ಒಟ್ಟು 837 ಕಡೆಗಳಲ್ಲಿ , 91 ದಾಸರು , 695 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತೀಶ ಹರಿದಾಸನಾದನಿಲ್ಲೀ ವೀಣೆಯ ಧರಿಸುತಲೀ ಪ. ಭಾರಿಭಾರಿಗವತಾರ ಮಾಡಿ ಬಳಲೀ ಆನಂದದಲ್ಲೀ ಅ.ಪ. ತ್ರೇತೆಯಲ್ಲಿ ಶ್ರೀ ರಾಮದೂತನಾಗಿ ತನುಸುಖವ ನೀಗಿ ಪ್ರೀತಿ ಭಕ್ತಿಯಲಿ ರಾಮ ಕಾರ್ಯಕಾಗಿ ತನುವಪ್ಪಿಸಿ ಬಾಗಿ ಖ್ಯಾತಿ ಪಡೆದು ಶರಧಿಯ ಲಂಘಿಸಿ ಪೋಗಿ ಸೀತೆಯ ಕಂಡೆರಗಿ ವೀಹೋತ್ರಗೆ ಪುರವಪ್ಪಿಸಿ ತಿರುಗೀ ರಾಮರ ಕಂಡೆರಗಿ 1 ಕುಂತಿಯ ಜಠರದಿ ಜನಿಸಿ ಭೀಮನೆನಿಸೀ ಬಕಮುಖರನೆ ಜೈಸಿ ಸಂತೋಷದಿ ಸೌಗಂಧ ಸತಿಗೆ ಸಲಿಸೀ ಕೌರವರ ಸಂಹರಿಸೀ ಅಂತರಂಗದಲಿ ಕೃಷ್ಣನಂಘ್ರಿ ಭಜಿಸಿ ಪಾಂಡವರನೆ ಮೆರಸೀ ಕಂತುಪಿತನ ಕಡುಕೃಪೆಯ ಪಡೆದು ಸುಖಿಸೀ ಮೇಲ್ತೋರದೆ ಸ್ಮರಿಸೀ 2 ಮೂರನೆ ರೂಪದಿ ಮುನಿಯಾಗವತರಿಸೀ ದುರ್ಮತಗಳ ಜೈಸೀ ಸಾರತತ್ವಮತ ಸಜ್ಜನರಿಗೆ ತಿಳಿಸೀ ಸರ್ವೋತ್ತಮ ಹರಿ ಎನಿಸೀ ಆರು ಅರಿಯದಂತೆ ದಾಸತ್ವವಚರಿಸೀ ದುರ್ಮತಗಳ ಜೈಸೀ ತೋರಿ ತೋರದಂತೆ ಸದ್ಗ್ರಂಥದಿ ತಿಳಿಸೀ ಯತಿ ಕುಲಜರೋಳ್ ನಿಲಿಸೀ 3 ಮೀಸಲ ದಾಸ್ಯವ ಮೂರವತಾರದಲ್ಲಿ ಚರಿಸಲು ಕಲಿಯಲ್ಲೀ ವ್ಯಾಸ ಮುನಿಯು ಬಹಿರಂಗಪಡಿಸೆ ಚಲ್ಲೀ ನಾರದ ಮುನಿಯಲ್ಲೀ ಪುರಂದರ ಗುರುವೆನಿಸುತಲೀ ಮೆರೆಯಲು ಜಗದಲ್ಲೀ ಮೀಸಲು ಉಳಿಯದೆ ಪೋಯಿತೆಂದು ಇಲ್ಲೀ ದಾಸ ತಾನಾಗುತಲೀ 4 ದಾಸತನದ ಆನಂದವನನುಭವಿಸೇ ದೇವತೆಗಳು ಬಯಸೇ ಭೂಸುರ ಜನ್ಮದಿ ಭೂಮಿಯಲವತರಿಸೇ ಹರಿದಾಸರಾಗಿ ಸುಖಿಸೇ ವಾಸುದೇವಗೆ ತಾ ನಿಜದಾಸನು ಎನಿಸೇ ಮಾರುತಿ ಇದ ಬಯಸೇ ಶ್ರೀಶ ಗೋಪಾಲಕೃಷ್ಣವಿಠಲದಾಸಾ ಬೆಳಗಾವಿ ವಾಸಾ 5
--------------
ಅಂಬಾಬಾಯಿ
ಭಿಡೆ ಇನ್ನ್ಯಾತಕೆ ಹೊಡಿ ಹೊಡಿ ಡಂಗುರ ಪೊಡವಿ ತ್ರಯದಿ ಹರಿ ಅಧಿಕೆಂದು ಪ ಅಡಿಯ ದಾಸರ ಕರದ್ಹಿಡಿದು ಬಿಡದೆ ಬಲು ಸಡಗರದಾಳುವ ನಿಜಧಣಿಯೆಂದು ಅ.ಪ ನಂದಕಂದ ಗೋವಿಂದ ಮುಕ್ಕುಂದ ಭಕ್ತ ಬಂಧು ಎಂದು ಕೈತಾಳವಿಕ್ಕುತ ತಂದೆ ತನ್ನ ಪಾದನ್ಹೊಂದಿ ಭಜಿಪರ ಬಂಧ ಛಿಂದಿಪ ಪರದೈವವೆಂದು ನಲಿಯುತ 1 ಸ್ಮರಿಪ ಜನರ ಮಹದುರಿತಪರ್ವತವ ತರಿದು ಪೊರೆವ ಸಿರಿದೊರೆಯೆಂದೊದರುತ ನೆರಳುಯೆಂದು ಮೈಮರೆದು ಕೂಗುತ 2 ಶರಣಾಗತರ ತನ್ನ ಹರಣದಂತೆ ಕಾಯ್ವ ಕರ ಮೇಲಕೆತ್ತಿ ಮರೆಯ ಬಿದ್ದವರ ಪರಮ ಬಡತನವ ಭರದಿ ಕಳೆದನೆಂದು ಒರೆದು ಸಾರುತ 3 ಸಾಗರಶಾಯಿ ತನ್ನ ಬಾಗಿ ಬೇಡುವರ ಬೇಗ ಕ್ಷೇಮನೀಯ್ವ ಭಾಗ್ಯದರಸನೆಂದು ನೀಗದ ಕಷ್ಟದಿ ಕೂಗಲು ತಡೆಯದೆ ಸಾಗಿ ಬರುವ ಭವರೋಗವೈದ್ಯನೆಂದು 4 ಅಚ್ಯುತಗಿಂ ಭಕ್ತರಿಚ್ಛೆ ಪೂರೈಸಲು ಹೆಚ್ಚಿನವಿರಲ್ಲೆಂದು ಬಿಚ್ಚಿ ಹೇಳುತ ಇಚ್ಛಜಪಿತ ಮಹಸಚ್ಚಿದಾನಂದ ಸರ್ವಕ್ಹೆಚ್ಚು ಹೆಚ್ಚು ಶ್ರೀರಾಮನೆ ಎನ್ನುತ 5
--------------
ರಾಮದಾಸರು
ಭೀಮಾ ತಟಗ ವಿಠಲ | ಕಾಪಾಡೊ ಇವಳಾ ಪ ಸನ್ನುತ ದೇವಾ | ಪ್ರಾರ್ಥಿಸುವೆ ಹರಿಯೇ ಅ.ಪ. ಮರುತದಲ್ಲಿಹಳು | ತರುಣಿ ಬಹು ಭಕ್ತಿಯಲಿಹರಿದಾಸ್ಯ ಕುಂಕ್ಷಿಪಳು | ಕರಿವರದ ದೇವಾ |ಗುರುಕರುಣ ಸ್ವಪ್ನದಲಿ | ಹರಿದಾಗಿ ಪಡೆದಿಹಳುತರಳೆಜ್ರಪತಿ ವರದ | ಪರಿಪಾಲಿಸಿವಳಾ 1 ಪಂಚ ಪಂಚಿಕೆಯ ಪ್ರ | ಪಂಚ ಸತ್ಯತ್ವವನುಪಂಚ ಭೇದಗಳರುಹಿ | ಕಾಪಾಡೊ ಹರಿಯೇ |ಅಂಚೆ ವಹ ಪಿತನೆ ಸ | ತ್ತರತ ಮತ ತಿಳಿಸುತ್ತಪಂಚರೂಪಾತ್ಮಕನೆ | ಕೈಪಿಡಿಯೊ ಇವಳಾ 2 ಭೋಗಗಳ ಉಂಬಾಗ | ಭೋಗಿರಥೀ ಪಿತನಜಾಗುಮಾಡದೆ ಸ್ಮರಿಪ | ಭಾಗ್ಯವನೆ ಕೊಟ್ಟೂ |ಆಗುಹೋಗುಗಳೆಂಬ | ದ್ವಂದ್ವ ಸಹನೆಯನಿತ್ತುನೀಗೊ ಭವಸಾಗರವ | ಕಾರುಣ್ಯಮೂರ್ತೇ 3 ಪತಿಯೇ ಪರದೈವವೆಂ | ಬತುಳ ಶುಭಮತಿಯಿತ್ತುಗತಿಗೋತ್ರ ನೀನೆಂದು | ಸತತ ಚಿಂತಿಸುತಾ |ಮತಿವರಾಂ ವರರಂಘ್ರಿ | ಶತಪತ್ರಸೇವೆಯನುರತಿಯಿಂದ ಗೈವಂಥ | ಮತಿನೀಡೊ ಹರಿಯೇ4 ಸಂತಾನ ಸಂಪತ್ತು | ಶಾಂತಿಪತಿ ನೀನಿತ್ತುಕಾಂತುಪಿತ ಸೇವೆನೈ | ರಂತರದಿ ಗೈವಾ |ಪಂಥದಲಿ ಇರಿಸು ಗುರು | ಗೋವಿಂದ ವಿಠ್ಠಲನೆಇಂತಪ್ಪ ಪ್ರಾರ್ಥನೆಯ | ಸಲಿಸೋ ಶ್ರೀ ಹರಿಯೇ5
--------------
ಗುರುಗೋವಿಂದವಿಠಲರು
ಭೂತರಾಜರು ಭೀತಿಯನ್ನು ಬಿಡಿಸು ಬೇಗ ಭೂತರಾಜನೆ ಪ. ಭಕ್ತಿಯಿಂದ ಬಾಗಿ ನಮಿಪೆ ಖ್ಯಾತಿವಂತನೆ ಅ.ಪ. ಕಾಮಬಾಣ ಕಡಿಮೆ ಮಾಡು ಭಾರಿಕಾಮಹರನೆರಾಮಧ್ಯಾನಿ ನೀಡು ವಾಮನ ದೇವನೇ 1 ಸಾರ ತಿಳುಹು ಗರಳಧಾರಿಯೇಕರವ ಮುಗಿದು ಬೇಡುವೆನು ತ್ವರಿತದಿಂದಲಿ 2 ತಂದೆವರದವಿಠಲನ್ನ ಹೃನ್ಮಂದಿರದೋಳ್‍ಛಂದದಿಂದ ತಂದು ತೋರೋ ಇಂದುಶೇಖರ 3
--------------
ಸಿರಿಗುರುತಂದೆವರದವಿಠಲರು
ಭೂರಿ ಕರುಣಾಕರನೋ ಸಾರುವ ತೆರೆದೊಳು ತೋರಿಹ ಭಕ್ತರ ಪ. ಅಗಣಿತ ಮಹಿಮನ ಪೊಗಳುವೆ ನಾನೆಂತು ಬಗೆ ಬಗೆ ರೂಪದಿ ಸಿಗದೆಸಿಗುವ ಹಾಂಗೆ ಪೊಗಳಿಸಿಕೊಂಡು ತಾ ಝಗಝಗಿಸುತ ಬಹ ನಗೆಮೊಗ ಚೆನ್ನಿಗ ನಿಗಮಗೋಚರ ಕೃಷ್ಣಾ 1 ಭಕ್ತ ಪ್ರಹ್ಲಾದಗೆ ಅತ್ಯಧಿಕ ಹಿಂಸೆ ಯಿತ್ತ ಪಿತನ ಕೊಂದು ಇತ್ತ ಮುಕುತಿ ಅವ ನತ್ಯಪರಾಧವನೆತ್ಯಾಡಿದನೇ ಚಿತ್ತಜನೈಯ್ಯನು ಭಕ್ತವತ್ಸಲ ದೇವ 2 ಅಣುರೇಣು ತೃಣಕಾಷ್ಠ ಪರಿಪೂರ್ಣ ನೀನೆಂದು ಕ್ಷಣ ಬಿಡದಲೆ ಗಜರಾಜನು ಸ್ತುತಿಸೆ ಅನುವಿಲಿ ಚಕ್ರದಿ ನಕ್ರನ ಹರಿಸಲು ದಣಿದ ಹರಿಗೆ ಗಜರಾಜನೇನಿತ್ತನೋ 3 ಭಕ್ತರ ಮನದಘ ನಿತ್ಯದಿ ಕಳೆದನೋ ಅಶಕ್ತ ಅಜಮಿಳನೆಮ ಭೃತ್ಯರೆಳೆಯಲು ಇತ್ತು ನಾರಗನುಡಿ ಮತ್ತೆ ಯಮಭಟರ ಇತ್ತ ಮುಕುತಿ ದೇವ ಅತ್ಯಧಿಕ 4 ಮೂಗುತಿ ನೆವದೊಳು ಸಾಗಿಸಿ ಭಾಗ್ಯವ ಜಾಗರ ಮೂರುತೆ ಯೋಗಿಗಳರಸನು ಬಾಗಿಸಿ ತನ್ನವರಾಗಿಸಿ ದಾಸರ ಸರ್ವರ ಅನುರಾಗದಿ ಸಲಹುವ 5
--------------
ಸರಸ್ವತಿ ಬಾಯಿ
ಭೃಂಗ ಕುಂತಳೆಯರು ಮುಯ್ಯ ತಂದಾರೆಂದು ಪ. ಅಂದದ ವಸ್ತವಧರಿಸಿ ದೂತೆ ಚಂದದ ಸೀರೆ ಶೃಂಗರಿಸಿಇಂದಿರೇಶಗೆ ನಮಸ್ಕರಿಸಿತಾನು ಬಂದಾಳೆ ದ್ರೌಪತಿ ಸ್ಮರಿಸಿ 1 ಬಾಗಿಲಿಗೆ ಬಂದಾಳು ನೋಡಿದ್ವಾರಪಾಲಕಗೆ ಉಚಿತವ ಹೇಳಿಹೊನ್ನುಂಗುರಆತಗೆ ನೀಡಿಒಳಗೆ ಪೋದಳು ಹರಿಯ ಕೊಂಡಾಡಿ2 ವಂದಿಸಿ ಯದುನಾಥನಢಿಗೆಮಂದಹಾಸವ ಬೀರಿದೂತೆಯಡೆಗೆಬಂದಾರೈವರೆಂಬೊ ನುಡಿಗೆಆನಂದ ಬಟ್ಟ ಕೃಷ್ಣ ಬ್ಯಾಗನೆ3 ವೇಗದಿ ರುಕ್ಮಿಣಿಗೆಬಾಗಿ ಸುದ್ದಿ ಹೇಳಿ ಮುಯ್ಯದ ಬಗಿ ಬಗಿನಾಗವೇಣಿಯು ಹರುಷಾಗಿಕರೆಯ ಬರತೇವಂತ್ಹೇಳೆ ಹೋಗಿ4 ಪುತ್ಥಳಿ ಮನಕೆ ತಾರೆಂದು 5 ಗುರ್ತು ಹೇಳುವೆ ಕೇಳೊ ದೊರೆಯೆ ಕೃಷ್ಣಚರ್ಚೆ ಮಾತಿನ ಚಮತ್ಕಾರಿಯೆಶೃತ್ಯರ್ಥದಾ ಮಳೆಗರಿಯೆಪ್ರತಿಯುತ್ತರವಕೊಡೋದು ಮರಿಯೆ 6 ಕೋಕಿಲ ಸ್ವರದಂತೆ ಅಳಕು ಹರುಷಾಗಿರಾಮೇಶಗ್ಹಾಕಿ ಮಲಕುಆಗಮಾ ತರತಾಳೆ ಮಲಕುಎಲ್ಲಾ ನಾರಿಯರು ಅಕೆಗೆ ಅಳಕು 7
--------------
ಗಲಗಲಿಅವ್ವನವರು
ಭ್ರಮೆ ಬೇಡಲೆ ಮನ ತಿಳಿ ಜವದಿ ಹರಿ ವಿಮಲಚರಣಕಮಲ್ಹಿಡಿ ದೃಢದಿ ಪ ಸುಮನಸರಗೂಡಿ ನೀ ಸುಮಶರ ಪಿತನಂ ಸಮಯ ತಿಳಿದು ಭಜಿಸನುದಿನದಿ ಅ.ಪ ಸಾರವಿಲ್ಲದ ಸಂಸಾರ ಇದು ಮೇರೆನಿಲ್ಲದ ಸಾಗರ ಆರಿಗೆ ನಿಲುಕದೆ ಮೂರುಲೋಕವದ್ದಿ ಮೀರಿಬಡಿಸುವುದು ಬಲುಘೋರ 1 ಹೆಂಡರು ಮಕ್ಕಳೆಂದು ನಂಬಿದಿ ನಿನ್ನ ಹಿಂಡಿನುಂಗುವುದು ಅರಿಯದ್ಹೋದಿ ಕಂಡಕಂಡವರಿಗೆ ಮಂಡೆಬಾಗಿಸಿ ನಿನ್ನ ದಂಡನೆಗೆಳಪುದು ಅಂತ್ಯದಿ 2 ಕಾಕುಜನರ ಸಂಗ್ಹಿಡಿದಿದ್ದಿ ನೀ ಲೋಕನೆಚ್ಚಿ ನೂಕುನುಗ್ಗಾದಿ ಲೋಕಗೆಲಿದು ಭವನೂಕಿ ನಲಿಯುವರ ಸಾಕಾರಗಳಿಸದೆ ಕೆಟ್ಟ್ಹೋದಿ 3 ಧರೆಯ ಭೋಗವನು ಸ್ಥಿರ ತಿಳಿದಿ ನೀ ಹರಿದು ಹೋಗುವದಕೊಲಿತಿದ್ದಿ ಮರೆಮೋಸದಿ ಬಿದ್ದರು ಮೈಯಮರೆದು ಸ್ಥಿರಸುಖ ಪಡೆಯದೆ ದಿನಗಳೆದಿ 4 ಭೂಮಿಸುಖಾರಿಗೆ ನಿಜವಲ್ಲ ಇದು ಕಾಮಿಸಬೇಡೆಲೊ ಶೂಲ ಕಾಮಿತಗಳನಿತ್ತು ಕ್ಷೇಮದಿ ಸಲಹುವ ಸ್ವಾಮಿ ಶ್ರೀರಾಮನ ತಿಳಿಮಿಗಿಲ 5
--------------
ರಾಮದಾಸರು
ಮಂಗಳಂ ಜಯ ಮಂಗಳಂ ಲಿಂಗಾಕಾರದ ಪರಶಿವಗೆ ಪ ರಜತಾದ್ರಿಪುರದೊಳು ನಿಂದವಗೆ ಭಜಕರ ಸಲುಹಲು ಬಂದವಗೆ ನಿಜಸುರ ಸೇವಿತ ಗಜಚರ್ಮಾಂಬರ ತ್ರಿಜಗ ವಂದಿತನಾದ ಪರಶಿವಗೆ1 ಬಾಣನ ಬಾಗಿಲ ಕಾಯ್ದವಗೆ ತ್ರಾಣದಿ ತ್ರಿಪುರವ ಗೆಲಿದವಗೆ ಕಾಣದ ಅಸುರಗೆ ಪ್ರಾಣಲಿಂಗವನಿತ್ತು ಮಾಣದೆ ಭಕ್ತರ ಸಲುಹುವಗೆ 2 ಗಂಗೆಯ ಜಡೆಯೊಳು ಧರಿಸಿದಗೆ ಸಿಂಗಿಯ ಕೊರಳೊಳು ನುಂಗಿದಗೆ ತಿಂಗಳ ಸೂಡಿಯೆ ಅಂಗ ಭಸ್ಮಾಂಗದಿ ಕಂಗಳು ಮೂರುಳ್ಳ ಕೃಪಾಂಗನಿಗೆ 3 ಅಸ್ಥಿಯ ಮಾಲೆಯ ಧರಿಸಿದU É ಹಸ್ತದಿ ಶೂಲವ ಪಿಡಿದವಗೆ ವಿಸ್ತರವಾಗಿಯೆ ಭಸ್ಮಸುವಾಸಿಗೆ ಸತ್ಯದಿ ವರಗಳನಿತ್ತವಗೆ 4 ಅಂಬಿಕಪತಿಯೆಂದೆನಿಸಿದಗೆ ತ್ರಿ- ಯಂಬಕ ಮಂತ್ರದಿ ನೆಲೆಸಿದಗೆ ನಂಬಿದ ಸುರರಿಗೆ ಬೆಂಬಲವಾಗಿಯೆ ಇಂಬಾದ ಪದವಿಯ ತೋರ್ಪವಗೆ 5 ಪಂಚಾಕ್ಷರದೊಳು ಒಲಿದವಗೆ ಪಂಚಮ ಶಿರದೊಳು ಮೆರೆವವಗೆ ಪಾತಕ ಸಂಚಿತ ಕರ್ಮವ ವಂಚಿಸಿ ಭಕ್ತರ ವಾಂಛಿತವೀವಗೆ 6 ಪಾಶುಪತವ ನರಗಿತ್ತವಗೆ ಶೇಷಾಭರಣವ ಹೊತ್ತವಗೆ ಕಾಶಿಗಧಿಕವಾಗಿ ಕೈವಲ್ಯವಿತ್ತು ವಿ- ಶೇಷದಿ ಜನರನು ಸಲುಹುವಗೆ7 ಯಕ್ಷ ಸುರಾಸುರ ವಂದಿತಗೆ ದಕ್ಷನ ಮಖವನು ಕೆಡಿಸಿದಗೆ ಕುಕ್ಷಿಯೊಳೀರೇಳು ಜಗವನುದ್ಧರಿಸಿಯೆ ರಕ್ಷಿಸಿಕೊಂಬಂಥ ದೀಕ್ಷಿತಗೆ 8 ಕಾಮಿತ ಫಲಗಳ ಕೊಡುವವಗೆ ಪ್ರೇಮದಿ ಭಕ್ತರ ಸಲಹುವಗೆ ಭೂಮಿಗೆ ವರಾಹತಿಮ್ಮಪ್ಪನ ದಾಸರ ಸ್ವಾಮಿಯೆಂದೆನಿಸುವ ಈಶನಿಗೆ 9
--------------
ವರಹತಿಮ್ಮಪ್ಪ
ಮಂಗಳ ಪಾಡಿರೆ ಭಾವೆಯರೇ ರಂಗನ ರಮಣಿಯ ಭಾವಿಸಿರೇ ಪ ಅಂಗಜಜನನಿಯ ಕೃಪೆಯಿ ಸ- ತ್ಸಂಗತಿ ಪಡೆದೆವು ನಿಶ್ಚಯಂಅ.ಪ ಭೋಗವತೀಪತಿಶಾಯಿಯೊಳು ಅನು ರಾಗಗೊಂಡಿಹ ದೇವಿಯಿವಳ್ ಭಾಗ್ಯಲಕ್ಷ್ಮಿಯ ಪಾದದೊಳು ಬಾಗುತ ಶಿರವನು ರಾಗದೊಳು 1 ವೇದಸಾರದ ವಾಕ್ಯದಲಿ ಮಾಧವಿಯಂ ಸ್ತುತಿ ಮಾಡುತಲಿ ಭೇದವೆಣಿಸದೆ ಸಲಹೆನ್ನುತಲಿ ಮಾಧವನಂ ಕೊಂಡಾಡುತಲಿ 2 ತಾಪತ್ರಯಗಳ ಪರಿಹರಿಸಿ ಆಪತ್ತುಗಳಿಂದುದ್ಧರಿಸಿ ಕಾಪಾಡುವಳಿವಳೆಂದೆನಿಸಿ ಶ್ರೀಪದ್ಮಿನಿಯನು ಸಂಸ್ಮರಿಸಿ 3 ಶರಣಾಗತ ಸಂರಕ್ಷಕಿಗೆ ವರಶೇಷಗಿರಿನಿಲಯನಿಗೆ ಕರುಣಾರೂಪಿಣಿ ಪದ್ಮಿನಿಗೆ ಕರಗಳ ಮುಗಿಯುತೆ ಮಾಧವಿಗೆ 4
--------------
ನಂಜನಗೂಡು ತಿರುಮಲಾಂಬಾ
ಮಂಗಳಂ ಶ್ರೀಕೃಷ್ಣವೇಣಿಗೆ ಜಯ ಮಂಗಳಂ ಜಗದುದ್ಧಾರಳಿಗೆ ಪ ರಂಗನ ಪಾದದಿ ಗಂಗೆ ಉದ್ಧವಿಸಲು ಅಂಗದಿಂದಾಗಲೆ ತಾನುದಿಸಿ ಬಂದು ಗಂಗಾಧರನ ದೇಹದಿ ಬಂದು ವೇಣಿಯ ಸಂಗಮವಾಗಿ ಬಂದ ದೇವಿಗೆ ಅ.ಪ ಮುನ್ನೂರು ಅರವತ್ತು ನದಿಗಳೆಲ್ಲ ಕೂಡಿ ಕನ್ಯಾರಾಶಿಗೆ ಗುರು ಬಂದಿರಲು ವಾಸವ ಮಾಡಲು ಅವರ ಪಾಪವ ಕಳೆದ ಶ್ರೀ ಕೃಷ್ಣವೇಣಿಗೆ 1 ಇಂದ್ರನ ಪಾಪವ ನದಿಗಳಿಗೆ ಬಿಡಲು ನಿಂದಿತರಾಗಿ ದುಃಖಿಸುತ ಪೋಗಿ ಬಂದ ಕೃಷ್ಣವೇಣಿಗೆ ಗಂಗಾದೇವಿಗೆ 2 ವೇಣುಶೂರ್ಪಗಳಲ್ಲಿ ನಾನಾ ಫಲಗಳ ಇಟ್ಟು ನೇಮದಿಂ ಬಾಗಿನಂಗಳ ಕೊಡಲು ಮಾನಿನಿಯರೆಲ್ಲ ಮೌನದಿಂ ಕೊಡಲು ಮಾಂಗಲ್ಯವಿತ್ತು ಸಲುಹುವ ದೇವಿಗೆ 3 ಕೃಷ್ಣತೀರದಲ್ಲಿದ್ದ ವೃಕ್ಷದೇವತೆಗಳು ಋಷಿಗಳು ಪಾಷಾಣವಾಗಿರಲು ನಕ್ರ ಮೊದಲಾದ ಜಂತುಗಳೆಲ್ಲ ಯಕ್ಷರು ವಾಲೂಕ ಹರಿದ ಧೂಲಿಯಾಗಿಹರು 4 ಇಂದ್ರದಂಡಕ ದಂತ್ರಿಪಾಲ ಸೋಮಕ ಧರ್ಮ ನಂದನ ನಳ ಹರಿಶ್ಚಂದ್ರರೆಲ್ಲ ಬಂದು ಸ್ನಾನವ ಮಾಡೆ ಅವರ ಪಾಪಗಳ ಆ ನಂದದಿಂ ಕಳೆದ ಕೃಷ್ಣವೇಣಿಗೆ 5 ಮಲಾಪಹಾರಿ ಭೀಮೆ ತುಂಗಭದ್ರೆಯು ಮೊ [ಒಲವಿ]ಂದ ಸ್ನಾನಪಾನವ ಮಾಡಿದವರಿಗೆ [ಲೋಲ] ಶ್ರೀನಿವಾಸನ ಪಾದತೋರ್ಪ ಕೃಷ್ಣವೇಣಿಗೆ 6
--------------
ಯದುಗಿರಿಯಮ್ಮ
ಮಂಗಳಾರತಿ ಮಾಡಿ ಮಂಗಳ ಮಹಿಮಾನಂಗಜನಕ ಹರಿ ತುಂಗವಿಕ್ರಮಗೆ ಮಂಗಳಾರತಿಯ ಧ್ರುವ ಅಗಣಿತಗುಣ ಅಗಮ್ಯಗೋಚರ ಸುಗಮದಲಾಡುವ ನಿಗಮೋದ್ಧಾರಗೆ 1 ಬಗೆದು ಬೆನ್ನಿಲಿ ಭಾರವ ನೆಗೆದಿಹ ನೋಡಿ ಭಗತವತ್ಸಲ ಸ್ವಾಮಿ ನಗಧರಗೆ 2 ಜಗತಿಯ ಕದ್ದೊಯ್ದ ಸುರನ ಸೀಳಿದ ಜಗದೋತ್ತಮನಾದ ಜಗದೋದ್ಧಾರಗೆ 3 ದುರುಳದೈತ್ಯನ ಬೆರಳುಗುರಿಲಿ ಸೀಳಿದ ತರಳ ಪ್ರಹ್ಲಾದಗೊಲಿದ ನರಹರಿಗೆ 4 ಬಲಿಯ ದಾನವ ಬೇಡಿ ನೆಲೆಗೆ ಅಳೆದುಕೊಂಡು ಬಲಿಯ ಬಾಗಿಲ ಕಾಯ್ದ ಶ್ರೀನಿಧಿಗೆ 5 ಪರಶುಪಿಡಿದು ಕ್ಷತ್ರಿಯರ ಸಂಹರಿಸಿದ ಪರಮಪುರುಷನಾಗಿಹ ತಪೋನಿಧಿಗೆ 6 ದೇವತಿಗಳ ಸೆರೆಯ ಬಿಡಿಸಿದ ದೇವನು ಪಾವನಮೂರುತಿ ಅಹಲ್ಯೋದ್ದಾರಗೆ 7 iÀುದುಕುಲತಿಲಕ ವಿದುರವಂದಿತನಾದ ಬುಧಜನಪಾಲ ಮದನಮೋಹನಗೆ 8 ಸುಳಿದು ತ್ರಿಪುರದಲಿ ಹಳಿದು ನಾರೆರ ವ್ರತ ಹೊಳೆವದೋರಿದ ಚಲುವಿಲಿ ಮಹಾಮುನಿಗೆ 9 ಮುದ್ದು ತೇಜಯನೇರಿ ತಿದ್ದಿ ರಾವುತನಾದ ಮಧ್ವಾಂತ್ರದ ಮಹಿಪತಿ ಪ್ರಾಣಪತಿಗೆ 10
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಗುವು ಕಾಣಯ್ಯ ಮಾಯದ ಮಗುವು ಕಾಣಯ್ಯ ಸುಗುಣಾ ವಾದಿರಾಜರೆ ಮೂಜಗವಾನುದರದೊಳಿಟ್ಟ ಪ ಏಕಾರ್ಣವಾಗಿ ಸಕಲ ಲೋಕವಾಕಾರವಳಿಯಲೂ ಏಕಮೇವಾದ್ವಿತೀಯವೆಂಬಾಗಮಕೆ ಸಮವಾಗೀ ಶ್ರೀಕರಾಂಬುಜದಿಂ ಪಾದಾಂಗುಲಿಯ ಪಿಡಿದು ಬಾಯೊಳಿಟ್ಟು ಶ್ರೀಕಾಂತ ವಟದೆಲೆಯ ಮೇಲ್ಮಲಗಿ ಬ್ರಹ್ಮನ ಪಡೆದಾ 1 ಮಾಯಾಪೂತನೀಯ ಕೊಂದು ಕಾಯವ ಕೆಡಹಿ ಶಕಟನನು ಸಾಯಬಡಿದು ವತ್ಸನ ಧೇನುಕನ ವೃಷಭನ ನೊಯ್ಯನೊದ್ದು ಯಮಳಾರ್ಜುನರಿಗೆ ಸಾಯುಜ್ಯವನಿತ್ತು ತನ್ನ ತಾಯಿಗೆ ತಾ ಮಣ್ಣುಮೆದ್ದು ಬಾಯಿ ಬಿಚ್ಚಿ ತೋರಿಸಿದಾ 2 ಕಡಹದಾ ಮರವನೇರಿ ಸಂಗಡಿಗರೊಂದಿಗೆ ಕಾಳಂದಿಯ ಮಡುವಲಿ ಧುಮುಕಿ ಕಲಕಿ ಜಲವಾ ಆ ಕಾಳಿಂಗನಾ ಪೆಡೆಯ ತುಳಿದು ಜಡಿಯಲವನಾ ಮಡದಿಯರು ಬೇಡಿಕೊಳ್ಳೆ ಕಡಲಿಗಟ್ಟಿ ಬಂದು ಎನ್ನ ತೊಡೆಯ ಮೇಲೆ ಮಂಡಿಸಿದ 3 ಬಳ್ಳಿಗಟ್ಟದುಡಿಯಲ್ಲಿ ಗುಲ್ಲಿಯ ಚೀಲಾವ ಸಿಕ್ಕಿಸಿ ಕಲ್ಲಿಗಟ್ಟ್ಯೊಗರ ಕಂಬಳಿಯ ಕೋಲು ತುದಿಯೊಳು ನಿಲ್ಲಿಸಿ ಹೆಗಲೊಳು ಕೊಂಬು ಕೊಳಲನು ಪಿಡಿದೂದುತ್ತ ಗೊಲ್ಲರೊಡಗೂಡಿ ಆಡುತೆಲ್ಲ ಗೋವುಗಳ ಕಾಯ್ದಾ 4 ಶ್ರುತಿತತಿಗಗೋಚರನು ಚುತಿದೂರನಾದಿಮೂರ್ತಿ ಚತುರ್ಮುಖಾದಿಶೇಷ ದೇವಾರಾಧ್ಯ ದೇವನು ಪತಿ ವೈಕುಂಠಕೇಶವನು ಯತಿಯೆ ನೀ ನೋಡಲು ಶರಣಾಗತನ ತೊಡೆಯೊಳು 5
--------------
ಬೇಲೂರು ವೈಕುಂಠದಾಸರು
ಮಗುವು ಕಾಣಿರಯ್ಯ | ಮಾಯದ | ಮಗುವು ಕಾಣಿರಯ್ಯ ಪ ಸುಗುಣ ವಾದಿರಾಜರೆ ಮೂಜಗವನು ತನ್ನುದರದೊಳಿಟ್ಟಅ ಮಾಯಾ ಪೂತನಿಯ ಕೊಂದು ಕಾಯವ ಕೆಡಹಿ ಶಕಟನ್ನಸಾಯಬಡಿದು ಧೇನುಕನ ವೃಷಭಾಸುರನನೋಯ ನೋಡದ್ಯಮಳಾರ್ಜುನಂಗೆ ಸಾಯುಜ್ಯವನೆ ಇತ್ತು ತನ್ನತಾಯಿಗೆ ತಾ ಮಣ್ಣ ಮೆದ್ದು ಬಾಯ ಬಿಟ್ಟು ತೋರಿಸಿದ1 ಏಕವರ್ಣವಾಗಿಯೆ ಸಕಲಲೋಕವು ಆಕಾರವಳಿಯೆಏಕಮೇವಾದ್ವಿತೀಯನೆಂಬಾಗಮಕೆ ಸರಿಯಾಗಿಶ್ರೀಕರಾಂಬುಜದಿಂ ಪಾದಾಂಗುಲಿಯಂ ಪಿಡಿದು ಬಾಯೊಳಿಟ್ಟುಶ್ರೀಕಾಂತ ವಟಪತ್ರದ ಮೇಲೊರಗಿ ಬ್ರಹ್ಮನ ಪಡೆದ2 ಕಡಹದ ಮರನೇರಿ ಸಂಗಡಿಗರೊಡನೆ ಕಾಳಿಂದಿಯಮಡುವ ಧುಮುಕಿ ಧುಮುಕಿ ಕಲಕಿ ಆ ಕಾಳಿಂಗನಪೆಡೆಯ ತುಳಿದು ಜಡಿಯಲವನ ಮಡದಿಯರು ಬೇಡಿಕೊಳ್ಳೆಕಡಲಿಗಟ್ಟಿ ಬಂದು ತಾಯ ತೊಡೆಯ ಮೇಲೆ ಮಲಗಿದಂಥ 3 ಕಲ್ಲಿಗಟ್ಟಿ ಗೂಡೆಯಲಿ ಗೋಲಿಯ ಚೀಲವನಿಕ್ಕಿಹಿಲ್ಲಿ ಕಟ್ಟೋಗರ ಕಡಕಲಕ್ಕಳೆಯಾ ತುದಿಯಲಿನಿಲ್ಲಿಸಿ ಪೆಗಲೊಳು ಕೊಂಬು ಕೋಲನೆ ಪಿಡಿದುಗೊಲ್ಲರೊಡಗೂಡಿ ನಮ್ಮೆಲ್ಲರ ಗೋವುಗಳ ಕಾಯ್ದ 4 ಪತಿ ವೈಕುಂಠ ಕೇಶವನುಯತಿಯೆ ನೀ ನೋಡಯ್ಯ ಶರಣಾಗತನ ತೊಡೆಯಿಂ ಮಾಯವಾದ 5
--------------
ಕನಕದಾಸ
ಮಧ್ವೇಶಾರ್ಪಣ ಮಧ್ವೇಶಾರ್ಪಣ ಮಧ್ವೇಶಾರ್ಪಣಮಸ್ತುಶುದ್ಧ ಶ್ರುತಿ ಪದ್ಧತಿ ನಡೆಸುವೆ ಮಧ್ವೇಶಾರ್ಪಣಮಸ್ತು 1 ವಂದಿಸುವೆನು ಗೋವಿಂದನ ಚರಣಕೆ ಮಧ್ವೇಶಾರ್ಪಣಮಸ್ತುನಿಂದು ಕರಂಗಳ ವಂದಿಸಿ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು 2 ಅಂಬುಜನಾಭನ ನಿತಂಬಿನಿ ಕಮಲಕೆ ಮಧ್ವೇಶಾರ್ಪಣ ಮತ್ತುಡಿಂಗರಿಗನು ನಾಜಗದಂಟೆಯ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು 3 ಸಂಧ್ಯಾದೇವಿಗೆ ವಂದಿಸುತಿರುವೆನು ಮಧ್ವೇಶಾರ್ಪಣಮಸ್ತುಒಂದಿನ ಬಿಡದೆ ತ್ರಿಕಾಲದಿ ಮಧ್ವೇಶಾರ್ಪಣಮಸ್ತು 4 ಚಾಮರ ಹಾಕುವೆ ಶ್ರೀಮನೋಹರಗೆ ಮಧ್ವೇಶಾರ್ಪಣಮಸ್ತುಕೋಮಲ ಶಯನದಿ ಮಲಗಿಸುವೆನು ಮಧ್ವೇಶಾರ್ಪಣಮಸ್ತು 5 ಕೃಷ್ಣನ ಮಲಗಿಸಿ ತೊಟ್ಟಿಲ ತೂಗುವೆ ಮಧ್ವೇಶಾರ್ಪಣಮಸ್ತುಬಿಟ್ಟು ಅಭಿಮತ ಘಟ್ಟಿಸಿ ಪಾಡುವೆ ಮಧ್ವೇಶಾರ್ಪಣಮಸ್ತು 6 ಪರಿ ತೂಗುವೆ ಮಧ್ವೇಶಾರ್ಪಣಮಸ್ತುಗುರು ಪುಷ್ಕರ ಮುನಿ ಸುರದ್ವಾರದಿ ಮಧ್ವೇಶಾರ್ಪಣಮಸ್ತು 7 ಕರ್ಮವು ಸಿರಿಯಂದು ಹರಿಗರ್ಪಿಸುವೆ ಮಧ್ವೇಶಾರ್ಪಣಮಸ್ತುದಾಸರ ಚರಣಕೆ ಶಿರಬಾಗುವೆ ನಾ ಮಧ್ವೇಶಾರ್ಪಣಮಸ್ತು 8 ಕೃತಿ ಇಂದಿರೇಶಗರ್ಪಿಸುವೆ ಮಧ್ವೇಶಾರ್ಪಣಮಸ್ತು ಮಧ್ವೇಶಾರ್ಪಣ ಮಧ್ವೇಶಾರ್ಪಣ ಮಧ್ವೇಶಾರ್ಪಣಮಸ್ತು 9
--------------
ಇಂದಿರೇಶರು
ಮನದೊಳಗಿರು ಹರಿಯೆ ಮೂರ್ಲೋಕ ದೊರೆಯೆ ಪ. ಮನೆದೊಳಿ(?)ಗಿರು ಬಹು ಜನರು ಪೇಳುವ ದೂರು ಎಣಿಸಲು ಶಕ್ತನಾರು ಮುಖಾಬ್ಜ ತೋರು ಅ.ಪ. ಮೂರ್ತಿ ನೀನು ಪ್ರಾಕೃತ ಗುಣಸರ್ಗದಿ ಬರುವುದೇನು ಸರ್ಗರಕ್ಷಣ ಪಾಪವರ್ಗವೆಲ್ಲವನು ನಿಸರ್ಗ ಮೀರದೆ ಮಾಳ್ಪ ದುರ್ಗಮದ್ಭುತಕರ್ಮ ದೀರ್ಘದರ್ಶಿ ಮುನಿವರ್ಗಕೊಲಿದು ನಿಜ ಮಾರ್ಗ ತೋರ್ಪ ಶ್ರೀ ಭಾರ್ಗವೀ ರಮಣಾ 1 ಜಲದೊಳಗಾಡಿದನು ಬೇರನು ಕಿತ್ತಿ ಖಳರನು ಸೀಳಿದನು ನೆಲನನಳೆದು ತಾಯಿ ತಲೆಯ ತರಿದು ನಿಜಲಲನೆಗೋಸುಗ ದೈತ್ಯ ಕುಲವ ಸಂಹರಿಸಿದ ಶಿಲೆಯನು ರಕ್ಷಿಸಿ ಕಳವಳಿಸಿದ ಕಪಿ ತಿಲಕನ ಸ್ನೇಹವ ಬಳಸಿದನೆಂಬುದು 2 ಬಾಗಿಲ ಮುಚ್ಚಿದರೆ ಗೋಡೆಯ ಹಾರಿ ಹೋಗಿ ಮನೆಯ ಒಳಗೆ ಬಾಗಿಲ ಮರೆಯಲಿ ಬಾಗಿನೋಡುತ ಮೆಲ್ಲಗಾಗಿ ಬೆಣ್ಣೆಯ ಮೆದ್ದು ಸಾಗಿ ಬರುತಲಿರೆ ನಾಗವೇಣಿಯರು ಹಿಡಿಯಲು ನೀವಿಯ ನೀಗಿ ಪುರುಷರನು ಕೂಗಿದನೆಂಬರು3 ತೊಟ್ಟಿಲೊಳಗೆ ಮಲಗಿ ನಿದ್ರೆಯಗೈವ ಪುಟ್ಟ ಶಿಶುಗಳನೆಲ್ಲ ತಟ್ಟಿ ಎಬ್ಬಿಸಿ ಕಣ್ಣಾಕಟ್ಟಿ ವಸ್ತ್ರದಿ ತಾನೆ ಚಿಟ್ಟನೆ ಚೀರಿ ಒ- ತ್ತಟ್ಟು ಎಲ್ಲರು ಕೂಡಿ ಕಟ್ಟಿದ ಕರುಗಳ ಬಿಟ್ಟ ಮೊಲೆಗೆ ಒಳ- ಗಿಟ್ಟ ಹಾಲು ಮೊಸರೊಟ್ಟಿಲಿ ಸವಿವುದೆ 4 ವಿದ್ಯೆಯ ಕಲಿಯೆಂದರೆ ಅಮ್ಮಯ್ಯ ಎನಗೆ ನಿದ್ದೆ ಬರುವುದೆಂಬುವಿ ಹೊದ್ದಿಸಿ ತಟ್ಟಿದರೆದ್ದು ಓಡುವಿ ಗೋಪೆರಿದ್ದ ಠಾವಿಗೆ ನಾನಾ ಬದ್ಧವನು ಸುರುವಿ ಸಿದ್ಧವಾಗಿ ಕಾದಿರೆ ಕೈಗೆ ಸಿಕ್ಕದೆ ಉದ್ಧವ ಗೃಹದೊಳು ಬೌದ್ಧನಂತಿರುವಿ 5 ಕುದುರೆಯ ಹತ್ತಿದರೆ ಯಾರಾದರೂ ಕದನವ ಮಾಡಲಿಹರೆ ಹೃದಯ ಮಂಟಪದಿ ನೀ ಸದರವಾಡುತಲಿರೆ ಮದನ ಜನನಿವರ ಮದಮತ್ಸರಗಳ ಒದೆದು ತೀವ್ರದಲಿ ಪದಯುಗ ಪಾಲಿಸುವುದಯ್ಯ ಗಿರೀಶ 6
--------------
ತುಪಾಕಿ ವೆಂಕಟರಮಣಾಚಾರ್ಯ