ಒಟ್ಟು 19311 ಕಡೆಗಳಲ್ಲಿ , 135 ದಾಸರು , 7892 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ಬಾರೋ ಬಾರೋ ಹರಿ ತೋರೋ ತೋರೋ ಮುಖವ ದೊರಿ ಪ ಧೀರನೆ ಬಹುಗಂಭೀರನೆ ಗೋರಸ ಗೋಪಿ ಜಾರನೆ ಬ್ಯಾಗನೆ ವೀರಾಧಿವೀರನೆ ಎನ್ನ ವಾರೆ ನೋಟ ನೋಡುವರೆ ಭೃಂಗಗಳ್ಯಾತಕೆ ಕೂಗಿದವೊ ಅಂಗಜ ಶರಗಳು ಸೇರಿದವೊ ಪಿಳಂಗೊಳವಿನೂದಲು ಆ ರಂಗ ಎನ್ನ ಬಿಡಿಸಿದ 1 ಕಾವರೆ ನಿನ್ಹೊರತಿನಾರೊ ಭಾವಜಪಿತ ಮಂದಿರ ಸೇರೊ ದೇವನೆ ಭಕುತರ ಕಾವನೆ ವರಗಳ ನೀವನೆ ರಿಪುವನದಾವನೆ ಬ್ಯಾಗನೆ ದೇವಾದಿ ದೇವನೆ ಎನ್ನ ಕಾವನು ನೀನಲ್ಲದೆ ಇ ನ್ಯಾವನು ಈ ಭೂಮಿಯೊಳ ಗೀವನು ಕಾಣಿನೊ ನಾನೊಬ್ಬ2 ಈ ಸಮಯದಿ ಪರಿಪಾಲಿಪರ್ಯಾರೋ ವಾಸುದೇವವಿಟ್ಠಲ ನೀ ತೋರೋ ಶ್ರೀಶನೆ ಸುಂದರಹಾಸನೆ ಮುನಿ ಮನ ವಾಸನೆ ಶತರವಿ ಭಾಸನೆ ಬ್ಯಾಗನೆ ಹಾಸುಮಂಚದೊಳು ಹುವ್ವಿನ ಹಾಸಿಕಿಯೊಳು ಮಲಗಿ ಬ್ಯಾಸರಗೊಂಡೆನು ಪರಿ ಹಾಸವ ಮಾಡದೆ ಬ್ಯಾಗ 3
--------------
ವ್ಯಾಸತತ್ವಜ್ಞದಾಸರು
ಬಾರೋ ಬಾರೋ ಮನುಕುಲಗುರುಗುಹಾ ಸೇರಿದಾನತರ್ಗೆ ಚಾರುಸುರಭೂರುಹಪ. ಮಾನಾಭಿಮಾನ ನಮ್ಮದು ನಿನ್ನಾಧೀನ ದೀನಜನರ ಸುರಧೇನು ಮಹಾಸೇನ1 ಶಕ್ತಿ ಕುಕ್ಕುಟವಜ್ರಾಭಯ ಚತುರ್ಭುಜನೆ ಭಕ್ತಿಜ್ಞಾನವನೀಯೋ ಶಂಕರಾತ್ಮಜನೆ 2 ಲಕ್ಷ್ಮೀನಾರಾಯಣನ ಧ್ಯಾನಾಭರಣ ಸುಕ್ಷೇತ್ರಪಾವಂಜಾಧ್ಯಕ್ಷ ರವಿಕಿರಣ3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರೋ ಬಾರೋ ರಂಗಯ್ಯಾ | ಅಂದುಗೆ ಗೆಜ್ಜೆ | ಝಣ ಝಣ ಝಣ ಝಣ ರವದಿಂದಾ ಪ ಕಡೆಗಣ್ಣು ಹೊಳವನು | ಅಡಿಗಡಿಗೆ ದೋರುತಾ | ಎಡಬಲದೋಳಿಂದೊಲಿದು | ದುಡುದುಡು ದುಡು ನಲಿಯುತಾ 1 ಪದಹತಿಗೆ ಮಯೂರಾ | ವದನ ತಗ್ಗಿಸುವಂತೆ | ಮುದದಿ ಗೆಳೆಯರವೆರಸಿ | ಒದಗಿ ಧಿಗಿಧಿಗಿ ಧಿಗಿಲೆನುತಾ 2 ಅಂದು ಉದಯದಲೆದ್ದು | ಬಂದು ಬೆಣ್ಣೆಯ ಬೇಡೆ | ಕಂದಾ ನೀ ಕುಣಿಯೆನಲು | ನಿಂದು ತೋರಿದ ಭಾವದಿಂದ 3 ಬಿರಮುಗುಳ ನಗುತಾ | ಪೆರೆ ನೊಸಲೊಳು ಮೆರೆವಾ | ಕರ್ಣ ಕುಂಡಲಾ | ಭರದಿಂದಾ ಒಲಿಯುತಾ 4 ಗುರು ಮಹಿಪತಿ ಸ್ವಾಮಿ | ಹಾರೈಸುವಾ ನಯನಕ | ಹರುಷದಿ ತೃಪ್ತಿಗೈವಾ | ಕರುಣಾ ಸಾಕಾರದಿಂದಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ರಂಗಾ ಪ ಬಾರೈಯ್ಯಾ ಯದುವೀರಾ | ಈರೇಳು ಭುವನಾಧಾರಾ | ಶ್ರೀ ರಮಣಿಯ ಮನೋಹರಾ | ವಾರಣ ಭಯ ನಿವಾರಾ | ಕರುಣಾಕರಾ | ದೀನೋದ್ಧಾರಾ | ಸರ್ವಾಧಾರಾ | ಪರಮ ಉದಾರಾ | ಸುರಸಹತಾರಾ | ದಯಾಸಾಗರ 1 ಒದಗುವೆ ಸ್ಮರಣೆಗೆ ನೇಮಾ | ಮದನಜನಕ ಮಹಮಹಿಮಾ | ಜೀಮೂತ ಶಾಮಾ | ಸದ್ಗುಣ ಧಾಮಾ | ಪೂರಿತ ಕಾಮಾ | ತ್ರಿವಿಕ್ರಮಾ | ಅನಂತ ನಾಮಾ | ಲೋಕಾಭಿರಾವi 2 ಅಸುರ ಕುಲ ಸಂಹರಣಾ | ಬಿಸರುಹ ಸಖ ಶತ ಕಿರಣಾ | ಅಸಮನೆ ಮಹಿಪತಿ ಸುತನಾ | ಪೋಷಿಸುವೆ ನೀ ಪರಿಪೂರ್ಣ ಖಗವರ ಗಮನಾ | ಮೃದುತರ ಚರಣಾ | ಅಹಲ್ಯೋದ್ಧರಣಾ | ಕನPsÀರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ರಂಗಾ ಬಾರೋ ಬಾರೋ ಪ ಮಾವನ ಮರ್ದನ ಬಾರೋ ಮಾವನ ಮಾವನೆ ಬಾರೋ | ಮಾವನೋಳು ಕಾದಿ ಮಾವನಿತ್ತ ಮಣಿಯ ನೀನು 1 ಮಗನ ಅತ್ಮನಲಿ ಬಂದ ಮಗನ ಮಾವನ ತರಿದೆ 2 ಮೈದುನನಾ ಧರಿಸಿದನಾ ಮೈದುನಾರಿಯಣ್ಣ ಬಾರೋ | ಮೈದುನ ಬೋವಾ ಮಹಿಪತಿ ಪದ ಭಜಿಪರೊಡಿಯಾ ಕೃಷ್ಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೋ ಬಾರೋ ಶ್ರೀಗುರುರಾಯ ಬಾರೋ ಬಾರೋ ಭೂಸುರವರ್ಯ ಬಾರೋ ಬಾರೋ ಭಕ್ತಪ್ರೀಯ ಕಾಯ ಪ ಘೋರಾರಣ್ಯದೊಳು ಬಂದು ಸೇರಿದೆನೊ ದುಷ್ಕರ್ಮದಿ] ಕ್ರೂರ ಮೃಗಗಳೆನ್ನತಿ ಬಾಧಿಸುತಿಹವು ಚೋರರುಪದ್ರವವನ್ನು ನಾ ಸಹಿಸಲಾರೆ ಇಷ್ಟೆನುತ ದೂರ ನೋಳ್ವರೆ ವ್ಯಾಳ್ಯಕೆ ಸೂರಿವರೇಣ್ಯ 1 ಮಂದಜನ ಸಂಗದಿಂದ ತಂದೆ ತ್ವತ್ಪಾದಾರ ವಿಂದ ಪೊಂದದಿರೆ ಸಂಧಿಸಿಎನ್ನಗೆ ಬಂದÀ ಬನ್ನ ಹಿಂದೆ ನೀ ನಾಲ್ವರಿಯಲಿಲ್ಲೆ ಸಂದೇಹವ್ಯಾಕೆ 2 ಇಂದ್ರ ಸಮವಿರಾಜಿತ ಇಂದ್ರ ವಿರೋಧಿ ಸಂಭೂತ ಇಂದ್ರ ದೇವಾಧಿ ಮಾನಿತ ಆನಂದ ಪ್ರದಾತ ಇಂದ್ರ ಜಾರಿ ಸೂತ ಶಾಮಸುಂದರವಿಠಲ ದೂತ ಇಂದ್ರ ಜಾತಾಖ್ಯರ ಪ್ರೀತ ಇಂದ್ರಾರ್ಯಪೋತ 3
--------------
ಶಾಮಸುಂದರ ವಿಠಲ
ಬಾರೋ ಬಾರೋ ಸುಂದರನೆ ಬರ ಹೇಳಿದಳೊ ನಿನ್ನ ರಮಣಿ ಪ ಶುಕಪಿಕರವದಿಂದ ವಿಕಳಿತಳಾಗಿ ಧೈರ್ಯ ಕಕವಿಕಳಾಗಿಹಳಿವಳು ನೀ ಬೇಗನೆ 1 ಸಾರ ಸುಗುಣೆ ನಿನ್ನ ದಾರಿಯ ನೋಡಿ ನೋಡಿ ಸರಸಿಜಮುಖಿ ನೀ ಪೋಗಿ ಬಾರೆಂದಳು 2 ಶ್ರೀ ವಾಸುದೇವವಿಠಲ ನಿನ್ನಯ ಸಖಿ ಭಾವಜನ ರೂಪವ ತೋರು ತೋರಿಸೆಂದಳು 3
--------------
ವ್ಯಾಸತತ್ವಜ್ಞದಾಸರು
ಬಾರೋ ಬಾಲಾ ಬಾ ಅಪ್ಪುವೆ ತಾರೋ ತೋಳನು ತಾಭೂರಿ ದೃಷ್ಟಿಯ ಮಾಲಿಯನ್ಹಾಕಿದಾಪಾರ ಮಹಿಮ ಬಾ ಪ ಐದು ವರುಷ ಬಾ ಎನಗೆ ಬೋಧವ ನೀಡಿದಿ ಬಾಸಾಧು ಸೇವಿತ ಶ್ರೀಧರ ಭೂಧರ ಗೋಧರಧರನೇ ಬಾ 1 ಗೌರ ಮುಖನೆ ಬಾ ಕರುಣಾವಾರಿ ನಿಧಿಯೇ ಬಾಆರ ಮಾತನು ಹಚಿಕೋ ಬ್ಯಾಡೆಲೆ ಸಾರಿದ ಕೃಷ್ಣ 2 ಗೋಪಿ ಬಂಧನ ಹರಣಾ ಬಾಮುಂದೆ ನಿಲ್ಲುತ ಮಾತುಗಳಾಡಿಸಿ ಇಂದಿರೇಶ ಬಾ 3
--------------
ಇಂದಿರೇಶರು
ಬಾರೋ ಬೇಗ ತೋರೋ ಮುಖವನು ನಿನ್ನ ಬಾರಿಗೆ ಬಿದ್ದೆನು ಪಾರಗಾಣಿಸೊ ಪ ಅಂಗಜನಯ್ಯಾ ಭುಜಂಗ ಶಯನಾ ಶ್ರೀ ರಂಗ ಎನ್ನಾ ಅಂತರಂಗಕ್ಕೆ ನೀ 1 ಕಂಜಲೋಚನ ನಾ ನಿನಗಂಜಲಿ ಮುಗಿಯುವೆ ಕುಂಜರೇಶ ವರದ ಭುಜಂಗ ಶಯನ2 ಘನ್ನಮಹಿಮ ಸನ್ಮತಿಯ ಪಾಲಿಸು ಪ್ರ ಸನ್ನ ಪ್ರಾಣನಾಥ ವಿಠಲರಾಯನೆ 3
--------------
ಬಾಗೇಪಲ್ಲಿ ಶೇಷದಾಸರು
ಬಾರೋ ಬೇಗ ಬಾರೋ ರಾಮ ಬಾರೋ ನೀ ಮೊಗದೋರೋ ರಾಮ ಪ ಅಗಣಿತ ಮಹಿಮ ರಘುಕುಲೋದ್ಧಾಮ ನಿಗಮಾಗಮ ಪೂಜಿತ ಶ್ರೀರಾಮ 1 ನಿಕರ ದುರಿತಾರಿ ರಾಮ 2 ಹರಣ ರಮಾಪತಿ ಚರಣ 3
--------------
ಅನ್ಯದಾಸರು
ಬಾರೋ ಬೇಗನೆ ರಾಮಾ ನೀ ಬಾ ಪ ಏಕೆ ಪಂತರ ಮನೆಯೊಳು ನೀರ ತಂದೆ | ಲೋಕದೊಳಗೆ ನಿನ್ನ ಮಹಿಮೆಗೆ ಕುಂದೇ1 ಅಂದು ಕಬೀರನ ಸತಿಗಾಗಿ ಹಿಂದೆ |ಛಂದಾಗಿ ಕೊತವಾಲನಾಗಿ ಬಂದೆ 2 ಗುರು ಭವತಾರಕ ಎನ್ನ ತಂದೆ |ಆರು ಮುನಿದರೂ ಏನಿಲ್ಲ ಮುಂದೆ 3
--------------
ಭಾವತರಕರು
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಾರೋ ಮನೆಗೆ ಭಾಗವತರ ಭಾಗದೇಯನೆ ಚಾರುವದನ ತಾಮರಸವ ತೋರು ಪ್ರೀಯನೆ ಪ ಹಗಲು ಇರುಳು ನೆನಹು ಬಿಡದು ಸುಗುಣ ಸುಂದರ ಬಗೆಯೊಳಿನ್ನ ಮರೆಯಬಹುದೆ ನಿಗಮಗೋಚರ 1 ಕಣ್ಣಿನಿಂದ ನಿನ್ನ ನೋಡಿ ಧನ್ಯನಾಗುವೆ ನಿನ್ನ ಚರಣಕೆನ್ನ ಶಿರದಿ ಮುನ್ನಬಾಗುವೆ 2 ನಿತ್ಯತೃಪ್ತನಿನಗೆ ನಾನೇ ಭೃತ್ಯನಾಗುವೆ ನೃತ್ಯಗೈದು ಪಾಡಿ ಕೃತಕೃತ್ಯನಾಗುವೆ 3 ಶ್ರೀನಿವಾಸ ನಿನ್ನ ದಾಸ ನಾನೇನಲ್ಲವೆ ಮಾನಪ್ರಾಣಗಳಿಗೆ ದೊರೆಯು ನೀನೆಯಲ್ಲವೆ 4 ಶರಣ ಜನರ ಭರಣಗೈವ ಕರುಣಿಯಾರೆಲಾ ಹರಣ ಹರಧರದೊಳಿರುವ ವರದ ವಿಠಲಾ 5
--------------
ವೆಂಕಟವರದಾರ್ಯರು
ಬಾರೋ ಮನೆಗೆ ರಂಗಾ ಕರುಣಾ ಪಾಂಗ ನರಸಿಂಗ ಪ. ಬಾರೋ ನಿನ ಪರಿವಾರ ಸಹಿತಲಿ ವಾರೆರೊಡಗೂಡಿ ನೀರಜಾಕ್ಷನೆ ಭವ ಕರುಣಾಂಬುದೆ ಅ.ಪ. ಪಿಡಿದು ಖಡ್ಗವ ನಿನ್ನ ವಡೆಯನ ತೋರೆಂದು ಘುಡುಘುಡಿಸಲು ಕಂದ ವಡನೆ ಕೂಗೆ ವಡಲ ಬಗೆದು ಕರುಳ ಮಾಲೆಯ ಪಿಡಿದು ಧರಿಸುತ ವಡನೆ ಭಕ್ತನ ಬಿಡದೆ ಸಲಹಿದ ಕಡು ದಯಾನಿಧೆ 1 ಪಿತನ ತೊಡೆಯಿಂದ ಭೂಪತಿಸತಿ ನೂಕಲು ಅತಿಭಯದಲಿ ಧ್ರುವ ಖತಿಗೊಳ್ಳುತ ಪತಿತ ಪಾವನ ನಿನ್ನ ಕಾಣಲು ಮುನಿ ಪತಿಯು ಪೇಳಿದ ಪಥದಿ ಪುಡುಕೆ ಅತಿಶಯದಿ ಬಂದ್ಹಿತವ ಕೋರಿದ ಗುಣಾನ್ವಿತ ದಯಾಂಬುಧೆ2 ಕರಿ ಮೊರೆಯಿಡೆ ಸಿರಿಗ್ಹೇಳದಲೆ ಬಂದು ಗರುಡ ಗಮನನಾಗಿ ತ್ವರಿತದಿಂದ ಶರಣಪಾಲಕ ನಿನ್ನ ಚಕ್ರದಿ ತರಿದು ನಕ್ರ ನಕರಿಯ ಪೊರೆದ ತೆರದೊಳೆನ್ನ ವಗುಣಗಳೆಣಿಸದೆ ಹರುಷದಲಿ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬಾರೋ ಮನೆಗೆ ಶ್ರೀಧರನೆ ನಿಜಪರಿ ವಾರದೊಡನೆ ಗುಣವಾರಿಧಿಯೆ ಪ ಮಾರಜನಕ ಸುಕುಮಾರಾಂಗ ಪರಮೋ ದಾರಾಕೃತಿಯ ನೀ ತೋರಿಸೆನಗೆ 1 ಎಷ್ಟು ಜನ್ಮದ ತಪ ಒಟ್ಟಾಗಿ ಸೇರಲು ದೃಷ್ಟಿಸುವೆನೊ ಶ್ರೀ ಕೃಷ್ಣ ನಿನ್ನನು 2 ಚಿನ್ನದ ಪೀಠದಿ ರನ್ನದ ಕಲಶದಿ ಚನ್ನಾಗಿ ತೊಳೆಯವೆ ನಿನ್ನಡಿಗಳ 3 ಗಂಧವ ಹಚ್ಚಿ ಸುಗಂಧ ತುಳಸೀದಳ ದಿಂದಾಲಂಕರಿಸುವೆ ಸುಂದರಾಂಗನೆ 4 ಜಾಜಿಯು ಮೊದಲಾದ ಹೂಜಾತಿಗಳ ತಂದು ಮೂಜಗದೊಡೆಯನನು ಪೂಜಿಸುವೆನೊ5 ಲೋಪವಿಲ್ಲದೆ ದಿವ್ಯ ಧೂಪವನರ್ಪಿಸಿ ದೀಪಂಗಳನು ಬಹು ದೀಪಿಸುವೆನು 6 ಘೃತ ಮೇಲಾದ ಭೋಜ್ಯವ ಮೇಳೈಸುವೆನು ಶ್ರೀಲೋಲನಿಗೆ 7 ಕರ್ಪೂರವೀಳ್ಯವನರ್ಪಿಸಿ ಮೋದದಿ ಕರ್ಪೂರದಾರತಿಗಳರ್ಪಿಸುವೆನು 8 ಮಣಿದು ನಿನ್ನಂಘ್ರಿಗೆ ಹಣೆಯ ಚಾಚುತ ಮನ ದಣಿಯುವಂದದಿ ನಾ ಕುಣಿದಾಡುವೆ 9 ಸದಯ ನಿನ್ನಂಘ್ರಿಯ ಹೃದಯಾರವಿಂದದ ಸದನದೊಳಿಂಬಿಟ್ಟು ಮುದಮೊಂದುವೆ 10 ಶರಣಾಗತರನೆಲ್ಲ ಕರುಣದಿ ಸಲಹುವ ವರದವಿಠಲ ಪುಲಿಗಿರಿಧಾಮನೆ 11
--------------
ವೆಂಕಟವರದಾರ್ಯರು