ಒಟ್ಟು 2704 ಕಡೆಗಳಲ್ಲಿ , 115 ದಾಸರು , 2166 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಪಿಡಿದು ಕಾಯೊ ಶ್ರೀ ಕರುಣಾಳು ಧನ್ವಂತ್ರಿ ವರ ವೆಂಕಟಾದ್ರಿವಾಸ ಪ. ತರಳೆ ಸೇವೆಯ ಕೊಂಡು ಪರಿಪರಿಯ ಬಗೆಯಿಂದ ವರ ಕೃಪೆಯ ಮಾಡೊ ಸ್ವಾಮಿ ಪ್ರೇಮಿ ಅ.ಪ. ಆವ ಪರಿಯಿಂದ ಜಗದೊಳು ನೋಡೆ ಕಾವರಿ ನ್ನಾವರುಂಟೆಲೊ ದೇವನೆ ಪಾವಮಾನಿಯ ಪ್ರೀಯ ಪರಿಪರಿಯ ಪಾಪ ಫಲ ದೀವಿಧದ ಬವಣೆಯನ್ನೇ ನೀ ವಿಚಾರಿಸಿ ಕಾಯೊ ನಿನ್ನ ಶರಣ್ಹೊಕ್ಕಮೇ- ಲಾವ ಸಂಶಯ ಕಾವನೇ ಪಾವಕನ ತೆರದಿ ಭಸ್ಮವ ಮಾಡಿ ದುಷ್ಕರ್ಮ ಜೀವಕ್ಹಿತ ಕೊಡು ಪ್ರೀತನೇ | ಇನ್ನೇ 1 ಸುರರ ವ್ಯಾಕುಲ ಬಿಡಿಸಿ ಅಮರ ಪಕ್ಷವ ವಹಿಸಿ ವರ ಸುಧೆಯನವರಿಗುಣಿಸೀ ದುರುಳ ಸಂಘವ ಕೊಲಿಸಿ ಸುರ ರಾಜ್ಯಸ್ಥಿರಪಡಿಸಿ ಪರಿಪರಿಯ ಸೌಖ್ಯ ಸುರಿಸೀ ಮೆರೆದೆಯೋ ಗುಣಸಿಂಧು ನಿನ್ನ ಸೇವಕಳೆಂದು ಪರಿಕರಿಸಿ ನೀನೀಕ್ಷಿಸೀ ಪರಿ ಕಾಣೆ ಹರಿಸು ಭಯ ಶ್ರೀ ನರಹರೇ | ಶೌರೇ 2 ಬರಿದು ಮಾಡದೆ ಎನ್ನ ಬಿನ್ನಪವ ಪೊರೆಯ ಬೇ- ಕರವಿಂದ ದಳ ನೇತ್ರನೇ ಗುರು ಹಿರಿಯರುಕ್ತಿಯಲ್ಲದೆ ಎನ್ನದೆಂಬುವೋ ಗರುವ ನುಡಿಯಲ್ಲ ನೀನೇ ಚರಣ ಸೇವಕರ ಪೊರೆವಂಥ ವಿಶ್ವಾತ್ಮಕನೆ ಪರಿಹರಿಸು ಕ್ಲೇಶಗಳನೇ ಕರುಣಿ ಶ್ರೀ ಗೋಪಾಲಕೃಷ್ಣವಿಠ್ಠಲ ಶೇಷ- ಗಿರಿನಿಲಯ ಭಕ್ತ ಪ್ರೀಯಾ | ಜೀಯಾ 3
--------------
ಅಂಬಾಬಾಯಿ
ಕರವ ಜೋಡಿಸಿ ಎಲ್ಲರಿಗೊಂದಿಸಿ ಪ. ಎಲ್ಲರಿಗೊಂದಿಸಿ ಫುಲ್ಲನಾ¨sನÀ ಮುಖ್ಯವಲ್ಲಭೆಯರುನಾವು ಗೆಲ್ಲಬೇಕೆಂದುಅ.ಪ. ಮಡದಿ ಇಂದಿರಾದೇವಿ ಕಡೆಗಣ್ಣನೋಟದಿ ಪಡೆದಾಳು ಲೋಕಬ್ರಹ್ಮರುದ್ರಾದಿ ಪಾದಂಗಳಿಗೆ ನೀವೆ ಮಹಾಲಕ್ಷ್ಮಿಪಾದಂಗಳೆಗೆ ನೀವೆ ಮಹಾಲಕ್ಷ್ಮಿ ದೇವಿಯಶುಭಾಂಗಿಯ ಮೊದಲೆ ಬಲಗೊಂಬೆ 1 ಪರಮೇಷ್ಠಿ ಪರಮೇಷ್ಠಿ ಪಾದ ಪದ್ಮವನೆ ಮೊದಲೆ ಬಲಗೊಂಬೆ2 ವಾಣಿ ಅಜನ ಪಟ್ಟದರಾಣಿ ಪನ್ನಂಗ ವೇಣಿಜಾಣಿ ಕೊಡು ಎಮಗೆ ಮತಿಗಳಜಾಣಿ ಕೊಡು ಎಮಗೆ ಮತಿಗಳ ನಿನ್ನಪಾದರೇಣುವ ಮೊದಲೆ ಬಲಗೊಂಬೆ 3 ಪಾದ ವನಜವ ಮೊದಲೆ ಬಲಗೊಂಬೆ4 ಭಾರತಿ ನಿನ್ನ ಪಾದವಾರಿಜ ಚರಣವ ಬಾರಿ ಬಾರಿಗೆ ಸ್ಮರಿಸುವೆಬಾರಿ ಬಾರಿಗೆ ಸ್ಮರಿಸುವೆ ನಮಗಿನ್ನುತೋರೆ ಬೇಗ ಮತಿಗಳು5 ಇಂದ್ರನ ಗೆದ್ದು ಸುಧೆಯ ತಂದ ಮಾತೆಯ ಬಂಧನ ಕಡೆದ ಬಲು ಧೀರಬಂಧನ ಕಡೆದ ಬಲುಧೀರನಾದ ಖಗೇಂದ್ರನ ಮೊದಲೆ ಬಲಗೊಂಬೆ6 ಸಾಸಿರ ಮುಖದಿಂದ ಶ್ರೀಶನ ಸ್ತುತಿಸಿದವಾಸುದೇವಗೆ ಹಾಸಿಗೆವಾಸುದೇವಗೆ ಹಾಸಿಗೆ ಯಾದಶೇಷಗೆ ಮೊದಲೆ ಬಲಗೊಂಬೆ7 ಅಪಾರ ಮಹಿಮನೆ ತ್ರಿಪುರಸಂಹಾರಕಚಂದ್ರ ಶೇಖರನೆ ಸರ್ವೇಶ ಚಂದ್ರ ಶೇಖರನೆ ಸರ್ವೇಶ ನಿನ್ನಪಾದದ್ವಂದ್ವವ ಮೊದಲೆ ಬಲಗೊಂಬೆ 8 ವಾರುಣಿ ಅಪರ್ಣಾದೇವಿಯರು ಕರುಣಿಸಿನಮಗೆ ಕಾಲಕಾಲಕರುಣಿಸಿನಮಗೆ ಕಾಲಕಾಲಕೆರಾಮೇಶನ ತರುಣಿಯರೆ ಗೆದ್ದು ಬರಬೇಕ9
--------------
ಗಲಗಲಿಅವ್ವನವರು
ಕರವ ಮುಗಿವೆ ಚರಣಕ್ಕೆರಗುವೆ ಭರದಿ ರಕ್ಷಿಸು ಬಿಡದೇ ಶ್ರೀ ಪ ಮಾನವ ಕಾಯ್ದೆಯೊ ಹೀನರ ಮದಗರ್ವವನೆಲ್ಲ ಅಳಿದೆಯೊ ಧ್ಯಾನ ಮಾಡುವ ಸ್ವಾನುಭವಿಗಳ ಸ್ಥಾನ ಹೃದಯವಾಸ ಶ್ರೀ 1 ಧ್ಯಾನಿಸಿವಂಥಾ ಗಜರಾಜನ ಕಾಯ್ದೆ ಮಾನಿನಿ ಅಹಲ್ಯೆಯ ಪಾದದೊಳುದ್ಧರಿಸಿದೆ ದೀನರಕ್ಷಕ ಬಿರುದ ಪೊತ್ತ ವಿ ಜ್ಞಾನದೊಳಗಿರಿಸೆನ್ನಾ 2 ಶಬರಿಯ ಭಕ್ತಿಗೆ ಮೆಚ್ಚನೀ ಬಂದೆಯೊ ಬದರಿಯ ಹಣ್ಣನೆ ಸವಿಸವಿ ದುಂಡೆಯೊ ವಿಭು ಪರಮಾನಂದಾ ಪ್ರಭೆಯೊಳಗಿರಿಸಿದೆ 3 ಸ್ವರ್ಣಕಶ್ಯಪನ ಸೊಕ್ಕಗಿಸಿದೆ ದೇವಾ ಮನ್ನಿಸಿ ಪಾಂಡವರೈವರ ಸಲಹುವಾ ಚನ್ನ ಗೋಪಿಯರ ಕೂಡಿ ಮನ್ನಣೆಕ್ರೀಡೆಯ ನಾಡಿ 4
--------------
ಶಾಂತಿಬಾಯಿ
ಕರವ ಪಿಡಿ ಗುರುರಾಯ | ಶಿರಬಾಗಿ ಬೇಡುವೆ ಪೊರೆಯೊ ಸತ್ಕವಿಗೇಯ | ನೆರೆನಂಬಿದೆನು ನೀ ಮರೆಯದಿರು ಶುಭಕಾಯ | ಹೇ ಸೂರಿವರ್ಯ ಪ ಉರಗಕೇತನ ಮೊರೆಯ ಲಾಲಿಸಿ ತರಣಿಜನಿಗೆರಡೊಂದು ಯುಗದಲಿ ಧುರದಿ ಸಾರಥಿಯಾಗಿ ಸ್ಯಂದನ ಭರದಿ ನಡೆಸಿದ ಪರಮ ಪುರುಷನೆ ಅ.ಪ ಶರಣು ಜನ ಸುರಧೇನು | ಹೇ ತಾತ ನೀ ಮೂರೆರಡು ಜನುಮಗಳನ್ನು | ಕಳೆದು ಮ ತ್ತುರುವ ಅವತಾರವನು ಭಕ್ತಿಪೂರ್ವಕ ಪಿರಿಯರಾಜ್ಞದಿ ನೀನು ಪೂರೈಸಲಿನ್ನು ಧರಣಿಯೊಳಗವತರಿಸಿ ನರರಿಗೆ ಅರಿಯದಂದದಿ ಹರಿಯ ದಿಸೆಯೋಳ್ ಹರಿಯ ಸ್ಮರಿಸುತ ಚರಿಪ ಧೊರೆ ತವ ಚರಣ ದರುಶನಗರೆದು ಕರುಣದಿ 1 ಕ್ಲೇಶ ತಡಮಾಡದಲೆ ನೀ ಭವ ಪಾಶ | ದೃಢಮನವ ಕೊಡು ನಿ ನ್ನಡಿಗಳಲಿ ನಿರ್ದೋಷ | ನುಡಿಯಲಾಲಿಸಿ ಬಿಡದೆ ಮಾಡುಪದೇಶ ಪೊಡವೀಶದಾಸ ಒಡೆಯನೇ ನೀನಡಗಿ ಎನ್ನನು ಕಡೆಗೆ ನೋಡಲು ಪಡೆದ ಜನನಿಯು ಪಿಡಿದು ಬಾಲನ ಮಡುವಿನೋಳ್ ತಾ ಬಿಡುವ ತೆರ ತವ ನಡತೆ ಎನಿಪುದು 2 ಮಂದನಾನಿಜವಯ್ಯ | ಸಂದೇಹವಿಲ್ಲದೆ ಕುಂದು ಎಣಿಸದೆ ಜೀಯ ಬಂದೆನ್ನ ಮನದಲಿ ನಿಂದು ನೀಸಲಹಯ್ಯ ವಂದಿಪೆನು ಶ್ರೀ ಪು ರಂದರಾರ್ಯರ ಪ್ರೀಯ ಆನಂದ ನಿಲಯ 3
--------------
ಶಾಮಸುಂದರ ವಿಠಲ
ಕರವ ಪಿಡಿಯೋ ಬ್ರಹ್ಮಣ್ಯಾ ಗುರುವೇ ದುರಿತ ನೋಡದಲೆನ್ನ ಪರಮ ನಿರ್ಮಲ ಜ್ಞಾನ ತ್ವರಿತದಿಂದಿತ್ತೆನ್ನ ಪ ದೂರದೂರದಲಿದ್ದ ನರರು ನಿಮ್ಮಯ ಚರಣ ಸೇರಿ ಸೇವೆಯ ಮಾಡೆ ಕರುಣದಿ ಕಾಯ್ವೆ ನೀ 1 ದಿಟ್ಟತನದಿ ಭಕ್ತಿ ಇಟ್ಟು ಸೇವಿಸಲಾಗ ಕುಷ್ಟಾದಿ ರೋಗಗಳಟ್ಟುವೀ ಬೇಗನೆ 2 ಪರಿ ಭವದೊಳು ತಿರುಗಿಸದೆ ಎನ್ನ ನರಹರಿ ಚರಣದ ಸ್ಮರಣೆಯನ್ನೆ ಇತ್ತು 3
--------------
ಪ್ರದ್ಯುಮ್ನತೀರ್ಥರು
ಕರವ ಮುಗಿದು ಗುರುವಿನ ನೀ ಅರಿಯೊ ಸುಹಿತಾರ್ಥಿಯ ನೆರೆಯೊ ದೀರ್ಘದಂಡಹಾಕಿ ತರಣೋಪಾಯ ಮೂರ್ತಿಯ ಬೆರಿಯೋ ಕುರುವ್ಹ ತಿಳಿವ ಪರಮಭಕ್ತಿ ಮನೆಮೂರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 1 ಕರೆವ ಮಳೆಯು ಕರುಣಿಸಿನ್ನು ಪರಮದಯ ವೃತ್ತಿಯ ಶರಣ್ಹೋಕ್ಕಾಶ್ರೈಸೊ ನೀನು ತ್ವರಿತ ಶ್ರೀಪತಿಯ ಮರಿಯದೆ ಕೊಂಡಾಡಬೇಕು ಧರೆಯೊಳಿದೆ ಕೀರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 2 ಯರಕವಾಗಿ ಸರಕನಿನ್ನು ನೀನು ಕರಕೊ ದೃಢಭಕ್ತಿಯಾ ಅರಕಕೋಟಿ ತೇಜನಂಘ್ರಿ ಹರಿಕಿಸೊ ನೀ ಪೂರ್ತಿಯಾ ಗರಕನೆವೆ ಅರಿಕೆಮಾಡಿಕೊಂಡು ಸುಸಂಗತಿಯ ತರಕೈಸಿಕೊಳ್ಳು ಶ್ರೀಪಾದ ಪೂರ್ಣಗುರುಮೂರ್ತಿಯ 3 ಏರು ಅರು ಚಕ್ರ ನೋಡಿ ತಾರಿಸುವ ಸ್ಥಿತಿಯ ಅರವೆ ಅರವೆ ಆಗಿ ದೋರುತದೆ ಸುಜಾಗ್ರತಿಯ ಎರಗಿ ಹರುಷದಿಂದ ಪಡೆಯೊ ಪರಮ ವಿಶ್ರಾಂತಿಯ ಸ್ಮರಿಸೊಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 4 ಸುರರ ವಂದ್ಯ ಪರಮಭೇದ್ಯ ಅರಿಯಾ ಪರಗತಿಯ ಸಾರತಿಹ ಶ್ರುತಿವಾಕ್ಯ ಕೇಳೊ ಇಟ್ಟು ಪ್ರೀತಿಯ ತ್ಯರನೆ ತಿಳುಹಿಸಿಕೊಟ್ಟ ಗುರುವಿಗೆ ನಿತ್ಯಪ್ರತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 5 ಗುರುಮೂತ್ರ್ಯಾಭೇದ್ಯವೆಂಬ ಗುರುತಕೇಳೋ ಅರ್ಥಿಯ ಕುರಹು ದೋರಿಕೊಟ್ಟ ಗುರುವಿಗೆ ನೀ ಮಾಡೊ ಸ್ತುತಿಯ ಮರೆದುಬಿಡೊ ತರಳತನದ ಹರುವಾ ನಿನ್ನಭ್ರಾಂತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ6 ತರತರದಿ ಸಾಂದ್ರವಾಗಿ ದೋರುತಿಹ ದೀಪ್ತಿಯ ಪ್ರಾರ್ಥಿಸಬೇಕೊಂದೆ ಸರ್ವಕಾಲ ವಸ್ತುಗತಿಯ ಪರಿಪರಿಸುಖ ದೋರುವ ಕರುಣಾನಂದ ಯತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 7 ಸರ್ವಸುಖದೋರ್ವದೊಂದೆ ಸರ್ವಫÀಲ ಶ್ರುತಿಯ ಸರ್ವದಾವೆಂಬುವದು ನವರತ್ನಮಾಲೆ ಸ್ತುತಿಯ ಪೂರ್ವಕರ್ಮ ಹರಿಸುವ ಸದ್ಗುರು ಸಾಮಥ್ರ್ಯಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 8 ಶರಣಜನರಾಭರಣವಿದೆ ಅರಿಯಬೇಕೀವಾರ್ತೆಯ ತರಳ ಮಹಿಪತಿ ನೀ ಮಾಡೊ ಇರುಳ ಹಗಲ ಆರ್ಥಿಯ ಕರವ ಪಿಡಿದು ಪಾರಗೆಲಿಸುವ ನಿನ್ನ ಸಾರ್ಥಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರಿರಾಜ ವರದ ಕಾಯೊ ಪ ವರ ಕರಿರಾಜ ವರದ ಕಾಯೊ ಕರವ ಪಿಡಿದು 1 ವರಕರಿರಾಜವರದ ಕಾಯೊ ಶರಣರ ಚರಣ ಸ್ಮರಣೆಯ ಕರುಣಿಸಿ 2 ಸಿರಿ ಪ್ರಾಣನಾಥ ವಿಠ್ಠಲ ನಿನ್ನಧ್ಯಾನ ಕೊಟ್ಟೆನ್ನ ಕಾಯೊ 3
--------------
ಬಾಗೇಪಲ್ಲಿ ಶೇಷದಾಸರು
ಕರುಣ ಘನ ಸಿರಿಚರಣ ಶರಣ ಜನರಾಭರಣಾ | ದುರಿತ ಹರಣ | ಹರಿಯೇ ಸಂಕಟ ಹರಿಯೇ ಬಾಯೆಂದು ಕರಿಯೇ | ಒದಗಿದೈ ನರಹರಿಯೇ ದೈತ್ಯರರಿಯೇ | ಪರಮ ಸದ್ಗುಣಧಾಮ ಪೂರಿತ ಮನೋಕಾಮ | ಯದುಕುಲಾಂಬುಧಿ ಸೋಮಾ ಮೇಘ ಶಾಮಾ | ಸುರಮುನಿ ಜನಧೇಯಾ | ಕಮನೀಯತರ ಕಾಯಾ | ತೋಯಜಾಕ್ಷ ಸಿರಿ ಕೃಷ್ಣರೇಯಾ | ಸಲಹು ಒಲವಿಂದಾ 1 ಅಂಕಿತ-ಕೃಷ್ಣ (?)
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರುಣ ಪಡೆಯಬೇಕು ಮನುಜ ಗುರುಗಳಾ ಪ. ಕರುಣ ಪಡೆಯಿರೊ ಗುರು ಮಧ್ವರಾಯರ ಹರುಷದಿ ಹರಿಯನು ನಿರುತದಿ ಸ್ಮರಿಸುವ ಗುರು ಅ.ಪ. ಸ್ಮರಿಸಿದ ಮಾತ್ರದಿ ಶರಧಿಯ ದಾಟುತ ವರಪ್ರದ ರಾಮನ ತÀರುಣಿಗುಂಗುರವಿತ್ತು ಹರಿ ಕರುಣಾಮೃತವೆರಡು ರಾಮರ ಚರಣ ಸ್ಮರಣೆಯನು ನಿರುತ ಕೊಡುವ ಗುರು 1 ಕಂತುಜನಕನ ಅಂತರವರಿತು ನಿಂತು ಕೌರವ ಕುಲ ಸವರುತಲೆ ಅಂತಕಗಿತ್ತಾ ಕಾಂತೆ ದ್ರೌಪದಿಯ ಪಂಥವ ಸಲಿಶಿದ ಕುಂತಿತನುಜ ಗುರು 2 ಮಧ್ವ ಮುನಿಗಳಾಧ್ವರ ಪಾಲಕ ಮುದ್ದು ಕೃಷ್ಣನ ಹೃದ್ಗಮಲದೊಳಿಟ್ಟ ಅದ್ವೈತಿಗಳ ಸುವಾದಿಸಿ ಗೆದ್ದು ಶುದ್ಧ ಶ್ರೀ ಶ್ರೀನಿವಾಸನ ಭಕ್ತರ ಗುರು 3
--------------
ಸರಸ್ವತಿ ಬಾಯಿ
ಕರುಣ ಬರುವದೆಂದಿಗೂ ಶ್ರೀರಾಮಚಂದ್ರಾ ಪ ದುರಿತ ಶರಧಿಯೊನೊತ್ತರಿಸಿ ನಿನ್ನಯಾ ದಿವ್ಯ ಚರಣ ಸೇವೆಯೊಳಿರಿಸಿ ಪಾಲಿಸೋ ದೇವ1 ಮೋಸಗೊಳಿಸದಿರೊ ಶ್ರೀಶ ಶ್ರೀನಿವಾಸಾ 2 ಪರಮ ತತ್ವಾಧಿಕಾರಿ ಸುರಮುನಿಸುತಾ ಶೌರಿ ದೊರೆಯ ನಂಬಿದೆನೆಲ್ಲೋ ಕರುಣ 3
--------------
ಚನ್ನಪಟ್ಟಣದ ಅಹೋಬಲದಾಸರು
ಕರುಣ ಬಾರದೆ ವಿಠ್ಠಲಾ | ಶ್ರೀ ಪಾಂಡುರಂಗ ಪ. ಸ್ಮರಣೆ ಮಾಡುತ ಪೊರೆ ಎಂದೆನ್ನುತ ವರಲುವಾ ಧ್ವನಿ ಕೇಳದೇ ಈ ಪರಿಯ ಗರ್ವವಿದೇನೊ ಹರಿಯೆ ಅ. ದೂರದಿಂದಲಿ ಬಂದೆನೋ | ಇಲ್ಲಿಂದ ಮುಂದೆ ದಾರಿ ಕಾಣದೆ ನಿಂದೆನೋ ದ್ವಾರಕಾಪತಿ ನೀನಲ್ಲದಿ ನ್ನಾರು ಕಾಯುವರೀಗ ಪೇಳು ಸಾರಿದೆನು ನಿನ್ನಂಘ್ರಿ ಕಮಲವ ಚಾರು ಚರಿತನೆ ಮಾರನೈಯ್ಯ 1 ತನುಸುಖ ಬೇಡಲಿಲ್ಲಾ | ನಿನ್ನ ನಾನು ಘನವಾಗಿ ಕಾಡಲಿಲ್ಲ ಮನದ ಹಂಬಲ ನೀನೆ ಬಲ್ಲೆಯೊ ಮನಕೆ ತಾರದೆ ಸುಮ್ಮನಿಪ್ಪೆಯೋ ಎನಗೆ ಪ್ರೇರಕ ನೀನೆ ಅಲ್ಲವೆ ನಿನಗೆ ದಾಸಳು ನಾನು ಅಲ್ಲವೆ 2 ಕರೆಕರೆ ಪಡಿಸುವುದೂ | ಸರಿಯಲ್ಲ ನಿನಗೆ ಕರಿವರದ ಕೇಳು ಇದೂ ನರಸಖನೆ ದಯದಿಂದ ನಿನ್ನ ಚರಣ ದರುಶನವಿತ್ತೆ ಒಲಿದು ಕರಪಿಡಿದು ಸಲಹೆಂದರೀಗ ತೆರೆದು ನೋಡದೆ ನೇತ್ರವಿರುವರೆ 3 ಜ್ಞಾನಿ ಹೃತ್ಕಮಲವಾಸ | ಶ್ರೀ ರುಕ್ಮಿಣೀಶ ಭಾನುಕೋಟಿ ಪ್ರಕಾಶ ನೀನೆ ಗತಿ ಇನ್ನಿಲ್ಲ ಅನ್ಯರು ಸಾನುರಾಗದಿ ಸಲಹೊ ಎನ್ನಲು ಆನನದಿ ಈಕ್ಷಿಸದೆ ನಿಂತರೆ ಮಾನ ಉಳಿವುದೆ ಭಕ್ತವತ್ಸಲ 4 ಇಟ್ಟಿಗೆ ಕೊಟ್ಟವನೊ ಕೊಟ್ಟನಿನ್ನೇನು ಅಷ್ಟು ಭಾಗ್ಯವನೂ ಕೊಟ್ಟೆ ಬಡ ಬ್ರಾಹ್ಮಣನ ಅವಲಿಗೆ ದೃಷ್ಟಿ ಬಿದ್ದರೆ ಕಷ್ಟ ಉಂಟೆ ಕೊಟ್ಟು ಅಭಯ ಪೊರೆ ಗೋಪಾಲ- ಕೃಷ್ಣವಿಠ್ಠಲ ಮನದಿ ತೋರೋ5
--------------
ಅಂಬಾಬಾಯಿ
ಕರುಣ ಬಾರದೇ ಗುರುವೇ ಕರುಣ ಬಾರದೇ ಪ ಅಕಟ ನಿನ್ನ ಚರಣ ನಂಬಿದ ಶರಣನ ಮೇಲೆ ಅ.ಪ. ಭವ ಕಷ್ಟದಿಂದ ಕಡಿಗೆ ಮಾಡಿ ಕೃಷ್ಣ ಪದ್ಮವನ್ನು ತೋರುತುತ್ಕøಷ್ಟ ಪದವಿ ಪಾಲಿಸೊ ಗುರುವೇ 1 ಸ್ಮರಣೆ ಒಂದೇ 2 ಅಖಿಳ ಸುರರ ಸಲಹುವ ಸೀಲ ತಂದೆವರದಗೋಪಾಲವಿಠ್ಠಲಪ್ರೀಯಾ 3
--------------
ತಂದೆವರದಗೋಪಾಲವಿಠಲರು
ಕರುಣದಿ ಎನ್ನ ಪೊರಿಯೇ ತೊರಮ್ಮ ಶಿರಿಯೇ ಪ ಚರಣಯುಗಕೆ ನಾ ಶರಣು ಮಾಡಿದೆ ದೇವೀ ಅ.ಪ ವಾರಿಜಾಂಬಕೆ ಅಂಭ್ರಣೀ ಶ್ರೀ ಹರಿಯ ರಾಣಿ ಮಾರಾರಿ ಮುಖಸುರ ಸಂತ್ರಾಣಿ ವಾರವಾರಕೆ ನಿನ್ನ ಸಾರಿಭಜಿಪೆ ಎನ್ನ ದೂರ ನೋಡದೆ ಪೊರಿಭಾರ ನಿನ್ನದು ತಾಯಿ 1 ಸೃಷ್ಟಿ ಸ್ಥಿತಿಲಯ ಕಾರಿಣೀ ಸುಗುಣಸನ್ಮಣಿ ಕಷ್ಟ ದಾರಿದ್ರ್ಯ ದುಃಖ ಹಾರಿಣೀ ದುಷ್ಟರ ಸಂಗದಿ ಕೆಟ್ಟಿಹ ಎನ್ನನು ಥಟ್ಟನೆ ಕರುಣಾದೃಷ್ಟಿಲಿ ನೋಡಿ 2 ಜಾತರೂಪಳೆ ಶುಭಗಾತ್ರಿ ತ್ರಿಜಗಕೆ ಧಾತ್ರೀ ಸೀತೆ ಸತ್ರಾಜಿತನ ಪುತ್ರಿ ದಾತ ಗುರುಜಗನ್ನಾಥವಿಠಲನ ನೀತ ಸತಿಯೆ ಎನ್ನಮಾತೆ ವಿಖ್ಯಾತೇ 3
--------------
ಗುರುಜಗನ್ನಾಥದಾಸರು