ಒಟ್ಟು 1746 ಕಡೆಗಳಲ್ಲಿ , 107 ದಾಸರು , 1422 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ಸಾರ್ವ _ ಭೌಮಾ ದೊರಕಿಸುತ ಹರಿಕರುಣ ಪೊರೆ ರಾಘವೇಂದ್ರಾ ಪ ಅಂದು ಹರಿ ತವಶರದಿ ಕರ ಪೊರೆದಂತೆ ನಂದಿ ಸುತ ದುರಿತೌಘ ಇಂದೆನಗೆ _ ಮೈದೊರು ಗುರುವೇ ಕುಂದು ಮಯ ಕಲಿಯೊಳಗೆ ಕಂದುತಿಹ ಕಂದರನು ತಂದೆ ಗುರು ಕಾಯದಿರೆ ಮುಂದು ಬರೆ ಆಗುವದೆ ಸ್ವಾಮೀ 1 ಕತ್ತಲೆಯು ಸುತ್ತಿಹುದು ಮುತ್ತಿಹವು ಕುತ್ತುಗಳು ಬತ್ತಿಹವು ಶಕ್ತಿಗಳು ಹತ್ತವೈ ಚಿತ್ತದೊಳು ಏನೂ ಎತ್ತುಗಳ ತೆರದಂತೆ ಸುತ್ತುತಲಿ ಭವದಲ್ಲಿ ಭಕ್ತಿಯನು ಕಾಣದಲೆ ಮೃತ್ಯುವಿಗೆ ತುತ್ತಾಹೆ ನಲ್ಲೋ 2 ಪರಿಪರಿಯ ಹರಕೆಗಳ ಪೂರೈಸಿ ಭಕುತರಿಗೆ ನಿರುತದಲಿ ಪೊರೆವವಗೆ ಭಾರವೇ ನಾ ನೊಬ್ಬ ಧೊರೆಯೇ ಗುರು ಸೇವೆ ಮಾಡರಿಯೆ ಬರಿ ಮೂಢ ಕಡು ಪಾಪಿ ಶಿರವಿಡುವೆ ಚರಣದಲಿ ಕರುಣಾಳು ಭರವಸೆಯೆ ನನಗೇ 3 ಪ್ರಹ್ಲಾದ ಬಲಿತಾತ ಬಾಹ್ಲೀಕ ಕುರುಪೋಷ ಶ್ರೀ ಹರಿಯು ಗುರುಭಕ್ತಿ ವಾಹಿನಿಯ ಹರಿಸೈಯ ಸತ್ಯಸಂಧಾ ದೇಹದಲಿ ಬಲವಿಲ್ಲ ಈಹಗಳು ಬಿಡದಲ್ಲ ಬಾಹಿರನು ನಿನಗಲ್ಲ ತ್ರಾಹಿ ಗುರು ನೀ ಬಲ್ಲೆ ಎಲ್ಲಾ4 ಶ್ರೀ ಮಧ್ವ ಗುರು ಚೇಲ ತಾಮಸರ ನಿರ್ಮೂಲ ಶ್ರೀಮಂತ ಗುಣಮಾಲ ಶ್ರೀ ಮನೋಹರ ಕೃಷ್ಣವಿಠಲ ಯಜಕಾ ಕಾಮಿತಾ ಫಲದಾತ ನೇಮದಲಿ ಹರಿನಾಮ ನುಡಿಸೆಂಬೆ ಸತತಾ 5
--------------
ಕೃಷ್ಣವಿಠಲದಾಸರು
ಗುರುದೈವದೊಲವೆÀನಗೆ ಬಲವೆ ಬಲವು ಏರಿ ಬಿನಗು ದೈವದ ಬಲವು ಯಾತಕೆ ಹಲವು ದ್ರುವ ಗುರುನಯನದೊಲವೆನಗೆ ನವನಿಧಾನದ ಬಲವು ಗುರುಅಭಯದೊಲುವೆ ನವಗ್ರಹದ ಒಲವು ಅನುದಿನ ಬಲವು ಸಿರಿ ಸಕಲಬಲವು 1 ಗುರು ದಯದೊಲವೆನಗೆ ತಾಯಿ ತಂದೆಯ ಬಲವು ಗುರು ಕರುಣದೊಲವೆನಗೆ ಬಾಹುಬಲವು ಗುರು ಬೋಧದೊಲವೆನಗೆ ಬಂಧುಗಳಗದ ಬಲವು ಗುರು ಧವರ್iದೊಲವೆನಗೆ ಸರ್ವ ಬಲವು 2 ಗುರು ಪ್ರಭೆದೊಲವೆನಗೆ ಅನುಭವಾಶ್ರಯ ಬಲವು ಗುರು ಙÁ್ಞನದೊಲವು ಘನÀ ದೈವ ಬಲವು ಗುರುನಾಮದೊಲವೆನಗೆ ಪಕ್ಷವಾಗಿ ಹ್ಯ ಬಲವು ತರಳ ಮಹಿಪತಿ ಸ್ವಾಮಿ ಬಲವೇ ಬಲವು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುರತ್ನ ಪರಮ ಪ್ರಿಯ ಕರುಣಾನಿಧೆ ನಿಮ್ಮ ಶರಣು ಹೊಕ್ಕೆನು ಪೊರೆಯಬೇಕೆನ್ನ ದೊರೆಯೆ ಪ. ವರ ತಂದೆ ಮುದ್ದುಮೋಹನ ದಾಸಾರ್ಯರೆ ಪರಿಪರಿಯಿಂದ ಭಕ್ತರನು ಪೊರೆಯುವರೆ ಪರಮಾರ್ಥ ಚಂದ್ರೋದಯದ ಪ್ರಕಾಶಕರೆ ಪರಿಮಳ ಸುನಾಮದಲಿ ಸರ್ವತ್ರವ್ಯಾಪಕರೆ 1 ತರತರದ ಸುಗುಣ ಮಣಿಮಾಲೆಯಿಂ ಶೋಭಿಪರೆ ವರಶಿಷ್ಯ ರತ್ನಪದಕಗಳಿಂದಲೊಪ್ಪಿಹರೆ ಸುರರಗಣ ಮಧ್ಯದಲಿ ಪರಿಶೋಭಿಸುತಲಿಹರೆ ಮೊರೆಹೊಕ್ಕವರ ಕಾಯ್ವ ಪರಮ ಕರುಣಾಕರರೆ 2 ಕನಸಿನಲಿ ಮನಸಿನಲಿ ಕಳವಳವ ಹರಿಸುವರೆ ಮನಸಿಜಪಿತನನ್ನು ಮನದಿ ನೆನೆಯುವರೆ ಇನಕೋಟಿತೇಜ ಶ್ರೀ ಶ್ರೀನಿವಾಸನ ಕೃಪೆಗೆ ಅನುಮಾನವಿಲ್ಲದೆಲೆ ಅರ್ಹತೆಯ ಕೊಡಿಸುವರೆ 3 ಭಕ್ತರನು ಪೊರೆಯುವ ಕಾರುಣ್ಯನಿಧಿ ಎಂದು ಪಾದ ನಂಬಿರುವೆ ಭಕ್ತವತ್ಸಲ ಶೇಷಶಯನನಾ ಸೇವೆಯನು ನಿತ್ಯ ಮಾಳ್ಪಂಥ ಸೌಭಾಗ್ಯ ನೀಡುವುದು 4 ಕವಿದಿರುವ ಅಜ್ಞಾನಪರೆಯನ್ನು ಛೇದಿಸುತ ಸವಿಯಾದ ಹರಿಯ ನಾಮಾಮೃತ ಉಣಿಸಿ ಪವನನಂತರ್ಯಮಿ ಗೋಪಾಲಕೃಷ್ಣವಿಠ್ಠಲ ತವಕದಿಂದಲಿ ಪೊಳೆವ ಸುಜ್ಞಾನ ನೀಡುವುದು 5
--------------
ಅಂಬಾಬಾಯಿ
ಗುರುರಾಜ | ನಮಿಪರ ಸುರಭೋಜ ಗುರುರಾಜ ಪ. ವರತಂದೆ ಮುದ್ದುಮೋಹನರೆಂದೆನಿಸುತ ಮೆರೆಯುತ ಜಗದೊಳು ಪೊರೆಯುವ ಕರುಣಿ 1 ಅಜ್ಞತೆ ತೊಲಗಿಸಿ ಸುಜ್ಞತೆ ಕೊಡುತಲಿ ವಿಘ್ನವ ತರಿಯುವ ಪ್ರಾಜ್ಞ ಮೂರುತಿಯೆ 2 ಸರಸಿಜಾಕ್ಷನ ಪದ ಹರುಷದಿ ಭಜಿಸುವ ಪರಮಪ್ರಿಯರು ಎಂದು ಬಿರುದು ಪೊತ್ತಿಹರೆ 3 ನಾಗಶಯನನಿಗೆ ಭೋಗವಪಡಿಸುವ ಆಗಮಜ್ಞರೆ ನಿಮಗೆ ಬಾಗುವೆ ಸತತ 4 ಸಾಸಿರ ಫಣೆಯಿಂದ ಸೂಸುವ ಕಾಂತಿಯೊಳ್ ವಾಸವ ವಿನುತ 5 ದೇವತಾಂಶದ ಗುರು ಪವಮಾನಿಗೆ ಪ್ರಿಯ ಭಾವಿಸಿ ಭಜಿಪರ ಕಾವ ಕರುಣಾಳು 6 ಶಾಂತಚಿತ್ತದಿ ಬಹು ಸಂತೋಷಪಡುತಲಿ ಅಂತರಂಗದಿ ಹರಿಯ ಚಿಂತಿಸುತಿರುವ 7 ಉದ್ಭವಿಸಿ ಜಗದಿ ಅಧ್ಭುತ ಮಹಿಮೆಯ ಒಬ್ಬೊಬ್ಬರಿಗೆ ತೋರಿ ಹಬ್ಬಿಪೆ ಹರುಷ 8 ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನನು ದೃಷ್ಟಿಗೆ ತೋರಿಸಿ ಕಷ್ಟ ಬಿಡಿಸಿರಿ 9
--------------
ಅಂಬಾಬಾಯಿ
ಗುರುರಾಜ ಕರುಣದಿ ನೋಡಯ್ಯ ಪ ಸುರಗಣ ಒಡೆಯನೆ ಕರವೆತ್ತಿ ಮುಗಿಯುವೆ ಕರೆಕರೆ ಮಾಡದೆ ಚರಣವ ತೋರಿಸು ಅ.ಪ. ಭವ ಮೋಚಕನ ಬಿಟ್ಟು ಭವಣೇಗಳನೆಪಟ್ಟು ನಾ ಒದ್ದಾಡುವೆ ಇಂದು ಅವನಿಯ ಜನರೊಳು ಅವಗುಣ ಪ್ರತಿಮೆಯ ತವಕದಿ ಪೊರೆಯದೆ ಜವನಡಿಕಳಿಸೊದೇ 1 ಅನುದಿನದೀ ನಾನು ಅನುಮಾನದಿಂದಲಿ ನೊಂದೆ ಅನಿಲನ ಹಾದಿಯ ಬಿಟ್ಟು ಅನ್ಯರಾನಂಬೀ ಕೆಟ್ಟೆ ತನುಮನ ನಿನ್ನಡಿ ಅರ್ಪಿಸಿನಂಬಿದೆ ದಿನದಿನ ದಯದಿಂ ನಿನ್ನವರೊಳು ಸೇರಿಸೊ 2 ಕಾಮಕೇಳಿಯಲಿ ಮುಳುಗಿ ಕಾಮಿನಿಯರ ಬರೆದೆ ಕಾಮಜನಕನ ಮರೆತೆ ಸೋಮಶೇಖರ ಪ್ರಿಯನೆ ಶಮದಮಪಾಲಿಸಿ ತಾಮಸ ಓಡಿಸಿ ಸಾಮಜವರದನ ಪ್ರೇಮವ ಕೊಡಿಸೋ 3 ಜ್ಞಾನಶೂನ್ಯನು ಆಗಿ ಶ್ವಾನಂದದಿ ಇರುವೆ ಮಾನಾಭಿಮಾನವನ್ನು ನಿನಗೆ ಅರ್ಪಿಸಿದೆನೊ ಅನಿಲನಶಾಸ್ತ್ರದಿ ಜ್ಞಾನವ ನೀ ನೀಡಿ ಮನದಲಿ ನಲಿನಲಿ ಮುನಿಗಳ ಒಡೆಯಾ 4 ವಿಧವಿಧ ಟೀಕೆಗಳನು ಮುದದಿಂದಲಿ ಮಾಡಿ ಮೋದವಂತದ ತತ್ವಗಳ ಮುಂದಕ್ಕೆ ತಂದೆಯೋ ಸದಯದಿ ಜಯಮುನಿ ವಾಯ್ವಾಂತರ್ಗತ ಮಾಧವ ಕೃಷ್ಣವಿಠಲನ ತೋರುತ 5
--------------
ಕೃಷ್ಣವಿಠಲದಾಸರು
ಗುರುರಾಯ ನಂಘ್ರಿಯಾ ಹಿಡಿ ಹಿಡಿ ಹಿಡಿ ಪರಮ ಸದ್ಭಾವನೆ ಜಡಿ ಜಡಿ ಜಡಿ ಪ ಎರವಿನಾ ಮನೆಯೊಳು ಸ್ಥಿರವೆಂದು ಮೈಯ್ಯವ | ಮರೆವರೇ ಹರಿನಾಮಾ ನುಡಿ ನುಡಿ ನುಡಿ 1 ಕರವ ಮುಗಿದು ಬಾಗಿ ತರಣೋಪಾಯವ ನಿನ್ನ | ಅರಿತು ಸ್ವಹಿತದಲಿ ನಡಿ ನಡಿ ನಡಿ2 ತಂದೆ ಮಹಿಪತಿ ಕಂದಗೆಚ್ಚರಿಸಿದಾ | ಪಡಿ ಪಡಿ ಪಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯನಂಥ ಕರುಣಾಳು ಕಾಣೆನು ಜಗದೊಳಗೆ ಪ ಏನೆಂದರಿಯದ ಪಾಮರ ನಾನು | ತಾನೊಲಿದೀಗೆನ್ನ ನುದ್ಧರಿಸಿದನು1 ತನ್ನನುಭವ ನಿಜ ಮಾತಿನ ಗುಟ್ಟು | ಎನ್ನೊಳುಸುರಿ ಘನ ತೋರಿಸಿ ಕೊಟ್ಟು | ಧನ್ಯನ ಮಾಡಿದಸೇವೆಯಲಿಟ್ಟು 2 ಮಾಡುವ ಘನ ತುಸು ತಪ್ಪನೆ ಹಿಡಿಯಾ | ಬೇಡಿಸಿಕೊಳ್ಳದೆ ನೀಡುತ ಪಡಿಯಾ | ರೂಢಿಗಾದನು ಇಹಪರದೊಡೆಯಾ3 ತನ್ನವನೆನಿಸಿದ ಮಾತಿಗೆ ಕೂಡಿ | ಮನ್ನಣೆಯಿತ್ತನು ಅಭಯವ ನೀಡಿ | ಇನ್ನೇನ ಹೇಳಲಿ ಸುಖ ನೋಡಿ4 ತಂದೆ ತಾಯಿ ಬಂಧು ಬಳಗೆನಗಾಗಿ | ನಿಂದೆ ಸದ್ಗುರು ಮಹೀಪತಿ ಮಹಾಯೋಗಿ | ಕಂದನ ಸಲಹುವ ಲೇಸಾಗಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯನಾ ಮನಿಯಾ ನಾಯಿ ನಾನು ಪ ಗುರು ಗುರು ಎನುತಲಿ ಇರುವೆ ಬಾಗಿಲದೊಳು | ಗುರುವಿನೆಂಜಲ ನುಂಡು ಸುಖಿಸುವೆ ನಮ್ಮಯ್ಯನಾ 1 ಹರಿ ಶರಣರ ಕಂಡು ಗರುವಿಸಿ ಕೆಲಿಯೆನು | ದುರುಳರ ಬೆನ್ನಟ್ಟಿ ಹೋಗೆನಾ ನಮ್ಮಯ್ಯನಾ 2 ಒಡೆಯನ ಮುಂದೆ ಯನ್ನಾ ಒಡಲವ ತೋರುವೆ | ಬಿಡದೆ ಅಂಗಣದೊಳು ಹೊರಳುವೆ ನಮ್ಮಯ್ಯ ನಾ3 ಹರಿನಾಮದಿಂದ ಭೋಂಕರಿಸಿ ವದರುವೆ | ಬರಗುಡೆ ಹಮ್ಮ ಸ್ವಜಾತಿಯ ನಮ್ಮಯ್ಯ ನಾ 4 ತಂದೆ ಮಹಿಪತಿ ಸ್ವಾಮಿ ಬಂದು ಮೈಯ್ಯಾದಡವಿ | ನಿಂದು ತನ್ನ ಬಿರುದಕ ಹಾಕಿದ ನಮ್ಮಯ್ಯನ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವಚನದಲಿ ನಂಬನು ನರಭಾವ ಅವರೊಳು ಕಾಂಬನು ಕರಣ ತ್ರಯದಲಿ ಶುಂಭನು ಗುರು ಭಕ್ತ ನೆನಿಸದರೇನು ಮಾ 1 ಸರ್ವರೊಳು ಹರಿ ನೋಡದೇ ಗರ್ವದ ಗುಣಗಳೀಸಾಡದೆ ನಿಜ | ದರ್ವಿನೊಳು ಮನ ಕೂಡದೇ | ಭಾಗವತರೆನಿಸಿದರೇನು ಮಾ 2 ವಾಸನಿಯ ಬಲ ಕಡಿಯಾ ದೇವೆ | ಆಸೆಯಲಿ ಮನ ಜಡಿಯದೆ ನಿಜ | ದ್ಯಾಸದಂಡವ ಪಿಡಿಯದೆ ಸ | ನ್ಯಾಸಿಯೆನಿಸಿದರೇನು ಮಾ 3 ನುಡಿಯ ಬೀರುತ ಸಂತರಾಜನ | ರೊಡನೆ ಹಾಕುತ ಸಿಂತರಾ ತಮ್ಮ | ನಡತಿ ನೋಡಲು ಭ್ರಾಂತರಾ ತಾ | ಸಂತ ನೆನಿಸಿದರೇನು ಮಾ 4 ತಂದೆ ಮಹಿಪತಿ ಪಾದವಾ ಬೆರೆ | ಭವ | ಬಂಧ ಮಾಡದೇ ವಾತಾ | ಬಂದ ಜನಮಕಿದೇನು ಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವರನನು ಭಜಿಪೆ ಶ್ರೀ ಶೃಂಗೇರಿ ಗುರುವರನನು ಭಜಿಪೆ ಪಪರಮ ಪಾವನನಾದ ಗೂಢತತ್ವವನೊರೆವನರಸಿಂಹಭಾರತಿ ಗುರುವರನನು ಭಜಿಪೆ ಅ.ಪಸ್ವರ್ಣಪೀಠದಿ ಕುಳಿತು ಸ್ವರ್ಣಾಂಬರವ ಪೊದ್ದುಚಿನ್ಮುದ್ರೆಯನು ಧರಿಸಿ ಪನ್ನಗಭೂಷಣ ಪರಶಿವನಂದದಿತನ್ನ ಭಕ್ತರ ಕರೆದು ಛಿನ್ನಸಂಶಯರಮಾಳ್ಪ 1ಮಣಿಮಯ ಮಕುಟವ ಮಸ್ತಕದೊಳಗಿಟ್ಟುಮಣಿಮಾಲಿಕೆಯ ಧರಿಸಿ ದಿನಮಣಿಶತತೇಜವನು ಬೆಳಗುತ್ತ ತಾನುಘನ ಶಾಸ್ತ್ರಮಾರ್ಗವನನುವದಿಸುತಲಿಹ 2ಚಂದ್ರಗಾ'ಯನುಟ್ಟು ಚಂದ್ರಮೌಳೀಶ್ವರನಛಂದದಿ ಪೂಜಿಸುತ ಸಿಂಧುಜಾ ಧವನಾದ ತಂದೆ ವೇಂಕಟಪತಿಯಂದದಿ ದಾಸಗಾನಂದವನಿತ್ತು ಪೊರೆವ 3
--------------
ನಾರಾಯಣದಾಸರು
ಗುರುವೆ ನಮ್ಮ ತಾಯಿ ತಂದೆ | ಗುರುವೆ ನಮ್ಮ ಬಂಧುಬಳಗಗುರುವೆ ನಮ್ಮ ಸರ್ವಸ್ವವು ಗತಿಗೋತ್ರರಯ್ಯಾ ಪ ತಂದೆ ತಾಯಿ ಮಗುವಿಗಾಗಿ | ನೊಂದಿ ಬಳಲಿ ಸಾಕುವಂತೆಎಂದೆಂದು ಅವರೆ ನಮ್ಮ ಸದುಪದೇಶದೀ |ಬಂಧನಕ್ಕೊಳಗಾಗದಂತೆ | ಮಂದರೋದ್ಧರನ ನಾಮಅಂದದಿಂದ ಬೋಧಿಸುತ್ತ | ಉದ್ಧರಿಸುವರಯ್ಯಾ 1 ಮುದ್ದು ಮೋಹನದಾಸರಿಂದ | ಬದ್ಧಶಿಷ್ಯರೆನಿಸಿಕೊಂಡುಶುದ್ಧರು ಅವಧೂತರು | ಹರಿಯನ್ನೆ ಕಂಡೂ |ಗೆದ್ದು ತಾವು ಬಂಧದಿಂದ | ಉದ್ಧರಿಸಲನ್ಯರನುಸಿದ್ಧರಾಗಿ ಕರಿಗಿರೀಲಿ | ದಾಸಕೂಟ ನೆರೆಸೀದ 2 ಸನ್ನುತ ಪರ | ವಸ್ತುವೆಂದು ಬೋಧಿಸಿದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗುರುವೆ ನಿಮ್ಮನು ನಾ ಮೊರೆಹೊಕ್ಕೆನಲ್ಲದೆ ಅರಿಯೆ ಅನ್ಯರನಿನ್ನು ಪೊರೆಯಿರೀಗ ಪ. ಸಿರಿಯರಸನ ತೋರಿ ಗುರುವೆ ಕರುಣಿಸಿರಿ ತರತಮ್ಯ ತಿಳಿಸುತ ಹರಿಸಿರಿ ಭವದುಃಖಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಹಿಂದು ಮುಂದರಿಯದೆ ಕುಂದಿದೆನು ಬಂದು ಕರುಣದಿ ಆನಂದವ ನೀಡುತ ನಂದಕಂದನ ಲೀಲೆಯಿಂದ ರಕ್ಷಿಸಿದಿರಿ1 ಮುಸುಕಿದ ಅಜ್ಞಾನ ಹಸನಾಗಿ ತೊಲಗಿಸಿ ಕುಶಲದ ಮತಿಯಿತ್ತು ಪಾಲಿಸುತ ಬಿಸಜಾಕ್ಷನು ದಯ ಎಸೆವ ಕರುಣದಿಯಿತ್ತು ಘಸಣೆಗೊಳಿಸದಲೆ ವಸುಮತಿಯೊಳು ಪೊರೆವ 2 ಕಷ್ಟವಪಡಲಾರೆ ಸೃಷ್ಟಿಯೊಳಗಿನ್ನು ತಟ್ಟದೆ ಎನ್ನ ಮೊರೆ ಮನಸಿಗೀಗ ಕೊಟ್ಟು ಅಭಯವನು ಘಟ್ಯಾಗಿ ಪೊರೆಯಿರಿ ಕೆಟ್ಟ ಕಲ್ಮಷ ಕಳೆದು ಸೃಷ್ಟಿಗೊಡೆಯನ ತೋರಿ 3 ತಲ್ಲಣಿಸುತಿಹೆ ಕ್ಷುಲ್ಲ ದೇಹದಿ ಬಂದು ಒಲ್ಲೆನು ಈ ದುಃಖಭವ ಎಲ್ಲ ಮನಸು ನಿಮ್ಮ ಪಾದದಲಿರುವುದು ತಲ್ಲಣಗೊಳಿಸದೆ ಪೊರೆಯಿರಿ ಗುರುದೇವ 4 ತಂದೆ ಮುದ್ದುಮೋಹನವಿಠ್ಠಲನೆಂಬೊ ಇಂದಿರೇಶನ ಅಂಕಿತದಿ ಮೆರೆವೊ ಸುಂದರ ಗೋಪಾಲಕೃಷ್ಣವಿಠ್ಠಲನ ಎಂದೆಂದಿಗೂ ಮನಮಂದಿರದಲಿ ಕಾಂಬ 5
--------------
ಅಂಬಾಬಾಯಿ
ಗುರುವೆನ್ನ ತಾಯಿ ಸದ್ಗುರುವೆನ್ನ ತಂದೆ ಗುರುಕೃಪೆ ಪಡೆದು ನಾ ಹೆಸರಿಗೆ ಬಂದೆ ಪ ಗುರುವೆನ್ನ ಪ್ರಾಣಲಿಂಗಾ ಗುರುವೆನ್ನ ಇಷ್ಟಲಿಂಗಾ ಗುರುಪ್ರಕಾಶವು ಬೆಳಗುತಿರೆ ಸರ್ವಾಂಗಾ ಗುರುಸ್ಮರಣೆ ಸುಖರಂಗಾ ಗುರುಕರುಣಾ ಕೃಪಾಂಗಾ ಗುರುವಿಂದಧಿಕ ಕಾಣೆ ಶಿವನಾಣೆ ಗುರುವೆನ್ನ 1 ಗುರುವೆ ಈ ಪೃಥವಿಯು ಗುರುವೆ ಆಕಾಶವು ಗುರುವೆ ಸ್ಥಾವರ ಜಂಗಮವೆಲ್ಲವು ಗುರುರೂಪವೆಂದು ಶ್ರೀ ಗುರು ಕರುಣದಂದರಿತು ಗುರು ಸರ್ವರಿಗೆ ಸರಿಯಲ್ಲಾ ಶಿವಬಲ್ಲ 2 ಗುರುವೆ ದೇವಾಂಗಾ ಶ್ರೀ ಗುರುವೆ ಬಸವಲಿಂಗಾ ಗುರು ಬ್ರಹ್ಮವಿಷ್ಣುರುದ್ರ ಸ್ವರೂಪ ಗುರು ಧರಣಿಪಾಲಾ ಗುರು ವಿಮಲಾನಂದ ಲೋಲಾ ಗುರು ಸಿದ್ಧೇಶ್ವರಸ್ವಾಮಿ ಭಕ್ತ ಪ್ರೇಮಿ 3
--------------
ಭಟಕಳ ಅಪ್ಪಯ್ಯ
ಗುರುವೇ ನೀ ಕರುಣಿಸದಿರಲಿನ್ಯಾರು ಕರುಣಿಪರೋ ಪ ಕರಿಗಿರಿಪುರ ತಂದೆ ಮುದ್ದು ಮೋಹನ್ನ ಅ.ಪ. ಮೊರೆಹೊಕ್ಕ ಜನರ ಕೈ ಬಿಡುವರೇನೋಚರಣ ಯುಗ್ಮಕೆ ನಿನ್ನ ನಮಿಸುವೆನೋ |ಭಾರ ವಹಿಸಿ ಬೇಗ ಸಲಹಬೇಕೋ |ಜರೆಯು ನುಂಗುವ ಮುನ್ನ ಪೊರೆಯ ಬೇಕೋ 1 ಭವ ರೋಗವ ಕಳೆಯೋಉನ್ನತ ಪದವಿಗೇರುವ ದಾರಿ ತೋರೋ |ಘನ್ನ ಮಹಿಮ ನಿನ್ನ ಹೊರತು ಮತ್ಯಾರೋಎನ್ನ ಅಂಕಿತ ನಾಮ ಹರಿಯನ್ನ ತೋರೋ 2 ಹಂಬಲ ಕೊಡು ಎನಗೆ ಹರಿಪಾದದಲ್ಲೀನಂಬಿ ತುತಿಪೆನಯ್ಯ ತವ ಪಾದದಲ್ಲೀ |ಬಿಂಬ ಗುರು ಗೋವಿಂದ ವಿಠ್ಠಲನಲ್ಲಿಹಂಬಲ ಸ್ಥಿರವಾಗಿ ನಿಲಿಸೋ ನೀನಲ್ಲೀ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋತ್ರ ಪ್ರವರ ಉಚ್ಚಾರಣೆ ವಂದೇ ಕಾಣೊ ಧಾತ್ರಿಯೊಳಗೆ ತಂದೆ ಮಕ್ಕಳು ಮಾಡುವ ಕಾ | ಲತ್ರಯದ ಸಂಧ್ಯಾವೆಲ್ಲ ಎಂದಿಗೂ ಭೇದವಿಲ್ಲಾ ಪ ಮಾತ್ರ ನುಡಿಸುವ ಬುದ್ಧಿ ಪೇಳಿ | ಚಿತ್ರವ ಗೋಡೆಯ ಮೇಲೆ ರಚಿಸಿರಲು ನೋಡಿ ಸ್ತೋತ್ರ ಮಾಡಿದರೆ ಯೇನಾಹದೋ1 ಚಿತ್ರಿಕ ಬಲು ವಿವೇಕ ಉಳ್ಳವನೆಂದು ಪಾತ್ರರ ಮುಂದೆ ಕೊಂಡಾಡಿದಂತೆ | ಧಾತ್ರಿಯೊಳಗೆ ನಮ್ಮ ಪುರಂದರದಾಸರ ಸ್ತೋತ್ರ ಮಾಡಿರಯ್ಯ ಸಚಲರಾಗೀ 2 ಗಾತ್ರ ನಿರ್ಮಲವಕ್ಕು ಯೆಂದೆಂದಿಗೆ ದಿವ್ಯ | ನೇತ್ರದಿಂದಲಿ ಹರಿಯ ಸರಿದರುಶನಾ | ರಾತ್ರಿಂಚರೆಯೆಂದು ಪೆಸರುಳ್ಳವು ಕುಮುದ ಮಿತ್ರಗೆ ಸರಿಯೇನು ಉಳದಾದವು 3 ಸ್ತೋತ್ರಾಭರಣವಾದ ದಾಸರ ಶವನಕ್ಕೆ ಅ ನ್ಯತ್ರ ನುಡಿವದು ಧಿಕ್ಕರಿಪದು | ನಿತ್ರಾಣವಾದ ಮನುಜ ಹಿರಿಯರ ವಿತ್ತದಿಂದ ಯಾತ್ರಿ ಮಾಡಿ ಪುಣ್ಯ ಘಳಿಸಿದಂತೆ 4 ಸ್ತೋತ್ರ ಮಿಟಮ್ಯಾಲೆ ಪಂಗ್ತಿ ಹಾಕಿ ಕೊಡಲು ಮಾತ್ರೆಗಳ ನೋಡಿ ಬರದಂತೆ ವೋ | ಶತ್ರು ಸಂಹಾರ ನಮ್ಮ ವಿಜಯವಿಠ್ಠಲನಂಘ್ರಿ ಶತ ಪತ್ರ ಬಲ್ಲವರಿಗೆ ಯಿದೆ ವಿಸ್ತಾರ ನಿರ್ಮಾಣ 5
--------------
ವಿಜಯದಾಸ