ಒಟ್ಟು 11537 ಕಡೆಗಳಲ್ಲಿ , 136 ದಾಸರು , 5740 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಜಯ ಗುರು ಕರಜಾತ | ಮೋಹನ್ನರಾಯಾ ಪ ಪಾದ ರಜಕಾಗಿ | ಭಜಿಪೆ ತವ ಚರಣಾ ಅ.ಪ. ಸುಖತೀರ್ಥ ಸಿದ್ಧಾಂತ | ಪ್ರಾಕೃತದಿ ರಚಿಸಿ ಅಜಭೃಕುಟ ಸಂಜಾತ | ಸುರಮುಖರು ಹರಿಪದಕೇ |ಮುಕುಟಗಳ ಚಾಚಿ ಸದ್ | ಭಕುತಿ ಬೇಡುವರೆಂಬಉಕುತಿ ತರತಮ ಪೇಳಿ | ಮುಕುತಿ ಪಥತೋರ್ದ 1 ಗುರು ಚರಣ ಸರಸಿಜ | ದ್ವಯಕೆರಗಿಬಿನ್ನವಿಸಿ |ಶರಣಜನ ಸಂತತಿಯ | ನೆರೆ ಪೊರೆಯಲೂ |ವರಅಭಯದಿಂ ಚಿನ್ನಿ | ವರದ ಕುಲಸ್ಥಿರ ಮಾಡ್ದಪರಿಸರ ಕುಲೋತ್ಪನ್ನ | ಪೊರೆಯೊ ಮೋಹನ್ನಾ 2 ಭವ ಕಾಯ ಬಳಲಿಹುದೂ |ಶ್ರೀಯರಸ ನಮ್ಮ ಗುರು | ಗೋವಿಂದ ವಿಠಲಪದಪ್ರೀಯದಲಿ ತೋರಯ್ಯ | ಜೀಯದಮ್ಮಯ್ಯಾ 3
--------------
ಗುರುಗೋವಿಂದವಿಠಲರು
ವಿಜಯ ಗುರು ಜಯ ಜಯವು ನಿಮ್ಮಪದಕೇ ಪ ಪಾದ ಅಬುಜ ನಿಜ ಮಧುಪಾ ಅ.ಪ. ಮೋದ ಪಡಿಸಿದೆಯೋ 1 ಪತಿ ಹರಿಯಂಘ್ರಿಜಡಜದಲಿ ಕಡು ಭಕುತಿ | ದೃಢಮಾಡಿ ಪೊರೆಯೊ 2 ಪಾದ ವಾರಾಶಿಜವನೇ ತೋರಿ | ಸಲಹಯ್ಯ ಕರುಣೀ 3
--------------
ಗುರುಗೋವಿಂದವಿಠಲರು
ವಿಜಯ ಗುರು ತವಪಾದರಜವ ಕರುಣಿಸಿ ಎನಗೆ ಭುಜಗಶಯನನ ಧ್ಯಾನ ಭಜನೆ ನೀಡುವುದು ಪ. ತವ ಶಿಷ್ಯವಂಶ ಸಂಜಾತಳೆನ್ನುತಲಿ ಬಹು ತವಕದಲಿ ಕರುಣಾರ್ದ ದೃಷ್ಟಿಯಿಂದ ತವ ಸೇವೆ ಎನಗಿತ್ತು ತವ ಕೀರ್ತನೆಯ ನುಡಿಸಿ ಮೂರ್ತಿ ತೋರೆನ್ನ ಭವತಾಪ ಹರಿಸಯ್ಯ 1 ನಿನ್ನ ಮಹಿಮೆಯ ಗುಟ್ಟು ವರ್ಣಿಪರು ಯಾರಿನ್ನು ನಿನ್ನ ಚರ್ಯೆಯ ಚರಿತೆ ಬರೆದವರ್ಯಾರೊ ನಿನ್ನ ನಿಜ ಸಂಕಲ್ಪ ಇನ್ನು ಅರಿಯುವರುಂಟೆ ಬನ್ನ ಭವ ಉಂಟೆ 2 ಆ ದೇವಮುನಿ ಆಜ್ಞೆ ಮೋದದಲಿ ಸ್ವೀಕರಿಸಿ ಪಾದನ್ಯೂನತೆ ಕವನ ಪೂರ್ಣಗೊಳಿಸಿ ವೇದಶಾಸ್ತ್ರಗಳರ್ಥ ಸುಲಭದಲಿ ತಿಳಿಸುತಲಿ ಹಾದಿ ತೋರಿದೆ ಶಿಷ್ಯರಾದ ಸುಜನರಿಗೆ 3 ಸತ್ಕರ್ಮ ಫಲಗಳನು ನಿತ್ಯದೊಳಗರ್ಪಿಸಲು ಉತ್ತಮನು ಆರೆಂಬ ಚಿತ್ತದಳಲ ಮುಕ್ತಿಯೋಗ್ಯರಿಗೆ ಬಹು ಯುಕ್ತಿಯಿಂದಲಿ ತೋರಿ ಉತ್ತಮನು ಹರಿಯೆಂದು ಶಕ್ತಿಯಿಂ ಸ್ಥಾಪಿಸಿದ 4 ವೈಕುಂಠಪುರದೊಳಗೆ ಶ್ರೀ ಕರನ ವಕ್ಷಕ್ಕೆ ಸೋಕಿಸಿದೆ ಚರಣವನು ಜೋಕೆಯಿಂದ ಈ ಕಾರ್ಯಕಾರಣವ ನಾ ಕೇಳಿ ನುಡಿವಂಥ ವಾಕು ಲಾಲಿಸುತ ವಿವೇಕ ಮತಿ ಕರುಣಿಪುದು 5 ಆ ಕಮಲನಾಭನಾ ಹೃದಯ ಕರುಣಾಮೃತವು ಸೋಕಿ ತುಂಬಿಹುದು ತವ ಚರಣ ಕಮಲದಲಿ ನಾ ಕೇಳ ಬಂದೆನಾ ಕರುಣಾಮೃತದ ಕಣವ ಯಾಕೆ ಮರೆಮುಚ್ಚಿನ್ನು ನೀ ಕೊಡೈ ತವಕದಲಿ 6 ಪಾದ ರೂಢಿಗೊಡೆಯಗೆ ಲಕುಮಿ ಓಡಿದಳು ಕರವೀರಪುರಕೆ ಸ್ವಾಮಿ ಬೇಡಾಗೆ ವೈಕುಂಠ ನೋಡಿ ಆನಂದಾದ್ರಿ ಮಾಡಿದನು ಮಂದಿರವ ಕೂಡಿ ಪದ್ಮಿನಿಯ 7 ನೋಡಿ ವೈಕುಂಠದೊಳು ನಾಡಿಗೊಡೆಯನ ಚರ್ಯ ರೂಢಿಯೊಳು ಜನಿಸಿ ಭೂಸುರವಂಶದಿ ದುರಿತ ಈಡಾಡಿ ಹರಿದಾಸ್ಯವನು ಬೇಡಿ ಬಯಸುತ ಪೊಂದಿ ನಾಡಿನೊಳು ಮೆರೆದೆ 8 ಪ್ರತಿವರ್ಷ ಬಿಡದೆ ತಿರುಪತಿ ಯಾತ್ರೆ ಭಕ್ತಿಯಲಿ ಪತಿತಪಾವನನ ಓಲೈಸಿ ಮೆರೆದೆ ಕ್ಷಿತಿಯಕ್ಷೇತ್ರ ಅಪ್ರತಿಮಹಿಮ ಸಂಚರಿಸಿ ಕ್ಷಿತಿಗೆ ತೋರಿದೆ ನಿನ್ನ ಮಹಿಮೆ ಜಾಲಗಳ 9 ಅಂಕಿತವದಲ್ಲದೆ ದಾಸತ್ವ ಸಿದ್ಧಿಸದು ಕಿಂಕರಗೆ ಅಂಕಿತವೆ ಕುರುಹು ಎಂದು ಅಂಕಿತವ ಪಡೆದು ಚಕ್ರಾಂಕಿತನ ಗುಣ ಮಹಿಮೆ ಶಂಕಿಸದೆ ಪೇಳ್ದೆ ತವ ಕಿಂಕರೋದ್ಧಾರಕನೆ 10 ನಿನ್ನ ಮಹಿಮಾದಿಗಳ ವರ್ಣಿಸಲು ಎನ್ನಳವೆ ಚನ್ನ ಗುರು ವಿಜಯವಿಠ್ಠಲನ ಪದಕಮಲ ಚನ್ನಾಗಿ ಕಂಡು ಹೃನ್ಮಂದಿರದಿ ಸತತದಲಿ ತನ್ಮಂತ್ರ ಕಿರಣವೆಮ್ಮಲ್ಲಿ ಬೀರಿದ ಕರುಣಿ 11 ವಿಕ್ರಮ ಕಾರ್ತೀಕ ಶುದ್ಧ ದಶವಿೂ ದಿವ್ಯ ಶುಕ್ರ ನಾಮರು ವಾರ ಶುಭದಿನದಿ ಇಂದು ಅಕ್ಕರದಿ ಕರಸಿಲ್ಲಿ ಉಕ್ಕಿಸಿದೆ ತವ ಸ್ತೋತ್ರ ಮಕ್ಕಳಂದದಿ ಪೊರೆವ ಅಕ್ಕರೆಯು ಉಂಟೊ 12 ಮಧ್ವರಾಯರ ಕುಲದಿ ಉದ್ಭವಿಸಿದಂಥ ಈ ಶುದ್ಧ ವೈಷ್ಣವ ಕುಲದಿ ಜನಿಸಿ ಬಂದೆ ಶುದ್ಧ ದಾಸತ್ವದ ಮುದ್ರಾಂಕಿತದ ರತ್ನ ಪಾದ ಕಂಡೆ 13 ಪಾಪಿ ಜನರುದ್ಧರಿಪ ಪಾವನಗಾತ್ರನೆ ಆ ಪಯೋಜಾಸನರ ತರತಮ್ಯವ ಸ್ಥಾಪಿಸಿದ ಮಹಿಮನೆ ಸದ್ಗುಣಾಂಬುಧಿ ನಿಲಯ ಗೋಪಾಲಕೃಷ್ಣವಿಠ್ಠಲನ ಪದಭೃಂಗ 14
--------------
ಅಂಬಾಬಾಯಿ
ವಿಜಯ ದಾಸರ ಭಜಿಸಿರೋ | ಸುಜನರೆಲ್ಲ ನೀವೂ ಪ ವಿಜಯ ದಾಸರ ಭಜಿಸೇ | ಕುಜನ ಮರ್ದನ ನಮ್ಮವಿಜಯ ವಿಠಲ ತಾನೇ | ನಿಜವ ತೋರುವ ಮನದೀ ಅ.ಪ. ಮುನ್ನ ಸುರಲೀಲಾ ನೆನಿಸಿ ತಾ |ಜನಿಸಿದ ತ್ರೇತಾಯುಗದಿ |ವನಧಿಜೆ ರಮಣ ಶ್ರೀ | ಹನುವ ಸೇವಿತನಾದಶ್ರೀನಿವಾಸನ ಚರಣ | ವನಜವ ಸೇವಿಸಿದಾ 1 ಸಕಲ ಸದ್ಗುಣ ಆಕರಾ |ನಿಖಿಲ ಲೋಕದ ಧಾರಕಾ |ಪಾಕಶಾಸನ ಪೂಜ್ಯ | ಗೋಕುಲರೊಡೆಯನನಿಕಂಪಾನೆನಿಸಿ ಜನಿಸಿ | ಕೃಷ್ಣನ್ನ ಪೂಜಿಸಿದ 2 ಸುರ ಪುರ ಮುನಿ ನಾರದಾ |ವರಕಲಿಯಲ್ಲಿ ಜನಿಸೇ |ತುರುಕರುವಾಗಿ ಅವರಾ | ಚರಣವ ಸೇವಿಸಿದಮರಳಿ ಅವರ ಪುತ್ರಾ | ಗುರುಮಧ್ವಪತಿ ಭೃಗುವಾ 3 ಪದಪಂಚ ಲಕ್ಷ ಗ್ರಂಥಕೇ |ಪಾದವೇ ನ್ಯೂನವಿರಲೂ | ಪದಪದ್ಯ ಸುಳ್ಹಾದಿಯಲಿ |ಪಾದ ಪೂರ್ತಿಯ ಮಾಡೆಮೋದದಲುದಿಸಿದಾ | ಬುಧನು ದಾಸಪ್ಪ ನೆನಿಸೀ 4 ಪರಮ ಕಾರುಣ್ಯ ಗುರುವೇ |ಕರವ ಪಿಡೀರಿ ಎನ್ನಾ |ಮರುತಾಂತಾರಾತ್ಮಾ ಗುರು | ಗೋವಿಂದ ವಿಠ್ಠಲನಚರಣವ ತೋರಿಸೀ | ಕರುಣದಿ ಪೋಷಿಸಿ5
--------------
ಗುರುಗೋವಿಂದವಿಠಲರು
ವಿಜಯ ಭೈರವಿ ತಾಯೆ ವಿಶ್ವೇಶಿ ಮಹಾಮಾಯೆ ಸ್ವಜನನೆಂದೆನ್ನ ಕಾಯೆ ಕುಜನ ಕೃತ್ಯಗಳನ್ನು ಕಾಲಿಂದಲೊರಸು ಕಂ- ಬುಜನೇತ್ರೆ ಕರುಣಾಸುಧೆಯ ನೀಡು ದಯಮಾಡು ಪ. ಪರಿ ಪರಿಯಲಿ ದೇಹ ಕರಗಿಸುತಿಹ ನಾನಾ ದುರಿತ ಕಾರಣವೇನೆಂದರಿಯದಲೇ ಮರುಗುತಲಿರೆಯಿಂದಿನಿರುಳ ಸ್ವಪ್ನದಿ ಬಂದು ಹರಿಯ ಚಿತ್ತದ ರೀತಿಯರುಪಿ ತ್ವರಿತದಿ 1 ಶರಣು ಜನ ಮಂಥಾರ ಶಾಶ್ವತ ತರಣಿ ಕೋಟಿ ಸಮಾನ ಭಾಸುರ ಚರಣ ಕಮಲಗಳನ್ನು ಶಿರದಲಿ ನಿರಪದಿಯೊಳಿಟ್ಟಿರವ ತೋರಿಸು 2 ಪಂಚ ವಿಂಶತಿ ತತ್ವ ಪರಿಭಾಸೆ ಪುರುಶಕ್ತಿ ಪಾಂಚ ಭೌತಿಕ ದೇಹ ಗತ ಬಾಧೆಯ ಕೊಂಚವಲ್ಲದೆ ಹರವಂಚವಾಗಿರುವೆ ವಿ- ರಿಂಚಿಯ ಜನನಿ ನಿಷ್ಕಿಂಚನ ಜನವಂದ್ಯೆ 3 ಪಾಂಚಜನ್ಯೋದಕವ ಸೇಚಿಸಿ ಪಂಚಕರಣಕೆ ಮಾರ್ಗ ಸೂಚಿಸಿ ಪಂಚವರ್ನದ ಶು ....... * 4
--------------
ತುಪಾಕಿ ವೆಂಕಟರಮಣಾಚಾರ್ಯ
ವಿಜಯ ರಾಯರ ಭಜಿಸದವ ನಿರ್ಭಾಗ್ಯ ಕಾಣೋ ಪ ಅಜಭವರಕಿಂತಧಿಕ ಗಜವರದ ಪರನೆಂದಾ ಅ.ಪ. ಋಷಿಗಳೆಲ್ಲರು ಕಲೆತು ಸತ್ರಯಾಗವ ಮಾಡೆಹೃಷಿಕೇಶ ಚತುರಾಸ್ಯ ಕೈಲಾಸ ವಾಸಾ |ಈಸು ಮೂರ್ತಿಗಳಲ್ಲಿ ಮಿಗಿಲಾರು ಎಂದೆನ್ನೆಸೂಸಿ ಮೂರ್ಲೋಕಗಳ ಶ್ರೀಶ ಪರನೆಂದಾ 1 ದೇವಮುನಿ ನರನಾಗಿ ಭುವಿಯಲ್ಲಿ ಜನಿಸುತಾದೇವದೇವನ ಸ್ತೋತ್ರ ಕವನವನೆ ಗೈದಾ |ಆವ ಲಕ್ಷವು ಪಂಚಕೆ ನ್ಯೂನ ಪಾದವ ಮಾಡ್ದದೇವ ಮುನಿ ಸುತ ಗುರು ಮಧ್ವಪತಿ ವಿಠಲಾ 2 ಜವನವರು ಕೊಂಡ್ಯೋಗೆ ಜವಪುರಿಗೆ ತನಯನಾಜವನೊಡನೆ ಶೆಣೆಶಾಡಿ ಹರಿಗೆ ಮೊರೆಯಿಡಲು |ಜೀವದಾನವ ಪೊಂದಿ ಚಿಪ್ಪಗಿರಿಗೆ ತೆರಳಲುಜೀವಂತ ನಾದನೈ ತನಯ ಮೋಹನ್ನಾ 3 ಪೂರ್ಣಬೋಧರ ಮತವ ಗಾನ ರೂಪದಿ ಪೇಳಿಪೂರ್ಣಗುಣ ಹರಿಯೆಂದು ಸ್ಥಾಪಿಸುತಲೀ |ಪೂರ್ಣ ಸಂಪ್ರೀತಿಯಲಿ ನೆಲೆಸಿ ಚಿಪಗಿರಿಯಲ್ಲಿಪೂರ್ಣನಂಘ್ರಿಯ ಭಜಿಸಿ ಭಕ್ತರನೆ ಪೊರೆದಾ 4 ಯುವ ಸಂವತ್ಸರದ ಸುಕಾರ್ತಿಕದ ಸಿತಪಕ್ಷಯಾದು ಗುರುದಿನ ದಶಮಿ ಮೊದಲ್ಯಾಮದಿ |ಪವನಾಂತರಾತ್ಮ ಗುರು ಗೋವಿಂದ ವಿಠ್ಠಲನಸ್ತವನದಿಂದಲಿ ಪೊರಟ ಹರಿಯ ಪುರಕಾಗಾ 5
--------------
ಗುರುಗೋವಿಂದವಿಠಲರು
ವಿಜಯದಾಸರ | ದಿವ್ಯ ವಿಜಯ ನೆನೆವರ ಪ ವಿಜಯಸಾರಥಿಯ ಮನದಿ ಭಜಿಪ ಸತ್ವರ ಅ.ಪ. ಆದಿದೇವನ | ಒಲುಮೆ ಸಾಧಿಸಿದನ ಮೋದ ಭರಿತನ 1 ಮನದಿ ಹರಿಯನು | ಸತತ ಕುಣಿಸಿ ನಲಿವನು ಅಮೃತ ಖಣಿ ವಿಶಿಷ್ಟನು 2 ಭಕ್ತಿಯುಕ್ತಿಯ | ಮಹಾವಿರಕ್ತಿ ಉಕ್ಕುತ ಭಕ್ತ ಜನರಿಗೆ ಬಿಂಬ ವ್ಯಕ್ತಿ ಮಾಡಿದ 3 ತುಂಬಿ ವೈಭವ ಕದಂಬ ಸಲಹುವ 4 ಭಾರತೀಪತಿ | ಇವರ ವೀರಸಾರಥಿ ಸಾರಿ ಭಜಿಪರ ಸಕಲ ಭಾರವಹಿಸುವ 5 ಅಪರೋಕ್ಷ ಕೊಡುವನು ತ್ರಕ್ಷವಲ್ಲಭಾ ಇವರ ದಕ್ಷರೆನಿಸಿಹ 6 ದಾಸರತ್ನನಾ | ದಯವ ಲೇಸು ಪಡೆಯಲು ಸೂಸಿ ಬರುವನು ಶ್ರೀ ಜಯೇಶವಿಠಲ 7
--------------
ಜಯೇಶವಿಠಲ
ವಿಜಯದಾಸರ ಭಜನೆ ಮಾಡಿರೊ |ವಿಜಯದಾಸರ ಭಜನೆ ಮಾಡಲುಅಜನ ಜನಕ ನಿಜನಿಗೊಲಿದುಕುಜನ ಸಂಗತಿ ತ್ಯಜನ ಮಾಡಿಸಿಸುಜನರ ಪಾದಾಂಬುಜದಲ್ಲಿಡುವ ಪ ಶುದ್ಧ ಮಂದರನ್ನ ಉದ್ಧಾರಾರ್ಥವಾಗಿಮಧ್ವರಾಯರ ಮತಾಬ್ಧಿಯೊಳು ಪುಟ್ಟಿಸಿದ್ಧಾಂತ ಸ್ಥಾಪಿಸಿ ಗೆದ್ದು ವಾದಿಗಳಹೆದ್ದೈವವೇ ಅನಿರುದ್ಧನು ಯೆಂದು ||ಪದ್ಧತಿಂದ ಪೇಳಿಸಿದಿ ವೈಷ್ಣವರನ್ನಶುದ್ಧಾತ್ಮರ ಮಾಳ್ಪ ಉದ್ಯೋಗದಿಂದಲಿಹದ್ದನ್ನೇರಿ ಬಪ್ಪ ಪದ್ದುಮನಾಭನ್ನಹೃದ್ದಯದೊಳಗಿಟ್ಟ ಸದ್ಗುರುರಾಯ 1 ಭೂಸುರಾಬ್ಧಿಗೆ ತಾರೇಶನಂತೊಪ್ಪುವಸಾಸಿರ ನಾಮದ ಶೇಷಗಿರಿ ಶ್ರೀ ನಿ-ವಾಸನ ಯಾತ್ರೆಯ ಲೇಸಾಗಿ ಮಾಡ್ಯೆತಿ ಸ- |ಹಾಸ ಸಂತೋಷದಿಂದಲೆ ||ವಾಸುದೇವನ ಮಾನಸದೊಳಿಟ್ಟು ದು-ರಾಶೆಯ ತೊರೆದು ಕ್ಲೇಶವ ಪಡದಲೆಮೀಸಲ ಪುಣ್ಯದ ರಾಶಿ ಘಳಿಸಿಕೇಶವನ ನಿಜ ದಾಸನೆಂದೆನಿಪ2 ಪಾದ ನಿತ್ಯ ಸಿರಿ ಮೋಹನ್ನ ವಿಠಲನೆಪರನೆಂದರುಹು ಮಾಡಿದ ಸುರ ತರುವಾದ 3
--------------
ಮೋಹನದಾಸರು
ವಿಜಯದಾಸರ ಸ್ತೋತ್ರ ವಿಜಯರಾಯರ ಪಾದಕಮಲ ಭಜಿಸಲಾಕ್ಷಣ ದಿ- |ಗ್ವಿಜಯ ಮಾಡಿ ಸುಜನರನ್ನು ಪೊರೆವನನುದಿನ ಪ ದಾಸಪ್ಪನೆಂಬ ನಾಮದಿಂದ ಕರೆಸುತ ಉದರ ಗೋಸುಗದಿ ಪರರ ಬಳಿಯ ಆಶ್ರಿಸುತ ||ಯೇಸುಪರಿಯ ಬಡತನವು ಸೋಸಿ ದಣಿವುತ |ಕ್ಲೇಶಗೊಂಡು ಸುಲಿಸಿಕೊಂಡು ಕಾಶಿಗ್ಹೋಗುತ 1 ನಿತ್ಯ ಬ್ಯಾಸರದಲೆ ವ್ರತಗಳು ಉಪವಾಸ ಮಾಡುತ ||ರಾಶಿ ರಾಶಿ ಜನರ ಕೂಡಿ ದೇಶ ಚರಿಸುತ ಮ್ಯಾಲೆಕಾಶಿ ಬಿಟ್ಟು ಸೇತು ರಾಮೇಶನ್ನ ಹುಡುಕುತ 2 ತಿರುಗಿ ತಿರುಗಿ ಚೀಕಲಾಪರಿಗೆ ಬಂದನು ಕಂಡುಗುರುತು ಹಿಡಿದು ಆ ಕ್ಷಣದಿ ಕರೆದು ವೈದ್ಯರು ||ಪರಮ ಸಂತೋಷದಿಂದ ಭರಿತರಾದರು ಮೈನೆರೆದ ಶೋಭನಾದಿಗಳನು ತ್ವರಿತ ಮಾಡ್ದರು 3 ನಿತ್ಯ ಸಂಸಾರದಲ್ಲಾಸಕ್ತರಾಗುತ ದೊಡ್ಡ ಹತ್ತು ಎಂಟು ಗ್ರಾಮವನ್ನು ವತ್ತಿ ಆಳುತಾ ||ಗುತ್ತಿಗೆಯ ಹೊತ್ತ ರೊಕ್ಕ ಮ್ಯಾಲೆ ಬೀಳುತ ಯಿನ್ನುಎತ್ತ ಸೇರಲೆಂದು ಭಾಗೀರಥಿಗೆ ಹೋಗುತ 4 ಕಾಶಿಯೊಳಗೆ ಮಲಗಿರಲು ಸ್ವಪ್ನ ಕಂಡರು ಪುರಂದರ-ದಾಸರೇವೆಂಬುದು ವ್ಯಾಸ ಕಾಶಿಗೊಯ್ದರು ||ಶ್ರೀಶನಿಂದಲಿವರಿಗೆ ಉಪದೇಶ ಕೊಡಿಸೋರು ವಿಜಯ ದಾಸರೆಂದು ಕರೆಸಿರೆನ್ನೆ ಎದ್ದು ಕುಳಿತರು 5 ಕನಸಿನೊಳಗೆ ದೇವರ ದರುಶನಾಗುತ ಶ್ರೀ-ಮನಸಿಜನ ಪಿತನ ದಯವು ಘನ ಘನಾಗುತ ||ಜಿನಸು ಜಿನಸು ಪದ ಸುಳಾದಿಗಳನು ಪೇಳುತ ಆಗನೆನಿಸಿದಾಕ್ಷಣದಲಿ ಮುಖದಿ ಕವಿತ ಹೊರಡುತಾ 6 ಮತ್ತೆ ಹೊರಟು ಆದವಾನಿ ಸ್ಥಳಕೆ ಬಂದರು ಏನುಹತ್ತು ಜನರಿಗೆ ಪೇಳಿದ ವಾಕ್ಯ ಸತ್ಯವೆಂದರು ||ಸುತ್ತು ಮುತ್ತು ನೂರಾರು ದಾಸರು ನೆರೆದರು ಆನಿಸತ್ತಿಗಿ ಪಲ್ಲಕ್ಕಿಯವರೆ ಶಿಷ್ಯರಾದರು 7 ಯಾತ್ರಿ ತೀರ್ಥಗಳನು ಬಹಳ ಚರಿಸಿ ನೋಡುತ ಸ-ತ್ಪಾತ್ರರಲ್ಲಿ ನೋಡಿ ಧರ್ಮಗಳನೆ ಮಾಡುತ ||ರಾತ್ರಿ ಹಗಲು ವಿಜಯ ವಿಠ್ಠಲನೆಂದು ಪಾಡುತ ಜನರಶ್ರೋತ್ರಿಯಿಂದ್ರಿಯಗಳ ಉದ್ಧಾರ ಮಾಡುತ 8 ಪೂರ್ತಿ ಜ್ಞಾನದಿಂದ ಕರ್ಮವೆಲ್ಲ ಕಡಿದರು ಸ-ತ್ಕೀರ್ತಿವಂತರಾಗಿ ಬಹಳ ಖ್ಯಾತಿ ಪಡೆದರು ||ಕಾರ್ತಿಕ ಶುದ್ಧ ದಶಮಿ ದಿವಸ ನಡೆದರು ಶ್ರೀಸತ್ಯರಮಣ ಕೇಶವ ವಿಠಲನ್ನ ಕಂಡರು9
--------------
ಕೇಶವವಿಠ್ಠಲರು
ವಿಜಯರಾಯರ ಚರಣ ನಿಜವಾಗಿ ನಂಬಲುಅಜನ ಪಿತನು ತಾನೆ ಒಲಿವಾ ಪ ದ್ವಿಜಕೇತನ ಗುಣವ್ರಜವ ಕೊಂಡಾಡುವಾಸುಜನ ಮಂದಾರನೀತ - ಪ್ರಖ್ಯಾತ ಅ.ಪ. ವಿ ಎಂದು ನುಡಿಯಲು ವಿಷಯ ಲಂಪಟ ದೂರಜ ಎಂದು ನುಡಿಯಲು ಜನನ ಹಾನಿಯ ಎಂದು ಕೊಂಡಾಡೆ ಯಮಭಟರು ಓಡುವರುರಾಯ ಎಂದೆನಲು ಹರಿಕಾವಾ - ವರವೀವಾ 1 ಇವರ ಸ್ಮರಣೆಯೆ ಸ್ನಾನ ಇವರ ಸ್ಮರಣೆಯೆ ಧ್ಯಾನಇವರ ಸ್ಮರಣೆಯೆ ಅಮೃತಪಾನಇವರ ಸ್ಮರಣೆಯ ಮಾಡೆ ಯುವತಿಗಕ್ಷಯವಿತ್ತತ್ರಿವಿಕ್ರಮನು ಮುಂದೆ ನಲಿವಾ - ಒಲಿವಾ 2 ವಾರಣಾಸಿಯ ಯಾತ್ರೆ ಮೂರು ಬಾರಿ ಮಾಡಿಮಾರಪಿತನೊಲುಮೆಯನು ಪಡೆದುಮೂರವತಾರದಾ ಮಧ್ವಮುನಿರಾಯರಾಚಾರು ಚರಣವನು ಭಜಿಪಾ - ಮುನಿಪಾ 3 ಪುರಂದರದಾಸರಾ ಪರಮಾನುಗ್ರಹ ಪಾತ್ರಗುರು ವಿಜಯರಾಯನೀತಾಸಿರಿ ವಿಜಯ ವಿಠಲನ್ನ ಶ್ರೀನಿವಾಸಾರ್ಯರುಹರಿಯಾಜ್ಞೆಯಿಂದ ಕೊಟ್ಟರೂ - ದಿಟ್ಟರೂ 4 ದಾನಧರ್ಮದಿ ಮಹಾ ಔದಾರ್ಯಗುಣದ ಶೌರ್ಯಶ್ರೀನಿವಾಸನ ಪ್ರೇಮಕುಮಾರಾಮಾನವೀ ಸೀಮೆ ಚೀಕನಪರಿ ನಿವಾಸ ಮೋ-ಹನ ವಿಠಲನ್ನ ನಿಜದಾಸಾ - ಉಲ್ಲಾಸಾ 5
--------------
ಮೋಹನದಾಸರು
ವಿಜಯವಿಠ್ಠಲ ನಾಮ ಭಜಿಸಿದಾ ಮಾನವಗೆ ಸತತ ಸಂಪದವಕ್ಕು ಪ ಕಾಯ ಶುಚಿಯಾಗುವದು ಕಠಿನತನ ಪೋಗುವದು ಆಯು ಹೆಚ್ಚುವುದು ನಿಯೋಗಿ ಯಾಹಾ ನಾಯಿ ಮೊದಲಾದ ಪ್ರಾರಬ್ಧ ಜನುಮಗಳಿರಲು ಬಾಯಿಲಿಂದಾಕ್ಷಣ ತೀರಿ ಪೋಪವು ಕೇಳಿ 1 ದ್ವೇಷಿಗಳು ಎಲ್ಲ ಬಾಂಧವರಾಗಿ ಇಪ್ಪರು ದ್ವೇಷ ಪುಟ್ಟದು ತನಗೇತರ ಮೇಲೆ ದೇಶ ಮಧ್ಯದಲಿ ತಾನೆ ಎಲ್ಲಿ ಇದ್ದರೂ ಕೋಶಾಧಿಪತಿಯಾಗಿ ಸಂಚರಿಸುತಿಪ್ಪರು2 ಹೀನ ವಿಷಯಂಗಳಿಗೆ ಅವನ ಮನವೆರಗಿದರೆ ಕಾಣಿಸುವನು ತಾನೆ ಮುಂದೊಲಿದು ಏನು ಹೇಳಲಿ ಹರಿಯ ಅನುಕಂಪನಾತನಕೆ ಕಾಲ ಕಡೆಗಾಣನು 3 ದೇವಾದಿ ಮುನಿತತಿಯ ಮೊದಲಾದವರು ನೆನೆದು ಆವಾವ ಸೌಖ್ಯದಲಿ ಇಪ್ಪರದಕೋ ಭಾವದಲಿ ತಿಳಿದು ಭಕುತಿಯ ಮಾಡಿರೋ ಜನರು ಕಾವುತಲಿಪ್ಪ ಸರ್ವಾಶ್ರಯನಾಗಿ ಹರಿ4 ಕಂಡವಗೆ ದೊರಕದು ಈ ನಾಮ ಜಪಿಸಿದರು ಕಂಡವಗೆ ಬಲು ಸುಲಭ ಭಯವೆಯಿಲ್ಲಾ ಮಂಡಲವ ಚರಿಸಿ ನಾನಾ ವ್ರತ ಮಾಡದಿರಿ ಕೊಂಡಾಡು ವಿಜಯವಿಠ್ಠಲನ ಆಸರ ಸೇರಿ5
--------------
ವಿಜಯದಾಸ
ವಿಜಯವಿಠ್ಠಲ ಶ್ರೀ ವಿಜಯವಿಠ್ಠಲ ಪ ವನಚರ ನಗಧರ ಅವನಿಯ ಉದ್ಧಾರ ಕಾನನ ವೇಗದಿ ಭು- ವನ ದಾನದ ನೆವನನು ಮಾಡಿ ಗಂಗೆಯ ಹ - ವಣದಿ ಪಡದೋ ಶ್ರೀ ವಿಜಯವಿಠ್ಠಲಾ 1 ಛಲದಿಂದ ಕುಲ ಕೋಲಾಹಲ ಮಾಡಿಸಿ ನೀ ತರಿದೆ ಬಾಲೆಯರ ಬಾಲರ ಬಿಡದೆ ಸುಲಭದಿ ಕರ್ಣಗೆ ಒಲಿದು ಪೇಳಿದೆ ಆ ಸುಲಲಿತಾ ಭಾರ್ಗವ ವಿಜಯವಿಠ್ಠಲ2 ಶತಮಖರಿಪು ಲೋಕಪಿತನೊರವಿನಿಂದಲಿ ಖತಿ ಸಕಲರಿಗೆ ನೀವು ತರಿದಿರಲು ಪತಿತಪಾವನ ರಾಮ ಅತಿ ವೇಗ ದನುಜನ ಹತವ ಮಾಡಿದೆಯೊ ಶ್ರೀ ವಿಜಯವಿಠ್ಠಲ3 ಬಕಮುಖ ದನುಜರ ಹಕ್ಕಲಗೊಳಿಸಿ ಬಲು ಯುಕುತಿಯಿಂದಲಿ ಭಕುತರ ಪೊರದೆ ವಿಕಸಿತ ಕಮಲನಯನ ಕಂಜನಾಭನೆ ಸಕಲ ಸುರರ ಪಾಲ ವಿಜಯವಿಠ್ಠಲಾ 4 ರಕ್ಕಸ ಮರ್ದನ ದಿಕ್ಕು ಮೋಹಿಪ ಕೃಷ್ಣ ರುಕ್ಮಿಣಿ ಪತಿಯಾದಾ ಚಕ್ರಪಾಣಿ ಉಕ್ಕಿದ ಮಗಧನ ಸೊಕ್ಕು ಮುರಿದು ಕಪಿ ರೆಕ್ಕ ಆಳ್ವನಿಗೆ ಒಲಿದೆ ವಿಜಯವಿಠ್ಠಲಾ 5 ಘನವಾದ ವಿಶ್ವರೂಪವ ತೋರಿದೆ ದಿನಮಣಿ ಕೋಟಿ ಅಧಿಕ ಕಾಂತಿ ನರಹರಿ ವನಜ ಸಂಭವನಯ್ಯ ವಿಜಯವಿಠ್ಠಲಾ 6 ವನಿತೆಯರ ವ್ರತ ಭಂಗವ ಮಾಡಿ ದಾನವರ ಮೋಹಿಸಿದೆಯೊ ಪವನನೊಡಿಯಾ ಉನುಮತ ಜನ ಕುಲ ಸನುಮತ ಶಾಸ್ತ್ರವ ವ- ದನದಲಿ ಮೆದ್ದಿಯೊ ವಿಜಯವಿಠ್ಠಲಾ 7 ರಜೋತಮ ಗುಣವನು ಭುಂಜಿಸುತ ವ್ರಜ ಭೂಮಿ ನಿಜವಾಗಿ ವ್ಯಾಪಿಸಿರೆ ಸುಜನಪಾಲ ನೀನು ವದಗಿ ವಾಜಿಯನೇರಿ ಭಜನಗೈಸಿದ ವೇಗ ವಿಜಯವಿಠ್ಠಲಾ 8 ಗೋಕುಲದಲಿ ಅನೇಕ ಲೀಲೆಯ ತೋರಿ ಬೇಕಾದ ವರ ಪುಂಡರೀಕಗಿತ್ತೆ ಸಾಕಾರ ಗುಣ ಪೂರ್ಣ ವೇಣುಗೋಪಾಲ ವಿ ವೇಕವ ಕೊಟ್ಟ ಕಾಯನ್ನ ವಿಜಯವಿಠ್ಠಲಾ9
--------------
ವಿಜಯದಾಸ
ವಿಠಲ ಓಡಿ ಬಾರೊ ತೊಟ್ಟಿಲನೇರೊ ಪುಟ್ಟ ಕಮಲದಂಥ ಬಟ್ಟ ಮುಖವ ತೋರೊ ಪ. ಜಟ್ಟಿಯಂದದಿ ಭುಜ ತಟ್ಟಿ ಹುಂಕರಿಸುತ ಅ- ರಿಷ್ಟ ವೃಷಭನನ್ನು ಮೆಟ್ಟಿ ಮಡುಹಿದಂಥ 1 ಹೇಷಿಕ ಭೀಷಣ ಕೇಶಿಯಂಬಸುರನ ಘಾಸಿಮಾಡಿದ ತೋಳ ಬೀಸುತ ಭರದಿಂದ 2 ಮಂದಹಾಸದಿ ಶರದಿಂದು ಕಾಂತಿಯ ಗೆಲ್ವ ಸುಂದರ ಮುಖ ಪೂರ್ಣಾನಂದ ಗೋಪಿಯ ತಂದ 3 ಮೀಸಲ ನೊರೆಹಾಲ ಕಾಸಿ ಸಕ್ಕರೆ ಕೂಡಿ ವಾಸ ಚೂರ್ಣವನಿಕ್ಕಿ ಶ್ರೀಶನಿನ್ನೊಶಕೀವೆ 4 ನಿತ್ಯ ಸುಖಾಂಬುಧೆ ನಿರವಧಿ ಫಲದ ಸ- ರ್ವೋತ್ತಮ ಶೇಷಾದ್ರಿ ಶಿಖರೀಶ ಶ್ರೀನಿವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
ವಿಠಲ ನಮೋ ವಿಠಲ ಮುಟ್ಟಿಭಜಿಪ ದೀನನಿಷ್ಟಾರ್ಥ ಪಾಲಿಸು ಪ ಹೇಸಿಪ್ರಪಂಚದಿ ನಿಂದು ಮಹ ಕ್ಲೇಶಪಂಚಕದಲಿ ಬೆಂದು ಕೆಟ್ಟ ವಾಸನತ್ರಯದಿಂದ ನೊಂದು ಬಲು ಘಾಸಿಯಾದೆ ದಯಾಸಿಂಧು ಆಹ ದೋಷದೂರನೆ ಎನ್ನ ದೋಷನಾಶನ ಗೈದು ಪೋಷಿಸು ಅನುಮೇಶ ದಾಸನೊಳ್ದಯವಾಗಿ 1 ಮರವೆಯೆಂಬುವ ಕವಚ ತೊಟ್ಟು ಬಲು ದುರುಳತನಕೆ ಮನಗೊಟ್ಟು ಮಹ ದರಿವಿನ ಅರಮನೆ ಸುಟ್ಟು ಆಹ ಪರಮದುರಿತದಿ ಬಿದ್ದು ಮರುಳನಾಗಿ ನಿಮ್ಮ ಚರಣಸರೋಜಕ್ಕೆ ಮರೆಹೊಕ್ಕೆ ಕರುಣಿಸು 2 ಹೊಂದಿ ಭಜಿಪೆ ನಿನ್ನ ಬೇಡಿ ಎನ್ನ ಮಂದಮತಿಯ ಕಡೆಮಾಡಿ ನಿಜಾ ನಂದ ಸುಜ್ಞಾನಪದ ನೀಡಿ ಭವ ಬಂಧ ಸಂಕೋಲೆ ಗಡ ಕಡಿ ಆಹ ಸಿಂಧುನಿಲಯ ಬೇಗ ದಂದುಗ ಪರಿಹರಿಸಿ ಕಂದನ್ನ ಉದ್ಧರಿಸು ತಂದೆ ಶ್ರೀರಾಮಯ್ಯ 3
--------------
ರಾಮದಾಸರು
ವಿಠಲಾ ಎನ್ನಿರೊ ಸುಜನರೆಲ್ಲಾ ಪ ವಿಠಲಾ ಎಂದಾರೆ ಸುಟ್ಟುಹೋಗೊದು ಪಾಪ ಅ.ಪ ಪ್ರಾತಃ ಕಾಲದೊಳು ಸ್ನಾನಾದಿಕರ್ಮ ಮುಗಿಸೀವಿಠಲಾ.... ವಾತದೇವನ ದ್ವಾರ ಅರ್ಪಿಸುತ್ತಾ ನೀವು | ವಿಠಲಾ....1 ಗುರುಗಳಲ್ಲಿಗೆ ಪೋಗಿ ವಂದಿಸಿ ಮೆಲ್ಲಾನೆ ವಿಠಲಾ.... ಮರÀುತಮತದ ಸಚ್ಛಾಸ್ತ್ರಗಳ ನೋಡುತಾ ವಿಠಲಾ.... 2 ಪಂಚÀಭೇದ ಪ್ರಾಪಂಚ ಸರ್ವವು ತಿಳಿದು ವಿಠಲಾ... ಪಂಚಬಾಣನಯ್ಯ ಪಂಚರೂಪದಿ ತೋರುವಾ ವಿಠಲಾ.... 3 ಪ್ರಾರಂಭಮಾಡಿ ಪರಮೇಷ್ಠಿ ಪರಿಯಂತ ವಿಠಲಾ.... ಶ್ರೀಪ್ರಣವ ಪ್ರತಿಪಾದ್ಯಗಿವರು ಪ್ರತಿಬಿಂಬರೆಂದು ವಿಠಲಾ.... 4ಮಾತುಮಾತುಗಳೆಲ್ಲಾ ಶ್ರೀಹರಿಸ್ತೋತ್ರವೆಂದು ವಿಠಲಾ.... ಆತುಮಾಂತಾರಾತ್ಮನೆಂದು ಕೂಗುತ ಒಮ್ಮೆ ವಿಠಲಾ.... 5 ತೀರ್ಥಕ್ಷೇತ್ರಗಳಿಗೆ ಪೋಗಿ ಬರುವಾಗ ವಿಠಲಾ.... ಪಾರ್ಥಸಖನ ಪ್ರೇರಣೆಯಿಂದ ಮಾಡಿದೆವೆಂದು ವಿಠಲಾ.... 6 ನಂಬೀದ ಜನರೀಗೆ ಬೆಂಬಲನಾಗುವ ವಿಠಲಾ.... ಸಂಭ್ರಮದಿಂದಾ ಸಂರಕ್ಷಿಸುವನೆ ಇವನೂ ವಿಠಲಾ.... 7 ಕಂಚಿಕಾಳಾಹಸ್ತಿ ಶ್ರೀರಂU ಮೊದಲಾಗಿರುವ ವಿಠಲಾ... ವಂಚನೆಯಿಲ್ಲಾದೆ ಭಜಿಸಿದವರ ಪೊರೆವಾ ವಿಠಲಾ.... 8 ಪಂಚಪ್ರಾಣಾರಲಿನಿಂತು ಕಾರ್ಯಮಾಳ್ಪ ವಿಠಲಾ.... ಕರ್ಮ ಇವನಿಂದ ನಾಶವೆಂದು ವಿಠಲಾ.... 9 ಊಧ್ರ್ವಪುಂಡ್ರಗಳು ದ್ವಾದಶನಾಮ ಇಡುವಾಗ ವಿಠಲಾ.... ಶುದ್ಧನಾಗೀ ಶುಭ್ರಹೊಸ ವಸ್ತ್ರ ಹೊದುವಾಗ ವಿಠಲಾ..... 10 ಪಂಚಮುದ್ರೆಗಳಲಿ ಪಂಚರೂಪದಿ ಇರುವ ವಿಠಲಾ... ನಿರ್ವಂಚನಾಗಿ ಧರಿಸಿದವರಿಗೊಲಿವಾ ವಿಠಲಾ... 11 ಪರಿಯಂತ ವಿಠಲಾ... ವೇದೈಕವೇದ್ಯ ವಿಶ್ವಾಮೂರ್ತಿ ಕಾರ್ಯಗಳೆಂದು ವಿಠಲಾ.... 12 ಚೇತನಾ ಚೇತನ ಜಡದೊಳಗೆ ನೀವು ವಿಠಲಾ... ಪ್ರೀತಿಯಿಂದಾಲಿ ಪೂಜೆಮಾಡಿದವರಾಗೆ ಒಲಿವ ವಿಠಲಾ.... 13 ಪರಿ ಚಿಂತಿಸಿ ವಿಠಲಾ... ಶಾರೀರದೊಳಿÀರುವ ಪ್ರಾಜ್ಞನಲಿ ಕೂಡಿಸಿ ವಿಠಲಾ.... 14 ಮಧ್ವಾಂತರ್ಯಾಮಿಯಾಗಿ ಉಡುಪಿಯಲ್ಲಿ ನಿಂತ ವಿಠಲಾ... ಕರ್ತು ವಿಠಲಾ..... 15
--------------
ಮುದ್ದುಮೋಹನವಿಠಲದಾಸರು