ಒಟ್ಟು 7584 ಕಡೆಗಳಲ್ಲಿ , 131 ದಾಸರು , 4531 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನವ ನಾನಲ್ಲೇನೊ ರಂಗ ನಿರ್ಜರೋತ್ತುಂಗ ಪ.ಹುಚ್ಚ ಮಗನ ತಾಯಿತಂದೆ ಹಚ್ಚ ಬಲ್ಲರೆ ಸಾಕದೆನಿಚ್ಚನಿನ್ನ ನಾಮ ಕಾಯೋ ನಿಶ್ಚಯಬುದ್ಧಿ ನೀಡೀಗೆ1ಹಣವಳ್ಹೇವಲ್ಲದಿರೆ ಹೀನೈಸಿ ಚೆಲ್ಲುವರೆಜನಿತದುರ್ಗುಣರಾಶಿ ಜನಕ ನೀ ನಿವಾರಿಸೊ 2ಶರಣು ಹೊಕ್ಕವರವಸರಕೊದಗುವ ದೇವಸೇರಿದೆ ಶ್ರೀ ಪಾದಾಬ್ಜವಸಿರಿಪ್ರಸನ್ವೆಂಕಟದೇವ3
--------------
ಪ್ರಸನ್ನವೆಂಕಟದಾಸರು
ನಿರುತ ನಿನ್ನಯ ಲೀಲೆಯನೆ ಹಾರೈಸುವೆ ಮುದ್ದುತಾರೊ ಕಂದಕಿರುಗುರುಳಿನ ಚೆಲ್ವ ಬಾಲಕರನ್ನನೆ ಮುದ್ದು ತಾರೊ ಪ.ನಿದ್ರೆ ಪೂರಿತವಿಲ್ಲದೆ ನಡೆಯುತ ಬಂದು ಮುದ್ದು ತಾರೊ ಕಂದಮೆದ್ದು ಕಾಯಿ ಕಳಲೆ ಕಿರುನಗೆ ಜೊಲ್ವಾಯ ಮುದ್ದು ತಾರೊ 1ಧುಡುಮೆಂಬ ಕಡೆವ ದನಿಗೆ ದುಡು ದುಡು ಬಂದುಮುದ್ದು ತಾರೊ ಕಂದಉಡುಗೆ ಜಗ್ಗುತ ತೊದಲ್ನುಡಿದು ಮೊಗವ ನೋಡಿ ಮುದ್ದು ತಾರೊ 2ನವನೀತನೀಡಲು ಆಯೆಂಬ ಪುಟ್ಬಾಯ ಮುದ್ದು ತಾರೊ ಕಂದಹವಣಾದ ಸಣ್ಹಲ್ಲು ಎಳೆದುಟಿ ಸೊಂಪಿನ ಮುದ್ದು ತಾರೊ 3ಅಂಬೆಗಾಲಿಕ್ಕುತೆನ್ನನು ಕಂಡು ಕರವೆತ್ತಿ ಮುದ್ದು ತಾರೊ ಕಂದಕಂಬುಕಂದರ ನಿನ್ನ ಮನದಣಿಯಪ್ಪುವೆ ಮುದ್ದು ತಾರೊ 4ಚಿನ್ನರ ಬಡಿದು ನಾನಲ್ಲೆಂದು ಬಾಯಾರ್ವ ಮುದ್ದು ತಾರೊ ಪ್ರಸನ್ನವೆಂಕಟಾಚಲವಾಸವಿಲಾಸನೆ ಮುದ್ದು ತಾರೊ 5
--------------
ಪ್ರಸನ್ನವೆಂಕಟದಾಸರು
ನಿಲ್ಲಬೇಕಯ್ಯಾ ನೀನು ಕೃಷ್ಣಯ್ಯಾನಿಲ್ಲಬೇಕಯ್ಯಾ ನೀನು ಪನಿಲ್ಲಬೇಕಯ್ಯಾ ನೀಮಲ್ಲಮರ್ದನಸಿರಿವಲ್ಲಭಎನ್ನ ಹೃದಯದಲಿ ಸತತಅ.ಪಸುಪ್ಪಾಣಿಮುತ್ತಿಟ್ಟು ನೋಡುವೆ ನಿನ್ನಚಪ್ಪಾಳಿ ತಟ್ಟುತ ನಾ ಪಾಡುವೆ ||ಅಪ್ಪ ಶ್ರೀ ಕೃಷ್ಣ ನಿನ್ನನೆತ್ತಿ ಮುದ್ದಿಸಿಕೊಂಬೆಸರ್ಪಶಯನ ಕೃಪೆ ಮಾಡೆಂದು ಬೇಡುವೆ 1ಚೆಂದದ ಹಾಸಿಗೆ ಹಾಸುವೆಪುನಗುಗಂಧದ ಕಸ್ತೂರಿಯ ಪೂಸುವೆ ||ತಂದು ಮುದದಿ ಮುತ್ತಿನ ಹಾರ ಹಾಕುವೆಅಂದದಿಂದಲಿ ನಿನ್ನನೆತ್ತಿ ಮುದ್ದಿಸಿಕೊಂಬೆ 2ನೀಲದ ಕಿರೀಟವನಿಡುವೆ ಬಲುಬಾಲಲೀಲೆಗಳನು ಪಾಡುವೆ ||ಚೆಲ್ವ ಶ್ರೀಪುರಂದರವಿಟ್ಠಲರಾಯನೆನಿಲ್ಲು ಎನ್ನ ಮನದಲಿ ಒಂದೇ ಗಳಿಗೆ 3
--------------
ಪುರಂದರದಾಸರು
ನೀ ಕಾಯ್ದರೆ ಕಾಯ್ದಾ ಬಗೆಯಲ್ಲದೆ ಬೇರೆಏಕಮತಿ ಎನ್ನೊಳಿಲ್ಲಶ್ರೀಕಾಂತ ಕರುಣಿ ನೀನಕ್ಲಿಷ್ಟ ಕಾಣಯ್ಯಬೇಕೆಂದು ಸಾಕುತಿಹೆ ಹರಿಯೆ ಪ.ವೇದ ಶಾಸ್ತ್ರ ಪುರಾಣ ಸಾರಾರ್ಥ ತಿಳಿದರಿಯೆಸಾಧನ ಸುಮಾರ್ಗವರಿಯೆಆದರದಿ ಭಕುತಿ ಬಲಿದೊಮ್ಮೆ ಪೂಜಿಸಲರಿಯೆಮಾಧವಮುರಾರಿ ಕೃಷ್ಣಾ ತುಷ್ಟಾ1ಮನ ಮರ್ಕಟವು ತನ್ನ ಮತಿಯಲ್ಲಿ ವಿಷಯ್ಯೆಂಬವನಕೆ ಮೆಚ್ಚಿದೆ ನೋಡಯ್ಯವನಚರತ್ವವನೀಗಿಕ್ಷಣವಾರೆ ತವಚರಣವನಜರಸವುಣ್ಣದಲ್ಲೈ ರಂಗಯ್ಯ 2ಜನುಮ ಜನುಮದ ತಾಯಿ ತಂದೆಗುರುಬಂಧುನನ್ನನು ಗತಿಗಾಣಿಪ ದಾತನೆಎನ್ನಭವತಪ್ಪುಗಳನರಸದಿರು ಅರಸಿದರೆನಿನಗುಚಿತೆ ಪ್ರಸನ್ವೆಂಕಟೇಶ ಶ್ರೀಶ 3
--------------
ಪ್ರಸನ್ನವೆಂಕಟದಾಸರು
ನೀ ಸಾಕದಿದ್ದರೆ ಸಾಕುವರಾರೊದಾಸಾಭಿಮಾನಿ ನೀನಲ್ಲದಾರೊ ಕೃಷ್ಣಾ ಪ.ನಿನ್ನವರನು ಬಾಧಿಸ ಬಂದ ಮೂರ್ಖರುಮುನ್ನೆ ದುರ್ಭಾಗ್ಯರಾಗಿ ಹೋದರುಕುನ್ನಿ ಕಚ್ಚಿದರಾನೆ ಅಳುಕುವುದೆ ರಂಗಎನ್ನ ನಂಬಿಕೆಯ ಮೂರುತಿ ಶ್ರೀನಿವಾಸ 1ಹಸಿದು ಮಳಲ ಮೆದ್ದವನಂತೆ ಕಂಗೆಟ್ಟುತೃಷೆಯಾಗಿ ಬಿಸಿಲ್ದೊರೆಗೋಡುವನಂತೆವಿಷಮ ಮಾನಿಸರನುಸರಿಸುವುದುಚಿತಲ್ಲಬಿಸಜದೇವಿಯರಸ ಸುದಾಮಘಭಂಗ2ಬಂಟರ ಮಾತ ಕೇಳದೆಭಾರತಾಳದೇನುಂಟು ಕಾರ್ಯವು ನಿನಗೆಲೆ ದಯಾಳುಕಂಟಕಜನಕಪಕಾರಿ ದೀನೇಶ ವೈಕುಂಠವಲ್ಲಭ ಪ್ರಸನ್ವೆಂಕಟ ಬಂಧು 3
--------------
ಪ್ರಸನ್ನವೆಂಕಟದಾಸರು
ನೀಚ ಮಾನವರಿಗೆಸಿರಿ ಬಂದರೇನು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಈಚಲ ಮರ ದಟ್ಟ ನೆರಳಾದರೇನು ಪ.ನಾಚಿಕಿಲ್ಲದ ನರರು ಬಾಗಿದರೇನುಹೀಚಿನೊಳಿಹ ಫಲ ಹಣ್ಣಾದರೇನು ಅಪಹೊಲೆಯರೊಳು ಪದುಮಿನಿ ಹೆಣ್ಣು ಹುಟ್ಟಿದÀರೇನುಮೊಲೆಯ ತೊರೆಯದ ನಾಯಿ ಈದರೇನುಕಳಹೀನ ಕಾಮಿನಿಗೆ ಕಾಂತಿ ಹೆಚ್ಚಿದರೇನುಬಿಲದೊಳಗೆ ಸರ್ಪ ಹೆಡೆಯೆತ್ತಿದರೇನು ? 1ಕೋತಿಯ ಮೈಯೊಳುಭಾಂಡ ತುಳಕಲೇನುಹೋತಿನ ಗಡ್ಡವು ಹಿರಿದಾದರೇನುಯಾತಕೂ ಬಾರದ ಬದುಕು ಬಾಳಿದ್ದರೇನುರೀತಿಯಿಲ್ಲದ ನೆರೆಯ ಸ್ನೇಹವಿನ್ನೇನು 2ರಕ್ಷಣೆಯಿಲ್ಲದ ರಾಜ ರಾಜಿಸಲೇನುಭಿಕ್ಷೆ ಹುಟ್ಟದ ಊರು ತುಂಬಿದ್ದರೇನುಲಕ್ಷ್ಯವಿಲ್ಲದವಗೆ ಲಕ್ಷ್ಯ ಬಂದರೇನುಪಕ್ಷಪಾತವಿಲ್ಲದವನ ಅಶ್ರಯವಿನ್ನೇನು 3ಫಣಿಯ ಮಸ್ತಕದ ಮೇಲೆ ಮಣಿಯ ಮಿಂತಲೇನುಉಣಿಸಿ ದಣಿಸದ ಧನಿಯಿದ್ದರೇನುಋಣಗೇಡಿ ಮಕ್ಕಳ ರಟ್ಟೆ ಬಲಿತರೇನುಕ್ಷಣಚಿತ್ತವಿಲ್ಲದವನ ಸ್ಮರಣೆಯು ಇನ್ನೇನು 4ಸಾಕಲಾರದಾತನ ಸತಿಯ ಮೋಹವೇನುಜೊತೆ ಮಾಡದಾ ಹಣ ಗಳಿಸದರೇನುಕಾಕುಮಾನವರ ಸೇವೆ ಮಾಡಿದರೇನುಬೇಕೆಂದು ಭಜಿಸಿರೋ ಪುರಂದರವಿಠಲನ 5
--------------
ಪುರಂದರದಾಸರು
ನೀನಲ್ಲದನ್ಯರೆ ಸಲಹಲು ಕಾಯೊ |ಜಾನಕೀಪತಿ ದೂತ ಹನುಮಂತ ಪಗುರುವೆ ನಿನ್ನಯಪಾದಭಜಿಸುವರನ್ನ |ಧರೆಯೊಳು ಬನ್ನಬಡಿಸುವೋರೆ ||ಗಿರಿಸುತ ನೀ ಗತಿಯೆನಲಾಗ ಬೇಗ |ಪೊರೆದೆಯಾತನ ಜಲಧಿಯೊಳಿಟ್ಟು1ರವಿಜಶಕ್ರಜನಿಂದ ಬಳಲುತ ಬಂದು |ಪವನ ಪಾಲಿಪುದೆನ್ನಲಾಕ್ಷಣ ||ಭುವನೇಶನಿಂದ ವಾಲಿ ಕೊಲ್ಲಿಸಿ ಕಾಳೀ |ಧವಸುಗ್ರೀವನ ಭಯ ಬಿಡಿಸಿದೆ2ತಂದೆ ಪ್ರಾಣೇಶ ವಿಠ್ಠಲನಿಗೆ ನಿನಗಂ |ದುಂಟಿಂದಿಲ್ಲೇ ಈ ಮಹಿಮೆಯು ||ಬಂದದುರಿತನಿವಾರಣ ಮಾಡಿ ದಯ-ದಿಂದ ಪಾಲಿಸೋ ನಿನ್ನ ದಾಸರ 3
--------------
ಪ್ರಾಣೇಶದಾಸರು
ನೀನಲ್ಲದೆನಗಾರಿಲ್ಲ ಗೋವಿಂದನೀನಲ್ಲದೆ ಇಹಪರವಿಲ್ಲ ಪಪರರ ಬೇಡಿ ಪಂಥವಾಡಿ ಹೋಯಿತಲ್ಲನರರ ಕೊಂಡಾಡಿ ನಾಲಗೆ ಬರಡಾಯಿತಲ್ಲ ||ಪರವಿಲ್ಲ ಇಹವಿಲ್ಲ ನರಜನ್ಮ ಸ್ಥಿರವಲ್ಲನರಗೆ ಪಾಮರಗೆ ಪಾತಕದ ಪಂಜರಗೆ 1ತನುವು ತನ್ನದಲ್ಲ ತನ್ನವರು ತನಗಿಲ್ಲಧನಧಾನ್ಯ ಸಂಪತ್ತು ಅವಗಿರದು ||ತನುವು ಹೋಗಿ ಇನ್ನು ಮಣ್ಣು ಕೂಡುವಾಗತನುಮನಕ್ಕೆ - ಇನ್ನಾರಯ್ಯ ಸ್ವಾಮಿ 2ಮಾತಾಪಿತರು ಗೋತ್ರಜರು ಮೊದಲಾಗಿಪ್ರೀತಿಯಿಂದ ಬಹಳ ಸತಿಸುತರು ||ಕೀರ್ತಿಗೆ ಅವರು ಸ್ವಾರ್ಥಕೆ ಇವರು ಸಂಗಾತಿಗಿನ್ನಾರಯ್ಯಪುರಂದರವಿಠಲ3
--------------
ಪುರಂದರದಾಸರು
ನೀನೆ ಗತಿಯೆಂದು ನಂಬಿದೆ ಕಾಯಯ್ಯ ಶ್ರೀನಿವಾಸ ಎನ್ನಹೀನಗುಣಗಳೆಣಿಸಲಿ ಬ್ಯಾಡ ದಯಮಾಡೊ ಶ್ರೀನಿವಾಸ 1ನಾನಾ ದುಷ್ಕøತಫಲವ ಉಂಡೆ ಇನ್ನಾರೆ ಶ್ರೀನಿವಾಸಎಂದೂ ದುರ್ವಿಷಯಕೆಮನ ಎರಗದಂತೆ ಮಾಡೊ ಶ್ರೀನಿವಾಸ 2ಸತ್ಕಥಾ ಶ್ರವಣ ಭಾಗ್ಯವ ಕೊಡುಅನುದಿನಶ್ರೀನಿವಾಸ ಎನ್ನಹೃತ್ಕಮಲದಿ ವ್ಯಕ್ತನಾಗಯ್ಯ ಶ್ರೀನಿವಾಸ 3ಪುತ್ರಕಳತ್ರಮಿತ್ರರು ನಿನ್ನ ದಾಸರೊ ಶ್ರೀನಿವಾಸ ತ್ವದ್ಭøತ್ಯಭೃತ್ಯರ ಪರಿಚಾರಕ ನಾನು ಶ್ರೀನಿವಾಸ 4ಅನಂತ ಜನ್ಮದ ಸತ್ಕರ್ಮ ನಿನಗೇವೆ ಶ್ರೀನಿವಾಸನಿತ್ಯದೀನೋದ್ಧಾರÀ ಪ್ರಸನ್ನವೆಂಕಟ ಮುಕುಂದ ಶ್ರೀನಿವಾಸ 5
--------------
ಪ್ರಸನ್ನವೆಂಕಟದಾಸರು
ನೀನೆ ಪಾಲಿಸು ಕರುಣಾವಾರಿಧಿದೀನಜನರಾಧಾರ ಹರಿಯೆ ಪನಿನ್ನಾಧೀನವು ತೋರ್ಪುದೆಲ್ಲಮಾನವನ ಸ್ವಾಧೀನವೇನಿದೆನಿನ್ನ ನೆರಳಲಿ ಮೂರು ಜಗವುಭಿನ್ನವಿಲ್ಲದೆ ಬದುಕಿ ಬಾಳ್ವುದು 1ನಿನ್ನ ಸಹಾಯವಿಲ್ಲದೀಭವವನ್ನು ಗೆಲಿಯುವ ಸಾಧ್ಯದಾರಿಗೆನಿನ್ನ ಕೃಪಾಕಟಾಕ್ಷದಿಂದಲೆಮುನ್ನ ಹಿರಿಯರು ಧನ್ಯರಾದರು 2ಮತ್ರ್ಯಲೋಕಕ್ಕೆಳೆದು ತಂದೆನ್ನಮರ್ತುಬಿಡುವುದುಚಿತವೇನಯ್ಯನಿರ್ತಸುಖವಿತ್ತು ರಕ್ಷಿಸಭವಕರ್ತುಶ್ರೀಗುರು ರಾಮ ಪ್ರಭುವೆ3
--------------
ರಾಮದಾಸರು
ನೀನೆ ಭಕುತಾಭಿಮಾನಿ ಕರುಣಿ ಪಮರೆಬಿದ್ದ ಭಕುತರ ಪೊರೆಯಲು ತವಸಮಕರುಣಿ ದೇವರ ಕಾಣೆಧರೆಎರಡೇಳರೊಳ್1ಶಿಲೆಯನು ಪೆಣ್ಣೆನಿಸಿ ಕುಲದೊಳು ಕಲೆಸಿದಿಸಲಹಿದಿ ಗಜನ ಮಹ ವಿಲಸಿತಮಹಿಮ ಪ್ರಭು 2ಮೊರೆಯಿಟ್ಟು ಸ್ಮರಿಸುವ ಚರಣದಾಸನ ಆಸೆಕರುಣದಿಂ ಪೂರೈಸು ಪರತರ ಶ್ರೀರಾಮ 3
--------------
ರಾಮದಾಸರು
ನೀನೆಗತಿನೀನೆ ಮತಿ ನೀನೆ ಸ್ವಾಮಿನೀನಲ್ಲದನ್ಯತ್ರ ದೈವಗಳ ನಾನರಿಯೆ ಪನಿನ್ನ ಪಾದಾರವಿಂದದ ಸೇವೆಯನು ಮಾಡಿನಿನ್ನ ಧ್ಯಾನದಲಿರುವ ಹಾಗೆಮಾಡು||ನಿನ್ನ ದಾಸರ ಸಂಗದಿಂದ ದೂರಿಡದೆನಗೆಸನ್ಮಾರ್ಗವಿಡಿಸೊ ಜಗದೀಶ ಅಘನಾಶ 1ಕಮಲನಾಭಿಯೊಳು ಬೊಮ್ಮರ ಪುಟ್ಟಿಸಿದೆ ಹರಿಯೆಕಮಲಸಖಕೋಟಿ ಪ್ರಕಾಶ ಈಶಕಮಲಕರ ತಳದಿ ಅಭಯವನಿತ್ತು ಭಕುತರಿಗೆಕಮಲಾಕ್ಷನೆನಿಸಿದೆಯೊ ಕಮಲಾರಮಣನೆ 2ಶಿಶುಪಾಲ ದಂತವಕ್ತ್ರರ ಶಿರವ ಭೇದಿಸಿದೆಪಶುಪತಿಯ ಆಭರಣ ವೈರಿವಾಹನನೆ ||ಅಸುರಕುಲ ಸಂಹರಿಸಿ ಭಕ್ತಜನರನು ಪೊರೆದೆವಸುಧೇಶಸಿರಿಪುರಂದರವಿಠಲರಾಯಾ3
--------------
ಪುರಂದರದಾಸರು
ನೀನೇ ಅಚ್ಚುತ ನೀನೇಮಾಧವ|ಹರಿಗೋವಿಂದನು ನೀನೆ ||ನೀನೆಗತಿಯೆಂದು ನಂಬಿದ ದಾಸಗೆ |ಅಭಯಕೊಟ್ಟಾತನು ನೀನೆಪಜಲದೊಳು ಪೊಕ್ಕು ಮೈನಡುಗಿಸಿ ಭಾರವ |ತಳೆದಾತನು ನೀನೆ ||ಇಳೆಯ ಕದ್ದ ಸುರನ ದಾಡೆಯಿಂದ ಸೀಳಿ ಕಂಬ |ದೊಳು ಉದ್ಭವಿಸಿದೆ ನೀನೆ 1ಬಲಿಯ ಪಾತಾಳಕೆ ತುಳಿದೆಯೊ ನೀನು ಕೊ-|ಡಲಿಯ ಪಿಡಿದವನು ನೀನೆ ||ಜಲಧಿಯ ದಾಟಿ-ಅಸುರರ ಕಡಿದು |ಲಲನೆಯ ತಂದಾತ ನೀನೆ 2ಗೊಲ್ಲರ ಮನೆಯಲಿ ಬೆಣ್ಣೆಯ ಕದ್ದು |ಕಳ್ಳನೆನಿಸಿದವ ನೀನೆ ||ಬಲ್ಲಿದತ್ರಿಪುರದಿ ಬತ್ತಲೆ ನಿಂತು |ಒಳ್ಳೆ ಹಯವ ಹತ್ತಿದೆ ನೀನೆ 3ಪಾಂಡವರಿಗತಿ ಪ್ರಿಯನೆಂದೆನಿಸಿದ |ಪುಂಡರೀಕಾಕ್ಷನು ನೀನೆ |ಪುಂಡಲೀಕ ಪುರುಷೋತ್ತಮ ಮೂರುತಿ |ಪುರಂದರವಿಠಲನು ನೀನೆ 4
--------------
ಪುರಂದರದಾಸರು
ನೀನೇ ದಯಾಳು ನಿರ್ಮಲಚಿತ್ತ ಗೋವಿಂದನಿಗಮಗೋಚರ ಮುಕುಂದಪಜ್ಞಾನಿಗಳರಸು ನೀನಲ್ಲದೆ ಜಗಕಿನ್ನುಮಾನದಿಂದಲಿಕಾವದೊರೆಗಳ ನಾ ಕಾಣೆಅ.ಪಬಗೆಬಗೆಯಲಿ ನಿನ್ನ ಸ್ತುತಿಪೆನೊನಗಧರಖಗಪತಿವಾಹನನೆ ||ಮಗುವಿನ ಮಾತೆಂದು ನಗುತ ಕೇಳುತ ನೀನುಬೇಗದಿಂದಲಿ ಕಾಯೋ ಸಾಗರಶಯನನೆ 1ದಾನವಾಂತಕ ದೀನ ಜನ ಮಂದಾರನೆಧ್ಯಾನಿಪರ ಮನದೊಳು ಸಂಚರನೆ ||ಮೌನನಾದೆನು ನಿನ್ನ ಧ್ಯಾನಾನಂದದಿ ಈಗಸಾನುರಾಗದಿ ಕಾಯೊ ಸನಕಾದಿ ವಂದ್ಯನೆ 2ಮಂದರೋದ್ಧರ ಅರವಿಂದ ಲೋಚನ ನಿನ್ನ ||ಕಂದನೆಂದೆನಿಸೂ ಎನ್ನ ||ಸಂದೇಹವೇತಕೆ ಸ್ವಾಮಿ ಮುಕುಂದನೆಬಂದೆನ್ನ ಕಾಯೊ ಶ್ರೀಪುರಂದರವಿಠಲನೆ3
--------------
ಪುರಂದರದಾಸರು
ನೀನೇಗತಿಮಾಧವಾ ದೇವರದೇವನೀನೇ ಗತಿಯು ನಮ್ಮ ಮಾನಾಭಿಮಾನವಹಾನಿಗೊಳಿಸದನುಮಾನವಿಲ್ಲದೆ ಕಾಯೋ ಪಸಾಕಾರ ಸೌಭಾಗ್ಯವೂ ಸರ್ವವೂ ಸರ್ವಶೋಕಕ್ಕೆ ಕಾರಣವೂಬೇಕಾದ ಕಡುರಸ ಶಾಕಪಾಕದ ರೂಪಿಶ್ರೀಕೃಷ್ಣ ನಿನ್ನಯ ನಾಮದಿಂದಧಿಕನೆ 1ಸಕಲ ಸಂಭ್ರಮವು ನೀನೇ ನಿನ್ನನು ಎನ್ನಸಖನೆಂದು ನಂಬಿದೆನುಸಕಲ ಚರಾಚರ ಪ್ರಾಣಿಗಳಿಗೆ ಸರ್ವಸುಖದುಃಖವುಣಿಸುವ ಸಕಲ ತಂತ್ರನೇ 2ಆದಿಮೂರುತಿಯು ನೀನೇ ಧರ್ಮಾಧರ್ಮಶೋಧಿಸುವವನು ನೀನೇವೇದಗಮ್ಯನೆ ಯೆನ್ನ ಖೇದಮೋದವ ನಿನ್ನಲ್ಲಿಪಾದಕರ್ಪಿಸಿದೆ ಗೋವಿಂದದಾಸನೆ ಕಾಯೊ 3
--------------
ಗೋವಿಂದದಾಸ