ಒಟ್ಟು 4153 ಕಡೆಗಳಲ್ಲಿ , 123 ದಾಸರು , 2573 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆಂದುಸುರುವೆ ಈ ನವರಾತ್ರಿಯಾ | ಸ್ವಾನಂದ ಸುಖಮಯ ಮಹಿಪತಿ ಚರ್ಯಾ ಪ ಮೊತ್ತ ಜನರು ಕೂಡಿ ಭಿತ್ತಿ ಬಾಗಿಲುಗಳ ಬಣ್ಣದಿ ನಿಚ್ಚಳ | ತೆತ್ತ ಮಾಡಳರವಿ ತಳಿಲು ತೋರಣದಿ | ಮತ್ತೆ ದೇವಾಲಯ ಮಂಡಿತ ಜಗಲಿಯಾ | ಸುತ್ತ ಕದಳೀ ಕಂಭದಿ ಮ್ಯಾಲಿಯ | ಉತ್ತಮ ಮಂಟಪದಿ ತರಗು ತೆಂಗು | ಉತ್ತತ್ತೀ ಬಹು ಓಲವೀ ಕಟ್ಟಿಹ | ವತ್ತೊತ್ತಿ ಥರ ಥರದಿ ನಮ್ಮಯ್ಯಾನಾ 1 ಕಡಲೆ ತಂಡುಲ ಗುಡ ಶರ್ಕರವ ಮತ್ತೆ ಗೂಡಿಹ ಸಮಸ್ತ | ಘೃತ ವಡವೆಯ ತುಂಬಿಹ ಸ್ಟೈಪಾಕ ಮಾಡಲಿ | ತಡೆಯದೆ ಕೊಡುತಿಹರು ಓಡ್ಯಾಡಲು | ಅಡಿಗಡಿಗೊಬ್ಬೊಬ್ಬರು ಆಜ್ಯವ | ಧೃಡ ಭಕ್ತಿಯುಳ್ಳವರು ನಮ್ಮಯ್ಯನಾ 2 ಏಕೋ ಭಾವನೆಯಲಿ ಯಾತ್ರೆಯ ಸದ್ಭೋಧಾಸಕ್ತರು | ಬೇಕಾದಿ ಸಾಕುವದೇವ ದೇವರಾ ಸಾರಿ ಸುಜನ ವಿಂಡು | ಹಾಕಿ ಸಾಷ್ಟಾಂಗದಲಿ ಪರಿ ಲೋಕ ನೆರೆಯುತಿರಲಿ ನಮ್ಮಯ್ಯನಾ 3 ಮೊದಲಿನ ದಿವಸದಿ ಸಂಧ್ಯಾವಂದನಜಪಾನುಷ್ಠಾನಾ | ವಿದಿತ ಬಂಗಾರ ವೆಳಿಯಲಿ ಬರೆದ ಚದುರ | ಝಗ ಝಗ ಅದು ನಕ್ಷತ್ರ ಮಾಲಿ ನಮ್ಮಯ್ಯನಾ 4 ಪಡದಿಯ ಸೋಂಪಿಲಿ ಬಹು ವಿಚಿತ್ರ | ಸಡಗರದಲಿ ದೇವ ಸಂಪುಟ ಮೆರೆವಾ| ವಡೆಯನ ಏನೆಂದ್ಹೇಳಲಿ ನಮ್ಮಯ್ಯಾನಾ 5 ಸನ್ನುತ ಗಂಗೆಯ ಸಲಿಲವು ಮುನ್ನ ಪಂಚಾಮೃತ ದಾಗಲು ಅಭಿಷೇಕ | ಸುಗಂಧವನ್ನು ಅರ್ಪಿಸಿ ಚಲ್ವದಾ ಸಾಲಾದಾ | ಘನ್ನ ದೀಪದೆಡೆ ಬಲದಾ ನಮ್ಮಯ್ಯನಾ 6 ಪರಿಮಳ ದಿಂಡಿಗೆ ಪರಿ ಪುಷ್ಪದಾ ಪಸರಿಕೆ ಬಹುಳವಾ | ತರುವಾರಾ ಧೂ ಬಲವೆಡಾ ಊದುಬತ್ತಿಯ ಗಿಡಾ | ನೆರೆ ಏಕಾರತಿಯಾಗಲಿ ನೈವೇದ್ಯ ಹರಿವಾಣವನು | ಬರಲಿ ಹರಿಗೆ ಪ್ರತ್ಯಕ್ಷದಲೀ ನಮ್ಮಯ್ಯನಾ 7 ವಾದಾ ಪೂಗೀ ಫಲಾ ಹರಿವಾಣ ಆರತಿ ಪೂರಣಾ | ಛಂದ ಭೇದಿಸಿ ಘನತಾಳಾ ಬಲು ಶಂಖ ನಾಮ ಘೋಷದಿತಿಂತ | ರಾದವರು ಪಾಡಲೀ ನೀರಾಂಜನ | ಸಾದಿಪ ಸಮಯದಲಿ ಕಣ್ಣಿನಲಿ ನಮ್ಮಯ್ಯನಾ 8 ಮೆರೆವ ಷೋಡಷದಿಂದ ಹರಿತೀರ್ಥಕೊಳ್ಳಲು ಹರುಷದಿ ಜನಗಳು | ಕರುವೇದ ಘೋಷ ಮಾಡು ಮಾಡಿ ಕುಳ್ಳಿರೆ | ಪರಮಾನ್ನ ಪರಿ ಶಾಕಗಳು ಸೂಪಘೃತ | ಗಿರಿಸಿಹ ದೀಪಗಳು ನಮ್ಮಯ್ಯನಾ 9 ಪ್ರೌಢದಿ ಹರಿ ನಾಮಾ ಆಡಲೇನದು ತೃಪ್ತಿ ಆಯಿತು ಉಂಡು | ನೀಡೆ ವೇದೋಕ್ತದ ನುಡಿ ಆಶೀರ್ವಾದ | ಮಾಡುತ ಬ್ರಾಹ್ಮರು ಮನೆಗೆ ಹೋಗುವರು | ಗಾಡ ಮದ್ದಲೆ ಸದರು ಸಭೆಯೊಳುಗೂಡಿ | ಒಡೆಯನಿದಿರು ಹರಿಯ ಕೊಂಡಾಡಿ ಆರತಿಯತ್ತೀರ ನಮ್ಮಯ್ಯನಾ 10 ಮುಂಚಿಲಿ ನಡೆಯಲು ಅರ್ಚನೆಯಾ ಅರ್ತಿ | ಸಂಭ್ರಮದಲಿ ನೋಡಿ ಸದ್ಗತಿ ಸೂರ್ಯಾಡಿ | ಕೊಂಬರು ಸ್ವಸ್ಥಲ ಕುರಿತು ಆಜ್ಞೆಗಳ | ಇಂದಿಲ್ಲ ಆನಂದದೀ ಈ ಮಹಿ ಮಾಡಂಬರೆನ್ನ ಮುಖದಿ ನುಡಿಸಿದ | ಶಂಭು ಮಹಿಪತಿ ದಯದಿ ನಂದನ | ಬೊಂಬಿ ಸೂತ್ರ ದಂದದಿ ನಮ್ಮಯ್ಯನಾ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂಬೆ ನಿಮ್ಮ ಕರುಣವು ದೇವವರ್ಯ, ಶ್ರೀಮ- ಪ ದಾನಂದತೀರ್ಥಾರ್ಯ ಹರಿಕಾರ್ಯಧುರ್ಯ ಅ.ಪ. ವಾರಿಧಿಯ ಗೋಷ್ಪಾದ ನೀರಂತೆ ದಾಟ್ಯಂದುಮಾರು ಮಲೆತಾಕ್ಷನನು ಮುರಿದು ಮೆರೆದೆಸಾರಿ ಬಹ ರಕ್ಕಸರ ಮುರಿದÉೂಟ್ಟಿ ನೀನಿಂದುಮೇರೆಯಿಲ್ಲದ ಭವಾಂಬುಧಿಯ ದಾಟಿಸಿದೆ 1 ದಾನವನಶೋಕವನ ಕಿತ್ತು ಈಡ್ಯಾಡಂದುಶ್ರೀನಾಥಗೆನುತ ಲಂಕೆಯನುರುಪಿದೆಮಾನವರ ಶೋಕವನ ಬೇರೊರಸೆ ಕಿತ್ತಿಂದುದಾನವರಿಹ ಪುರವ ಪೂರೈಸಿ ಮೆರೆದೆ 2 ಬೇಗ ಸಂಜೀವನವ ತಂದಿತ್ತು ಪೊರೆದ್ಯಂದುನಾಗಪಾಶದಿ ನೊಂದ ಕಪಿಕಟಕವಈಗ ಹರಿಭಕುತಿ ಸುಧೆಯ ನೆರೆದು ಪಾಲಿಸಿದೆರಾಗದಿಂ ಭವಪಾಶಬದ್ಧ ಜನರುಗಳನ್ನು 3 ಭವಾಬ್ಧಿ ಮಗ್ನ ಜನಗಳನಿಂದು 4 ಹತ್ತು ದಿಕ್ಕನು ಗೆಲಿದು ರಾಜಸೂಯದಿ ಅಂದುಚಿತ್ತೈಸಿ ಹರಿಗಗ್ರ ಪೂಜೆಯನು ಮಾಡಿದೆಹತ್ತೆರಡು ಮತ್ತೊಂದು ದುರ್ಭಾಷ್ಯ ಜರಿದಿಂದು ಬಿತ್ತರಿಸಿದೆ ಭಾಷ್ಯದಿಂದಗ್ರಪೂಜೆಯನು 5 ದ್ರೌಪದಿಯ ಸಂತವಿಟ್ಟಂದು ಮುಡಿ ಪಿಡಿದೆಳೆದಪಾಪಿ ದುಶ್ಶಾಸನನ ಬಸುರನ್ನು ಬಗೆದೆಪಾಪಿ ಜನರುಗಳೆಳೆಯೆ ವೇದಾಂತ ದೇವಿಯರಶ್ರೀಪತಿಗೆ ಸೇರಿಸಿದೆ ಭಾವವರಿದಿಂದು 6 ಅಂದು ಕಲಿಯಂಶ ದುರ್ಯೋಧನನ ಸಂದುಗಳಕುಂದದೆ ಮುರಿದೆ ಗದೆಯಿಂದ ಸದೆದುಇಂದು ಕಲಿಯನನೇಕ ಶಾಸ್ತ್ರ ಶಸ್ತ್ರಗಳಿಂದಕೊಂದೆಳೆದೆ ಹರಿಯ ಮನ್ನೆಯದಾಳು ಭಳಿರೆ 7 ಶ್ರುತಿಪಂಕಜಗಳರಳೆ ಅಜ್ಞಾನ ತತಿಯೋಡೆಗತಿಗಳಡಗೆ ಮಿಥ್ಯವಾದಿ ಖಳರಕುಮತಗಳು ಮುರಿಯೆ ಸತ್ಪಥವು ಕಾಣಿಸಲುವಿತತವಾಯಿತು ನಿನ್ನ ಪ್ರಭೆ ಸೂರ್ಯನಂತೆ 8 ಜ್ಞಾನಚಂದ್ರಿಕೆ ಪೊಳೆಯೆ ಭಕ್ತಿವಾರಿಧಿಯುಕ್ಕೆಮನ ಚಕೋರವು ವಿಷ್ಣುಪದದಿ ನಲಿಯೆದೀನ ಜನ ಭಯವಡಗೆ ತಾಪತ್ರಯಗಳೋಡೆಆನಂದತೀರ್ಥೇಂದು ಶ್ರೀ ಕೃಷ್ಣ ತಾ ಮೆಚ್ಚೆ 9
--------------
ವ್ಯಾಸರಾಯರು
ಏನೆಂಬೆನು ಪವಮಾನ ದೇವನಲಿ ಶ್ರೀನಿವಾಸ ಕರುಣಾ ತಾನಾಗೀತನಕಡೆಯಲಿ ಬಹ ಲಕ್ಷ್ಮೀಮಾನ, ದೀನ ಶರಣಾ ಪ. ದುರುಳ ದಶಾಸ್ಯನ ಸೆರೆಯೊಳಗಿಕ್ಕಿದ ಸುರವರನಣುಗನನೂ ನೆರೆಯದೆ ಮಾರುತಿ ಇರುವ ನಿಮಿತ್ತದಿ ಕರಿಸಿದ ರವಿಜನನು ತಿರುಗಿ ದ್ವಾಪರದಿ ಬರಲಾರ ರವಿಜನ ನರನಿಂದೊರಸಿದನು ಎರಡು ಯುಗದೊಳೀ ತೆರದಲಿ ಭಾರತಿ ವರನನು ಸೇರಿದನು 1 ಶ್ರೀಕರ ಜೀವರಿಗೇಕೀ ಭಾವವ ಪೋಕ ಮೃಗಗಳಂದೂ ಕಾಕರಟನದಂತೊರೆವದನರಿತು ದಿ- ವೌಕಸಗಣಬಂದು ಶ್ರೀಕಮಲಾಸನ ವಂದ್ಯನೆ ಸಲಹೆನೆ ಸಾಕುವ ತಾನೆಂದೂ ಈ ಕಲ್ಯಾಣ ಗುಣಾಢ್ಯನ ಭೂಮಿಗೆ ತಾ ಕಳುಹಿದನಂದು 2 ಅದರಿಂ ತರುವಾಯದಲಿ ಸುಖಾಂಭುದಿ ಒದಗಿದ ತ್ವರೆಯಿಂದ ಪದುಮನಾಭ ಮೂರುತಿಯ ಕೆಲದಿ ನಿಂ- ದದುಭುತ ಭರದಿಂದಾ ವಿಧಿಭವ ಲೋಕಾದ್ಯಧಿಕೃತ ಪುಣ್ಯಾ ಸ್ಪದ ತೋರುವೆನೆಂದಾ ವಿಧಿ ಪದ ಯೋಗ್ಯನ ಚದುರತನಕೆ ಮೆಚ್ಚಿ ಪೂರ್ಣಾನಂದ 3 ವರ ವೈಕುಂಠವ ರಜತ ಪೀಠ ಸ- ತ್ಪುರದೊಳಗಿರಿಸಿಹನು ವಿರಜೆಯ ಮುನಿಕಡತ ಸರಸಿಗೆ ಕರೆಸಿದ ಮುರದಾನವಹರನು ಚರಣಾಂಬುಜಕಿಂಕರವರ ಚಂದ್ರೇ- ಶ್ವರನಲಿ ಕರುಣವನು ಇರಿಸಿ ಭಜಿಪ ಸುರತರುವೆನಿಸಿದ ಶ್ರೀ- ವರನ ಮಹಾತ್ಮೆಯನು 4 ಜ್ಞಾನಾನಂದಾಂಬುಧಿ ಶೇಷಾದ್ರಿಯ ಶ್ರೀನಿವಾಸನಿವನು ತಾನಾಗಿಲ್ಲಿಗೆ ಬಂದಿಹ ಭಕ್ತಾ- ಧೀನ ದಯಾಕರನು ಮಾನಸಗತ ಮಾಲಿನ್ಯವ ಕಳೆದನು ಮಾನವ ಬಿಡಿಸುವನು ನಾನಾಭೀಷ್ಟವ ನಿರವಧಿ ಕೊಡುತಿಹ ಮೌನಿ ಜನಾರ್ಚಿತನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನೇನಿಲ್ಲದ ಧನಹೀನನಿಗೆ ಹರಿ ನಾಮವೆ ಭಾಗ್ಯಕರ ಸಾಧಿಸು ಮುಕ್ತೀಕರ ಪ ನೊಂದನು ಮಾಡದಿರೆ ಇಂದಿನ ಜನ್ಮದೊಳಗೆ ದಾರಿದ್ರ್ಯವು ಬಂದು ಪೀಡಿಸುತಲಿದೆ ಮುಂದೆ ಸಾಧಿಸಿ ಕೊಂಬೆನೆಂದರೆ ಕೈಯೊಳೊಂದರೆ ಕಾಸಿಲ್ಲವು ಪಾಲಿಸೋ ಹರಿಯೇ 1 ಕುಟ್ಟಿ ಕೊಂದರೆ ಪಣೆಯ ನಿನ್ನಿಷ್ಟವಮನ ದಣಿಯ ಪಡೆದಷ್ಟು ಉಣ್ಣಬೇಕಲ್ಲದೆ ಪೂಜಿಸೋ ಹರಿಯೆ 2 ಮಾತ್ರವು ಸುಖವಿಲ್ಲ ಜಗದೇಕ ವಂದ್ಯನ ನೆನೆಸು ಶ್ರೀ ಲಕ್ಷ್ಮೀಶನ ಭಜಿಸಿದರೆ ಬೇಕಾದನಿತುವನಿತ್ತು ಕಡೆಗೆ ತನ್ನ ಲೋಕವ ಪಾಲಿಪನು 3
--------------
ಕವಿ ಪರಮದೇವದಾಸರು
ಏಸು ರೂಪಾಯ್ಗೆ ಕೊಂಡು ಕೊಂಡೆವ್ವಾ ಒಸರುವ ಗಡಿಗೆ ಪ ಏಸುರೂಪಾಯ್ಗೆ ಕೊಂಡುಕೊಂಡೆವ್ವಾ ಏಸುರಾಪಾಯ್ಗೆ ಕೊಂಡುಕೊಂಡಿ ಹೇಸಿಕೊಳ್ಳದೆ ಇದನು ನೀನು ಬೇಸರಿಲ್ಲದೆ ತೊಳೆಯುತಿದ್ದಿ ವಾಸನಿಕ್ಕಿ ನಾರುತಿದೆ ಅ.ಪ ಎಂಥ ಕುಂಬಾರಿದನು ಮಾಡಿದ ಎಷ್ಟುಕಾಲದಿ ಕುಂತು ಇದಕೆ ಶೋಧ ಹುಡುಕಿದ ಅವನು ದಾವ ಸಂತೆಯೊಳಗೆ ಕುಂತು ಮಾರಿದ ಕೊಂಡೇನುತಿಳಿದ ತಂತು ತಿಳಿಯದೆ ಹೊತ್ತುಕೊಂಡು ನಿಂತಿಯಿದರ ಖ್ಯಾಲಿನೊಳಗೆ ಸಂತೆ ತೀರಿಹೋಗಲಾಗೇನಂತ ಹೇಳುವಿ ಕೇಳುವವರಿಗೆ 1 ಕಷ್ಟದ್ಹೊತ್ತು ಕುದಿಯುತಿದ್ದ್ಯಲ್ಲ ಹುಚ್ಚು ಎಷ್ಟುದುಡಿದು ತುಂಬುತಿದ್ದ್ಯಲ್ಲ ನಿಲ್ಲದಿನಿತು ಅಷ್ಟು ಒಸರಿ ಬಸಿಯುತಾದಲ್ಲ ಖೂನ ನಿನಗಿಲ್ಲ ನಟ್ಟನಡುವೆ ಗಂಟುಬಿದ್ದು ಕೊಟ್ಟು ನಿನಗೆ ಕಷ್ಟ ವಿಧ ವಿಧ ಕಟ್ಟ ಕಡೆಗೆ ಕೈಯ ಬಿಟ್ಟು ಕೆಟ್ಟು ಮಣ್ಣು ಕೂಡುತಾದೆ 2 ಮಸಣಿಬುದ್ಧಿ ನೀಗಿ ಕೇಳಮ್ಮ ನಿಜವನಿರುತ ಕುಶಲರ್ಹೇಳುವ ಮಾತು ತಿಳಿಯಮ್ಮ ಮುಂದೆ ಮಹಕಾಲ ನಿಶೆಯು ಒದಗುತದೆ ತಂಗೆಮ್ಮ ಪುಸಿಯಲ್ಲವಮ್ಮ ಮಸಿಯ ಗಡಿಗ್ಹಿಡಿದು ಹಸನಮಾಡಿ ವಸುಧೆಗಧಿಕ ಶ್ರೀರಾಮಪಾದ ಕುಸುಮಕರ್ಪಿಸಿ ಧನ್ಯಳಾಗಿ ಅಸಮಮೋಕ್ಷಪದವಿ ಪಡೆಯೆ 3
--------------
ರಾಮದಾಸರು
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ಏಳು ಕೇಶವಾ ಶ್ರೀಮಾಧವಾ ಏಳು ಏಳು ಕೇಶವಾ ಪ ಏಳಯ್ಯ ಮಧುಸೂದನ ಚಕ್ರಧಾರೀ ಏಳಯ್ಯ ನಿಜಶೌರಿ ದಶರೂಪಧಾರೀ ಏಳಯ್ಯ ದೇವಕಿಕಂದ ಉದಾರೀ ಏಳಯ್ಯ ಮುರಹರ ಕೌಸ್ತುಭಧಾರೀ1 ತ್ರಿಜಗವನ್ನು ಬೇಗ ಪಾಲಿಸಲೇಳು ಭಜಕರ ಕರುಣದಿ ರಕ್ಷಿಸಲÉೀಳÀು ಸುಜನರ ಮರೆಯದೆ ವರದೆತ್ತಲಿಕೆ ಯೇಳು ಕುಜನರ ಹರುಷದಿ ತರಿಯಲೇಳು 2 ದಾಸದಾಸರು ಬಂದು ಸೇವಿಸುತಿಹರೇಳು ತಾಸು ತಾಸಿಗೆ ತತ್ವವರುಹಲೇಳು ದಾಸಗೆ ನಿತ್ಯದಿ ಭಾಸವಾಗಲೇಳು ದಾಸಗೆ ಮುಕ್ತಿಯ ಪಾಲಿಸಲೇಳು 3 ಅರುಣೋದಯವಾಯ್ತು ಕಿರುಣೋದಯವಾಯ್ತು ಭರದಿಂದ ಸೂರ್ಯನು ಮೇಲೇರುತಿಹನು ಚರಣ ಕಿಂಕರರೆಲ್ಲ ಸಂಸಾರ ಶರಧಿಯ ಸರಸದಿ ದಾಂಟಿ ನಿಂನನು ಸೇರುತಿಹರು 4 ವಿದ್ಯೆಯರುಹಲು ಯೇಳು ಜ್ಞಾನವೀಯಲು ಯೇಳು ಬುದ್ದಿಯ ಕಲಿಸಿ ಆತ್ಮವ ಸೇರಲೇಳು ಮದ್ದು ಭವರೋಗಕ್ಕೆ ಬೇಗನೀಯಲು ಯೇಳು ಎದ್ದು ಲೋಕಕ್ಕೆ ನೀ ಬೆಳಗಲೇಳು 5 ಸನ್ನುತ ವರ ದೂರ್ವಾಪುರಕೆ ದಿಗ್ದೇಶದಿಂ ದೀನದಾಸರು ಬಂದು ಘನಭಕ್ತಿಯಿಂದ ನಿತ್ಯ ಮಾಡುವರಯ್ಯ ಚನ್ನಕೇಶವಾ ಸೇವೆ ಸ್ವೀಕರಿಸೇಳು 6
--------------
ಕರ್ಕಿ ಕೇಶವದಾಸ
ಏಳು ಗೋಪಾಲ ಬಾಲ ಇನ್ನೂ ಭಾಳ ಹೊತ್ತಾಯಿತು ಭಕ್ತ ಪರಿಪಾಲ ಪ. ಮುನಿಜನರೆದ್ದು ಪೂಜಿಸೆ ನಿನ್ನ ನಿಂತಿರೆ ಮನುಜರೆಲ್ಲರೂ ಕಾದಿಹರು ದರುಶನಕೆ ಸನಕಾದಿ ವಂದಿತ ಸರ್ವೇಶನೆಂತೆಂದು ವಿನಯದಿಂದಲಿ ನುತಿಪರು ಭಾಗವತರು 1 ತಾರೆಗಳಡಗಿತು ಕಮಲಗಳರಳಿತು ಪೂರ್ವ ದಿಕ್ಕಿನಲಿ ತೋರುವ ರವಿ ಉದಯ ಭೇರಿ ತುತ್ತೂರಿ ನಗಾರಿ ಬಾರಿಸುತಿದೆ ಸಾರಿ ಕೂಗುತಲಿದೆ ಕೋಳಿ ವೃಂದಗಳು 2 ಬಾಲಲೀಲೆಗಳಿಂದ ಗೋವಳರೊಡನಾಡಿ ಭಾಳ ಆಯಾಸವಾಗಿಹುದೆ ಕಂದಯ್ಯ ಬಾಲೆ ಗೋಪ್ಯಮ್ಮ ನಿನ್ನ ಲಾಲಿಸಲಿಲ್ಲವೆ ಬಾಲಯತಿಗಳು ಪೂಜಿಸುವರೇಳಯ್ಯ 3 ಬಿಸಿಬಿಸಿ ನೀರು ಪಂಚಾಮೃತವೆರೆಯುತ ಹಸನಾದ ಪಾಲು ಸಕ್ಕರೆ ಉಂಡೆಗಳು ಹಸುಗೂಸು ನಿನಗೆ ಹುಗ್ಗಿಯು ದೋಸೆ ಪೊಂಗಲು ಬಿಸಜಾಕ್ಷ ಯತಿಗಳರ್ಪಿಸುವರೇಳಯ್ಯ 4 ನುತಿ ಕೇಳಲಿಲ್ಲ ಆ ದಣಿದೆಂದು ಮಲಗಿದ್ಯಾ ಶ್ರುತಿ ವೇದತತಿಗಿಂತ ಚತುರ ಮಾತಿನೊಳು ಹಿತದಿ ಯಶೋದೆ ಎಬ್ಬಿಸಲೆಂದು ಮಲಗಿದ್ಯಾ ಚ್ಯುತದೂರ ಗೋಪಾಲಕೃಷ್ಣವಿಠ್ಠಲಯ್ಯ 5
--------------
ಅಂಬಾಬಾಯಿ
ಏಳು ನಾರಾಯಣನೆ - ಏಳು ವಾಸುದೇವಏಳು ಕೃಷ್ಣಾಚ್ಯುತನೆ _ ಏಳು ಹೇ ಮಾಧವಾ ಪ ಏಳು ವೈಕುಂಠನೇ - ಏಳು ಕಾರುಣ್ಯನೇಏಳು ಲಕ್ಷ್ಮೀಶನೇ - ಏಳು ಭಗವಂತ ನಮಿಪೇ 1 ಏಳು ಮಧ್ವೇಶನೇ _ ಏಳು ಪ್ರಾಣೇಶನೇಏಳು ರುದ್ರೇಶನೇ - ಏಳಾಂಬಿಕೇಶಾ 2 ಏಳು ಇಂದ್ರೇಶನೇ - ಏಳು ಶಚಿಗೀಶನೇಏಳು ವಿಪ್ರೇಕ ಭ - ಕೇಶನೆ ಗೋಪತೇ 3 ಕಾರುಣಿಕ ಮೂರ್ತೇ4 ಏಳು ಸಾಮ ಪ್ರಿಯನೆ - ಸರ್ವ ಕಾರಣ ಮೂರ್ತೆಏಳು ವೇದಾರ್ಥ ಪ್ರಿಯ - ಸರ್ವದಾ ಇಹನೇ 5 ಏಳು ಗದ್ಯ ಪ್ರಿಯನೆ - ಪುರಾಣ ಪುರುಷನೇಏಳು ಸ್ತೋತ್ರ ಪ್ರಿಯನೆ - ಸರ್ವದಾ ವಿಶ್ವಮೂರ್ತಿ 6 ಏಳು ಗುರು ಹೃದಯನೇ - ಪವನಾಂತರಾತ್ಮನೇಏಳು ಗುರು ಗೋವಿಂದ - ವಿಠಲ ಹಯವದನ 7
--------------
ಗುರುಗೋವಿಂದವಿಠಲರು
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಏಳು ಶ್ರೀನಿವಾಸ ಏಳು ಲಕ್ಷ್ಮೀರಮಣ ಏಳು ಬೆಟ್ಟದೊಡೆಯ ಏಳು ಭಕ್ತರ ಪ್ರೀಯ ಏಳಯ್ಯ ಬೆಳಗಾಯಿತು ಹರಿಯೇ ಪ. ಆದಿಶೇಷನ ಮೇಲೆ ಅಪ್ರಮೇಯನು ನೀನು ಆದರದಿ ಮಹಲಕ್ಷ್ಮಿಯೊಡನಿರಲೂ ಸುರರು ಸನಕ ಸನಂದನರು ಆದರಿಸೆ ಬಾ ಬೇಗ ಬಾಗಿಲನು ತೆಗೆದು ಆದಿಮೂರುತಿ ನಿನ್ನ ಮುಖ ದರ್ಶನವ ಮಾಡಿ ಮೋದ ಪಡುತಲೆ ಭಕ್ತ ಕೋಟಿ ಸ್ತುತಿ ಮಾಡಲು ಮಾಧವನೆ ಹಾಸು ಮಂಚವನಿಳಿದು ಬಾ ಕತ್ತಲೆ ಹರಿಪಾ ದಿವಾಕರನ ತೆರದಿ ಹರಿಯೇ ಏಳಯ್ಯ ಬೆಳಗಾಯಿತು 1 ಕಾಸಿದ್ಹಾಲನೆ ತಂದು ಕಾವಡಿಯಲಿ ತುಂಬಿ ಲೇಸಾಗಿ ನಿನ್ನ ಭಕ್ತರು ನಿಂತಿದಾರೆ ವಾಸುದೇವನೆ ನಿನಗೆ ಮಲ್ಲಿಗೆ ಕುಸುಮ ಭಾಸುರಾಂಗನೆ ತಂದು ಅರ್ಪಿಸಲು ಭಕ್ತರು ಏಸು ಹೊತ್ತಿನಿಂದ ತುಳಸೀ ದಳ ತಂದು ವಾಸುಕೀಶಯನಗೆಂದು ಭೂಸುರರು ನಿಂದಾರೆ ವೇದ ಘೋಷದಿಂದ ಈಸು ನುಡಿಗಳು ನಿನ್ನ ಕರ್ಣಕೇಳಲಿಲ್ಲವೆ ಏಸು ಮೆಚ್ಚಿಸಿಹಳೋ ಲಕ್ಷ್ಮೀ ನಿನ್ನ ಸರಸದೊಳು ವಾಸುಕೀಶಯನ ಹಾಸಿಗೆಯಿಂದೇಳೋ ದೊರೆಯೆ ಏಳಯ್ಯ ಬೆಳಗಾಯಿತು2 ಕರುಣಾಸಾಗರ ನಿನಗೆ ಕರುಣೆ ಬರುವಾತೆರ ಪರಿಪರಿಯ ಸ್ತೋತ್ರದೊಳು ನಾರಿಯೇರು ಕರೆವರೋ ಕರಗತ ಕಾಮಧೇನು ನೀನೆಂದು ಕರದೊಳಾರತಿಯ ಪಿಡಿದೂ ತರತರದ ಉಡಿಗೆ ತೊಡಿಗೆ ನಿನಗೀಯಲು ಸರಸರನೆ ದೇಶದೇಶದಿ ಬಂದು ನಿಂತಿದ್ದಾರೆ ಶರಧಿ ಗಂಭೀರನೆ ವರ ಶ್ರೀ ಶ್ರೀನಿವಾಸನೆ ಕರುಣೆ ತೋರುತ್ತ ನಿನ್ನ ಭಕ್ತರ ಮೇಲೆ ವರ ನಾರಿಯರ ನಾಟ್ಯ ವೈಭವದಿ ವರದುಂದುಭಿ ವಾದ್ಯದಲಿ ವರ ತಾಳ ಮೇಳದಿಂ ವರ ಶೇಷಾದ್ರಿವಾಸ ವೆಂಕಟೇಶನೆ ಏಳಯ್ಯ ಬೆಳಗಾಯಿತು 3
--------------
ಸರಸ್ವತಿ ಬಾಯಿ
ಒಡವೆ ಹೋಯಿತು ಮನ ದೃಢವಾಯಿತು ಪ ಹಿಡಿದರೋಡುವ ಕಳ್ಳ ಬಿಡದೆ ಕದ್ದುಕೊಂಡು ಹೋದಅ ಆರು ಜೋಡಿನ ಓಲೆಯಿತ್ತು ಮೂರು ಮುತ್ತಿನ ಮೂಗುತಿಯಿತ್ತುಚಾರುತರದ ಇಪ್ಪತ್ನಾಲ್ಕೆಳೆಯ ಸರವು ಒಂದಿತ್ತುಈರೈದು ತಾಳಿಗಳಿತ್ತು ಬಿರುದಿನ ಕಪ್ಪೆಂಟಿತ್ತುದಾರಿ ನೋಡಿಕೊಂಡು ಇದ್ದ ಛಾಯನೆಂಬ ಕಳ್ಳ ಕದ್ದ 1 ಎಪ್ಪತ್ತೆರಡು ಸಾವಿರ ಸೂತ್ರದ ಹಸ್ತಕಟ್ಟು ಎರಡಿತ್ತುಕಪ್ಪು ಬಿಳುಪು ಕೆಂಪು ವರ್ಣದ ಪದಕ ಒಂದಿತ್ತುಒಪ್ಪವಿತ್ತ ಹಸ್ತಕಡಗ ಆಶಾಪಾಶವೆರಡಿತ್ತುಒಪ್ಪವನ್ನು ಸಾಧಿಸಿ ನೇತ್ರನೆಂಬ ಕಳ್ಳ ಕದ್ದ 2 ಹುಟ್ಟು ಸಾವು ಎರಡು ಎಂಬ ಘಟ್ಟಿ ತೂಕದ ನಗವಿತ್ತುಕಷ್ಟ ಸುಖ ಕರ್ಮಗಳೆಂಬ ಸಂಚಿಗಳಿತ್ತುಅಷ್ಟು ಇಷ್ಟು ಚಿಲ್ಲರೆ ಒಡವೆ ಪೆಟ್ಟಿಗೆಯಲಿ ತುಂಬಿತ್ತುದೃಷ್ಟಿ ನೋಡಿಕೊಂಡು ಇದ್ದ ಧರ್ಮನೆಂಬ ಕಳ್ಳ ಕದ್ದ 3 ಎಲ್ಲ ಒಡವೆ ಹೋಯಿತಾದರು ಪುಲ್ಲಳಾಗಿ ಮೆರೆಯುತಾಳೆಚೆಲ್ವನೊಬ್ಬ ಪುರುಷನ ಕಂಡು ತಾಳಲಾರದೆಬಲ್ಲಿದಳು ಈಕೆ ಎಂದು ಇವಳ ಬಗೆ ತಿಳಿಯಿತೆಂದುಕೊಲ್ಲಬಾರದೆನುತ ಹೇಳಿ ಮನೆಯ ಬಿಟ್ಟು ಹೊರಗಟ್ಟಿದ4 ಇಂಥ ಒಡವೆ ಹೋಯಿತೆಂದು ಚೋದ್ಯಪಟ್ಟು ನೋಡುತಿರಲುತಂತ್ರ ಮಾಡಿ ಆದಿಕೇಶವ ಶ್ರೀಹರಿಯು ತಾನೆ ಬಂದುತಂತ್ರವನ್ನು ಹೇಳಿ ಜ್ಞಾನ ಮಾರ್ಗವನ್ನು ಬಿಟ್ಟುಕೊಟ್ಟುಸಂತಸದಿಂದ ಇರು ಎಂದು ಚಿಂತೆ ಬಿಡಿಸಿ ಸಲೆ ಸಲಹಿದ 5
--------------
ಕನಕದಾಸ
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಒಂದು ಪ್ರಕಾರವೆ ಸ್ವಾಮಿ ಮಂದಿಯ ರಕ್ಷಿಸುವುದು ನಿಂದವರ ದೇಹದಲ್ಲಿ ಹಿಂದೆಮುಂದಭಯವನಿತ್ತು ಪ. ಅಪಾರ ಮಹಿಮ ನೀನು ಒಪ್ಪುವ ಹಯಾಸ್ಯನಾಗಿ ಎಪ್ಪತ್ತೆರಡು ಸಾವಿರ ಇಪ್ಪ ನಾಡಿಗಳೊಳಿದ್ದು 1 ಮುಖ ನಾಸ ನೇತ್ರ ಶ್ರೋತ್ರ ತ್ವಕ್ ನಖೇಂದ್ರಿಯ ತದ್ಗೋಳಕ ಸಕಲರೂಪಗಳಲ್ಲಿ ನೀನೆ ಆಧಾರವಾಗಿದ್ದು 2 ಶ್ವಾಸೋಚ್ಛ್ವಾಸ ಚೇಷ್ಟವಿಚÀಕ್ಷಣ ಹಾಸವಿಲಾಸ ಭೂಷಣ ಗ್ರಾಸಾವಾಸಂಗಳಿಗೆ ನಿವಾಸವಾಗಿ ಪ್ರೇರಿಸುವೆ 3 ಅನಂತ ರೂಪಗಳಲ್ಲಿ ನೀನೆ ಆಧಾರವಾಗಿದ್ದು 4 ಪ್ರಾಣೋಪಾನ ರೂಪಿನಿಂದ ವ್ಯಾನೋದಾನರೂಪನಾಗಿ ವ್ಯಾನೋದಾನ ರೂಪಿನಿಂದ ಉದಾನ ಸಮಾನನಾಗಿದ್ದು 5 ಪೂಜಾ ವ್ಯಾಖ್ಯಾನ ಕೀರ್ತನ ಭೋಜನ ಮಜ್ಜನಸುಖ ಭಾಜನೆಗಳಲ್ಲಿದ್ದು ಪೂಜ್ಯನಾಗಿ ಪ್ರೇರಿಸುವ 6 ವಿಶ್ವ ತೇಜಸ್ಸು ಪ್ರಾಜ್ಞಾ ತುರ್ಯಾ ಅವಸ್ಥಾತ್ರಯಂಗಳೆಲ್ಲ ಕೊಡುವೆ ಜಾಗ್ರತ್ಸ್ವಪ್ನ ಸುಷುಪ್ತಿಯಲ್ಲಿ ವಿಶ್ವಪ್ರೇರಕನಾಗಿದ್ದು 7 ಆತ್ಮರೂಪ ಆದ್ಯ ಅನಂತ ಅಂತರಾತ್ಮ ರೂಪನಾಗಿ ಜ್ಞಾ- ನಾತ್ಮ ರೂಪಿನಿಂದ ಪರಮಾತ್ಮರೂಪನಾಗಿ 8 ಅನಿರುದ್ಧ ಸಂಕರ್ಷಣ ಪ್ರದ್ಯುಮ್ನ ಘನ ವಾಸುದೇವ ನೆನೆವರ ಪಾಪ ಪರಿಹರಿಸುವ ನರಹರಿ 9 ನೀನು ನಿನ್ನ ದಾಸರಿಗಾಗಿ ಮನುಷ್ಯಮುಖದಿಂದ ತತ್ವ ತನುಗಳಿಂದ ಕುಡುವ ಅವರವರ ದೇಹ್ಯದೊಳಿದ್ದು 10 ಸರ್ವರೊಳಗೆ ನೀನಿದ್ದು ಅವರವರ ವಿಭಾಗದ ಕರ್ಮ ಪರೀಕ್ಷಿಸಿ ಪ್ರೇರಿಸುವ ವರ ಶ್ರೀಹಯವದನ 11
--------------
ವಾದಿರಾಜ