ಒಟ್ಟು 1912 ಕಡೆಗಳಲ್ಲಿ , 108 ದಾಸರು , 1327 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾರೆ ಆರುತಿ ಸಾರಸಾಂಬಕಿ ಭಾರತೀವರಗೆ ಬೆಳಗುವೆನು ಪ ನರಸಿಂಹಾರ್ಯ ಶೇವಿತಗೆ ಅ.ಪ ನೂರುಯೋಜನ ವಾರಿನಿಧಿಯನು ಹಾರಿ ಜಾನಕಿಗೆ ಚಾರು ಮುದ್ರಿಕೆಯನಿತ್ತು ಪುರದಿಭಯ ತೋರಿರಾಕ್ಷಸಗೆ ನಾರಿಮಣಿಯ ಶುಭವಾರುತಿಯ ರಘುವೀರಗರುಹಿದ ಮಾರುತಾತ್ಮಜಗೆ 1 ಇಂದು ಕುಲದಲಿ ಬಂದು ಕುಂತಿಯ ಕಂದನೆಂದೆನಿಸಿ ನಿಂದು ರಣದಿ ಖಳವೃಂದ ಸಹಿತ ಕುರುವೃಂದವನು ಮಥಿಸಿ ಛಂದದಲಿ ಪಡೆದಂಥ ಭೀಮಗೆ 2 ಭೂತಳದಿ ಸುಖತೀರ್ಥರೆನಿಸಿ ಸಚ್ಛಾಸ್ತ್ರವನು ರಚಿಸಿ ಭೀತಿ ಪುಟ್ಟಿಸುತ ಖ್ಯಾತಮಾಯ್ಗಳ ವ್ರಾತವನು ಜಯಿಸಿ ಪೂತ ಕಾರ್ಪರ ಕ್ಷೇತ್ರ ನರ ಮೃಗನಾಥನ ಪರಮಪ್ರೀತಿ ಪಾತ್ರನಿಗೆ 3
--------------
ಕಾರ್ಪರ ನರಹರಿದಾಸರು
ತಾಸು ಬಾರಿಸುತಿದೆ ಕೇಳೋ ಮನುಜತಾಸು ಬಾರಿಸುತಿದೆ ಕೇಳೋ ಪ ಮೋಸ ಹೋಗಲು ಬೇಡ | ಆಶಪಾಶಕೆ ಶಿಲ್ಕಿವಾಸುದೇವನ ಮನ | ಒಲಿಸುವುದೆಂದೂ ಅ.ಪ. ಶ್ರೀ ತರುಣೇಶನ ಜಗಕೇಕನೆನಿಪನಮಾತು ಮಾತಿಗೆ ನೆನೆ ಮನುಜಾ |ಗಾತುರಗೋಸುಗ ಆತುರ ಪಡದಲೆಪ್ರೀತಿ ಬಿಡಿಸೊ ಸಂಕೀರ್ತಿಸಿ ಎಂದು 1 ಕಾಲ ಕಳೆಯ ಬೇಡ ||ವ್ಯಾಳ ಶಯ್ಯ ಶ್ರೀ ವೆಂಕಟ ನಿಲಯನ |ವ್ಯಾಳೆ ವ್ಯಾಳೆಕೆ ನೆನೆ ಅಲಸದಲೆಂದು 2 ಹೆಣ್ಣು ಹೊನ್ನು ಮಣ್ಣುಗಳ ನೆಚ್ಚಿಬನ್ನ ಬಹಳವ ಪಡವಿಯೊ ಮನುಜಮುನ್ನವೆ ಯೋಚಿಸಿ ಎಚ್ಚರದಲ್ಲಿ |ಪನ್ನಗಶಯ್ಯನ ನೆನೆವುದೆಂದೂ 3 ಭವ ಸಿಂಧುವ ಕಳೆಯೋನಂದವನೀಯುವ ಇಂದಿರೆಯರಸನಚಂದದ ಚರಣಾರವಿಂದತುತಿಪುದೆಂದು 4 ತನುವು ಅಸ್ಥಿರ ಮನವು ಚಂಚಲವೊಧನವೂ ಸಾಧನಗಳು ಬಲು ದುಷ್ಟಾ |ಘನ ಮಹಿಮನು ಗುರು ಗೋವಿಂದ ವಿಠಲನದಿನ ದಿನ ನೆನೆದು ಸುಖಿಸುವುದೆಂದೂ5
--------------
ಗುರುಗೋವಿಂದವಿಠಲರು
ತಾಳಬೇಕು ಭಕ್ತಿಯೇಳಬೇಕು ಪ ತಾಳಬೇಕಾದವನು ಮೇಳದಲಿ ಬಾಳಬೇಕು ಅ.ಪ ಹಾಡಲು ತಾಳಬೇಕು ಬೇಡಲು ತಾಳಬೇಕು ಓಡಾಡಿ ಕುಳಿತು ಮಾತಾಡಲು ತಾಳಬೇಕು ನೋಡಬೇಕಾದವನು ನೋಡಲು ತಾಳಬೇಕು ಮಾಡಿ ಮುಳುಗುವ ಜನ್ಮಬೇಡೆಂದು ತಾಳಬೇಕು 1 ತಾಳರಿತಮೇಲಂತರಾಳವನು ಕಾಣಬೇಕು ತಾಳದವ ಬಾಳುವನೇ ಮೇಳದೊಳಗೇ ತಾಳ ನೋಡುವರೆಲ್ಲ ಹೂಳನೋಡಲಿಬೇಕು ತಾಳಿ ಮಾಂಗಿರಿರಂಗನೂಳಿಗಕ್ಕೆ ನುಗ್ಗಬೇಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾಳಲಾರೆನೆ ಜಗದಿ ಬಾಳಲಾರೆನೆ ನಾಗೇಶಾಂಗಶಯನನ ಸುಖಭೋಗ ಪ ಎಂದಿಗೆ ಆಗದಿರ್ದೊಡೆ ತಾಳಲಾರೆನೆ ಜಗದಿ ಬಾಳಲಾರೆÀನೆ ಅ.ಪ ಸವತಿ ರುಗ್ಮಿಣಿ ಭವನದಿ ಮು ದವನೆ ತಾ ಮರೆತು ಕುಳಿತಾ 1 ಇಂದಿರೇಶ ನಂದಧೀಶ ಮಂದಿರದೀಗ ಬಾರದಿರಲು 2 ನರಸಿಂಹ ವಿಠಲನೀಗ ಭರದಿ ಮೊಗವ ತೋರದಿರಲು 3
--------------
ನರಸಿಂಹವಿಠಲರು
ತಿರುವಲ್ಲಿಕೇಣಿ (ಚೆನ್ನೈ) ದರುಶನ ಮಾಡುವ ಬಾಬಾರೋ ಪ ಪರಮ ಪುರುಷನವ ಪಾರ್ಥನ ಸೂತನು ವರಗೀತಾಮೃತವುಸುರಿದವನು ಅ.ಪ ಶರನಿಧಿಯೊಳು ಮಿಂದು ಐತರುವವರಿಗೆ ವರದಾಭಯಕರ ತೋರುವವನು ಪರಮಾಚಾರ್ಯಗೆ ದರುಶನವಿತ್ತು ಪರಭಕ್ತಿಯ ಸಾರಿದನಿವನು 1 ಚಾರು ವೇದಂಗಳ ತುರಗವ ಗೈದ ಧಾರುಣಿಯನು ರಥಹೂಡಿದನು ಮರುತಾತ್ಮಜನನು ಧ್ವಜಕೇರಿಸಿದನು ದುರುಳ ಕೌರವನ ಧುರದಿ ಸೋಲಿಸಿದನು2 ಹತ್ತವತಾರದಿ ಬಂದವನಿವನೇ ಮತ್ತದೈತ್ಯರನೆಲ್ಲ ಕೊಂದವನಿವನೇ ಉತ್ತಮಭಕ್ತರ ಕಾಯಲು ಮಾಂಗಿರಿ ಅತ್ತ ನಿಂದಾ ರಂಗನಾಥನು ಇವನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಿಳಿದವನೇ ಪೂರ್ಣಾ | ತಿಳಿವಿಕೆಯೊಳು ತನ್ನಯ ಖೂನಾ ಪ ತಿಳಿವಿಕೆ ತಿಳಿವದು ಯರಡಿಲ್ಲೆಂದು | ತಿಳಿದೇ ನರ ಬಾಹಂಭ್ರಮ ಜರಿದು 1 ವೇದಾಂತ ಸಾರದ ವಾಜ್ಯನು-ಭವನು | ಸಾಧು ಜನರ ದಯದಲಿ ಪಡೆದನು 2 ಜಲಧಿಯೊಳಗ ಲಹರಿಗಳೇಳ್ವೆಂತೆ | ಸಲೆ ಆತ್ಮನಿಂದಲಿ ಜಗದುದ್ಭವಂತೆ 3 ಪೂರ್ವಾರ್ಧದ ಬಿಸಿಲಿನ ನೆರಳೆಂದು | ದೋರ್ವ ಸಂಸಾರವು ಸ್ಥಿರವಲ್ಲೆಂದು 4 ಗುರುಮಹಿಪತಿ ಚರಣಕ ತಲೆವಾಗಿ | ಬೆರೆದು ಸತ್ವದೊಳಗ ರಜತಮ ನೀಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಳಿದು ನೋಡಿ ತನುವಿನೊಳು ತಮ್ಮ ನಿಜಖೂನ ಸುಳುಹು ದೋರಿಕುಡುವ ನೋಡಿ ನಿಜಾನಂದ ಘನ ಧ್ರುವ ತಮ್ಮ ಶುದ್ಧಿ ತಮಗಿಲ್ಲವೊ ಹೆಮ್ಮೆ ಬಹಳ ಘಮ್ಮ ಆದರೆ ಎಲ್ಲ ನೋಡಿ ಹೊಕ್ಕು ಮೃಗಜಲ ನಮ್ಮ ನಿಮ್ಮದೆಂದು ಹೊಡೆದಾಡಿ ಬಿತ್ತು ಬೀಳ ಸಮ್ಯಗ್ ಜ್ಞಾನದಿಂದ ತಿಳಿದವನೆ ವಿರಳ 1 ತನ್ನ ತಾ ತಿಳಿದವಗೇನು ಭಿನ್ನಭೇದವಿಲ್ಲ ಉನ್ಮನವಾಗಿ ಪೂರ್ಣ ತಿಳಿದವನೆ ಬಲ್ಲ ಧನ್ಯವಾದ ಮಹಿಮರಿನ್ನು ಮನಿಮನಿಗೆ ಇಲ್ಲ ಕಣ್ಣಾರೆ ಕಾಣುತಿಹ್ಯ ಗುಪ್ತಗುಹ್ಯವೆಲ್ಲ 2 ತಿಳುಹದೋರಿಕೊಟ್ಟ ಗುರು ಎನ್ನೊಳÀಗೆ ಪೂರ್ಣ ಹೊಳೆಹುತಿಹ್ಯಾನಂದ ಘನಸದ್ಗುರು ಪೂರ್ಣ ಥಳಥಳಿಸುತಿಹದು ಸದ್ಗತಿ ಸಾಧನ ಕಳೆದ ಮಹಿಪತಿ ನೋಡಿ ಜನನ ಮರಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯದೆ ಬೊಗಳುವದೆಲ್ಲಲ್ಲಲ್ಲ ನಿಜ ತಿಳಿದರೆ ವಲಿತಾ ಬ್ಯಾರಿಲ್ಲ ಪ ಮುಲ್ಲ ಶಾಸ್ತ್ರದ ಮೂಲವ ತಿಳಿಯದೆ ಜೊಳ್ಳುಕೂಗಿಗೆ ಮುಕ್ತಿಲ್ಲಿಲ್ಲ ಅ.ಪ ಭ್ರಷ್ಟತ್ವವಳಿಯುದೆ ಅಲ್ಲಲ್ಲ ಮುಂದೆ ನಿಷ್ಠನಾಗಲು ಕಷ್ಟ ಇಲ್ಲಲ್ಲ ದುಷ್ಟತನಳಿದುಳಿ ಬಿಸ್ಮಿಲ್ಲ ಸತ್ಯ ಶಿಷ್ಟರೊಳಾಡ್ವುದೆ ಸೊಲ್ಲಲ್ಲ 1 ಕಾಲನ ಗೆಲುವದೆ ನಿಜಮೌಲ ವನ ಮಾಲನ ಭಜನದೆ ತಿಳಿ ಲಾಯಿಲಾ ನೀಲಶಾಮನ ಮಹದಾಲಯದಿಟ್ಟು ಸು ಶೀಲನಾದವನೆ ಮಹದ್ದೌಲ 2 ಮಹಮ್ಮದನಾಗ್ವದೆ ಸೊಲ್ಲಲ್ಲ ತನ್ನ ಅಹಮ್ಮದನಾಗ್ವದೇಕರ್ಬಲ ಅಹಂ ವಹಂ ನೀಗಿ ರಾಮರಹೀಂ ನೆಲೆ ತಿಳಿ ಭವಜನುಮ ಮುಂದಿಲ್ಲಲ್ಲ 3
--------------
ರಾಮದಾಸರು
ತಿಳೀವಲ್ಲದಿದು ಎನಗೆ ತಿಳಿಸಯ್ಯ ಹರಿಯೆ ಬಲುಪಾಪಿಜೀವಿಯ ತಪ್ಪಾರಿಗಿಹ್ಯದೋ ಪ ಹುಟ್ಟಿಸಿದವನಿಗೋ ಹುಟ್ಟಿ ಬಂದವನಿಗೋ ಸೃಷ್ಟಿಗೊಳಿಸಿದಂಥ ಸೃಷ್ಟಿ ಕರ್ತನಿಗೋ ಗಟ್ಟ್ಯಾಗಿ ನನಗಿದರ ಗುಟ್ಟು ತಿಳಿಸೈ ತಂದೆ ಮುಟ್ಟಿಭಜಿಸುವೆ ನಿನ್ನ ಶ್ರೀಕೃಷ್ಣರಾಯ 1 ಗೋಡೆಯ ಡೊಂಕಿರಲು ಗೋಡೆಯ ತಪ್ಪಥವ ಗೋಡೆಯನು ಕಟ್ಟಿದ ಗೌಂಡಿಯ ತಪ್ಪೋ ಕೂಡಿಟ್ಟು ಹಣ ವೆಚ್ಚಮಾಡಿ ಕಟ್ಟಿಸಿದಂಥ ಗೋಡೆಯೊಡೆಯನ ತಪ್ಪೋ ತಿಳಿಹೇಳೆನಗೆ 2 ಬಂಡಿ ತಗ್ಗಿಗೆ ಬೀಳೆ ಬಂಡಿದೇ ತಪ್ಪಥವ ಬಂದಡರಿ ಕೂತುಕೊಂಡವರದೆ ತಪ್ಪೋ ಬಂಡಿಹೊಡೆಯುವಂಥ ದಿಂಡೆಗಾರನ ತಪ್ಪೋ ಕಂಡು ಇದ್ದಂತ್ಹೇಳೋ ಪಂಢರಿರಾಯ 3 ಜೀವಾಳ ಅಪಸ್ವರ ನುಡಿಯಲದರದೇ ತಪ್ಪೋ ಜೀವಾಳ ಬಾರಿಸುವಗೋ ಜೀವಾಳ ಕರ್ತನಿಗೋ ಆವಂಗೆ ತಪ್ಪು ಜಗಜೀವ ಜೀವೇಶನೆ ನ್ಯಾ ಯಾವಾಗ್ಹೇಳಯ್ಯ ಭಾವಜಪಿತನೆ 4 ಪ್ರಾಣೇಶ ಶ್ರೀರಾಮ ನೀನೆ ಬರೆದಿಹ್ಯ ಬರೆಹ ನೀನೆ ವ್ಯಾಪಕ ಸರ್ವ ನೀನೆ ರಕ್ಷಕನೋ ನೀನೆ ಸ್ವಾತಂತ್ರ್ಯಾಖಿಲ ಏನಿಲ್ಲ ಮನುಜನಾ ಧೀನ ತಪ್ಪ್ಯಾಕಿವಗೆ ನೀನೆ ಪೇಳಯ್ಯ 5
--------------
ರಾಮದಾಸರು
ತೀರ್ಥವ ಜನರು ಕೊಂಬರೆ ಬನ್ನಿ ತೀರ್ಥವ ಜನರು ಪಪಾರ್ಥಸಾರಥಿ ಭಕ್ತಪಾಲಕನಾಗಿರೆ ಸ್ವಾರ್ಥವೆ ಬರುವುದು ಸಾರಿ ಸಮೀಪವ ಅ.ಪಪಾದೋದಕವ ನಿಂತು ಪಡೆದು ಪ್ರಸಾದವನಾದರಿಸಲು ನಿತ್ಯರಾಗುವಿರೀಗಲೆ 1ಸ್ವಾಮಿಯಾರೋಗಿಸಿದ ಶೇಷ ಸ್ವೀಕಾರದಿಂಕಾಮಿತಾರ್ಥಗಳೆಲ್ಲ ಕೈವಶವಹವು 2ಚರಪುಗಳನು ಕೈಯ ಜೋಡಿಸಿ ಗ್ರಹಿಸಲುನಿರುಪಮ ತಿರುಪತಿನಾಥ ರಕ್ಷಿಪನಾಗಿ 3ಓಂ ಸುಭದ್ರಾ ಪೂರ್ವಜಾಯ ನಮಃ
--------------
ತಿಮ್ಮಪ್ಪದಾಸರು
ತೀರ್ಥವು ಬೇಡಾ ಕ್ಷೇತ್ರವು ಬೇಡಾ ಜಪ ತಪ ಯೋಗವು ಬೇಡಾ ಪ ಪರ ಉಪಕಾರ ಶಾಸ್ತ್ರ ಪುರಾಣಗಳು ಬೇಡಾ | ಸ್ವಾಮಿ ಸದ್ಗುರು ಭವತಾರಕನ ಭಜಕರ ಪಾದವ ನೀ ಬಿಡಬೇಡಾ 1 ಸತ್ಯವು ಸಂಸಾರವು ಜಗವಿದು ಮಾಡೆಂಬರು ನೋಡೀಜನರು | ಮಿಥ್ಯವು ಸರ್ವವು ಜಗದೀಶನನು ತಿಳಿಯೆಂಬುವರಾ ಸಜ್ಜನರು || ಜಾಗ್ರದಿ ಸ್ವಪ್ನದಿ ಬಳಲುತ ನಲಿವುತ ಚರಿಸುವರಾ ಕಾರ್ಮಿಕರು | ತುರ್ಯಾವಸ್ಥೆಯೋಳ್ ಮರೆದು ತಮ್ಮನು ಇರುತಿಹರಾ ಸಾಧುವರು2 ಸಾರ ನಿವೃತ್ತಿಯ ಅರಿವುದೆ ಜೀವನ್ಮುಕ್ತಿ || ಇದರ ಹಂಚಿಕೆ ಮಾಡುತ್ತಿಹುದೇ ಅದುವೆ ಶಾಸ್ತ್ರದ ಯುಕುತೀ | ಸದಮಲ ಬೋಧಾನಂದವೆ ಬಲಿದರೆ ನಿಜವೇ ತಾ ಅವ್ಯಕ್ತಿ 3 ಅನುದಿನ ಮೂರ್ತಿ ಭವತಾರಕ ಭಜಕರ ಕೇಳೋ ನಿನ್ನ ಖೂನಾ 4 ಸಂಸಾರವ ಸದ್ಧರ್ಮದಲಿ ಸಾಧು ಸಂತರಂತೆ ನೀ ಮಾಡೊ | ಸಂಶಯವಳಿದು ಸರ್ವವು ಶಿವನೆಂದರಿದು ಅವರೊಳು ಕೂಡೊ | ಸತ್ತು ಹುಟ್ಟುವ ಕಟ್ಟಳೆಗಳನು ಕಿತ್ತಿ ಈಡ್ಯಾಡೊ | ನಿತ್ಯದಿ ಭವತಾರಕನ ಭಜಕರ ಸಂಗದಲಿ ಲೋಲ್ಯಾಡೊ 5 ಗುರು ವರನಲಿ ಸತ್ಪುರುಷರ ಬಳಿಯಲಿ ಅರಸಬಾರದು ಇಷ್ಟಾ | ಕುಲ ವಯ ಕ್ರಿಯಾ ಕರ್ಮವ ತಾಪತ್ರಯಗಳನೆಣಿಸುವ ಭ್ರಷ್ಟಾ | ಅನುಭವ ಜ್ಞಾನದಿ ಬೋಧದಿ ಲಕ್ಷ್ಯವೀಕ್ಷಿಸುವವನೆ ಶ್ರೇಷ್ಠಾ | ಇನಿತನು ಬಿಟ್ಟು ನಿಂದಿಸುವವನೆ ಭವದಲಿ ಬಡುವನು ಕಷ್ಟಾ 6 ಮೂರ್ತಿ ಭವತಾರಕ ಭಜಕರ ಸೂರ್ಯನ ಬಲ್ಲದೆ ಗೂಗಿ 7 ಭವ ದೋಷವು ಅಳಿವಹುದೇ? | ಗುರು ಭವತಾರಕ ಭಜಕರ ಬೋಧವು ಧರೆಯೊಳು ನರರಿಗೆ ಇಹುದೇ ? 8 ಮಾತು ಸತ್ಯವಾದರೆ ಆತಗೆ ಶಿವನೆನು- ತಿಹರೀ ಜಗ ಜನರೂ | ಭೂತಭವಿಷ್ಯತ್ ಹೇಳಲು ಭಕ್ತಿಯೊಳಾತಗೆ ನಡಕೊಂಬುವರೂ | ಭೂತಳದೊಳು ಭವತಾರಕ ಭಕ್ತರ ನೀತಿ ಮರೆತ ಪಾಮರರೂ | ನೂತನ ಖ್ಯಾತಿಯ ಕೊಂಡಾಡುತ ಬಹು ಪಾತಕಕೆಳಿ ಎಂಬುವರೂ 9 ಕರ ಭವ ಮೂರ್ತಿ ಭವತಾರಕ ಭಜಕರು ಇದ್ದ ಸ್ಥಿತಿಯನರಿಯರು 10 ಆಡುವರಾಟವ ಬಾಲರ ಮನೆಯಲಿ ಮಾಡುತ ಬ್ರಹ್ಮಾಂಡವನೂ |ನೋಡರು ಹಿರಿಯರು ಸಟೆಯೆಂದೇ ದಿಟ ಮಾಡುವರಿಹದಾಟವನೂ | ಪಾಡಲ್ಲೆನುತಲಿ ತಿಳಿದವರೊಳು ಬೇಡುವರಾ ನಾಕವನೂ | ರೂಢಿಯೊಳಗೆ ಭವತಾರಕ ಭಜಕರು ನೋಡರು ಪುಸಿಯೆಂದದನೂ 11 ನಿತ್ಯ ಪೂರ್ಣ ಭವತಾರಕನಂಘ್ರಿಯ ಹೊಂದದೆ ತಿಳಿಯದು ಗುಟ್ಟೂ 12 ಸಂಚಿತ ಪ್ರಾರಬ್ಧ ಕ್ರಿಯಮಾಣಾ ಜನರಿಗೆ ಬರೆದನು ಬ್ರಹ್ಮಾ | ಮುಂಚೆ ಶಿರವನು ನೀಗಿದಾ ಬರದವರಾರೊ ಆತಗೆ ತಮ್ಮಾ | ಮಿಂಚಿನಂತೆ ಜೀವನಕೆ ತಗಲುವಾ ಮಾಡುವ ಕರ್ಮಾ ಧರ್ಮಾ | ಹಂಚಿಕೆ ತಿಳಿಯದೆ ನುಡಿವರು ಮರುಳರು ವಂಚನೆ ಬಿಡು ಇದು ವರ್ಮಾ 13 ದೇವ ನೈವೇದ್ಯವು ಖೊಬ್ಬರಿ ಸಕ್ಕರಿ ಪನಿವಾರವು ನೋಡಿ | ಆವ ಕುಲದವನಾದರೂ ಏನು | ಇಲ್ಲದ ಹಂಚಿಕೆ ಮಾಡೀ ಭಾವಿಸಿ ಮೃಷ್ಟಾನ್ನವನಿಟ್ಟರೂ ಕುಲಧರ್ಮದಲ್ಲಿ ನೋಡೀ | ಕೇವಲ ಭವತಾರಕನ ಭಜಕರ ಮುಂದೆ ರಹಸ್ಯವ ಮಾಡೀ 14
--------------
ಭಾವತರಕರು
ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ ಪ ತುತಿಸಲೆನ್ನೊಶವೆ ನಿ -ನ್ನತುಳ ಮಹಿಮ ಮಹಾ ಮತಿವಂತ ಜನರು ಸು - ಮತಿಗೆ ಸಿಲ್ಕದ ನಿನ್ನ ಅ.ಪ ಸ್ಮರಿಪ ಜನರ ಸುರ ತರು ಪಾಪಕಾಂತಾರ ನರ ಸಮ ಸಜ್ಜನ | ಶರಜನಿಚಯ ದಿನ ಪಾದ | ಸರಸಿಜ ಭಜಿಸುವ ಪರಮ ಭಕ್ತರ ಕುಮುದ | ವರ ನಿಚಯಕೆ ಸುಧಾ - ಪರಮ ಕರುಣಿಯು ಎಂದು ನಿನ್ನಯ ಪಾದ ಮೊರೆಯ ಪೊಕ್ಕೇನೊ ನಾನಿಂದು ನೀನೆ ಎನ್ನ ಮೊರೆಯ ಲಾಲಿಸು ಎಂದು ಬಿನ್ನೈಸಿದೆ ಪರಮಕೃಪಾಕರ ಪೊರೆಯೊ ಅನಾಥ ಬಂಧೂ 1 ದಯಕರ ನಿಜ - ಭಕ್ತಾ | ಮಯ ಹರ ಸುಖಸಾರಾ ಶ್ರಯವಾಗಿ ಸಂತತ | ನಯದಿಂದ ನಿಜಜನ ಭಯಕರ ಭವಹರ | ಜಯ ಜಯ ಜಯದಾತ ಜಯ ವಿಜಯಾತ್ಮಜ | ಜಯಕುಲ ದಿಗ್ವಿಜಯ ಜಯ ಕಾಲದಲಿ ನಿಜ | ಹಯಗ್ರೀವಮೂರ್ತಿಯ ದಯದಿಳೆಯೊಳು ಜನಿಸೀ | ಜನ್ಮದಿ ಮೂರ್ತಿ ತ್ರಯ ಪಾದವನೆ ಭಜಿಸಿ - ಧರಿಯೊಳು ಕ್ಷ - ತ್ರಿಯ ಕುಲದೊಳು ಜನಿಸಿ ಯುಧಿ ಭೀಮ - ಶಯನನಿಂದ ಹತನಾಗ್ಯಭüಯ ಸ್ಥಾನವನೆ ಬಯಸಿ 2 ಭೂಸುರ ವರನಾಗಿ | ಕಾಶ್ಯಪಿ ಸ್ಥಳದಲ್ಲಿ ವಾಸಮಾಡಿ ಶಿರಿ ವ್ಯಾಸ ಕೃಷ್ಣ ಪಾದೋ - ಪಾಸನ ಮಾಡುತ | ವ್ಯಾಸಮುನಿ ಆಗಿ ಭಾರ | ತೀಶ ಪ್ರತೀಕವ ವಾಸವಾಸರ ಸ್ಥಾ - ಪಿಸಿ ಯಂತ್ರೋದ್ಧಾರಾ ಶ್ರೀಶ ಮಧ್ವಮುನಿಯಾ - ಸ್ಥಾಪಿಸಿ ಅಲ್ಲಿ ವಾಸವ ಮಾಡಿ ತಾನೂ - ಪುರಂದರ ದಾಸರಾಯರಿಗೆ ಇನ್ನು - ಸುಮಂತ್ರೋಪ - ಅನುದಿನ ವಾಸಮಾಡಿದಿ ನೀನು 3 ಕ್ಷೋಣಿತಳದಿ ಕುಂಭ | ಕೋಣನಗರದಲ್ಲಿ ಕ್ಷೋಣಿದೆವೋತ್ತುಮ | ವೀಣವೆಂಕಟನಾಮಾ - ಕ್ಷೀಣಬಲ ಙÁ್ಞನ ತಾಣ | ಗೊಡದೆ ನಿನ್ನ ಜಾಣತನದಿ ನರ | ಮಾಣವಕನಂತೆ ಪಾಣಿ ಭಿಕ್ಷಾನ್ನವಾ | ಟಾಣಿ ಮಾಡುತ ನೀನು ಕ್ಷೋಣಿಪ ಮನಿಗೆ ಬಾರೇ - ನಿನ್ನ ವೀ - ಶುಭ ಲ - ಕ್ಷಣ ಬ್ಯಾರೆ ಬ್ಯಾರೇ ಇರಲು ನಿನ್ನ ಕ್ಷಣ ಬಿಡದಲೆ ಜನ ಮಣಿದು ನಮಿಸುತಿರೆ 4 ಜನಪ ನಿನ್ನಯ ಮಹ | ಘನ ಚರ್ಯವನೆ ನೋಡಿ ದಿನದಿನದಲಿ ಬಹು | ವಿನಯಪೂರ್ವಕ ಪಾದ ವನಜ ಸೇವಕÀನಾಗಿ |ತನು ಮನ ಧನ ಧಾನ್ಯ ಘನ ನಿನಗರ್ಪಿಸಿ | ನಿನ ಸಂಗವಾಗಲೂ ಜನುಮ ಇಲ್ಲೆಂಬುವ | ಘನ ಙÁ್ಞನ ಭಕುತಿಯ ಮನದಲ್ಲಿ ಯೈದುತಲೆ - ತಾನು ನಿತ್ಯ ಅನುಮಾನ ಮಾಡದಲೆ - ಇರಲು ಅವನ ಘನಸುಖ ರೂಪದಲ್ಲೆ - ಇರುವಂತೆ ಮನಪೂರ್ತಿ ಕರುಣಸಿದ್ಯನುಪಮ ಚರಿತಲ್ಲೆ 5 ಸತ್ಯನಾಮಕ ಸುತ | ಮೃತ್ಯುನಿಂದಲಿ ತಾನು ಸತ್ತುಪೋದ ವಾರ್ತೆ | ಬಿತ್ತರಿಸೆ ಲೋಕದಿ ಉತ್ತುಮ ನೀನಾಗ | ಸತ್ಯ ಸಂಕಲ್ಪವ ಗೊತ್ತು ತಿಳಿದು ಅವನ | ಮತ್ತೆ ಈ ಲೋಕಕ್ಕೆ ತತ್ಕಾಲದಲಿ ತಂದು | ಉತ್ತುಮ ಭಾರ್ಯಳ ಜತ್ತು ಮಾಡಿದ ವಾರ್ತೆಯಾ - ಕೇಳೀ ಶೈವ - ರುತ್ತುಮನಾತ್ಮಜನಾ - ಇವಾನಂತೆ ಸತ್ಯವೆಂದು ಪೇಳಿ ಮತ್ತೆ ಪೊರೆದ್ಯೊ ಜೀಯಾ 6 ಇನತೆ ಮೊದಲಾದ | ಫನತರ ನಿನ ಮಹಿಮೆ ನಿತ್ಯ | ಅನಿಮಿಷ ಮುನಿಜನ ಮನಕೆ ಸಿಲ್ಕದೆ ವೃಂದಾ - |ವನದಲಿ ನೀ ನಿಂತು ವನುತೆ ಸುತ ಧನ | ಧಾನ್ಯ ಮೊದಲಾದ ಅನುದಿನ ಸಲಿಸುತ್ತ ಜನರ ಪಾಲಿಸೊಗೋಸುಗಾ - ಹರಿಯು ನಿನಗೆ ಜನುಮಾವನಿತ್ತನೀಗ - ಅದಕೆ ನಿನ್ನ ಅನುದಿನ ತವಪಾದ ವನಜ ನಂಬಿದೆ ವೇಗ 7 ರಕ್ಷಿಸೋ ನೀ ಎನ್ನ | ಲಕ್ಷ್ಮೀರಮಣ ದೂತ ಮೋಕ್ಷಾದಿ ಪುರುಷಾರ್ಥ - | ಪೇಕ್ಷ ಪ್ರದಾಯಕ ಲಕ್ಷ ಜನರೊಳೆನ್ನ | ವೀಕ್ಷಿಸಿ ಪರಜನಾ - ಪೇಕ್ಷಾ ಮಾಡದಂತೆ | ಲಕ್ಷ್ಮೀಶ ನಾತ್ಮಜ ಭಿಕ್ಷಾನ್ನ ಬೇಡೋದು | ಲಕ್ಷಣವೇನಿದು - ಪೇಕ್ಷಾ ಮಾಡದೆ ನೀ ಎನ್ನಾ - ಕಾಯಲಿಬೇಕು ವಿಕ್ಷೀಸಿ ಙÁ್ಞನವನ್ನಾ - ಭಕುತಿ ಇತ್ತು - ರಕ್ಷಿಸು ಎಂದೆ ನಿನ್ನಾ ಇದೆ ಒಂದಾ ಪÉೀಕ್ಷೆ ಪೂರ್ತಿಸೊ ಕಲ್ಪವೃಕ್ಷ ನೀ ಎನಗೆ ಇನ್ನ 8 ಕಿಟಿಜ ಸರಿದ್ವರ | ತಟ ಕೃತ ಮಂದಿರ ಚಟುಲ ಮಧ್ವಮುನಿ | ಪಟು ಶಾಸ್ತ್ರದಿಂದಲಿ ಕುಟಿಲ ದುರ್ವಾದಿಗ | ಳ್ಥಟನೆ ಮುರಿದು ನಿಜ ಘಟನೆ ಮಾಡಿ ಪ್ರತಿ | ಭಟರಿಲ್ಲದಲೆ ನೀನು ಧಿಟನಾಗಿ ತ್ರಿಜಗದಿ - ಮೆರೆಯುತ ಶಠÀಜನರನು ತ್ವರದಿ - ಮರಿದು ಙÁ್ಞನಿ ಕಟಕ ಸುಪಾಲನದಿ ಪಟೋ ಎನಿಸಿ ಧಿಟಗುರು ಜಗನ್ನಾಥ ವಿಠಲನ್ನ ಭಜಿಸಿದೆ 9
--------------
ಗುರುಜಗನ್ನಾಥದಾಸರು
ತುಪಾಕಿ ಸಾಧನವನು ತ್ವರಿಯ ಬಿದ್ದು ಮಾಡುತಿರುವೆಶಾಬಾಸು ಶಿವನೇ ನೀನಣ್ಣ ಪೇಳುವೆನಣ್ಣ ಪ ಮೌನವೆಂದೆನಿಪ ಮುಸೈದೆ ಸಹಿತಾಗಿಜ್ಞಾನ ಪಡೆದಳವ ಬಗಿಯಣ್ಣಾ ಸಾಧಿಸು ಅಣ್ಣಧ್ಯಾನವೆಂದೆನಿಪ ತಲೆಕಟ್ಟನೆ ಕಟ್ಟಿಆನಂದವನೆ ಆಡಣ್ಣ ಸಾಧಿಸು ಅಣ್ಣ 1 ಆರು ಚಕ್ರವೆಂಬ ಆರು ಕಟ್ಟಿನ ತುಪಾಕಿಧೀರತನದಿಂದ ಪಿಡಿಯಣ್ಣಾ ಸಾಧಿಸು ಅಣ್ಣಮೂರಾವಸ್ಥೆಯೆಂಬ ಮೂವೆರಳ ಮದ್ದ ಹೊಯ್ದಪೂರಾಯದವನ ಮಾಡಣ್ಣ ಸಾಧಿಸು ಅಣ್ಣ2 ಇಡಾಪಿಂಗಳವೆಂಬ ಎರಡು ಗುಂಡನೆ ಹಾಕಿರೂಢಿ ಎಂಬ ಗಜವ ಜಡಿಯಣ್ಣ ಸಾಧಿಸು ಅಣ್ಣಕೂಡಿಹ ಸತ್ವನೆಂಬ ಕೂರಿ ರಂಜಕವರೆದುಗೂಡು ಗುರು ಜಾವಿಗೆ ಒತ್ತಣ್ಣ ಸಾಧಿಸು ಅಣ್ಣ 3 ಆಸನ ನಳಿಕೆಯೆಂಬ ಆಧಾರವನೆ ಆಂತುವಾಸರ ಹೊಗ್ಗೊಡಬೇಡಣ್ಣ ಸಾಧಿಸು ಅಣ್ಣನಾಸಿಕಾಗ್ರವು ಎಂಬ ನೊಣನ ದಿಟ್ಟಿಸಿ ನೋಡಿಸೂಸದೆ ಏರಿಸಿ ನಿಲ್ಲಣ್ಣ ಸಾಧಿಸು ಅಣ್ಣ4 ಬರಿಯ ಪ್ರಣವವೆ ಎಂಬ ಬೆರಳ ಬೊಬ್ಬೆಯನಿಟ್ಟುಭರದಿ ಭೀತಿಯನಳಿಯಣ್ಣಾ ಸಾಧಿಸು ಅಣ್ಣಗುರು ಚಿದಾನಂದನು ಎಂಬ ಗುರಿ ಭ್ರೂಮಧ್ಯವೆ ಇರೆಗುರಿಯ ತಾಗುವಂತೆ ಇಡಣ್ಣ ಸಾಧಿಸು ಅಣ್ಣ5
--------------
ಚಿದಾನಂದ ಅವಧೂತರು
ತುರುಕರಿಲ್ಲದ ಮನೆ ದಿರದಿಮ್ಮನೆ ಪ ತುರಕರ ನೋಡದ ಕಣ್ಣು ಶಿಖಿಗರಿಗಣ್ಣು ಕರ್ಣ ತುರಕರುವಿನುಚ್ಛಿಷ್ಟ ಉಣ್ಣ ಬಾಯಿ ವಿಷಗಾಯಿ 1 ಜಿಹ್ವೆ ಅಧಮನ ಗುಂಹೆ ತುರಕರನೊದೆವ ಕಾಲು ಯಮನ ಪಾಲು 2 ತುರಕರ ಪ್ರಸಾದ ಉಣ್ಣದ ಹೊಟ್ಟೆ ಗೂಗಿನ ಮೊಟ್ಟೆ ತುರಕರನ ಚಿಂತಿಸದ ಮನ ಗಾರ್ಧಭ ಗಮನ ತುರಕರ ಕಾಯ್ದ ವಿಜಯವಿಠ್ಠಲರೇಯ ತುರಕರ ಕರುಣ ಪಡೆಯದವನು ಶುದ್ಧ ಶವನು3
--------------
ವಿಜಯದಾಸ
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ