ಒಟ್ಟು 693 ಕಡೆಗಳಲ್ಲಿ , 94 ದಾಸರು , 583 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಠಲಾ ಎನ್ನಿರೊ ಸುಜನರೆಲ್ಲಾ ಪ ವಿಠಲಾ ಎಂದಾರೆ ಸುಟ್ಟುಹೋಗೊದು ಪಾಪ ಅ.ಪ ಪ್ರಾತಃ ಕಾಲದೊಳು ಸ್ನಾನಾದಿಕರ್ಮ ಮುಗಿಸೀವಿಠಲಾ.... ವಾತದೇವನ ದ್ವಾರ ಅರ್ಪಿಸುತ್ತಾ ನೀವು | ವಿಠಲಾ....1 ಗುರುಗಳಲ್ಲಿಗೆ ಪೋಗಿ ವಂದಿಸಿ ಮೆಲ್ಲಾನೆ ವಿಠಲಾ.... ಮರÀುತಮತದ ಸಚ್ಛಾಸ್ತ್ರಗಳ ನೋಡುತಾ ವಿಠಲಾ.... 2 ಪಂಚÀಭೇದ ಪ್ರಾಪಂಚ ಸರ್ವವು ತಿಳಿದು ವಿಠಲಾ... ಪಂಚಬಾಣನಯ್ಯ ಪಂಚರೂಪದಿ ತೋರುವಾ ವಿಠಲಾ.... 3 ಪ್ರಾರಂಭಮಾಡಿ ಪರಮೇಷ್ಠಿ ಪರಿಯಂತ ವಿಠಲಾ.... ಶ್ರೀಪ್ರಣವ ಪ್ರತಿಪಾದ್ಯಗಿವರು ಪ್ರತಿಬಿಂಬರೆಂದು ವಿಠಲಾ.... 4ಮಾತುಮಾತುಗಳೆಲ್ಲಾ ಶ್ರೀಹರಿಸ್ತೋತ್ರವೆಂದು ವಿಠಲಾ.... ಆತುಮಾಂತಾರಾತ್ಮನೆಂದು ಕೂಗುತ ಒಮ್ಮೆ ವಿಠಲಾ.... 5 ತೀರ್ಥಕ್ಷೇತ್ರಗಳಿಗೆ ಪೋಗಿ ಬರುವಾಗ ವಿಠಲಾ.... ಪಾರ್ಥಸಖನ ಪ್ರೇರಣೆಯಿಂದ ಮಾಡಿದೆವೆಂದು ವಿಠಲಾ.... 6 ನಂಬೀದ ಜನರೀಗೆ ಬೆಂಬಲನಾಗುವ ವಿಠಲಾ.... ಸಂಭ್ರಮದಿಂದಾ ಸಂರಕ್ಷಿಸುವನೆ ಇವನೂ ವಿಠಲಾ.... 7 ಕಂಚಿಕಾಳಾಹಸ್ತಿ ಶ್ರೀರಂU ಮೊದಲಾಗಿರುವ ವಿಠಲಾ... ವಂಚನೆಯಿಲ್ಲಾದೆ ಭಜಿಸಿದವರ ಪೊರೆವಾ ವಿಠಲಾ.... 8 ಪಂಚಪ್ರಾಣಾರಲಿನಿಂತು ಕಾರ್ಯಮಾಳ್ಪ ವಿಠಲಾ.... ಕರ್ಮ ಇವನಿಂದ ನಾಶವೆಂದು ವಿಠಲಾ.... 9 ಊಧ್ರ್ವಪುಂಡ್ರಗಳು ದ್ವಾದಶನಾಮ ಇಡುವಾಗ ವಿಠಲಾ.... ಶುದ್ಧನಾಗೀ ಶುಭ್ರಹೊಸ ವಸ್ತ್ರ ಹೊದುವಾಗ ವಿಠಲಾ..... 10 ಪಂಚಮುದ್ರೆಗಳಲಿ ಪಂಚರೂಪದಿ ಇರುವ ವಿಠಲಾ... ನಿರ್ವಂಚನಾಗಿ ಧರಿಸಿದವರಿಗೊಲಿವಾ ವಿಠಲಾ... 11 ಪರಿಯಂತ ವಿಠಲಾ... ವೇದೈಕವೇದ್ಯ ವಿಶ್ವಾಮೂರ್ತಿ ಕಾರ್ಯಗಳೆಂದು ವಿಠಲಾ.... 12 ಚೇತನಾ ಚೇತನ ಜಡದೊಳಗೆ ನೀವು ವಿಠಲಾ... ಪ್ರೀತಿಯಿಂದಾಲಿ ಪೂಜೆಮಾಡಿದವರಾಗೆ ಒಲಿವ ವಿಠಲಾ.... 13 ಪರಿ ಚಿಂತಿಸಿ ವಿಠಲಾ... ಶಾರೀರದೊಳಿÀರುವ ಪ್ರಾಜ್ಞನಲಿ ಕೂಡಿಸಿ ವಿಠಲಾ.... 14 ಮಧ್ವಾಂತರ್ಯಾಮಿಯಾಗಿ ಉಡುಪಿಯಲ್ಲಿ ನಿಂತ ವಿಠಲಾ... ಕರ್ತು ವಿಠಲಾ..... 15
--------------
ಮುದ್ದುಮೋಹನವಿಠಲದಾಸರು
ವಿಧ---------- ಪ ಹದಿನಾರು ಸಾವಿರ ಹೆಂಡರು ಸಾಲು ---- -------------------------- ಶರಣಾರ್ಥಿಗಳ------ನಿನ್ನ ಬಿರುದ ಪರಮ ಕೃಪಾರಸ ತೋರದೇನೋ ಸಿರಿನಿನ್ನ ಕುಚದ ---- ಎರವು ಇಲ್ಲಿದೆ---------ಮತಿಯಲಿ ತಿರುಗುತ-----ದಿ ಪರಮ ಪುರುಷನು ಸುಖಿಭವನಗಳ’ 1 ಅಷ್ಟಧರ್ಮಗಳ ಬಿಟ್ಟೆನೊ ಅಸುರರ ಬಾಧೆಗೆ ಅಂಜಿದೆನೊ ಕ್ರೋಧಗೊಂಡೆ ಏನೋ ಮೊಸರು ಬೆಣ್ಣೆಯಷ್ಟಿಲ್ಲ -----ಬರುವನ ಕೂಡಿಕೊಂಡೆಲ್ಲರು------ಹಿಡಿದು ಕಟ್ಟಿ ಹಾಕಿದರೇನೊ 2 ಮಹಿಮನಾದ----ತ್ತಿಗಳೆಲ್ಲ ತರವಲ್ಲೆ ಪಂಥಗಳಾಡುತ ಕಾಂತೆರಕೂಡಿ ಶ್ರೀಕಾಂತ `ಹೊನ್ನಯ್ಯ ವಿಠ್ಠಲಂತರಂಗದಲಿ ನಿಂತೂ ಬಾರದ 3
--------------
ಹೆನ್ನೆರಂಗದಾಸರು
ವಿಧಿ ನಿಷೇಧವು ನಿನ್ನ ಸ್ಮರಣೆ ವಿಸ್ಮರಣೆಯ- ಲ್ಲದಲರಿಯರೇನೊಂದು ಹರಿಭಕ್ತರು ಪ ಮಿಂದದ್ದೆ ಗಂಗಾದಿ ತೀರ್ಥಗಳು ಸಾಧುಗಳು ಬಂದದ್ದೆ ಪುಣ್ಯ ಕಾಲವುಗಳು ಅವರು ನಿಂದದ್ದೆ ಗಯ ವಾರಣಾಸಿ ಕುರುಕ್ಷೇತ್ರಗಳು ಬಂದು ಪೋಗಲು ಅದುವೆ ರಾಜಬೀದಿ 1 ಕಂಡು ಕಂಡದ್ದೆಲ್ಲ ಕಮಲನಾಭನ ಮೂರ್ತಿ ಮಂಡಿಸಿದ ಶಯನ ದಂಡಪ್ರಣಾಮ ತಂಡತಂಡದ ಕ್ರಿಯೆಗಳೆಲ್ಲ ಹರಿ ಪೂಜೆಗಳು ಮಂಡೆ ಬಾಗಿಸಿ ಸಮಿಪ ಶರಣ ಜನಕೆ 2 ನಡೆವ ನಡೆಯೆಲ್ಲ ಲಕ್ಷ ಪ್ರದಕ್ಷಿಣೆ ಮತ್ತೆ ನುಡಿವ ನುಡಿಯೆಲ್ಲ ಗಾಯಿತ್ರಿ ಮಂತ್ರ ಒಡೆಯ ಶ್ರೀಕಾಂತನ್ನ ಅಡಿಗಡಿಗೆ ಸ್ಮರಿಸುತಿಹ ದೃಢ ಪ್ರಜ್ಞರೇಂಗೈಯ್ಯಲದುವೆ ಮರ್ಯಾದೆ 3
--------------
ಲಕ್ಷ್ಮೀನಾರಯಣರಾಯರು
ವಿಶೇಷ ಎಂಥ ರಾಸಿಯೊ ಶ್ರೀಕಾಂತನ ಮುಖಸೂನು ನಿಂತು ಏರುವೋ ರಾಶಿನ್ಯಾವುದೊ ಇದನೆಲ್ಲರು ಪೇಳಿರಿ 1 ರಂಗ ಮೂರುತಿ ಸುತನ್ವೊೈರಿ ಏರಿಪೋ ಹೆಸ- ರೆಂದುಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 2 ಹರಿಸುತನಟ್ಟುಳಿಯಿಂದ ಪುಟ್ಟುವುದೇನು ಪರಮ ಗುಪ್ತದ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 3 ಇರುಳು ಹಗಲು ಮೈಯ್ಯ ತೊಳೆಯುತ ಮಣ್ಣಿನ ಲ್ಲೊ ್ಹರಳುತಿಪ್ಪುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 4 ಒದ್ದು ಮಾತಂಗನ ಗದ್ರಿಸ್ತಮುರಿದ ಪ್ರ- ಸಿದ್ಧನೆನಿಪ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 5 ಜೋಡು ವಂಶುದ್ಧಾರ ಮಾಡುವುದೀ ರತ್ನೆಂ- ದಾಡಿಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 6 ಜಗದೊಳಗೆಲ್ಲ ಭಾರಕರ್ತನಾಗಿ ಏರಿಸಿಳುಹೋ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 7 ಅಂಧಕಾರದಲಿದ್ದು ಬಂದ ಜನರ ಮುಟ್ಟಿ ದುಂದೆಬ್ಬಿಸುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 8 ದೊರೆಸುತ ತಾ ಬಂದು ಸರುವ ಜನರ ಮುಂದೆ ಮುರಿದುಬಿಷ್ಠುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 9 ಭರದಿ ಬಂದು ಕಾಲಕೆದರುತ ತನ್ನ ್ಹಲ್ಲು ಮುರಿಸಿಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 10 ರುಂಡ ಮಾಲೆಗಳೆಲ್ಲ ಗುಂಡಿನಂಥ ದೇಹ- ಕ್ಕ್ಹೊಂದೇರಿಳಿವೊ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 11 ಹತ್ತರೊಳಗೆ ಒಂಬತ್ತು ಬಿಟ್ಟ ಹೆಸ ರಿಟ್ಟುಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 12 ಯೋಚನೆ ಮಾಡಿ ಆಲೋಚಿಸಿ ನೋಡರನೇಕ ಮೂಢಜ್ಞಾನಿಗೆ ತಿಳಿವೊದೆ ಇದನೆಲ್ಲರು ಪೇಳಿರಿ 13 ಈಸು ರಾಶಿಗಳು ಭೀಮೇಶಕೃಷ್ಣನ ದಯ- ದೀಕ್ಷಣದಲ್ಲೆ ತಿಳಿದು ಪೇಳಿ ಇದನೆಲ್ಲರು ಪೇಳಿರಿ 14
--------------
ಹರಪನಹಳ್ಳಿಭೀಮವ್ವ
ವಿಶೇಷ ಸಂದರ್ಭದ ಹಾಡುಗಳು ರಂಗನತೇರಿಗೆ ಬನ್ನಿರೋ ತೆಂಗು ಹೂ ಹಣ್ಣುಗಳ ತನ್ನಿರೋ ಬಂಗಾರದ ಗಿರಿಯಪ್ಪ ಎನ್ನಿರೋ ರಂಗ ಪರ್ಸಾದವ ಕೊಳ್ಳಿರೊ 1 ತೆಂಗಿನಮರ್ದುದ್ದ ತೇರೈತೆ ಅಲ್ಲಿ ರಂಗಿನ ಬಾವುಟ ಹಾರೈತೇ ಸಿಂಗಾರದಬಟ್ಟೆಯೇರೈತೇ ಹಂಗೂ ಹಿಂಗೂ ಜನ ಸೇರೈತೇ 2 ಬಾಳೆಕಂಬಗಳನು ಕಟ್ಟವ್ರೇ ತೋಳುದ್ದ ಹೂಸರ ಬಿಟ್ಟವ್ರೇ ತಾಳಮ್ಯಾಳ್ದೋರೆಲ್ಲಾ ನಿಂತವ್ರೇ ಬಾಳತುತ್ತೂರ್ಗೋಳನೂತ್ತವ್ರೇ 3 ತೇರಿನ ಗದ್ದುಗೆ ಬಂಗಾರ ತೋರಗಲ್ದಪ್ಪ ಅಲಂಕಾರ ಹಾರುವರ ಬಾಯಲ್ಲಿ ಓಂಕಾರ ರಂಗಪ್ಪಗಾಗೈತೆ ಸಿಂಗಾರ 4 ಭಟ್ಟರು ಮಂತ್ರವ ಹೇಳ್ತವ್ರೆ ಕಟ್ಟುನಿಟ್ಟಾಗಿ ನಿಂತವ್ರೇ ಬಟ್ಟಂದ ಹೂಗೊಳ ಹಾಕ್ತವ್ರೇ ಸಿಟ್ಟಿಲ್ಲದೆ ರಂಗ ನಗತವ್ನೇ 5 ಇಂಬಾಗಿ ಹೂರ್ಜಿಯ ಹಿಡಿದವ್ರೆ ದೊಂಬರೆಲ್ಲ ಕುಣಿತವ್ರೆ ಹಿಂಬದಿಯಲಿ ತೇರ ನಡೆಸವ್ರೇ 6 ಹಣ್ಣು ಜನ್ನವ ತೇರಿಗೆಸಿತಾರೆ ತಣ್ಣನೆ ಪಾನಕ ಕೊಡುತಾರೆ ಸಣ್ಣೋರೆಲ್ಲ ಕೈಮುಗಿತಾರೆ, ಹಣ್ಣು ಕಾಯ್ಗಳ ಗಾಲಿಗಿಡುತಾರೆ7 ತಕ್ಕೋ ಹಣ್ಕಾಯ ಎಂಬೋರು ಕೆಲವರು ನಕ್ಕು ಕುಣಿಯುವರೆಲ್ಲ ನೂರಾರು ಜನರು 8 ರಂಗಪ್ಪನ ತೆಪ್ಪ ತೇಲುತಿವೆ ಸಂಗೀತ ವಾದ್ಯ ಕೇಳುತಿವೆ ರಂಗುವiತಾಪು ಹೊಳೆಯುತಿವೆ ಮಂಗಳಾರತಿ ದೀಪ ಕಾಣುತಿವೆ 9 ಜೋಮಾಲೆ ಸರಗಳು ಹೊಳೆಯುತಿವೆ ನಾಮ ಮಂತ್ರಗಳೆಲ್ಲ ಮೊಳಗುತಿವೆ 10 ರಂಗಿನದೀಪ ಉರಿಯುವುದಣ್ಣ ಮಾಂಗಿರಿರಂಗನೆ ಬಲುಸೊಗಸಣ್ಣ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಶ್ವ ಜ್ಞಾನರೂಪವಿಶ್ವದೊಳ ಹೊರಗು ನೀನಲ್ಲದೆ ಬೇರೆವಿಶ್ವನಾಟಕ ಸೂತ್ರಧಾರರುಂಟೆ ಹರಿಯೆ ಪ ಮುಕುಟ ಮಂಡೆಯಲಿ ಧ್ರುವಲೋಕ ಭುವನಾವಳಿಯುನಿಖಿಲ ಶ್ರುತಿ ನವರತುನ ನಿಟಿಲದಲ್ಲಿಮುಖದಲಿಂದ್ರರು ಅಗ್ನಿ ಸಪ್ತ ಋಷಿಗಳು ದ್ವಿಜರುಮುಖದ್ವಾರದುಸುರಿನಲಿ ಶ್ರುತಿ ಮರುತರುದೃಕುಯುಗದಿ ರವಿ ಶಶಿಯು ಎವೆಯಲ್ಲಿ ನಕ್ಷತ್ರಪ್ರಕಟ ಜಿಹ್ವೆಯ ವಾಣಿ ಕರ್ಣದ್ವಯದಿವಿಕಟ ಕಿವಿಯಲಿ ಅಶ್ವಿನಿದೇವತೆಗಳೆಲ್ಲಸಕಲ ಧರ್ಮವ ಪಡೆದೆಯೆಲೊ ಹರಿಯೆ 1 ಸ್ಕಂಧದಲಿ ಅತಿಥಿಗಳು ವಿದ್ಯಾತತಿಗಳು ಮಹಾಚಂದದರಸುಗಳು ಭುಜ ತೋಳಿನಲ್ಲಿಮುಂದುರದಿ ವಿಷ್ಣು ಹರ ಬ್ರಹ್ಮ ಸಹಿತುದರದಲಿಹಿಂದಿನ ಮಗ್ಗುಲಲಿ ಮನುಮುನಿಗಳುಮುಂದಿನ ಮಗ್ಗುಲಲಿ ಗಿರಿನಿಚಯಂಗಳುಸಂಧಿಯಲಿ ಮಕರಂದ ದೇವತೆಗಳುಮುಂದೊರೆದಿಹ ರೋಮಕೂಪದಗ್ರದಳತೆಯುವೃಂದಗಳ ಶೋಭಿಪ ರೀತಿಯ ಪಡೆದೆಯೆಲೊ ಹರಿಯೆ2 ಬೆನ್ನಿನಲಿ ವಸುನಿಕರ ಸ್ಮರನು ಲಿಂಗದಲಿ ಈ ಭು-ವನವೆಲ್ಲವು ಚೆಲುವ ನಾಭಿಯಲ್ಲಿಮುನ್ನ ಕೈಯಲಿ ವಿಶ್ವದೇವತೆಗಳು ವೈಶ್ಯಉನ್ನತ ಜಾನುವಿನ ಸಕ್ತಿಯಲಿಭಿನ್ನ ನದಿಗಳು ಸನ್ಮೋಹನ ಶಕ್ತಿ ಪ್ರ-ಸನ್ನ ಪಾದಾಬ್ಜದಿಂ ಶೂದ್ರರುನಿನ್ನ ಅವಯವದಲ್ಲಿ ಸಕಲವಂ ಪಡೆದ ಪ್ರ-ಸನ್ನ ಕಾಗಿನೆಲೆಯಾದಿಕೇಶವರಾಯ 3
--------------
ಕನಕದಾಸ
ವಿಶ್ವಪತಿ ಇಂದುಶೇಖರ ಸುರಮಸ್ತಕಮಣಿ ಮನ್ಮಥರಿಪುವೆ ವಿಸ್ತರಿಪೆನು ನಿಮ್ಮ ಮಹಿಮೆಯ ಜಗದೊಳು ಸ್ವಸ್ಥವಾಗಿ ಪ. ಎಲ್ಲಿ ನೋಡಲು ಲಿಂಗಮಯವು ಅಲ್ಲಿಗಲ್ಲಿಗೆ ತೀರ್ಥಯಾತ್ರೆಯು ಸೊಲ್ಲು ಸೊಲ್ಲಿಗೆ ಹರಮಹಾದೇವಂತೆಲ್ಲರು ಸ್ತುತಿಸುವರು ಬಲ್ಲವರು ಇದು ಭಾವಿಸಿ ಕಾಶಿಗಿಂತ ಮಹಿಮೆ ವೆಗ್ಗಳವಹುದೆನುತ ಸುಲಕ್ಷಣೆ ಶಿವಗಾತ್ರೆ ಶಿವನವಲ್ಲಭೆ ತ್ರಾಸಿನಲಿ ತೂಗುವಳು 1 ನಾಟಕದಿ ನಾನಾಜನ್ಮದಿ ಬಂದು ದಾಟದಂತರವನಳಿದನು ಚಂದ್ರ ಕೋಟಿತೀರ್ಥದಿ ಮಿಂದು ಮೈಯ ಕೋಟಲೆ ಸಂಸಾರಗಳೆಲ್ಲ ದಾಟಿದೆನು ಇನ್ನು ಜನನಮರಣಗಳೆಂಬೋಪಾಯಗಳಿಲ್ಲವು 2 ಕೂಪಾರದಲಿ ಬಂದು ಸೂಸುವ ತೆರೆಗಳು ಅಭ್ರದಿಂದಲಿ ಅಪ್ಪಳಿಸಲು ಉನ್ನತ ಭ್ರಮೆಗೊಂಡಿದ್ದ ಕರ್ಮದ ಬಲಿಗಳು ಮಿಗಿಲಾದವು ಉರ್ವಿಯೊಳಗುಳ್ಳ ಸಕಲನದಿಗಳನು ಗರ್ಭದಲಿ ಇಂಬಿಟ್ಟು ಮೆರೆದಂತಿಹ ಸರ್ಬಗೂಡಿಸುವ ಸಿಂಧುರಾಜನಲಿ ಮಿಂದು ನಿರ್ಭಯಳಾದೆನು 3 ಬಲಿದ ದನುಜನ ಭಾವಕ್ಕೆ ಮೆಚ್ಚಿ ಒಲಿದಷ್ಟವರವಿತ್ತ ಸಿಲುಕಲು ಸುಲಭನೆಂದು ಹೇರಂಬನೊಳಿತ್ತು ನೆಲೆಗೊಳಿಸಿ ಎಳೆದರೆ ಎಳೆಯಲೊಲ್ಲದೆ ಛಲವಿಡಿದ ಲಂಕಾಧಿಪತಿಯ ಅಹಂಕಾರ ವಳಿದು ಇಂದ್ರಾದಿಗಳಿಗೆ ವರವಿತ್ತ ಮಹಾಬಲಲಿಂಗನ ಕಂಡೆ 4 ಅನ್ನದಾ ಶತಶೃಂಗ ಪರ್ವತ ಪಶ್ಚಿಮದಿಂದ ಪಾತಾಳಗಂಗೆ ಸಹಿತಲಿ ಪ್ರ- ಸನ್ನನಾಗಿ ನಿಂದ ಚೆನ್ನ ಹೆಳವನಕಟ್ಟೆರಂಗನ ಪ್ರಿಯ ಪನ್ನಂಗಧರ ಪರಮಪವಿತ್ರ ಗೋಕರ್ಣೇಶನ ಕಂಡೆ ಪಾ- ವನವಾಯಿತು ಎಲ್ಲಾ ಕುಲಕೋಟಿಯು 5
--------------
ಹೆಳವನಕಟ್ಟೆ ಗಿರಿಯಮ್ಮ
ವೃಂದಾವನ ದರುಶನವಾಯಿತು ಇಂದು ಪೋದವುಭವ ವೃಂದಗಳೆಲ್ಲ ಪ ಕುಂದು ಕೊರತೆಯಿಲ್ಲದ ಜ್ಞಾನಗಳೂ ಬಂದು ಘಟಿಸಿತು ಭಕುತಿ ವೈರಾಗ್ಯ ಇಂದಿನದಿನ ಆನಂದಪುಟ್ಟಿ ಹರಿ ದ್ವಂದ್ವ ಪದಗಳನು ತೋರಿಸುವಂಥ1 ಮಾಟಮಾದವು ಆಭರಣಗಳೂ ಸಾಟಿಯಿಲ್ಲದ ಪಷÀ್ಪಮಾಲವ ಧರಿಸಿದ ಕೋಟಿ ಸೂರ್ಯಪ್ರಭೆ ಸೋಲಿಸುವಂಥ2 ನೋಡಿದನಯನ ಅನ್ಯತ್ರನೋಡವೂ ಪಾಡಿದ ಜಿಹ್ವಾ ಅನ್ಯತ್ರಪಾಡವೂ ನಾಡಿನೊಳಿಂಥಾ ಶ್ರೀಪಾದ ರಾಜರಿಗೆ ಈಡುಗಾಣೆ ಮುದ್ದುಮೋಹನವಿಠಲ 3
--------------
ಮುದ್ದುಮೋಹನವಿಠಲದಾಸರು
ವೃಂದಾವನೀ ದೇವಿ ವಂದಿಸುವೆ ಶ್ರೀ ತುಳಸಿ ವಂದಾರು ಜನತತಿಗೆ ಮಂದಾರಳೆನಿಸಿರುವಿ ಸಂದೇಹವಿಲ್ಲವಿದಕೆ 1 ಅಂದು ಧನ್ವಂತರಿಯು ತಂದಿರುವ ಪೀಯೂಷ ದಿಂದ ಪೂರಿತ ಕಲಶದಿ ಇಂದಿರಾಪತಿಯ ಆನಂದ ಬಾಷ್ಪೋದಕದ ಬಿಂದು ಬೀಳಲು ಜನಿಸಿದಿ2 ಶ್ರೀ ತುಳಸಿ ನಿನ್ನನು ನಿಕೇತನದಿ ಪೂಜಿಪರ ಪಾತಕವ ಪರಿಹರಿಸುವಿ ಶ್ರೀ ತರುಣಿಪತಿಗೆ ಬಲುಪ್ರೀತಿ ವಿಷಯಳೆನಿನ್ನ ನಾ ಸ್ತುತಿಸಲೆಂತು ಜನನಿ 3 ಸರ್ವ ತೀರ್ಥಗಳೆಲ್ಲ ತರುಮೂಲದಲ್ಲಿಹವು ಸರ್ವ ವಿಬುಧರು ಮಧ್ಯದಿ ಸರ್ವ ವೇದಗಳೆಲ್ಲ ತರುಅಗ್ರಭಾಗದಲಿ ಇರುತಿಹರು ಬಿಡದೆ ನಿರುತ 4 ತುಳಸಿ ನಿಮ್ಮಯ ಲಕ್ಷದಳಗಳಿಂದಲಿ ಲಕ್ಷ್ಮಿನಿಲಯನಂಘ್ರಿಗಳರ್ಚಿಸಿ ಕಲುಷ ವರ್ಜಿತನಾಗಿ ಬಲುಬೇಗ ಶ್ರೀಹರಿಯ ಒಲುಮೆ ಪಡೆವನು ಜಗದೊಳು 5 ತುಳಸಿ ದೇವಿಯೆ ನಿನಗೆ ಜಲವೆರೆದು ಕುಂಕುಮದ ತಿಲಕವಿಡುತಲಿ ನಿತ್ಯದಿ ಲಲನೆಯರು ಪೂಜಿಸಲು ಒಲಿದಿತ್ತು ಸೌಭಾಗ್ಯ ಸಲಹುವಿಯೆ ಕರುಣದಿಂದ 6 ಮಾಧವ ಪ್ರಿಯ ತುಳಸಿ ಸಾದರದಿ ನಿನ್ನೊಳಗೆ ಶ್ರೀದೇವಿ ನಿಂದಿರುವಳು ಮೋದಮುನಿ ಶಾಸ್ತ್ರವನು ಬೋಧಿಸುವ ಬುಧಜನರ ಪಾದಸೇವೆಯ ಕರುಣಿಸು 7 ಮಿತ್ರನುದಯದಲೆದ್ದು ಚಿತ್ತನಿರ್ಮಲರಾಗಿ ಭಕ್ತಿಯಲಿ ಶ್ರೀ ತುಳಸಿಯ ಮೃತ್ತಿಕೆಯ ಧರಿಸಿದ ಮಹಾತ್ಮರನು ಕಂಡು ಯಮ ಭೃತ್ಯರಂಜುವರು ಭಯದಿ 8 ಇಂತು ಶ್ರೀತುಳಸಿ ಸೀಮಂತಿನಿಯ ಸ್ತೋತ್ರವ ನಿ- ರಂತರದಿ ಪಠಿಸುವವರ ಚಿಂತಿತ ಪ್ರದನಾಗಿ ನಿಂತು ಕಾರ್ಪರದಿ ಸಿರಿ ಕಾಂತ ನರಹರಿ ಪೊರೆವನು 9
--------------
ಕಾರ್ಪರ ನರಹರಿದಾಸರು
ವೆಂದೆನುತ ಬಂದೆನು ನಾ ಪ ಬಂದಾ ಬಂದಜನಕಾನಂದ ಕೊಡುತಲಿ ವಂದಿಸಿ ಭಜಿಪರಘಂಗಳ ಕಳೆದು ಸಲಹುವಿಯೋ ಸದ್ಗುರು ರಾಘವೇಂದ್ರಾ 1 ಭೀತರಾಗುತ ನಿನ್ನಡಿಗಳ ಸೇವಿಸಲು ಆದರದಿಂದಲವರ ಭವ-ಭಯವ ಪರಿಹರಿಸಿ ಸಲಹಿ ಉದ್ಧರಿಸುವೆ ಗುರುರಾಘವೇಂದ್ರಾ 2 ದುಷ್ಟ ಜನರು ಕೂಡಿ ಕೆಟ್ಟಯೋಚನೆ ಮಾಡಿ ಗುಟ್ಟಾಗಿ ನಿಮ್ಮ ಪರೀಕ್ಷಿಸ ಬೇಕೆಂಧು ಜೀವ ವಿದ್ದವನ ನಿರ್ಜೀವನೆನುತ ತರಲು ಸತ್ಯದಿ ನಿರ್ಜೀವನನ್ನಾಗಿ ಮಾಡಿದೆ ಪ್ರಭವೆ 3 ಕುಹಕಿ ಜನರು ಎಲ್ಲಿ ವನಕೆತುಂಡನು ತಂದು ಚಿಗುರಿಸ ಬೇಕೆನುತಲಿ ಕೇಳಲು ಕಮುಂಡದೊಳಿದ್ದ ದಿವ್ಯೋದಕ ಪ್ರೋಕ್ಷಿಸಿ ಚಿಗುರಿಸಿ ಫಲ ಮಾಡ್ದೆ ಅದ್ಭುತ ಮಹಿಮಾ 4 ಮಾವಿನರಸದೊಳು ಮುಳುಗಿ ಮೃತನಾದಾ ಬಾಲಕನಿಗೆ ಪ್ರಾಣಗಳನಿತ್ತೆ ದಯದೀ ಭುವಿಯೊಳು ನಿಮ್ಮ ಮಹಿಮೆಗೆಣೆಕಾಣೆ ಮಂತ್ರಾಲಯದೊರೆ ಗುರು ರಾಘವೇಂದ್ರಾ 5 ``ಶ್ರೀರಾಘವೇಂದ್ರಾಯ ನಮಃ'' ಎಂಬ ದಿವ್ಯನಾಮವ ಮನುಜನು ಪ್ರತಿದಿನ ಭಜಿಸುತ್ತಲಿರಲು ಘೋರ ದುರಿತಗಳೆಲ್ಲ ದೂರವ ಮಾಡಿ ನಿನ್ನ ಚರಣಸೇವಕರನ್ನು ಸಲಹುವಿಯೋಗುರುವೇ6 ಶ್ರೀ ರಘುರಾಮನ ಪ್ರಿಯಭಕ್ತನಾದ ಶ್ರೀ ಗುರು ರಾಘವೇಂದ್ರರ ಚರಣ ಭಜಿಸಿರೊ ನಂಬಿದ ಭಕ್ತರ ಬೆಂಬಿಡದೆ ಸಲಹುವ ಘನ್ನಕೃಪಾನಿಧಿ ನಮ್ಮ ಗುರು ರಾಘವೇಂದ್ರಾ 7
--------------
ರಾಧಾಬಾಯಿ
ಶಯನ ಸಮಯಕಂ||ಸಂದಣಿ ಹರೆಯದೆ ಭಕ್ತರವೃಂದವು ಕೈವಾರಿಸುತ್ತ ಬರಲೆಡಬಲದೊಳ್‍ಇಂದಿರೆ ಧರಣಿಯು ಸಹಿತಾಮಂದಸ್ಮಿತಮುಖನು ನೋಡುತೈತಹನೊಲವಿಂದೇವ ಶಯನಕೆ ಬರುವ ಸಮಯ ಬಳಿಕೀಗದೇವತೆಗಳೆಲ್ಲರನು ಕಳುಹಿ ನಿಜ ಮಂದಿರಕೆ ಪಶ್ರೀದೇವಿ ಭೂದೇವಿಯರು ತಮ್ಮ ಕರಗಳಲಿಆದಿಪುರುಷನ ಕರಗಳನು ಪಿಡಿದು ಮುದದಿಮಾಧವನ ಮುಖಪದ್ಮವನು ನೋಡಿ ಹರುಷದಲಿವೇದವೇದ್ಯನ ಪೀಠದಿಂದಿಳಿಸಿ ತರುತಿಹರು 1ಸನಕಾದಿ ಭಾಗವತ ಮೂರ್ತಿ ತಾನಿದಿರಿಟ್ಟು ಮತ್ತೀಗಮನದೊಳಗೆ ನೆಲಸುವಂದದಿ ಮುಂದೆ ನಿಂದಿಹನು 2ತನ್ನಿಂದ ನಿರ್ಮಿಸಿದ ಫಲಪತ್ರಗಳಮನ್ನಿಸುತ ಭಕ್ತಿಯಲಿ ಭಕ್ತರಿತ್ತುದನುಉನ್ನತದ ಪದವಿಯನು ಬಳಿಕಿತ್ತು ಬರುತಿಹನುಪನ್ನಗಾರಿಧ್ವಜನು ತಿರುಪತಿಯ ವೆಂಕಟನು 3ಓಂ ವೇಣುನಾದ ವಿಶಾರದಾಯ ನಮಃ
--------------
ತಿಮ್ಮಪ್ಪದಾಸರು
ಶರಣು ಶರಣು ಪ ಪರಿಹರಿಸು ಕರುಣಾಳು ಬಿನ್ನಪವ ಕೇಳು ಅ.ಪ. ವಾಸವಾದ್ಯಮರನುತ ವನಜಸಂಭವನ ಸುತ ನೀ ಸಲಹೊ ಕೈಲಾಸವಾಸ ಈಶ ಕ್ಲೇಶ ಮೋದಾದಿ ಸಮ ತಿಳಿದು ಅಶ್ವತ್ಥಾಮ ಶ್ರೀಶುಕ ದುರ್ವಾಸ ಸ್ಫಟಿಕ ಸಮಭಾಸ 1 ವೈಕಾರಿಕಾದಿ ತ್ರೈರೂಪ ನಿನ್ನಯ ಕೋಪ ಶೋಕಕೊಡುವುದು ದೈತ್ಯಜನಕೆ ನಿತ್ಯ ಲೌಕಿಕಗಳೆಲ್ಲ ವೈದಿಕವಾಗಲೆನಗೆ ಮೈ ನಾಕಿ ಹೃತ್ಕುಮುದೇಂದು ಭಕ್ತಜನ ಬಂಧು 2 ಪವಮಾನತನಯ ನಿನ್ನವರಲ್ಲಿ ಕೊಡು ವಿನಯ ದಿವಸ ಸವನಗಳಲ್ಲಿ ಎನ್ನಿರುವ ನೀ ಬಲ್ಲಿ ಪವನ ದ್ವಿತಿಯರೂಪ ಸತತ ಎನ್ನಯಪಾಪ ಅವಲೋಕಿಸದಲೆನ್ನ ಸಲಹೊ ಸುರಮಾನ್ಯ 3 ಶೇಷನಂದನ ಶೇಷಭೂಷಣನೆ ನಿಶೇಷ ದೋಷರಹಿತನ ತೋರು ಕರುಣವನು ಬೀರು ಶ್ರೀ ಷಣ್ಮುಖನ ತಂದೆ ಸತತ ನೀ ಗತಿಯೆಂದೆ ಶೋಷಿಸು ಭವಾಮಯವ ಬೇಡುವೆನು ದಯವ4 ಗರ್ಗ ಮುನಿಕರಪದುಮ ಪೂಜ್ಯ ಚರಣಾಬ್ಜ ಮಮ ದುರ್ಗುಣಗಳೆಣಿಸದಲೆ ಜಗದೆ ಮೇಲೆ ನಿರ್ಗತಾಶನ ಜಗನ್ನಾಥ ವಿಠಲನ ಸ ನ್ಮಾರ್ಗವನೆ ತೋರು ಈ ದೇಹ ನಿನ ತೇರು 5
--------------
ಜಗನ್ನಾಥದಾಸರು
ಶೃಂಗಾರ ಬೇಕಾಯಿತೆ ಶ್ರೀಕಾಂತ ನಿನಗೆ ಶೃಂಗಾರವಾರ್ಧಿ ವೇಲಾಪುರದ ಚೆನ್ನಾ ಪ ಕರದಲ್ಲಿ ದಂಡ ಕೋಲು ಕಮಂಡಲನೀವ ಪರಿ ಹೇಗೆ ದಾಸಾನುದಾಸನಲ್ಲ ಇರಲಿಯಂತದುವೆ ಶ್ರೀಧರನೆಂಬ ಪೆಸರು ಬಿ ಟ್ಟುರದ ಲಕ್ಷ್ಮಿಯನು ಕಡೆಗಿರಿಸು ನೋಡುವೆನೊಮ್ಮೆ 1 ಎನ್ನ ಬಿನ್ನಪವೊಂದುಂಟು ಕೇಳೆಲೊ ಸ್ವಾಮಿ ನಿನ್ನ ಬಾಲಬ್ರಹ್ಮಚಾರಿಯೆಂದು ಸನ್ನುತಿಸುತಿದೆ ವೇದ ಶಾಸ್ತ್ರಾಗಮಗಳೆಲ್ಲ ಇನ್ನದಕುಪಾಯವೇನಯ್ಯ ಚೆನ್ನಿಗರಾಯ 2 ಶೃಂಗಾರಗಳನು ತತ್ವಂಗಳನು ಪೇಳುವಡೆ ಗುಂಗುರುಹಿನೊಳಲ್ಪ ಮನುಜನಲ್ಲ ಮಂಗಳಾತ್ಮಕನೆ ಆಡಿಸಿದೊಡಾಡುವೆ ಎನಗೆ ಭಂಗವೇಕಯ್ಯ ವೈಕುಂಠ ಚೆನ್ನಿಗರಾಯ 3
--------------
ಬೇಲೂರು ವೈಕುಂಠದಾಸರು
ಶೇಷಾಚಲ ಮಂದಿರ-ಇಂದಿರೇಶ ಪ. ಪಾದ ಸ್ಮರಣೆಯಿತ್ತು ಅ.ಪ ಕರಣಕ್ರಿಯಕರ್ಮಂಗಳೆಲ್ಲವು ಜಡವು ಕರ್ಮ ನಿನ್ನ ನಿಯಮನವಿಹುದು ನಿರುತ ಪರವಶನಾಗಿ ನಾ ಮಾಳ್ಪೆನೆಂಬ ಈ ದುರಭಿಮಾನದಿ ನಾ ಭವಕೊಳಗಾದೆನೊ 1 ವಿಷಯಂಗಳೆಲ್ಲ ಜ್ಞಾನಗೋಳಕದಿ ಬಂದು ಎನ್ನ ವಿಷಮಗೊಳಿಸಿತು ಮನ ಅಭಿಮಾನದಿಂದಲಿ ಹೃಷೀಕಪನೆ ಎನ್ನ ಮನವಿಷಮತೆಯ ಹರಿಸಿ ಪೋಷಿಸೊ ನಿರುತ ಕೃಪಾಕರ ಮೂರುತೇ 2 ದೋಷದೂರನೆ ನಿನ್ನ ವಿಸ್ಮರಣೆಯಿಂದಲಿ ವಾಸುಕೀಶಯನ ನೀ ಭೂತಾವಾಸ ನೀನಾಗಿರೆ ಮೋಸಹೋದೆನ್ನನು ಪೋಷಿಸಬೇಕಯ್ಯ 3 ಕುಟಿಲ ಮನದಲಿ ನಿನ್ನ ಭಕುತನೆಂದೆನಿಸಿದೆ ವಟಪತ್ರಶಾಯಿ ನೀ ಹಟ ಸಾಧನಕ್ಕೆ ಒಲಿಯೆ ದಿಟಭಕುತಿಯ ಕೊಟ್ಟು ಕಡೆ ಹಾಯಿಸಯ್ಯ 4 ತನುಛಾಯೆ ಕ್ರಿಯೆಯು ತನ್ನ ತನುವನಾಶ್ರೈಸಿದಂತೆ ನಾ ನಿನ್ನ ಪ್ರತಿಬಿಂಬನಾಗಿರಲು ಸದಾ ಎನ್ನ ಕ್ರಿಯೆಗಳೆಲ್ಲಾ ನಿನ್ನ ಆಣತಿಯಂತಿರೆ ಘನಮಹಿಮನೆ ನಿನ್ನಾಕ್ರಿಯವನರಿಯದೆ ಹೋದೆ5 ಪನ್ನಗಾಚಲನಿಲಯ ಆಪನ್ನರಕ್ಷಕ ನೀನಿರೆ ಬನ್ನಬಡಲ್ಯಾಕಯ್ಯ ಅನ್ಯರನಾಶ್ರಯಿಸಿ ಮನೋವಾಕ್ಕಾಯ ಕರ್ಮವನರ್ಪಿಸಲು ಸನ್ಮತಿಯನೆ ಇತ್ತು ಸತತ ಸಲಹಯ್ಯ 6 ಸರ್ವಸತ್ತಾಪ್ರದನೆ ಸರ್ವಪ್ರವೃತ್ತಿಪ್ರದನೆ ಸರ್ವರಂತರ್ಯಾಮಿ ಮಮಕುಲಸ್ವಾಮಿ ಉರಗಾದ್ರಿವಾಸವಿಠಲ ನಿನ್ನಯ ದಿವ್ಯ ಚರಣಸ್ಮರಣೆಯನಿತ್ತು ಕಾಯೊ ಕಮಲಾಕಾಂತ7
--------------
ಉರಗಾದ್ರಿವಾಸವಿಠಲದಾಸರು
ಶೋಭನವೆನ್ನಿರೋ ಶೋಭನ ಬನ್ನಿರೆ ಶೋಭನ ಬನ್ನಿ ಸವ್ಯದಿಂದ ಧ್ರುವ ಶೋಭಾನವೆಂಬೋದು ಸೋಹಂಭಾವಗುಣ ಅಹಂಭಾವಿಗಳು ಅರಿಯವು ಅಹಂಭಾವಿಗಳು ಅರಿಯುವು ಅನಂಗನ ಅಹಂಭ್ರಮೆಯು ವಿಪರೀತ 1 ಶೋಭನವೆನ್ನಿರೇ ಸಿದ್ಧಾಂತನುಭವಿಗಳು ಕಾಮಿ ಕಾಮಣ್ಣನ ಮದುವಿಗೆ ಪ್ರಾಣಿ ಮಾತ್ರಗಳೆಲ್ಲ ಬರಬೇಕು 2 ಶೋಭನವೆನ್ನಿರೇ ಮದೂಣಿಗಾನಂಗಗೆ ಕಾಮಿತದಳಗಿತ್ತಿ ಅರಸಗ ಕಾಮಿತದಳಗಿತ್ತಿ ಅರಸ ಮೋಹನ್ನಗೆ ನೆರೆಯಿತು ಲೋಕ ಧರೆಯೊಳು 3 ಶೋಭನವೆನ್ನಿರೇ ಕಾಮಿ ಕಾಮಣ್ಣಗೆ ಕಾಯದೊಳೀಹ್ಯ ಕರುಣಿಗೆ ಕಾಯದೊಳಿದ್ದು ಮೆರೆವ ಅನಂಗನು ಚರ್ಮದಬೊಂಬಿ ಗುರುತಾಗಿ 4 ಶೋಭನವೆನ್ನಿರೇ ಸಜ್ಜನ ಸಾವಿತ್ರೇರು ಆನಿ ಮೊದಲೆ ಇರುಹು ಕಡಿಗೆಲ್ಲ ಆನಿಮೊದಲೆ ಇರುಹು ಕಡಿಗೆಲ್ಲ ಮಹಿಪತಿ ಶೋಭಾನಯೆಂದ ಸಬೂದಿಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು