ಒಟ್ಟು 2881 ಕಡೆಗಳಲ್ಲಿ , 122 ದಾಸರು , 2089 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಣಿ ಕುಣಿಯಲೋ ಬಾಲಗೋಪಾಲ ಪ ಗೋಪಾಲ ನೀರದ ನೀರ ಅ.ಪ ಯಮುನಾ ತೀರದಿ ಹಿಮಕಿರಣನು ತಾ ಮಮತೆಯ ತೋರಲು ಬೆಳಗುತಿಹ ಘಮಘಮಿಸುವ ಈ ಸುಮಗಳು ಸೂಸಿರೆ ಪ್ರಮದೆಯರೆಲ್ಲರ ಪ್ರೇಮಾಂಗಣದಲಿ 1 ಗಂಧವ ಮಾರುತ ಬೀರುತಲಿರುವನು ಇಂದಿರೆ ಕೊಳಲಿನ ರೂಪದಲಿ ಚಂದದಿ ನಾದವ ತುಂಬಲು ಪರಮಾ ನಂದವು ಮಾನಸ ಮಂದಿರದಲಿ ನೀ 2 ಕಾಯವು ರೋಮಾಂಚಿತವಾಯ್ತೊ ಮಾಯಾವಾದವೊ ಮೋಹಗಳು ತಾಯಿ ಮಡಿಲು ಸೇರಿದ ಶಿಶುವಂದದಿ ಹಾಯವೆನಿಸಿತೊ ಜೀವನ ಯಾತ್ರೆಯು 3 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಬಿಡಿಸೊ ಸ್ವಾಮಿ ನಿನ್ನಯ ಪಾದಯುಗಳವೆ ಕ್ಷೇಮವೆನ್ನಿಸೊ ಸಾರಾಸಾರ ವಿವೇಕದಿ ಮೋಕ್ಷದ ಕೋರಿಕೆ ಪುಟ್ಟಿಸೊ ಭವ ಪಾರ ಸೇರಿಸೋ 4 ಸಾರದ ಕರುಣಕೆ ಕಾರಣ ಬಿಂಬದ ಮೂರುತಿ ದರುಶನವು ಭಾರತಿ ರಮಣನ ಮಂಗಳಶಾಸ್ತ್ರ ವಿಚಾರವೆ ಕಾರಣವು ಭಕುತ ಜನ ಪ್ರಸನ್ನ ಲಕುಮಿರಮಣ ಎನ್ನು ತಕಿಟ ತಕಿಟ ಎಂದು 5
--------------
ವಿದ್ಯಾಪ್ರಸನ್ನತೀರ್ಥರು
ಕುಣಿಸೋ ನಾರದಾ ಎನ್ನ ಕುಣಿಸೋ ನಾರದಾ ಪ ಕುಣಿಸೋ ಎನ್ನ ಕಾಲಿಲಿಂದ ಕಣಕಣೆಂಭೊ ಗೆಜ್ಜೆಕಟ್ಟಿ ಅ.ಪ. ಮೋದ ವನವ ಚರಿಸುವಂತೆಮಾಡೋ 1 ವದನದಲ್ಲಿ ಹರಿಯ ಸ್ಮರಣೆ ಮುದದಿ ಪಾಡುತಾಲೆ ಕಥೆಯಗದಗದಾನೆ ರೋಮ ಉಬ್ಬಿ ಒದಗುವಂತೆ ಭಾಷ್ಯ ಮಾಡೋ 2 ಏಸು ಲೇಸು ವಿಷಯಗಳಲಿ ವಾಸಮಾಡದಂಥ ಇಂದಿರೇಶಸುಕಧಾರ್ಥಸಾರ ಲೇಶ ಬಂದು ಸತತ ಮಾಡೋ 3
--------------
ಇಂದಿರೇಶರು
ಕುತ್ಸ್ಸಿತರೊಲ್ಲದ ಮತ್ಸರವಿಲ್ಲದ ಸತ್ಸಭೆ ಕೇಳಲೀ ಕೃತಿಯ ಪ. ಈ ಯುಗದವರಿಗೆ ಕಲಹ ಮಂಡಿಸಿದಗೆ ಆ ಯುಗದವರುಕ್ತಿ ಬೇಕು ನ್ಯಾಯದವರ ಕೇಳು ಪೂರ್ವಶಾಸನ ಸಾಕ್ಷಿ ಹೇಯವೆಂದಾರು ಪೇಳುವರು1 ನಿಮ್ಮವರಾಗಮ ನಮ್ಮವರಿಗೆ ಸಲ್ಲ ನಮ್ಮೋಕ್ತಿ ನಿಮಗೆ ಮೆಚ್ಚಲ್ಲ ಇಮ್ಮನದವರಿಗೆ ಇನ್ನೊಬ್ಬ ಹಿರಿಯರ ಸಮ್ಮತಿ ಬೇಕು ನಿರ್ಣಯಕೆ2 ಯುಕ್ತಿ ಮಾತ್ರವ ನಂಬಿ ನಡೆವುದುಚಿತವಲ್ಲ ಯುಕ್ತಿ ಸರ್ವತ್ರ ಬಂದಿಹುದು ಕುತ್ಸಿತ ದೇಹಬಂಧವ ಬಿಡಿಸುವ ನರ- ರುತ್ತಮರೆಂದರೇನೆಂಬೆ 3 ಹಿಂಸೆ ಸಲ್ಲದು ಗಡ ಕರದ ಚಿಮುಟಿಯಿಂದ ಏಸು ಕೂದಲ ಕೀಳುತಿರಲು ಏಸೋ ಜೀವಗೆ ನೋವು ಅದು ಹಿಂಸೆ ದೋಷದ ಒಂದಂಶಕ್ಕೆ ಸರಿ ಬಂದಿಹುದೆ 4 ಕೇಶ ಆಚ್ಛಾದನ ಸಂಕಟದಿಂದೆಂದ ಕ್ಲೇಶ ಸೂಸುವ ನಯನಾಂಬುಧಾರೆ ಆ ಸಮಯದಿ ಪರಮಸುಖವೆಂಬ ಮಾತು ಸತ್ಯವ್ರತಕೆ ಎಂತೊಪ್ಪಿಹುದೊ 5 ವೇದಶಾಸ್ತ್ರವ ಬಲ್ಲ ಹಾರವನಲ್ಲ ಹು- ಟ್ಟಿದ ದಿವಸ ಮೊದಲಾಗಿ ಪಾತಕಿ ತಮ್ಮೊ - ಳಾದನೆಂಬುದು ಬಲು ಚೋದ್ಯ6 ಪಾಪ ಸಲ್ಲದು ಗಡ ಪರನಿಂದೆಯಿಂದಾದ ಪಾಪವೆ ತಾವು ಶುದ್ಧರೆಂಬ ಪರಿ ಆತ್ಮಸ್ತುತಿಯಿಂದೊಂದಾ ಪಾಪ ಲೇಪಿಸದಿಹುದೆ ತಮ್ಮವರ 7 ಸ್ಥಾವರಜೀವರ ಸಾವಿರ ಕೋಟಿಯ ಆವಾಗ ಕೊಂದು ತತ್ತನುವ ಜೀವಿಪೆನೆಂದು ಬೇಯಿಸಿ ತಿಂಬ ಪಾಪವ ಆವ ನಿಮಗೆ ಅಹುದೆಂದ 8 ಇಂದ್ರಿಯಹತ್ತಿಲ್ಲದವರ ಕೊಲ್ಲುವುದಕ್ಕೂ ಹಾ- ಗೆಂದ ಗುರುವ ನಾನೇನೆಂಬೆ ಅಂದಚೆಂದಗಳ ಮೂಕರ ಪಕ್ಷ್ಷಿಯಂಡದ ನಿಂದ್ಯ ಹಿಂಸೆಯ ಸಲಿಸುವರೆ 9 ಸಂಗೀತಶ್ರವಣದಿ ಧೂಪಾಘ್ರಾಣದಿ ಮೂಲ ಹಿಂಗೂಡಿದುದಕ ಸ್ವಾದನಾದಿ ಅಂಗನೆ ಈಕ್ಷಣ ಸ್ಪರ್ಶನದಿಂ ಸ್ಥಾವ- ರಂಗಳು ಜಂಗಮದಂತೆ 10 ತಮ್ಮ ಕರ್ಮದಿ ತಾವೆ ಸಾವರೆಂಬ ಮತದಿ ಕಮ್ಮಿಯಾದ ವ್ರಣಕ್ಕೆ ಮದ್ದನಿಕ್ಕಲು ನಿರ್ಮಾಯನದೊಳಗೇಸೊ ಹಿಂಸೆ 11 ಅಕ್ಕಿಯ ಕುಟ್ಟಲು ಬಕ್ಕು ಜೀವರ ಹಿಂಸೆ ಮಕ್ಕಳುಂಬುದು ಮಾಂಸ ಪ್ರಿಯಳ ಚೆಂದುಟಿ ಮಾಂಸ ಇಕ್ಕು ಬಾಯೊಳು ದಂತದೆಲುವೆ 12 ಕರದ ತುಂಬವಿದೇನು ಕೊರಳ ಹಾರವಿದೇನು ಚರಣದ ನಖಪಂಕ್ತಿಯಿದೇನು ಖರ ಭೂತಪಂಚಕ ಅನ್ನ ಮಾಂಸಗಳೊಳು ಬರಿದೆ ನಿಂದಿಸಲೇಕೆ ಪರರ 13 ಉಪ್ಪಿನೊಳಗೆ ತೋರ್ಪ ಚಿಪ್ಪ ನೋಡದೆ ಪರ- ರಲ್ಪ ದೋಷಗಳರಸುವರೆ ಒಪ್ಪುವುದೆಂತೊ ಶತ್ರುಗಳ ನಿಂದನೆ ಕೊಲು- ತಿಪ್ಪ ನೃಪಗೆ ಜಿನಮಾರ್ಗ 14 ಬಸ್ತಿಯ ಕಟ್ಟಲು ಭೂಸ್ಥ ಜೀವರ ಹಿಂಸೆ ಸುತ್ತ ಯಾತ್ರೆಯ ಮಾಡಲೇಸೊ ತತ್ತಜ್ಜೀವರ ಹಿಂಸೆ ತೈಲಸ್ನಾನದಿ ಹಿಂಸೆ ವಸ್ತ್ರ ಒಗೆಯಲೇಸೋ ಹಿಂಸೆ 15 ಸಲ್ಲದ ಹಿಂಸೆಯ ಸಲಿಸಿದರೆಂಬರ ಬಲ್ಲವಿಕೆಯ ನಾನೇನೆಂಬೆ ಬಲ್ಲಿದ ಹಿಂಸೆಗೆ ಒಳಗಾದರು ಎಲ್ಲ ತಾ- ಕೈವಲ್ಯ ಸಾಧಕರು 16 **** ತೊಳೆಯದ ಬಲುಹಿರಿಯರ ನಾತಕ್ಕೆ ಸೋತು ಬೆಂಬಿಡದೆ ಆತುರದಿಂ ಬಪ್ಪನೊಣಗಳ ಗೀತವ- ನೋತು ಕೇಳುವ ಶಿಷ್ಯ ಧನ್ಯ 17 ಮೂತ್ರ ದ್ವಾರದ ಮಲ ಶ್ರೋತ್ರನೇತ್ರದ ಮಲ ಗಾತ್ರ ನಾಸಿಕದ ಮಲ ಯಾತ್ರೆಯ ಮಾಡುವರಕ್ಷಿಗೆ ಕೌತುಕ ಪಾತ್ರವಾಯಿತು ಬಲು ಚಿತ್ರ 18 ******************* 19 ಏಕ ಭಾಗದೊಳು ಸ್ತ್ರೀ ವಾಸ ಏಕಾಂತದಿಪ್ಪುದು ಲೋಕಸಲ್ಲದೆಂಬರ ಈ ಕಾಮನೆಂತು ಬಿಟ್ಟಿಹನು 20 ಬಸ್ತಿಯ ಪ್ರತಿಮೆಯಲಿಪ್ಪ ದೇವನದಾರು ಮುಕ್ತರಿಗೀಭೋಗ ಸಲ್ಲ ಮುಕ್ತರÀಲ್ಲದ ಜೀವ ದೇವರೆಂತಹರೆಂದು ವ್ಯರ್ಥವಾಯಿತು ನಿನ್ನುತ್ಸಾಹ 21 ನೋಡುವ ನಯನಕ್ಕೆ ಮಾಡುವ ಪೂಜೆಗೆ ಕೂಡಿದ ಬಹುವಿತ್ತ ವ್ಯಯಕ್ಕೆ ಈಡಾಯಿತಂಶ ಕೇವಲ ಬೊಂಬೆ ಶಿವಶಿವ ಆಡುವ ಶಿಶುಗಳ್ಪೇಳಿದರೆ 22 ಹೆಂಡಿರೆ ಸಂಸಾರವಾದರೆ ಹಸಿತೃಷೆ ಉಂಡು ಮಲಗುವುದು ಮುಕ್ತರಿಗೆ ಮಂಡೆಯ ಬೋಳಿಸಿ ದೇಹದಂಡನೆ ಮಾಡಿ ಕೈ- ಕೊಂಡ ಮಾತ್ರದಿ ಮುಕ್ತರಹರೆ 23 ಮತ್ರ್ಯ ದೇಹವಿರಲು ಮುಕ್ತರೊಬ್ಬರು ಅಲ್ಲ ಸತ್ತಮೇಲೇನಾದರೆಂತೊ ಅತ್ತು ಕಾಡುವ ಶಿಷ್ಯರೆಂತರು ಕಾಂಬರು ಸರ್ವ- ಕರ್ತೃ ಶ್ರೀಹರಿ ತಾನೆ ಬಲ್ಲ 24 ದುಃಖವೆ ಸಂಸಾರ ದುಃಖವಿಲ್ಲದ ಸುಖ ಮುಕ್ತಿಯೆಂಬುದು ಬುಧರ್ಗೆ ಮಾತ್ರ ಮಿಕ್ಕದೆ ದುಃಖವಿತ್ತರೆ ಭವವೆನಿಪುದು ದುಃಖವೆ ದೂರ ಮುಕ್ತರಿಗೆ 25 ಪುನರ್ಭವವೆÉನ್ನೆ ಶ್ರುತಿ ಅಮೃತವುಂಡರೆ ಮೋಕ್ಷ ಜನನ ಮರಣವಿಲ್ಲದಖಿಳ ಜನರ ದುಃಖವನವತರಿಸಿ ಕಳೆವ ನಾರಾ- ಯಣನೆ ನಿರ್ದೋಷ ನಿತ್ಯಸುಖಿ 26 ಪಾತಕ ವ್ರತವ ಕೈಗೊಂಡ ಸ್ತ್ರೀ- ಜಾತಿಯ ಮುಟ್ಟಲ್ಲೆಂಬುವನು ಖ್ಯಾತ ಶ್ರೀಹರಿಗೆ ಪಾತಕಮುಟ್ಟದೆಂಬರ ಮಾತನದೇಕೆ ಮನ್ನಿಸನು 27 ಕೆಸರ ತೊಳೆದ ನೀರು ಕೆಸರ ಬಾಧಿಪುದೆ ತಾ- ವೈರಿ ಸೂರ್ಯನೊಳು ತಮವೆ ವಿಷಹರ ಗರುಡಗೆ ವಿಷ ಲೇಪಿಸುವುದೆ ಕ- ಲುಷ ಮುಟ್ಟುವುದೆ ಪಾಪಾಂತಕನ 28 ಸುಡುವಗ್ನಿ ಕಡಿವಸ್ತ್ರ ಕಡುಕೋಪಿ ಸರ್ಪನ ತಡೆಯಬಲ್ಲರೆ ತುಡುಕುವರೆ ಬಿಡು ಮನಭ್ರಾಂತಿಯ ಹಯವದನನೆ ಜಗ- ದೊಡೆಯ ಸರ್ವತ್ರ ನಿರ್ದೊಷ 29
--------------
ವಾದಿರಾಜ
ಕುದುರೆ ಕಂಡೀರ್ಯಾ ಬಿಳಿ ಕುದುರೆ ಕಂಡೀರ್ಯಾ ಚೆಲುವ ಕುದುರೆ ಕಂಡೀರ್ಯಾ ಮಧ್ವರಾಯರಿಗೊಲಿದ ಕುದುರೆ ವಾದಿರಾಜರ ಪೊರೆದ ಕುದುರೆ ಇಂದಿರಾ ದೇವಿಯನಪ್ಪಿದ ಕುದುರೆ ಬಂದರೆ ನರರು ಬೆದರದಂಥ ಕುದುರೆ 1 ಮಂದರಗಿರಿಯನ್ನೆತ್ತಿದ ಕುದುರೆ ಚಂದಿರನಂತೆ ಪೊಳೆಯುವ ಕುದುರೆ ಸೋದೆಯ ಪುರದೊಳಿರುವ ಕುದುರೆ ಮೋದದಿಂದ ಮೆರೆಯುವ ಕುದುರೆ 2 ನರನ ರಥವನು ಏರಿದ ಕುದುರೆ ಸ್ಮರನ ತಾತನೆನಿಪ ಕುದುರೆ ಸುರತರುವನೆ ಭೂಮಿಗೆ ತಂದ ಕುದುರೆ 3 ಕಡಲೆ ಹೂರಣ ಮೆಲುವ ಕುದುರೆ ಪಂಡರಪುರದಿ ಮೇದ ಕುದುರೆ ಪುಂಡರೀಕನಿಗೆ ಒಲಿದಿಹ ಕುದುರೆ ಪಾಂಡವರನೆ ಪೊರೆದ ಕುದುರೆ 4 ರಾಜನಾಥನೆನಿಪ ಕುದುರೆ ವಾಜಿವದನ ತಾನೆನಿಪ ಕುದುರೆ ಕಂಜಸುತಗೆ ಶ್ರುತಿಯನ್ನಿತ್ತ ಕುದುರೆ ಕಂಜನಾಭನೆನಿಪ ಕುದುರೆ 5
--------------
ವಿಶ್ವೇಂದ್ರತೀರ್ಥ
ಕುರುಣಾವಾರುಧೀಶ ಭಾರತೀಶ ಕರಪಿಡಿದು ಕಾಪ್ಯಾಡೊ ಕೊರವಿಯ ವಾಸ ಪ ಸುಜನರೆನ್ನಗೆ ಹಿಂದೆ ಸೂಚಿಸಿದ್ದರೊ ದ್ವಿಜ ಕುಲಾರ್ಚಿತ ಇಂದು ನಿನ್ನ ಭಕುತರಲ್ಲಿಡು ಎನ್ನ 1 ದಂತಿಪುರಪತಿಗೆ ಕೃತಾಂತನೆನಿಸಿದ ಧೀರ | ವಿಂತು ಪೊಗಳಲಿ ನಿನ್ನ ಮಹಿಮೆಯನು ಕುಂತಿಜನೆ ತವನಾಮ ಚಿಂತಿಯನು ಸಂತತದಲಿ ಸಲಹೋ ಧೀಮಂತ ನಂಬಿದೆ ಪರಮಾ 2 ಕಾಮಾರಿಸುತ ನಮೊ ಸೋಮಕುಲಭವ ಭೀಮ | ಶ್ರೀಮಧ್ವಮುನಿನಾಥವರ ಪ್ರದಾತ ಭೂಮಿಜಾತೆಯ ಪ್ರವೀತ ಶಾಮಸುಂದರದೂತ ಸ್ವಾಮಿಗುರು ತವನಾಮ ಸ್ಮರಿಪೆ ಘುನ್ನ 3
--------------
ಶಾಮಸುಂದರ ವಿಠಲ
ಕುಲಕೆ ತಕ್ಕ ಸ್ವರೂಪ ಚಲುವಿಗೊಪ್ಪುವ ವಿದ್ಯೆ ಕಲೆಗೆ ಸಲ್ಲುವ ಸುಗುಣ ಭಳಿರೆ ನಿಪುಣ ಕಿರುಕುಳದೆ ಕೈ ನೀಡಿ ಕರೆಕರೆಯ ತಂದೊಡ್ಡಿ ಹರಿಸವಾನುವಮೋಡಿ ವರನಗಾಡಿ ಜೂಜುಗಾರರಿಗೆರೆಯ ಮೋಜಿನೋಳ್ ಸಮನರಿಯ ಸೋಜಿಗಂ ಮಿಗೆತೋರ್ಕುಮಿನಿತುಸೊರ್ಕು ನಿಶಿಚರಾಂತಕನೆನುವ ಪೆಸರಾಂತುಮೀತೆರದ ವಿಷಮವರ್ತನದಿ ಸಂತಸವ ಪಡುವ ಪರಿಯಿದಚ್ಚರಿಯಾಗಿ ತೋರ್ಕುಮೆನಗೆ ಪರಿಪರಿಯ ಚಿಂತೆಗಾಕರಮಿದಾಗೆ ಉರಿಯುತಿಹುದೀಬಗೆಯೊಡಲ ಬೇಗೆ ವರ ಶೇಷಗಿರೀಶನೆ ಶರಣನೆನಗೆ
--------------
ನಂಜನಗೂಡು ತಿರುಮಲಾಂಬಾ
ಕುಲಮದ ವೈಭವಮದ ವಿದ್ಯಾಮದಗಳನುಳಿದು ಹರಿದಾಸರ ಮರೆಯೊಕ್ಕು ಸುಖಿಯಾಗು ಪ. ಮಾನವ ಪೇಳೆಯಸರ್ಪತÀಲ್ಪನ ಪೂಜೆಗುಚಿತನಾದರೆ ಅವನಇಪ್ಪತ್ತೊಂದು ಕುಲ ಸುಕುಲ ನೋಡಾ1 ಸುರರ ಸೋಲಿಸಿ ಸ್ವರ್ಗಸಿರಿಯ ಭೋಗಿಸಿದ ದೈ-ತ್ಯರ ಭಾಗ್ಯ ಬಿಸುಟುಪೋದುದ ಕೇಳೆಯಸ್ಥಿರವಲ್ಲ ಸಂಪತ್ತು ಪರಕೆ ಪ್ರತ್ಯಹವೆಂದರಿದುನರಹರಿಯ ಚರಣಸೇವೆಯ ಮಾಡು 2 ಎತ್ತು ಹೊತ್ತಗೆಯ ಹೊರೆ ಹೊತ್ತಡದಕೆ ಸಂ-ಪತ್ತೇನೋ ಮರುಳ ಸರ್ವಜ್ಞರುಂಟೆಭಕ್ತಿಯುಳ್ಳವನೊಬ್ಬ ನೆರೆಜಾಣ ಜಾಣರಿವರೆತ್ತ್ತೆಂದರಿಯದ ಹಯವದನನಂಘ್ರಿಯ ಬಲ್ಲ 3
--------------
ವಾದಿರಾಜ
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೂಗಿದರು ಒಳಗೇ ಕದವ ತೆಗೆಯಂದು ಪ ಸತಿಯರು ತಾವು ಆಗ ಆನು- ನಿನ್ನ ನಾವು ಬಲ್ಲೆವು 1 ಮೆಲ್ಲನÉ ಬಾರೆ ನೀ ನಿಜವ ಮಾಡೀಗ 2 ಮನೆಯೊಳಿರಲು ' ಮಾರಜನಕನೆಂಬೊದು ಬಲ್ಲೆನೆ 3 ಇನ್ನು ನೀರೆ ನಿನ್ನ ಗಂಡನೆ ನಾನು ಓಯನ್ನ ಪ್ರಾಣಸಖಿ ಬೇಗ ಬಂದು ಕದವ ತೆಗೆ ಈಗ 4 ಎಲ್ಲಿಯವನು ಭಂಡತನ ಬಿಡುಇನ್ನು 'ಓಹೆನ್ನೆ ವಿಠಲ’ ಮಾಡುವದು ಇದು ರೀತಿಯಲ್ಲವು 5 ಚಂಡಿನಾಟ ಬಾ ಸಭಯದಿ ಓಯನ್ನ ಪ್ರಾಣಸಖಿ ಚಲುವೆ ಹೊರಗೆ ಬಾರದಿರುವೇ 6 ಅಷ್ಟು ಜಗದಲ್ಲಿ ಬಲ್ಲಿ 'ಓಹೆನ್ನೆ ವಿಠಲ’ ಚೇಷ್ಟಿಮಾಡದಲೆ ನಡಿಯಯ್ಯಾ 7 ದೇವರನ್ನು ಕೂಡಿತೆ ಓಯನ್ನ ಪ್ರಾಣಸಖಿ ಈಗ ಆಣಿ ಮಾಡಿಸಿ ಕೇಳು 8 ಅತ್ತಿಯನ್ನು ಕೂಡಿದವನೆ ಉತ್ತಮನೆ ನೀನು ಇನ್ನು ಎತ್ತಲ ಆಣೆಯು ನಿನಗೇ 'ಓ ಹೆನ್ನೆ ವಿಠಲ’ ಸತ್ಯವಂತನಾಗಿ ಹೇಳುವಿ 9 ಕಾಕು ಹೆಣ್ಣು ನಿನಗೆ ಥರವೆ ಓಯನ್ನ ಪ್ರಾಣಸಖಿ ಕಣ್ಣಿಲೆ ನೋಡದೆ ಕರಿಯೆ 10 ಪರಮ ಪರುಷನುಳ್ಳವರು ಪರಮಪುರುಷನ ಪಡೆವಂಥ ದೂರನಡಿಯೆ ಇಲ್ಲಿ ಎನಯ್ಯ 11 ಇನ್ನು ಸ್ವಲ್ಪ ನಿನಗೆ ತಿಳಿಯದೆ ಓಯನ್ನ ಪ್ರಾಣಸಖಿ ಸಾಗಿ ಬಂದು ನೋಡೆ ಬೇಗನೆ 12 ಏನು ಆಶ್ವರ್ಯವು ನಿನಗೆ ನಡಿಯಯ್ಯಾ 13 ಇನ್ನು ನಿನಗೆ ಇನ್ನಾದರೆ ಮನಸಿಗೆ ತಾರ 14 ನಿನಗೆ ಅರುವು ಇರಲು ಸೋಗು ಮಾಡಿನಡಿಯಯ್ಯಾ 15 ತಿಳಿಸುವೆನು ಮನಸು ಇಟ್ಟು ಮನ್ನಿಸೆನ್ನನು ಓಯನ್ನ ಪ್ರಾಣಸಖಿ ಮಾಡಬೇಡ ಹೀಗೆಯನ್ನನು 16 ಮರ್ಮವು ತಿಳಿಯದೆ 'ಒಹೆನ್ನೆವಿಠಲ’ ಮೋಸಮಾಡ ಬಂದಿ ನಡಿಯಯ್ಯಾ 17 ಹೇಳಿ ಎಲ್ಲರು ಹಿಗ್ಗುವ ವೇಳ್ಯೆದಿ 'ಓ ಯನ್ನ ಪ್ರಾಣಸಖಿಕೇಳಿದ ಮಾತನು ಹೇಳುವೆ 18 ಬಂದು ವಾಸವಾಗಿ ಹೇಸದೆ ಏನೆಂದು ಬಂದೆ 19 ಮಾನ ಪತಿಯೆಂಬ ಮಾರ್ಯದೆ ಓಯನ್ನ ಪ್ರಾಣಸಖಿ ಮನಸಿನಲ್ಲಿ ಏನು ಇಲ್ಲವು 20 ಮುನಿವಳಗೇ ಮಾನಪತಿ ಪುರುಷನೇನಯ್ಯಾ 21 ಮಾಡಿಕೊಳ್ಳದವನಿಗೆ ಧೈರ್ಯ ವಿಲ್ಲವೆ 22 ಅಂಜಿಕೆ ಏನಯ್ಯಾ 'ಓಹೆನ್ನೆ ವಿಠಲ’ ಧೈರ್ಯವು ಯಾಕೆ ನಿನಗಯ್ಯ 23 ಬಂದು ಇಷ್ಟು ತಡ ನಿನ್ನ ಗಂಡನೆನಾನು24
--------------
ಹೆನ್ನೆರಂಗದಾಸರು
ಕೃಪೆಯಿಟ್ಟು ಸಲಹೆನ್ನ ಹರಿಯೆ ನರಹರಿಯೆ ದ್ವಿಪÀವರವರದನೇ ಬಾರಯ್ಯ ದೊರೆಯೆ ಪ ದುರಿತಹರÀ ವರ ಚರಣಕಮಲನೆ ಧರಣಿಧರವನು ಕರಸರೋಜದಿ ಧರಿಸಿ ಸುಜನರ ಪೊರೆದ ಮುರಳೀ- ಧರನೇ ಮೋದವಪಡಿಸಿದಂತೆ ಅ.ಪ ನಂದನಂದನ ನಿನ್ನ ಚರಣ ಒಂದೇ ಶರಣ ಎನಗೆಂದು ನಂಬಿರುವುದೇ ಒಳ್ಳೇ ಆಭರಣ ಇಂದಿರೇಶನೆ ಮಾಡೋ ಕರುಣ ಸಿಂಧುಶಯನ ಸುಂದರೀಮಣಿ ಸಹಿತದಲಿ ನೀ ಬಂದು ಎನ್ನಯ ಮಂದಿರದಲಿ ನಿಂದು ಎನ್ನವನೆಂದು ಭಾವಿಸಿ ನಂದಪಡಿಸೈ ನಂದಬಾಲನೆ 1 ದೀನಪಾಲನೆ ಭೂಮಿಭಾರ ಹಾನಿಕಾರ ಪಂಚ ಸೂನಶರನಪಿತ ವಿಗತವಿಕಾರ ಶ್ರೀನಾಥ ಸುಜನಮಂದಾರ ಮೀನಾಕಾರ ನಾನು ನಿನ್ನವನಯ್ಯ ಎನ್ನಯ ಮಾನ ಮತ್ತಪಮಾನ ನಿನ್ನದು ಹೀನಮತಿ ಇವನೆಂದು ತಿಳಿದುದಾ- ಸೀನಮಾಡದೆ ಸಾನುರಾಗದಿ 2 ಸೋಮ ಕುಲಾಂಬುಧಿಸೋಮರಾರಾಮ ಬಲರಾಮ ಸಹಜನೇ ಸುರರಿಪು ಭೀಮ ವಾಮಲೋಚನೇರಿಗೆ ಕಾಮ ಪ್ರೇಮಧಾಮ ಕಾಮಜನಕನೆ ಸಾಮಗಪ್ರಿಯ ನಾಮಗಿರಿ ಶ್ರೀ ರಾಮ ನರಹರೆ ಕಾಮಿತಾರ್ಥವನೀವ ಸುರತರುಕಾಮಧೇನು ಚಿಂತಾಮಣಿಯೆ ನೀ 3
--------------
ವಿದ್ಯಾರತ್ನಾಕರತೀರ್ಥರು
ಕೃಷ್ಣ ಕೃಪಾಳೋ ಕೃಷ್ಣ ಕೃಪಾಳೋವ್ಣೃ ಕುಲೋದ್ಭವ ಕೃಷ್ಣ ಕೃಪಾಳೋ ಪವಸುದೇವ ನಂದನ ವರ ರತ್ನ ಭೂಷಣಕುಶಲಕರೇಕ್ಷಣ ಕೃಷ್ಣ ಕೃಪಾಳೋ 1ಭುವನತ್ರಯಾಧಾರ ಬಹುಗೋಪಿಕಾ ಜಾರನವನೀತ ದಧಿ ಚೋರ ಕೃಷ್ಣ ಕೃಪಾಳೋ 2ಮುರಳೀನಾದ ವಿನೋದ ವಿಶ್ವಾತ್ಮಕವಿರಳೀಕೃತಲೀಲ ಕೃಷ್ಣ ಕೃಪಾಳೋ 3ಗುಂಜಾಭರಣ ಸುರಂಜಿತ ಮಣಿಮಯಮಂಜೀರ ಪದಪದ್ಮ ಕೃಷ್ಣ ಕೃಪಾಳೋ 4ರಾಗಾದಿ ದೋಷ ಕಲುಷಮನಸೋ ಮೇಕಾಗತಿರಧುನಾ ಕೃಷ್ಣ ಕೃಪಾಳೋ 5ಆರ್ತಸಂರಕ್ಷಕ ಪಾರ್ಥಸಹಾಯಕಕೀರ್ತಿವಿಧಾಯಕ ಕೃಷ್ಣ ಕೃಪಾಳೋ 6ಕಾಮಸಂಪುಟದಿವ್ಯನಾಮಜಪನಶೀಲಕಾಮಿತಾರ್ಥಪ್ರದ ಕೃಷ್ಣ ಕೃಪಾಳೋ 7ಕಾಳೀಯ ಫಣ ಮಾಣಿಕ್ಯ ರಂಜಿತ ಪಾದಕಾಳಿಂದೀ ಪಾವನ ಕೃಷ್ಣ ಕೃಪಾಳೋ 8ಮಾಮವಲೋಕಯ ಮಾಧವ ಮುರಹರತಾಮಸಮಪಹರ ಕೃಷ್ಣ ಕೃಪಾಳೋ 9ತವ ಸತ್ಕಥಾ ಶ್ರವಣೇ ಕೀರ್ತನೇ ಮಮಶಿವಸುಧಿಯಂ ದೇಹಿ ಕೃಷ್ಣ ಕೃಪಾಳೋ 10ತಿರುಪತಿ ಕ್ಷೇತ್ರನಿಲಯ ಕರುಣಾಲಯವರದ ಶ್ರೀ ವೆಂಕಟಕೃಷ್ಣ ಕೃಪಾಳೋ 11 ಓಂ ಕೃಷ್ಣಾವ್ಯಸನಕರ್ಷಕಾಯ ನಮಃ
--------------
ತಿಮ್ಮಪ್ಪದಾಸರು
ಕೃಷ್ಣ ಕೃಷ್ಣ ಬಾಂಧವ ಸೃಷ್ಟ್ಯಾದಷ್ಟ ಕರ್ತ ಭವ ನಷ್ಟವಗೈಸೋದು ಅಷ್ಟರೊಳಗೆ ಹರಿ ವಿಷ್ಣು ಸರ್ವೋತ್ತಮ ಇಷ್ಟೆ ಪೇಳುವದಕೆ ನಿಷ್ಟಿಯನೀಯೊ ಪ ಈ ಸುದಿನವಾರಭ್ಯ ಕ್ಲೇಶದೊಳಗೆ ಬಿದ್ದಾ ಯಾಸ ಬಡುತಲಿದ್ದೆ ಲೇಶವಾದರು ಸುಖ ಲೇಶಗಾಣದಿರಲು ಏಸು ಜನ್ಮದ ಪುಣ್ಯ ಸೂಸಿತೋ ನಿನ್ನಯ ದರುಶನ ಲಾಭವಾಗೆ ದೇಶದೊಳಗೆ ನಿನ್ನ ದಾಸರ ದಾಸನೆನಿಸಿಕೊಂಬ ಈ ಸುಲಭ ವೊಂದಿಸನುದಿನ ದು ರಾಶೆಯ ಬಿಡಿಸೆಂದು ನಾಶರಹಿತ ಗುಣರಾಶಿ ರಮೇಶ 1 ವೇದಪರಾಯಣ ಸಾಧುಗಳರಸಾ ವಿ ನೋದಿಗಾ ಪಳ್ಳಿಗನೆ ಆದಿದೈವವೆ ತೀರ್ಥ ಪಾದ ಜಗತ್ಯೆಂತ ಭೇದಾ ಶೃಂಗಾರ ವೇಣು ನಾದ ಸನಕಾದಿ ಮುನಿವಂದಿತಾ ಮಾಧವ ಮಹಿಧರ ಯಾದವ ಕರುಣ ಪ ಯೋಧದಿ ಎನ್ನಪರಾಧವನೆಣಿಸದೆ ಸಾಧನ ಕೆಡಿಸುವ ಕ್ರೋಧವ ಬಿಡಿಸಾರಾಧನೆ ತಿಳಿಯದು ಭೂದೇವರೊಡಿಯಾ 2 ಕರವಾ ಬಿಡದಿರೆನ್ನ ಕರಣ ಶುದ್ಧವ ಮಾಡು ಕರದ ಮಾತಿಗೆ ಭಯಂಕರವ ಓಡಿಸಿ ಮಂದ ಕರಿಯ ಕಾಯಿದ ಶುಭಕರ ಕಾಳಿ ಮಥನ ಸಂ ನಿತ್ಯ ಕರ ಪತಿ ಕುಲ ರತುನಾ ಕರಕೆ ಉಡುಪ ಮಕರಧ್ವಜಪಿತ ತೋರಿಸೊ ಭಜಕರರೊಳಗಿಡುವುದು 3
--------------
ವಿಜಯದಾಸ
ಕೃಷ್ಣ ಕೃಷ್ಣ ಬೇಡಿಕೊಂಡೆ ಕೃಪೆಯ ಪಾಲಿಸೋ ಪ ಎಷ್ಟು ಎಷ್ಟು ಕೇಳಿಕೊಂಡೆ ಎಳ್ಳಷ್ಟು ದಯಬಾರದೇ ಅ.ಪ ಬಳಲುತಿಹೆನು ಎತ್ತೋ ಕರುಣಿ 1 ನಿನ್ನ ಬಿಟ್ಟು ಇರುವೆನೆನೋ ನಿನ್ನದಯದಿ ನನ್ನ ಬದುಕು ನಿನ್ನ ಮರೆತೆ ತಪ್ಪುಕ್ಷಮಿಸು ನಿನ್ನ ದಾಸ ಪ್ರಾಣರಾಣೆ2 ಈಗ ಆಗ ಎಂದು ಹೇಳಿ ಭೋಗದಲ್ಲೇ ರತಿಯ ನೀಡಿ ನಾಗಶಯನ ನಾಮಸುಧೆಯ ಬೇಗ ಕೊಡದೆ ಬಿಡುವರೇನೋ3 ದಾಸನೆಂದು ಭಕ್ತಿಯಿತ್ತು ನಾಶಮಾಡೋ ಕುಂದುಗಳ ನೀ4 ಲೋಕವೆಲ್ಲ ಪೊರೆದ ನಿನಗೆ ಸಾಕೆ ಎನ್ನ ಕಷ್ಟವೇನೋ ನಾಕ ದೊರೆಯೆ ಪುಣ್ಯಶ್ಲೋಕ 5 ಬರಿಯ ಶುಂಠ ನಾನು ಹರಿಯೆ ಅರಿಯೆದಾರಿ ವಲಿಸೆನಿನ್ನ ಶರಣ ಜನರ ಬಿಡನು ಎಂಬ ಬಿರುದೊಂದೆ ಧೈರ್ಯವೆನಗೆ 6 ಶಿರಿಯರಮಣ “ಕೃಷ್ಣವಿಠಲ” ಶರಣು ಜ್ಞಾನ ಸುಖದ ಚರಣವೆರಡು ತೋರಿಸೆನಗೆ ನಿರುತ ಹೃದಯ ಕಮಲದಲ್ಲಿ 7
--------------
ಕೃಷ್ಣವಿಠಲದಾಸರು
ಕೃಷ್ಣ ನಿನ್ನ ಸ್ಮರಣೆ ಎನಗೆ ಮರೆಸಬೇಡವೋ ಎನಗೆ ಮರೆಸಬೇಡವೊ ಯನಗೆ ಮರಿರೆಸಬೇಡವೊ ಪ. ಮಂದ ಮತಿಯಳ ಬಂದು ಕಾಯೋ ನೀ ಬಂದು ಕಾಯೋ ನೀ ಮಂದರೋದ್ಧರ ಸಿಂಧುಶಯನ ಇಂದಿರೆ ರಮಣ 1 ಹಗಲು ಇರಳು ನಿನ್ನ ಸ್ಮರಣೆ ಎನೆಗೆ ಮರೆಸ ಬೇಡವೋ ಹಗರಣ ಮಾಡಿಸಿ ಎನಗೆ ನಿನ್ನ ಸ್ಮರಣೆ ಮಾಡಿಸೋ 2 ರಮಾ ವಲ್ಲಭ ವಿಠಲ ನಿನ್ನ ನಾಮ ನಿರಂತರ ನುಡಿಸೋ ಯನೆಗೆ ಸ್ವಾಮಿ ನಿರಂತರ ನುಡಿಸೋ 3
--------------
ಸರಸಾಬಾಯಿ
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ