ಒಟ್ಟು 2602 ಕಡೆಗಳಲ್ಲಿ , 107 ದಾಸರು , 1651 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಣಬಹುದಕೆ ಕನ್ನಡಿಯಾಕೆ ಭಿನ್ನವಿಲ್ಲದೆ ನೋಡಿ ತನ್ನೊಳು ಘನಬ್ರಹ್ಮವಿರಲಿಕ್ಕೆ ಅನುಮಾನವು ಬ್ಯಾಡಿಧ್ರುವ ಕುಂಭಿನಿಯೊಳು ಘನಹೊಳೆಯುತ ತುಂಬಿತುಳುಕುತಲ್ಯಾದೆ ಉಂಬವರಿಗಿದಿರಿಡುತ ಬಿಂಬಿಸುತಲ್ಯಾದೆ ಹಂಬಲಿಸಿದರೆ ತನ್ನೊಳಗೆ ತಾ ಗುಂಭಗುರುತವಾಗ್ಯಾದೆ ಇಂಬು ತಾನೆ ಆಗ್ಯಾದೆ 1 ಹೇಳುವ ಮಾತಿನ ಮಾತಿಲ್ಲ ಕೇಳಿರಯ್ಯಾ ಚೆನ್ನಾಗಿ ಒಳ ಹೊರಗಿದು ಭಾಸುತಿ ಹ್ಯ ದೆಲ್ಲಾ ಸುಳವು ಬಲ್ಲಾತ ಯೋಗಿ ಕಳೆಕಾಂತಿಗಳ ಅನುಭವವೆಲ್ಲಾನು ತಿಳಿಯಬಲ್ಲವ ಭೋಗಿ ಹೊಳೆವುತಿಹ್ಯದು ಸರ್ವಮಯವೆಲ್ಲಾ ಮೊಳೆಮಿಂಚು ತಾನಾಗಿ 2 ಇಲ್ಲೆವೆ ಎರಡು ಹಾದಿಯ ಕಟ್ಟಿಗುಲ್ಲುಮಾಡದೆ ನೋಡಿ ಗೋಲ್ಹಾಟ ಮಂಡಲವನು ದಾಟಿ ಅಲ್ಲಿಯೆ ಮಹಿಪತಿ ನೋಡಿ ಅಲ್ಲಿಯೆ ಮನ ತಾಂ ಮನಿಕಟ್ಟಿ ಫÀುಲ್ಲನಾಭನ ಕೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಣಬಾಹ ಸಾಧನ ಒಂದೇ ಮಾಡಿ ಅಣುರೇಣುದೊಳಗಾನೆ ಗುರು ನೋಡಿ ಧ್ರುವ ಖೂನ ಮಾಡಲಿಕ್ಯದ ಒಂದಭ್ಯಾಸ ಅನುದಿನ ಸದ್ಗುರು ನಿಜಧ್ಯಾಸ ಸುಜನರಿಗಿದೆ ತಾ ಉಲ್ಲಾಸಾ ಜನುಮದೊಳಿದೆ ಸುಪ್ರಕಾಶ 1 ಕೋಟಿಗೊಂದೆ ಸಾಧನವಿದೆ ಸಾಕು ಅಟಾಆಟಬಡುವದ್ಯಾತಕೆ ಬೇಕು ಘಟಮಠ ಎಂಬುವದೆಲ್ಲ ಹೋಕು ನಿಟಿಲ ಭ್ರೂಮಧ್ಯ ನೋಡಿ ಥೋಕು 2 ಸಾಧನವೆಂಬುದು ಗುರುದಯ ಇದೆ ಪಡಕೊಂಡವಗೆ ವಿಜಯ ಬೋಧಿಸಿದ ಭಾನು ಕೋಟಿ ಉದಯ ಸದ್ಗೈಸಿದ ನೋಡಿ ಮಹಿಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಣಲಿಲ್ಲವೆಂದೆನಬೇಡಿ ಪ ಜಾಣನವನು ನಿಮ್ಮ ಕೋಣೆಯೊಳಗಿರುವಾ ಗು ಡಾಣವ ತುಡುಕುವ ನೆರೆನೋಡಿ ಅ.ಪ ಸುಲಭನು ನಿಮಗವನೊಲಿವನು ನಿಮ್ಮೆಡೆ ನಿಲುವನು ನಲಿವನು ಕೈನೀಡೀ ಸಲಿಸಿರಿ ಬೆಣ್ಣೆಯ ಮೆಲುವನು ಕಿಲಕಿಲ ನುಲಿವನು ಚಲಿಸಲು ಬಿಡಬೇಡಿ 1 ಅಳುಕುತ ಬಳುಕತ ಬಳಲುತ ಸುಳಿಯುತೆ ಘಳಿಲನೆ ಪೋಪನೆಚ್ಚರವಿರಲಿ ಎಳನಗೆಯಿಂದ ಪಾಲೆರೆಯಿರಿ ಮನ ದೊಳಚ್ಚಳಿಯದ ಮೋದವು ನೆಲೆಸಿರಲಿ 2 ಮನವೆಂಬುವುದೇ ವನರುಹವಮ್ಮಾ ಕನಸುನೆನಸಿನೊಳಾ ವನಜವನರ್ಪಿಸೆ ನೀನೆಂಬುದನೇ ಮರೆಯುವಿರಮ್ಮಾ [ತನುಮನ ಅವನಡಿ ಸೇರುವುದಮ್ಮಾ] 3 ಪಡಸಾಲೆಯೊಳಿವ ನಿಲ್ಲುವನಲ್ಲಾ ಅಡಿಗೆಯ ಕೋಣೆಯ ಬಿಡುವನಲ್ಲ ಒಡೆಯ ಶ್ರೀಮಾಂಗಿರಿಪತಿಯನು ನೋಡದ ಮಡದಿಯಿಲ್ಲವೆಂಬುದು ಸಟೆಯಲ್ಲ 4 ನೀವಿರುವಾಯೆಡೆ ಪಾಲ್ಗಡಲಮ್ಮಾ ನೀವಡಿಯಿಡುವುದೇ ಕಡೆಗೋಲಮ್ಮಾ ದಧಿ ನವನೀತವು ನೀವಿರೆ ಮಾಂಗಿರಿರಂಗನುಂಟಮ್ಮಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಣಿ ಖೂನ ಕಂಡ ಮ್ಯಾಲ ಖಂಡ ಮಾಡಿಕೊಂಬುದೆ ಸುಜ್ಞಾನ ಧ್ರುವ ಕಾಣುವನು ಕಾಣಿಯೇನಾಗಿದೊ ಪ್ರಾಣಿ ಕಾಣದೆ ಹೋದರನೇಕ ಜನ್ಮ ನಾನಾಯೋನಿ 1 ಕಾಣುವನ ಸ್ಥಾನ ಕಾಣದಿಹುದೇನ ಜ್ಞಾನಗುರುವಿನ ಕೈಯ ಕೇಳಿಕೊ ನೀ ಖೂನ 2 ಕಂಡು ಕಾಂಬುವನ ಅಖಂಡ ಮಾಡೋಧ್ಯಾನ ಪಿಂಡ ಬ್ರಹ್ಮಾಂಡಕ್ಕೆ ಇದೆ ವಸ್ತು ನಿಜಘನ 3 ಕಾಣುವನ ಕೂಡಿ ಸ್ವಾನುಭವ ಮಾಡಿ ದೀನ ಮಹಿಪತಿಗಿದೆ ಘನ ಸುಖನೋಡಿ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಣಿಸುವೆ ನಿಜವಾಗಿ ಚನ್ನಕೇಶವನ ಪ ಸಡಗರದಿ ನಿಂತಿಹನು ವರ ದೂರ್ವಾಪುರದಲ್ಲಿ ಪೊಡವಿಯೊಳು ದಾಸರಿಗೆ ವಲಿಯಬೇಕೆಂದು ಬಿಡದೆ ನೋಡಿರಿ ಹರಿಯ ಕಾಯಕಾಂತಿಯ ನೀಗ ಕಡು ಶ್ಯಾಮ ವರ್ಣದಲಿ ಯೆಸೆಯತ್ತಲಿಹುದು 1 ಮೇಲಿನ ಬಲ ಹಸ್ತದಲ್ಲಿ ಶಂಖವ ನೋಡು ಕೆಳಗಿನ ಬಲ ಹಸ್ತದಲ್ಲಿ ಪದ್ಮವನೂ ಮೇಲಿನ ಯಡ ಹಸ್ತದಲ್ಲಿ ಚಕ್ರವ ನೋಡು ಕೆಳಗಿನ ಯಡ ಹಸ್ತದಲ್ಲಿ ಗದೆಯನ್ನೂ 2 ಸೊಂಟದಲಿ ವಡ್ಯಾಣ ಕಿರುಗೆಜ್ಜೆಗಳ ನೋಡು ಕಂಠದಲಿ ಹಲವು ವಿಧದಾಭರಣಗಳನೂ ಕೌಸ್ತುಭ ನೋಡು ಬಂಟರನು ಸಲಹುವ ಪಾದಯುಗ್ಮವನೂ 3 ಸೂರ್ಯ ಚಂದ್ರಮಂತೆ ಇಳೆಯೊಳಗೆ ರಮಣೀಯವಾಗಿ ಶೋಭಿವವು ಬಲಯಡದ ಶ್ರೋತೃಗಳ ಕುಂಡಲವ ನೋಡು 4 ಉದರ ಮಧ್ಯದೊಳಿಪ್ಪ ನಾಭಿಕಮಲವ ನೋಡು ಮದನಪಿತ ಶ್ರೀಹರಿಯ ತುಲಸಿ ಮಾಲೆಯನೂ ಸದನ ಪೀಠವನುಟ್ಟ ಪಿಂತಾಂಬರವÀ ನೋಡು ಮೃದು ಪಣೆಯೊಳಿಟ್ಟಿರುವ ಶ್ರೇಷ್ಠ ತಿಲಕವನೂ 5 ಚಿನ್ಮಯ ರೂಪವ ಮೌಕ್ತಿಕದ ಸರಗಳನು ಕಂಣಿಗೆಯುವ ಪುಷ್ಪಮಾಲೆಗಳ ನೋಡು ಸನ್ನುತನು ಭಕ್ತರನು ಪೊರೆವ ಮೂರ್ತಿಯ ಬಿಡದೆ ಮನ್ನಿಸುತ ಭಜಕರನು ಕಾವ ರಂಗನನೂ 6
--------------
ಕರ್ಕಿ ಕೇಶವದಾಸ
ಕಾಂತೆಯರುತುಂಬಿದ ನಗರಿಯಲಿ ಎಂಥ ಸೊಗಸಮ್ಮ ಬಾಹೋದೆಂಥ ಸೊಗಸಮ್ಮ ಪ. ಗಂಧ ಕಸ್ತೂರಿ ಧರಿಸಿರಾಯರು ಪರಿಮಳ ತುಂಬಿದ ನಗರಿಯಲಿ ಎನುತ 1 ರಾಶಿ ಮಲ್ಲಿಗೆ ಸಂಪಿಗೆ ಮುಡಿದು ಸೂಸಿದ ನಗರಿಯಲಿ ಎನುತ 2 ಮಿತಿ ಇಲ್ಲದೆ ಹಗಲು ಬತ್ತಿ ಶತ ಕೋಟಿ ದೀವಟಿಗಿ ದೀಪ ಪ್ರತಿಯಿಲ್ಲ ತಾಯಿ 3 ಹಾದಿ ಬೀದಿ ದ್ವಾರ ಜಗಲಿ ಸಾದಿನಥಳಿ ಕೊಟ್ಟಾವಮ್ಮ ಮಾಧವ ಬರಲಿಕ್ಕೆ ಎನುತ 4 ವಿಸ್ತರಿಸಿದ ರಂಗವಲ್ಲಿ ಜತ್ತಾಗಿ ತೋರುವವು ಎನುತ 5 ಕೇರಿ ಕೇರಿ ನಾರಿಯರೆಲ್ಲ ಸೀರೆ ಕುಪ್ಪಸ ವಸ್ತಗಳಿಟ್ಟು ವೀರರ ನೋಡಲು ಎನುತ 6 ಎತ್ತೆತ್ತ ನೋಡಿದರೂ ಜನರು ಮುತ್ತುರತ್ನದ ವಸ್ತಗಳಿಟ್ಟು ಹತ್ತಿಗೋಪುರ ಅಟ್ಟಾಲಗಳ ಧಿಟ್ಟೆಯರು ನಿಂತಾರೆ ಎನುತ 7 ಝಲ್ಲೆ ಮುತ್ತಿನ ವಸ್ತಗಳಿಟ್ಟು ಅಲ್ಲೆಲ್ಲೆ ಉಪ್ಪರಿಗೆ ಏರಿ ಚಲ್ವರ ನೋಡಲು ಎನುತ 8 ಮಲ್ಲಿಗೆ ಸಂಪಿಗೆ ಫಲಗಳ ಹಿಡಿದು ಅಲ್ಲೇ ನಿಂತಾರೆ ಎನುತ 9 ಭೆಟ್ಟಿಯ ಸೌಭಾಗ್ಯ ನೋಡಿ ಎಷ್ಟು ಹರುಷ ಬಟ್ಟೇವೆಂದು ಧಿಟ್ಟೆಯರು ನಿಂತಾರೆ ಬೀದಿಲಿ10 ಶ್ರೀ ಲೋಲ ರಾಮೇಶನ ಭಕ್ತರು ವಾಲಗೈಸೋರಮ್ಮ ಎನುತ 11
--------------
ಗಲಗಲಿಅವ್ವನವರು
ಕಾಮಧೇನುಗರವುತಲ್ಯದೆ ನಮ್ಮ ಮನಿಯಲಿ ನೋಡಿ ಬ್ರಹ್ಮಾನಂದದೋರುತದೆ ಪರಮಾಮೃತ ಸೂರ್ಯಾಡಿಧ್ರುವ ಭೋರ್ಗರೆವುತಲ್ಯದೆ ಇರುಳ ಹಗಲಿ ತಾ ಕರಕೊಳ್ಳಲಿ ವಶವಲ್ಲ ಅಮೃತ ದುರುಳರಿಗಿದು ಅರಿಕಿಲ್ಲ ಸುರಿ ಸುರಿದು ಸಾರಾಯ ಚಪ್ಪರಿದನುಭವ ನಿಜಸುಖ ತಾ ಬಲ್ಲ ಸುರಮುನಿಜನರಾನಂದದಿ ಸೇವಿಸಿ ಅರಹುತರಾದರು ಎಲ್ಲ 1 ಕಾಸಿ ಕಡಿಯದೇ ಭಾಸುತಲ್ಯದೆ ಲೇಸಾಗಿ ನವನೀತ ಮೋಸಹೋಗದನುಸರಿಸಿಕೊಂಬುದು ವಸುಧಿಯೊಳಗೆ ತ್ವರಿತ ಋಷಿಮುನಿಗಳು ಸ್ವಹಿತ ತುಸುಕೊರತಿಲ್ಲದೆ ಪಸರಿಸಿ ತುಂಬೆದ ವಿಶ್ವದೊಳಗೆ ಸನ್ಮತ2 ಅನುದಿನ ಮಹಿಪತಿಗಿದು ನಿಜ ನೋಡಿ ಮಹಾಮಹಿಮೆಯ ಸವಿಗೂಡಿ ಶಿರದಲಭಯವ ನೀಡಿ ಇಹಪರದೊಳು ಗುರುನಾಮವೆ ಕಾಮಧೇನುವಿದೆ ಕೊಂಡಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯ ಪ ಗತಿ ನೀನೆ ಎನಗೆ ಸಂತತ ಪರಂಧಾಮಾ ಅ ಕೃಪಣ ವತ್ಸಲನೆ ಎಮ್ಮಪರಾಧಗಳ ನೋಡಿ ಕುಪಿತನಾಗುವರೇನೋ ಸುಫಲದಾಯೀ ನೃಪಗನಿರುದ್ಧ ಬಿನ್ನಪವ ಮಾಡುವೆ ನಿನಗೆ ಚಪಲ ಚಿತ್ತರಾದ ಕಾಶ್ಯಪಿಸುರರನ ಕಾಯೋ 1 ಮಾನ್ಯಮಾನದನೆ ಬ್ರಹ್ಮಣ್ಯದೇವ ನೀನೆಂದು ಉನ್ನತ ಶ್ರುತಿಗಳು ಬಣ್ಣಿಸುವುವು ಸನ್ನುತ ಮಹಿಮನೆ ನಿನ್ನ ಪೊಂದಿದವರ ಬನ್ನ ಬಡಿಸುವುದು ನಿನಗಿನ್ನು ಧರ್ಮವು ಅಲ್ಲ 2 ಹಲವು ಮಾತುಗಳಾಡಿ ಫಲವೇನು ಬ್ರಾಹ್ಮಣರ ಕುಲಕೆ ಮಂಗಳವೀಯೋ ಕಲುಷದೂರ ಸುಲಭ ದೇವೇಶ ನಿನ್ನುಳಿದು ಕಾವರ ಕಾಣೆ ಬಲಿಯ ಬಾಗಿಲ ಕಾಯ್ದ ಜಗನ್ನಾಥ ವಿಠಲಾ 3
--------------
ಜಗನ್ನಾಥದಾಸರು
ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಕಾಯಯ್ಯಾ ಕಾಯೊ ಮುರಾರಿ | ದಯದಲೆನ್ನಾ ಪ ತರಳತೆಯಿಂದಾ ಸ್ಮರಣೆಯ ನಿನ್ನಾ | ಮರೆದುನೊಂದೆ ಬಹು ಪರಿದಯದಲೆನ್ನಾ 1 ಮತಿಹೀನನೆಂದು ಒಲಮಿಲಿ ನೋಡಿ | ಪಾದ ದೋರಿ ದಯದಲೆನ್ನಾ 2 ಮಹಿಪತಿ ನಂದನ ಜೀವನರಾಮಾ | ಅಹಿತರ ವಂಶವಿದಾರಿ ದಯದಲೆನ್ನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯವಿದು ನಿತ್ಯವೆಂದು ನೆಚ್ಚಬೇಡ ಮಾಯಾಕಾರ್ಯನಾಗಿ ಮೆರೆವುದಿದು ತಿಳಿದುನೋಡಾಕಾಯವಳಿವ ಮುನ್ನ ಹರಿಯ ಕೃಪೆಯ ಜೋಡ ತೋಡುನಾಯಬಾಯತುತ್ತ ನಂಬಿ ಬೆರೆಯ ಬೇಡ ಪಮಾತಾಪಿತೃರೇತಸ್ಸಿಂದ ಪತನವಾಗಿ ಪಂಚಭೂತಕಾರ್ಯದಿಂದ ಸ್ಥೂಲಾಕಾರವಾಗಿರೇತಸ್ಸು ರಕ್ತಗಳಾರು ಕೋಶವಾಗಿ ಕರ್ಮಜಾತಕಾಯ ಹೀಗೆ ತೋರುತಿಪ್ಪುದಾಗಿ 1ಹುಟ್ಟಿ ಬೆಳೆದು ನಲಿದು ಮುಪ್ಪಿನಿಂದ ಕ್ಷೈಸಿ ಕಡೆಗೆನಷ್ಡವಾಗಿ ಹೋಗಿ ಮಣ್ಣಿನೊಳಗೆ ಬೆರಸಿಇಷ್ಟೂ ಪರಿಯೊಳಾರು ವಿಕಾರವ ತೋರಿಸಿ ವಂದಿಷ್ಟೂ ಫಲವಿಲ್ಲದಂತೆ ುದಕೆ ಭ್ರಮಿಸಿ 2ಕಾಲಕರ್ಮ ಪಂಚಭೂತ ಮಿಳಿತವಾಗಿ ಇದಕೆಮೂಲವಾದ ಕರ್ಮವೆ ಪ್ರಧಾನವಾಗಿಢಾಳಿಸುವಾತ್ಮನ ತೇಜಾಧಾರವಾಗಿ ಕರ್ಮತೇಲಲಾಗಿ ದೀಪದಂತೆ ಪೋಪುದಾಗಿ 3ಬತ್ತಿಯನ್ನು ಎಣ್ಣೆಮುಗಿವ ಸಮಯಕಾಗಿ ಎಣ್ಣೆಯೂಮತ್ತೆ ತಂದು ತುಂಬೆ ದೀಪ ಪೋಗದಾಗಿಇತ್ತೆರದ ಕರ್ಮದಿಂದ ಚಕ್ರವಾಗಿ ಜನ್ಮಮೃತ್ಯುಗಳೀ ದೇಹಕ್ಕವಧಿುಲ್ಲವಾಗಿ 4ತೈಲಮಿಶ್ರವರ್ತಿಯಗ್ನಿ ಸಮ್ಮೇಳದಿಂದಾ ದೀಪಬಾಳಿಬೆಳಗುವುದು ತೈಲದಾಧಾರದಿಂದಾತೈಲಮುಗಿಯೆ ದೀಪ ಕೆಟ್ಟು ಹೋಹ ಛಂದದಂತೆಕೇಳು ದೇಹವೀಪರಿಯೊಳಿಹುದರಿಂದಾ 5ಹುಟ್ಟಿದಲ್ಲಿ ಸೂತಕವು ಹೊಂದಿದಲ್ಲಿ ಸೂತಕವುಮುಟ್ಟಿವಸ್ತುಗಳುಚ್ಚಿಷ್ಟಂಗಳಹವೂನಟ್ಟನಡುವೆ ಬಂದದೆಂದು ಶಿಷ್ಟರಿದ ಮನ್ನಿಸರುನಷ್ಟವಾಗಿ ಕಡೆಗೆ ತಾನು ಹೋಹ ದೇಹವೂ 6ತಾನು ಬಂದ ಬಗೆಯು ತನಗೆ ತಿಳಿಯದಿದ್ದರೂ ನಿನ್ನಸೂನು ಬಂದ ಬಗೆಯ ನೋಡಿ ತಿಳಿದುಕೊಂಡಾರುಹೀನನಾದ ಕಾಯವಭಿಮಾನಿಸದಿರು ಮುಂದೆಶ್ರೀನಾಥನ ಪದವ ಭಜಿಸಿ ಸುಖದಿಂದಿರುತಿರು 7ಮನವೆ ಮಿಥ್ಯದೇಹದಭಿಮಾನವೇತಕೆ ಬಹುಜನುಮ ಜನುಮದಲ್ಲಿ ದುಃಖದಗೆ ನೂಕೆಕೊನೆಗೂ ಹೀಗೆ ಬಂಧವನ್ನು ಕೊಡುವದಕ್ಕೆ ಮಚ್ಚಿಜಿನುಗುವಿರಿಕೆಯೇನು ಇನ್ನೂ ಬಿಡದೆ ಬಯಕೆ 8ಘೋರರೂಪಾಪಾರಸಂಸಾರಾಂಬುಧಿಯನ್ನೂಮೀರಲೇರು ವೆಂಕಟೇಶನಾಮನಾವೆಯನ್ನುಧೀರಗುರು ವಾಸುದೇವರಂಘ್ರಿಯನ್ನು ಬೇಗಸಾರುವ ವಿವೇಕತನವಂದು ಚೆನ್ನೂ 9ಕಂ|| ಜೀವನು ವಿರತಿಯ ಸಾಧಿಪಭಾವಧಿ ಮನದೊಡನೆ ಕಾಯವ ನೆಚ್ಚದಿರೆನ್ನುತಕೈವಲ್ಯದ ಪಥವ ಪೇಳಲುಜೀವನೊಳಾಡಿದುದು ಕಾಯವಚ್ಚರಿಯೆನ್ನಲೂ
--------------
ತಿಮ್ಮಪ್ಪದಾಸರು
ಕಾಯೊ ಕರುಣಾನಂದ ಶ್ರೀಗುರು ಕೃಪಾನಿಧೆ ಕಾಯೊ ಕರುಣಿಸಿ ಎನ್ನ ಪೂರ್ಣ ನೀ ಕಾಯೊ ಪರಮದಯಾನಿಧೆ ಧ್ರುವ ತೊಡಿಸಿ ಕರುಣಾನಂದ ಕವಚವ ಇಡಿಸೊ ಭಗುತಿ ವೈರಾಗ್ಯವ ದೃಢಗೊಳಿಸುವ ಙÁ್ಞನಪೂರ್ಣ ನೀ ಕಡಿಸೊ ಕಾಮಕ್ರೋಧವ ನಡೆಸಿ ನಿತ್ಯವಿವೇಕ ಪಥದಲಿ ಕೂಡಿಸೊ ನಿಜಸುಬೋಧವ ಬಿಡಿಸೊ ಭವಭವ ಮೂಲದಿಂದಲಿ ಬಡಿಸೊ ಹರುಷಾನಂದವ 1 ಬಟ್ಟೆ ಕೊಟ್ಟು ಕಾಯೊ ಸತ್ಸಂಗವ ಮುಟ್ಟಿಮುದ್ರಿಸೊದೃಷ್ಟಾಂತವ ಸಟೆಯ ಮಾಡೊ ಅವಿದ್ಯವ ನಿಷ್ಠತನ ನೆಲೆಗೊಳಿಸಿ ಕಾಯೊ ನೀ ಇಟ್ಟು ಶಿರದಲಿ ಅಭಯವ 2 ಭಿನ್ನವಿಲ್ಲದೆ ನೋಡಿ ಎನ್ನನು ಧನ್ಯಗೈಸೊ ನೀ ಪ್ರಾಣವ ಕಣ್ದೆರಿಸಿ ಅಣುರೇಣುದಲಿ ಪೂರ್ಣಖೂನದೋರೊ ಸಾಕ್ಷಾತವ ಎನ್ನೊಳಗೆ ನಿಜಾನಂದ ಸುಖದೋರಿ ಪುಣ್ಯಗೈಸೊ ನೀ ಜೀವನ ಚಿಣ್ಣಕಿಂಕರ ದಾಸ ಮಹಿಪತಿ ರಕ್ಷಿಸೊ ಸಂತತವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕರುಣಾಬ್ಧಿ ಗುರು ಎನಗೆ ದಯವುಳ್ಳ ಸ್ವಾಮಿ ನೀನಹುದೊ ಜಗದೊಳಗೆ ಧ್ರುವ ಶಿರದಲಭಯವ ನೀಡಿ ಕರುಣದಯದಲಿ ನೋಡಿ ಹರುಷ ಮನವನು ಮಾಡಿ ದುರಿತಭವ ಈಡ್ಯಾಡಿ ಗುರುತ ನಿಜ ಮಾಡರಹು ನೀಡಿ ಪರಮ ಗತಿ ಇದರಿಡಿ ವರಕೃಪೆಯ ಮಾಡಿ 1 ಒಂದು ಪಥವನು ತಿಳಿಸಿ ದ್ವಂದ್ವ ಭೇದವನಳಿಸಿ ಕುಂದ ದೋಷವ ತೊಳಿಸಿ ಒಂದರೊಳು ನಿಲಿಸಿ ನೆಲೆಗೊಳಿಸಿ ಸಂದು ಜನ್ಮಗಳಳಿಸ್ಯಾನಂದ ಸುಖ ಹೊಳಿಸಿ 2 ಕರುಣಿಸೊ ಗುರು ಎನಗೆ ಶರಣ ಹೊಕ್ಕಿದೆ ನಿಮಗೆ ದೋರುದನುಭವ ಈಗೆ ಕರಗಿ ಮನವೆರಗುವ್ಹಾಂಗೆ ಸ್ಮರಣ ಸುಖ ಎದುರಿಡು ಬ್ಯಾಗೆ ತರಣೋಪಾಯದಲೆನೆಗೆ ಪೊರೆಯೊ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಕಾಯೊ ಕಾಯೊ ಕೃಪಾನಿಧಿ ಕಾಯೊ ಕೃಪಾಳು ಸದ್ಗುರು ದಯ ನೀ ಪಾಲಿಸಿ ಸೋಹ್ಯಸೊನ್ನೆ ಸೂತ್ರಗುಹ್ಯ ಗೂಢದೋರಿ ಸಾಹ್ಯಮಾಡೊ ಸ್ವಾಮಿ ಸಾಕ್ಷಾತ್ಕಾರ ನೀ ದೋರಿಸಿ ನ್ಯಾಯದಲಿ ಮಿಥ್ಯಾಮಾಯ ಮೊನೆಮುರಿಸಿ ತೋಯಜಾಕ್ಷ ನಿಮ್ಮ ಶ್ರಯ ಸುಖ ಬೀರಿ ಭವ ಭಯ ಹರಿಸೊ ಗುರು ಕರುಣಿಸೊ 1 ನಾನಾರು ಎಂದು ಸಾಖೂನ ತಿಳಿಯದೆ ನಾನಾ ಯೋನಿಮುಖ ಜನಿಸಿ ಬಂದೆÀನಯ್ಯ ಜನುಮ ಜ್ಞಾನಗಮ್ಯವಾದ ಸ್ಥಾನದೋರಿ ನಿಜ ಧ್ಯಾನ ಮೌನದನುಭವ ಸುಖ ನೀಡೊ ನಿಮ್ಮ ನ್ಯೂನ ಪೂರ್ಣ ಎನ್ನ ನೀ ನೋಡದೆ ಸ್ವಾಮಿ ಸ್ವಾÀನುಭವದ ಸುಜ್ಞಾನ ದೀಪಲಿಡೊ ನಮ್ಮ ಮನೋನ್ಮನವಾಗಿ ಘನ ಕೈಗೂಡುವಾ ಸನ್ಮತ ನೋಡಿ ಸುವರ್ಮ 2 ನೋಡದೆ ಗುಣದೋಷ ಮಾಡಿ ಉಪದೇಶ ದೃಢಭಾವದ ಸುಪಥ ಒಡನೆ ಗೂಡಿಸೊ ನೋಡಿ ದೃಷ್ಟಿಲೆನ್ನ ಒಡೆಯ ಸದ್ಗುರು ಪೂರ್ಣ ಓಡಿಹೋಗುವಂತೆ ಭಕ್ತಿ ಜ್ಞಾನ ವೈರಾಗ್ಯವಿಡಿಸೊ ನೀಡಿ ಅಭಯಕರುಣಕವಚವ ತೊಡಿಸೊ ಪಿಡಿದು ಎನ್ನ ಕೈಯಾ ಮೂಢ ಮಹಿಪತಿಯ ಬಿಡದೆ ಕಡೆಗಾಣಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೊ ಕಾಯೊ ಜಿತಕಾಯ ಗುರು ಬಾದ ರಾಯಣ ತತ್ವಜ್ಞರಾಯ ಪ ನಾ ಯಾರಿಗೆ ಬಿನ್ನೈಪೆ | ಹೇಯಸಂಸಾರದ ಎರಡೊಂದು ಮಠದಲಿ ಧರಿಸಿ ತೂರ್ಯಾಶ್ರಮ ಸಿರಿಯರಸನ ದಿವ್ಯ ಮೂರ್ತಿಗಳ ಕರದಿಂದ ಪೂಜಿಸಿ | ಮರುತ ದೇವನ ಮತ ಪರಮಾನಂದವೆಂದು ಧರೆಗೆ ಬೀರಿದ ಕರುಣಿ 1 ಜ್ಷಾನಿಗಳರಹುವ | ವಾಣಿಯಿಂದಲಿ ದೇ ಮೌನಿವರಿಯ ಎನ್ನ | ಹೀನಪಾತಕವೆಂಬ ಕಾನನ ದಹಿಸೆಂದು | ಸಾನುರಾಗದಿ ನೋಡಿ 2 ಭೂಸುರ ಪರಿಪಾಲ | ಶ್ರೀ ಶಾಮಸುಂದರನ ಲೇಸಾಗಿ ಒಲಿಸುತಲಿ ಕಿಟಜದಲಿ ಭಾಸುರ ಘನವೇಣಿ | ಭೇಶಪುರದಿ ನೆಲಸಿ ದಾಸರ ಮನದಭಿಲಾಷೆ ನೀಡುವ ದಾನಿ 3
--------------
ಶಾಮಸುಂದರ ವಿಠಲ