ಒಟ್ಟು 1432 ಕಡೆಗಳಲ್ಲಿ , 103 ದಾಸರು , 1184 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧ್ಯಾನವ ಕೊಡು ಹರಿಯೆ | ನಿರಂತರ ಧ್ಯಾನವ ಕೊಡು ಹರಿಯೆ ಪ ನೀನೆ ಗತಿಯೆಂದಾನುಪೂರ್ವಕ ಧ್ಯಾನ ಮಾಳ್ವರ ಜನ್ಮಕರ್ಮಗ ಳೇನು ನೋಡದೆ ಪೊರೆವೆ ನಿನ್ನ ಸುನಾಮವೆ ಸುರಧೇನುವೆಂದು ಅ.ಪ. ನಿನ್ನ ನಾಮವ ನೆನೆದು | ಅಜಾಮಿಳನು ಧನ್ಯನು ತಾನಾದನು ಈ ಭುವನದಿ ತನ್ನ ದೇಹಾತುರದೊಳನ್ಯರ ಬನ್ನ ಬಿಡಿಸುತಲಿದ್ದ ಖಳನು ನಿನ್ನ ನಾಮಸ್ಮರಣೆ ಮಾತ್ರದಿ ಘನ್ನ ಮುನಿಪತಿ ಎನ್ನಿಸಿದನು 1 ದುರುಳ ದುಶ್ಯಾಸನನು | ಸಭೆಯೊಳಗಂದು ತರಳೆ ದ್ರೌಪದಿದೇವಿಯ ಸೆರಗನ್ನು ಸೆಳೆಯೆ ಮುರಹರನೆ ಹಾ ಕೃಷ್ಣ ದ್ವಾರಕಾ- ಪುರನಿಲಯ ಪರಮಾತ್ಮ ಭಕ್ತರ ಸುರತರುವೆ ಎಲ್ಲಿರುವೆ ಏತಕೆ ಮರೆವೆ ಎನ್ನುತ ಮೊರೆಯೆ ಪೊರೆದೆಯೊ 2 ನರಕ ಕೂಪದೊಳು ಬಿದ್ದು | ಏಳುತ್ತ ಮುಳುಗುತ ಪರಿಪರಿ ಭಾಷೆಯಲಿ ಮುಂದೋರದೆ ಹೊರಳುತ್ಹೊರಳುತ ಮರುಕಗೊಳುತ ಹರಿಹರಿ ನಾರಾಯಣೆನ್ನಲು ಸುರಲೋಕವನ್ನಿತ್ತು ಸಲಹಿದೆ ವರದ ಲಕ್ಷ್ಮೀಕಾಂತ ಶಾಶ್ವತ 3
--------------
ಲಕ್ಷ್ಮೀನಾರಯಣರಾಯರು
ನಂದ ಕುಮಾರ ಇಂದುಕುಲ ತಿಲಕ ಪ ಎಂದಿಗು ನಿನ್ನಯ ಸುಂದರ ಚರಣವ ವಂದಿಸಿ ನಲಿಯುವ ನಂದವೆನಗೆ ಕೊಡೊ ಅ.ಪ ಧನಕನಕಗಳನು ದಿನ ದಿನ ಗಳಿಸುವ ಅನುರಾಗಗಳನು ಕೊನೆಗಾಣಿಸೊ ದೇವ ವನಜಸಂಭವಪಿತ ಕನಸಿನಲ್ಲಿಯೂ ನಿನ್ನ ಮನನದಿ ಹಿಗ್ಗುವ ಮನವ ಎನಗೆ ಕೊಡೆಲೊ 1 ಭಯವಿಲ್ಲದೆ ದೋಷಮಯದ ನೋಟಗಳನು ಬಯಸುವ ಮತಿಯನು ಲಯಮಾಡೋ ದೇವ ಮಾಧವ ಎನ್ನ ನಯನಗಳಿಗೆ ನಿನ್ನ ಪ್ರಿಯ ರೂಪದ ಪರಿಚಯವ ಮಾಡಿಸೊ ಸದಾ 2 ಕಾಲವ ಕಳೆಯಲು ಆಲಸವಿಲ್ಲದೆ ಪೇಳಬಾರದ ನುಡಿ ಚಾಲನು ತೊಲಗಿಸೊ ಬಾಲ ಗೋಪಾಲ ಎನ್ನ ನಾಲಿಗೆಯಲಿ ನಿನ್ನ ಲೀಲೆಗಳನು ಸದಾ ಲಾಲಿಸಿ ಪೊಗಳಿಸೊ 3 ಪರಿಪರಿ ಭೋಗಕೆ ಪರಿದಾಡುತ ಸದಾ ಪರರ ಸೇವಿಸುತಿಹ ಕರಗಳ ನಿಲ್ಲಿಸೊ ಮುರಳೀಧರ ಕೃಷ್ಣ ಕರುಣದಿಂದಲಿ ಎನ್ನ ಕರಗಳಿಗೆ ನಿನ್ನ ವರಸೇವೆಯ ನೀಡೊ 4 ಭುವಿಯಲಿ ದುರುಳರ ಸವಿನುಡಿಗಳಿಗತಿ ಕಿವಿಗೊಟ್ಟು ಕೇಳುವ ಲವಲವಿಕೆಯ ಬಿಡಿಸೊ ದಿವಿಜರೊಡೆಯ ಎನ್ನ ಕಿವಿಯೊಳಗೆ ನಿನ್ನ ನವ ನವ ಚರಿತೆಯ ಸವಿರಸ ಸುರಿಸೆಲೊ 5 ಮಾಧವನನು ಮರೆತು ಪಾದಗಳಿಂದಲಿ ಮೇದಿನಿ ತಿರುಗುವ ಮೋದವೆನಗೆ ಬೇಡ ಯಾದವಪತಿ ನಿನ್ನ ಪಾದದರುಶನದ ವಿ ನೋದಕ್ಕೆ ಸುತ್ತಲು ಆದರ ಪೊಂದಿಸೊ 6 ಭಿನ್ನ ಅಂಗಗಳಿಂದ ಎನ್ನ ಕರ್ಮಗಳನು ನಿನ್ನ ಸೇವೆಯೆಂದು ಬಿನ್ನೈಸುವೆ ದೇವ ಎನ್ನ ದುರಿತಗಳ ಭಿನ್ನ ಮಾಡುತಲಿ ಪ್ರ ಸನ್ನನಾಗಿ ಎನಗೆ ಸನ್ಮತಿ ದಯಮಾಡೊ 7
--------------
ವಿದ್ಯಾಪ್ರಸನ್ನತೀರ್ಥರು
ನಂದನಂದನ ಗೋವಿಂದ ಮುರಾರಿ ಸುಂದರ ಮೂರುತಿ ಸುಖವಿಲಾಸಾ ಪ ಚಂದದಿಂದಲಿ ನಿಮ್ಮ ಸ್ತುತಿಸುವ ಭಕುತರಾ- ನಂದದಿ ಕಾಯ್ವ ಮುಕುಂದ ಮಹಾನುಭಾವ 1 ಸುರಮುನಿ ಪೂಜಿತಾ ಸುಗುಣ ಪ್ರಖ್ಯಾತಾ ಮೂರ್ತಿ 2 ವೆಂಕಟಾದ್ರಿಯವಾಸಾ ವಿಜಯಶ್ರೀ ಜಗದೀಶಾ ಮೀನಾಂಕ ಜನಕಹರೆ 3 ವೇದಗೋಚರ ವೇಣುನಾದ ವಿನೋದ ಕೃಷ್ಣಾ ಮಾಧವ ಕೇಶವ ಯಾದವ ಕುಲಪತಿ 4 ಸಿಂಧು ಪನ್ನಗಶಯನ 'ಶ್ರೀ ಹೆನ್ನವಿಠ್ಠಲಾ' 5
--------------
ಹೆನ್ನೆರಂಗದಾಸರು
ನಂದನಂದನ ಗೋವಿಂದ ಹರಿ ಪ ಸುಂದರವದನ ಸುರೇಂದ್ರ ಸುವಂದ್ಯ ಅ.ಪ. ಮಾಧವ ಮುರಹರ ಬೃಂದಾವನ ವಿಹಾರ ಸುಂದರ ಮುರಳೀಧರ ಸುಮನೋಹರ ಸಿಂಧುಶಯನ ಸುಖಸಾಂದ್ರ ಪರಾತ್ಪರ 1 ಕೇಶೀ ಮಥನ ಕಂಸಾಸುರ ಮರ್ದನ ಸನ್ನುತ ಶ್ರೀಚರಣ ದಾಸ ಜನಾವನ ಕರುಣಾಭರಣ ಕೇಶವಗುಣ ಪರಿಪೂರ್ಣ 2 ಮುರನರಕಾಂತಕ ಮುಕ್ತಿಪ್ರದಾಯಕ ಶರಣಾಗತ ಜನ ಪಾಲಕ ಕರಿಗಿರೀಶ ಕಾಮಿತ ಫಲದಾಯಕ ಗರುಡಗಮನ ಶ್ರೀ ರುಕ್ಮಿಣಿನಾಯಕ 3
--------------
ವರಾವಾಣಿರಾಮರಾಯದಾಸರು
ನದಿಗಳು ವೇಣೀ ಮಾಧವನ ತೋರಿಸೆ ಜಾಣೆ ತ್ರಿವೇಣಿಕಾಣದೆ ನಿಲ್ಲಲಾರೆನೆ ಪ. ಬಂದೆನೆ ಬಹಳ ದೂರದಿ ಭವಸಾಗರತರಣಿನಿಂದೆನೆ ನಿನ್ನ ತೀರದಿಒಂದು ಗಳಿಗೆ ಹರಿಯಗಲಿ ನಾನಿರಲಾರೆಮಂದಗಮನೆ ಎನ್ನ ಮುಂದಕೆ ಕರೆಯೆ 1 ಶರಣಾಗತರ ಪಾಲಿಪುದು ತರಳೆ ನಿನ್ನ ಬಿರುದುಕರುಣದಿಂದೆನ್ನ ಪೊರೆಯೆಸ್ಮರಣೆ ಮಾತ್ರದಿ ಭವತಾಪವ ಹರಿಸುವಸ್ಮರನÀ ಪಿತ ಮುರಹರನ ಕರುಣದಿ 2 ಪಾದ ವಾ-ರಿಜ ತೋರಿಸೆ ಮದಗಜಗಮನೆ 3
--------------
ವಾದಿರಾಜ
ನಂದಿವಾಹನಾ ಪಾಲೀಸೊ ನೀ | ಕಂದ ನೆಂದನಾ ಪ ಕಂದು ಗೊರಳ ಮೌ | ಳೆಂದು ಶಿಖರ ಅಮರೇಂದ್ರ ಮುಖರು ಸುರ | ವೃಂದ ವ್ಯಂದ್ಯ ಪದಅ.ಪ. ನಂದ - ನಂದನಾ - ಪ್ರಿಯ ಸಖ | ಮಂದಜಾಸನಾಕಂದ ನೆನಿಸಿ ದುರ್ | ವೃಂದ ತ್ಯಜಿಸಿ ತವತಂದೆ ಯಾಜ್ಞೆಯಲಿ | ನಿಂದು ಸರಿದ ಹರ 1 ದಿತಿಸುತ | ಸ್ತೋಮ - ಪ್ರೀಯನೇ ||ಶಾಮ ಸುಂದರ ಹರಿ | ಪ್ರೇಮಾನ್ವಿತ ಸುತಕಾಮಾರಿಯೆ ಹರ | ಸಾಮಜವಾಸಾ 2 ಸೇವ್ಯ ನಂಘ್ರಿ ದಶದಿವ್ಯ ಕಲ್ಪ ತಪ | ಗೈಯ್ಯೆ ಶಯ್ಯನಾದೆ 3 ಯೋಗಿ ರೂಪ ಭವರೋಗ ವೈದ್ಯ ಹೃ | ದ್ರೋಗ ಕಳೆಯೊ ಶಿವ4 ಗೌರಿ ಮನೊ - ಹರಾ - ಕೈಲಾಸವಾಸ | ಕೈರಾತಾ ಕೃತಿಧರಾ ||ಗಿರಿ ಇಂದ್ರ ಕೀಲದಿ | ಘೋರ ತಪಸಿ ನರಸಾರೆ ನಿನ್ನ ಪದ | ಶೂರ ಪಡೆದ ಶರ 5 ಶುಕ | ಲಿಂಗಾಕಾರನೇ ||ತುಂಗ ಮಹಿಮ ನಿ | ಸ್ಸಂಗ ಹರಿಯ ದ್ವಿತಿಯಂಗ ಡಮರು ಶೂ | ಲಿಂಗಳ ಪಿಡಿದಿಹ 6 ತೈಜಸ - ತಾಮಸ | ಸಾಕಾರಿ - ಓಜಸಾ ||ನೀ ಕುಶಾಸ್ತ್ರದಲಿ | ಭೀಕರರನು ಅವಿವೇಕರ ಮಾಡ್ದೆ | ಪಿ | ನಾಕಿ ಧರ ಹರ 7 ರುಂಡ - ಮಾಲನೇ - ಮುನಿಜ ಮೃ | ಕಂಡ - ಪಾಲನೇ ||ಅಂಡಜ ಮಹ ಬ್ರ | ಹ್ಮಾಂಡ ದೊಡೆಯ ಪದಪುಂಡರೀಕದೊಳು | ಬಂಡುಣಿ ಎನಿಸಿಹೆ 8 ಶಂಭೊ - ಶಂಕರ - ಧೂರ್ಜಟೆಯೆ | ಅಂಚೆ - ಮನೋಹರಾ ||ಕಂಬು ಪಾಣಿ ಪದ | ಹಂಬಲಿಸುವೆ ಹೃದಯಾಂಬರದೊಳು ಎನ | ಬಿಂಬನ ತೋರಿಸು 9 ಸೋಮರ್ಕಾನಲ - ಈಕ್ಷಣಾ | ಭೀಮ - ಕೈಕಪಾಲ ||ಭೀಮ ಭವಾಟವಿ | ಧೂಮಕೇತು ಸಿರಿರಾಮ ಪದಾಶ್ರಿತ | ವೈಮನ ಕಳೆಯೊ 10 ಭಾವ - ಜಾರಿಯೇ - ಮುರುಹರ | ರಾವಣಾದಿ - ಪ್ರಿಯಾ ||ಸಾವಧಾನದೊಳು | ಭಾವ ಶುದ್ಧಿಸುತತೋರ್ವುವೆನಗೆ ಗುರು | ಗೋವಿಂದ ವಿಠಲನ 11
--------------
ಗುರುಗೋವಿಂದವಿಠಲರು
ನಂಬಬೇಡಿ ಸಿರಿಯ ತನ್ನದೆ ? ಪ ನಂಬಬೇಡಿ ಸಿರಿಯು ತನ್ನದೆಂಬ ನಿಮಿಷದೊಳಗೇನಹುದೊಡಂಬತನವಿದೇಕೆ ಹರಿಯ ಪಾ-ದಾಂಬುಜವನು ಭಜಿಸಿ ನರರು ಅ ಜಲಧಿಯನ್ನು ಪೀರ್ದ ಮುನಿಯಜನನಿ ಪೆಸರ್ಗೆ ಕಿವಿಯನಾಂತಖಳನ ಬಲವ ನಂಬಲಾತುತಲೆಯ ತವಿಸಿದವನ ಸಿರಿಯುಗಳಿಗೆಯೊಳಗೆ ಕೀಲು ಸಡಿಲದೆ - ಎಣಿಕೆ ಇಲ್ಲದದಳವು ಯಮನನಗರಿಗೈದದೆ - ದೈವಕೃಪೆಯುತೊಲಗಲೊಡನೆ ದಾಳಿವರಿಯದೆ - ಕೇಳಿ ಜನರೆ 1 ಇಭ ನೃಪತಿ ಶೌರಿ ಮುನಿಯಲಂದು ಅವನ ಪದವು ಮುರಿಯದೆ - ಕೇಳಿ ಜನರೆ2 ಧರಣಿಯ ಮುನ್ನಾಳ್ದ ನಹುಷಸಗರರೆನಿಪ ಭೂಪತಿಗಳುಸಿರಿಯ ಜಯಿಸಲಿಲ್ಲ - ಮಿಕ್ಕನರರ ಪಾಡಿದೇನು ನೀವುಬರಿದೆ ಭ್ರಾಂತರಾಗಬೇಡಿರೊ - ಎಂದಿಗಾದರುಸ್ಥಿರವಿದಲ್ಲವೆಂದು ತಿಳಿಯಿರೊ - ಶ್ರೀ ಕಾಗಿನೆಲೆಯವರದ ಕೇಶವನನು ಭಜಿಸಿರೊ - ಕೇಳಿ ಜನರೆ 3
--------------
ಕನಕದಾಸ
ನಂಬಿ ನೆನೆಯೋ ಹರಿಯನಾಮ|ವಿಡಿದು ಘನ ಪ್ರೇಮಾ| ಭಾವಿಸೆಲೋ ನಿಷ್ಕಾಮಾ| ಇಂಬಾಗಿ ಹೊರೆವನು ನೇಮಾ ಮಂಗಳ ಧಾಮಾ ಪ ಹೆಸರಿಟ್ಟು ಹೋಲಿಸಿ ಕರೆದಾಜಮಿಳಗ ವರದಾ| ನೋಡೆಲೋ ಹರಿ ಬಿರುದಾ| ವಸುಧಿಲಿ ಭಕುತಿಂದ ಬೆರೆದಾವಗೆ ನೆರದಾ 1 ಸಕಲಧರ್ಮಗಳಿಂದವ ಜಾರಿ ಯನ್ನ ಚರಣವ ಸಾರಿ| ಭಜಿಸೆಂದು ಉದಾರಿ| ಪ್ರಗಟದಿ ಅರ್ಜುನಗ ಸಾರಿದನೋ ಮುರಾರಿ2 ಇನ್ನೊಂದು ಸಾಧನವು ಸಲ್ಲಾ ಇದರಿಂದಧಿಕಿಲ್ಲಾ| ತಂದೆ ಮಹಿಪತಿ ಸೊಲ್ಲಾ| ಮನ್ನಿಸಿ ನಡೆಯಲು ಸುಲಭ ಕೈವಲ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿದೆ ನಂಬಿದೆ ಅಂಬುಜಾಕ್ಷನೆ ನಿನ್ನ ನಂಬಿದ ಭಕ್ತರಿಗೆ ಬೆಂಬಲನಾಗಿರುವನೆ ಪ. ಮೊರೆಯಿಡೆ ದ್ರೌಪದಿ ತ್ವರಿತದಿ ಪೋಗುತ ಪೊರೆದ ಮಹಾನುಭಾವ ಮುರಹರನೆ ನಿನ್ನ 1 ಶಕ್ತನೆ ನಿನ್ನ ನಾ ಭಕ್ತಿಯಿಂ ಭಜಿಸುವೆ ಭಕ್ತರಿಗೆಲ್ಲ ನೀನು ಮುಕ್ತಿಯ ಕೊಡುವನೆ 2 ಗಿರಿಯೊಳು ನೆಲಸಿಹ ಪರಮಪುರುಷ ರಂಗ 3
--------------
ಹೆಳವನಕಟ್ಟೆ ಗಿರಿಯಮ್ಮ
ನಂಬಿದೆ ನಮ್ಮಮ್ಮನ ನಂಬಿದೆ ಪ ಕದಂಬ ಕರರ್ಚಳ ನಂಬಿದೆ ಅ.ಪ. ಕರವೀರದೊಳಗಿರುತಿಹಳು ರವಿ ಕಿರಣ ಕಾಂಚನ ಪೀಠ ನಿಧಿತಳು ಸುರತರುಣಿ ಸಂಘಾತ ಸೇವಿತಳು ಆಹಾಹರಿಯ ವಕ್ಷದಿ ಕೂತು ಕರುಣ ಕಟಾಕ್ಷದಿಪರಿವಾರ ಜನಕೆಲ್ಲ ಸುರಿವಳು ಸುಖವನ್ನು 1 ಕರದಿ ಕಂಕಣ ತೋಡೆ ಬಳೆಯು ನಾಗಮುರಿಗೆ ವಂಕಿಯುಶೋಭ ಸಿರಿಯು ಪಾದಾಭರಣದ ಕಲಕಲಧ್ವನಿಯು ಆಹಾಕರಣದಿ ವಾಲಿ ಕಂಠದಿ ಸರ ಸುರಗಿಯುಭರಮ ಮೇಖಳ ಕಾಂತಿ ಹರವಿಲಿ ಬೆಳಗೋದು 2 ಮುಖವನೋಡಲು ಸೋಮಬಿಂಬ ದಿವ್ಯ ಚಿಕುರಮ ಭ್ರಮರದಂಬನಾಸ ಮುಖದಿ ಮಣಿಯು ರವಿಬಿಂಬ ಆಹಾವಿಕಸಿತ ಸುಮಮಾಲೆ ವಿಕಸರ ಫಣಿವೇಣಿಚಕಚಕಿತಾಭರಣಳಕಳಂಕ ಚಲಿವಿಯ 3 ಕವಿ ಭುವನದೊಳಿರುವಳ 4 ದೇಶಕಾಲಗಳಿಂದಸಮಳು ಹರಿಗಾಸುಗುಣಗಳಿಂದಾಸಮಳುಸುಖರಾಶಿ ಸೌಂದರ್ಯ ಸೌಭಗಳು ಆಹಾವಾಸುದೇವನ ಭಕ್ತಿರಾಶೆ ಪೂರೈಸುತಿಂದಿ-ರೇಶನು ಚ್ಛಾಂಗದಿ ತಾ ಸುಖಿಸುವಳಂಬ 5
--------------
ಇಂದಿರೇಶರು
ನಂಬಿದೆ ನಾ ತವಪದವ | ಯೆನ | ಗಿಂಬನು ಪಾಲಿಸು ದೇವ ಪ ಅಂಬುಧಿಶಯನ ಚಿದಂಬರ ಮುರಹರ ಬೆಂಬಿಡದೆನ್ನ ವಿಶ್ವಂಭರ ಸಲಹೈ 1 ಬೇಸರದಿಂದ ಕಳವಳಿಸುವೆನೀ ಕೊಳಕು ಸಂಸಾರದಿ ನಳಿನಾಕ್ಷನೆ ಸುಖಗೊಳಿಸಿ ಪೊರೆವುದೈ 2 ದುಷ್ಟರ ಸಂಗದಿ ಕೂಡಿ ಸಂ | ಕಷ್ಟ ವಿದೈ ದಯಮಾಡಿ ಸೃಷ್ಟಿಗೊಡೆಯನೆನ್ನಿಷ್ಟವ ನೀಯುತ ಶಿಷ್ಟನ ಕಾಯೋ ವಸಿಷ್ಠವಿನುತ ಪದ 3 ದಣಿದೆನು ದಾರಿದ್ರ್ಯದಿಂದ | ನೆರ | ವಣಿಗೆಯಗೈವರಿಲ್ಲ ಗುಣನಿಧಿ ತವ ದಯವೊಣಗಿದ ಮಾತ್ರಕೆತೃಣ ಸಮವೆನ್ನನಾರೆಣಿಕೆಯ ಗೈವರು 4 ದೇವನೆ ನಿನ್ನಡಿಯುಗದ ಸ | ದ್ಭಾವನೆಯ -ನೀಯೊ ಸದಾ | ಕಾವವ ನೀನೆಂದೋವಿನು -ತಿನುವೆನು ಶ್ರೀವಾಸುದೇವ ದಾಮೋದರ ವಿಠಲ 5
--------------
ಅನ್ಯದಾಸರು
ನಂಬಿದೆ ನಾನಿನ್ನ ನಾರಾಯಣ ವಿಶ್ವಂಭರ ಮೂರುತಿಯೇ ಕಂಬುಧರ ಕಮಲಾಂಬಕ ಶ್ರೀಹರಿ ಪಾರ್ಥನ ಸಾರಥಿಯೇ ಪ ವಾರಿಜನಾಭನೆ ಪಾರುಗಾಣಿಸೊ ಸಂ- ಮಾರಮಣನೆ ಮೊರೆಹೊಕ್ಕೆ ಲಾಲಿಸೊ ಮುರಹರ ಗೋವಿಂದ 1 ಪುಣ್ಯುಪುರುಷ ಲಾವಣ್ಯ ನಿಧಿಯೆ ಕಾ- ವನಜಾಪ್ತವಂಶ ಚಂದ್ರ 2 ಕಾಮ ಜನಕ ಸುತ್ರಾಮವಿನುತ ಶುಭ- ನಾಮಸುಜನಪ್ರೇಮಿ ತಾಮಸದೂರ ಸುಧಾಮವರದ ಗುರು- ರಾಮವಿಠಲಸ್ವಾಮಿ 3
--------------
ಗುರುರಾಮವಿಠಲ
ನಂಬಿದೆನೊ ನಿನ್ನ ಅಂಬುಜನಯನ ಕೃ ಪಾಂಬುಧೆ ದೃಢದಲಿ ಪ ಸಂಭ್ರಮದಲಿ ಕಿವಿ ತುಂಬುತಿರುವ ಆ ಡಂಬರ ವಚನಕೆ ಮುಂಬರಗೊಳ್ಳುತ ಅ.ಪ ನವ ಘನ ನಿಭಕಾಯ ನಿನ್ನಯ ಕರುಣಮಯ ಸಹಾಯ ವಿಲ್ಲದೆ ಬಿಗಿಯುತಿರುವ ಮಾಯಾ ಪಾಶವ ತೊರೆಯಲಳವೆ ಜೀಯಾ ನಿನ್ನಯ ದಯವ ಪಡೆದ ಪರಿಯನರುಹುವ ಯತಿವರೇಣ್ಯ ಗುರುಮಧ್ವರಾಯರ ಪರಮ ಸಮಯ ಸಾರಗಳನು ಸಂತತ ಶ್ರವಣ ಮನನ ಧ್ಯಾನಗಳಿಂದ ಪರಿಚಯ ಪಡೆದು ದು ಷ್ಟ ವಿಷಯಗಳಲಿ ಮತಿಯನು ಮುರಿಯುವಂತೆ ಕರುಣಿಸೋ ಸುಗುಣಾಲಯ 1 ನೀರಜದಳ ನೇತ್ರ ವರ ಸುಖ ಚಿನ್ಮಯೈಕ ಗಾತ್ರ ಸುಜನ ಮಿತ್ರ ಸುರವರ ಸರಸಿಜಭವ ಪುತ್ರ ರುಚಿರರ ಮುಕುಟಾಕ್ಷಪಾತ್ರ ನಿನ್ನಯ ವಿವಿಧ ಲೀಲೆಗಳು ಚಿತ್ರವಿಚಿತ್ರವು ಅರಿತೆನೆಂದು ತಿಳಿದು ಮೆರೆಯುತಲಿರುವ ನರರ ಮದವ ಮುರಿದು ದೈನ್ಯದಿಂದಲಿ ಮರೆತೆನೆಂದು ದಿನದಿನದಲಿ ಭಜಿಪರ ಪೊರೆವ ಪರಮ ಕರುಣಾರಸಮಯನೆ 2 ದೀನಭಕುತರನ್ನು ಪೊರೆಯುವ ದಾಸಿಯೆಂದು ನಿನ್ನ ಪೊಗಳುವ ಮಾನತತಿಗಳನ್ನು ಸಂತತ ಧ್ಯಾನ ಮಾಡಿ ಎನ್ನ ಕ್ಲೇಶವ ಮೌನದಿಂದ ಇನ್ನೂ ಸಹಿಸುತ ಜಾನಕೀಶ ತವ ಪಾದಕಮಲದ ರೇಣುವನ್ನು ಶಿರದಿ ಧರಿಸುತಲಿ ಅನು ಮಾನವನ್ನು ತೊರೆದು ಮುದದಿ ಸುವಿಮಲ ಜ್ಞಾನಮೂರ್ತೆ ಜ್ಞಾನಿವರ ಪ್ರಸನ್ನನೆ ನೀನೆ ಎನ್ನ ರಕ್ಷಕನೆಂದರಿಯುತ 3
--------------
ವಿದ್ಯಾಪ್ರಸನ್ನತೀರ್ಥರು
ನಂಬಿದೆನೊ ರಂಗ ಗೋವಿಂದ ರಂಗ ಪ. ಇಳೆಸೃಷ್ಟಿಗಾಧಾರನೆಂಬ ಬಿರುದುಳ್ಳಡೆ ಜಗನ್ಮಯನೆ ಚಿನ್ಮಯರೂಪ ರಂಗ ನೀನಾದ್ಯಯ್ಯ ರಂಗ 1 ಸುಜನಮಂದಾರ ಸರಸಿಜಭವಪಿತ ನಿನ್ನ ಪ್ರಜೆಗಳು ಪೊಗಳುತ್ತಿಹರೆ ರಂಗ ಮುರಹರನೆ ರಂಗ 2 ಸುಜನರೊಳಗೆನ್ನ ಕುಹಕವ ಮಾಡದೆ ನಿನ್ನ ಭಜಕನೆಂದಿರಲಾಗಿ ರಂಗ ಭುಜಗೇಂದ್ರಶಯನ ಶ್ರೀರಂಗ 3 ಧಾತ್ರಿಗಾಧಾರ ಅನಾಥರಕ್ಷಕನೆ ದಯವ್ಯಾತಕೆನ್ನೊಳಿಲ್ಲ ರಂಗ ಕಡೆಹಾಯಿಸೊ ರಂಗ 4 ನೋಡೆ ಶ್ರೀ ಹರಿಯೆ ನೀನಲ್ಲದನ್ಯತ್ರ ದಾತ್ರರಿಲ್ಲವೊ ರಂಗ ಮಹಿಮ ಶ್ರೀರಂಗ 5 ಕೋಪವನು ಬಿಡು ಎನ್ನ ಕುಂದನೆಣಿಸದಿರಯ್ಯ ಆಪತ್ಬಂಧು ಶ್ರೀರಂಗ ಸಲಹಯ್ಯ ರಂಗ 6
--------------
ಹೆಳವನಕಟ್ಟೆ ಗಿರಿಯಮ್ಮ
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು