ಒಟ್ಟು 460 ಕಡೆಗಳಲ್ಲಿ , 81 ದಾಸರು , 420 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ಶಚಿ ವಲ್ಲಭತೇ |ರಮೆಯ ರಮಣನಲಿ ನೀಡು ಮತೆ ಪಹತ್ತು ಕಲ್ಪಗಳಲ್ಲಿ | ಉತ್ತಮ ಶ್ಲೋಕನ ||ತತ್ವ ವಿಚಾರ ಮಾಡ್ದೆ | ಚಿತ್ತಶುದ್ಧದಿ1ಮೂರೊಂದರ್ಧಾ ಕಲ್ಪ |ಚಾರುತಪಸ್ಸು ಮಾಡಿ ||ನಾರಾಯಣನ ಕಂಡ |ಸೂರಿಗಮ್ಯಾ 2ಪ್ರಾಣೇಶ ವಿಠ್ಠಲನ | ನೀನೊಲಿಸೀದೆ ಪೊಗೆ ||ಯಾನುಂಡು ಕೋಟಿವತ್ಸರನಾಕದಿ 3
--------------
ಪ್ರಾಣೇಶದಾಸರು
ನವರತ್ನ ಖಚಿತ ಮಾಣಿಕ್ಯದ ಮಂಟಪದಿನವವಿಧದ ಹಂಸತೂಲಿಕ ತಲ್ಪದಲಿಭುವನಮೋಹನ ಶ್ರೀಹರಿಪವಡಿಸಿರಲುಕವಿಗಳು ಪೊಗಳಿ ಪಾಡುವರು ಶ್ರೀಹರಿಯೆಏಳಯ್ಯ ಬೆಳಗಾಯಿತು 1ನಾಗಶಯನನೆ ಏಳು ನಾಗಾರಿವಾಹನನೆನಾಗಸಂಪಿಗೆ ಪಾರಿಜಾತವರಳುತಿದೆಬೇಗದಲಿ ಭಾಗೀರಥಿ ಉದಕವನೆ ತಂದುನಾಗಕನ್ನಿಕೆಯರು ಕಾದು ನಿಂತಿಹರುಏಳಯ್ಯ ಬೆಳಗಾಯಿತು 2ಅತ್ರಿ ವಸಿಷ್ಠ ಭಾರದ್ವಾಜ ಗೌತಮರುಸುತ್ತೆಲ್ಲ ಋಷಿಗಳು ಸ್ತೋತ್ರವನೆ ಮಾಡುತ್ತಮಿತ್ರೆರುಕ್ಮಿಣಿ ಭಾಮೆರಿಂದ ಸೇವಿಪ ಹರಿಗೆಮುತ್ತಿನಾರತಿ ಪಿಡಿದು ನಿಂದಿಹರು ಹರಿಯೆಏಳಯ್ಯ ಬೆಳಗಾಯಿತು 3ಲಕ್ಷ್ಮಿರಮಣನೆ ಏಳು ಪಕ್ಷಿವಾಹನ ಏಳುಕುಕ್ಷಿಯೊಳು ಜಗವನಿಂಬಿಟ್ಟವನೆ ಏಳುರಕ್ಷ ಶಿಕ್ಷಕ ಜಗದ್ರಕ್ಷಕನೆ ನೀ ಏಳುಈಕ್ಷಿಸಿ ಭಜಕರನುದ್ದರಿಸಲೇಳುಏಳಯ್ಯ ಬೆಳಗಾಯಿತು 4ಕಮಲಮಲ್ಲಿಗೆ ಜಾಜಿಕುಸುಮಮಾಲೆಗಳನ್ನುಕಮಲಾಕ್ಷಿಗರ್ಪಿಸುತ ಹರುಷದಿಂದಕಮಲನಾಭ ವಿಠ್ಠಲ ಸಲಹು ಸಲಹೆಂದೆನುತಕಮಲಭವೇಂದ್ರಾದಿಗಳು ಸ್ತುತಿಸುವರು ಹರಿಯೆಏಳಯ್ಯ ಬೆಳಗಾಯಿತು 5ಏಳು ಧೃವವರರೂಪ ಏಳು ನರಹರಿರೂಪಏಳುನಗಧರರೂಪಏಳಯ್ಯ ಹರಿಯೆಏಳಯ್ಯ ಬೆಳಗಾಯಿತು
--------------
ನಿಡಗುರುಕಿ ಜೀವೂಬಾಯಿ
ನಾರಾಯಣ ನರಸಿಂಹ ಲ-ಕ್ಷ್ಮೀರಮಣನೆ ಪರಬ್ರಹ್ಮ ಪ.ಸಾರಭೋಕ್ತನೆ ಸ್ವತಂತ್ರನೆ ದೋಷವಿ-ದೂರ ಪರಿಪೂರ್ಣಕಾಮ ಅ.ಪ.ಸತ್ವಾದಿಗುಣಾತೀತ ವಿತತ ಸ-ರ್ವೋತ್ತಮ ನಿರುಪಮ ಮಹಿಮಪ್ರತ್ಯಗಾತ್ಮ ನಿಗಮಾಗಮವೇದ್ಯ ಸು-ಹೃತ್ತಮ ಮಂಗಲಧಾಮ 1ವಿಧಿಭವೇಂದ್ರಾದಿ ವಿಬುಧಾಶ್ರಿತಪದ-ಪದುಮ ನೀಲಾಂಬುದಶ್ಯಾಮಹೃದಯಾಬ್ಜಮಧ್ಯಸದನ ಸಾಮಜವ-ರದ ಯದುವಂಶಲಲಾಮ 2ಮಾಯಾತೀತ ಮಹೋನ್ನತ ಸುರಜನ-ಪ್ರಿಯ ದ್ಯೆತ್ಯೇಯನಿರ್ನಾಮವಾಯುವಾಹನ ಜನಾರ್ದನ ಲಕ್ಷ್ಮೀನಾ-ರಾಯಣ ತೇ ನಮೋ ನಮಃ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಾರಾಯಣನೆಂಬ ನಾಮವ ನೇಮದಿ ನೆನೆಯುತಿರೆಚ್ಚರಿಕೆ |ನೀರ ಮೇಲಿನ ಗುಳ್ಳೆ ನಡೆಯೆಂಬ ಡಿಂಭವ ನಂಬದಿರೆಚ್ಚರಿಕೆ ಪ.ಪರರು ಮಾಡಿದ ಪಾತಕವ ನಾಲಿಗೆಯೊಳುಚ್ಚರಿಸದಿರೆಚ್ಚರಿಕೆಗುರು ಹಿರಿಯರ ಸೇವೆ ಮಾಡದೆ ಉದರವ ಪೊರೆಯದಿರೆಚ್ಚರಿಕೆ ||ಹರಿದಿನದುಪವಾಸ ಇರುಳ ಜಾಗರವ ನೀ ಮರೆಯದಿರೆಚ್ಚರಿಕೆನರಹರಿಯಂಘ್ರಿಯ ಸ್ಮರಿಸದೆ ನರಸ್ತುತಿ ತರವಲ್ಲ ಎಚ್ಚರಿಕೆ 1ಹೀನ ಮಾನನಿಯರ ಧ್ಯಾನಕಾನನದೊಳಿಳಿಯದಿರೆಚ್ಚರಿಕೆನಾನೆಂಬ ಅಹಂಕಾರ ಮಾಡಿ ನರಕದೊಳು ನರಳದಿರೆಚ್ಚರಿಕೆ ||ಜಾಹ್ನವಿ ಸ್ನಾನಸಂಧ್ಯಾನ ಧಾನ್ಯವ ಸುಜಾÕನ ಮುಂದೆ ಜ್ಞಾಚ್ಚರಿಕೆಜಾನಕಿರಮಣನ ಧ್ಯಾನವೆ ಧರ್ಮ ಸಂತಾನ ಮುಂದೆಚ್ಚರಿಕೆ 2ಮಡದಿ ಮಕ್ಕಳೆಂಬ ಕಡುಮೋಹಕೆ ಸಿಲುಕಿ ಕೆಡಬೇಡವೆಚ್ಚರಿಕೆನಡೆವಾಗ ನುಡಿವಾಗ ಗಿಡವೆಲ್ಲ ನೆಂಟರು ಕಡೆಗಿಲ್ಲ ಎಚ್ಚರಿಕೆ ||ಕೊಡುಗೈಯ ಮಾಡದೆ ಮಡುಗಿದ ಧನ ಸಂಗಡ ಬಾರದೆಚ್ಚರಿಕೆ |ಒಡೆಯ ಶ್ರೀ ಪುರಂದರವಿಠಲನ ನೆನೆದು ನೀ ಕಡೆ
--------------
ಪುರಂದರದಾಸರು
ನಾಳೆ ಬರುವೆನೆಂದು ಹೇಳಿ ಮಧುರೆಗೆ ಪೋದ ಬ-ಹಳದಿನವಾಯಿತಲ್ಲೊ ಉದ್ಧವ ಪ.ಕೇಳಿದ್ಯಾ ನೀಬಾಹವೇಳೆಯಲಿ ಕೃಷ್ಣನಆಲೋಚನೆಯೊಳಿದ್ದೆವೊ ಅ.ಪ.ಪಳ್ಳಿವಾಸಿಗಳು ನಾವು ಪರಿಪರಿ ಅಲಂಕರಿಸಿ ಒಲಿಸಿಕೊಂಬುದನರಿಯೆವೊಗೊಲ್ಲ ಸತಿಯರು ಸದಾ ಗೋರಕ್ಷಕರು ಮೈಯ ಹೊಲೆತೊಳೆಯಲರಿಯೆವೊಬಲ್ಲಿದನ ಸಹವಾಸ ಮಾಡ್ಯವನ ಮಹಿಮೆಯನೆಲ್ಲ ತಿಳುಹಿಸಿಕೊಂಡೆವೊಚಲ್ಲೆಗಂಗಳ ಚಪಲೆಯರು ಮಧುರೆ ನಾರಿಯರ ಒಲಪಿಗೆ ನಾವೆದುರೇನೊ ? 1ಚೊಕ್ಕನಾದನಿತ್ಯತೃಪ್ತನಿಗೆ ಬೆಣ್ಣೆ ಕಳವಿಕ್ಕಿದೆವಲ್ಲವೊಸಿಕ್ಕಿಸಿಕೊಂಡು ರಾಸಕ್ರೀಡೆಯೊಳವಗೆ ಸೊಕ್ಕಿನುಕ್ತಿಯ ನುಡಿದೆವೊಕಕ್ಕುಲಾತಿಲಿ ಕಾಮಾಸಕ್ತರಿಗಿವ ನಮಗೆ ದಕ್ಕಿದನು ಎಂತಿದ್ದೆವೊವಕ್ರಗತಿಯಾಗಿ ಅಕ್ರೂರ ಬಂದ್ಯೆಮ್ಮ ಚಕ್ರಧರನಗಲಿಸಿದನೊ 2ಧೀರಸ್ವರಮಣದೋಷದೂರನ್ನ ಅಲ್ಪ ಬಹುಜಾರನೆಂದರಿತೆವಲ್ಲೊಆರಾರ ಮನಕಿನ್ನು ತೋರದವನ ನಮ್ಮ ಓರಗೆಯವನೆಂದರಿದೆವೊಮುರಾರಿಅಜಪರಿವಾರದೊಡೆಯನ ನಾವು ಪೋರನೆಂದಾಡಿಸಿದೆವೊನಾರಿಯರು ನಾವಲ್ಪ ದಾರಿದ್ರ್ಯ ದಷ್ಟರಿಗೆ ಶ್ರೀರಮಣನೆಂತೊದಗುವನೊ 3ನಿಧಿಯ ಬದಿಲಿದ್ದರು ವಿಧಿಸುವುದನರಿಯದೆ ಮದಡೆಯರಾದೆವೊಮದನನಾಟಕೆ ಮನವಿಕ್ಕಿ ಅವನಿಂದೊಂದು ತತ್ವ ತಿಳಿಯಲಿಲ್ಲೊಚದುರೆಯರು ನಮ್ಮ ಬಿಟ್ಟು ಕದಲನಿವನೆಂತೆಂಬ ಮದದಿ ಮೋಸಹೋದೆವೊಮಧುರೆಯಿಂದೆಮ್ಮ ತಮ್ಮ ಹೃದಯದೊಳಿಪ್ಪನೆಂದುಚದುರ ಪೇಳಿಹನಂತೆಲೊ 4ಮತಿ ತಪ್ಪಿದೆವೊ ನಾವು ಸತಿಯರೆಲ್ಲೊಂದಾಗಿ ರಥವ ನಿಲಿಸದೆ ಹೋದೆವೊಹಿತರಾರು ನಮಗೆಸಾರಥಿನಿನ್ನ ಸಹಾಯ ದೊರೆತರೆತನವ ಮಾಳ್ಪೆವೊಪಥವ ತೋರಿಸೊ ನಮಗೆ ಮುಂದೆಮ್ಮ ಚೆಲ್ವ ಶ್ರೀಪತಿಯು ಬಂದೊದಗುವಂತೆಗತಿಯಾರೊ ಅವನ್ಹೊರತು ಗೋಪಾಲವಿಠಲ ಅಚ್ಯುತನ ಮಹಿಮೆ ಕಾಣೆವೊ 5
--------------
ಗೋಪಾಲದಾಸರು
ನಿತ್ಯವಲ್ಲ ನಿತ್ಯವಲ್ಲ ಅನಿತ್ಯ ದೇಹವಿದಣ್ಣ ಪ.ಮತ್ತೆ ಮುರಾರಿ ಶ್ರೀ ಕೃಷ್ಣನ ನೆನೆದರೆ |ಮುಕ್ತಿಸಾಧನವಣ್ಣ ದೇಹ ಅಪಮಾನಿನಿಯರ ಕುಚಕೆ ಮರುಳಾಗದಿರು ಮಾಂಸದ ಗಂಟುಗಳಲ್ಲಿ |ನಾನಾ ಪರಿಯಲಿ ಮೋಹಮಾಡದಿರುಹೀನಮೂತ್ರದ ಕುಳಿಯಲ್ಲಿಜಾನಕಿರಮಣನ ನಾಮವ ನೆನೆದರೆಜಾಣನಾಗುವೆಯಲ್ಲೋ - ಪ್ರಾಣಿ 1ತಂದೆ-ತಾಯಿ ಅಣ್ಣ-ತಮ್ಮಂದಿರು ಮಕ್ಕಳು ಹರಿದು ತಿಂಬರೆಲ್ಲ |ಹೊಂದಿ ಹೊರೆಯುವಾ ನಂಟರಿಷ್ಟರುನಿಂದೆ ಮಾಡುವರೆಲ್ಲ ||ಮುಂದೆ ಯಮನ ದೂತರು ಎಳೆದೊಯ್ಯಲುಹಿಂದೆ ಬರುವರಿಲ್ಲೋ - ಪ್ರಾಣಿ 2ಕತ್ತಲೆ ಬೆಳುದಿಂಗಳು ಸಂಸಾರವು ಕಟ್ಟು ಧರ್ಮದ ಮೊಟ್ಟಿ |ಹೊತ್ತನರಿತು ಹರಿದಾಸರ ಸೇರೆಲೊ ಪೇಳ್ವರು ತತ್ತ್ವವ ಗಟ್ಟಿ |ಚಿತ್ತಜನಯ್ಯ ಪುರಂದರವಿಠಲನಹೊಂದೋ ನೀ ಸುಖಬುಟ್ಟಿ - ಪ್ರಾಣಿ 3
--------------
ಪುರಂದರದಾಸರು
ನೀನೆಗತಿನೀನೆ ಮತಿ ನೀನೆ ಸ್ವಾಮಿನೀನಲ್ಲದನ್ಯತ್ರ ದೈವಗಳ ನಾನರಿಯೆ ಪನಿನ್ನ ಪಾದಾರವಿಂದದ ಸೇವೆಯನು ಮಾಡಿನಿನ್ನ ಧ್ಯಾನದಲಿರುವ ಹಾಗೆಮಾಡು||ನಿನ್ನ ದಾಸರ ಸಂಗದಿಂದ ದೂರಿಡದೆನಗೆಸನ್ಮಾರ್ಗವಿಡಿಸೊ ಜಗದೀಶ ಅಘನಾಶ 1ಕಮಲನಾಭಿಯೊಳು ಬೊಮ್ಮರ ಪುಟ್ಟಿಸಿದೆ ಹರಿಯೆಕಮಲಸಖಕೋಟಿ ಪ್ರಕಾಶ ಈಶಕಮಲಕರ ತಳದಿ ಅಭಯವನಿತ್ತು ಭಕುತರಿಗೆಕಮಲಾಕ್ಷನೆನಿಸಿದೆಯೊ ಕಮಲಾರಮಣನೆ 2ಶಿಶುಪಾಲ ದಂತವಕ್ತ್ರರ ಶಿರವ ಭೇದಿಸಿದೆಪಶುಪತಿಯ ಆಭರಣ ವೈರಿವಾಹನನೆ ||ಅಸುರಕುಲ ಸಂಹರಿಸಿ ಭಕ್ತಜನರನು ಪೊರೆದೆವಸುಧೇಶಸಿರಿಪುರಂದರವಿಠಲರಾಯಾ3
--------------
ಪುರಂದರದಾಸರು
ಪಾದಪ್ರೇಮ ಪಾಲಿಸು ಪಾದಪ್ರೇಮ ಪಪಾಪವಿರಾಮ ಪಾವನನಾಮ ಅ.ಪಸ್ಮರಿಪರ ಪ್ರೇಮ ವರಬಲಭೀಮವರನೀಲಶ್ಯಾಮ ರಘುಕುಲಸೋಮಶರಣರಸುರತರುಜಗದೋದ್ಧಾಮ1ಗೋವುಗಳ ಪಾಲ ಗೋಕುಲಬಾಲಪಾವನಮಾಲ ಗಾನವಿಲೋಲಸಾವಿರನಾಮಕ ಸುಜ್ಞಾನಸಪಾಲ 2ಸಾಗರ ಕನ್ನಿಕಾ ಪ್ರಾಣರಮಣನಾಗಾರಿಗಮನ ನಾಗಶಯನಆಗಮನುತ ಮಮಪ್ರಾಣ ಶ್ರೀರಾಮ ನಿನ್ನ 3
--------------
ರಾಮದಾಸರು
ಪಾಲಿಸೆನ್ನ ಪಾರ್ವತೀಪತಿ ಪಾಲಿಸೆನ್ನನುಪಾಲಿಸೆನ್ನನು ಚೆಲ್ವ ಕಾಲಕಂದರ ಹರಪಾಲಯಮಾಂ ಶಿವಲೋಲವಿರೂಪಾಕ್ಷಪಶರನಾಮ ಸುರನ ಕುವರಿಯನಾಳಿದವನಹಿರಿಯ ಪಿತನ ಶಿರವ ತರಿದವನ ಸುತನಿಗೆತುರಗವಾದವನ ಜೆಹ್ವೆಯ ತುದಿಗೆ ಸಿಲುಕಿಮರುಳಾಗಿದ್ದವನ ಬಾಯ ತುತ್ತಾಗಿಮರೆಯೊಳಿದ್ದವನ ಕಾಯವಾಧರಿಸಿ ನೀಶಿರದೊಳು ತಾಳಿದೆಯಾ ಎನ್ನೊಡೆಯ1ಬಾಯೊಳಗಿಹ ರಮಣನ ಅನುಜನ ಮಾವನ ದಿನದಮೈಯವನ ಮಗನ ಶಿರದಾಯತವಾಗಿಪ್ಪನ ವೈ-ರಿಯ ನೇರಿದಾಯತಾಕ್ಷಿಯ ಪೆತ್ತನ ವಂಶವ ಮುರಿ-ದಾ ಯಾಗಗಳ ಕಿತ್ತವನ ಆತ್ಮಜನಿಗೆಆಯಾಮಾರ್ಗಣವಿತ್ತವನೆ2ಸರಸಿಜಮಿತ್ರನ ಸೂನುವಿನ ಕಂದನವರಪುರಂಧ್ರಿಯಮಾನವಕಾಯ್ದನಣ್ಣನಕರದೊಳಿದ್ದಾಯುಧವ ಪೆಗಲೊಳಾತುನರರ ರಕ್ಷಿಸಿ ಪೊರೆವ ದೇವನನೇರಿಚರಿಪ ಪಂಪಾಪುರವನಾಳ್ವ ಸದ್ಗುರುಚಿದಾನಂದ ದೇವಭಕ್ತರಕಾವ3
--------------
ಚಿದಾನಂದ ಅವಧೂತರು
ಪಾವನನವ ಪಾವನನವ ಪಾವನನವ ಜಗಕೆ |ತುಲಸಿ ಹಿಡಿಯೆ ಕೈ ಪಾವನ, ದಲವನಿಡೆ ಕಿವಿ ಪಾವನ |ಏಕಾದಶಿಯ ವ್ರತ ಪಾವನ ಎಲ್ಲವ ತೊರೆದವ ಪಾವನ |[ಕೃತಿರಮಣನ ಕಥೆಯನೊಪ್ಪಿ] ಕೇಳಿದ ಕಿವಿ ಪಾವನ |ಸಾಮವೇದ ಪಾವನವು -ಭೂಮಿಪತಿನೀ ಪಾವನ |
--------------
ಪುರಂದರದಾಸರು
ಪ್ರಥಮ ಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪಹಂಸನಾಮಕ ವಿಷ್ಣು ವನರುಹಾಸನಸನಕದೂರ್ವಾಸಮೊದಲಾದಗುರುವಂಶಜಾತದಶಪ್ರಮತಿಸರಸಿಜನಾಭನರಹರಿತೀರ್ಥಬಿಸಜಚರಣಂಗಳಲಿ ಸತತ ನಾ ಶರಣು |1ಮಾಧವಅಕ್ಷೋಭ್ಯ ಜಯವಿದ್ಯಾಧಿರಾಜ ರಾ-ಜೇಂದ್ರ ಕವೀಂದ್ರವಾಗೀಶರಾಮಚಂದ್ರವಿಭುದೇಂದ್ರ ವಿದ್ಯಾನಿಧಿಗಳು ಈ ಸರ್ವಸತಪೋನಿಧಿ ಯತಿವರ್ಯರಿಗೆ ನಮಿಪೆ 2ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯತತ್ವಜÕ ರಘೂತ್ತಮಾರ್ಯರಿಗೆವೇದವ್ಯಾಸ ಯತಿಗಳಿಗೆ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 3ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯವಿಜಯರಿಗೆ ಸತ್ಯಪ್ರಿಯ ಸತ್ಯಬೋಧರಿಗೆಭೃತ್ಯನಾ ಎನ್ನ ವಂದನೆಗಳರ್ಪಿಸುವೆ4ಸತ್ಯಬೋಧರ ಮಹಿಮೆ ಬಹು ಬಹು ಬಹುಳವುವೇದ್ಯ ಎನಗೆ ಅತಿ ಸ್ವಲ್ಪ ಮಾತ್ರಆದರಲ್ಲೂ ಬಿಟ್ಟದ್ದು ಬಹು ಇಲ್ಲಿ ಪೇಳಿಹುದುಅತಿ ಕಿಂಚಿತ್ ಅಣುಮಾತ್ರ ಸುಜನರು ಲಾಲಿಪುದು 5ರಾಮಾಚಾರ್ಯರು ಸಣ್ಣ ವಯಸ್ಸಿನವರುನೇಮದಿಂದಾಶ್ರಮೋಚಿತ ಕರ್ಮಪರರುರಾಮ ಹಯಶೀರ್ಷ ನರಸಿಂಹನ ಗುಣರೂಪಸಮ್ಮುದದಿ ಜ್ಞಾನಭಕ್ತಿಯಲಿ ಧ್ಯಾನಿಪರು 6ಈ ರಾಯಚೂರು ರಾಮಾಚಾರ್ಯರೇ ಸತ್ಯಪ್ರಿಯಗುರುಗಳ ಸಂಸ್ಥಾನ ಪೀಠಕ್ಕೆ ಬಂದುಸೂರಿವರ್ಯರು ಸತ್ಯಬೋಧ ತೀರ್ಥರು ಎಂದುಧರೆಯಲ್ಲಿ ಪ್ರಖ್ಯಾತರಾಗಿಹರು ಕರುಣಿ 7ಬಾದರಾಯಣಮಾಧ್ವ ಸಚ್ಛಾಸ್ತ್ರ ಬೋಧಿಸಿಅಧಿಕಾರಿಗಳ ಉದ್ಧರಿಸಿ ಅಲ್ಲಲ್ಲಿವೇದ ವಿರುದ್ದ ದುರ್ವಾದಗಳ ಕತ್ತರಿಸಿಮೇದಿನಿಸಜ್ಜನರ ಪೊರೆದಂಥ ಧೀರ 8ಪೀಠ ಆರೋಹಿಸಿದ ಪೂರ್ವಗುರುಗಳ ಪೋಲುಮಠಕ್ಕೆ ಮಾನ್ಯಗಳ ಅಭರಣಗಳನ್ನಪಟ್ಟಣ ಪ್ರಮುಖರು ಧನಿಕರು ಭೂಪಾಲರುಕೊಟ್ಟದ್ದು ಅಲ್ಲಲ್ಲಿ ಸ್ವೀಕರಿಸಿದರು 9ಸತ್ಯಪ್ರಿಯರಾರಾಧನೆಗಾಗಿ ಬಂದಿದ್ದಸತ್ಯಬೋಧರ ಮಹಿಮೆಯನ್ನು ಲೆಕ್ಕಿಸದೆಬಂಧಿಸಿದ ಶ್ರೀಮಠವ ರಾಮೇಶ್ವರ ರಾಜಬಂತು ಸೈನ್ಯವು ತಿರುಚಿನಾಪಳ್ಳಿಯಿಂದ 10ತಿರುಚಿನಾಪಳ್ಳಿಯಿಂದ ಜಾನೋಜಿರಾವ್ ನಿಂಬಳ್ಕಾರನು ಸೈನ್ಯವನು ಕಳುಹಿಸಿದನುವಿರೋಧ ಬಿಡುಗಡೆ ಮಾಡಿ ಆ ರಾಜನ್ನ ಶಿಕ್ಷಿಸಿಗುರುಗಳ ಕರೆತಂದ ತಿರುಚಿನಾಪಳ್ಳಿಗೆ 11ತಿರುಚಿನಾಪಳ್ಳಿಯ ಮ್ಲೇಛ್ಬರಾಜನು ಈಗುರುಗಳ ಪ್ರಭಾವವ ಅರಿಯದೆ ಮೌಢ್ಯದಲಿವರಧನಾಪಹಾರಿಯು ಎಂದು ಆಪಾದಿಸಿನಿರೋಧಿಸಿದ ಶೋಧನೆ ಮಾಡುವ ನೆವದಿ 12ಪರಿಶೋಧನೆಯಲ್ಲಿ ಮೈಲಿಗೆ ಆಗದಿರೆಗುರುಗಳು ರಾಮದೇವರ ಪೆಟ್ಟಿಗೆಯತಿರುಕಾಟ್ಟು ಪಳ್ಳೀಗೆ ಕಳುಹಿಸಿ ಉಪೋಷಣದಿಹರಿಯ ಮಾನಸ ಪೂಜೆ ಮಾಡುತ ಕುಳಿತರು 13ಜಾನೋಜಿರಾಯನು ವಾದಿಸೆ ಸುಲ್ತಾನತನ್ನ ಸರ್ಕಾರ ಶೋಧಕರ ಕಳುಹಿಸಿದತನ್ನ ಹಿರಿಯರ ಮತ್ತು ಇತರ ರಾಜರುಗಳಚಿಹ್ನೆ ಮುದ್ರಿತ ಒಡವೆ ಮಾತ್ರವೆ ಕಂಡ 14ವಿರೋಧ ನೀಗಿಸಿ ನಿಂಬಳ್ಕರನ ಕೈಯಿಂದಹರಿಪೂಜೆಗುರುಪೂಜೆ ಮಾಡಿಸಿ ಕಾಣಿಕೆಯುಗುರುತರದಿ ಅರ್ಪಿಸಿದ ಆ ಮ್ಲೇಛ್ಭರಾಜನುಗುರುಸತ್ಯಬೋಧರ ಕೀರ್ತಿವರ್ಧಿಸಿತು15ತಿರುಕಾಟ್ಟುಪಳ್ಳಿಯಿಂದಲಿ ಪೂಜೆ ಪೆಟ್ಟಿಗೆಯತರಿಸಿ ಹರಿಪೂಜೆಯ ಮಾಡಿ ಮುದದಿಂದಮರ್ಯಾದೆ ಕಾಣಿಕೆಗಳಕೊಂಡು ದಿಗ್ವಿಜಯಚರಿಸಿದರು ಹರಿಗುರು ತೀರ್ಥಸ್ಥಳಗಳಿಗೆ 16ಮಾರ್ಗದಲಿ ತಂಜಾವೂರಿನ ರಾಜನುಶ್ರೀ ಗುರುಗಳಿಗೆ ಸೇವೆಸÀಲ್ಲಿಸಿದನಗರದಲಿ ಪ್ರಮುಖಪಂಡಿತಗೋಸಾಯಿಯನಿಗಮಾಂತ ವಾದದಲಿ ಸೋಲಿಸಿದರು 17ಕುಂಭಕೋಣದಿ ಬ್ರಾಹ್ಮಣರ ಬೀದಿಯಲ್ಲಿಗಂಭೀರತರ ದೊಡ್ಡ ಮಂಟಪಕಟ್ಟಿಸಂಭ್ರಮದಿ ಹರಿಪೂಜೆಗೈದು ವಿದ್ವಜ್ಜನಸಭೆಯಕೂಡಿ ವಾಕ್ಯಾರ್ಥ ನಡೆಸಿದರು 18ಶ್ರೀರಂಗ ಕ್ಷೇತ್ರ ತಂಜಾವೂರು ತರುವಾಯಸಾರಂಗಪಾಣಿ ಕುಂಭೇಶ್ವರ ಕ್ಷೇತ್ರಪರಿಕಲ್ಲು ತಿರುಕೋಯಿಲೂರು ಮಾರ್ಗದಿ ಬಂದುಸೇರಿದರು ತಿರುಪತಿ ವೇಂಕಟಾಚಲಕ್ಕೆ 19ಶ್ರೀರಂಗನಾಥನಿಗೆ ಶ್ರೀರಂಗನಾಯಕಿಗೆಕ್ಷೀರಾಬ್ಧಿಯಲಿತೋರ್ದ ಧನ್ವಂತರಿಗೆನೀರುಮಧ್ಯದಿ ಇರುವ ಜಂಬುಕೇಶ್ವರನಿಗೆಭಾರಿ ಪುಣ್ಯದೆ ಕಾವೇರಿಗೆ ನಮಿಪೆ 20ಶಾಙ್ರ್ಗಧರಚಕ್ರಧರಕುಂಭೇಶ್ವರಅಂಬಮಂಗಳನಾಯಕಿ ವಿಜಯೀಂದ್ರರಿಗೆನಾಗೇಶ್ವರನಿಗೆ ವಿದ್ಯುಪುರಿ ಶ್ರೀಶನಿಗೆಭೃಗುಸುತಪತಿ ಶ್ರೀನಿವಾಸನಿಗೆ ನಮಿಪೆ 21ಪರಿಕಲ್ಲು ಎಂಬುವ ಗ್ರಾಮದಲಿ ನರಸಿಂಹಶ್ರೀರಮಾಪತಿ ಇಹನು ಸರ್ವೇಷ್ಟದಾತಪರಿಪರಿ ಭಕ್ತರ ಪೀಡೆಗಳ ಪರಿಹರಿಪಶರಣಾದೆ ಶ್ರೀ ಲಕ್ಷ್ಮಿ ನರಸಿಂಹನಲ್ಲಿ 22ತಿರುಕೋಯಿಲೂರಲ್ಲಿ ಮೂರ್ಲೋಕ ಅಳೆದವನಭಾರಿಆಲಯಉಂಟು ಶಿವಕುಮಾರರಿಗೂಪಾತ್ರ ವಿಶಾಲವು ದಕ್ಷಿಣ ಪಿನಾಕಿನಿಯತೀರದಲಿ ಶ್ರೀರಘೂತ್ತಮರು ಕುಳಿತಿಹರು 23ಪಿನಾಕಜಾ ಈ ಪಿನಾಕಿಯಲ್ಲಿಹನುಅನಿಮಿತ್ತ ಬಂಧುಶ್ರೀಕೇಶವ ಸರ್ವೇಶಸ್ನಾನ ಜಪದಾನಗಳು ಪಣ್ಯಪ್ರದತತ್ತೀರವನದಲ್ಲಿ ಶ್ರೀ ರಘೂತ್ತಮರ ವೃಂದಾವನ 24ಶ್ರೀಯುತ ತ್ರಿವಿಕ್ರಮ ವಿಶ್ವರೂಪಗೆ ನಮೋಕಾತ್ಯಾಯನಿ ಶಿವಗೂ ಸ್ಕಂಧವಲ್ಲಿಗೂಕಾಯವಾಕ್ಕು ಮನದಿ ಟೀಕಾಭಾವಬೋಧರಿಗೂಕಾಯಮನ ಶುದ್ಧಿಕರ ಪಿನಾಕಿನಿಗೂ ನಮಿಪೆ 25ತಿರುಕೋಯಿಲೂರಿಗೆ ಕ್ರೋಶತ್ರಯದೊಳಗೇವೆವೀರ ಚೋಳಪುರದಲ್ಲಿ ಶ್ರೀ ಸತ್ಯನಾಥತೀರ್ಥರು ಅಭಿನವ ಚಂದ್ರಿಕಾಕಾರರುಇರುತಿಹರು ವೃಂದಾವನದಲ್ಲಿ ವಂದೇ 26ತಿರುಕೋಯಿಲೂರಿಂದ ತಿರುವಣ್ಣಾಮಲೆಯೆಂಬಅರುಣಾಚಲಕೆ ಪೋಗಿ ಅಲ್ಲಿ ರಾಜಿಸುವಕರುಣಾಬ್ಧಿ ಗಿರಿಜಾರಮಣನ್ನ ವಂದಿಸಿತಿರುಪತಿಗೆ ಹೊರಟರು ಗುರುಸರ್ವಭೌಮ 27ಹೇಮಗರ್ಭನತಾತಶ್ರಿಪತಿ ಜಗನ್ನಾಥಆಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 28 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣಾಂತರ್ಗತಪ್ರಾಣ ಅಣುರೇಣುಚರಾಚರಪೂರ್ಣ ಪ.ಕಾಣೆನು ನಿನ್ನ ಸಮಾನ ಮಾನದ ಪು-ರಾಣಪುರುಷಸುತ್ರಾಣವರೇಣ್ಯಅ.ಪ.ಪಂಕಜನಾಭಶ್ರೀವೆಂಕಟರಮಣನೆಕಿಂಕರಜನಮನಃಪ್ರೇಮದನೆಶಂಕರಾದಿ ಸುರಸಂಕುಲ ಸೇವಿತಶಂಖ ಸುದರ್ಶನ ಗದಾಬ್ಜಹಸ್ತನೆ 1ಪಾಪಿಯು ನಾ ನೀ ಪಾಪಹ ಪಾವನರೂಪಪರಾತ್ಪರಗೋಪಾಲಕಾಪಾಡೆಮ್ಮ ಸಮೀಪಗನಾಗಿ ಜ-ಯಾಪತಿಗೋಪತಿಶ್ರೀಪತಿ ನೀಗತಿ2ಚಟುಳ ನೇತ್ರಾವತಿತಟನಿಕಟಪ್ರಕಟವಟಪುರವರ ವೆಂಕಟಧಾಮವಟುವಾಮನ ಲಕ್ಷ್ಮೀನಾರಾಯಣಪಟುವೀರ್ಯ ತಮಃಪಟಲನಿವಾರಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಂದದೆಲ್ಲವೊ ಬರಲಿ - ಗೋ -ವಿಂದನ ದಯೆ ನಮಗಿರಲಿ ಪಮಂದರಧರ ಗೋವಿಂದ ಮುಕುಂದನಸಂದರುಶನ ನಮಗೊಂದೇ ಸಾಲದೆ ? ಅ.ಪಆರು ಅರಿಯದಿರಲೆನ್ನ - ಮುರಾರಿಯು ವರದ ಪ್ರಸನ್ನತೋರುವ ದುರಿತದ ಬೆನ್ನ -ಭವಹಾರಿ ಕೃಪಾಂಬುಧಿ ಚೆನ್ನ ||ಶ್ರೀರಮಣನ ಶ್ರೀಚರಣ ಸೇವಕರಿಗೆಘೋರಯಮನು ಶರಣಾಗತನಲ್ಲವೆ ? 1ಅರಗಿನ ಮನೆಯೊಳಗಂದು ಪಾಂಡುವರನು ಕೊಲಬೇಕೆಂದುದುರುಳ ಕುರುಪ ಕಪಟದಲಿ ಹಾಕಿರುತಿರೆ ಆ ಕ್ಷಣದಲಿ ||ಹರಿಕೃಪೆಯವರಲ್ಲಿದ್ದ ಕಾರಣದುರಿತವೆಲ್ಲ ಬಯಲಾದುದಲ್ಲವೆ ? 2ಸಿಂಗನ ಪೆಗಲೇರಿದಗೆ - ಕರಿಭಂಗವೇಕೆ ಮತ್ತವಗೆ |ರಂಗನ ದಯವುಳ್ಳವಗೆ - ಭವಭಂಗದ ಭೀತಿಯ ಹಂಗೆ ||ವiಂಗಳ ಮಹಿಮ ಶ್ರೀಪುರಂದರ ವಿಠಲನಹಿಂಗದ ದಯೆವೊಂದಿದ್ದರೆ ಸಾಲದೆ ? 3
--------------
ಪುರಂದರದಾಸರು
ಬಾರನ್ಯಾತಕೆ ವಾರಿಜಾನನೆ ಶ್ರೀಮಾರಜನಕಸಕಲ ಸುಖಕೆ ಕಾರಣನು ಕರುಣಿಸಿ ತಾನೆಪ.ಭುವನೇಶನಿನಿಯಳಣುಗ ತಾ ಪಿಡಿದು ಜರಿದ ಬಲಹಗೆಹ್ಯಾವಿಲೆಳೆದವನೊಳು ಕಾದಿ ತಾವೊಲಿದ ದೊರೆಯ ನಮಿಸಿಭಾವಕದಿದು ಇಷ್ಟವ ಪಡೆದನ ಜನನಿಸುತರಜೀವಕೆಡರು ಬರಲಿ ಕಳಿದನೆ ರಂಧ್ರ ಪೊಳಲದೇವ ಭಗಿನಿ ತುತಿಯ ಕೇಳ್ದನೆಇಂದುವದನೆ1ಹರಿಪದಸ್ಥನೆರೆಯನಿಂದ ಹರುಷದೊರೆದ ಪುರುಷನುಗ್ರಕರಿಯ ಮೈಯು ಬರಲಿ ಕಳೆದ ನರಟುನುಳ್ಳವನು ಭುವಿಲಿಹರಗೊಲಿಸಿ ಎಬಡ ಗಡ ಹೆಣ್ಣಿನ ಒಡಲ ಪೊಡೆಯುಉರಿಯಲರಿದ ಸಿರಿಯವರದನೆ ಬಾಳರುಚಿಯುಳ್ಹರಿಯನಟ್ಟಿಜವದಿಕಾಯ್ದನೆಕುಂದರದನೆ2ಭಾರಮಣನ ಅಗ್ರಜಳ ಕಿಶೋರಬಾಣಪ್ರಿಯಜನವತಾರನರಮನೆಗೊಲಿದು ವಿಷದ್ವಿಜನ್ನ ಧ್ವಜ ಕರೆದರೆಬಾರದೇನೆ ಮೂಗಮುರಿವನೆ ತನ್ನ ನಂಬಿಸಾರಿದವರ ಮನದೊಳಿರುವನೆ ಪ್ರಸನ್ನವೆಂಕಟಧೀರನೊಬ್ಬ ಜಗಕೆ ಚೆಲುವನೆ ಭಾಮಿನಿ 3
--------------
ಪ್ರಸನ್ನವೆಂಕಟದಾಸರು
ಬಾರಮ್ಮ ಮನೆಗೆ ಸೌಭಾಗ್ಯದ ಮಹಲಕ್ಷ್ಮಿ ಪಬಾರಮ್ಮ ಮನೆಗೆ ಭಕ್ತರು ನಿನ್ನ ಸ್ತುತಿಪರುಮಾರನಯ್ಯನ ಕೂಡಿ ಮನ ಹರುಷದಿ ಬೇಗ ಅ.ಪಶಂಖು ಚಕ್ರ ಗದ ಪದ್ಮವು ಧರಿಸಿದಪಂಕಜಾಕ್ಷನಸಿರಿಪಟ್ಟದರಸಿದೇವಿಕುಂಕುಮಾಂಕಿತೆ ಸರ್ವಾಲಂಕಾರ ಶೋಭಿತೆಬಿಂಕಮಾಡದಲೆ ಬಾ ವೆಂಕಟನರಸಿಯೆ1ಶುಕ್ರವಾರದಿ ನಿನ್ನ ಭಕ್ತಿಲಿ ಸ್ತುತಿಪರಇಷ್ಟ್ಯಾರ್ಥಗಳ ಕೊಟ್ಟುದ್ಧರಿಪಭಾರ್ಗವಿತಾಯೆಭಕ್ತವತ್ಸಲನೊಡಗೂಡುತ ಬಾರಮ್ಮಮಿತ್ರೇರು ಕರೆವರು ಕೃಷ್ಣವೇಣಿಯೆ ನಿನ್ನ 2ಕನ್ನಡಿ ಕದುಪಿನ ಕಡು ಮುದ್ದು ಮಹಾಲಕ್ಷ್ಮಿರನ್ನ ಪವಳ ಹಾರಾಲಂಕೃತ ಶೋಭಿತೆಸ್ವರ್ಣಮಂಟಪದಿ ಕುಳ್ಳಿರು ಬಾರೆಂದೆನುತಲಿಕರ್ನೇರು ಕರೆವರು ಕಮಲಾಕ್ಷನೊಡಗೂಡಿ 3ನಿಗಮವೇದ್ಯಳೆ ನಿನ್ನಅಗಣಿತಗುಣಗಳಪೊಗಳುವ ಸುಜನರಅಘಪರಿಹರಿಸುತ್ತಬಗೆ ಬಗೆ ನಾಮಗಳಿಂದ ಪೂಜೆಯಗೊಂಬಖಗವಾಹನನ ರಾಣಿ ಲಗುಬಗೆಯಿಂದಲಿ 4ತಡಮಾಡದಲೆ ಬಾ ಬಾ ಮುಡಿದ ಹೂವು ಉದರುತ್ತಬಡನಡು ಬಳುಕುತ್ತ ಕೊಡುತ ವರಗಳನ್ನುಬಿಡಿಮಲ್ಲಿಗೆಯ ತಂದು ನಡೆಮುಡಿ ಹಾಸುವರುಕಡಲೊಡೆಯನ ರಾಣಿ ಸಡಗರದಿಂದೊಮ್ಮೆ 5ಕ್ಷೀರವಾರಿಧಿಯ ಕುಮಾರಿಯೆ ಬಾರೆಂದುಸಾರಸಮುಖಿಯರು ಸರಸದಿ ಕರೆವರುಮೂರ್ಲೋಕ ವಿಖ್ಯಾತೆ ಮಾರಮಣನ ಪ್ರೀತೆಚಾರುಮಂಗಳೆ ಸತ್ಯ ಶ್ರೀ ಭೂದುರ್ಗಾಂಬ್ರಣೆ 6ಕಮಲಾಕ್ಷಿ ಕೇಳಮ್ಮ ಶ್ರಮ ಪರಿಹರಿಸೆಂದುನಮಿಸಿ ಬೇಡುವೆ ನಿನ್ನಭ್ರಮರಕುಂತಳೆ ತಾಯೆಕಮಲನಾಭ ವಿಠ್ಠಲನ ಕೂಡಿ ಹರುಷದಿಸುಮನಸರೊಡೆಯನಸತಿಸಾರ್ವಭೌಮಳೆ7
--------------
ನಿಡಗುರುಕಿ ಜೀವೂಬಾಯಿ