ ನೀ ಧೊರೆಯೇ ||ಶಿರಿಯೆ ಮಂದಿರವಾಗಿ ಪರಿಪರಿ ರೂಪದಿಕರವ ಜೋಡಿಸಿ ಉಪಚರಿಯ ಮಾಡಲು ಇತ್ತಸರಸಿಜೋದ್ಭವ ಗರುಡ ನರಹರ | ಸುರಪಮುಖ ದಿವಿಜರು ಪರಾಕೆನೆಪರಮ ಪದ ಸಂಪದವಿದಲ್ಲದೆ | ಶಿರಿಯ ಭಾಗ್ಯದಿ ಪರವೆ ನಿನಗೇ 2 ಕರ್ಣ ಕುಂಡಲ ಕೌಸ್ತುಭ ಮಣಿ ಗಣ ಹಾರ ಶೃಂಗಾರ ||ಖಣಿಯೆ ಕಟಿಕರ ಕನಕಮಯ ಸುವಸನ ಕಾಂಚೀದಾಮ ಒಪ್ಪಲುಪ್ರಣತರ ಭಯಪ್ರದಕರ ಕುಂಭಿಣಿಗೆ ತೋರುವ ಅನಘ ವೆಂಕಟನೆ 3 ನಿತ್ಯ ಮೋದಾ | ವಾದಝಗ ಝಗಿಸುವ ದಿವ್ಯ ಪಾದಾ ||ಯುಗಳಾರಾಧನಿ ಪರರಾದಾ | ವರಿಗೆಅಗಣಿತ ಸುಖವೀವ ಶ್ರೀದಾ ||ಗಗನ ಭೂಮಿಪ ಗತಿಪ್ರದ ದಶರಥ ಪಂಚಮೊಗನಾದಿ ಭುವನದೊಳಣುಗ ಮೊದಲಾದ ||ಜಗದಿ ಬಹು ತಾಪಸಿಗಳ ಭಾವದಿ | ಸಿಗದೆ ಮೋಹಾದಿಗಳ ಪಾಶದಿ ಮುಗದಿ ಕರಗಳ ಪೊಗಳುವರಿಗೆ | ಬಗೆ ಬಗೆಯ ಕಾಮಗಳ ಹರಿಸಿದ 4 ಮಣಿ ದಿವಿಜ ಲ-ಲಾಮ ಭೂಡÀರ ವ್ಯಾಸ ವಿಠಲ ಯಾಮ ಯಾಮಕೆ ಎನ್ನ ಪಾಲಿಸೋ 5
--------------
ವ್ಯಾಸವಿಠ್ಠಲರು
ಮನದೊಳಗೆ ಮಸಣವನು ತುಂಬಿಕೊಂಡಿರಲು ಮನೆಯ ಚಂದದಿ ಮಾಡಿದರೇನಯ್ಯ ಪ ಮನೆಯೊಡೆಯ ತಾನು ಸನ್ನಡತೆಯಲ್ಲಿರದೆ ಮನೆಮಂದಿಯನು ದಂಡಿಸಲಾಗದಯ್ಯ ಮನೆತುಂಬ ಮನತುಂಬ ಜಾಜಿಪುರಿವಾಸನನು ಅನುದಿನವು ನುತಿಸಲು ಸುಖವುಂಟು ಕೇಳಯ್ಯ 1 ದೇವರು ಧರ್ಮವನು ದಾರಿಯಾಚೆಗೆ ಅಟ್ಟಿ ದೇವಾಲಯವ ಮನೆಯೊಳಗೆ ಮಾಡಲೇನು ಅವರಿವರ ನೋಟಕ್ಕೆ ಒಪ್ಪವಾದೀತಷ್ಟೆ ಯಾವ ಪುರುಷಾರ್ಥವದರಿಂದ ಹೇಳು 2 ಅವ್ವ ಕಷ್ಟವು ಬರಲು ಅವರಿವರು ಬಾರರು ಆ ವಾಸುದೇವನಲ್ಲದೆ ಮತ್ತೊಬ್ಬರಾಗರು ಭಾವ ಮೈದುನ ಗಂಡ ಹೆಂಡತಿ ಮಕ್ಕಳು ಇವರೆಲ್ಲ ದೇವ ಜಾಜಿಪುರೀಶನೊಕ್ಕಲು 3
--------------
ನಾರಾಯಣಶರ್ಮರು
ಮನುಜದನುಜ ರಿವರೆವೆ ನೋಡಿ | ದನುಜನು ದೈತ್ಯರೊಳೆನ ಬ್ಯಾಡಿ ಪ ಹರಿ ನೆನೆಯುತ ಹರಿಕಥೆಗಳ ಕೇಳುತ | ಹರಿ ಭಕುತಿಗೆ ಬೆರೆದವ ಮನುಜಾ | ನಿರುತ ಆಹಾರ ನಿದ್ರೆ ಚರಟ ಮಾತುಗಳಾಡಿ | ಬರಿದೆವೆ ದಿನಗಳೆವವ ದನುಜಾ 1 ಪರರ ಸದ್ಗುಣ ವಾಲಿಸಿಕೊಳುತಲಿ | ಸಕ | ಲರಿಗೆ ಮನ್ನಿಸುವವನೇ ಮನುಜಾ | ಗರುವ ಹಿಡಿದು ತನ್ನ ಹೊಗಳುತ ಅನ್ಯರ | ಬರಿದೆ ನಿಂದಿಸುವವನೆ ದನುಜಾ 2 ಪಥ | ಸರ್ಕನೆ ತಿಳಿದವ-ನೆವೆ ಮನುಜಾ | ಮೂರ್ಖತನ ಹಿಡಿದು ಸಾಧು ಸಂತರಲಿಕು | ತರ್ಕವ ಮಾಡುವವನೆ ದನುಜಾ 3 ಹುಟ್ಟಿದರಲಿ ಸಂತುಷ್ಟದಿ ಕವಳವ | ನಿಷ್ಠೆಗೆ ತಾರದವನೆ ಮನುಜಾ | ನೃಪರ ನಂಬಿ ಲಾಭಾ ಲಾಭ ಕೊಡುವ | ಸೃಷ್ಟೀಶನನು ಮರೆತವ ದನುಜಾ 4 ತಂದೆ ಮಹಿಪತಿ ಭೋಧವ ಮನದಲಿ | ತಂದು ಹರುಷವ ಪಡುವವ ಮನುಜಾ | ದಂದುಗ ಚಿತ್ತದಿ ಹೇಳಿದ ಮಾತಿಗೆ | ಸಂದೇಹ ಬಟ್ಟವನವ ದನುಜಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನ್ನಿಸೆನ್ನ ಮಧುಸೂದನ ಪ. ಮದನನಯ್ಯ ಮೋಹನಕಾಯಉನ್ನತಗುಣನಿಲಯ ಉಡುಪಿನ ಕೃಷ್ಣರಾಯ ಅ.ಪ. ಶ್ರುತಿಗಳ ತಂದೆ ಮುನ್ನ ಸುರಮುನಿಗಳ ಮನ-ಕತಿ ಹರುಷವ ಕೊಟ್ಟೆ ಅಗಣಿತಗುಣರನ್ನಯತಿಗಳ ಪಾಲಿಸಿದೆ ಮುಂದುವರಿವದಿತಿಜರ ಸೋಲಿಸಿದೆ ಈ ಮಹಿಯೊಳುಮತಿವಂತರ ಪೊರೆದೆ ಮಹಿಮೆಯಿಂದ ಮೆರೆದೆ1 ಅಚ್ಚಹಾರಶೋಭಿತ ಕಂಠ ಆಶ್ರಿತರಿಗೆ ನೀ ನಂಟಮೆಚ್ಚಿದ ಪಾರ್ಥನ ಮಿತ್ರನೆನಿಸಿದೆ ಸುಚರಿತ್ರಮೆಚ್ಚಿದ ನಿನ್ನಯ[ಭಕ್ತÀ್ತ]ವೈಕುಂಠದಮುಚ್ಚಳ ತೆಗೆಸಲು ಶಕ್ತ ಅಚ್ಚುತ ನಿನ್ನಅರ್ಚಿಸಿದವ ಕೃತಾರ್ಥ ಅವನೆ ಸರ್ವಸಮರ್ಥ2 ಎಂದೆಂದು ನಿನ್ನವರೊಳು ಎನ್ನ ಕೂಡಿಸೊ ಕೃಪಾಳುವಂದ್ಯ ಗರುಡನ ಸ್ಕಂಧವೇರಿ ಬಹ ಗೋವಿಂದತಂದೆ ನೀನೆ ತಾಯಿ ನೀನೆ ಹಯವದನಬಂಧು ನೀನೆ ಬಳಗ ನೀನೆ ಮತ್ತದರಿಂದಕುಂದುಮಾಡುವುದು ಬಿಡೋ ಕಂಡು ಕರುಣವ ಮಾಡೋ 3
--------------
ವಾದಿರಾಜ
ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮರೀಬೇಡ ಮಾಧವನ ಅರಿವಿಟ್ಟು ಭಜಿಸೋ ಸ್ಥಿರವಲ್ಲ ಧರೆಭೋಗ ಮೆಚ್ಚಿ ಕೇಡಬೇಡ ಪ ಕೂಡು ನಿಸ್ಸಂಗದೊಳು ಆಡು ಸುಸಂಗದೊಳು ಮಾಡು ನಿಜವರ್ತನಗಳು ಬೇಡು ಬಡತನದೊಳು ದೂಡು ದುವ್ರ್ಯಸನಗಳು ತೋಡು ದುರ್ಗುಣಗಳು ನೋಡು ನಿಜಭಕ್ತರೊಳು ನೀಡು ಮನ ಹರಿಯೊಳು 1 ಹೀರು ಮಹಗರುವವ ತೂರು ಮದ ಮತ್ಸರವ ತೂರು ದುಷ್ಕøತ್ಯವ ಕಾರು ಬಲುವಿಕಾರವ ಮೀರು ಧರೆಭೋಗವ ತೋರು ನಿಜಧ್ಯಾನವ ಏರು ಸನ್ಮಾರ್ಗವ ಸೇರು ಹರಿಪದವ 2 ಕುಂದುಗಳನೊರೆಯದಿರು ನಿಂದೆಗಳನಾಡದಿರು ಬಂಧನಕ್ಕೆ ಬೀಳದಿರು ಮಂದತ್ವದೂರು ತಂದೆ ಶ್ರೀರಾಮನಡಿಗೊಂದಿ ವೈಕುಂಠಪದ ಚಂದದಿಂ ಪಡಕೊಂಡಾನಂದದಲಿ ಸೇರು 3
--------------
ರಾಮದಾಸರು
ಮರುಳು ಮನವೇ ವ್ಯರ್ಥ ಚಿಂತಿಸುವಿಯಾಕೋ ಹರಿ ತಾನೇ ಕಾಯ್ವ ಮನ ದೃಢವಿರಲಿ ಬೇಕೊ ಪ ಎಲ್ಲಿ ನೋಡಿದರಲ್ಲಿ ಇರುವಾತಾ ಎಲ್ಲರನು ಪೊರೆವಾತಾ ಬಲ್ಲಿದನು ಬಲಿಯ ತುಳದಾತಾ ಸೊಲ್ಲು ಸೊಲ್ಲಿಗೆ ಬಂದು ಎಲ್ಲಿವನು ಪೇಳಿದರೆ ಕಲ್ಲಾಗುವನೇ ಸ್ವಾಮಿ ಪ್ರಲ್ಹಾದ ತಾತಾ 1 ಹಬ್ಬಿರುವ ಮಾಂಸಗಾಗರ್ಭದೊಳಿರುವಾಗ ಉಬ್ಬಸವ ಬಡುವಾಗ ಸಲಹಿದವರ್ಯಾರೋ ಅಬ್ಬರದ ನೋವಿನೊಳು ಒಬ್ಬನೇ ಬರುವಾಗ ಹೆಬ್ಬಾಗಿಲವ ನಿನಗೆ ತೋರಿದವರ್ಯಾರೋ 2 ವರದ ಹನುಮೇಶವಿಠಲನ ಚರಣವ ನಂಬು ಮೊರೆಯಾಗ್ವನಲ್ಲಾ ಹರಿ ಕರುಣ ಸಾಗರನೋ ಕರಿರಾಜ ಕರಿಯಲಾಕ್ಷಣಕೆ ಅವಸರದಲಿ ಗರುಡವಾಹನ ಕೃಷ್ಣ ಬರಲಿಲ್ಲವೇನೋ 3
--------------
ಹನುಮೇಶವಿಠಲ
ಮರೆಯುವರೆ ಮರೆಯುವರೆ ರಾಮರಾಯಾ | ಗುರುಗಳಾರಾಧನೆಗೆ | ಶಿರಿವಾರದೊಡೆಯಾ || ಪರಿವಾರ ಸಹಿತಾಗಿ ತೆರಳುವದು ನಿಶ್ಚಯಿಸಿ ಬರೆವದಕೆ ಕಾಗದವು ಸಿಗದ್ಹೋಯಿತೆ | ಭರದಿ ಬರಬೇಕೆಂದು | ಕರೆಕಳುಹದಕೆನ್ನ | ಚರನೋರ್ವ ನಾದರು ದೊರೆಯದಾದನೆ ಅಕಟ 1 ಕ್ರೋಧ ವಿರಹಿತರಾದ ಸಾಧುವರ್ಯರ ಸಮಾರಾಧ | ನೆಗೆ ನಾ ಭಾರವಾದೆನೇನೈ | ಆದರವು ತಗ್ಗಿತೇ | ಯುಗ್ಮಪಾದಪಶುವಾದಿನೇ 2 ಗುರುಕರುಣವೆಗ್ಗಳದ ಗರುವಿಕೆಯೋ ಕಾರ್ಪರ ನರಸಿಂಹರರ್ಚಕರಮೋಕ್ಷ ಬಲವೋ ಪರಮ ಸತ್ಪುರುಷರುಪದೇಶ ಶ್ರವಣದ ಮದವೋ | ಹರಿಕಥಾ ಪಾನದ ಹಂಕಾರವೋ 3 ಇರಬೇಕು ಸರ್ವದಾ ಸಕಲರಲಿ ಸಮದೃಷ್ಟಿ ಹಿರಿಯರಾದವರಲ್ಲಿ ಏಕನಿಷ್ಟಿ | ನಿರುತದಲ್ಲಿ ಸದ್ಗೋಷ್ಟಿ ಪರನಾಗಿ ಮನಮುಟ್ಟಿ ಹರಿಪಾದಸ್ಮರಿಪರಿಗೆ ಕೈವಲ್ಯಷಟ್ಟಿ 4 ಶ್ರೀ ಶಾಮಸುಂದರನ ದಾಸಕೂಟಸ್ಥರೊಳು ನಾ ಸಲ್ಲದವನೆಂದು ಧೃಡವಾಯಿತೇ | ಭೂಸುರವೇಷದಲಿ ಎಂದು ಉದಾಸೀನ ಮಾಡಿನ್ನು 5
--------------
ಶಾಮಸುಂದರ ವಿಠಲ
ಮರೆಯುವೆ ಏತಕೋ ಗರುಡಗಮನ ಯೆನ್ನಾ ದುರಿತವನಾರ್ಜಿಸಿ ಕೊರಗುವೆನ್ನನು ನೀ ಪ ಹದಿನೆಂಟು ಸಾಸಿರ ಉದರದೊಳುದಿಸುತೇ ಹೃದಯದಿ ನಿನ್ನ ನಾಮಾ ಒದಗಲಿಲ್ಲವೋ 1 ಧರೆಯೊಳು ನರಜನ್ಮ ಹಿರಿದೆಂದು ಪೇಳ್ವರು ತ್ವರಿತದಿ ನಿನ್ನ ನಾಮಸ್ಮರಣೆಯನೀಯದೆ 2 ಸೋಮಶೇಖರನುತ ಕಾಮಜನಕ ಹರಿ ಪ್ರೇಮದಿ ಪಾಲಿಸೆನ್ನ ರಾವiದಾಸಾರ್ಚಿತಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್