ಒಟ್ಟು 8605 ಕಡೆಗಳಲ್ಲಿ , 133 ದಾಸರು , 4891 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿ ಗೋಪಾಲ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತವೆಲ್ಲ | ದೂರ ಓಡಿಸುತಾ ಅ.ಪ. ತರಳೆ ದ್ರೌಪದಿ ವರದ | ಮರಳ್ಯಹಲ್ಯಯ ಪೊರೆದತರಳ ಪ್ರಹ್ಲಾದನನ | ಪೊರೆದ ನರಹರಿಯೇ |ವರುಷ ಐದರ ಧೃವಗೆ | ವರದನಾಗೀ | ತೋರ್ದೆಕರುಣಾಳು ನಿನ್ಹೊರತು | ಬೇರನ್ಯಕಾಣೇ 1 ಕಂಸಾರಿ ನಿನ್ನ ಪದಪಾಂಸುವನೆ ಶಿರದಿ ನಿ | ಸ್ಸಂಶಯದಿ ಧರಿಸೀಶಂಸಿಸಲು ಮಹಿಮೆ ತವ | ದಾಸ್ಯ ಪಾಲಿಸುತಿನ್ನುಹಂಸವಾಹನ ಪಿತನೆ | ವಂಶ ಉದ್ಧರಿಸೋ 2 ಕರ್ಮ ಪ್ರಾಚೀನಗಳ | ಮರ್ಮ ತಿಳಿದವರ್ಯಾರೊಕರ್ಮನಾಮಕನೆ ದು | ಷ್ಕರ್ಮ ಪರಿಹರಿಸೀ |ಪೇರ್ಮೆಯಿಂದಿವಳ ಪೊರೆ | ನಿರ್ಮಲಾತ್ಮಕ ದೇವಧರ್ಮ ಗೋಪ್ತ ಸ್ವಾಮಿ | ಬ್ರಹ್ಮಾಂಡದೊಡೆಯಾ 3 ಮಧ್ವಮತ ಸಿದ್ಧಾಂತ | ಪದ್ಧತಿಗಳರುಹೃತ್ತಶುದ್ಧಸಾಧನ ಗೈಸೊ | ಮಧ್ವಾಂತರಾತ್ಮಾಅಧ್ವಯನು ನೀನೆಂಬ | ಶುದ್ಧ ಬುದ್ಧಿಯನಿತ್ತುಉದ್ಧರಿಸೊ ಈಕೆಯನು | ಪ್ರದ್ಯುಮ್ನ ದೇವಾ 4 ಸರ್ವಜ್ಞ ಸರ್ವೇಶ | ನಿರ್ವಿಕಾರನೆ ದೇವಸರ್ವದ ತವನಾಮ | ಸ್ಮರಿಪ ಸುಖವಿತ್ತುದುರ್ವಿ ಭಾವ್ಯನೆ ದೇವ | ಅಸ್ವತಂತ್ರಳ ಕಾಯೊಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿ ನೀನೆವೆ ಸರ್ವ ಚೇತನ ಧೃತಿಯ ಸಕಲವೇ | ಧರಿಯೊಳು ನಾನೆಂಬುವ ಗುಣವೇ ವರಶೃತಿ ನೇಹನಾ ನಾಸ್ತಿಯಂದು | ಸಾರುವದಿದಕನು ಮಾನವೇ ಪ ಬಯಲೊಳು ಪುಟ್ಟದ ಪರಿಪರಿನಾದದ | ಹೊಯಿಲಿನ ಮಂಜುಳ ಶಬ್ದವಾ | ಬಯಲದಿ ಕೇಳಿತಲ್ಲಿನವ ಹೊಂದುವಾ | ಬಯಲಾಧಾರ ನೀನಲ್ಲವೇ 1 ಸೃಷ್ಟಿಯೊಳಗ ಕಮನೀಯ ಲಾವಣ್ಯದು | ತ್ಕøಷ್ಟತರ ಮೋಹನ ರೂಪವಾ | ದೃಷ್ಟಿಲಿ ಕಾಣುತ ಸುಖದೋಳಗಾಗುವ | ದೃಷ್ಟಸ್ವ ತೇಜ ನೀನಲ್ಲವೆ 2 ಕಮಲ ಪಾರಿಜಾತ ಮಲ್ಲಿಗೆ ಮಕ | ರಂಗದೊಳಗ ಸುಳಿದಾಡುತ | ಮಂದ ಮಾರುತ ಬಂದು ಸೋಕಲು ನಲಿವಾ | ಸುಂದರ ರೂಪನು ನೀನಲ್ಲವೆ 3 ರಸಭರಿತ ಬೇರೆ ಬೇರೆ ದೋರುತಲಿಹಾ | ಅಸಮತೆರೆದ ಪದರ್ಥವನು | ರಸನಾದಿ ಕೊಂಡು ಸವಿಗೆ ತಲೆದೂಗುವಾ | ಕುಶಲ ಭೋಕ್ತನುನೀನಲ್ಲವೇ 4 ಚೆನ್ನಾಗಿ ಕಸ್ತೂರಿ ಪುಳಕವ ಕೂಡಿಸಿ | ಪನ್ನೀರವನು ಮೇಲೆದಳಿದು | ಉನ್ನತ ಚಂದನ ಲೇಪಿಸೆ ಸುವಾ | ಸನೆ ಕೊಂಬುವ ನೀನಲ್ಲವೇ 5 ಅಷ್ಟದಳ ಕಮಲದಳ ಗದ್ದುಗಿಯೊಳು ನಿಂದು | ಅಷ್ಟಮ ಸ್ಥಳಗಳ ಮುಟ್ಟಿಸಿ | ನೆಟ್ಟಿನೆ ಮುಖದೊಳು ಸವಿಸವಿ ಮಾತವ | ಸ್ಪಷ್ಟದಿ ನುಡಿಪ ನೀನಲ್ಲವೇ 6 ಭಜಕನ ಮಾಡಿ ಸೌಮ್ಯತನದಿ ಕರದಿಂದ | ರಜತಮ ವಿರಹಿತ ದಾನವನಾ | ದ್ವಿಜರಿಗೆ ಕುಡಿಸಿ ಅದರಶ್ರಯ ಕೊಂಬುವ | ನಿಜಶಯ ಕರ್ತನು ನೀನಲ್ಲವೇ 7 ಪವನಭ್ರವ ನಡೆಸುವಪರಿಚರಣದಿ | ಜವದಿ ಸುಕೇತ್ರ ಯಾತ್ರೆಯಾ | ಬವರದಿ ಮಾಡಿ ಪುಣ್ಯ ಅರ್ಪಿಸಿ ಕೊಂಬಾ | ಭುವನ ಪಾವನ ನೀನಲ್ಲವೇ 8 ರಸನುಂಡು ಕಬ್ಬ ಹಿಪ್ಪಿಯುಗುಳುವಂತೆ | ಅಸಮತೆ ರಚಿಸಿ ಸರ್ವಾಂಗರ | ರಸವಿತ್ತು ಮಲವಘ ಮುಖದಿಂದ ಪವನದಿ | ಬಿಡಸುವನು ನೀನಲ್ಲವೇ 9 ಅಂಗನೆಯರ ಧೃಡಾಲಿಂಗನವನು ಮನ| ದಿಂಗಿತದಂದದಿ ಗೈಯ್ಯಲು | ಅಂಗಸಂಗದ ಲೋದಗುವ ಭೋಗಿಪ | ಅಂಗಜ ಜನಕ ನೀನಲ್ಲವೇ 10 ಯಂತ್ರವಾಹಕ ನಂದದಿ ಜಗನಿರ್ಮಿಸಿ | ಚಿತ್ರ ವಿಚಿತ್ರವ ದೋರುವಾ | ಅಂತ್ರ ಬಾಹ್ಯವ್ಯಾಪಕ ಮಹಿಪತಿ ಸುತ ಪ್ರಭು | ಸೂತ್ರಧಾರಿ ನೀನಲ್ಲವೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಪರದೈವ ಚತುರ್ದಶ ಲೋಕಕೆ | ಉರಗನ ಮುಂಡಿಕೆ ತುಳುಕಿ ಪೇಳುವೆ ನಾನು ಪ ಮುನಿಗಳೆಲ್ಲ ನೆರೆದು ಸದ್ವರವ ಮಾಡುತಲಿ | ಮನ ಬಂದ ಹಾಗೆ ಅರ್ಪಿಸುತಿರಲು | ಮುನಿ ನಾರದನು ಕೇಳೆ ಭೃಗು ಮುನಿಯನು ಕಳುಹಿ | ವನಜನಾಭನೆ ದೈವವೆಂದು ನಿರ್ಣೈಸಿದರು1 ದುರ್ವಾಸ ಮುನಿಪಗೆ ಚಕ್ರ ಎಡೆಗೊಂಡಿರಲು | ಅಜ ಗಿರೀಶಾ || ಗೀರ್ವಾಣರಾದ್ಯರು ಪರಿಹರಿಲಾರದಿರೆ | ಸರ್ವೋತ್ತಮನೆ ಒಬ್ಬ ಹರಿಯೆಂದು ಸಾರಿದರು 2 ಕರಿ ಬಾಧೆಯನು ಬಡುತಲಿ | ಕಾವವಾತನೆ ದೈವ ಎಂದು ಕೂಗೆ || ನಾವು ತಾವು ಎಂದು ಎಲ್ಲರು ಸುಮ್ಮನಿರೆ | ತಾವ ಕಾಕ್ಷನೆ ಕಾಯ್ದಾ ಪರದೇವತೆ ಎಂದು 3 ಹÀಯಮುಖನು ವೇದಗಳು ಕದ್ದೌಯೆ ಸಕಲರು | ಭಯಬಿದ್ದು ನಿತ್ರಾಣರಾಗಿರಲು || ಜಯದೇವಿ ರಮಣನು ವೇದವನು ತಂದು ಜಗ | ತ್ರಯಕೆ ಒಡೆಯನೆನೆಸಿಕೊಂಡ ಪರನೆಂದು 4 ಮೊದಲು ನಿರ್ಣಯವಾಗಿ ಇರಲಿಕ್ಕೆ ಮಂದಮತಿ | ಮದಡ ಮನುಜರೆಲ್ಲ ನೆಲೆಗಾಣದೆ || ಮದನ ಪಿತ ವಿಜಯವಿಠ್ಠಲನ ಒಲಿಸಿಕೊಳ್ಳದೆ | ಮದ ಗರ್ವದಲಿ ನುಡಿದು ನರಕದಲ್ಲಿ ಬೀಳುವರೂ5
--------------
ವಿಜಯದಾಸ
ಹರಿ ಪರಮಪುರುಷ ಮಿಕ್ಕಾಮರರೆಲ್ಲ ಅಚ್ಯುತನ ಚರಣಸೇವಕರೆಂದು ನೆರೆ ನಂಬಿರೊ ಪ. ಒಂದುಮನೆಯೊಳೆರೆಡು ಕೇಣಿಯಲ್ಲಿಪ್ಪುವರ ಒಂದಾದರೆಂದು ಬಗೆಯೆ ಬುಧರಿಗುಚಿತವೆ ಇಂದಿರೇಶನು ಭಾಗಭಾಗವ ತಾಳಿ ಒಂದು ಪ್ರತಿಮೆಯೊಳಿದ್ದರೊಂದಾಹರೆ 1 ಒಬ್ಬನಿಂದಲಿ ಸಾಯನೆಂಬೋ ರಕ್ಕಸರೊಲ್ಲರೊಬ್ಬರ ರ್ಧಭಾಗವ ತಾಳಿ ಐತಂದು ಕೊಬ್ಬಮುರಿವರು ಖಳನ ಹರಿಹರರು ತಾವೀಗ ಒಬ್ಬನಿಂದಲಿ ದನುಜನೆಂತಳಿದನು 2 ನರಸಿಂಹನಂತೆ ಕೃಷ್ಣನು ತನ್ನ ಲೀಲೆಯಲಿ ಹರನಂದವ ತಾಳಿ ಗುಹನ ಗೆಲಿದನು ಗಡಾ ಪರಿಪರಿ ವೇಷದಲಿ ನಟನಂತೆ ನಲಿವ ದೇ- ವರದೇವನಿರವನಾವನು ಬಲ್ಲನು 3 ಆವನಂಘ್ರಿಯ ತೀರ್ಥ ಗಂಗೆಯಾದಳು ಭಸ್ಮ ದÉೀವರಿಪುವನು ಗೆಲಿದ ಭೃಗುಮುನೀಂದ್ರನು ಆವವನು ಮೂರ್ಲೋಕದೊಳಧಿಕನೆಂದೊರೆದ ಆ ವಿಷ್ಣು ಹಯವದನ ಹರಿಯಂತೆ 4
--------------
ವಾದಿರಾಜ
ಹರಿ ಪುಟ್ಟಿಸಿದಾ ವೃಕ್ಷದಿ ಪುಟ್ಟಿದ ಎಳೆಸಸಿಯೆ ಬಾಳೆನ್ನ ಕುಲದಾ ಬೆಳದಿಂಗಳೆ ಪ. ತಂದೆ ತಾಯಿಯ ಮಾತು ಮರೆಯದಿರು ಎಲೆಸಸಿಯೆ ಇಂದಿರಾಪತಿ ಕರುಣಕ್ಕೆ ಪಾತ್ರನೆಂದೆನಿಸಿ ಇಂದು ನೀನಖಿಳಜನ ಸಂದಣಿಯೊಳು ಬೆಳಗು ಚಂದ್ರ ಬಾನೊಳಗೆಸೆವ ತೆರನಂತೆ ಪೊಳೆದು1 ಬಾ ಹಿರಿಮೆ ಬೇಡವು ನಿನಗೆ ಹಿರಿಯರಾಜ್ಞೆಲಿರಿರಲು ಕರೆಕರೆಯುಬಾರದೊ ತರಳ ಶಿಶುವೆ ಹಿರಿಮೆಗೆ ಕೊರತೆಯುಂಟೆ ಗುರುಹಿರಿಯರಾಜ್ಞೆಯಲಿರಲು ದುರುಳರನು ಸರಸದೊಳು ಕೆಣಕದಿರು ಎಲೆಸಸಿಯೆ 2 ದಧಿ ಮಧುರಾಕಿಂತ ಅಧಿಕದ ಚೊಕ್ಕ ಮಾತುಗಳಾಡು ನಿನ್ನ ದಿಟ್ಟ ಬಾಯೊಳಗೆ ಚಿಕ್ಕವನಲ್ಲವೇ ಭಕ್ತಪ್ರಲ್ಹಾದ ಧ್ರುವ ಕೇಳೊ ಅವರಂತೆ ಚಿಕ್ಕ ಶ್ರೀ ಶ್ರೀನಿವಾಸನ ಹರಕೆಯಲಿ ಬಾಳೊ 3
--------------
ಸರಸ್ವತಿ ಬಾಯಿ
ಹರಿ ಭಜನೆಯ ಮಾಡು ಮನವೇ ಪ ಚರಿತವ ಕೇಳಿ ಹರುಷದಿ ಬಾಳೀ | ಸ್ಮರಿಸುತ ಜಿಹ್ವದಿ ವನಮಾಲಿ ಮನವೇ 1 ತನುಧನವಾಣೀ ಇಂದ್ರಿಯ ಶ್ರೇಣಿ | ಕಮಲ ಪಾಣಿ ಮನವೇ 2 ಗುರುಮಹಿಪತಿ ಪ್ರಭು ಧರಿಯೊಳಿದು | ಇಹಪರ ಗತಿಮನವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಹರಿ ವಲಿಯಾ ನಮ್ಮ ಹರಿವಲಿಯಾ ಪ ಮರುತನ ಪೊಂದದ ಅಸುರರಿಗೆಂದಿಗು ಅ.ಪ. ಹರಿಕಥೆ ಕೇಳದೆ ಹರಟೆಗಳಾಡುತ ಸಿರಿಮದ ವಿಷಯದಿ ಮೆರೆಯುವ ನರರಿಗೆ 1 ಮಾನಿನಿ ಮನೆಯಭಿಮಾನವ ತೊರೆಯದೆ ಜ್ಞಾನವ ಘಳಿಸದ ಶ್ವಾನನಿಗೆಂದಿಗು 2 ತಾನುಡಿ ವಂದದಿ ತಾನೇ ನಡೆಯದ ಜ್ಞಾನಿಯ ತೆರದಿಹ ಹೀನನಿ ಗೆಂದಿಗು 3 ನಾನೇ ಕರ್ತನು ನಾನೇ ಭೋಕ್ತನು ನಾನೇ ಯೆಂಬೀ ದನುಜರಿಗೆಂದಿಗು 4 ದೋಷವಿವರ್ಜಿತ ಶ್ರೀಶನೆದೊರೆ ಸರಿ ದಾಸನು ನಾನಿಹೆ ಪೋಷಿಸುಯೆನ್ನದೆ 5 ಗುರುಗಳ ಪಿಡಿಯದೆ ಹರಿಯಡಿ ಬೀಳದೆ ತರಿಯದವಿದ್ಯೆಯ ಅರಿಯದೆ ವಿದ್ಯೆಯ 6 ವೇದವ ನೊಡದೆ ಸಾಧುಗಳ್ಪಡಿಯದೆ 7 ನನ್ನದು ನಿನ್ನದು ನಿನ್ನದೆ ಸಕಲವು ನೀನೇ ಧನಗತಿ ನನಗೈಯನ್ನದೆ 8 ಸಿರಿಕೃಷ್ಣವಿಠಲನೆ ವರಪುರುಷೋತ್ತಮ ಉರುತರ ಭಕ್ತಿಲಿ ಪೊರೆಯನ್ನದೆ 9
--------------
ಕೃಷ್ಣವಿಠಲದಾಸರು
ಹರಿ ವಿಠಲ - ವಿಠಲ ಜಯ ವಿಠಲಾ ಹರಿ ವಿಠಲ - ಜಯ ವಿಠಲ ಪ ಜಯವಿಠಲಾ ನಮೋ ವಿಠಲಾ ಅ.ಪ ಹೇ ಮುರಾರೀ ಶ್ರೀ ಹರೀ ಬಾರೈ ಕೃಪಾಶರನಿಧಿ ಶೌರೀ ಶರಣಾಭರಣನೆಂದೆ ಬಿರುದನ್ನು ಕೇಳಿ ಬಂದೆ ಅರಿಯೆ ಇನ್ನೊಂದ ತಂದೆ ನೀನಾಗಿ ಪೊರೆಯೆಂದೆ ಇನ್ನು ಮುಂದೇ 1 ಇಂದಿರಾ ಮಂದಿರಾ ಹೇ ಸುಂದರಾನಂದ ಕುವರ ವರಾ ಇಂದೀವರಾಕ್ಷ ನಿನ್ನಾ ಸಂದರುಶನವೆನ- ಗೆಂದಿಗಾಹುದೋ ಮನವಾ ನಂದ ಹೊಂದುವುದು ಅಂದೇ 2 ಸರ್ವೇಶಾ ಶಾಶ್ವತ ಸರ್ವೋತ್ತಮ ಪರಮೋದಾರವರ ಸರ್ವಕಾರಣ ಕರ್ತಾ ಸರ್ವಸ್ವತಂತ್ರ ಶಕ್ತ ಸರ್ವತ್ರದಲಿ ವ್ಯಾಪ್ತ ಸರ್ವಾಂತರ್ಯಾಮಿ ಗುಪ್ತ ಶಿರಿಕಾಂತ 3
--------------
ಲಕ್ಷ್ಮೀನಾರಯಣರಾಯರು
ಹರಿ ವಿಮುಖನಾದ ಮನುಜಶ್ವಪಚ ಶ್ರೇಷ್ಠನು | ಹರಿವಲುಮೆ ಕಂಡ ನರನು ಪರಮ ಶಿಷ್ಠನು ಪ ಹರಿಯ ಕಾಣದ ಕಣ್ಣು ನೌಲಗರಿಯಾ ಕಣ್ಣವು | ಹರಿಯ ಕಥೆ ಕೇಳದ ಶ್ರವಣಾ ಬಧಿರ ಶ್ರವಣವು | ಹರಿಯ ನಿರ್ಮಾಲ್ಯ ಕೊಳದ ಘ್ರಾಣ ಲೆತ್ತಿ ಘ್ರಾಣವು | ಹರಿಗೆರಗದಂಗ ತ್ರಾಣ ಬೆಚ್ಚಿನ ತ್ರಾಣವು 1 ಹರಿಯನ್ನದ ಮುಖವು ರಾಜ ಬಿರದ ಮುಖಗಳು | ಹರಿಸೇವೆ ಮಾಡದ ಕೈಯ್ಯಾ ಕೀಲಿ ಕೈಗಳು | ಹರಿಯಾತ್ರೆ ಇಲ್ಲದ ಕಾಲು ಹೊರಸಿನ ಕಾಲ್ಗಳು | ಹರಿ ವಿಷಯ ವಿಲ್ಲದ ವಿದ್ಯೆದೊಂಬನ ವಿದ್ಯಗಳು 2 ಹರಿಗರ್ಪಣೆ ಅಲ್ಲದಯಜ್ಞ ವೇಷಿಕ ಕರ್ಮವು | ಬರುದೇ ಮೌನ ವೃತಗಳೆಲ್ಲ ಬಕನ ಧರ್ಮವು | ಹರಿಭಕ್ತಿರಹಿತ ತಪದಿ ಬಿಡದು ಜನ್ಮವು | ಗುರು ಮಹಿಪತಿಸ್ವಾಮಿ ಭೋಧಿಸಿದನು ಮರ್ಮವು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿ ಎನ್ನಬಾರದೇ ಮನವೇ ನೀನು ಪ ಕಂಡವರಾ ಬಿಡ ಮಾತುಗಳಾಡುತ | ಭಂಡತನದಿ ಫಲವೇನು 1 ಊರಗುದ್ದಲಿ ಕೊಂಡು ನಾಡಗಾವಲಿಯಾ | ದಾರಿ ತಿದ್ದುವರೇ ತಾನು 2 ಮಹಿಪತಿ ಸುತ ಪ್ರಭು ನಾಮವ ನೆನೆದರೆ | ಪರ ಸುಖಕರ ಧೇನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿ ಕೃಷ್ಣ ಗೋವಿಂದ ಪ ಮಾಧವ ಗೋವಿಂದ ಅ.ಪ ಕೇಶವ ನಾರಾಯಣ ಗೋವಿಂದ ವಾಸುದೇವ ಶ್ರೀ ಗೋವಿಂದ ಶ್ರೀಶ ಜನಾದರ್Àನ ಗೋವಿಂದ | ಹರಿ ದಾಸ ಜನಾವನ ಗೋವಿಂದ1 ವಾಮನ ದಾಮೋದರ ಗೋವಿಂದ ಕಾಮಿಕದಾಯಕ ಗೋವಿಂದ ರಾಮ ರಘೂತ್ತಮ ಗೋವಿಂದ | ಗುಣ ಧಾಮ ದಯಾನಿಧೇ ಗೋವಿಂದ 2 ಶ್ರೀಧರ ಭೂಧರ ಗೋವಿಂದ ಆದಿಮೂಲ ಶ್ರೀ ಗೋವಿಂದ ವೇದ ವೇದ್ಯ ಹರಿ ಗೋವಿಂದ | ನಿಜ ಪಾದ ಭಜಕಪ್ರಿಯ ಗೋವಿಂದ 3 ಪದ್ಮದಳಾಂಬಕ ಗೋವಿಂದ ಪದ್ಮನಾಭ ಶ್ರೀ ಗೋವಿಂದ ಪದ್ಮಿನಿ ಅರಸನೆ ಗೋವಿಂದ | ಕರ ಪದ್ಮದಿ ಪಿಡಿ ಎನ್ನ ಗೋವಿಂದ4 ಕರಿಗಿರೀಶ ನರಹರಿ ಗೋವಿಂದ ಪರತರ ಮುರಹರ ಗೋವಿಂದ ಗರುಡಗಮನ ಶ್ರೀ ಗೋವಿಂದ | ಹರಿ ಹರಿ ಹರಿ ಹರಿ ಹರಿ ಗೋವಿಂದ 5
--------------
ವರಾವಾಣಿರಾಮರಾಯದಾಸರು
ಹರಿ ಹರಿ ಹರಿಯೆನ್ನಿ ಹರಿಯ ನೆನವಿಗೊಮ್ಮೆ ತನ್ನಿ ಧ್ರುವ ಹಿಡಿದು ನಿಜ ಒಂದು ¥ಥ ಪಡೆಯಬೇಕು ಸ್ವಹಿತ ನೋಡಿ ಗೂಢಿನೂಳು ಗುರುತ ಕೊಡುವ ನೋಡಿ ಗುರುನಾಥ ಒಡಯನಹುದಯ್ಯನೀತ ಪೊಡವಿಯೊಳು ಶ್ರೀನಾಥ ಮಾಡಿ ಭಕ್ತಿ ಏಕಚಿತ್ತ ಕೂಡಿ ಜ್ಞಾನಸನ್ಮತ 1 ಹಿಡಿದು ನೀವು ಗುರುಪಾದ ಮಾಡಬ್ಯಾಡಿ ಭೇದ ಕಡಿಯಬೇಕು ಕಾಮಕ್ರೋಧ ಕೂಡಿ ನಿಜಸುಭೋದ ಬೋಧ ಗೂಢಗುಪ್ತವಾಗಿಹ್ಯದ ಕೊಂಡಾಡುತಿಹ್ಯ ವೇದ ಬಿಡದೆ ಮಹಿಮೆ ನಿರ್ಗುಣದ 2 ನಾವು ನೀವುವೆಂಬ ನುಡಿ ಗೋವಿಸುವದೀಡ್ಯಾಡಿ ಹ್ಯಾವ ಹೆಮ್ಮೆಹಿಡಿಯಬ್ಯಾಡಿ ಭಾವ ಬಲಿದು ಪೂರ್ಣ ನೋಡಿ ಕಾವ ಕರುಣನ ಕೂಡಿ ಭವಬಂಧನ ನೀಗಿ ಬಿಡಿ ಪಾವನ್ನವಾದ ನೋಡಿ ಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹರಿಕಥಾಮೃತಸಾರದ ಫಲಶ್ರುತಿ ಶ್ರೀ ಮದಶ್ವಗ್ರೀವನೊಲುಮೆಗೆ ಧಾಮರೆನಿಪ ಶ್ರೀ ವಾದಿರಾಜರುಪ್ರೇಮದಲ್ಲಿ ಜಗನ್ನಾಥದಾಸರ ಸ್ವಪ್ನದಲಿ ಬಂದುಶ್ರೀ ಮನೋರಮನರಿಪ ತತ್ವ ಸು ಸೌಮನದ ಮಾಲಿಕೆಯನಿತ್ತು-ದ್ದಾಮ ಗ್ರಂಥವ ರಚಿಸಿರೆನುತಲಿ ನುಡಿದ ಕಾರಣದೀ ಪ ಭಾಗವತ ಗಾರುಡ ಭವಿಷ್ಯೋತ್ತರ ಪುರಾಣಚಾರು ವಿಷ್ಣು ರಹಸ್ಯ ಪಂಚರಾತ್ರಾಗಮ ವಾಯುಸಾರ ಗುರವೃತ್ಪ್ರವೃತ್ತವು ಈರ ಸಂಹಿತಾದಿತ್ಯವಾಗ್ನೇಯಪಾರ ರಸಗಳ ತೋರ್ಪ ಶ್ರೀ ಗುರು ಮಧ್ವ ಶಾಸ್ತ್ರದಲೀ 1 ಸಾರ ಕ್ರೋಢೀಕರಿಸಿ ದೀನೋ-ದ್ಧಾರಗೋಸುಗ ಹರಿಕಥಾಮೃತ ಸಾರವನು ರಚಿಸೀಸ್ಥೈರ್ಯ ಮಾನಸದಿಂದ ಭಾವೀ ಭಾರತೀಪತಿ ವಾದಿರಾಜರಭೂರಿ ತೋಷಕೊಪ್ಪಿಸುತಲಾಪಾರ ಮುದ ಪಡೆದೂ 2 ಸಾಸಿರಾರ್ಥಗಳೊಂದು ಪದಕವಕಾಶವಿರುವೋ ಶ್ರೀದ ವಿಷ್ಣುಸಾಸಿರದ ನಾಮವನು ಯೋಚಿಸಿ ಇಹರು ಗ್ರಂಥದಲೀಈಸು ರಹಸ್ಯವನರಿತು ಪಠಪಗೆ ಏಸು ದೂರವೊ ಮುಕ್ತಿಬರಿದಾ-ಯಾಸ ಬಟ್ಟುದರಿಂದ ಫಲವೇನಿಲ್ಲವೀ ಜಗದೀ 3 ಹ ಯೆನಲು ಹರಿಯೊಲಿಯುವನು ತಾ ರಿ ಯೆನಲು ರಿಕ್ತತ್ವ ಹರಿಸುವಕ ಯೆನಲು ಕತ್ತಲೆಯೆಂಬಾಜ್ಞಾನವನು ಪರಿಹರಿಪಾಥಾ ಯೆನಲು ಸ್ಥಾಪಿಸುವ ಜ್ಞಾನ ಮೃಯೆನಲು ಮೃತಿಜನಿಯ ಬಿಡಿಸುವತ ಯೆನಲು ಹರಿ ತನ್ನ ಮೂರ್ತಿಯ ತೋರುವನು ನಿತ್ಯಾ 4 ಸಾ ಯೆನಲು ಸಾಧಿಸುವ ಮುಕ್ತೀ ರ ಯೆನಲು ರತಿಯಿತ್ತು ರಮಿಪನುಕಾಯ ವಾಙ್ಮನದೆಂಟು ಅಕ್ಕರ ನುಡಿದರದರೊಳಗೇಶ್ರೀಯರಸು ವಿಶ್ವಾದಿ ಅಷ್ಟೈಶ್ವರ್ಯ ರೂಪದಿ ನಿಂತು ತಾ ಪರ-ಕೀಯನೆನಿಸದೆ ಇವನ ಮನದೊಳು ರಾಜಿಪನು ಬಿಡದೇ 5 ಅನಿರುದ್ಧ ಧರ್ಮವು ದೊರಕಿಸುವ ಪರಮ್ಹರುಷದಲ್ಲಿ ಸ-ತ್ವರ ಕಥಾಯೆನೆ ಕೃತಿರಮಣನರ್ಥಗಳ ಹನಿಗರೆವಾವರ ಅಮೃತಯೆನಲಾಗ ಶ್ರೀ ಸಂಕರುಷಣನು ಕಾಮವನು ಯೋಜಿಪಸರಸ ಸಾರೆನೆ ವಾಸುದೇವನು ಮೋಕ್ಷ ಕೊಡುತಿಪ್ಪಾ 6 ನಿತ್ಯ 7 ಚಾರುತರದೀ ಹರಿಕಥಾಮೃತ ಸಾರಕೃತ ಋಷಿ ಭಾರದ್ವಾಜರುಸಾರ ಹೃದಯದಿ ನಿಂತು ಸಕಲ ಸು ಶಾಸ್ತ್ರದಾಲೋಕಾಸಾರಿ ಸಾರಿಗೆ ಮಾಡಿ ಮಾಡಿಸಿ ಸೂರೆಗೊಟ್ಟಾನಂದ ಚಿನ್ಮಯಪಾರವಾರಾಶಯನ ಶ್ರೀ ಕಮಲಾಪತಿ ವಿಠಲಾ 8
--------------
ಕಮಲಪತಿವಿಠ್ಠಲರು