ಒಟ್ಟು 743 ಕಡೆಗಳಲ್ಲಿ , 94 ದಾಸರು , 661 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ವಾಂತರ್ಗತ ವೇದವ್ಯಾಸ ಕಾಯೊ ಶುದ್ಧ ಮೂರುತಿಯೆ ಸರ್ವೇಶ ಪ. ಶ್ರದ್ಧೆಯಿಂದಲಿ ನಿನ್ನ ಭಜಿಸುವ ಭಕ್ತರಿಗೆಬುದ್ಧ್ಯಾದಿಗಳ ಕೊಟ್ಟುದ್ಧರಿಸೊ ದೇವರದೇವಅ.ಪ. ದ್ವಾಪರದಲಿ ಒಬ್ಬ ಮುನಿಪ ತನ್ನಕೋಪದಿಂದಲಿ ಕೊಡಲು ಶಾಪಸ್ಥಾಪಿಸಲು ಜ್ಞಾನ ಲೋಪಅಪಾರ ತತ್ವಸ್ವರೂಪಶ್ರೀಪತಿಯೆ ಕಾಯೆಂದು ಮೊರೆಯಿಡೆಪಾಪ ವಿರಹಿತÀಳಾದ ಯಮುನೆಯದ್ವೀಪದಲಿ ಅಂಬಿಗರ ಹೆಣ್ಣಿನರೂಪಕ್ಕೊಲಿದವಳಲ್ಲಿ ಜನಿಸಿದೆ 1 ಸೂತ್ರ ಪುರಾಣ ರಚಿಸಿವಾದಗಳ ನಿರ್ವಾದ ಮಾಡಿಸಾಧುವಂದಿತ ಬಾದರಾಯಣ 2 ಸುಮತಿಗಳಿಗೆ ನೀ ಬೋಧಿಸಿದೆ ಮಿಕ್ಕಕುಮತಗಳನ್ನು ಛೇದಿಸಿದೆ ಕ್ರಿಮಿಯಿಂದ ರಾಜ್ಯವಾಳಿಸಿದೆ ಜಗತ್‍ಸ್ವಾಮಿ ನೀನೆಂದು ತೋರಿಸಿದೆವಿಮಲರೂಪನೆ ಕಮಲನಾಭನೆರಮೆಯ ಅರಸನೆ ರಮ್ಯ ಚರಿತನೆಮಮತೆಯಲಿ ಕೊಡು ಕಾಮಿತಾರ್ಥವನಮಿಸುವೆನು ಹಯವದನಮೂರುತಿ3
--------------
ವಾದಿರಾಜ
ಮನದಣಿ ನೋಡಿದೆನೊ ಸನಕಾದಿನಮಿತ ಮನದಣಿ ನೋಡಿದೆನು ದೃಢದಿ ಪ ನಿನಗೆ ಸರಿಯಿಲ್ಲ ಭುವನತ್ರಯದಿ ಮನಕೆ ಬೇಸರವಿಲ್ಲದನುದಿನ ತನುವನಪ್ಪಿಹಿಡಿದು ಭಕುತರ ಮನದ ವರಗಳನಡೆಸಿ ಸಲಹುವ ಕನಿಕರಾರ್ಣವ ವಿಠಲ ನಿನ್ನಡಿ ಅ.ಪ ಒಂದು ದಿನ ಆ ತ್ರೇತಾಯುಗದಲ್ಲಿ ಋಷಿಗಡಣ ಕೂಡಿ ಬಂದು ನಿಮ್ಮಯ ಚರಣಸನ್ನಿಧಿಲಿ ಭಯಭಕುತಿಯಿಂದ ವಂದಿಸಾಲಿಂಗನೆಯ ಕೋರುತಲಿ ಅಭಯ ಬೇಡುತಲಿ ನಿಂದ ಋಷಿಗಳಿಗ್ಹಲವು ಪರಿಯಲಿ ತಂದೆ ನೀ ಸಮ್ಮತವ ಪೇಳಿ ಬಂದು ದ್ವಾಪರಾಂತ್ಯಯುಗದಲಿ ಒಂದು ಅರಲವ ಅಗಲದಲೆ ನಿಮ್ಮ ಪೊಂದಿ ಆಲಿಂಗನವನೀಯುವೆ ನೆಂದು ವರವಿತ್ತ ವಿಠಲ ನಿಮ್ಮಡಿ 1 ಅಪಾರಮಹಿಮಜಾಲ ಅವತರಿತಿಸಿದಿ ದ್ವಾಪರಯುಗದಿ ಬಾಲಕೃಷ್ಣ ನೀನಾಗಿ ಶ್ರೀಪತಿ ಸುಜನಪಾಲ ದನುಜಕುಲಕಾಲ ಪಾಪಸಂಹಿತ ಅಮಿತಲೀಲ ಶಾಪಪರಿಹಾರ ವೇಣುಲೋಲ ತಾಪಸೋತ್ತಮರಿಷ್ಟ ನೀಡಲು ಗೋಪಿಕಾಸ್ತ್ರೀಯರೆನಿಸಿ ಪುಟ್ಟಿಸಿ ಗೌಪ್ಯದಾಲಿಂಗನವನಿತ್ತ ಭೂಪ ಭೂಪತಿ ವಿಠಲ ನಿಮ್ಮಡಿ 2 ಸುಗುಣ ಸಂತರಹೃದಯಸಂಚಾರ ದಾಸಾನುದಾಸರು ಪೊಗಳಿ ಭಜಿಸುವ ಗಾನಪ್ರಿಯಕರ ಮೌಲಕೌಸ್ತುಭ ಜಗದಜೀವನ ಪಾವನಾಕಾರ ಪರಮಸುಖಕರ ಅಗಣಿತಾಗಣಿತಮಹಿಮಭರಿತ ಪೊಗಳಲಳವೆ ನಿಮ್ಮ ಚರಿತ ತ್ರಿ ಜಗನಾಟಕ ಸುಲಭದಲಿ ನೀ ಅಗಲದನವರತಸಮ ಈ ಕಲಿ ಯುಗದಿ ಭಕ್ತರಿಗಾಲಿಂಗನೀಯುವ ನಿಗಮಗೋಚರ ವಿಠಲ ನಿನ್ನಡಿ 3 ಮಂದಹಾಸ ಮಂದರೋದ್ಧಾರ ಸುರಕಲ್ಪಧೇನು ಇಂದಿರೆಯರ ಪ್ರಾಣ ಮನೋಹರ ಹೇ ದೀನಬಂಧು ಸುಂದರಾಂಗ ಸುಗುಣಗುಣಹಾರ ಬಂಧನಿವಾರ ಸಿಂಧುಕಲಕಿದಪಾರ ಶೂರ ಕುಂದದೆ ಮೊರೆಕಾಯ್ದ ಸುರರ ಹೊಂದಿಭಜಿಸುವ ಭಕುತಜನಕಾ ನಂದ ನೀಡುತ ಚಂದನೋಡುತ ಸಿಂಧುನಿಲಯ ಮುಕ್ಕುಂದ ಮುರಹರಿ ಅಂದಮಾದ ವಿಠಲ ನಿಮ್ಮಡಿ 4 ಸುತ್ತಮುತ್ತ ಭಕ್ತರಾಲಯವು ಹಿಂಭಾಗದಲ್ಲಿ ಸತ್ಯಭಾಮ ರುಕ್ಮಿಣೀಕಾಂತನು ಮುಂಭಾಗದಲಿ ನಿತ್ಯನಿರ್ಮಲ ಚಂದ್ರಭಾಗಿನಿಯು ನಡುಮಧ್ಯ ರಂಗವು ಭಕ್ತಗೊಲಿದು ಭೂವೈಕುಂಠವ ಸತ್ಯವೆನಿಸಿ ಮೀರಿ ಮೆರೆವ ಭಕ್ತಜನರ ಕೈಯೆತ್ತಿ ಸಾರುವ ಪೃಥ್ವಿಗಧಿಕ ಮಹ ಪಂಢರಾಪುರ ಮುಕ್ತಿ ತವರೆಂಬ ಮಂದಿರದಲ್ಲಿ ಕರ್ತುಶ್ರೀರಾಮ ವಿಠಲ ನಿನ್ನಡಿ5
--------------
ರಾಮದಾಸರು
ಮನದಧಿಪ ಮಹದೇವ ಮೊರೆಯೆ ಕೇಳೊ ಪ ತಿಮಿರ ಸ್ಥಿತಿಯಲ್ಲಿ ಎದೆ ಒಡೆದು ನಿಂದಿಹೆನು ಅ.ಪ. ಮನಕರಣಗಳು ಎನ್ನ ತಮ್ಮ ಸೆರೆಯಲಿ ಇಟ್ಟು ಘನ ಯಾತನೆಯ ಪಡಿಸಿ ಮೂರ್ಛೆಗೊಳಿಸಿ ಕ್ಷಣ ಬಿಡದೆ ದಣಿಸುವುವು ಮೊರೆ ಇಡಲು ಮುಖವಿಲ್ಲ ಪ್ರಣಿತ ಪಾಲಕರಲ್ಲಿ ಸರಿ ಇಲ್ಲ ನಿನಗೆಂದು 1 ಪವಮಾನ ಪದಕಮಲ ಮಧು ಮತ್ತ ಮಹಭೃಂಗ ಹರಿದಾಸ ಶಿರೋರತ್ನ ಅಭಯದಾಯಿ ಶಿವತಮನೆ ನಿನ್ನಂಘ್ರಿ ರಜಲಕ್ಷ್ಮಿಯನ್ನು ಶಿರ ನಿತ್ಯ ಮಾಡೆನ್ನ ಕೃತಕೃತ್ಯ 2 ಗೌರೀಶ ಗುಣನಿಧಿಯೆ ಗುಪ್ತ ಮಂಗಳ ಮಹಿಮ ಶೌರಿ ಜಯೇಶವಿಠಲ ಧ್ಯಾನಲೋಲ ತಾರಕನೆ ಭವಸಿಂಧು ದಾಟಿಸುವ ಅಂಬಿಗನೆ ಕಾರುಣ್ಯಗರೆದೆನ್ನ ಹರಿಪಾದ ದಡಕೊಯ್ಯೊ 3
--------------
ಜಯೇಶವಿಠಲ
ಮನವೇ ಕೊಬ್ಬ ಬ್ಯಾಡ ಉಬ್ಬ ಬ್ಯಾಡಾ ಪ ನೆನುವಿನೊಳಿಟ್ಟು ಮಾನುಭಾವರ ಚರಣ ಕಮಲವನು ಜನುಮ ಸಾರ್ಥಕವನು ಮಾಡು ಕಂಡ್ಯಾ ಅ.ಪ ವಿದ್ಯೆ ವಶವಾದರೆ ನೀ ತಿದ್ದಿ ಕಲಿಸು ಆರ್ತರಿಗೆ | ಬುದ್ಧಿವಂತರ ಕೂಡಾ ತರ್ಕಸ್ಯಾಡ ಬೇಡಾ ನೋಡಬ್ಯಾಡಾ | ಉಧೃತ ಶಕ್ತಿಯ ಬಲದಿಂದ ಸಂತ ಸೇವೆ ಮಾಡು | ಗುದ್ದಿ ಹೆಟ್ಟಿ ಪರರ ಪೀಡಿ ಕುಡಬ್ಯಾಡಾ ಮಾಡಬ್ಯಾಡಾ | ಮುದ್ದಿ ಘನವಾದರ ಸತ್ಪಾತ್ರಕ ನಿವೇದಿಸು | ಮದ್ದು ತಿಂದು ನುಡಿವವನಂತ ಪರರ ದೋಷ ಗುಣಾ | ಬದ್ಧವಚನವ ನುಚ್ಚರಿಸದಿರು 1 ರಾಜಮುದ್ರಿಯ ನೆವದಿ ಉದರ ತುಂಬಲಾಗಿ ನೀತಿ ಬಿಟ್ಟು | ಈ ಜನರನಾ ದಂಡಿಸುವದಲ್ಲಾ ಇದುಸಲ್ಲಾ | ಆ ಜನ ಹೊಟ್ಟೆ ಹಾಕಿ ಬರೆಗೈಯ್ಯ ಹೋಗುವಂತೆ | ನೀ ಜಯಿಸಿ ಬಂದದಲ್ಲಾ ಸಂದದಲ್ಲಾ | ತ್ಯಾಜದಿಂದ ದೊಡ್ಡವ ನೀನೆಂದು ಸೆಜ್ಜಿ ತೆನೆಯಂತೆ | ಸುಜನರೊಳಗ ಗರ್ವ ಹಿಡಿಯದಿರು ಪಡೆಯದಿರು | ವಾಜಿಯಲಿ ನವಣಿ ತೆನೆಯಂತ ಬಾಗಿ ನಡೆದರೆ| ಶ್ರಿ ಜನಾರ್ಧನ ರಕ್ಷೀಸುಚ ಕಂಡ್ಯಾ 2 ಜರಿದು ಕೈಯಲ್ಲಿಂದ ಸಬಕಾರ ನೀರೊಳಗ ಬಿದ್ದ | ತೆರದಿಂದ ತಿರುಗಿ ತಿರುಗಿ ಯಾತಿಗಳನು | ಭರದಿಂದ ಕಡಿಯಲಿ ಪುಣ್ಯ ಫಲ ವಶದಿಂದ| ನರದೇಹವನು ತಾಳಿ ಬಂದಿ ನೀನು ತಿಂದಿ ನೀನು | ತ್ವರಿತ ಸುತಪ್ರಿಯ ಗುರು ಮಹಿಪತಿ ಚರಣಕ | ಮೊರೆ ಹೊಕ್ಕು ಗತಿ ಪಡೆ ಭಾವದಿಂದ ಜೀವದಿಂದ | ಧರೆಯೊಳು ಗಾಳಿಯೊಳಗಿನ ದೀಪ ತೋರುವಂತೆ | ಸ್ಥಿರವಲ್ಲಾ ಆಗಲ್ಹೋ ಈಗಲಿದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನವೇ ಸುಮ್ಮನೆ ಇರಬೇಡ ಅರೆನಿಮಿಷವಾದರುಮನವೇ ಸುಮ್ಮನೆ ಇರಬೇಡಪ ಕನಸಿನಂತಿಹ ಸಂಸಾರವ ನೆಚ್ಚಿಘನತರ ಪಾಪಕೆ ಗುರಿಯಾಗಬೇಡ ಅ ರೊಕ್ಕದಾಸೆಯ ಬಿಡಬೇಕು ಸ್ತ್ರೀ ಮೋಹಕೆಸಿಕ್ಕದೆ ನಡಕೊಳಬೇಕುಅಕ್ಕರು ದೇಹದೊಳಿರದಿರಬೇಕುಶಕ್ತಿಯ ಮೀರಿ ಧರ್ಮವ ಮಾಡಬೇಕುಮುಕ್ಕಣ್ಣ ಹರನ ಪೂಜಿಸಬೇಕುಮುಕ್ತಿ ಮಾರ್ಗವ ಪಡಕೊಳಬೇಕು 1 ಸರ್ವನಿಸ್ಪøಹನಾಗಬೇಕು ಸಂಸಾರದಿಚರಿಸುತಲೂ ಇರಬೇಕುಗುರುಹಿರಿಯರ ಕಂಡು ನಡೆಯಲು ಬೇಕುಪರರ ನಿಂದಿಸಿ ನುಡಿಯದೆ ಇರಬೇಕುಬರೆ ಸುಖ ದುಃಖವು ಸಮಗಾಣಬೇಕುಇರುಳು ಹಗಲು ಶಿವ ಶಿವ ಎನ್ನಬೇಕು2 ತನ್ನ ತಾನೆ ತಿಳಿಯಬೇಕು ತೋರುವ ಲೋಕವನ್ನು ದೃಶ್ಯವೆಂದಿರಬೇಕುತನ್ನಂತೆ ಸಕಲರ ನೋಡಲು ಬೇಕುಮಾನ್ಯರ ಕಂಡರೆ ಮನ್ನಿಸಬೇಕುಅನ್ಯನಾದರು ಹಿತವನೆ ಮಾಡಬೇಕುಪ್ರಸನ್ನ ರಾಮೇಶನನೆನಹಿರಬೇಕು 3 ವಣಗಿದ ಕಂಭದೊಳೊಗೆದುಬಣಗು ದಾನವನ ಗೆಲಿದುಕುಣಿಕುಣಿದಾಡಿದೆಯಂತೆ ಯಾಕಯ್ಯ ಶ್ರೀಕೃಷ್ಣಸೆಣಸಿದ ರಾಕ್ಷಸನ ಗೆಲಿದುವಿನಯದೆ ಪ್ರಹ್ಲಾದಗೊಲಿದುಅಣಿಯರ ಲೋಕವ ಕಾಯ್ದೆ ಎಲೆಸತ್ಯಭಾಮೆ 4 ಬಲು ಚಂದವಾಯಿತಯ್ಯ ಲೋಕಾ-ವಳಿಯೊಳು ದೊಡ್ಡವನಯ್ಯಬಲಿಯ ಕೂಡೆ ದಾನವ ಬೇಡುವರೆ ಕೃಷ್ಣಬಲಿಯ ದಾನವನ್ನೇ ಬೇಡಿಇಳೆಯ ಮೂರಡಿಯ ಮಾಡಿಸಲಹಿದೆ ಸರ್ವಸುರರ ಎಲೆ ಸತ್ಯಭಾಮೆ 5 ಧರಣೀಪಾಲಕರ ಗೆಲಿದಗರ್ವವಿರಲಿ ಹೆತ್ತತಾಯಶಿರವನರಿದ ದುರುಳರುಂಟೆ ಹೇಳಯ್ಯ ಕೃಷ್ಣಗುರುವಚನವನ್ನು ಮೀರೆನರಕಲೋಕವೆಂದು ಕಾಯಶಿರವನರಿದು ಮರಳಿ ಪಡೆದ ಎಲೆ ಸತ್ಯಭಾಮೆ6 ಮೂರು ಲೋಕವರಿಯೆ ಸೀತಾನಾರಿಯ ಕಳೆದುಕೊಂಡುಊರೂರ ತಿರುಗಿದೆಯಂತೆ ಯಾಕಯ್ಯಾ ಕೃಷ್ಣನೀರೊಳು ಸೇತುವ ನಿಲಿಸಿವೀರ ರಾವಣನ ಜಯಿಸಿವಾರಿಜಾಕ್ಷಿಯ ತಂದೆನೆ ಎಲೆ ಸತ್ಯಭಾಮೆ 7 ದುರುಳ ಪರಮಹಂಸರಂತೆಕರದಿ ನೇಗಿಲ ಹಿಡಿದೆಶರಖಡ್ಗಗಳಿಲ್ಲವೇನೋ ಶ್ರೀಕೃಷ್ಣರಾಯಸುರರಿಪು ಪ್ರಲಂಬಾದಿಗಳಶಿರವನರಿದು ಜೈಸಿದಂಥಾಗುರುತಿನ ಆಯುಧ ಕಾಣೆ ಎಲೆ ಸತ್ಯಭಾಮೆ8 ಮಂದಿಯ ಮುಂದೆ ಬತ್ತಲೆನಿಂದು ಓಡಾಡಿದೆಯಂತೆಚಂದವಾಯ್ತು ನಿನ್ನ ನಡತೆ ಹೇಳೆಲೋ ಕೃಷ್ಣಹಿಂದೆ ತ್ರಿಪುರದ ನಾರೀವೃಂದವ ಮೋಹಿಸಿ ಸರ್ವವೃಂದಾರಕರ ಪೊರದೆ ಎಲೆ ಸತ್ಯಭಾಮೆ 9 ದೊರೆತನವು ನಿನ್ನದೆಂದುಧರಣೀದೇವತೆಯು ಬಂದುಮೊರೆಯಿಟ್ಟಳದೇಕೋ ಪೇಳೋ ಶ್ರೀಕೃಷ್ಣರಾಯತುರಗವನೇರಿ ಖಡ್ಗವಧರಿಸಿ ಯವನ ಸೈನ್ಯವನ್ನುಮುರಿದು ಧರೆಯ ಪೊರೆದೆ ಕಾಣೆ ಎಲೆ ಸತ್ಯಭಾಮೆ 10 ಇಂತು ಕೇಳ್ದ ಸತ್ಯಭಾಮಾಕಾಂತೆಯ ಮಾತಿಗೆ ಮೆಚ್ಚಿಕಾಂತೆಯರೊಳು ಕಟ್ಟಾಣಿ ಬಾರೆಂದು ಕರೆದುಕಂತುಜನಕ ಕೆಳದಿಪುರದಕಾಂತ ಗೋಪಾಲಕೃಷ್ಣನುಸಂತಸವ ಮಾಡಿದನಿನ್ನೆಂತು ಪೇಳ್ವೆನೆ11
--------------
ಕೆಳದಿ ವೆಂಕಣ್ಣ ಕವಿ
ಮನಸಿಗೆ ಬಂದ ಧನ್ವಂತ್ರಿ ವೈದ್ಯನೇ ಮನಸಿನ ರೋಗವ ಪರಿಹರಿಸೊ ಪ ಧನ ಲೇಶ ಕೇಳಾ ಬಡವರ ಪೊರೆಯೊ ನೀ ಮನೆಗೆ ಬಂದರೆ ತನು ರೋಗಗಳೋಡೋವು ನೆನಹ ಮಾರ್ಗಕೆ ಬೇಗ ತಡಿಯದೆ ಈ ಮನ ಕುನರ ಸೂಲಿವುಳ್ಳ ವಾತವ ಹರಿಸೊ 1 ನಾಮವ ನುಡಿವಲ್ಲಿ ಅರುಚಿ ಇದಕಿದೆ ಭಾಮೆಯ ಕಂಡರೆ ತಲ್ಲಣವಾಹದೊ ಶ್ರೀ ಮನೋಹರನ ಸ್ಮರಣೆ ಹಾರುತಿದೆ ಈ ಮಹಾದೋಷವುಳ್ಳ ಪಿತ್ತವ ಬಿಡಿಸೊ 2 ಪಿರಿಯರು ನೋಡಲು ಗುರುಗುರುಯೆನುತಿದೆ ಪರಿಪರಿ ವಿಷಯದ ನಂಜಿಲಿಂದ ಪರಿಹರಿಸೊ ಶ್ಲೇಷ್ಮ ಮೊರೆಹೊಕ್ಕೆನು ನಾನು ಪರಿಹರಿಸೊ ವಾಸುದೇವವಿಠಲರೇಯ 3
--------------
ವ್ಯಾಸತತ್ವಜ್ಞದಾಸರು
ಮನ್ನೀಸಯ್ಯಾ - ಮನಸಿಜನಯ್ಯಾ |ಮೌನಿಜನರ ಪ್ರಿಯ ಪಂಡರೀರಾಯಾ ಪ ಪರಿ | ಅನಘ ನೀ ಕರುಣಿಸಿ ಅ.ಪ. ಪರಿ ಏನಿದು ಹರಿಮೊರೆ ಕೇಳೆನನ್ನದು | ಪೊರೆವುದು ಜೀಯಾ 1 ಪರಿ ಗೋಪಿ ಜನರ ಪ್ರಿಯದ್ರೌಪತಿ ಗೋಪ್ತಾ | ಬಲು ಆಪ್ತಾ |ಕೈಪಿಡಿಯುವುದೀ | ಪಾಪಿಯಾದೆನ್ನನುಶ್ರೀಪತಿ ಶ್ರೀಹರೇ | ಮುರಾರೇ ||ಲೇಪಿಸು ಕೀರ್ತಿಕ | ಲಾಪಗಳ್ನಿನ್ನ ಸು-ರಾಪಗಪಿತ ಶ್ರೀ ಪಾವನ ಮೂರ್ತೇ 2 ಭವ ಶರ ನಿಧಿಯಲಿ | ಭವಣೆಯ ಪಡಲಾರೆಭವ ಜನಕನ ಪಿತಾ | ಹೇ ದಾತಾ |ಹವಣೆಯು ದಾವುದು | ಭವವನುತ್ತರಿಸಲುತವಪದ ಸ್ಮರಿಸುತಾ | ಸ್ಮರಿಸುತ್ತಾ ||ಸವನ ಮೂರರೊಳು | ಅವಶದಿ ಕೀರ್ತಿಸಿಬೆವರೆಂಬ ವಿರಜೆಯ | ಅವಗಾಹಿಸುವನುಭವವ ಕೊಡಿಸು ಹರಿ | ಅವನಿಜೆ ವಲ್ಲಭಪವನ ವಂದಿತ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಮರುಳು ಮನವೇ ವ್ಯರ್ಥ ಚಿಂತಿಸುವಿಯಾಕೋ ಹರಿ ತಾನೇ ಕಾಯ್ವ ಮನ ದೃಢವಿರಲಿ ಬೇಕೊ ಪ ಎಲ್ಲಿ ನೋಡಿದರಲ್ಲಿ ಇರುವಾತಾ ಎಲ್ಲರನು ಪೊರೆವಾತಾ ಬಲ್ಲಿದನು ಬಲಿಯ ತುಳದಾತಾ ಸೊಲ್ಲು ಸೊಲ್ಲಿಗೆ ಬಂದು ಎಲ್ಲಿವನು ಪೇಳಿದರೆ ಕಲ್ಲಾಗುವನೇ ಸ್ವಾಮಿ ಪ್ರಲ್ಹಾದ ತಾತಾ 1 ಹಬ್ಬಿರುವ ಮಾಂಸಗಾಗರ್ಭದೊಳಿರುವಾಗ ಉಬ್ಬಸವ ಬಡುವಾಗ ಸಲಹಿದವರ್ಯಾರೋ ಅಬ್ಬರದ ನೋವಿನೊಳು ಒಬ್ಬನೇ ಬರುವಾಗ ಹೆಬ್ಬಾಗಿಲವ ನಿನಗೆ ತೋರಿದವರ್ಯಾರೋ 2 ವರದ ಹನುಮೇಶವಿಠಲನ ಚರಣವ ನಂಬು ಮೊರೆಯಾಗ್ವನಲ್ಲಾ ಹರಿ ಕರುಣ ಸಾಗರನೋ ಕರಿರಾಜ ಕರಿಯಲಾಕ್ಷಣಕೆ ಅವಸರದಲಿ ಗರುಡವಾಹನ ಕೃಷ್ಣ ಬರಲಿಲ್ಲವೇನೋ 3
--------------
ಹನುಮೇಶವಿಠಲ
ಮರೆಯದಿರು ಭವಶರಧಿ ಕೊನೆದೋರದು ಹರಿಯ ಮರೆತರೆ ಮನವೆ ಗತಿಯೇನು ಇಹುದು ಪ ಪಿಂತೆ ಧೃತರಾಷ್ಟ್ರ ನಿಶ್ಚಿಂತೆಯಲಿ ಸುತರಿಂದ ಎಂಥ ಸಿರಿವಂತನೆಂದೆನಿಸಿ ಮೆರೆದಾ ಕಂತುಪಿತನನು ಸುತರು ಪಂಥದಲಿ ನೆನೆಯದಿರೆ ಎಂಥವನ ಪಾಡಾದುದರಿಯೆ ನೀ ಮರುಳೇ 1 ತಾನೆ ಪರಬ್ರಹ್ಮನೆಂದರಿದಾ ಹಿರಣ್ಯಕಶು- ಪಾನೆಯೆಂದರಿದು ಮೆರೆಯೆ ಹರಿವೈರದಿ ಸೂನು ಪ್ರಲ್ಹಾದನಾನತನಾಗಿ ಮೊರೆವೋಗಲು ಹೀನ ರಕ್ಕಸನ ಪರಿಸರಿ ಏನಾಯಿತು 2 ಸತಿಸುತರ ಮುದದಿಂದ ಹಿತವಂತ ಬಳಿಗದಿಂ- ದತಿ ತೃಪ್ತವಾಗಿ ನಾನಿರುತಿರಲು ನಿನ್ನ ಧೃತಿಗುಂದಿ ಪವಡಿಸಿರೆ ಗೆಜ್ಜೆಪಾದವ ಕಂಡು ನುತಿಸುವೆನನವರತ ನರಸಿಂಹವಿಠಲರಾಯಾ 3
--------------
ನರಸಿಂಹವಿಠಲರು
ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮಹಾಲಕ್ಷ್ಮಿ ಏನಂತಿ ಕಮಲನಾಭನ ಪ್ರಿಯಳೆ ಜಗ- ದಾನಂತ ಪದುಮನಾಭನ ಭಾರ್ಯಳೆ ಪ ಸಿರಿ ಎನ್ನ ಮೊರೆ ಕೇಳೆ ಸಿದ್ಧವಾಗೆನಗ್ಹೇಳೆ ಶುದ್ಧ ಮಾರ್ಗವ ತೋರೆ ಬುದ್ಧಿಪೂರ್ವಕವಾಗಿ ಭುವನದೊಡೆಯನ ಪಾದ- ಪದ್ಮದಲ್ಲಾಸಕ್ತೆ ಬುದ್ಧಿ ಕೇಳುವೆ ಶಾಂತಿ1 ಜನಕಾತ್ಮಜಳೆ ನೀ ಜಗದೇಕ ಸುಂದರಿ ಜಗದಾಧಿಪತಿ ವಕ್ಷಸ್ಥಳ ಆಶ್ರಯಳೆ ಕೃತಿ ಸರ್ವಮಂಗಳಕಾರಿ ಪರಮ ಕರುಣದಿ ನೋಡೆ ವರಲಕ್ಷ್ಮಿ ದಯಮಾಡೆ ವರಗಳನೀಡ್ಯಾಡೆ 2 ಭೀಷ್ಮಕನ ಪುತ್ರಿ ಬಿರುದೇನೆ ಸರಸಿಜನೇತ್ರೆ ಮೃಡ ಬ್ರಹ್ಮರೊಡೆಯ ಭೀಮೇಶಕೃಷ್ಣನ ಮಿತ್ರೆ ಪೊಡವಿಗಧಿಕಳೆ ಜಯ ಮೂಡಲಗಿರಿವಾಸಿ ಬಿಡದೆ ಕೈ ಹಿಡಿದೆನ್ನ ಕಡೆಹಾಯ್ಸೆ ಕಮಲಾಕ್ಷಿ 3
--------------
ಹರಪನಹಳ್ಳಿಭೀಮವ್ವ
ಮಾಧವ ಪ ದುರುಳ ತಿರುಕನು ನಾನು 1 ವಾರಿಧಿಶಯನನಾದ ಕಾರುಣ್ಯನಿಧಿ ನೀನುಘೋರದಿಂದಿಹ ಕಾಮಿಕ್ರೋಧಿ ನಾನುಈರೇಳು ಭುವನದೊಳು ಇರುವ ಮೂರುತಿ ನೀನುದೂರಿ ನಿನ್ನನು ಬೈವ ದುಷ್ಟ ನಾನು2 ಅಣುರೇಣು ತೃಣಗಳಲಿ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕುಕರ್ಮಿ ನಾನುವಾಣಿಯರಸನ ಪೆತ್ತ ವೈಕುಂಠಪತಿ ನೀನುಕ್ಷಣಭಂಗುರ ತನುವಿನ ಗೊಂಬೆ ನಾನು 3 ಕಂಬದಲಿ ಬಂದ ಆನಂದ ಮೂರುತಿ ನೀನುನಂಬಿಕೆಯಿಲ್ಲದ ಪ್ರಪಂಚಕನು ನಾನುಅಂಬರೀಷಗೆ ಒಲಿದ ಅಕ್ರೂರಸಖ ನೀನುಡಂಬ ಕರ್ಮಿಯು ನಾನು ನಿರ್ಜಿತನು ನೀನು4 ತಿರುಪತಿಯ ವಾಸ ಶ್ರೀವೆಂಕಟೇಶನೆ ನಿನ್ನಚರಣಸೇವಕರ ಸೇವಕನು ನಾನುಬಿರುದುಳ್ಳವನು ನೀನು ಮೊರೆಹೊಕ್ಕವನು ನಾನುಸಿರಿ ಕಾಗಿನೆಲೆಯಾದಿಕೇಶವನು ನೀನು 5
--------------
ಕನಕದಾಸ
ಮಾಧವ ಮೊರೆ ಹೊಕ್ಕೆನೋದೇವ ಪÀ ಕರಿರಾಜವರದನೇ ಶರಣಾರ್ತಿಹರಣನೇ ಅ.ಪ ಆರೊಂದುವ್ಯಸನದಿ ಈರೊಂದು ತಾಪದಿ ಗಾರಾದೆ ಮೋಹದಿ ಕಾರುಣ್ಯವಾರಿಧಿ 1 ಅನುಮಾನವೇತಕೈ ಮನಸೇಕೆ ಬಾರದು2 ಸುರವಂದ್ಯ ಚರಣನೆ ಸರಿಯಾರೊ ನಿನಗೆಣೆ ಪರಿಪಾಲಿಸೆನ್ನನೆ 3
--------------
ಗುರುರಾಮವಿಠಲ
ಮಾಧವ ಸ್ವಾಮಿ ವಿಠಲ | ಪೊರೆಯ ಬೇಕಿವಳಾ ಪ ಹೇ ದಯಾಂಬುದಿ ಹರಿಯೆ | ಆದಿ ಮೂರುತಿಯೆ ಅ.ಪ. ಸಾದು ಸಂತರ ಸೇವೆ | ನೀ ದಯದಿಕೊಟ್ಟಿವಳಮೋದಮುನಿನುತದೀಕ್ಷೆ | ಹಾದಿಯಲ್ಲಿರಿಸೋಬೋಧವಾಗಲಿ ತತ್ವ | ತರತಮವು ಪಂಚಕೆಯುಸಾಧುವಂದಿತ ಹರಿಯೆ | ಬಾದರಾಯಣನೇ 1 ದಾಸತ್ವ ದೀಕ್ಷೆ ಆ | ಯಾಸ ವಿಲ್ಲದೆ ಸಾಗಿಕೇಶವನ ಒಲಿಮೆಗೇ | ಅವಕಾಶವಾಗೀಹೇಸಿ ಸಂಸಾರದಿ ನಿ | ರಾಶಿಯಾಗಲಿ ಎಂದುಆಶಿಸುವೆ ಶ್ರೀ ಹರಿಯೆ | ವಾಸವಾನುಜನೇ 2 ಇಂದ್ರಿಯವ್ಯಾಪಾರ | ಉಪೇಂದ್ರನದು ಎಂಬುವಚೆಂದುಳ್ಳ ಸ್ಮøತಿಯಿತ್ತು | ತಂದೆ ಕೈಪಿಡಿಯೋವಂದ್ಯಳೆಂದೆನಿಸು ಸ್ತ್ರೀ | ವೃಂದದೊಳಗೆ ಹರಿಯೆಮಂದಾಕಿನೀ ಜನಕ | ಇಂದಿರಾನಂದ 3 ಭವನಾವೆ ಎಂದೆನಿಸೊದೇವದೇವೇಶಗುರು | ಗೋವಿಂದ ವಿಠಲಾ 4 ದುರಿತ ದುಷ್ಕøತಹಾರಿ | ಸರ್ವಜ್ಞ ಮೂರುತಿಯೆಹರಿನಾಮ ಕವಚವನು | ತರಳಗೇ ತೊಡಿಸೀಪರಿಹರಿಸೊ ಭವಭಂದ | ಮರುತಾಂತರಾತ್ಮಕನೆಕರುಣಾಳು ಕರಿವರದ | ಮೊರೆ ಕೇಳೊ ಹರಿಯೇ 5
--------------
ಗುರುಗೋವಿಂದವಿಠಲರು
ಮಾಧವನ ನೋಡಿ ಸಂಪಾದಿಸಿದೆ ಭಕುತಿಯನು | ಆದರಪೂರ್ವಕದಿಂದಲಿ ಮಾಧುರ್ಯವಾದ ಮನ | ಮತವಿಡಿದು ಪ ಕರಿ ಮೊರೆ ಇಡಲು ಕೇಳುತ ನಕ್ರನ | ಕಡಿದು ಕರುಣದಿಂದಲಿ ತಡಿಯದಲೆ ಜಡುಮತಿಯ | ಕಡು ಮೆಚ್ಚಿ ಬಂದವನ 1 ಮರಣಕಾಲದಿ ಭಯಂಕರವಾದ ಯಮನ ದೂ | ತರನ ನೋಡಿ ಕರಿಯಲು | ಶರಧಿ ಮಧ್ಯದಲ್ಲಿ | ಮೆರೆವ ಮಧುಸೂದನನ 2 ಜ್ಞಾನ ಪಾಪಿಯ ಸ್ನಾನ ಆನಂದದಲಿ ಮಾಡಿ | ಹೀನ ದೋಷಗಳ ಕಳೆದು | ಜ್ಞಾನವಧಿಕವಾದ ಗುರುಗಳ ಕೃಪೆಯಿಂದ | ಶ್ರೀ ವಿಜಯವಿಠ್ಠಲ ಸೇತುವಾಸನಾ 3
--------------
ವಿಜಯದಾಸ