ಒಟ್ಟು 2180 ಕಡೆಗಳಲ್ಲಿ , 120 ದಾಸರು , 1676 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳಮ್ಮ ತಂಗಿ ಕೇಳಮ್ಮ ಪ ಕೇಳಿ ಪುರಾಣದಿ ಪೇಳಿದ ಕೃಷ್ಣನ ಲೀಲೆಯ ಪಾಡುತ ``ಬಾಳಮ್ಮ'' ಅ.ಪ ನಿಷ್ಟೆಯಿಂದಲಿ ಬಲು ಶಿಷ್ಟಳಾಗುತ ದುಷ್ಟರಿಂದ ದೂ``ರಾಗಮ್ಮ'' 1 ಹರಿದಾಸರಪದ ಹರುಷದಿ ಹಾಡುತ ಗುರು ಹಿರಿಯರ ಮನ ``ಕೊಪ್ಪಮ್ಮ'' 2 ಕಾಲ ಕಳೆಯದೆ ಶೀಲಮತಿ ನೀ “ನಾಗಮ್ಮ'' 3 ವಿದ್ಯೆಯ ಕಲಿತು ಬದ್ಧಿವಂತ | ಳಾ | ಗಿದ್ದರೆ ಸುಖ ಶತ “ಸಿದ್ಧಮ್ಮ'' 4 ವಂದಿಸಿ ತುಲಸಿ ವೃಂದಾವನ ಪೂಜಿಸು ಮುಂದೆ ನಿನಗೆ ``ಆನಂದಮ್ಮ'' 5 ಹೀನರ ಬೆರೆಯದೆ ಮೌನವ್ರತದಲಿ | ಜ್ಞಾನಿ ಜನರ ನೀ ``ನರಸಮ್ಮ'' 6 ಮೂಢ ಜನರ ಒಡನಾಡದೆ ಭಕ್ತಿಲಿ ಮಾಡುವ ಸಜ್ಜನರ ``ಸಂಗಮ್ಮ'' 7 ಧರ್ಮದಿಂದ ಸತ್ಕರ್ಮ ಮಾಡುತ ನಿರ್ಮಲಗೊಳಿಸಿ ಸಂತ ``ರಂಗಮ್ಮ'' 8 ಪವನ ಪಿತನ ಕಥಾಶ್ರವಣವೆ ಪುಣ್ಯವು ಭವ ವಿದು ಕತ್ತಲು ``ಕಾಳಮ್ಮಾ'' 9 ಸದನಕೆ ಬಂದಿಹ ಬುಧರಾವರಿಸಲು ಮಂದಬಲು ನಿನಗದ ``ರಿಂದಮ್ಮ'' 10 ಎಂದೆಂದಿಗು ಪರನಿಂದೆಯ ಮಾಡದೆ ಮಂದಿರದಿರುವದೆ ``ಚಂದಮ್ಮ'' 11 ಸಾರಿದ ಜನರಘದೂರಗೈದು ಹರಿ ತೋರುವ ನುಜಗುರು ``ಈರಮ್ಮ'' 12 ಅತ್ತಿಯ ಮನಿಗೆ ಹೆತ್ತವರಿಗೆ ಉತ್ತಮ ಕೀರ್ತಿ ``ತಾರಮ್ಮ'' 13 ಗೋವಿಪ್ರಾಳಿ ಸೇವಿಸುತಿರುವದೆ ಕೋವಿದರಿಗೆ ಬಲು ``ಜೀವಮ್ಮ'' 14 ಭಾವದೊಳಗೆ ಪರದೇವನೆ ಪತಿಯೆಂದು ಪಡಿ ``ಭೋಗಮ್ಮ'' 15 ಭೇದಜ್ಞಾನ ಸಂಪಾದಿಸು ಕ್ಷಮಿಸುವ ಶ್ರೀಧರ ನಿನ್ನಾಪ ``ರಾಧಮ್ಮ'' 16 ಕೋಪದಿ ಪರರಿಗೆ ತಾಪವ ಬಡಿಸಲು ಲೇಪವಾಗುವದು ``ಪಾಪಮ್ಮ'' 17 ಇಂಗಡಲಾತ್ಮಜನಂಘ್ರಿ ಸರೋಜಕೆ ಸತಿ ``ತುಂಗಮ್ಮ'' 18 ದಾಸಜನರ ಸಹವಾಸದೊಳಿರುವದೆ ಕಾಶಿಗಿಂತ ವಿ``ಶೇಷಮ್ಮ'' 19 ಕಲಿಯುಗದಲಿ ಸಿರಿನಿಲಯನ ನೆನೆದರೆ ಸುಲಭ ಮುಕ್ತಿ ತಿಳಿ ``ಕಂದಮ್ಮ'' 20 ಪತಿಯು ಸದ್ಗತಿಗೆ ಗತಿ ಎಂದರಿತಹ ಮತಿಯುತ ಸತಿಯೆ ``ಯವನಮ್ಮ'' 21 ಮಧ್ವಸಿದ್ಧಾಂತದ ಪದ್ಧತಿ ತಪ್ಪದೆ ಇದ್ದರೆ ಹರಿಗತಿ ``ಮುದ್ದಮ್ಮ'' 22 ಸೋಗಿಗೆ ನೀ ಮರುಳಾಗಿ ನಡೆದರೆ ಯೋಗಿ ಜನರ ಮನ ``ಕಲ್ಲಮ್ಮ'' 23 ಶೀಲೆ ಗುಣದಿ ಪಾಂಚಾಲೆಯು ಎಲ್ಲ ಬಾಲೆಯರೊಳು ``ಮೇಲಮ್ಮ'' 24 ನೇಮದಿ ನಡೆದರೆ ಪ್ರೇಮದಿ ಸಲಹುವ ಶಾಮಸುಂದರನು ``ಸತ್ಯಮ್ಮ'' 25
--------------
ಶಾಮಸುಂದರ ವಿಠಲ
ಕೇಳಿದೆ ಏನೇ ಕೊಳಲ ದನಿಯ ಬಾಳಿಗೆ ಅಮೃತವ ಬೀರುವ ಸವಿಯ ಪ ಬೃಂದಾವನದಲಿ ನಂದಯಶೋದ ಕಂದನು ಮುರಳಿಯನೂದುತಿರೆ ಸುಂದರಿಯರು ಆನಂದದಿ ನರ್ತಿಸಿ ಇಂದಿರೆಯರಸನ ಹೊಗಳುವರು 1 ಕಿರುಗೆಜ್ಜೆಯ ದನಿ ಕಿಣಿಕಿಣಿಸುತಿರೆ ಕರದ ಕಂಕಣಬಳೆ ಗಣಗಣರೆನಲು ಚರಣದ ಕಡಗ ಝಣ್ ಝಣಿ ಝಣಿರೆನುತಿರೆ ಪರಮ ಸಂತೋಷದಲಿ ಹರಿಯರುಳುತಿರೆ 2 ಮರುಗ ಮಲ್ಲಿಗೆ ಪಾದರಿ ಸುಮ ಪರಿಮಳ ಭರಿತ ತಂಬೆಲರು ಪರಿಚರಿಸುತಿರೆ ಪರಮಾನಂದವೆ ಪುರುಷನಾಗಿರುವ ಮಾಂ ಗಿರಿಪತಿಯೊಲವನು ಪಡೆಯುವ ಗೆಳತಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೇಳು ಕೇಳು ಕೇಳು ಮನವೇ ನಿನ್ನ ಸ್ವಹಿತವನು ಪ ಕೇಳು ಕೇಳು ಕೇಳು ಮನವೇ ನಿನ್ನ ಸ್ವಹಿತವನು | ಬಾಳು ಬಾಳು ಬಾಳು ಗಳದು ಭವದ ಬೆಜ್ಜರವನು 1 ನೀಗು ನೀಗು ನೀಗು ನೀ ದುಸ್ಸಂಗಾ ಜಗದೊಳಗೆ | ಬೇಗ ಬೇಗ ಬೇಗ ಹೊಕ್ಕು ಶರಣಾಗು ಗುರುವಿಗೆ 2 ಬಾಗು ಬಾಗು ಬಾಗು ಗರ್ವ ತ್ಯಜಿಸಿ ಜಗದೊಳಗೆ | ಸಾಗು ಸಾಗು ಸಾಗು ಸಿಕ್ಕಿದೆ ಆರು ಅರಿಗಳಿಗೆ 3 ದಾರಿ ದಾರಿ ದಾರಿ ವಿಡಿದು ನಡೆಂದ ಹಿರಿಯರಾ | ಸೇರಿ ಸೇರಿ ಸೇರಿ ಸಂತ ನೆರಿಯ ನಿರಂತರಾ 4 ನಂಬಿ ನಂಬಿ ನಂಬಿ ನಂದನಸ್ವಾಮಿ ಮಹಿಪತಿಯಾ| ಇಂಬು ಇಂಬು ಪಡೆದರಹುದು ನಿಜಗತಿಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಕೇಳೆನ್ನ ಚಿನ್ನಾ ಮನವೇ ಪ ಮನವೇ ಮೈಮರೆವದು ಗುಣವೇ | ಮತ್ತು ಬಹ ಈ ದಿನವೇ | ವ್ಯರ್ಥದ ಗುಣವಾದನುವೇ 1 ಭ್ರಾಂತರ ಪರಿನಾನಾ | ಮಾ | ರ್ಗಾಂತರಾ ಸೇರಿ ಹೋಗದೆ | ಸಿಂತರ ಬ್ಯಾಗ ಕೂಡಲೋ ಸಂತರಾ 2 ಕುದಿವ ತಾಪವಳಿದು ಮೃದು | ವಾದಾ ಮಹಿಪತಿ ಪದವಾ | ಪಡಿ ಮುದವಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೈಬಿಡದೆ ಕಾಪಾಡು ಕರುಣಾಳು ಹರಿಯೇ ನಾಬಿಡದೆ ನಿನ್ನಡಿಯ ಮೊರೆಹೊಕ್ಕೆ ದೊರೆಯೇ ಪ ಎಲ್ಲಿನೋಡಿದರಲ್ಲಿ ನಿನ್ನ ಮೂರ್ತಿಯ ತೋರಿ ಎಲ್ಲಕಾಲಗಳೊಳಗು ಭಜನೆ ಬಲಿಸಿ ಉಲ್ಲಸದಿ ಕಾರ್ಯಗಳೊಳೆಲ್ಲ ಸೇವೆಯಗೈಸಿ ನಿಲ್ಲದೆಯ ನೀನಂತ್ಯಕೊದಗು ಸಂತೈಸಿ1 ಧನ್ಯ ಭಕ್ತರೊಳಾಡಿ ಚನ್ನಚರಿತೆಯ ಪಾಡಿ ಉನ್ನತೋತ್ಸವಗಳನು ನೋಡಿ ನೋಡಿ ಯನ್ನ ಮನಕಿನ್ನೊಂದ ತೋರಿಸದೆಯೆ ಸಂ ಪನ್ನ ಪದಯುಗಪೂಜೆ ಕೊಡು ಮುನ್ನ 2 ಘನಜಾಜಿ ಪಟ್ಟಣವಾಸ ಇನಕರ ಪ್ರಭುಶ್ರೀಶ ವನಜಸಂಭವನಯ್ಯ ವರದ ಜೀಯ ಅನುನಯದಿ ಬೇಡುವೆನು ನಾನಂಬೆನನ್ಯರನು ತನಯನೊಳು ಕನಿಕರಿಸು ನಿನ್ನಡಿಯೊಳಿರಿಸು 3
--------------
ಶಾಮಶರ್ಮರು
ಕೈಲಾಸದ ಹುಲಿಯೇ ಕಲಿಕಲುಶವ ಕಳೆಯೊಕಾಳಿಯಾಗಿಳಿಯೇ ಪ ಕಾಲಕಾಲಕೆ ನಿನ್ನ ಕಾಲಿಗೆರಗುವೆ ಕರುಣಾಲಯತೋರೋ ಕರುಣಾಳುಗಳರಸನೆ ಅ.ಪ. ತುಳಸಿಗೆ ಕಳಸೀದರೆನ್ನ ತುಳಸಿಯ ತಾರದೆ ನಾ ಹೊಲಸಿನೊಳಳುತಿರೆ ಘಳಿಗೆಯಾ ತಾಳದೆ ಘಳಿಸಿದೆ ತುಳಸಿಯಾ ಕಳಸವ ಕಳ್ಳ ನಾ ಗೆಳೆಯನೆ ಕಳವಳಿಗಳು ಕಳುಹಿಸಿ ಕಾಳ್ವಗೈಸುವ ಕಾಳಿರಮಣ ನಿನ್ನ ಧೂಳಿ ಧರಿಸುವಂತೆ ಖೂಳನಾ ಮಾಡದೆ 1 ಚಲುವ ಚನ್ನಿಗ ನೀನಹುದೋ ಚಂಚಲ ನಯನಾ ಕರುಣಾ ಚಲ ನೀನಹುದೊ ಚಾಲೂವರಿಯಲು ಎನಗೆ ಕಾಲವು ತಿಳಿಯದು ಶೂಲಿ ಚಂಚಲ ಎನ್ನ ಸಂಚಿತಗಾಮಿ ವಂಚಿಸದೆ ಕಾಯ್ವುದೊ ಇದೇ ಕೊಡುವುದೋಕಂಬು ಕಂಧರಮಣಿ ಹಂಚುವುಗಾಣದೆ ಚಂಚಲೂ ನಯನದಿ ಸುರವಂಚಕನಾಗಿ ಪ್ರಪಂಚದಿ ಶರಪಂಚನ ಚಿಂತಿಸಿಸಂತೆಯಾನರುಹಿದ 2 ಅಕಳಂಕ ಮಹಿಮನೆ ದೋಷದೂರ ನೀ ಗುಣವಂತನೇ ಸಹಸ ಬಲವಂತನೆ ಕಾಂತಿಯ ತಂದನೆ ಕಾಂತಿಯುಳ್ಳ ಕಂತಿಯು ಧರಿಸಿದ ದಿಗಂತ ನಿಷ್ಕಿಂಜನರ ಕಾಂತನೆ ಭುಜಬಲ ಮಹಬಲವಂತನೆ ಕುರುಕಂತನೆ ಅಂತು ಇಂತು ತಂತು ಬಿಡದೆ ನಿಜ ಕುಂತಿಯ ಮಗನನ ಕಂತೆಯುಪೂಜಿಪ ಮಂತ್ರಿಯೆನಿಸಿ ಸುಖತಂತ್ರ ಪಠಿಸಿ ಶೃತಿಪಂಶವಿಂಶತಿ ದ್ವಿಪಿಂಚಕಲ್ಪವ ಮಿಂಚಿನಂದದಿ ತಪವಗೈದು ಪಂಚಪದವಿಯ ಪೊ0ದುಕೊಂಡು ಪಂಚ ಬಾಣನ ಪಿತನು ಯನಿಸಿದ ಮಾಂಗಲ್ಯ ಲಕುಮಿಯ ರಮಣ ಯೆನ ತಂದೆವರದಗೋಪಾಲವಿಠ್ಠಲನ ಆತಂಕವಿಲ್ಲದೇ ಚಿಂತಿಸುವ ನಾರಾಯಣಾಚಾರ್ಯನೇ3
--------------
ತಂದೆವರದಗೋಪಾಲವಿಠಲರು
ಕೈಲಾಸವಾಸ ಗೌರೀಶ ಈಶ ಪ ತೈಲ ಧಾರೆಯಂತೆ ಮನಸುಕೊಡು ಹರಿಯಲ್ಲಿ ಶಂಭೋ ಅ ಅಹೋ ರಾತ್ರಿಯಲಿ ನಾನು ಅನುಚರಾಗ್ರಣಿಯಾಗಿ ಮಹಿಯೊಳಗೆ ಚರಿಸಿದೆನೊ ಮಹದೇವನೆ ಅಹಿಭೂಷಣನೆ ಎನ್ನವಗುಣಗಳೆಣಿಸದಲೆ ವಿಹಿತ ಧರ್ಮದಿ ಕೊಡು ವಿಷ್ಣುಭಕುತಿಯ ಶಂಭೋ 1 ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲ ಅನಲಾಕ್ಷ ನಿನ್ನ ಪ್ರೇರಣೆಯಲ್ಲದೆ ದನುಜ ಗಜಮದ ಹರಿಯೆ ದಂಡ ಪ್ರಣಾಮವ ಮಾಳ್ಪೆ ಮಣಿಸು ಈ ಮನವ ಸಜ್ಜನರ ಚರಣದಿ ಶಂಭೋ2 ಭಾಗೀರಥೀಧರನೆ ಭಯವ ಪರಿಹರಿಸೈಯ ಲೇ ಸಾಗಿ ಒಲಿದು ಸಂತತ ಶರ್ವದೇವ ಭಾಗವತ ಜನಪ್ರೀಯ ವಿಜಯವಿಠ್ಠಲನಂಘ್ರಿ ಜಾಗುಮಾಡದೆ ಭಜಿಪ ಭಾಗ್ಯವನು ಕೊಡೋ ಶಂಭೋ3
--------------
ವಿಜಯದಾಸ
ಕೈವಲ್ಯ ಮನದ ವೈಶಾಲ್ಯ ಧ್ರುವ ಅದ್ವೈತಾಗಮ್ಯಗೋಚರನದ್ವಿತೀಯ ಅಧ್ಯಾತ್ಮ ವಿದ್ಯದಾಗರ ಸಿದ್ಧರಪ್ರಿಯ ಸದ್ಗತಿ ಸುಖಸಾಗರ ಸದ್ಗುಣಾಲಯ ಬೋಧ ಪೂರ್ಣೋದಯ 1 ಆದಿತ್ಯಕೋಟಿ ಪ್ರಕಾಶ ಸದೋದಿತ ಸಾಧು ಹೃದಯನಿವಾಸ ಭೇದಾತೀತ ಶುದ್ಧಾತ್ಮ ಸುಖಸಂತೋಷ ಸದಾ ಸುಶಾಂತ ಸದಮಲಾನಂದಘೋಷ ಆದಿದೇವ ಸಾಕ್ಷಾತ2 ಕೈವಲ್ಯನಿಧಿ ನಿಶ್ಚಯ ದೇವಾಧಿದೇವ ಅಕ್ಷಯ ಶ್ರೀವಾಸುದೇವ ಭವಾತ್ಮ ಭಜಕಹೃದಯ ಸರ್ವರೊಳಿ ಹ್ಯ ಬಾಹ್ಯಾಂತ್ರ ಭಾಸುತಿಹ್ಯ ಮಹಿಪತಿ ಮನದೈವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಟ್ಟರೂ ಸರಿ ನೀನು ಕೊಡದಿದ್ದರೂ ಸರಿ ಕೆಟ್ಟ ಮನುಜರ ಕಾಲಕಟ್ಟರು ನಿನ್ನ ಭಕ್ತರು ನೀ ಕೊಟ್ಟುದೆ ಎಮಗಧಿಕವೆಂದು ತಿಳಿದು ನೀ ಕೊಟ್ಟಷ್ಟಕ್ಕೆ ಸಂತಸದಿ ಸ್ವೀಕರಿಸುವರು ಕಾಲ ಏಳು ಬೆಟ್ಟದೊಡೆಯ ವೆಂಕಟೇಶ
--------------
ಸರಸ್ವತಿ ಬಾಯಿ
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಕೊಂಡಜ್ಜಿ ಶ್ರೀ ಜನಾರ್ದನ ಸ್ವಾಮಿ ಸ್ತೋತ್ರ ಎಂಥಾ ಸುಂದರನೊ ಶ್ರೀಕಾಂತನೂ ||ಅ|| ಸಂತರ ಮನೋರಥ ಸಂತತ ಪಾಲಿಸಿಪಂಥಾವ ಗೆಲಿಪ ಮಹಾಂತನೋ - ಶ್ರೀಕಾಂತನೂ ಅ.ಪ. ಮಾನಿನೀಯಳ ಬಿಟ್ಟು | ಮೌನಿಯಂದದಿ ನೀನುಕಾನನವನೆ ಸೇರಿ ನೆಲೆಸೀರ್ಪುದೂ | ಮುನಿಜನ ವಂದ್ಯಾ 1 ತೊಂಡ ಜನರು ನಿನ್ನ | ಬಂಡುಣಿಯಂದದಿಪುಂಡು ಮಾಡುವರೆಂದು ಬಂದೆಯಾ | ಪುಂಡರಿಕಾಕ್ಷಾ 2 ಹಿಂಡು ಭಕ್ತರು ತಮ್ಮ | ದಿಂಡು ಮಂಡಿಪರೆಂದು ಕೊಂಡಜ್ಜಿಯಲಿ ನೆಲಿಸೀದ್ಯಾ | ಪಾಂಡವ ಪ್ರೀಯಾ 3 ವೇಲಾಪುರಿಗೆ ಪೋಗ | ಲೊಲ್ಲೆನೆಂದೆನುತಲಿಇಲ್ಲೇ ನೆಲಸಿ ಪೂಜೆಗೊಂಬುದು ಫಾಲಾಕ್ಷ ಪ್ರಿಯನೇ 4 ಎಲ್ಲಿಪೋದರೂ ಬಿಡ | ಲೊಲ್ಲರೂ ನಿನ್ನ ಜನಸಲ್ಲಿಸೆನ್ನಯ ಮನೋಭೀಷ್ಟವ | ಹೇ ಜನಾರ್ಧನಾ 5 ಆರು ಕಾಯುವರಿಲ್ಲ | ಸಾರಿದೆ ತವ ಚರಣಪೋರನಾಮಯ ಹರಿಸಯ್ಯಾ | ನಾರದ ವಂದ್ಯಾ 6 ಗುರುಗಳಂತರ ಗುರು | ಗೋವಿಂದ ವಿಠಲನೆಪರಿಪರಿ ನಿನ ಕೀರ್ತಿ ನುಡಿಸಯ್ಯಾ | ಸುರವರ ವಂದ್ಯಾ7
--------------
ಗುರುಗೋವಿಂದವಿಠಲರು
ಕೊಂಡಾಡಲಳವೆ ನಿನ್ನಯ ಕೀರ್ತಿ ಭೂ- ಮಂಡಲದೊಳು ಹಯಗ್ರೀವಮೂರ್ತಿ ಪ. ವೇದಂಗಳ ಜಲದಿಂದ ತಂದೆ ನೀ ಪೋದ ಗಿರಿಯ ಬೆನ್ನೊಳಾಂತು ನಿಂದೆ ಮೇದಿನಿಯ ಕದ್ದೊಯ್ದನ ಕೊಂದೆ ಸಂ- ವಾದದಿಂದ ಕಂಬದಿಂದಲಿ ಬಂದೆ 1 ಚರಣಾಗ್ರದಲಿ ನದಿಯನು ಪೆತ್ತೆ ತೀಕ್ಷ್ಣ ಪರಶು ಪಿಡಿದು ಬಾಹುಜರ ಕಿತ್ತೆ ನೆರೆನಂಬಿದಗೆ ಸ್ಥಿರಪಟ್ಟವನಿತ್ತೆ ದೊಡ್ಡ ದುರುಳಕಾಳಿಂಗನ ಶಿರದಿ ನಿಂತೆ 2 ಪರವ್ರತೆಯರ ಮಾನಭೇದನ ಚತುರ ತುರಗವೇರಿ ನಲಿವನ ಕ್ಷಿತಿಯೊಳುತ್ತಮ ವಾದಿರಾಜನ ಸ್ವಾಮಿ ಸತತ ರಕ್ಷಿಪ ಶ್ರೀ ಹಯವದನ 3
--------------
ವಾದಿರಾಜ
ಕೊಡಿಸೆ ಭಕ್ತರ ಒಡಂಬಡಿಸೆ ಮೊಲೆಯುಣ್ಣಿಸಿ ತೊಟ್ಟಿಲೊಳ್ ಮಾಯೆ ನೀನೊಬ್ಬಳೆ ತಾಯೆ ಭಕ್ತರ ಸಂತತ ಕಾಯೆ ಶಾಂತೇಶ್ವರಿ ಮಾಹಾಮಾಯೆ ನಾನಿನ್ನ 1 ಸಪ್ತಸ್ವರ ಭೇದವ ತಿಳಿಸಿದ್ಯಾಕೆ ನೀನು ಪೇಳುವ ನುಡಿ ಪುಸಿಯಲ್ಲ ನಾನಿನ್ನ 2 ವರಕೊಲ್ಲಾಪುರದ ಶ್ರೀ ದುರ್ಗಾಂಬಾ ನಾನಿನ್ನ ಪಾದದ ಸ್ಮರಣೆ ಬಿಡೆನು ಶ್ರೀ ಮೂಕಾಂಬಾ ಅಡಿಗಡಿಗೆ ನಾ ಶ್ರೀ ಮೂಕಾಂಬೆ ನಾನಿನ್ನ 3
--------------
ಭಟಕಳ ಅಪ್ಪಯ್ಯ