ಒಟ್ಟು 1472 ಕಡೆಗಳಲ್ಲಿ , 96 ದಾಸರು , 1337 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ದೇವ ಜಯ ದೇವ ಜಯ ಗುರು ನಾಗೇಶ ದಯಗುಣದಲಿ ನೀ ಮಾಡೊ ಭವತಾಪ ನಾಶ ದ್ರುವ ಜನ್ಮ ಮರಣಗಳೆಂಬ ಖಚ್ಚಿಖವಡಿಗಳು ನಿಮ್ಮ ನಾಮಸ್ಮರಣಿಲೆ ಓಡುದು ದುರಿತಗಳು ಬ್ರಹ್ಮಾನಂದದ ಸುಖ ಭಾಸುದು ಮನದೊಳು ನಮ್ಮ ಸ್ವಾಮಿ ನೀನೆ ಅಹುದೊ ಕೃಪಾಳು 1 ತಾಪತ್ರಯವೆಂಬುದು ಬಲು ಪೀಡಿಯ ಗುಣ ಆಶೆÀ ನೀನೆ ಪರಿಹಾರ ಮಾಡೊ ಘನ ಕರುಣ ಕೋಪತಾಪವೆಂಬುದು ತದ್ದುದುರೀಯ ಗುಣ ಕೃಪೆಯಿಂದಲಿ ಮಾಡುದು ನಿಮ್ಮ ಶ್ರಮ ನಿರ್ವಾಣ 2 ದುರಿತ ಸಂಹಾರ ಸುರಜನ ಸಹಕಾರ ಕರುಣಾಕರ ಗುರುಮೂರ್ತಿ ಮುನಿಜನ ಮಂದಾರ ತರಳ ಮಹಿಪತಿಸ್ವಾಮಿ ಘನ ಕೃಪಾಕರ ಶರಣ ರಕ್ಷಕ ಪೂರ್ಣ ನೀ ಜಗದೋದ್ಧಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಪದ್ಮಜಾರಮಣ ಜಯ ಭಕ್ತಜನಕರುಣ ಜಯ ಕೌಸ್ತುಭಾಭರಣ ಜಯ ಪದ್ಮಚರಣ ಪ ಜಯ ಭವಾಂಬುಧಿ ತರಣ ಜಯ ಪಾಪಭಯಹರಣ ಜಯತು ಸತ್ವಾವರಣ ಜಯ ದೀನಶರಣ ಅ.ಪ ಜಯತು ಗಾನವಿಲೋಲ ಜಯ ಗೋಕುಲಬಾಲ ಜಯತು ತುಳಸೀಮಾಲ ಜಯತು ಜಗಮಾಲ 1 ಜಯತು ದಾನವಕಾಲ ಜಯತು ಸತ್ವದುಕೂ¯ ಜಯತು ಸುರಮುನಿಪಾಲ ಜಯತು ಮಾಲೋಲ 2 ಜಯತು ಜಯ ರಿಪುಭಂಗ ಕಮಲಜಾ ಅಂಗ ಜಯತು ಘನನೀಲಾಂಗ ಜಯತು ಗರುಡತುರಂಗ ಜಯತು ಮಾಂಗಿರಿರಂಗ ಕರುಣಾಂತರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯ ಮಂಗಳಂ ಸತ್ಯಧೀರತೀರ್ಥರಿಗೆ ಶುಭಮಂಗಳಂ ಯತೀ ಗುಣಮಣಿಗೆ ಪ ಜಗದುದರಧರನಾದ ಜಗವ ಸೃಷ್ಟಿಸಿದಂಥ ಜಗವ ಪಾಲಿಸುವ ಶ್ರೀ ಜಗದೀಶನಾ ತ್ರಿಗುಣಮಾನಿಯಳಿಂದ ಬಗೆ ಬಗೆಯ ಸ್ತುತಿಗೋಳ್ವ ರಘುವರನ ದಿವ್ಯ ಚರಣಗಳ ಸೇವಿಪಗೆ 1 ಜಗದೀಶನಾಜ್ಞೆಯಿಂ ಜಗಕೆ ಗುರುವೆನಿಸಿ ನಾ- ಲ್ಮೊಗನೈಯ್ಯ ಸರ್ವಪರಿಹಾರನೆನಿಸಿದವಗೆ ಜಗದೊಳಿರುವ ಅಜ್ಞ ಜನರುಗಳಿಗೆ ಪಂಚಮು- ದ್ರೆಗಳನೇ ಇತ್ತು ಪಾಪಗಳ ತರಿದವಗೆ 2 ಸತ್ಯವೀರರು ಕರಗಳೆತ್ತಿ ಉತ್ತಮಪದವ ಇತ್ತದ್ದೆ ಪುಸಿಯೆಂದು ನುಡಿದವರ ಮುಖಕೆ ಮೃತ್ತಿಕೆಯನು ಹಚ್ಚಿ ಹತ್ತುಯಂಟೋ ರೂಪ ಸ- ರ್ವೋತ್ತಮನ ಪೂಜಿಸಿದ ಸತ್ಯಧೀರರಿಗೆ 3 ಪುರಕಾಶಿಯಿಂದ ರಾಮೇಶ್ವರದ ಪರಿಯಂತ ಇರುವ ಕ್ಷೇತ್ರಗಳಲ್ಲಿಯ ಮಹಿಮೆಯಾ ದುರುಳ ಕಲಿಯಲಿ ಕಡಿಮೆಯಾಗಬಾರದು ಮನುಜ ಸಿರಿರಾಮನಾಶ್ರಯದಿ ಜನಿಸಿ ಬಂದವಗೆ 4 ಕರುಣಾಸಾಗರನಿಗೆ ಕರೆದಲ್ಲಿ ಬರುವಗೆ ಶರಣುಬಂದವರ ಪರಿಪಾಲಿಸುವಗೆ ವರಗುರು ಮಧ್ವರಾಯರ ಪೀಠಪಾತ್ರಗೆ ಧೀರ ಹನುಮೇಶವಿಠಲ 5
--------------
ಹನುಮೇಶವಿಠಲ
ಜಯ ರುಕ್ಮಿಣೀ ಕಾಂತ ಜಯ ಪಯೋನಿಧಿ ಶಾಂತ ಪ ಜಯತು ಜಯ ಭಗವಂತ ಜಯತು ಧೀಮಂತ ಅ.ಪ ಜಯ ಭಕ್ತಮಂದಾರ ಜಯ ಮೌನಿಪರಿವಾರ ಜಯತು ಜಯ ಧುರಧೀರ ಜಯತು ಸಾಕಾರಾ 1 ವಿಜಯ ಮೌಕ್ತಿಕಾಭರಣ ಜಯತು ವಿಧಿನುತಚರಣ ಜಯತು ಜಯ ಭವತರಣ ಜಯ ಶರಣಕರುಣಾ 2 ಜಯನಾದ ಸುವಿಲಾಸ ಜಯತು ಭಾಸ್ಕರ ಭಾಸ ಜಯ ಮಾಂಗಿರೀವಾಸ ಜಯ ಶ್ರೀನಿವಾಸ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯಜಾನಕೀರಮಣ ಜಯಕೌಸ್ತುಭಾಭರಣ ಪ ಜಯ ಪಾವನಚರಣ ಜಯ ಕೌಸಲ್ಯಾನಂದವರ್ಧನ ಜಯ ಭಕ್ತಾಭರಣ ಅ.ಪ. ಜಗದೋದ್ಧರಣ ಅಪಾರಕರುಣಾ ಅಗಜರ್ಚಿತ ಚರಣ ಖಗೇಶಗಮನ ಜಲನಿಧಿಶಯನ ಸುರರಿಪು ಸಂಹನನ 1 ಸೂನೃತಪಾಲ ಜಾನಕೀಲೋಲ ದೀನಜನಾವಾಲ ದಾನವಕಾಲಾ ಶ್ರೀವನಮಾಲಾ ಮಾನಿತ ಗುಣಶೀಲಾ 2 ವಾಸವ ಪರಿತೋಷ ದೋಷವಿನಾಶ ದಶಶಿರಧ್ವಂಸ ಮುನಿಜನ ಮಾನಸಹಂಸ 3
--------------
ನಂಜನಗೂಡು ತಿರುಮಲಾಂಬಾ
ಜಯತೀರ್ಥ ಮುನಿವರ್ಯ ಪ ದಯತೋರಿ ಪೊರೆಯಯ್ಯ ವಿಜಯಸಾರಥಿಪ್ರಿಯ ಅ.ಪ ಶ್ರೀಶಶಯನಾವೇಶ ಮಹೇಶ ಪ್ರತಿಬಿಂಬ ಸು ರೇಶ ಯತಿಕುಲಾಧೀಶ ಪಾಲಿಸಯ್ಯ ಏಸು ನಿನ್ನಯ ಕರುಣರಾಶಿ ಎಂತಿಹುದಯ್ಯ ಆಸೆ ಸಲಿಸಲು ಮನೆಗೆ ಲೇಸಾಗಿ ನೀ ಬಂದೆ 1 ಪಶುಪತಿಯ ಮತ ದಹಿಸಿ ಅಸುಪತಿಯ ಮತ ಮೆರೆದೆ ವಸುಮತಿಯ ಸುರನಾಗಿ ಬಂದು ನಿಂದೆ ಪಶುಪ್ರಾಯನೆಂದೆನ್ನ ಉದ್ಧರಿಸಲೋಸುಗದಿ ಬಿಸಜತವಪಾದ ಪಾಂಸವನಿತ್ತೆ 2 ಜಯಗುರುವೆ ಶ್ರೀ ವಿಜಯದಾಸರಲ್ಲೆನ್ನ ಮನೋ ಜಯವು ಪುಟ್ಟಿಸಿದ ನಿನ್ನ ಕರುಣವೆಂತೊ ಸೃಜಿಸಿ ತೋರಿದ ಸ್ವಪ್ನ ನಿಜವು ಆಗಲಿ ಎಂದು ಬಿಜಯ ಮಾಡಿದೆ ನಿನ್ನ ನಿಜದಾಸರೊಡನೆ 3 ಜಯಗುರುವೆ ನಿಮ್ಮ ಹುದ್ಗುಹದಲಿ ನಲಿಯುತಿಹ ವಾಯುವಂತರ್ಗತ ಕೃಷ್ಣನ ತೋರೋ ಜಯತು ಶ್ರೀ ವೇಣುಗೋಪಾಲ ಮೂರ್ತೇ ಜಯತು ಶ್ರೀ ವೇಣುಗೋಪಾಲನೆಂದೆನಿಸಿಯ್ಯ 4 ಸೃಷ್ಟಿಗೆ ಬಂದು ನಾನೆಷ್ಟು ಜನ್ಮವ ಕಳೆದೆ ಪುಟ್ಟಿದೆನೋ ನಾನೀಗ ಈ ಜನ್ಮದಿ ಪುಟ್ಟಲಿಲ್ಲವೋ ಜ್ಞಾನ ಹರಿ ಗುರುಸ್ಮರಣೆಗೆ ಇಟ್ಟಕಡೆಗಣ್ಣÂನೋಳಿಷ್ಟು ನೋಡಯ್ಯ5 ವಾದಿಮಸ್ತಕ ಭೇದಿ ಮೋದತೀರ್ಥರ ತತ್ತ್ವ ಛೇದಿಸಿ ವಾಕ್ ಯುದ್ದ ಯೂಥಪಗಳನೆಲ್ಲ ಗೆದ್ದು ಸತ್ತತ್ತ್ವದಾ ಸಿಂಹನಾದವ ಮಾಡ್ದೆ 6 ಮಧ್ವರಾಯರಿಗೆ ನೀ ಮುದ್ದುಮೊಮ್ಮಗನಯ್ಯ ಸದ್ವಿದ್ವದ್ಗ್ರಂಥ ಭಾರವನೆ ವಹಿಸಿ ಮುದ್ದು ತೊತ್ತೆನಿಸಿ ಎತ್ತಾಗಿ ಸೇವಿಸಿ ಯತಿಯಾಗಿ ನಿಂದ ತತ್ತ್ವಮುತ್ತಿನ ಖಣಿಯೆ 7 ಇಳೆಯೊಳಗೆ ನಿನ್ನಂಥ ಕರುಣಾಳುಗಳ ಕಾಣೆ ಅಳವಲ್ಲ ವರ್ಣಿಸಲು ನಿನ್ನ ಗುಣಗಳನು ಮಳಖೇಡವಾಸ ಯತಿಕುಲಾಧೀಶಾ 8 ಗುರುವೆ ನಿನ್ನಯ ಕರುಣಕವಚ ತೊಟ್ಟವರ ಚರಣಕಮಲದೊಳಿಹ ಮಧುಪನೆಂದೆನಿಸೋ ನಿರುತ ದೃಢಭಕುತಿ ಶ್ರೀ ವೇಂಕಟೇಶನೊಳಿಟ್ಟುಪೊರೆಯೊ ಶ್ರೀ ಗುರುವರಾಗ್ರಣಿಯೆ ನಮೋ ಎಂಬೆ9
--------------
ಉರಗಾದ್ರಿವಾಸವಿಠಲದಾಸರು
ಜಯತು ನಮೋ ಜಯ ಜಯತು ನಮೋ ಪ ದೇವರ ದೇವನೆ ಕಾಯೊ ಕರುಣಾನಿಧಿ ಅ.ಪ ಅಗಣಿತ ಮಹಿಮನೆ 1 ಗಮನ ಪಾದ ಕಾಯ ಕರ್ಮದೊಳಿರಿಸೈ 2 ದಾಸರ ದಾಸನೆಂದೆನಿಸೊ ಸದಾನಂದ 3
--------------
ಸದಾನಂದರು
ಜಯತುಲಸೀರಾಮಾ ಜಗದಭಿರಾಮಾ ಭಯನಗಸುತ್ರಾಮ ಭರತÀಪುರೀಧಾಮ ಪವೆಂಕಟಲಕ್ಷಾಂಬ ಉದರಾಬ್ಧಿ ಸೋಮಕಿಂಕರಾಶ್ರಿತಪ್ರೇಮ ಕ'ಸಾರ್ವಭೌಮ 1ಪತಿತಜನೋದ್ಧರಿತ ಪ್ರಥಮಾಶ್ರಮರತರತಿಪತಿಗುಣಜಿತರಮ್ಯ ಸುಭಾತ 2ವರಸಕಲಾಗಮಶಾಸ್ತ್ರಾರ್ಥ ಪ್ರ'ೀಣನಿರ್ಮಲಧೀಷಣ ನೀರಜಲೋಚನ 3ರಾಮಕೃಷ್ಣೋತ್ಸವ ನೇಮಧುರೀಣಕಾ'ುತಫಲಪ್ರದ ಕರುಣಾಭರಣಾ 4ಅಥಿತಿ ಅಭ್ಯಾಗತ ಆದರಣೇ'ತಬುಧವರಪೂಜಿತ ಭು'ಪ್ರಖ್ಯಾತ 5ನಿರತಾನ್ನದಾನ ನಿಖಿಲಾವಧಾನಪರಮಾರ್ಥಜ್ಞಾನ ಪರಿಬೋಧಮಾನ 6ತಾಮರತುಲಸೀದಾಮ (ಶುಭಾಂಗಾ)ಶ್ರೀರಂಗಸ್ವಾ'ುದಾಸ ಭವತಿ'ುರಪತಂಗಾ 7
--------------
ಮಳಿಗೆ ರಂಗಸ್ವಾಮಿದಾಸರು
ಜಯದೇವ ಜಯದೇವ ಜಯ ವೆಂಕಟೇಶಾ| ಶ್ರಯ ಸುಖದಾಯಕ ಸ್ವಾಮಿ ಉರಗಾಚಲವಾಸಾ ಪ ಕರುಣಾಕರ ರತ್ನಾಕರ ಕನ್ಯಾ ಮನೋಹಾರಿ| ಸುರವರ್ಧನ ಮುರಮರ್ದನ ಗೋವರ್ಧನಧಾರಿ| ವರಮಂದಿರ ಧೃತಕುಂದರ ಸುಂದರ ಸಹಕಾರಿ| ಶೌರಿ 1 ಜಗಕಾರಣ ಪರಿಪೂರಣ ಸುಂದರಸಾಕಾರಾ| ಅಘಹರಣಾ ಮುನಿ ಸ್ಫರಣಾತ್ರಯ ಭುವನಾಧಾರಾ| ನಗಧರಣಾ ತವಶರಣಾಭರಣಾ ಮಯೂರಾ| ಭೃಗುಚರಣಾಂಕಿತ ಚರಣಾಂಬುಜ ಶೋಭಿತ ಧೀರಾ 2 ಸುಖಕರ್ತಾ ದುಃಖಹರ್ತಾ ಸರಸೀರುಹ ನಯನಾ| ಸಕಲಾತ್ಮ ಪರಮಾತ್ಮಾ ಫಣಿಕುಲವರ ಶಯನಾ| ನಿಖಿಲಾಸುರ ತಮಭಾಸುರ ದುರಿತಾವಳಿ ಶಮನಾ| ಮಕರಾಂಕಿತ ಪಿತಮಹೀಪತಿ ನಂದನಪಾಲನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯ ಶಂಕರ ಮೂರ್ತಿ ಜಯ ಜಯವೆಂದು ಬೆಳಗುವೆ ಮನದಲಿ ಭಾವಾರ್ತಿ ಪ ಸಾಧನ ಕೆಂಜೆಡೆಯೊಳಗೆ ಜ್ಞಾನಗಂಗೆಯ ನಿಲಿಸಿ ಸಾದರದಲಿ ಚಿಜ್ಯೋತಿಯ ಚಂದ್ರನ ಕಳೆಧರಿಸಿ ನಾದಬಿಂದು ಕಳಾನಯನ ತ್ರಯವೆರಿಸಿ ಮೋದಿಪೆ ಅಪರೋಕ್ಷನುಭವ ಮುಖದೆಳೆ ನಗೆಬಳಿಸಿ 1 ಧವಲಾಂಗದಿ ಸಲೆ ಶುದ್ಧ ಸತ್ವದ ಶೋಧಿಸಲಿ ತವಕದಿ ಶಮದಮವೆಂಬಾ ಬಾಹುದ್ವಯದಲಿ ಅವಯವದಲಿ ನಿಜಭಕ್ತಿ ಶೇಷಾಭರಣದಲಿ ಶಿವತಾನೆಂದು ಬೆಳಗುವೆ ಸಹಜಾನಂದದಲಿ 2 ವಿವೇಕ ವೈರಾಗ್ಯದಾ ಕರಚರ್ಮಾಂಬರಣಾ ಅವನಿಲಿಸುರನರಪೂಜಿತ ಪಾವನಶ್ರೀ ಚರಣಾ ಕುವಲಯ ಲೋಚನ ಶಾಂತಿಯ ಪಾರ್ವತಿ ಸಹಕರುಣಾ ಭವತಾರಕ ಗುರುಮಹಿಪತಿ ಪ್ರಭುದೀನೋದ್ದಾರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯಗೋಪಾಲಕೃಷ್ಣಾ | ಜಯ ಜಯಯೋಗೀ ಮಾನಸ ಮೋಹನ ಘನಕರುಣಾ ಪ ದೇವಕಿವಸುದೇವರ ಭಾವನೆ ಪೂರಿಸಲಿ | ಶ್ರಾವಣ ಕೃಷ್ಣಪಕ್ಷದ ಅಷ್ಟಮಿರೋಹಿಣಿಲಿ || ತೀವಿದ ಚಂದ್ರೋದಯ ರಾತ್ರಿಯ ಕಾಲದಲಿ | ಭುವನದಿ ಅವತಾರವ ಮಾಡಿದೆನೀ ವೇಗದಲಿ 1 ಸೊಕ್ಕಿದ ಕಂಸನ ಕೊಂದು ದುಷ್ಕ್ರತನಾಶನವಾ | ಮುಖ್ಯಮಾಡು ಕಾರಣ ಧರ್ಮ ಸ್ಥಾಪನವಾ || ಸಖ್ಯದಿ ಕಟ್ಟಲು ಉಗ್ರಶೇನಗೆ ಪಟ್ಟವಾ | ಅಕ್ಕರದಿಂದಲಿ ಬೆಳೆದೆ ಗೋಕುಲದಲಿ ದೇವಾ 2 ಕುರುಕುಲಾನ್ವಯ ಜೀವನರೆಲ್ಲರ ಸೆಬಡಿದೆ | ಚರಣವನಂಬಿದ ಪಾಂಡವರನು ಸ್ಥಾಪನಗೈದೆ | ಪರಪರಿಯಿಂದಲಿ ಭಜಿಸುವ ಭಕ್ತಾವಳಿ ಪೊರೆದೇ | ಗುರುವರಮಹೀಪತಿ ಸುತ ಪ್ರಭುಸಲಹೆನ್ನನು ಬಿಡದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯರಾಘವ ಜಯರಾಘವ ಜಯರಾಘವ ರಾಮಾ| ಶ್ರಯಕಾರಣಸುಖಪೂರಣ ಭವತಾರಣ ನಾಮಾ ಪ ಜಗಪೋಷಣ ಮೃದುಭಾಷಣ ಸುರತೋಷಣಕಾರಿ| ಅಘಶೋಷಣ ಕುಲಭೂಷಣ ಖರದೂಷಣ ಹಾರಿ 1 ಅತಿಸುಂದರ ಗುಣ ಮಂದಿರ ದಶಕಂದರ ಹರಣಾ| ಧೃತಮಂದಿರ ಗಜೇಂದರ ಪ್ರಯಾ ಸಾಂದರ ಕರುಣಾ 2 ಪತಿ ವಾಣೀಪತಿ ದಿವಸಾಪತಿ ಧೇಯ| ಗುರುಮಹೀಪತಿ ಸುತಸಾರಥಿ ಸೀತಾಪತಿರೇಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಶ್ರೀ ರಾಮನ ಜಾನಕಿ ಪ್ರೇಮನ ಅನುದಿನ ಪ ಶುಭ ಕಲ್ಯಾಣನ ಮಾಧವ ಮುಕುಂದನ 1 ವಿಶ್ವ ಪ್ರಕಾಶನಾ --ನಂದದಿ ಹೃದಯ ಗೋವಿಂದನ ಬಿಡದಿನ್ನು 2 ಕಂದರ್ಪ ಜನಕನ ಕರಿರಾಜ ವರದನ ಸಿಂಧುಶಯನ ಹರಿ ಶ್ರೀ ಜಗನ್ನಾಥನ 3 ಸೌಂದರ್ಯ ರೂಪನ ಪುರುಷೋತ್ತಮನ ಕುಂದರದನ ಹರಿ ಕೋಮಲಾಂಗನ 4 ಪರಮ ಪುರುಷನ ಪತಿತಪಾವನನ ನರಹರಿರೂಪನ ನಾರಾಯಣನ 5 ಗರುಡಾರೂಢನ ಕರುಣಾಸಾಗರನ ಉರದಲಿ ಲಕ್ಷ್ಮಿಯ ಧರಿಸಿ ಕೊಂಡಿಹನ 6 ಉರಗಾದ್ರಿ ವಾಸನ ವಸುದೇವಸುತನಾ ಭವಪಾಪ ಸಂಹಾರನ 7 ಶರಣರ ಕಾಯುವನ ಶ್ರೀನಿವಾಸನ ಉರಗಶಯನನ ಹರಿವಾಸುದೇವನಾ 8 ಮಂಗಳಮೂರುತಿ ಮಹಾನುಭಾವನ ಗಂಗೆಯ ಪಡೆದನ ಘನ ಗಂಭೀರನ9 ಶೃಂಗಾರ ಭೂಷಣನ ಸುಗುಣ ಪ್ರತಾಪನ ಅಂಗನೆಯರೆಡ ಬಲದಲಿರುವನ 10 ರಂಗನಾಯಕನ ರಾಜಾಧಿರಾಜನ ಮಂಗಾರಮಣನ ಮಧುಸೂದನನಾ 11 ರಂಗವುಳ್ಳ ಪೀತಾಂಬರ ಧರನಾ ಕಂಬು ಕಂಧರನಾ 12
--------------
ಹೆನ್ನೆರಂಗದಾಸರು
ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ