ಒಟ್ಟು 7932 ಕಡೆಗಳಲ್ಲಿ , 127 ದಾಸರು , 4530 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ ಧ್ರುವ ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1 ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ ಸಾರವೇ ಸುಖಗರವುತದೆ ನೋಡಿರೋ ರಾಜಯೋಗ ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2 ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆಹಾನೆ ಅಖಂಡ ಗುರುತಾನೆ ಬೇಕಯೆಂದವರಿಗೆ ಪೂರ್ಣ ಸಿಕ್ಕುತಾನೆ ಧ್ರುವ ಅರವ್ಹಿನ ಮುಂಧಾನೆ ಮರವ್ಹಿನ ಹಿಂಧಾನೆ ಕುರಹು ತಿಳಿದರೆ ತಾನೆ ಸ್ಥಿರವಾಗ್ಯಾನೆ 1 ಗುರುತ ಕಂಡವಘಾನೆ ಗುರುಸ್ವರೂಪಧ್ಯಾನೆ ಗುರುಕೃಪ್ಯಾದವಘಾನೆ ಗುರುತಾನೆ 2 ಅಣುರೇಣುದೊಳಘಾನೆ ಜನವನ ತುಂಬ್ಯಾನೆ ಅನುಭವಕ ತಾನೆ ಖೂನಾಘ್ಯಾನೆ 3 ಮನದ ಕೊನಿಲಿಹಾನೆ ಘನವೆ ಘನವಾಘ್ಯಾನೆ ದೀನ ಮಹಿಪತಿ ಸ್ವಾಮಿ ತಾನೆ ತಾನೆ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ನಮ್ಮ ಧ್ರುವ ಸಕಳವೆಲ್ಲ ಹರಿ ಸೂತ್ರವು ಇರಲಿಕ್ಕೆ | ವಿಕಳಿತಗೊಂಬುವದ್ಯಾಕೆ ಮಾಂ | ಅಖಿಳ ಭುವನಕೆಲ್ಲ ಸಾಕಿ ಸ - | ಹಕಾರ ನೊಬ್ಬ ಶ್ರೀಪತಿಯ ಮಾಂ | 1 ಯಂತ್ರಜೀವ ತಂತ್ರ ಶಿವ ಇರಲಿಕ್ಕೆ ಸ್ವ | ತಂತ್ರವೆ ನಾನೆಂಬುದ್ಯಾತಕೆ ಮಾಂ | ಚಿತ್ರ ವಿಚಿತ್ರವು ದೋರುವ ಸೂತ್ರವು | ಕರ್ತು ಸದ್ಗುರು ಸುತಂತ್ರವು ಮಾಂ 2 ಅಂತ್ರ ಬಾಹ್ಯ ವ್ಯಾಪಕನಾಗಿರಲಿಕ್ಕೆ | ತಂತ್ರ ಮಂತ್ರಗಳ್ಯಾತಕೆ ಮಾಂ | ಜಂತ್ರ ಮಾಡಿ ಜನ್ಮ ಮರಣದ ತಿರಿಹುವಾ | ಗಂತ್ರವು ಎಂದಿಗೆ ತಿಳಿಯದು ಮಾಂ 3 ಇಟ್ಹಾಂಗ ಇರಬೇಕು ಕೊಟ್ಹಾಂಗ ಕೊಂಡಿನ್ನು | ತುಟ್ಟಿಲೆ ಮಿಸುಕದೆ ಗುಟ್ಟಿಲೆ ಮಾಂ | ಹೊಟ್ಟಿಗಾಗಿ ಅಷ್ಟು ಸಾಯಾಸ | ಬಟ್ಟರೆ ಸಾರುಸದೇ ಅಟ್ಟಿಸುವದು ಮಾಂ 4 ಇಟ್ಹಾಂಗ ಇರೋ ಮಹಿಪತಿ ಸೃಷ್ಟಿಯೊಳಿನ್ನು | ಘಟ್ಟಿಗೊಂಡ ಗುರುಪಾದವು ಮಾಂ | ಮುಟ್ಟಿ ಮುದ್ರಿಸಿ ಕೃಪಾದೃಷ್ಟಿಲೆ ಹೊರೆವನು | ಕೊಟ್ಟು ನಿನಗೆ ಸ್ವಾನುಭವವು ಮಾಂ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗೆ ಇರುವೆನೋ ಹರಿಯೇ ಎನ್ನ ದೊರೆಯೇ ಪ ಸೃಷ್ಟಿವಂದಿತ ಪಾದಪದುಮ ಶ್ರೀ ಹರಿಯೇ ಅ.ಪ. ಸಣ್ಣ ಶಾಲ್ಯೋದನ ಬೆಣ್ಣೆ ಕಾಸಿದ ತುಪ್ಪಚಿನ್ನದ ಹರಿವಾಣದಲಿ ಭೋಜನಘನ್ನ ಮಹಿಮ ನಿನ್ನ ಕರುಣ ತಪ್ಪಿದ ಮ್ಯಾಲೆ ಕ-ದನ್ನ ಕಾಣದೆ ಬಾಯ್ಬಿಡಿಸುವೆಯೋ ಹರಿಯೇ 1 ಕೆÀಂಪಿಲಿ ಪೊಳೆವ ಪೀತಾಂಬರ ಉಡಿಸುವಿಸೊಂಪಿನಂಚಿನ ಶಾಲು ಹೊದಿಸುವಿಯೋಕಪಿಲಹರೇ ನಿನ್ನ ಕೃಪೆಯು ತಪ್ಪಿದ ಮ್ಯಾಲೆಕಪರ್ದಕ ಕೌಪೀನವು ದೊರೆಯದೋ ಹರಿಯೇ 2 ಚಂದ್ರಶಾಲೆಯಲ್ಲಿ ಚಂದ್ರಕಿರಣದಂತೊಪ್ಪುವಚಂದದ ಮಂಚದೊಳ್ಮಲಗಿಸುವಿಮಂದರೋದ್ಧರ ನಿನ್ನ ಮಮತೆ ತಪ್ಪಲು ಧರ್ಮಮಂದಿರದೊಳು ತೋಳ್ತಲಗಿಂಬು ಹರಿಯೇ 3 ನರಯಾನದೊಳು ಕ್ಷಣ ನರವರನೆನಿಸುವಿವರಛತ್ರ ಚಾಮರ ಹಾಕಿಸುವಿಕರುಣಾನಿಧೇ ನಿನ್ನ ಕರುಣ ತಪ್ಪಿದ ಮ್ಯಾಲೆಚರಣರಕ್ಷೆಯು ದೊರೆಯದು ಶ್ರೀಹರಿಯೇ 4 ಗಂಗಾಜನಕ ಪಾಂಡುರಂಗ ನಿನ್ನಯ ಭಕ್ತರಸಂಗವಿರಲಿ ದುಷ್ಟರ ಸಂಗ ಬ್ಯಾಡಅಂಗನೆಯರ ಕೂಡಿ ಅನಂಗಬಾಣಕೆ ಸಿಲುಕಿಭಂಗವ ಪಡಲಾರೆ ಶ್ರೀರಂಗವಿಠಲ ಹರಿಯೇ 5
--------------
ಶ್ರೀಪಾದರಾಜರು
ಇತರೆಯಳ ಸುತನೆನಿಪ ಐತರೇಯ |ಗತಿಪ್ರದ ಶ್ರೀ ವಿಷ್ಣು ಸರ್ವಾಂತರಾತ್ಮಾ ಪ ವಿಭೂತಿ ಪಾದ್ಯ ಹರಿಯೇ 1 ಕರ್ಮ ಕರ್ಮಾಂಗದಲಿಪ್ರಕಟವಾಗಲು ಅಲ್ಲಿ ಸನ್ನಿಹಿತನಿರುವೇ 2 ಭೂತ ಪಂಚಕದಲ್ಲಿ ಪಂಚಾತ್ಮ ನೀನಿದ್ದುಭೂತ ವಾಯುವಿನಲ್ಲಿ ಮತ್ತೆ ಪಂಚಾತ್ಮಾ |ಈ ತೆರದಿ ನೀನಿದ್ದು ಭೂತೇಂದ್ರಿ ಮಾನಿಸಹವಾತನಡೆಸುವುದೆಲ್ಲ ಯಜ್ಞವೆನಿಸುವುದು 3 ಇಂತಿಪ್ಪ ಯಜ್ಞದಲಿ ಸಂತ ಶ್ರೀಪಾದಾರ್ಯಅಂತೆ ತಮ ಶಿಷ್ಯ ಸಹಕೃತ ಸುಮಂಗಳದಲಿ |ಧ್ವಾಂತ ಹರ ಶ್ರುತಿಯನ್ನೆ ಐತರೇಯದಿ ವಾಚ್ಯಪಂಥಬಿಧ ಸರ್ವರಿಗೆ ಒಲಿಯೆ ಪ್ರಾರ್ಥಿಸುವೇ 4 ಪರಮ ಹಂಸರು ಎನಿಪ ವಿಶ್ವೇಶ ತೀರಥರವರ ಸುನೇತೃತ್ವದಲಿ ಮಂಗಳದ ಕಾರ್ಯ |ಪರಕಿಸುವ ಸೌಭಾಗ್ಯ ದೊರಕಿದವನಿಗೆ ಭಾಗ್ಯಹರಿ ಗುರು ಗೋವಿಂದ ವಿಠಲ ಕರುಣಿಸುವ 5
--------------
ಗುರುಗೋವಿಂದವಿಠಲರು
ಇತ್ತ ಬಾರೊ ಒಲವುತ್ತ ಬಾರೊಹತ್ತವತಾರದ ಚಿತ್ರಚಾರಿತ್ರ ಎನ್ನತ್ತ ಬಾರೊಪ. ಒದ್ದು ಶಕಟನ ಮುರಿದ ಶಿಶುವೆ ನೀನೆದ್ದು ಬಾರೊ ಅ-ಳದ್ದು ಬ್ರಹ್ಮಾಂಡವ ಸೀಳ್ದ ಮಹಿಮೆಸಾಲದ್ದೆÉ ಬಾರೊಕದ್ದು ಬೆಣ್ಣೆನೇಕೆ ಮೆದ್ದೆ ದಾರಿದ್ರವೆ ಮುದ್ದೆ ಬಾರೊ ಆಡು-ತಿದ್ದ ಮಕ್ಕಳ ನೀನು ಗುದ್ದಿ ದೂರನು ತರುತಿದ್ದೆ ಬಾರೊ 1 ಹಿಂದೆ ಬಾಯೆಂದರೆ ಮುಂದೆ ಬಾಹೆ ಗೋವಿಂದ ಬಾರೊ ಎನ್ನ ಕಂದ ಬಾಯೆಂದರೆ ಮುಂದೆ ನಿಲುವೆ ಮುಕುಂದ ಬಾರೊಬಂದೆನ್ನ ಮುಂದೆ ನೀ ನಿಂದಿರು ನಿತ್ಯಾನಂದ ಬಾರೊಎಂದೆಂದು ಭಕುತರ ಹೊರೆದಿಹ ಕಾರುಣ್ಯಸಿಂಧು ಬಾರೊ 2 ಮಂಥನ ಮಾಡಲು ನಿಂತೆÀ ಕಡೆಗೋಲ ನೇಣಾಂತೆ ಬಾರೊಸಂತರಿಗನುದಿನ ಸಂತೋಷವೀವ ನಿಶ್ಚಿಂತ ಬಾರೊಅಂತವಿಲ್ಲದ ಮಾರಾಂತನ ಗೆಲಿದ ಕೃತಾಂತ ಬಾರೊಅಂತಿಂತೆನದೆ ಮಾಕಾಂತ ಹಯವದನನನಂತ ಬಾರೊ3
--------------
ವಾದಿರಾಜ
ಇತ್ತೆ ಏತಕ್ಕೆ ಈ ನರಜನ್ಮವ ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ ಪ. ಬಂಧುಬಳಗವ ಕಾಣೆ ಇಂದಿರೇಶನೆ ಭವದಿ ಬೆಂದು ನೊಂದೆನೊ ನಾನು ಸಿಂಧುಶಯನ ಬಂದ ಭಯಗಳ ಬಿಡಿಸಿ ನೀನೆ ಪಾಲಿಸದಿರಲು ಮಂದಮತಿಗೆ ಇನ್ನು ಮುಂದೆ ಗತಿ ಏನೊ 1 ಕಾಣದಲೆ ನಿನ್ನನು ಕಾತರಿಸುತಿದೆ ಮನವು ತ್ರಾಣಗೆಡÀುತಲಿ ಇಹುದೊ ಇಂದ್ರಿಯಗಳೆಲ್ಲ ಪ್ರಾಣಪದಕನೆ ಸ್ವಾಮಿ ಶ್ರೀನಿವಾಸನೆ ದೇವ ಜಾಣತನವಿದು ಸರಿಯೆ ಫಣಿಶಾಯಿಶಯನ 2 ಸಾಧನದ ಬಗೆಯರಿಯೆ ಸರ್ವಾಂತರ್ಯಾಮಿಯೆ ಮಾಧವನೆ ಕರುಣದಲಿ ಕಾಯಬೇಕೊ ಹಾದಿ ತೋರದೊ ಮುಂದೆ ಮುಂದಿನಾ ಸ್ಥಿತಿಯರಿಯೆ ಛೇದಿಸೊ ಅಜ್ಞಾನ ಹೇ ದಯಾನಿಧಿಯೆ 3 ಸರ್ವನಿಯಾಮಕನೆ ಸರ್ವಾಂತರ್ಯಾಮಿಯೆ ಸರ್ವರನು ಪೊರೆಯುವನೆ ಸರ್ವರಾಧೀಶ ಸರ್ವಕಾಲದಿ ಎನ್ನ ಹೃದಯದಲಿ ನೀ ತೋರೊ ಸರ್ವ ಸಾಕ್ಷಿಯೆ ಸತತ ಆನಂದವೀಯೊ 4 ಆನಂದಗಿರಿನಿಲಯ ಆನಂದಕಂದನೆ ಆನಂದ ಗೋಪಾಲಕೃಷ್ಣವಿಠ್ಠಲಾ ಆನಂದನಿಲಯ ಶ್ರೀ ಗುರುಗಳಂತರ್ಯಾಮಿ ನೀನಿಂದು ಸರ್ವತ್ರ ಕಾಯಬೇಕಯ್ಯ 5
--------------
ಅಂಬಾಬಾಯಿ
ಇಂಥಾ ಗುರುಗಳ ಕಾಣೆನೋ ಈ ಜಗದೊಳು ನಾ ಪ ಇಂಥಾ ಗುರುಗಳನೆಂದು ಕಾಣೆನಾ ನಂತ ಚೇತನರಂತರ ಬಹಿರದಿ ನಿಂತು ಕರ್ಮವವರಂತೆ ಮಾಳ್ಪಾ - ನಂತ ಮಹಿಮಾನಂತನಾಂಶಜರಿಂಥಾಅ.ಪ ತುಂಗಾತೀರದಿ ನಿವಾಸಾ ಮಂತ್ರಾಲಯಕೀಶ ತುಂಗ ವಿಕÀ್ರಮ ಜಗದೀಶಾ ಶ್ರೀಹರಿ ದಾಸಾ ಮಂಗಲ್ಮಾತಕ ವೃಂದಾವನ ದೇಶಾ ಸಾರಿದ ವ್ರತೀಶಾ ಮಂಗಲ ಮಹಿಮ ರಂಗನ ಕರುಣಾಪಾಂಗ ಪಡೆದ ಕೃ - ಪಾಂಗ ಯತಿಕುಲೋತ್ತುಂಗ ಮಾಯಿ ಮಾ - ತಂಗ ಸಂಘಕೆ ಸಿಂಗ ದುಷ್ಟ ಭು - ವಿಹಂಗ ಸ್ವಮತೋ - ಭೃಂಗ ಮನ್ಮನೋ - ರಂಗ ಬಿಂಬನ ಇಂಗಿತಙ್ಞರ ಸಂಗ ನೀಡಿ ಕಂಗಳಿಗೆ ತಾವು ಕಂಗೊಳಿಪರಿಂಥಾ 1 ಮೇದಿನಿ ತಳದಲಿ ಜನಿಸೀ ಸುಖತಿರ್ಥರ ಭಜಿಸೀ ಭೇಧಮತವನೆ ಸಾಧಿಸೀ ವಾದದಿ ಜೈಸಿ ಮಾಧವನೆ ಸರ್ವೋತ್ತಮನೆನಿಸಿ ಸ್ವಮತವ ಸ್ಥಾಪಿಸಿ ಭೋಧಿಸಿ ತತ್ತ್ವವ ಭೇಧಿಸಿ ಪರಮತ ಛೇಧಿಸಿ ಕುಮತಿಯ ಶೋಧಿಸಿ ತತ್ತ್ವದ ಹಾದಿಯ ಹಿಡಿಸಿ - ಮೋದಕೊಡುವ ಪಂಚ ಭೇದವ ತಿಳಿಸೀ ಸಾದರ ತನ್ನಯ ಪಾದಸೇವೆಯ ಮೋದವ ನೀಡುವ ಮೇದಿನೀ ದಿವಿಜಾರಾಧಿತ ಪದಯುಗ ಶೋಧಿಸಿ ಜನಮನೋ ಖೇದಗೊಳಿಪ ಭ - ವೋಧಧಿ ದಾಟಿಸಿ ಶ್ರೀದÀನ ತೆರದಲಿ ಮೇದಿನಿಯಾಳುವರಿಂಥಾ 2 ಧಿಟ್ಟ ಗುರು ಜಗನ್ನಾಥ ವಿಠಲದೂತಾ ಸೃಷ್ಟಯೊಳಗತಿ ವಿಖ್ಯಾತಾನೆನಿಸಿದ ಯತಿನಾಥಾ ಕುಷ್ಟಾದಿ ರೋಗದ ಘಾತಾ ಮಾಡುವೊದಾತಾ ಇಷ್ಟಾರ್ಥವಾ ತಾ ಸೃಷ್ಠಿಗೆ ಬೀರುವ ಶಿಷ್ಟಜನರನುತ್ನøಷ್ಟದಿ ಪಾಲಿಪ ಎಷ್ಟು ಪೇಳುವುದೋ ಉತ್ಕøಷ್ಟನ ಗುಣಗಳ ಭ್ರಷ್ಟರರಿಯರೆಲೆ ಶಿಷ್ಟರು ಬಲ್ಲರು ಇಷ್ಟೇ ಅಲ್ಲವೀತನ ವಿಶಿಷ್ಟ ಮಹಿಮೆಗ - ಳೆಷ್ಟು ಪೇಳಲವಶಿಷ್ಟವೆನಿಪವೋ ದೃಷ್ಟಿಹೀನರಿಗೆ ದೃಷ್ಟಿ ನೀಡುವ ದೃಷ್ಟಿ ಮಾತ್ರದಿ ತುಷ್ಟಿಬಡಿಸುವೊರಿಂಥಾ 3
--------------
ಗುರುಜಗನ್ನಾಥದಾಸರು
ಇದನಾ ಬೇಡಿದವನಲ್ಲಾ ಬುಧರಂತರ್ಯಾಮಿ ಲಕುಮಿನಲ್ಲ ಪ ಪಾಪ ಕಾರ್ಯದ ಪಾಪ ವ್ಯಾಪಿಸಿ ದೇಹದಿ ಲೋಪಗೈಸೋದು ಸತ್ಕರ್ಮ ದೀಪ ನೀನಾಗಿರೆ ಉಪದೇಶಿಸೀ ಭವ ಕೂಪದಿಂದೆತ್ತೆಂದು ಬೇಡಿದೆನಲ್ಲದೆ 1 ವಿಷಯದೊಳ್ ಸಂಚರಿಪ ದೋಷಕಾರಿ ಮನ ಆಶೆಯೊಳು ಪೊಕ್ಕು ನಾಶಗೈಪೋದೆನ್ನ ವಿಶೇಷ ಸಾಧನಗಳ ನೀ ಪೋಷಿಸು ಎಂದು ಬೇಡಿದೆನಲ್ಲದೇ 2 ಸುಧೆ ತಂದ ವಿಜಯ ರಾಮಚಂದ್ರವಿಠಲ ನಿನ ಗೆದುರ್ಯಾರೊ ಪೇಳುವರು ಮುದದಿಂದ ಕೃಷ್ಣಾರ್ಯರೊಳು ಬೇಡಿದೆನಲ್ಲದೇ 3
--------------
ವಿಜಯ ರಾಮಚಂದ್ರವಿಠಲ
ಇದನೆ ಪಾಲಿಸು ಜನ್ಮ ಜನ್ಮಗಳಲಿ ಪ ಮಧುಸೂದನನೆ ನಿನ್ನ ಸ್ಮರಣೆ ದಾಸರ ಸಂಗ ಅ ಪುಣ್ಯಪಾಪ ಜಯಾಪಜಯ ಕೀರ್ತಿ ಅಪಕೀರ್ತಿ ಮನ್ಯುಮೋಹಾಸಕ್ತಿ ಕಾಮಲೋಭಾ ನಿನ್ನಾಧೀನವು ಎನ್ನದಲ್ಲವೆಂದಿಗು ಪ್ರಕೃತಿ ಜನ್ಮ ಗುಣಕಾರ್ಯವೆಂಬುವ ಜ್ಞಾನವೇ ಸತತ 1 ಗುಣಕರ್ಮ ಕಾಲಗಳ ಮನಮಾಡಿ ಜೀವರಿಗೆ ಉಣಿಸುತಿಹೆ ಸುಖದುಃಖ ಘನ ಮಹಿಮನೆ ಗುಣಗಳಭಿಮಾನಿ ಶ್ರೀವನಿತಾರಮಣ ಪ್ರಯೋ ಜನವಿಲ್ಲದಲೆ ಮಾಡಿ ಜನರ ಮೋಹಿಪಿಯೆಂಬೋ 2 ಈಶ ನೀನಾದ ಕಾರಣದಿಂದ ಸುಖದುಃಖ ಲೇಶವಿಲ್ಲವು ಸರ್ವಕಾಲಗಳಲಿ ಕೇಶವ ಜಗನ್ನಾಥ ವಿಠ್ಠಲನೆ ಭಕ್ತರ ಪ್ರ ಯಾಸವಿಲ್ಲದೆ ಕಾಯ್ವಿಯೆಂಬ ಸ್ಮರಣೆ ನಿರುತ 3
--------------
ಜಗನ್ನಾಥದಾಸರು
ಇದನೆ ಪಾಲಿಸು ಪಾಲಿಸೆನಗೆ ದೇವಾ ಪ ಸನ್ನುತ ಮಹಿಮ ಪದೋಪದಗೆ ಬಿನ್ನೈಪೆ ಅ ಶ್ರೀವಿರಿಂಚಾದ್ಯಖಿಳ ಚೇತನಾಚೇತನವು ಶ್ರೀವರನೆ ನಿನಗಧಿಷ್ಠಾನವೆಂದೂ ಸ್ಥಾವರಗಳೊಳಗೆ ನೈಜನುಯೆನಿಸಿ ಪರಿಣಾಮ ನೀವೆ ವೃದ್ಧಿ ಹ್ರಾಸ ಸರ್ವಕಾಲದ ವೆಂಬೋ 1 ಪ್ರಕೃತಿ ಗುಣಗಳ ಪ್ರವೇಶಿಸಿ ಬಾಧ್ಯ ಬಾಧಕನು ಅಕೃತಜ್ಞ ನೀನೆನಿಸಿ ಭಕತಾ ಜನರಾ ಕರ್ಮ ಸಕೃತ ನಿನ್ನನು ಸ್ಮರಿಸಿ ಹಿಗ್ಗುವರ ಸಂಗ ಸುಖ 2 ಕರ್ತು ಕಾರ್ಯರ್ತು ಪ್ರೇರಕ ಪ್ರೇರ್ಯ ಸುಖ ಸಾಕ್ಷಿ ಕ್ಷೇತ್ರ ಧನಧಾನ್ಯಹಿಕ ಪಾರತ್ರಿಕಾ ಮಿತ್ರ ತಮ ಶ್ರೀ ಜನಗನ್ನಾಥ ವಿಠಲನೆ ಸ ರ್ವತ್ರ ವ್ಯಾಪಕ ಮಮಸ್ವಾಮಿಯೆಂಬೋ ಜ್ಞಾನ3
--------------
ಜಗನ್ನಾಥದಾಸರು
ಇಂದರೆ ರಮಣಾ ಇಟ್ಟಾಂಗಿರಬೇಕು ಪ ಒಮ್ಮಿಗೆ ಕದಶನ ಶಾಖಾ ಆಹಾರವ ನೀಡುವನು ಒಮ್ಮಿಗೆ ಷೆಡ್ರಸದ್ದನ್ನವ ಸಾರುಣಿಸುವನು 1 ಒಮ್ಮಿಗೆ ಜೀರ್ಣ ಕಂಥಾಧಾರಿಯೆನಿಸುವನು| ಒಮ್ಮಿಗೆ ದಿವ್ಯಾಂಬರಗಳ ನುಡಿಸಿ ನೋಡುವನು 2 ಒಮ್ಮಿಗೆ ಧರಿಯಲಿ ತೋಳತಲೆದಿಂಬದಲಿಡುವಾ| ಒಮ್ಮಿಗೆ ಪರ್ಯಾಂಕಾಸನ ಸಂಪದ ಕೊಡುವಾ 3 ಒಮ್ಮಿಗೆ ಕವಡಿ ಲಾಭಕ ಕೃತ-ಕೃತ್ಯೆಯೆನಿಸುವನು ತಂದೆ ಮಹಿಪತಿ-ಕಂದಗ ಸಾರಿದ ನಿಜ ಖೂನಾ 4 ತಂದೆ ಮಹೀಪತಿ-ಕಂದಗ ಸಾರಿದ ನಿಜ ಖೂನಾ| ದ್ವಂದ್ವ ಗೆಲಿದು ಸ್ವಾನಂದದಲಿರುವವನೇ ಜಾಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿರಾ ಪಾಲಿಸು ಎನ್ನ ಇಂದಿರಾ ಪ ಇಂದಿರಾ ದೇವಿಯೆ ನಿನ್ನ | ಪಾದಪೊಂದಿದೆ ಸಲಹಬೇಕೆನ್ನಾ | ಆಹಕಂದರ್ಪ ಇಂದ್ರ ಫಣೀಂದ್ರ ಗರುಡ ಕಂದುಕಂಧರ ಬ್ರಹ್ಮಾದಿ ವಂದ್ಯಳೆ ಪಾಲಿಸು ಅ.ಪ. ಕೃತಿ ಶಾಂತಿ | ದುರ್ಗೆಭೂಮಿ ಶ್ರೀದೇವಿ ಜಯಂತಿ | ಲಕ್ಷ್ಮೀರಮೆ ದಕ್ಷಿಣೆ ಗುಣವಂತಿ | ಸತ್ಯಭಾಮೆ ರುಕ್ಮಿಣಿ ಮಹಾಕಾಂತಿ | ಆಹಈ ಮಹಾನಂತ ರೂಪ ನಾಮಗಳುಳ್ಳಕೋಮಲ ಗಾತ್ರಿಯೆ ಕಾಮಜನನಿ ಕಾಯೆ 1 ಶ್ರೀಭಾಗ ಮಹಾ ಪ್ರಳಯದಲ್ಲಿ | ಪದ್ಮನಾಭಾಗೆ ಬಹು ಭಕ್ತಿಯಲ್ಲಿ | ದಿವ್ಯಆಭರಣಗಳಾಕಾರದಲ್ಲಿ | ಮಿಕ್ಕವೈಭವನೇಕ ರೂಪಾದಲ್ಲಿ | ಆಹಸ್ವಾಭಿಮಾನದಿ ಬಹು ಶೋಭನ ಪೂಜೆಯಲಾಭಗಳೈದಿದ ಶೋಭನವಂತಳೆ 2 ದೇಶಕಾಲಾದಿಗಳಲ್ಲಿ | ಜೀವರಾಶಿ ವೇದಾಕ್ಷರದಲ್ಲಿ | ಇದ್ದುವಾಸುದೇವನ ಬಳಿಯಲ್ಲಿ | ಸರಿಸೂಸಿ ವ್ಯಾಪ್ತಿ ಸಮದಲ್ಲಿ | ಆಹಲೇಸಾಗಿ ಒಪ್ಪುತ್ತ ಈಶ ಕೋಟಿಯೊಳುವಾಸಾಳೆ ಎನ್ನಭಿಲಾಷೆ ಸಲ್ಲಿಸಬೇಕು3 ಭವ ಬಂಧಾ | ಆಹನೀನೆ ಕಳೆದು ದಿವ್ಯ ಜ್ಞಾನ ಭಕುತಿಯಿತ್ತುಪ್ರಾಣಪತಿಯ ಪಾದವನ್ನು ತೋರಿಸಬೇಕು 4 ನಿತ್ಯ ಭಾಗ್ಯವು ನಿನಗೊಂದೆ | ಅಲ್ಲರತ್ನಾಕರನು ನಿನ ತಂದೆ | ತಾಯಿರತ್ನಗರ್ಭಳು ಕೇಳು ಮುಂದೆ | ಪತಿಗತ್ಯಂತ ಪ್ರಿಯಳಾದೆ ಅಂದೆ | ಆಹಸತ್ಯಬೋಧರು ಮಾಳ್ಪ ಅತ್ಯಂತ ಪೂಜೆಯಿಂಯುಕ್ತೆ ಶಿರಿಯೆ ನಿನಗೆತ್ತ ಕತ್ತಲು ಕಾಣೆ 5 ಲೋಕ ಜನನಿಯು ಎಂದು ನಿನ್ನಾ | ಕೀರ್ತಿಸಾಕಲ್ಯವಾಗಿದೆ ಘನ್ನಾ | ಎನ್ನಸಾಕಲಾರದೆ ಬಿಡಲಿನ್ನಾ | ಮುಂದೆಯಾಕೆ ಭಜಿಸುವುದು ನಿನ್ನಾ | ಆಹಸಾಕಾರವಾಗಿನ್ನು ಬೇಕಾದ ವರಗಳನೀ ಕರುಣಿಸಿ ಎನ್ನ ಜೋಕೆ ಮಾಡಲಿ ಬೇಕು 6 ಆವ ಜನ್ಮದ ಪುಣ್ಯಫಲದಿ | ನಿನ್ನಸೇವೆ ದೊರಕಿತೊ ಈ ಕ್ಷಣದಿ | ಎನಗೀವ ಭವ್ಯ ಕೇಳು ಮನದಿ | ಆಹಶ್ರೀ ವ್ಯಾಸ ವಿಠಲನ್ನ ಸೇವಿಪ ಯತಿಗಳ ಸಹವಾಸವನೆ ಇತ್ತು ಭಾವ ಶುದ್ಧನ ಮಾಡು 7
--------------
ವ್ಯಾಸವಿಠ್ಠಲರು
ಇಂದಿರಾ ರಮಣ ಗೋವಿಂದನಾ ಜ್ಞೆಯ ಪಡೆದು ಬಂದಿರುವ ದಾಸರಿವರು ಪ ಇಂದು ಧರ್ಮದಿ ಹರಿಯ ಬಾಂಧವರ ಗೃಹ ಸ್ವರ್ಣ ಮಂದಿರವಾಗುವುದೆಂದು ಸಂದೇಶ ಕಳಿಸಿರುವ ಅ.ಪ ಸತ್ವ ರಜ ತಮ ಭೇದವಿಹುದು ದಾನಗಳಲ್ಲಿ ಕರ್ತವ್ಯವೆಂದರಿತು ಭಕ್ತಿಯಿಂದ ಉತ್ತಮೋತ್ತಮ ದೇಶ ಪಾತ್ರ ಕಾಲಗಳರಿತು ಪ್ರತ್ಯುಪಕೃತಿಯ ಗಣಿಸದಿತ್ತ ದಾನವೇ ಶ್ರೇಷ್ಠ 1 ಶ್ರಾವಣದ ಶನಿವಾರ ಶ್ರೀ ವ್ಯಾಸರಾಜರ ಮಾಧವ ದೇಶಕಾಲ ಪಾತ್ರ ಈ ವಿಧದ ಯೋಗವಿನ್ಯಾವ ಜನಗಳಿಗುಂಟು ನೀವು ನೀಡುವ ದಾನ ಕಾವುದಾಪತ್ತಿನಲಿ 2 ಒಂದು ಹಿಡಿಯವಲಕ್ಕಿ ತಂದಿತಾ ಬ್ರಾಹ್ಮಣಗೆ ಎಂದೂ ಕೇಳದ ಸಕಲ ಸೌಭಾಗ್ಯವ ಇಂದು ನೀಡಿರಿ ಮಿತ್ರ ಬಾಂಧವರೆ ದೇವಕಿಯ ಕಂದನ ಪ್ರಸನ್ನತೆಯ ಬಂದು ಪಡೆಯಲಿಬಹುದು 3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರಾದೇವಿಯ ರಮಣ ಬಾ ವೃಂದಾರಕ ಮುನಿವಂದ್ಯ ಬಾ ಸಿಂಧುಶಯನ ಗೋವಿಂದ ಸದಮಲಾ ನಂದ ಬಾ ಮಾವನ ಕೊಂದ ಬಾ ಗೋಪಿಯ ಕಂದ ಬಾ ಹಸೆಯ ಜಗುಲಿಗೆ ಶೋಭಾನೆ 1 ಕೃಷ್ಣವೇಣಿಯ ಪಡೆದವನೆ ಬಾ ಕೃಷ್ಣನ ರಥ ಹೊಡೆದವನೆ ಬಾ ಕೃಷ್ಣೆಯ ಕಷ್ಟವÀ ನಷ್ಟವ ಮಾಡಿದ ಕೃಷ್ಣ ಬಾ ಯದುಕುಲ ಶ್ರೇಷ್ಠ ಬಾ ಸತತ ಸಂ ತುಷ್ಟ ಬಾ ಉಡುಪಿಯ ಕೃಷ್ಣ ಬಾ ಹಸೆಯ ಜಗುಲಿಗೆ ಶೋಭಾನೆ 2 ಎಲ್ಲರೊಳು ವ್ಯಾಪಕನಾಗಿಪ್ಪನೆ ಬಲ್ಲಿದ ಧೊರೆಯೇ ಜ್ಞಾನಿಗಳರಸನೆ ಎಲ್ಲಿ ನೋಡಲು ಸರಿಗಾಣೆ ವಿಜಯವಿ- ಠ್ಠಲ ಬಾ, ಅಪ್ರತಿಮಲ್ಲ ಬಾ ನೀ- ಹಸೆಯ ಜಗುಲಿಗೆ ಶೋಭಾನೆ 3
--------------
ವಿಜಯದಾಸ