ಒಟ್ಟು 454 ಕಡೆಗಳಲ್ಲಿ , 77 ದಾಸರು , 415 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಲ್ಲೀದೇವಿಯ ವಲ್ಲಭನೆಬಲ್ಲಿದಭಕ್ತರ ಸುಲ್ಲಭನೆಪ.ಸಲ್ಲಲಿತ ಪಾದಪಲ್ಲವ ಭಜಿಸುವ-ರೆಲ್ಲರ ಮನಸಿನೊಳುಲ್ಲಸನೆ ಅ.ಪ.ವೃಂದಾರಕಮುನಿವಂದಿತನೆಕಂದರ್ಪಾಮಿತಸುಂದರನೆಸ್ಕಂದನೆ ಸಚ್ಚಿದಾನಂದನೆ ಪಾರ್ವತೀ-ನಂದನ ಸದ್ಗುಣಮಂದಿರನೆ 1ತಾರಕದೈತ್ಯ ಸಂಹಾರಕನೆಸೇರಿದ ಭಕ್ತೋದ್ಧಾರಕನೆಮಾರಾರಿಯ ಸುಕುಮಾರನೆ ಧೀರನೆಚಾರುಮಯೂರ ತುರಂಗಮನೆ2ಲಕ್ಷುಮಿನಾರಾಯಣ ಪ್ರಿಯನೆರಕ್ಕಸರಿಂಗತಿದುಃಖದನೆಕುಕ್ಕುಟವಜ್ರಾಭಯಶಕ್ತಿಹಸ್ತನೆಪ್ರಖ್ಯಾತ ಪಾವಂಜಾಖ್ಯ ಪುರವರನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಾಸುದೇವ ನಿನ್ನವರ್ಮ ಕರ್ಮಂಗಳದೇಶ ದೇಶದೊಳು ಹೇಳಲೆ ? ಪಬೇಸರಿಯದೆ ಎನ್ನ ಹೃದಯ ಕಮಲದಲ್ಲಿವಾಸವಾಗಿ ಸುಮ್ಮನಿರುವೆಯೊ ? ಅ.ಪಮತ್ಸರೂಪನಾಗಿ ಮನಸು ಕಾಣಿಸಿಕೊಂಡು ಮಕ್ಕಳತಿದ್ದಿದ್ದು ಹೇಳಲೆ ?ಉತ್ಸಾಹದಿಂದ ನಿಗಮವ ತಂದು ಬ್ರಹ್ಮಗೆ ಮೆಚ್ಚಿಕೊಟ್ಟದ್ದು ನಾ ಹೇಳಲೆ 1ಕಡಗೋಲು ಮಂಡೆಯಂದದಿ ಕೈಕಾಲು ಮುದುಡಿಕೊಂಡದ್ದು ನಾ ಹೇಳಲೆ ?ಕಡಲೊಳಗಿಂದ ಪಾತಾಳಕೆ ಇಳಿದಿಳೆ ಪಡೆದಾತನ ಸುದ್ದಿ ಹೇಳಲೆ 2ಹುಚ್ಚುಮನಸುಮಾಡಿ ಕಚ್ಚುತ ಕೆದರುತ ರಚ್ಚೆಯಿಕ್ಕಿದಸುದ್ದಿ ಹೇಳಲೆ ?ಮುಚ್ಚಿದ ಭೂಮಿಯ ಹಲ್ಲಿಂದ ಕಿತ್ತಿದ ಹೆಚ್ಚುತನವ ನಾನು ಹೇಳಲೆ 3ಕಂದನ ಮಾತಿಗೆ ಕಡುಕೋಪದಿಂ ಬಂದು ಕಂಬವನೊಡೆದದ್ದು ಹೇಳಲೆ ?ಕುಂದದೆ ಹಿರಣ್ಯಕಶಿಪುವಿನುದರ ಸೀಳಿ ಕರುಳ್ಮಾಲೆಧರಿಸಿದ್ದು ಹೇಳಲೆ 4ಬಾಲನಾಗಿ ಬ್ರಹ್ಮಚಾರಿ ವೇಷವ ತೋರಿ ಬಲಿಯ ಬೇಡಿದುದನು ಹೇಳಲೆ ?ಲೀಲೆಯಿಂದಲಿ ಧರೆಯಈರಡಿ ಮಾಡಿದ ಜಾಲತನ್ವನುನಾನು ಹೇಳಲೆ5ಹೆಸರಿಲ್ಲದೆ ಹೋಗಿ ಹೆತ್ತತಾಯ್ ತಲೆಕುಟ್ಟಿ ಕೊಡಲಿಯ ಪಿಡಿದದ್ದು ಹೇಳಲೆ ?ಸೋಸಿ ದೈತ್ಯರನೆಲ್ಲ ರೋಸಿ ಪ್ರಾಣವ ಕೊಂಡ ದೋಷತನವ ನಾನು ಹೇಳಲೆ 6ತಾಯ ಮಾತನೆಕೇಳಿ ತಮ್ಮನ ಒಡಗೂಡಿಅಡವಿಯೊಳಿದ್ದುದು ಹೇಳಲೆ ?ಮಾಯಾಸೀತೆಗಾಗಿ ರಾವಣನನು ಕೊಂದು ಮಹಿಮೆಯ ನೆರೆದದ್ದು ಹೇಳಲೆ ? 7ತರಳತನದಲಿ ದುರುಳನಾಗಿ ಬಂದ ಒರಳೆಳೆತಂದದ್ದು ಹೇಳಲೆ(ಬೆರಳಿಂದ ಗಿರಿಯೆತ್ತಿ ಕಂಸನ ಕೊಂದ ಆ ) ದುರುಳತನದ ಸುದ್ದಿ ಹೇಳಲೆ 8.............................................................................................................................................................................. 9ರಾಯ ರಾವುತನಾಗಿ ರಾಯರ ಮನೆ ಪೊಕ್ಕು ಕಡುಗವ ಪಿಡಿದದ್ದು ಹೇಳಲೆ ?ಆಯತದಿಂದ ಕಲಿಯಲಿದ್ದು ಮನುಜರ ಮಾಯವ ತೋರಿದ್ದು ಹೇಳಲೆ 10ಧರೆಯೊಳಗಧಿಕವಾದ ಉರಗಗಿರಿಯಲ್ಲಿ ಸ್ಥಿರಿವಾಗಿನಿಂತದ್ದು ಹೇಳಲೆ ?ಕರುಣದಿಂ ಭಕುತರ ಪುರಂದರವಿಠಲನೆಂದು ನಾ ಹೇಳಲೆ 11 *
--------------
ಪುರಂದರದಾಸರು
ಶೇಷಾದ್ರಿತಟವಾಸ ಸುರೇಶ ಕಾಯೊ ನಿನ್ನದಾಸಾನುದಾಸ ನಾ ತಾರಿಸೊ ಪ.ಈ ಬೆಂದ ಭವಾಂಧಕಾರಿಂದಹಂದಿಂದೆ ನಾಮಂದಕಂದನು ನೊಂದೆನೊ ತಂದೆ ಹೊಂದಿಸುಗತಿ1ಎನ್ನೊಡೆಯ ಕೈವಿಡಿಯೊ ಅಮೃತ ನುಡಿಯೊ ಮೈದಡಹೊ ಮತ್ತಡಿಗಡಿಗೆಡರಂ ಬಡಿಯೊ ಮೃಡನುತ ಅಡಿಯಲ್ಲಿಡು 2ಶ್ರೀನಲ್ಲ ನೀನಲ್ಲದಾರಲ್ಲಾಶ್ರಯಿಲ್ಲಯ್ಯಬೆಲ್ಲವಿಲ್ಲನ ಗೆಲ್ವ ಪ್ರಸನ್ವೆಂಕಟೊಲ್ಲಭ ಜಯ 3
--------------
ಪ್ರಸನ್ನವೆಂಕಟದಾಸರು
ಶ್ಯಾಮಸುಂದರ ಶ್ರೀಮಾಧವಕಾಮಿಸುವಳಾ ಕಾಮಿನಿಯು ಪ.ಭಾಮಾಮಣಿಯು ನಿನ್ನನೀಕ್ಷಿಸದೆಯಾಮಯಾಮಕೆ ತಾಮಸಗೊಂಬಳು ಅ.ಪ.ಚಂದನಾದಿ ಸೌಗಂಧಕುಸುಮ ವಿಷ-ದಂದವೆಣಿಸುವಳು ಚಂದ್ರಮುಖಿಮಂದಾನಿಲ ಮಕರಂದ ಪಾನರಸ-ವೊಂದನೊಲ್ಲಳ ಪ್ರಿಯಸಖಿನಂದನ ಕಂದನೆ ವಂದನೆ ವಲ್ಲಭಗೈವಳು 1ಹಾರ ಹೀರ ಬಂಗಾರ ಭೂಷಣವಭಾರವೆಂದು ಶೃಂಗರಿಸಳುಕೀರಕೀಕಿಪಿಕಚೀರುಸ್ವನ ಶರ-ಧಾರೆಯೆಂದು ತಾ ಸೈರಿಸಳುಕಾರುಣ್ಯವಾರಿಧೆ ಬಾರದೆ ಬಾಯಾರಿರುವಳು 2ಮೀನಧ್ವಜನುರುಬಾಣದುರುಬೆಗೆಕ್ಷೀಣವಾಗಿಹಳು ಮೀನಾಕ್ಷಿಭಾನುತೇಜ ಲಕ್ಷ್ಮೀನಾರಾಯಣಧ್ಯಾನಿಸುವಳು ನಿನ್ನ ಪ್ರಾಣಸಖಿಮಾನಾಭಿಮಾನಾಧೀನವನಿನ್ನೊಳಗಿಟ್ಟಿಹಳು3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ನರಸಿಂಹ ಸ್ತೋತ್ರ11ವಂದಿಸು ನರಹರಿಯ ಮನವೆ ವಂದಿಸು ನರಹರಿಯವಂದ್ಯವಂದ್ಯನು ಬಹು ಸುಂದರ ಸುಖಮಯಇಂದಿರರಸ ಅರವಿಂದ ಸುನಾಭನ ವಂದಿಸು ನರಹರಿಯ ಪಸಿಂಧುಸಂಚರ ಬಹು ಸುಂದರ ಗಿರಿಧರತಂದನು ವಸುಧೆಯ ಕಂದನ ಕಾಯ್ದ ಪುರಂದರವರದ ಮುನೀಂದ್ರ ಕುಮಾರ ಕಪೀಂದ್ರಗÉ ಒಲಿದಮರೇಂದ್ರಗೆ ಬೋಧಿಸಿನಿಂದ ದಿಗಂಬರಕುಂಭಿಣಿಸುರನುತಮಂದರಗಿರಿ ಎತ್ತಿ ಸಿಂಧುವಿಂದಲಿ ಬಂದುಅಂಧ ಮೂಢರ ತನ್ನ ಅಂದ ಮೋಹದಿಕಟ್ಟಿದಾನ್ತ ಸುರರಿಗೆಲ್ಲ ಚಂದ ಸುಧೆಯನಿತ್ತಇಂದಿರಾಕಾಂತನನಂತ ಸುಗುಣಗಳಚಿಂತಿಸಿ ಯೋಗ್ಯದಿ ಕಂದದ ಪ್ರೇಮದಿವಂದಿಸು ನರಹರಿಯ 1ವೇದಾಂತರ್ಗತಬಾದರಾಯಣಹರಿಪಾದಾರಾಧಕಮೋದಸುತೀರ್ಥರಪಾದಾವಲಂಬಕ ಸಾಧು ಸುಮೇಧರಹೃದಯಾಕಾಶದಿ ಪದುಮದ ಮೂಲದಿಸದಮಲಾತ್ಮನಾದಿತ್ಯನುಪೋಲುವಿಧವಿಧಭಾಸದಿ ಪದೆ ಪದೆ ನೋಡುತವಿಧಿಯ ತಾತನ ಬಹುಮೋದಸುಗುಣಗಳಮುದದಲಿ ಚಿಂತಿಪಕೋವಿದಹಿರಿಯರಪಾದಸುಪಾಂಶುವ ನಿಯಮದಿ ಪೊಂದಿ ನೀಪದುಮೇಶನ ನಿನ್ನ ಹೃದಯದಿ ಚಿಂತಿಸಿವಂದಿಸು ನರಹರಿಯ 3ನಿಜಸುಖಮಾರ್ಗದಿ ಭಜಕ ಬಾಲಕ ಪೋಗೆಅರ್ಜಿತ ದ್ವೇಷದಿ ಮೂರ್ಜಗ ಶತ್ರುಗಜಾದಿಗಳಿಂ ಹೆಜ್ಜೆಜ್ಜೆಗೆ ಬಾಧಿಸೆಧೂರ್ಜಟಸೇವ್ಯ ಜನಾರ್ಧನ ನರಹರಿಗರ್ಜಿಪ ವದನನು ಸಜ್ಜನಪಾಲಕಅಜಸುರರೆಲ್ಲರು ತೇಜೋಮಯ ಅತಿಜ್ವಲಿಸುವ ನಖದಿಂ ದುರ್ಜನ ರಾಜನಜೋಜ್ಜೆಯ ಛೇದಿಸಿ ಭಜಕಗೆ ವರವಿತ್ತುಸೃಜ್ಯಾಸೃಜ್ಯರ ಪ್ರಾಜÕನ ಮರೆಯದೆವಂದಿಸು ನರಹರಿಯ 3ಸೃಷ್ಟ್ಯಾಧೀಶನದೃಷ್ಟನಾಗಿರುತಿಹಸೃಷ್ಟಾಸೃಷ್ಟ ಪ್ರವಿಷ್ಟಾಸೃಷ್ಟನುಶಿಷ್ಟರ ಇಷ್ಟ ಸುದೃಷ್ಟಿಯ ಬೀರುತಶಿಷ್ಟರ ಬಹು ವಿಧ ಕಷ್ಟಗಳಳಿದುಅಭೀಷ್ಟಗಳೀವನು ದುಷ್ಟರ ಶಿಕ್ಷಿಪಭ್ರಷ್ಟಜನರಿಗಿವ ಸ್ಪಷ್ಟನಾಗುವನಲ್ಲಶ್ರೇಷ್ಠೋತ್ತಮಪರಮೇಷ್ಠಿಜನಕನಿವಕಾಷ್ಟಾಗ್ನಿಯವೊಲ್ ಅದೃಷ್ಟಾದೃಷ್ಟನುದುಷ್ಟದೂರ ವಾಸಿಷ್ಠ ಶ್ರೀ ಕೃಷ್ಣನುತಿಷ್ಟನು ನಿನ್ನೊಳುತ್ಕøಷ್ಟನೆಂದರಿತುವಂದಿಸು ನರಹರಿಯ 4ಸರಿಪರರಿಲ್ಲದ ಸಿರಿಯರಸನಚಾರುಚರಣಾರಾಧನ ಪರಸುಖವೀವುದುಸಿರಿದೊರೆ ಸುಹೃದನು ಸಿರಿಸಹ ಮೆರೆಯುತಅರಿತ ಸುಜನರನು ಪೊರೆವನು ದಯದಿಮೊರೆಯನು ಲಾಲಿಸಿ ಪೊರೆದನು ಗರ್ಭವಮರೆತು ನಾರಾ ಎಂದ ನರಸುರಗೊಲಿದನುಪೊರೆದನು ದಯದಿ ನರಾಧಮ ಎನ್ನನುಕರಿವರ ದ್ರೌಪದಿವರದ ವಿಖ್ಯಾತನುಸರಸಿಜಭವತಾತ ಪ್ರಸನ್ನ ಶ್ರೀನಿವಾಸಪೊರೆವನು ನೆನೆವರ ಸಿರಿಭೂದೊರೆಯೆಂದುವಂದಿಸು ನರಹರಿಯ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಹರಿಯ ಸ್ತೋತ್ರಬಾಯಂದು ಕರೆವೆನೊ ದೇವ ನಿನ್ನಮಾಯಿವೈರಿಮಧ್ವರಾಯರ ಪ್ರೀಯನೆ ಪರಾಮ ನಿರಾಮಯಮಾಮನೋಹರಶೌರಿಸೋಮಧತಾರ್ಚಿತ ಸಾಮನುತಾ ಭೂಮಿಜಲೋಲಬಾರೊಸಾಮಜಪಾಲ ಬಾರೊಕಾಮಿತ ಶೀಲ ಬಾರೊತಾಮಸಕಾಲಪ್ರೇಮದಿ 1ಬಿಸಿದಾಭಾಸ್ಪಸನ ಮಾನಸಗೆಅಸುರವೈರಿಕುಸುಮಶರ ಪಿತಸುಮನಸವಂದಿತಾಅಸಮ ಶೂರ ಬಾರೊ ವಸುಧಿಧರ ಬಾರೊವ್ಯಸನಹರ ಬಾರೊಅಸುರವೈರಿಕುಶಲದಿ 2ನಂದನ ಕಂದನೆಇಂದಿರೆಮಂದಿರಸುಂದರ ಶಿರಿ ಗೋವಿಂದ ವಿಠಲಮಂದರಧರಬಾರೋ ಚಂದಿರಮೊಗ ಬಾರೊಛಂದದ ದೈವ ಬಾರೊ ಇಂದಿನ ಎನ್ನ ಮನಸಿಗೆ 3
--------------
ಸಿರಿಗೋವಿಂದವಿಠಲ
ಸುಬ್ರಹ್ಮಣ್ಯ ಸ್ವಾಮಿ ತೇ ನೌಮಿ ಶರಣಾಗತರ್ಗೆನಿರ್ಭಯವ ಪಾಲಿಸು ಪ್ರೇಮಿ ಪ.ಅಭ್ರವಾಹನಾದಿದೇವ ಸಭ್ಯ ಸಂಭಾವಿತ ಜಗ-ದಭ್ಯುದಯ ತೇಜೋಮಯ ಕರ್ಬುರಾಂತಕ ನಿಶ್ಯೋಕ ಅ.ಪ.ಭಾವಭಕ್ತಿಭಾಗ್ಯಶೂನ್ಯರು ನಿನ್ನಯ ಪದಸೇವೆಗಾಲಸ್ಯವ ಮಾಳ್ಪರುಕೇವಲ ದುರ್ಜನರು ಬಾರರು ದೇವದೇವ ನಿನ್ನ ಕರು-ಣಾವಲಂಬಿಗಳನೆಲ್ಲ ಕಾವನೆ ಮಹಾನುಭಾವನೆ 1ಚಂದ್ರಸೂರ್ಯರಿರುವ ತನಕ ಸ್ಥಾನಿಕ ವಿಪ್ರ-ರಿಂದ ಪೂಜೆಗೊಳೈ ಷಣ್ಮುಖವಂದನೀಯ ಪಾರ್ವತಿಯ ನಂದನ ನಳಿನಾಯತಾಕ್ಷಇಂದುಶೇಖರಕುಮಾರ ಸ್ಕಂದನೆ ನಿತ್ಯಾನಂದನೆ 2ಪಾವಂಜಾಖ್ಯಸುಕ್ಷೇತ್ರವಾಸ ಪೊರೆಯೊ ಪರಮೇಶಕೇವಲ ವಿಜ್ಞಾನಪ್ರಕಾಶಭಾವಜೋಪಮ ಲಾವಣ್ಯ ಕೋವಿದಾಗ್ರಗಣ್ಯ ಮಹಾ-ದೇವ ಲಕ್ಷ್ಮೀನಾರಾಯಣನ ಸೇವಕ ಬುದ್ಧಿದಾಯಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹರಿದಾಸರ ಸಂಗ ದೊರೆಯಿತು ಎನಗೀಗ ಇನ್ನೇನಿನ್ನೇನುವರಗುರು ಉಪದೇಶ ನೆರವಾಯ್ತು ಎನಗೀಗ ಇನ್ನೇನಿನ್ನೇನು ಪಮಾಯದ ಸಂಸಾರ ಮಮಕಾರ ತಗ್ಗಿತು ಇನ್ನೇನಿನ್ನೇನುತೋಯಜಾಕ್ಷನ ನಾಮ ಜಿಹ್ವೆಯೊಳ್ನೆಲಸಿತು ಇನ್ನೇನಿನ್ನೇನು 1ಹಲವು ದೈವಗಳೆಂಬ ಹಂಬಲ ಬಿಟ್ಟಿತು ಇನ್ನೇನಿನ್ನೇನುಜಲಜನಾಭನ ಧ್ಯಾನ ಹೃದಯದೊಳ್ನೆಲಸಿತು ಇನ್ನೇನಿನ್ನೇನು 2ತಂದೆ ತಾಯೆ ಮುಚುಕುಂದವರದನಾದ ಇನ್ನೇನಿನ್ನೇನುಸಂದೇಹವಿಲ್ಲ ಮುಕುಂದ ದಯಮಾಡಿದ ಇನ್ನೇನಿನ್ನೇನು 3ಏನೆಂದು ಹೇಳಲಿ ಆನಂದಸಂಭ್ರಮಇನ್ನೇನಿನ್ನೇನುಆನಂದಗೋಪನ ಕಂದನ ಮಹಿಮೆಯ ಇನ್ನೇನಿನ್ನೇನು 4ಎನ್ನವಂಶಗಳೆಲ್ಲ ಪಾವನವಾದುವು ಇನ್ನೇನಿನ್ನೇನುಚಿನ್ಮಯ ಪುರಂದರವಿಠಲಯ್ಯ ದೊರಕಿದ ಇನ್ನೇನಿನ್ನೇನು 5
--------------
ಪುರಂದರದಾಸರು
ಹರಿಯೆ, ಕುಣಿಯೆನುತ -ನರ -ಹರಿಯೆ, ಕುಣಿಯೆಂದು ಕುಣಿಸಿದರಯ್ಯ ಪಲೋಕವ ತಾಳ್ದನ ಮನೆಯಲಿ ಪುಟ್ಟಿ |ತೂಕದ ನುಡಿಗಳ ಕದ್ದವನ ||ನಾಕರಿಸಲು ನಿಜ ಗೋಪರೂಪದಿಂದ |ಆಕರಿಸಿದನಾ ಕುಣಿಸಿದರಯ್ಯ 1ಎಡೆಯಿಲ್ಲದೆ ನಡೆವನ ಕೂಡಿರುವವನ |ಹಿಡಿಲೆಂಬನ ಒಡಹುಟ್ಟಿದನ ||ಒಡೆಯನ ಕಂದನ ವೈರಿಯ ಬಂಡಿಯ |ಹೊಡೆದ ಮಹಾತ್ಮನ ಕುಣಿಸಿದರಯ್ಯ 2ಒಣಗಿದ ಮರ ಎಲೆಯಿಲ್ಲದ ಬಳ್ಳಿ |ಬಣತಿಗೆ ಪುಟ್ಟಿದ ವನದಲ್ಲಿ ||ಕ್ಷಣ ಮುನ್ನರಿಯದೆ ಅದರ ಆಹಾರಕೆ |ಫಣಿಯ ಮೆಟ್ಟಿದನ ಕುಣಿಸಿದರಯ್ಯ 3ಮಾವನೊಡನೆ ಮನೆಮಾಡಿ ಗೋಕರ್ಣದಿ |ಆ ವುರಗನ ಮೇಲ್ಮಲಗಿದನ ||ಮೂವರ ಮೊಲೆಯುಂಡ ಮೂಲೋಕವರಿಯದ |ಮೂವರಣ್ಣನೆಂದು ಕುಣಿಸಿದರಯ್ಯ 4ಗೋಕುಲದೊಳಗಿನ ಗೋಪಿಯರೆಲ್ಲ |ಏಕಾಂತದಿ ತಮ್ಮೊಳು ತಾವು ||ಶ್ರೀಕಾಂತನ ನಮ್ಮ ಪುರಂದರವಿಠಲನ |ಏಕ ಮೂರುತಿಯೆಂದು ಕುಣಿಸಿದರಯ್ಯ 5
--------------
ಪುರಂದರದಾಸರು
ಹರಿಯೆಂಬ ನಾಮಮೃತ ರುಚಿಕರವೆಲ್ಲಪರಮಭಕ್ತರಿಗಲ್ಲದೆ - ಮಿಕ್ಕ -|ಅರಿಯದ ಕಡುಮೂರ್ಖ ಮನುಜರಿಗೆಲ್ಲತಾಹರುಷವಾಗಬಲ್ಲದೆ? ಪಅಂದುಗೆಅರಳೆಲೆಯಿಟ್ಟರೆಕೋಡಗಕಂದನಾಗಬಲ್ಲದೆ? |ಹಂದಿಗೆ ತುಪ್ಪ-ಸಕ್ಕರೆ ತಿನ್ನಿಸಲು ಗ-ಜೇಂದ್ರನಾಗಬಲ್ಲದೆ? ||ಇಂದುಪೂರ್ಣಕಳೆಯೊಳು ತಾನು ತೋರಲುಪರಿಪರಿ ಬಂಗಾರವಿಟ್ಟರೆ ದಾಸಿ ತಾಅರಸಿಯಾಗಬಲ್ಲಳೆ? |ಭರದಿಂದ ಶ್ವಾನನ ಬಾಲವ ತಿದ್ದಲುಸರಳವಾಗಬಲ್ಲದೆ? ||ಉರಗಗೆ ಕ್ಷೀರವನೆರೆಯಲು ಅದು ತನ್ನಗರಳವ ಬಿಡಬಲ್ಲದೆ? ||ಭರದಿಂದ ನೀಲಿಯ ಕರದಿಂದ ತೊಳೆಯಲುಕರಿದು ಹೋಗಬಲ್ಲದೆ? | 2ಮೋಡಕೆ ಮಯೂರ ಕುಣಿವಂತೆ ಕುಕ್ಕುಟನೋಡಿ ಕುಣಿಯಬಲ್ಲದೆ? |ಗೋಡೆಗೆ ಎದುರಾಗಿ ನಾಟ್ಯವಾಡಲುನೋಡಿ ಸುಖಿಸಬಲ್ಲದೆ? ||ಹಾಡಿನ ಕುಶಲತೆ ಬಧಿರನು ತಾ ಸವಿ-ಮಾಡಿ ಕೇಳಬಲ್ಲನೆ? |ರೂಢಿಗೊಡೆಯ ನಮ್ಮಪುರಂದರವಿಠಲಮೂಢಜಾÕನಿ ಬಲ್ಲನೆ3
--------------
ಪುರಂದರದಾಸರು