ಒಟ್ಟು 6900 ಕಡೆಗಳಲ್ಲಿ , 126 ದಾಸರು , 4284 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯರ್ಥ ಆಯು ಕಳೆಯಬ್ಯಾಡಿರೊ ಶ್ರೀಹರಿಯ ಸಂಕೀರ್ತನೆಯ ಮರೆಯಬ್ಯಾಡಿರೊಮೃತ್ಯು ಬಾರದಿರದು ಮುನ್ನೆ ಮನೋನೂರುವರ್ಷಕೆ ಪ.ಹಿಂಡುಹೀನ ಯೋನಿಮುಖದಲಿ ತಾಬಂದು ಬಂದು ಕುಕರ್ಮ ಸವೆಯದಾಯಿತುಕಂಡ ಕುಹಕರ ಕೂಡ ಕೊಂಡಮಾತನಾಡಿ ಯಮದಂಡ ತೆರಬ್ಯಾಡಿ ಕೋದಂಡಕರನ ಹೊಗಳಿರೊ 1ಬಾಲತ್ವವು ಆಟಕಾಯಿತು ಈ ಯೌವನವುಬಾಲೆಯರ ಬ್ಯಾಟಕಾಯಿತುಮ್ಯಾಲೆವಾರ್ಧಕ್ಯಕಂಗಬೀಳೆ ಸೊಪ್ಪಾಗಿ ಹೊಲಸಲದೀಗ ಎಚ್ಚರಿಕೆಯಲ್ಲಿ ಹರಿಯ ನೆನೆಯಿರೊ 2ಹಗಲು ಹಸಿವೆ ತೃಷೆಗೆ ಪೋಯಿತು ಯಾಮಿನಿಯುಮಿಗಲು ಮೀರಿ ಮಧು ಮುಸುಕಿತುಸುಗುಣನಾಗಿ ಭವದ ನಂಬಿಕೆಯನೀಗಿಪ್ರಸನ್ವೆಂಕಟನಗಪತಿಯ ಪಾದಪದ್ಮಯುಗಳವನೆÀ ಕೊಂಡಾಡಿರೊ 3
--------------
ಪ್ರಸನ್ನವೆಂಕಟದಾಸರು
ವ್ಯಾಸರಾಯಾ ಅಸ್ಮದ್ಗುರೋ ವ್ಯಾಸರಾಯಾ ಪವಿಶೇಷ ಙ್ಞÕನ ಭಕ್ತಿ ಲೇಸಾಗಿ ಸಲಿಸಯ್ಯಾ ಅ.ಪದಾಸನಾಮಕದ್ವಿಜದೇಶಮುಖನ ಮನಿ-ಕೂಸಾಗಿ ಜನಿಸಿದೆ ಭೂಸ್ಪರ್ಶವಿಲ್ಲದೆ 1ಶ್ರೀಪಾದರಾಯರು ಈಪರಿನಿನ್ನನುಕಾಪಾಡಿ ನವವರ್ಷ ಭೂಪತಿ ಮಾಡಿದರೋ 2ವಸುದೇವ ಸುತನನ್ನು ಸುಸಮಾಧಿಯಲಿ ಪಡೆದೆ 3ಕಲೆಯಂತೆ ದಿನದಿನದಲಿ ವೃದ್ಧನಾದೆ ನೀ 4ಚಂಪಕತರುಮುಖ್ಯ ಕಂಪಿತ ನದಿಯುತಪಂಪಾಕ್ಷೇತ್ರದಿ ಮಹಾ ಸಂಪತ್ತಿನಿಂದಿದ್ದೆ 5ತರ್ಕಿಸಿ ಯಂತ್ರಸ್ಥ ಚಕ್ರದಿ ಬಂಧಿಸಿದೆ 6ಮಧ್ವರಾಯರ ತಂದು ಸಿದ್ಧಮಾಡಿ ಇಟ್ಟೆ 7ಮಂದಜನಕೆÀ ಸುಧಾ ಛಂದಾಗಿ ಇದರರ್ಥಪೊಂದದೆಂದು ನೀನು ಚಂದ್ರಿಕೆ ರಚಿಸಿದೆ 8ಇನಿತೆ ಮಹಾಮಹಿಮೆ ಘನವಾಗಿ ಜನರಿUಅನುಭವ ಮಾಡಿಸಿದೆ ಅನುಪಮ ಚರಿತನೆ 9ಶುಭಮಯ ಸ್ಥಳದಲ್ಲಿ ಅಭಯನಾಗಿ ನಿಂತೆ ನೀ 10ಛಂದದ ನವಶುಭವೃಂದಾವನದೊಳಿದ್ದೆ 11ಇಂದುನಿಮ್ಮಯಪಾದಪೊಂದಿ ಎನ್ನಯವೃಜಿನ-ವೃಂದ ಪೋದವು ಅರ್ಕನಿಂದ ತಿಮಿರದಂತೆ 12ವಂದಿಸಿ ಬೇಡುವೆ ನಂದದಿ ಸಲಹಯ್ಯ 13ಇಂದುರಕ್ಷಕರಿಲ್ಲವೆಂದು ನಿನ್ನನು ಸಾರ್ದೆ14ಯಿಂದ ಕರೆದು ಕಾಯೋ ನಂದಾದಾಯಕ ನೀನೆ 15ದೃಷ್ಟಿ ಪಾಲಿಸೊ ಸರ್ವೋತ್ಕøಷ್ಟ ಮಹಿಮ ನೀನೆ 16ಮಾತು ಲಾಲಿಸೊ ನಿಜತಾತ ನೀನೆ ಸೀತಾ -ನಾಥ ಗುರುಜಗನ್ನಾಥವಿಠಲನಾಣೆ 17
--------------
ಗುರುಜಗನ್ನಾಥದಾಸರು
ವ್ಯಾಸೋಕ್ತಿಯನುಸರಿಸಿ ಹತ್ತು ಅವತಾರವನುಶ್ರೀಶ ಮಾಡಿದ ದಿನದ ಕ್ಲಪ್ತಿಯಂ ಬರೆವೆ ಸಂ- |ತೋಷದಿಂ ಕೇಳ್ಪುದೆಲ್ಲರು ಪೊರೆವ ಹರಿಯು ಅಭಿ-ಲಾಷೆ ಪೂರೈಸಿ ಬಿಡದೇ ಪಕೃತಯುಗಪ್ರಭವಮಧು ಶುದ್ಧ ಪ್ರತಿಪದಜಲಧಿಸುತವಾರ ರೇವತೀ ವಿಷ್ಕಂಭ ಹಗಲು ಸಂ-ಯುತ ಹನ್ನೆರಡು ಘಳಿಗೆಗವತರಿಸಿಶ್ರೀ ಮತ್ಸ್ಯ ಹತಮಾಡಿ ತಮನೆಂಬನಾ ||ಚತುರಾಸ್ಯವೈವಸ್ವತರಿಗೊಲಿದು ಮೆರೆದ ನೀಕ್ಷಿತಿಯೊಳಗೆ ಮತ್ತಾಯುಗದಿಕೂರ್ಮರೂಪದಿಂಚ್ಯುತರಹಿತನವತಾರ ಮಾಡಿ ಮಾಡಿದ ಕಾರ್ಯ ಮತಿವಂತರಿಗೆ ಪೇಳೂವೆ 1ವಿಭವಾಬ್ದ ಜ್ಯೇಷ್ಠ ಶುಕ್ಲದ್ವಿತೀಯಬುಧವಾರಶುಭದ ರೋಹಿಣಿ ಋಕ್ಷ ಧೃತಿ ಯೋಗ ದಿವದಲ್ಲಿತ್ರಿಭುವನೇಶ್ವರ ನಾಲ್ಕು ಘಳಿಗೆಗುದಿಸಿಯಮೃತಕೃತುಭುಜರಿಗುಣಿಸಿ ಕರುಣದಿಂ ||ಅಭಯವಿತ್ತನ್ಯರನು ದಣಿಸಿ ಧರಿಸಿದನು ಜಲ-ಜಭವಾಂಡ ಮಂದರಾದ್ರಿಯ ಬೆನ್ನಮ್ಯಾಲಿಂದಸುಭುಜಾಹ್ವಯನ ಚರಿತೆ ಸ್ಮರಿಸೆ ಕ್ಲೇಶಹ ಮತ್ತೆ ನಭಗವಹನಾ ಯುಗದಲಿ 2ಶುಕ್ಲ ಸಂವತ್ಸರದಶುಭಮಾಘ ಮಾಸದಲಿಶುಕ್ಲ ಪಕ್ಷದ ಸಪ್ತಮೀ ಭಾನುವಾರದಲಿಅಕ್ಲೇಶಪ್ರದ ಅಶ್ವಿನೀ ಸಾಧ್ಯಯೋಗದಲಿ ಶುಕ್ಲಶೋಣಿತ ವಿದೂರ ||ಶುಕ್ಲಾಂಬರಧರ ಕಿಟಿರೂಪದಿಂದವತರಿಸಿಹಕ್ಲಾಸುರ ಹಿರಣ್ಯಶನ ತರಿದುತ್ವರತನ್ನಒಕ್ಲಾದವರ ಪೊರೆದ ಹಗಲೆಂಟು ಘಳಿಗೆಯೊಳು ಶುಕ್ಲಾಂಗಆ ಯುಗದಲಿ 3ಆಂಗಿರಸವೆಂಬ ಸಂವತ್ಸರದ ವೈಶಾಖತಿಂಗಳದಿಸಿತಪಕ್ಷಚತುರ್ದಶೀ ಶನಿವಾರತುಂಗಸ್ವಾತಿಪರಿಘದಿವಾಷ್ಟ ವಿಂಶತಿ ಘಳಿಗೆಗಾಂಗೇಯಗರ್ಭನೊರವು ||ಸಂಘಟನೆವಾಗಲಾ ಸಮಯದೊಳು ಸ್ತಂಭದಿಂಸಂಗರಹಿತಹರಿಘುಡಿಘುಡಿಸುತಲಿ ಉದಿಸಿನರಸಿಂಗಾಹ್ವಯದಿಹೇಮಕಶ್ಯಪನ ತರಿದು ತರಳಂಗೆ ಸನ್ಮುದವಿತ್ತನೂ4ತ್ರೇತಾಯುಗದಲದಿತಿ ದೇವಿ ಭಕುತಿಗೆ ಮೆಚ್ಚಿಧಾತಾಬ್ದ ಭಾದ್ರಪದಸಿತಪಕ್ಷದ್ವಾದಶೀಖ್ಯಾತಿ ವಿಷ್ಣುಭ ಶುಕ್ರ ಧೃತಿ ಹತ್ತೈದು ಘಟಗೆಪೋತಭಾವದಿ ದಿವವಲಿ ||ತಾಂ ತಾಳಿ ಅವತಾರವಂ ತ್ರಿವಿಕ್ರಮನಾಗಿಭೂತಲಾಗಸವಳೆದು ವೈರೋಚಿನಿಯ ತುಳಿದುಪ್ರೀತಿಪಡಿಸುತ ಶಕ್ರನಂ ಸ್ವರ್ನದಿಯ ಪಡೆದ ಈತಗೆಣೆಯಾರೊ ಜಗದಿ 5ಅದೆ ಯುಗದಲಿ ಪ್ರಮಾಥಿಯೆಂಬ ಸಂವತ್ಸ-ರದಲಿ ವೈಶಾಖ ಶುದ್ಧ ತೃತೀಯೆ ಸುಕರ್ಮ ಯೋ-ಗದಲಿ ರೋಹಿಣಿಮಂದಹನ್ನೊಂದು ಘಟರಾತ್ರಿಯೊದಗುತಿರೆಭೂಪತಿಗಳಾ ||ವಧೆಗೆ ವಿಪ್ರರ ವೃಂದವನು ಪೋಷಣೆಯ ಮಾಡು-ವದಕೆ, ಜಮದಗ್ನಿಯಿಂದವತರಿಸಿ ರಾಮ ನಾ-ಮದಲಿ ಪರಶುವ ಧರಿಸಿ ಈ ಧಾತ್ರಿಯೊಳು ಬಹು ಮೆರೆದಮತ್ತು ಆ ಯುಗದಲಿ 6ತಾರಣೆಂಬಬ್ಧ ಮಧುಮಾಸ ಶುಕ್ಲ ನವಮಿಯಆರನೇ ತಾಸು ದಿವದಲಿ ಪುನರ್ವಸು ಚಂದ್ರವಾರ ಶೂಲೆಂಬ ಯೋಗದಲಿ ದಶರಥನೃಪತಿಹಾರೈಸಿದುದಕೆ ಒಲಿದು ||ಶ್ರೀರಾಮನಾಮದಿಂದವತರಿಸಿ ದೈತ್ಯ ಪರಿವಾ-ರ ರಾವಣನ ಸಂಹರಿಸಿ ವಿಭೀಷಣಗೊಲಿದುವಾರಿಜೋದ್ಭವಮುಖ ದಿವೌಕಸರಿಗಾನಂದ ತೋರಿಸಿದ ಸೀತಾಪತಿ 7ಮೂರನೇ ಯುಗ ವಿರೋಧೀ ಶ್ರಾವಣವದಿ ಅ-ರ್ಧರಾತ್ರಿಯೊಳಷ್ಟಮೀ ರೋಹಿಣೀವಜ್ರಬುಧವಾರದಲಿ ಅಜನ ಬಿನ್ನಹಕೊಪ್ಪಿ ಕೃಷ್ಣಾವತಾರವನು ತಾಳಿ ಧರೆಗೆ ||ಭಾರವಾಗಿದ್ದ ಕಂಸಾದಿ ಖಲವೃಂದ ಸಂ-ಹಾರಮಂ ಗೈದು ಪಾಂಡವರ ಪೋಷಿಸಿವಿಪ್ರಗೋ ರಕ್ಷಣೆಯ ಮಾಡಿ ಧರ್ಮವಂ ಸ್ಥಾಪಿಸಿದ ಶ್ರೀರಮಣ ಮಧ್ವಸದನ 8ಕಲಿಖರಾಬ್ಧಾಷಾಢ ಶುದ್ಧ ದಶಮಿ ವಿಶಾಖನಳಿನಸಖವಾರ ಶುಕ್ಲಾಹ ಯೋಗ ದಿವಾಷ್ಟಘಳಿಗೆಯೊಳು ಜನನೆಂಬ ದೈತ್ಯನಲ್ಲವತರಿಸಿ ಬಲುದುರ್ಮತಿಯ ಪ್ರೇರಿಸಿ ||ಕಳೆಗೆಡಿಸಿ ಬುದ್ಧಾವತಾರವೆಂದೆನಿಸಿ ಶಿವ-ಗೊಲಿದು ತ್ರಿಪುರವ ಕೆಡಿಸಿ ಸಜ್ಜನರ ಸಂಶಯವಕಳದು, ಕರುಣಾಂಬುಧಿಯ ಮಹಿಮೆಯಂತಿಳಿಯಲಸದಳಮಾವಿಧಿಗೆ ಎಂದಿಗೂ 9ದನುಜಪತಿ ಯುಗ ದುರ್ಮುಖಾ ಮಾರ್ಗಶಿರ ಶುದ್ಧಶನಿವಾರ ದ್ವಿತೀಯೆ ಪೂರ್ವಾಷಾಢ ವೃದ್ಧಿ ಮೂ-ರನೆ ಘಳಿಗೆ ದಿವದ ಕಲ್ಕ್ಯವತಾರದಿಂಮ್ಲೇಂಛರನು ಸದೆದು ಭೂ ದಿವಿಜರಾ ||ಘನಮೋದ ಪಡಿಸಿ ವಾಜಿಯನೇರಿ ಮೆರೆದಾಡಿಅನಿಮಿಷರ ಕೈಯ್ಯ ಪೂ ಮಳೆಯಂಗರಿಸಿಕೊಂ-ಡನಘ ಬಲ್ಲವರಿಗಲ್ಲಲ್ಲೆ ಇರುತಿಹನುಪ್ರಣತಜನಕಾಮಧೇನೂ 10ಈ ಪರಿಯಲಚ್ಯುತನ ಅವತಾರ ಚರಿತೆ ಸಂ-ಕ್ಷೇಪದಿಂ ವಿರಚಿಸಿದೆ ಸದ್ಭಕ್ತಿಯಿಂದಿದನುಪಾಪಿಗಳಿಘೇಳದಲೆ ಕಾಲತ್ರಯದಿ ಪಠಸೆ ತಾಪತ್ರಗಳ ಕಳೆದು ||ಈ ಪೊಡವಿಯೊಳಗೆ ಬಹುಮಾನ ಮಾಡಿಸಿ, ತಂದೆ-ಯೋಪಾದಿ ಕ್ಷಣ ಬಿಡದೆ ಸಲಹಿ ಪ್ರಾಂತಕೆ ತನ್ನಆ ಪರಂಧಾಮ ವೈದಿಸುವನತಿ ಕರುಣಾಳು ಶ್ರೀಪ ಪ್ರಾಣೇಶ ವಿಠಲಾ 11
--------------
ಪ್ರಾಣೇಶದಾಸರು
ಶಕ್ತನಾದರೆ ನಂಟರೆಲ್ಲ ಹಿತರು - ಅಶಕ್ತನಾದರೆ ಆಪ್ತರವರೆ ವೈರಿಗಳು ಪ.ಕಮಲಾರ್ಕರಿಗೆ ನಿರುತ ಕಡುನಂಟುತನವಿರಲುಕಮಲ ತಾ ಜಲದೊಳಗೆ ಆಡುತಿಹುದುಕ್ರಮತಪ್ಪಿ ನೀರಿನಿಂದ ತಡಿಗೆ ಬೀಳಲು ರವಿಯಅಮಿತ ಕಿರಣಗಳಿಂದ ಕಂದಿ ಪೋಗುವುದು 1ವನದೊಳುರಿ ಸುಡುತಿರಲು ವಾಯು ತಾ ಸೋಂಕಲ್ಕೆಘನ ಪ್ರಜ್ವಲಸುತಿಹುದು ಗಗನಕಡರಿಮನೆಯೊಳಿರ್ದಾ ದೀಪ ಮಾರುತನು ಸೋಂಕಿದರೆಘನಶಕ್ತಿ ತಪ್ಪಿ ತಾ ನಂದಿ ಹೋಗುವುದು 2ವರದ ಶ್ರೀ ಪುರಂದರವಿಠಲನ ದಯವಿರಲುಸರುವ ಜನರೆಲ್ಲ ಮೂಜಗದಿ ಹಿತರುಕರಿಯ ಸಲುಹಿದ ಹರಿಯ ಕರುಣ ತಪ್ಪಿದ ಮೇಲೆಮೊರೆಹೊಕ್ಕರೂ ಕಾಯ್ವ ಮಹಿಮರುಂಟೇ ದೇವ 3
--------------
ಪುರಂದರದಾಸರು
ಶಂಬರಾರಿಯತಾತಸಲಹೊ ಶ್ರೀನಾಥಶಂಭು ವಿರಂಚೇಶ ಶ್ರೀ ವೆಂಕಟೇಶ ಪ.ದಶರಥಸಂಜಾತ ದಶಶಿರಹರ್ತವಸುಧೆತಸ್ಕರಛೇತ ವಸುಮತಿಪ್ರೀತಬಿಸಜಾಕ್ಷಿಯಾಪತ್ತ ಬಂಧು ಸಮರ್ಥಪಶುಪಾರಿವೃತಶಕ್ತಿಪರಿಹಾರಕರ್ತ1ಪಾರಿಜಾತಕೆ ವಜ್ರಿ ಪರಾಭವಕಾರಿಕ್ರೂರ ಖಳವೈರಿಕುಲದಸಂಹಾರಿಚಾರುಮಹಿಮಶೌರಿಚಿರಾನಂದೋದಾರಿಸಾರಭೃತ್ಯುಪಕಾರಿ ಸುಕಳಜಗಧಾರಿ 2ಸ್ವಾಮಿ ಪುಷ್ಕರವಾಸ ಶ್ರೀ ಶ್ರೀನಿವಾಸಸೋಮಾರ್ಕಸಂಕಾಶ ಸುರಜನಕೋಶಭೂಮಿಭಾರವಿನಾಶ ಬುಧಪರಿತೋಷಪ್ರೇಮಪೂರಿತಹಾಸ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ಶರಣನಾದೆ ನಾನು ನಿನಗೆ | ಕರುಣ ದೇವನೇ |ತರಳನನ್ನು ಕಾಯೋ ದಯದಿ | ಪರಮಪುರುಷನೇಪಸ್ನಾನ ದಾನ ಮೌನ ಮಂತ್ರ | ನಾನು ಅರಿಯೆನೆ |ಧ್ಯಾನ ದಾನ ತಿಳಿಯೆ ಸಲಹೊ | ಶ್ರೀನಿವಾಸನೆ1ತರಳಧ್ರುವನ ತೆರದಿ ನಿನ್ನ | ಸ್ಮರಿಸಲರಿಯೆನೇ |ಗರುಡನಂತೆ ಹೊತ್ತು ಧರೆಂiÀi | ಚರಿಸಲಾರೆನೆ2ಚಂದ್ರಧರನ ಸಖನೆ ಕಾಯೋ ಇಂದಿರೇಶನೇ |ಸುಂದರ ಗೋವಿಂದ ದಂiÀುದಿ |ಕರವಮುಗಿವೆನೆ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಶರಣು ನಿತ್ಯಾನಂದ ಸದ್ಗುಣ ಸಾಂದ್ರ, ನಿನ್ನ |ಚರಣಕಮಲಂಗಳಿಗೆ ಶ್ರೀ ವರದೇಂದ್ರ ಪನಿನ್ನ ನಂಬಿದ ದಾಸರನವನಿಯೊಳು ಇಂಥ |ಬನ್ನಪಡಿಸುವುದುಚಿತವೆ ದಯಾಳು ||ಅನ್ಯರುಂಟೇ ನೀವಲ್ಲದುದ್ಧರಿಸಲು ಪ್ರ |ಪನ್ನ ಪೋಷಕ ಯನ್ನಬಿನ್ನಪಕೇಳು 1ನರರ ಪಾಡಿಸದಿರೊ ಯತಿರಾಯಾಹರಿ|ಸ್ಮರಣೆ ಮಾಡಲು ಮನಕೊಡುಜೀಯ||ಕರಕರೆ ಭಾವದೊಳಗೊಂದುಪಾಯ ಕಾಣೆ |ಹರಿಸಿ ಕ್ಲೇಶವಮೋದತೋರಿಸಯ್ಯ 2ಧರೆಗೆ ಪ್ರಸಿದ್ಧ ಪುಣ್ಯಾಲಯವಾಸ ಕಾಯೊ |ನೆರೆನಂಬಿದವರನ್ನ ರವಿಭಾಸ ||ಹರಿದಾಸರ ಕಾಡುವರನ್ನಾ ಭಾಸ ಮಾಡೊ |ಗುರುಪ್ರಾಣೇಶ ವಿಠಲನ್ನ ನಿಜದಾಸ 3
--------------
ಪ್ರಾಣೇಶದಾಸರು
ಶರಣು ನಿನ್ನ ಚರಣಗಳಿಗೆ ಭಾರತೀಶನೆ |ಕರವಪಿಡಿದು ಸಲಹೋ ಬಿಡದೆ ಭಾರತೀಶನೆ ಪಎಲ್ಲ ಕಡೆಗೆ ವ್ಯಾಪ್ತ ನೀನೆ ಭಾರತೀಶನೆ |ಅಲ್ಲಿ ವಿಷವ ಕುಡಿದೆಯೆಂದು ಭಾರತೀಶನೆ ||ಗೆಲ್ಲಿಸಿದೆಯೊ ಸರ್ವ ಸುರರ ಭಾರತೀಶನೆ |ಬಲ್ಲಿದನು ನಿನಗೆಣೆ ಯಾರೋ ಭಾರತೀಶನೆ1ಅಂಜನಾ ಕುಮಾರನಾಗಿ ಭಾರತೀಶನೆ |ಕಂಜನಾಭನಂಘ್ರಿ ಭಜಿಸಿ ಭಾರತೀಶನೆ ||ಲಿಂಜದುದಧಿದಾಟಿ ಪೋಗಿ ಭಾರತೀಶನೆ |ಸಂಜಿ ಚರರ ಸಂಹರಿಸಿದೆಯೊ ಭಾರತೀಶನೆ2ಕುಂತಿ ಜಠರದಿಂದ ಜನಿಸಿ ಭಾರತೀಶನೆ |ಹಂತ ಕೌರವರನ ತರಿದಿ ಭಾರತೀಶನೆ ||ಕಂತುಪಿತನ ಕರುಣ ಪಡೆದೆ ಭಾರತೀಶನೆ |ಅಂತಗಾಣೆ ನಿನ್ನ ಮಹಿಮೆಗೆ ಭಾರತೀಶನೆ 3ಯತಿಯರೂಪಇಳಿಯೊಳಾಗಿ ಭಾರತೀಶ£ É |ಮತಿಯ ಸರ್ವ ಬುಧಂಗಿತ್ತೆ ಭಾರತೀಶನೆ ||ಸತತ ನಿನ್ನ ಪೂಜಿಪರಿಗೆ ಭಾರತೀಶನೆ |ಗತಿಯ ಕೊಡುವೆ ದೋಷ ಕಳೆದು ಭಾರತೀಶನೆ 4ಘನ್ನ ಪ್ರಾಣೇಶ ವಿಠಲ ನಾಳೆ ಭಾರತೀಶನೆ |ಬಿನ್ನಪವನು ಲಾಲಿಸುವದೋ ಭಾರತೀಶನೆ ||ನಿನ್ನ ದಾಸನೆನಿಸಬೇಕೋ ಭಾರತೀಶನೆ |ಅನ್ಯ ವಿಷಯವೊಂದನೊಲ್ಲೆ ಭಾರತೀಶನೆ 5
--------------
ಪ್ರಾಣೇಶದಾಸರು
ಶರಣು ಭಾರತೀ ತಾಯೆ |ಕರವಬಿಡದಲೆ ಕಾಯೆ ||ಮರುತದೇವನ ರಮಣಿ | ಸುರ ನದಿಯ ಭಗಿನಿ ಪಪ್ರದ್ಯುಮ್ನ ದೇವಸುತೆ | ರುದ್ರಾದಿ ಸುರ ವಿನುತೆ ||ಭದ್ರ ವಿಗ್ರಹೆ ದಯಾ ಸ | ಮುದ್ರೆ ಕುಲಿಶೆ ||ಅದ್ರಿಯೋಪಮ ದೋಷ | ಕಿದ್ದ ದುರ್ಮತಿಕ್ಲೇಶ||ವೊದ್ದು ನಿನ್ನವನೆನ್ನು | ಬುದ್ಧಿ ಕೊಡು ಇನ್ನೂ 1ನೀರಜಾಂಬಕೆ ಯನಗೆ | ತೋರು ಸಾಧನ ಕುನಗೆ |ಜಾರಿಸು ಭಕುತಿಯನ್ನು | ತೋರು ಕರುಣಾ ||ವಾರಿಧಿಹರಿಯಪಾದ| ಆರಾಧಿಸಲುಮೋದ|ವಾರವಾರಕೆ ಈಯೇ |ವಾರಣಗಮನೆಯೇ 2ಪ್ರಾಣೇಶ ವಿಠಲನ | ಧ್ಯಾನದೊಳಗಿರಿಸು ಮನ |ವಾಣೀ ಪದವೈದುವಳೇ |ಮಾನನಿನ್ನದೆಲೆ ||ಹೀನ ವಿಷಯಗಳೊಲ್ಲೆ | ನೀನೇ ಸ್ವಾಂತದಿ ನಿಲ್ಲೆ |ಕ್ಷೋಣಿಯೊಳಗತಿ ಮಾನೀ | ಜ್ಞಾನೀ ಅಹಿವೇಣೀ 3
--------------
ಪ್ರಾಣೇಶದಾಸರು
ಶರಣು ಶರಣು ಶರಣ್ಯವಂದಿತ ಶಂಖಚಕ್ರಗದಾಧರ |ಶರಣು ಸರ್ವೇಶ್ವರ ಅಹೋಬಲ ಶರಣ ಸಲಹೋ ನರಹರಿ ಪ.ಶೀಲದಲಿ ಶಿಶು ನಿನ್ನ ನೆನೆಯಲುಕಾಲಲೋತ್ತುತ ಖಳರನು |ಲೀಲೆಯಿಂದಲಿ ಚಿಟಿಲು ಭುಗಿಭುಗಿ -ಲೆನುತ ಉಕ್ಕಿನ ಕಂಬದಿ ||ಖೂಳದೈತ್ಯನ ತೋಳಿನಿಂದಲಿ ಸೀಳಿಹೊಟ್ಟೆಯ ಕರುಳನು ||ಮಾಲೆಯನು ಕೊರಳೊಳಗೆ ಧರಿಸಿದಜ್ವಾಲನರಸಿಂಹಮೂರ್ತಿಗೆ 1ಖಳಖಳಾ ಖಳನೆಂದು ಕೂಗಲು ಕೋಟಿ ಸಿಡಿಲಿನ ರಭಸದಿ ||ಜಲಧಿ ಗುಳಗುಳನೆದ್ದು ಉಕ್ಕಲು ಜ್ವಲಿತ ಕುಲಗಿರಿ ಉರುಳಲು ||ನೆಲನು ಬಳಬಳನೆಂದು ಬಿರಿಯಲು ಕೆಳಗೆ ದಿಗ್ಗಜ ನಡುಗಲು ||ಥಳ ಥಳಾ ಥಳ ಹೊಳೆವ ಮಿಂಚಿನೊಲ್ಹೊಳೆವ ನರಸಿಂಹ ಮೂರ್ತಿಗೆ 2ಕೋರೆ ಕೆಂಜೆಡೆ ಕಣ್ಣು ಕಿವಿ ತೆರೆ -ಬಾಯಿ ಮೂಗಿನ ಶ್ವಾಸದಿ||ಮೇರುಗಿರಿ ಮಿಗಿಮಿಗಿಲು ಮಿಕ್ಕುವ ತೋರ ಕಿಡಿಗಳ ಸೂಸುತ ||ಸಾರಿಸಾರಿಗೆ ಹೃದಯರಕುತವ ಸೂರೆ ಸುರಿಸುರಿದೆರಗುತಘೋರರೂಪಗಳಿಂದ ಮೆರೆಯುವ ಧೀರ ನರಹರಿಮೂರ್ತಿಗೆ3ಹರನು ವಾರಿಜಭವನು ಕರಗಳ ಮುಗಿದು ಜಯಜಯವೆನುತಿರೆ ||ತರಳ ಪ್ರಹ್ಲಾದನಿಗೆ ತಮ್ಮಯ ಶರಿರಬಾಧೆಯ ಪೇಳಲು ||ಕರುಣಿ ಎನ್ನನು ಕರುಣಿಸೆನ್ನಲು ತ್ವರದಲಭಯವನೀಡುತ ||ಸಿರಿಬರಲು ತೊಡೆಯಲ್ಲಿ ಧರಿಸಿದ ಶಾಂತ ನರಹರಿಮೂರ್ತಿಗೆ4ವರವ ಬೇಡಿ ದನಿರುವ ತಂದೆಯ ಪರಿಯನೆಲ್ಲವ ಬಣ್ಣಿಸಿ ||ನಿರುತದಲಿ ನಿನ್ನೆರಡು ತೊಡೆಯಲಿ ಶರೀರವಿರಲೆಂದೆನುತಲಿ ||ಸುರರು ಪುಷ್ಪದ ವೃಷ್ಟಿಗರೆಯಲು ಸರಸಿಜಾಕ್ಷನು ಶಾಂತದಿ ||ಸಿರಿಯ ಸುಖವನು ಮರೆದಹೋಬಲವರದ ಪುರಂದರವಿಠಲಗೆ 5
--------------
ಪುರಂದರದಾಸರು
ಶರಣು ಶರಣ್ಯರ ಸುರತರುವೆ ನಿನ್ನಚರಣಶರಣರಿಗೆ ಭಯವಿಲ್ಲ ಪ.ದ್ರುಪದಾತ್ಮಜೆಯನಸುರ ಪಿಡಿದೆಳೆ ತಂದಪಮಾನಕಾಗಿ ಉಡುಗೆ ಸೆಳೆಯೆಅಪುಶಯನ ಮುಕುಂದ ಅಪಹಾಸವಾಯಿತೆಲಪರಮಪೀತಾಂಬರ ಒದಗಿತಂದು ದೇವಾ 1ಮದದೊಳಂತ್ಯಜ ತರುಣಿಗೆ ಸೋತುಪರಮಾಧಮಜಾಮಿಳ ತನ್ನಂತ್ಯಕಾಲದಿಮುದದಿ ಕಡೆಯ ಸುತನ ನಾರಗ ಬಾರೆಂದೊದರಲು ಪೊರೆದೆ ದಾಸನ ಮರಳಿ 2ವಿಗಡಮುನಿಶಾಪಕೆಇಂದ್ರದ್ಯುಮ್ನಮದನಾಗನಾಗಿ ನೆಗಳ ಬಾಯಿಗೆ ಸಿಲುಕೆಅಘಹರ ಸಲಹೆಂದರೆ ವಾಮಕರದಿಂದನೆಗಹಿದೆ ಪ್ರಸನ್ನ ವೆಂಕಟರನ್ನ 3
--------------
ಪ್ರಸನ್ನವೆಂಕಟದಾಸರು
ಶರಣು ಶುಭಾಮಲಕಾಯ ಋಜುಗಣಾಭರಣಾನಂದ ಮುನಿರಾಯಹರಿಗುಣಗಣವಾರಿಧಿಮಗ್ನನೆ ಜಯಪರಮಪದಜÕನೆ ಜಯತು ಸದಾ ಜಯ ಪ.ಶುಕ್ಲರುಧಿರನಿರ್ಲಿಪ್ತ ಪರತತ್ವಕ್ಲುಪ್ತನೆ ತ್ರಿಜಗವ್ಯಾಪ್ತಅಕ್ಲೇಶಾನ್ವಿತ ಮಾಯಾಮನಹರಅಜÕಜನೋದ್ಧರ ಜಯತು ಸದಾ ಜಯ 1ಶಲ್ಯರಾಜನ ಭಟಹಾರಿ ಮಹಾವಾತ್ಸಲ್ಯಾಂಕಿತ ಸುಖಕಾರಿಬಾಲ್ಯತನದಿ ಜಗದ್ಗುರುವೆನಿಸಿದೆ ಕೈವಲ್ಯದಾಯಕ ಪ್ರಭು ಜಯತು ಸದಾ ಜಯ 2ಸೂತ್ರಾರ್ಥದ ಧೀ ಮಾತ್ರದೇಹಿ ವಿಧಾತೃ ಜನಕ ಪದಪ್ರೇಮಪಾತ್ರಪೌತ್ರ ಪ್ರಸನ್ನವೆಂಕಟಪತಿ ಪೂರ್ಣವೇತೃ ನಂಬಿದೆ ಜಯತು ಸದಾ ಜಯ 3
--------------
ಪ್ರಸನ್ನವೆಂಕಟದಾಸರು
ಶರಣು ಹರಿಯಶರಣಗ್ರೇಸರನೆ ಹನುಮ ಭೀಮ ಮಧ್ವಚಿನ್ನ ತಪುತಕಾಯ ನೊಸಲಲಿನ್ನು ಊಧ್ರ್ವಪುಂಡ್ರ ತುಲಸಿಚಿನ್ನದೊಂಟಿ ಚೌಕಳಿ ಮೋಹನ್ನಸರ ಕಿರೀಟಧಾರಿಮಧ್ಯಗೇಹ್ಯ ನೋಂಪಿ ಅಭಿವೃದ್ಧಿ ಆದದ್ದು ಕಂಡುಮೂರು ಅವತಾರದಲಿ ಮೂರು ಮೂರು ಭಕುತಿಯಿಂದ
--------------
ಗೋಪಾಲದಾಸರು
ಶಾಂತೇರಿ ಕಾಮಾಕ್ಷಿ ತಾಯೇ ಅ-ನಂತಪರಾಧವ ಕ್ಷಮಿಸು ಮಹಮಾಯೇ ಪ.ಸರ್ವಭೂತಹೃದಯಕಮಲ ನಿವಾಸಿನಿಶರ್ವರೀಶಭೂಷೆ ಸಲಹು ಜಗದೀಶೆ 1ಮೂಲ ಪ್ರಕೃತಿನೀನೆ ಮುನಿದು ನಿಂತರೆನ್ನಪಾಲಿಸುವವರ್ಯಾರುಪರಮಪಾವನ್ನೆ2ನಿನ್ನಾಧೀನವು ನಿಖಿಲ ಬ್ರಹ್ಮಾಂಡವುಮನ್ನಿಸು ಮಹಾದೇವಿ ಭಕ್ತಸಂಜೀವಿ 3ಗೋವೆಯಿಂದ ಬಂದೆ ಗೋವಿಂದಭಗಿನಿಸೇವಕಜನರಿಂದ ಸೇವೆ ಕೈಕೊಂಬೆ 4ಪೃಥ್ವಿಗುತ್ತಮ ಕುಮಟಕ್ಷೇತ್ರನಿವಾಸಿನಿಕರ್ತಲಕ್ಷ್ಮೀನಾರಾಯಣೀಕಲ್ಯಾಣಿ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶಾರದೆ ಜಗದ್ಭರಿತೆ ಸರಸ್ವತೆ ||ಸಾರಸದ್ಗುಣಚರಿತೆವಾರಿಜೋದ್ಭವನ ಪಾದಾರವಿಂದಾರ್ಚಿತೆ |ತೋರೆ ದಯವ | ಕೀರವಾಣಿ ಕಲ್ಯಾಣಿಯೆ ||ಶುಭಕರೆ ಶುಭವದನೇ ಸರ್ವೇಶ್ವರಿ |ಪ್ರಭಾಕರ ಪ್ರಭಾವದನೆ ಪಇಭರಾಜಗಮನೆ| ಸದ್ಬುದ್ಧಿಪ್ರದಾಯಿನಿ |ಅಭಯನೀಯುತಲೆನ್ನ | ಸಲಹು ಸ್ತ್ರೀಸಭಾಶೋಭೆ 1ತಾಯೆ ಮಯೂರ ವಾಹಿನೀ | ಜಯ ಜಯ ಜಗ -|ನ್ಮಾಯೆ ಮೋಹನ ರೂಪಿಣೀ ||ತೋಯಜಕುಸುಮದಳಾಯತ | ಲೋಚನೆ |ಕಾಯೇ ದಯದಿಭವಹೇಯವಿದಾರಿಣಿ 2ನೀತೆ ಪರಮಪುನೀತೆ | ಪಾಲಿಸು ಲೋಕ |ಮಾತೆ ಪಾವನ ಚರಿತೆ |ದಾತೆ ತ್ರಿಲೋಕ | ವಿಖ್ಯಾತೆ ಬ್ರಹ್ಮನ ಪ್ರೀತೆ ಆತ್ಮರಕ್ಷಿಣಿ |
--------------
ಗೋವಿಂದದಾಸ