ಒಟ್ಟು 40875 ಕಡೆಗಳಲ್ಲಿ , 138 ದಾಸರು , 10069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆನ್ನೊಳಡಗಿದೆಯೊ ರಂಗಯ್ಯ ನಾನಿನ್ನೊಳಡಗಿಹೆನೆ ಪ ನೀನೆನ್ನೊಳಡಗಿಹುದೇನೂ ಅಚ್ಚರಿಯಿಲ್ಲ ನಾನಿನ್ನೊಳಡಗಿಹುದೆನೆ ಸಂದೇಹವಯ್ಯ ಅ.ಪ ಆತ್ಮಾರಾಮನು ನೀನು ರಂಗ | ನಿಜಾತ್ಮಪ್ರಕೃತಿ ನಾನು [ಆತ್ಮೋದ್ಧಾರಕ ನಿನ್ನಬಿಟ್ಟರಾನಿಲ್ಲವೋ ರಂಗ] 1 ಒಬ್ಬಳೆಂಜಲ ತಿಂದೆ ರಂಗ ನೀನೊಬ್ಬಳಿಗಕ್ಷಯವಿತ್ತೆ ಒಬ್ಬರೊಳು ಜನಿಸಿ ಮತ್ತೊಬ್ಬರೊಳು ಬೆಳೆದೆ ಇನ್ನೊಬ್ಬನಾನೊಬ್ಬ ಇನ್ನೊಬ್ಬರಿಲ್ಲವೋ ರಂಗ 2 ಕೊಡುವೆನೆನ್ನೊಳಗಿಹುದರಂಗಯ್ಯ ಹಿಡಿಯೆನ್ನ ಕರವ ಪಡೆವೆನದನೆ ಅಯ್ಯ ಕೊಡಬೇಡ ಜನುಮವ ತಡವೇಕೆ ಮಾಂಗಿರಿಯಯ್ಯ ನೀನೊಲಿದೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೇ ಅನಾಥ ನಾನೇ ಸನಾಥ ಪ ಜ್ಞಾನಿಗಳಾಡುವರು ಯೀಪರಿ ಮಾತಾ ಅ.ಪ ನಂಬಿರುವುದೆ ಸುಳ್ಳು ನಂಬಿದಿರುವದೆ ನಿಜ ಹಂಬಲಿಸಿದರೇನು ತುಂಬುವುದಿಲ್ಲ 1 ಇಲ್ಲಾ ಎಂಬೋದುಂಟು ಉಂಟೂ ಎಂಬೋದಿಲ್ಲ ಬಲ್ಲರು ಸರ್ವರು ಬಾಯಿಮಾತಲ್ಲ 2 ಮಾನಾಭಿಮಾನ ನಿನ್ನಧೀನವು ಹರಿಯೇ 3 ಕಾಣೋದು ಕೇಳೋದು ಮಾಣಾದೆ ಮಾಡೋದು ನೀನೆ ಯನ್ನೊಳಗಿದ್ದು ನಡೆಸುತ್ತಲಿರುವೆ 4 ಎನಗೇ ನೀನೆ ತಂದೆ ನಿನಗೇ ತಂದೆ ಕಾಣೆ ಸಿರಿನಲ್ಲ 5 ನಿನ್ನೊಳಗೆ ಜಗವು ಜಗದೊಳಗೆ ನೀನೆ ಪನ್ನಗ ಶಯನಾ ಪಾವನ ಚರಿತನೆ 6 ಸರುವಾರೊಳಗೂ ಗುರುರಾಮ ವಿಠ್ಠಲ ಪರಿಪೂರ್ಣನೆಂಬೋದು ಪ್ರಹ್ಲಾದ ಬಲ್ಲ7
--------------
ಗುರುರಾಮವಿಠಲ
ನೀನೇ ಕಾಪಾಡಬೇಕು ನಿರುತವು ಬಿಡದೆಯ- ಜ್ಞಾನಾಬ್ಧಿಯ ದಾಟಿಸು ಸೀ- ಕಮಲ ಭೃಂಗ ಶುಭಾಂಗ 1 ಸುಗ್ರೀವನ ಮಂತ್ರಿವರ ದ- ಶಗ್ರೀವನ ಗುದ್ದಿದವನೆ ಶತ್ರುನಿಕರವಂ ಶೀಘ್ರದಿ ಗೆಲುವಂದದಲಿಯ- ನುಗ್ರಹವ ಮಾಡುತಲೆಮ್ಮ ಕೈಪಿಡಿ ಹನುಮ 2 ತ್ವರಿತವತಿ ನಿಧಾನವಲಸಿಕೆಗಳನು ಬಿಡಿಸಿ ಪಿರಿಯರು ಪೇಳಿದ ಪರಿಯಲಿ ನೆರೆನಡೆವಂದದಲಿ ಸುಮತಿಯನು ಕೊಡು ಹನುಮ3 ಹೊರಗಿನ ಶತ್ರುಗಳಂ ವಾ- ಕ್ಪೌರುಷದಿ ವೋಡಿಸಲುಬಹುದು ಒಳಗಿನ ಕಾಮ್ಯಾ ದ್ಯರ ಗೆಲುವುದಕೆ ಶಾಂತಿಯೆ ಕ್ಷುರವಹುದು ದಯಮಾಡಿ ನೀನೆ ಕರುಣಿಸು ಹನುಮ4 ಕತ್ತಿಯಲಿ ಕಡಿದೆರೆರಡಾ- ಗುತ್ತಿರುವುದು ಜಡವು ವಾಕ್‍ಕತ್ತಿಯ ದೆಸೆಯಲಿ ನೆತ್ತಿಮೊದಲು ಪಾದವರಿಗು ಕತ್ತರಿಸಿದರೀತಿಯಹುದು ಕಾಯೈ ಹನುಮ 5 ಪರಧನ ಪರಾಕಾಮಿನಿಯರಿ ಕೊರಳೊಳರಿವೆಂಬ ರಜ್ಜುವಿಂದಲಿ ವಿರಾಗ ದೊಣ್ಣೆಯನು ಕಟ್ಟಿ ಕೈಪಿಡಿ ಹನುಮ 6 ಸಂಗವು ನಿತ್ಯಾಹ್ನೀಕಕೆ ಭಂಗವು ಬರುತಿಹುದು ಸದ್ವಿಷಯವಾದರದೆ ಬಂಗಾರವು ರತ್ನವು ತಾ ಹಿಂಗದೆ ಸೇರಿಸಿದ ರೀತಿ ಹಿತವೈ ಹನುಮ 7 ನವವಿಧ ಭಕ್ತಿಯ ಕೊಡು ರಾ- ಘವನಂಘ್ರಿಪರಾಗದಲಿ ಕಡು ವಿರತಿಯನು ನೀಂ ತವಕದಲಿ ಪಾಲಿಸುತಲಿ ನಿ- ನ್ನವರಂ ಕೈಪಿಡಿವುದೆಂದಿಗೂ ಬಿಡದೆ ಹನುಮ 8 ತಾನನುದಿನದಿ ಬರುವ ಕಷ್ಟಗಳನು ಪರಿಹರಿಸುತ್ತ ಹಿಂದೆ ತಿರುಗುತಲಿರುವಂ9
--------------
ಗುರುರಾಮವಿಠಲ
ನೀನೇ ಗತಿಯೆನಗಿನ್ನು ದೀನನಾದೆನು ಬಹಳ ನೀನಲ್ಲದಾರು ಬಳಿಕಾ ದೇವಾಏನು ಸಾಧನವುಂಟು ಶ್ರುತ್ಯರ್ಥಗೋಚರವೆ ಧ್ಯಾನಧಾರಣೆ ದೂರವು ದೇವಾ ಪಕಾಣದೇ ನಿನ್ನಂಘ್ರಿಕಮಲವನು ಭವವೆಂಬಕಾನನಕೆ ಗುರಿಯಾದೆನು ದೇವಾಪ್ರಾಣರಕ್ಷಕರಿಲ್ಲದತಿ ಕಷ್ಟಕೊಳಗಾದಏಣ ಕುಣಕನೊಲಾದೆನು ದೇವಾಏನೆಂಬೆ ಮೂಢತ್ವವೇ ಮೌಲ್ಯವೆನಗಾಯ್ತುಜ್ಞಾನ ದೊರಕೊಂಬುದೆಂತು ದೇವಾಜ್ಞಾನವಿಲ್ಲದೆ ಬಂಧ ಪರಿಹರಿಸದೆಂದೀಗಮಾನಸದಿ ಮರಗುತಿಹೆನು ದೇವಾ 1ದುರಿತಕೋಟಿಗಳ ಜನ್ಮಂಗಳಲಿ ಮಾಡಿದರೆದೊರಕಿತದರಿಂದ ಜಡವು ದೇವಾಪರಿಪರಿಯ ಕರ್ಮಗಳು ಜನ್ಮಗಳ ಕೊಡುವದಕೆತರತರದಿ ಕರವಿಡಿದಿವೆ ದೇವಾಗುರಿಯಾದೆನೀ ಪರಿಯ ಕರ್ಮಶರಧಿಯ ತೆರೆಗೆಪರಿಹರವ ಕಾಣೆನಿದಕೆ ದೇವಾಪರಮ ಪಾವನವಾದ ದುರಿತಹರ ನಾಮಕ್ಕೆಕರಗದೋ ನನ್ನ ಕರ್ಮ ದೇವಾ 2ಲೋಕದೊಳಗಿಹ ಪಾತಕರು ತಾವು ಜೊತೆಯಾಗಿಬೇಕೆಂದು ಪಾತಕವನು ದೇವಾಜೋಕೆಯಲಿ ಛಲವಿಡಿದು ಪಾಪರಾಶಿಯ ಮಾಡೆಸಾಕೆ ನಾಮದ ಸೋಂಕಿಗೆ ದೇವಾನೂಕುವುದು ನಿಷ್ಕøತಿಗೆ ಮಲತ ಪಾಪವ ನಾಮಬೇಕೆ ನೆರವೆಂಬುದದಕೆ ದೇವಾಯಾಕೆ ನಾನೊಬ್ಬ ಮಾಡಿದ ಪಾಪರಾಶಿಯನುನೂಕದಿಹ ಬಗೆುದೇನು ದೇವಾ 3ದುರಿತವೆನಗಿಲ್ಲೆಂದು ಸ್ಥಿರಬುದ್ಧಿುಂದೊಮ್ಮೆುರುತಿಹೆನು ಧೈರ್ಯವಿಡಿದು ದೇವಾಅರಿವು ಸಿಕ್ಕದೆ ಮರವೆ ಮುಂದಾಗಿ ನಿಂದಿರಲುಮರುಗಿ ಮತ್ತೊಮ್ಮೆ ಮನದಿ ದೇವಾಅರಿವೆಂತು ಸಿಕ್ಕುವದು ದುರಿತಭರಿತನಿಗೆಂದುಸ್ಥಿರಬುದ್ಧಿ ನಿಲ್ಲದಿಹುದು ದೇವಾಉರುಳುವುದು ಮನವೆಲ್ಲಿ ಪರಿವುತಿಹೆ ನಾನಲ್ಲಿಸ್ಥಿರವೆಂದಿಗೆನಗಪ್ಪುದು ದೇವಾ 4ಏನಾದಡೇನಘವು ಬಹಳವಾಗಿಹುದಿದಕೆಹೀನಬುದ್ಧಿಯೆ ಸಾಕ್ಷಿಯು ದೇವಾನಾನಿನಿತು ದೋಯಾದಡದೇನು ದೋಗಳನೀನೈಸೆ ರಕ್ಷಿಸುವನು ದೇವಾಭಾನುವಿನ ಮುಂಭಾಗದಲಿ ತಿಮಿರ ತಾ ನಿಂದುಏನಾಗಬಲ್ಲುದೈ ದೇವಾದೀನತನವಳಿವಂತೆ ಜ್ಞಾನವನು ಬಳಿಕಿತ್ತುಆನತನ ನೀ ರಕ್ಷಿಸು ದೇವಾ 5ಕಾಲ ಬಂದರೆ ಮೋಕ್ಷ ತಾನೆ ದೊರಕುವದೆಂದುಮೇಲಾಗಿ ಶ್ರುತಿ ನುಡಿಯಲು ದೇವಾಕಾಲವೆಂಬೀ ನದಿಗೆ ಕಡೆುಲ್ಲ ಮೋಕ್ಷಕ್ಕೆಕಾಲ ತಾ ಬಹು ದೂರವು ದೇವಾಕಾಲಕರ್ಮಗಳೆಂಬ ನೇಮವನೆ ದೃಢವಿಡಿಯೆಕಾಲವೇ ಕಲ್ಪಿತವದು ದೇವಾಲೀಲೆುಂ ನಿರ್ಮಿಸಿದ ಸಂಸಾರ ಭಂಜನೆಗೆಕಾಲವದು ನಿನ್ನ ಕೃಪೆಯು ದೇವಾ 6ನನ್ನ ನಂಬಿದವರ್ಗೆ ಸಂಸಾರಗೋಷ್ಪದವುಚೆನ್ನಾಗಿ ನಂಬಿಯೆಂದು ದೇವಾನಿನ್ನ ನುಡಿುಂದ ಗೀತೆಯಲಂದು ಬೋಧಿಸಿದೆಧನ್ಯನಾದನು ಪಾರ್ಥನು ದೇವಾಉನ್ನತದ ಯೋಗಾದಿ ಸಾಧನದಿ ಪರಿಹರವೆನಿನ್ನ ಕೃಪೆಯೇ ಮುಖ್ಯವು ದೇವಾನಿನ್ನ ನಂಬಿದೆನು ತಿರುಪತಿಯ ವೆಂಕಟರಮಣಧನ್ಯ ಧನ್ಯನು ಧನ್ಯನೂ ದೇವಾ 7ಕಂ|| ಬುಧವಾರದರ್ಚನೆಯನಿದಮುದದಿಂ ಸ್ವೀಕರಿಸಿ ನನ್ನ ಮೊರೆಯಂ ಕೇಳ್ದಾಬುಧ ಸಂಗವನಿತ್ತು ನಿನ್ನಪದಸೇವಕನೆನಿಪುದೆಂದು ವೆಂಕಟರಮಣಾಓಂ ಕಾಳೀಯ ಫಣಾಮಾಣಿಕ್ಯರಂಜಿತ ಶ್ರೀಪದಾಂಬುಜಾಯ ನಮಃ
--------------
ತಿಮ್ಮಪ್ಪದಾಸರು
ನೀನೇ ಘನ್ನ ಪಾವನ್ನ ಗುರುವರ ಪ ದಾನಿ ಅದಕನುಮಾನ ಮಾಡದೆ ನಾನಭೀಷ್ಟೆಯ ನೀನು ಕೊಡೋದಕೆ ಅ.ಪ ನಿನ್ನ ನಂಬಿದೆ ನಾನು ಯತಿಕುಲಾಗ್ರಣಿ ರನ್ನ ಪಾಲಿಸೊ ನೀನು ಅನ್ಯನಲ್ಲವೊ ನಿನ್ನ ತನುಜನು ಧನ್ಯನಾಗುವದನ್ನು ಸಲಿಸೋ ಘನ್ನ ಮಹಿಮಾಪನ್ನ ಪಾಲಕ 1 ಆರ್ತಜನಮಂದಾರಾ ಮೋಕ್ಷಾದಿ ಸತ್ಪುರು - ಷಾರ್ಥ ಮಹÀದಾತಾರ ತೀರ್ಥಪದಯುಗ ಪಾರ್ಥಸೂತಗೆ ವಾರ್ತೆ ತಿಳಿಸಿ ಆರ್ತಸತಿಯಾ ಅರ್ತಿ ಕಳೆದಿಹÀ ಕೀರ್ತಿ ಕೇಳಿ ಪ್ರಾರ್ಥಿಪೆನೊ ಕೃತಾರ್ಥನೆನಿಸೋ 2 ಮಾತಾ ಪಿತ ಗುರುದೂತಾ ಎನಗೆ ಭಾವಿ ವಿ - ಧಾತಾ ಭ್ರಾತ ಸುಪೋತ ಭೂತಪತಿ ಸುರಯೂಥ ವಂದ್ಯನೆ ದಾತ ಗುರುಜಗನ್ನಾಥ ವಿಠಲನ ದೂತ ಮನ್ಮನೋಜಾತ ಕಾಮಿತ ವ್ರಾತ ಸಲಿಸೋ 3
--------------
ಗುರುಜಗನ್ನಾಥದಾಸರು
ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ ಕುಂದದೇ ಭಜಿಸಲು ಮರುಗಿ ಬೇಗಾ ಇಂದಿರೇ ಅಜಭವರೆಂದೂ ಕಾಣದ ನಿಜ ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1 ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು ಹರಿರೂಪತಾಳ್ದು ದೈತ್ಯನ ಶಿರವಾ ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2 ಪಾತಕದಿಂದ ಗೌತಮಸತಿ ಶಿಲೆಯಾಗೆ ಭೂತಳದೊಳು ಪರಬೊಮ್ಮನೆಂಬೋ ಸೀತಾರಾಮಾವತಾರರಿಂದ ಸೌಂದರ್ಯ ನೂತನಪದ ಸೋಕಲು ನಿಜಸತಿಯಾದಳೋ 3 ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ ಹರಿಯೆಂದು ಕರೆದ ಉತ್ತರೆಗೆ ಬೇಗಾ ವರಚಕ್ರವನು ಮರೆಮಾಡಿ ಪರೀಕ್ಷಿತನ ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4 ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ ಸುರನು ಫಾಲಕ್ಷನ ಖತಿಗೊಳಿಸೆ ಸಿರಿವೇಲಾಪುರ ಚನ್ನಕೇಶವನಾವೇಶದಿಂ ಪರಿದಸುರನ ಕೊಂದು ಸ್ಥಿರವಾದಕಾರಣ 5
--------------
ಬೇಲೂರು ವೈಕುಂಠದಾಸರು
ನೀನೇ ದಯಾಳು ದೊರೆ ಸದ್ಗುರುನಾಥನೀನೇ ದಯಾಳು ದೊರೆ ಪ ಸತಿಸುತ ಮಿತ್ರರ ನೀನೇ ಮರೆಸಿದೆಮತಿಯನೆ ತುಂಬಿದೆ ಸದ್ಗುರುನಾಥ1 ನನ್ನನು ವೈದೆ ನಿನ್ನನು ಮಾಡಿದೆನನ್ನತನವ ಕಳೆದೆ ಸದ್ಗುರುನಾಥ 2 ಭವ ನಿನ್ನನು ಸ್ಮರಿಸೆನೀ ಚಿದಾನಂದರಸೇ ಸದ್ಗುರುನಾಥ 3
--------------
ಚಿದಾನಂದ ಅವಧೂತರು
ನೀನೇ ನಿನ್ನ ಮರೆದಿಹುದೇನು ಮನವೇ | ಸುಜ್ಞಾನದಿಂದ ನಿಜವನೀ ನರಿಯಲಿಲ್ಲವೇ ಪ ಶ್ವಾನ ಸೂಕರಾದಿ ಅತಿ ಹೀನ ಯೋನಿಯಲಿ ಸುಖದೊಳು | ನಾನಾ ಪರಿಯಲಿ ಬಾಹುದೇನು ಅನುವೇ 1 ಹರಿವ ಮೃಗಜಲಕ ಬೆಂಬತ್ತಿ ಪೋಪಾ ಹರಿಣನಂತೆ | ಹರಿದು ವಿಷಯ ಕೂಡಾ ಕೆಡುದೇನು ಗುಣವೇ 2 ನಿನ್ನ ಬಯಕೆಯಂತಾದಡೆ ಮನ್ನಿಸುವ ಅಲ್ಲದಡೆ | ಘನ್ನ ಚಿಂತೆಯೊಳು ಬೀಳುತಿಹುದೇನು ಸುಖವೇ 4 ನೆನೆದು ತರಿಸು ಮಹಿಪತಿ ಚರಣಾ ಚಿನ್ನ ಕೃಷ್ಣ ನಾ | ತನುವಿನೊಳಗಾಡುತಿಹ ನಿಜ ಮನವೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀನೇ ಶ್ರಾದ್ಧದನ್ನವನುಂಡವಾ ನಾನರಿಯದಂತೆ ಯೆನ್ನ ಗೃಹದೊಳು ಶ್ರೀವೈಷ್ಣವನಾಗಿ ಪ ಬಾಣಸಿಗಾದವರು ನೀನೋ ನಾರಾಯಣಿಯೋ ಕ್ಷೋಣಿಯೊ ರವಿಯೋ ಜಾಹ್ನವಿಯೊ ರತಿಯೋ ವಾಣಿಯೋ ಸುರಧೇನುವೋ ಬಂದಾತಧನಂಜಯನೂ ತಾನೆ ಎನ್ನ ಆದ್ದಾಗಾಯ ತೆಲೆದೇವಾ1 ತಿಳಿದೆ ನಾನೀಗ ನಿನ್ನನು ಕೂಡೆ ಬಂದಿದ್ರ್ದ ಬಿಳಿಯ ಚುಟ್ಟಿನ ಯೆಣ್ಣೆಗೆಂಪಿನವನೂ ಕುಳಿತವನು ಕೈಯಪುಸ್ತುಕದವನು ಕಂಕುಳೊಳ ಗಿಳಿದ ಮಡಿಗಡೆಯವರಾರು ಪೇಳೆಲೆ ದೇವಾ 2 ಆವಾವ ಸ್ಥಾನಕಾರಾರ ನೇಮಿಸಿದೆ ನೀ ದೇವಾ ಉಪಾಧ್ಯರಾರಭಿಶ್ರವಣವನು ಪೇಳ್ದ ಕೋವಿದರಾರು ಶ್ರೀವೈಷ್ಣವರಾರೆಲೆದೇವ 3 ಜನನ ಸ್ಥಿತಿಲಯಕೆ ಕಾರಣಭೂತನೋರ್ವ ನೀ ನೆನುತ ವೇದಾಂತಗಳು ಪೊಗಳುತಿರಲೂ ಇನಿತಕ್ಕೆ ಯೆಂದನ್ನದಗಳು ಕುಡಿತೇಪಾಲ್ಗೇ ಮನವ ಸೋತುದ ಬಿಡುವೆಯಾ ನಿತ್ಯತೃಪ್ತಾ 4 ಗುರುಗಳಂದದಲಿ ಶ್ರೀವೈಷ್ಣವ ನೀನಾಗಿ ಶರಣನಾ ಪಿತೃಗಳಿಗೇ ಶ್ರಾಧ್ಧವನುಂಡುದದೂ ಪಿರಿಯದಾಯ್ತು ಎನ್ನ ನೂರೂಂದು ಕುಲಕೆಲ್ಲಾ ಪರಮಪದವಾಯ್ತು ವೈಕುಂಠಚೆನ್ನಿಗರಾಯಾ 5
--------------
ಬೇಲೂರು ವೈಕುಂಠದಾಸರು
ನೀನೇ ಸಕಲವೆನಗೆ ಶ್ರೀರಾಮಚಂದ್ರ ನೀನೇ ದೊರೆಯರಸನೊ ಪ ಶ್ರೀನಿಧಿಯೆ ನಿನ್ನವರುಸತತ ಸಾನುರಾಗದ ಬಳಗವಹುದೈ ದೀನಜನಮಂದಾರ ನೇಹಂ ಶ್ರೀನಿಕೇತನ ಸತ್ಯಸಾರ ಅ.ಪ ತಾಮತಿಯು ಶ್ರೀ ಮನೋಹರ ಸಹಜರೆಲ್ಲ ಪ್ರೇಮ ಪಂಚ ರಾಮರೂಪವ ತೋರ್ಪನಾಡಿಯು 1 ಧನ್ಯ ಶರೀರವು ಮಾನ್ಯಗೆ ತಾಮಸದ ಸರೃಹವೂ ಕಣ್ಣನಿದ್ರೆಯು ಯೋಗಮುದ್ರೆಯು ಚಿಣ್ಣನ ಸಂಚರಂಗಳು ಸ್ವಾಮಿ ನಿನಗೆ ಪ್ರದಕ್ಷಿಣೆ 2 ಬಾಲನ ಮಾತುಗಳು ವೇದೊಕ್ತ ಸಶೀಲನ ಸ್ತೋತ್ರಗಳು ಕಾಲಂಕಾಲಗಳಲ್ಲಿ ಗೈಯುವ ಕಾರ್ಯಗಳು ಪರಮಾತ್ಮ ಸೇವೆಯು ಶ್ರೀಲತಾಂಗಿಯ ಲೋಲ ಧ್ಯಾನಿಪೆ ಪಾಲಿಸೈ ಜಾಜೀಶ ಕೇಶವ3
--------------
ಶಾಮಶರ್ಮರು
ನೀನೇನ ಮಾಡಲಾಪಿಯೋ ಲಕುಮೀಶಾ | ನಾನೀಗ ಪಡೆದದ್ದು ಉಣದಲೆ ಪೋಗುವದೆ | ಪ ಲೋಕದೊಳಗೆ ನಿನ್ನ ಕೊಂಡಾಡಿ ಪ್ರತಿದಿನ ಏಕ ಭಕುತಿಲಿ ಸರ್ವೋತ್ತಮನೆಂದು ಏಕಾಂತ ಭಜಿಪÀ ಮನುಜಗಾದರು ಬರೆದ ವಾಕು ತಪ್ಪುವದೇನೋ ಅಜನು ನಿರ್ನೈಸಿದ1 ಮುಂದೆ ಕೊಡುವ ಫಲಕೆ ಕರ್ತ ನೀನಲ್ಲದೆ ಹಿಂದಣಿಂದಲಿ ಬರುವ ಕಾಲಾಖ್ಯಕೆ ಒಂದು ಬಿಂದು ಮಾತ್ರ ತೊಲಗಿಪ ನಡತಿ ಕಾಣೆ ಅಂದಲ್ಲಿ ಏನು ಫಲ ಎನ್ನ ಕರ್ಮವಷ್ಟೇ 2 ಇದ್ದದೊಂದು ಮರಿ ಅಡಗಾಣಿಸಿ ಬಂದು ಹದ್ದು ತಾ ವೈಯಲು ಆ ಕುರುಬ ಯೆಲ್ಲಿ ಇದ್ದರೇನು ಭಯ ವಿಜಯವಿಠ್ಠಲ ನಿನ್ನ ಪೊದ್ದಿದವಗಾದರು ಅನುಭವಿಸದೆ ಬಿಡದು3
--------------
ವಿಜಯದಾಸ
ನೀನೇನು ಮಾಡಲಾಪೆನಾನು ಮುನ್ನ ಜನ್ಮ ಪಡೆದಲ್ಲದೆ ರಂಗ ಪ ಯೋನಿ ಮುಖದಲಿ ಬಾಹಹೀನತ್ವವನು ನೀನು ಕಳೆಯಲಾಪೆಯನಾನು ನನ್ನದು ಎಂಬ ಅಹಂಕಾರವಿರೆ ನಿನ್ನಧ್ಯಾನಿಸಲು ಬುದ್ಧಿಯ ಕೊಡಲಾಪೆಯ 1 ಸಂಚಿತವಾಗಿರುವ ಪ್ರಾರಬ್ಧದೊಳಗೊಂದುಕಿಂಚಿತಾದರೂ ನೀನು ಕಳೆಯಲಾಪೆಯಪಂಚೇಂದ್ರಿಯಂಗಳು ದೆಸೆದೆಸೆಗೆ ಎಳೆದಾಗವಂಚನೆ ಇಲ್ಲದೆ ನೀನಡ್ಡ ಬರಲಾಪೆಯ2 ಸರಸಿಜೋದ್ಭವಗೆ ಬುದ್ಧಿಯ ಪೇಳಿ ಪಣೆಯೊಳುಬರೆದ ಬರೆಹವನು ನೀನು ತೊಡೆಯಲಾಪೆಯಪರಬ್ರಹ್ಮ ಕಾಗಿನೆಲೆಯಾದಿಕೇಶವ ನಿನ್ನಸ್ಮರಣೆಗೈಯಲು ಕಾಯದಿರಲಾಪೆಯ 3
--------------
ಕನಕದಾಸ
ನೀನೇನೋ ನಿನ್ನ ಲಕ್ಷೇನೋ ದಾನಿ ನಿನ್ನಯ ಪಾದಧ್ಯಾನಿಗಳಿರಲಿನ್ನು ಪ ಹರಿ ನೀನು ಮುನಿದರೆ ಗುರು ಎನ್ನ ಕಾಯಿವೋನು ಗುರು ತಾನೆ ಮುನಿದರೆ ಹರಿ ನೀನು ಕಾಯಿದೀಯಾ 1 ಗುರು ದೊರೆತರೆ ಇನ್ನು ಹರಿ ನೀನು ದೊರೆತೀಯ ಗುರುವು ದೊರೆಯದಿರೆ ಹÀರಿ ನೀನು ದೊರೆಯೆಯಯ್ಯ 2 ಗುರು ತಾನು ಕರುಣಿಸೆ ಹರಿ ನೀನು ಕರುಣಿಪಿ ಗುರು ಬಿಡಲು ಅವನ ಹರಿ ನೀನು ಬಿಡುವಿಯೊ 3 ಗುರು ತಾನು ಗತಿಕೊಡೆ ಹರಿ ನೀನು ಗತಿಕೊಡವಿ ಗುರು ಇಲ್ಲzವÀನಿಗೆ ಹರಿ ನೀನೂ ಇಲ್ಲವಯ್ಯಾ 4 ಸುಗುಣಪೂರ್ಣ ಗುರುಜಗನ್ನಾಥ ವಿಠಲಾ ನಿಗಮ ಪೇಳಿದಮೇಲೆ 5
--------------
ಗುರುಜಗನ್ನಾಥದಾಸರು
ನೀನೊಲಿದರೇನು ಏನಿಲ್ಲ ಹರಿಯೆ ಪ ನೀನೊಲಿಯದಿರೆ ಮಾತ್ರ ಏನೇನು ಇಲ್ಲ ಅ.ಪ. ಸಾಧನವು ಸಂಪತ್ತು ಸಾಧಿಸದೆ ದೊರೆಯುವುದುಪಾದಗಳ ಸೇವೆ ತಾ ತಾನಾಗಿ ಲಭಿಸುವುದುಖೇದ ವ್ಯಸನಗಳೆಲ್ಲ ಬಾಧಿಸದಲೋಡುವುದುಸಾಧು ಸಂಗವು ಭಕ್ತಿ ಬೋಧಿಸದೆ ಬರುವವು 1 ವಾಸುದೇವನೆ ವಿಪುಲ ಐಸಿರಿಯನೀಡುತಲೆಬೇಸರದೆ ನಿನ್ನವರ ಲೇಸಾಗಿ ಸಲಹುವೆಯೊದಾಸ ಭಕುತರು ಶೆರಗ ಹಾನಿ ಬೇಡಿದರೇನುಶೇಷಶಯನನೆ ನಿನ್ನ ಈಸು ಮಹಿಮೆಯ ತಿಳಿಯೆ 2 ಮನಸು ನಿನ್ನಡಿಗಳಲಿ ಕೊನೆತನಕ ಇರಿಸುವದುಘನಕೆಲಸ ನಿನದಯ್ಯ ಮನುಜರಿಗೆ ಸಾಧ್ಯವೇತನುಮನಗಳಿವು ನಿನ್ನವೆ ನನದೆಂಬುದೇನುಂಟುಧಣಿಯ ಗದುಗಿನ ವೀರನಾರಾಯಣನೆ ಒಲಿಯೋ 3
--------------
ವೀರನಾರಾಯಣ
ನೀನೊಲಿದು ನಿನ್ನ ಸೇವೆಯನು ಕೊಡು ಹರಿಯೇ ಪ ನಾನೊರಲುವಾ ಕೂಗು ಕೇಳಿಸದೆ ದೊರೆಯೇ ಅ.ಪ ಸಂಸಾರ ಸುಖಗಳನು ಅನುಭವಿಸಿ ಸಾಕಾಯ್ತು ಹಿಂಸೆ ಚಿಂತೆಯ ರುಚಿಯ ತಿಳಿದುದಾಯ್ತು ಹಂಸನೀರೊಳಗಿದ್ದು ನೀರರಿಯದಂತಾಯ್ತು ಕಂಸಾರಿ ಸಾಕಿನ್ನು ಭೂಮಿ ಬೇಸರವಾಯ್ತು 1 ಶತಪಾಪಿ ನಾನಾಗಿ ಪತಿತಜನ್ಮವನಾಂತು ವ್ರತ ನೇಮ ನಿಷ್ಠೆಗಳ ಮರೆತು ಕುಳಿತು ಮಿತವಿಲ್ಲದನ್ಯಾಯಕಾರ್ಯದಿಂ ಬಸವಳಿದು ಸತಿಸುತೆಯರಾಟದಲಿ ನಿನ್ನ ಮರೆತೆ2 ಕರುಣಾ ಸಮುದ್ರ ನೀನಲ್ಲವೇ ಹರಿಯೇ ಪೊರೆಯೋ ಮಾಂಗಿರಿರಂಗ ಕರುಣಾಂತರಂಗ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್