ಒಟ್ಟು 1017 ಕಡೆಗಳಲ್ಲಿ , 68 ದಾಸರು , 626 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೊ ಸ್ವಾಮಿ ನೀ ಪಕ್ಷಿ ಸುವಾಹನ ಭಿಕ್ಷೆ ಸುನೀಡೊ ನೀ ಲಕ್ಷ ಸುಸಾಧನ ಅಕ್ಷಯಾನಂದ ನೀ ಲಕ್ಷುಮಿ ಜೀವನ ಪಕ್ಷ ನೀ ಪ್ರಾಣಕ ಈಕ್ಷಿಸಿದವನ 1 ಸೃಷ್ಟಿಗಧಿಕ ನೀ ವಿಷ್ಣು ಜನಾರ್ಧನ ಕಷ್ಟ ನೀ ಹಿಂಗಿಸೊ ದುಷ್ಟರ ಮರ್ದನ ಶಿಷ್ಟರ ಪಾಲಕ ಶ್ರೇಷ್ಠ ನಾರಾಯಣ ದೃಷ್ಟಿಸಿ ನೋಡೊ ನೀ ಕೃಷ್ಣ ಕೃಪಾಘನ2 ಈಶನೆಂದರಿಯದೆ ದೋಷದ ರಾಶಿ ನಾ ವಾಸನೆ ಪೂರಿಸೊ ದಾಸರ ದಾಸ ನಾ ಏಸು ತಾ ಜನ್ಮಕೆ ಬಂದು ಸೂಸಿದೆನೊ ಹೇಸಿತು ಜೀವನ ಸ್ಮರಿಸಬೇಕೆಂದು ನಾ 3 ನಿಮ್ಮನೆ ನೋಡಬೇಕೆಂದು ಬಂದೆ ನಾ ಘಮ್ಮನೆ ಪೂರಿಸೊ ಭಾವನೆ ಕಂದನ ತಮ್ಮನೆ ಬೇಡಿಕೊಂಬುದು ತಾ ವಂದನ ಅಮ್ಮ ನಮ್ಮಪ್ಪನೆ ಬಂಧು ನೀ ಎಂದೆ ನಾ 4 ಕಾಣದ ಪಾಮರ ಹೀನ ಸೂಕರ ಏನು ತಾ ಬಲ್ಲದು ಲೂನದ ಸೂಕರ ನೀನೆ ದಯಾನಿಧೆ ಜ್ಞಾನದ ಸಾಗರ ನ್ಯೂನ ನೋಡದೆ ತಾರಿಸೊ ಶ್ರೀಧರ 5 ಪಾರ ನೀ ಗೆಲಿಸೊ ದ್ವಾರಕಿನಾಥನೆ ಸಾರಿ ನೀ ಬೋಧವ ತಾರಿಸೊ ದಾತನೆ ತೋರಿ ನೀ ಪಾದವ ಬೀರು ಸ್ವಹಿತನೆ ಸಿರಿ ಲೋಲನೆ ನೀಕರುಣಿಸಿ ಮಾತನೆ 6 ಪಾಲಿಸೊ ಪ್ರಾಣವ ಬಾಲಮುಕುಂದನೆ ಲಾಲನೆ ನೋಡು ಗೋಪಾಲ ಗೋವಿಂದನೆ ತ್ಯಕ್ತ ನಾ ತಾಳು ನೀ ಸಚ್ಚಿದಾನಂದನೆ ಕೀಲನೆ ಹೇಳು ನೀ ಭಕ್ತಿಯ ವಂದನೆ 7 ದೇವರ ದೇವನೆ ಕಾವ ಕರುಣನೆ ಜೀವದ ಜೀವ ನೀ ಸ್ವಾಮಿ ಸರ್ವೇಶನೆ ಭಾವದ ಭಾವ ನೀ ಸಾವಿರ ನಾಮನೆ ಸೇವೆಗೆ ಯೋಗ್ಯನ ಮಾಡು ಸರ್ವೋತ್ಮನೆ 8 ಹಿಂಡ ದೈವಕೆ ಪ್ರಚಂಡ ಪರೇಶನೆ ಗಂಡು ಹೆಣ್ಣಿಗೆ ತಾ ಒಬ್ಬ ಸರ್ವೇಶನೆ ಮಂಡಿ ಮರೆಯಲಿಹನೆ ಮಹೇಶನೆ ಕಂಡುಕಾಂಬ ಸುಖದೋರು ದೇವನೆ 9 ವೇದಕ ನಿಲ್ಕದಾಭೇದ್ಯ ಪುರುಷನೆ ಸಾರ ಸುರಸನೆ ಅದಿಗಿಂದತ್ತಲ್ಯಾನಾದಿ ನಿರ್ವಿಶೇಷನೆ ಹಾದಿದೋರಿಕೊಡೊ ಭಕ್ತಿಗೊಂದೀಶನೆ 10 ಮಹಿಪತಿಗೆ ನೀ ಸ್ವಾಮಿ ಶ್ರೀನಾಥನೆ ಬಾಹ್ಯ ಅಂತ್ರಕೆ ನೀನೆವೆ ಸುದಾತನೆ ಸೋಹ್ಯದೋರಿಕೊಡೊ ಸಾಹ್ಯವುಳ್ಳಾತನೆ ತ್ರಾಹಿಯಂದವನ ಮಾಡು ಸನಾಥನೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ರಂಗ ಬಾರನ್ಹ್ಯಾಗೆ ಮಾಡಲಂಬುಜಾಕ್ಷಿಯೆ ರಂಗ ಬಾರನ್ಹ್ಯಾಗೆ ಮಾಡಲೆ ಪ ತಾಪ ಹೋಗದು ಶೀತ ಕಳೆವೊ ಸೂರ್ಯನಂತೆ ದ್ವಾರಾವತಿಯ ನಿಲಯನಮ್ಮ 1 ಅಕ್ಕ ರುಕ್ಮಿಣಿಯಲ್ಲಿ ನಕ್ಷತ್ರಮಧ್ಯಚಂದ್ರನಂತೆ ಪೊಕ್ಕಳಿಂದಲಜನ ಪಡೆದ ಚಕ್ರಧಾರಿ ಅಕ್ಕರ ಪಡುವೊ 2 ಕರೆದುತಾಹೋರೊಬ್ಬರಿಲ್ಲ ಕರುಣಾನಿಧಿಯೆಂಬುವುದು ಸಲ್ಲ ತರುಣಿ ಸತ್ಯಭಾಮೆಗಧಿಕ ತಿಳಿದು ತನ್ನ ರುಕ್ಮಿಣಿಯಲ್ಲಿರುವ 3 ಉಂಗುರದ ಹರಳಿನಂತೆ ಹೊಂದಿಕೊಂಡು ರುಕ್ಮಿಣಿಯನ್ನು ಇಂದಿರೇಶ ಬಿಟ್ಟಿನ್ನೊಬ್ಬರ ಮಂದಿರಕ್ಕೆ ಬಂದಿಹನ್ಹ್ಯಾಗೆ 4 ಮಂದಮತಿಯು ಆದನೇನೆ ತಂದೆಯಾದ ಸತ್ರಾಜಿತನು ತಂದುಕೊಟ್ಟನೆನ್ನ ಈ ಸುಂದರಳಾದ ಸೌ(ಸವ?) ತಿ ಕೆಳಗೆ 5 ಅಕ್ರೂರಜಮಿಳಂಬರೀಷ ಚಿಕ್ಕಧ್ರುವ ಪ್ರಹ್ಲಾದ ಗಜನು ಭಕ್ತಿಯಿಂದ ಕರೆಯೆ ಕಣ್ಣೆತ್ತಿ ನೋಡನವರನೀಕಾಲಕ್ಕೆ 6 ಗಾಯನದಿ ಗಂಧರ್ವ ಬಂದು ನಾರದ ಸುದಾಮ ಬಂದು ಬೇಡಿಕೊಂಡು ಕರೆಯಲವರ ನೋಡಿ ಮುಂದಕೆ ಬರುವನಲ್ಲ 7 ಸೋಳ ಸಾವಿರ ಸತಿಯರೆಲ್ಲ ಭಾಳ ಚಿತ್ರಭೂಷಿತರಾಗಿ ಏಳು ಕೃಷ್ಣೇಳೆಂದು ನಾಲ್ಕು ತೋಳು ಪಿಡಿದು ಕರೆವೋಣೇನೆ 8 ನೀಲ ಜಾಂಬವಂತಿ ಹಚ್ಚಿದ್ಹಗಲು ಬತ್ತಿಯಂತೆ ಸುತ್ತುಗಟ್ಟಿ ಕರೆವೋಣೇನೇ 9 ಪುತ್ಥಳ್ಯಂತ ರುಕ್ಮಿಣಿ ತೊಡೆಯಲಿಟ್ಟು ಕುಳಿತನಿಂದಿರೇಶ ಬಿಟ್ಟರಾಕೆ ನಮ್ಮನು ಕಣ್ಣೆತ್ತಿ ನೋಡೋದಷ್ಟೆ ಹೊರತು 10 ಗೊಲ್ಲ ಸತಿಯರೆಲ್ಲ ತಮ್ಮಲ್ಲಿ ದಧಿಬೆಣ್ಣೆಗಳ ತಂದು ಮೆಲ್ಲು ಕೃಷ್ಣಯೆಂದು ಕರೆಯೆ ಫುಲ್ಲನೇತ್ರ ತೆಗೆದುಕೊಂಡ11 ಕುಬ್ಜೆ ಕರದಿ ಗಂಧ ಹಚ್ಚೇನೆಂದು ಕರೆಯೆ ಬೆನ್ಹತ್ತಿ ಬರುವನೇನೆ ಕೃಷ್ಣ 12 ಸಾಸಿರ್ಹೆಡೆಯ ಮಂಚವಿಳಿದು ಸರಸವಾದ ವಚನದಿಂದ ಭೀಷ್ಮೆ ಭಿಡಿಯವೇನೆ ಭೀಮೇಶಕೃಷ್ಣನ ಕರೆವೋದಕ್ಕೆ13
--------------
ಹರಪನಹಳ್ಳಿಭೀಮವ್ವ
ರಂಗಯ್ಯ ನಿನಗಿದು ಸರಿಯೇನು ಹರಿಯೆ ಪ ಮಂಗಳಮಹಿಮ ಕೃಪಾಂಗ ತವ ಪಾದಾಂತ ರಂಗದಿ ಭಜಿಪರ್ಗೆ ಭಂಗವೆ ಜಗದೊಳು ಅ.ಪ ಪರಿಪರಿ ಮೊರೆಯಿಟ್ಟು ಸೆರಗೊಡ್ಡಿ ಚರಣದಿ ನಿರುತದಿಂ ಬೇಡಲಮರೆ ಕಾಯದಿರುವರೆ 1 ದೀನದಯಾಳುವೆ ನೀನೆ ಗತಿಯೆನ್ನುತ ಧ್ಯಾನಿಪ ಬಡವರ ಮಾನ ಕಾಯದಿಹ್ಯರೆ 2 ನಿನ್ನ ಬಿಟ್ಟರೆ ಅನ್ಯಯಿನ್ನಿಲ್ಲ ಜಗದಿ ಭಾರ ನಿನ್ನದೇ ಶ್ರೀರಾಮ 3
--------------
ರಾಮದಾಸರು
ರಾಮಾರ್ಯ ನಿಮ್ಮಂಘ್ರಿ ಕಮಲಗಳಿಗೆ ಕರವ ಕರುಣದಿ ನೋಡು ವೆಂಕಟ ಪ. ಬಾಹ್ಯ ಕರ್ಮವ ತೊರೆದು ಸರ್ವಗತನಾದ ನರ ಸಿಂಹನ ಪ್ರೀತಿಗಳಿಸುವ ಸ್ನೇಹದಿ ಮಹ್ಯಮರರಿಗೆ ವಿದ್ಯೆ ವಸ್ತ್ರಾನ್ನ ಪ್ರತಿ ದಿವಸ ಸಹ್ಯವಿಲ್ಲದೆ ಕೊಟ್ಟು ಮೋದಿಸುವ ವೆಂಕಟ1 ವಾಸುದೇವ ವಿಠಲನಂಘ್ರಿಗಳ ರಾ ಜೀವ ಮಧುಕರ ಮಧ್ವ ಶಾಸ್ತ್ರಜ್ಞನೇ ಅವ ದೇಶದೊಳಿದ್ದರೇನ್ಮರೆಯದೆ ನಿಮ್ಮ ಸೇವ ಸೇವಕರೊಳಗೆ ಎಣಿಸುವುದು ವೆಂಕಟ2 ಬಾಲಕನ ಬಿನ್ನಪ ಲಾಲಿಸಿ ಕರುಣದಿ ಗೋ ಪಾಲ ವಿಠಲನ ದಾಸರ ಮಗನೆಂದು ಪಾಲಿಪುದು ಪರಮ ಕರುಣಾಳು ಜಗನ್ನಾಥ ವಿಠಲ ಗಾಳೆನಿಪ ಪವಮಾನ ಗಾಯನನೆ ವೆಂಕಟ 3
--------------
ಜಗನ್ನಾಥದಾಸರು
ಲೇಸುಲೇಸಾಯಿತು ಸದ್ಗುರು ಕೃಪೆ ಲೇಸುಲೇಸಾಯಿತು ಧ್ರುವ ಆದಿತತ್ವದ ಙÁ್ಞನ ಇದಿರಿಟ್ಟಿತು ಘನ ಲೇಸುಲೇಸಾಯಿತು ಭೇದಿಸಲು ಮನೆ ಅದೆ ಆಯಿತುನ್ಮನ 1 ಲೇಸುಲೇಸಾಯಿತು ಙÁ್ಞನಾಗಮ್ಯದ ಸ್ಥಾನ ಎನಗಿದೆ ನಿಜ ಧ್ಯಾನ 2 ಭಾವದ ಬಯಲಾಟ ಠಾವದೋರಿತು ನೀಟ ಲೇಸುಲೇಸಾಯಿತು ಸುವಿದ್ಯ ಗುರುನೋಟ ಸರಿಮಾಡಿತೀ ಮಾಟ 3 ನೀಡಿದಭಯ ಹಸ್ತ ಮಾಡಿತು ಮನಸ್ವಸ್ಥ ಗೂಢವಾಗಿಹ್ಯ ವಸ್ತಗೂಡಿತು ಸಾಭ್ಯಸ್ತ 4 ಇಹಪರಕ ಸ್ವಾದ ಮಹಾಗುರುಪ್ರಸಾದ ಸಾಹ್ಯಮಾಡುದೆ ಸದಾ ಮಹಿಪತಿ ಗುರುಬೋಧ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಂಚನೆಲ್ಲಿಹುದಯ್ಯ ವೈಕುಂಠಪತಿ ಗೊಂಚನೆಲ್ಲಿಹದಯ್ಯ ಪ ವಂಚನೆಲ್ಲಿಹ್ಯದು ವಿರಂಚಿತಾತನಿಗೆ ಕಿಂಚಿತ್ತು ಧ್ಯಾನಕ್ಕಾಗೊಂಚನಿಲ್ಲದೆ ಬಂದ ಅ.ಪ ಚರಣದಾಸರೆಂದು ಪಾಂಡವರ ತುರಗಕಾಯ್ದ ನಿಂದು ನರಗೆ ಬೆಂಬಲನಾಗಿ ತಿರುಗಿದ ಧುರದಲಿ ಜರ ಮರೆಯಾಗದೆ ಪರಮಕರುಣಾಕರ 1 ಜಾಗುಮಾಡುತಲಿವ ಭಕ್ತರ ಯೋಗಕ್ಷೇಮ ತಿಳಿವ ನೀಗದಂಥ ಮಹಾಭೋಗಭಾಗ್ಯವಿತ್ತು ಬಾಗಿಲ ಕಾಯ್ದನು ಸಾಗರನಿಲಯ 2 ಜಾರನೆನಿಸಿಕೊಂಡ ಒಲಿದು ಚೋರನೆನಿಸಿಕೊಂಡ ತೋರಿದವರ ಮನಸಾರ ವರವಿತ್ತು ಭೂ ಭಾರವಿಳುಹಿದ ನಮ್ಮ ಧೀರ ಶ್ರೀಗುರುರಾಮ 3
--------------
ರಾಮದಾಸರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವರದೇಂದ್ರವಿಠಲರ ಹಾಡು ಆಶೆಯ ಬಿಡಿಸಯ್ಯಾ | ಶ್ರೀಶ ಪ್ರಾ |ಣೇಶ ದಾಸರಾಯಾ ||ವಾಸುದೇವನ ಕಥೆ ಸೋಸಿಲಿ ಪಾಡುವ |ಲೇಸು ಭಕುತಿ ನೀಡೋ | ನೋಡೋ ಪ ಹರಿ ಗುರುಗಳ ಪ್ರಿಯಾ ನೆನಿಸೀ |ಮೆರೆದಿಯೊ ಗುರುರಾಯಾ ||ಸರುವದ ಶ್ರೀ ಹರಿ ಸ್ಮರಣೆಯ ಮಾಡುತ |ಧರೆಯೊಳು ಚರಿಸಿದ | ಭರದಿ 1 ಜ್ಞಾನ ಶೂನ್ಯನಾಗೀ ಜಗದಿ |ಮಾನವರಿಗೆ ಬಾಗಿ |ದಾನವಾ ಧ್ಯಾನ ಮಾಡದೇ |ಹೀನನಾದೆನು ನಾನು | ಇನ್ನೇನು 2 ವರದೇಂದ್ರರ ಸದನಾ | ಬಳಿಯಾ |ಇರುತಿಹ್ಯ ಜಿತ ಮದನಾ ||ಮರುತ ಮತದ ಸದ್ಗ್ರಂಥದ ಸಾರವ |ತ್ಪರಿತದಿಂ ಪೇಳ್ದಿ | ಬಾಳ್ದಿ 3 ಕಂದನೆಂದುಯೆನ್ನ | ಕಾಯ್ವದು |ಸುಂದರ ಗುರು ಮುನ್ನಾ ||ನಂದ ಕಂದನ ಅಂದ ಪಾದವಾ |ಚಂದದಿ ತೋರೋ | ಬಾರೋ 4 ಭಾಗವತ ಪದಧೂಳಿಯಲಿ |ಪೊರಳಾಡಿಸೋ ಯಂದೇ | ತಂದೇ 5
--------------
ಶ್ರೀಶಪ್ರಾಣೇಶವಿಠಲರು
ವಾದಿಸಿ ಗತಿಹ್ಯದೇನಣ್ಣ ನಿಜ ಹಾದಿತಿಳಿದು ನೋಡೆಲೊ ಜಾಣ ಪ ವಾದ ಭೇದ ನೀಗಿ ಮಾಧವನ ಮಹ ಪಾದ ಮಹಿಮೆಯನು ಕಾಣಣ್ಣ ಅ.ಪ ವೇದಕೆ ನಿಲುಕದ ಮಾತಣ್ಣ ನಿನ್ನ ವಾದಕೆ ಸುಲಭರುತಿಹ್ಯದೇನ ವೇದಸ್ಮøತಿಯ ನಿಜಬೋಧನರಿದು ಯಮ ಭವ ತುಳಿಯಣ್ಣ 1 ವಾಸನೆ ಹಸನ ಮಾಡಣ್ಣ ಮನ ದಾಸೆ ದ್ವೇಷಗಳ ಕಡಿಯಣ್ಣ ಶ್ರೀಶನ ದಾಸರ ವಾಸದಿರ್ದು ಅನು ಪಾದ ಭಜಿಸಣ್ಣ2 ಹಮ್ಮು ಚುಮ್ಮುಗುಣ ನೀಗಣ್ಣ ಕಾಯ ಕರ್ಮ ಕಡಿದು ನಿರ್ಮಲಾಗಣ್ಣ ನಿರ್ಮಲಾತ್ಮ ಪರಬ್ರಹ್ಮ ಶ್ರೀರಾಮನ ಮರ್ಮ ತಿಳಿದು ಮುಕ್ತಿ ಕೂಡಣ್ಣ 3
--------------
ರಾಮದಾಸರು
ವಾಸುದೇವನನಾ ಶ್ರೈಸದಿಹ ಉಪಾಸನ್ಯಾತಕೆ ಧ್ಯಾಸ ಬಲಿಯದಿಹ ಮಿಗಿಲಭ್ಯಾಸವ್ಯಾತಕೆ ಧ್ರುವ ಹೃದಯ ಶುದ್ಧವಾಗದೆ ಉದಯಸ್ನಾನವ್ಯಾತಕೆ ಬದಿಯಲೀಹ್ಯ ವಸ್ತುಗಾಣದ ಜ್ಞಾನವ್ಯಾತಕೆ ಉದರ ಕುದಿಯು ಶಾಂತ ಹೊಂದದ ಸಾಧನ್ಯಾತಕೆ ಬುಧರ ಸೇವೆಗೊದಗದೀಹ ಸ್ವಧನವ್ಯಾತಕೆ 1 ಭಾವ ನೆಲಿಯುಗೊಳ್ಳ ದೀಹ್ಯ ಭಕುತಿದ್ಯಾತಕೆ ಕಾವನಯ್ಯನ ಕಾಣದೀಹ್ಯ ಯುಕತದ್ಯಾತಕೆ ದೇವದೇವನ ಸೇವೆಗಲ್ಲದ ಶಕುತ್ಯದ್ಯಾತಕೆ ಹ್ಯಾವ ಹೆಮ್ಮೆ ಅಳಿಯದೀಹ್ಯ ವಿರುಕಿತ್ಯಾತಕೆ 2 ತತ್ವ ತಿಳಿಯದಿಹದೀ ವಿದ್ವತ್ವವ್ಯಾತಕೆ ಸತ್ವಗುಣದ ಲಾಚರಿಸದಿಹ್ಯ ಕವಿತ್ಯವ್ಯಾತಕೆ ಚಿತ್ತಶುದ್ಧವಾಗದಿಹ ಮಹತ್ವವ್ಯಾತಕೆ ವಿತ್ತ ಆಶೆಯು ಅಳಿಯದಿಹ ಸಿದ್ಧತ್ವವ್ಯಾತಕೆ 3 ನೀತಿಮಾರ್ಗವರಿಯದೀ ಹ ರೀತ್ಯದ್ಯಾತಕೆ ಮಾತುಮಿತಿಗಳಿಲ್ಲದವನು ಧಾತುವ್ಯಾತಕೆ ಅಮೃತ ಊಟವ್ಯಾತಕೆ ಜ್ಯೋತಿ ತನ್ನೊಳರಿಯದಲೆ ಉತ್ತಮದ್ಯಾತಕೆ 4 ನಿತ್ಯ ಶ್ರವಣವ್ಯಾತಕೆ ನೆನವು ನೆಲೆಯಾಗೊಳ್ಳದಿಹ ಮನನವ್ಯಾತಕೆ ತನುವಿನಲ್ಲಿ ಘನವು ಕಾಣದನುಭವ್ಯಾತಕೆ ದೀನಮಹಿಪತಿಸ್ವಾಮಿಗಾಣದ ಜನಮವ್ಯಾತಕೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಾಸುದೇವನ್ನಾ ಪಾದವ ನಂಬಬಾರದೇ | ಈಶನೊಲಮಿಂದಾ ಸದ್ಗತಿ ಸುಖವು ದೊರದೇ ಪ ವನಜಭವಾದಿಗಳು ದೋರುವೆನಾ ಮುಕುತಿಯು ಪಾಯಾ | ಯನುತ ಬಂದರೆಯುನೊಡದಿರು ಅವರ ಕಡೆಯಾ 1 ಜಠರ ಬಾಗಿಲವಾ ಕಾವಾಶ್ವಾನನ ಪರಿಯಂತೆ | ನಿಷ್ಠೆಯೊಂದನೆ ಬಿಟ್ಟು ತಿರುಗಬ್ಯಾಡ ಕಂಡಂತೆ2 ಇಂದಿಗೆ ನಾಳಿಗೇ ಹ್ಯಾಂಗೆಂದು ಚಿಂತಿಸದಿರು | ಛಂದದಿ ಗೀತೆಯಲಿ ಸಾರಿದ ವಾಕ್ಯಾ ಮರೆಯದಿರು 3 ಶಿಲೆಯೊಳಗಿರುತಿಹಾ ಕಪ್ಪಿಗಾಹಾರ ನೀಡುವರಾರೋ | ತಿಳಿದು ನೀನೀಗ ಹಲವ ಹಂಬಲವ ಹಿಡಿಯದಿರು 4 ಎರಡು ದಿನದಿದು ಸಂಸಾರವೆಂಬುದು ನೋಡಿ | ಅರಿತು ಇದರೋಳಗ ಸಾರ್ಥಕ ಸಾಧನವ ಮಾಡಿ 5 ಒಂದು ಭಾವದಲಿ ತ್ವರಿತದಿ ಹೊಕ್ಕರ ಶರಣವನು | ತಂದೆ ಮಹಿಪತಿ ಸುತ ಸನ್ಮಾರ್ಗ ಕೂಡಿಸುತಿಹನು 6 ಏನೆಂದರಿಯದಾ ಕಂದಗೆ ಉದ್ದರಿಸಿದ ನೋಡೀ | ತಂದೆ ಮಹಿಪತಿಯು ದಾರಿಯ ದೋರಿದ ದಯಮಾಡಿ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ
ವೆಚ್ಚಕುಂಟು ನಮಗೆ ಅಚ್ಯುತನಾಮ ನಿಶ್ಚಯದ ಧನವು ಧ್ರುವ ವೆಚ್ಚಮಾಡಿದರೆಂದಿಗೆ ಅಚ್ಚಳಿಯದು ನಿಶ್ಚಯದ ಬದಕು ಬಚ್ಚಿಟ್ಟುಕೊಂಡು ನಿಜ ಎಚ್ಚರಿಕಿಂದ ನಿಶ್ಚಿಂತದಲಿ ಉಂಬೆನು 1 ಸಂಚಿತ ಧನವು ಬಡತನವನು ಹಿಂಗಿಸಿತು ಒಡಿಯನಖಂಡ ಕೃಪೆಯಿಂದಲಿ 2 ಸಾದ್ಯವಾಯಿತು ಎನಗೆ ಸದ್ಗುರು ಕೃಪೆಯಿಂದ ನಿಜಧನವು ಮಾಡಿ ಸಾಧಿಸೊಕೊಂಬುವದು 3 ಕಟ್ಟಬಿಡಲಾಗುದು ವಿಟ್ಟಿ ಹ್ಯಧನಕೊಟ್ಟರೆಂದಿಗೆ ತೀರದು ಇಟ್ಟಿಹ ತನುಮನದಲಿ ಘಟ್ಯಾಗಿ ಕೇಳಿರೊ ಈ ಮಾತವ 4 ಅರುಹು ಅಂಜನವಿಟ್ಟಿ ತೋರಿದ ಗುರುಕರದಲಿ ಈ ಧನವು ಹರುಷವಾಯಿತು ಎನಗೆ ಧರೆಯೊಳು ತರಳಮಹಿಪತಿಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವೇದದ ಮೂಲ ಆದಿ ಅನುಕೂಲ ಸಾಧು ಜನರ ಸದ್ಛನ ಲೋಲ ಧ್ರುವ ಕೀಲ ಬುಧರಕನುಕೂಲ ಇದೇ ನಿಜ ನೋಡಿರೊ ಸಾಧಿಸಿ ಘನಸುಖಗೂಡಿರೊ 1 ಜ್ಞಾನದಾಸರ ಧ್ಯಾನದಂತರ ಖೂನದಾ ವಿವರ ಅನುಭವಾಧಾರ ಕಣ್ಣಾರ ಎನ್ನ ಮನೋಹರ 2 ಗುಹ್ಯ ಗೌಪ್ಯಸ್ಥ ಮಹಾಪ್ರಶಸ್ತ ಈಹ್ಯ ಸೌಭ್ಯಸ್ಥ ಮಹಿಮರ ತಸ್ತ ಸುವಸ್ತ ಶ್ರೀಗುರು ಸಮರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವೇದಾಬಲು ಸ್ವಾದ ಪ ಸಾದರದಲಿ ಬಿಡದೋದಿ ಪಠಿಸುವಗೆ ಅ.ಪ ಆದಿಯನಾದಿಗಳ ಹಾದಿಯ ತೋರಿ ಸ- ಗುಹ್ಯ ಪ್ರತಿತಾರ್ಥಗಳಿಹ 1 ಘನಸಾಧನೆಗಳಿಗನುಕೂಲಿಸುವುದು 2 ಸ್ವರಿತೋದಾತ್ತನುದಾತ್ತ ಪ್ರಚಯಗಳಿಂ ಗುರುರಾಮವಿಠಲನ ಚರಣನೋಡುವದಕೆ ವೇದಾ 3
--------------
ಗುರುರಾಮವಿಠಲ