ಒಟ್ಟು 959 ಕಡೆಗಳಲ್ಲಿ , 91 ದಾಸರು , 712 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ವಮುನಿಯೆ ನಿನಗೆ ಎದ್ದು ಕರಗಳ ಮುಗಿವೆ | ಬುದ್ಧಿ ಪಾಲಿಸಿ ಎನ್ನ ಉದ್ಧರಿಸೊ ಗುರುವೇ ಪ ದುರುಳ ಪಾಮರ ಸಂಕರನೆಂಬುವನು | ದುರಾಚಾರಗಳು ಧರಿಯೊಳಗೆ ಕುಭಾಷ್ಯಗಳ ವ್ಯಾಪಿಸೀ | ಇರಲು ಉತ್ತಮ ಸಂಪ್ರದಾಯದಲ್ಲಿಪ್ಪ | ವರರು ಇರದಂತಾಗೆ ಸುಜನರು ಕೂಗೆ 1 ಮಲ್ಲ ಮಾಯಿಗಳ ಹಲ್ಲು ಮುರಿದ ಅಪ್ರತಿಮಲ್ಲ | ಇಳಿಯೊಳಗೆ ಶುದ್ದ ಭಾಷ್ಯ ರಚಿಸಿ ಲೇಸಾ | ಕಿಲಕಿಲನೆ ನಗುತ ಮೊಗ ಕಳೆವೇರುತಾ ವೇಗ | ನಳಿನನಾಭನ ಚರಣ ಮನದಲಿಟ್ಟ ಪರಣಾ 2 ಇಪ್ಪತ್ತು ಒಂದು ದುರ್ಮತದ ವರ ಕುವಾಕು | ಸರ್ಪನನ್ ಗರುಡ ಶೀಳಿದಂತೆ ಕೇಳಿ | ಇಪ್ಪ ಬಲು ಅಜ್ಞಾನ ಓಡಿಸಿ ಸುಜ್ಞಾನ | ತಪ್ಪದಲೆಗರದು ಸಂತರನೆಲ್ಲ ಪೊರೆದು 3 ಮಿಥ್ಯ | ಪಂಚವಿರಹಿತ ಹರಿ ಪರನೆಂದು ಸಾರೀ | ಚಂಚಲವ ಪರಿಹರಿಸಿ ಮರುತ ಮತ ಉದ್ಧರಿಸಿ | ಕಾಯ ಸುಖ ತೀರ್ಥರಾಯಾ4 ಸುರರಾದಿಗಳ ಮಣಿಯ ಆರಾರು ನಿನಗೆಣೆಯೇ | ಅರಸಿದರೆ ಕಾಣೆ ಹರಿ ಪದಗಳಾ ಆಣೆ | ಶಿರಿ ವಿಜಯವಿಠ್ಠಲನ್ನ ಭಜಿಸುವ ಯತಿರನ್ನ | ಶರಣಪಾಲಕ ಪೂರ್ಣಪ್ರಜ್ಞ ಗುಣಪೂರ್ಣ 5
--------------
ವಿಜಯದಾಸ
ಮಧ್ವಾಚಾರ್ಯರು ಮಧ್ವಮುನಿರಾಯ ಭಕ್ತೋದ್ಧಾರನೆ ಪ ಶುದ್ಧಮೂರ್ತಿಯಾದ ಕೃಷ್ಣ ದ್ವೈಪಾಯನರ ಶಿಷ್ಯ ಅ.ಪ ತಾಮಸರ ಮುರಿದು ಚೂ ಡಾಮಣಿಯ ಸ್ವಾಮಿಗಿತ್ತೆ 1 ಭೂಮಿ ಆಶೆಯುಳ್ಳ ದುರ್ಯೋಧನಾದ್ಯರ ನಿರ್- ನಾಮವ ಹೊಂದಿಸಿ ಕೃಷ್ಣನ ಪ್ರೇಮಕೆ ನೀ ಪಾತ್ರನಾದೆ 2 ಇಪ್ಪತ್ತೊಂದು ಭಾಷ್ಯಗಳಾ ಖಂಡಿಸೀ ಸರ್ಪಶಯನ ಸರ್ವೋತ್ತಮನೆಂದು ಸಾರಿಸಿ ಅಪ್ಪ ಗುರುರಾಮ ವಿಠಲನ ತಪ್ಪಾದೆ ಪೂಜಿಸುತಿರ್ಪ 3
--------------
ಗುರುರಾಮವಿಠಲ
ಮನವೆ ಶ್ರೀನಾರಾಯಣನನು ಸ್ಮರಿಸದೆ ಮಾಯಾಪಾಶಕೆ ಸಿಲುಕುವರೇ ಪ. ವನಜನಾಭನ ಪದ ವನರುಹಯುಗ್ಮವ ಅನುದಿನ ನೆನೆಯದೆ ಒಣಗುವರೇ ವನಿತಾಲಂಪಟನಾಗುತ ಸಂತತ ಮನಸಿಜಯಂತ್ರಕೆ ಮನಮರಗುವರೇ ಅ.ಪ. ತುಂಡು ಸೂಳೆಯರ ದುಂಡುಕುಚವ ಪಿಡಿದು ಗಂಡಸುತನವನು ಕೆಡಿಸುವರೆ ದಂಡಧರನ ಬಾಧೆ ಹೆಂಡತಿಯನು ಪಡ ಕೊಂಡು ವೇದನೆಯನು ತಾಳುವರೆ ಕಂಡು ಕಂಡು ನೀ ಗುಂಡಿಗೆ ಬಾಳ್ವರೆ ಹೆಂಡಿರ ಸುಖರಸ ಉಂಡರು ಸಾಲದೆ 1 ಬಂದ ಸುಖಕೆ ನೀ ಮುಂದುವರೆಯುತಲಿ ಮಂದ ಅಸಮ ದುಃಖ ತಾಳುವರೇ ಬಂದುದೆನ್ನ ಕಣ್ಣ ಮುಂದೆಯನುಭವಿಪೆ ಎಂದಿಗೆನ್ನಾಜ್ಞೆಯು ಬಂದಪುದೋ ನಿಜ 2 ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹ ಪಟ್ಟ ಭಾಗ್ಯವನೆಲ್ಲ ತೋರೊ ನೀನು ಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ- ನಷ್ಟು ಸುಖವನ್ನು ಕಾಣೆನಿನ್ನು ಇಷ್ಟಾರ್ಥಗಳೆಲ್ಲ ದೊರೆಕುವುದೈ ಪರ ಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3 ವಿಷಯ ಪಳಂಚಿತನಾಗುವ ಸಂತತ ಪಂಚಡಕೀರನು ಆಗುವರೇ ಕರ್ಮ ಸಾಲದೆಂದೆನುತಲಿ ಸಂಚಿತ ಪಾಪವ ಸಂಗ್ರಹಿಸುವರೇ ಚಂಚಲಾಕ್ಷಿಯರ ಚಪಲದ ಮಾತನು ವಂಚನೆ ಎಂಬುದು ತಿಳಿಯದೆ ಇರುವರೆ 4 ಸಾರಿಸಾರಿ ಕೈ ಮುಗಿದು ಬೇಡುವೆನು ವಿ- ಕಾರ ದುರ್ಬುದ್ಧಿಯ ಬಿಡು ಎಂದು ಭಾರಿ ತಪ್ಪುಗಳ ಕ್ಷಮಿಸಿ ಕಾವ ಲಕ್ಷ್ಮೀ ನಾರಾಯಣ ನೀನೇ ಗತಿಯೆಂದು ಪಾರಮಾರ್ಥಿಕ ವಿಚಾರವ ಮಾಡುತ ಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮನವೇ ನೀ ಬರಿದೆಜನ್ಮ ವ್ಯರ್ಥಗಳೆವರೆ ಬಂಗಾರದಥಾ ಪ ಮನವೇ ನೀ ಬರಿದೇ ಜನ್ಮ ವ್ಯರ್ಥಗಳೆವರೆ ಬಂಗಾರದಂಥಾ | ಮರೆವ ದಿನಗಳ ಜರಿವರೇ ನರದೇಹವಿದು ಅ.ಪ ದೊರೆಯದಿನ್ನು ಮತ್ತ ತರುವರ ಏನಾದರೇನೀ | ಹರಿಯ ಸ್ಮರಣೆಯ ಬಿಡುವರೇ | ಅರಿವ ಪಂಥ ವಿಡಿದು ಜನ್ಮ ಮರಣ ಬಲಿಯಾ ತಪ್ಪಿಸದೇ | ತಿಗಳಿ ಹುಳುವಿನಂತೆ ಸಿಕ್ಕ ತನ್ನ ತಾ ಮರೆವರೇ 1 ಕೇಳೆಲೋ ನೀ ಪೊಡವಿಯೊಳಗಿದ್ದ ಸಾಯಸಾ | ಉದಯದಲೆದ್ದು ಬಿಡುವದೆ ಮಲಮೂತ್ರ ಕೆಲಸಾ | ಮಧ್ಯಾನ್ಹದಲಿ ವಡಲ ತುಂಬುವ ಕೆಲಸಾ | ನಿಶಿಕಾಲದಲ್ಲಿ ವಡನೆ ಮಲಗುವ ಕೆಲಸಾ | ಪಡೆದ ತಾಯಿಯವ್ವನೆಂಬ ದೃಢವನವಾ ಕಡಿಯಲು | ಕೊಡಲಿಯಂತೆ ಹುಟ್ಟಿ ಬಂದೆ ಮಡದಿ ಮಕ್ಕಳುದ್ದೇಶಾ 2 ಮನವೇ ನೀ ಹಿಂದಿನವ ಗುಣ ಜರಿದು ಸದ್ಭಾವ ಭಕು | ತಿಂದ ನಡುವಳಿ ಬಿರಿದು | ಸದ್ಗುರುವೀನ | ದ್ವಂದ್ವ ಪಾದಗಳ ವಿಡಿದು | ಅವರ ದಯ | ದಿಂದ ಗತಿ ಮುಕ್ತಿ ಪಡೆದು | ಇಂದು ಧನ್ಯನಾಗೆಲೋ ಮುಕುಂದ ನಾಮ ನೆನೆದು ನೀ | ತಂದೆ ಮಹಿಪತಿ ನಿಜನಂದನುಸುರಿದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನ್ನಿಸಿ ಸಲಹಯ್ಯ ಎನ್ನ ತಪ್ಪು ಒಪ್ಪಿಕೊ ಮಹರಾಯ ಪ ಮನ್ನಿಸಿ ಸಲಹಯ್ಯ ಪನ್ನಂಗಶಯನನೆ ನಿನ್ನ ಧ್ಯಾನಾಮೃತವನ್ನು ಕರುಣದಿತ್ತು ಅ.ಪ ನಾನಾಜನುಮ ಸುತ್ತಿ ಮತ್ತೆ ಹೀನ ಜನುಮವೆತ್ತಿ ಜ್ಞಾನವಿನಿತಿಲ್ಲದೆ ನಾನಾಪಾಪಗೈದೆ ದೀನಜನರ ಬಂಧು ನೀನೆ ಕ್ಷಮಿಸು ತಂದೆ 1 ಮರವೆ ದೇಹವೊದ್ದು ಸಂಸಾರ ಮರವೆಯೊಳಗೆ ಬಿದ್ದು ಶರಣ ಸತ್ಪುರುಷರ ನೆರವಿನಿತರಿಯದೆ ಮರುಳನಾದೆ ಹರಿ ಮುರಹರ ಕ್ಷಮಿಸಯ್ಯ 2 ಬರಬಾರದು ಬಂದೆ ಬಲು ವಿಧ ದುರಿತದೊಳು ಬೆಂದೆ ಕರುಣದಿ ಕ್ಷಮೆಮಾಡಿ ಪೊರೆಯೊ ಶ್ರೀರಾಮನೆ 3
--------------
ರಾಮದಾಸರು
ಮರವೆ ಮುಸುಕಿದುದುತಾ ಪರಮ ಕೃಪೆವಂತ ಬಂದು ಪ್ರಳಾಪವೇನಿದುಯೆಂದು ನನ್ನಯತಾಪವನು ತಂಪಿಸುತ ಬಿಗಿಯಪ್ಪಿದನು ದೇಶಿಕನು 1ಕಂಗಳೊಳಗಾನಂದಜಲ ಸುರಿದಂಗದೊಳು ರೋಮಾಂಚವಾಗಿಯೆಮಂಗಳಾಕೃತಿಗಂಡು ಚರಣಕ್ಕೆರಗಿದೆನು ಮರಳಿಕಂಗಳೊರತೆಯ ತೊಡೆದು ದಿವ್ಯ ಕರಂಗಳಿಂದಲಿ ಶಿರತಡ' ಸರ್ವಾಂಗವನು ಬಿಗಿಯಪ್ಪಿಯಭಯವನಿತ್ತ ದೇಶಿಕನು 2ನಿನ್ನೊಳಾನಿಹೆನೆಲ್ಲಿ ಪೋಪೆಡೆಯನ್ನು ತೋರಿಸು ನನಗೆ ನೀನಾರೆನ್ನ ಮನ ನಿನ್ನುವನುಳಿದು ನಿಲಬಲ್ಲುದೇ ಮಗನೇಇನ್ನು ಧೈರ್ಯವ ಮಾಡು ಗಿರಿಗುಹೆಯನ್ನು ಸೇರ್ವೆನು ನಾನು ಜನತತಿಯನ್ನು ಹೊದ್ದುವದಿಲ್ಲವೆಂದುಸುರಿದನು ದೇಶಿಕನು 3ಇರಿಸಿರುವೆನೀ ಪಾದುಕೆಗಳನು ಹರುಷದಿಂದರ್ಚಿಸುತ ಭಾ'ಸುಬರಿಯ ಭ್ರಾಂತಿಯ ಬಿಟ್ಟು ಭಕ್ತಿಯ ಬಲದಿ ಮಂತ್ರವನುನಿರುತ ಜಪಿಸುತ್ತಿರು ಯಥೇಚ್ಛೆಯೊಳರಿವು ಸುಖಸಂಪತ್ತಿ ಲಭಿಪುದುಪರಮ ಭಕತನು ನೀನೆನುತ ವಾಚಿಸಿದನು ದೇಶಿಕನು 4'ಜಯದಶ'ುಯ ದಿವಸ ಲಭಿಸಿತು 'ಜಯಕರ ಮುಂದಿನ್ನು ನಿನಗೆಲೆದ್ವಿಜನೆ ಸುತ ಪೌತ್ರಾದಿ ಕುಲಪಾರಂಪರೆಗೆ ನಿನ್ನಾಸುಜನತೆಯ ಕರುಣಿಪುದು ಭಕ್ತವ್ರಜದೊಲೋಲಾಡುವದು ತಪ್ಪದು'ಜಯಸಾರಥಿ ನಿನ್ನ ವಶವೆಂದನು ಗುರೂತ್ತಮನು 5ಅನಿತರೊಳು ಜನಸಂದಣಿಯ ಧ್ವನಿಯನು ತಿಳಿದು ನಾನೆದ್ದೆ ಬೇಗದಿಘನಕೃಪಾನಿಧಿ ಗುರುವ ಕಾಣದೆ ಮತ್ತೆ ಬಳಲಿದೆನುಇನನುದಿಸಿದೊಂದರೆಘಳಿಗೆ ತಲೆಯನು ಬಿಡದೆುದ್ದಲ್ಲಿ ಪಾದುಕೆಯನು ಶಿರದಿ ತಾಳಿದೆನು ಮನೆಗೈದಿದೆನು ಹರುಷದಲಿ 6ತಿರುಪತಿಯ ವೆಂಕಟನು ಸುಖವನು ಕರುಣಿಸಲು ದೇಶಿಕನ ತನುವನುಧರಿಸಿ ಪಾದುಕೆುತ್ತು ಸಲ'ದನೊಲಿದು ಕೃಪೆುಂದಹರುಷದಿಂದೀ ದಿವಸ ಶ್ರೀ ಗುರುವರನ ಪೂಜಾಕಾರ್ಯವೆನಿಪುದುನಿರುತ ಭಜಿಸುವರಿಂಗೆ ಸಕಲೇಷ್ಟಾರ್ಥ ಸಿದ್ಧಿಪುದು * 7
--------------
ತಿಮ್ಮಪ್ಪದಾಸರು
ಮರಳುತನವು ಬಂದು ಎನ್ನ ಕೊರಳ ಕೊಯ್ವುದು ದುರುಳನಾಗಿ ಇರುಳು ಹಗಲು ಒರಲುತಿಪ್ಪುದು ಪ ಮಾರಿಯನ್ನು ಮನೆಗೆ ತಂದು ತೋರಿಯಿಡುವುದು ಚೋರರನ್ನು ತಂದು ತನಗೆ ಸೇರಿ ಕೊಡುವುದು ದೂರುಬಪ್ಪ ದಾರಿಯನ್ನು ಸೇರಿ ನಡೆವುದು ಸಾರಿ ಪರನಾರಿಯನ್ನು ಸೂರೆಗೊಂಬುದು 1 ಹೆಂಡತಿಯ ಸುಲಿದು ತನ್ನ ಮಿಂಡಿಗಿಡುವುದು ಕಂಡು ಕಂಡು ಹರುಷ ತಾಳಿ ಕೊಂಡುಯಿರುವುದು ಭಂಡತನದಿ ಕೊಂದು ದೂರ ಕೊಂಡು ಪೋಪುದು ಉಂಡು ಉಡುವ ಹರುಷ ಸರಿಯ ಮಿಂಡಿಗಪ್ಪುದು 2 ಸೂಳೆಯನ್ನು ಕಂಡು ಹರುಷ ತಾಳಿಯಿರುವುದು ವೇಳೆಗವಳು ಬಾರದಿರಲು ಚೀ[ರಿ]1ಯಳುವುದು ಹಾಳು ಬದುಕಿನೊಳಗೆ ಬಹಳ ಚಾಳು ತೋರ್ಪುದು ಖೂಳರನ್ನು ಕರೆದು ಅನ್ನ ಪಾಲನೆರೆವುದು 3 ಇಲಿಯು ಹೆಚ್ಚಿತೆಂದು ಮನೆಗೆ ಉರಿಯನಿಡುವುದು ಚಳಿಯು ಹೋಯಿತೆಂದು ಮನದಿ ನಲಿವುತಿರುವುದು ಬಿಳಿದು ಬೂದಿಯನ್ನು ಕೊಂಡು ಹೊಳೆಗೆ ಬಿಡುವುದು ಸ್ಥಳವ ಕೆಡಿಸಿ ಕುಲವನೆಲ್ಲ ಬಳಕೆ ತೀರ್ಪುದು 4 ಹೆತ್ತ ಮಗನ ತೊರೆದು ತಾನು ದತ್ತ ತಪ್ಪುದು ಸತ್ತ ಎಮ್ಮೆ ಹಾಲು ಹತ್ತು ಸೇರಿಗಳವುದು ಕತ್ತಿಯನ್ನು ಬಿಸುಟು ಒರೆಯ ಹತ್ತಿರಿಡುವುದು ಶತ್ರುವಾಗ ಬಂದ ತನ್ನ ಒತ್ತಿ ನಿಲುವುದು 5 ಗಾಳವಿಲ್ಲದೆ ಮೀನುಗಳ ಮೇಲೆ ತೆಗೆವುದು ಕೋಲುಯಿಲ್ಲದ ಕೊಲೆಗಳೆನ್ನ ಮೇಲೆ ಬೀಳ್ವುದು ಸಾಲವನ್ನು ಕೊಟ್ಟವರು ಸಾಯಲೆಂಬುದು ಕಾಲನೊಳು ಕೈಯ ಕಟ್ಟಿ ಶೂಲೆ ತಪ್ಪುದು 6 ಸರ್ವತಂತ್ರವೆಲ್ಲ ಹರಿಯ ಹತ್ತಿರಿಡುವುದು ಗರ್ವವನ್ನು ತೋರಲವನ ಸುತ್ತಿ ಬರುವುದು ಇರುವೆಯಂತೆ ಮೈಯನೆಲ್ಲ ಕುತ್ತಿ ತರಿವುದು ತೋರ ವರಾಹತಿಮ್ಮಪ್ಪನ ಎತ್ತಿ ನೆನೆವುದು 7
--------------
ವರಹತಿಮ್ಮಪ್ಪ
ಮರುಗದೇ ನಿಂತಿಹುದೆ ಮನವು ನಿನ್ನಾಅರಿಯದಪರಾಧ ತಾನಳಿಸುತಿರಲೆನ್ನ ಪನೆರೆಯವರ ಮೈಸಿರಿಯ ನೋಡಿ 'ರಿಯರ ನಡೆಯಮರೆತು ಧನದಲಿ ಮತಿಯನಳಿದೆಯಾಕರಕೊಂಡು ನರತತಿಯ ಕೆಣಕಿುವರ ಸಹನೆಯಪರಿಪಾಕದಿಂ ನೋಡಿ ಬಂದ ಪೀಡನೆಯ 1'ತವರೆಂಬಂತಿರುವ 'ಂಸೆಯನಾಳೋಚಿಸುತ ಜೊತೆಯೊಳಾರೋಗಿಸುತ ಜಾರಿ ನಿಲ್ಲುತಸತಿ ಸುತಾದ್ಯರ ಭೋಗಸಾಧನವ ಕೆಡಿಸುತ್ತಪತಿತರಿಂದರಸುತ್ತ ಪಿಡಿಸಲು[ಕಾ]ಯುತ 2ಪಾದುಕಾರ್ಚನೆಯನ್ನು ಪಾಲಿಸಿದ ಬಗೆಯನುಬೋಧಿಸುತ ಚಿತ್ತವನು ಬೆದರಿಸುವದೆನೀ ದಯಾಸಾಗರನು ನೀಚರುಪಹತಿಯನುಸಾದರದಿ ಬಿಡಿಸಿನ್ನು ಸಾಕು ಮುನಿಸನು 3ಕಾಲ ದೇಶವ ಕಂಡು ಕಾಪಥವ ಕೈಕೊಂಡುಬಾಳಿದರಳು ಕೂತುಂಡು ಭಕ್ತಿ ಮುಂಕೊಂಡುಊಳಿಗವ ಬೆಸಗೊಂಡು ಊರೊಳಗೆ ತಿರುಕೊಂಡುಬಾಲ ಇರಲರಿದಾಡುಬಡಿಯೆ 'ಡುಕೊಂಡು 4ಮಂಗಳಾರ್ತಿಯ ಸೇವೆ ಮಾಣುತಿಹುದೇಗೈವೆಕಂಗಳಿಗೆ ನೀ 'ಭುವ ಕಾಣಿಸಿದೆ ಸುಖವೆತಿಂಗಳೆನಿತಾದರುವೆ ತಿರಿದೂಳಿಗಕೆ ತರುವೆಸಂಗಿನವರೊಳಗಿರುವೆ ಸತತವೆಲೆ ಗುರುವೆ 5ತಪ್ಪಿಗನುಸಾರವಾಗಿ ತಿಳಿಯೆ ಶಿಕ್ಷಿಪೆಯಾಗಿಒಪ್ಪದ ಪದವ ನೀಗಿಪೊಳಿತಾಗಿತೆಪ್ಪಗೂಳಿಗಕಾಗಿ ತಗುಲಿಸುವೆ ನೀನಾಗಿಸುಪ್ರಸನ್ನತೆಯಾಗಿ ಸುಖಬಡುವರಾಗಿ 6ದುರುಳರಹುದಹುದಿವರು ದೂರಿಗೊಳಗಾದವರುಚರಣಾಬ್ಜ ಸೇವಕರು ಚಾರುಮತಿಯವರುದುರಿತ ಶತವಡಿಸಿದರು ದಾಟುವರು ನಿನ್ನವರುಕರುಣಾಬ್ಧಿ ನೀನಿದಿರುಗಾಣೆ ಸುಖಮಯರು7ಸೆರೆಯ ಪರಿಹರಿಸಿನ್ನು ಸುಖಿಸು ಸದ್ಭಕ್ತರನುಗುರು ಸುತರ ಚರಣವನು ಕಂಡು ಬದುಕುವೆನುಬರಿದೆ ಬೇಡುವೆ ನಾನು ಪಾಲಿಸುವ 'ಭು ನೀನುಶರಣಾಗತಪ್ರಿಯನು ಶಾಂತಿದಾಯಕನು 8ಧರೆಯ ಜನರಜ್ಞತೆಯ ದ'ಸಿ ನಿಜ ಸದ್ಗತಿಯಕರೆದೀವ ಗುರುರಾಯ ವಾಸುದೇವಾರ್ಯಕರುಣ ನಾಗನಗರಿಯ ಸ್ಥಿರಗೈದು ಸುವಸತಿಯಒರೆದೆ ಭವ'ಜಯ ವೇದಾಂತಪದ್ಧತಿಯ 9
--------------
ವೆಂಕಟದಾಸರು
ಮರುಳನಾಗಿ ಬಂದು ತೀರ್ಥಪುರಕೆ ಸೇರಿದೆ ಕರಸಿಕೊಳ್ಳೊ ಮನೆಗೆ ಬೇಗ ಕರುಣವಾರಿಧೆ ಪ. ಸರಸಿಜಾದಿ ವಂದ್ಯ ನಿನ್ನ ಚರಣಕಮಲವ ಮರಳಿ ಮರಳಿ ಬೇಡಿಕೊಳುತ ಮಹಿಮೆ ಕೇಳುತ ಸ್ವರಗಳಿಂದ ಪೊಗಳುತಿರುವ ಸುಖವ ತ್ಯಜಿಸುತ 1 ಮೂಲೆ ನಾಲ್ಕರಲ್ಲಿ ಪುಷ್ಪಮಾಲೆಯಿರಿಸುತ ಮೇಲುಗಟ್ಟು ಬಿಗಿದು ದೀಪಮಾಲೆ ಬೆಳಗುತ ಗಾಳಿದೇವನೆಂದ ತತ್ವಮೂಲ ತಿಳಿವುತ ಶ್ರೀಲಲಾಮ ನಿನ್ನ ಪೂಜೆ ಮಾಡದೇಳುತ 2 ಇಂದಿರೇಶ ಎನ್ನ ತಪ್ಪನೊಂದ ನೋಡದೆ ತಂದೆ ಎನ್ನ ಕರಸಿಕೊಳ್ಳೊ ಹಿಂದೆ ದೂಡದೆ ಚಂದನ ಸ್ವರೂಪ ಪರಾನಂದ ಕಾರಣಾ ಭುಜಗ ಗಿರೀಶ ಭಕ್ತಭೂಷಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮರುಳು ಜೀವ ಏನು ಕಾಣುವೆ ಕೊನೆಗೆ ಪ ಸರ್ವಸಮರ್ಪಣೆ ಮಾಡದೆ ಇದರೊಳು ಅ.ಪ ಯಮನವರೆಳೆಯದೆ ಬಿಡುವರೆ ಛೀ ಹುಚ್ಚಾ 1 ಇಂದ್ರಿಯಂಗಳು ನಿನ್ನಾಧೀನವಲ್ಲ ಬಂದಮಾರ್ಗ ಸುಖ ಮರೆತು ಹೋದೆಯಲ್ಲ ಮುಂದಿನ ಗತಿ ಗೋತ್ರ ಮೊದಲಿಗೆ ಇಲ್ಲ ಮುಪ್ಪುತನವು ಹತ್ತಿರೇ ಬಂದಿತಲ್ಲ 2 ಕರ್ಮವೆಂಬುವುದೊಂದು ಅನಾದಿಯಾಗಿ ಧರ್ಮವ ಗಳಿಸುವವನೆ ಪರಮತ್ಯಾಗಿ ನಿರ್ಮಲ ಮನದಿ ದುರಾಶೆಯ ನೀಗಿ ಮರ್ಮವನರಿತುಕೊಂಡವನೇ ಮಹಾಯೋಗಿ3 ಭೋಗದಾಸೆಯ ಬಿಡು ಮೂರುದಿನದ ಬಾಳು ಕೂಗುತಿಹವು ಶೃತಿ ಸ್ಮøತಿಪುರಾಣಗಳು 4 ಸತಿಸುತರನು ನಾನೆ ಸಾಕುವೆನೆಂದು ಮತಿಗೆಟ್ಟು ಭ್ರಾಂತಿ ಹೊಂದುವೆ ನೀ ಮುಂದು ಮಿತಿಯ ಬರಹ ತಪ್ಪುವುದಿಲ್ಲ ಎಂದು ಪತಿ ಗುಣಸಿಂಧು 5 ಆಹಾರ ನಿದ್ರೆಯಲ್ಲವೆ ನಿನ್ನ ಆಟ ಸಾಹಸ ನೋಡೆ ಮಾಳಿಗೆಯ ಓಡ್ಯಾಟ ಮೋಹದಿಂದಲಿ ಮುಂದೆ ಬರುವುದು ಗೂಟ ಮೂಜಗದೊಳಗೆಲ್ಲಾ ಇದು ಗೊಂಬೆ ಆಟ 6 ಕಾಮಕ್ರೋಧಗಳು ಬಿಡಲಾರೆಯೇನೊ ಪಾಮರ ಜೀವ ಅಸ್ವಾತಂತ್ರಾ ನೀನೊ ಯಾಮಯಾಮಕೆ ಗುರುರಾಮವಿಠಲನಂಘ್ರಿ ನೇಮದಿಂದಲಿ ಭಜಿಸಿ ಸುಖವಾಗುವುದು ಕಾಣೊ7
--------------
ಗುರುರಾಮವಿಠಲ
ಮರುಳು ಮನುಜ ಹರಿಯ ಧ್ಯಾನಿಸೋ ಸ್ಥಿರವಿಲ್ಲವೀದೇಹ ಪ ಬರಿದೆ ಹೊನ್ನು ಮಣ್ಣಿಗಾಗಿ ಇರುಳು ಹಗಲು ವ್ಯರ್ಥವಾಗಿ ಕರೆಕರೆಯನು ಪಡುವೆಯಲ್ಲೊ ಅ.ಪ ತಂದೆ ತಾಯಿ ಸತಿಯು ಸುತರು ಬಂಧು ಬಳಗಗಳಾರಿದ್ದರು ಕರ್ಮ ತಪ್ಪಿಪರಾರು ಸಂದೇಹವಿಲ್ಲೆಂದು ತಿಳಿದು 1 ಜನರು ನಿನ್ನ ಸೇರುತಿಹರು ಕೊನೆಗೆ ಯಾರು ದಿಕ್ಕು ಕಾಣೆ ಮನೆಯಬಿಟ್ಟು ಹೋಗುವಾಗ 2 ಗುರುರಾಮವಿಠಲನಂಘ್ರಿ ಸ್ಮರಿಸಿ ಸ್ಮರಿಸಿ ಹರುಷ ಪೊಂದಿ ಪಾಪಿಯೆನ್ನಿಸಿಕೊಳ್ಳಬೇಡವೊ 3
--------------
ಗುರುರಾಮವಿಠಲ
ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ ಕರೆದು ಕಾಮಿತಗಳ ಕರವೆ ನಾ ನಿನಗೆಂದು ಪ ದಾರಿಯ ತಪ್ಪಿ ಪೋಗುವ ಧೀರ ಫೋರನ್ನ ದಾರಿಯ ಪಿಡಿಸಿನ್ನು ಪುರವನ್ನೆ ತೋರಿಸೆ ಊರಿನವೊಳಗೆ ಅವನ ಆಗಾ ದೂರ ನೋಡುವರೆ ದೋಷಗಳ ವಿಚಾರಮಾಡುವರೆ ಧೀರರು ಆವ ಪರಿಯಲವನ ಪಾರಗಾಣಿಪರಲ್ಲದೆ 1 ಹಸಿದು ಪರರ ಕೇಳದ ದ್ವಿಜವರಿಯನ್ನ ಶಿಶುವಿನ ನೋಡಿ ದಯದಿಂದ ಕರದಿನ್ನು ಹಸಿದ್ಯಾಕೊ ಎಂದು ಪಾಕವ ಮಾಡಿ ಹಸನಾಗಿ ತಂದು ಬಡಿಸುವ ಅವಸರದಿ ನಿಂದು,ಅವನ ದೋಷ ಪಸರಿಸಿ ಉಣಿಸಿದ ಜನರುಂಟೆ ಧರೆಯೊಳು 2 ಜಲಪಾನಾತುರನಾಗಿ ಜಲವ ಕೇಳಿದ ವಿಪ್ರ- ಕುಲ ತರಳನನು ನೋಡಿ ಕೃಪೆಯಿಂದ ಸುರನದಿ ಜಲವನೀವೆನೆಂದು ಬ್ಯಾಗನೆ ದಿವ್ಯ ಕಲಶವ ತಂದು ಬಾರೆಲೊ ಬಲು ಆಲಸ್ಯವ್ಯಾಕೆಂದು ನಿನ್ನಯ ಪಂಕ ತೊಳಿಯ ಕೊಡುವೆನೆಂದು ತಡವ ಮಾಡುವರೆ 3 ಸುಶರೀರ ತನುವನು ಮನದಲಿ ಬಯಸಿ ತಾ ಉಸರದ ಮುನಿತನಯನ ಕಂಡು ತಾವಾಗಿ ಕುಶಲವ ಕೇಳಿ, ದೇವತ ವೈದ್ಯ ಅಸಮರೆಂದೇಳಿ, ರಸ ಮಾಡೆಂದೇಳಿ, ಅವಗೆ ದಿವ್ಯ ರಸವನು ಪೇಳಿ, ಪಸಿ ನಿನ್ನಲಿದ್ದಾ ಕಿಸರು ಪೋದರೆ ಕೊಡುವೆವೆಂದು ನಿಲುವರೆ 4 ಅರ್ತಿಯ ಭಕುತನ್ನ ನೋಡೀಗ ನಿನ ದಿವ್ಯ ಕೀರ್ತಿಯ ನೋಡಿಕೊ, ವಾಸುದೇವವಿಠಲನ ಮೂರ್ತಿಯ ಭಜಕ ಭಕ್ತರಾಭೀಷ್ಟ ಪೂರ್ತಿಗೆ ಜನಕ ನಿನ್ನಯ ಗುಣ ಸ್ಫೂರ್ತಿಗೆ ಜನಕ, ನಿನ್ನಯ ಗುಣ ಸ್ಫೂರ್ತಿ ಉಳ್ಳನಕ ಪಾಪದ ಲೇಶ ವಾರ್ತಿ ಎನಗೆ ಇಲ್ಲವೆಂದು ನಿಶ್ಚೈಸಿದೆ 5
--------------
ವ್ಯಾಸತತ್ವಜ್ಞದಾಸರು
ಮಲಗಲೇತಕೆ ಹರಿಯೆ | ಚಲುವ ಚನ್ನಿಗ ದೊರೆಯೆ ಪ ಎಲರುಣೀವರ ಶಯ್ಯ | ಬಳಲಿಕೇಕಯ್ಯಾ ಅ.ಪ. ವೇದ ಕದ್ದನ ಹರನೆ | ಭೂಧಾರಿ ಗಿರಿಧರನೆಭೂದರಿಸಿ ಭೊಮ್ಮನಿಗೆ | ಆದರದಿ ಕೊಟ್ಟವನೇ |ಭಾದಿಸೇ ಭಕ್ತ ಪ್ರ | ಹ್ಲಾದನನ ಕಾಯ್ದವನೆಮೋದದಿಂದಲಿ ಬಲಿಯ | ಪಾದವಾ ಮೆಟ್ಟಿದನೆ 1 ಗಂಡು ಗೊಡಲಿಯ ಪಿಡಿದು | ಭಂಡ ಭೂಭುಜ ತರಿದುಲಂಡ ರಾವಣ ಶಿರ | ಚೆಂಡಾಡಿದ ಧೊರೆಯೇಕಂಡ ಕಂಡವರ ಮನೆ | ಗಂಡಲೆದು ಪಾಲ್ಮೊಸರಉಂಡುಂಡು ಚೆಲ್ಲಾಡಿ | ಭಂಡು ಮಾಡಿದೆ ಕೃಷ್ಣ 2 ಮುಪ್ಪೊರರ ಸತಿಯರನು | ಅಪ್ಪಿ ವ್ರತ ಭಂಗವನುತಪ್ಪದೇ ಮಾಡಿ ಹಯ | ವಪ್ಪಿ ಏರ್ದವನೇಇಪ್ಪರಿಯ ಚರ್ಯ ದಿಂ | ಸೊಪ್ಪಾಗಿ ಮಲಗಿದೆಯೋಗುಪ್ತ ಮಹಿಮನೆ ದೇವ | ಅವ್ವ ಶ್ರೀರಂಗ ಪುರಗ 3 ಕ್ಲೇಶ 4 ಪೂರ್ವ ವಾಹಿನಿ ಎನಿಪ | ಕಾವೇರಿ ತೀರಗನೆಪೂರ್ವದಿವಿಜರ ಹರನೆ | ಸಾರ್ವಭೌಮಾಊರ್ವಿ ಯೊಳ್ಪೆಸರಾದ | ಪಾರ್ವ ಗೌತಮ ವರದಕೋರ್ವೆ ತವ ಚರಣ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮಹಾಲಕ್ಷ್ಮಿ ಸ್ತೋತ್ರ ವೆಂಕಟಾದ್ರಿ ನಿಲಯನ ಪಂಕಜನಾಭನ ತೋರವ್ವ ಲಕುಮಿ ಪ ವಸುದೇವ ದೇವಕಿ ಕಂದಾ - ನಮ್ಮಶಶಿಮುಖಿಯರೊಡನೆ ಆನಂದಾಪಶುಗಳ ಕಾಯ್ದ ಗೋವಿಂದ - ನಮ್ಮಬಿಸಜನಾಭ ಮುಕುಂದಾ 1 ಸಾಮಜರಾಜ ವರದಾ - ಬಲುಪ್ರೇಮದಿ ಭಕುತರ ಪೊರೆದಾಆ ಮಹಾ ದಿತಿಜರ ತರಿದಾ - ನಿಸ್ಸೀಮ ಮಹಾಮಹಿಮನಾಗಿ ಮೆರೆದ - ನಮ್ಮ 2 ಉರಗಗಿರಿಯಲಿಪ್ಪ - ಅಂದುಮರುತನ ಹೆಗಲೇರಿ ಬಪ್ಪಶರಣರಿಗೊರವಿತ್ತ ತಪ್ಪಸಿರಿ ಮೋಹನ ವಿಠ್ಠಲ ತಿಮ್ಮಪ್ಪ - ನಮ್ಮಪ್ಪನ 3
--------------
ಮೋಹನದಾಸರು
ಮಳೆಯ ದಯಮಾಡೊ ರಂಗಯ್ಯ ನಿಮ್ಮ ಕರುಣ ತಪ್ಪಿದರೆ ಉಳಿಯದೀ ಲೋಕ ಪ. ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ ಹಸಿದು ಬಾಯಾರಿ ಬತ್ತಿದ ಕೆÀರೆಗೆ ಬಂದು ತೃಷೆಯಡಗದೆ ತಲ್ಲಣಿಸಿ ಮೂರ್ಛೆಗೊಂಡು ದೆಸೆದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ 1 ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ ಮೊಗೆ ಮೊಗೆದು ಪಾತ್ರೆಯಲಿ ನಾರಿಯರು ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ2 ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ ಬಂದಿದೆ ಭಾದ್ರಪದ ಮಾಸವೀಗ ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ3
--------------
ಹೆಳವನಕಟ್ಟೆ ಗಿರಿಯಮ್ಮ