ಒಟ್ಟು 11460 ಕಡೆಗಳಲ್ಲಿ , 130 ದಾಸರು , 4806 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜ್ಞಾನಿಯಾಗಬೇಕು ಅಜ್ಞಾನ ನೀಗಬೇಕು ತತ್ವಜ್ಞಾನದಿಂದಿರಬೇಕು ಮುಕ್ತಿ ತಾನೆ ಆವಾಗಕ್ಕು ಪ.ಅಬ್ಜಾನನನ್ನ ಪಾದಾಬ್ಜ ನಂಬಿರಿನ್ನು ಕುಶಬ್ದಗುಂದಿರಣ್ಣಭವಾಬ್ಧಿದಾಟಿರಣ್ಣ1ಮಾಡಿ ಸಾಧುಸಂಗ ಬಿಡಿ ಖಳರಹಂಗನೀವುನೋಡಿ ಅಂತರಂಗ ಕೈ ನೀಡುವನು ರಂಗ 2ತ್ಯಾಗಭೋಗಸರ್ವ ಶ್ರೀಹರಿಗೆ ಒಪ್ಪಿಸಿರುವ ಆಯೋಗಿಯನ್ನು ಕರೆವ ಶ್ರೀ ನಾಗಶಯನಹೊರೆವ3ತಿದ್ದಿನೋಡಿವರ್ಮಅಸಾಧ್ಯ ಶರ್ಮನರ್ಮ ಬೇಗೆದ್ದು ಬಿಡಿ ಅಧರ್ಮ ನಿನ್ನದು ಶುಭಕರ್ಮ 4ದಾಸರ ಜೀವನ ಭಕ್ತಪೋಷಕ ಪಾವನ ಶ್ರೀಪ್ರಸನ್ನ ವೆಂಕಟ ಪ್ರಸನ್ನ ಅಭಿಲಾಷೆ ಸಂಜÕನೆ ಧನ್ಯ 5
--------------
ಪ್ರಸನ್ನವೆಂಕಟದಾಸರು
ತಂದೆ ತಾಯಿಮಿತ್ರನೀನೆ ಬಾಂಧವ ನೀನೆ ನಿನ್ನಿಂದ ಬಳಗಿಲ್ಲೆನಗೆ ಇಂದಿರಾಧವನೆ ಕಾಯೊ ಪ.ಹೊಲೆಯ ರಕ್ತದಿ ರೇತ ನಿಲಿಸಿದನೊರ್ವ ಪಿತನೆಲೆಸಿ ಗರ್ಭದೊಳು ರಕ್ಷಿಸಿದೆ ನೀನುಹಲವು ಯೋನಿಯ ತೋರಿ ತೊಳಲಿಸಿ ತುದಿಯಲ್ಲಿನೆಲೆಗೆ ನಿಲ್ಲಿಸುವಂಥ ಸುಲಭ ಜನಕನಲ್ಲೆ 1ನವಮಾಸ ಧರಿಸಿ ಸ್ತನ್ಯವನುಣಲಿತ್ತಳವ್ವೆತವಕದಿ ನಡೆ ನುಡಿಸುವೆಯೊ ನೀನುಆವ ಕಾಲಕಾಲದಲ್ಲಿ ತವಗರ್ಭದಲ್ಲಿ ಪೊತ್ತುಜೀವಕೆ ಚೈತನ್ಯಾಶನವೀವ ತಾಯಿ ನೀನಲ್ಲವೆ 2ಶ್ರೇಯಸನಾದರಿಸುವ ಪ್ರಿಯಸಖರೆಲ್ಲರು ನಿ:ಶ್ರೇಯಸದಿ ಸುಖಮುದದಾಯಕ ನೀನೆಮಾಯಪಾಶ ಬಂಧನದಿ ನೋಯುವರವರ್ಗಾಬಾಧೆಯನಟ್ಟಿ ಕಳೆವ ಚಿನ್ಮಯಮಿತ್ರನೀನಲ್ಲವೆ3ವಿತ್ತವಿರೆ ಸಹೋದರರಿತ್ತ ಬನ್ನಿ ಕೂಡ್ಯೆಂಬರುವಿತ್ತಶೂನ್ಯನಾದರೆ ನೀನುಪೇಕ್ಷಿಸೆ ಅಯ್ಯಒತ್ತಿ ಬಹದುರಿತವಿಪತ್ತುಗಳ ಸವರಿ ಸುಮುಕ್ತಿಯ ಪದವೀವಾನಿಮಿತ್ತ ಬಂಧು ನೀನಲ್ಲವೆ 4ಸಿರಿಯು ಪೋಗೆ ನಿಲ್ಲರು ಶರೀರ ಸಂಬಂಧಿಗಳಾತುರದ ದಾರಿದ್ರ್ಯ ಪಾಪಹರನು ನೀನೆಕರುಣಿ ಪ್ರಸನ್ನ ವೆಂಕಟರಮಣ ನಿನ್ನ ನಾಮಸ್ಮರಣೆ ಎನ್ನ ಜಿಹ್ವೆಗೆ ಮರೆಯದಿರಲಿ ಕಂಡ್ಯ 5
--------------
ಪ್ರಸನ್ನವೆಂಕಟದಾಸರು
ತನುವ ನಂಬಲುಬೇಡ ಜೀವವೆ ಪ.ಅನುವಾಗಿ ನಿನ್ನಂಗಕೆ ಕೆಲಕಾಲ ತೋರುವದು |ಅನುವಿಲ್ಲದಾಗ ಈ ತನುವೆ ನಿನಗೆ ವೈರಿ ಅಪಜರೆಮರಣಗಳಿಂದ ಭರಿತವಾದುದುಕಾಯ |ಸ್ಥಿರವೆಂದು ನಂಬಿ ನೀ ಮರುಳಾಗಬೇಡ 1ಧನ - ಧಾನ್ಯ ಪಶು - ಪತ್ನಿ ಸ್ಥಿರವೆಂದು ತಿಳಿದು |ಮನುಮತನಯ್ಯನ ಮರೆಯದೆ ಮನವೆ 2ಶರಣೆಂದರೆಕಾವ ಗರುಡಕೇತನ ನಮ್ಮ |ಪುರಂದರವಿಠಲನ ಮರೆಯದೆ ಮನವೆ 3
--------------
ಪುರಂದರದಾಸರು
ತನುವಿನೊಳಗೆ ಅನುದಿನವಿದ್ದುಎನಗೊಂದು ಮಾತ ಪೇಳದೆ ಪೋದೆ ಹಂಸಾ ಪ.ಜಾಳಾಂದ್ರವೆಂಬದು ಒಂಬತ್ತು ಬಾಗಿಲ ಮನೆರೂವಾರವೆಂಬ ಒಂಬತ್ತು ಬಾಗಿಲ ದಾಟಿಗಾಳಿ ತಂಪಿನೊಳಿದ್ದು ತಾನು ಹಾರಿ ಪೋಪಾಗಕಾಯಕೆ ಹೇಳದೆ ಹೋಯಿತು ಒಂದು ಮಾತ 1ಹಳ್ಳ ಕೊಳ್ಳಗಳಲಿ ತಂಪಿನ ತಡಿಯಲಿಬಳ್ಳಿ ಕಾಯಿಕಾತು ಫಲವಾಯಿತುಒಳ್ಳೆಯ ತನಿಹಣ್ಣು ಉದುರಿ ತಾ ಪೋಪಾಗಬಳ್ಳಿಗೆ ಹೇಳದೆ ಹೋಯಿತು ಒಂದು ಮಾತ 2ಗಟ್ಟಿ - ಬೆಟ್ಟಗಳಲಿ ಶಾಖೆಯ ತುದಿಯಲಿಕಟ್ಟಿತು ಜೇನನು ಸುಖಕಾಗಿಗಟ್ಟಿ ತುಪ್ಪವನುಂಡು ನೊಣ ಹಾರಿ ಪೋಪಾಗಹಿಪ್ಪೆಗೆ ಹೇಳದೆ ಹೋಯಿತು ಒಂದು ಮಾತ 3ರವಿವಿಸ್ತಾರವ ಹಂಸ ಕೇಳಿದನೈ ನಿನ್ನಪೆಸರ ಪೇಳಲೆನ್ನಳವಲ್ಲರಸ ವಸ್ತುವನುಂಡು ಜ್ಯೋತಿ ತಾ ಪೋಪಾಗಪಣತಿಗೆ ಪೇಳದೆ ಹೋಯಿತು ಒಂದು ಮಾತು 4ಸಿರಿಪುರಂದರ ವಿಠಲನ ಮಾತು ಪುಸಿಯಲ್ಲಹಣೆಯ ಬರೆಹವ ಮೀರಲು ಬಲ್ಲುದೆ ?ಸರಸವನಾಣೆಯ ಮುತ್ತು ಆಗಲಿ ತಾ ಪೋಪಾಗತಿಪ್ಪಿಗೆ ಪೇಳಿದಾಯಿತು ಒಂದು ಮಾತ 5
--------------
ಪುರಂದರದಾಸರು
ತಪ್ಪ ಪಾಲಿಸಯ್ಯ ತಿಮ್ಮಯ್ಯತಪ್ಪ ಪಾಲಿಸಯ್ಯ ಪ.ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳುಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆ ಅ.ಪ.ಜಲಜನಾಭ ನಿನ್ನ ಮಹಿಮೆಯನೆಲೆಯನರಿಯದೆನ್ನ ಮನವದುನೆಲೆಯಿಲ್ಲದ ಭವಜಲಧಿಯೊಳಾಡುತ್ತಲಲನಾ ವಿಷಯದ ಬಲೆಗೆ ಮೋಹಿಸಿ ಮನಸಿಲುಕಿ ಮಲಿನವಾಯ್ತು ತತ್ವದನೆಲೆಯನರಿಯದಾಯ್ತು ಹೀಗೆನ್ನುತಕಳೆದುಹೋಯ್ತು ವಿಂಶತಿ ವತ್ಸರಗಳುತೊಳಲಿ ಸಕಲ ಭವದೊಳಗಾರ್ಜಿತವಹ 1ಹಾಳು ಮನವು ಕೂಡಿ ನಾನಾಚಾಳಿ ಮಾಳ್ಪುದಾಡಿ ಬುದ್ಧಿಯಪೇಳಿದಷ್ಟು ದುಶ್ಯೀಲವೆ ಮಾಳ್ಪುದುತಾಳೆಂದರೆ ಒಂದು ವೇಳೆಗೆ ಸುಮತಿಯಆಲೋಚನೆಯೊಳಗೆ ಬಿದ್ದರೆಮೇಲಿಲ್ಲವು ಕ್ಷಣಕೆ ತನ್ನಯಶೀಲವನೆ ಸ್ವೀಕರಿಸುತಿರುವುದುಪೇಳಲೇನು ಕರುಣಾಳು ನೀ ಯೆನ್ನಯ 2ನಾನಾ ಕಷ್ಟಪಟ್ಟೆ ಇನ್ನಾದರುಮಾನಿಸಬೇಕಷ್ಟೆ ಎನ್ನೊಳುಊನ ಗ್ರಹಿಸಿ ಅನುಮಾನ ಸಾಧಿಸಿದರೆನಾನೆಂಬುವದೇನು ಸ್ವತಂತ್ರವಕಾಣೆನು ಎನ್ನೊಳಗೆ ಸಂತತನೀನೇ ಗತಿಯೆನಗೆ ಇದಕನು-ಮಾನವಿಲ್ಲ ಪಾದಾನತಜನರಾಧೀನನೆಂಬ ಬಿರುದಾನಬೇಕಾದರೆ 3ಅಪರಾಧಿಯೆ ನಾನು ಹೇಗೈಅಖಿಲಾತ್ಮನು ನೀನು ಹೃದಯದಿಕೃಪೆಯ ಬೀರಿ ತೋರಿಪ ಪರಮಾತ್ಮನೆಚಪಲನಾಗಿ ಎನ್ನುಪಮೆಗೆಯೊಡ್ಡಿದೆಸಫಲವಾಯ್ತು ಎನಗೆ ಕೀರ್ತಿಯುಅಪಕೀರ್ತಿಯು ನಿನಗೆ ಪಾದವಜಪಿಸುವಂತೆ ಕರುಣಿಪುದಿನ್ನಾದರೂಕಪಟವಾಯ್ತೆ ಸರೀಸೃಪಗಿರಿರಾಜನೆ 4ದೂಷಣಾರಿ ನಿನ್ನ ಪಾದದದಾಸಗೈಯ್ಯೊ ಎನ್ನ ಎನ್ನೊಳುದೋಷವಿಲ್ಲ ಜಗದೀಶ ಜನಾರ್ದನದಾಶರಥಿಯ ಕರುಣಾಶರಧಿಯೊಳಗೆಈಸಾಡಿದ ದಾಸ ಕಾರ್ಕಳಾಧೀಶ ಶ್ರೀನಿವಾಸ ರವಿಶತಭಾಸ ಶ್ರೀಲಕ್ಷ್ಮೀನಾರಾಯಣ ಸರ್ವೇಶ ಭಕ್ತಜನಪೋಷ ನೀಯೆನ್ನಯ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪು ನೋಡದೆ ಬಂದೆಯಾ ನನ್ನ ತಂದೆಯೆಅಪ್ಪ ತಿರುವೆಂಗಳೇಶನೆ ನಿರ್ದೋಷನೆ ಪ.ಆಪಾದಮೌಳಿ ಎನ್ನೊಳುಅಘಬಹಳಶ್ರೀಪತಿ ಕ್ಷಮಿಸಿ ಕಾಯಿದೆಯ ಉದಧಿಶಯ್ಯಾ 1ಜಗದಘಹರನೆಂಬುದು ನಿನ್ನ ಬಿರುದುತ್ರಿಗುಣಾತೀತನೆ ರಾಮನೆ ಗುಣಧಾಮನೆ 2ಇನ್ನೆನ್ನ ಕಲುಷವಾರಿಸೊ ಭವತಾರಿಸೊ ಪ್ರಸನ್ನ ವೆಂಕಟರಮಣ ಭಯಶಮನ 3
--------------
ಪ್ರಸನ್ನವೆಂಕಟದಾಸರು
ತಪ್ಪುಗಳೆಲ್ಲ ಪರಿಹರಿಸುವ ನಮ್ಮಪ್ಪನಲ್ಲವೆ ನೀನುಒಪ್ಪಿದ ಬಳಿಕವಗುಣ ನೋಡದ ತಿಮ್ಮಪ್ಪನಲ್ಲವೆ ನೀನು ಪ.ಬೆಳಗಿನ ಜಾವದಿಹರಿನಿನ್ನ ಸ್ಮರಣೆಗೆಹಳವಿಗೆಗೊಳ್ಳದ ತಪ್ಪುಮಲಮೂತ್ರವಿಸರ್ಜನೆಯ ಮೃತ್ತಿಕೆಯಲಿಮಲಿನವ ತೊಳೆಯದ ತಪ್ಪುತುಲಸಿ ವೃಂದಾವನ ಗೋಸೇವೆಗೆಅಲಸಿಕೆ ಮಾಡುವ ತಪ್ಪುನಳಿನಸಖೋದಯಕಘ್ರ್ಯವ ನೀಡದಕಲಿವ್ಯಾಸಂಗದ ತಪ್ಪು 1ದಿನದಿನ ಉದಯದಿ ಸ್ನಾನವ ಮಾಡದತನುವಂಚನೆಯ ತಪ್ಪುಕ್ಷಣ ಶ್ರೀ ಹರಿಗುಣ ಜಿಜ್ಞಾಸಿಲ್ಲದಮನವಂಚನೆಯ ತಪ್ಪುಮುನಿಸುರ ಭೂಸುರರಾರಾಧಿಸದಧನ ವಂಚನೆಯ ತಪ್ಪುವನಜಾಕ್ಷನೆ ನಿನ್ನಪಾದವಿಮುಖ ದುರ್ಜನ ಸಂಸರ್ಗದ ತಪ್ಪು 2ಕಣ್ಣಲಿ ಕೃಷ್ಣಾಕೃತಿ ನೋಡದೆಪರಹೆಣ್ಣಿನ ನೋಟದ ತಪ್ಪುನಿನ್ನ ಕಥಾಮೃತ ಒಲ್ಲದೆ ಹರಟೆಯಮನ್ನಿಸುವ ಕಿವಿ ತಪ್ಪುಅನ್ನವ ನಿನಗರ್ಪಿಸದಲೆ ಹರುಷದಿಉಣ್ಣುವ ನಾಲಿಗೆ ತಪ್ಪುಚಿನ್ಮಯ ಚರಣಕ್ಕೆರಗದೆಉನ್ಮತ್ತರ ನಮಿಸುವ ತಲೆ ತಪ್ಪು 3ಶ್ರೀ ನಿರ್ಮಾಲ್ಯದ ವಿರಹಿತ ಸುರಭಿಯಘ್ರಾಣಿಪನಾಸಿಕತಪ್ಪುಆನಂದದಿ ಸಂಕೀರ್ತನೆ ಮಾಡದಹೀನವಿವಾದದ ಬಾಯ ತಪ್ಪುಶ್ರೀನಾಥಾರ್ಚನೆ ಇಲ್ಲದೂಳಿಗಮಾಣದಿರುವ ಕೈ ತಪ್ಪುಶ್ರೀನಾರಾಯಣ ವೇಶ್ಮನಿಗೈದದನಾನಾಟನಪಾದತಪ್ಪು4ಯಜ್ಞಾತ್ಮಗೆ ಯಜ್ಞಾರ್ಪಿಸದೆ ಸುಖಮಗ್ನಾದ ಮೇಢ್ರದ ತಪ್ಪುಅಗ್ರದ ಕರ್ಮವ ಶೌಚವ ಜರಿದ ಸಮಗ್ರ ಗುಹ್ಯಕೃತ ತಪ್ಪುಅಜ್ಞಾನ ಜ್ಞಾನದಿ ಕ್ಷಣಲವಶತವೆಗ್ಗಳಘ ಗಳಿಸುವ ತಪ್ಪುಯಜೆÕೀಶ ಪ್ರಸನ್ವೆಂಕಟ ಕೃಷ್ಣ ನಾಮಾಗ್ನಿಗೆ ತೃಣವೀ ತಪ್ಪು 5
--------------
ಪ್ರಸನ್ನವೆಂಕಟದಾಸರು
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀಚಪ್ಪರ ಶ್ರೀನಿವಾಸ ಪ.ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆದರ್ಪಕತಾತನೆ ತಾ ಸಜ್ಜನಪ್ರೀತ ಅ.ಪ.ಮಾಧವನಿನ್ನಯ ಮಹಿಮೆ ತಿಳಿಯದಪ-ರಾಧವ ಮಾಡಿದೆ ದಾರಿದ್ರ್ಯದಬಾಧೆಯಿಂದ ತವಪಾದದರುಶನದಗಾದಿಯ ಕಾಣದಾದೆ ನಾ ದ್ರೋಹಿಯಾದೆ 1ತ್ರಾಣವಿರುವಾಗಕಾಣಿಕೆಹಾಕಿದೆದೀನದಾರಿದ್ರ್ಯದ ಹೊತ್ತಿನಲಿಮೇಣದರಿಂದಲಿ ತೆಗೆದು ತೆಗೆದು ಪಂಚಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ 2ಮಂದವಾರದಿಕ್ಕೊಂದೂಟವ ಸತ್ತ್ವದಿಂದಿರುವಾಗ ನಾ ನೇಮಗೈದೆಮಂದಭಾಗ್ಯ ಜ್ವರದಿಂದ ಪೀಡಿತನಾದ-ರಿಂದೆರಡೂಟವನೂ ಮಾಡಿದೆ ನಾನು 3ಶನಿವಾರಕ್ಕೊಂದಾಣೆಕಾಣಿಕೆಹಾಕುತ್ತಮಿನುಗುವ ಡಬ್ಬಿಯ ನಾ ಮಾಡಿದೆಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದಹಣವೆಲ್ಲಗುಣನುಂಗಿತು ಪಾದಕೆ ಗೊತ್ತು4ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣಗುಡ್ಡೆಯ ಮೇಲಿರುವ ಮಹಾನುಭಾವ 5ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯುಮಂಡೆಯೊಳುರಿವುದು ಖಂಡಿತದಿಪುಂಡರೀಕಾಕ್ಷನೆ ಕರುಣಾಮೃತರಸಕುಂಡದೊಳ್ ಮೀಯಿಸಯ್ಯ ವೆಂಕಟರಾಯ 6ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆಕೆಡುಕು ಮಾಡುವುದೇನುಜಡಜನಾಭಕಡಲಶಯನ ಲಕ್ಷ್ಮೀನಾರಾಯಣ ನ-ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಲ್ಲಿಕಾರರು ನಿನ್ನ ಬಂಟರು ರಂಗನಿಲ್ಲಲೀಸರು ಸಂಸಾರಿಗಳನು ಕೃಷ್ಣ ಪ.ಮಳ್ಳಿದರಾಗಿ ಮಾತಾಡಿ ಬಲುಂಡುಟ್ಟುಇಲ್ಲದ ತಪ್ಪನೆಣಿಸಿ ಹೊರಿಸಿಸುಳ್ಳುಕಳವು ಹಾದರದ ಪಾಪಭವಬಳ್ಳಿಯ ಹರಿದು ಮೊಳೆಯನೊತ್ತಗೊಡರು 1ಕಾಂಚನವಿಡಿದು ಕಕ್ಕಸಬಟ್ಟು ಪೂರ್ವದಸಂಚಿತದಿ ನರಪಶುಗ್ರಾಸದಮುಂಚುವ ಬಣವೆಗೆ ಕಿಚ್ಚಿಕ್ಕಿ ಹುಡಿದೂರಿಪಂಚಾನನಂತೆ ಖೋ ಇಟ್ಟು ಕೂಗುವರು 2ಇದಿರೆದ್ದು ಕರೆದು ಮನ್ನಿಸಿ ಪೂಜಿಸಿಪಾದೋದಕ ಪ್ರೋಕ್ಷಿಸಿಕೊಂಡು ಮರೆಹೊಕ್ಕರೆಬದಿಯ ಸಂಪದ ಬಂದ ಕಬ್ಬು ಬಾಳೆÉ ನೆಲ್ಲುಗದ್ದೆಯ ಸಂಹರಿಸುವರುಪಕಾರಿಗಳು 3ಛಲದಿ ಮಂದಿರ ಹೊಕ್ಕು ಹರಿಸೇವೆ ಗೊಂದಣಗಳಲಿ ಬೇಡಿ ಚಾಮುಂಡೆರೋಡಿಸಿಹೊಲ ಮನೆ ಮಧ್ಯದ ಪಾಮರರ ಹಿಡಿ ತಂದುಬಲು ಕಾಸಿಸಿ ಮುದ್ರೆಯೊತ್ತದೆ ಬಿಡರು 4ಈಪರಿಭವಸುಖಸೂರ್ಯಾಡಿಎಳೆದೊಯ್ದುಶ್ರೀಪದಪುರದಿ ಸೆರೆಯಿಕ್ಕುವರುಶ್ರೀಪ್ರಸನ್ವೆಂಕಟಪತಿ ಮುಖ್ಯ ಪ್ರಾಣೇಶಈ ಪುಂಡರಿಗೆ ಹೇಳೊ ಇವರ ಸಾಕೆಂದು 5
--------------
ಪ್ರಸನ್ನವೆಂಕಟದಾಸರು
ತಾಯಿ ಸೌಪರ್ಣೀದೇವೀ ನೀ |ಕಾಯದೆ ಜರಿಯಲನ್ಯರಾ ||ನಾನೆಲ್ಲೀ ಕಾಣೆನೆ ಧರೆಯೊಳು |ಮನಸಿರಲೀ ಶ್ರೀ ಅರಸನಲ್ಲೇವೇ ಕೇಳು ಪಕ್ಷೋಣಿಯೊಳಗೆ ಕ್ರಿಯಸ್ತರ |ಆ ನೆಲ್ಲೀ ನೋಡೆ ನಿನ್ನಂತೆ ||ಆ ನಾಗರಾಜನ ಮಾತೆಯ ಸೇವೆಯೊಳಿದ್ದೆ |ನಾನೆಂತು ಮಾಡಲೆ ಸ್ತುತೀಯಾ1ವಾರುಣೀ ಶ್ರೀ ರೇವತಿ |ಯಾ ರೂಪಿ ನಮಸ್ಕರಿಪೇ ||ನಾರಾಯಣನಾ ತೋರಿಸಮ್ಮಾ ದೋಷಗಳ ನೀ |ವಾರಿಸಿ ರಕ್ಷೀಸಬೇಕಮ್ಮಾ 2ಶ್ರೀಸತಿಪಾರ್ವತೀ ದಕ್ಷ |ಧ್ವಂಸೀ ಶುದ್ಧ ಪತಿವೃತೀ ||ಆ ಷಣ್ಮುಖನ ಜನನೀ | ಕಾಣಿಸು ಶ್ರೀ ಪ್ರಾ-ಣೇಶ ವಿಠ್ಠಲಾನ ಕರೂಣೀ 3
--------------
ಪ್ರಾಣೇಶದಾಸರು
ತಾರಿಸೊ ಶ್ರೀಹರಿ ತಾರಿಸೊ ಪತಾರಿಸೊ ಭವವ ನಿವಾರಿಸೊ ನಿನ್ನಡಿಯತೋರಿಸೊ ವೈಕುಂಠ ಸೇರಿಸೋ ರಂಗಯ್ಯ ಅ.ಪಪಾಪವಿನಾಶನ ಮಾಡುವಿ ನೀತಾಪಸರನುನಿತ್ಯಸಲಹುವಿ ||ವ್ಯಾಪಿಸಿ ಸರ್ವತ್ರ ನಿನ್ನವರನು ಕಾಯ್ವಶ್ರೀ ಪಾಂಡುರಂಗ ಪರಮಾತ್ಮ ಮುಕುಂದ 1ಹಿರಣ್ಯಕಶಿಪುವನು ಸೀಳಿದೆ ಅವನಕರುಳನು ಕೊರಳೊಳು ಹಾಕಿದೆ ||ದುರಳ ಬುದ್ಧಿಯ ತಳೆದ ದೈತ್ಯಾಧಮನ ಕೊಂದಕರುಣ ದಿಂದಲಿ ಕಂದಗೊಲಿದೆ ಗೋವಿಂದ 2ಅಸುರೆ ಪೂತನಿಯ ಸಂಹರಿಸಿದೆ ನೀಶಶಿಮುಖಿಯಭಿಮಾನ ಕಾಯ್ದೆ ||ಶಿಶುವಾಗಿ ಬಾಲಲೀಲೆಗಳನು ತೋರಿದೆಕುಸುಮನಾಭ ಶ್ರೀಪುರಂದರವಿಠಲ3
--------------
ಪುರಂದರದಾಸರು
ತಾಳು ತಾಳೆಲೊ ರಂಗಯ್ಯ- ನೀ |ತಾಳು ತಾಳೆಲೊ ಕೃಷ್ಣಯ್ಯ ಪನಾಳೆ ನೀನು ನಮ್ಮ ಮನೆಗೆ ಬಂದರೆ |ಕಾಲಕಂಬಕೆಕಟ್ಟಿಪೇಳುವೆ ಗೋಪಿಗೆಅ.ಪದೊರೆಗಳ ಮಗನೆಂಬುದಕೇನೊ-ಬಹು |ಧುರದಿ ಮನೆಯ ಪೊಕ್ಕ ಪರಿಯೇನೊ ||ದುರುಳತನದ ಬುದ್ಧಿ ಸರಿಯೇನೊ-ನೀನು |ತಿರಿದು ಬೇಡುಂಡದ್ದು ಮರೆತೆಯೇನೊ 1ಚಿಕ್ಕಮಕ್ಕಳು ಇಲ್ಲವಂತೇನೊ-ನಿನಗೆ |ಕಕ್ಕೂಲಾತಿಯಿಂದಲಿ ನಿನ್ನ ||ಸಿಕ್ಕಿದ ಶ್ರೀಲೋಲ ಹಿಡಿಹಿಡಿಯೆಂದರೆ |ಬಿಕ್ಕಿ ಬಿಕ್ಕಿ ಅತ್ತರೆ ಬಿಡುವರೇನೊ 2ಕಟ್ಟಿದ ತುರುಗಳ ಮೊಲೆಯುಂಡು-ಕರು |ಬಿಟ್ಟ ಕಾರಣವೇನು ಹೇಳೊ ||ಸೃಷ್ಟೀಶ ಪುರಂದರವಿಠಲರಾಯನೆ |ಇಟ್ಟಿಗೆಯ ಮೇಲೆ ಬಂದು ನಿಂತ ಕಾರಣವೇನೊ? 3
--------------
ಪುರಂದರದಾಸರು
ತೇಲಿಸೊ ಇಲ್ಲ ಮುಳುಗಿಸೊ- ನಿನ್ನ-|ಪಾಲಿಗೆ ಬಿದ್ದೆನೊಪರಮದಯಾಳೊಪಸತಿ-ಸುತ-ಧನದಾಶೆ ಎಂತೆಂಬ ಮೋಹದಿ |ಹಿತದಿಂದ ಅತಿನೊಂದು ಬಳಲಿದೆನೊ ||ಗತಿಯನೀವರ ಕಾಣೆ ಮೊರೆಯ ಲಾಲಿಸೊ ಲಕ್ಷ್ಮೀ-|ಪತಿನಿನ್ನ ಚರಣದ ಸ್ಮರಣೆಯಿತ್ತೆನ್ನ1ಜರೆರೋಗ ದಾರಿದ್ರ್ಯ ಕಶ್ಮಲವೆಂತೆಂಬ |ಶರಧಿಯೊಳಗೆ ಬಿದ್ದು ಮುಳುಗಿದೆನೊ ||ಸ್ಥಿರವಲ್ಲ ಈ ದೇಹ ನೆರೆನಂಬಿದೆನು ನಿನ್ನ |ಕರುಣಾಭಯವನಿತ್ತು ಪಾಲಿಸೊ ಹರಿಯೆ 2ದೋಷವುಳ್ಳವ ನಾನು ಭಾಷೆಯುಳ್ಳವ ನೀನು |ಮೋಸ ಹೋದೆನೊ ಭಕ್ತಿರಸವ ಬಿಟ್ಟು ||ದಾಸರ ಸಂಗವಿತ್ತು ಪಾಲಿಸೊ ಹರಿಯೆ 3
--------------
ಪುರಂದರದಾಸರು
ತೇಲಿಸೊ ನೀ ಮುಣುಗಿಸೊ |ನಿನ್ನ ಮಾಯವ ತಿಳಿಯದ ಮೂಢ ಜನರನುಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಿಷಯದೊಳಗೆ ಮನ ಬುದ್ಧಿ ಗರ್ಕಾಯಿತುಘಸಣೆ ಬಡುವ ದೇಹ ಹ್ಯಾಗೆ ಪಾರಾಯ್ತು 1|ಹರ ಬಿಡಿಸು ಮೊರೆಹೋದೆ ದೇವಾಬಿರುಬೆಟ್ಟಿತು ಪರಿಹಾರ ಹ್ಯಾಗ2ಭವನದಿಯೊಳು ಸುಳಿದಾಡು ಹರಗೋಲಕ್ಕೆಶಿವಶಂಕರ ಕಡೆಗೆ ಹಚ್ಚು ಧಡಕ್ಕೆ3
--------------
ಜಕ್ಕಪ್ಪಯ್ಯನವರು
ತೊರವೆಪುರನಿವಾಸ ನರಸಿಂಹ ನೀಹೊರೆಯೊ ಭಕ್ತರ ಭಯಗಜಸಿಂಹಅರಿವರಾರಯ್ಯ ನಿನ್ನ ಮಹಿಮೆಯಸರಸಿಜಭವಭವಸುರವರಅಹಿಕಿನ್ನರವರಮುನಿವರ ನರವರವಂದ್ಯಪ.ಹಿರಣ್ಯಕನೆಂಬ ದೈತ್ಯ ಮಹೀತಳದಿವಿಧಿಹರವರದಲಿ ಬಲುಸೊಕ್ಕಿ ಅಂದುಪರಮಭಾಗವತಪ್ರಹ್ಲಾದನಿಗೆಪರಿಪರಿದುರಿತವ ಮರಳಿ ಮರಳಿ ಭಯಂಕರವನು ಚರಿಸಲು ನೆರೆಮೊರೆಯಿಡಲು 1ತರಳಗಂಜಿಸಿ ನಿನ್ನ ದೊರೆಯ ತೋರೊ ಎನಲುಸರವಭೂತ ಭರಿತಾನಂತನೀಗಅರಸಿದರೀ ಕಂಬದೊಳಿಹನೆನಲುಮೊರೆ ಮೊರೆದೇಳುತ ಸರಸರನೊದೆಯಲುಬೆರಬೆರ ದೋಷದಿ ವರನರಹರಿಯೆ 2ಚಿಟಿಲು ಚಿಟಿಲು ಭುಗಿಭುಗಿಲೆನುತ ಪ್ರಕಟಿಸಿ ದೈತ್ಯನುದರವನು ಸೀಳಿತ್ರುಟಿಯೊಳು ಕರುಳಮಾಲೆಯ ಧರಿಸಿಶಠನ ವಧಿಸಿ ನಿಜಭಟನ ಪೊರೆದ ಜಗಜಠರಪ್ರಸನ್ನವೆಂಕಟ ನರಸಿಂಹ3
--------------
ಪ್ರಸನ್ನವೆಂಕಟದಾಸರು