ಒಟ್ಟು 790 ಕಡೆಗಳಲ್ಲಿ , 93 ದಾಸರು , 642 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರಾಹ ಹರಿ ವಿಠಲ | ಪೊರೆಯ ಬೇಕಿವಳ ಪ ಕರ ಪಿಡಿಯ ಬೇಕೋ ಅ.ಪ. ಕರ್ಮ ಅಘ | ಕಾನನಗೆ ದಾವಾಗ್ನಿನೀನೆ ಕೃಪೆ ನೋಟದಲಿ | ಮಾನಿನಿಯ ಸಲಹೋ 1 ತೀರ್ಥ ಪದ ನಿನ್ನ ಗುಣ | ಕೀರ್ತನೆಯ ನೊದಗಿಸುತಆರ್ತಳುದ್ಧರ ಕಾರ್ಯ | ಪ್ರಾರ್ಥಿಸುವೆ ಹರಿಯೇ |ಮೂರ್ತಿ ನಿನ್ನದು ಹೃದಯ | ಪಾತ್ರದಲಿ ಕಾಣಿಸುತಗೋತ್ರ ಉದ್ಧರಿಸಯ್ಯ | ಪೃಥ್ವಿ ಧರ ದೇವಾ 2 ಭವ ಶರಧಿ | ಪೋತನೀನೆನಿಸೋ 3 ನಿತ್ಯ ಮಂಗಳವಾ 4 ಸೃಷ್ಟೀಶ ಕ್ರೋಡೇಂದ್ರ | ಅಷ್ಟ ಸೌಭಾಗ್ಯದನೆಪ್ರೇಷ್ಟ ನೀನಾಗಿರಲು | ಕಷ್ಟವೆಲ್ಲಿಹುದೋವಿಷ್ಟರಶ್ರವ ಇವಳ | ಸುಷ್ಟು ಪೊರೆವುದು ಎನುತದಿಟ್ಟ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ವಶವಲ್ಲದೀ ಮನದ ದೆಸೆಯಿಂದೆ ನಾ ಬಲು ದೆಸೆಗೆಟ್ಟು ಬಳಲುವೆ ಕುಸುಮಾಕ್ಷ ಕಣ್ದೆರೆಯೊ ಪ ನಶಿಪ ಪ್ರಪಂಚ ಭ್ರಮಿಸಿ ಹಸಗೆಡಿಸಿ ನಿಜಧ್ಯಾನ ಪಶುವಿನಂತೆನ್ನನು ದಿಸೆದಿಸೆಗೆಳಿಪುದು ಅ.ಪ ಭುವಿಪರನೊಲಿಸರೆಲವದಿ ಭೂಮಿಯ ಪಡೆದೆ ಸವ ಜೋಡಿ ನೂಕಿತ್ತು ಜವದಿ ಕಟ್ಟುವುದು ಬುವಿಯೊಳು ಮಿಗಿಲೆನಿಸುವ ತೆರೆ ಮೇಲ್ಮಾಡಿ ಭವನ ರಚಿಸಿ ಕೋಟಿದ್ರವ್ಯಗಳಿಗಳುವುದು 1 ಮದುವ್ಯಾಗಿ ಪದ್ಮಿನಿಯ ವದನದೊಳ್ವದನಿಕ್ಕಿ ಮದನಕದನದಿ ಸುಖಿಸುವುದೊಂದು ಫ¼ಗಿ ಸದನ ಮುರಿದು ಸಂ ಪದವೆಲ್ಲ ತನ್ನಗೆ ಒದಗಿಬರಲೆನ್ನುವುದು 2 ತಡೆಯದೆ ವೈರಿಗಳ ಕಡುಕೋಪದಿಂ ತಂದು ಪಿಡಿದು ಕಂಬಕೆ ಕಟ್ಟಿ ಸುಡಿಸುವುದೊಡನೆ ಕಡುಗಲಿತನದಿಂದ ಪೊಡವಿಪರ ಸದೆಬಡಿದು ಪೊಡವಿ ಗೆಲಿದು ಒಂದೇ ಕೊಡೆಯಿಂದಾಳುವುದು 3 ಯಾತ್ರೆ ಮಾಡುವುದೊಮ್ಮೆ ಕ್ಷೇತ್ರದೊಳಗೆ ಕೂತು ನೇತ್ರಮಂ ಬಂಧಿಸಿ ಸ್ತೋತ್ರ ಮಾಡುವುದು ಮೂತ್ರದ್ವಾರದೆ ಬಂದ ಸೂತ್ರದ ಕಾಯಕ್ಕೆ ಧಾತ್ರಿ ಸೊನ್ನೆಂದೊಮ್ಮೆ ಖಾತ್ರಿ ಮಾಡುವುದು 4 ಯಾತರ್ಹಲವು ಪರಿಮಿತಿಯಿಲ್ಲದ್ಯೋಚಿಸಿ ಖತಿ ತಾಳಲಾರೆ ಅತಿಭ್ರಷ್ಟಮನದ ದುರ್ಮತಿ ನಿವಾರಿಸು ಗತಿ ನೀಡೆನಗೆ ಕೃಪೆಯಿಂ ಹಿತಭಕ್ತ ಶ್ರೀರಾಮ 5
--------------
ರಾಮದಾಸರು
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಾರಿಜಾಕ್ಷನೆ ನಿನ್ನ ಚಾರುಚರಣದ ಸ್ಮರಣೆ ಬಾರಿ ಬಾರಿಗೆ ಮಾಳ್ಪ ಭಾಗ್ಯವೀಯೊ ಸಾರಸಾಕ್ಷನೆ ಸಂಸಾರ ದು:ಖದಿ ಎನ್ನ ಸೇರದಂದದಿ ಮಾಡೋ ಸರ್ವವಂದಿತ ಕೃಷ್ಣ 1 ಅಂಬುಜಾಕ್ಷನೆ ನಿನ್ನ ನಂಬಿದೆನೊ ಈ ಭವದ ಬಂಧ ತಪ್ಪಿಸಿ ಕಾಯೊ ಇಂದಿರೇಶ ಹಿಂದು ಮುಂದ್ಯಾರಿಲ್ಲವೆಂದು ನಂಬಿದೆ ನಿನ್ನ ಛಂದದಿಂದ ಸಲಹೊ ಮಹೇಂದ್ರತೀರ ನಿವಾಸ 2 ಸುಂದರಾಂಗನೆ ದೇವ ವಂದಿಸುವೆ ತವಪಾದ ಧ್ವಂದ್ವ ಭಜಕರ ಸಂಗ ಬಂದುನೀಡೈ ಇಂದಿರಾರಮಣನೆ ನಂದಗೋಪನ ಕುವರ ಬಂದು ಭಕುತರ ಪೊರೆವ ಆನಂದ ಮೂರುತಿ ಕೃಷ್ಣ3 ಶರಣಜನರನು ಪೊರೆಯೆ ತ್ವರಿತದಲಿ ಬಂದು ಈ ಗಿರಿಯ ಮಧ್ಯದಿನಿಂದೆ ಮಧುಸೂದನ ಶರಣುಶರಣೆಂದು ನಿನ್ನಡಿಗೆರಗುವ ಜನರ ದುರಿತವೆಲ್ಲವ ಕಳೆದು ಪೊರೆವ ದಯಾನಿಧಿ ಕೃಷ್ಣ4 ಕನಕಗರ್ಭನ ಪಿತನೆ ಕಡುಲೋಭವನೆ ಬಿಟ್ಟು ದೃಢವಾದ ಅಭಯವನು ದಯಪಾಲಿಸೊ ಪೊಡವಿಗೊಡೆಯನೆ ದೇವ ಕಮಲನಾಭವಿಠ್ಠಲ ಬಿಡದೆ ನಿನ್ನನು ಭಜಿಪ ಧೃಢ ಮನವ ನೀಡೈ5
--------------
ನಿಡಗುರುಕಿ ಜೀವೂಬಾಯಿ
ವಾಸವನಾಮಕ ದಾಸರ ನೆರೆನಂಬೂ | ಜ್ಞಾನ ಭಕುತಿ ತುಂಬೂಕಾಸುಗಳಿಸಿ ಕೋಟಿಶ್ವರ ನೆನಿಸಿದನಾ | ಸರ್ವವು ಚಲ್ಲಿದನಾ ಅ.ಪ. ಆಶೆಯೆಂದೆನಿಸುವ | ಪೈಶಾಚವ ಕಳೆಯೇ | ದ್ವಿಜಸೋಗಿನಲ್ಹರಿಯೇಕೂಸಿಗೆ ಬ್ರಹ್ಮಚಾರಿ | ಆಶ್ರಮಕೇ ಬೇಡೇ | ಮತ್ತೆ ಕೊಂಡಾಡೇಭೂಸುರ ಬಹುಪರಿ | ಕ್ಲೇಶನಟಿಸಿ ಪೇಳೇ | ಮತ್ತು ಅವನಕೇಳೇಲೇಸುಕಾಸು ಕೊಡ | ದಾಶ್ಮ ಹೃದಯ ವಿವರಾ | ತೆರಳಿದ ದ್ವಿಜವರ 1 ಅತ್ತಿತ್ತಲು ತಿರುಗುತ | ಮತ್ತೆ ಮನೆಗೆ ಬಂದಾ ತಾನಲ್ಲೆ ನಿಂದಹಿತ್ತಲ ಬಾಗಿಲೊಳ್ | ನಿಂತ ಸತಿಯನಾಸಾ ನೋಡಿದ ತಾ ಶ್ರೀಶಾಚಿತ್ತವ ಪ್ರೇರಿಸಿ | ಮತ್ತೆ ಬೇಡಿತಂದಾ | ಮೂಗುತಿ ಬಲು ಛಂದಾವಿತ್ತತಾರೆನುತವ | ನ್ಹತ್ತಿರಿತ್ತು ಪೋದಾ | ಮತ್ತೆ ಬರಧೋದಾ 2 ಸತಿ ಗರ | ಬಟ್ಟಲ ಕುದಿಪೋಗೇ | ಮೂಗುತಿ ಬಿತ್ತಾಗೇ 3 ಸುಂಡಿಪೋಗೆ ತನ | ದಿಂಡು ವ್ಯಸನಕಾಗೀ | ತನಪಾಪಕೆ ಮರುಗೀಕಂಡು ಈಸೋಜಿಗ | ಕೊಂಡಾಡಿದ ಸತಿಯ | ಆದನು ಹೊಸಪರಿಯ ಭಂಡತನದ ಭಂಡಿ | ಭಂಡಿ ದ್ರವ್ಯವೆಲ್ಲ | ದಾನ ಮಾಡ್ದನಲ್ಲಿ ಗಂಡುಗಲಿಯು ಆಗಿ | ಪುಂಡರಿಕಾಕ್ಷಪದಾ | ಬಂಡುಣಿ ತಾನಾದಾ 4 ಪಾದ ಸಿರಿ ಪಾದ ಭಜಿಸೇ | ಇಂದ್ರ ದಾಸನೆನಿಸೇ ಸಂಗ ರಹಿತರಿಗೆ | ಮಂಗಳ ಸಂದೇಶ | ಇತ್ತು ತಾನುಪದೇಶಾ ಅಂಗಜ ಪಿತ ಗುರು | ಗೋವಿಂದ ವಿಠ್ಠಲನಾ ಚರಿತೆಗಳ್ ಬಿತ್ತಿದನಾ 5
--------------
ಗುರುಗೋವಿಂದವಿಠಲರು
ವಿಜಯದಾಸರ ಸ್ತೋತ್ರ ವಿಜಯರಾಯರ ಪಾದಕಮಲ ಭಜಿಸಲಾಕ್ಷಣ ದಿ- |ಗ್ವಿಜಯ ಮಾಡಿ ಸುಜನರನ್ನು ಪೊರೆವನನುದಿನ ಪ ದಾಸಪ್ಪನೆಂಬ ನಾಮದಿಂದ ಕರೆಸುತ ಉದರ ಗೋಸುಗದಿ ಪರರ ಬಳಿಯ ಆಶ್ರಿಸುತ ||ಯೇಸುಪರಿಯ ಬಡತನವು ಸೋಸಿ ದಣಿವುತ |ಕ್ಲೇಶಗೊಂಡು ಸುಲಿಸಿಕೊಂಡು ಕಾಶಿಗ್ಹೋಗುತ 1 ನಿತ್ಯ ಬ್ಯಾಸರದಲೆ ವ್ರತಗಳು ಉಪವಾಸ ಮಾಡುತ ||ರಾಶಿ ರಾಶಿ ಜನರ ಕೂಡಿ ದೇಶ ಚರಿಸುತ ಮ್ಯಾಲೆಕಾಶಿ ಬಿಟ್ಟು ಸೇತು ರಾಮೇಶನ್ನ ಹುಡುಕುತ 2 ತಿರುಗಿ ತಿರುಗಿ ಚೀಕಲಾಪರಿಗೆ ಬಂದನು ಕಂಡುಗುರುತು ಹಿಡಿದು ಆ ಕ್ಷಣದಿ ಕರೆದು ವೈದ್ಯರು ||ಪರಮ ಸಂತೋಷದಿಂದ ಭರಿತರಾದರು ಮೈನೆರೆದ ಶೋಭನಾದಿಗಳನು ತ್ವರಿತ ಮಾಡ್ದರು 3 ನಿತ್ಯ ಸಂಸಾರದಲ್ಲಾಸಕ್ತರಾಗುತ ದೊಡ್ಡ ಹತ್ತು ಎಂಟು ಗ್ರಾಮವನ್ನು ವತ್ತಿ ಆಳುತಾ ||ಗುತ್ತಿಗೆಯ ಹೊತ್ತ ರೊಕ್ಕ ಮ್ಯಾಲೆ ಬೀಳುತ ಯಿನ್ನುಎತ್ತ ಸೇರಲೆಂದು ಭಾಗೀರಥಿಗೆ ಹೋಗುತ 4 ಕಾಶಿಯೊಳಗೆ ಮಲಗಿರಲು ಸ್ವಪ್ನ ಕಂಡರು ಪುರಂದರ-ದಾಸರೇವೆಂಬುದು ವ್ಯಾಸ ಕಾಶಿಗೊಯ್ದರು ||ಶ್ರೀಶನಿಂದಲಿವರಿಗೆ ಉಪದೇಶ ಕೊಡಿಸೋರು ವಿಜಯ ದಾಸರೆಂದು ಕರೆಸಿರೆನ್ನೆ ಎದ್ದು ಕುಳಿತರು 5 ಕನಸಿನೊಳಗೆ ದೇವರ ದರುಶನಾಗುತ ಶ್ರೀ-ಮನಸಿಜನ ಪಿತನ ದಯವು ಘನ ಘನಾಗುತ ||ಜಿನಸು ಜಿನಸು ಪದ ಸುಳಾದಿಗಳನು ಪೇಳುತ ಆಗನೆನಿಸಿದಾಕ್ಷಣದಲಿ ಮುಖದಿ ಕವಿತ ಹೊರಡುತಾ 6 ಮತ್ತೆ ಹೊರಟು ಆದವಾನಿ ಸ್ಥಳಕೆ ಬಂದರು ಏನುಹತ್ತು ಜನರಿಗೆ ಪೇಳಿದ ವಾಕ್ಯ ಸತ್ಯವೆಂದರು ||ಸುತ್ತು ಮುತ್ತು ನೂರಾರು ದಾಸರು ನೆರೆದರು ಆನಿಸತ್ತಿಗಿ ಪಲ್ಲಕ್ಕಿಯವರೆ ಶಿಷ್ಯರಾದರು 7 ಯಾತ್ರಿ ತೀರ್ಥಗಳನು ಬಹಳ ಚರಿಸಿ ನೋಡುತ ಸ-ತ್ಪಾತ್ರರಲ್ಲಿ ನೋಡಿ ಧರ್ಮಗಳನೆ ಮಾಡುತ ||ರಾತ್ರಿ ಹಗಲು ವಿಜಯ ವಿಠ್ಠಲನೆಂದು ಪಾಡುತ ಜನರಶ್ರೋತ್ರಿಯಿಂದ್ರಿಯಗಳ ಉದ್ಧಾರ ಮಾಡುತ 8 ಪೂರ್ತಿ ಜ್ಞಾನದಿಂದ ಕರ್ಮವೆಲ್ಲ ಕಡಿದರು ಸ-ತ್ಕೀರ್ತಿವಂತರಾಗಿ ಬಹಳ ಖ್ಯಾತಿ ಪಡೆದರು ||ಕಾರ್ತಿಕ ಶುದ್ಧ ದಶಮಿ ದಿವಸ ನಡೆದರು ಶ್ರೀಸತ್ಯರಮಣ ಕೇಶವ ವಿಠಲನ್ನ ಕಂಡರು9
--------------
ಕೇಶವವಿಠ್ಠಲರು
ವಿಜಯರಾಯರ ಪಾದವ ನೀ ಮಾನವ ಪ ವೃಜಿನವೆಲ್ಲವ ಕಳೆದು ಕರುಣದಿ | ಅಜನನಯ್ಯನ ತೋರುವ ಅ.ಪ. ಜಗಕೆ ಹರಿ ಪರನೆಂದು ತಾ ಭುಜ ಯುಗಗಳೆತ್ತಿ ಸಾರಿದಾ || ಭೃಗು ಮುನಿ ಇವರೆಂದು ಭಾವಿಸಿ ಮಿಗೆ ಸುಭಕ್ತಿಲಿ ಸರ್ವದಾ 1 ವರಹಜಾ ತಟದಲ್ಲಿ ಚೀಕಲ | ಪರವಿಗ್ರಾಮದಿ ಜನಿಸಿದ || ಪರಿಪರಿಯಲನುಭವಿಸಿ ಬಡತನ ಭವ ವೈರಾಗ್ಯ ಧರಿಸಿದ 2 ಭಕುತಿ ಪೂರ್ವಕವಾಗಿ ಬಿಡದಲೆ | ಸಕಲಕ್ಷೇತ್ರವ ಚಲಿಸಿದಾ || ಮುಕುತಿ ಸುಖದಾತಾರನಾದ | ಲಕುಮಿ ರಮಣನ ತುತಿಸಿದಾ 3 ತಾ ಸುಸ್ವಪ್ನದೊಳೊಂದು ದಿನ ಶ್ರೀ ವ್ಯಾಸ ಕಾಶಿಗೆ ತೆರಳಿದಾ || ವಾಸುದೇವನ ಕಂಡು ನಮಿಸಿ ಲೇಸು ವರ ಸ್ವೀಕರಿಸಿದಾ 4 ಪುರಂದರಾರ್ಯರ ಕವನಗಳು ಮೂರೆರಡು ಲಕ್ಷಕೆ ತ್ರಯಪದ ಕೊರತೆ ತಾ ಪೂರೈಸಿದ 5 ಬಾಲೆಯೋರ್ವಳು ಬಂದು ಪ್ರಾರ್ಥಿಸೆ ಕೇಳುತಾಕೆಯ ಪತಿಯನು ಕಾಲ ಪಾಶವ ಬಿಡಿಸಿ ಕರುಣದಿ ಪಾಲಿಸಿದ ಸುಮಹಾತ್ಮರ 6 ಶ್ರೀಮನೋಹರ ಶಾಮಸುಂದರ ನಾಮ ಮಹಿಮೆಯ ವಿಧ ವಿಧ ಭೂಮಿ ಸುಮನಸ ಸ್ತೋಮಕನುದಿನ ಪ್ರೇಮದಿಂದಲಿ ಬೀರಿದ 7
--------------
ಶಾಮಸುಂದರ ವಿಠಲ
ವಿವೇಕದಿಂದಾ ಮತಿಯುಕ್ತನಾಗಿ ಕುವಿದ್ಯದಾದಾ ಗುಣವೆಲ್ಲ ನೀಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದದಾಮೋದರ ಮಾಧವೇತಿ 1 ತ್ರಿವಿಧ ತಾಪದೊಳು ಮಗ್ನನಾಗಿ ನೀವ್ಯರ್ಥದಿನಗಳಿಯದೆ ಹೋಗಿ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 2 ಈ ವಿಷಯದಾಸುಖ ನಿತ್ಯವಲ್ಲಾ ನೀವಾತು ಕೇಳಿಗುರುವೀನ ಸೊಲ್ಲಾ ಭಾವಾರ್ಥದಿಂದ ಸ್ಮರಿಸೂದು ನೀತಿ ಗೋವಿಂದ ದಾಮೋದರ ಮಾಧವೇತಿ 3 ಆವದು ತನ್ನ ಹಿತವನು ನೋಡಿ ಸಾವಧನಾಗೀ ಶ್ರವಣ ಮಾಡಿ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 4 ಅವಾವ ಯೋನಿಯಲಿ ಬಂದಹಿಂದಾ ಅವದುಗತಿಯಂದು ನೋಡಿವಂದಾ ಭಾವರ್ಥದಿಂದ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 5 ತಾವಂದೇ ಆಶ್ರೈಸದೆ ಕಾಮಧೇನು ಸಾವಿರ ಸಾಧನಕ ಬೀಳುದೇನು ಬಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 6 ಜೀವಾತ್ಮರಾಗಿ ಸಚ ರಾಚ ರಾವ ಬಾವರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೊದರ ಮಾಧವೇತಿ 7 ಗೋವಿಂದ ಅಷ್ಟಕವ ದಾವಪ್ರಾಣೀ ಸೇವಿಸುವನು ಕಾವನು ಚಕ್ರಪ್ರಾಣೀ ಭಾವಾರ್ಥದಿಂದಾ ಸ್ಮರಿಸೋದು ನೀತಿ ಗೋವಿಂದ ದಾಮೋದರ ಮಾಧವೇತಿ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಶ್ವ ಜ್ಞಾನರೂಪವಿಶ್ವದೊಳ ಹೊರಗು ನೀನಲ್ಲದೆ ಬೇರೆವಿಶ್ವನಾಟಕ ಸೂತ್ರಧಾರರುಂಟೆ ಹರಿಯೆ ಪ ಮುಕುಟ ಮಂಡೆಯಲಿ ಧ್ರುವಲೋಕ ಭುವನಾವಳಿಯುನಿಖಿಲ ಶ್ರುತಿ ನವರತುನ ನಿಟಿಲದಲ್ಲಿಮುಖದಲಿಂದ್ರರು ಅಗ್ನಿ ಸಪ್ತ ಋಷಿಗಳು ದ್ವಿಜರುಮುಖದ್ವಾರದುಸುರಿನಲಿ ಶ್ರುತಿ ಮರುತರುದೃಕುಯುಗದಿ ರವಿ ಶಶಿಯು ಎವೆಯಲ್ಲಿ ನಕ್ಷತ್ರಪ್ರಕಟ ಜಿಹ್ವೆಯ ವಾಣಿ ಕರ್ಣದ್ವಯದಿವಿಕಟ ಕಿವಿಯಲಿ ಅಶ್ವಿನಿದೇವತೆಗಳೆಲ್ಲಸಕಲ ಧರ್ಮವ ಪಡೆದೆಯೆಲೊ ಹರಿಯೆ 1 ಸ್ಕಂಧದಲಿ ಅತಿಥಿಗಳು ವಿದ್ಯಾತತಿಗಳು ಮಹಾಚಂದದರಸುಗಳು ಭುಜ ತೋಳಿನಲ್ಲಿಮುಂದುರದಿ ವಿಷ್ಣು ಹರ ಬ್ರಹ್ಮ ಸಹಿತುದರದಲಿಹಿಂದಿನ ಮಗ್ಗುಲಲಿ ಮನುಮುನಿಗಳುಮುಂದಿನ ಮಗ್ಗುಲಲಿ ಗಿರಿನಿಚಯಂಗಳುಸಂಧಿಯಲಿ ಮಕರಂದ ದೇವತೆಗಳುಮುಂದೊರೆದಿಹ ರೋಮಕೂಪದಗ್ರದಳತೆಯುವೃಂದಗಳ ಶೋಭಿಪ ರೀತಿಯ ಪಡೆದೆಯೆಲೊ ಹರಿಯೆ2 ಬೆನ್ನಿನಲಿ ವಸುನಿಕರ ಸ್ಮರನು ಲಿಂಗದಲಿ ಈ ಭು-ವನವೆಲ್ಲವು ಚೆಲುವ ನಾಭಿಯಲ್ಲಿಮುನ್ನ ಕೈಯಲಿ ವಿಶ್ವದೇವತೆಗಳು ವೈಶ್ಯಉನ್ನತ ಜಾನುವಿನ ಸಕ್ತಿಯಲಿಭಿನ್ನ ನದಿಗಳು ಸನ್ಮೋಹನ ಶಕ್ತಿ ಪ್ರ-ಸನ್ನ ಪಾದಾಬ್ಜದಿಂ ಶೂದ್ರರುನಿನ್ನ ಅವಯವದಲ್ಲಿ ಸಕಲವಂ ಪಡೆದ ಪ್ರ-ಸನ್ನ ಕಾಗಿನೆಲೆಯಾದಿಕೇಶವರಾಯ 3
--------------
ಕನಕದಾಸ
ವಿಶ್ವಕ್ಕೆ ಪ್ರಿಯ ಗುರುವರ್ಯ | ಕಾಯೊವಿಶ್ವಪ್ರಿಯಾಭಿಧ ಯತಿವರ್ಯ ಪ ಧೃತ - ವಿಶ್ವದೊಳಗಾವೆಲ್ಲಿ ನಿಮಗೆಣೆ | ಸುಸ್ವಭಾವ ವಿರಾಗಭೂಷಣವಿಶ್ವ ವಾಯುಪದಾರ್ಹವಂಶಜ ಹ್ರಸ್ವಗೈವುದು ಎನ್ನಕರ್ಮ ಅ.ಪ. ದಿವಿಜ | ಧೃತ | ಅಶ್ವಗ್ರೀವನ ಪಾದರಜ |ವಿಶ್ವ ಗುರು ಮಧ್ವಾರ್ಯ ಶಾಸ್ತ್ರದ | ನಿಸ್ವನವ ನಿಮ್ಮಿಂದ ಕೇಳಲುವಿಷ್ಟಕುದೇಶಗಳ ಸಜ್ಜನ | ಸತ್ವರದಿ ಉಡಪಿಯನೆ ಸಾರ್ದರು 1 ಸ್ವಪ್ನ ವೃಂದಾವನಾಖ್ಯಾನ | ನಿಮ್ಮ | ಗೊಪ್ಪಿದ ಶಿಷ್ಯರ್ಗೆ ಬೋಧನ |ಅಪ್ಪಂದದಲಿ ಮಾಡ್ದ ಕಾರಣ | ಅದು | ಒಪ್ಪಿತು ಬಹು ವಿಧ ಪ್ರಕರಣ ||ಸ್ವಪ್ನ ದ್ರಷ್ಟ್ರು ದ್ವಿಜವರೇಣ್ಯರೆ | ಅಪ್ಪ ಅಶ್ವಗ್ರೀವ ದೇವನಕೃಪ್ಪೆಯಿಂದಲಿ ಜಾತಿ ಸ್ಮøತಿಯನು | ಅಪ್ಪಿವ್ಯಕ್ತಿಯ ಜ್ಞಾನವಿತ್ತಿರಿ 2 ಮಧ್ಯವಾಟ ಪುರಟ ಸಂಪುಟ | ತಂದು | ವಿದ್ಯುಕ್ತ ಹಯಮೊಗ ನಿಕಟ |ಸದ್ಯ ಸ್ಥಾಪಿಸಿ ರಜತ ಪೀಠ | ದಲ್ಲಿ | ಪರ್ಯಾಯ ಗೈದೆಯೊ ಪಟುಭಟ ||ಆಯ್ ಗುರು ರಾಜೋಕ್ತಿಯಂದದಿ |ಕಾರ್ಯಳು ಬಹು ಭಾವಿ ನಡೆಸಿದೆಆರ್ಯ ಭಾವೀ ಇಂದ್ರ ಪದದಲಿ | ಯೋಗ್ಯರೆನಿಸಿದ ಯೋಗಿವರ್ಯ 2 ಮಾರ್ಗಣ ವಿಶ್ವ ಪ್ರಿಯಾರ್ಯ 4 ಭವ | ಭಯವನೆ ಕಳೆವುದು ರಾಯ |ದಯವನಧಿ ಕರುಣವನೆ ದೊರಕಿಸಿ | ಜಯ ಗುರು ಗೋವಿಂದ ವಿಠಲನದ್ವಯ ಪದಾಂಬುಜ ತೋರಿ ಸಲಹೊ | ವಿಯದಧಿಪ ಪದ ಪೊಂದುವವನೆ 5
--------------
ಗುರುಗೋವಿಂದವಿಠಲರು
ವಿಸ್ತರಿಸಿ ಬರುವನೊ ರುಕ್ಮಿಣಿಗೆ ಹಸ್ತಕಳ ಕಳಹುವನೊಮಿತ್ರೆ ದ್ರೌಪತಿ ಸುಭದ್ರೆ ಮುಯ್ಯಾಒಯ್ಯೋ ವರ್ತಮಾನವೆಲ್ಲ ಅರುಹೋನು ವಿಸ್ತರಿಸಿ 1 ಹೇಳದೆ ಹೋಗುವನೊ ಅಥವಾ ಸುದ್ದಿತಿಳಿಯದೆ ಕಳುಹುವನೊಭಾಳ ಚರ್ಚೆಯ ಮಾತು ಭಾಮೆಯಕಿವಿಗೆ ಬೀಳದಂತೆ ಕಾಳಿ ಹಿಡಿಸುವನೊ2 ಮೊದಲಿಗೆ ಅರುಹುವನೊ ಅಥವಾಬೆದರದೆ ನಗುವನೊಮದಗಜಗಮನೆಯರ ಎದೆ ಧಿಗಿಲೆಂಬಂತೆಚದುರ ಚರ್ಚೆಯ ಡಂಕಿ ಹೊಯ್ಸುವನೊ 3 ಎಚ್ಚರ ಕಳಹುವನೊ ಅಥವಾನಿದ್ರೆ ಬೆಚ್ಚಲಿ ಹೋಗುವನೊಮತ್ತÀನೇತ್ರಿಯರ ಮನಕೆ ನಡುವಂತೆಚರ್ಚೆಮಾತಿನ ಭೇರಿ ಹೊಯ್ಸುವನೊ4 ದಾಸಿಯ ಕಳಹುವನೊ ಅಥವಾಕಂಡು ಹಾಸ್ಯವ ಮಾಡುವನೊಮೋಸಗೊಳಿಸಿ ಆಭಾಸ ಉಕ್ತಿಗಳಿಂದ ಆಕಾಶವಾಣಿಯಿಂದ ನುಡಿಸುವನೊ5 ಅರಿಯದೆ ಹೋಗುವನೊ ಅಥವಾಮೈಮರೆಯದೆ ನಗುವನೊಶ್ರೀಶರಾಮೇಶನರಸನ ಸತಿಯರ ಚರ್ಚಿಸಿ ಹರುಷಮಾಡಿ ಹರಿಯು ಬರುವನೊ 6
--------------
ಗಲಗಲಿಅವ್ವನವರು
ವೃಂದಾವನವ ನೋಡಿರೊ - ನೀವೆಲ್ಲಾನಂದವನ್ನೇ ಪೊಂದಿರೊ ಪ ರಾಮಾಚಾರ್ಯರ ಪುತ್ರರೊ - ಅವರುಮಾಮನೋಹರ ನೃಹರಿ ದಾತರೋ |ಜನ್ಮ ಅಷ್ಟಕೆ ಬ್ರಹ್ಮಚರ್ಯ - ಪೊಂದಿಬ್ರಹ್ಮ ವಿದ್ಯೆಯ ಪಡೆದರೋ |ಧೃತ - ಪ್ರೇಮದಿಂದಲಿ ಬಂದು ತಾವ್ ಪುರುಷೋತ್ಮ ತೀರ್ಥರ ಸಾರ್ದರಾ 1 ಕಾಯಜ ಪಿತನ ತಾನ್ವಲಿಸೀ - ದೇಶಂಗಳಪ್ರೀಯದಿಂದಲಿ ಸಂಚರಿಸೀ |ಮಾಯಾರಮಣನು ಜೀವನೂ - ಒಂದೆಂಬಮಾಯಾವಾದೀಗಳ ತರಿದೂ |ಧೃತ - ವಾಯುಮತ ಪ್ರೀತಿಯಲಿ ಅರುಹುತಪ್ರೀಯ ಅಬ್ಬೂರಲ್ಲಿ ನೆಲೆಸಿದ 2 ವಿಠಲ ನೃಹರಿ ಪೂಜೆಗೇ - ನೇಮಿಸಿತಮ್ಮಪಟ್ಟ ಶಿಷ್ಯರು ವ್ಯಾಸತೀರ್ಥರ |ಅಟ್ಟ ಹಾಸದಿ ಸರ್ವಜಿತೂ - ಸಂವತ್ಸರಕೃಷ್ಣೈಕಾದಶಿ ವೈಶಾಖ |ದಿಟ್ಟ ಗುರುಗೋವಿಂದ ವಿಠಲನದೃಷ್ಟಿಸೀ ತನು ಬಿಟ್ಟು ಪೊರಟನ 3
--------------
ಗುರುಗೋವಿಂದವಿಠಲರು
ವೆಂಕಟೇಶ ನೀನೆ ಧೊರೀ ಧೊರೀ ಪ ಸಂಕಟವೆಲ್ಲವ ಪರಿಹರಿಸುವಂಥ ಅ.ಪ. ಎತ್ತಿನ ಪೆಸರುಳ್ಳ ಮತ್ತ ರಕ್ಕಸನ್ನ ಕುತ್ತಿಗೆ ಕೊಡಲುತ್ತಮ ಪದವಿತ್ತೆ 1 ಅಂಜನೆಯೆಂಬೊ ಮಂಜುಕಿಸಾಲಿಯ [?] ಅಂಜದೆ ತಪಿಸಲು ಸಂಜೀವನವಿತ್ತೆ2 ಸಾಸಿರ ಮುಖವುಳ್ಳ ಶೇಷನಹಂಕಾರ ಸ್ವಸನನ ಕೈಯಿಂದ ನಾಶಮಾಡಿಸಿದಂಥ3 ಮಾಧವ ಮಾದಿಗ ಹಾದಿಯ ಮೆಟ್ಟಲು ಮಾಧವ ಅವನನ್ನು 4 ಶ್ರೀದವಿಠಲ ನಿನ್ನ ಪಾದಾಶ್ರಿತರ ಮೋದದಿ ಸಲಹೊ ಆದರಿಸೆನ್ನನು 5
--------------
ಶ್ರೀದವಿಠಲರು
ವೆಂಕಟೇಶನ ನಂಬಿರೊ ನೀವೆಲ್ಲರೂ | ವೆಂಕಟೇಶನ ನಂಬಿರೋ || ವೆಂಕಟೇಶನ ನಂಬಿ | ಮಂಕುಜನರೆ ನಿಮ್ಮ | ಸಂಕಟ ಪರಿಹರಿಸಿ ತ | ನ್ನಂಕಿತವ ನೀವ ಪ ಗುಣ ಒಂದು ನೋಡಿದಿಯಾ ಅಜಮಿಳ | ಗುಣವೇನು ಮಾಡಿದನು | ಗುಣ ಶಿರೋಮಣಿ ಮ | ರಣ ಬಂದಾಗ ಸ್ಮ | ರಣೆ ಇತ್ತು ಅವನ ನಿ | ರ್ವಾಣಕ್ಕೆ ಕರಿಸಿದಾ 1 ಕುಲದಲ್ಯಾತರವನು | ಕುಲಶಿಖಾಮಣಿ | ನಿಳಗೆ ಪೋಗಿ ಕುಡತಿ ಪಾಲಿಗೆ ಅವನಿಗೊಲಿದು ನಿ | ಶ್ಚಲ ಭಾಗ್ಯವನಿತ್ತ 2 ಗುಣ ಒಂದು ನೋಡಿದಿಯಾ | ವಾಲ್ಮೀಕಿ | ಗಣದ ಕೂಟದವನೆ | ಕ | ರುಣ ಮಾಡಿ ಅವಗೆ ಚ | ರಣವನ್ನು ತೋರಿ ಆ | ಕ್ಷಣದಲ್ಲಿ ಸಾಕೀದ 3 ಪತಿವ್ರತರ ನೋಡಿದಿಯಾ | ಗೋಪಿಯರು ಪತಿ ಧರ್ಮದಲ್ಲಿ ಇದ್ದರೇ | ಪತಿತಪಾವನ ಸಂಗತಿಯಲ್ಲಿ ಆ ನಾರಿಯರಿಗೆ | ಅತಿಶಯವಾದ ಸದ್ಗತಿಯ ಕರುಣಿಸಿದ4 ಗುಣಿ ಕುಲ ಗಣ ಮಿಕ್ಕಾದ ವ್ರತಂಗಳು | ದಣಿದು ಮಾಡಲಿಬೇಡಿರೊ | ಬಣಗುದೈವದ ಗಂಡ ವಿಜಯವಿಠ್ಠಲನ್ನ | ಮನದೊಳು ನೆನೆದರೆ ನೆನೆಸಿದ ಫಲನೀವಾ 5
--------------
ವಿಜಯದಾಸ
ವೇಣು ಗೋಪಾಲವಿಠ್ಠಲರೇಯ ನಿನ್ನ ಪದ ರೇಣು ನಂಬಿದ ಮಾನವ ಏನು ಅರಿಯದಲಿಪ್ಪ ನೀನೊಲಿದು ಕರುಣದಲಿ ಜ್ಞಾನ ಭಕುತಿಯ ಕೊಡುವುದು ಸ್ವಾಮಿ ಪ ಪರದೈವ ನೀನೆಂದು ಮೂಢಮತಿಯಾದವನು | ಪರಿಪೂರ್ಣವಾಗಿ ನಿರುತ | ನೆರೆ ನಂಬಿದೆನು ನಾನಾ ಪ್ರಕಾರದಲಿ ಸ್ಮರಣೆ ಮಾಡುತ ಮನದಲಿ | ತರತಮ್ಯ ಭಾವದಲಿ ಮಾರ್ಗವನೆ ತೋರಿ ವಿ ಸ್ತರ ಮಾಡು ಇವನ ಕೀರ್ತಿ ಕರುಣಾಕರನೆ ನಿನ್ನ ಮೊರೆಹೊಕ್ಕ ಶರಣನ್ನ ಕರಪಿಡಿದು ಪಾಲಿಸುವುದು ಸ್ವಾಮಿ1 ಲೌಕಿಕವೆಲ್ಲಿನಗೆ ವೈದಿಕವೆಂದೆನಿಸಿ | ಸಾಕುವುದು ಸಾಕಾರನೆ ನೂಕು ದುರಳದಿಂದ ಬಂದ ವಿಪತ್ತುಗಳ ತಾಕಗೊಡದಂತೆ ವೇಗ ಶುಭ | ವಾಕು ನೇಮಿಪುದು ಸತತ ನಾಕಜನ ಬಲವಾಗಿ ರಕ್ಷಿಸಲಿ ಸುರತರುವೆ ಶ್ರೀ ಕಾಂತ ನಿನ್ನಿಂದಲಿ ಸ್ವಾಮಿ 2 ಓರ್ವನ ಪೆಸರುಗೊಂಡು ಪೇಳಲೇತಕೆ ಇನ್ನು | ಸರ್ವರನು ಈ ವಿಧದಲಿ | ಊರ್ವಿಯೊಳಗೆ ಇಟ್ಟು ಉದ್ಧರಿಸಿ ಉರುಕಾಲ ನಿವ್ರ್ಯಾಜದವನ ಮಾಡಿ ಸರ್ವರಗೋಸುಗ ತುತಿಸುತಲಿ ಯೋಗ್ಯರಿಗೆ ಸರ್ವದಾ ಕೃಪೆಮಾಡು ಎಂಬೆ ಸಿರಿ ವಿಜಯವಿಠ್ಠಲ ನಿನ್ನ ಶರ್ವ ತುತಿಸಿ ಕಾಣ ನಾನೊಬ್ಬ ಪೊಗಳುವನೆ 3
--------------
ವಿಜಯದಾಸ