ಒಟ್ಟು 976 ಕಡೆಗಳಲ್ಲಿ , 96 ದಾಸರು , 772 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಲ್ಲವಗಿಲ್ಲಿದೆ ವೈಕುಂಠ ಪ ಶÀರೀರ ಹರಿಯ ಪಟ್ಟಣ ಹೃದಯಸರೋಜವಾತನ ಅರಮನೆ ಸೂರ್ಯಾದಿ ದೇವರು ಚಕ್ಷುರಾದಿಗಳಲ್ಲಿದ್ವಾರಪಾಲಕರಾಗಿ ಇಪ್ಪರೆಂದು 1 ನಡೆ ಸರ್ವದಾ ಶ್ರೀಹರಿಯ ಯÁತ್ರೆ ನುಡಿ ಸರ್ವ ಶಬ್ಧಾರ್ಥ ಹರಿಯನಾಮಬಿಡದೆ ಶ್ರೀಹರಿಗೆರಗುವ ಚೇತನಜಡಗಳೆಲ್ಲ ಶ್ರೀಹರಿಯ ಪ್ರತಿಮೆಯೆಂದು 2 ಅನಿರುದ್ಧ ರೂಪಗಳಿಂದಶ್ರೀರಮಣನೆ ಭೋಜ್ಯಗಳಲ್ಲಿಪ್ಪಸಾರ ಅಂಶವನು ಪ್ರದ್ಯುಮ್ನ ಸಂಕರುಷಣಮೂರುತಿಯಿಂದ ಭುಂಜಿಪನೆಂದು 3 ಹರಿ ಚರಾಚರ ಸರ್ವ ಜಗದ್ಭರಿತಮುರಹರನಿದ್ದುದೆ ವೈಕುಂಠನರಹರಿಯಲಿ ನವವಿಧ ಭಕುತಿಗೆಸರಿಸಮವೆಂದಿಗಿಲ್ಲವೆಂದು 4 ಜಾಗರಾದಿಗಳಲ್ಲಿ ವಿಶ್ವಾದಿ ಮೂರುತಿಯೋಗಿ ಶ್ರೀಕೃಷ್ಣನೆ ವಿಷಯಂಗಳಭೋಗಿಪನೆಂಬ ಯೋಗಿಗೆ ವಿಹಿತಭೋಗಂಗಳೆಲ್ಲ ಯಾಗಂಗಳೆಂದು 5
--------------
ವ್ಯಾಸರಾಯರು
ಬಹುಕಾಲಕೆ ಕಂಡೆ ಚೋದ್ಯವ ಇದು ಅಹುದಾದರಹುದೆನ್ನಿ ಇಲ್ಲವೆ ಛಿ ಎನ್ನಿ ಪ ಚಂಬು ಚರಿಗೆಯಂತೆ ತೆಗೆಯಿತು ತಾನೆತಾನಾಗಿ 1 ನಿತ್ಯ ಸಕಲತ್ತು ತಾನಾಗುತ ಜಾತಿಯ ನಡತೆಯನಡೆಸುವುದನು 2 ಸರ್ವತ್ರಸಮಗಾಣುತ ಮನೆಯೆಲ್ಲ ನೀರಾದುದು 3 ಕೊಳಗು ತಾನು ಒಲಿಸಿಕೊಂಡು ಮೇಳದಿ ಏಕೋ ಪಾತ್ರಗಳಿಂದ ಮೆರದುದ 4 ಜತನವು ಎಂದೆನ್ನಿಸಿಕೊಳ್ಳುತ ಲಕ್ಷ್ಮೀಪತಿಯಭೀಷೇಕಕ್ಕು ತಾನೆ ತಾನಾದುದ 5
--------------
ಕವಿ ಪರಮದೇವದಾಸರು
ಬಾ ಗೋಪತಿ ಗೋಪನೆ ಮನ್ಮನಕೆ | ತಡಮಾಡುವುದ್ಯಾಕೆಭೋಗಿ ಮದಾಪಹ | ಆಗಮ ವೇದ್ಯನೆ | ನಮಿಸುವೆ ತವಪದಕೆ ಪ ಯೋಗಿ ವರೇಣ್ಯಾ ಅ.ಪ. ನೀರಜ ಸಂಭವಮುರಾರಿಗಳಿಂದಲಿ ಆರಾಧಿಪ ಪದ 1 ನವನೀತ ಚೋರ | ಪಾವನ ಚರಿತ | ಸ್ವರತ ಅನವರತಭುವನೈಕ ವಂದ್ಯ ವಿಶೋಕದಾತ | ಸಮಅಧಿಕ ರಹಿತಅವನಿಜೆ ವಲ್ಲಭ | ತ್ರಿವಿಧರಿ ಗೋಸುಗವಿವಿಧ ರೂಪಂಗಳ | ತಾಳುವ ಖ್ಯಾತ 2 ಹಂಸ ಡಿಬಿಕ ಶಕಟಾರಿ ಮುರವೈರಿ | ಮುಷ್ಠಿಕಮಲ್ಲಾರಿಕಂಸಾರಿ ವತ್ಸಾರಿ ಪರಮ ಉದಾರಿ | ಬಾಬಾರೆಲೊ ಶೌರಿಶಿಂಶುಮಾರ ಸುರ ಸಂಶಯ ಹರಿಸಲು |ಸ್ವಾಂಶದಿ ಜನಿಸುತ ಭಕ್ತರುದ್ಧರಿಸಲು 3 ಕರುಣ ವನದಿ ಶರಣಾಗತ ಪರಿಪಾಲ || ಶಿರಹರ ಶಿಶುಪಾಲತರಳ ದೃವಾದಿಯ ಪೊರೆವುದು ತವಶೀಲ | ಪಾಲಿಸು ಶ್ರೀಲೋಲಕರಣ ನಿಯಾಮಕ ವರ್ಣ ವೇದ್ಯತವಚರಣ ಬಯಸುವೆ ಹೃದಯ ಸದನಕೇ 4 ತೋಂಡ ಬೋವ ಮಾಯಾ ಪಟಲ 5
--------------
ಗುರುಗೋವಿಂದವಿಠಲರು
ಬಾ ಹರಿ ಭಕುತರ ಭಯ ಪರಿಹರಿಸುತ ಸರಸಿಜ ಸದನೆಯರೊಡಗೂಡಿ ನಲಿಯುತ ಪ ನೀರೊಳು ಮುಳುಗಿ ಮೀನನೆಂದೆನಿಸಿ ಭಾರವ ಪೊತ್ತಿಹ ಕೂರ್ಮನೆ ಜವದಿ 1 ಕೋರೆಗಳಿಂದ ಧಾರುಣಿತಂದ ಕ್ರೂರನುದರ ಕರುಳ್ಹಾರವೆ ಚಂದ 2 ಮೂರಡಿ ಭೂಮಿಯ ಬೇಡುತ ಬಂದೆ ನಾಡೊಳು ಕೊಡಲಿಯ ಪಿಡಿಯುತ ನಿಂದೆ3 ಸೇತುವೆ ಕಟ್ಟುತ ಸೀತೆಯ ತಂದೆ ಪಾತಕಿ ಕಂಸನ ನಾಶವ ಗೈದೆ4 ಬುದ್ಧನೆಂದೆನಿಸಿದೆ ಶುದ್ಧಮೂರುತಿಯ ಮುದ್ದು ತೇಜಿಯ ನೇರುತ ಮೆರೆದವನೆ 5 ಬಾ ಮುರವೈರಿ ಬಾ ಬಾರೊ ಶೌರಿ ಭಾಸುರ ವಂದ್ಯ ಬಾ ಮುದದಿಂದ6 ಪಾದ ದೃಢದಿ ಭಜಿಪೆನೈ ಕಡಲ ಶಯನ ಕಮಲನಾಭ ವಿಠ್ಠಲನೆ 7
--------------
ನಿಡಗುರುಕಿ ಜೀವೂಬಾಯಿ
ಬಾಗಿಲ ತೆಗೆಯವ್ವಾ ಲಕ್ಷ್ಮೀದೇವಿ ಬಾಗಿಲ ತೆಗೆಯವ್ವಾ ಪ ಬಾಗಿಲ ತೆಗೆಯವ್ವಾ ಸಾಗಿ ಬಂದಿಹನಯ್ಯಾ ಭೋಗಿ ಭೂಷಣ ಪ್ರಿಯ ಕೇಶವನ ದಾಸಾ ಅ.ಪ. ಸಂಸಾರ ಜಾಲದಲೀ ಸಿಲುಕಿ ಬೆಂದೇ ಸಂಸಾರ ಮಾಯದಲೀ ಹಿಂಸೆ ಮಾಡಿದವಯ್ಯಾ ಐದಾರುರಿಪುಗಳು ಸಂಶಯ ಪಡದೆ ಬಂದೇ ಶರಣೆಂದೇ 1 ಭವದೊಳುರಳಿ ಬಿದ್ದೆನೋ ಪ್ರಾಣಾಂತಕ ಸವೆದು ಕರಗಿ ಬೆಂದೆನೋ ಯುವತಿಯರೊಡಗೂಢಿ ಇಹವೆನ್ನೆ ನೆರೆನಂಬಿ ವಿವಿಧ ಕಷ್ಟವ ಪೊಂದಿ ಬಂದೇ ಶರಣೆಂದೇ 2 ಹಲವು ಜನ್ಮಗಳಿಂದ ನೋಡಲು ಬಂದೆ ಹಲವು ರೀತಿಗಳಿಂದ ನಳಿನ ನಾಭನ ದಿವ್ಯ ರೂಪವ ನೋಡುವೆ ನಳಿನಾಕ್ಷಿ ತಾಯ ಕೇಶವನ ಸೇರುವನು 3
--------------
ಕರ್ಕಿ ಕೇಶವದಾಸ
ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರವ್ವ ಮಹÀಭಾಗ್ಯದಭಿಮಾನಿ ಶ್ರೀಹರಿ ನಿಜರಾಣೀ ಪ ಸಾರಿದೆ ನಿನಪಾದನೀರಜಯುಗ ಮನೋ - ವಾರಿಜದಲಿ ನೀ ತೋರುತ ಲಕುಮಿ ಅ.ಪ ಅಖಿಲಾಗಮವಿನುತೆ ಎನ್ನಯ ಮಾತೆ ಸಕಲಸುರಗೀತೆ ನಿಖಿಲಾ ತ್ರಿಜಗದ್ವ್ಯಾಪ್ತೆ ಪ್ರಖ್ಯಾತೆ ಸಂಪತ್ಪ್ರದಾತೇ ನಖಮುಖ ಮಾತ್ರದಿ ವಿಖನಸಆಂಡದ ಅಖಿಲವ್ಯಾಪಾರವ ಸುಖದಲಿ ಮಾಡುವಿ 1 ಇಷ್ಟಾರ್ಥವ ಸಲಿಸಿ ಎನ್ನನು ಪೊರೆಯೇ ಕೊಲ್ಹಾಪುರÀ ಶಿರಿಯೆ ಅಷ್ಟ್ಟದಾರಿದ್ರÀ್ಯಗಳನು ನೀ ತರಿಯೆ ಈ ಕ್ಷಣ ಸುಖಸುರಿಯೇ ಅಷ್ಟಪÀÀದೋದರ ಅಷ್ಟಮೂರ್ತಿನಿನ್ನ ದೃಷ್ಟಿಯಿಂದ ಮಹಶ್ರೇಷ್ಟನಾಗಿಹನೇ 2 ಕ್ಷೀರಾವಾರಿಧಿಯೊಳು ಸಂಜಾತೆ ಮಾರನ್ನ ಮಾತೆ ಅ - ಪಾರಾಮಹಿಮಾಳೆ ಸುರಸನ್ನುತೆ ಜಗದೊಳಗೆ ಖ್ಯಾತೆ ವಾರವಾರಕೆ ದುರಿತಾರಿ ನಿನ್ನಯ ಪೂಜೆ ಚಾರುಮನದಿ ಮಾಳ್ಪೆ ಧೀರೆ ಉದಾರೆ 3 ವಾಸವಾಗೆನ್ನಾ ಮನೆಯೊಳಗಿನ್ನಾ ಪಾಲಿಸೆ ಇದನನ್ನಾ ವಾಸವಾದಿ ಸುರರಾಸೆಯ ಪೂರ್ತಿಸಿ ಈಶರ ಮಾಡಿದಂತೆ ಈ ಸಮಯದಿ ಎನ್ನ 4 ನಗೆಮೊಗ ಚೆನ್ನೆ ಸುಪ್ರಸನ್ನೆ ಸುರನಿಕರರನ್ನೆ ಮಗುವಿನ ಮಾತೆಂದು ನಗುತ ನೀ ಇನ್ನೆ ಬಾ ಬರುವದು ಘನ್ನೆ ನಗಹರ ಸುರಪನ ಮಗನನ ಸಖ ಗುರು ಜಗನ್ನಾಥ ವಿಠಲ ಸಮ್ಮೊಗವಾಗಿ ಬೇಗ ನೀ 5 ಶಿರಿದೇವಿ ನಿನ್ನ ಚರಣ ಸರಸಿಜಯುಗಕೆ ಶಿರದಿ ನಮಿಪೆ ಸತತ ಸರಸಿಜಾಂಬಕೆ ಸರಿಯಾರು ನಿನಗೀ ಸರಸಿಜಭವಾಂಡದೊಳು ಸgಸಿಜಾಕ್ಷಗೆ ದೇಶಕಾಲಗಳಿಂದ ಸರಿಯಾಗಿ ನಿತ್ಯದಲಿ ಪರಿಪರಿಸೇವಾದಿಂದ ಹರಿಯಾ ಮೆಚ್ಚಿಸಿ ಪರಮಾದರದಿಂದ ಪತಿಗನುಕೂಲ - ಪರಳಾಗಿ ಸೃಷ್ಟಿಗೆ ಮೂಲಕಾರಣಳೆನಿಸಿ ಪರಮೇಷ್ಟಿ ಮೊದಲಾದಾನಂತಜೀವರನ್ನ ಅರಿತು ಯೋಗ್ಯಾಯೋಗ್ಯತೆಯನ್ನನು - ಸರಿಸಿ ಸೃಜಿಪ ಶಕ್ತಿ ನಿನಗುಂಟು ನೀ “ಯಂ ಯಂ ಕಾಮಯೆ ತಂ ತಮುಗ್ರಂ ಕೃಣೋಮಿ” ಎಂತ ಶ್ರುತಿ ಸಾರುತಿದೆ ಶಿರಿ ನಿನ್ನ ಕಟಾಕ್ಷದಿ ಸಕಲೈಶ್ವರ್ಯಗಳು ಪರಿಪರಿ ವಿಧದಿಂದ ಒದಗುತಿಪ್ಪವು ಹರಿಕೃಪೆ ನಿನ್ನೊಳಗೆಂತಿಹುದೋ ಅರಿಯಾರು ಎಂದಿಗು ಬೊಮ್ಮಾದಿಸುರರು ನರರೇನು ಬಲ್ಲರಮ್ಮ ನಿನ್ನ ಮಹಿಮೆಯ ಶಿರಿಮಾನಿ ಎನ್ನ ನೀನು ಕರುಣದಿಂದಲಿ ನೋಡಿ ಹರಿಮೂರ್ತಿಯನ್ನೇ ತೋರೆ ಹರಿಣಲೋಚನೆ ಹರಿದಾಸಜನರೊಡೆಯ ಗುರುಜಗನ್ನಾಥವಿಠಲನ್ನ ಇರವು ತೋರಿಸಿ ಎನ್ನ ಪೊರೆಯಮ್ಮ 6
--------------
ಗುರುಜಗನ್ನಾಥದಾಸರು
ಬಾರೈಯ ಬಾರೈಯ ಸೂರಿವರಿಯ ಐಕೂರು ನಿಲಯ ಪ ನೀನ್ಹಾಕಿದ ಸುಜ್ಞಾನದ ಸಸಿಗಳು ಮ್ಲಾನವಾಗುತಿವೆ ಸಾನುರಾಗದಲಿ 1 ಸತಿ ತವಕರುಣ ಸಲಿಲವ ಎರೆದು ಫಳಿಲನೆ ವೃಥ್ಧಿಯ ಗಳಿಸಿ ಸಲಹಲು 2 ನಾಟಿಸಿದ ಸಸಿಗಳು ನೀಟಾಗುವ ಪರಿ ತೋಟಗ ನೀ ಕೃಪೆ ನೋಟದಿ ನೋಡಲು 3 ಕೋವಿದರ ನೀ ಕಾವಲಿ ಇರಲು | ಕು ಜೀವಿಗಳಿಂದಲಿ ಹಾವಳಿಯಾಗದು 4 ನೀಮರೆದರೆ ಸುಕ್ಷೇಮವಾಗದು ಶಾಮಸುಂದರನ ಪ್ರೇಮದ ಪೋತ 5
--------------
ಶಾಮಸುಂದರ ವಿಠಲ
ಬಾರೊ ನೀಯನ್ನಮನಿಗೆ ಗೋಪಾಲಕೃಷ್ಣ ಪ ಅಂದದಿ ಚಂದದಿ ಆಡುತ ಪಾಡುತ ಧಿ ಮಿಧಿಮಿಯನ್ನುತ ದಿನ ದಿನ ಕುಣಿಯುತ 1 ಅಂದುಗೆ ಗೆಜ್ಜೆಗಳಿಂದ ಶೋಭಿತನಾಗಿ ಮಂದಾರ ಕೂಡಿಕೊಂಡು ಗಜಗು ಭೊಗರಿಯಾಡುತ 2 ಬಾಲಕನಾಗಿ ನೀ ಲೀಲೆಯ ತೋರುತ ಲಾಲಿಯ ನಾಡುವ ಬಾಲಕರ ಕೂಡ 3 ಕುಡಿಯಲು ನಿನಗೆ ಕೊಡುವೆನು ನೊರೆಹಾಲ ಹುಡುಗರ ಕೂಡಿಕೊಂಡು ಶಿಡಿಗುಡಿನಾಡುತ 4 ಪತಿ ಹೆನ್ನೆ ವಿಠಲ 5
--------------
ಹೆನ್ನೆರಂಗದಾಸರು
ಬಾರೊ ರಂಗ ಕೋಮಲಾಂಗ ದಾರಿಗೆ ತನ್ನಂಗಸಂಗ ನೀಡಲ್ಹೋದ ಎನ್ನ ಕಂಗಳಿಂದ ನೋಡದೆ 1 ಉಂಗುರಗುರುಳ ಚೆಲ್ವೆ ಉದಯಭಾಸ್ಕರನಂತಿದ್ದ ಜಾಂಬವಂತಿಯೇರ್ಹಂಬಲಿಸುತ್ಹೋದನೆ ಸಖಿಯೆ 2 ರಂಗುತುಟಿ ರಜತದಾಭರಣ ಕುಂದಣದಂತಿರುವೋ ಕೋಮಲೆ ಇಂದು ನಾ ಕರೆತಾವೇನಮ್ಮ ಸುಂದರಾಂಗನ 3 ವೇಳ್ಯಮಾಡಿದೆನ್ನರಮಣ ಕಾಳಾದೇವಿ ಮನೆಯಲವಳ ತೋಳ ಪಿಡಿದು ಸೆಳೆಮಂಚದಲ್ಲಿ ಕುಳಿತಿಹನೆ 4 ಏಳು ಏಳೆಂದೆಬ್ಬಿಸುತಲಿ ಈರೇಳು ಲೋಕದೊಡೆಯನ ನಾಳೆ ನಾ ಕರೆತಾವೇನಮ್ಮ ನಾರದಪ್ರಿಯನ 5 ಅಮ್ಮನಾ ಸ್ಮರಿಸಲ್ಲಾ ್ಹ್ಯಗೆ ಪನ್ನಂಗಶಯನ ನೀಲ ರನ್ನಮಂಚದಲ್ಲಿ ಲೆತ್ತವನ್ನಾಡಹೋದ 6 ಅನ್ನವನು ಬಿಟ್ಟು ಭಾಮೆ ತನ್ನ ಪ್ರಾಣ ತೊರೆವೋಳೆಂದು ಮನ್ನಿಸಿ ಕರೆತಾವೇನಮ್ಮ ನಿನ್ನಾಳುವೋನ 7 ಮುದ್ದು ಮುಖವನು ನೋಡುತಿದ್ದನಾಕೆ ಮಂದಿರದಲ್ಲಿ ಮದ್ದು ಮಾಡ್ವೊಲಿಸಿದ್ದಾಳೇನಾ ಭದ್ರಾ ಕೃಷ್ಣಗೆ 8 ಸದ್ಯೋಜಾತನಯ್ಯನಯ್ಯ ಕದ್ರುಕುಮಾರನ ಶಯ್ಯ- ನ್ನ ್ಹದ್ದೇರಿಸಿ ಕರೆತಾವೇನಮ್ಮ ಪದ್ಮನಾಭನ 9 ಅತ್ಯಂತ ಪ್ರೀತಿ ಮೋಹದ ಮಿತ್ರವಂತೆ ಮಂದಿರದಲ್ಲಿ ವತೆÀ್ತಯಿಟ್ಟಂತಾಯಿತಮ್ಮ ವಾಮಾಂಗಿ ಹರಿಯ 10 ಸತ್ಯವಾಗಿ ಕೇಳೇ ಭಾಮೆ ಹೆತ್ತ ತಾಯಿ ತಂದೆಯರಾಣೆ ಹಸ್ತ ಮುಗಿದು ಕರೆತಾವೇನರ್ಕಕೋಟಿತೇಜನ 11 ಪಚ್ಚೆಪದಕ ರತ್ನದಾಭರಣ ಅಚ್ಚಮುತ್ತಿನಂತಿರುವೊಳ್ವೊಯ್ಯಾರಿ ಮೆಚ್ಚು ಮಾಡೊಲಿಸಿದ್ದಾಳೇನೊ ಲಕ್ಷಣಾ ಹರಿಯ 12 ರಕ್ಷಿಸ್ಹರಿ ರಕ್ಷಿಸೆಂದು ಇಕ್ಷು ಬಿಲ್ಲನಯ್ಯನ ಕರೆತಂದು ಈ ಕ್ಷಣದಲ್ಲಿ ಕೂಡಿಸುವೆ ಇಂದಿರಾಪತಿಯ 13 ಚೆಲ್ವೆರುಕ್ಮಿಣಿ ಮಂದಿರದಲ್ಲಿ ಮಲ್ಲಿಗೆ ಮಂಚದಲ್ಲೆಚ್ಚರಿ- ಲ್ಲದ್ಹಾಗೆ ಕುಳಿತಿದ್ದ ಬರುವೋನಿಲ್ಲಿಗಿನ್ನಾ ್ಹ್ಯಗೆ14 ಪಲ್ಲವಪಾದಗಳಿಂದ ನಿಲ್ಲದೆ ಭೀಮೇಶಕೃಷ್ಣ ಇಲ್ಲಿಗೆ ಬಂದಿರುವ ನೋಡೆ ಫುಲ್ಲನಯ್ಯನು 15
--------------
ಹರಪನಹಳ್ಳಿಭೀಮವ್ವ
ಬಾರೋ ನೂತನ ಗೃಹಕೆ ಹರಿಯೆ ಸಿರಿ ಮಾರುತ ಮುಖಸುರರೊಡಗೂಡಿ ಧೊರಿಯೆ ಪ ಯಾರು ಕೇಳದಲಿಹ ಸ್ಥಳವ ನೀನೆ ಪ್ರೇರಿಸಿ ಗೃಹವ ನಿರ್ಮಿಸಿದೆಯೋ ದೇವ ನೂರಾರು ಪರಿರೂಪಾಂತರವ ಪೊಂದಿ ಈ ರೀತಿ ನವಸುಸಂಸ್ಕøತವಾದ ಗೃಹವ 1 ಈರಪ್ಪÀ ಬಡಿಗನೆಂಬುವನು ಮನಿಯ ಚಾರುತನದಲಿಂದ ನಿರ್ಮಿಸಿರುವನು ತೋರುವ ಸಿಂಹಾಸನವನು ಮಧ್ಯಾ ಗಾರದಿನಿನಗಾಗಿ ವಿರಿಚಿಸಿಹನು 2 ಸುತ್ತಲು ನಿರ್ಭಯವಿಹುದು ವಂ - ಭತ್ತು ದ್ವಾರಗಳಿಂದ ಶೋಭಿಸುತಿಹುದು ಹತ್ತಿರೆ ಗುರುಗೃಹ ವಿಹುದು ಮುಂದೆ ಚಿತ್ತಜನಯ್ಯನ ಮಂದಿರ ವಿಹುದು 3 ಉತ್ತಮ ಗೃಹವೆನಿಸುವದು ಇ - ಪ್ತತ್ತುನಾಲಕುವಸ್ತುಗಳಕೂಡಿಹುದು ಸುತ್ತೇಳು ಪ್ರಾಕಾರವಿಹುದು ಸುತ್ತು ಮುತ್ತಲು ದ್ವಿಜಜನಹೊಂದಿ ಕೊಂಡಿಹುದು 4 ಗೃಹವುನಾಲ್ಕು ವಿಧವಿಹುದು ಸೂಕ್ಷ್ಮ ಗೃಹ ನಿನಗಾಗಿಯೆ ನೇಮಿಸಿಯಿಹುದು ಬಹಿರದಿ ಪಾಕಗೃಹ ವಿಹುದು ಅಲ್ಲಿ ಗೃಹಿಣಿಯಿಂ ತ್ರಿವಿಧಾನ್ನ ಪಕ್ವಗೈತಿಹುದು5 ನಡುಮನೆ ದೊಡ್ಡದಾಗಿಹುದು ಅಲ್ಲಿ ಸಡಗರದಲಿ ಬ್ರಹ್ಮವೃಂದ ಕೂಡುವದು ಬಿಡದೆ ಸತ್ಕಥೆನಡೆಯುವದು ಮುಂದೆ ಪಡಸಾಲೆಯಲಿ ಸರ್ವಜನ ಸಭೆಯಹುದು 6 ಶ್ವಸನ ಮಾರ್ಗವಲಂಬಿಸಿರುವೆ ಮನಿಯ ಹಸನ ಮೆಹದೀನಾದಿಯಿಂ ಮಾಡಿಸಿರುವೆ ಹೊಸಸುಣ್ಣವನು ಹಚ್ಚಿಸಿರುವೆ ಏಕಾ ದಶ ಸೇವಕರ ನಿನ್ನ ವಶದೊಳಿರುಸುವೆ 7 ನಾನಾಧನ ನಿನಗರ್ಪಿಸುವೆನು ತನು ಮಾನಿನಿಸಹ ನಿನ್ನಾಧೀನ ಮಾಡುವೆನು ಜ್ಞಾನಭಕ್ತಿಯೆ ಇಚ್ಛಿಸುವೆನು ನಿನ್ನ ಧ್ಯಾನಾನಂದದಿ ಧನ್ಯನೆಂದಿನಿಸುವೆನು8 ಹರಿಯೆ ಲಾಲಿಸು ಎನ್ನ ಸೊಲ್ಲಾ ಮುಂದೀ - ಪರಿಗೃಹದೊರೆವುದು ಸುಲಭವೇನಲ್ಲಾ ¨ರೆ ನಿನ್ನ ಬಿಡೆನೊ ಶ್ರೀ ನಲ್ಲಾ ಎನ್ನ ಮೊರೆಯ ನಾಲಿಸಿ ನೋಡೋ ವರದೇಶವಿಠಲಾ9
--------------
ವರದೇಶವಿಠಲ
ಬಾಳೆ ಕಿತ್ತಳೆ ಜಂಬುದ್ರಾಕ್ಷಿ ರಸಾಲ ಫಣಸ ಖರ್ಜೂರ ಫಲಗಳ ಬಾಲಕೃಷ್ಣಗೆ ಮನುಜಾ ಸಾಯಂಕಾಲ ಪ್ರಾರ್ಥಿಪುದು ಪ ಪರಮಪುರುಷನು ಪೂಜೆಕಾಲದಿಸುರರು ಕರ್ಮಗಳಿಗೆ ಚಿಂತಿಸಿಪರಿಚರಿಸುವ ಪುರುಷ ಮಾಧವಚರಣ ಪೊಂದುವನು 1 ನಾನು ಮಾಡುವ ಕವಿತೆ ಎಲ್ಲವವೇಣು ಬಾಲನ ಮುಂದೆ ಪೇಳುವೆಸಾನುರಾಗವ ಮಾಡಲೆನ್ನೊಳುಮೌನಿ ನಾರದರು 2 ಇಂದಿರೇಶನ ಮುಖವ ನೋಡುತನಂದಗೋಪಗೆ ಈ ಸುಶೃತಿಗಳಿಂದವೃಂದ ಚರಿಸುತ ತತ್ವಾದಾಂಬುಜದ್ವಂದ್ವಕರ್ಪಿಸುವೆ 3
--------------
ಇಂದಿರೇಶರು
ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ ಪ ಬಿಟ್ಟಿರಲಾರೆ ಮನಮುಟ್ಟಿ ಭಜಿಪೆನಯ್ಯ ಅಷ್ಟಮಹಿಷೇರ ಸಹಿತ ನಾಟ್ಯವಾಡುತ ಬೇಗ ಬಾ ಅ.ಪ ಗೊಲ್ಲರ ಮನೆ ಪೊಕ್ಕು ಪಾಲ್ಬೆಣ್ಣೆಗಳ ಮೆದ್ದು ಚೆಲ್ವ ಲಲನೇರ ಗಲ್ಲ ಮುದ್ದಾಡುತ ಬೇಗ 1 ಮಂದಗಮನೆಯರ ಮಂದಹಾಸದಿ ಅಪ್ಪಿ ದ್ವಂದ್ವ ಕುಚದಲ್ಲಿಟ್ಟ ನಂದಜ ಕರಗಳಿಂದ 2 ಮಿರಿಮಿರಿ ಮಿಂಚುವ ಕಿರೀಟ ಕುಂಡಲ ಧರಿಸಿ ವಾರೆ ನೋಟದಿ ನಾರೇರ ಮನ ಸೆಳೆವ 3 ಸುಮನಸರೊಂದಿತ ಯಮುನಾ ಪುಳಿನದಿ ವಿಮಲ ವೇಣುಸ್ವರದಿ ಕಮಲಾಕ್ಷಿಯರೊಲಿಸಿದ 4 ಶ್ರೀವತ್ಸ ಕೌತ್ಸುಭ ಪವಳ ಮುತ್ತಿನಹಾರ ನ್ಯಾವಳ ಸರಿಗಿಟ್ಟು ಗೋವಳರೊಡಗೂಡಿ 5 ತುತ್ತೂರಿ ಝಾಂಗಟೆ ಒತ್ತಿ ಪಿಡಿದಿಹ ಕಹಳೆ ಬತ್ತೀಸ ರಾಗದಿ ತತ್ಥೈವಾದ್ಯದೀ 6 ಎತ್ತಿ ಪಿಡಿದಿಹ ಛತ್ರಿ ಸುತ್ತು ಮಾಗಧ ಮಂದಿ ಸ್ತೋತ್ರವ ಮಾಡೆ ನೇತ್ರೋತ್ಸವ ತೋರುತ 7 ದಿವಪನ ಸೋಲಿಪ ನವ ಪೀತಾಂಬರ ಧರಿಸಿ ಭುವನವ ಮೋಹಿಪ ನವ ಸುವಿಶೇಷನೆ 8 ವಿಜಯ ರಾಮಚಂದ್ರವಿಠಲರಾಯನೆ ನಿಜ ಪರಿವಾರದಿಂ ಭಜಕರ ಪಾಲಿಪ 9
--------------
ವಿಜಯ ರಾಮಚಂದ್ರವಿಠಲ
ಬಿಡಿಸೊ ಬಂಧನ ಕ್ಲೇಶವ ಬಿಗಿಯುತಲಿದೆ ಪ ನಾನು ಬಿಟ್ಟರು ಎನ್ನ ಕಂಬಳಿ ಬಿಡದಿದೆ ಅ.ಪ ಎಲ್ಲವ ಬಿಟ್ಟು ನಾ ಬಂದೆನೆಂದರಿತೆನೊ ಎಲ್ಲವು ಎನ್ನನು ಬಿಡಲಿಲ್ಲವೊ ಕಲ್ಲು ಎದೆಯ ಪೊತ್ತ ಮಲ್ಲನೆಂದರಿತೆನೊ ಹುಲ್ಲೆಯ ಮರಿಯಂತೆ ನಡುಗುವಂತಾಯಿತೊ 1 ಮಿಕ್ಕ ವಿಷಯಗಳ ಬೇಡ ಬೇಡೆನ್ನುತ ಹೊಕ್ಕರು ಮೂಲೆ ಮೂಲೆಗಳನ್ನು ದಿಕ್ಕು ದಿಕ್ಕುಗಳಿಂದ ಸೆಳೆಯುತಲಿರುವುದು ಅಕ್ಕರೆ ತೊಲಗಿತು ಶುಷ್ಕವಾಯಿತು ಮನವು 2 ಲೋಕ ರಕ್ಷಕನು ನೀನೆಂಬುದನರಿತರು ವ್ಯಾಕುಲವೇತಕೆ ಪ್ರತಿ ಕ್ಷಣವು ತಾ ಕಾಣದ ನರ ವರವÀ ಕೊಡಲುಬಹುದೆ ಏಕಾಂತ ಭಕುತ ಪ್ರಸನ್ನನೆ ಕರುಣದಿ 3
--------------
ವಿದ್ಯಾಪ್ರಸನ್ನತೀರ್ಥರು