ಒಟ್ಟು 16359 ಕಡೆಗಳಲ್ಲಿ , 135 ದಾಸರು , 7416 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರೆತಿರಲಾರೆ ಮನಸಾರೇ ಹರೇ ಪ ಮರೆತಿರಲಾರೆ ನಾ ಮಹಿತಚಾರಿತ್ರನ ಸರಸಿಜಪತ್ರ ನೇತ್ರನ ಅ.ಪ ಬಗೆಬಗೆ ರತಿಯಲಿ ಜಗವನು ಮೋಹಿಪ ಸುಗುಣನ ಜಗತ್ಪ್ರಾಣನ 1 ಚೇತನರಿಗೆ ಸುಖದಾತನ ದುಃಖ ವಿ ಘಾತನ ಲಕ್ಷ್ಮೀನಾರಾಯಣನ 2 ದಾಸರ ಹೃದಯನಿವಾಸನ ದೋಷನಿರಾಸನ ಶ್ರೀನಿವಾಸನ 3 ವೆಂಕಟರಮಣನ ಕಿಂಕರಶರಣನ ಸಂಕಟಹರ ನಿಷ್ಕಳಂಕನ 4 ಮಾನಿನಿಯ ಅಭಿಮಾನವ ಕಾಯ್ದನ ದೀನರ ಹರ್ಷನಿಧಾನನ 5 ರಾಮನ ದೈತ್ಯವಿರಾಮನ ಪಾವನ ನಾಮನ ಹೃದಯಾರಾಮನ 6 ಧರೆಯೊಳುತ್ತಮಪುಲಿಗಿರಿಯೊಳು ನೆಲಸಿಹ ವರದ ವಿಠಲವರದನ ದೇವನ 7
--------------
ವೆಂಕಟವರದಾರ್ಯರು
ಮರೆತಿರಲಾರೇ-ಮನಸಾರೇ ಹರೇ ಪ ಸರಸಿಜ ಪತ್ರನೆತ್ರನ ಅ.ಪ. ಬಗೆ ಬಗೆರತಿಯಲ್ಲಿ ಜಗವನ್ನುಮೋಹಿಪ ಸುಗುಣನ ಜಗತ್ಪ್ರಾಣನ 1 ಚೇತನರಿಗೆ ಸುಖದಾತನ ದುಃಖ ವಿಘಾತನ ಲಕ್ಷ್ಮೀನಾಥನ 2 ದಾಸರ ಹೃದಯ ನಿವಾಸನ ದೋಷನಿರಾಸನ ಶ್ರೀನಿವಾಸನ3 ವೆಂಕಟರಮಣನ ಕಿಂಕರಶರಣನ ಸಂಕಟಹರ ನಿಷ್ಕಲಂಕನ 4 ಮಾನಿನಿಯ ಅಭಿಮಾನವ ಕಾಯ್ದನ ದೀನರ ಹರ್ಷನಿಧಾನನ5 ರಾಮನ ದೈತ್ಯವಿರಾಮನ ಪಾವನ ನಾಮನ ಹೃದಯಾರಾಮನ 6 ಧರೆಯೊಳುತ್ತಮ ಪುಲಿಗಿರಿಯೊಳು ನೆಲಸಿಹ ವರದ ವಿಠಲವರದನ ದೇವನ7
--------------
ಸರಗೂರು ವೆಂಕಟವರದಾರ್ಯರು
ಮರೆತು ಹೋದೆನೊ ದೇವ ರಂಗಯ್ಯ ರಂಗ ಸಿರಿದೇವಿ ರಮಣನೆ ಪರನೆಂದು ತಿಳಿಯದೆ ಪ ನೀರೊಳು ಮುಳುಗುತ್ತ ಮೀನಮತ್ಸ್ಯನು ಎಂದು ವೇದವ ತಂದಿತ್ತೆ ದೇವೇಶನೆ ವಾರಿಧಿಶಯನನೆ ವಾರಿಜಾಕ್ಷನು ಎಂದು ಸಾರಸಾಕ್ಷನ ಗುಣ ಸ್ಮರಿಸದೇ ಮನದಲಿ 1 ಬೆಟ್ಟ ಬೆನ್ನಿಲಿ ಪೊತ್ತು ಪೊಕ್ಕು ನೀರೊಳು ಬೇಗ ಭಕ್ತರನುದ್ಧರಿಸಿದ ದೇವನ ಪೃಥ್ವಿಯ ಕೋರೆಯಿಂದೆತ್ತಿ ಅಸುರನ ಕೊಂದ ಸಿಸ್ತು ತೋರಿದ ಪರವಸ್ತುವ ಸ್ಮರಿಸದೆ 2 ಘುಡು ಘುಡಿಸುತ ಬಂದು ಒಡಲ ಸೀಳಲು ಖಳನ ಅಡವಿ ಮೃಗವು ಎಂದು ಬೆರಗಾದೆನೊ ಹುಡುಗನಂದದಿ ಪೋಗಿ ಪೊಡವಿಪಾಲಕನ ಬೇಡಿ ಕೊಡಲಿಯ ಪಿಡಿಯುತ್ತ ತಾಯತರಿದನ ಸ್ಮರಿಸದೆ 3 ನಾರಿಯನರಸುತ ವನವ ಚರಿಸಿದಿ ನಾರಿಚೋರನ ಕೊಂದೆ ವಾನರ ಸಹಿತ ನವನೀತ ಚೋರನೆ ಮನೆಮನೆಗಳ ಪೊಕ್ಕು ಗಾರು ಮಾಡಿದ ಕೃಷ್ಣ ಹರಿಯೆಂದು ಸ್ಮರಿಸದೆ 4 ಬೆತ್ತಲೆ ನಿಂತರು ಉತ್ತಮ ನೆನಿಸಿದಿ ಸತ್ಯಮೂರುತಿ ಪುರುಷೋತ್ತಮನೆ ಕತ್ತಿ ಕಯ್ಯಲಿ ಪಿಡಿದು ಮತ್ತೆರಾವುತನಾಗಿ ಸುತ್ತಿ ಸುತ್ತಿದ ಸರ್ವೋತ್ತಮನರಿಯದೆ 5 ಭಕ್ತವತ್ಸಲಸ್ವಾಮಿ ಭಯನಿವಾರಣನೆಂದು ಭೃತ್ಯರು ನೃತ್ಯದಿ ಕುಣಿಯುವರೊ ಸತ್ಯ ಸಂಕಲ್ಪನೆ ಸತ್ಯಭಾಮೆಯ ಪ್ರಿಯ ಭಕ್ತರೊಡೆಯ ಪರವಸ್ತುವ ಸ್ಮರಿಸದೆ6 ಕರುಣವಾರಿಧಿಯೆಂದು ಸ್ಮರಿಸುವ ಭಕುತರ ಪರಿ ಅಘಗಳು ಪರಿಹಾರವೊ ಪತಿ ಕಮಲನಾಭ ವಿಠ್ಠಲ ಸ್ಮರಿಸದೆ ಅಪರಾಧ ಸಲಹೆಂದು ಸ್ಮರಿಸದೆ 7
--------------
ನಿಡಗುರುಕಿ ಜೀವೂಬಾಯಿ
ಮರೆಯದಿರು ಭವಶರಧಿ ಕೊನೆದೋರದು ಹರಿಯ ಮರೆತರೆ ಮನವೆ ಗತಿಯೇನು ಇಹುದು ಪ ಪಿಂತೆ ಧೃತರಾಷ್ಟ್ರ ನಿಶ್ಚಿಂತೆಯಲಿ ಸುತರಿಂದ ಎಂಥ ಸಿರಿವಂತನೆಂದೆನಿಸಿ ಮೆರೆದಾ ಕಂತುಪಿತನನು ಸುತರು ಪಂಥದಲಿ ನೆನೆಯದಿರೆ ಎಂಥವನ ಪಾಡಾದುದರಿಯೆ ನೀ ಮರುಳೇ 1 ತಾನೆ ಪರಬ್ರಹ್ಮನೆಂದರಿದಾ ಹಿರಣ್ಯಕಶು- ಪಾನೆಯೆಂದರಿದು ಮೆರೆಯೆ ಹರಿವೈರದಿ ಸೂನು ಪ್ರಲ್ಹಾದನಾನತನಾಗಿ ಮೊರೆವೋಗಲು ಹೀನ ರಕ್ಕಸನ ಪರಿಸರಿ ಏನಾಯಿತು 2 ಸತಿಸುತರ ಮುದದಿಂದ ಹಿತವಂತ ಬಳಿಗದಿಂ- ದತಿ ತೃಪ್ತವಾಗಿ ನಾನಿರುತಿರಲು ನಿನ್ನ ಧೃತಿಗುಂದಿ ಪವಡಿಸಿರೆ ಗೆಜ್ಜೆಪಾದವ ಕಂಡು ನುತಿಸುವೆನನವರತ ನರಸಿಂಹವಿಠಲರಾಯಾ 3
--------------
ನರಸಿಂಹವಿಠಲರು
ಮರೆಯದಿರು ಮರೆಯದಿರು ಹರಿಯನು ಪಾಪಿ ಪ ಮರೆಯದಿರೆ ನೀ ಮೈಕುಂಠಕೆ ಪೋಪಿಅ.ಪ. ಮೂರು ದಿನ ಬಾಳ್ವ ಸಂಸಾರವ ನೋಡಿ ಬಾರಿ ಹರುಷಿಸದಿರು ನೀನೆಲೊ ಖೋಡಿ 1 ಮತಿವಂತನಾದರೆ ಹರಿಪುರಕೆ ಪೋದಿ ಸತಿಸುತರ ನಂಬೆ ನಿನ ಬಾಯಲಿ ಬೂದಿ 2 ಸಿರಿಯ ನಂಬಿದ ದುರ್ಯೋಧನ ಬಿದ್ದ ಹರಿಯ ನಂಬಿದ ಭೀಮಸೇನನು ಗೆದ್ದ 3 ಆನೆ ಕುದುರೆ ರಥ ಭಂಡಾರವು ನಿಂದೆ ಪ್ರಾಣ ಹೋಗುವಾಗವು ಬಾರವು ಹಿಂದೆ 4 ರಂಗೇಶವಿಠಲನ ನಂಬಿದವ ಜಾಣ ಅಂಗನೆಯರ ನಂಬಿದ ಮನುಜನೆ ಕೋಣ 5
--------------
ರಂಗೇಶವಿಠಲದಾಸರು
ಮರೆಯದಿರು ಹರಿಯಮರೆವರೆ ಮೂರು ಲೋಕದ ದೊರಿಯ ಪ ಮದಗಜ ಹರಿಯೆಂದು ಕರೆಯಲುಒದಗಿ ಆಕ್ಷಣ ಬಂದುಮುದದಿ ನಕ್ರನ ಕೊಂದು ಸಲ-ಹಿದ ಸದ್ಭಕ್ತರ ಬಂಧುಹದುಳ ಪ್ರಹ್ಲಾದನ ಹೆದರಿಸಿದಸುರನಉದರವ ಬಗೆದಂಥದುಭುತ ಮಹಿಮನ1 ನಾರಿಯು ತನ್ನ ಕರೆದ ಮಾತ್ರದಿಸೀರೆಯ ಮಳೆಗರೆದಕ್ರೂರ ಖಳನ ತರಿದು ಆ ಪಾಂಡವರಆರಣ್ಯದಿ ಪೊರೆದಗಾರಾದಜಮಿಳ ನಾರಗ ಎನಲುಪಾರಗಾಣಿಸಿದಪಾರ ಗುಣನಿಧಿಯ 2 ದುರಿತ ಭವ ಪಾಶಾ - ಅವಗೆಂದೆಂದಿಗಿಲ್ಲ ಕ್ಷೇಶಾತಂದೆ ಕದರುಂಡಲಗಿ ಹನುಮಯ್ಯನೊಡೆಯಚಂದಾದಿಕೇಶವನ ನೆನೆದವರೆಂದಿಗು ಧನ್ಯರು3
--------------
ಕನಕದಾಸ
ಮರೆಯದಿರುವರೋ ನಿನ್ನ ಸ್ಮರಣೆಯಾ ನೀನು ಪ ಗರಿಯಾ ಚರಿಯಾ ಮರಿಯಾ ನೆರಿಯಾ | ಸೇರಿ ಕ್ರೂರ ಮಾರಿದಾರಿ ಜಾರಿ ದೂರಸಾರದೇ ಅ.ಪ ಕಡಲಶಯನೆಚ್ಚರಾ ಕಳೆದು ಹೊರಿಯಲುದರಾ | ಬಿಡದೋಲೈಸಿ ಘನಮದರಾ | ಕಡಿಯಾ ಕಿಡಿಯಾ ನುಡಿಯಾ ಪಡಿಯಾ | ಬೇಡಿ ಕಾಡಿ ಓಡಿ ಆಡ ಬ್ಯಾಡ ಗಾಢ ಮೂಢನೇ 1 ತರಳ ಪ್ರಾಯ ಮುಪ್ಪಿಂದೆ ತೀರಲಾಯುಷ್ಯ ಬರುದೇ | ಯರಗುವಾಯಮ ತಾ ನಿಲದೇ | ತ್ವರಿಯಾ ಧರಿಯಾ ಕುರಯಾ ಮರಿಯಾ | ವೈರಿ ಮೀರಿ ಹಾರಿ ತೂರಿ ಹೊರುವಂದದಿ 2 ಮಿನಗು ಬೆಳಗ ಘನ ಮಹಿಪತಿ ಸುತ ಪ್ರಿಯನಾ | ಅನುಭದಿಸದಿಹುದೇನಾ | ಅನುವೇ ಮನವೇ ಗುಣವೇ ದನವೇ | ಜ್ಞಾನ ಹೀನ ಮಾನ ದೀನ ಆನನದಲೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರೆಯದೆ ನೆನೆ ಚಿನ್ಮಯನ ಹರಿನಾರಾಯಣ ಅಚ್ಯುತನ ಪ ಮಗಳ ತಾನೆ ಮದುವೆಯಾದವನಮಗಳ ಮಗನ ಮೊಮ್ಮಗನಮಗಳ ಗಂಡನ ಮೇಲೆ ಮಲಗಿದ ಜಾಣನಮಗಳ ಮಾವನಿಗೆ ಮೈದುನನ1 ತಂದೆಗೆ ತಾನೆ ತಂದೆಯಾದವನ ತಂದೆಗೆ ತಾಯಿಯ ತಂದವನತಂದೆಗೆ ಪೂರ್ವದಿ ತಾ ಪುಟ್ಟಿಹನತಂದೆಗೆ ತಂದೆಗೆ ತಂದೆಯಹನ 2 ರಾಮನ ಸಮರೋದ್ಧಾಮನ ಸುಗುಣಾಭಿರಾಮನ ಸೀತಾನಾಯಕನರಾಮನ ಪೆತ್ತನ ಕಮಲದಳಾಕ್ಷನಪ್ರೇಮದಿ ನೆಲೆಯಾದಿಕೇಶವನ3
--------------
ಕನಕದಾಸ
ಮರೆಯದೆ ಸಲಹೆನ್ನನು ಯಾದವಗಿರಿ- ದೊರೆ ಮಂಗರಾಯ ನೀನು ಸರ್ವಜೀವೋತ್ತಮನೆ ನಿನ್ನನು ಮರೆಯಹೊಕ್ಕೆನು ಮಾರುತಾತ್ಮಜ ಕರೆದು ಭಕÀುತರಿಗ್ವರವ ನೀಡುವೊ ಭಾರತೀಶ ಪ ಸೀತಾವಲ್ಲಭ ರಾಮರ ಪಾದಾಂಬುಜ ದೂತನೆಂದೆನಿಸಿದೆಯೊ ಮಾತೆಗಿಟ್ಟ ಮುದ್ರಿಕೆಯನು ಘಾತಕ ರಾವಣನ ಪುರಕೆ ಕಾರ್ತೀಕದುತ್ಸವ ಮಾಡಿ ಮಂಗ- ಳಾರ್ತಿ ಬೆಳಗಿದೆ ಬಾಲದಿಂದ 1 ಬಕ ಹಿಡಿಂಬಕ ಕೀಚಕ ಕಿಮ್ಮೀರ ಮಾಗಧ ಮುಖ್ಯ ಪ್ರಮುಖರನು ಸಕಲ ಅನುಜರ ಸಹಿತ ದುರ್ಯೋಧನನ ಪ್ರಾಣವ ಸೆಳೆದÀು ಬ್ಯಾಗನೆ ನಕುಲ ಧರ್ಮಜನಾ ಸಾದೇವ ದ್ರೌಪದಿಗೆ ಸುಖ ಸಂತೋಷ ನೀಡಿದೆ 2 ಮಧ್ಯಗೇಹರಲ್ಲಿ ಜನಿಸಿ ಸುಜನರಿಗೆ ಶುದ್ಧಶಾಸ್ತ್ರವ ಬೋಧಿಸಿ ಗೆದÀ್ದು ಮಾಯಾವಾದಿಗಳ ವಾದಪ್ರ- ಸಿದ್ಧನೆನಿಸಿದೆ ಮಧ್ವಮುನಿ ಮುದ್ದು ಭೀಮೇಶಕೃಷ್ಣನ ಪ್ರ- ಸಿದ್ಧಿ ಮಾಡಿದೆ ಪರಮ ಗುರುವೆ 3
--------------
ಹರಪನಹಳ್ಳಿಭೀಮವ್ವ
ಮರೆಯಲಿನ್ನೆಂತುಪಕಾರ ಮಾರುತಿ ಮರೆಯಲಿನ್ನೆಂತುಪಕಾರ ಪ. ವಿಧಿ ಮುಂತಾದ ತ್ರಿದಶರಿಂದೆನ್ನಯ ಸದಮಲಪ್ರಾಣಾಧಾರ 1 ಬ್ರಹ್ಮಚರ್ಯವ್ರತಧರ್ಮನಿಯಾಮಕ ನಿರ್ಮಲ ವಜ್ರಶರೀರ 2 ದಾಸವರ್ಯ ಗುಣರಾಶಿ ತ್ವದೀಯ ವಿ- ಶ್ವಾಸವಿನ್ನೆಷ್ಟೊ ಗಭೀರ 3 ವ್ಯಾಪ್ತಮಾದಾಪದಕಾಪ್ತ ನಿನ್ನುಪಕೃತಿ ಸಪ್ತಸಾಗರದಿಂದಪಾರ 4 ಶ್ರೀಲಕ್ಷ್ಮೀನಾರಾಯಣನು ಹನುಮನ ಆಲಿಂಗಿಸಿದನುದಾರ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆಯುವೆ ಏತಕೋ ಗರುಡಗಮನ ಯೆನ್ನಾ ದುರಿತವನಾರ್ಜಿಸಿ ಕೊರಗುವೆನ್ನನು ನೀ ಪ ಹದಿನೆಂಟು ಸಾಸಿರ ಉದರದೊಳುದಿಸುತೇ ಹೃದಯದಿ ನಿನ್ನ ನಾಮಾ ಒದಗಲಿಲ್ಲವೋ 1 ಧರೆಯೊಳು ನರಜನ್ಮ ಹಿರಿದೆಂದು ಪೇಳ್ವರು ತ್ವರಿತದಿ ನಿನ್ನ ನಾಮಸ್ಮರಣೆಯನೀಯದೆ 2 ಸೋಮಶೇಖರನುತ ಕಾಮಜನಕ ಹರಿ ಪ್ರೇಮದಿ ಪಾಲಿಸೆನ್ನ ರಾವiದಾಸಾರ್ಚಿತಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮರೆಯೊಕ್ಕೆ ನಿನ್ನನು ಮರುಗಿ ರಕ್ಷಿಸಬೇಕು ಶಂಕರೇಶಾಗಿರಿಜೆಯಾಣ್ಮನೆದೇವ ಕೆರೆಗೋಡಿಪುರದೀಶ ಶಂಕರೇಶಾ ಪಮರಳಿ ಮರಳಿ ಗರ್ಭಕುರುಳಿ ನಾನೊಂದೆನುಪರಿಪರಿ ಕರ್ಮದ ಫಲಗಳನುಣಲಾಗಿದುರಿತ ತೊಲಗದೀವರೆಗು ನಾನೇಗೈವೆಕರುಣಾರಸ ನಿನಗೇತಕುದಿಸದಿದೆ 1ಸೂತ್ರಧಾರಕ ನೀನು ಸಕಲಜೀವರಿಗೆಲ್ಲಪಾತ್ರ ಕೃಪೆಗೆ ನಾನು ಪ್ರೇಮದಿಂ ನೋಡಿನ್ನುಗೋತ್ರಾರಾತಿ ವಂದಿತ ಪಾದಕಮಲನೆಸ್ತೋತ್ರವ ಮಾಳ್ಪುದ ಮೊದಲೆ ನಾನರಿಯೆನು2ಮರತಿ ಪುಟ್ಟದು ನಾನಾವಿಧ ಭವಸುಖದಲಿವರೆತರಿತೆನೆನಿಸಿದ ಕರ್ಮದ ಬಲುಹಿನಿಂಬೆರೆತು ಬಯಲ ಮೋಹದಲಿ ಮೋಸಹೋದೆನುಕುರಿತು ಕಾಮ್ಯವ ಭಜಿಸಿದೆನೊ ನಿನ್ನನು3ಉರಿಗಣ್ಣ ದೃಷ್ಟಿಯಿಂ ದುರಿತವ ದಹಿಸಿನ್ನುವರಶಶಿನೇತ್ರದಿಂ ನೋಡಿ ತಾಪವ ಪರಿಹರಿದಶ್ವನೇತ್ರದಿ ಜ್ಞಾನವನರುಹಿಸುಶರಣಾಗತನಪರಾಧವನೆಣಿಸದೆ 4 ಪರಾಕು ಶಂಕರೇಶಾ5
--------------
ತಿಮ್ಮಪ್ಪದಾಸರು
ಮರೆವನೇ ಮುರವೈರಿಯು ಸಿರಿಪತಿ ಸತ್ಯಶಾಸನ ಪ ಸುಖದು:ಖಗಳನು ಮನಕೆ ಸೇರಿಸದೆ ಸದಾ ಅಖಿಲ ಕಾರಣ ಹರಿಭಕುತ ಜನರ1 ಅತಿಭಾಗ್ಯ ಬಂದಾಗಲೂ ಚ್ಯುತಿ ಬಂದರೂ ಸ್ಥಿರ ಮತಿಯ ಪೊಂದುತ ಭಜಿಸುವ ಭಕುತನ 2 ಸಿಂಧುಶಯನನನು ವಂದಿಪ ಸುಜನರ ಬಂಧು ಬಳಗ ಜನವೆಂದರಿವನು 3 ಸಂಕಟ ಬಂದಾಗಲು ಶಂಕೆಯ ಮಾಡದ ಪಂಕಜನಾಭನ ಕಿಂಕರನನು 4 ಎನ್ನ ಕರ್ಮಗಳೆಲ್ಲ ನಿನ್ನ ಅಧೀನವೆಂದು ಸಂತತ ಭಜಿಸೆ ಪ್ರಸನ್ನನಾಗದೆ 5
--------------
ವಿದ್ಯಾಪ್ರಸನ್ನತೀರ್ಥರು
ಮರೆವರೇನಯ್ಯಾ ಮಧವ ಮಮತೆ ತೋರಯ್ಯ ಪ ತೊರೆವರೆನೋ ಕರುಣಿ ನೀನು ನಿರುತ ಶರಣರ ಹೃದಯ ಭಾನು ಪೊರೆಯುವ ಬಿರುದನೆ ಅಪಯಶ ಪಡೆವರೆ 1 ದ್ರುವನಂದದಿ ನಾ ತಪವಾಚರಿಸವೆ ಭವಸಾಗರ ದಾಟುವ ಪರಿಯರಿಯದೆ ಸುವಿಮಲ ಮಾನಸದೊಲುಮೆ ಕೊಡೆಂಬನ 2 ಪ್ರಹ್ಲಾದನ ವೊಲು ನಿನ್ನಿರವರಿಯದೆ ಆಹ್ಲಾದವ ನಿತ್ಯನುವಿಂ ಕೊಳ್ಳದೆ ಈ ಕ್ಲೇಶದಿ ತೊಳಲುತ ಹರಿಸೆಂಬನ 3 ಬಲಿಯಂದದಿ ದಾನವ ಕೊಡಲಾರದೆ ಛಲದಿಂ ನಿನ್ನಯ ಪದಯುಗ ಪಿಡಿಯದೆ ಒಲಿಯುತ ತರಳನ ಸಲಹೆಂದೆಂಬನ 4 ಎಲ್ಲವ ಪಡೆಯಲು ಪುಣ್ಯವ ಗಳಿಸಿರೆ ಬಲ್ಲಿದ ನಿನ್ನಯ ಹಂಗಿರಲಿಲ್ಲವು ಎಲ್ಲರ ಬಂಧು ಜಾಜೀಶಾ ಎಂಬನ 5
--------------
ಶಾಮಶರ್ಮರು
ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ ಕರೆದು ಕಾಮಿತಗಳ ಕರವೆ ನಾ ನಿನಗೆಂದು ಪ ದಾರಿಯ ತಪ್ಪಿ ಪೋಗುವ ಧೀರ ಫೋರನ್ನ ದಾರಿಯ ಪಿಡಿಸಿನ್ನು ಪುರವನ್ನೆ ತೋರಿಸೆ ಊರಿನವೊಳಗೆ ಅವನ ಆಗಾ ದೂರ ನೋಡುವರೆ ದೋಷಗಳ ವಿಚಾರಮಾಡುವರೆ ಧೀರರು ಆವ ಪರಿಯಲವನ ಪಾರಗಾಣಿಪರಲ್ಲದೆ 1 ಹಸಿದು ಪರರ ಕೇಳದ ದ್ವಿಜವರಿಯನ್ನ ಶಿಶುವಿನ ನೋಡಿ ದಯದಿಂದ ಕರದಿನ್ನು ಹಸಿದ್ಯಾಕೊ ಎಂದು ಪಾಕವ ಮಾಡಿ ಹಸನಾಗಿ ತಂದು ಬಡಿಸುವ ಅವಸರದಿ ನಿಂದು,ಅವನ ದೋಷ ಪಸರಿಸಿ ಉಣಿಸಿದ ಜನರುಂಟೆ ಧರೆಯೊಳು 2 ಜಲಪಾನಾತುರನಾಗಿ ಜಲವ ಕೇಳಿದ ವಿಪ್ರ- ಕುಲ ತರಳನನು ನೋಡಿ ಕೃಪೆಯಿಂದ ಸುರನದಿ ಜಲವನೀವೆನೆಂದು ಬ್ಯಾಗನೆ ದಿವ್ಯ ಕಲಶವ ತಂದು ಬಾರೆಲೊ ಬಲು ಆಲಸ್ಯವ್ಯಾಕೆಂದು ನಿನ್ನಯ ಪಂಕ ತೊಳಿಯ ಕೊಡುವೆನೆಂದು ತಡವ ಮಾಡುವರೆ 3 ಸುಶರೀರ ತನುವನು ಮನದಲಿ ಬಯಸಿ ತಾ ಉಸರದ ಮುನಿತನಯನ ಕಂಡು ತಾವಾಗಿ ಕುಶಲವ ಕೇಳಿ, ದೇವತ ವೈದ್ಯ ಅಸಮರೆಂದೇಳಿ, ರಸ ಮಾಡೆಂದೇಳಿ, ಅವಗೆ ದಿವ್ಯ ರಸವನು ಪೇಳಿ, ಪಸಿ ನಿನ್ನಲಿದ್ದಾ ಕಿಸರು ಪೋದರೆ ಕೊಡುವೆವೆಂದು ನಿಲುವರೆ 4 ಅರ್ತಿಯ ಭಕುತನ್ನ ನೋಡೀಗ ನಿನ ದಿವ್ಯ ಕೀರ್ತಿಯ ನೋಡಿಕೊ, ವಾಸುದೇವವಿಠಲನ ಮೂರ್ತಿಯ ಭಜಕ ಭಕ್ತರಾಭೀಷ್ಟ ಪೂರ್ತಿಗೆ ಜನಕ ನಿನ್ನಯ ಗುಣ ಸ್ಫೂರ್ತಿಗೆ ಜನಕ, ನಿನ್ನಯ ಗುಣ ಸ್ಫೂರ್ತಿ ಉಳ್ಳನಕ ಪಾಪದ ಲೇಶ ವಾರ್ತಿ ಎನಗೆ ಇಲ್ಲವೆಂದು ನಿಶ್ಚೈಸಿದೆ 5
--------------
ವ್ಯಾಸತತ್ವಜ್ಞದಾಸರು