ಒಟ್ಟು 1712 ಕಡೆಗಳಲ್ಲಿ , 111 ದಾಸರು , 1361 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಡೀ ಡೀ ಅಡೋನೆ ರಂಗ ಡೀ ಡೀ ಆಡೋನೆ | ಓಡಿ ಓಡಿ ಬಂದು ತಲಿಗೆ ನೀ ಡೀ ಡೀ ಡೀ ಎಂದು ಪ ವಜ್ರ | ಹರಳು ತೆತ್ತಿಸಿದ ದ್ಯುಮಣಿ || ಸರಿ ಸರಿ ಸರಿ ಸರಿ ಹಾಯಿದು 1 ಚಂದ್ರಶೇಖರ ಹಂಸವಾಹನ| ಇಂದ್ರಾದ್ಯರಾಕಾಶದಲಿ ಧುಂ ಧುಂ || ಧುಂ ಧುಂ ದುಂದುಭಿ ನುಡಿಸೆ | ಬಂದೆ ಇಕ್ಕೋ ಬಂದೆ ಬಂದೆನುತ 2 ಪಿಂತಿರುಗಿ ಪೋಗಿ ನೀನು | ಅಂತರಿಸಿ ದೂರದಿಂದ || ನಿಂತು ವಿಜಯವಿಠ್ಠಲರೇಯಾ |ಇತ್ತಿಂ ತ್ತಿಂ ತ್ತಿಂ ತ್ತಿಂ ತ್ತಿಂ ತ್ತೆನುತಲಿ 3
--------------
ವಿಜಯದಾಸ
ತÉೂೀರೆ ಬೇಗನೆ ತೋಯಜನಯನೆಮದವಾರಣ ಗಮನೆ ಪ ಮಾರನ ತಾಪವ ಸೈರಿಸಲಾರೆನೆನೀರೆ ನಿನಗೆ ಮುತ್ತಿನ್ಹಾರವ ಕೊಡುವೆನೆ ಅ.ಪ ನೀರೊಳು ಮುಳು ಮುಳುಗಾಡುತ ಬಂದುಮಥಿಸಿದ ಪಯ ಸಿಂಧುಧಾರುಣಿ ಚಿಮ್ಮುತ ಮೇಲಕೆ ತಂದುದನುಜನ್ನ ಕೊಂದುಮೂರುಪಾದವ ಬೇಡುತ ನಿಂದುಮುನಿಕುಲದಲಿ ಬಂದುನಾರಿಬಿಟ್ಟು ಪರನಾರಿಯರಾಳಿದತೋರೆರಮಣಿ ಹಯವೇರಿ ಮೆರೆದನ 1 ಕತ್ತಲೆ(ತಾಮಸ ದೈತ್ಯ)ನೊಡನೆ ಕಾದಿದನು ಧೀರಕಡೆದನು ಕೂಪಾರಕುತ್ತಿ ಮಣ್ಣಗಿದು ಮೆದ್ದನು ಬೇರದಾನವ ಸಂಹಾರ ಒತ್ತಿ ಬಲಿಯನು ಕಾಯ್ದನು ಶೂರಕುಜನ ಕುಠಾರ ಹತ್ತು ಶಿರನ ಕತ್ತರಿಸಿ ಗೋಕುಲದೊಳುಬತ್ತಲೆ ರಾಹುತನಾಗಿ ಮೆರೆದನ 2 ನಿಗಮ ಕದ್ದವನ ನೀಗಿದ ಧಿಟ್ಟನೆಗಹಿದ ಬೆಟ್ಟಅಗಿದು ಮಣ್ಣನೆ ಜಠರದಲ್ಲಿಟ್ಟಘುಡಿ ಘುಡಿಸುವಸಿಟ್ಟಜಗಕೆಲ್ಲ ನೋಡೆ ಎರಡಡಿಯಿಟ್ಟಕೊಡಲಿಯ ಪೆಟ್ಟಮೃಗವ ಕೆಡಹಿ ಕುಂತಿಮಗಗೆ ಸಾರಥಿಯಾಗಿಜಗವ ಮೋಹಿಸಿ ಹಯವೇರ್ದ ಶ್ರೀಕೃಷ್ಣನ 3
--------------
ವ್ಯಾಸರಾಯರು
ತತ್ವ ಚಿಂತನೆ ಮಧ್ಯಮತವೇ ದೊಡ್ಡದೆಂದು ತಿಳಿದು ಮನ ಶುದ್ಧಿಯಿಂದ ಮತವನನುಸರಿಸೋ ಪ ಶ್ರೀ ಮಧ್ವಮತದಲ್ಲಿ ಹರಿಯೇ ಸವೋತ್ತಮ ಭೇದಪಂಚ ಜಗತೆರಡು ಸತ್ಯ ಶ್ರೀ ಬ್ರಹ್ಮಾದಿಗಳೆಲ್ಲ ಹರಿಪರಿವಾರರು ತಾರತಮ್ಯವೇ ಸದಾ ಇವರಲ್ಲಿ 1 ಮುಕ್ತಿ ಎಂಬುದು ನಿಜಾನಂದದ ಅನುಭವ ಭಕ್ತಿಯೆಂಬುದೇ ದೊಡ್ಡ ಸಾಧನವು ಅಕ್ಷಾನುಮಾಗಮ ಮೂರು ಪ್ರಮಾಣ ಶ್ರೀ ಲಕ್ಷ್ಮೀಶನೇ ಸರ್ವಶ್ರುತಿವೇದ್ಯನು 2 ಸ್ವತಂತ್ರ ಪರತಂತ್ರ ಎರಡು ತತ್ವಗಳು ಸ್ವತಂತ್ರ ತತ್ವವು ಹರಿಯೊಬ್ಬನೇ ಪ ರತಂತ್ರ ಮಿಕ್ಕಿದ್ದಲ್ಲಾ ಇದಕೆ ಪ್ರಮಾಣವು `ಏಷ ಸರ್ವೇಶ್ವರ ' ವೆನ್ನುತ ಶ್ರುತಿಯು 3 ಹರಿಯೇ ಸರ್ವೋತ್ತಮ ತದನು ರಮಾದೇವಿ ವಿಧಿ ಪ್ರಾಣರಿವರಿಬ್ಬರು ತದನು ಸರಸ್ವತಿ ಭಾರತೇರಿಬ್ಬರು ಶಿವ ಶೇಷ ಗರುಡ ಶ್ರೀ ಹರಿನಾರೇರು 4 ಸೌಪರ್ಣಿ ಪಾರ್ವತಿಯರು ಸಮ ಶಕ್ರ ಕಾಮರು ಸಮ ಸ್ಮರರಮಣಿ ಗುರು ಶಚಿ ಮನು ದಕ್ಷ ಸಮರು ಆ ಮಾನವಿ ಪ್ರವಹ ಯಮೇಂದ್ವರ್ಕ ಸಮರೈವರು 5 ನಿಖಿಲ ದಿವಿಜರಲ್ಲಿ ಈ ವಿಧ ತಾರತಮ್ಯ ನಿಖಿಲ ಸುರೋತ್ತಮ ಹರಿಯೊಬ್ಬನೇ ಮಿಕ್ಕವರಲವೆಂದು ಇಂದ್ರಿಯೇಭ್ಯಃ ಪರಃ ದ್ವಾವಿಮಾ ಇತ್ಯಾದಿ ಶ್ರುತಿವಚನ 6 ಈಶ್ವರ ಜಡ ಭೇದ ಜೀವ ಜಡಕೆ ಭೇದ ಜೀವ ಜೀವಕೆ ಭೇದ ಜಡ ಜಡಕೆ ಜೀವೇಶರಿಗೆ ಭೇದ ಈಶ ಲಕ್ಷ್ಮೀ ಭೇದ ಪರತಂತ್ರ ಚಿತ್ಪರ ಜೀವ ಶಬ್ದ 7 ಬ್ರಹ್ಮವಿಚಾರ ತತ್ಜ್ಞಾನಕೆ ಸಾಧನ ಜ್ಞಾನಪ್ರಸಾದಕೆ ಇದು ಮುಕ್ತಿಗೆ ಆದ ಕಾರಣದಿಂದ ಶಮದಮಯುತನಿಗೆ ಬ್ರಹ್ಮ ಜಿಜ್ಞಾಸವು ಕರ್ತವ್ಯವು 8 ಜಿಜ್ಞಾಸ್ಯಬ್ರಹ್ಮನು ಜೀವನಲ್ಲವೊ ಜಗ ತ್ಕಾರಣತ್ವವು ಜೀವಗೆಲ್ಲಿಹುದೊ ರುದ್ರಾದಿಗಳು ಜಗತ್ಕಾರಣರಲ್ಲವೊ ಶಾಸ್ತ್ರವೇದ್ಯನೆ ಜಗತ್ಕಾರಣನು 9 ಉಪಕ್ರಮಾದಿಗಳ ವಿಚಾರ ಮಾಡಲು ಸರ್ವ ಶಾಸ್ತ್ರ ತಾತ್ಪರ್ಯಗೋಚರ ಹರಿಯೆ ಅಕ್ಷಾದ್ಯವೇದ್ಯನ ಜ್ಞೇಯನಾಗುವ ಹರ್ಯ ವಾಚ್ಯನೆಂಬುವುದದು ಸರಿಯಲ್ಲವೊ10 ಆನಂದಮಯ ಮೊದಲಾದ ವಾಚ್ಯನು ಮತ್ತೆ ಸರ್ವಗತತ್ವಾದಿ ಲಿಂಗಯುತ ದ್ಯುಭ್ವಾದಿಗಳಿಗಾಧಾರನು ಅವ್ಯಕ್ತ ಜ್ಯೋತಿರಾದಿ ಶಬ್ದ ಮುಖ್ಯಾರ್ಥನು 11 ದೋಷವರ್ಜಿತ ಹರಿ ವಿಷಯವಿರಕ್ತಿ ಭಕ್ತ್ಯು ಪಾಸನದಿಂದಲೆ ಅಪರೋಕ್ಷನೊ ಇಂತು ಪ್ರಸನ್ನನು ಮುಕ್ತಿಯನೀವನು ಎಂಬುವುದೆ ಸರ್ವ ಶಾಸ್ತ್ರಾರ್ಥವೊ 12 ವರನಾಮಗಿರಿ ನರಹರಿಯ ಪಾದಾಂಬುಜ ನಿರತ ಹೃದಯನಾಗಿ ಅನುದಿನದಿ ಧರಣಿ ಸುರನು ಇದ ಪೇಳಲು ನರಹರಿ ಚರಣಕಮಲ ಭಕ್ತಿ ಪೊಂದುವನು 13
--------------
ವಿದ್ಯಾರತ್ನಾಕರತೀರ್ಥರು
ತದಿಗೆಯ ದಿವಸ (ಶೇಷ ದೇವರನ್ನು ಕುರಿತು) ರಂಭೆ : ನಾರೀಮಣೀ ನೀ ಕೇಳೆ ಈತ- ನ್ಯಾರೆಂಬುದನೆನಗೆ ಪೇಳೆ ಕ್ರೂರತನದಿ ತಾ ತೋರುವನೀಗ ಮ- ಹೋರಗನೆನ್ನುತ ಕೋರಿಕೆ ಬರುವದು1 ಒಂದೆರಡು ಶಿರವಲ್ಲ ಬಹು ಹೊಂದಿಹವು ಸಟೆಯಲ್ಲ ಕಂಧರದಲಿ ಕಪ್ಪಂದದಿ ತೋರ್ಪವು ಚಂದಿರಮುಖಿ ಯಾರೆಂದೆನಗರುಹೆಲೆ 2 ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ- ಸಾಮಾನ್ಯನೆ ಕಾಣೆ ಭೂಮಿಯ ಪೊತ್ತ ನಿರಾಮಯನಾದ ಸುಧೀಮನಿವನು ಜಾಣೆ 1 ವಾಸುದೇವಗೆ ಈತ ಹಾಸಿಗೆಯವ ನಿ- ರ್ದೋಷನಿವನು ಜಾಣೆ ಸಾಸಿರಮುಖದ ವಿಲಾಸನಾಗಿಹ ಮಹಾ- ಶೇಷನಿವನು ಕಾಣೆ 2 ಅದರಿಂದಲಿ ಕೇಳ್ ತದಿಗೆಯ ದಿವಸದಿ ಮಧುಸೂದನನಿವನ ಅಧಿಕಾನಂದದಿ ಒದಗಿಸಿ ಬರುವನು ಇದೆಯಿಂದಿನ ಹದನ 3 ಎಂದಿನಂತೆ ಪುರಂದರವಂದ್ಯ ಮು ಕುಂದ ಸಾನಂದದಲಿ ಅಂದಣವೇರಿ ಗೋವಿಂದ ಬರುವನೊಲ- ವಿಂದತಿ ಚಂದದಲಿ4 ಕಂಟಕಗಳು ಎಲ್ಲುಂಟೆಂಬಂತೆ ನೃಪ- ಕಂಠೀರವಗೈದ ಘಂಟಾನಾದದಿ ಮಂಟಪದೊಳು ವೈ- ಕುಂಠನು ಮಂಡಿಸಿದಾ 5 ಕಾಂತಾಮಣಿ ಕೇಳಿಂತೀಪರಿ ಶ್ರೀ- ಕಾಂತ ನತತಂಡ ಸಂತವಿಸುತ ಮಹಾಂತಮಹಿಮನೇ- ಕಾಂತಸೇವೆಯಗೊಂಡ 6 * * * ಪರಶಿವನನ್ನು ಕುರಿತು ರಂಭೆ :ಯಾರಮ್ಮಾ ಮಹಾವೀರನಂತಿರುವನು ಯಾರಮ್ಮಾ ಇವನ್ಯಾವ ಶೂರ ಯಾವ ಊರಿಂದ ಬಂದ ಪ್ರವೀರ ಆಹಾ ಮಾರಜನಕನ ವಿಸ್ತಾರಪೂಜೆಯ ವೇಳ್ಯ ಧೀರನಂದದಿ ತಾ ವಿಚಾರ ಮಾಡುವನೀತ1 ಕರದಿ ತ್ರಿಶೂಲವ ಧರಿಸಿ ಮತ್ತೆ ವರ ಕೃಷ್ಣಾಜಿನವನುಕರಿಸಿ ಹರಿ ಚರಣಸನ್ನಿಧಿಗೆ ಸತ್ಕರಿಸಿ ಆಹಾ ಜರಿಯ ದುಕೂಲವ ನಿರಿದುಟ್ಟುಕೊಂಡು ವಿ- ಸ್ತರವಾದ ತೋಷದಿ ಮೆರದು ನಲಿವ ಕಾಣೆ 2 ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ. ಈತನೀಗ ಪೂರ್ವದೊಳಗೆ ಭೂತನಾಥ ಸೇವೆಯೊಲಿದ ಓತು ವಿಷ್ಣುಭಕ್ತಿಯಿಂದ ಪೂತನಾದ ಪುಣ್ಯಪುರುಷಅ.ಪ. ತೀರವಾಯ್ತು ವೇಣು ತಾ ವಿ- ಉದಾರತನದಿ ರಾಮೇಶ್ವರಕೆ ಸಾರಗ್ರಹಿತ ಮುಕ್ತಿ ಪಥವನು ಕರುಣದಿಂದ ತೋರಿಸುವನು ವಿಷ್ಣುವೆಂದೆನುತ ಗಿರಿಯ ಪದಾರವಿಂದಸೇವೆಗೈದು ನಲಿವ ಚಾರುಚರಿತ 1 ಬರುವ ಕಾಲದಲ್ಲಿ ಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತ ಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆ ಚರಿಸುವ ತ್ರಿಕಾಲಪ್ರಜ್ಞನು ಇವನ ಗುಣವ- ಮಹತ್‍ಕಾರಣೀಕ ಕರುಣವುಳ್ಳ ವಿಷ್ಣುಭಕ್ತ 2 ಪ್ರಧಾನಿಯೆಂದು ನಡೆಸಿಕೊಡುವ ತೋಷಪಟ್ಟು ಇರುವ ಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತ ನಾನಾ ಉಪದ್ರವಗಳ ಬಿಡಿಸುವ ಧನಿಯ ಆಜ್ಞೆ ಬಂದು ಪೇಳಿ ಜನರ ಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಂದೇ ಕಮಲಾಪತಿಯೇ ಕಂದನ ಬಂಧನವಳಿದ ಹರಿಯೇ ಪ ನಂದನ ಕಂದ ಗೋವಿಂದ ಮುರಾರೇ ಅ.ಪ ಜವನ ಬಾಧೆಗೆ ಪಕ್ಕಾದೆ ನಿನ್ನ ಚರಣವೆ ಗತಿಯೆಂದು ಬಂದೆ 1 ಶರಣರು ಕರೆಯಲು ಬರುವೆ ರಂಗ ತ್ವರಿತದಿ ಪಾಪವ ಕಳೆವೆ ಪರಮದಯಾಕರ ಮಣಿವೆ ಎನ್ನ ಮೊರೆಯ ಲಾಲಿಸದಿರೆ ತರವೆ 2 ಮಂಗಳದಾಯಕ ನೀನೆ | ತ್ರಿಲೋಕಂಗಳ ಸಲಹುವ ನೀನೇ ಮಾಂಗಿರಿರಂಗನು ನೀನೇ | ನಿನ್ನ ದಾಸರ ದಾಸನು ನಾನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುಮನಧವನೆಲ್ಲ ನಿನಗರ್ಪಿಸಿದೆನಿನ್ನು ಎನಗಾವುದಾಧೀನವಿನಿತಿಲ್ಲ ದೇವ ಪ ಜನಕ ನಾನು ಕ್ಷಣಕೆ ಕ್ಷಣಕೆ ಉಣವುದೆಲ್ಲವು ನಿನ್ನ ಪ್ರಸಾದ ಕನಸುಮನಸಿನೊಳಗೆ ನಾನು ಮಣಿವುದೆಲ್ಲವು ನಿನ್ನ ಚರಣ ಅ.ಪ ಮಡದಿಯಿಂ ಮಮತದಿ ಸಡಗರದಾಡ್ಯಾಡಿ ಕಡು ಆನಂದಿಪುದೆಲ್ಲ ಒಡೆಯ ನಿನ್ನಾಟ ಎಡೆಬಿಡದೆ ಅಡಿಗಡಿಗೆ ಕಡುಸಿರಿವಡೆದು ನಾ ಪೊಡವಿಯೋಳ್ಜೀವಿಪುದು ಕಡು ನಿಮ್ಮ ಪ್ರೇಮ ನುಡಿವುದೆಲ್ಲ ನಿನ್ನ ಮಂತ್ರವು ಕೊಡುವುದೆಲ್ಲವು ನಿನ್ನ ಅಧಿಕಾರ ನಡೆವುದೆಲ್ಲವು ನಾ ನಿನ್ನ ಯಾತ್ರೆಯು ಇಡುವತೊಡುವುದು ನಿನ್ನ ಬಿರುದು 1 ಗಳಿಸುವುದೆಲ್ಲ ನಾ ಚಲಿಸದ ತವಪಾದ ನಳಿನದಾಸರಸಂಗೀ ಇಳೆಯೊಳು ಪ್ರಭುವೇ ಬಳಸುವುದೆಲ್ಲ ನಾ ಅಳಕದ ತವಚರಿತ ಕಲಿಯುವುದೆಲ್ಲ ನಿಮ್ಮ ವಿಲಸಿತನಾಮಧ್ಯಾನ ಮಲಗುವುದೇ ನಿಮ್ಮ ಧ್ಯಾನ ಆನಂದ ನಲಿವುದಖಿಲ ನಿಮ್ಮ ಭಜನೆಯು ಅಳಿವುದೆಲ್ಲನುಭವದ ಗುಣಗಳು ತಿಳಿವುದೆಲ್ಲವು ನಿಮ್ಮ ಮಹಿಮೆ 2 ಅಮಿತ ತವಪ್ರೇಮವು ಗಮಿಸುವುದೆಲ್ಲ ನಾ ಸುಮನರ ಸಭೆಯು ಕ್ರಮದಿ ನಾ ಬೇಡುವುದು ವಿಮಲ ಸುಜ್ಞಾನವು ದಮೆ ದಯ ಭಕ್ತಿ ತವ ನಿರ್ಮಲಂಘ್ರಿಯ ಅರಿವು ನೇಮದಿಂ ನಾ ಬರುವುದೆಲ್ಲ ಸ್ವಾಮಿ ನಿಮ್ಮಯ ಮಹಿಮೆ ಖ್ಯಾತಿಯು ಕ್ಷೇಮನಿಧಿ ಶ್ರೀರಾಮ ನಿಮ್ಮೊಳು ಕಾಮಿಸುವುದೇ ನಾ ಮುಕ್ತಿಪದವು 3
--------------
ರಾಮದಾಸರು
ತನುವ ತೊಳೆದ ಮಾತ್ರದಿಂದ ಜನರು ಶುದ್ಧರೆನಿಪರೆ ಪ ಮನದ ಶುದ್ಧಿ ಆದ ಹೊರತು ವನಜನಾಭನೊಲಿವನೇ ಅ.ಪ ದಿನಪನುದಯ ಕಾಲದಿಂದ ದಿನಪನಸ್ತದನ್ನೆಗಾ ಧನವಗಳಿಸುವಾಸೆಯಿಂದ ಮನಸಿನಲ್ಲಿ ಯೋಚಿಸಿ ಮನಸಿಜಾತನಾಟಕೆ ಪರವನಿತೆಯರ ಬೆರೆಯುತುರುಳಿ ಕನಸಿನಲ್ಲಿ ಹರಿಯ ಕಂಡೆ ಎನುತ ಪೇಳ್ವ ಮಾನವಾ 1 ಪರರು ನೋಡಿ ಮೆಚ್ಚಲೆಂದು ಬೆರಳಿನಿಂದ ಮಣಿಯನೆಣಿಸಿ ಶಿರವನೊಮ್ಮೆತೂಗಿ ತೂಗಿ ತೆರೆದು ಮುಚ್ಚಿ ಕಂಗಳ ಹಿರಿಯ ಭಕ್ತನಂತೆ ನಟಿಸಿ ಪರರ ಮೋಸಗೊಳಿಸಿ ದಣಿಸಿ ಬರಿಯಡಾಂಭಿಕ ಮಾಂಗಿರೀಶ್ವರನ ಶರಣನೆನಲು ಸಾಧ್ಯವೇ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುವೆಂಬ ಭವನದಲಿ ಮನವೆಂಬ ಮಂಟಪದಿ ವನರುಹಾಸನ ವಿಹುದು ನಿನಗಾಗಿ ಕೃಷ್ಣಾ ಪ ಅನವರತ ಸ್ವಾಗತವ ಇನಿದಾಗಿ ಪೇಳುತಲಿ ಸನುಮತದೊಳೀರೈದು ಮುನಿವರರು ನಿಂದಿಹರು ಅ.ಪ ಎನಗೆ ತನಗೆಂದಿಬ್ಬರನುವಾಗಿ ಕಾದಿಹರು ಘನ ಮೌನಿಯಂತೊಬ್ಬ ಮಣಿಯುತಿಹನು ವನಜ ಸಂಭವ ಜನಕ ಮುನಿಯೊಡನೆ ನೀ ಬಂದು ಕನಕಮಂಟಪವೇರು ಅವರಿಬ್ಬರೋಡುವರು 1 ಕರಿಯ ಮೈಯವನೊಬ್ಬ ದುರದುರನೆ ನೊಡುವನು ಪರಿವಾರದವರನ್ನು ತೋರುತಿಹನೊಬ್ಬ ಕರದಿ ಸನ್ನೆಯ ಮಾಡುತಿಬ್ಬರೂ ಬರುತಿಹರು ತರಿದವರ ಮಂಟಪವನೇರೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತರುಣಿಯರೆಲ್ಲರು ಬಾರೆಂದು ಕರೆವರು ವರಮಣಿಪೀಠಕೆ ಮುದದಿ ಪ. ಕ್ಷೀರವಾರಿಧಿಜಾತೆ ಚಾರುಸುಂದರಗಾತ್ರೆ ಮಾರಜನಕದಯಿತೆ ಸಾರಸಾನನೆ ಮದ ವಾರಣಗಮನೆ ನಿನ್ನಅ.ಪ ಇಂದು ಕುಂದಣದ ಹಸೆಗೆ ಮಂದಹಾಸವ ತೋರಿ ಬಂದೆಮ್ಮ ಮನೆಯೊಳೆಂದೆಂದಿಗು ಕುಂದದಾನಂದವ ಬೀರೆಂದು 1 ಗಾಡಿಕಾರನಾ ಕೃಷ್ಣನ ದೃಢಭಕ್ತರ ಕೈ ಬಿಡದಾಧರಿಸುತ್ತ 2 ನಿರುತಸೇವಿಪ ವರವ ವರಶೇಷಗಿರಿವಾಸನರಸಿ ನೀನಲಿದಿಂದು 3
--------------
ನಂಜನಗೂಡು ತಿರುಮಲಾಂಬಾ
ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತಾನಾಗಿ ದೊರಕುವುದು ಹರಿದರುಶನ ಪ ಶ್ರೀನಾಥವಿಠಲನಲಿ ದೃಢಭಕ್ತಿವುಳ್ಳವಗೆ ಅ.ಪ ಅರುಣೀಯದೊಳೆದ್ದು ಹರಿಕೃಷ್ಣ ಎನುವವಗೆ ಹರಿಹರಿ ಹರಿ ಎಂದು ಸ್ನಾನಗೈವವಗೆ ಹರಿಯ ದ್ವಾದಶನಾಮ ಪಠಣೆಯಿಂಮಣಿವವಗೆ ಗರುಡವಾಹನ ಕೃಷ್ಣ ಗೋಪಾಲಯೆನುವವಗೆ1 ನಿತ್ಯಕರ್ಮವಗೈದು ಫಲವ ಬಯಸದ ಕತ್ರ್ಯವ್ಯಗಳ ಗೈದು ಫಲ ಕೃಷ್ಣಗರ್ಪಿಪ ನರಗೆ ಉತ್ಸಾಹದಿಂದ ಅಭ್ಯಾಗತರ ಪೂಜಿಪಗೆ ಸತ್ಯದೈವವು ಎಂದು ಗೋಸೇವೆ ಗೈವವಗೆ 2 ಕುಳಿತು ನಿಲುವೆಡೆಗಳೊಳು ಹರಿಕೃಷ್ಣ ಎನುವವಗೆ ಇಳೆಯೊಳಿಹ ನರರೆಲ್ಲ ಭ್ರಾತರೆಂದವಗೆ ಉಳಿವು ಅಳಿವುಗಳೆಲ್ಲ ಹರಿಕರುಣವೆಂಬವಗೆ ಜಲಜನಾಭನ ದಿವ್ಯ ನಾಮಗಳ ಭಜಿಸುವಗೆ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾಪ ಬ್ರಹ್ಮೇತಿ ಶ್ರೀ ಪುರುಷ ಬಾಲ ಅಣುರೇಣುತ್ರಿಣಗಳಿಗೆಲ್ಲ ಪ ಸಿಂಧು ಕಾವೇರಿ ಕೃಷ್ಣವೇಣಿ ಗೋದೆ ತುಂಗೆ ನರ್ಮದಾ ಇಷ್ಟು ಮಹಾನದಿಯಲ್ಲಿ ಮುಣಗಿ ಮಿಂದರೇನು ಕಾಷ್ಟಕಭ್ಯಾಂಗವನು ಮಾಡಿ ನೀರೆರದಂತೆ1 ಭಕುತಿಯಲಿ ನಡೆದು ಭವಿಷೊತ್ತರ ಪೇಳಿದರೇನೊ ವಿಕಳಮತಿಯಲಿಟ್ಟು ವರನಾದರೇನು ಕಕುಲಾತಿ ತೊರೆದು ನಿಷ್ಕಳಂಕನಾದರೆ ಏನು ಶುಕಪಕ್ಷಿ ಅನುಗಾಲ ಓದಿ ತಿಳಿದಂತೆ 2 ಜ್ಞಾನದಲ್ಲಿ ಪರರಿಗೆ ನ್ಯಾಯ ಪೇಳಿದರೇನು ಹಾನಿ ನೆನೆಸಿ ಕೀರ್ತಿಯ ಪಡೆದರೇನು ಧ್ಯಾನದಲಿ ಮಾನಸ ಪೂಜೆ ಮಾಡಿದರೇನು ಶ್ವಾನದಲಿ ಬೂದಿಯೊಳಗೆ ವರಗಿ ಇದ್ದಂತೆ 3 ಯಾತ್ರೆ ತೀರ್ಥಂಗಳು ತೊಳಲಿ ತಿರುಗಿದರೇನು ಪಾತ್ರಾಪಾತ್ರನರಿದು ನಡೆದರೇನು ಗಾತ್ರವನು ಬಳಲಸಿ ನೇಮ ಮಾಡಿದರೇನು ಮೂತ್ರದಲಿ ತೊಳೆದು ಅಮೃತನ್ನ ಉಂಡಂತೆ 4 ವಡೆವ ಮಡಕಿಗೆ ಚಿಂತಾಮಣಿ ತಂದು ಹಚ್ಚಲು ಗಡಿಗಿ ಅಲ್ಲದೆ ಅದು ಪರುಶಾಗೋದೆ ಬಿಡದೆ ಕೋಪಿಷ್ಠನು ಬಲು ಶಾಂತನೆನೆಸಿದರೆ ಸಿರಿ ವಿಜಯವಿಠ್ಠಲನೊಲಿದು ಮೆಚ್ಚನಯ್ಯಾ 5
--------------
ವಿಜಯದಾಸ
ತಾಮರಸ ಇನ್ನು ಕಾಂಬುವದೆಂದುಪನ್ನಗಾತನ ವಾಹನಾ ಪ ಕಣ್ಣು ಕಾಣದ ಹೀನ ಮಾನವನು ನಾನಾದೆಉನ್ನಂತ ಗುಣ ಪೂರ್ಣ ಕಾಯೋ ಯೆನ್ನ ಅ.ಪ. ಕರಿ ಮಕರಿ ಸೆಣಸ್ಯಾಡಿಹರುಷ ಕುಗ್ಗುತ ಮರುಕದೀ |ಹರಿ ಹರಿ ಹರಿ ಎಂದು | ಕರಿರಾಜ ಮೊರೆಯಿಡಲುತ್ವರದಿಂದ ನೀಯವನ | ಎಡರ ಹರಿಸಿದೆ ದೇವ 1 ಕುರುರಾಜ ಸಭೆಯಲಿ | ತರುಳೆ ದ್ರೌಪದಿ ಸೀರೆಕೌರವಾನುಜ ಸೆಳೆಯಲೂ |ನಾರಿಮಣಿ ನಿಜಪತಿಗಳೈ | ವರಲಿ ಮನ ತಿಳಿದುಹಿರಿಯ ಸಭಿಕರಿಗರುಹಲೂ | ವರ ವೃದ್ಧ ಭೀಷ್ಮಾದಿ |ಬಹುಮಂದಿ ಇರುತ ಕಾಲವ ಕಳೆಯಲು |ಆರಾದರೂ ಬಂದು ಪಾರು ಮಾಡಿದರೇನೊಶೌರಿ ನಿನ್ನನು ಕರೆಯೆ | ಪಾರು ಮಾಡಿದ ದೇವ 2 ಪಾರುಗಾಣಿಸೊ ಎನ್ನ | ಮೂರು ವಿಧ ತಾಪಗಳಮಾರ ಜನಕನೆ ಪ್ರಾರ್ಥಿಪೇ ದೂರ ಮಾಡಿಸೊ ಹರಿಯೆ | ಮೂರು ಗುಣದಿಂದೆನ್ನಬಾರಿ ಬಾರಿಗು ಬೇಡುವೆ |ದುರುಳ ತತ್ವರ ಕಾರ್ಯ | ಕಡೆಗೈಸಿ ಶ್ರೀ ಹರಿಯೆಸುರರ ಸಹಕಾರ ನೀಡೊ |ಗುರುಗಳಂತರ್ಯಾಮಿ | ಗುರು ಗೋವಿಂದ ವಿಠಲನೆಕರುಣದಲಿ ತವ ಚರಣ | ಸರಸಿಜವ ತೋರೋ 3
--------------
ಗುರುಗೋವಿಂದವಿಠಲರು
ತಾಮರಸ ನೆರೆನಂಬಿದೆ ಪೊರೆಯೆನ್ನನು ಪ ಜನನ ಮರಣವಿದೂರ ನೀನಾಜನಪತಿಯ ತನುಜಾತನೆ ಅನಿಮಿಷೇಶರಿಗೊಡೆಯನೆನಿಸಿದೆ 1 ಶ್ರೀರಮಣಿಯನಾದಿಕಾಲದಿ ನಾರಿಯನಿಪಳು ನಿನ್ನಗೆ ಮಾರಹರಶರಮುರಿದು ಹರುಷದಿ ವಾರಿಜಾಕ್ಷೆಯ ವರಿಸಿದೆ 2 ಮೂಜಗತ್ಪತಿಯಂದಿಗೆಂದಿಗು ರಾಜ್ಯತೊಲಗಿದನೆನಿಸಿದೆ ಈ ಜಗದೊಳಿಹ ಅಜ್ಞ್ಞಜನರಿಗೆ ಸೋಜಿಗವ ನೀತೋರಿದೆ 3 ಶ್ರೀಲಕುಮಿ ಪತೆ ನಿನ್ನ ಮಹಿಮಾ ಜಾಲದಿವಿಜರು ತಿಳಿಯರು ನೀಲಮೇಘಶ್ಯಾಮ ಶಿಲೆಬಾಲೆ ಮಾಡಿದು ಚೋದ್ಯವೆ 4 ಮುತ್ತುರತ್ನ ಕಿರೀಟ ಶಿರದಲಿ ಇತ್ತಿಹ್ಯರ್ಕಶತÀಪ್ರಭಾ ನೆತ್ತಿಯಲಿ ಜಡೆಧರಿಸಿ ವಲ್ಕಲ ಪೊತ್ತು ತಿರುಗುವುದುಚಿತವೇ 5 ಕುಜಭವ ಭವರರ್ಪಿಸಿದ ಎಡೆ ಭುಂಜಿಪುದು ನೀವಿರÀಲವೋ ಅಂಜಿಕಿಲ್ಲದೆ ಭಿಲ್ಲಹೆಂಗಳೆಯಂಜಲವ ನೀ ಮೆದ್ದಿಯಾ 6 ಮಂಗಳಾಂಘ್ರಿಯ ಭಜಿಪಯೋಗಿ ಜನಂಗಳಿಗೆ ನೀನಿಲುಕದೆ ಮಂಗಗಳಿಗೆ ನೀನೊಲಿದಿಯಾ 7 ಹಾಟಕಾಂಬರ ತಾಟಕಾರಿ ವಿರಾಟ ಮೂರುತಿ ಎನ್ನಯ ಕೋಟಲೆಯ ಕಡುತಾಪದಿಂಕಡೆದಾಟಿಸೆನ್ನನು ಜವದಲಿ 8 ಭಾರವಿಲ್ಲದೆ ಅಖಿಲಜಗಸಂಹಾರ ಮಾಡುವಿಯನುದಿನ ಕ್ರೂರರಾವಣ ಮುಖ್ಯದನುಜರಹೀರಿ ಬಿಸುಟಿದು ಜೋದ್ಯವೆ 9 ಶಾಂತಿಯ ಪೆÇಂದಿದ ಹರನ ಪೂಜಿಯಗೈದಿಯಾ 10 ವಾರಿಜಾಭವ ಮುಖ್ಯದಿವಿಜರು ಪಾರುಗಾಣದೆ ಮಹಿಮನೆ ಸಾರಿ ಭಜಿಸುವ ಭಕ್ತರಿಗೆ ಕೈವಾರಿಯಂದದಿ ತೋರುವಿ 11 ತಾಮಸರ ಸಂಗದಲಿ ನೊಂದೆನು ಕಾಮಕ್ರೋಧದಿ ಬೆಂದೆನು ಈ ಮಹಿಗೆ ನಾಭಾರವಾದೆನು ಪ್ರೇಮದಿಂದಲಿ ಪಾಲಿಸು 12 ನಿನ್ನಧ್ಯಾನವ ತೊರೆದು ನಾಬಲು ಅನ್ಯವಿಷಯದಿ ರಮಿಸಿದೆ ಎನ್ನ ದೋಷಗಳೆಣಿಸದಲೆ ಕಾರುಣ್ಯಸಾಗರ ಕರುಣಿಸು 13 ಹೀನ ವಿಷಯಾಪೇಕ್ಷೆ ಬಿಡಿಸಜ್ಞಾನತಿಮಿರವ ನೋಡಿಸು ಮೌನಿ ಮಧ್ವಾರ್ಯರ ಮತದ ವಿಜ್ಞಾನ ತತ್ವವ ಬೋಧಿಸು 14 ಸಾಮಗಾನವಿಲೋಲ ರಘುಜನೆ ನೇಮದಿಂದಲಿನೀಯನ್ನ ನಾಮವನೆ ಪಾಲಿಪುದು ಸಚಿದ್ಧಾಮ ವರದೇಶ ವಿಠಲನೆ15
--------------
ವರದೇಶವಿಠಲ
ತಾಯಿ ಪಾಲಿಸು ಎನ್ನ ದಯದಿ ಗಾಯತ್ರಿದೇವಿ ಸಿದ್ಧಿಯನಿತ್ತು ಸಲಹಾ ಸಾವಿತ್ರಿ ಪ ಪಾವನ ಸುಚರಿತ್ರೆ ಮಾಯೆ ತ್ರಿಜಗಸ್ತೋತ್ರೆ ಕಾಯೆ ಸಿದ್ಧಿಸಿ ಎನ್ನ ಕಾಯಾ ಮಂಗಲಗಾತ್ರೆ ಅ.ಪ ಸಾರಸಾಕ್ಷಿಯೆ ದಯಾಪಾರಾವಾರಳೆ ನಿನ್ನ ಚಾರುಚರಿತಂಗಳು ಸಾರುವೆ ನಿಜಮಂತ್ರ ಮೂರುಲೋಕದ ಸೂತ್ರಧಾರಿ ನೀ ನಿಜ ಓಂ ಕಾರಿ ಕರುಣಿಸಿ ಸುತನ ಗಾರುಮಾಡದೆ ಪೊರೆ ಅ ಪಾರ ಮಹಿಮಳೆ ಬಾರಿಬಾರಿಗೆ ಸೇರಿ ನಿನ್ನಪಾದ ವಾರಿಜಕೆ ನಾ ಸಾರಿ ಬೇಡುವೆ ಧೀರಳೆ ಸುವಿ ಚಾರಿ ನಿಜಸುಖ ತೋರು ಬೇಗನೆ 1 ಮನುಮುನಿಗಳಿಗೊಲಿದು ಘನಸುಖಸಾಮ್ರಾಜ್ಯ ವನು ಕೊಟ್ಟು ಸಲಹಿದಿ ಕನಿಕರದೊಡನೆ ಮಿನುಗುವ ಶತಕೋಟಿದಿನ ಕರಪ್ರಭಾಮಯೆ ಅನುಪಮುನಿಜಜ್ಞಾನವನು ನೀಡು ಬೇಗನೆ ಚಿನುಮಯಾತ್ಮಳೆ ಘನಕೆ ಘನ ನಿನ್ನ ವರರುಹಂಘ್ರಿಯ ನೆನೆವೆನನುದಿನ ಜನನಿ ಅಣುಗನ ಕೊನೆಯಜಿಹ್ವೆಯೊಳ್ ಪ್ರಣಮ ಬರಿಯಮೈ ಮಣಿವೆ ಕಲ್ಯಾಣೆ 2 ಪನ್ನಂಗಧರ ಸುರಸನುತ ಶ್ರೀರಾಮ ಸುನ್ನತ ಮಹಿಮಂಗಳನ್ನು ಬಲ್ಲವಳೆ ಅನ್ನ ಪೂರ್ಣೆಯೆ ಉಮೆ ಪನ್ನಂಗವೇಣಿಯೆ ಮನ್ನಿಸು ಬಡವನ ಬಿನ್ನಪ ಕರುಣೆ ಭಿನ್ನವಿಲ್ಲದೆ ನಿನ್ನ ಬೇಡುವೆ ಉನ್ನತೋನ್ನತ ಪದವನಿತ್ತು ಧನ್ಯನೆನಿಸೌ ಎನ್ನ ಮನದಿಷ್ಟವನ್ನು ಪಾಲಿಸಿ ವಿಮಲ್ಹøದಯೆ 3
--------------
ರಾಮದಾಸರು