ಒಟ್ಟು 1238 ಕಡೆಗಳಲ್ಲಿ , 95 ದಾಸರು , 1040 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡೊ ಮನ ಕೊಂಡಾಡೊ ಮರೆಯದಲೆ ಮನ ಚಿಂತÀ ಲ್ರೇವ ಲೇಶನ ? ಪಾಡುತಿರೆ ಕೃಷ್ಣಾತೀರದ್ವಾಸನ ಮಾಡೊ ಮಹಾತ್ಮರೆಂದೆನಿಸೊ ದಾಸರ ಜೋಡು ಪಾದಂಗಳಿಗೆ ವಂದನೆ ಪ ಅಂಜನೆಯಲ್ಲುದಿಸಿ ಕೌಸಲ್ಯಾ- ಕಂದನಂಘ್ರಿಕಮಲ ಸೇವೆಗೆ ಅಂಗದ ಮೊದಲಾದ ಕಪಿಗಳ ಸಂಗ ಬಿಟ್ವಾರಿಧಿಯನ್ಹಾರುತ ಭಂಗ ಬಡಿಸುತ ರಾವಣನ ಪುರ ಮಂಗಳಾರತಿ ಮಾಡಿ ಜಾನಕಿ ಗುಂಗುರವನಿಟ್ಟೆರಗಿ ರಾಮರಿ ಗಂಗನೆಯ ವಾರ್ತೆಗಳನರುಹಿದೆ1 ಕುಂತಿಸುತನಾಗ್ಯುದಿಸಿ ಬ್ಯಾಗನೆ ಪಂಥಮಾಡುತ ಕೌರವರ ಕುಲ- ಕಂತಕನು ನಾನೆಂದು ರಣದೊಳು ನಿಂತು ಗದೆ ಹಾಕವರ ಸವರುತ ಅಂತರಂಗದಿ ಹರಿಯ ದಿವ್ಯಾ- ನಂತ ಗುಣಗಳ ತಿಳಿದು ದ್ರೌಪದೀ- ಕಾಂತನೆನಿಸಿ ತಾ ಕರುಣನಿಧಿಗೇ- ಕಾಂತ ಭಕ್ತನೆಂದಿನಿಸಿದಾತನು 2 ಮಧ್ಯಗೇಹಭಟ್ಟರಲ್ಲಿ ಮಗನಾ- ಗಿದ್ದ ಸುಜನರಭೀಷ್ಟದಾಯಕ ಗೆದ್ದು ಮಾಯಾವಾದಿಗಳನೆ ಪ್ರ ಸಿದ್ಧಿನೆನಿಸಿದೆ ಸರ್ವಲೋಕದಿ ಶುದ್ಧ ಜ್ಞಾನಾನಂದತೀರ್ಥರು ಮಧ್ವಮತದ ಬಿರುದನೆತ್ತಿದ ಪದ್ಮಪತಿ ಭೀಮೇಶಕೃಷ್ಣಗೆ ಪರಮಭಕ್ತನೆಂದೆನಿಸಿದಾತನು 3
--------------
ಹರಪನಹಳ್ಳಿಭೀಮವ್ವ
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪನ್ನಗ ನಗಾಧೀಶ ಅಗಣಿತ ಗುಣಾನಂದ ಚಿದ್ಘನ ಪರೇಶ ಪ. ಜಗದ ಜೀವರಿಗೆ ಬಗೆ ಬಗೆ ವೇಷವ ತೊಡಿಸಿ ಸೊಗಸಿನಿಂದಲಿ ನೋಡಿ ನಗುತಲಿಹೆಯೊ ತ್ರಿಗುಣಮಾನಿನಿಯೊಡನೆ ಹಗಲಿರುಳು ಕ್ರೀಡಿಸುತ ಮಿಗೆ ಹರುಷದಿಂದಿರುವ ಖಗವರಧ್ವಜ ಹರಿಯೆ 1 ನಾನಾವತಾರದಲಿ ನಂಬಿದ ಸುರಾದಿಗಳಿ- ಗಾನವಾರಿಧಿಯ ಸ್ನಾನ ಮಾಡಿಸುವಿ ದೀನತ್ವದಲಿ ನಿನ್ನ ಧ್ಯಾನವೇ ಗತಿಯೆಂದು ನಾನಿದಿರು ಬಂದೆರಗೆ ಮಾನಿಸದೆ ಮರುಳಾಗಿ 2 ಅಂತರಾತ್ಮಕನಾಗಿ ಚಿಂತನಾದಿಗಳ ಬಲ ವಂತದಲಿ ನೀನೆ ಮಾಡಿಸಿದ ಮೇಲೆನ್ನ ಇಂತು ಬಳಲಿಸುವ ದುರಂತ ಮಹಿಮನೆ ನಿನಗೆ ಕಂತು ಬ್ರಹ್ಮರ ಜನಕ 3 ನಾನು ನನ್ನದು ಎಂಬ ಮಾನವಿತ್ತದರಿಂದ ಈ ನಳಿನಜಾಂಡವದೊಳು ನಾನು ಸಿಲುಕಿಹೆನು ಮಾನಾಭಿಮಾನಿಗಳ ನೀನೀವುದರಿಂದ ದೀನತನ ಕಳದು ಸನ್ಮಾನ ಪಾಲಿಸು ದೇವ 4 ತಂದೆತಾಯಿಗಳು ನಿಜ ಬಂಧುಬಳಗಗಳೆಲ್ಲ ಒಂದೊಂದು ಜನ್ಮದಲಿ ಬ್ಯಾರೆಬ್ಯಾರಹರು ಎಂದೆಂದಿಗೂ ನೀನೆ ತಂದೆ ನಿನ್ನರಸಿ ತಾ- ಯ್ಯೆಂದು ತಿಳಿಹೆನು ಮುಚಕುಂದ ರಕ್ಷಕ ಸ್ವಾಮಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಂಪಾಪತಿಯೆ ಶಂಭೋ - ಪಾಲಿಯ ಪ ಶಂಫಲಿ ಪುರಗ ವಿರಂಚಿ ಪಿತ ಪದನೋಂಪಿಗೈವ ಮನ | ಇಂಪಾಗಿ ಕೊಡು ಹರ ಅ.ಪ. ಪಂಚ ಬಾಣಾರಿ ಮಹದೇವಾ | ತ್ವರ್ಯಸಂಚುಗೊಳಿಸೊ ಹರಿ ಭಾವಾ |ಹೆಂಚು ಹಾಟಕ ಸಮ | ಸಂಚಿಂತನೆಯ ಕೊಟ್ಟುಸಂಚಿತಾಗಾಮಿ ಕಳೆ | ವಾಂಛಿತಾರ್ಥವ ಶಿವ 1 ಸಯ5ೂ ಮನಕಭಿಮಾನಿಯೆ 5sÁವಿಶಯ್ಯ ಹರಿಗೆ ಎಂಬೊ ರೂಪಿಯೇ ||ಸ್ಥೈರ್ಯ ವನದಿ ಹರಿ | ಪ್ರೀಯ ಪಾಲಿಸಿನ್ನುಕೈಯ್ಯ ಪಿಡಿದು ಕಾಯೊ | ಅಯ್ಯ ನಿನಗೆ ಶರಣು 2 ದಿವಿಜ ಪ್ರಿಯಸರ್ವಾರ್ಪಣೆಂಬ ಮನ | ಭಾವವ ಪಾಲಿಸು 3 ಮಾಧವ ಪ್ರಿಯಚಂದ್ರಾರ್ಕಾನಲ ಚಕ್ಷು | ತಂದೆ ಕಾಯೋ ಹರ4 ಪರಿ ಪರಿ ಪಾಲಕಾ ಗುರು |ಗೋವಿಂದ ವಿಠಲನ ಅರ್ಚಕಾ ||ತೀವರದಲಿ ಮನ | ಮಾವಾರಿ ಪದ ಸ್ಮøತಿಭಾವದಲಿಡು ಶಿವ | ಆವ ದನ್ಯವನೊಲ್ಲೆ 5
--------------
ಗುರುಗೋವಿಂದವಿಠಲರು
ಪರದೇವತೆ ಪದ್ಮಾವತಿ ಶರಣಾಗತೋದ್ಧಾರಣೆ ಜನನಿ ಪ ನಿರತವೂ ನಿನ್ನ ಚರಣಕಮಲ ನೆರೆನಂಬಿದೆಕರುಣಾವಾರಿಧೆ ಅ.ಪ ಶಾಪವಿತ್ತ 1 ಭೂವರನಿಗೆ ಮಗಳೆನ್ನಿಸಿ ಮಾಡಿಸಿದಾ 2 ಲೋಕವರಿಯೆ ಪದ್ಮ ಸರಸಿಯೋಳ್ ನೆಲಸಿದೆ ಭೂಕಾಂತ ಗುರುರಾಮವಿಠಲ ಅರಸಿ 3
--------------
ಗುರುರಾಮವಿಠಲ
ಪರಮ ಪುರುಷ ಬಾರೋ-ಪಾವನ- ಚರಣಯುಗವ ತೋರೋ ಪ ನಿರುತವು ನಿನ್ನನೆ ನೆರೆನಂಬಿದೆ ಹರಿ ಅ.ಪ. ದಿಕ್ಕು ನೀನೆ ಎಂದು-ನಂಬಿದನಕ್ಕರಿಂದ ಬಂದು ಘನ ರಕ್ಕಸ ವೈರಿಯೆ 1 ಇಷ್ಟದೇವನಾರೋ-ಮನಸಾಭೀಷ್ಟವ ಕೊಡುಬಾರೋ ನೀಂದೃಷ್ಟಿಸು ನಮ್ಮನು2 ಕೇಣವ್ಯಾಕೋಹರಿಯೇ-ಕಣ್ಣಿಲಿ-ಕಾಣ ಬಾರೋ ಧೊರೆಯೇ ಸರಿ ಜಾಣತನದಿಹರಿ3 ವಾರಿಧಿಕೃತಶಯನ-ವಿಕಸಿತ-ವಾರಿಜದಳನಯನ ಕಂಸಾರಿ ಸಾರಿದೆ ನರಹರಿ4 ಧರೆಯೊಳಧಿಕವಾದ-ಶ್ರೀ ಪುಲಿಗಿರಿಯೊಳು ನೆಲೆಯಾದ ವರದವಿಠಲಧೊರೆ ವರದ ದಯಾನಿಧೆ 5
--------------
ಸರಗೂರು ವೆಂಕಟವರದಾರ್ಯರು
ಪರಮಪುರುಷ ಯದುಕುಲೇಶ ಶರಧಿ ಮಂದಿರವಾಸ ಶ್ರೀಶ ಪ ಪರಮ ಹರುಷದಿಂದಲೀಗ ಉರುಟನೆಯ ಮಾಡುವೆನು ಅ.ಪ. ನೀಲಮೇಘ ವರ್ಣ ನಿನ್ನ ಬಾಲಶಶಿಯ ಪೋಲುವಂಥ ಫಾಲವನ್ನು ತೋರುಬೇಗ ಕುಂಕುಮವ ಹಚ್ಚುವೆನು 1 ವಾರಿಜಾಕ್ಷ ಮಾರಜನಕ ವಾರಿನಿಧಿ ಗಂಭೀರ ಸುಗುಣ ತೋರು ನಿನ್ನ ಚರಣಗಳನು ಅರಿಸಿನವ ಹಚ್ಚುವೆನು 2 ಸುಂದರಾಂಗ ಮಂದಹಾಸ ಕುಂದರನೆ ಸಿಂಧುಶಯನ ಕಂಧರವ ತೋರು ಬೇಗ ಗಂಧವನು ಹಚ್ಚುವೆನು 3 ಕುಸುಮ ನೇತ್ರ ಕುಸುಮಪೀಠ ಸ್ತೋತ್ರ ಪಾದ ಕುಸುಮ ಮಾಲೆ ಹಾಕುವೆನು 4 ಚಾರು ಚರಿತ ಕರಿಗಿರೀಶ ಆರತಿಯ ಬೆಳಗುವೆನು ತೋರು ತವ ಮುಖಾರವಿಂದ 5
--------------
ವರಾವಾಣಿರಾಮರಾಯದಾಸರು
ಪರಮಪುರುಷ ಶ್ರೀ ರಾಮನ ಪದಯುಗ ಸಿರಿರಮಣ ನಿಜದಾಸನೆಂದೆನಿಸಿದ ವರ ಕದರುಂಡಲಿ ಹನುಮಂತ ಪ. ಒಂದೇ ಮನದಲಿ ತಂದೆ ನಿನ್ನಡಿಗಳ ಪೊಂದಿದೆ ಸಲಹೈ ಹನುಮಂತ ಕುಂದುಗಳೆಣಿಸದೆ ಕಂದನ ತೆರದಲಿ ಎಂದೆಂದಿಗು ಪೊರೆ ಹನುಮಂತ 1 ವಾರಿಧಿ ದಾಟುತ ಸೇರುತ ಅರಿಪುರ ಧಾರುಣಿಜೆಯ ಕಂಡೆ ಹನುಮಂತ ನಾರಿಚೋರನಪುರ ಸೇರಿಸಿ ಅನಲಗೆ ಸೇರಿದೆ ರಾಮನ ಹನುಮಂತ 2 ಕೃಷ್ಣನ ಸೇವಿಸಿ ದುಷ್ಟರ ಕೊಲ್ಲುತ ಮೆಟ್ಟಿದೆ ಖಳರನು ಹನುಮಂತ ದಿಟ್ಟತನದಿ ಸಾಮ್ರಾಜ್ಯವಾಳಿ ಜಗ- ಜಟ್ಟಿ ಎಂದೆನಿಸಿದೆ ಹನುಮಂತ 3 ಮಿತಿಯಿಲ್ಲದ ಅತಿಖತಿ ಮತಗಳನು ಹತಗೈಸುತ ನೀ ಹನುಮಂತ ಪ್ರತಿ ಗ್ರಂಥಗಳನ್ನು ಸ್ಥಾಪಿಸಿ ಸುರರಿಗೆ ಅತಿ ಹಿತ ತೋರಿದೆ ಹನುಮಂತ 4 ಇಷ್ಟ ಫಲಪ್ರದ ತುಷ್ಟಿಬಡಿಸೊ ನೀ ಕೊಟ್ಟೀಗಭಯವ ಹನುಮಂತ ದಿಟ್ಟ ನಿನ್ನಡಿಗಳ ಭಜಿಸುವೆ ಗೋಪಾಲ ಕೃಷ್ಣವಿಠ್ಠಲ ಪ್ರಿಯ ಹನುಮಂತ5
--------------
ಅಂಬಾಬಾಯಿ
ಪರಮಪ್ರೀಯಾ ದಾಸರಾಯಾ | ಸತ್ಕವಿಜನಗೇಯಾ ಪ ಸುರತರು | ಕರಿಗಿರಿ ನಿಲಯನೆಉರುಗಾಯನ ಸಂದರುಶನ ಕೊಡಿಸಯ್ಯ ಅ.ಪ. ಆರ್ಮೂರೇಳು ನಾಲ್ಕೆಂಟು ಗ್ರಂಥ | ಅವುಗಳ ಸಾರಾರ್ಥಸಾರುತ್ತ ಭಕುತರಿಗೆ ಪುರುಷಾರ್ಥ | ಮಾರ್ಗವ ತೋರುತ್ತ ||ಚಾರು ಚರಿತ ಶ್ರೀರಮಾರಮಣನಗುಣವಾರಿಧಿಯೊಳು ಬಹು ಈಸಿದ ನಿಪುಣ 1 ಪಥ ಪುನರುದ್ಧರಿಸಿದ 2 ಪರತತ್ವ ಸಾರಾಂಬುಧಿ ಬೆಳಗುವನ ಪರಿಪರಿಕಲೆಯವನಶರಣರ ಹೃತ್ತಾಪವ ಹರಿಸುವನ | ನಿರತೈಕರೂಪನನಪರಮಾರ್ಥೇಂದು ವರೋದಯ ಕರುಣಿಸಿಧರಣಿಯ ಸುರರನು ಪೊರದೆಯೊ ಗುರುವೆ 3 ಅಂಕೀತವಿಲ್ಲದ ದೇಹಗಳೊಂದು | ನಿಷಿದ್ಧವೆಂದೂಪಂಕಜಾಕ್ಷನ ನಾಮಗಳೊಂದೊಂದು | ಬಳಸುತ ನೀನಂದೂ ಅಂಕನ ಗೈಧರಿ ಲೆಂಕತನವನಿತ್ತುಬಿಂಕದಿ ಜನ ಹೃತ್ಸಂಕಟ ಕಳೆದೀ 4 ಬಿಂಬೋಪದೇಶವೆ ತಾರಕವೆಂದೂ | ನಿಸ್ಸಂಶಯವೆಂದೂಹಂಬಾಲ ಹಚ್ಚುತ ಶರಣರಿಗೆಂದೆಂದೂ | ಕರುಣಾ ಸಿಂಧೂಬಿಂಬನು ಗುರುಗೋವಿಂದ ವಿಠಲ ಪಾದಾಂಬುಜದಲ್ಯನ ಹಂಬಲವಿರಿಸಿದೆ 5
--------------
ಗುರುಗೋವಿಂದವಿಠಲರು
ಪರಮೇಷ್ಠಿ ನಿರುತನಿಷ್ಠಿ ಮಾಣದೆ ಕೊಡು ಮನಮುಟ್ಟಿ ಪ ನಾನಾ ನಾಡಿನೊಳು ನೀನೆ ಪಿರಿಯನೆಂದು ಆನಂದ ಮತಿಯಿಂದ ಗಾನವ ಮಾಡುವೆ ಅ.ಪ. ಪುರುಷನಾಮಕ ವಿಧಾತ ಹಂಸವರೂಥ ಸರಸಿಜ ಗರ್ಭ ಶಿವತಾತ ಪರಮ ಗುರುವೆ ವಿಖ್ಯಾತ ಪೂರ್ವ ಮಾರುತ ತಾರತಮ್ಯದೊಳುನ್ನತ ಸಿರಿ ಪರಮಾಣು ಪ್ರದೇಶ ವರ ಶಬ್ದ ಪಿಡಿದು ಪರಿ ಪರಿಯಿಂದಲಿ ಶತಾನಂದ 1 ಜಗವÀ ಪುಟ್ಟಿಸುವ ಮಹಾಧೀರ ತತ್ವಶರೀರ ಮಗುಳೆ ಅನಿರುದ್ಧಕುಮಾರ ಝಗಿಝಗಿಪ ಮಕುಟಧರ ಜೀವನೋದ್ಧಾರ ನಿಗಭಿಮಾನಿ ಚತುರ-ಮೊಗನೆ ಪ್ರಬಲ ಅಹಿಗರುಡಾದ್ಯರಿಗೆಲ್ಲ ಅಗಣಿತ ವಾಕ್ಯನೆ ಹಗಲಿರುಳು ಮನಸಿಗೆ ಸುಖವಾಗುವ ಬಗೆ ಕರುಣಿಸು ನಮ್ಹಗೆಗಳ ಕಳೆದು 2 ವಾರಿಜಾಸನ ಲೋಕೇಶ ಭಕುತಿವಿಲಾಸ ಚಾರುಸತ್ಯ ಲೋಕಾಧೀಶ ಸಾರಹೃದಯ ವಿಶೇಷ ಮಹಿಮನೆ ದೋಷ ದೂರ ನಿರ್ಮಲ ಪ್ರಕಾಶ ಧಾರುಣಿಯೊಳಗವತಾರ ಮಾಡದ ದೇವ ಸಾರಿದೆ ನಿನ್ನಂಘ್ರಿವಾರಿಜಯುಗಳವ ಸಾರಿಸಾರಿ ವಿಜಯವಿಠ್ಠಲನ್ನ ಆರಾಧಿಪುದಕೆ ಚಾರುಮತಿಯ ಕೊಡು 3
--------------
ವಿಜಯದಾಸ
ಪವಮಾನ ಸುತರ ಪದಕಮಲಗಳ ಸ್ತವನವು ಸಾಧನವು ಜವದಲಿ ಶ್ರೀ ಹರಿದಯ ಪಡೆವುದಕೆ ಪ ನವ ನವ ರೂಪದಿ ಅವನಿತಲದೊಳಗೆ ಭುವನಜನಾಭನ ವಿವರವನರುಹಿದ ಅ.ಪ ಶ್ರೀ ರಾಘವನಾಜ್ಞೆಯ ಶಿರದಲಿ ವಹಿಸಿ ವಾರಿಧಿಯನೆ ಲಂಘಿಸಿ ವಾರಿಜಲೋಚನೆ ಸೀತೆಯ ಕಂಡು ತೋರುವ ಭಕುತಿಯನು ಶೂರ ದಾಶರಥಿಯಂಗುಳಿಯವ ಕೊಟ್ಟು ಧೀರತನದಿ ಲಂಕೆಯ ಸೂರೆಯ ಮಾಡಿದ 1 ಪಾಂಡುಸತಿ ಮನುವನು ಜಪಿಸಲು ಜನಿಸಿ ಭೂ ಪಾಂಡು ತನುಜರೊಳು ಮಂಡನರೆನಿಸಿ ಪ್ರಚಂಡ ವಿಕ್ರಮರಾದ 2 ಬಾದರಾಯಣರೊಳು ಶ್ರವಣವ ಮಾಡಿ ಮೋದವ ಪೊಂದುತಲಿ ಸಾಧಿಸಿ ದ್ವೈತವ ಮೇದಿನಿಯಲಿ ಸಾಧುಗಳಿಗೆ ಶ್ರೀಹರಿ ಪಾದಕಮಲದಲಿ ಆದರ ನೀಡಿ ಸದಾ ಪ್ರಸನ್ನ ಪೂರ್ಣಬೋಧರೆಂದೆನಿಸಿದ 3
--------------
ವಿದ್ಯಾಪ್ರಸನ್ನತೀರ್ಥರು
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪಾದ | ಜಯ ಮುಖ್ಯ ಪ್ರಾಣ ಮೋದ | ತೀರ್ಥಾರ್ಯ ಎನ್ನ ಹಂಬಲಿಗೆ ಕೊಡೊ ಭೇದ | ಅರ್ಥಗಳ ವಾದ ಪ. ಪಾದ ಹೃದಯ ನಿತ್ಯ ಹರಿಯ ಬಿಂಬ ತೋರಿಸಿ ಎನ್ನ ಭವದ ಅಂಬುಧಿ ಕಡೆ ಮಾಡು ವೇಗದಿ ಅ.ಪ. ನೂರ ತೊಂಭತ್ತಷ್ಟ | ಕಲ್ಪದಲಿ ಹರಿಯ ಆರಾಧಿಸಿದೆಯೊ ಶ್ರೇಷ್ಠ | ಅಲ್ಲಿಂದ ಮುಂದೆ ಸ- ವಿೂರ ಪದಕೆ ದಿಟ್ಟ | ಬಂದೆಯೊ ಉತ್ಕøಷ್ಟ ಪಾದ ಭಜಿಸಿ ಮೂರು ಅವತಾರವನೆ ಧರಿಸಿ ವೀರ ಕಪಿರೂಪದಲಿ ರಾಮರ ವಾರಿಜಾಂಘ್ರಿಯ ಭಜಿಸಿ1 ಭುಜ ಪರಾಕ್ರಮ ಭೀಮ | ನೆಂದೆನಿಸಿ ಕೌರವ ಧ್ವಜವ ಕೆಡಹಿದ್ಯೊ ಸೋಮ | ವಂಶಕೆ ತಿಲುಕ ನೀ ಧ್ವಜ ಕಪಿಗೆ ಬಹುಪ್ರೇಮ | ನಿನ್ನಲಿ ಹರಿಯ ಧಾಮ ದ್ವಿಜನ ಉದರದಿ ಜನಿಸಿ ಅಲ್ಲಿಂ ಕುಜನ ಮತವನು ತರಿದು ಹರಿಯ ಪಾದ ಭಜನೆ ನಿಜಗತಿಗೆ ಬಹು ಶ್ರೇಷ್ಠವೆನಿಸಿದೆ 2 ವ್ಯಾಪಕನೊ ನೀ ಎಲ್ಲಾ | ಕಡೆಯಲಿ ನಿನ್ನ ರೂಪ ತುಂಬಿಹದಲ್ಲಾ | ಎನಗದನು ತೋರೊ ಪತಿ ಗೋಪಾಲಕೃಷ್ಣವಿಠ್ಠಲ | ಲೀಲ ನೀ ಪರಿಪರಿಯಿಂದ ತಿಳಿಸಿ ತಾಪ ಹರಿಸೊ ಮೂರು ವಿಧದ ಪಾಪಿ ಎಂದು ಎನ್ನ ನೂಕದೆ ಕಾಪಾಡೊ ಪಂಚರೂಪ ಮೂರುತಿ 3
--------------
ಅಂಬಾಬಾಯಿ
ಪಾದ | ಸೋಕಿದ ಕೊನೆಧೂಳಿ ಪ ತಾಕಿದ ಮನುಜರಿಗೆ ಕಾಕುಬುದ್ಧಿಗಳೆಲ್ಲ ಪರಿಹಾರವಾಗುವವೊ | ಬೇಕಾದ ಪದವಿಯ ಕೊಡುವನು ಶ್ರೀ ಹರಿ ಅ.ಪ ಮಧ್ವಮತವೆಂಬ ಅಬ್ಧಿಯೊಳಗೆ ಪೂರ್ಣ | ಉದ್ಭವಿಸಿದ ಚಂದ್ರನಾ ಗುಣಪೂರ್ಣನಾ || ಅದ್ವೈತಮತÀ ತಮನಿಧಿ ನಿಶಿಕುಠಾರ | ವಿದ್ಯಾರಣ್ಯವ ಗರುವಕೆ ಪರಿಹಾರ 1 ತತ್ವ ವಾರಿಧಿಗಳ ತತ್ವಸುಧೆಯ ಭಾಷ್ಯ | ವಿಸ್ತರಿಸಿ ಇರಲು ಬೇಗದಲಿ || ಚಿತ್ರವಲ್ಲಭನÀ ಸೇವೆಯ ಮಾಡಿ ಟೀಕಂಗಳ || ಸುತ್ತೇಳು ಲೋಕಕ್ಕೆ ಪ್ರಕಟಿಸಿ ಮೆರೆವರ 2 ಎಂದಿಗಾದರು ಒಮ್ಮೆ ಕೊನೆ ನಾಲಿಗೆಯಿಂದ | ಬಿಂದು ಮಾತ್ರದಿ ನೆನೆಯೆ || ಮಂದ ಮತಿಯಾದರೂ ಅಜ್ಞಾನನಾಶವು | ಸುಂದೇಹÀವಿಲ್ಲವು ಅವಾವ ಕಾಲಕ್ಕೆ 3 ಜ ಎಂದು ಪೊಗಳಲು ಜಯಶೀಲನಾಗುವ | ಯ ಎನ್ನೆ ಯುಮರಾಯನಂಜುವನು || ತೀ ಎಂದು ಪೊಗಳಲು ತೀವ್ರ ಪದವಿ ಉಂಟು | ರ್ಥ ಎಂದು ಪೊಗಳಲು ತಾಪತ್ರಯುಪಶಮನ 4 ಯೋಗಿ ಅಕ್ಷೋಭ್ಯತೀರ್ಥರ ಕರಕಮಲಸಂಜಾತ | ಭಾಗವತರ ಸುಪ್ರೇಮ || ಕಾಗಿಣಿ ತೀರದ ಮಳಖೇಡ ನಿವಾಸಾ | ಶ್ರೀ ಗುರು ವಿಜಯವಿಠ್ಠಲ ಸೇವಕ ಭಕ್ತಾ 5
--------------
ವಿಜಯದಾಸ
ಪಾದುಕವೇ ಗುರು ಪಾದುಕವೇ | ಪಾದುಕವೇ ಗತಿ ದಾಯಕವೇ ಪ ಕಲ್ಪತರು ಬೇಡಿದಲ್ಪವ ಕೊಡುವದು | ಕಲ್ಪಿಸದೀವುದ ಕಲ್ಪಿತ ಫಲಗಳ 1 ದಾರುಶಿಲೆಯ ವಂದವಾರಿಸ ಲರಿಯದು | ತೋರುವಫಾದ್ರಿ ವಿದಾರಿಸಿ ನೂಕುವಾ 2 ತಂದೆ ಮಹೀಪತಿ ದ್ವಂದ್ವ ಪಾದಕ ಹೊಂದಿ | ವಂದ್ಯ ಸರ್ವರಿಗಾಗಿ ನಂದನ ಸಲಹುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು