ಒಟ್ಟು 1882 ಕಡೆಗಳಲ್ಲಿ , 110 ದಾಸರು , 1394 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿಳಿದು ನೋಡಿ ತನುವಿನೊಳು ತಮ್ಮ ನಿಜಖೂನ ಸುಳುಹು ದೋರಿಕುಡುವ ನೋಡಿ ನಿಜಾನಂದ ಘನ ಧ್ರುವ ತಮ್ಮ ಶುದ್ಧಿ ತಮಗಿಲ್ಲವೊ ಹೆಮ್ಮೆ ಬಹಳ ಘಮ್ಮ ಆದರೆ ಎಲ್ಲ ನೋಡಿ ಹೊಕ್ಕು ಮೃಗಜಲ ನಮ್ಮ ನಿಮ್ಮದೆಂದು ಹೊಡೆದಾಡಿ ಬಿತ್ತು ಬೀಳ ಸಮ್ಯಗ್ ಜ್ಞಾನದಿಂದ ತಿಳಿದವನೆ ವಿರಳ 1 ತನ್ನ ತಾ ತಿಳಿದವಗೇನು ಭಿನ್ನಭೇದವಿಲ್ಲ ಉನ್ಮನವಾಗಿ ಪೂರ್ಣ ತಿಳಿದವನೆ ಬಲ್ಲ ಧನ್ಯವಾದ ಮಹಿಮರಿನ್ನು ಮನಿಮನಿಗೆ ಇಲ್ಲ ಕಣ್ಣಾರೆ ಕಾಣುತಿಹ್ಯ ಗುಪ್ತಗುಹ್ಯವೆಲ್ಲ 2 ತಿಳುಹದೋರಿಕೊಟ್ಟ ಗುರು ಎನ್ನೊಳÀಗೆ ಪೂರ್ಣ ಹೊಳೆಹುತಿಹ್ಯಾನಂದ ಘನಸದ್ಗುರು ಪೂರ್ಣ ಥಳಥಳಿಸುತಿಹದು ಸದ್ಗತಿ ಸಾಧನ ಕಳೆದ ಮಹಿಪತಿ ನೋಡಿ ಜನನ ಮರಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯ ಬರದೆಲೆ ಮನವೆ, ತೀರ್ಥ ಯಾತ್ರೆಯ ಫಲವು ಪ ಸುಲಭದಲಿ ಸದ್ಗತಿಯ ಸೂರೆಗೊಂಬುವರಿಗಲ್ಲದೆ ಅ ನೂರೆಂಟು ತಿರುಪತಿಯ ಯಾತ್ರೆಯನು ನಾನೊಲ್ಲೆವಾರದೊಂದ್ಹೊತ್ತು ಉಪವಾಸವನು ನಾನೊಲ್ಲೆಸಾರ ರೇಣುವೆಯುಂಡು ಕಡೆಯ ಬಾಗಿಲ ಕಾಯ್ವನೀರ ಗೌಡಿಯ ಮಗನ ಮಗನ ಮಗನೆನಿಸೆನ್ನ1 ಪಂಚಾನ್ನ ಪರಮಾನ್ನವಾವುದನು ನಾನೊಲ್ಲೆಚಂಚಲಗೊಳಿಸುವ ಭೋಗ ಭಾಗ್ಯವ ನಾನೊಲ್ಲೆಹಿಂಚದೆ ದಾಸೋಹ ಮಾಳ್ಪವರ ಮನೆಯ ಕಾಯ್ವಉಂಚ ಗೌಡಿಯ ಮಗನ ಮಗನ ಮಗನೆನಿಸೆನ್ನ2 ಪಟ್ಟಾವಳಿ ದುಕೂಲವನು ನಾನೊಲ್ಲೆಪಟ್ಟೆ ನಾಮದ ಬರಿಯ ಪ್ರದರ್ಶನ ನಾನೊಲ್ಲೆಸೃಷ್ಟಿಯೊಳು ನಿನ್ನ ಭಜಿಪ ಭಕ್ತರ ಮನೆ ಕಾಯ್ವಮುಟ್ಟುಗೌಡಿಯ ಮಗನ ಮಗನ ಮಗನೆನಿಸೆನ್ನ 3 ಮುತ್ತಿನಾಭರಣ ತಾಳಿ ಪದಕವ ನಾನೊಲ್ಲೆಸತ್ತಿಗೆಯ ನೆರಳಿನಲಿ ಸಾಗುವುದ ನಾನೊಲ್ಲೆನಿತ್ಯ ನಿನ್ನ ನೆನೆವರ ಮನೆಯ ಬಾಗಿಲ ಕಾಯ್ವತೊತ್ತುಗೌಡಿಯ ಮಗನ ಮಗನ ಮಗನೆನಿಸೆನ್ನ 4 ಆಶೆ ಪಾಶಗಳೆಂಬ ಜಂಜಾಟ ನಾನೊಲ್ಲೆದೇಶಾನುದೇಶಗಳ ತಿರುಗಾಟ ನಾನೊಲ್ಲೆಶ್ರೀಶಾದಿಕೇಶವನ ಭಜಿಪರ ಮನೆಯ ಕಾಯ್ವಕಸಗೌಡಿಯ ಮಗನ ಮಗನ ಮಗನೆನಿಸೆನ್ನ 5
--------------
ಕನಕದಾಸ
ತಿಳಿಯೊ ಮನವೆ ನಿಜವಸ್ತು ಖೂನ ಅಳಿಯೊ ದೇಹ ನಾನೆಂಬುವಭಿಮಾನ ಹೊಳಿಯೊ ಸದ್ಗುರು ಪಾದದಲಿ ನೀ ಪೂರ್ಣ 1 ಹುಟ್ಟಿ ಬಂದೇನು ಪುಣ್ಯ ಪುರುಷಾರ್ಥ ಘಟ್ಟಿಗೊಳ್ಳದೆ ನಿಜ ಸುಹಿತಾರ್ಥ ನಿಷ್ಠೆ ಹಿಡಿಯದನ ಜನ್ಮ ವ್ಯರ್ಥ ಮುಟ್ಟಿ ತೋರುವ ಶ್ರೀ ಗುರು ಪರಮಾರ್ಥ 2 ಗುರ್ತು ತಿಳಿಯೊ ಜನುಮಕೆ ಬಂದ ಮ್ಯಾಲೆ ಮರೆತು ಮೈಮರೆವದೇನು ತಾ ಮೇಲೆ ಅರ್ತು ನಡೆವದು ನಿನಗೇನು ಸೋಲು ಕರ್ತು ಸದ್ಗುರು ಸ್ಮರಿಸೋ ಆವಾಗಲೂ 3 ಎಲ್ಲಾರಂಥ ತಾನಲ್ಲೊ ಗುರುನಾಥ ಸುಲ್ಲಭದಿಂದ ದೋರುವ ಸುಪಥ ಅಲ್ಲೆ ದೋರ್ವದು ಸಕಲ ಹಿತಾರ್ಥ ಬಲ್ಲ ಮಹಿಮರೆ ತಿಳಿವರೀ ಮಾತ 4 ಭಾಸುತದೆ ಭಾಸ್ಕರ ಕೋಟಿ ಕಿರಣ ಲೇಸಾಗಿ ಹೋಗೊ ಗುರುವಿಗೆ ಶರಣ ದಾಸಮಹಿಪತಿ ಸ್ವಾಮಿ ದೀನೋದ್ಧಾರಣ ಭಾಸಿ ಪಾಲಿಸುವ ತಾ ಸುಕರಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯೊ ಮನವೆ ಯುಕ್ತಿಯ ಕಳಿಯೋ ನೀ ವಿಷಯಾಸಕ್ತಿಯ ಬಲಿಯೊ ಭಕ್ತಿಯ ಧ್ರುವ ಪಥ ಹೊಂದು ಈಗ ಹಣ್ಣು ಶರೀರಾಗದಾಗ ನಿನ್ನೊಳು ತಿಳಿ ಬ್ಯಾಗ 1 ಬಲವು ದೇಹಲಿದ್ದಾಗ ಬಲಿಯೊ ಭಾವ ಭಕ್ತಿಲೀಗ ನೆಲೆ ನಿಭಗೊಂಬುವ್ಹಾಂಗೆ ಸಲೆ ಮರೆಹೊಗು ಹೀಂಗ 2 ಬಂದ ಕೈಯಲಿ ಬ್ಯಾಗ ಹೊಂದು ಸದ್ಗುರು ಪಾದೀಗ ಎಂದೆಂದಗಲದ್ಹಾಂಗ ಸಂಧಿಸು ಘನ ಹೀಂಗ 3 ಸೋಹ್ಯದೋರುವ ಕೈಯ ಧ್ಯಾಯಿಸೊ ನೀ ಶ್ರೀಹರಿಯ ನ್ಯಾಯ ನಿನಗೆ ನಿಶ್ಚಯ ಇಹಪರಾಶ್ರಯ 4 ಗುರುಪಾದ ಕಂಡಾಕ್ಷಣ ಎರಗೊ ಮಹಿಪತಿ ಪೂರ್ಣ ಹರಿಯೊ ಅಹಂಭಾವಗುಣ ಬೆರಿಯೊ ನಿರ್ಗುಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯೋ ಮನವೇ ನಿಜ ಘನವಾ | ಕಳಿಯೋ ಹಮ್ಮಿನ ಅವಗುಣವಾ ಪ ಸದ್ಗುರು ಶರಣವ ನೀ ಬ್ಯಾಗ | ಸದ್ಗುಣದಲಿಹುದು ಜಗದೊಳಗ | ತದ್ಗತ ಬೋಧವರೆದು ಈಗ | ಸದ್ಗತಿ ಕಾಣಿಸುವದು ನಿನಗ 1 ಪಿಡಿಯದೆ ನಾನಾ ಬಯಕೆಯನು | ತಡೆಯದೆ ಬಿಡು ಕುಜನಾಶ್ರಯನು | ಇಡು ಗುರು ಪದ ಭಕುತಿಯನು | ಪಡೆ ದೃಷ್ಟಿಯ ಘನ ಸಮತೆಯನು 2 ಬ್ಯಾರೆ ಬ್ಯಾರೆ ನಗದಾಕಾರಾ | ತೋರಿದರೇನದು ಬಂಗಾರಾ | ಈ ರೀತಿ ಮಾಯದ ವ್ಯವಹಾರಾ | ಈರೇಳು ಜಗ ಚಿನ್ಮಯ ಸಾರಾ 3 ಗೋಡಿಯಿಂದಲಿ ಚಿತ್ರಗಳೆಲ್ಲಾ | ರೂಢಿಸಿ ದೋರಿತು ಜನರೆಲ್ಲಾ | ಆಡಲು ಯರಡಕ ಹೊರತಿಲ್ಲಾÀ | ನೋಡಲಾಯಿತು ತಾನೇಯಲ್ಲಾ 4 ಹಾಲುಕ್ಕಿದ ಸೋರೆಯ ಪರಿಯಾ | ಜ್ಯಾಳಿಸಬ್ಯಾಡಾ ಯುವ ಬರಿಯಾ | ಕೇಳಿಕೋ ಮಹಿಪತಿ ಸುತ ಧೋರಿಯಾ | ಬಾಳು ಗಳೆದು ದುಸ್ತರಿಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತೀರ್ಥವು ಬೇಡಾ ಕ್ಷೇತ್ರವು ಬೇಡಾ ಜಪ ತಪ ಯೋಗವು ಬೇಡಾ ಪ ಪರ ಉಪಕಾರ ಶಾಸ್ತ್ರ ಪುರಾಣಗಳು ಬೇಡಾ | ಸ್ವಾಮಿ ಸದ್ಗುರು ಭವತಾರಕನ ಭಜಕರ ಪಾದವ ನೀ ಬಿಡಬೇಡಾ 1 ಸತ್ಯವು ಸಂಸಾರವು ಜಗವಿದು ಮಾಡೆಂಬರು ನೋಡೀಜನರು | ಮಿಥ್ಯವು ಸರ್ವವು ಜಗದೀಶನನು ತಿಳಿಯೆಂಬುವರಾ ಸಜ್ಜನರು || ಜಾಗ್ರದಿ ಸ್ವಪ್ನದಿ ಬಳಲುತ ನಲಿವುತ ಚರಿಸುವರಾ ಕಾರ್ಮಿಕರು | ತುರ್ಯಾವಸ್ಥೆಯೋಳ್ ಮರೆದು ತಮ್ಮನು ಇರುತಿಹರಾ ಸಾಧುವರು2 ಸಾರ ನಿವೃತ್ತಿಯ ಅರಿವುದೆ ಜೀವನ್ಮುಕ್ತಿ || ಇದರ ಹಂಚಿಕೆ ಮಾಡುತ್ತಿಹುದೇ ಅದುವೆ ಶಾಸ್ತ್ರದ ಯುಕುತೀ | ಸದಮಲ ಬೋಧಾನಂದವೆ ಬಲಿದರೆ ನಿಜವೇ ತಾ ಅವ್ಯಕ್ತಿ 3 ಅನುದಿನ ಮೂರ್ತಿ ಭವತಾರಕ ಭಜಕರ ಕೇಳೋ ನಿನ್ನ ಖೂನಾ 4 ಸಂಸಾರವ ಸದ್ಧರ್ಮದಲಿ ಸಾಧು ಸಂತರಂತೆ ನೀ ಮಾಡೊ | ಸಂಶಯವಳಿದು ಸರ್ವವು ಶಿವನೆಂದರಿದು ಅವರೊಳು ಕೂಡೊ | ಸತ್ತು ಹುಟ್ಟುವ ಕಟ್ಟಳೆಗಳನು ಕಿತ್ತಿ ಈಡ್ಯಾಡೊ | ನಿತ್ಯದಿ ಭವತಾರಕನ ಭಜಕರ ಸಂಗದಲಿ ಲೋಲ್ಯಾಡೊ 5 ಗುರು ವರನಲಿ ಸತ್ಪುರುಷರ ಬಳಿಯಲಿ ಅರಸಬಾರದು ಇಷ್ಟಾ | ಕುಲ ವಯ ಕ್ರಿಯಾ ಕರ್ಮವ ತಾಪತ್ರಯಗಳನೆಣಿಸುವ ಭ್ರಷ್ಟಾ | ಅನುಭವ ಜ್ಞಾನದಿ ಬೋಧದಿ ಲಕ್ಷ್ಯವೀಕ್ಷಿಸುವವನೆ ಶ್ರೇಷ್ಠಾ | ಇನಿತನು ಬಿಟ್ಟು ನಿಂದಿಸುವವನೆ ಭವದಲಿ ಬಡುವನು ಕಷ್ಟಾ 6 ಮೂರ್ತಿ ಭವತಾರಕ ಭಜಕರ ಸೂರ್ಯನ ಬಲ್ಲದೆ ಗೂಗಿ 7 ಭವ ದೋಷವು ಅಳಿವಹುದೇ? | ಗುರು ಭವತಾರಕ ಭಜಕರ ಬೋಧವು ಧರೆಯೊಳು ನರರಿಗೆ ಇಹುದೇ ? 8 ಮಾತು ಸತ್ಯವಾದರೆ ಆತಗೆ ಶಿವನೆನು- ತಿಹರೀ ಜಗ ಜನರೂ | ಭೂತಭವಿಷ್ಯತ್ ಹೇಳಲು ಭಕ್ತಿಯೊಳಾತಗೆ ನಡಕೊಂಬುವರೂ | ಭೂತಳದೊಳು ಭವತಾರಕ ಭಕ್ತರ ನೀತಿ ಮರೆತ ಪಾಮರರೂ | ನೂತನ ಖ್ಯಾತಿಯ ಕೊಂಡಾಡುತ ಬಹು ಪಾತಕಕೆಳಿ ಎಂಬುವರೂ 9 ಕರ ಭವ ಮೂರ್ತಿ ಭವತಾರಕ ಭಜಕರು ಇದ್ದ ಸ್ಥಿತಿಯನರಿಯರು 10 ಆಡುವರಾಟವ ಬಾಲರ ಮನೆಯಲಿ ಮಾಡುತ ಬ್ರಹ್ಮಾಂಡವನೂ |ನೋಡರು ಹಿರಿಯರು ಸಟೆಯೆಂದೇ ದಿಟ ಮಾಡುವರಿಹದಾಟವನೂ | ಪಾಡಲ್ಲೆನುತಲಿ ತಿಳಿದವರೊಳು ಬೇಡುವರಾ ನಾಕವನೂ | ರೂಢಿಯೊಳಗೆ ಭವತಾರಕ ಭಜಕರು ನೋಡರು ಪುಸಿಯೆಂದದನೂ 11 ನಿತ್ಯ ಪೂರ್ಣ ಭವತಾರಕನಂಘ್ರಿಯ ಹೊಂದದೆ ತಿಳಿಯದು ಗುಟ್ಟೂ 12 ಸಂಚಿತ ಪ್ರಾರಬ್ಧ ಕ್ರಿಯಮಾಣಾ ಜನರಿಗೆ ಬರೆದನು ಬ್ರಹ್ಮಾ | ಮುಂಚೆ ಶಿರವನು ನೀಗಿದಾ ಬರದವರಾರೊ ಆತಗೆ ತಮ್ಮಾ | ಮಿಂಚಿನಂತೆ ಜೀವನಕೆ ತಗಲುವಾ ಮಾಡುವ ಕರ್ಮಾ ಧರ್ಮಾ | ಹಂಚಿಕೆ ತಿಳಿಯದೆ ನುಡಿವರು ಮರುಳರು ವಂಚನೆ ಬಿಡು ಇದು ವರ್ಮಾ 13 ದೇವ ನೈವೇದ್ಯವು ಖೊಬ್ಬರಿ ಸಕ್ಕರಿ ಪನಿವಾರವು ನೋಡಿ | ಆವ ಕುಲದವನಾದರೂ ಏನು | ಇಲ್ಲದ ಹಂಚಿಕೆ ಮಾಡೀ ಭಾವಿಸಿ ಮೃಷ್ಟಾನ್ನವನಿಟ್ಟರೂ ಕುಲಧರ್ಮದಲ್ಲಿ ನೋಡೀ | ಕೇವಲ ಭವತಾರಕನ ಭಜಕರ ಮುಂದೆ ರಹಸ್ಯವ ಮಾಡೀ 14
--------------
ಭಾವತರಕರು
ತುಂಗಾತೀರದಿ ಕಂಗೊಳಿಸುವ ಮುನಿ ಪುಂಗವರಾಯರ ನಯನದಿ ನೋಡೆ | ಮನದಿ ಕೊಂಡಾಡೆ ವರಗಳ ಬೇಡೆ ಪ ಆದಿ ಯುಗದಿ ಪ್ರಹ್ಲಾಲದನೆನಿಸಿ ಕ ಯಾದವಿನುದರದಿ ಜನಿಸುತಲಿ | ಸಖಿಜನಿಸುತಲಿ ಮಾಧವ ಪರನೆಂದುಮೋದದಿ ಸ್ತಂಭದಿ ತೋರಿದ ಧೀರನೆ 1 ಅದ್ವೈತಾಟವಿ ದಗ್ಧಕೃತಾನಲ ಮಧ್ವಮತಾಬ್ಧಿಗೆ ಭೇಶನೆಂದೆನಿಸಿ ಸದ್ವೈಷ್ಣ ವರುದ್ಧಾರಕನಾದ ಪ್ರ ಸಿದ್ಧನಾದ ವ್ಯಾಸಕರ್ಮಂದ ಕುಲೇಂದ್ರನೆ 2 ಧರಣಿ ತಳದಿ ರಾಘವೇಂದ್ರ ಸುನಾಮದಿ ಮರಳಿ ಜನಿಸಿ ದಿವ್ಯ ಪರಿಮಳ ರಚಿಸಿ | ಪರಿಮಳ ರಚಿಸಿ ಕರುಣದಿ ದ್ವಿಜರಿಗೆ ಎರದು ಪೊರೆವಗುರು ಮರುತಾವೇಶದ ದೇವಸ್ವಭಾವನೆ 3 ಸ್ವಾಂತÀದಿ ಭಜಿಪರ ಚಿಂತೆಯ ಕಳೆಯಲು ಚಿಂತಾಮಣಿಯಂತೆ ಸತತ ಸಖಿಯೇ | ಸಂತತ ಸಳಿಯೇ ಮಂತ್ರನಿಕೇತನ ಕ್ಷೇತ್ರದಿ ಸ್ಥಿರವಾಗಿ ನಿಂತ ಪರಮ ಸುಶಾಂತ ಮೂರುತಿಯೆ 4 ವಂದಿಸಿ ಸ್ತವಿಸುವ ವಂದ್ಯಾಂಧಕರಿಗೆ ಕಂದ ರಕ್ಷಿಗಳ ಕರುಣಿಸಿಹರೇ | ಕರುಣಿಸಿಹರೇ ಇಂದು ಧರಾಮರ ವಂದಿತ ಶಾಮ ಸುಂದರ ವಿಠಲನ ದಾಸೋತ್ತಮನೆ 5
--------------
ಶಾಮಸುಂದರ ವಿಠಲ
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತುದಿಯ ನಿಗಮವ ಕೇಳು ತಂದೆ ಶ್ರೀ ಹರಿಯೆಹುದುಗಿಹವು ಮಂತ್ರಗಳು ಹೊರೆವೆ ನೀ ದೊರೆಯೆ ಪಮೂರು ವೇದಗಳಿಂದ ಮಾಡಿ ಕ್ರತುಗಳ ಜನರುಸೇರಿ ಭೂಸ್ವರ್ಗಗಳ ಸವಿದು ಭೋಗ್ಯಗಳಾಭೂರಿ ಜನ್ಮಗಳೆತ್ತಿ ಬಳಲುತಿರೆ ಜಗವನ್ನುತೋರಲೋಸ್ಕರ ಮಂತ್ರತತಿಗಳಿಹವಾಗಿ 1ಮಂತ್ರಂಗಳಲಿ ಸ್ವಾಮಿಮೂರ್ತಿವತ್ತಾಗುತಿರೆ ಯಂತ್ರ ಪೀಡಿತ ಜನರನೆತ್ತಿ ಬದುಕಿಸಲುತಂತ್ರವಿದ ಮಾಡಿದೆ ನೀ ತಂದೆ ಲೋಕಕ್ಕೆ ಸ್ವಾತಂತ್ರನಾಗಿಹನೆಂದು ತಿಳುಹಿಕೊಡೆ ದೇವ 2ಈ ರೀತಿಯಲಿ ನೀನು ಯಜ್ಞಕಧಿಪತಿಯಾಗಿಸೇರಿ ಮಂತ್ರಂಗಳಲಿ ಸದ್ರೂಪನೆನಿಸಿಕೋರಿದರ್ಥವ ಕೊಟ್ಟು ಕಾಯುತ್ತ ಸಂಸಾರಪಾರ ತಿರುಪತಿಯನ್ನು ಪಡೆದ ವೆಂಕಟಪತಿಯೆ 3ಓಂ ಮಧುರಾಕೃತಯೇ ನಮಃ
--------------
ತಿಮ್ಮಪ್ಪದಾಸರು
ತುಲಸಿ ವಂದಿತ ವಿಠಲ | ಕಾಪಾಡೊ ಇವಳಾ ಪ ಕಲುಷ ಸಂಹಾರಕನೆ | ಶ್ರೀ ಕೃಷ್ಣಮೂರ್ತೇ ಅ.ಪ. ಕಂಸಾರಿ ತವಪಾದಪಾಂಸುವನೆ ಭಜಿಪಂಥ | ಮಾರ್ಗದಲ್ಲಿರಿಸೀಹಂಸ ವಾಹನನಾದಿ | ಮುಕ್ತಿ ಯೋಗ್ಯರ ವರ್ಗಶಂಸನವು ತರ ತಮದಿ | ಮಾಡಿಸೋ ಹರಿಯೇ 1 ಭವ ತಾಪ | ಕಾರುಣ್ಯ ಮೂರ್ತೇಹರಿ ಗುರೂ ಸದ್ಭಕ್ತಿ | ವೈರಾಗ್ಯವಿಷಯದಲಿಕರುಣಿಸುತ ಪೊರೆ ಇವಳ | ಕರಿವರದ ಕೃಷ್ಣಾ 2 ಪತಿಸೇವೆ ಪ್ರಾಮುಖ್ಯ | ಮತಿಯನಿತ್ತಿವಳೀಗೆಹಿತದಿಂದ ಸಲಹೆಂದು | ಭಿನ್ನವಿಪೆ ಹರಿಯೇಹಿತ ವಹಿತ ವೆರಡರಲಿ | ವ್ಯಾಪ್ತ ಶ್ರೀ ಹರಿಯೆಂಬಮತಿಯ ಕರುಣಿಸು ಗುರೂ | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ತುಳಸೀ ದೇವಿ ಉದಯ ಕಾಲದೊಳೆದ್ದು ಮುದದಿಂದ ಶ್ರೀ ತುಳಸಿ ಸತಿ ಉದ್ಧರಿಸೆನ್ನನೆಂದು ಉದಕವೆರೆದು ನಮಸ್ಕರಿಸಿ ವಂದಿಸುತಲಿ ಸುಧೆಯ ಸುರರಿಗಿತ್ತ ಧನ್ವಂತರಿ ನಯನದಿ ಉದಿಸಿದೆ ಆನಂದ ಅಶ್ರುಗಳಿಂದಲಿ ಮದಗರ್ವ ಬಿಡಿಸೆನ್ನ ಶುದ್ಧಿಯನ್ನೆ ಮಾಡಿ ಹೃದಯದಿ ಹರಿಯ ತೋರಿ ರಕ್ಷಿಸೆಂದೆನಲು ಸದ್ದಿಲ್ಲದೆ ಪೊರೆವ ಗೋಪಾಲಕೃಷ್ಣವಿಠ್ಠಲ
--------------
ಅಂಬಾಬಾಯಿ
ತೂಗಿದಳೆ ಸ್ಕಂದನಾ ಪಾರ್ವತೀ ದೇವಿ ಆಗಮಜ್ಞನ ಗುಹನಾ ಪ ನಿತ್ಯ ಭೋಗಿ ಭೂಷಣ ಜನ ಸಾಗರದಂತೆ ಗಂಭೀರನ ಜೋಯೆಂದು ||ತೂಗಿದಳೆ|| ಅ ಮುನಿವರ ವಂದಿತ ಜೋಜೋ | ಅನುಪಮ ಸದ್ಗುಣ ಚಿನುಮಯ ಸರ್ವಜ್ಞಅನಿಮಿಷ ವಂದಿಪ ಅನಘ ಜೋಜೋಯೆಂದು 1 ಭಕ್ತೋದ್ಧಾರ ಕುಮಾರ ಜೋಜೋ ನಾರದಾದಿ ಮುನಿವರ ವಂದಿತ ಮಾರನಾಕಾರದ ಧೀರ ಜೋಜೋಯೆಂದು 2 ಮೂರ್ತಿ ಜೋಜೋ | ಪಾವಂಜೆ ವಾಸನ ಸೇವಕ ದಾಸರ ಕಾವÀ ಮಹಾತ್ಮನನೋವಿ ಜೋಜೋಯೆಂದು ||ತೂಗಿದಳೆ|| 3
--------------
ಬೆಳ್ಳೆ ದಾಸಪ್ಪಯ್ಯ
ತೂಗಿರೆ ಶ್ರೀ ರಂಗವಲಿದ ದಾಸಾರ್ಯರ ತೂಗಿರೆ ಜಗನ್ನಾಥರಾಯರ ಪ ತೂಗಿರೆ ಭಾಗಣ್ಣ ಗುರುವರನುಗ್ರಹಪಾತ್ರ ಭಾಗವತ್ತೋತ್ತಮರ ತೂಗಿರೆ ಅ.ಪ ಘನ ಸುಜ್ಷಾನ ಸದ್ಭಕುತಿ | ಗುಣದಿ ಬಂಧಿತವಾದ ಅನಿಲಮತವೆಂಬ ತೊಟ್ಟಲದಿ ವನಜನಾಭನ ಧ್ಯಾನ ಯೋಗ ನಿದ್ರೆಯ ಮಾಳ್ಪ ಕನಕ ಶಯ್ಯಾತ್ಮಜರ ತೊಗಿರೆ 1 ಸಾರಥಿ ಪದ್ಮಮಿತ್ರಜಗಾದ ಮದ್ರದೇಶಾಧಿಪರ ತೂಗಿರೆ ವೃದ್ಧಾಶ್ರವಾರ್ಯರ ಸದ್ಮನದಿ ಶಿಶುವಾಗಿ ಉದ್ಭವಿಸುವರ ತೂಗಿರೆ 2 ಧಾಮ ಪದಾರ್ಹರ ಪ್ರೇಮವ ಪಡೆದವರ ತೂಗಿರೆ ಶ್ರೀಮನ್ ಮಾನವಿಯಲ್ಲಿ ನೇಮದಿ ಭಜಿಪರ ಕಾಮಿತ ಕೊಡುವವರ ತೂಗಿರೆ 3
--------------
ಶಾಮಸುಂದರ ವಿಠಲ
ತೆರಳಿದರು ಶ್ರೀ ಜಗನ್ನಾಥದಾಸಾರ್ಯರು ಸಿರಿಪತಿಯ ಸ್ಮರಿಸಿ ಹರಿಪುರಕೆ ಹರುಷದಲಿ ಪ ವರಶುಕ್ಲವತ್ಸರದ ಭಾದ್ರಪದ ಶಿತಪಕ್ಷ ಹರಿವಾರ ನವಮಿಯಲ್ಲಿ ಸುರಸಿದ್ಧ ಸಾಧ್ಯ ಸನ್ಮುನಿಗಣಾರ್ಚಿತ ಪಾದ ಹರಿಯೆ ಪರನೆಂದೆನುತಲಿ ಧರಣಿಯನು ತ್ಯಜಿಸಿ ಬಹುಮಾನಪೂರ್ವಕವಾಗಿ ಬೆರೆದು ಸುರಸಂದಣಿಯಲಿ ಪರಮಾರ್ಥವೈದಿ ಮನ ಹರಿಯ ಪಾದದಲಿಟ್ಟು ವರವಿಷ್ಣುದೂತ ವೈಮಾನಿಕರ ಒಡಗೂಡಿ 1 ಅತಿಪ್ರೇಮಿಗಳು ಹಸನ್ಮುಖರು ದಯೆ ಬೀರುವರು ಖತಿದೂರರಿವರು ಜಗದೀ ಮಿತಿಮೀರಿ ಶ್ರೀಹರಿಯ ಕಥೆ ನಾನಾ ಪರಿಯಲ್ಲಿ ಅತಿಶಯದಿ ಪೇಳಿ ಇಹಕೆ ಸತತವು ಶರಣರ್ಗೆ ಗತಿಯಾಗುವಂತೆ ಸ ತ್ವಥವಿಡಿಸಿ ಕರುಣದಿಂದ ಹಿತವಂತರೆನಿಸಿ ಸಮ್ಮತವಾಗಿ ಸರ್ವರಿಗೆ ಮತಿದೋರಿ ಕೊಟ್ಟು ಸದ್ಗತಿಯಗೋಸುಗವಾಗಿ 2 ಆಚರಣೆಯಲಿ ಒಂದರಘಳಿಗೆ ಬಿಡದೆ ಬಲು ಖೇಚರಾರೂಢ ಹರಿಯಾ ಸೋಚಿತಾರಾಧನೆಯ ಮಾಡಿ ಮರೆಯದಲೆ ಮಹಾ ವೈಚಿತ್ರ್ಯವನು ತೋರಿ ಈ ಚರಾಚರದಿ ಸಂಗೀತ ಸಾಹಿತ್ಯದಲಿ ಪ್ರಾಚಾರ್ಯವಂತರೆನಿಸೀ ಆ ಚತುರ್ದಶಭುವನಪತಿ ಶ್ರೀದವಿಠಲನ ಯೋಚನೆಯ ಬಿಡದೆ ಮಂಗಳ ಶಬ್ದವಾದ್ಯದಿಂ 3
--------------
ಶ್ರೀದವಿಠಲರು
ತೊಳೆಯಲಿ ಬೇಕಿದನು ಮನುಜಪ ಭವಕೂಪದಿ ಬಿದ್ದು ತೊಳಲಿ ಬಳಲಿ ಬಳಲಿ ಮಲಿನವಾಗಿಹ ಮನ ಹರಿಧ್ಯಾನ ಜಲದಲಿ ಅ.ಪ ಕಾಮಕ್ರೋಧದಿಂದ ಜನಿಸಿದ ಲೋಭಮೋಹ ಲೋಭದಿಂದ ಮದಮತ್ಸರ ಷಡ್ವಿಧ ತಾಪಗಳಿಂದ ಹದಗೆಟ್ಟಿರೆ ಮನ ಮುದದಿ ಹರಿಧ್ಯಾನದಿ 1 ದುರ್ಜನ ಸಂಗದೊಳು ಸೇರುತ ಮನ ವರ್ಜಿಸಿ ಹರಿ ಚರಿತ ಅರ್ಜುನ ಸಖ ಸರ್ವೇಶನ ನಾಮವು ಲಜ್ಜೆಯಿಲ್ಲದೆ ಸ್ಮರಿಸುತ ನಲಿಯಲು ಮನ 2 ಜನನ ಮರಣ ಕ್ಲೇಶದಿ ದು:ಖದಿ ಮನ ಮರಳಿ ಮರಳಿ ಪಾಪದಿ ಎಣಿಕೆ ಇಲ್ಲದ ದೋಷದೊಳಗೆ ಮುಸುಕಿದ ಮನ ನಿತ್ಯ 3 ಇಂದಿರೇಶನ ಧ್ಯಾನವ ಮಾಡಲು ಮನ ವೃಂದವ ಕೂಡಿ ಮಂದೋರದ್ಧರ ಗೋ_ ವಿಂದನೆನ್ನಲು ಮನ 4 ನಿಚ್ಚ ಭಕುತಿಯಿಂದ ಶ್ರೀ ಹರಿಪಾದ ಅರ್ಜಿಸಿಮುದದಿಂದ ರುಕ್ಮಿಣಿಯರಸನ ಸತ್ಯಸಂಕಲ್ಪನ ಮೆಚ್ಚಿಸಿ ಮುಕುತಿಯ ನೈದಲು ಈಮನ 5 ಮಧ್ವಮತದಿ ಜನಿಸಿ ನಿರಂತರ ಮಧ್ವರಾಯರ ಭಜಿಸಿ ಸದ್ವೈಷ್ಣವರ ಸಂಗದೊಳಾಡುತ ಲಜ್ಜೆತೊರೆದು ಕಾಲಗೆಜ್ಜೆ ಕಟ್ಟಲುಮನ6 ಕಂಬು ಚಕ್ರಧಾರಿ ಶ್ರೀ ಶೌರಿ ನಂಬುವರಾಧಾರಿ ಶಂಬರಾರಿಪಿತ ನಂಬಿದೆ ನಿನ ಪಾದ ಶಂಭುವಂದಿತ ಪಾಲಿಸಿಂದು ಸ್ಮರಿಸಲು ಮನ 7 ತೊಳೆದು ತೊಳೆದು ವಿಷಯ ವಾಸನೆಯನ್ನು ಹಲವು ವಿಧದಿ ತೊಳೆದು ಕಲುಷದೂರನ ನಾಮ ಸ್ಮರಣೆಯ ಮಾಡಲು ಮರುತ ಮತದ ಸಂಗ ದೊರೆವುದು ತವಕದಿ8 ಕಳವಳಿಸದೆ ಮನವು ನಿಶ್ಚಲದಲಿ ಥಳ ಥಳ ಥಳ ಹೊಳೆಯೆ ಕಮಲನಾಭ ವಿಠ್ಠಲವಲಿದು ಪಾಲಿಸುವನುಹಲವು ಬಗೆಯಲಿ ಹಂಬಲಿಸದೆ ಮನ 9
--------------
ನಿಡಗುರುಕಿ ಜೀವೂಬಾಯಿ