ಒಟ್ಟು 4435 ಕಡೆಗಳಲ್ಲಿ , 127 ದಾಸರು , 3028 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದೂ ಹಿಡಿಯದಿರು ಗರ್ವಾ | ಗೋ ವಿಂದನಲೀಲೆಯ ಕಾಣೊ ಸರ್ವಾ ಪ ಕ್ಷಿತಿಯೊಳಧಿಕವೆನ್ನ ಕುಲವು | ಗುಣ | ವತಿ ಸುಲಕ್ಷಣೆಯಾದಾ | ಸತಿಯಳ ವಲವು | ಸುತನಲ್ಲಿ ಗುಣ ನಿಶ್ಚಲಿಪು | ಯನ | ಗತಿಶಯ ಭಾಗ್ಯದ ಧನ ಧಾನ್ಯ ಒಲವು 1 ಎಲ್ಲರೊಳಗ ಅಭಿಮಾನಿ | ಶಾಸ್ತ್ರ | ಬಲ್ಲಿದ ಯೌವ್ವನ ತ್ರಾಣಿ | ಯನ್ನು | ಸೊಲ್ಲು ಸೊಲ್ಲಿಗ್ಹೇಳುವ ಕವಿತೆಯ ವಾಣಿ 2 ಸುಂದರವಾದ ಮಂದಿರವು | ಯನ | ಗೊಂದು ಕೊರತೆಯಿಲ್ಲಾವೆಂಬುದೀ ಮರವು ಹೊಂದದೆ ಬಾಗಿರೆಚ್ಚವು | ಗುರು | ತಂದೆ ಮಹಿಪತಿ ಬೋಧಿಸಿದರಹು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದೆಂದಿಗೂ ನಾ ಬಿಡೆ ನಿನ್ನ ಚರಣಾ ಬಂದೆನ್ನ ಕಾಯೊ ಶ್ರೀ ವೇಂಕಟರಮಣಾ ಪ ಪಟ್ಟಿ ಪೀತಾಂಬರ ತೊಟ್ಟ ಮುತ್ತಿನ ಹಾರಾ ವೈಜಯಂತಿ ಸುಂದರ ವದನ ಶುಭಾಂಗ ಮನೋಹರಾ ಮಕರ ಕುಂಡಲಧರ ಮೋಹನ ರೂಪಾ1 ನಿತ್ಯ ಕಲ್ಯಾಣನೆ ನಿಗಮ ಗೋಚರನೆ ಅಕಳಂಕ ಚರಿತನೆ ಸಕಲರಪಾಲಿಪ ಅನಂತ ರೂಪಾ ಶ್ರೀ ವೆಂಕಟೇಶಾ2 ಪರಮ ಕಲ್ಯಾಣ ಗುಣಾರ್ಣವನೇ ದುರಿತ ವಿದೂರನೆ ಪರಮದಯಾ ನಿಧೆ ವರಗಿರಿವಾಸಾ 3 ಘಾಸಿ ಗೊಂಡಿಹೆ ಭರದಿ ಕ್ಲೇಶ ಪಾಶಂಗಳ ಪರಿಹರಿಸಯ್ಯಾ ವಾಸುದೇವನೆ ನಿಮ್ಮ ನಾಮ ಸ್ಮರಿಸುವಂತೆ ನಿತ್ಯ ಪಾಲಿಸು ಪ್ರಭುವೆ4 ಸುರಮುನಿ ವಂದ್ಯನೇ ಸುರನರ ಸೇವ್ಯನೇ ಶರಣರ ಪಾಲಿಪ ಸರ್ವೋತ್ತಮನೇ ತಿರುಪತಿವಾಸನೆ ತಿರುಮಲೆ ಶ್ರೀಶನೇ ಶೇಶಗಿರೀಶನೆ ಶ್ರೀ ವೇಂಕಟವಿಠಲನೇ 5
--------------
ರಾಧಾಬಾಯಿ
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಎದ್ದುನಿಂತ ಬಂದು ನಿಂತ ಮುಂದೆ ನಿಂದಂಥಮಾರಾಂತರ್ಗೆ ಕೃತಾಂತ ನಿಶ್ಚಿಂತ ಹನುಮಂತಬಲವಂತ ಯೆದೆಗೊಂತ ತನಪಂಥ ಸಲಲೆನುತಸÀಂತರಿಗೆ ಸಂತತ ಶಾಂತ ನಿಂತ ಮಾರಾಂತ ಕೃತಾಂತ ಪ. ದುರುಳ ರಾವಣನ ವನದ ತರುವಿನ ಕೊನೆಯೇರಿದಕರಚರಣಗಳ ಘಾಯದಿ ಮರಂಗಳ ಮುರಿದಅರಿಗಜ ಗಂಡಭೇರುಂಡನೆಂಬ ತನ್ನ ಬಲುಬಿರುದಮೆರೆದು ಮಾರುತಿ ಪ್ರತಿಭಟರ ಶಿರಂಗಳ ತರಿದ 1 ಸೀತೆಗೆ ಉಂಗುರವನ್ನಿತ್ತು ಮತ್ತೆ ಕೈಗಳ ಮುಗಿದಪ್ರೀತಿಯಿಂ ಪೊನ್ನಕಚ್ಚುಟಕ್ಕಿಟ್ಟ ಗಂಟನು ಬಿಗಿದಖ್ಯಾತ ಮಂಡೋದರಿಕುವರನ ಬಸುರನು ಬಗಿದವಾತಸುತನು ವೈರಿಪುರವ ಸುಡಲು ತೊಡಗಿದ 2 ನಲಿದು ಲಂಘಿಸಿ ನಳನಳಿಸುವ ಬಾಲವನೆತ್ತಿಖಳರೆದೆ ಶೂಲ ಹುಬ್ಬುಗಳ ಗಂಟಿಕ್ಕಿ ನೋಡುವ ಅರ್ಥಿಆಳುತಲಿಹ ಅಬಲೆಯರ ಭಯಂಕರಮೂರ್ತಿಸುಳಿದನು ಕೇರಿಕೇರಿಯಲಸುರರ ನುಗ್ಗೊತ್ತಿ 3 ಲಂಕಾನಗರಿಯ ಪುಚ್ಚದ ಕಿಚ್ಚಿಂದ ಸುಟ್ಟಹುಂಕರಿಸುತ ಅಹಿತರ ಬೇಗ ತೆಗೆದೊಗದಿಟ್ಟಕಂಕಣ ಮಕುಟ ಹಾರಂಗಳಿಂದೊಪ್ಪುವ ಬಲುದಿಟ್ಟಶಂಕೆಯಿಲ್ಲದನಿಲಜ ಶತ್ರುಗಳಿಗಿಂತರ್ಥಿಯ ಕೊಟ್ಟ 4 ಹೋಗೆಲೊ ಕಪಿಯೆನೆ ಹೊಕ್ಕು ರಕ್ಕಸರನು ಬಿಗಿದಕಾಗೆಯ ಬಳಗಕೆ ಕಲ್ಲನಿಟ್ಟಂದದಿ ಮಾಡಿದಆಗಲೆ ಕಂಡ ದಶಮುಖನೆಂಬ ಕಳ್ಳನ ನೋಡಿದಬೇಗ ಜಾನಕಿಯನ್ನು ಬಿಡು ಬಿಡುಯೆನಲು ತೊಡಗಿದ 5 ಮೂರರದೊಂದು ಪಾಲು ಖಳರ ಜನಂಗಳ ಕೊಂದಮೀರಿದ ಸೇನೆ ನಮ್ಮ ರಘುಪತಿಗಿರಲೆಂದು ನಿಂದನೂರುಯೋಜನದ ವಾರಾಶಿಯ ತೀರಕೆ ಬಂದಹಾರಿದನು ಗಗನಕೆ ಹನುಮನು ಭರವಸದಿಂದ ನಿಂದ 6 ಕುಂಭಿನೀ ಸುತೆಯ ಕುರುಹಿನ ಸನ್ಮಣಿಯ ತಕ್ಕೊಂಡಅಂಬುಧಿಯನು ಬೇಗ ದಾಟಿ ಶ್ರೀರಾಮರ ಕಂಡತ್ರ್ಯಂಬಕ ಮೊದಲಾದ ಸುರರ ತಂಡದಲಿ ಪ್ರಚಂಡಕಂಬುಕಂಧರ ಹಯವದನನ ಭಕ್ತಿರಸಾಯನ ಉಂಡ 7
--------------
ವಾದಿರಾಜ
ಎನಗ ನೀ ಕಾಯಲಾಗದೇ|ಆಗದೇ ದೇವಾಪ ದಶ ಜನುಮ ವಂಗೀಕರಿಸಿ ಭಕ್ತ ಅಂಬ| ರೀಷನ ಶಾಪ ಹರಿದೆ ದೇವಾ 1 ಗಣಿಕಾ ಅಜಮಿಳ ಶಬರಿ ಮುಖ್ಯರಾಗಿಹಾ| ಗಣಿತರನು ಪೊರೆದೆ ದೇವಾ 2 ಗುರುವರ ಮಹಿಪತಿ ಸುತ ಪ್ರಭು ಯನ್ನನು| ದ್ದರಿಸುವದನರಿದ ಅರಿದೇ ದೇವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನಗಳವೆ ನಿನ್ನ ಮಹಿಮೆಯನು ಪೊಗಳಲು ಹೀನಮತಿ ನಾ ಪನ್ನಂಗಶಯನ ಪ ನೀಲಶಾಮನೆ ನಿಮ್ಮ ಲೀಲೆ ಪೊಗಳಲ್ಕೆ ಬ್ರಹ್ಮ ಸಾಲವು ನಾಲ್ಕುವೇದವೆಂದು ನಾಲಿಗೆಯೋಳ್ವಾಣಿನಿಟ್ಟಿರುವನಂತೆ 1 ಸಾಸಿರ ಜಿಹ್ವೆಗಳಿಂದ್ಹೊಗಳಲ್ ಈಶಭಜನೆ ತೀರದೆಂದು ಶೇಷ ಇನ್ನು ಸಾಸಿರಜಿಹ್ವೆ ಆಶಿಸಿ ಬೇಡುವನಂತೆ2 ಪ್ರಾರ್ಥಿಸಲು ನಿಮ್ಮ ಚರಿತ ಶಕ್ತಿ ಸಾಲದಂಥವರಿಗೆ ಭಕ್ತಿಯಿಂ ಪೊಗಳುವೆನಿಷ್ಟೆ ಮುಕ್ತಿದಾಯಕ ಶ್ರೀರಾಮಯೆನುತ 3
--------------
ರಾಮದಾಸರು
ಎನ್ನ ಪಾಲಿಸುವದಾಗದೇ|ಸಿರಿ ರಮಣಾ| ಪ್ರಸನ್ನ ವಿಮಲ ಅತುಳ ಶೇಷಗಿರಿಯ ವಾಸಾ ವೆಂಕಟೇಶಾ ಪ ದುರುಳ ದೈತ್ಯನ ಕರುಳ ಬೆರಳ ಸರಳ ಉಗುರಿನಿಂದ ವಿರಳ| ವಿರಳ ಮಾಡಿ ಪೊಸರಂತೆ ಕೊರಳಿಗಾಕಿ ಮರಳೆ| ತರಳಗೊಲಿದು ಹರಣಗಾಯ್ದೆ|ಆದೇಶದಲ್ಲಿ| ಅರಸುತನುವ ಕೊಟ್ಟು ನಿಲಿಸಿದೇ|ಕ್ಷಿತಿಯೊಳಗ| ಪರಮ ನಿಜ ಭಕ್ತನೆನೆಸಿದೇ 1 ನೆಗಳಿ ಬಂಧನ ಬಿಡೆ ಹರಿಗಳರಿಗಳ ಸಂಗಡಿಭಗಳ ಸಮೂ| ಪತಿ ನೀರ್ಗುಡಿಯೆ ಪೋಗಲಾಗಳೆ| ನೆಗಳಿ ಪಿಡಿಯೆ ಶ್ರೀ ಪಾದಗಳ ಯುಗಳ ನೆನಿಯ ಕೇಳದೇ| ಸಕಲ ಪಕ್ಷಿಗಳ ಶ್ರೇಷ್ಠ ನಿಲ್ಲದೊದಸಿದೇ|ಕರುಣದಿಂದ ಸುಗತಿ ಕೊಟ್ಟು ಜನಮ ಹರಿಸಿದೇ2 ಇಳೆಯ ಮದದಿ ದ್ರೌಪತಿಯನು| ತಿಳಿಯದೆಳಿಯೆ ಕಳಿಯೆ ಸೀರೆಯಾ| ಕಳಿಯೆ ಮಾನ ವಿಜಯಗೆಳೆಯ ಇಳೆಯ ಭಾರರ್ಬಳಿಯೆ| ಸುಳಿಯೆ ದಾಟಿಸೆನುತ ನುತಿಸೆ ತ್ವರಿತದೀ|ನೀನು ಸಭೆ| ಯೊಳಗ ಪೊರಯಿಸಿದೇ ವಸ್ತ್ರದೀ|ಮಹಿಪತಿ| ನಂದನೊಡೆಯ ವ್ಯಾಳ್ಯಕ್ಕೊದಗಿದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನ ಪಾಲಿಸುವುದಾನಂತ ಶಯನ | ಚನ್ನ ಗರುಡವಾಹನಾ | ಮುನಿಗೊಲಿದನಂತ ಗುಣಾರ್ಣವಾ ಪ ದೇವಾ ನಂಬಿದವರ ನೋವ ಕಳೆದು ಬಿಡದೆ | ಕಾವ ಬೇಡಿದ ವರವ ನೀವ ಮೂರು | ಭುವನ ಜೀವ ವಿಮಲರಾ | ಜೀವ ನಯನ ವಸುದೇವ ದೇವಕಿತನು | ಭವನೆ ಭವದೂರ ದುರ್ಜನ ಸಂಹಾರ | ದೇವತಾ ವರ ಸಂಜೀವಾ ಪ್ರಭಾವಾ1 ಸೂರ್ಯಕೋಟಿ ಪ್ರಕಾಶಾ | ಚಾರ್ಯನಾ ನಾಯಕಾಧೀಶಾ | ಧೈರ್ಯವುಳ್ಳ ಸರ್ವೇಶಾ | ಕಾರ್ಯರೊಳು ವಿಶೇಷಾ | ಕಾರ್ಯವಂತನೆ ಈಶಾ | ತುರ್ಯಮಹಿಮಾ ಸುರ ಮರ್ಯಾದಿಯಲಿ ಬಲು | ವೀರ್ಯದಲಿ ಮತಿ | ಧಾರ್ಯನ ಮಾಡೋದು | ನಿರ್ಯಾಣ ಸಮಯಕ್ಕೆ 2 ಬಂದು ಮತ್ಸ್ಯಾದಿ ತೀರ್ಥ | ಬಂದು ಬಲು ಸಮರ್ಥ | ಇಂದು ಕರುಣಿಸು ಕರ್ತಾ | ಬೆಂದು ಪೋಗಲಾರ್ಥ | ಮುಂದುಣಿಸು ಸುಧಾರ್ಥ | ತಂದು ನೀನೆ ಮುಕ್ತ್ತಾರ್ಥ | ಬಂದು ವೈತಿರುವಾ ನಂದು ರೂಪವನೆ | ಸಿಂಧುಶಯನ ಆ ನಂದ ವಿಜಯವಿಠ್ಠಲೆನ್ನ ಪಾಲಿಸೋ3
--------------
ವಿಜಯದಾಸ
ಎನ್ನ ಮನ ಅನ್ಯಕ್ಕೆರಗುತ್ತಿದೆ ಪ ಪತಿ ಅಂಗ ಸಂಗದೊಳಿರುತಿದ್ದು ಇದ್ದುಸತಿ ಉಪಪತಿಯನ್ನು ಬಯಸುವಂತೆಶ್ರುತಿ ತತ್ವ ಶಾಸ್ತ್ರಗಳರಿತಿದ್ದು ಇದ್ದು ದು-ರ್ಮತಿ ದುಷ್ಟ ಚರಿತೆಗೆ ಎಳೆಯುತಿದೆ ಎನ್ನ1 ನಿತ್ಯ ಉಣುತಿದ್ದು ಇದ್ದುಸುರೆಯ ಚಿಂತಿಸಿ ರುಚಿಗೊಳ್ಳುವಂತೆಕರಿ-ಸುರನದಿಯಲ್ಲಿ ಮೀಯುತಿದ್ದು ಇದ್ದುಪರಮ ಹರುಷದಿ ಕೆಸರ ಚೆಲ್ಲಿಕೊಂಬಂತೆ 2 ಪರಮ ಪಾವನ ಗುಣಪೂರ್ಣನೆ ನಿನ್ನಚರಣಯುಗಳವನ್ನು ಧ್ಯಾನಿಸುತನೆರೆಹೊರೆಯಲಿ ಮನ ಹೋಗದಂದದಲಿಕರುಣಿಸಿ ನಿಲ್ಲಿಸೊ ಸಿರಿಕೃಷ್ಣರಾಯ 3
--------------
ವ್ಯಾಸರಾಯರು
ಎನ್ನ ಸಲಹೋ ನೀ ದಯಾಂಬುಧಿ| ಘನಶಾಮಾ ರಾಮಾ ಪ ವಸುದಿಜ ಲೋಲ ಸುರಮುನಿ ಪಾಲಾ| ದಶರಥ ತನಯ ಕೃಪಾಲ1 ದುರಿತ ನಿವಾರಾ| ದಾನವಕುಲ ಸಂಹಾರಾ 2 ಸರಸಿಜನಯನಾ ಸದ್ಗುಣ ಸದಾನೆ ಗುರು ಮಹಿಪತಿ ಸುತ ಜೀವನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನನು ನೀ ಜರೆವೆ ಜೀವನೆನಿನ್ನನೀ ತಿಳಿದೆನೆಂದೂಮುನ್ನ ಮಾಡಿದ ಪುಣ್ಯಕರ್ಮಂಗಳೆನ್ನಿಂದ ಮನ್ನಿಸದುಪಕಾರವಾ ಜೀವಾ ಪದೇಹವು ಹೇಯವೆಂಬೆ ಮತ್ತೀಗದೇಹದೊಳಿರುತಿರುವೆದೇಹದಾಧಾರದಲ್ಲೀ ಧ್ಯಾನಿಸಿಸೋಹಂ ಭಾವನೆ ಬಂದುದೂಉಹಾಪೋಹಗಳಲ್ಲಿ ಚದುರನು ನಾನೆಂಬೆಓಹೊ ನಾನಿಲ್ಲವೆ ಜೀವಾ 1ಚಿತ್ತೆ ತಾ ಪ್ರಕೃತಿಯಾಗೀ ಭೂತದಮೊತ್ತವೆಂದೆನಿಸಿತಲ್ಲೈಮತ್ತೆ ಭೂತಂಗಳವೂ ನಾಲ್ಕುಳ್ಳತತ್ವವಿಪ್ಪತ್ತಾುತುಹತ್ತಿಂದ್ರಿಯಂಗಳಿಂದ ವಿಕರ್ಮಗಳು ಪುಟ್ಟಿಮುತ್ತೆರನಾುತಲ್ಲೈ ಜೀವಾ 2ಕನಕವೆ ಕುಂಡಲಾದಿ ಭೂಷಣಭಣಿತೆಯ ತಾಳಿರಲುಕನಕವಲ್ಲವೆ ಭೂಷಣ ಯೆಣಿಸಲುಚಿನುಮಯಾತ್ಮಕನಿಂದಲೆಜನಿಸಿ ದೃಶ್ಯತ್ವದಿ ತೋರಿದಡೇನಾುತುತನುವಾತ್ಮನಲ್ಲವೇನೈ ಜೀವಾ 3ಮಾಡಿದ ಉಪಕಾರವ ಮರೆಯುವಮೂಢಗೆ ನರಕವೆಂದುಆಡದೆ ಶೃತಿನಿಕರ ನೀನದನೋಡದೆ ನುಡಿಯುತಿಹೆಕೂಡಿಕೊಂಡೆನ್ನನು ನಿಜದೊಳು ಬೆರೆದರೆಪ್ರೌಢ ನೀನೆನಿಸಿಕೊಂಬೆ ಜೀವಾ 4ಕಾರ್ಯಕಾರಣ ರೂಪವಾ ನೋಡಲುಕಾರ್ಯಕಾರಣವಲ್ಲವೆಸೂರ್ಯನಿಂದಾದುದಕ ಬೆರೆಯದೆಸೂರ್ಯನ ಮರಳಿ ನೋಡೂಧೈರ್ಯಶಾಲಿಯೊಳಿಪ್ಪ ಧೈರ್ಯತ್ವವಾತನವೀರ್ಯವಲ್ಲವೆ ನೋಡಲೂ ಜೀವಾ 5ರೂಪನಾಮಗಳೆರಡೂ ಸತ್ತಾನುವ್ಯಾಪಿಸಿ ಜಗವಾದುದುದೀಪದೊಳಗೆ ಕಾಳಿಕೆ ತೋರ್ಪಂತೆಈ ಪರಿಯಲಿ ಮಾಯೆಯುವ್ಯಾಪಾರಂಗಳನುಪಸಂಹರಿಸಲು ಕಾಯವ್ಯಾಪಕನೊಳು ನಿಂದುದೂ ಜೀವಾ 6ಪೊಳೆದೆನು ನಾ ಮೊದಲೂ ಆಮೇಲೆಪೊಳೆದೆ ನೀ ಪ್ರತಿಫಲಿಸಿಜಲಗತ ಪ್ರತಿಬಿಂಬವೂ ನಿಜವಲ್ಲದಳಿವಂತುಪಾಧಿುಂದಾನಿಲುವುದು ನಿಜಬಿಂಬವಾಭಾಸ ನೀ ಪುಸಿನಿಲುವೆ ನಾ ನಿಜದೊಳಗೆ ಜೀವಾ 7ಬಂಜೆಯ ಮಗ ನಿಜವೊ ಅವನಿಗೆಮುಂಜಿಯೆಂಬುದು ನಿಜವೋಅಂಜಿಕೆದೋರಿಸಿತು ರಜ್ಜುವುರಂಜಿಸಿ ಸರ್ವನಾಗಿವ್ಯಂಜಿಸಿ ಕರಣದಿ ನಿದ್ರೆಯೊಳಭಂಜಿಸಿ ಮಂಜಿನಂದದಿ ಪೋಪೆಯೈ ಜೀವಾ 8ಇರಿಸಲು ಬೇರೆನ್ನನು ತೆರಹಿಲ್ಲಬೆರೆಸಾತ್ಮನೊಳು ಬಿಡದೆಕಿರಣಂಗಳು ರವಿಯ ಬಿಟ್ಟೊಮ್ಮೆಇರಬಲ್ಲವೆ ನೋಡಲುತಿರುಪತಿನಿಲಯ ಶ್ರೀ ವೆಂಕಟರಮಣನಚರಣನಾನಲ್ಲವೇನೈ ಜೀವಾ 9 ಕಂ||ಇಂತೀ ಪರಿಯಲಿ ಜೀವನನಿಂತಿರುವವನಿಲ್ಲದವನ ನುಡಿವದು ಸಹಜವುಎಂತಾದರು ತನ್ನ ತಿಳಿಯದೆಮುಂತೋರದ ನುಡಿುದೇನೆನೆ ಮುಳಿದಂ ಜೀವಂ
--------------
ತಿಮ್ಮಪ್ಪದಾಸರು
ಎನ್ನಪಾಪವೇ ಎನ್ನ ಕಾಡುವುದು ಎನ್ನಯ್ಯ ಹರಿಯೆ ನಿನ್ನದಿದರೊಳನ್ಯವೇನಿಹ್ಯದು ಪ ಮುನ್ನಮಾಡಿದ ಪಾಪಕರ್ಮವು ಬೆನ್ನಬಿಡದೆ ಕಾಡುತಿರಲು ನಿನ್ನಗನ್ನುವುದಾವ ನ್ಯಾಯವು ಪನ್ನಂಗಶಾಯಿ ಸನ್ನುತಾಂಗ ಅ.ಪ ನಾನಾಜೀವಿಗಳ ಪ್ರಾಣಹಾರಿಸಿದೆ ಅನ್ಯರಿಗೆ ಬಿಡದೆ ಜಾಣನುಡಿ ಪೇಳಿ ಹಾನಿ ಬಯಸಿದೆ ದುಗ್ಗಾಣಿ ರಿಣಕಾ ಗೇನುಯಿಲ್ಲೆಂದಾಣೆ ಮಾಡಿದೆ ನಾ ನಿನ್ನ ಮರೆದೆ ಏನು ತಿಳಿಯದೆ ಜ್ಞಾನ ಪೇಳಿದೆ ಜ್ಞಾನವಂತರಿಗ್ಹೀನ ನುಡಿದೆ ಮಾನವಂತರ ಮಾನ ಕಳೆದೆ ಹೀನಬವಣೆಯೋಳ್ಬಿದ್ದೆನಭವ 1 ಅಂಗನೆಯರ ಸಂಗ ಬಯಸಿದೆ ದುರಿತಕ್ಕೆ ಹೇಸದೆ ಅಂಗನೆಯರ ಗರ್ಭ ಭಂಗಿಸಿದೆ ಅನ್ಯರ ಒಡವೆಗೆ ಕಂಗಳಿರೆ ಭಂಗಕೊಳಗಾದೆ ಮಂಗ ನಾನಾದೆ ನಿತ್ಯ ನೇವಹಕೆ ಅಂಗನೆನಿಸದೆ ಬಡವರ್ವಿಮಹಕೆ ನುಂಗಿ ಕೂತೆನು ಪರರ ದ್ರವ್ಯಿ ನ್ನ್ಹ್ಯಾಂಗೆ ನಿನ್ನೊಲಿಮೆನಗೆ ಅಭವ 2 ಕೊಟ್ಟ ಒಡೆಯರಿಗೆರಡನೆಯ ಬಗೆದೆ ನಂಬಿ ಎನ್ನೊ ಳಿಟ್ಟ ಗಂಟನು ಎತ್ತಿಹಾಕಿದೆ ಪಡೆದ ಮಾತೆಯ ಬಿಟ್ಟು ಬೇಸರ ಮಾಡಿನೋಡಿದೆ ಭ್ರಷ್ಟನಾನಾದೆ ದುಷ್ಟಗುಣಗಳನೊಂದುಬಿಡದೆ ಶಿಷ್ಟಪದ್ಧತಿ ಜನಕೆ ಉಸುರಿದೆ ಕೊಟ್ಟವಚನೊಂದು ನಡೆಸದಿಂದುಳಿದು ಕೃತಿ ಪೇಳೆನಭವ 3 ಒಂದೆ ಮನದವನಂತೆ ತೋರಿದೆ ಮತ್ರ್ಯದವರಿಗೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿದೆ ದೋಷವಿನಿತು ಹೊಂದದವರಿಗೆ ಕುಂದು ಹೊರೆಸಿದೆ ನಾನೇ ಅಹುದಾದೆ ಸಿಂಧುಶಯನ ಭಕ್ತರನ್ನು ಕಂ ಡೊಂದಿಸದೆ ಮುಖವೆತ್ತಿ ನಡೆದೆ ಮುಂದುಗಾಣದೆ ದೋಷ ಮಾಡಿದೆ- ನೊಂದು ಪುಣ್ಯವನರಿಯೆನಭವ 4 ಕೊಡುವ ಧರ್ಮಕೆ ಕಿಡಿಯನ್ಹಾಕಿದೆ ಕೂಡಿದ್ದವರಿಗೆ ಕೆಡಕು ಬೋಧಿಸಿ ಒಡಕು ಹುಟ್ಟಿಸಿದೆ ಅಡಿಗೆ ಬಾಗಿ ಮಿಡುಕುವವರಿಗೆ ದುಡುಕನಾಡಿದೆ ಕಡುಪಾಮರಾದೆ ಪಿಡಿದು ಕಾಯುವ ಒಡೆಯನ್ಹೆಸರಿನ ಮುಡಿಪು ನುಂಗಿ ಕಡುಪಾಪಾತ್ಮಾದೆನು ಸುಡುಸುಡೆನ್ನಯ ಜನ್ಮವ್ಯಾಕಿನ್ನು ಒಡೆಯ ಶ್ರೀರಾಮ ಸಾಕುಮಾಡೋ 5
--------------
ರಾಮದಾಸರು
ಎನ್ನಳವೆ ಯೋಗದಭ್ಯಾಸ ಹರಿಯೇ ಎನ್ನಕೈ ನೀ ಪಿಡಿಯದಿಹುದು ಸರಿಯೇ ಪ ದಿವ್ಯಯೋಗದ ಬಗೆಯ ಪೇಳಿದೈ ಗೋಪಾಲ ಸವ್ಯಸಾಚಿಯ ಧನ್ಯನೆನಿಸಿದೈ ಶ್ರೀಲೋಲ ಭವ್ಯವಾದಾಕೃತಿಯ ತೋರ್ದೆ ಗೋಪಿಬಾಲಾ ಅವ್ಯಯಾನಂದ ಮಾಂಗಿರಿರಂಗ ವಿಠಲ 1 ನಿರ್ಮಮತೆಯೇ ಬೀಜ ಸರ್ವಸೇವೆಯೇ ಬೇರು ಕರ್ಮದೊಳಗುತ್ಸಾಹವಿರಲದೇ ಸುರಿನೀರು ಮರ್ಮವಿಲ್ಲದ ಹೃದಯವೈಶಾಲ್ಯವೇ ಕುಸುಮ ನಿರ್ಮಲತೆಯೇ ಫಲವು ಇದು ಕರ್ಮಯೋಗ 2 ಭಕ್ತಿಯೆಂಬುದೆ ಬೀಜ ಸಮ್ಮತಿಯೆ ತಾಬೇರು ಭಕ್ತಜನರ ಸೇವೆಯೇ ಮೇಲೆರೆವ ನೀರು ಏಕಾಗ್ರಚಿತ್ತವೇ ಸರಸಪರಿಮಳಪುಷ್ಪ ಮುಕ್ತಿಯೇ ಫಲಮಿದೆ ಭಕ್ತಿಯೋಗ3 ಆಸನವೇ ಬೀಜ ಪ್ರಾಣಾಯಾಮವೇ ಬೇರು ಆಸೆಯಿಂ ಗೈವ ದಿನಚರ್ಯೆಯೇ ನೀರು ಮಾಸದಿರುವಾರೋಗ್ಯ ಪುಷ್ಪತಾನೊಮ್ಮನಮೆ ಭಾಸಿಪಾ ಫಲಮಿದೆ ಹಟಯೋಗವಯ್ಯ 4 ಯಮನಿಯಮಗಳೆ ಬೀಜಧಾರಣವೆ ತಾಂಬೇರು ಕ್ರಮಮಾದಘ್ರಣಿದಾನ ಮೇಲೆರೆವ ನೀರು ವಿಮಲಮಾಗಿಹ ಧ್ಯಾನ ಪೂರ್ವಸಂಪ್ರಜ್ಞತಾ ಕ್ರಮಸಮಾಧಿಯೆ ಫಲವು ಇದು ರಾಜಯೋಗ 5 ವರವಿವೇಕ ಬೀಜ ವೈರಾಗ್ಯವೇ ಬೇರು ಗುರುಕರುಣಮೆಂಬುದೇ ಮೇಲೆರೆವ ನೀರು ಪರಬ್ರಹ್ಮ ಜ್ಞಾನವೇ ಪರಿಮಳಿಸುವ ಪುಷ್ಪ ವರಮೊಕ್ಷವೇ ಫಲವು ಇದು ಜ್ಞಾನಯೋಗ 6 ಯೋಗಮಾರ್ಗವ ತಿಳಿದು ಅನುಸಂಧಿಯಿಂ ಸಕಲ ತ್ಯಾಗ ಮಾಡುವ ನಿಯಮವೆನಗಸಾದ್ಯ ಆಗಾಗ ನಿನ್ನ ನಾಮಂಗಳನು ಪೇಳ್ವುದೇ ಯೋಗವೆಂದೆನಿಸುವ ಮಾಂಗಿರಿರಂಗ ನೀಲಾಂಗ 7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಎಂಬೆನು ವಿವೇಕ ಮನುಜಗೆ ಇರೆ ಎಂಬೆನು ಬ್ರಹ್ಮನು ಎಂಬೆಎಂಬೆನು ವಿವೇಕ ಮನುಜಗೆ ಇಲ್ಲದಿರೆ ಕತ್ತೆಯಮರಿಯದು ಎಂಬೆ ಪ ವೇದದ ನಿಜ ಅರ್ಥವ ತಿಳಿದಡೆ ಉತ್ತಮೋತ್ತಮನು ಎಂಬೆಕ್ರೋಧದಿ ತರ್ಕದಿ ಕಾದಾಡುವವನು ಕೋಳಿಯ ಹುಂಜನು ಎಂಬೆನಾನಾರೆನುತಲಿ ನಿಜವನು ತಿಳಿವನ ನಾರಾಯಣನು ಎಂಬೆನಾದದ ತಿಳಿವನು ನಿಂದಿಸುವಾತನ ಸರಸವಾಡೋ ಪಶು ಎಂಬೆ 1 ಮತಿಯ ವಿಚಾರದಿ ಜಗ ಬ್ರಹ್ಮವೆಂಬನ ವಿಚಾರವಾದಿಯು ಎಂಬೆಯತಿಗಳು ಬರೆ ಕುಳಿತೇಳದ ಮನುಜನಎಮ್ಮೆಯ ಮಗನವನೆಂಬೆಸುತ್ತಮುತ್ತಂಗನೆ ಮೋಹವ ತೊರೆದನ ಯೋಗಪುರುಷ ತಾನೆಂಬೆಗತಿಮತಿ ತೊರೆದಿಹ ನರನನು ಈಗಲೆ ಎಂಜಲು ತಿಂಬುವ ನಾಯೆಂಬೆ 2 ಪರಮಾರ್ಥದಿ ಶಮದಮದಿಂದಿಹನನು ಪಂಡಿತನೀಗಲು ಎಂಬೆಹಿರಿಯರ ಕಾಣಲು ಹಲ್ಲನೆ ಕಿರಿವನ ಹಿರಿಯಮುಸುವನು ತಾನೆಂಬೆಗುರಿಯನು ತಪ್ಪದೆ ದೃಷ್ಟಿಸಿ ನಡೆವನ ಗುಣಕೆ ಅತೀತನು ಎಂಬೆಬರಿಯ ಪ್ರತಿಷ್ಟೆಯ ಸಾಧಿಸುತಿರುವನ ಬರಡು ಗೊಡ್ಡು ಎಂದೆಂಬೆ 3 ನಾದದ ಧ್ವನಿಯನು ಕೇಳುತಲಿಹನನು ಜಗಜೀವನನು ಎಂಬೆನಾದದ ಸುಖವನು ಅರಿಯದ ನರನನು ಜೀನುಗಾರನು ಎಂದೆಂಬೆದಿನಕರ ಕೋಟಿಯ ತೇಜದಿ ಹೊಳೆವನ ದಿವ್ಯ ಮೂರುತಿ ಎಂದೆಂಬೆವನವನ ಅಲೆಯುವ ಬರಡು ಮುನಿಯನುವನಕೆಯ ತುಂಡದು ತಾನೆಂಬೆ4 ಆತ್ಮದ ಕಳೆಯನು ಅರಿತವನಿದ್ದರೆ ದೃಢದಲಿ ಬ್ರಹ್ಮನು ಎಂಬೆಸತ್ವಶಾಲಿ ಆ ಮಹಿಮರ ಜರೆವರ ಗುಡ್ಡದ ಗೂಗೆಯಮರಿ ಎಂಬೆಚಿನುಮಯ ಚಿನ್ಮಾತ್ರನೆ ತಾನಾದವನನು ಚಿದಾನಂದ ಗುರುವೆಂಬೆಕರೆಕರೆ ಎನಿಸುವ ಸಾಧು ವೇಷವನು ದೂರಕೆ ನೀ ನಿಲ್ಲೆಂಬೆ5
--------------
ಚಿದಾನಂದ ಅವಧೂತರು