ಒಟ್ಟು 929 ಕಡೆಗಳಲ್ಲಿ , 95 ದಾಸರು , 778 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೂರಿಜಗದುದ್ಧಾರೆ ಲೋಕವಿ-| ಸಾರೆ ಸರ್ವಾಧಾರೆ ಲೋಕವಿ-| ಚಾರೆ ನಿನ್ನಡಿದಾವರೆಗೆ ನಾ ಅ.ಪ ಚಂಡಿಕೆ ಗಿರಿಜಾತೆ || ದಿಂಡುಗೆಡಹುತ ರುಂಡಗಳ ಚೆಂ-| ಡಾಡಿ ರಕ್ತವನುಂಡ ಶಂಕರಿ1 ಕೌಮಾರಿ ಗೌರಿ ರುದ್ರಾಣಿ || ಕಾಮಹರ ಸುಪ್ರೀ(ಯೆ) ತ್ರಿಜಗ-| (ವಾಮೆ) ಪೊರೆ ಬ್ರಹ್ಮಾಂಡ ನಾಯಕಿ 2 ನಾದ ಬಿಂದು ಕಲಾದಿಮಯ(ಳೆ) ವಿ-| ಧ್ಯಾಂತರಹಿತೆ ಸದಾನಂದೋದ್ಧರೆ 3
--------------
ಸದಾನಂದರು
ಮಗನಿಂದೆ ಗತಿಯುಂಟೆ ಜಗದೊಳಗೆನಿಗಮಾರ್ಥ ತತ್ತ್ವವಿಚಾರದಿಂದಲ್ಲದೆ ? ಪ ತ್ರಿಗುಣರಹಿತ ಪರಮಾತ್ಮನ ಧ್ಯಾನದಿಹಗಲಿರುಳು ನಿತ್ಯಾನಂದದಿಂದತೆಗೆದು ಪ್ರಪಂಚವಾಸನೆಯ ಬಿಟ್ಟವರಿಗೆಮಗನಿದ್ದರೇನು ಇಲ್ಲದಿದ್ದರೇನು ?1 ಶೋಣಿತ ಶುಕ್ಲದಿಮಿಳಿತವಾದ ಪಿಂಡ ತನ್ನ ಪೂರ್ವಕರ್ಮದಿಂದನೆಲಕೆ ಬೀಳಲು ಅದು ಸಲಹಿ ರಕ್ಷಿಪುದೆ ? 2 ಪರಮ ದುಷ್ಟನಾಗಿ ಮರೆತು ಸ್ವಧರ್ಮವಗುರು ಹಿರಿಯರ ಸಾಧುಗಳ ನಿಂದಿಸಿಬೆರೆದನ್ಯ ಜಾತಿಯ ಪರನಾರಿಯ ಕೂಡಿಸುರೆ ಕುಡಿದು ಜೂಜಾಡಿ ನರಕಕ್ಕೆ ಬೀಳುವ 3 ಸತ್ಯನೊಬ್ಬ ಮಗ ಶಾಂತನೊಬ್ಬ ಮಗ ದು-ರ್ವೃತ್ತಿ ನಿಗ್ರಹನೊಬ್ಬ ಸಮಚಿತ್ತನೊಬ್ಬನುಉತ್ತಮರೀ ನಾಲ್ಕು ಮಕ್ಕಳಿದ್ದ ಮೇಲೆಹೆತ್ತರೇನು ಇನ್ನು ಹೆರದಿದ್ದರೇನಯ್ಯ ? 4 ಸುತರಿಲ್ಲದವಗೆ ಸದ್ಗತಿ ಇಲ್ಲವೆಂತೆಂಬಕೃತಕ ಶಾಸ್ತ್ರವು ಲೌಕಿಕಭಾವಕೆಕ್ಷಿತಿಯೊಳು ಕಾಗಿನೆಲೆಯಾದಿಕೇಶವ ಜಗ-ತ್ಪತಿಯ ಭಜಿಪಗೆ ಸದ್ಗತಿಯಿರದೆ ಹೋಹುದೆ ? 5
--------------
ಕನಕದಾಸ
ಮಂಗಲಂ ಜಯಮಂಗಲಂತ್ರಿಜಗಂಗಳ ಪೊರೆವ ಶ್ರೀಮೂಕಾಂಬೆಗೆ ಪ ಗೌರಿಗೆ ಗುಹಜನನಿಗೆ ಗಿರಿಜಾತೆಗೆಧೀರಮಹಿಷ ದೈತ್ಯಮರ್ದಿನಿಗೆಕಾರುಣ್ಯನಿಧಿಗೆ ಕಾಮಿತಫಲದಾತೆಗೆನಾರದನುತೆಗೆ ನಾರಾಯಣಿಗೆ 1 ಶರದಿಂದುಮುಖಿಗೆ ಶಂಕರಿಗೆ ಶರ್ವಾಣಿಗೆದುರಿತ ದಾರಿದ್ರ್ಯಹರ್ತೆಗೆ ದುರ್ಗಿಗೆಪರಮೇಶ್ವರಿಗೆ ಪಾವನಚರಿತೆಗೆ ಶುಭಕರಿಗೆ ಸಮಸ್ತಮಂತ್ರೇಶ್ವರಿಗೆ 2 ರಾಜಶೇಖರಿಗೆ ರಾಜೀವನೇತ್ರಗೆ ರಕ್ತಬೀಜ ಶಾಸಿನಿಗೆ ಭುವನಮಾತೆಗೆತೇಜೋಮಯಿಗೆ ತರಣಿಕೋಟಿ ಭಾಷೆಗೆಶ್ರೀ ಜನಾರ್ದನನ ಸಹೋದರಿಗೆ 3 ಕಾಳಿಗೆ ಕಾಮರೂಪಿಣಿಗೆ ಕೌಮಾರಿಗೆಕಾಳರಾತ್ರಿಗೆ ಕಾತ್ಯಾಯನಿಗೆವ್ಯಾಳಭೂಷಿಣಿಗೆ ಯೋಗಿನಿಗೆ ರುದ್ರಾಣಿಗೆಭಾಳನೇತ್ರೆಗೆ ಭಯಹಾರಿಣಿಗೆ4 ಚಂಡಿಗೆ ಚಕ್ರಪಾಣಿಗೆ ಚಾತುರ್ಭುಜೆಗೆಮುಂಡಿಗೆ ಧೂಮ್ರಲೋಚನಹತ್ರ್ರೆಗೆಚಂಡಮುಂಡಾಸುರರಸುರಣರಂಗದಿದಿಂಡುದರಿಂದ ಸರ್ವಮಂಗಲೆಗೆ5
--------------
ಕೆಳದಿ ವೆಂಕಣ್ಣ ಕವಿ
ಮಂಗಳಂ ಕಲ್ಯಾಣ ಸಾಂದ್ರಗೆ ಪ ವಾದೀಂದ್ರ ಗುರುವರ ಕುವರಗೆ ಮಂಗಳ ಮೇದಿನಿ ಸುವಿನುತಗೆ ಮಂಗಳ ಸಾಧಿತ ಸಕಲ ಸುತತ್ವ್ವಗೆ ಮಂಗಳ ವಾದಿ ವಾರಿದ ಚಂಡ ಪವಮಾನಗೆ 1 ವರಹತನಯ ತೀರ ಧರಣಿ ಧರಾಹ್ವಯ ಪುರದಿ ವಿರಾಜಿಸುವಗೆ ಮಂಗಳ ವರದೇಂದ್ರ ಯತಿವರರ ಕಮಲಾರ್ಚಿತ ಚರಣ ಪಂಕೇಜ ಯುಗ್ಮಗೆ ಮಂಗಳ 2 ಸೂರಿಕುಲೋತ್ತಮ ಶ್ರೀ ರಾಘವೇಂದ್ರ ಗುರು ಸದ್ವಂಶ ಜಾತಗೆ ಮಂಗಳ ನಾರದನುತ ಜಗನ್ನಾಥವಿಠಲನ ಕರುಣ ಪಾತ್ರ ಸಂಯಮಿವರಗೆ ಮಂಗಳ 3
--------------
ಜಗನ್ನಾಥದಾಸರು
ಮಂಗಳಂ ಮಹಾಗಂಗೆ | ಭಕುತ ಮನೋಹಾರಿಗೆ | ಮಂಗಳಂ ಬಲುದುರಿತ ಸಂಹಾರಿಗೆ | ಮಂಗಳಂ ಪ್ರಯೋಗ ಕ್ಷೇತ್ರ ವಿಹಾರಿಗೆ ಕುಸುಮ ಚಿತ್ರಹಾರಿಗೆ ಪ ವೇಣಿಗೆ ನಿತ್ಯಕಲ್ಯಾಣಿಗೆ ಪಲ್ಲವ | ಪಾಣಿಗೆ ಗಂಭೀರ ಗುಣಶ್ರೇಣಿಗೆ | ತ್ರಾಣಿಗೆ ಕೋಕಿಲವಾಣಿಗೆ ಯಾದವನ | ರಾಣಿಗೆ ಮಣಿಹೇಮ ಭೂಷಣೆಗೆ 1 ಖ್ಯಾತಿಗೆ ತ್ರಿಲೋಕ ಮಾತೆಗೆ ಯ | ಮುನೆ ಸಂಘಾತಿಗೆ ಸರ್ವದಾ ಬಲುನೀತಿಗೆ | ಜಾತಿಗೆ ತುಹಿನಗಿರಿದಾತೆಗೆ ಲಕುಮಿಯ | ಅಮಿತ ಗುಣ ಪ್ರತಾಪಿಗೆ || 2 ಚನ್ನಿಗೆ ನಾರಿಕುಲರನ್ನಿಗೆ ಭಾಗ್ಯ ಸಂ | ಪನ್ನಿಗೆ ಸಗರಕುಲ ಪಾವನ್ನಿಗೆ | ಕಣ್ಣಿಗೆ ಪೊಳೆವ ಪ್ರಸನ್ನಿಗೆ ಸೀತಾ ಸು | ವರ್ನಿಗೆ ವಿಜಯವಿಠ್ಠಲ ಕನ್ನಿಗೆ 3
--------------
ವಿಜಯದಾಸ
ಮಂಗಳಂ ಮಹಿಜಾತಗೆ ಇಂಗಡಲ ಮಂದಿರಗೆ ಪ ಬಂಗಾರದೊಡಲ ಮುಖ್ಯ ಪದಂಗಳನೆಲ್ಲ ಕಂಗಳ ಭ್ರೂಭಂಗಾದಿ ಕರುಣಿಪ ದೇವಿಗೆ 1 ರಂಗು ಮಾಣಿಕದಾಭರಣಂಗಳನಿಟ್ಟು ಡಿಂಗರೀಕರಂತರಂಗದಿ ನಲಿಯುವ ದೇವಿಗೆ 2 ರಂಗೇಶವಿಠಲನರ್ಧಾಂಗಿಯೆನಿಸಿಕೊಂಡು ಹಿಂಗದೆ ಭಜಿಪರ್ಗೆ ಶುಭಗಳ ನೀಡುವ ದೇವಿಗೆ 3
--------------
ರಂಗೇಶವಿಠಲದಾಸರು
ಮಂಗಳ ಮುಖ್ಯಪ್ರಾಣೇಶಗೆ ಜಯ ಮಂಗಳ ಮೂಜಗವಂದಿತಗೆ ಪ. ಅಂಜನೆತನಯಂಗೆ ಮಾಪ್ರತಿ ಮಹಿಮಂಗೆ ಕಂಜನಾಭನ ಕಾರ್ಯದನುಕೂಲಗೆ ರಂಜಿಪ ಹನುಮಗೆ ಮಂಗಳ 1 ಆ ಮಹಗಡಲ ಲಂಘಿಸಿ ಹೋಗಿ ಲಂಕೆಯ ಧಮಧುಮ ಮಾಡಿ ವನವ ಕಿತ್ತು ರಾಮ ಮುದ್ರಿಕೆ ಜಾನಕಿಗೆ ತಂದಿತ್ತÀ ಹೇಮಾದ್ರಿ ಹನುಮಗೆ ಮಂಗಳ 2 ಸುತ್ತ ಸಾಗರ ಮಧÀ್ಯದಲ್ಲಿ ಲಂಕೆಯ ಮುತ್ತಿ ವನಜಾಕ್ಷಿಯ ಮುಂದೆ ಬಂದು ಹತ್ತು ತಲೆಯ ರಾವಣನೈಶ್ವರ್ಯವನಳಿದಗೆ ಖ್ಯಾತ ಹನುಮಗೆ ಮಂಗಳ 3 ಜಾತಿ ಬಂಧುಗಳ ಒಡಗೊಂಡು ಸಮುದ್ರದ ಸೇತುವ ಕಟ್ಟಿ ಸಾಹಸದಿಂದಲಿ ಸೀತಾಪತಿಯ ಬಲವ ನಡೆಸಿದ ಪ್ರ ಖ್ಯಾತ ಹನುಮಗೆ ಮಂಗಳ 4 ಈ ಕಾಡಕಪಿಯಲ್ಲ ನಿಮ್ಮ ಸೇವಕನೆಂದು ಬೇಡವೆಂದು ಸೀತೆಯ ಭಯಬಿಡಿಸಿ ಚೂಡಾರತ್ನ ಶ್ರೀ ರಾಮರಿಗಿತ್ತ ಬಂಟ ಕೊಂಡಾಡಿಸಿಕೊಂಬಗೆ ಮಂಗಳ 5 ಬಲ್ಲಿದ ರಾವಣೇಶ್ವರನ ಮಾರ್ಬಲವನು ಕಲ್ಲು ಮರದೊಳಿಟ್ಟು ಕೆಡಹಿದಗೆ ಜಲ್ಲುಕ ದೈತ್ಯರಿಗೆಲ್ಲ ಎದೆಯ ಶೂಲವಗಿದ ಧಲ್ಲ ಹನುಮಗೆ ಮಂಗಳ 6 ಬಲು ದೈತ್ಯರನೆಲ್ಲ ಗೆಲಿದು ಮುದ್ದೇನಹಳ್ಳಿಲಿ ಸ್ಥಿರವಾಗಿ ನಿಂದು ಭಕ್ತರ ಹೊರೆವ ಹೆಳವನಕಟ್ಟೆ ವೆಂಕಟೇಶನ ದೂತ ಚಲದಂಗ ಹನುಮಗೆ ಮಂಗಳ 7
--------------
ಹೆಳವನಕಟ್ಟೆ ಗಿರಿಯಮ್ಮ
ಮಂಗಳಂ ರಘುರಾಮಗೆ ಜಯಮಂಗಳಂ ಗುಣಧಾಮಗೆ ಮಂಗಳಂ ಮದನಾರಿವಂದ್ಯಗೆ ಮಂಗಳಂ ಮನ್ನಾಥಗೆ ಪ. ರಾಮಗೆ ನತಕಾಮಗೆ ಘನಶ್ಯಾಮಗೆ ಸುಪ್ರೇಮಗೆ ಕಾಮಿತಾರ್ಥಪ್ರದಾತಗೆ ವರರಾಮಣೀಯಕ ರೂಪಗೆ 1 ಶ್ರೀಶಗೆ ಜಗದೀಶಗೆ ಭಯನಾಶಗೆ ಸರ್ವೇಶಗೆ ದಾಸಜನಮನೋಲ್ಲಾಸ ಲಕ್ಷ್ಮೀಶಕೇಶವ ಮೂರ್ತಿಗೆ 2 ಮಾರುತಾತ್ಮಜಪÀರಿಸೇವ್ಯಗೆ ನತಪಾರಿಜಾತ ಸಮಾನಗೆ ವಾರಿಜಾಯತನೇತ್ರ ಶ್ರೀಶೇಷಶೈಲ ನಿವಾಸಗೆ 3
--------------
ನಂಜನಗೂಡು ತಿರುಮಲಾಂಬಾ
ಮಂಗಳಂ ರಘುರಾಮಗೇ ಜಯಮಂಗಳಂ ಗುಣಧಾಮಗೆ ಮಂಗಳಂ ಮದನಾರಿವಂದ್ಯಗೆ ಮಂಗಳಂ ಮನ್ನಾಥಗೆ ಪ. ರಾಮಗೇ ನತಕಾಮಗೆ ಘನಶ್ಯಾಮಗೆ ಸುಪ್ರೇಮಗೇ ಕಾಮಿತಾರ್ಥಪ್ರದಾತಗೆ ವರ ರಮಣೀಯಕರೂಪಗೆ 1 ಶ್ರೀಶಗೆ ಜಗಧೀಶಗೆ ಭಯನಾಶಗೇ ಸರ್ವೇಶಗೆ ರಾಸಮನೋಲ್ಲಾಸ ಲಕ್ಷ್ಮೀಶ ಕೇಶವಮೂರ್ತಿಗೆ 2 ಮಾರುತಾತ್ಮಜ ಸೇವೆಗೇ ನತಪಾರಿಜಾತ ಸಮಾನಗೆ ವಾರಿಜಾಯತನೇತ್ರಗೇ ಶ್ರೀ ಶೇಷಶೈಲನಿವಾಸಗೆ 3
--------------
ನಂಜನಗೂಡು ತಿರುಮಲಾಂಬಾ
ಮಂಗಳಂ ಶ್ರೀ ಲಕ್ಷ್ಮೀದೇವಿಗೆ ಜಯ ಮಂಗಳಂ ಪಕ್ಷಿವಾಹನರಾಣಿಗೆ ಪ. ಮಂಗಳಂ ಮಂತ್ರಮೂರುತಿಗೆ ಶುಭ ಮಂಗಳಂ ಪರತಂತ್ರರೂಪಿಣಿಗೆ ಅ.ಪ. ಭಾರ್ಗವಿಗೆ ಭಾಗ್ಯದಾಯಿನಿಗೆ ಭಾಗವತರ ಪೂಜೆ ಕೈಗೊಂಬಳಿಗೆ ನಾಗವೇಣಿಗೆ ವರನಾಗಪೂಜಿತೆಗೆ ವರ ಭೋಗಿಭೂಷಣಸುತೆ ಯೋಗೇಶ್ವರಿಗೆ 1 ಸೀತೆಗೆ ಮಂಗಳಗೀತೆಗೆ ಭುವಿ ಜಾತೆಗೆ ಮಂಗಳಂ ಪವನಜಸೇವಿತೆಗೆ ಮಾತೆಗೆ ಸದ್ಗುಣ ಪೂತೆಗೆ ವರಪ್ರ ದಾತೆಗೆ ನಿತ್ಯನಿರ್ಮಲೆಗೆ 2 ವರಶೇಷಗಿರಿವರನ ಉರದಲ್ಲಿ ನೆಲೆಗೊಂಡು ಶರಣಾಗತರಂ ಪರಿಭಾವಿಸಿ ಪರತರ ಸುಖಸೌಭಾಗ್ಯವ ಕರುಣಿಸಿ ಪೊರೆವ ಕಾರುಣ್ಯಮೂರುತಿಗೆ 3
--------------
ನಂಜನಗೂಡು ತಿರುಮಲಾಂಬಾ
ಮಂಗಳನಾಮಾ ನಮೋ ನಮೋ ಪ ಮಾಂಗಿರಿಧಾಮಾ ನಮೋ ನಮೋ ಅ.ಪ ಅಂಗಜಾತ ಪಿತ ಸುರಪತಿವಿನುತಾ ತುಂಗ ಕೃಪಾಂಬಕ ನಮೊ ನಮೋ 1 ರಂಗನಾಥ ನೀಲಾಂಗ ಮಹಾದ್ಭುತ ಸಿಂ[ಗಾನ]ನ ಹರೇ ನಮೋ ನಮೋ 2 ನಾಗಾಲಂಕೃತ ಸರೋಜ ಭೂಷಿತ ಕಮಲಭವಾನತ ನಮೋ ನಮೋ 3 ತಾರಕ ನಾಮ ನಮೋ ನಮೋ ರಘುರಾಮಾ ನಮೋ ನಮೋ 4 ಸುರಮುನಿ ನಾರದ ಗೌತಮ ಪ್ರೇಮಾ ಧರೆಗಭಿರಾವೂ ನಮೋ ನಮೋ 5 ಗಿರಿಜಾಧವನುತ ಗುಣ ಮಣಿಧಾಮಾ ರಾಕ್ಷಸ ಭೀಮಾ ನಮೋ ನಮೋ 6 ರಾಮಾ ರಘುರಾಮ ಕ್ಷೀರಾಬ್ಧಿಶಾಯಿ ಸೋಮಾ ಮಾಂಗಿರಿವರ ನಮೋ ನಮೋ7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಂಗಳವೆನ್ನಿರೆ ಮಹಲಕ್ಷ್ಮಿ ದೇವಿಗೆ ಶುಭ ಪ ಅರಳು ಮಲ್ಲಿಗೆ ಗಂಧ ಸುರಪಾರಿಜಾತ ಪುಷ್ಪವರ್ಪಿಸಿ ನರಸಿಂಹನರಸಿಗೆ ಪರಿಪರಿ ಫಲಗಳ ಹರದೇರುಡಿಯ ತುಂಬುತಲಿ ಶ್ರೀ ಲಕ್ಷ್ಮಿಗೆ 1 ಸರಿಗೆ ಸರವು ಜರದ ನೆರಿಗೆ ಮೇಲೊಲಿಯಲು ಅರಳು ಮಲ್ಲಿಗೆ ಜಾಜಿ ಸರವ ಮುಡಿದು ಹರುಷದಿಂದಲಿ ನಾಗಮುರಿಗಿ ಕಂಕಣಕೈಲಿ ಪರಿಪರಿ ವರಗಳ ಕೊಡುವಳಿಗೆ ಜಯ 2 ಕಡಗ ಕಾಲಂದುಗೆ ಘಲುರೆಂಬನಾದದಿ ಬೆಡಗಿನಿಂದಲಿ ಬರುವ ಭಾಗ್ಯದಾಯಿನಿಗೆ ಕಡಲಶಯನ ಕಮಲನಾಭವಿಠ್ಠಲನ ರಾಣಿ ಶುಭ 3
--------------
ನಿಡಗುರುಕಿ ಜೀವೂಬಾಯಿ
ಮಂಗಳಾಂಬಕೀ ವರಲಕ್ಷ್ಮೀ ಮಂಗಳಂ ಜಯ ಪ ಅಂಗಜಾದಿ ಪ್ರೇಮಜನನಿ ಭೃಂಗವೇಣಿಯೆ ಜಯ ಅ.ಪ. ಬಿಂಬರದನವಸನ ಭೂಷ್ಯೆ ಅಂಬುಜಾಂಬಕಿ ಅಂಬ ಪಾಹಿಮಾಂ ಜಯ 1 ಕುಂಕುಮಾಕ್ತ ಫಾಲಶೋಭೆ ಕಿಂಕಿಣೀರವೆ ಪಂಕಜಾತ ಶೋಭಮಾನ ಹಸ್ತಪಲ್ಲವೆ ಜಯ 2 ರತ್ನನಿಚಯ ಭಾಸಮಾನ ರತ್ನಕಿಂಕಿಣೀ ರತ್ನರಾಜಪುತ್ರಿ ಕಮಲೆ ಭಕ್ತವತ್ಸಲೆ ಜಯ 3 ನಿತ್ಯ ನಿನ್ನನು ಯತ್ನದಿಂದ ಧೇನುನಗರ ವಾಸೆ ಪಾಲಿಸು 4
--------------
ಬೇಟೆರಾಯ ದೀಕ್ಷಿತರು
ಮಂಗಳಾರತಿಎತ್ತಿ ಮಾಮನೋಹರನಿಗೆ ಪ ಅಂಗನೆಯರೆಲ್ಲ ಬಂಗಾರದ ತಟ್ಟೆಯಲ್ಲಿ ಅ.ಪ ವೇದಚೋರನ ಕೊಂದು ಭೂಧರವನು ಪೊತ್ತು ಮೇದಿನಿಯನು ಎತ್ತಿ ಕಂಬದಿ ಬಂದವಗೇ 1 ಭೂಮಿದಾನವ ಕೇಳಿ ಭೂಮಿಪರನು ಸೀಳಿ ಭೂಮಿಜಾತೆಯನಾಳಿ ಭೂ ಭಾರವಳಿದವಗೆ 2 ಮುದ್ದುಕುದುರೆಯ ಏರಿದ ಗುರುರಾಮ ವಿಠಲಗೆ 3
--------------
ಗುರುರಾಮವಿಠಲ
ಮಂದರೊದ್ಧಾರ ಮುಚುಕುಂದವರದ ಮುಕುಂದ ಇಂದಿರಾನಂದ ಗೋವಿಂದ ವರದ ಕಂದನತಿ ದೈನ್ಯದಿಂ ತಂದೆ ಬಾರೆನ್ನಲಾ ನಂದದಿಂ ಭದಿಂ ಬಂದೆ ಭರದಿಂ ನಂದಾತ್ಮ ಸಂಜಾತನೆಂದೆನಿಸಿ ನಲವಿನಿಂ ಬೃಂದಾವನದಿ ನಿಂದೆ ವರದನೆಂದೆ ನಂದಮಂ ಕೃಪೆಗೆಯ್ದುದರರೆ ಪಿರಿದು ಅಚ್ಚುತಾನಂತ ಚಿದ್ರೂಪ ವಿಭವ ಪಚ್ಚಕರ್ಪೂರದಿಂ ಮಿಳಿತವಾಗಿ ಪೆರ್ಚೆ ಪರಿಮಳ ವೀಳ್ವಮಿದನುಕೊಂಡು ಮೆಚ್ಚಿ ಪೊರೆಯೆನ್ನ ಶೇಷಾದ್ರಿರನ್ನ
--------------
ನಂಜನಗೂಡು ತಿರುಮಲಾಂಬಾ