ಒಟ್ಟು 515 ಕಡೆಗಳಲ್ಲಿ , 75 ದಾಸರು , 437 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೂತೆ ಕೇಳ ದ್ರೌಪತಿಯ ಖ್ಯಾತಿ ಕೇಳಿದ ಮನುಜರಿಗೆಪಾತಕದೂರಾಗೊದೆಂಬೋ ಮಾತು ನಿಜವಮ್ಮಪ.ಉಮಾಶಚಿ ಶಾಮಲಾ ಉಷೆ ತಮ್ಮ ಪತಿಗಳ ಬೆರೆದು ರಮಿಸೆಬೊಮ್ಮಕಂಡುಕೋಪಿಸಿ ಶಾಪ ಝಮ್ಮನೆ ಕೊಟ್ಟಾನು1ಪರಮಮದದ ಬಾಲೆಯರಿವರುಪರಪುರುಷನ ಬೆರೆಯಲ್ಯಾ ್ಹಂಗೆನರದೇಹ ಬರಲೆಂದು ಬೊಮ್ಮಗೆ ನಾಲ್ವರು ನುಡಿದರು 2ಚಂದಾಗಿ ನಾಲ್ವರ ದೇಹ ಒಂದೇ ಮಾಡಿ ತೋರೆ ಬೊಮ್ಮಗಬಂದವು ಮೂರು ನರದೇಹಗಳ ಲೊಂದಾಗಿರಲೆಂದು 3ತಪ್ಪು ನಮ್ಮದೆಂದು ಶಾಪ ಒಪ್ಪಿಕೊಂಡು ನಾಲ್ವರುಜಪಿಸಿ ಸಾವಿರ ವರುಷ ಗೌಪ್ಯದಿ ಭಾರತಿಯ 4ಬಂದು ಮೊರೆಯ ಪೊಕ್ಕವರ ಚಂದಾಗಿ ದೇಹದಲ್ಲಿಟ್ಟುಅನಂದದಿಂದ ವಿಪ್ರಕನ್ಯೆ ಎಂದು ಜನಿಸಿದಳು 5ಎಲ್ಲರಕರ್ಮಒಂದಾಗಿ ಎಲ್ಲೆಲ್ಲೆ ಭಿನ್ನ ತೋರದ್ಹಾಂಗೆಫುಲ್ಲನಾಭನ ದಯವ ಪಡೆದಳು ಅಲ್ಲೆ ಆ ಬಾಲೆ 6ಮುದ್ಗಲ ನೆಂತೆಂಬೊ ಋಷಿಯು ಬಿದ್ದು ನಕ್ಕ ಬ್ರಹ್ಮನ ಕಂಡುಮುದ್ದು ಮಗಳ ರಮಿಸಿದಾತಗೆ ಬುದ್ಧಿಯಿಲ್ಲವೆಂದು 7ತ್ವರೆಯಿಂದಬೊಮ್ಮಮುನಿಗೆ ಬೆರಿಯೆ ಭಾರತಿಯ ಕಂಡುಕರವಮುಗಿದು ಎರಗಿ ಮುನಿಯು ಮೊರೆಯ ಹೊಕ್ಕಾನು8ಮಾರುತನ ದೇಹದಲ್ಲೆ ಭಾರತಿಯು ರಮಿಸುವಾಗಹಾರಿತಯ್ಯ ಸ್ಮøತಿಯು ಸುಖವು ತೋರದು ನಮಗಿನ್ನು 9ಮಂದಗಮನೆಯರಿಂದಭಾರತಿಇಂದ್ರ ಸೇನಳಾಗಿ ಜನಿಸೆಬಂದ ಮರುತ ದೇಹದ ಮುನಿಯು ಚಂದದಿ ಮದುವ್ಯಾದ 10ಮರುತ ಅಕೆÉಯಿಂದ ರಮಿಸ ಮಾರುತದೇಹದ ಮುನಿಯು ಏನುಗುರುತು ಇಲ್ಲಧಾಂಗೆ ಆತ ಇರುತಲಿದ್ದನು 11ಬಾಲೆಯ ಸಂತೋಷ ಪಡಿಸಿ ಮೂಲರೂಪಕಂಡುವಾಯುಮ್ಯಾಲ ವನಕೆ ನಡೆದ ಮುನಿಯು ಆ ಕಾಲದಲೆಚ್ಚತ್ತು12ಇಂದ್ರಸೇನ ಬಂದು ಆಗ ಇಂದಿರೇಶನದಯವ ಪಡೆಯೆನಂದಿವಾಹನ ನಮ್ಮ ಪತಿಯ ವಂದಿಸೆಂದಾರು 13ಪತಿಯ ಬಯಸಿದ ಬಾಲೆಯರಿಗೆ ಚತುರ್ವಾಹ ನುಡಿದನು ಶಿವನುಅತಿಶಯ ರೋದನವ ಮಾಡೆ ಮಿತಿ ಇಲ್ಲದಲೆ ಅಂಜಿ 14ಮಂದಗಮನೆಯ ಧ್ವನಿಯಕೇಳಿ ಬಂದ ಇಂದ್ರ ಬಹಳದಯದಿಬಂದಿತೆನಗೆ ಇಂಥಕ್ಲೇಶಎಂದು ನುಡಿದಳು15ಬಂದು ವರವ ಬೇಡಿ ಪತಿಗಳ ಹೊಂದಿರೆಂದು ನಾಲ್ಕುಬಾರಿಬಂದಿತೆಮಗೆ ಇಂಥಕ್ಲೇಶಎಂದು ನುಡಿದಳು16ಇಂಥ ಅನ್ಯಾಯ ಯಾಕೆಂದು ನಿಂತ ಒಟುಗೆ ನುಡಿದ ಇಂದ್ರಭ್ರಾಂತ ನರನ ನಿಂದೆ ಶಚಿಯ ಕಾಂತೆಗೆ ಶಿವನು 17ನಾನು ಸೃಷ್ಟಿ ಮಾಡಿದವನು ನೀನು ಏನು ನುಡಿದ ಶಿವನುಮಾನವನಾಗೊ ಬೊಮ್ಮಗ ತಾನು ಆತಗೆ 18ಉಮಾ ಮೊದಲಾದವರಿಗೆಲ್ಲ ತಮ್ಮ ಪತಿಗಳ ಹೊಂದಿರೆಂದಉಮಾ ನಿಮ್ಮ ಬೆರಿಯ ಬ್ಯಾಡ ಸುಮ್ಮನೆ ಹೋಗೆಂದ 19ಎತ್ತು ಗಿರಿಯ ಕೆಳಗ ಇದ್ದ ಮತ್ತÀ ನಾಲ್ವರ ನೋಡೆಸತ್ತ ಎಂದು ತಿಳಿಯೋ ನಿನ್ನ ಚಿತ್ತಕತಾ ಎಂದು 20ಕೇಳಿದ ಬೊಮ್ಮನ ನುಡಿಯು ತಾಳಿದ ಬಾಲಿಯರು ಬೆರೆದುಬಹಳ ಪ್ರೇಮದಿಂದಭಾರತಿಇಳಿದಳು ಬಂದು21ರಾಮೇಶನಕ್ಲುಪ್ತತಿಳಿದು ಭೀಮಸೇನನಾದ ವಾಯುಕಾಮಿನಿಯರ ಸಹಿತ ದ್ರೌಪತಿ ಪ್ರೇಮದಿ ಜನಿಸಿದಳು 22
--------------
ಗಲಗಲಿಅವ್ವನವರು
ನಡೆರಂಗ ನಡೆ ಕೃಷ್ಣ ನಡೆ ಮನೆಗೆಧೃಡ ಭಕ್ತರ ಕೂಡಿ ದ್ವಾರಕೆಗೆ ಪ.ಬಂದ ಜನರಿಗೆಲ್ಲ ಗಂಧ ಕುಂಕುಮವನಿಟ್ಟುತಂದು ತಾಂಬೂಲ ಕೊಡುತಲೆತಾಂಬೂಲ ಕೊಡುತಲೆ ರುಕ್ಮಿಣಿಕುಂದವ ಮಾಡಿ ಬಗೆಯದೆ 1ಮಿತ್ರೆ ದ್ರೌಪತಿದೇವಿ ಮತ್ತೆ ಪಾದಕ್ಕೆರಗಿಅತ್ಯಂತ ನಾವು ನುಡಿದೆವಅತ್ಯಂತ ನಾವು ನುಡಿದ ಅಪರಾಧವಚಿತ್ತದೊಳಿಡದೆ ಕರುಣಿಸು 2ಅರಗಿಳಿ ಮಾತಿನಹರದಿಸುಭದ್ರಾ ತಾನುಎರಗಿದಳುಭಾವೆಚರಣಕ್ಕೆಎರಗಿದಳುಭಾವೆಚರಣಕ್ಕೆ ರುಕ್ಮಿಣಿಯಪರಮಆಶೀರ್ವಾದ ಇರಲೆಂದು3ಅತ್ತಿಗೆಯರೆಂದು ಅರ್ಥಿಲಾಡಿದ ಮಾತುಮತ್ತೊಂದು ನೀವು ತಿಳಿಯದೆಮತ್ತೊಂದು ನೀವು ತಿಳಿಯದೆ ರಂಗನಮಿತ್ರೆಯರೆ ನಿಮ್ಮ ದಯವಿರಲಿ 4ಬಂದು ಪಾಂಡವರೆಲ್ಲ ಇಂದಿರೇಶಗೆ ಎರಗಿಚಂದಾಗಿ ತಾವು ಕೈ ಮುಗಿದುಚಂದಾಗಿ ತಾವು ಕೈ ಮುಗಿದು ನುಡಿದರುಕುಂದುಗಳೆಣಿಸದೆ ಸಲುಹೆಂದು 5ಭಾವಮೈದುನತನದಿ ನಾವೊಂದು ವಿನಯದಿಯಾವ ತಪ್ಪುಗಳ ಎಣಿಸದೆಯಾವ ತಪ್ಪುಗಳ ಎಣಿಸದೆ ಶ್ರೀ ಕೃಷ್ಣದೇವ ನೀ ಮಾಡೊ ದಯವನೆ 6ತಂದೆ ರಾಮೇಶಗೆ ನಾವಂದ ಮಾತುಗಳೆಲ್ಲಕುಂದವ ಮಾಡಿ ಬಗೆಯದೆಕುಂದವ ಮಾಡಿ ಬಗೆಯದೆ ನಮ್ಮನೆಗೆಬಂದು ಬಂದೊಮ್ಮೆ ಸಲುಹಯ್ಯ 7
--------------
ಗಲಗಲಿಅವ್ವನವರು
ನಂಬಿರೈ ಕರುಣಾಂಬುಧಿ ಕೋಮಲಕಂಬುಕಂಧರಹರಿಯಪ.ಯೋಗಿಮನಮುದ ರಾಗ ಮೂರುತಿಯ ದೊರೆಯಪಾಲಿತ ಕೌಂತೇಯಭಾಗವತತನಕಾಗಿ ತಾ ದಯವಗೈದ ಭರದಿಂದ ತೋರ್ವಯೋಗ ಮಾಯಾಧೀಶ ಸತ್ಸಕಲಾಗಮಾರ್ಚಿತಭೋಗಿಶಯನಸ-ರಾಗಕಪ್ಪನಿಯೋಗಿಸುವರೆ ಮಹಾಗಿರಿಯಿಂದಲಿ ಸಾಗಿ ಬಂದನ 1ಮಂದವಾರದಿ ಮಿಂದು ಮಡಿಗಳನು ಉಟ್ಟು ಕಾಣಿಕೆಯನಿಟ್ಟುಮಂದರಾಧರ ನೀನೆ ಗತಿಯೆಂದು ಬಂದು ಕೈಮುಗಿದುನಿಂದುವಂದಿಸುತ ಬಲ ಬಂದು ಚರಣದ್ವಂದ್ವಸೇವೆಯ ಕುಂದದರ್ಚಿಸಿದಂದುಗವ ಬಿಡಿಸೆಂದು ಪೇಳ್ದರೆ ಮಂದಹಾಸಾನಂದವೀವನು 2ಕಾಸುವೀಸದ ಬಡ್ಡಿ ಭಾಷೆಯನು ಬಿಡನು ನಮ್ಮೊಡೆಯನುದೇಶದೇಶದಿ ಕಷ್ಟ ತರಿಸುವನು ತಾನು ಭಕ್ತರ ಕಾಯುವನುಘಾಸಿಯಾಗದೆ ಧನಿಯ ಹಣವನುಸೂಸಿ ಕರುಣಾರಾಸ ರಾಜ್ಯದವಾಸವಾಗಿಹ ಒಕ್ಕಲಿಗರೆಂಬೀ ಸುಮನದಿಂ ಕೇಶವನ ಪದವ 3ಕಷ್ಟವಿಲ್ಲದೆ ಇಷ್ಟ ದೊರಕುವದು ನೆನೆದುಸುಖದಿಂ ಬಾಳುವದುದೃಷ್ಟಿಯಿಂದಲಿನೋಡುನಮ್ಮ ದೊರೆಯ ಹರಿಯಪರಿಯ ನೀನರಿಯಾಸಿಟ್ಟುಮಾಡುವ ಸ್ವಾಮಿನಿನ್ನೊಳಗಿಟ್ಟುಕೊಂಡರೆ ಕೆಟ್ಟು ಹೋಗುವಿಒಟ್ಟುಗೂಡಿಸಿ ತಟ್ಟನೆಲ್ಲ ಮುಂದಿಟ್ಟುಯಿರೆ ಕೈಗೊಟ್ಟು ಕಾಯುವ 4ಮಾನನಿಧಿ ಭಕ್ತರನು ಮನ್ನಿಸುವ ನಲಿವ ಕರುಣವ ಗೈವಭಾನುಕೋಟಿಪ್ರಕಾಶದಿಂದಿರುವ ಮೆರೆವ ಮಹಾನುಭಾವಏನನೆಂಬೆನು ಆದಿ ಶ್ರೀಲಕ್ಷ್ಮೀನಾರಾಯಣ ತಾನೆ ಕಾರ್ಕಳಸ್ಥಾನ ರಾಜಧಾನಿಯಲಿ ಮೆರೆವನನವರತದಿ ಶ್ರೀನಿವಾಸನ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಾ ನಿನ್ನ ಧ್ಯಾನದೊಳಿರಲು - ಇಂಥಹೀನ ಮಾನವರಿಂದೇನಾಹೋದು ಹರಿಯೆ ಪ.ಮಚ್ಚರಿಸಿದರೇನ ಮಾಡಲಾಪರೊ ಎನ್ನಅಚ್ಯುತ ನಿನ್ನದೊಂದು ದಯವಿರಲು ||ವಾಚ್ಛಲ್ಯ ಬಿಡದಿರು ನಿನ್ನ ನಂಬಿದ ಮೇಲೆಕಿಚ್ಚಿಗೆ ಗೊರಲೆ ಮುತ್ತುವುದೆ ಕೇಳೆಲೊ ರಂಗ 1ದಾಳಿಯಲಿ ತೇಜಿ ವೈಹಾಳಿಯಲಿ ನಡೆಯಲುಧೂಳು ರವಿಗೆ ತಾನು ಮುಸುಕುವುದೇ ||ತಾಳಿದವರಿಗೆ ವಿರುದ್ಧ ಲೋಕದೊಳುಂಟೆ ?ಗಾಳಿಗೆ ಗಿರಿ ನಡುಗುವುದೆ ಕೇಳೆಲೊ ರಂಗ 2ಕನ್ನಡಿಯೊಳಗಿನ ಗಂಟ ಕಂಡು ಕಳ್ಳಕನ್ನವಿಕ್ಕಲು ವಶವಾಗುವುದೇ ?ನಿನ್ನ ಧ್ಯಾನವ ಮಾಡೆ ಪುರಂದರವಿಠಲನೆಚಿನ್ನಕ್ಕೆ ಪುಟವಿಕ್ಕಿದಂತೆ ಕೇಳೆಲೊ ರಂಗ 3
--------------
ಪುರಂದರದಾಸರು
ನಾ ಮುಂದೆ ಕೃಷ್ಣ ನೀ ಎನ್ನ ಹಿಂದೆ-ನಿನ್ನ-|ನಾಮವೆ ಕಾಯಿತು ನಾನೇನೆಂದೆ ಪಸುರತರುನೀನು ಫಲ ಬಯಸುವೆ ನಾನು |ಸುರಧೇನುನೀನು ಕರೆದುಂಬೆ ನಾನು ||ವರಚಿಂತಾಮಣಿ ನೀನು ಪರಿಚಿಂತಿಸುವೆ ನಾನು |ಶರಧಿಕ್ಷೀರನು ನೀನು ತರಳನೈ ನಾನು 1ಅನಾಥನೈ ನಾನು ಎನಗೆ ಬಂಧುವು ನೀನು |ದೀನಮಾನವನಾನು ದಯವಂತ ನೀನು ||ದಾನವಂತಕ ನೀನು ಧೇನಿಸುವೆನು ನಾನು |ಜ್ಞಾನಗಂಭೀರ ನೀನು ಅಙ್ಞÕನಿ ನಾನು 2ಒಂದರೊಳೊಂದೊಂದು ನಿನಗೆ ನಾ ಸಲಿಸುವೆ |ಚೆಂದವಾಯಿತು ನಿನ್ನ ಸ್ತುತಿಯಿಂದಲಿ ||ತಂದೆ ಪುರಂದರವಿಠಲರಾಯ ನೀ |ಬಂದೆನ್ನ ಮನದಲ್ಲಿ ನಲಿನಲಿದಾಡೊ 3
--------------
ಪುರಂದರದಾಸರು
ನಿಂದ್ಯನಾಡಲಿಕ್ಕೆ ನೀನು ಬಂದೆಯೇನಯ್ಯ ಕೃಷ್ಣವಂದಿಸಿ ಭಕ್ತರು ಕರೆದರೂ ನೀನು ಹಿಂದಕ್ಕೆ ಹೋಗುವಿ ಪ.ಅಂದು ಅಹÀಲ್ಯಾದೇವಿ ಬಿಟ್ಟು ಒಂದೆರಡು ದಿವಸÀ ಕೃಷ್ಣಬಂದವನಲ್ಲೋ ತ್ವರೆಯಛಂದಾಗಿ ಹೇಳಯ್ಯ ನಮಗೆ 1ಒಂದಾರು ತಿಂಗಳದಿವಸ ಕಂದ ದಣಿಯೆ ಕರುಣಿಸಬಾರದೆಬಂದದ್ದೇನು ಇಂಥ ತ್ವರೆಯಚಂದಾಗಿ ಹೇಳಯ್ಯ ನಮಗೆ 2ಹಣ್ಣು ಹಸಿರು ಎಲೆ ತಿಂದು ಸಣ್ಣ ಮಾಡಿ ಶರೀರವನುಬಣ್ಣಿಸಿ ಭಕ್ತರು ಕರೆದರೆನೀನು ಕಣ್ಣಿಲೆ ನೋಡೆಲೋಅವರ3ಆನೆ ಜನ್ಮ ಬಂದು ರಾಯ ನಾನಾ ದುಃಖ ಬಡಲು ತಾನುನೀನು ಮುಂದೆ ನೋಡಿದೆ ಸಾವಿರ ವರುಷ ಇನ್ನೇನುದಯವಯ್ಯ ಅವನಿಗಿನ್ನೇನು ದಯವಯ್ಯ 4ತಂದೆ ರಾಮೇಶನ ಮನೆಗೆ ಬಂದಿದ್ದರೆ ಬಹಳ ದಯವುಒಂದು ನೆಗಳಿ ಸಾವಿರ ವರುಷಹಿಂದಕ್ಕೆ ದಣಿದೆಲ್ಲೊ ಕೃಷ್ಣ 5
--------------
ಗಲಗಲಿಅವ್ವನವರು
ನಿನ್ನ ದಿವ್ಯ ಮೂರುತಿಯ ಕಣ್ಣದಣಿಯಲು ನೋಡಿಧನ್ಯನಾದೆನು ಧರೆಯೊಳು ||ಇನ್ನು ಈಭವಭಯಕೆ ಅಂಜಲೇತಕೆ ದೇವಚೆನ್ನ ಶ್ರೀ ವೆಂಕಟೇಶಾ ಈಶಾ ಪಏಸುಜನುಮದಸುಕೃತಫಲವು ಬಂದೊದಗಿತೋಈ ಸ್ವಾಮಿ ಪುಷ್ಕರಣಿಯೊಳ್ನಾ ಸ್ನಾನವನು ಮಾಡಿವರಾಹದೇವರ ನೋಡಿಶ್ರೀ ಸ್ವಾಮಿ ಮಹಾದ್ವಾರಕೆಈ ಶರೀರವನು ಈಡಾಡಿ ಪ್ರದಕ್ಷಿಣೆ ಮಾಡಿಲೇಸಿನಿಂದಲಿ ಪೊಗಳುತಆ ಸುವರ್ಣದ ಗರುಡ ಗಂಬವನು ಸುತ್ತಿ ಸಂತೋಷದಿಂ ಕೊಂಡಾಡಿದೆ ಬಿಡದೆ 1ನೆಟ್ಟನೆಯೆ ದ್ವಾರವ ದಾಟಿ ಪೋಗುತಲಿರಲುದಟ್ಟಣೆಯ ಮಹಾಜನದೊಳುಕೃಷ್ಣಾಜಿನದವರ ಕೈ ಪೆಟ್ಟು ಕಾಣುತ್ತ ಕಂಗೆಟ್ಟು ಹರಿಹರಿಯೆನುತಲಿಗಟ್ಟಿ ಮನಸಿನಲಿ ತಲೆಚಿಟ್ಟಿಟ್ಟು ಶೀಘ್ರದಲಿಕಟ್ಟಂಜನಕೆ ಪೋಗುತಬೆಟ್ಟದಧಿಪತಿ ನಿನ್ನ ದೃಷ್ಟಿಯಿಂದಲಿ ನೋಡೆಸುಟ್ಟೆ ಎನ್ನಯ ದುರಿತವಾ-ದೇವಾ 2ಶಿರದಲಿ ರವಿಕೋಟಿ ತೇಜದಿಂದೆಸೆಯುವಕಿರೀಟವರಕುಂಡಲಗಳಕೊರಳಲ್ಲಿ ಸರವೈಜಯಂತಿವನಮಾಲೆಯನುಪರಿಪರಿಯ ಹಾರಗಳನುಉರದಿ ಶ್ರೀವತ್ಸವನು ಕರದಿ ಶಂಖ-ಚಕ್ರಗಳವರನಾಭಿಮಾಣಿಕವನುನಿರುಪ ಮಣಿಖಚಿತಕಟಿಸೂತ್ರಪೀತಾಂಬರವಚರಣಯುಗದಂದುಗೆಯನು - ಇನ್ನು 3ಇಕ್ಷುಚಾಪನ ಪಿತನೆ ಪಕ್ಷೀಂದ್ರವಾಹನನೆಲಕ್ಷ್ಮೀಪತಿ ಕಮಲಾಕ್ಷನೆಅಕ್ಷತ್ರಯಅಜಸುರೇಂದ್ರಾದಿವಂದಿತನೆಸಾಕ್ಷಾಜ್ಜಗನ್ನಾಥನೇರಾಕ್ಷಸಾಂತಕ ಭಕ್ತ ವತ್ಸಲ ಕೃಪಾಳು ನಿರಪೇಕ್ಷ ನಿತ್ಯತೃಪ್ತನೇಕುಕ್ಷಿಯೊಳಗಿರೇಳು ಭುವನವನು ಪಾಲಿಪನೆರಕ್ಷಿಸುವುದೊಳಿತು ದಯದಿ -ಮುದದಿ 4ಉರಗಗಿರಿಯರಸ ನಿನ್ನಚರಣನೋಡಿದ ಮೇಲೆಉರಗಕರಿವ್ಯಾಘ್ರ ಸಿಂಹಅರಸು ಚೋರಾಗ್ನಿ ವೃಶ್ಚಿಕ ಕರಡಿ ಮೊದಲಾದಪರಿಪರಿಯ ಭಯಗಳುಂಟೇಪರಮವಿಷಯಗಳ ಲಂಪಟದೊಳಗೆ ಸಿಲುಕಿಸದೆಕರುಣಿಸುವುದೊಳಿತು ದಯವಾಸ್ಮರಗಧಿಕ ಲಾವಣ್ಯಪುರಂದರವಿಠಲನೇಶರಣಜನ ಕರುಣಾರ್ಣವಾ ದೇವಾ 5
--------------
ಪುರಂದರದಾಸರು
ನಿರ್ಭಯವಾಗಲಿಯೋಗಿಜಿತಭೋಗಿಪ.ಲಭ್ಯಸುಕೃತವಿರಭ್ಯುದಯವಾಗಿ ಅ.ಪ.ಸತ್ಯಜ್ಞಾನ ಸುವಿರಕ್ತಿ ಹರಿಭಕ್ತಿಚಿತ್ತದೊಳಿದ್ದರೆ ನಿತ್ಯಾಸಕ್ತಿ 1ಹೊದ್ದಿದನಿವನು ಬ್ರಾಹ್ಮಣನು ನಮ್ಮವನುಇದ್ದರೆ ಪುಣ್ಯವು ಶುದ್ಧಾಂತಃಕರಣನು 2ರಕ್ಷಿಸುವದು ನಿನ್ನಭಾರಸರ್ವಾಧಾರಲಕ್ಷ್ಮೀನಾರಾಯಣ ಲಕ್ಷ ನಮಸ್ಕಾರ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನೀ ದಯಾಪರನೊ, ನಿನ್ನವರ ಸಾಧನವೊ ? |ಮುದ್ದು ಹಯವದನ ಪೇಳಿದನ ಪ.ಮದಕರಿಯು ಸರಸಿಯೊಳು ಮಕರಿಬಾಧೆಗೆ ಸಿಲುಕಿ |ಪದುಮಾಕ್ಷ ಪದುಮೇಶ ಪದುಮನಾಭ ||ಪದುಮಸಂಭವನಯ್ಯಪಾಹಿ ಪಾಹಿ - ಯೆನಲು |ಒದಗಿ ರಕ್ಷಿಸದೆ ತವ ದಯೆಯೊ, ಸಾಧನವೊ ? 1ಅಂತ್ಯಜೆಯ ಸಹವಾಸದಲಿ ವಿಪ್ರವರನೊಬ್ಬ |ಸಂತಸದಿಂದ ಬಹುಕಾಲ ಕಳೆದು ||ಅಂತ್ಯಕಾಲಕೆ ತನ್ನ ಮಗನ ಕರೆಯಲು ಕಾಯ್ದೆ |ಚಿಂತಾಯತನೆ, ವೈರಾಗ್ಯ ಸಾಧನವೊ ? 2ಅವರವರ ಯೋಗ್ಯತೆಯನರಿತು ಪ್ರೇರಕನಾಗಿ |ಅವರಿಂದ ನುಡಿಸಿ ನುಡಿನುಡಿಗೆ ಹಿಗ್ಗಿ ||ಅವರಿಗೊಲಿದೆ ನಮ್ಮ ಪುರಂದರವಿಠಲ |ಅವನೀಶನಿನ್ನ ದಯವೊ ಸಾಧನವೊ ?3
--------------
ಪುರಂದರದಾಸರು
ಪಾಲಿಸು ಪರಮಪಾವನ ಪದ್ಮಾವತೀರಮಣಪಾಲಿಸು ಪಯವಾರಿಧಿವಾಸ ಪದ್ಮಗದಾಧರ ಕೌಸ್ತುಭಭೂಷ ಪ.ನೀಲನಿಭಾಂಗನಿಖಿಲಸುರ ಮುನಿಜನಜಾಲಪಾಲಪಾಹಿಪಾರ್ಥಸಾರಥಿ ಅ.ಪ.ಮದನಜನಕ ಮಹಿಮಾಂಬುಧಿ ನಿನ್ನಪದಕಮಲವ ನಾ ಸ್ಮರಿಸದೆ ಎನ್ನಮದಮುಖತನವನು ಒದರುವದೆನ್ನಪದುಮನಾಭ ರಕ್ಷಿಸು ನೀ ಮುನ್ನಸದಯಾಂಬುಧಿ ನೀನಲ್ಲವೆ ನಿನ್ನೊಳು ಕ್ರೋಧಉದುಭವಿಸುವುದು ನಿಜವೇ ಭಕ್ತವಾತ್ಸಲ್ಯಇದಕೆ ನೀ ಊನ ತರುವೆ ಸಾಕು ಈ ಮರವೆಒದಗಿಸು ಸರ್ವಮನಸಿನೊಳ್ ಪುದು-ಗಿದಿಷ್ಟಾರ್ಥಗಳ ನೀ ದಯವಿಡುತ ಇಹಪರಗತಿಗಾ-ಸ್ಪದವಾದ ಸಂಪದವ ನೀ ಕೊಡು ತ್ವರಿತ ತ್ರೈಲೋಕ್ಯದಾತಮಧುಸೂದನ ಮಂದರಗಿರಿಧರ ನೀ-ರದ ನಿಭ ನಿರ್ಮಲ ನಿಜರೂಪಗುಣಸದನಾಚ್ಯುತ ರವಿಕುಲದೀಪ ನಿರ-ವಧಿ ಆನಂದ ರಸಾಲಾಪಬುಧಜನೋಪಲಾಲಿತ ಲೀಲಾಯತಉದಧಿಶಾಯಿ ಮಾನದ ಮಧುಸೂದನ 1ನಾಮಸ್ಮರಣೆಯೆ ನರಕೋದ್ಧಾರನೇಮವಿಲ್ಲೆಂಬುದು ನಿನ್ನ ವಿಚಾರಸಾಮಾರ್ಥದ ಗುಣಕೆಲ್ಲನುಸಾರಪಾಮರಮನಕಿದು ಈ ಗುಣಭಾರಶ್ರೀಮನೋಹರನೆ ಲಾಲಿಸೊ ಚಾತುರ್ಥಿಕ ಜ್ವರದಿಭ್ರಾಮಕನಾದೆ ಪಾಲಿಸೊ ದಾರಿದ್ರ್ಯವೆಂಬಸೀಮೆಯಿಂದಲಿ ದಾಟಿಸೊ ಸುಕೀರ್ತಿಯ ಮೆರೆಸೊಸಾಮಗಾನಲೋಲಸುಜನಸ್ತೋಮಭಾಗ್ಯನಿಧಿಯೆ ಎನ್ನ ಮನದ ಅಜ್ಞಾನವೆಂಬತಾಮಸಪರಿಹರಿಸಿ ಜ್ಞಾನೋದಯದ ಸದಾನಂದಈ ಮಹಾಭಾಗ್ಯಗಳೆಲ್ಲ ನೀನಿತ್ತಿರೆನೀ ಮಾಡುವುದೆಲ್ಲವು ಸಹಜಗುಣಧಾಮಾಶ್ರಿತ ನಿರ್ಜರಭೂಜಸುಜನಸ್ತೋಮಾರ್ಕಾಮಿತ ವಿಭ್ರಾಜಶ್ರೀಮಚ್ಛೇಷಾಚಲ ಮಂದಿರ ಸು-ತ್ರಾಮಾರ್ಚಿತ ಸದ್ರಾಮ ಶ್ರೀರಾಮ 2ಉಡುವ ಸೀರೆಯ ಸೆಳೆಯಲು ದ್ರುಪಜೆಯಕೊಡಲಿಲ್ಲವೆ ಬಹುವಸನ ಸಂತತಿಯಹಿಡಿಯವಲಕ್ಕಿಗೆ ದ್ವಾರಕ ಪತಿಯಕಡು ಸರಾಗವಾಯ್ತಿಂದಿನ ಪರಿಯಬಿಡುತ ಬೆಟ್ಟದ ಮಧ್ಯದಿ ನಿಂತರೆ ನಿನ್ನಬಿಡುವರ್ಯಾರಯ್ಯ ಶೀಘ್ರದಿ ಮನಸಿನಿಷ್ಟಕೊಡು ದಯವಿಟ್ಟು ಮುದದಿ ಕರುಣಾವುದಧಿಕಡುಲೋಭಿತನ ಬಿಡು ಮಹರಾಯಅಡಿಗಳಿಗೆರಗುವೆನು ಜಗದಯ್ಯ ಪೂರ್ವಾರ್ಜಿತಕರ್ಮವಡಂಬಡಿಸಿ ರಕ್ಷಿಸು ದಮ್ಮಯ್ಯ ಪಂಢರಿರಾಯಒಡೆಯ ಶ್ರೀ ಲಕ್ಷ್ಮೀನಾರಾಯಣನಡುನೀರೊಳು ಕೈಬಿಡುವೆಯ ನೀತೊಡಕೊಂಡ ಬಿರುದೇನಯ್ಯ ಈಕಡು ಕೃಪಣತನ ಸಾಕಯ್ಯಪೊಡವಿಯೊಳಗೆ ಪಡುತಿರುಪತಿಯೆಂಬದೃಢಕಾರ್ಕಳದೊಡೆಯ ಶ್ರೀನಿವಾಸನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಾಹಿಸರಸ್ವತಿ ಸುಗಾಯಿತ್ರಿ ಶ್ರೀ ಸಾವಿತ್ರಿ |ಮಹಾ ದುರಿತಾದ್ರಿಪವಿ ದೀನ ಸುರಧರಿಜೇ ಪಶಿಷ್ಟಜನರ ಪಾಲಿಪಳೆ ದುಷ್ಟ ಜನ ದೂರಳೇ |ಸೃಷ್ಟಿಪತಿ ಸೇವೆಯೊಳಗಿಟ್ಟುದುರುಳ|ಬಟ್ಟೆಹಿಡಿಸದಲೆ ದಯವಿಟ್ಟು ಪಿಡಿವದು ಕೈಯ |ಕಷ್ಟ ನಾಶನ ಮಾಡೆ ಕೊಟ್ಟು ಸುಖ ಪೂಜ್ಯೆ 1ಮದನಸತಿಕೋಟ ಲಾವಣ್ಯೆ ಗುಣಸಂಪನ್ನೆ |ಸುದತೀ ವೃಂದ ಶಿರೋಮಣಿ ಕರುಣಾರ್ಣವೆ ||ಮಧು ಜಿತ್ಪ್ರಿಯನ ರಾಣಿ, ವಾಣೀ ವೀಣಾಪಾಣಿ |ಹೃದಯದೊಳು ಕಮಲನಾಭನ ನಿರುತ ತೋರೇ 2ಈಶಾದಿ ಸುಮನಸಾರ್ಚಿತಪಾದಸರಸೀರುಹೆ |ಲೇಶೀತರಾನಂದೆ ಸುಗುಣೆ ಶ್ರೀ ಪ್ರಾ-ಣೇಶ ವಿಠಲನ ಕೊಂಡಾಡುವರೊಳಗೆ ಸ್ನೇಹ |ಹ್ರಾಸವಾಗದೆ ಈಯೆ ಇಭರಾಜ ಗಮನೆ 3
--------------
ಪ್ರಾಣೇಶದಾಸರು
ಪ್ರತಿಪದೆಯ ದಿನರಂಭೆ : ಓಹೊ ಬಲ್ ಬಲ್ ಬಲ್ ಶ್ಯಾಣೆ ಜಾಣೆ ಪ.ಈ ದಿವಸದಿ ನಿನ್ನೆಯ ದಿನದವನನ್ನುಆದರಿಸಲು ಕಾರ್ಯೋದಯವೇನೆಓಹೋ ಬಲ್ ಬಲ್ ಶಾಣೆ ಜಾಣೆ ಅ.ಪ.ಊರ್ವಶಿ : ಚಿತ್ತಜರೂಪೆ ಸರ್ವೋತ್ತಮ ಭಾಷೆಯನಿತ್ತಿಹ ಕಾರಣದಿಉತ್ತಮ ಶ್ರೀಪಾದ ಎತ್ತಲು ಬೇಕೆಂದುಒತ್ತಾಯಗೈದ ಮೋದಿ 1ಮತ್ತೊಂದು ಕಾರಣ ಉಂಟು ಶ್ರೀಹರಿಗಿವನಿತ್ಯವಾಹನ ಕಾಣೆಲೆಇತ್ತ ಪಯಣಗೈವೊಡತ್ತಬೇಕಾದರೆಭೃತ್ಯನಿವನು ಹೇ ಬಾಲೆ 2ಆದಕಾರಣದಿಂದ ನಾದಿನಿ ಕೇಳೆ ಪ-ಕ್ಷಾದಿಯೊಳಿವನ ಮ್ಯಾಲೆಪಾದವ ನೀಡಿ ವಯೋದಯದಿಂದ ಶ್ರೀಮಾಧವಬರುವ ಕಾಣೆ3ಕೇರಿಕೇರಿಯ ಮನೆಯಾರತಿಗಳನೆಲ್ಲಶ್ರೀರಮಾಧವ ಕೊಳ್ಳುತಭೂರಿವಾದ್ಯಗಳ ಮಹಾರವದಿಂದಲಿಸಾರಿ ಬರುವನು ಸುತ್ತ 4ಭಾವೆನೀ ಕೇಳೆ ನಾನಾ ವಿಧದಿಂದಲಿಸೇವಕರಿಗೆ ದಯದಿಪಾವನಗೈದು ಮಹಾವಿನೋದೇಕಾಂತಸೇವೆಯ ಗೊಂಡ ಕಾಣೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಂಟನಿಂದ ವ್ಯಾಳೆ ವ್ಯಾಳೆಗೆ ಊಳಿಗವ ಕೊಂಡುಉಂಟುಮಾಡುನಿನ್ನ ದಯವನಂಟನಾಗಿ ನೀಯೆನ್ನ ಅವಸರಕೆ ಒದಗು ವೈಕುಂಠಪತಿ ವೆಂಕಟೇಶ ಶ್ರೀಶ ಪ.ನೀನಟ್ಟಿದಲ್ಲಿಗೈದುವೆ ಕರೆದರೋಡಿ ಬಹೆನೀನುಂಡುಳಿದುದನುಣುವೆನೀನಾರಧೀನ ಮಾಳ್ಪೆ ಅವರಾಜÕದಲಿ ನಡೆವೆನೀನುಟ್ಟ ಮೈಲಿಗ್ಯುಡುವೆ ತೊಡುವೆ 1ಕ್ರೂರಕಂಟಕ ಕುಲವ ನಿನ್ನ ನಾಮಾಸ್ತ್ರದಿ ವಿದಾರಿಸುವೆ ಹುಯ್ಯಲಿಡುವೆಆರಿಗಂಜೆನು ಯಮನ ಚಾರಕರಿಗಂಜೆ ನಾಮಾರುವೆ ತವಾಂಘ್ರಿಗುರವ ಶಿರವ 2ಇಂತೆ ಸೇವೆಯ ಕೊಂಡು ಎನ್ನ ತನುಮನದಲ್ಲಿಸಂತತವಸರಕೊದಗಯ್ಯಚಿಂತನೆಯವಸರ ಅಂತ್ಯಯಾತ್ರೆಯವಸರಕೊದಗುಕಾಂತ ಪ್ರಸನ್ವೆಂಕಟಗಪ್ಪ ಎನ್ನಪ್ಪ 3
--------------
ಪ್ರಸನ್ನವೆಂಕಟದಾಸರು
ಬಣ್ಣಿಸಿಗೋಪಿತಾ ಹರಿಸಿದಳು |ಎಣ್ಣೆಯನೂಡುತ ಯದುಕುಲ ತಿಲಕನ ಪಆಯುಷ್ಯವಂತನಾಗು ಅತಿ ಬಲ್ಲಿದನಾಗು |ಮಾಯಾವಿ ಖಳರ ಮರ್ದನ ನಾಗು ||ರಾಯರ ಪಾಲಿಸು ರಕ್ಕಸರ ಸೋಲಿಸು |ವಾಯುಸುತಗೆ ನೀ ಒಡೆಯನಾಗೆನುತಲಿ 1ಧೀರನು ನೀನಾಗು ದಯಾಂಬುಧಿಯಾಗು |ಆ ರುಕ್ಮಿಣಿಗೆ ನೀನರಸನಾಗು ||ಮಾರನ ಪಿತನಾಗು ಮಧುಸೂದನನಾಗು |ದ್ವಾರಾವತಿಗೆ ನೀ ದೊರೆಯಾಗೆನುತಲಿ 2ಆನಂದ ನೀನಾಗುಅಚ್ಯುತನೀನಾಗು |ದಾನವಂತಕನಾಗುದಯವಾಗು|ಶ್ರೀನಿವಾಸನಾಗು ಶ್ರೀಧರ ನೀನಾಗು |ಜ್ಞಾನಿಪುರಂದರವಿಠಲನಾಗೆನುತಲಿ3
--------------
ಪುರಂದರದಾಸರು
ಬಂದಕೋ ರಾಮಚಂದ್ರಬಂದನದಕೋ ರಾಮಚಂದ್ರನವನಿಜೆಯ ಕಳುಹೆಂದರೆ ವಿಭೀಷಣನಕುಂದನುಡಿದಣ್ಣಪ.ಲೆಂಕರೊಳೊರ್ವನು ಮಾಭುಂಕರಿಸಿ ವನದಿಶಂಕ ರಕ್ಕಸರಳಿದು ಲಂಕೆ ಉರುಹಿದಸಂಖ್ಯೆರಹಿತ ಪ್ಲವಗರಂಕಪಡೆಯೊಡನೆ ಬಹಪಂಕರುಹಮುಖಿ ಕೊಡೆನಲಹಂಕರಿಸಿದಣ್ಣ 1ಜೀವರಂತಲ್ಲಹರಿಸಾವು ರಚಿತ ನಿಮಗುಶಿವನ ಬಿಲ್ಮುರಿದ ಭಾವರಿವಿರಿನೀವು ರಕ್ಕಸರಾಕೆ ದೇವರರಸಿಯ ಬಯಸಲಾವರಿಸದೆನೆ ಕೊಲ್ಲಲಿ ಕಾವರಿಸಿದಣ್ಣ 2ಅನುಜವಾಕ್ಯವಕೇಳಿದನುಜನುಗ್ರದಿ ಹುಲುಮನುಜ ಸರಿಯೇ ನನ್ನರಣಜಯಿಪನೆಇನಜಭವ ಶುಭಕಂಠಾಂಜನಿಜ ಜಾಂಬವ ಮುಖ್ಯರದನುಜಗ್ರಹಿಸದರಿವನೆನೆ ಜಡಧಿಯಣ್ಣ3ವಿಧಿಯಲೇಖನ ನೋಡಿ ಕುದಿಯಲಾರ್ದಟ್ಟಿಹರುಸುಧೆಯೆ ವಿಷವೈ ಕ್ರೂರ ಹೃದಯಗೆನಲುಬದಿಯ ತಿವಿದೆಲೆ ಹೇಡಿ ಮದೀಯಾರಿ ಹೋಗೆನ್ನೆ ಅಂಬುಧಿಯಿಳಿದ ರಾಮಕುಶಲುದಯವೆಲ್ಲಣ್ಣ 4ದೂಷಣೋಕ್ತಿಯಿಂ ಚಿಂತಾಕೃಶನಾಗಿ ರಾಮಪದದರ್ಶನಾಪೇಕ್ಷದಲಿ ವಿಭೀಷಣ ನಿಲುತಪ್ರಸನ್ನವೆಂಕಟರಾಮನಶನಿಶರಕಂಗನಗನುಸಿ ನುಗ್ಗಹುದು ಸತ್ಯ ಪುಸಿನುಡಿಯೆನಣ್ಣ 5
--------------
ಪ್ರಸನ್ನವೆಂಕಟದಾಸರು