ಒಟ್ಟು 1684 ಕಡೆಗಳಲ್ಲಿ , 102 ದಾಸರು , 1080 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಯಮಾಡೋ ದಯಮಾಡೋ ಪ ಭಯಕರ ಸುಮಹ -ದ್ಭಯಹರ ಯತಿವರ ಅ.ಪ ಮೋಕ್ಷದ ಕರುಣ - ಕಟಾಕ್ಷದಿ ಎನ್ನನು ವೀಕ್ಷಿಸಿ ನಿನ್ನ ನಿರೀಕ್ಷಿಸುವಂತೆ 1 ಲಕ್ಷ್ಯಾಧೀಶರ ಲಕ್ಷಿಲ್ಲದೆ ಙÁ್ಞ - ನಾಕ್ಷದಿ ತವಪದ ಲಕ್ಷಿಸುವಂತೆ 2 ಸತ್ಯಾಭಿದ - ನಪ - ಮೃತ್ಯುಹರಿಸಿ ಮುದ ವಿತ್ತು ಪಾಲಿಸಿದ - ಉತ್ತಮ ಎನಗೇ 3 ಬಲ್ಲಿದತರ ಮಹ - ಪ್ರಲ್ಹಾದ ನಿನ್ನೊಳು ನಿಲ್ಲಿಸು ಎನಮನ - ಎಲ್ಲಿ ಚಲಿಸದಂತೆ 4 ದಾತಗುರು ಜಗನ್ನಾಥ ವಿಠಲನ ದೂತಾಗ್ರಣಿ ಸು - ಖೇತರ ಕಳೆದು 5
--------------
ಗುರುಜಗನ್ನಾಥದಾಸರು
ದಯವ ಮಾಡೋರಂಗ ನಯದಿ ನೋಡೊ ದಯವು ನಯವು ನಿನಗಿರದಿದ್ದರೆ ಎನಗೆ ಕೇಳೊ ಪ ಭಯವು ಲಯವು ನಿನಗಿದೆಯೆಂಬುದು ನನ್ನ ಹಾಡೊ ಭಯ ಭೀತಿಗಳನು ಬಿಡಿಸುವುದೊಂದೇ ನಿನ್ನ ಪಾಡೊ ಅ.ಪ ಜನನ ಮರಣ ಮತ್ತಿರಲೆಂಬುದು ನೀನು ಬಲ್ಲೆ ಮನಸು ನೆನಸು ನಿನ್ನೆಡೆಗಿರೆ ವೈಕುಂಠವಲ್ಲೆ ರಂಗ ದಿನವು ಸ್ಮರಣೆಯ ಗೈಸುವ ರೀತಿಯ ನೀನೇ ಬಲ್ಲೆ 1 ಹಿಂದಿನ ಜನ್ಮದ ಪಾಪಗಳೆಲ್ಲವನಳಿಸೋ ರಾಮ ಇಂದಿನ ಜನ್ಮದ ನಾಮಸ್ಮರಣೆಯ ನುಡಿಸೋ ರಾಮ ಮುಂದಿನ ಭವಗಳ ನೀಗಿಸಿ ಕಾಯೋ ಸೀತಾರಾಮ ಇಂದಿರೆಯರಸ ಮುಕುಂದ ನೀ ಮಾಂಗಿರಿ ರಂಗಧಾಮ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾತ ಅಂಬುಜಾಸನ ತಾತ ಕುಂಭಿಣಿಯೊಳು ಪುಟ್ಟಿ ಜನನಿಯ ಮೊಲೆ ಪಾಲು ಉಂಬೋದು ಬಿಡಿಸೊ ಜನನವ ಕೆಡಿಸೊ ಪ ರಸಿಕೆ ಮುಹಕದಲಿ ನಿಶಿದಿನದಲಿ ಹೊರಳಿ ಅಸುರುಸುರೆನುತಲಿ ಹಸಗೇಡಿಯಾದೆನೊ ಪರಿ ನೊಂದು 1 ಹಲವು ಲಂಪಟದೊಳು ಹಲುಬಿ ಹಕ್ಕಲನಾದೆ ಬಲೆಯೊಳಗಿದ್ದ ಎರಳೆಯಂತೆ ಮಿಡುಕುತ ಮಲಮೂತ್ರದೊಳು ಬಳಲಿದೆ ಕೇಳೊ 2 ಎಳ್ಳನಿತು ಸತ್ಕರ್ಮವುಳ್ಳದ್ದು ಚರಿಸಿದೆ ಬಲಿಷ್ಠ ನಾನೆಂದು ಬಲು ದುರ್ಮತಿಯಿಂದ ಎಲ್ಲರ ಜರಿದೆ ಧರ್ಮವ ಮರೆದೆ 3 ಚಾರುವಾಕರಗೂಡಿ ಮೂರೆ ವಿಕಾರದಲ್ಲಿ ನೀರೇರ ಒಡಗೂಡಿ ನೀತಿ ನಿರ್ಣಯ ತೊರೆದು ಬಟ್ಟೆ 4 ಎಲ್ಲಿರಲು ನಿನ್ನವನೋ ಅಲ್ಲವೆಂದೆನಿಸದೆ ಬಲ್ಲಿದರೊಡಿಯ ವಿಜಯವಿಠ್ಠಲ ನಿ ನ್ನಲ್ಲಿ ಸೇರಿಸಿ ಎನ್ನ ಪೊರೆಯೋ ಪ್ರಸನ್ನಾ 5
--------------
ವಿಜಯದಾಸ
ದಾರಿಯ ತೋರೊ ಮುರಾರಿ ಮುಂದಣ ದಾರಿಯ ತೋರೊ ಮುರಾರಿಪ. ಕಂಸಾರಿ ಭವಾಂಜನ ಪಾರಾವಾರ ಉತ್ತಾರಣಗೈಯುವಅ.ಪ. ಮಾಯಾಶ್ರಿತನಾಗಿಹೆನಲ್ಲೊ ಮೋಕ್ಷೋ- ಪಾಯಭೇದಂಗಳ ಮರತೆನಲ್ಲೊ ಕಾಯಜಪಿತ ಕಮಲಾಯತಲೋಚನ ಕಾಯದೊಳಗೆ ಸನ್ನಾಯದಿ ನೋಡುವ 1 ದುಃಖವಿಲ್ಲದೆ ಸುಖವಿಲ್ಲ ಇದ ಒಕ್ಕಣಿಪರೆ ತುದಿಬುಡವಿಲ್ಲ ಸೊಕ್ಕಿ ನಡೆದು ಭವಯಿಕ್ಕುಳ ಬಾಯೊಳು ಸಿಕ್ಕಿದೆನಲ್ಲವೊ ರಕ್ಕಸವೈರಿಯೆ2 ಬಲ್ಲೆನೆಂಬರೆ ಬಲವಿಲ್ಲ ಭವ ಬಲ್ಲೆಯೊಳಗೆ ಸಿಲುಕಿದೆನಲ್ಲ ಕಲ್ಲೊಳಗ್ನಿ ಕಲಕಿರುವಂದದಿ ಮನ ದಲ್ಲಿ ನಿನ್ನ ಪದಪಲ್ಲವ ಭಜಿಸುವ3 ಸಾರರಹಿತ ಸಂಸಾರದಿ ಮಾಯಾ ನಾರಿ ಗೈದ ಮಮಕಾರದಿ ಘೋರ ದುರಿತವಪಹಾರಗೈವ ಲಕ್ಷ್ಮೀ ನಾರಾಯಣನು ಸೇರಿ ಸೇವಿಸುವಂಥ 4
--------------
ತುಪಾಕಿ ವೆಂಕಟರಮಣಾಚಾರ್ಯ
ದಾರಿಯ ವಿಡಿರಣ್ಣ | ಸ್ವಹಿತದ ದಾರಿಯ ಹಿಡಿರಣ್ಣಾ ಪ ದಾರಿಯ ವಿಡಿನಿಜ ಸಾರಿಹ ಶೃತಿಗಳ | ಚಾರು ಭಕುತಿಯಾ ಅ.ಪ ಬಲ್ಲವರಿಗೆ ಬೆಸಗೊಳ್ಳುತ ಮನಸಿನ | ಖುಳ್ಳತನದ ಗುಣವೆಲ್ಲವು ಹೋಗಿ | ಬಲ್ಲವರನು ಕಂಡು ಮೆಲ್ಲಡಿಗಳ ವಿಡಿ | ದುಳ್ಳ ಸಿದ್ಧಾಂತದ ಸೊಲ್ಲವ ಕೇಳಿ | ಉಲ್ಹಾಸದಿಂದಲಿ ಮೆಲ್ಲನ ಭ್ಯಾಸವ | ಮೆಲ್ಲನೆ ಮಾಡುತ ಸುಲ್ಲಭ ತೆರದಾ 1 ಕಂಡ ಪಥಕ ಹರಿದಂಡಲೆಯದೆನೆರೆ | ತಂಡಿಸುತಿಹ ಪಾಷಾಂಡ ಹೋಗಿ | ಚಂಡ ಸುಜ್ಞಾನದ ಲುಂಡನು ಭವದೃಢ | ಗಂಡು ಸದ್ಭೋಧದಿ ಪಂಡಿತನಾಗಿ | ಹಿಂಡ ಭಾಗವತರ ಮಂಡಲದೊಳು ಕೂಡಿ | ಪುಂಡರೀಕಾಕ್ಷನ ಕೊಂಡಾಡುತ ನಿಜ 2 ಹಿಂದಿನ ಸುಕೃತಗಳಿಂದ ನೃದೇಹದಿ | ಬಂದೆನು ನಾನಿನ್ನು ಮುಂದಣ ಗತಿಯಾ | ಹೊಂದುವೆ ನಾವದುಯಂದು ವಿಚಾರವಾ | ತಂದು ಸದ್ಭಾವಲಿಂದೇ ನಿಷ್ಠೆಯಲಿ ತಂದೆ ಮಹಿಪತಿ ಪ್ರಭುಪದ ಭವ ಬಂಧನ ಹರಿವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾವನು ಗುರುಸಹವಾಸಿ ಅವನಿದ್ದದ್ದೇ ಸ್ಥಳ ಕಾಶಿ ಧ್ರುವ ಕೂಡಿದವರ ತ್ರಿತಾಪಭಂಗಾ ರೂಢಿಗೆ ಮೆರೆವಳು ಙÁ್ಞನಗಂಗಾ ಮೂಡಿಹ ಆತ್ಮಜ್ಯೋತಿ ಲಿಂಗಾ ಕಂಡಿಹ ಗುಣರಾಸೀ 1 ವಿವರಿಸಿ ತಾರಕಮಂತ್ರದ ನೆಲಿಯಾ ಕಿವಿಯೊಳು ಹೇಳಲು ಗುರುರಾಯಾ ಭವ ಭಯಾ ಸ್ವಾನಂದವ ಬೆರೆಸೀ2 ಜನದಲಿ ನಾನಾ ಸಾಧನ ಜರಿದು ಮನದಲಿ ಒಂದೇ ನಿಷ್ಠಿಯ ಹಿಡಿದು ಅನುಮಾನದ ಸಿದ್ಧಾಂತಗಳದು ಸದ್ಭಾವನೆ ಒಲಿಸೀ 3 ಪ್ರೇಮಿಯ ನಿಜಸುಖ ಪ್ರೇಮಿಕ ಬಲ್ಲಾ ಈ ಮನುಜರಿಗಿದು ಭೇದಿಸುದಲ್ಲಾ ಶ್ರೀ ಮಹಿಪತಿ ಬೋಧಿಸಿದನು ಸೊಲ್ಲಾಪೂರಿಸಿ ಮನದಾಸಿ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಶರಥೇ ದಯಮಾಡೊ ನಿನ್ನ ದಾಸರ ದಾಸನ ನೋಡೋ ಪ ನೀರಜಾಕ್ಷ ನಿಜಮಾಯಾ ಮಮತೆ ಸಂ- ಸಾರಶರಧಿಯೊಳು ಬಿದ್ದು ಪಾರಗಾಣದೆ ಪರಿದು ಪೋಗುವೆನು ತಾರಕ ನೀನೆನಗಿದ್ದು ಹರಿ ಹರಿ 1 ತುಂಬಿದ ಭಂಡಿಗೆ ಮೊರ ಭಾರವೆ ಎನ- ಗಿಂಬಿಲ್ಲವೆ ನಿನ್ನಲಿ ನಂಬಿದ ಭಕ್ತರ ಸಲಹುವ ವಿಶ್ವಕು- ಟುಂಬಿ ಎನಿಸಿಕೊಳುವಲ್ಲಿ ಹರಿ 2 ಬಲ್ಲಿದರೊಳು ಬಡವರಿಗಾಶ್ರಯ ನೀ ಬಲ್ಲೆ ಮತ್ತೆ ಎನಗೀಗ ಎಲ್ಲಿದ್ದರು ಶ್ರೀದವಿಠಲ ಬಿಡ ದಲ್ಲೂ ನಿನ್ನ ದಯ ಬೇಗ 3
--------------
ಶ್ರೀದವಿಠಲರು
ದಾಸರ ಸಖ ಮಾಡಂದೆ ಎನ್ನ ಧ್ಯಾಸದಿರಗಲದೆ ಶ್ರೀಹರಿ ತಂದೆ ಪ ಕನಕರಾಯನು ನಿಜದಾಸ ನಿನ್ನ ಘನತರ ಪ್ರಸನ್ನತೆ ಪಡೆದನುಮೇಷ ಅನುದಿನ ನಿಮ್ಮಯ ಘನಮಹಿಮೆಯನು ತೋರಿ ಮುನಿವ್ಯಾಸರಾಯರ ಮನವ ತಣಿಸಿದಂಥ 1 ಘನ ಸತ್ಯ ಕಬೀರದಾಸ ತನ್ನ ತನುಮನಧನವನ್ನು ನಿನಗರ್ಪಿಸೀತ ವನಿತೆಯನೊತ್ತಿಟ್ಟು ತನುಜಾತನನು ಕೊಂದು ಉಣಿಸಿ ಸಂತರಿಂ ಸುತನ ಪ್ರಾಣವ ಪಡೆದಂಥ 2 ವಾಸನಳಿದು ಪುರಂದಾಸ ತನ್ನ ನಾಶಬುದ್ಧಿಗೆ ನಾಚಿ ನೀಗಿ ಮನದಾಸೆ ಸೋಸಿಲಿಂ ತವಪಾದಧ್ಯಾಸ ಬಲಿಸಿ ಜಗದೀಶ ಹೇಸದೆ ನಿಮ್ಮನು ಗಿಂಡಿಲ್ಹೊಡೆದಂಥ 3 ವರನಾಮದೇವ ನಿಜದಾಸ ತನ್ನ ಪರಮಸಂತರಿಗೆಲ್ಲ ಪಾಲಿಸಿ ಭಾಷ ಸಮ ಗೌಪ್ಯದಿಂ ಪಂಪಾಪುರಿಗೈದಿರಲು ನಿನ್ನ ತಿರುಗಿ ಕರೆದೊಯ್ದು ಇರವ ಪೂರೈಸಿದಂಥ 4 ಬಲ್ಲಿದ ತುಕಾರಾಮದಾಸ ಬಲು ಕ್ಷುಲ್ಲಕರುಪಟಳ ಸಹಿಸಿ ಮನದಕ್ಲೇಶ ಎಲ್ಲವ ನೀಗಿ ಹರಿ ಪುಲ್ಲನಾಭನ ಪಾದ ದಲ್ಲೆ ಮನ ನಿಲ್ಲಿಸಿ ಉಲ್ಲಾಸದಿರುವಂಥ 5 ಬಗೆಯ ತಿಳಿದು ಜಗನ್ನಾಥ ನಿಮ್ಮ ಸುಗುಣದರಿದು ವ್ಯಾಧಿ ಕಳೆದುಕೊಂಡು ಪ್ರಮಥ ನಿಗಮಗೋಚರ ನಿನ್ನ ಬಗೆಬಗೆ ಪೊಗಳುತ ಜಗದಮಾಯವ ಗೆಲಿದು ಸೊಗಸಿನಿಂ ನಲಿವಂಥ 6 ಉದಧಿಜಿಗಿದ ಹನುಮಂತ ಮಹ ಪದುಮಾಕ್ಷಿಯಳ ಕಂಡು ನಮಿಸಿದ ಬಲವಂತ ಸದಮಲಾಂಗಿಗೆ ತನ್ನ ಹೃದಯಸೀಳಿದ್ಹಟದಿಂ ಪಾದ ತೋರಿಸಿದಂಥ 7
--------------
ರಾಮದಾಸರು
ದಾಸರಾಯರಾ ಚರಣಕಮಲ ಭಜಿಸೋ |ದುರ್ವಿಷಯವ ತ್ಯಜಿಸೋ ||ಶ್ರೀಶ ಭಜಕ ಗುರು ಪ್ರಾಣೇಶದಾಸಾರ್ಯ |ಹರಿದಾಸ ವರ್ಯಾ ಪ ಸದ್ವೈಷ್ಣವ ಅಧ್ಯಕ್ಷರೆಂದೆನಿಪರೊ |ಕರ್ಮಠರೆನಿಪರೋ |ಮಧ್ವಮತ ಪ್ರವರ್ತಕರೆನಿಪರೋ |ಜ್ಞಾನಿಗಳೆನಿಪರೊ ||ಪದ್ಧತಿ ಪೂರ್ವಕ ಕವನವ ಪೇಳುವರೊ |ಹರಿ ಪರನೆಂಬುವರೊ |ಶುದ್ಧಾತ್ಮರಿಗತಿ ಪ್ರಿಯರೆಂದೆನಿಸುವರೋ |ಸತ್ಕಥಾಲಾಪರೋ 1 ಕಾಮಕ್ರೋಧ ಮದಮತ್ಸರವನು ಗೆಲಿದೂ |ತಾಮಸರನು ಹಳಿದೂ |ನೇಮದಿಂದ ಯಮನಿಯಮಗಳನು ವಹಿಸೀ |ಇಂದ್ರಿಯಗಳ ಜೈಸೀ |ತಾಮುದದಿಂದಲಿ ಹರಿಗುಣ ಕೀರ್ತನೆಯಾ |ಮಾಡುತ ನರ್ತನೆಯಾ ||ಪ್ರೇಮದಿಂದ ಮಾಡಿ ದೇಶದಲ್ಲಿ ಮೆರೆದಾ |ನಾಮ ಸುಧೆಯನ್ನೆರದಾ 2 ಏಸು ಪೇಳಲಿ ಇವರ ಚರಿತೆಯನ್ನು |ಆ ಪಾರವು ಇನ್ನೂ |ಸೋಸಿನೋಡಲು ಎನಗೆ ವಶವಲ್ಲಾ |ಇದು ಪುಸಿಯೂ ಅಲ್ಲಾ ||ಮೀಸಲ ಮನದಲಿ ತುತಿಸಲು ಸಂತಾಪಾ |ಪೋಪದು ನಿರ್ಲೇಪಾ |ಶ್ರೀಶ ಪ್ರಾಣೇಶ ವಿಠಲ ತಾ ಬಲ್ಲಾ |ವಲಿದಿಹನಲ್ಲಾ 3
--------------
ಶ್ರೀಶಪ್ರಾಣೇಶವಿಠಲರು
ದಾಸರಿಗುಂಟೆ ಭಯಶೋಕ ಪ ವಾಸುದೇವನ ಸದಾ ಸ್ಮರಿಸುವ ಹರಿ ದಾಸರಿಗುಂಟೆ ಭಯಶೋಕ ಅ.ಪ. ಕಾಮಧೇನು ವರ ಕಲ್ಪವೃಕ್ಷ ಚಿಂ ತಾಮಣಿ ಕೈ ಸೇರಿದಕಿಂತ ನಾಮತ್ರಯದಿಂದಪ್ಪುದು ಸುಖವು ಸು ಧಾಮನೆ ಸಾಕ್ಷಿದಕೆಂಬ ಹರಿ 1 ರಾಮಚಂದ್ರ ಶಬರಿ ತಿಂದೆಂಜಲ ಜಾಮಿಳ ಮಾಡ್ದ ಕುಕರ್ಮಗಳ ಧೂಮಕೇತು ತಾ ಭುಂಜಿಸುವಂದದಿ ಮೇಧ್ಯಾಮೇಧ್ಯ ಕೈಗೊಂಬನೆಂಬ ಹರಿ 2 ನೇಮ ಮಂತ್ರ ಜಪ ದೇವತಾರ್ಚನ ಸ ಕಾಮುಕವಾಗಲು ತ್ಯಜಿಸುತಲಿ ಧೀಮಂತರಾಗತಿಪ್ರಿಯವಾಗಲು ಬಹು ತಾಮಸ ಕರ್ಮವ ಮಾಳ್ಪುವೆಂಬ ಹರಿ 3 ಏನು ಮಾಡಿದಪರಾಧವ ಕ್ಷಮಿಸುವ ಏನು ಕೊಟ್ಟುದನು ಕೈಗೊಂಬ ಏನು ಬೇಡಿದಿಷ್ಟಾರ್ಥವ ಕೊಡುವ ದ ಯಾನಿಧಿ ಅನುಪಮನೆಂಬ ಹರಿ 4 ಪ್ರಹ್ಲಾದವರದ ಪ್ರಕಟನಾಗದಲೆ ಎಲ್ಲರೊಳಿಪ್ಪನು ಪ್ರತಿದಿನದಿ ಬಲ್ಲಿದವರಿಗೆ ಬಲ್ಲದ ಜಗನ್ನಾಥ ವಿಠ್ಠಲ ವಿಶ್ವವ್ಯಾಪಕನೆಂಬ ಹರಿ 5
--------------
ಜಗನ್ನಾಥದಾಸರು
ದುರಿತ ತ್ಯಜಿಸಿರೋ ಪರಮ ಸಾಧ ಐಕೂರು ನರಸಿಂಹಾರ್ಯರ ಪ ಕೃಷ್ಣತೀರದಿ ಮಿಂದು | ಕೃಷ್ಣÀವರನೊಳು ಜಿಷ್ಣು ಸೂತನ ನೋಳ್ಪ | ವಿಷ್ಣು ದಾಸರ 1 ತರುಳತನದಲಿ | ಸದ್ಗುರುವರೇಣ್ಯರ ಚರಣ ಸೇವಿಸಿ ಶಾಸ್ತ್ರವರಿತ ಧೀರರ 2 ಸತತ ನಂಬಿದ ಶಿಷ್ಯತತಿಗೆ ಹರಿಗುಣ ಹಿತದಿ ಸುರಿದ | ಅಪ್ರತಿಮ ಮಹಿಮರ 3 ಪವನ ಶಾಸ್ತ್ರವೇದ | ಕವನವೆನ್ನುತ ವಿವರಿಸುತ್ತಲಿ ತನ್ನವರ ಪೊರೆದರ 4 ಏನು ಬಂದರು ಮನದಿ ಶ್ರೀನಿವಾಸನ ಧ್ಯಾನ ಬಿಡದಿಹ | ಮಹಾನುಭಾವರ 5 ಭಕುತಿ ಜ್ಞಾನವ ತಮ್ಮ ಭಕುತ ವರ್ಗಕೆ ಪ್ರಕಟಗೊಳಿಸಿದ ಇಂಥ | ಮುಕುತಿ ಯೋಗ್ಯರ 6 ಭುವನ ಮೇಲಿಹ ಇವರು ದಿವಿ ಭವಾಂಶರು ರವಿ ನಿಭಾಂಗರು | ಜವನ ಭವಣೆ | ತರಿದರು 7 ಇವರು ಪೇಳುವ ವಚನ ಶ್ರವವಣಗೈಯಲು ಶೌರಿ ಭುವನ ಪಡೆವರು 8 ಕಂತುಪಿತ ಕಥಾ ಸುಧಾ | ಗ್ರಂಥ ಮರ್ಮವ ಆ ದ್ಯಂತ ಬಲ್ಲರು ಪರಮ ಶಾಂತಿ ಶೀಲರು 9 ಮೌನಧ್ಯಾನದ ಜ್ಞಾನ ಖೂನ ತೋರದೆ ಹೀನರಂದದಿ ಹೊರಗೆ ಕಾಣಿಸುವರು 10 ಬಾಲಕೃಷ್ಣನ ದಿವ್ಯಲೀಲೆ ಚರಿತೆಯ ಕಾಲ ಕಳೆಯರು 11 ನಿಂದ್ಯ ವಂದನೆ ಬಂದ ಕುಂದು ಶ್ಲಾಘನೆ ಇಂದಿರೇಶನೆ ತಾನೆ ತಂದ ನೆಂಬರು 12 ಪಾದ ಪೊಂದಿದ ಜನಕೆ | ಮೋದಗರೆವರು ವ್ಯಾಧಿ ಕಳೆದರು ವೇದ ಬೋಧಿಸಿದರು 13 ವಿವಿಧ ವೈಭವ ಮೇಣ್ | ಕುವರ ಭಾಗ್ಯವ ವಿವಿಧ ಭೋಗವ ಶಿಷ್ಯ ನಿವಹಕಿತ್ತರು 14 ನಿತ್ಯ ಪೇಳುತ ಭೃತ್ಯನಿಕರಕೆ ಸಧೃಡ ಚಿತ್ತವಿತ್ತರು 15 ಕಾಮವಾಸನೆ ಸುಟ್ಟು | ನೇಮ ಪೂರ್ವಕ ರಾಮನೊಲಿಮೆಯ | ವಿಶ್ವಪ್ರೇಮವೆಂಬರು 16 ಈ ಸುಮಹಿಮರ | ಸದುಪದೇಶ ಕೊಳ್ಳಲು ಕ್ಲೇಶಬಾರದು | ಯಮನು ಘಾಸೆÉಗೊಳಿಸನು 17 ನಿರಯ ಪಾತ್ರರು 18 ಇನಿತುಪಾಸನೆಗೈವ ಘುನ ಮಹಾತ್ಮರ ಗುಣಗಣಂಗಳ | ತುತಿಸಲೆನಗೆ ಸಾಧ್ಯವೆ 19 ಅರುಣನುದಿಯದಿ | ಇವರ ಚರಣ ಕಮಲವ ಸ್ಮರಣ ಮಾಡಲು | ಹರಿಯ ಕರುಣವಾಹದು 20 ಸಾಮಜವರ ವರದ ಶಾಮಸುಂದರನ ಪ್ರೇಮಪಾತ್ರ ನಿಷ್ಕಾಮ ಪೂರ್ಣರು 21
--------------
ಶಾಮಸುಂದರ ವಿಠಲ
ದುರಿತ ಜೀಮೂತವಾತ ಪೊರಿಯಯ್ಯ ನಿನಗೆ ನಿರುತ ಧರಣಿಯೊಳಗೆ ವಿಸ್ತರಿಸಿ ಬಲ್ಲವರಾರು ಗುರುವೆ ನಿಜ ನಮಿತರ ಸುರತರುವೆ ಪ ನಂಬಿದೆ ನಿನ್ನ ಪಾದವಂಬುಜವನು ಗಾಲ ಬೆಂಬಿಡದಲೆ ನಾನೆಂಬೋದು ಬಿಡಿಸಿಂದು ಬೆಂಬಲವಾಗು ಆರೆಂಬ ಖಳರ ನೀಗು ಇಂಬಾಗಿ ನೋಡು ದಿವ್ಯಾಂಬಕದಿಂದ ವೇಗ ಡಿಂಬಾರೋಪಿರೆ ಡಂಬಕತನವೆಂಬುದು ಕೊಡದಲೆ ಸಂಭ್ರಮದಲಿ ಹರಿದೊಂಬಲ ಬಯಸುವ ಹಂಬಲಿಗರ ಕೂಡ ಇಂತು ತೋರು ಬಲು ಗಂಭೀರ ಕರುಣಿ 1 ಎಣೆಗಾಣೆÉ ನಿಮಗೆ ಕುಂಭಿಣಿಯೊಳಗೆಲ್ಲ ಯತಿ ಮಣಿಭೂಷಣ ಚರಣಾರ್ಚನೆ ಮಾಳ್ಪ ಮಹಿಮ ಮನಸಿಜ ಶರಭೀಮ ಮನದಣೆ ಗುಣಿಸಿ ಈ ದಿನ ಮೊದಲು ಪಿಡಿದು ಜನುಮ ಜನುಮದ ಸಾ ಧನ ಫಲಿಸುತು ಯೋಚನೆಗೊಳಲ್ಯಾಕೆ ಅನುಮಾನ ಸಲ್ಲದು ಘನತರ ಕೀರ್ತಿ ನೂರಾರಕೆ ಕಾಯ 2 ವರಹಜೆ ಸರಿತೆಯಲ್ಲಿ ಸ್ಥಿರನಾಗಿ ನಿಂದು ಕ್ಷಣ ಸುರರಿಂದಾರಾಧನೆ ಸರಸರನೆ ಹಗಲು ಇರಳು ಕೈಗೊಳುತ ವಕ್ಕಾರಗಳು ಹರಸಿ ಸುಂ ದರ ವರಗಳನಿತ್ತು ಚಿರಕಾಲ ಬಿಡದಲೆ ಪರವಾದಿಯ ಬಲ ಉರುದಲ್ಲಣ ಪೂ ತುರೆ ಸುಧೇಂದ್ರರ ಕರಾರವಿಂದಜ ಅರಸರಸರ ಪ್ರಿಯ ವಿಜಯವಿಠ್ಠಲನ ಬಿರಿಯ ಹೊಯಿಸುವ ಧೀರಾ ಗುರು ರಾಘವೇಂದ್ರ3
--------------
ವಿಜಯದಾಸ
ದುರಿತ ದುರ್ಗತಿಗೆ ಆವಾನಂಜನೊ ಹರಿಯ ಕರುಣವೆಂಬ ಕವಚ ತೊಟ್ಟಿರಲಿಕ್ಕೆ ಪ ಮಲಗಿ ಹೊರಳನೇಕೆ ಕುಳಿತುಕೊಂಡಿರನೇಕೆ ಬಲುದೂರ ತಿರುಗಾಡಿ ಬಪ್ಪನೇಕೆ ಮಲಿನ ವಸನವ ಪೊದ್ದು ಮೋರೆ ತೊಳಿಯನೇಕೆ ಪಾದ ನೆಳಲು ಸೇರಿದವ 1 ಸ್ನಾನ ಸಂಧ್ಯಾ ಮೌನ ಮಾಡದೆ ಇರನೇಕೆ ಕಾನÀನದಲಿ ಬಂದು ಸೇರನೇಕೆ ದಾನ ಧರ್ಮಂಗಳ ಮಾಡದೆ ಇರನೇಕೆ ದಾನವಾರಿಯ ಕಾಣುತಲಿಪ್ಪವ 2 ಮಡಿ ಉಡದೆ ಉಣನೇಕೆ ಅಡಿಗೆ ನೇಮನವೇಕೆ ಅಡಿಗಡಿಗೆ ಜಪಮಣಿ ಎಣಿಸನೇಕೆ ನಡೆಯುತ ಪಥದೊಳು ತಿನ್ನಲ್ಲಾ ಮೆಲ್ಲನೇಕೆ ಪೊಡವೀಶ ಶ್ರೀ ಹರಿಯ ಅಡಿಗಳ ಬಲ್ಲವಾ 3 ಓದದೆ ಇರನೇಕೆ ವೇದ ಪಠಿಸನೇಕೆ ವೇದಮಂತ್ರ ರಚಿಸದರನೇತಕೆ ಓದನವೀಯದೆ ಬಾಳುತಲಿ ಇರನೇಕೆ ಮಾಧವನ ಚರಣಾರಾಧನೆ ಮಾಳ್ಪ 4 ತೀರ್ಥ ತಿರುಗನೇಕೆ ಯಾತ್ರಿ ಚರಿಸನೇಕೆ ವ್ಯರ್ಥ ದಿವಸವೆಂದು ಅನಿಸಲೇಕೆ ಆರ್ಥಿಯನ್ನು ನೋಡಿ ಆಟ ಆಡುವನೇಕೆ ತೀರ್ಥಪದನ ದಿವ್ಯತೀರ್ಥ ಬಯಸುವವ 5 ವ್ರತವು ಮಾಡನೇಕೆ ಕಥಿಯ ಕೇಳನೇಕೆ ಸತಿಯ ಸಂಗಡ ನಿತ್ಯರಮಿಸನೇಕೆ ಚತುರ ಸಾರೆ ಉಂಡು ಹಾಗೇ ಇರನೇಕೆ ಪತಿತಪಾವನನಂಘ್ರಿ ಮತಿಯಲ್ಲಿ ನೋಳ್ಪನಾ6 ದುರಿತವೆಂಬೋದೆಂತು ಬಿಳಿದೊ ಹಸರೊ ಕೆಂಪೊ ಕರದೊ ಮತ್ತಾವದೋ ಅದರ ವರ್ಣಾ ದುರಿತಾರಿ ವಿಜಯವಿಠ್ಠಲನ್ನದಾಸಗೆ ತನ್ನ- ತೊರೆದು ಕಾಣೊ ಹಣೆ ನೋಡದೆ ಮಹಾ 7
--------------
ವಿಜಯದಾಸ
ದುರ್ಲಭ ಇದು ಕಲಿಯುಗದೊಳಗೆ ಕಾಣಾ ಎಲ್ಲರಿಗೆ ದೊರಕಬಲ್ಲದೆ ಶ್ರೀ ವಲ್ಲಭನ ಪಾದಸೇವೆ ಮಾಡೋ ನೀ ನಲಿದಾಡೋ ಎಲೆ ಮನುಜಾ ಪ ಗಂಧರ್ವರು ಸಿದ್ಧರು ವಿದ್ಯಾ ದರಸಾಧ್ಯ ಗುಹ್ಯಕ ಸುರಮುನಿಗಣ ಗರುಡಾದ್ಯರೆ ನೆರೆದು ಪುರಹರ ಮೂವನ ಬಲ್ಲಿದರೀ ಇಲ್ಲವೆನುತಲಿ ಬರಿದು ರೇಖೆಯ ಬರಿಸಿದರೊ ಡಂಗುರ ಹೊಯಿಸಿದರೊ ಎಲೆ ಮನುಜಾ 1 ಹರಿಯೆಂತೆಂದವ ಧರ್ಮಕೆ ಸಂದವ ಕರದಲಿ ದಂಡಿಗೆ ಪಿಡಿದವ ಪುಣ್ಯವ ಪಡೆದವ ಚರಣದ್ವಯದಲಿ ಗೆಜ್ಜೆಯ ಕಟ್ಟಿದವ ಅಟ್ಟಿದವ ಯಮ ಭಟರ ಹರಿಹರಿದಾಡುತ ಕುಣಿದವ ಉತ್ತಮ ಗುಣದವ ಹಿರಿದಾಗಿ ಗಾಯನ ಪಾಡಿದವ ಸುರರನ ಗೂಡಿದವ ಮಾಯವ ಬಿಡೋ ಎಲೆ ಮನುಜಾ2 ಭವಾಬ್ಧಿ ದಾಟಿದವ ಇಂಬಾಗಿ ಕಡ್ಡಿ ವಾದ್ಯವ ಹಾಕಿದವ ದುರುತವ ನೂಕಿದವ ಸಂಭ್ರಮ ತಾಳ ಕಟದವ ಊಟದವ ಸುರರೊಡನೆ ತುಂಬಿದ ದಾಸರ ಸಭೆಯೊಳಗಿದ್ದವ ನರಕವನೊದ್ದವ ಕಂಬನಿ ಪುಳಕೋತ್ಸವ ಸುರಿದವ ತತ್ವವನರಿದವ ನೀ ಸುಖದಲಿ ಬಾಳೊ ಎಲೆ ಮನುಜಾ 3 ಬೇಸರದಲೆ ಹೇಳಿ ಏಕಾದಶಿಯ ವಾಸರದಲಿ ಜಾಗರವನು ಗೈದ ಮಾನೀಸನು ಅಘನಾಶನು ಚರಣಕೆ ಏರಿಸಿದನಿವ ಬೆರೆದು ಎಲೆ ಮನುಜಾ4 ಗೋಪಾಳವನು ಬೇಡಿ ನಿತ್ಯಸುಖಿಯಾಗಿ ತಾಪತ್ರೆಯ ಮೊದಲಾದ ದುಷ್ಕರ್ಮ ಪಾಪರಹಿತನಾಗಿ ಸಿರಿ ಪದ್ಮವ ಪೊಂದಿದ ಭಜಕರು ಒಂದೇ ಗೇಣೊ ಎಲೆ ಮನುಜಾ 5
--------------
ವಿಜಯದಾಸ
ದೃಷ್ಟಿಯೊಳಗೆ ದೃಷ್ಟಿ ನಿಂತಿತು | ನೋಡಲಿನ್ನು ದೃಶ್ಯ ನಷ್ಟವಾಯಿತು | ಕಷ್ಟವೆಲ್ಲ ಕಡೆಗೆ ಸಾರಿ | ಅದೃಷ್ಟವನ್ನು ಮೀರಿ ನಿಂದು ನಿಷ್ಠೆಯಲ್ಲಿ ತುಷ್ಟಿಯಾಯ್ತು ನೀ ನೋಡು ಸಖಿಯೆ ಪ ಐದು ಮಂದಿ ಅಗಲಿ ಹೋದರೆ | ಐದಕೈದು ಕೂಡಿ ಬಂದು ಕೂಡದಾದರೆ | ಐದರೊಳಗೆ ನೋಡಲಿನ್ನು || ಐದು ಐದು ತಾನೆ ಅಲ್ಲ | ಐದನೇದರಲ್ಲಿ ನಿಂತೆನೇ | ನೀ ಕೇಳಿದೇನೆ ? 1 ಕರ್ಮವೆಲ್ಲ ಕಾಣದಾಯ್ತು | ಧರ್ಮವೊಂದು ಸರ್ವಕಾಲ ತೂಗಿ ನಿಂತಿತು |ಶರ್ವನಲ್ಲದಿನ್ನು ಮತ್ತೆ | ಉರ್ವಿಯಲಿ ಪೇಳದಾಗಿ ಪರ್ವತಾಗ್ರ ಭೂಮಿ ಒಂದು ನಿರ್ವಿಕಾರ ತೋರಿತಲ್ಲಾ 2 ಹಿಂದೆ ಎಂದು ಕಂಡಿದಿಲ್ಲ | ಈ ಸೋಜಿಗವನ | ಮುಂದೆ ದಾರಿಗುಸುರಲೀಗತೀ | ತಂದೆ ಭವತಾರಕನ | ಹೊಂದಿದವರ ಕೇಳಿದೇನೆ | ಎಂದು ಎಂದು ಹೀಗೆಂಬರೆ | ನೀ ಬಲ್ಲಿಯೇನೇ 3
--------------
ಭಾವತರಕರು