ಒಟ್ಟು 1469 ಕಡೆಗಳಲ್ಲಿ , 100 ದಾಸರು , 1093 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೋರಿಸೊ ತವರೂಪ ತೋಯಜ ನೇತ್ರ ಪ ಮಾರಜನಕ ಕರುಣಾರಸಪೂರ್ಣನೆ ನಾರಾಯಣ ಭವತಾರಕ ಮಮ ಸ್ವಾಮಿ ಅ.ಪ. ದಶರಥ ನಂದನ ವಸುಮತಿ ರಮಣ ತ್ರಿ ದಶವಂದಿತ ಚರಣ ಪಶುಪತಿಧನುಭೇದನ ವಸುಧಾಸುತೆರಮಣ ಋಷಿಪತ್ನಿ ಶಾಪಹರಣ ಅಸಮಾ ವಲ್ಕಲ ಚೀರವಸನಾ ಭೂಷಣಸ್ವಾಮಿ ಬಿಸಜಾಪ್ತನ ಸುತಗೊಲಿದವನಗ್ರಜ ನಸುವನು ತೊಲಗಿಸಿ ಅಸುನಾಥನ ಸುತ ಗೊಸೆದು ಬಿಸಜಭವ ಪದವಿಯ ಕರುಣಿಸಿ ವಿಷಧಿಯ ಬಂಧಿಸಿದಸಮ ಸಮರ್ಥ 1 ದಿನಮಣಿವಂಶ ಮಸ್ತಕಮಣಿಯೆಂದೆನಿಸಿ ಮುನಿ ಕೌಶಿಕನ ಯಜ್ಞಫಲವಾಗಿ ರಕ್ಷಿಸಿ ಅನಲಾಕ್ಷಧನು ಮುರಿದು ಮುನಿಪತ್ನಿಯನು ಪೊರೆದು ಜನಕಸುತೆಯ ಕರವನು ಪಿಡಿದ ಧೀರ ಜನಕನಾಜ್ಞೆಯಿಂ ವನವ ಪ್ರವೇಶಿಸಿ ಇನಸುತಗೊಲಿಯುತ ಅನಿಲಜನಿಂದಲಿ ಘನಸೇವೆಯ ಕೊಂಡನಿಮಿಷ ವೈರಿಯ ಹನನಗೈದ ಹೇ ಅನುಪಮ ಶೂರ2 ಲೀಲಾಮಾನುಷರೂಪ ಭೂಲಲನಾಧಿಪ ಫಾಲಾಕ್ಷವಿನುತ ವಿಶಾಲಸುಕೀರ್ತಿಯು ತಾ ಆಲಸ್ಯವಿಲ್ಲದೆ ವಿಶಾಲವನವ ಪೊಕ್ಕು ವಾಲಿಯ ಸಂಹರಿಸಿ ಪಾಲಿಸಿ ಸುಗ್ರೀವನ ಲೋಲಲೋಚನೆಯಿಹ ಮೂಲವ ತಿಳಿದು ಬಂ ದ್ಹೇಳಿದ ಪವನಜಗಾಲಿಂಗನವಿತ್ತು ಖೂಳ ದಶಾಸ್ಯನ ಕಾಲನೆಂದೆನಿಸಿದ ಶ್ರೀಲೋಲನೆ ಶ್ರೀ ಕರಿಗಿರೀಶನೆ3
--------------
ವರಾವಾಣಿರಾಮರಾಯದಾಸರು
ತ್ರಾಹಿತ್ರಾಹಿ ಮಂತ್ರಾಲಯನಿಲಯ ಪ ತ್ರಾಹಿತ್ರಾಹಿ ಮಂತ್ರಾಲಯ ಗುರುವೆ ಸೂತ್ರನಪಿತಕೃಪಾಪಾತ್ರ ನೀನಹುದೊ1 ಧ್ಯಾನ ಮೌನ ಸುಜ್ಞಾನವಿಲ್ಲದಿಹ ದೀನ ಜನರುದ್ಧಾರ ಗಂಭೀರ 2 ವಸುಧೆಯೊಳಗೆ ದಶಪ್ರಮತಿ ಸುಶಾಸ್ತ್ರವ ಪ್ರಸರಿಸಿ ತೋರಿದ ಅಸಮಮಹಿಮನೆ3 ಮೂಕ ಬಧಿರ ಅಂಧಾದಿಗಳ ಕುಂದುಗಳ ವ್ಯಾಕುಲ ಹರಿಪ ಕೃಪಾಕರ ಮೂರ್ತೇ 4 ಕರುಣಶರಧಿ ಸಿರಿರಮಣನ ಭಕುತಾಗ್ರಣಿ ಸುಗುಣಗಣಾಭರಣಕೆಣೆಯೆ 5 ಬೇಡಿದಿಷ್ಟವ ನೀಡಿ ಕಾಪಾಡುವೆ ಈಡುಗಾಣೆ ನಿನಗೀ ನಾಡೊಳು ಇನ್ನು 6 ಇಂದು ಮುಂದು ಎನ್ನ ಕುಂದುಗಳೆಣಿಸದೆ ಕಂದನೆಂದು ಎನ್ನ ಮುಂದಕೆ ಕರೆಯೊ 7 ಕ್ಷೋಣಿಯೊಳಗೆ ನಿನಗಾರೆಣೆಕಾಣೆನೊ ವೀಣೆವೆಂಕಟ ನೀ ಸಂಕಟ ಹರಿಸೊ 8 ಪಾಲಿಸಯ್ಯ ಪ್ರಹ್ಲಾದ ವ್ಯಾಸ ಭೂ ನಲ್ಲ ನೀನಹುದೋ ಬಾಹ್ಲೀಕ ಪ್ರಭುವೇ 9 ಬಗೆ ಬಗೆ ಪಾಪೌಘಗಳನು ಕಳೆಯುವ ರಘುಪತಿಕಿಂಕರ ಶ್ರೀ ರಾಘವೇಂದ್ರ 10 ಪವನಾಂತರಾತ್ಮ ಶ್ರೀ ವೇಂಕಟೇಶ ಪದ ಕುವಲಯಕೆ ನೀ ಕುಮುದಬಾಂಧವ 11 ಶಂಕುಕರ್ಣ ಲಂಕೇಶನನುಜ ಶ್ರೀರಾಮ- ಕಿಂಕರನಕಳಂಕಮೂರುತೇ12 ಮರುತಮತಾಬ್ಧಿಯ ಸಾರಸುಧೆಯನಿತ್ತೆ ಉರಗಾದ್ರಿವಾಸವಿಠಲನ ದೂತ13
--------------
ಉರಗಾದ್ರಿವಾಸವಿಠಲದಾಸರು
ದಯದೊಲವಿನ ಮೆಚ್ಚು ಧ್ರುವ ಮಾಡದ ಮಾಡಿಸಿತು ನೋಡಿದರೇನ ತಾಂ ನೋಡಿಸಿತು ಕೂಡದ ಕೂಡಿಸಿತು ಬಿಡದಾಗಿಹ್ಯದ ಬಿಡಿಸಿತು 1 ತನ್ನ ತಾನರಸಿತು ಇನ್ನೊಂದರನೆ ಮರೆಸಿತು ಭಿನ್ನ ಭೇದ್ಹರಿಸಿತು ಚಿನ್ಮಯದ ಸುಖ ಬೆರೆಸಿತು 2 ಕಾಣದ ಕಾಣಿಸಿತು ಉಣದೂಟನೆÀ ತಾ ಉಣಿಸಿತು ಅನುಮಾನಗಳಿಸಿತು ಘನ ಮಹಿಪತಿಗೆ ನುಡಿಸಿತು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದಾರ ಕಂದನಮ್ಮ ಕೇರಿಗೆ ಬಂದು ಗಾರುಮಾಡುವ ನೋಡಲಾರೆ ಗೋಪ್ಯಮ್ಮ ಈರೇಳು ಲೋಕದೊಡೆಯನೊ ದಾರಮ್ಮ ಪ ಪಿಡಿದಿದ್ದ ಕೊಳಲೂದುವ ಬಾಯಲಿ ಬೆಣ್ಣೆ ಕಡಗೋಲ ಪಿಡಿದಿದ್ದ ಬೆಡಗು ನೋಡಮ್ಮ ಬಿಡಿಮುತ್ತಿನ ಉಡಿದಾರವು ಉಡಿಗಂಟೆ ಮುಡಿದ ಮಲ್ಲಿಗೆ ಕುಸುಮಗಳು ನೋಡಮ್ಮ ಕುಡಿಹುಬ್ಬು ಕಡೆಗಣ್ಣನೋಟದ ಚೆಲುವ ತಾ ಹುಡುಗರಂತಾಡುವ ತುಡುಗ ತಾನಮ್ಮ 1 ಕಮಲ ನಕ್ಷತ್ರದ ಪತಿಯಂತೆ ಇಪ್ಪೊ ವಜ್ರದ ಪದಕಗಳ ನೋಡಮ್ಮ ಅರ್ಕನಂತಿರಲತಿ ಕೋಮಲಪಾದಕೆ ಶುಕ್ಲಗೆ ಮಿಗಿಲಾದ ಗುರು ಕೇಳಮ್ಮ ಕತ್ತಲೊಳಗೆ ಕಳ್ಳತನದಿಂದೋಡಾಡುತ ಕಟ್ಟಿದ ಪಂಜಿನಂತ್ಹೊಳೆವೊ ಕೇಳಮ್ಮ 2 ಕಟ್ಟಿದ ನೆಲವಿನೊಳ್ ಮಕ್ಕಳ ಮಲಗಿಸಿ ಎಷ್ಟು ಘಾತಕÀ ತಾ ಕೈಬಿಟ್ಟ ನೋಡಮ್ಮ ತೊಟ್ಟಿಲೊಳಗೆ ಕೆನೆಮೊಸರಿನ ಚಟ್ಟಿಗೆ ಇಟ್ಟು ತೂಗುತ ಮೆಲ್ಲುವನು ಕೇಳಮ್ಮ ಕಟ್ಟಿದ್ದಾಕಳ ಕಣ್ಣಿ ಬಿಚ್ಚಿ ಮೊಲೆಗೆ ಬಾಯ್ಹಚ್ಚಿ ಕ್ಷೀರವ ಸುರಿದುಂಬುವನಮ್ಮ 3 ತೋಳ ಬಾಪುರಿ ವಂಕಿ ತೋಡ್ಯ ಬಿಂದಲಿ ಚಕ್ರ- ಪಾಣಿಯಲ್ಲೊ ್ಹಳೆವೊ ಮುದ್ರಿಕೆಯ ನೋಡಮ್ಮ ಆಣಿ ಮುತ್ತಿನ ಸರ ಅರಳೆಲೆ ಪದಕವು ಕಾಲ ಕಿಂಕಿಣಿ ನಾದಗಳ ಕೇಳಮ್ಮ ತೋರ ಮುತ್ತುಗಳೋಣಿಯಲುದುರುತ ಒ- ಯ್ಯಾರದೊಲಪಿನ ಚೆದುರ್ಯಾರು ಪೇಳಮ್ಮ4 ಮನ್ಮಥನಿಗೆ ಮಿಗಿಲಾದ ಸ್ವರೂಪಲಾವಣ್ಯನೆ ನೀಲದ ವರ್ಣ ಕೇಳಮ್ಮ ಹುಣ್ಣಿಮೆ ಚಂದ್ರಮನ್ನ ಸೋಲಿಸೋಮುಖ ಇನ್ನು ಇವನÀ ಸೌಂದರ್ಯ ನೋಡಮ್ಮ ಹೆಣ್ಣು ಮಕ್ಕಳ ಸೆರಗನ್ನು ಕೈಯ್ಯಲಿ ಸುತ್ತಿ ಬೆನ್ನು ಬೆನ್ಹತ್ತಿ ತಾ ತಿರುಗುವನಮ್ಮ 5 ಚೀನಿ ಅಂಗಿಯ ಮ್ಯಾಲೆ ಚಿತ್ರದ ನಡುಕಟ್ಟಿ ಜಾರ ಜರದ ಛಾದರವ ನೋಡಮ್ಮ ಸೋಗೆ ನವಿಲು ಗಿಳಿ ಕೋಗಿಲೆ ಸ್ವರದಂತೆ ವೇಣು ಕೊಳಲ ಗಾಯನವ ಕೇಳಮ್ಮ ಮೇಘಮಂಡಲ ತಲೆತಾಕುವ ಹರಿಯದೆ ತಾ ಜಿಗಿದಾಡೋನಂಗಳದಿ ಕೇಳಮ್ಮ 6 ಎಷ್ಟು ಹೇಳಿದರೀ ಮಾತು ಮನಕೆ ನಿಜ ಹುಟ್ಟವಲ್ಲದೇನೀಗ ಬಾರೆ ಗೋಪಮ್ಮ ಬಿಟ್ಟು ಕೆಲಸ ಭೀಮೇಶಕೃಷ್ಣಗೆ ಬುದ್ಧಿ ಎಷ್ಟು ಹೇಳುವಿ ಮುಂದ್ಹೇಳಲೇಕಮ್ಮ ಸಿಟ್ಟು ಮಾಡುವರೇನೆ ಸಿರಿಪತಿ ಆಟ ನಿನ್ನ ದೃಷ್ಟಿಂದ ನೋಡೆ ನಿಜಹುಟ್ಟುವುದಮ್ಮ7
--------------
ಹರಪನಹಳ್ಳಿಭೀಮವ್ವ
ದಾಸನಾಗಬೇಕು ರಂಗಸ್ವಾ'ುೀಗುರು ನಿಮ್ಮ ದಾಸನಾಗಬೇಕು ಪದಾಸನಾಗಬೇಕು ಕ್ಲೇಶಪಂಚಕವಳಿದು ಆಸೆಯಲ್ಲಿ ಮನಸೂಸದೆ ಸರ್ವದಾ ಅ.ಪಮನದ ಕಲ್ಮಷ ಕಳೆದು ಮಹಾ ರಾಮಕೋಟಿಗಳ ಮ'ಮೆಗಳನು ತಿಳಿದು ಇನಿತು ಈ ಜಗವೆಲ್ಲ ಶ್ರೀರಾಮಮಯವೆಂದು ಘನವಾದ ಮೋಹದಾ ಗಡಿಯನು ದಾಂಟುತ್ತಾ 1ತನುವು ಅಸ್ಥಿರವೆನ್ನುತಾ ತಿಳಿದು ಈ ದುವ್ರ್ಯಾಧಿಪ್ಲೇಗು ಭಯವಬಿಡುತಾ ಘನವಾದ ರಾಮಕೋಟಿಯಲಿ ನೆಲೆಸುತಾಬಿನಗು ಸಂಸಾರದ ಮಮತೆಯ ಬಿಡುತಾ 2ಆರುಚಕ್ರದಿಮೆರೆವ ಅಖಂಡನಾ ಮೂರುಗುಣವತಿಳಿಪ ಆರುಮೂರದಿನಾರು ತತ್ವಾತೀತನಿಜತೋರಿ ರಾಮಕೃಷ್ಣಾದಾಸನುದ್ಧರಿಸಿದರು 3
--------------
ಮಳಿಗೆ ರಂಗಸ್ವಾಮಿದಾಸರು
ದಾಸನಾಗಬೇಕು ಸದಾಶಿವನ ದಾಸನಾಗಬೇಕು ಪ ದಾಸನಾಗಬೇಕು ಕ್ಲೇಶಪಂಚಕವಳಿದು |ಆಸೆಯಲ್ಲಿ ಮನ ಸೂಸದೆ ಸರ್ವದಾ ಅ ಮನದ ಕಲ್ಮಷ ಕಳೆದು - ಮಹಾದೇ-ವನ ಮಹಿಮೆಯ ತಿಳಿದುಇನಿತು ಈ ಜಗವೆಲ್ಲ ಈಶ್ವರಮಯವೆಂದುಘನವಾದ ಮೋಹದ ಗಡಿಯನು ದಾಟುತ 1 ತನುವು ಅಸ್ಥಿರವೆನುತ - ತಿಳಿದು ಶಂಕರನ ಹೃದಯವ ಕಾಣುತಘನವಾದ ಇಂದ್ರಜಾಲವ ಮಾಯೆಯೆನುತಬಿನುಗು ಸಂಸಾರದ ಮಮತೆಯ ಬಿಡುತ 2 ಆರು ಚಕ್ರದಿ ಮೆರೆವ - ಅಖಂಡನಮೂರು ಗುಣವ ತಿಳಿದುಆರು ಮೂರು ಹದಿನಾರು ತತ್ತ್ವವ ಮೀರಿತೋರುವ ಕಾಗಿನೆಲೆಯಾದಿಕೇಶವನಡಿ 3
--------------
ಕನಕದಾಸ
ದಾಸನಾದ ಮೇಲೆ ಈಶ ದೂರುಂಟೆ ಆಸೆನೀಗಲು ಸುಖದ ರಾಶಿ ಬೇರುಂಟೆ ಪ ದೋಷಕ್ಕಂಜಿದಮೇಲೆ ಸನ್ಮಾರ್ಗ ಬೇರುಂಟೆ ಕ್ಲೇಶ ನೀಗಿದಮೇಲೆ ಪುಣ್ಯ ಇನ್ನುಂಟೆ ಹೇಸಲು ಪ್ರಪಂಚಕೆ ಸತ್ಸಂಗ ಬೇರುಂಟೆ ವಾಸನ್ಹಿಂಗಿದಮೇಲೆ ವೈರಾಗ್ಯವುಂಟೆ 1 ಜ್ಞಾನಗೂಡಿದಮೇಲೆ ಮತ್ತೆ ತೀರ್ಥಗಳುಂಟೆ ಧ್ಯಾನವಿಡಿದಮೇಲೆ ಅನ್ಯಮೌನುಂಟೆ ಹೀನಗುಣ ತೊಳೆದಮೇಲಿನ್ನು ಸ್ನಾನಗಳುಂಟೆ ಮಾನಸವು ಶುದ್ಧಿರಲು ಬೇರೆ ಮಡಿಯುಂಟೆ 2 ಕೈವಲ್ಯ ಇನ್ನುಂಟೆ ಶರಣು ಪೊಂದಿದಮೇಲೆ ಪರಮಾರ್ಥ ಬೇರುಂಟೆ ಅರಿವನರಿತರೆ ಬೇರೆ ಪರಲೋಕ ಇರುಲುಂಟೆ ಶರಣರೊಲಿದಮೇಲ್ಹರಿಚರಣ ಹೊರತುಂಟೆ 3 ಸಫಲನಾದಮೇಲೆ ವ್ರತನೇಮ ಬೇರುಂಟೆ ಗುಪಿತವರಿತಮೇಲೆ ಪರತತ್ವವುಂಟೆ ಅಪರೂಪ ಧ್ಯಾನಿರಲು ತಪ ಬೇರೆ ಇರಲುಂಟೆ ಅಪರೋಕ್ಷಜ್ಞಾನ್ಯಾದ ಮೇಲೆ ಮಿಕ್ಕಸಾಧನುಂಟೆ 4 ಮಾನಹೋದಮೇಲೆ ಮರಣ ಬೇರಿರಲುಂಟೆ ನಾನತ್ವ ಪೋದಮೇಲೆ ಸತ್ಕರ್ಮವುಂಟೇ ಧ್ಯಾನದಾಯಕ ಮಮಪ್ರಾಣ ಶ್ರೀರಾಮನಡಿ ಖೂನ ತಿಳಿದ ಮೇಲೆ ಮುಕ್ತಿ ಬೇರುಂಟೆ 5
--------------
ರಾಮದಾಸರು
ದಾಸನಾದೆನಯ್ಯ ನಿಮ್ಮ ಏಸು ಜನ್ನಕೆ ವಾಸನೆ ಪರಿದ್ಯೋ ಶ್ರೀ ಹರಿ ಎನ್ನ ಜೀವಕೆ ಧ್ರುವ ಒಂದು ಮೊದಲಿಗಲ್ಲದೆ ಅನೇಕ ಜನ್ಮ ಜನಿಸಿ ಬಂದು ನೊಂದು ಬೆಂದು ಕಂದಿ ಕಳದೆನಯ್ಯ ಭಕ್ತ ವತ್ಸಲ 1 ವರ್ಮ ತಿಳಿಯಗೊಡದೆ ಎನ್ನ ಕವರ್iಪಾಶ ಕಟ್ಟಿ ಕೊರಳ ನಿರ್ಮಿಸಿ ನಿರ್ಮಿಸಿ ತಂದ್ಯೊ ನಿರ್ಮಳಾನಂತಾತ್ಮನೆ 2 ತಪ್ಪಿಲ್ಲದೆ ತಪ್ಪು ಹೊರಸಿ ಕೊಂಡಾಡಿದಯ್ಯ ಒಪ್ಪು ನಿಮಗಿದು ಕಪಟನಾಟಕ ಶ್ರೀ ಕೃಷ್ಣನೆ 3 ಎನ್ನ ಹೃದಯದೊಳಗಿದ್ದು ಭಿನ್ನಭೇದ ಮಾಡಿದೈಯ್ಯ ಇನ್ನಾರ ಮುಂದುಸುರಲಾಗದೊ ಶ್ರೀ ಕಾಂತನೆ 4 ಹೆಜ್ಜೆವಿಡಿದು ಬಂದ ನಿಜ ದಾಸ ಮಹಿಪತಿಗಿನ್ನು ಸಜ್ಜನರಿಗೀವ ಪದವ ಕೊಟ್ಟು ಕಾಯೊ ಕರುಣನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಸನೆನಿಸಿಕೊ ಎನ್ನನು ದಾಸನೆನಿಸಿಕೊ ಹರಿ ಪ ದಾಸನೆನಿಸಿಕೊ ಶ್ರೀಶ ನಿ ಮ್ಮ ಶ್ರೀಪಾದಕಮಲದಾಸನೆನಿಸಿಕೊ ಅ.ಪ ದೇಶ ದೇಶ ತಿರುಗಿ ನಾನು ಆಶಬದ್ಧನಾಗಿ ಇನ್ನು ಏಸುಕಾಲ ಕಳೆಯಲ್ಹೀಗೆ ಭಾಸುರಾಂಗ ದಯವನಿತ್ತು 1 ಏಸು ಜನ್ಮ ಸುಕೃತವಡೆದು ವಾಸನ್ಹಿಡಿದು ನಿನ್ನ ಪಾದ ಆಸೆಯಿಂದ ಬೇಡ್ವೆ ನೆನ್ನ ಧ್ಯಾಸದಲ್ಲಿ ವಾಸಮಾಡಿ2 ಭಕ್ತರಿಷ್ಟಪೂರ್ಣನೆಂದು ನಿತ್ಯ ಬಿಡದೆ ಕೂಗುವಂಥ ಸತ್ಯವೆನಿಸು ವೇದದೋಕ್ತಿ ನಿತ್ಯ ನಿರ್ಮಲಾತ್ಮ ರಾಮ 3
--------------
ರಾಮದಾಸರು
ದಾಸರಾಯರಾ ಚರಣಕಮಲ ಭಜಿಸೋ |ದುರ್ವಿಷಯವ ತ್ಯಜಿಸೋ ||ಶ್ರೀಶ ಭಜಕ ಗುರು ಪ್ರಾಣೇಶದಾಸಾರ್ಯ |ಹರಿದಾಸ ವರ್ಯಾ ಪ ಸದ್ವೈಷ್ಣವ ಅಧ್ಯಕ್ಷರೆಂದೆನಿಪರೊ |ಕರ್ಮಠರೆನಿಪರೋ |ಮಧ್ವಮತ ಪ್ರವರ್ತಕರೆನಿಪರೋ |ಜ್ಞಾನಿಗಳೆನಿಪರೊ ||ಪದ್ಧತಿ ಪೂರ್ವಕ ಕವನವ ಪೇಳುವರೊ |ಹರಿ ಪರನೆಂಬುವರೊ |ಶುದ್ಧಾತ್ಮರಿಗತಿ ಪ್ರಿಯರೆಂದೆನಿಸುವರೋ |ಸತ್ಕಥಾಲಾಪರೋ 1 ಕಾಮಕ್ರೋಧ ಮದಮತ್ಸರವನು ಗೆಲಿದೂ |ತಾಮಸರನು ಹಳಿದೂ |ನೇಮದಿಂದ ಯಮನಿಯಮಗಳನು ವಹಿಸೀ |ಇಂದ್ರಿಯಗಳ ಜೈಸೀ |ತಾಮುದದಿಂದಲಿ ಹರಿಗುಣ ಕೀರ್ತನೆಯಾ |ಮಾಡುತ ನರ್ತನೆಯಾ ||ಪ್ರೇಮದಿಂದ ಮಾಡಿ ದೇಶದಲ್ಲಿ ಮೆರೆದಾ |ನಾಮ ಸುಧೆಯನ್ನೆರದಾ 2 ಏಸು ಪೇಳಲಿ ಇವರ ಚರಿತೆಯನ್ನು |ಆ ಪಾರವು ಇನ್ನೂ |ಸೋಸಿನೋಡಲು ಎನಗೆ ವಶವಲ್ಲಾ |ಇದು ಪುಸಿಯೂ ಅಲ್ಲಾ ||ಮೀಸಲ ಮನದಲಿ ತುತಿಸಲು ಸಂತಾಪಾ |ಪೋಪದು ನಿರ್ಲೇಪಾ |ಶ್ರೀಶ ಪ್ರಾಣೇಶ ವಿಠಲ ತಾ ಬಲ್ಲಾ |ವಲಿದಿಹನಲ್ಲಾ 3
--------------
ಶ್ರೀಶಪ್ರಾಣೇಶವಿಠಲರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದುರಿತ ತ್ಯಜಿಸಿರೋ ಪರಮ ಸಾಧ ಐಕೂರು ನರಸಿಂಹಾರ್ಯರ ಪ ಕೃಷ್ಣತೀರದಿ ಮಿಂದು | ಕೃಷ್ಣÀವರನೊಳು ಜಿಷ್ಣು ಸೂತನ ನೋಳ್ಪ | ವಿಷ್ಣು ದಾಸರ 1 ತರುಳತನದಲಿ | ಸದ್ಗುರುವರೇಣ್ಯರ ಚರಣ ಸೇವಿಸಿ ಶಾಸ್ತ್ರವರಿತ ಧೀರರ 2 ಸತತ ನಂಬಿದ ಶಿಷ್ಯತತಿಗೆ ಹರಿಗುಣ ಹಿತದಿ ಸುರಿದ | ಅಪ್ರತಿಮ ಮಹಿಮರ 3 ಪವನ ಶಾಸ್ತ್ರವೇದ | ಕವನವೆನ್ನುತ ವಿವರಿಸುತ್ತಲಿ ತನ್ನವರ ಪೊರೆದರ 4 ಏನು ಬಂದರು ಮನದಿ ಶ್ರೀನಿವಾಸನ ಧ್ಯಾನ ಬಿಡದಿಹ | ಮಹಾನುಭಾವರ 5 ಭಕುತಿ ಜ್ಞಾನವ ತಮ್ಮ ಭಕುತ ವರ್ಗಕೆ ಪ್ರಕಟಗೊಳಿಸಿದ ಇಂಥ | ಮುಕುತಿ ಯೋಗ್ಯರ 6 ಭುವನ ಮೇಲಿಹ ಇವರು ದಿವಿ ಭವಾಂಶರು ರವಿ ನಿಭಾಂಗರು | ಜವನ ಭವಣೆ | ತರಿದರು 7 ಇವರು ಪೇಳುವ ವಚನ ಶ್ರವವಣಗೈಯಲು ಶೌರಿ ಭುವನ ಪಡೆವರು 8 ಕಂತುಪಿತ ಕಥಾ ಸುಧಾ | ಗ್ರಂಥ ಮರ್ಮವ ಆ ದ್ಯಂತ ಬಲ್ಲರು ಪರಮ ಶಾಂತಿ ಶೀಲರು 9 ಮೌನಧ್ಯಾನದ ಜ್ಞಾನ ಖೂನ ತೋರದೆ ಹೀನರಂದದಿ ಹೊರಗೆ ಕಾಣಿಸುವರು 10 ಬಾಲಕೃಷ್ಣನ ದಿವ್ಯಲೀಲೆ ಚರಿತೆಯ ಕಾಲ ಕಳೆಯರು 11 ನಿಂದ್ಯ ವಂದನೆ ಬಂದ ಕುಂದು ಶ್ಲಾಘನೆ ಇಂದಿರೇಶನೆ ತಾನೆ ತಂದ ನೆಂಬರು 12 ಪಾದ ಪೊಂದಿದ ಜನಕೆ | ಮೋದಗರೆವರು ವ್ಯಾಧಿ ಕಳೆದರು ವೇದ ಬೋಧಿಸಿದರು 13 ವಿವಿಧ ವೈಭವ ಮೇಣ್ | ಕುವರ ಭಾಗ್ಯವ ವಿವಿಧ ಭೋಗವ ಶಿಷ್ಯ ನಿವಹಕಿತ್ತರು 14 ನಿತ್ಯ ಪೇಳುತ ಭೃತ್ಯನಿಕರಕೆ ಸಧೃಡ ಚಿತ್ತವಿತ್ತರು 15 ಕಾಮವಾಸನೆ ಸುಟ್ಟು | ನೇಮ ಪೂರ್ವಕ ರಾಮನೊಲಿಮೆಯ | ವಿಶ್ವಪ್ರೇಮವೆಂಬರು 16 ಈ ಸುಮಹಿಮರ | ಸದುಪದೇಶ ಕೊಳ್ಳಲು ಕ್ಲೇಶಬಾರದು | ಯಮನು ಘಾಸೆÉಗೊಳಿಸನು 17 ನಿರಯ ಪಾತ್ರರು 18 ಇನಿತುಪಾಸನೆಗೈವ ಘುನ ಮಹಾತ್ಮರ ಗುಣಗಣಂಗಳ | ತುತಿಸಲೆನಗೆ ಸಾಧ್ಯವೆ 19 ಅರುಣನುದಿಯದಿ | ಇವರ ಚರಣ ಕಮಲವ ಸ್ಮರಣ ಮಾಡಲು | ಹರಿಯ ಕರುಣವಾಹದು 20 ಸಾಮಜವರ ವರದ ಶಾಮಸುಂದರನ ಪ್ರೇಮಪಾತ್ರ ನಿಷ್ಕಾಮ ಪೂರ್ಣರು 21
--------------
ಶಾಮಸುಂದರ ವಿಠಲ
ದುರಿತ ಪರಿಹರಿಸೋ ಭಾರಕನು ನೀನು ಪಾದ ಹೊಂದಿದವರಿಗೆಯಿನ್ನು ಪ ಮಾನವ ನಾನು ಮನ ಖಚಿತವಿಲ್ಲದ ಕಂದರಕೆ ಬಿದ್ದು ಬಹುಕಷ್ಟ ಪಡುತಾ ಸಂದೇಹವಾನು ಬಿಡದೆ ಸಂಶಯಿಸಿ ನಿನ್ನೊಮ್ಮೆ ಎಂದು ಕೊನಿಮದ ದೋಷದಿಂದ ಅದರಿಂದಾ 1 ಕಷ್ಟವನು ಪಡುವಾಗ ಕೃಷ್ಣ ನೀನೆ ಗತಿಯೆಂದು ಅಷ್ಟು ಮಾತ್ರ ಸುಖಬರಲು ಅರಿತು ನಿನ್ನ ನಿಷ್ಠರಾದವರನಾಸಂಖ್ಯ ಅರಿಯೆನು ಮಾಡ್ದ ದುಷ್ಟ ಬುದ್ಧಿಗಳಿಂದ ದುರುದ್ದೇಷದಿಂದಾ 2 ನೀನೆ ಸೂತ್ರಧಾರನಾಗಿರುವೆ ಸಕಲಕ್ಕೂ ನಾನೊಂದೂ ಅರಿಯದಜ್ಞಾನಿ ಹರಿಯೆ ಏನಾದರಾಗಲಿ ಇನ್ನು ಎನ್ನನು ಬಿಡದೆ ನೀ ದಯಮಾಡಿ ರಕ್ಷಿಸೋ ನಿಜ 'ಹೊನ್ನ ವಿಠ್ಠಲಾ 3
--------------
ಹೆನ್ನೆರಂಗದಾಸರು
ದುರಿತಭಂಜನ ನರಹರಿಯೆ |ಪರಿಪರಿಯಿಂದ ಸಲಹು ಶ್ರೀವೈಕುಂಠ ದೊರೆಯೆ ಪ ನಿನ್ನ ದಾಸರ ದಾಸ ನಾನು |ಎನ್ನವರು ದಾಸರ ದಾಸರಲ್ಲೇನು ||ಇನ್ನು ಒದಗದೆ ಇಹುದೇನು |ಉನ್ನತವಾದ ಬಿರುದಂಗಳ್ನಿನಗಿಲ್ಲವೇನು ? 1 ತೊತ್ತು ಮೆರಿಸಿಕೊಂಡವನಲ್ಲ |ಹೆತ್ತವರ ಭಾವಗಳನೆಲ್ಲ ಮರೆವನಲ್ಲ ||ಒತ್ತಿ ಆಪತ್ತವು ಬರಲು | ಪೊತ್ತವರಿಗೆ ಮೊರೆಯಿಡೆ ಕಡೆಗೆ ಬಿಡುವನಲ್ಲ 2 ಬರುತಿಹುದು ಸಂಕಟವೆಂದು |ಹಿರಿಯರು ನಮ್ಮನೆಲ್ಲವನು ಮರೆದರಂದು ||ಮರೆಯದೆ ರುಕ್ಮಗಿನ್ನಿದು |ಮರೆ ಮಾಡುವ ಪೀತಾಂಬರದಿಂದ ಬಂದು3
--------------
ರುಕ್ಮಾಂಗದರು