ಒಟ್ಟು 773 ಕಡೆಗಳಲ್ಲಿ , 96 ದಾಸರು , 663 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀವಲ್ಲಭ ವಿಠಲ | ಪೊರೆಯ ಬೇಕಿವಳಾ ಪ ಅಕ್ಷಯ್ಯ ಫಲದ ಕೃ | ಪೇಕ್ಷಣದಿ ನೋಡಿಅ.ಪ. ಸಂಸಾರ ವಿರಸತರ | ಅಂಶವನೆ ತಿಳಿಸೊ ಹರಿಕಂಸಾರಿ ನಿನ್ನ ಪದ | ಪಾಂಸು ಭಜಿಸುತ್ತಾ ಸಂಶಯ ರಹಿತ ಹರಿ | ಹಂಸನಾಮಕ ಸೇವೆಶಂಸಾರ್ಯ ಸರ್ವಧಿಕ | ಸವೋತ್ತಮೆನುತಾ 1 ಹರಿನಾಮ ಕವಚವನು | ಸರ್ವದಾ ಧರಿಸುತ್ತಾದುರಿತನಾಳುಟ್ಟಳಿಯ | ಪರಿಹಾರ ಮಾರ್ಗಅರಿವಿನಿಂದಲಿ ಹರಿಯ | ವರನಾಮ ಸ್ಮರಿಸುತ್ತಕರಗತವು ಆಗಲಿಯೊ | ವರಮುಕ್ತಿಪಥವು 2 ಎರಡು ಮಾರ್ಭೇದಗಳು | ಅರಿವಾಗಲೀಕೆಗೇತರತಮಂಗಳು ಮನಕೆ | ಬರುತಿರಲಿ ಸರ್ವದಾಸಿರಿವಾಯು ಮತ ದೀಕ್ಷೆ | ಗೆರಗಲೀಕೆಯ ಮನಸುಹರಿಯ ಮಮ ಕುಲದೈವ | ಉದ್ದರಿಸೊ ಇವಳಾ 3 ಸಾಧನಕೆ ಸತ್ಸಂಗ | ನೀದಯದಿ ಕೊಟ್ಟಿವಳಮೋದ ಬಡಿಪದು ದೇವ | ಆದಿ ಮೂರುತಿಯೇ |ಮಾಧವನೆ ಬಿನೈಸೆ | ಆದರಿಸುತಿವಳೀಗೆಕಾದುಕೊ ಬಿಡದಲೆ | ಹೇ ದಯಾ ಪೂರ್ಣ 4 ದೇವದೇವೊತ್ತಮನೆ | ಕಾವದೇವನೆ ಹರಿಯಭಾವದಲಿ ಮೈದೋರಿ | ಪೊರೆಯೊ ಇವಳಾಕಾವ ಕರುಣೆಯ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ಈ ವಾಣಿ ಬಲುಸತ್ಯ 5
--------------
ಗುರುಗೋವಿಂದವಿಠಲರು
ಲಕ್ಷ್ಮೀಶ ಪಾಲಿಸು ಎನ್ನ ಲಕ್ಷ್ಮೀಶ ಪ. ಲಕ್ಷ್ಮೀಶ ಪಾಲಿಸೊ ಎನ್ನ | ಜಗ ದ್ರಕ್ಷಕ ಪರಮಪಾವನ್ನ ಈಕ್ಷಿಸು ಕರುಣ ಕಟಾಕ್ಷವ ಬೀರುತ ಕುಕ್ಷಿಯೊಳಗೆ ಜಗ ರಕ್ಷಿಸುತಿಪ್ಪನೆ ಅ.ಪ. ನಾಗರಾಜನ ಗಿರಿವಾಸ | ಭೋಗ ಆಗುಮಾಡೆಲೊ ಸರ್ವೇಶ | ನಿನಗೆ ಬಾಗಿ ನಮಿಸುವೆ ಜಗದೀಶ | ಭವ ರೋಗ ಹರಿಸು ಕ್ಲೇಶನಾಶ | ಆಹ ಕೂಗಿದರು ನಿನಗೀಗ ಕೇಳಿಸದೇನೊ ಜಾಗುಮಾಡದೆ ನೀಡೊ 1 ಸೃಷ್ಟಿಗೆ ಎನ್ನನು ಕರೆದೆ | ಭವ ಕಷ್ಟದಿ ಬಂಧಿಸಿ ತಂದೆ | ಇನ್ನು ಘಟ್ಯಾಗಿ ಕಾಪಾಡು ಎಂದೆ | ಮೊರೆ ಮುಟ್ಟದೆ ನಿನಗಿನ್ನು ತಂದೆ | ಆಹ ಎಷ್ಟು ಬೇಡಿದರು ಸೊಟ್ಟ ತಿರುಗಿ ಮೊಗ ಅಟ್ಟಕೆ ಏರುವಿ ಬೆಟ್ಟದೊಡೆಯ ಹರಿ 2 ಕರ್ಮಬಂಧನಗಳ ಕಡಿಯೊ | ಶ್ರೀಶ ನಿರ್ಮಲರೂಪ ಕೈಪಿಡಿಯೊ | ಬೇಗ ಧರ್ಮ ಅಧರ್ಮವ ತಿಳಿಯೊ | ಜಗ ತ್ಕರ್ಮ ಸಾಕ್ಷಿಯೆ ಬೇಗ ಪೊರೆಯೊ | ಆಹ ಧರ್ಮವಲ್ಲವೊ ಹೀಗೆ ಮರ್ಮವ ನುಡಿವುದು ಪೆರ್ಮೆಯಿಂದಲಿ ಅಂತರ್ಮರ್ಮವರಿತು ಕಾಯೊ 3 ಶ್ರೀನಿವಾಸ ಬಾರೊ ಬೇಗ | ನಿನ್ನ ನಾನು ನಂಬಿದೆನೊ ಶ್ರೀ ಭೋಗ | ನೀಗು ನೀನೆ ತ್ರಿಕರ್ಮದ ಭೋಗ | ಬೇಗ ಭವ ರೋಗ | ಆಹ ಪೋಗುತಲಿದೆ ದಿನ ಜಾಗುಮಾಡಲು ಸಲ್ಲ ನಾಗಶಯನ ಎನ್ನ ಬೇಗನೆ ರಕ್ಷಿಸೊ 4 ಕಣ್ಣು ಬಿಟ್ಟಿರುವೆಯೊ ನೀನು | ನಿನ್ನ ಬೆನ್ನ ಭಾರವಿದಿನ್ನೇನು | ಕೋರೆ ಮಣ್ಣು ಆರ್ಭಟಿಸುವೆ ನೀನು | ವಟು ಚಿಣ್ಣ ಭಾರ್ಗವ ನೀನು | ಆಹ ಮನ್ನಿಸಿ ಕಪಿಗಳ ಬೆÉಣ್ಣೆ ಕಳ್ಳನೆನಿಸಿ ಬಣ್ಣಗೆಟ್ಟು ಹಯವನ್ನೇರಿದ ಧೀರ 5 ನಿತ್ಯ ತೃಪ್ತನೆ ಎನ್ನ ಮನದಿ | ಸರ್ವ ತತ್ವಾಧಿಪತಿಗಳು ಮುದದಿ | ಜಗ ತ್ಕರ್ತನೆ ಕಾಯ್ವ ದಯದಿ | ಬೇಗ ಇತ್ತು ಮತಿಯ ಸಲಹೊ ದೃಢದಿ | ಆಹ ಸತ್ಯರೂಪನೊ ನೀ ಸತ್ಯ ಸಂಕಲ್ಪನೊ ನಿತ್ಯ ನಿಂತು ಕಾಯೊ 6 ಗೋಪಾಲಕೃಷ್ಣ ವಿಠ್ಠಲ | ಭವ ಕೂಪದಿಂದೆತ್ತೊ ಶ್ರೀ ನಲ್ಲ | ಎನ್ನ ರಾಪು ಮಾಡುವುದುಚಿತಲ್ಲ | ಜಗ ದ್ವ್ಯಾಪಕ ಭಕ್ತವತ್ಸಲ | ಆಹ ಈ ಪಯೋಜಜಾಂಡದಿ ರೂಪ ರೂಪಾಂತರದಿ ವ್ಯಾಪಾರ ನಡೆಸುವ ಗೋಪಕುವರ ಕಾಯೊ 7
--------------
ಅಂಬಾಬಾಯಿ
ಲೋಕನೀತಿ ಅಚ್ಯುತಾನಂತ ಗೋವಿಂದ ಅಕ್ಷರೊತ್ತಮ ಸದಾನಂದ ಪ. ನಿಶ್ಚಲ ಭಕ್ತಿಯಿಂ ಮೆಚ್ಚಿಸು ಹರಿಯಂ ನಿಶ್ಚಯ ಪೋಪುದು ಭವಬಂಧ ಅ.ಪ. ಆಧಿವ್ಯಾಧಿಹರಣ ಕಾರಣ ಮಧು ಸೂದನ ಸತ್ಯ ಸದ್ಗುಣವೃಂದ ವೇದಗಮ್ಯ ಪ್ರಹ್ಲಾದ ಕ್ಷೇಮದ ಮ- ಹೋದಧಿಶಯನ ಮುಕುಂದ 1 ಶ್ರೀಬ್ರಹ್ಮಾದಿ ದಿವಿಜಕುಲವಂದಿತ ಶೋಭಿತ ಪಾದಾರವಿಂದ ಈ ಭೂಮಿಯೊಳಗೆ ಜನಿಸಿದಕೆ ಸಫಲ ಲಾಭವೆ ಹರಿಕಥಾನಂದ 2 ಪ್ರಾಣನಿಯಾಮಕ ಸರ್ವತ್ರ ವ್ಯಾಪ್ತ ಧ್ಯಾನಿಸದಿರು ನೀ ಬೇರೊಂದ ದೀನವತ್ಸಲ ಸುಮ್ಮಾನದಿ ಕಾವ ಲ- ಕ್ಷ್ಮೀನಾರಾಯಣ ದಯದಿಂದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಲೋಕನೀತಿ ಅಧಿಕಾರಿಯಾಗಬೇಕು ಅದಕಾಗಿ ದುಡಿಯಬೇಕು ಪ ಅಧಿಕಾರಿಯಾಗುವುದು ಸುಲಭವಲ್ಲ ಎದೆಚಾಚಿ ಜಗದಿ ಹೆಮ್ಮೆಯ ತೋರುವ ಅ.ಪ ಶಾಶ್ವತವಿರಬೇಕು ಅದನೀಶ್ವರ ಕೊಡಬೇಕು ವಿಶ್ವವಿದ್ಯಾನಿಲಯವ ಸೇರುತಲಿ ಶಶ್ವದಿ ಪರವಿದ್ಯಾಶಾಖೆಯಲಿ 1 ಭೂಷಣವೆನಗೆಂದು ನೀ ಮೋಸ ಹೋಗಬೇಡ ಸಾಸಿರ ಸಾಸಿರ ಸ್ಥಾನಗಳಿಗೆ ನೀ ಆಸೆ ಪಡದೆ ಹರಿಶಾಸನ ಸಭೆಯ 2 ಕಮ್ಮಿಯ ಪ್ರತಿಫಲಕೆ ನೀ ಸಮ್ಮತಿ ಕೊಡದಿರೆಲೊ ಮರ್ಮವರಿತು ಪರಲೋಕವ ಪಡೆಯಲು ಹಮ್ಮನು ಮುರಿಯುವ ಕಾರ್ಮಿಕ ಸಭೆಯ 3 ಕಾಲವರಿತು ಸತತ ನೀ ಮೇಲಕೇಳಬೇಕು ಬಾಲಗೋಪಾಲನು ನೆಲೆಸುವುದಕೆ ಹೃದ ಯಾಲಯ ರಚನೆಯ ಚತುರ ಶಿಲ್ಪಿಯ 4 ಶ್ರವಣ ಮಾಡಬೇಕು ಶಾಸ್ತ್ರವ ಮನನ ಮಾಡಬೇಕು ಶ್ರವಣ ಮನನ ನಿಧಿ ಧ್ಯಾಸನದಿಂದ ಪ್ರ ಸನ್ನ ಹರಿದಯದಿ ಸಿಗುವ ಮುಕುತಿಗೆ 5
--------------
ವಿದ್ಯಾಪ್ರಸನ್ನತೀರ್ಥರು
ವಂದಿಪೆ ಮುದದಿಂದಲಿ ನಾನು ವಂದಿಪೆ ಮುದ್ದು ಗಣಪಗೆ ವಂದಿಪೆ ಪ ನಂನಂದನನಾಮ ಮನದೊಳು ಆ- ನಂದದಿ ಭಜಿಸುವ ಚಂದ್ರಶೇಖರಸುತಗೆ ಅ.ಪ. ಆಕಾಶಕಭಿಮಾನಿ ಶ್ರೀಕಂಠವರಪುತ್ರ ರಾಕೇಂದುವದನ ಶ್ರೀಕಾಂತ ನಿಜಭಕ್ತ ಏಕಾಂತದಲಿ ಹರಿ ಆಕಾರತೋರಿಸಿ ನೂಕುತಭವಪಾಶ ಸಾಕು ಸಾಕು ಎಂದು 1 ವರವರದಾಯಕ ಸುರಗಣಪೂಜಿತ ವರಕರಿಮುಖವೇಷ ವರಸರ್ಪಕಟಿಸೂತ್ರ ಸಿರಿಕಾಂತಸೇವೆಗೆ ಬರುವ ವಿಘ್ನಂಗಳೆಲ್ಲ ಭರದಿಂದ ತರಿಯುತ ಕರುಣದಿ ಸಲಹೆಂದು 2 ವೇದವ್ಯಾಸರಶಿಷ್ಯ ಮೋದಕಗಳ ಪ್ರಿಯ ಮದನನಸೋದರ ಮುದವಿದ್ಯೆದಾಯಕ ಮಧ್ವಾಗಮದಲಿ ಅದ್ದುತ ಎಮ್ಮನು ಶುದ್ಧರನು ಮಾಡೋ ಸಿದ್ಧಿ ವಿನಾಯಕನೆಂದು 3 ಏಕದಂತನೆ ವರ ಆಖುವಾಹನ ಭಕ್ತರ ಶೋಕ ಹರಿಸೊ ಬೇಗ ಲೋಕ ವಂದಿತನೆ ರಕ್ತಾಂಬರ ತನು ರಕ್ತಗಂಧಪ್ರಿಯ ವಿ - ರಕ್ತಿನೀಡುತ ಹರಿಭಕ್ತನೆಂದೆನಿಸು ಎಂದು 4 ಪಾಶಾಂಕುಶ ಶಶಿದರ್ಪಭಂಜನ ಶ್ರೀಶನಾಭಿವಾಸ ವಿಶಾಲಕರ್ಣಯುತ ನಾಶಗೈಸುತವಿಷಯ ವಾಸನೆಗಳೆಲ್ಲ ವಿಶ್ವೋಪಾಸಕ ಪ್ರಭು ಶ್ವಾಸಾವೇಶಯುತನೆಂದು 5 ಚಾರುದೇಷ್ಣನೆ ನಿನ್ನ ಚರಣಕ್ಕೆ ಶರಣೆಂಬೆ ಸರಿನೀನು ಧನಪಗೆ ಗುರುಶೇಷಶತರಿಗೆ ತರಿದು ತಾಪತ್ರಯ ವರಜ್ಞಾನ ವೈರಾಗ್ಯ ಹರಿಭಕ್ತಿ ಹರಿ ಧ್ಯಾನ ನಿರುತ ಕೊಡು ಎಂದು 6 ಜಯತೀರ್ಥ ಹೃದಯದಿ ವಾಯುವಿನೊಳಿಪ್ಪ ಸಿರಿ ತಾಂಡವ ಕೃಷ್ಣವಿಠಲ ರಾಯನ ಧ್ಯಾನ ಕಾಯಾ ವಾಚಾ ಮನಸಾ ದಯಮಾಡಿ ಸಲಹೈಯ್ಯ ಜೀಯಾ ಗಣಪನೆಂದು7
--------------
ಕೃಷ್ಣವಿಠಲದಾಸರು
ವಂದಿಪೆವು ತವಪಾದಪಂಕಜಕೆ ಶ್ರೀ ರಾಘವೇಂದ್ರ | ಇಂದು ಬಿನ್ನೈಸುವೆವು ನಿನ್ನಡಿಗೆ ಪ ಇಂದು ದಿನವಂಭತ್ತು ವದ್ಯದಿ | ವೆಂದು ತೋರುವ ಸುದಿನವೆಮಗೆಅ.ಪ ಕಾಲವನು ಬಣ್ಣಿಸಲು ಭಯವಹುದು | ಏನೆಂದು ಪೇಳಲಿ | ನಾಲಿಗೆಯು ಒಣಗುತ್ತಲಿಹುದು | ಮೇಲೆನಿಪ ಶಾಲ್ಯಾನ್ನವೀದಿನ | ಸಾಲದಾಯಿತು ಹಸಿವುತಾಳದೆ | ಕಾಲಪುರಕೈದುವೆವು ಗುರುವೇ 1 ಹಿಂದೆ ತಂಜಾಊರಿನಲಿ ಕ್ಷಾಮ | ವಂಜಿಸಲು ನಿನಬಳಿ | ಬಂದ ರಾಜನ ಮೊರೆಯ ಕೇಳುತಲಿ | “ಶ್ರೀ” ಬೀಜಮಂತ್ರವ ರಚಿಸಿ ಭಕುತರ | ದನ್ನ ವುಣಿಸಿದೆ ಜನಕೆ ಗುರುವೇ 2 ಧರ್ಮಮಾರ್ಗವೆ ಕಾಣದಂತಾಯ್ತು | ಎಲ್ಲೆಲ್ಲಿ ನೋಡಲ | ಧರ್ಮಕೃತಿಗಳೆ ಕಂಡುಬರುತಿಹವು | ಇಂದು ನಿರ್ಮಲಾತ್ಮಕ ನಿನ್ನ ಬಳಿಯಲಿ ಧರ್ಮಭಿಕ್ಷವ ಬೇಡುತಿಹರೈ3 ಅಖಿಲ ಸಜ್ಜನ ನಿಚಯ ಸಹಿತಾಗಿ ನೀನಿಲ್ಲೆ ನೆಲೆಸು | ಭಕುತರಿಷ್ಟಾರ್ಥವನು ನೀಡುತಲಿ | ಲಕುಮಿಯರಸನ ದಯದಿ ಶರಣರ | ಮುಕುತರಾಗುವ ತೆರದಿ ಹರಸೈ4 ದೇಶದೊಳು ಮಳೆಬೆಳೆಯು ಹುಲುಸಾಗಿ ಸೂಸಿಸಲಿನ್ನು | ದೇಶದೊಳು ಸುಖಶಾಂತಿ ಸ್ಥಾಪಿಸಲಿ | ಶ್ರೀಶಕೇಶವನಲ್ಲಿ ಭಕುತಿಯ | ಲೇಸೆನಿಪ ಧರ್ಮಾರ್ಥ ಮಾರ್ಗದಿ | ದಾಶೆಯಲಿ ಬಿನ್ನಹ ಗುರುವೇ 5
--------------
ಶ್ರೀಶ ಕೇಶವದಾಸರು
ವಂದಿಸಿ ಬೇಡುವೆ ನವಗ್ರಹರ ಕುಂದುಗಳೆಣಿಸದೆ ಬಂದು ರಕ್ಷಿಸಲೆಂದು ಪ ಭಾಸುರ ಸೂರ್ಯನು ಭಾಸಿಸಲಿ ತತ್ವವನು ಶ್ರೀ ಸಹೋದರ ಚಂದ್ರ ತೋಷವನು ಸೂಸಿ ಕೊಡಲಿ ಮಂಗಳವನು ಮಂಗಳ ಲೇಸಾದ ಪಾಂಡಿತ್ಯ ಪಂಡಿತನೀಯಲಿ 1 ಹಿಂಗದ ಗೌರವ ತುಂಗ ಶ್ರೀಗುರು ಕೊಡಲಿ ಕವಿ ಕೊಡಲಿ ಭಂಗವಿಲ್ಲದ ಸುಖಸಂಪತ್ತು ಶನಿ ಕೊಡಲಿ ಕಂಗೆಡಿಸುವ ರುಜೆ ರಾಹು ತಪ್ಪಿಸಲಿ 2 ಹಿಡಿದ ಕೆಲಸದಲ್ಲಿ ಹಿಡಿಸಲಿ ಜಯಧ್ವಜವ ಬಿಡದಲೆ ಧ್ವಜಿಯು ಸಡಗರದಿ ಕಡು ನವಗ್ರಹಗಳು ಪಿಡಿಗ್ರಹವಾಗಲಿ ಸಿರಿ ದೃಢದಿ ದಿನದಿನದಿ 3 ತರಣಿ ಕುಮಾರ ಮಣಿ ಹಾರ ದಾರಿದ್ರ್ಯದೂರ ಹರಿಸು ಅರಿಷ್ಟವ ಸುರಿಸು ಮನೇಷ್ಟವ ಎರಗುವೆ ಸಂಕಟಗೊಳಿಸದಿರುತ್ಕಟ 4 ಸಿರಿ ವಾದಿರಾಜರು ಒರೆದ ಗ್ರಹಸ್ತ್ರೋತ್ರವ ನಿರುತದಿ ಪಠಿಸಲು ಗ್ರಹ ಪೀಡೆಯು ಸರಿದು ತಾಂ ಪೋಪುದು ಅರಿಯ ನಿಗ್ರಹವಹುದು ತುರುಗಗ್ರೀವನ ದಯದಿ ಸರ್ವ ಸಂಪದಬಹುದು 5 ಗೀರ್ವಾಣ ಭಾಷೆಯಲಿರುವ ಈ ಸ್ತುತಿಯನ್ನು ಚಾರು ಕನ್ನಡ ಗೀತ ರೂಪದಿಂದ ಸಾರಿದ ಲಕ್ಷ್ಮೀನಾರಾಯಣ ಶರ್ಮನು ಕೋರುವ ಕೃಪೆಯನ್ನು ಸಾಧು ಸಜ್ಜನರನ್ನು 6 ನಮೋ ರವಿ ಸೋಮನೆ ನಮೋ ಕುಜಸೌಮ್ಯನೆ ನಮೋ ಗುರು ಭಾರ್ಗವ ನಮೋ ಶನೈಶ್ಚರನೇ ನಮೋ ರಾಹು ಕೇತುವೇ ನಮೋ ಮೃತ್ಯುದೈವವೇ ನಮೋ ಭೂತಗಣನಾಥ ನಮೋ ಲಕ್ಷ್ಮೀಕಾಂತ 7
--------------
ಲಕ್ಷ್ಮೀನಾರಯಣರಾಯರು
ವಂದಿಸುವೆ ಗಣರಾಜ ನೀ ದಯದಿಂದ ಪಾಲಿಸುವುದು ಪ ಸದ್ಗುಣಭರಿತನೇ ದುರ್ಗುಣರಹಿತನೇ ವಿಘ್ನವಿನಾಶಕನೇ ಭಗ್ನಗೈಸೋ ಎನ್ನ ಅವಗುಣಗಳ ನೀ ವಿದ್ಯಾದಾಯಕನೇ 1 ಶ್ರೀಶನಂಘ್ರಿಸರೋಜಭೃಂಗ ಮಹೇಶನ ವರಸುತನೇ ವ್ಯಾಸಕರುಣಾಪಾತ್ರನೇ ಮನದಾಸೆ ಪೂರೈಸುವವನೇ 2 ಪಾಶಪಾಣಿಯೆ ಪ್ರಾರ್ಥಿಸುವೆ ನೀ ಲೇಸು ಕೊಡುವುದಿನ್ನಾ ಶ್ರೀಶ ಶ್ರೀ ಹನುಮೇಶವಿಠಲನ ದಾಸನೇ ಅನುದಿನಾ 3
--------------
ಹನುಮೇಶವಿಠಲ
ವರದ ನಿನ್ನ ರೂಪ ಶ್ರೀ ನಿರುತ ನೋಡುವರೆ ಶ್ರೀ ಸರಸಿಜಭವ ಸಕಲ ಪ ಸುರರು ಮನುಗಳು ಮುನೀಶ್ವರರು ಶ್ರುತಿತತಿ ಯರು ದಿಗ್ವರರು ತಾಕ್ಷ್ರ್ಯಕನ ಮತ[ದವರು] ಅ.ಪ ಪರಭಕ್ತರಿಗೆ ದುಸ್ತರವಾದೊಡೆಯು ಕಾಡುವರಿಷಡ್ವರ್ಗವನೂ ತೊರೆದು ಹೃದಯದಿ ತೀರ್ಥ ಚರಣಾರವಿಂದಗಳಿಂ ನಿರಿಸಿ ಪೂಜಾತಪವನುರೆ ಚರಿಸಿ ವ್ರತಗಳಿಂ1 ಧರೆಯನಳೆದಂಗವೇನಯ್ಯ ಅಂದು ನರನಿಂಗೆ ತೋರಿದುದೆ ಜೀಯಾ ಶರಣರುಗಳೊದೆಯುವ ಕಾಯಾ ನಿನ್ನ ನಿರುಗೆಯನು ತೋರಿಸಲು ಒಡೆಯ ಕಾಣ 2 ಅರಿಯಬರುವುದಿಲ್ಲೀ ಚಿತ್ರಮಯ ಅಲ್ಪ ನರನರಿತರಿಯದವನು ನೆಲೆಯಾ ನೋಡ ಮಾಯಾ ವೇಲಾ ಪುರಿವಾಸ ವೈಕುಂಠ ಚೆನ್ನಕೇಶವರಾಯಾ 3
--------------
ಬೇಲೂರು ವೈಕುಂಠದಾಸರು
ವಸುಮತೀಶ ವಿಠ್ಠಲನೇ ನೀನಿವಗೆ | ಎಸೆವ ಜ್ಞಾನವನಿತ್ತುಹಸನಾಗಿ ಕಾಪಾಡಬೇಕೊ ಹರಿಯೆ ಪ ಕುಸುಮ ಸಂಭವ ಪಿತನೆ | ವಾಸುದೇವನೆ ಕೃಷ್ಣನಸು ನಗೆಯಲೀ ನಿನ್ನ ಉಪಾಸನವ ಕೊಡೊ ಹರಿಯೆ ಅ.ಪ. ತರತಮವು ಪಂಚಭೇದದ ಜ್ಞಾನ | ನಿರತಿಶಯ ಹರಿಭಕ್ತಿಗುರುಭಕ್ತಿಗಳ ಕರುಣಿಸೀ ಕಾಪಾಡಬೇಕೊ ಹರಿಯೇ |ವರ ಪ್ರದಾಯಕ ಸ್ವಾಮಿ ವೈರಾಗ್ಯ ಭಾಗ್ಯಗಳ ನೀನಿವರಿಗಿತ್ತುಕರುಣದಿಂ ಕಾಪಾಡಬೇಕೊ ಹರಿಯೇ 1 ನಿನ್ನ ಮೊರೆ ಹೊಕ್ಕವನ | ಇನ್ನು ಕೈ ಪಿಡಿಯುವುದುನಿನ್ನ ಧರ್ಮವಲ್ಲವೆ ಸ್ವಾಮಿ ರಾಮಚಂದ್ರ |ನನ್ನೆಯಿಂದಲಿ ಇವನ ಪಾಪಗಳ ಪರಿಹರಿಸಿನಿನ್ನ ಪದ ಸೇವಕನ ಮಾಡೊ ವೈಕುಂಠ ಪತಿಯೇ 2 ಖಗವರಧ್ವಜ ದೇವ ಜಗಜ್ಜನ್ಮಾದಿ ಕಾರಣನೆಬಗೆಬಗೆಯ ಮಹಿಮೆಗಳ ತೋರಿ ಕಾಪಾಡೊ ಹರಿಯೇ |ಸುಗುಣ ಮೂರುತಿ ದೇವ ತ್ರಿಗುಣ ವರ್ಜಿತ ಸ್ವಾಮಿಹಗರಣಗಳೀಯದಲೆ ಕಾಪಾಡೊ ಹರಿಯೇ 3 ಇಷ್ಟಮೂರುತಿ ದೇವ ಸೃಷ್ಟ್ಯಾದಿ ಕಾರ್ಯಗಳದೃಷ್ಟಿಯಿಂದಲಿ ಮಾಳ್ಪ ಮಹಮಹಿಮ ಹರಿಯೇ |ಕೃಷ್ಣಮೂರುತಿ ಹೃದಯ ಅಷ್ಟದಳ ಮಧ್ಯದಲಿದೃಷ್ಟಿಗೋಚರನಾಗಿ ಕಾಪಾಡೊ ಹರಿಯೇ 4 ಮೂರ್ತಿ ಹಯ ಮೊಗಾತ್ಮಕನೇ |ವೇದಾಣಿ ವಂದ್ಯ ಗುರುಗೋವಿಂದ ವಿಠ್ಠಲನೇನೀ ದಯದಿ ಕೈ ಪಿಡಿದು ಕಾಪಾಡೊ ಹರಿಯೇ 5
--------------
ಗುರುಗೋವಿಂದವಿಠಲರು
ವಸ್ತು ಕಂಡೆನು ಒಂದು ಕರ್ತೃ ಸದ್ಗುರುವಿನ ಕೃಪೆಯಿಂದ ಧ್ರುವ ತೇಜ:ಪುಂಜದ ರೂಪ ಮೂಜಗದೊಳಗಿದು ಅಪರೂಪ ನಿಜ ನಿರ್ವಿಕಲ್ಪ ಸುಜನರ ಹೃದಯಕ ಸದ್ಛನದೀಪ 1 ರೂಪಕ ನೆಲೆಇಲ್ಲ ವ್ಯಾಪಕವಿದು ಜಗದೊಳಗೆಲ್ಲ ಗುಪಿತಜ್ಞಾನಿಯು ಬಲ್ಲ ಜಪತಪಕಿದು ಸಿಲ್ಕುವದಲ್ಲ 2 ಙÁ್ಞನಕ ಸಾಹೀತ ಮುನಿಜನ ಹೃದಯದಿ ಸದೋದಿತ ಧ್ಯಾನಕೆ ಆಯಿತು ಮನಕಾಮನವಿದು ಪೂರಿತ 3 ಮೂರಕೆ ವಿರಹಿತ ಮೂರುಲೋಕವು ವಂದಿತ ಪರಮ ಸಾಯೋಜ್ಯತ ತಾರಕವಸ್ತು ಸಾಕ್ಷಾತ 4 ಬೈಲಿಗೆ ನಿರ್ಬೈಲ ಭಾವಿಕ ಬಲ್ಲನು ಇದರ್ಹೊಯಿಲ ಮಹಿಪತಿಗನುಕೂಲ ಜೀವನ್ಮುಕ್ತಿಗೆ ಇದು ಮೂಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಾಣೀ ನೀ ತೋರೆ ವಾರಿಜನಾಭನ, ಮಹಾಲಾಭನ್ನ ನಿತ್ಯ ಸುಲಭನ ಭಾನು ಸನ್ನಿಭನ ಪ ಕ್ಷೋಣೀಯೊಳಗಣ ಪ್ರಾಣಶ್ರೇಷ್ಠ - ಜಗ ತ್ರಾಣನ ತೋರಿಸೆ ಭಾನು ಸನ್ನಿಭಳೆ ಅ. ಪ. ಚೈತನ್ಯರಾಣಿ ಪುಸ್ತಕಪಾಣಿ-ಸುನೀಲವೇಣಿ ಅತ್ಯಂತ ಮಹಿಮೆ ಗುಣಗುಣಶ್ರೇಣಿ ತ್ರಿಲೋಕ ಜನನಿ ಸತ್ಯವ ತೋರುತ ನಿತ್ಯೋಪಾದಿಲಿ ಸತ್ಯ ಸಂಕಲ್ಪಳೆ ನಿತ್ಯದಿ ಪೂಜಿಪೆ ತ್ವತ್ಪಾದಾಂಬುಜವಿತ್ತು ನೀ ಸಲಹೆ1 ನಾಲಿಗೆಯಲ್ಲಿ ಬಂದು ನಿಂದು ದಯದಿಂದ ಇಂದು ಶ್ರೀಲೋಲ ಹರಿಯೆ ದೈವವೆಂದು ಕೊಂಡಾಡೆ ಮುಂದು ಕಾಲ ಹಿಂಗಿಸಿ ವಿ- ಶಾಲ ಮತಿಯ ಕೊಟ್ಟು ಆಳುಗಳೊಡನೆ ಸು- ಶೀಲ ಜ್ಞಾನವಿತ್ತು ಆಲಸ್ಯಮಾಡದೆ ಶೀಲ ಮುಕ್ತಿಗನುಕೂಲವಾಗುವುದಕ್ಕೆ2 ಜನ್ಮ ಬಂದಿದೆ ಕಡೆಗೆ ಮಾಡು ದಯದಿಂದ ನೋಡು ಘನ ಕೀರ್ತಿವಂತೆ ಅಭಯವ ನೀಡು, ನಿನಗಲ್ಲ ಈಡು ಕನಸಿಲಿ ಮನಸಿಲಿ ಮನಸಿಜನೈಯನ ನೆನೆಸುವ ಸೌಭಾಗ್ಯವನುದಿನ ಕೊಟ್ಟು ಘನಪ್ರೇರಣೆಯಿಂದ ವಿಜಯವಿಠ್ಠಲನಂಘ್ರಿ ವನಜವ ತೋರಿ ಸನ್ಮೋದವನೀಯೆ3
--------------
ವಿಜಯದಾಸ
ವಾದಿರಾಜ ಗುರುವೇ ಪಾದಾರಾಧಕ ಸುರತರುವೆ ಪ ಮೋದವ ಕೊಡುವದು ನೀ ದಯದಿಂದಲಿ ಸ್ವಾದಿನಿಲಯ ತವ ಪಾದಕೆ ನಮಿಸುವೆಅ.ಪ ಮೇದಿನಿಯೊಳು ಚರಿಸೀ ಜನರೊಳಗಾಧ ಮಹಿಮರೆನಿಸಿ ಮೋದಮುನಿಯ ಸುಮತೋದಧಿಚಂದಿರ ಗಜ ಮೃಗಾಧಿಪರೆನಿಸಿದ 1 ಯುಕ್ತಿ ಮಲ್ಲಿಕಾಧೀ ಬಹುಸರಸೋಕ್ತಿ ಸಹಿತವಾಗಿ ಭಕ್ತಿ ಪುಟ್ಟಿಸುವ ರುಕ್ಮಿಣೇಶ ವಿಜಯಾಖ್ಯ ಗ್ರಂಥದಿ ಚಮ ತ್ಕøತಿ ತೋರಿದ 2 ಭಾಗವತರ ಪ್ರೀಯಾ ನಮಿಸುವೆ ವಾಗೀಶರ ತನಯಾ ಯೋಗಿವರ್ಯ ಕವಿಗೇಯ ದಯಾಕರ ಭೋಗಪುರೀಶನ ರೋಗವ ಕಳೆದಿ 3 ರಾಜರನ್ನು ಪೊರೆದಿ ಯತಿಕುಲರಾಜರೆನಿಸಿ ಮೆರೆದಿ ರಾಜೀವ ಯುಗಲ ಪೂಜಿಸಿ ಜಗದಿವಿ ರಾಜಿಸಿದಂಥ 4 ಪಾತಕ ಪರಿಹರಿಸಿ ನರಮೃಗ ನಾಥನ ಪರಮ ಪ್ರೀತಿಯ ಪಡೆದಿ 5
--------------
ಕಾರ್ಪರ ನರಹರಿದಾಸರು
ವಾದಿರಾಜ ಪ್ರತಿವಾದಿ ಗಜೇಂದ್ರ ಧ ರಾಧರಾಟ ವಿಬೋಧದಿ ಚಂದ್ರ ಪ ಸಮಯವಿದೆಂದು ಉತ್ಕøಮಣವ ತೊರೆದೆ 1 ಬಂದು ಕರೆಯಲು ಪುರಂದರನಾಳ್ಗಳ ಹಿಂದಟ್ಟಿದೆ ಕರ್ಮಂದಿಗಳರಸ 2 ಆರ್ಥಿಗಳಿಗೆ ಪರಮಾರ್ಥ ಕೊಡುವ ಸ ತ್ತೀರ್ಥ ಪ್ರಬಂಧವ ಕೀರ್ತನೆ ಗೈದೆ 3 ಅದ್ವೈತ ಸಮಿಧಿ ಮಧ್ವ ಸುಸಿದ್ಧಾಂ ತಿಧ್ಮಜಿಂಹದಿ ಪ್ರಧ್ವಂಶಿಸಿದೆ 4 ಪಾವನೀಯ ಸುಮತಾವಲಂಬಿಗಳ ತಾವಕರೆಂದೀವುದು ವರವ 5 ಎಲರುಣಿ ಭಯಕಂಜಿಲಿ ನಿಮ್ಮಾಸನ ಕೆಳಗಿರೆ ಕಂಡದನುಳುಹಿದೆ ಕರುಣಿ 6 ಹಯಮುಖ ಪಾದದ್ವಯ ಭಕ್ತಾಗ್ರನೀ ದಯದಿ ವಿಪ್ರನಿಗೆ ನಯನಗಳಿತ್ತೆ 7 ಭಾಗೀರಥಿಯಂತ್ಯೋಗಿ ವರಗುರು ವಾಗೀಶರ ಕರಾಬ್ಜ ಸಂಭವನೆ 8 ನಮಿಪೆ ತ್ವತ್ಪದಕಮಲಗಳಿಗೆಮ ಧ್ವಮತ ಸರೋರುಹ ದ್ಯುಮಣಿಯೆ ನಿರುತ 9 ಗರಮಿಶ್ರಿತ ನರಹರಿ ನೈವೇದ್ಯವ ನರಿತು ಪೇಳೆ ಉಂಡರಗಿಸಿಕೊಂಡೆ 10 ಪೂತಾತ್ಮ ಜಗನ್ನಾಥವಿಠಲನ ಖ್ಯಾತಿಯ ತುತಿಸುವನಾಥ ಜನಾಪ್ತ 11
--------------
ಜಗನ್ನಾಥದಾಸರು
ವಾದಿರಾಜಗುರು ನಿಮ್ಮಡಿಗೆರಗುವೆ ಸಾದರದಿಂದಲಿ ಮಂದನ ಕೈಪಿಡಿಯೋ ಪ ಸಾಧುಜನಾಶ್ರಯ ಮೇದಿನೀಸುರತರು ಪಾದವಪಿಡಿದಿಹೆ ಬೋಧಿಸು ವಿಜ್ಞಾನ ಅ.ಪ. ಕಾದಿಡೆ ಸುಜನಕೆ ಮಧ್ವಾಗಮನಿಧಿ ಸಾದರದುದಿಸಿದಿ ಬುಧಜನಕುಲಮೌಳಿ ಬೂದಿಯ ಮಾಡುತ ದುರ್ಮತಜಾಲವ ಮಾಧವ ಮಧ್ವರ ಸೇವೆಯ ಸಲ್ಲಿಸಿದೇ 1 ಕವಿತಾವನಿತೆಯ ಕುಣಿಸುತ ಶಾಸ್ತ್ರವ ನವವಿಧ ರಸದಿಂ ಪೇಳಿದೆ ಶಿಷ್ಯರಿಗೆ ಭುವಿಯಲಿ ಮೆರೆದೆಯೋ ಮಧ್ವಾನುಜ ತೆರ ಪವನ ಮತಾಬ್ಧಿಯ ಸೋಮನೆ ಶರಣೆಂಬೆ2 ರಿಕ್ತಬ್ರಹ್ಮನ ಭಕ್ತರ ನೊಲ್ಲನು ಯುಕ್ತಿಗಳೆಂಬುವ ಮಲ್ಲಿಗೆ ಪಟ್ಟಲಿ ಶಕ್ತಯತೀಂದ್ರನೆ ಅಡಗಿಸಿ ಸರ್ವೋ- ದ್ರಿಕ್ತನ ಗುಣಗಣ ಸಾಧಿಸಿ ನೀ ಮರೆದೇ3 ತೀರ್ಥಕ್ಷೇತ್ರವ ಪಾವನಗೈಯ್ಯಲು ಸುತ್ತುತನೀಡಿದೆ ತೀರ್ಥಪ್ರಬಂಧವನೂ ಪಾರ್ಥಿವ ಮೊರೆಯಿಡೆ ಅಕ್ಷತೆನೀಡುತ ಶತ್ರುಗಳಳಿಸುತ ಪೊರೆದೆಯೊ ಕರುಣಾಳು4 ಅರವತ್ನಾಲ್ಕು ಕಲಾಜ್ಞನೆ ಗುಣನಿಧಿ ಸುರಗಣಗಚ್ಚಿರಿಯೇ ಸರಿ ತವ ಮಹಿಮ ಹರಿಸಿದೆ ಮೃತ್ಯುವ ರಾಜನ ಅಳಿಯಗೆ ಸಿರಿಪತಿ ವ್ಯಾಸರ ಕಂಡೆಯೊ ಪ್ರತ್ಯಕ್ಷ5 ಗುಂಡಕ್ರಿಯೆ ವೈಕುಂಠ ವರ್ಣನೆ ಕಂಡಕಂಡಪದ ಪುಂಜವ ಪಾಡುತಲೀ ಕೂಡದು ಭಾಷಾ ಸಡಗರ ವೆಂಬುದ ಪಂಡಿತನಿಕರಕೆ ತೋರಿದೆ ಯತಿತಿಲಕಾ6 ಜಂಗಮಗರುವನ ಭಂಗಿಸೆ ತವಕದಿ ಇಂಗಿಸಿ ಸಲಹಿದೆ ವಿಪ್ರರ ಕಷ್ಟಗಳ ಗಂಗಾಪಿತ ತ್ರಿವಿಕ್ರಮ ದೇವನ ಮಂಗಳ ಸುರಿಸಲು ಸ್ವಾದಿಲಿ ಸ್ಥಾಪಿಸಿದೆ7 ಗೋಧರ ಹಯಮುಖ ಸಾಕ್ಷಾತ್ತಿ ಎಂಬುವ ಛಂದದಿ ನೀಡಿದ ಓದನವೆಂತೆನೆ ಸಾಧ್ಯವೆ ಶೇಷನು ಪೊಗಳಲು ನಿಮ್ಮನು ಮಂದಿರನವನಿವ ನೆನ್ನುತ ಕೈ ಪಿಡಿಯೋ8 ಇಂದ್ರನ ದೂತರ ತಡೆಯುತ ದಿನತ್ರಯ ಚಂದದಿ ಕುಳಿತೆಯಾ ಬೃಂದಾವನದೊಳಗೆ ಇಂದಿಗು ನೋಳ್ಪರು ಬುಧಜನ ನಿಮ್ಮನು ವೃಂದಾರಕಗಣ ವಂದಿತ ಚರಣಯುಗ9 ಸುಂದರ ಹಯಮುಖ ರಾಮನು ಕೃಷ್ಣನು ವೇದವ್ಯಾಸರು ಹನುಮಾದಿ ತ್ರಯರು ಮಧ್ಯದಿ ಕುಳಿತಿಹ ನಿನ್ನ ಸುನಾಲ್ಕೆಡೆ ನಿಂದಿಹರೆಂಬುದು ಸಿದ್ಧವು ಮಹಮಹಿಮಾ 10 ಬೃಂದಾವನ ಪಂಚದಿ ಹರಿ ತಾನಿಹ ಚಂದದಿ ಸೇವೆಯ ಕೊಳ್ಳುತ ನಿನ್ನಿಂದ ಸುಂದರ ದಶಗಳ ಪಂಚನುರೂಪವ ವಂದಿಸಿ ನೋಡುತ ನೆನೆಯುವೆ ಏನೆಂಬೆ11 ಗಂಗಾಪಿತ ತ್ರಿವಿಕ್ರಮದೇವನ ಹಿಂಗದೆ ನೆನೆಯುವೆ ಲಕ್ಷಾಭರಣವನು ರಂಗಗೆ ನೀಡಿದೆ ನಮ್ಮಯ ಭವವನು ಇಂಗಿಸೆ ಕಷ್ಟವೇ ಗುರುವರ ದಯಮಾಡೋ12 ಜಯಮುನಿ ಹೃದಯದಿ ವಾಯುವಿನಂತರ ಜಯದಿಂ ನಲಿಯುವ ಶ್ರೀಕೃಷ್ಣವಿಠಲನ ದಯದಿಂ ತೊರಿಸು ಭಾವೀಜಯಾಸುತ ಹಯಮುಖ ಕಿಂಕರ ನಮಿಸುವೆ ಭೂಯಿಷ್ಠಾ13
--------------
ಕೃಷ್ಣವಿಠಲದಾಸರು