ಒಟ್ಟು 1899 ಕಡೆಗಳಲ್ಲಿ , 114 ದಾಸರು , 1537 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋಪಾಲಕೃಷ್ಣರಾಯ ತಾಪತ್ರಯಗಳೆಲ್ಲ ನೀ ಪರಿಹರಿಸು ಜೀಯ್ಯಾ ಪ ವಿದ್ಯಾಶ್ರೀ ಸಿಂಧುತೀರ್ಥ ಶುದ್ಧ ಪದ್ಧತಿಯಿಂದ ಶುದ್ಧ ಪೂರ್ವಕ ನಿನ್ನ ಭಜಿಪೆನು ಅನುದಿನ ಮುದ್ದುಮೋಹನ ನೀನು ತಿದ್ದಿ ಸರ್ವರ ಹೃದಯ ಬದ್ಧನಾಗಿರುತಿ ಪ್ರಸಿದ್ಧ ಮೂರುತಿ ವೇಣು 1 ಸುರಪನ ಗರ್ವವ ಹರಣವ ಮಾಡಿ ನೀ ವರವಿತ್ತೆ ಕಾಳಿಂಗ ಉರಗನಿಗೆ ಸುರರ ವೃಂದಗಳೆಲ್ಲ ಪೊರೆವುತ ಸರ್ವದಾ ವರ ಕಲ್ಪತರುವೆಂದು ಮೆರೆಯುವಿ ಧರೆಯೊಳು 2 ಗಿರಿಯನು ಪೊತ್ತು ನೀ ಪೊರೆದಿಹ ತುರುಗಳ ಮರೆಯೋದು ಯನ್ನನು ಸರಿಯೆನೊ ಹರಿಯೆ ಶರಣ ರಕ್ಷಕ ಬೇಗ ಕರುಣಾಳು ಕಾಯಯ್ಯ ಶ್ರೀವತ್ಸಾಂಕಿತನಾದ ವರಜಾರಚೋರ ವೇಣು 3
--------------
ಸಿರಿವತ್ಸಾಂಕಿತರು
ಗೋಪಿ ಪೋತನ ಕಾಣದೆಮಾತು ಮರೆತೆಂಧೀತ ಭೀತಾ ಹೇ ನಾಥಾಭಾಷೆ ಕೇಳುತ ನಿಮ್ಮೋಲ್ ಆಶೆ ಪುಟ್ಟಿಹಇಂದಿರೇಶನ ಸಹ ಸುಖಗೀತಾ ಹೇ ನಾಥಾ
--------------
ಇಂದಿರೇಶರು
ಗೋವಿಂದ ರಾಮ ಗೋವಿಂದ ಹರೇ ಗೋವಿಂದ ನಾರಾಯಣ ಕಾಯ್ದೆ ಶ್ರೀ ಕೃಷ್ಣ ಪ ಜಾನಕಿಯ ಕೈವಶ ಮಾಡಿದೆ ಶ್ರೀ ರಾಮ ಸಂಹರಿಸಿದೆ ಶ್ರೀ ಕೃಷ್ಣ 1 ಪರಾಕ್ರಮವನು ತಮಿಸಿದೆ ಶ್ರೀ ರಾಮ ಮರೆದೋಚಿತೆಗೆದುಂಡೆ ಶ್ರೀ ಕೃಷ್ಣ2 ಸ್ತ್ರೀರೂಪವ ಮಾಡಿದೆ ಶ್ರೀ ರಾಮ ಧುಮುಕಿ ಹೆಡೆಯ ಮೆಟ್ಟಿ ವಾರಿಧಿಗಟ್ಟಿದೆ ಶ್ರೀ ಕೃಷ್ಣ ಮುಕ್ತಿಯನಿತ್ತೆ ಶ್ರೀ ಕೃಷ್ಣ 3 ವನವಾಸವ ಮಾಡಿದೆ ಶ್ರೀರಾಮ ಕರುಣದಿ ಶ್ರೀ ಕೃಷ್ಣ 4 ಕಪಿಗಳ ನೆರಹಿ ಖಳನ ಕೊಂದೆ ಶ್ರೀ ರಾಮ ಶರಣಗೆ ಪಟ್ಟವ ಕಟ್ಟಿ ಇರಿಸಿದೆ ಸ್ಥಿರವಾಗಿ ಶ್ರೀ ರಾಮ ಮೆರೆದನು ಶ್ರೀ ರಾಮ ಶ್ರೀ ಕೃಷ್ಣ 5
--------------
ಕವಿ ಪರಮದೇವದಾಸರು
ಚರಣಕೆರಗುವೆ ಕೃಷ್ಣಾ ಪರಿಹರಿಸು ಜನ್ಮವನುಶರಣಜನಬಂಧು ನೀನು ಕೃಷ್ಣಾ ಪಕರುಣನಿಧಿಯಡಿಗೊಮ್ಮೆ ಶಿರವೆರಗಿದವರು ಭವಶರಧಿಯೊಳು ಬೀಳರೆಂದೂ ಕೃಷ್ಣಾ ಅ.ಪಹಲವು ದೇಹಂಗಳಲಿ ಮಾಡಿದಘ ವೃಂದಗಳುಬಲವಂದಡವಕೆ ಲಯವು ಕೃಷ್ಣಾಜಲಜಸಂಭವ ತೊಡಗಿ ಶಲಭಾಂಕದೊಳಗೊಂದನುಳಿಯದೇ ಪ್ರಾಣಿಗಳಲಿ ಕೃಷ್ಣಾತೊಳಲಿ ಬಂದೆನು ನೀನು ನಿರ್ಮಿಸಿದ ಪರಿಯಲ್ಲಿತೊಲಗಿಸಿನ್ನೀ ಭವವನು ಕೃಷ್ಣಾನಳಿನಾಕ್ಷ ನಿನ್ನ ಪ್ರಾದಕ್ಷಿಣವು ಬಳಿಕಾಯ್ತುನಿಲಿಸೆನ್ನ ನಿನ್ನಡಿಯೊಳು ಕೃಷ್ಣಾ 1ಜನನ ಜನನಗಳಲ್ಲಿ ಕಿವಿಮುಚ್ಚಿ ತಲೆವಾಗಿನಿನಗೆರಗಿದವನಾದೆನು ಕೃಷ್ಣಾಗಣನೆುಲ್ಲದ ಜನ್ಮಗಳಲಿನಿತು ನಮಿಸಿದರೆಗಣನೆಗೊಳದಿಪ್ಪುದೇನು ಕೃಷ್ಣಾಅಣು ಮಾತ್ರದವನಾಗಿ ಘನತರದವಿದ್ಯೆಯಲಿಮನಮುಳುಗಿ ಬಹು ನೊಂದೆನೋ ಕೃಷ್ಣಾಯೆಣಿಸದಪರಾಧ ಕೋಟಿಗಳ ಭವ ಭೀತನನುಅನುಪಮನೆ ಕೊಡು ಗತಿಯನು ಕೃಷ್ಣಾ 2ಮರೆಯೊಕ್ಕವರ ಕಾಯ್ವ ಬಿರಿದು ನಿನ್ನದು ದೇವಮರೆಯೊಕ್ಕೆನೆಂದೆನೀಗ ಕೃಷ್ಣಾಮರಳಿ ನುಡಿವರೆ ಗುಣಗಳಡಿಮೆಟ್ಟುತಿವೆ ಬೇಗಸ್ಮರಣೆದೊರಕೊಳ್ಳದಾಗ ಕೃಷ್ಣಾಸೆರೆಯವನ ಬಂಧುಗಳು ಬಿಡಿಸುವರು ಕಂಡಾಗಸೆರೆಯವನಿಗುಂಟೆ ಯೋಗ ಕೃಷ್ಣಾತಿರುಪತಿವಿಹಾರಿ ದುರಿತಾರಿ ವೆಂಕಟರಮಣಕರವಿಡಿಯೆ ಸದ್ಗತಿ ಸರಾಗ ಕೃಷ್ಣಾ 3ಓಂ ವಿದುರಾಕ್ರೂರಾಯ ನಮಃ
--------------
ತಿಮ್ಮಪ್ಪದಾಸರು
ಚರಣದಾಸರ ಸದುಹೃದಯ ನಿವಾಸನೆ ಸಿರಿರಾಮ ಪರಮ ಪಾವನೆ ವರಜಾಹ್ನವೀ ಜನಕನೆ ಸಿರಿರಾಮ ಪ ಶರಣಜನರ ಮೇಲ್ನುಡಿಯೋಳ್ಸಂಚಾರನೆ ಸಿರಿರಾಮ ನೆರೆನಂಬಿ ಭಜಿಪರ ಭವಮಲಹರಣನೆ ಸಿರಿರಾಮ ಕರುಣದೊದೆದು ಯುವತಿಕುಲವನುದ್ಧರಿಸದನೆ ಸಿರಿರಾಮ ವರದ ವಾಸುಕಿಶಾಯಿ ಜಗದೇಕ ಬಂಧುವೇ ಸಿರಿರಾಮ 1 ಧುರಧೀರವಾಲಿಯ ಗರುವನಿವಾರನೆ ಸಿರಿರಾಮ ಮರೆಬಿದ್ದ ಸುಗ್ರೀವನ ದು:ಖಪರಿಹಾರನೆ ಸಿರಿರಾಮ ಪರಮಭಕ್ತ್ಹನುಮಗೆ ಕರವಶನಾದನೆ ಸಿರಿರಾಮ ಶರಣುಬಂದಸುರಗೆ ಸ್ಥಿರಪಟ್ಟವಿತ್ತನೆ ಸಿರಿರಾಮ 2 ಶರಧಿಮಥನಮಾಡಿ ಸುರರ ರಕ್ಷಸಿದನೆ ಸಿರಿರಾಮ ಹರನಕೊರಳ ಉರಿ ಕರುಣದ್ಹಾರಿಸಿದನೆ ಸಿರಿರಾಮ ವರಗಿರಿನಂದನೆಮನ ಸೂರೆಗೈದನೆ ಸಿರಿರಾಮ ಸರುವದೇವರದೇವ ಅದ್ಭುತಮಹಿಮನೆ ಸಿರಿರಾಮ 3 ಕರಿಯ ರಕ್ಷಣೆಗಾಗಿ ಕಾಸಾರಕ್ಕಿಳಿದನೆ ಸಿರಿರಾಮ ತರುಣಿಮೈಗಾವಗೆ ಚರನಾಗಿ ನಿಂತನೆ ಸಿರಿರಾಮ ಚರಣದಾಸರಮನೆ ತುರಗವ ಕಾಯ್ದನೆ ಸಿರಿರಾಮ ಪರಮಭಾಗವತರನರೆಲವ ಬಿಟ್ಟಿರನೆ ಸಿರಿರಾಮ 4 ಅನುಪಮ ವೇದಗಳಗಣಿತಕ್ಕೆ ಮೀರಿದನೆ ಸಿರಿರಾಮ ಸನಕಸನಂದಾದಿ ಮನುಮುನಿ ವಿನಮಿತನೆ ಸಿರಿರಾಮ ವನರುಹ ಬ್ರಹ್ಮಾಂಡ ಬಲುದರದಿಟ್ಟಾಳ್ವನೆ ಸಿರಿರಾಮ ಮನಮುಟ್ಟಿ ಭಜಿಪರ ಘನಮುಕ್ತಿ ಸಾಧ್ಯನೆ ಸಿರಿರಾಮ 5
--------------
ರಾಮದಾಸರು
ಚರಣವ ನರ್ಚಿಸುವೆ ಹರಿ ನಿನ್ನ ಮರೆಯದೆ ಕೀರ್ತಿಸುವೆ ನೀನೆ ಎನ್ನರಸ ರಕ್ಷಿಸು ಎಂದು ಪ ರಕ್ಷಿಸು ಎಂದು 1 ಸುಗುಣಂಬರೀಶ ಭೂಪಗೆ ಕೊಡಲಾಕ್ಷಣ ಗಮನ ಚನ್ನಿಗನೆ ರಕ್ಷಿಸು ಎಂದು 2 ಮುಳಿದು ಗಜವ ನೆಗಳೆಳೆಯಲು ಭಯದಲಿ ನಳಿನಾಕ್ಷ ನಿನಗೆ ದೂರಲು ಬೇಗದಲಿ ಸಾರಿ ಸುಲಲಿತ ಮಹಿಮನೆಗಳ ಸೀಳಿ ಕರಿಯನು ಸಲಹಿದೆ ದೇವ ಗೋವಳನೆ ರಕ್ಷಿಸು ಎಂದು 3 ಬೇಗದಲಿ ಕಂಬದಿಬಂದು ಸದೆದು ದಾನವನ ದಾಯದಲಿ ಕಾಯ್ದು ಪದುಮಾಕ್ಷ ನರಹರಿ ಮುದದಿ ರಕ್ಷಿಸು ಎಂದು 4 ದುರುಳ ದುಶ್ಯಾಸನ ಭೂವರ ಪಾಂಡು ತನುಜರ ಅರಸಿಯ ಸೀರೆಯ ಭರದಿ ಸೆಳೆಯಲಾಗ ಮೊರೆಯಿಡಲಕ್ಷಯ ವರವನಿತ್ತು ಸಲಹಿದ ಹರಿ ಸುತ ಕೋಣೆಯ ಲಕ್ಷ್ಮೀಶ ರಕ್ಷಿಸು ಎಂದು 5
--------------
ಕವಿ ಪರಮದೇವದಾಸರು
ಚಿಂತೆಯ ಮಾಡದಿರು ಚದುರೆ ನಿನಗೆ ನಾನು ಕಂತುಪಿತನನು ತೋರುವೆ ಪ ಸಂತೋಷದಿಂದ ಸರ್ವಾಭರಣವಿಟ್ಟುಕೊಂಡು ನಿಂತು ಬಾಗಿಲೊಳು ನೋಡೆ ಪಾಡೆ.ಅ.ಪ ಕುಸುಮ ಹಾರವನು ಸುಖನಿಧಿಗೆಕಂದರದಿ ನೀಡಿ ನೋಡೆಸಂದೇಹ ಬಿಟ್ಟು ಬಿಗಿದಪ್ಪಿ ಮನವೊಂದಾಗಿಎಂದೆಂದಿಗಗಲದಿರೆನ್ನ ರನ್ನ 1 ಆಸನವ ಕೊಟ್ಟು ಕಮಲಾಸನನ ಪಿತಗೆ ಸವಿ-ಯೂಟಗಳನುಣ್ಣಿಸಿಲೇಸಾಗಿ ತಾಂಬೂಲ ತವಕದಲಿ ತಂದಿಟ್ಟುವಾಸನೆಗಳನೆ ತೊಟ್ಟು ಸೂಸುವ ಸುಳಿಗುರುಳುಗಳ ತಿದ್ದುತಲಿ ನಕ್ಕುಶ್ರೀಶನ್ನ ಮರೆಯ ಹೊಕ್ಕುಆ ಸಮಯದಲಿ ನಿನಗೆ ದಾಸಿ ಎನ್ನಯ ಮನದಿವಾಸವಾಗು ಬಿಡದೆ ಎನ್ನ ರನ್ನ 2 ಇಂತು ಈ ಪರಿಯಲ್ಲಿ ಶ್ರೀಕಾಂತನನು ಕೂಡಿ ಏ-ಕಾಂತದಲಿ ರತಿಯ ಮಾಡಿಸಂತೋಷವನು ಪಡಿಸಿ ಸಕಲ ಭೋಗವ ತಿಳಿಸಿಸಂತತ ಸ್ನೇಹ ಬೆಳೆಸಿಅಂತರಂಗಕ್ಕೆ ಹಚ್ಚಿ ಅವನಾಗಿ ತಾ ಮೆಚ್ಚಿಪ್ರೀತಿಯಿಂದಧರ ಕಚ್ಚಿಕಂತು ಕೇಳಿಯೊಳು ಕಡುಚೆಲ್ವ ರಂಗವಿಠಲಇಂತು ನಿನ್ನಗಲ ಕಾಣೆ-ಜಾಣೆ.3
--------------
ಶ್ರೀಪಾದರಾಜರು
ಚಿತ್ತಾಭಿಮಾನಿ ಬಾರೆ ತ್ವಚ್ಚರಣಕಮಲ ತೋರೆ ಪ ಭೃತ್ಯಾರ್ಥಕಾರಿಣೆ ನೀರೆ ಭುವನೈಕ ಸುಗುಣಧಾರೆ ಅ.ಪ ನಿರ್ಜರವರದೆ ಸಂಪನ್ನೆ ನಿಗಮಾಭಿಮಾನಿ ಪ್ರಸನ್ನೆ 1 ಬುದ್ಧ್ಯಾದಿ ತತ್ವದೊಡೆಯರು ಭೃತ್ಯರು ನಿನಗೆನಿಸುವರು ಬದ್ಧರು ನಿಮ್ಮನ್ನು ಬಿಟ್ಟು ದುರ್ಭವದಿ ಬೀಳ್ವರು ಕೆಟ್ಟು 2 ಜಾನಕಿ ನೀನೆ ಮಹಾಮಾಯೆ ಮನ್ಮಾನಸದೊಳಿರು ತಾಯೆ 3 ಐಶ್ವರ್ಯಮದದಿ ಕೆÀಲರು ಈಶ್ವರಿ ನಿನ್ನನು ಮರೆಯುವರು ಪಶ್ವಾದಿಗಳ ಸಮವವರೂ ನಿಸ್ವರಾಗಿಗತಿ ದೂರರಹರು 4 ಸ್ವಾಮಿ ಜೀವೇಶ ತವ ಭರ್ತ ಕಾಮಿತ ಪ್ರದಾಯಕ ಪಾರ್ಥ- ಸೂತನ ನಾಮ ಸ್ಮರಣೆ ಸ್ವಾರ್ಥ ಗುರುರಾಮ ವಿಠಲ ಕರ್ತ 5
--------------
ಗುರುರಾಮವಿಠಲ
ಚಿತ್ತೈಸಬೇಕೆನ್ನ ಮಾತು ಕೇಳಯ್ಯ ಮತ್ತೆ ಹುಟ್ಟದಂತೆ ಮಾಡೊ ರಂಗಯ್ಯ ಪ ನಾನಾ ಯೋನಿಯಲೆನ್ನ ನೀನಿಡದಿರಯ್ಯ ಶ್ರೀನಿವಾಸ ಬೇಡಿಕೊಂಬೆ ಶ್ರೀ ರಂಗಯ್ಯ 1 ದೀನ ರಕ್ಷಕನೆಂದು ದೈನ್ಯದಿಂ ಬೇಡುವೆ ಜ್ಞಾನವಂತನ ಮಾಡಿ ಸಲಹೊ ರಂಗಯ್ಯ 2 ದಾನವಾಂತಕ ನಿನ್ನ ಭಕುತರಪರಾಧ ನೀನೆಣಿಸದೆ ನಿರುತ ಸಲಹೊ ರಂಗಯ್ಯ 3 ನಾ ನಿನ್ನ ಮರೆತರೂ ನೀ ನನ್ನ ಮರೆಯೆ ಏನೆಂಬೆ ನಿನ್ನ ಕರುಣಕೆ ಶ್ರೀ ರಂಗಯ್ಯ 4 ಭಾನು ಕೋಟಿ ಪ್ರಕಾಶ ಶ್ರೀ ರಂಗಯ್ಯವಿಠಲ ಮಾನದಿಂದಲಿ ಪೊರೆಯೊ ಶ್ರೀನಿಧಿ ರಂಗಯ್ಯ 5
--------------
ರಂಗೇಶವಿಠಲದಾಸರು
ಚಿರಂಜೀವಿಯಾಗಿರೆಲೊ ಚಿಣ್ಣ ನೀನು ಪ ಪರಮ ಭಾಗವತರ ಪದಧೂಳಿ ಧರಿಸುತಲಿಅ.ಪ ಜರಿಯಬೇಡ ಹರಿಯ ಮರೆಯಬೇಡೆಂದೆಂದು ತಿರಿಯಬೇಡ ಖಳರ ಮನೆಗೆ ಪೋಗಿ ಬೆರೆಯಬೇಡ ಪರರ ಸತಿಯ ಸ್ವಪ್ನದಲೂ 1 ಲೋಕವಾರ್ತೆಯ ನಿನ್ನ ಕಿವಿಗೆ ಕೇಳಿಸಬೇಡ ಶ್ರೀ ಕಾಂತ ಚರಿತೆಯನು ಕೇಳದಿರಬೇಡ ಪಾಕವನು ಮಾಡಿ ಏಕಾಂಗಿಯಾಗುಣಬೇಡ ಭೂಕಾಂತರನುಸರಿಸಿ ಬೆಸಗೊಳ್ಳಬೇಡ 2 ಸಾಲ ಮಾಡಲಿ ಬೇಡ ಸಾಲದೆಂದೆನಬೇಡ ನಾಳೆಗೆ ಹ್ಯಾಗೆಂಬ ಚಿಂತೆ ಬೇಡ ಖೂಳ ಜನರೊಡಗೂಡಿ ಕಂಗೆಡಲಿ ಬೇಡ ನೀ ಬಾಳುವರ ಸಂಗದಲಿ ಬಾಳೆಲವೊ ಬಾಲ 3 ಕಂಡವರಿಗೆಲ್ಲ ಕೌತುಕ ತೋರಲಿ ಹೆಂಡಿರು ಮಕ್ಕಳು ಅಳಿಯ ಸೊಸೆ ಮೊಮ್ಮಕ್ಕಳು ಉಂಡುಟ್ಟು ದ್ವಿಜರ ಸಹ ಗಂಡುಗಲಿಯಾಗೋ 4 ಮಂದಮತಿಗಳ ಕೂಡೆ ಮಾತಾಡಲಿ ಬೇಡ ನಿಂದಕರ ಕಣ್ಣೆತ್ತಿ ನೋಡಬೇಡ ಇಂದಿರೆಯರಸ ಶ್ರೀ ವಿಜಯವಿಠ್ಠಲನ ಚರಣ ದ್ವಂದ್ವದಲಿ ಮಸ್ತಕವ ನೀಡದಿರಬೇಡ5
--------------
ವಿಜಯದಾಸ
ಚೈತ್ರದುತ್ಸವ ಗೀತೆ ಚೈತ್ರಮಾಸದ ಕೃಷ್ಣಪಕ್ಷ ಷಷ್ಠಿಯಲಿ ಕಟ್ಟಿ[ದರು] ಕಂಕಣವನು ಸೃಷ್ಟಿಗೀಶ್ವರಗೆ ಪ. ಮೊದಲು ದಿವÀಸದಿ ಧ್ವಜಪಟವನೇರಿಸಿ ಸುರರು 1 ಯಾಗಶಾಲೆಯ ಪೊಕ್ಕು ಯಾತ್ರದಾನವ ಬೇಡಿ ಸೂತ್ರ ಧರಿಸಿದರು 2 ಸರ್ಪಮೊದಲಾದ ಅಲ್ಲಿರ್ಪ ವಾಹನವೇರಿ ಕಂ ದರ್ಪನಪಿತ ಬಂದ ಚಮತ್ಕಾರದಿಂದ 3 ಬೆಂಡಿನ ಚಪ್ಪರ ಬೆಳ್ಳಿಕುದುರೆಯನೇರಿ ಪುಂಡರೀಕಾಕ್ಷ 4 ರೇವತಿ ನಕ್ಷತ್ರದಲಿ ಏರಿ ರಥವನ್ನು [ತಾ] ವೈಯ್ಯಾರದಿಂದಲೆ ಬಂದ ವಾರಿಜನಾಭ 5 ಗೋವಿಂದ ಗೋವಿಂದಯೆಂದು ಪ್ರಜೆಗಳು [ತಾವಾ]ನಂದದಿಂದ ನೋಡಿ ಪಾಡುತ್ತ 6 ಗೋವುಗಾಣಿಕೆಯನ್ನು ಗೋಪಾಲರು ತಂದು ನೀ ಲಾವರ್ಣನಿಗಿತ್ತರು ನೇಮದಿಂ ಪೂಜೆಯ 7 ಧ್ವಜಮಂಟಪದಲ್ಲಿ ಹರಿಭಜನೆಗಳ ಮಾಡು[ತ್ತಿರೆ] ಭುಜಗಶಯನನು ವರವಿತ್ತು ಕಳುಹಿದನು 8 ಸಪ್ತಾವರಣವ ಸುತ್ತಿ ತೀರ್ಥವನಿತ್ತು ಅರ್ಥಿಯಿಂದಲೆ ಬಂದ ಭಕ್ತವತ್ಸಲನು 9 ಬೊಂಬೆ ಅಂದಣವೇರಿ[ದ] ಅಂಬುಜನಾಭ ಕುಂಭಿಣಿಗಧಿಕವೆಂತೆಂಬ ಶ್ರೀರಂಗ 10 ಚಿತ್ರರಥ[ದ] ವಿಚಿತ್ರಮೂರುತಿಯ ನೋಡಿ ಪ ವಿತ್ರರಾದರು ಧಾತ್ರಿ[ಯ] ಉತ್ತಮರೆಲ್ಲ 11 ಬಂದ ಪ್ರಜೆಗಳು ಎಲ್ಲ ಆನಂದದಿ ಪೋಗೆ ಬಂದು ಆಸ್ಥಾನದಿ ನಿಂದ ಶ್ರೀರಂಗ 12 ಸೃಷ್ಟಿಯಲಿ ಪುಟ್ಟಿದ ದುಷ್ಟಪ್ರಾಣಿಗಳ [ನೆಲ್ಲ] ಶ್ರೇಷ್ಠ ಮಾಡಲಿ [ನಮ್ಮ] ವೆಂಕಟರಂಗ 13
--------------
ಯದುಗಿರಿಯಮ್ಮ
ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ಛೀ ಛೀ ಛೀ ಛೀ ಪ ಬಿಟ್ಟು ಕೊಡೋ ನೀ ಸಂಸಾರ ಭ್ರಾಂತಿ | ಎಷ್ಟು ಸೋಸುವಿ ದುಃಖದ ಪಂಥಿ | ಅಷ್ಟು ಪಾಶದೀ ಬಿಗಿದಿಹ ಗ್ರಂಥಿ | ಕಷ್ಟ ಪಟ್ಟಿನ್ನು ಮಾಡುವಿ ಚಿಂತಿ 1 ಸತಿ ಸುತರೆಲ್ಲಾ | ಘನ್ನಸ್ನೇಹವ ಮಾಡುವರಲ್ಲಾ | ಧನ ಯೌವನ ಕೊರತ್ಯಾಗಿ ಸೊಲ್ಲಾ | ತೃಣ ಸಮಮಾಡಿ ಬಗೆವರು ಖುಳ್ಳಾ 2 ಹಳೆದಾಯಿತು ತಾಳಿದ ಕಂಥೀ | ಬಲವಿಂದ್ರಿಯ-ವಾದವು ಶಾಂತಿ | ಬಲು ನೆರೆಯಿತು ರೋಗದ ಸಂತಿ | ಕೆಳಗಾಯಿತು ಪೌರುಷ ಖಂತಿ 3 ಹಿರಿಕಿರಿಯರು ಸರಿಕರು ನಿನ್ನಾ | ಸರಿದ್ಹೋಗುದು ಕಾಣಲಿಲ್ಲÁ ಕಣ್ಣÁ | ಅರಿತು ವಿವೇಕವ ಪಡಿಯದೆ ಘನ್ನಾ | ಮರೆದಾಗುರೆ ನೀ ಮಸಿಮಣ್ಣಾ 4 ಒಂದಾಗಲು ಮತ್ತೊಂದಾಶೆ | ಸಂಧಿಸುವದು ವಾಸನೆ ಸೂಶಿ | ತಂದೆ ಮಹಿಪತಿ ನಂದನು ಹೇಸಿ | ಇಂದು ಸಾರಿದಾ ಹರಿನಾಮ ಸ್ಮರಿಸಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಛೀ ಛೀ ಛೀ ಛೀ ಮೂಳಿ ನಾಚಿಕೆ ಇಲ್ಲದ ಹಾಳಿನೀಚ ಮನುಜರೊಡನೆ ಆಡಲುಬಂತು ಮೂರ್ಖೆ ಮೂಳಿ ಪ ಸುಕೃತ ಮಾರ್ಗವ ಸುಟ್ಟೆ 1 ಎಲ್ಲಿ ಸತಿಯು ಸುತರು, ಮತ್ತೆಲ್ಲಿ ಪತಿಯು ಪಿತರುಯಮನು ವೈಯ್ಯುವಾಗ ಬಹರೆ ಸರ್ವಹಿತರುಗುರುವಿನ ಪಾದವ ಹೊಂದು ನೀ 2 ಮರೆಯದಿರು ಮಾತೆಂದೂಗುರು ಚಿದಾನಂದನು ತಾನೆ ಎನಲು ಹೋಹುದು ಭವವುಹಿಂದು 3
--------------
ಚಿದಾನಂದ ಅವಧೂತರು
ಛೀ ಯಾತರ ಜನ್ಮಾ | ನಾಯಿಗಿಂದತ್ತಾಧಮ ಪ ಛೀ ಯಾತರ ಜನ್ಮಾ ನಾಯಿ ಹಿಂದತ್ತಾಧಮ ಬಾಯಿ ಬಡಕನಾಗಿ ಮಯ್ಯ ಮರೆವರೇ ನಿಮ್ಮಾ ಅ.ಪ ಸಾಧುರಾನುಸರಿಸಿ | ಬೋಧನಾಮೃತ ಸೇವಿಸಿ | ಹಾದಿವಿಡಿದು ಗತಿ ಸಾಧಿಸಿ | ಘಾಸಿ 1 ಬುದ್ಧಿ ತನಗ ಇಲ್ಲಾ | ತಿದ್ದಿದರ ಕೇಳಲಿಲ್ಲಾ | ಇದ್ದೆರಡಾದಿನದೊಳು | ಸದ್ಯ ಸೌಖ್ಯ ಕಳೆದೆಲ್ಲಾ | 2 ಕಲ್ಲು ಕಟೆಯ ಬಹುದು | ಬಿಲ್ಲು ಮಣಿಸಬಹುದು | ನಿಲ್ಲದೇ ವನಕಿ ತುಂಡಾ | ಸಲ್ಲದಂತೆ ನೀನಾಗುದು 3 ಮರಹುಟ್ಟಿ ಮರ ಬಿದ್ದಾ | ತೆರನಾದೋ ಅಪ್ರಬುದ್ಧಾ | ತಿರುಗಿ ನೋಡಿನ್ನಾರೆ | ಚ್ಚರಿತು ನೀ ಮದದಿಂದ 4 ಗುರು ಮಹೀಪತಿಜನಾ ಧರಿಸಿರೋ ಸದ್ವಚನಾ ಸರಿಕರ ಕಂಡು ಹ್ಯಾವಾ ವರಿಸದೆ ಇಹುದೇನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು