ಒಟ್ಟು 1713 ಕಡೆಗಳಲ್ಲಿ , 104 ದಾಸರು , 1194 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುರಿತಾರಿಯೊಳು ಮನವಿರಿಸಿ ಸೌಖ್ಯವತಾಳು ನರಕವು ಬರದೊ ಮಾನವಾ ಪ ಪರಿಪರಿ ಜನ್ಮದೆ ಕೊರಗಿ ಕಂಗೆಡಬೇಡ ಸ್ಥಿರವಲ್ಲವೀ ದೇಹವೂ ಭರವಸದಿಂದ ಅ.ಪ ಮಂದಮತಿಯನಾಂತು ನೊಂದು ಸಾಯಲಿಬೇಡ ಕುಂದುಕೊರತೆಗಳಿಲ್ಲವೋ ವಂದಿಸಲು ಹರಿಯ 1 ಎರಡು ಕಂಬದ ಮೇಲೆ ಮೆರೆವ ಗೋಪುರವಿದು ಬಿರುಗಾಳಿಯಿಂದಲೋ ಉರುತರ ಮಳೆಯೊಳೊ ಉರುಳಿ ಬೀಳುವುದೆಂಬುದು ಬರೆದಿಡೊ ಮೂಢಾ 2 ನೀರ ಬೊಬ್ಬುಳಿಯಂತೆ ಆರಿಹೋಗುವುದಿದು ಸೇರದು ಪದುಮಾಕ್ಷನಾ ಆರುದಿನ ಬಾಳಿಗಾರು ಸಮರೆನಬೇಡ ಆರಡಿ ಕಮಲವುತಾ ಸೇರುವವೊಲು 3 ಎನಗೆ ಮುಂದೊದಗುವ ಜನ್ಮಕೋಟಿಗಳೊಳು ಅನುಗಾಲ ದೇಶವಸ್ಥೆಗಳೊಳಗೂ ವನಜನಾಭನೆ ನಿನ್ನ ಘನಪಾದಕಮಲವ ನೆನೆವ ನೆಲೆಸುವಂದದೆ ಅನವರತ ಬೇಡೋ 4 ಜೀವಾತ್ಮ ಪೋಪಾಗ ದೇವದೇವನ ಮರೆವ ಭಾವಗಳೊಳುದಯಿಪವು ಸಾವಕಾಶವ ತೊರೆದು ಮಾಂಗಿರಿರಂಗನ ದಿವ್ಯನಾಮವ ನೆನೆದು ಭಾವುಕನಾಗು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದುರುಳ ಬುದ್ಧಿಯನು ತೋರಿಸಬೇಡವೊ ಪ ನರವರರಿಗೆ ಇದು ಸರಿಯಲ್ಲವೋ ಕೇಳ್ ಅ.ಪ. ತುಡುಗ ಬುದ್ಧಿಯಿದ ಕಡೆಗಾಲಕೆ ಸರಿ ನುಡಿಗೆದುರಿಲ್ಲವೋ ನಿನಗಿಂದು ಕಡು ಪತಿವ್ರತೆಯರು ಬಿಡುವ ನಯನಜಲ ಉಡಿಯಲಿ ಕಟ್ಟಿದ ಉಜ್ವಲ ಶಿಖಿಯೊ 1 ಧರ್ಮಪಥದಿ ಸಂಚರಿಸುವ ಸುಜನರ ಮರ್ಮವ ಭೇಧಿಸೆ ಮಾತಿನಲಿ ಒಮ್ಮೆ ಅವರು ಬಿಸಿರುಸಿರನು ಚಿಮ್ಮಿಸೆ ಒಮ್ಮೆಗೆ ನಿನ್ನಯ ಕುಲಕ್ಷಯ ನಿಜವು 2 ಮತ್ತನಾದ ನಿನಗೆತ್ತಣದೊ ಇನ್ನು ಯುಕ್ತಾಯುಕ್ತ ವಿವೇಚನೆಯು ಭಕ್ತವತ್ಸಲ ಶ್ರೀ ಕರಿಗಿರೀಶನ ಚಿತ್ತ ಸತ್ಯವೆಂದು ತೊಳಿಯೊ ಮೂಢ 3
--------------
ವರಾವಾಣಿರಾಮರಾಯದಾಸರು
ದೂಡು ಧನಮಾನಗರ್ವವ ಅಭಿಮಾನವೆಲ್ಲವ ತರವಲ್ಲವೋ ಪ ಶಮೆದಮೆವೈರಾಗ್ಯ ದೃಢವಾಗಿಹ ಶೃತಿವಿದಿತಾಗಿಹ ಘನ ವಿನಯಾದಿ ಸಾಧನೆ ಪರಮಾರ್ಥಕೆ ಬೇಕು ತಿಳಿ ಜೀವನೇ 1 ಪರಿ ಪ್ರಶ್ನೆಯಾ ಮಾಡು ನಿಜ ಶೋಧವಾ ನೀಡು ಶಿರವನ್ನು ಗುರು ಶಂಕರನ ಪಾದಕೆ 2
--------------
ಶಂಕರಭಟ್ಟ ಅಗ್ನಿಹೋತ್ರಿ
ದೂರ ಮಾಡುವರೇ ಶ್ರೀಶ ಪ ದೂರ ಮಾಡುವರೇದೂರ ಮಾಡುವರೇನೋ ಶ್ರೀಶದಾರಿ ಕಾಣದೆ ಮೊರೆಯನಿಡುವೆಆರು ಕಾಯುವರಿಲ್ಲ ಶ್ರೀಶಸಾರಸಾಕ್ಷ ಸಲಹೆ ಬೇಡುವೇ ಅ.ಪ. ಸಕ್ತಿ ಇಲ್ಲವೋ | ನಿನ್ನೊಳಾಸಕ್ತಿ ಇಲ್ಲವೋ |ಸಕ್ತಿ ನಿನ್ನಲ್ಲಿಲ್ಲದೇಲೇಮುಕ್ತಿ ಇಲ್ಲವೆಂದು ಶೃತಿಯಉಕ್ತಿ ಕೇಳಿ ಕೇಳಿದಾಗ್ಯೂ ವಿ-ರಕ್ತಿ ಪುಟ್ಟಲಿಲ್ಲ ಎನಗೆ ಭಕ್ತಿಮಾರ್ಗ ದೂರವಾಯ್ತೊ 1 ದುಷ್ಟ ವಿಷಯದೀ | ಮನವುಅಟ್ಟಿ ಪೋಗೋದೋ |ಎಷ್ಟು ಪೇಳಿದಾರೂ ಮನವುನೆಟ್ಟಗಾಗೋ ಪರಿಯ ಕಾಣೆಸೃಷ್ಠಿಗೀಶ ಮನವ ಅಭಿಧಸೊಟ್ಟ ಮನವ ಸರಿಯ ಪಡಿಸಿ | ಶ್ರೇಷ್ಠ ನನ್ನ ಮಾಡದ್ಹಾಂಗೆ 2 ಕೈಯ್ಯ ಬಿಡುವರೇ | ದಯಾಳು ವಿಷಯಧುಯ್ಯಲು ಕಳೆಯದೇ |ಪ್ರೇರ್ಯ ಪ್ರೇರಕನಾಗಿ ನೀನುಮಯ್ಯ ಮರೆಸಿ ಧೈರ್ಯಗೆಡಿಸೆಆರ್ಯರಿದನ ಸಯ್ಯೆಂಬೊರೇನೋಅಯ್ಯ ಕೈಯ್ಯ ಬಿಡದೆ ಕಾಯೋ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ದೃಷ್ಟಿ ತಾಕೀತೋ ಬೀದಿ ಮೆಟ್ಟಬ್ಯಾಡವೋಸೃಷ್ಟಿಯ ನಾರಿಯರೆಲ್ಲ ಕಣ್ಣಿಟ್ಟು ಹೀರುವರೋ ನಿನ್ನ ಪ ಪುಟ್ಟ ಪದಕಮಲದಿ ಮೆಟ್ಟಿ ರತುನ ಪಾದುಕಾಇಟ್ಟ ಕಿರುಗೆಜ್ಜೆ ಪೆಂಡ್ಯೆ ದಿಟ್ಟತನದಿಘಟ್ಟಿ ಸಾಸಿರ ಬಾಳುವ ಪಟ್ಟೆಯನೆ ಬಿಗಿದುಟ್ಟು ಮೇಗಿಲ್ಲದ ಬೆಲೆಯಾದ ಪಟ್ಟದುಡುದಾರವಿಟ್ಟು 1 ಸಿರಿಯಿರುವ ಉರದಲ್ಲಿ ಪರಿಮಳ ಗಂಧವ ಪೂಸಿಪರಿಪರಿ ಪದಕ ಮುತ್ತು ಸರ ವೈಜಯಂತಿಕೊರಳ ಕೌಸ್ತುಭದ ಕಾಂತಿ ನಿರುಪಮ ಶ್ರೀವತ್ಸಲಾಂಛನ ಸರಿಗೆ ತಾಳಿ ಪದಕವು ಸೇರಿದ ಮುತ್ತಿನ ಜಲ್ಲೆ 2 ಉಗುರ ಗೋರಂಟಿ ಛಾಯಾ ಚಿಗುರು ಪೋಲುವ ಬೆರಳುಬಗೆಬಗೆ ರತುನಂಗಳ ನಗಗಳನಿಟ್ಟುನಗವನೆತ್ತಿದ ಭುಜಕೆ ಬಿಗಿದ ಬಾಹುಪುರಿ ಕೆಂಪುನಿಗಿನಿಗಿಗುಟ್ಟುವ ಕಾಂತಿ ನಗುತಿದೆ ಬಾಲಭಾನುವ 3 ನಾಸಿಕ ಲಲಾಟಚೆಲುವ ಪುಬ್ಬು ಕಸ್ತೂರಿಯ ತಿಲಕ ಒಪ್ಪುವ ಮುಖದಿ 4 ಕೋಟಿ ಹೊನ್ನು ಬಾಳುವ ಕಿರೀಟವಿಟ್ಟು ಕಡೆಗಣ್ಣನೋಟದಿಂದ ತರುಣೇರ ಪೋಟಿ ಮಾಡುತಚಾಟು ಮಾತುಗಳಾಡುತ ಪೊಟ್ಟನಂತೆ ತಿರುಗಿದರೆನೀಟಲ್ಲವೋ ನಿನಗದು ಪಾಟಲಾಧರನೆ ಕೇಳು 5 ಬಿಂಕದಿಂದ ಎರಡು ಕರದಿ ಶಂಖ ಚಕ್ರವ ಪಿಡಿದುಅಂಕಿತ ವೇಣುನೂದುತ ಶಂಕೆ ಇಲ್ಲದೆ ಮಂಕು ಮಾಡುತ ಬಾಲೇರ ಪಂಕಜಾಕ್ಷ ಸುಳಿದರೆÉಮಂಕುಗಾರನೆಂದು ನಿನ್ನ ಅಂಕಿತ ಮಾಡುವರಲ್ಲೋ 6 ಮಂಗಳಮೂರುತಿ ಮುಂಚೆ ಶೃಂಗಾರಗಳನೆ ಮಾಡಿಪೊಂಗೊಳಲನೂದುತ ಶ್ರೀರಂಗ ಸುಳಿದರೆಹೆಂಗಳ ರಂಭೇರೊಂದಾಗಿ ಕಂಗಳಿಡಲು ಉನ್ನಂತರಂಗವಿಠಲಗಲದಿರೋ ಹಿಂಗದೆ ನರಸಿಂಗನೇ 7
--------------
ಶ್ರೀಪಾದರಾಜರು
ದೇವ ಬೆಳಗಾಯಿತೋ ಎನ್ನಯ ಸೇವಾ ಪ ಸ್ವೀಕರಿಸೋ ಮಹಾನುಭಾವ ದೇವ ಅ.ಪ ಮಧುರ ಗಾನವೇ ಗಂಗಾಸ್ನಾನ ಹೃದಯ ಶುದ್ಧಿಯೇ ಬದರಿಸ್ನಾನ ಬದಿಯಲಿರುವ ಭಕುತರ ಸಹವಾಸವೇ ನದಿನದಗಳವಗಾಹನ ಸ್ನಾನವೋ 1 ಹಾಲಿಗೆ ಕರದಲಿ ಥಾಲಿಯ ಪಿಡಿದು ಕೋಲಾಹಲ ಕಲಭಾಷಣ ಮಾಡುವ ಬಾಲರ ನಗುಮೊಗ ನೋಡಲು ಕೃಷ್ಣನ ಲೀಲೆಯ ಸಂದರ್ಶನಾನಂದವೋ 2 ಮಲ್ಲಿಗೆ ಸಂಪಿಗೆ ಜಾಜಿ ಸೇವಂತಿಗೆ ಕುಸುಮ ರಾಶಿಯ ಚಿಲ್ಲೆ ಪಲ್ಲೆಗಳ ಬಹುರೂಪದಿ ಶ್ರೀ ನಲ್ಲ ನಿನಗೆ ಸಲ್ಲಿಸುವುದೇ ಭಾಗ್ಯವೋ 3 ತಾತನೆಂದು ಮೊರೆಯಿಡುವರು ನೀ ಅನ್ನ ದಾತನೆಂದು ಮೊರೆಯುತಿಹರೋ ತಾತನ ಕಿವಿಗೀ ಮಾತನು ತಿಳಿಸಲು ದೂತನು ನಾ ಕಾದಿಹೆನೊ ಪ್ರಸನ್ನನೇ 4
--------------
ವಿದ್ಯಾಪ್ರಸನ್ನತೀರ್ಥರು
ದೇವತಾಸ್ತುತಿ ಸರ್ವೋತ್ತಮನ ಸ್ತುತಿಗೆ ಸರಿಬೆಸದಕ್ಷರದೆಣಿಕ್ಯಾಕ ಧ್ರುವ ಯತಿ ಫಲ ಗಣ ಪ್ರಾಸವ್ಯಾಕೆ ಸ್ತುತಿಸ್ತವನ ಕೊಂಡಾಡಲಿಕ್ಕೆ ಹಿತದೋರದು ಮಿತಿ ಮಾಡಲಿಕ್ಕೆ ಅತಿ ಶೋಧಿಸಲಿಕ್ಕೆ 1 ಮುತ್ತಿಗೆ ಬುದ್ಯುಶದೆಂದು ಉತ್ತಮರಪೆಕ್ಷರೆಂದೆಂದು ನೆತ್ತಿಲಿಟ್ಟು ಕೊಂಬರು ಬಂದು ಅತಿ ಪ್ರೀತಿಲೆ ನಿಂದು 2 ಸಾರಸ ಸ್ವಾನಂದದ ಸರಳು ಮತಿ ಹೀನರು ಬಲ್ಲರೇನದರೊಳು ಮಾತಿನ ಮರಳು 3 ಬಾಯಲಿ ಧೂಳಿ ಪರಿ ಸ್ತುತಿಯಲಿ 4 ಮಹಿಪತಿ ಸ್ತುತಿನುಡಿದು ಅಪ್ಪವ್ವನುತಾ ಎನ್ನ ಕಡಿಯ ತಪ್ಪನೆ ತುಸು ಹಿಡಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವರ ದೇವ ನಿನ್ನ ಬಲವಲ್ಲದೆ ಮತ್ತೆ ಆವ ಗ್ರಹಗಳಿಂದಲಿ ಉಂಟು ಎನಗೆ ಪ ಇಂದು ಬಲವೊ ಅರ ಅರ್ಕ ಬಲವು ವಂದನ ಗೈದು ಮಂತ್ರಿ ಬಲವೋ ಎನಗೆ ನಿಂದು ಕೊಂಡಾಡುವದು ಕಾವ್ಯ ಬಲವೊ 1 ಆರಾಧನೆ ಮಾಡುವುದು ಅಂಗಾರಕನ ಬಲವೊ ಸಾರಿ ಪೇಳುವದೆನಗೆ ಸೌಮ್ಯ ಬಲವೊ ಕಾರುಣ್ಯ ಕಡುಸೋನೆ ಎನಗೆ ಶೌರಿಬಲವೊ ಹಾರೈಸಿ ಹಿಗ್ಗುವದು ರಾಹು ಬಲವೊ 2 ಕೇಳುವ ಕಥಾಶ್ರವಣ ಕೇತು ಬಲವೊ ಎನಗೆ ವಾಲಗ ಮಾಡುವದು ತಾರಾಬಲವೊ ಸಿರಿ ವಿಜಯವಿಠ್ಠಲ ನಿನ್ನ ಆಳಾಗಿ ಬಾಳುವದು ಸರ್ವಬಲವು 3
--------------
ವಿಜಯದಾಸ
ದೇವಾ ನೀ ಪಾಲಿಪುದೂ ಓ ಹರಿಯೆ ಹರಿಯೆ ಪ ಮದನ ಜನಕ ರಂಗಾ ಪಾವನಾಂಗನೆ ನಿಜಸೇವೆಯೊಳಿರಿಸೆಂದೂ 1 ದಾರುಧಿ ಭೀಕರನ್ಯಾರೊ ವೈಷ್ಣವೋತ್ತಮ ಬಾರೊ ಸಾಧುಶಿಖರನಾರೊ ಸತ್ವರೂಪನು ತೋರೊ 2 ಧರಣೀನಾಗನಗರಿ ಕರುಣವಾರುಧಿಯಾದಾ ಗುರುವೆ ತುಳಶೀರಾಮ ಪರಮಾತ್ಮನೆ ನೀ ಬಾರೊ 3
--------------
ಚನ್ನಪಟ್ಟಣದ ಅಹೋಬಲದಾಸರು
ದೇವಿ ನಿನ್ನಯ ಮುಡಿಮ್ಯಾಲಿದ್ದ ಮಲ್ಲಿಗೆ- ಹೂವ ಕೊಡೆ ನೀ ವರವ ಕೊಡೆ ಪ ಕಟ್ಟ್ಟುವೊ ತೊಟ್ಟ್ಟಿಲ್ಹುಟ್ಟುವೊ ಗಂಡು ಮಕ್ಕಳು ಮುತ್ತೈದೆತನವ ಮುದದಿ ಬೇಡುವೆ ಶ್ರೀ ಮಾಲಕ್ಷ್ಮಿಯೆ ನಮಗೆ ದಯಮಾಡೆ 1 ಅಂದಣ ರಥ ಬಂದ್ಹೋಗುವೋ ಹೆಣ್ಣು ಮಕ್ಕಳು ಬಂಧುಗಳಿಗೆಲ್ಲ ಬಲುಕ್ಷೇಮ ಬಂಧುಗಳಿಗೆಲ್ಲ ಬಲುಕ್ಷೇಮ ಇರುವಂತೆ ಇಂದಿರಾದೇವಿ ದಯಮಾಡೆ 2 ದಂಪತಿ ನಲಿಸುತ ಸಂಪತ್ತು ಸೌಭಾಗ್ಯ ಇಂಥ ಮಂದಿರಕೆ ಬಹುಮಾನ ಇಂಥ ಮಂದಿರಕೆ ಬಹುಮಾನಯಿರುವಂತೆ ಸಂತೋಷದಿ ವರವ ದಯಮಾಡೆ 3 ಅನ್ನ ಗೋವ್ಗಳು ದಿವ್ಯ ಕನ್ಯಾ ಭೂದಾನಹಿ- ರಣ್ಯದಾನಗಳ ಹಿತದಿಂದ ಹಿ- ರಣ್ಯದಾನಗಳ ಹಿತದಿಂದ ಮಾಡುವಂತೆ ಸಂ- ಪನ್ನ ನೀ ವರವ ದಯಮಾಡೆ 4 ಇಂದಿಗೆ ಮನೋಭೀಷ್ಟ ಎಂದೆಂದಿಗೆ ನಿನಪಾದ ಹೊಂದಿರಲೆಂದೂ ಮರೆಯದೆ ಹೊಂದಿರಲೆಂದೂ ಮರೆಯದೆ ಭೀಮೇಶಕೃಷ್ಣನ- ರ್ಧಾಂಗಿ ನೀ ವÀರವ ದಯಮಾಡೆ 5
--------------
ಹರಪನಹಳ್ಳಿಭೀಮವ್ವ
ದೇಶದೊಳಗೀ ಕ್ಷೇತ್ರ ಬಲು ಉತ್ತಮಾ ದಾಸೋಹಂ ಎಂದೆನಲು ಗತಿಗೆ ಪಥವ ಕೊಡುವ ಪ ಹರಿಸರ್ವೋತ್ತಮನೆಂದು ನೆರಪಿದಂಥ ಮುನಿ ವರನ ಶಾಪದಲಿ ಪಾವಕನು ಬಂದು ಪರಮತಪ ಮಾಡಿದನು ವರವಿತ್ತ ಪುಷ್ಕರಣಿ ಎನಿಸುವುದು1 ದಿವಿಜರಿಗೆ ಸೋತು ದಾನವರು ಶುಕ್ರಗೆ ಹೇಳಿ ಶಿವನೊಲಿಸೆ ಅಮೃತವ ಮಾಳ್ಪೆನೆಂದು ಕವಿ ಇಲ್ಲೆ ತಪಮಾಡೆ ಅಂದು ಸುರಧೇನು ವಾ ಸವನ ಕೈಕೊಳಲು ಶ್ರೀರಾಮನಿಂದಲಿಗತಿ 2 ರಾಯ ಋಷಿಗಾಧೇಯು ಬ್ರಹ್ಮತ್ವಗೋಸುಗ ಗಾಯತ್ರಿ ಒಲಿಸಿದನು ಈ ಸಿಲೆಯಲೀ ಆಯು ಉಳ್ಳದರೊಳಗೆ ಇಲ್ಲಿ ಕುಳಿತು ಬಂದು ಗಾಯತ್ರಿ ಮಂತ್ರವನು ಜಪಿಸೆ ನರನು ಮುಕ್ತಾ 3 ಅಗಸ್ತೀಶ್ವರವಿಡಿದು ರಾಮಲಿಂಗ ಪರಿಯಂತ ಬಗೆಬಗೆ ತೀರ್ಥ ಎರಡೊಂದು ಪದ್ಮ ಮಿಗೆ ಷೋಡಶಕೋಟಿ ಅರವತ್ತು ಸಾವಿರ ಸೊಗಸಾಗಿವಿಪ್ಪವಿಲ್ಲಿ ಕಾವೇರಿ ಮಧ್ಯದಲ್ಲಿ 4 ರಾಮನಾಥನ ಪುರವೆಂಬೊ ಪೆಸರೆ ಉಂಟು ವ್ಯೋಮಕೇಶನು ನಾಲ್ಕು ಹೆಸರಿನಿಂದಾ
--------------
ವಿಜಯದಾಸ
ದೇಹ ಭಾವವು ಹೋಗಿ ದೇವನೇ ತಾನಾಗಿದೇಹಗುಣವೆಲ್ಲಿಯದೋ ಮುಕ್ತ ಪ ಗರುಡನ ಮನೆಯೊಳಗೆ ನಾಗರ ಜಾತಿಯಪರಿ ನಡೆವುದೇನೋ ಮುಕ್ತಶರೀರ ಸಹಿತದ ಬ್ರಹ್ಮಾಗಿ ತಾನಿರೆಹರಿವವೆ ಪ್ರಾಣಗಳು ಮುಕ್ತ1 ಉರಿಯದು ಉರಿಯಲು ಉರಿಯಲಿಅರಗದು ಇಹುದೇನೋ ಮುಕ್ತಕರುವಿಟ್ಟೆರಕದಿ ಥಳಥಳ ಹೊಳೆಯದೆಇರುವುದೇ ಈ ಇಂದ್ರಿಯಗಳು ಮುಕ್ತ2 ರವಿಯದು ಬೆಳಗಿರೆ ಕಿರಣ ಕಾಂತಿಯಿಂಗೂಗೆಗಳೆಲ್ಲ ತಿರುಗುವವೋ ಮುಕ್ತಖವ ಖವ ಖವಿಸುತ ಪರವಶವಿರೆವಿವರಿಸೆ ಮನವೆಲ್ಲೊ ಮುಕ್ತ 3 ಈಶನ ಕಣ್ಣುರಿ ಭುಗು ಭುಗು ಭುಗಿಲೆನೆಏಸು ಉಳಿವುದು ಕಾದು ಮುಕ್ತಿಸೂಸುವ ಮುಖದಲಿ ತೃಪ್ತಿಯೆ ತುಂಬಿರೆವಾಸನೆ ಎಲ್ಲಿಹುದೋ ಮುಕ್ತ 4 ಪರಮಾತ್ಮನು ತಾ ಪರಿಪೂರ್ಣನಾನಿರೆಮೆರೆವುದು ಅವಿದ್ಯೆ ಮುಕ್ತಗುರು ಚಿದಾನಂದ ಸಹಜದಿ ತಾನಿರೆಇರುವುದೆ ಜೀವತ್ವ ಮುಕ್ತ 5
--------------
ಚಿದಾನಂದ ಅವಧೂತರು
ದೈವಕೃಪೆ ಇದಲ್ಲಾ ಇವರಿಗೆ ಭಾವ ಶುದ್ಧಿಯಿಲ್ಲಾ ಪ ದೇವತೆಗಳು ಸಂತೋಷಿಸರೆಂದಿಗು ನಾವೆಂಬಹಕಾರದಿ ಮಾಳ್ಪದರಲಿ ಅ.ಪ ಮದುವೆಯ ಪೆಸರಿರಿಸಿ | ದೂರದಿಂ ವಿವಿಧ ಬಂಧುಗಳ ಕರಸಿ ವಧುವರರಿಗವರು ವುಡುಗೊರೆ ವೋದಿಸ- ಲದನೇಯವರಿಗೆ ಹಿಂದಕ್ಕೆ ಕೊಡುವುದು 1 ಕೊಡದಿದ್ದರೆ ಕೋಪಾ | ಕೊಟ್ಟರೆ ಕಡು ಮೂಢರಿಗೆ ಪುಣ್ಯವೆಲ್ಲಿಹುದು ಸಡಗರ ಭ್ರಾಂತಿಯು ಡಂಬವು ಬರಿದೆ 2 ತಂತ್ರಗಳಾಚರಿಸೆ ಯಂತ್ರೋದ್ಧಾರಕ ಗುರುರಾಮವಿಠಲಾ ಸಂತಸಡುವನೆ ಧನವ್ಯಯ ಬರಿದೆ 3
--------------
ಗುರುರಾಮವಿಠಲ
ದೊರೆವನಲ್ಲವೋ ಹರಿ ದೊರೆವನಲ್ಲವೊ ಪ ಪರಮಯೋಗನಿಷ್ಠೆಯಿಂದ ಇರುಳು ಹಗಲು ಸಮಾಧಿಯಲ್ಲಿ ಇರುವ ಮಹಾಯೋಗಿಗಳಿಗೆ ಅರಿಯೆ ಸಾಧ್ಯವೇ ಅ.ಪ ಸಕಲ ದಾನಧರ್ಮಗಳನು ಸರ್ವಕ್ರತುಗಳನ್ನು ಮಾಡೆ ಶಕುತರಾಗಲರಿಯರೆಂದಿಗು ಶಾಙ್ಗಪಾಣಿಯಂ 1 ರಚ್ಚೆಗಿಕ್ಕಿ ಕಾಣಬಹುದೇ ರಾಜೀವಾಕ್ಷನ 2 ಪಾಮರ ತಾನೆಂದು ಸಕಲ ನೇಮನಿಷ್ಠೆಯಿಂದಲವನ ನಾಮ ಸ್ಮರಿಸೆ ಸುಲಭನಹನು ಗುರುರಾಮವಿಠ್ಠಲನು 3
--------------
ಗುರುರಾಮವಿಠಲ
ದ್ರೋಹಿಯೋ ನಾನಿನಗೆ ದ್ರೋಹಿಯೋ ಪ ಪಾಹಿ ಬ್ರಹ್ಮಜವಂಶ ಪಾಪ ಬ್ರಾಹ್ಮಣ ಪ್ರಿಯ ಅ.ಪ ಸ್ವಪ್ನ ಜಾಗ್ರತೆ ನಿದ್ರೆ ಮೋಕ್ಷಾವಸ್ಥೆಯಲ್ಲಿ ತೈಜಸ ವಿಶ್ವ ಅಪ್ಪತುರೀಯನಾಗಿ ದಾತ ನಿನ್ನನ್ನು ಬಿಟ್ಟು ಬೆಪ್ಪನಂದದಿ ನರರ ಯೆಂಜಲ ಬಯಸುವೆ 1 ಬಿಂಬ ಮೂರ್ತಿಯು ನೀನು ಪ್ರತಿ ಬಿಂಬನಾನಿನಗೆ ತುಂಬಿ ಅಂತರ್ಬಹಿ ಮೆರೆವ ವಿಷ್ಣುವೆ ನಿನ್ನ ನಂಬಿದೆ ದೃಢದಿಂದ ಬರಿದೆ ಹಂಬಲಿಸುವೆ ಬೆಂಬಲನಾಗಿದ್ದು ತುಂಬೊ ನಿನ್ನಯ ಭಕ್ತಿ 2 ಸತಿ ಸುತ ಪಿತರಲ್ಲಿ ತಿಳಿಯದೆ ನಿನ್ನಿರವ ಹಿತರವರು ಬರಿದೆಂಬ ಭ್ರಾಂತಿಯ ನೀಗದೆ ಖತಿಯ ಪಡುವೆನು ಭವದಿ ಕುಮತಿಯನಗೆಮುಂದೆ ಗತಿಯೇನು ಜಗದೀಶ ಮರೆತು ನಿನ್ನನು ದೇವ 3 ಕಸವ ರಸವೆಂದು ಬಯಸುವೆ ವಿಷಯವ ರಸವ ವಿಷವೆಂದು ತೊರೆದು ಜೀವಿಸುತಿರ್ಪೆ ಅಸಮವಿಷಣವಿಷ್ಣು ಆತ್ಮಾಖ್ಯಾತನ ನಿನ್ನ ತುಸಸಹ ನೆನೆಯದೆ ಹುಸಿಯ ದಾಸನಾಗಿ 4 ನನ್ನದಲ್ಲದ ಒಡವೆ ನನ್ನದೆಂದು ತಿಳಿವೆ ನಿನ್ನ ಸ್ವಾಮಿತ್ವವ ಮರದು ಮೆರೆಯುತಿರ್ಪೆ ನನ್ನದೇ ಸ್ವಾತಂತ್ರವೆಂದು ತಿಳಿದು ಭವದಿ ಹುಣ್ಣು ತಿಂದೆನು ದೊರೆಯೆ ಕೊಡದೆ ನಿನ್ನದುನಿನಗೆ 5 ವೇದ ವೋದುವ ನಾನು ನಾನೆನೀನೆಂಬುವೆ ಭೇದವ ತಿಳಿಯದೆ ಭಜಿಸುವೆ ಕುವಿದ್ಯೆ ಬಾದರಾಯಣಗುದರ ಭೇದವ ನುಡಿಯುವೆ ಮಧ್ವಮಂದಿರ ಕೃಷ್ಣ ನೀನಿಲ್ಲ ವೆನ್ನುತ6 ಪೂರ್ಣ ಗುಣದವ ನಿನ್ನ ನಿರ್ಗುಣನೆಂಬುವೆನು ಪೂರ್ಣರಲ್ಲದ ಸುರರ ಸಾಟಿ ನಿನಗೆಂಬುವೆನು ಪೂರ್ಣಬೋಧರ ಕರುಣ ಕೊಡಿಸದ್ದಿದರೆಯಿನ್ನು ಜ್ಞಾನ ಮಾರ್ಗವ ಕಾಣೆ ಸ್ವಾಮಿ ಜಗಜ್ಜನಕ 7 ಜನನ ಮರಣ ರಹಿತ ಜನಿಸುವೆ ನಮ್ಮೊಡನೆ ಕ್ಷಣ ಬಿಟ್ಟಗಲದಲೆಮಗೆ ಉಂಡುಣಿಸುತಿಪ್ಪೆ ಅನಿಮಿತ್ತ ಬಂಧುವೆ ಮರೆತು ನಿಮ್ಮುಪಕಾರ ದನುಜರ ಸೇವಿಸುತ ಹಾಳು ಮಾಡಿದೆ ಬಾಳು 8 ನಿರಯ ಭಾಜನ ನಾದೆ ದೂರವಾಯಿತು ಮುಕುತಿ ದಾರಿಕಾಯುವರ್ಯಾರೊ ಧೀರ ಜಯತೀರ್ಥ ವಾಯು ಅಂತರದಿರ್ಪ ನೀರಜಾಕ್ಷನಮ್ಮ ಶ್ರೀ ಕೃಷ್ಣವಿಠಲನೆ 9
--------------
ಕೃಷ್ಣವಿಠಲದಾಸರು